ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

12
ಆಕ್ಟೋ

ಪ್ರಾರ್ಥನಾ ಮಂದಿರ ವಶಕ್ಕೆ ಸರ್ಕಾರದ ಚಿಂತನೆ: ಭುಗಿಲೆದ್ದ ಆಕ್ರೋಶ (ಸುಳ್ಸುದ್ದಿ)

– ಪ್ರವೀಣ್ ಕುಮಾರ್, ಮಾವಿನಕಾಡು

sulsuddiಕಲಾಸಿಪಾಳ್ಯದಲ್ಲಿರುವ ಪ್ರಾರ್ಥನಾ ಮಂದಿರವೊಂದನ್ನು ಸರ್ಕಾರ ವಶಕ್ಕೆ ಪಡೆಯಲು ತೀರ್ಮಾನಿಸಿದೆ. ಈ ಬಗ್ಗೆ ಗುರುವಾರ ನೋಟೀಸ್ ನೀಡಲಾಗಿದ್ದು ನಾಲ್ಕು ದಿನಗಳ ಒಳಗಾಗಿ ಉತ್ತರಿಸುವಂತೆ ಸೂಚಿಸಲಾಗಿದೆ. ಈ ಪ್ರಾರ್ಥನಾ ಮಂದಿರವನ್ನು ಹೇಗಾದರೂ ಮಾಡಿ ವಶಪಡಿಸಿಕೊಳ್ಳಲೇಬೇಕು ಎನ್ನುವ ಹಠವಿದ್ದು ಅದೇ ಕಾರಣಕ್ಕೆ ಕೇವಲ ನಾಲ್ಕೇ ದಿನ ಸಮಯ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೋಟೀಸ್ ನೀಡಿದ್ದಾರೆ ಎಂದು ಸೌಹಾರ್ದಗೇಡು ವೇದಿಕೆ ದೂರಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸದ್ಯದಲ್ಲೇ ನಿವೃತ್ತರಾಗಲಿದ್ದು ಈ ಹಂತದಲ್ಲಿ ಪ್ರಾರ್ಥನಾ ಮಂದಿರವನ್ನು ವಶಕ್ಕೆ ಪಡೆಯುವ ಕುರಿತು ನೋಟೀಸ್ ನೀಡಿರುವುದು ಕರ್ನಾಟಕದ ಹಲವು ಬುದ್ದಿಜೀವಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ನಿವೃತ್ತಿಯ ಹಂತದಲ್ಲಿ ಇಂತಹಾ ಪ್ರಮುಖ ನಿರ್ಧಾರಗಳನ್ನು ಯಾರೂ ತೆಗೆದುಕೊಳ್ಳುವುದಿಲ್ಲ. ಆದರೆ ಒಮ್ಮೆ ಪ್ರಾರ್ಥನಾ ಮಂದಿರವನ್ನು ವಶಕ್ಕೆ ಪಡೆದ ನಂತರ ನಿವೃತ್ತಿಯಾದರೆ ಅದರಿಂದ ಮುಂದೆ ಆಗಬಹುದಾದ ಅಪಾಯಗಳಿಂದ ತಪ್ಪಿಸಿಕೊಳ್ಳುವ ಹುನ್ನಾರ ಇದರಲ್ಲಿದೆ ಎಂದು ಜಾತ್ಯತೀತ ಸಂಘಟನೆಯ ಪ್ರಮುಖರು ತಮ್ಮ ಅನುಮಾನ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ಓದು »

25
ಸೆಪ್ಟೆಂ

ಮದ್ದರೆಯದಿದ್ದರೆ ಈ ಮಾವೋವ್ಯಾಧಿ ನಿದ್ದೆಗೆಡಿಸಲಿದೆ ಎಚ್ಚರ!

