ಜಾಬ್ಸ್ ಜಾತ್ರೆಯಲ್ಲಿ ಮರೆತೋದ ‘ರಿಚ್ಚಿ’
-ಪ್ರಶಸ್ತಿ ಪಿ
ಆಪಲ್ ಸ್ಥಾಪಕ ಸ್ಟೀವ್ ಜಾಬ್ಸನ ವಿಚಾರಗಳೆಲ್ಲಾ ಕದ್ದಿದ್ದು. ಅವನ ಸ್ವಂತದ್ದು ಏನೂ ಇಲ್ಲ. ಅವನ ಸಾವಿಗೆ ಅಷ್ಟು ಮನ್ನಣೆ. C, Unix ಗಳನ್ನು ಕಂಡು ಹಿಡಿದ ಡೆನ್ನಿಸ್ ರಿಚ್ಚಿಯ ಸಾವು ಯಾರೂ ಕಂಡೂ ಕೇಳದಂತೆ ಮರೆಯಾಗಿ ಹೋಯಿತಲ್ಲಾ ಎಂಬ ವೇದನೆಯ ಹಲರೂಪಾಂತರಗಳು ಅಂತರ್ಜಾಲದಲ್ಲೆಲ್ಲಾ ಸುತ್ತಾಡುತ್ತಿದ್ದವು ಕೆಲವಾರದ ಹಿಂದೆ. ಇನ್ನೂ ಅಲ್ಲೊಂದು , ಇಲ್ಲೊಂದು ಅಂತಹ ಫೋಟೋಗಳು, ಪೋಸ್ಟುಗಳು ಸುತ್ತಾಡುತ್ತಲೇ ಇವೆ. ಇಬ್ಬರಲ್ಲಿ ಯಾರು ಹೆಚ್ಚೆಂಬ ವಿಮರ್ಶೆಯನ್ನು ಮಾಡೋದು ಆ ದೈತ್ಯ ಪ್ರತಿಭೆಗಳೆದುರು ಪಾಮರನಾದ ನನ್ನಿಂದಂತೂ ಅಸಾಧ್ಯ. ಆದರೆ ಇಂದು ಮತ್ತೊಂದು ಅಂತಹದೇ ಪೋಸ್ಟನ್ನೋದಿದಾಗ ನನಗನಿಸಿದ ಭಾವಗಳನ್ನು ಹಂಚಿಕೊಳ್ಳುತ್ತಿದ್ದೇನೆ.
ಪಿಯುಸಿಯಲ್ಲಿ ಕಂಪ್ಯೂಟರ್ ಓದಿದವರಿಂದ ಹಿಡಿದು, BCA, BE, B.Com (Computers) , Diploma ಹೀಗೆ ಹಲವು ವಿಷಯಗಳನ್ನೋದಿದ ಜನರೆಲ್ಲಾ C ಎಂಬ Programming ಭಾಷೆಯನ್ನು ಓದೇ ಇರುತ್ತಾರೆ. ಬಲ್ಬು ಕಂಡುಹಿಡಿದವರು ಯಾರು ಎಂದರೆ ಎಂಥಾ ಟ್ಯೂಬ್ಲೈಟಾದರೂ ಥಾಮಸ್ ಅಲ್ವಾ ಎಡಿಸನ್ ಅಂತ ಹೇಳ್ತಾರಲ್ವಾ ಹಾಗೇನೆ ಇವರಿಗೆಲ್ಲಾ C ಯನ್ನು ಕಂಡುಹಿಡಿದವರು ಯಾರು ಅಂದರೆ ತಟ್ಟನೆ ಬರುವ ಉತ್ತರ ಡೆನ್ನಿಸ್ ರಿಚ್ಚಿ, ಕೆರಿಂಗ್ ಹ್ಯಾಮ್. ನಾನೂ ಓದಿ ಇಷ್ಟಪಟ್ಟ Programming ನ ಮೊದಲ ಪುಸ್ತಕ The C Programming Language . ಆಗ ರಿಚ್ಚಿಯ ಬಗ್ಗೆ ಅಷ್ಟು ತಿಳಿದಿರಲಿಲ್ಲ. ನಂತರ ಮೂರನೆಯ ಸೆಮಿಸ್ಟರಿನಲ್ಲಿ Unix ಅನ್ನೋ ವಿಷಯ ಇತ್ತು. ಅದರ ಬಗ್ಗೆ ಗೊತ್ತಿಲ್ದೇ ಇರೋರಿಗೆ ಹೇಳೋದಾದರೆ ನೀವು ಬಳಸ್ತಾ ಇರೋ Windows XP, Windows 7, Vista ಗಳಂತೆ ದುಡ್ಡು ಕೊಟ್ಟು Genuine ಅವತರಣಿಕೆ ಪಡೆಯಬೇಕೆಂಬ ರೇಜಿಗೆಯಿಲ್ಲದ್ದದು, ಯಾರು ಬೇಕಾದರೂ ಉಚಿತವಾಗಿ ಬಳಸಬಹುದಾದ ದತ್ತಾಂಶ Open Source ಗಳ ಪರಿಕಲ್ಪನೆಯನ್ನು ಹುಟ್ಟಿಹಾಕಿದ್ದೇ Unix ನ ಮತ್ತೊಂದು ರೂಪ Linux. ಇರಲಿ, ಆ Linux ಅನ್ನು ರೂಪಿಸುವಲ್ಲಿಯೂ ಕೆನ್ ಥಾಮ್ಸನ್ ಅನುವವರೊಂದಿಗೆ ಕೈ ಜೋಡಿಸಿದ್ದು ಇದೇ ರಿಚ್ಚಿ.
ಸರಿ, ಪ್ರೋರ್ಗಾಮಿಂಗ್ ಭಾಷೆಯನ್ನು , ಇನ್ನೊಂದು ಕಂಪ್ಯೂಟರ್ ಭಾಷೆಯನ್ನು ಕಂಡುಹಿಡಿದಾಕ್ಷಣ ಅದು ಮಹಾನ್ ಸಾಧನೆಯೇ ಎಂಬ ಸಂದೇಹ ಈಗಾಗಲೇ ಬಂದಿದ್ದರೆ ಅದನ್ನು ಪರಿಹರಿಸಲೋಸುಗ ಈ ಕೆಲವು ಸಾಲುಗಳು..ರಿಚ್ಚಿ ಸತ್ತ ದಿನ ಅವರ ದೀರ್ಘ ಕಾಲೀನ ಸಹೋದ್ಯೋಗಿ ರೋಬ್ ಪೈಕ್ ಸೂಚಿಸಿದ ಸಂತಾಪ ನುಡಿಗಳಿಂದ.
`ಆವರಣ’ ಹಿಂದಿಗೆ
-ಕಾಲಂ ೯
ಕನ್ನಡದಲ್ಲಿ ವಾದ-ವಿವಾದಗಳಿಗೆ ಕಾರಣವಾಗಿದ್ದ ಎಸ್. ಎಲ್. ಭೈರಪ್ಪನವರ ‘ಆವರಣ’ ಹಿಂದಿ ಜಗತ್ತನ್ನೂ ಪ್ರವೇಶಿಸಿದೆ. ಈ ಹಿಂದೆಯೇ ತಮಿಳು, ಮರಾಠಿ, ಸಂಕ್ಸಿತಕ್ಕೆ ಆವರಣ ಹೋದ ಸುದ್ದಿ ಇತ್ತು.
ಮುಸ್ಲಿಂ ನವಾಬರ ‘ಜನಾನ’ದ ವರೆಗೆ ಕಥೆ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಬುದ್ಧಿಜೀವಿಗಳ ಹರಕು-ಹುಳುಕನ್ನು ಕಾದಂಬರಿ ಹರಾಜು ಹಾಕಿ ವಿವಾದಕ್ಕೆ ಕಾರಣವಾಗಿತ್ತು. ಒಂದೇ ವರ್ಶದಲ್ಲಿ 20ಕ್ಕೂ ಹೆಚ್ಚು ಮುದ್ರಣಗಳಿಗೂ ಹೋಗಿತ್ತು.