– ರೋಹಿತ್ ಚಕ್ರತೀರ್ಥ

naxals-1457757541ಎರಡು ಸುದ್ದಿಗಳಿವೆ. ಒಂದು – ಉರಿ ಸೇನಾನೆಲೆಯ ಮೇಲೆ ನಾಲ್ಕು ಮಂದಿ ಮುಸ್ಲಿಂ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 17 ಸೈನಿಕರು ಹತರಾಗಿದ್ದಾರೆ. ಎರಡು – ಭಾರತದ ನಕ್ಸಲ್ ಉಗ್ರರು ಜಗತ್ತಿನ ಭಯೋತ್ಪಾದನೆಯ ಪಟ್ಟಿಯಲ್ಲಿ ಕಂಚಿನ ಪದಕವನ್ನು ಜಸ್ಟ್ ಮಿಸ್ ಮಾಡಿಕೊಂಡು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಇವೆರಡರಲ್ಲಿ, ನಕ್ಸಲರ ಸಮಸ್ಯೆಯೇ ದೊಡ್ಡದು ಅನಿಸಿದ್ದರಿಂದ ಅದನ್ನು ಈ ವಾರದ ಅಂಕಣಕ್ಕೆ ಆಯ್ದುಕೊಂಡಿದ್ದೇನೆ. ಯಾಕೆಂದರೆ ಹೊರಗಿನ ಶತ್ರುಗಳನ್ನು ಪ್ರತಿದಾಳಿ ಮಾಡಿಯೋ ಯುದ್ಧ ಘೊಷಿಸಿಯೋ ತಹಬದಿಗೆ ತರಬಹುದೆನ್ನೋಣ; ಆದರೆ, ತಾಯ್ನಾಡಿನ ಒಳಗೇ ಇದ್ದುಕೊಂಡು ಒರಲೆಯಂತೆ ದೇಶವನ್ನು ಕೊರೆದು ಪುಡಿಗುಟ್ಟುವ ಆಂತರಿಕ ಶತ್ರುಗಳನ್ನು ಬಗ್ಗುಬಡಿಯುವುದು ಹೇಗೆ? 2015ರಲ್ಲಿ ಭಾರತದಲ್ಲಿ ನಡೆದ 791 ಭಯೋತ್ಪಾದನಾ ಕೃತ್ಯಗಳಲ್ಲಿ 43% ಅನ್ನು ನಕ್ಸಲೈಟ್ ಸಂಘಟನೆಗಳೇ ಮಾಡಿವೆ ಎಂದು ಅಂತಾರಾಷ್ಟ್ರೀಯ ವರದಿಯೊಂದು ಹೇಳುತ್ತಿದೆ. ಒಂದೇ ವರ್ಷದಲ್ಲಿ ಇವರು ನಡೆಸಿರುವ ದಾಳಿಗಳು 343; ಇವರ ಅಟ್ಟಹಾಸಕ್ಕೆ ಬಲಿಯಾಗಿ ಶವವಾಗಿ ಮಲಗಿದ ಅಮಾಯಕರ ಸಂಖ್ಯೆ 176. 2010ರಿಂದ 2015ರವರೆಗಿನ ಅವಧಿಯಲ್ಲಿ ದೇಶದೊಳಗೆ ನಡೆದ ಭಯೋತ್ಪಾದನಾ ಕೃತ್ಯಗಳಲ್ಲಿ 2162 ನಾಗರಿಕರು, 802 ಭದ್ರತಾ ಸಿಬ್ಬಂದಿ ಹತರಾಗಿದ್ದಾರೆಂದು ಕೇಂದ್ರದ ಗೃಹಸಚಿವಾಲಯದ ವರದಿ ಹೇಳುತ್ತಿದೆ. ಜಗತ್ತಿನಲ್ಲಿ ತಾಲಿಬಾನ್, ಐಸಿಸ್ ಮತ್ತು ಬೊಕೋ ಹರಾಮ್ ಎಂಬ ಉಗ್ರಗಾಮಿ ಸಂಘಟನೆಗಳ ನಂತರದ ಸ್ಥಾನವನ್ನು ಭಾರತದ ನಕ್ಸಲ್ ಚಳವಳಿ ತನ್ನ ಮುಡಿಗೇರಿಸಿಕೊಂಡಿದೆ. ಭಾರತ ಪ್ರಪಂಚದೆದುರು ತಲೆ ತಗ್ಗಿಸುವಂಥ ವಿಚಾರವಿದು. ಕರ್ನಾಟಕದ ಸಂದರ್ಭದಲ್ಲಿ ನಕ್ಸಲೈಟ್ ಚಳವಳಿಯ ನೆಲೆ-ಬೆಲೆಗಳೇನು ಎಂಬುದನ್ನು ವಿಮರ್ಶಿಸುವುದೇ ಪ್ರಸ್ತುತ ಲೇಖನದ ಉದ್ದೇಶ. ಮತ್ತಷ್ಟು ಓದು »