ಮೂಲಕಥೆ ಉತ್ತರಭಾರತದ ಹಿಂದಿ ಜಗತ್ತಿನದೇ. ಇದೀಗ ಕಾದಂಬರಿ ಹಿಂದಿ ಜಗತ್ತನ್ನು ಪ್ರವೇಶಿಸಿದೆ. ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿರುವ ಡಾ| ಪ್ರಧಾನ ಗುರುದತ್ ಹಿಂದಿಗೆ ಅನುವಾದಿಸಿದ್ದಾರೆ.
ಇಂಡಿಯಾ ಟುಡೇ ಹಿಂದಿ ಅವತರಣಿಕೆಯ ಈ ವಾರದ ಸಂಚಿಕೆ ಅರ್ಧ ಪುಟದ ವಿಮರ್ಶೆ ಪ್ರಕಟಿಸಿದೆ. ವಿಮರ್ಶಕ ಶಶಿಭೂಷಣ ದ್ವಿವೇದಿಗೆ ಪ್ರಧಾನರ ಅನುವಾದ ಸಮಧಾನ ತಂದಿಲ್ಲ.
ಇದೇ ಅಗಸ್ಟ್ 16ರಂದು ಕೇರಳದ ಕೊಚ್ಚಿನ್ ನಲ್ಲಿ ಆವರಣದ ಸಂಸ್ಕೃತ ಆವೃತ್ತಿಗೆ ಕೇಂದ್ರ ಸಾಹಿತ್ಯ ಅಕಾಡಮಿಯ ‘ಅತ್ಯುತ್ತಮ ಅನುವಾದ’ ಪುರಸ್ಕಾರ ಸಿಗಲಿದೆ ಎಂದು ಗೊತ್ತಾಗಿದೆ.
**********
ಸತ್ಯೇಂದ್ರನಾಥ್ ಬೋಸ್ – Another Forgotten Hero…
– ಭೀಮ ಸೇನ್ ಪುರೋಹಿತ್
ನಮ್ಮ ದೇಶದ ಸ್ವಾತಂತ್ರ್ಯಹೋರಾಟಕ್ಕೆ ಅತಿಹೆಚ್ಚು ಹಾಗು ಪ್ರಖರ ಕೊಡುಗೆಗಳನ್ನು ನೀಡಿದ ಯಶಸ್ಸು ‘ಪಶ್ಚಿಮ ಬಂಗಾಳ’ ರಾಜ್ಯಕ್ಕೆ ಸಲ್ಲುತ್ತದೆ. ಆ ಬಂಗಾಳದ ಮತ್ತೊಂದು ಹುಲಿಯೇ “ಸತ್ಯೇಂದ್ರನಾಥ್ ಬೋಸ್”. ಇವನ ಇಡೀ ಕುಟುಂಬವೇ ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿತ್ತು. ಅವನ ತಂದೆ ‘ರಾಜನಾರಾಯಣ ಬೋಸ್’, ಸಹೋದರರಾದ ‘ಜ್ಞಾನೇಂದ್ರನಾಥ್ ಬೋಸ್’,’ಭೂಪೆಂದ್ರನಾಥ್ ಬೋಸ್’,ಎಲ್ಲರೂ ಸ್ವಾತಂತ್ರ್ಯ ಹೋರಾಟಗಾರರೆ.. ಮಿಡ್ನಾಪುರ್ ಜಿಲ್ಲೆಯಲ್ಲಿ ಜನಿಸಿದ ಸತ್ಯೇನ್, ಓದಿನಲ್ಲಿ ಜಾಣ. ಬಿ.ಎ ತನಕ ಓದಿದರೂ, ಮುಂದೆ ಓದಲಾಗಲಿಲ್ಲ..ಇನ್ನೊಂದು ವಿಶೇಷ ಅಂದ್ರೆ, ಈ ಸತ್ಯೇಂದ್ರನಾಥ್, ಶ್ರೀ ಅರವಿಂದ್ ಘೋಶರಿಗೆ ಸಂಬಂಧಿ…
“ಅಲಿಪುರ ಬಾಂಬ್ ಪ್ರಕರಣ” ಮತ್ತು “ಮಾಣಿಕ್ ತೊಲಾ ಗಾರ್ಡನ್ ಬಾಂಬ್ ಪ್ರಕರಣ”, ಈ ಎರಡು ಪ್ರಕರಣಗಳೂ, ಸ್ವಾತಂತ್ರ್ಯಹೋರಾಟದ ಸಮಯದಲ್ಲಿ, ಬಂಗಾಳ ಪ್ರಾಂತದಲ್ಲಿ ನಡೆದ ಬಹುದೊಡ್ಡ ಬ್ರಿಟಿಶ್ ವಿರೋಧಿ ಕಾರ್ಯಗಳು.. ಇವೆರಡರ ಹಿಂದೆ ಇದ್ದಿದ್ದು ಬಂಗಾಳದ “ಅನುಶೀಲನ ಸಮಿತಿ” ಹಾಗು “ಯುಗಾಂತರ ಸಮಿತಿ”ಯ ಕ್ರಾಂತಿಕಾರಿಗಳು, ಹಾಗು ಈ ಕ್ರಾಂತಿಕಾರಿಗಳನ್ನ ಪ್ರೆರೆಪಿಸಿದವ್ರು, ಮಹಾನ್ ರಾಷ್ಟ್ರವಾದಿ ( ನಾನಂತೂ ಅವರನ್ನ ‘ಮಹರ್ಷಿ’ ಅಂತಾನೆ ಕರೆಯೋದು ) ಶ್ರೀ ಅರವಿಂದ್ ಘೋಷ್…. ಈ ಎರಡು ಪ್ರಕರಣಗಳಾದ ಮೇಲೆ ಬ್ರಿಟಿಷರು ಎಚ್ಚೆತ್ತು ತನಿಖೆ ಶುರು ಮಾಡಿದ್ರು.. ಎರಡರಲ್ಲಿಯೂ ಬಳಸಲಾದ ಬಾಂಬ್ ಗಳು ಒಂದೇ ಥರದ್ದು ಅಂತ ಗೊತ್ತಾಯ್ತು. ಹೀಗಾಗಿ ಅನುಶೀಲನ ಸಮಿತಿ ಹಾಗು ಯುಗಾಂತರದ ಕೆಲವು ಕ್ರಾಂತಿಕಾರಿಗಳನ್ನ ಬಂಧಿಸಲಾಯ್ತು. ಜೊತೆಗೆ ಇವರೆಲ್ಲರ ಹಿಂದೆ ಇರೋರು ಅರವಿಂದ ಘೋಶರೆ ಅಂತ ಅಪಾದನೆ ಹೊರಿಸಿ ಅವರನ್ನೂ ಜೈಲಿಗೆ ಕಳಿಸಿದರು..ಇದು ಕ್ರಾಂತಿಕಾರಿಗಳಲ್ಲಿ ಬೇಸರ ಹಾಗು ಆಕ್ರೋಶವನ್ನ ಮೂಡಿಸ್ತು..
ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಯ್ತು. ಬ್ರಿಟಿಷರು ಎಂದಿನಂತೆ ಕ್ರಾಂತಿಕಾರಿಗಳಿಗೆ ಚಿತ್ರಹಿಂಸೆ ಕೊಟ್ಟು ಬಾಯಿಬಿಡಿಸೋದಕ್ಕೆ ಪ್ರಯತ್ನಿಸಿದರು.. ಅದಕ್ಕೆ ಹೆದರಿ, ಬ್ರಿಟಿಷರ ಆಮಿಷಕ್ಕೆ ಸೋತು, ‘ನರೇನ್ ಗೋಸ್ವಾಮಿ’ ಅನ್ನೋನು approver ಆಗ್ಬಿಟ್ಟ.. ಭಾರತದ ಇತಿಹಾಸದುದ್ದಕ್ಕೂ ದೇಶಭಕ್ತರಷ್ಟೇ, ದೇಶದ್ರೋಹಿಗಳೂ ಇದಾರೆ..!!!