23
ಸೆಪ್ಟೆಂ

ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)

ನಿಲುಮೆ ತಂಡವು, ಮಂಗಳೂರಿನಲ್ಲಿ ( 18.09.2016 ) ರಂದು ನಡೆಸಿದ ‘ಕಾಶ್ಮೀರದ ಕುರಿತು ವಿಚಾರ ಸಂಕಿರಣ’  ಕಾರ್ಯಕ್ರಮದಲ್ಲಿ  ಚಕ್ರವರ್ತಿ ಸೂಲಿಬೆಲೆಯವರ ಮಾತುಗಳನ್ನು ರೂಪಲಕ್ಷ್ಮೀಯರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..

ಚಕ್ರವರ್ತಿ ಸೂಲಿಬೆಲೆಯವರ ಭಾಷಣದ ಮುಖ್ಯಾಂಶಗಳು.

14088692_10154596775090649_5386569408904041755_nವರ್ಷಕೊಮ್ಮೆ ನಾನು ಜಮ್ಮು, ಕಾಶ್ಮೀರಕ್ಕೆ ಹೋಗೋದ್ರಿಂದ, ಅಲ್ಲಿ ನಾನು ನೋಡಿರುವ ಆಧಾರದ ಮೇಲೆ, ನನ್ನ ವಿಚಾರಗಳನ್ನು ಹೇಳ್ತೀನಿ. ಪ್ರೊಫೆಸರ್ ಪ್ರೇಮ್ ಶೇಖರ್ ಅವರು ಆಗಲೇ ಹೇಳಿದ ಪ್ರಕಾರ, ಕಾಶ್ಮೀರದಲ್ಲಿ ಮೂರು ತರಹದ ಜನಾಂಗಗಳಿವೆ. ೧. ಹಿಂದು, ೨. ಮುಸ್ಲಿಮ್ ಮತ್ತು ೩. ಬುದ್ದಿಸ್ಟ್ – ಲಡಾಕ್ ನಲ್ಲಿರುವಂತಹವರು. ಆದರೆ ಮುಸ್ಲಿಮರು ಹೇಳೋದು – ಕಾಶ್ಮೀರದಲ್ಲಿ ನಾಲ್ಕು ತರಹದ ಜನರಿದ್ದಾರೆ. ೧. ಹಿಂದೂ, ೨. ಮುಸ್ಲಿಮ್ – ಸುನ್ನಿ ಮತ್ತು ಶಿಯಾ ೩. ಲಡಾಕ್. ಪ್ರೇಮ್ ಶೇಖರ್ ಸರ್ ಹೇಳಿದ ಹಾಗೆಯೇ ಇನ್ನು ಮುಂದೆ ಕಾರ್ಗಿಲ್ ನ ಸುದ್ಧಿಗೆ ಪಾಕಿಸ್ತಾನ್ ಬರೋಲ್ಲ. ಯಾಕೆಂದರೆ ಕಾರ್ಗಿಲ್ ನಲ್ಲಿ ಹೆಚ್ಚಾಗಿರುವ ಮುಸ್ಲಿಮರು – ಶಿಯಾ ಪಂಗಡದವರು. ಪಾಕಿಸ್ತಾನದಲ್ಲಿರುವ ಮುಸ್ಲಿಮರು – ಸುನ್ನಿ ಪಂಗಡದವರು. ಕಾಶ್ಮೀರದ ಕಣಿವೆಯಲ್ಲಿರೋ ಮುಸ್ಲಿಮರು, ಪಾಕಿಸ್ತಾನದ ಮುಸ್ಲಿಮರನ್ನು ತಮ್ಮ ಮುಸಲ್ಮಾನರು ಅಂತಂದುಕೊಳ್ತಾರೆ. ಆದರೆ ಕಾರ್ಗಿಲ್ ನ ಶಿಯಾದವರಿಗೆ ಚೆನ್ನಾಗಿ ಗೊತ್ತು. ತಾವೇನಾದರೂ ಪಾಕಿಸ್ತಾನಕ್ಕೆ ಹೋದರೆ, ಇದುವರೆವಿಗೂ ಕಣಿವೆಯಲ್ಲಾದ ಅತ್ಯಾಚಾರಗಳು, ದೌರ್ಜನ್ಯಗಳನ್ನು, ಈ ಪಾಕಿಸ್ತಾನದ ಸುನ್ನಿಗಳು ತಮ್ಮ ಮೇಲೆಯೇ ನಡೆಸುತ್ತಾರೆ. ಆ ಭಯದಿಂದ ಕಾರ್ಗಿಲ್ ನ ಮುಸ್ಲಿಮರು, ಏನೇ ಆದರೂ ನಾವು ಭಾರತದಲ್ಲೇ ಇರ್ತೀವಿ. ಪಾಕಿಸ್ತಾನಕ್ಕೆ ಸೇರೋಲ್ಲ ಅಂತಾ ಹೇಳ್ತಾರೆ. ಮತ್ತಷ್ಟು ಓದು »