ಇತ್ತ ಕೋರ್ಟ್ ನಲ್ಲಿ ನರೇನ್ ಎಲ್ಲರ ವಿರುದ್ಧ ಸಾಕ್ಷಿ ಹೇಳೋದಕ್ಕೆ ಶುರು ಮಾಡಿದ. ಅಷ್ಟೇ ಆಗಿದ್ರೆ ಸುಮ್ನಿರ್ತಿದ್ರೆನೋ.. ಆದ್ರೆ ನರೇನ್, ಅರವಿಂದ ಘೋಷ್ ವಿರುದ್ಧನೂ ಸಾಕ್ಷಿ ಹೇಳೋದಕ್ಕೆ ತಯಾರಾದ.ಅಲ್ಲಿಗೆ ಕ್ರಾಂತಿಕಾರಗಳ ಸಿಟ್ಟು ಮಿತಿ ಮೀರಿತು..ಜೈಲಿನ ಒಳಗಿದ್ದ ‘ಸತ್ಯೇಂದ್ರನಾಥ್’ ಹಾಗು ಅವನ ಗೆಳೆಯ ‘ಕನ್ನಯ್ಯಲಾಲ್ ದತ್ತ’ ಇಬ್ರೂ ಸೇರಿ ಆ ದ್ರೋಹಿ ನರೇನ್ ಸಂಹಾರಕ್ಕೆ ಪ್ಲಾನ್ ಹಾಕಿದರು…
ಭಗವದ್ಗೀತೆಯ ಆಧುನಿಕ ನಿರೂಪಣೆಗಳು ಹಾಗೂ ಸಮಸ್ಯೆಗಳು
ಡಾ. ರಾಜಾರಾಮ ಹೆಗಡೆ
ಇತ್ತೀಚೆಗೆ ಭಗವದ್ಗೀತೆಯ ಕುರಿತು ಅನೇಕ ಚರ್ಚೆಗಳೆದ್ದಿವೆ. ಶಾಲೆಗಳಲ್ಲಿ ಅದನ್ನು ಪ್ರಚಾರ ಮಾಡುವ ಕೆಲಸವನ್ನು ಸಮರ್ಥಿಸಿ ಹಾಗೂ ವಿರೋಧಿಸಿ ಹೇಳಿಕೆಗಳು ಬರುತ್ತಿವೆ. ಈ ಎರಡೂ ಪಕ್ಷಗಳ ವಕ್ತಾರರೂ ಕೂಡ ಭಗವದ್ಗೀತೆಯು ಹಿಂದೂಗಳ ಧರ್ಮಗ್ರಂಥವೆಂಬ ಗ್ರಹಿಕೆಯನ್ನು ಆಧರಿಸಿ ವಾದ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ವಿರೋಧಿಸುವವರ ವಾದವೆಂದರೆ ಸೆಕ್ಯುಲರ್ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ಧರ್ಮದವರೂ ಇರುವ ಸಾರ್ವಜನಿಕ ಸಂಸ್ಥೆಗಳಲ್ಲಿ ಹಿಂದೂಗಳಲ್ಲದವರೂ ಭಗವದ್ಗೀತೆಯನ್ನು ಕಲಿಯಬೇಕೆನ್ನುವುದು ಸಂವಿಧಾನ ವಿರೋಧೀ ಕೃತ್ಯವಾಗುತ್ತದೆ. ಹಾಗಾಗಿ ಸೆಕ್ಯುಲರ್ ತತ್ವದ ಪ್ರಕಾರ ಅದು ತಪ್ಪೊಂದೇ ಅಲ್ಲ, ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧ ಕೂಡಾ. ಈ ವಿರೋಧವನ್ನು ಖಂಡಿಸಿರುವ ಪರ ಪಕ್ಷದವರು ಭಗವದ್ಗೀತೆಯ ಶಿಕ್ಷಣವನ್ನು ವಿರೋಧಿಸುವವರು ದೇಶ ಬಿಟ್ಟು ತೊಲಗಲಿ ಎನ್ನುತ್ತಿದ್ದಾರೆ. ಅಂದರೆ ಅಂಥ ವಿರೋಧಿಗಳ ರಾಷ್ಟ್ರೀಯತೆಯನ್ನೇ ಪ್ರಶ್ನಿಸುತ್ತಿದ್ದಾರೆ.
ಒಂದೊಮ್ಮೆ ಎರಡೂ ಪಕ್ಷದವರೂ ಒಮ್ಮತಕ್ಕೆ ಬಂದು ಭಗವದ್ಗೀತೆಯನ್ನು ಕೇವಲ ಹಿಂದೂ ಮಕ್ಕಳಿಗೆ ಕಡ್ಡಾಯ ಮಾಡಬಹುದು ಎಂದರೆ ಸಮಸ್ಯೆ ಬಗೆಹರಿಯುತ್ತದೆಯೆ? ಭಗವದ್ಗೀತೆಯು ಹಿಂದೂ ಧರ್ಮಗ್ರಂಥವೆಂದು ನಂಬಿರುವ ವಿರೋಧ ಪಕ್ಷದವರ ಪ್ರಕಾರ ದಲಿತರಿಗೆ ಹಾಗೂ ಶೂದ್ರರಿಗೆ ಅದೊಂದು ಅಪಾಯಕಾರಿ ಗ್ರಂಥವಾಗಿದೆ. ಅದನ್ನು ಶಾಲೆಗಳಲ್ಲಿ ಕಡ್ಡಾಯಮಾಡುವ ಪ್ರಯತ್ನದ ಹಿಂದೆ ಬ್ರಾಹ್ಮಣ ಪುರೋಹಿತಶಾಹಿಯ ಹುನ್ನಾರವಿದೆ. ಈ ಕಾರ್ಯದಿಂದ ಅಲ್ಪಸಂಖ್ಯಾತರಿಗೊಂದೇ ಅಲ್ಲ, ದಲಿತ-ಶೂದ್ರರ ಹಿತಾಸಕ್ತಿಗೂ ಧಕ್ಕೆಯಿದೆ. ಈ ವಾದಕ್ಕೆ ಪರಪಕ್ಷದವರು ನೀಡುವ ಉತ್ತರವೆಂದರೆ ಇಂಥ ಹೇಳಿಕೆಗಳು ಬರುತ್ತಿರುವುದೇ ಹಿಂದೂ ಧರ್ಮದ ಅವನತಿಯ ದ್ಯೋತಕ. ಹಾಗಾಗಿ ಇಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಹಾಗೂ ಹಿಂದೂ ಧರ್ಮದ ಐಕ್ಯತೆಯನ್ನು ಸಾಧಿಸಲು ಹಿಂದೂ ಧರ್ಮಗ್ರಂಥಗಳನ್ನು ಕಡ್ಡಾಯವಾಗಿಯಾದರೂ ಹಿಂದೂಗಳಿಗೆ ತಿಳಿಸುವುದು ಅತ್ಯಗತ್ಯ. ಮತ್ತಷ್ಟು ಓದು 
ಪ್ರಜಾಪ್ರಭುತ್ವ ಭಾರತದಲ್ಲಿ ಗಾಂಧಿತ್ವದ ಮೌಲ್ಯಗಳು
– ಅರಹೊಳೆ ಸದಾಶಿವರಾಯರು
ಪ್ರತೀ ವರ್ಷವೂ ನಾವು ಗಣರಾಜ್ಯದಿನ, ಸ್ವಾತಂತ್ರ್ಯ ದಿನ, ಗಾಂಧಿ ಜಯಂತಿ ಹಾಗೂ ಗಾಂಧೀಜಿ ಪುಣ್ಯತಿಥಿಗಳನ್ನು ಆಚರಿಸುತ್ತೇವೆ-ಒಂದು ರೀತಿಯ ಅನಿವಾರ್ಯತೆಯಿಂದ ಆಚರಿಸಿದಂತೆ. ಈ ಸಂದರ್ಭಗಳಲ್ಲಿ ಮಾತ್ರ ನಮಗೆ, ಗಾಂಧೀಜಿಯವರ ತತ್ವ-ಚಿಂತನೆಗಳು ಪ್ರವಾಹೋಪಾದಿಯಲ್ಲಿ ನೆನಪಾಗುತ್ತವೆ ಮತ್ತು ಆ ಕ್ಷಣದಲ್ಲಿಯೇ ಅವುಗಳು ಮರೆತೂ ಹೋಗುತ್ತವೆ. ಈ ಹಿನ್ನೆಲೆಯಲ್ಲಿ ನಮ್ಮನ್ನು ನಾವು ಚಿಂತನೆಗೊಡ್ಡಿಕೊಂಡಾಗ, ಒಂದು ರೀತಿಯ ಖೇದಾಶ್ಚರ್ಯಗಳು ಹುಟ್ಟುತ್ತವೆ.
ಪರಿಮಿತಿಯರಿತಾಶೆ, ಪರವಶತೆಯಳಿದ ಸುಖ
ವಿರತಿಯೊಡವೆರೆದ ಲೋಕೋದ್ಯೋಗಯುಕ್ತಿ
ಪರಿಕಿಸುತ ಜೀವಿತವ ಸತ್ಯವನೆ ಪಿಡಿವ ಮತಿ
ವರಗಳೀ ನಾಲ್ಕೆ ವರ-ಮಂಕುತಿಮ್ಮ
ಪರಿಮಿತವಾದ ಆಸೆ ಇರಬೇಕು, ವ್ಯಾಮೋಹ ತೊರೆದ ಸುಖವಿರಬೇಕು, ವಿರಕ್ತಿಯಿಂದ ಕೂಡಿದ ಉದ್ಯೋಗ ಯುಕ್ತಿ ಇರಬೇಕು. ಜೀವನವನ್ನು ಪರೀಕ್ಷಿಸುತ್ತಾ, ಸತ್ಯವನ್ನು ಪ್ರೀತಿಸುವ ಬುದ್ದಿ ಇರಬೇಕು.ಇದು ಕನ್ನಡದ ಭಗವದ್ಗೀತೆಯೆಂದೇ ಜನಜನಿತವಾಗಿರುವ ಮಂಕುತಿಮ್ಮನ ಕಗ್ಗದ ಸಾಲುಗಳು. ಇದರ ಉದ್ಧರಣೆಯೊಂದಿಗೆ ನಾನು ಇಂದು ಪ್ರಸ್ತುತ ಪಡಿಸಲಿರುವ ವಿಚಾರಧಾರೆಗೆ ಮೊದಲಂಕಿತ ಇಡುತ್ತಿದ್ದೇನೆ. ಮತ್ತಷ್ಟು ಓದು 
ಜಲಿಯನ್ ವಾಲಾಬಾಗ್ ಒಂದು ಘೋರ ನೆನೆಪು
– ಜಯಂತ್ ರಾಮಾಚಾರ್
ಏಪ್ರಿಲ್ ೧೩, ಇಂದಿಗೆ ಸರಿಯಾಗಿ ೯೨ ವರ್ಷಗಳು ಸಂದಿವೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ನಡೆದು. ೧೯೧೯, ಏಪ್ರಿಲ್ ೧೩ ರಂದು ಸುಮಾರು ೨ ಸಾವಿರ ಮಂದಿ ಹಿಂದೂ, ಮುಸ್ಲಿಂ, ಸಿಖ್ ಬಾಂಧವರ ಮಾರಣ ಹೋಮಕ್ಕೆ ಸಾಕ್ಷಿಯಾಯಿತು ಈ ಜಲಿಯನ್ ವಾಲಾಬಾಗ್. ಜಲಿಯನ್ ವಾಲಾಬಾಗ್ ಒಂದು ಚಚ್ಚೌಕವಾದ ಪ್ರದೇಶ, ಇದಕ್ಕೆ ಹೋಗಿಬರಲು ಇದ್ದ ದಾರಿಗಳು ವಿರಳ. ಎತ್ತರೆತ್ತರದ ಗೋಡೆಗಳು, ಮಧ್ಯದಲ್ಲಿ ಬಾವಿ, ಮನೆ ಕಟ್ಟಲು ಬಳಸುತ್ತಿದ್ದ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿದ್ದ ಜಾಗ.
ಏಪ್ರಿಲ್ ೧೩, ೧೯೧೯ ಅಂದು ವೈಶಾಖಿಯ ಸಂಭ್ರಮ. ವೈಶಾಖಿಯ ಸಂಭ್ರಮವೆಂದರೆ ಕಣಜ ತುಂಬಿಸುವ, ಸುಗ್ಗಿಯ ಸಂಭ್ರಮ. ಆದರೆ ಪ್ರತಿ ವೈಶಾಖಿಗೂ ೧೯೧೯ರ ವೈಶಾಖಿಗೂ ವ್ಯತ್ಯಾಸವಿತ್ತು. ಏಕೆಂದರೆ ಅದೇ ಸಮಯದಲ್ಲಿ ಗಾಂಧಿಜಿ ಅವರನ್ನು ಬ್ರಿಟಿಶ್ ಸರ್ಕಾರ ಬಂಧಿಸಿತ್ತು. ಅದರ ಪ್ರತೀಕಾರ ತೀರಿಸಿಕೊಳ್ಳಲು ಜನ ಹಾತೊರೆಯುತ್ತಿದ್ದರು. ಎಂದಿನಂತೆ ಹೊರವಲಯದಲ್ಲಿ ಸೇರದ ಜನ ಅಂದು ಜಲಿಯನ್ ವಾಲಾಬಾಗ್ ನಲ್ಲಿ ಸುಮಾರು ೨೦ ಸಾವಿರ ಮಂದಿ ನೆರೆದಿದ್ದರು. ಸುತ್ತಲೂ ಜನ ಮಧ್ಯದಲ್ಲಿ ವೇದಿಕೆಯಿದ್ದು ಅದರ ಮೇಲೆ ಹಂಸರಾಜ್ ಎಂಬುವವರು ಭಾಷಣ ಶುರು ಮಾಡಿದ್ದರು. ಭಾಷಣ ಶುರುವಾಗಿ ಹೆಚ್ಚು ಸಮಯವೇನು ಆಗಿರಲಿಲ್ಲ. ಅಷ್ಟರಲ್ಲಿ ಅಲ್ಲಿಗೆ ತನ್ನ ಸೈನ್ಯದೊಂದಿಗೆ ಆಗಮಿಸಿದ ಜನರಲ್ ಡಯರ್ ನೇರವಾಗಿ ಗುಂಡಿನ ಸುರಿಮಳೆಗೈಯ್ಯಲು ಆದೇಶವಿತ್ತ. ಸಂಜೆ ಐದೂವರೆಗೆ ಶುರುವಾದ ಈ ಹತ್ಯಾಕಾಂಡ ಕೆಲವೇ ಕೆಲವು ನಿಮಿಷಗಳಲ್ಲಿ ಸುಮಾರು ಎರಡು ಸಾವಿರ ಮಂದಿಯ ಪ್ರಾಣ ತೆಗೆದು ಹಾಕಿತ್ತು.