20
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 3 ಕಮ್ಯುನಿಸಂ: ( ಅಪ್ರಸ್ತುತ ಸಿದ್ಧಾಂತ, ಅವಾಸ್ತವಿಕ ಪರಿಹಾರ )

– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
karl-marx-wikimedia-commonsಕಮ್ಯುನಿಸ್ಟ್ ಚಿಂತನೆಯನ್ನು ಕಾರ್ಲ್ ಮಾರ್ಕ್ಸ್ ಪ್ರಾರಂಭಿಸಿದವನಲ್ಲ; ಆದರೆ ಅದಕ್ಕೊಂದು ಸ್ಪಷ್ಟ ರೂಪ ಕೊಟ್ಟವನು ಆತ. ಮಾರ್ಕ್ಸ್ ತೀರಿಕೊಂಡ ಮೂವತ್ತು ವರ್ಷಗಳ ನಂತರ ರಷ್ಯದಲ್ಲಿ ಕ್ರಾಂತಿಯಾಗಿ ಲೆನಿನ್ ಅಧಿಪತ್ಯ ಬಂತು. ಮಾರ್ಕ್ಸ್ ನ ಅದುವರೆಗಿನ ಅಪ್ರಕಟಿತ ಕೃತಿಗಳೆಲ್ಲ ಒಂದರ ಮೇಲೊಂದರಂತೆ ಸಾಲಾಗಿ ಪ್ರಕಟವಾಗಿ ಜಗತ್ತಿನ ಹಲವು ದೇಶಗಳಲ್ಲಿ, ಹಲವು ಯುವಕರ ಕೈಗೆ ಬಂದು, ಅವರೆಲ್ಲ ತಮ್ಮ ಸುತ್ತಲಿನ ಹಳೆಯ ವ್ಯವಸ್ಥೆಯನ್ನು ಕಿತ್ತೊಗೆಯುವ ಸಂಕಲ್ಪ ತೊಡುವಂತಾಯಿತು. 1920ರಿಂದ 1960ರವರೆಗಿನ ಅವಧಿ ಕಮ್ಯುನಿಸಂ ಮತ್ತು ಮಾಕ್ರ್ಸಿಸಂಗಳ ಉಚ್ಛ್ರಾಯಕಾಲ. ರಷ್ಯ, ಚೀನಾ, ಕೊರಿಯ, ಕಾಂಬೋಡಿಯಾ, ಜರ್ಮನಿ, ಗ್ರೇಟ್ ಬ್ರಿಟನ್, ಫ್ರಾನ್ಸ್, ಕ್ಯೂಬಾದಂಥ ಹಲವು ದೇಶಗಳು ಮಾಕ್ರ್ಸ್ ಚಿಂತನೆಯ ಪ್ರಯೋಗ ಶಾಲೆಗಳಾದವು. ಸ್ವಾತಂತ್ರ್ಯಾ ನಂತರದ ಮೊದಲ ಮೂರು ದಶಕಗಳಲ್ಲಿ ಭಾರತ ಕೈಗೊಂಡ ಹತ್ತುಹಲವು ಯೋಜನೆಗಳಲ್ಲಿ ಸೋವಿಯೆಟ್ ರಷ್ಯಾ ಪ್ರಣೀತ ಕಮ್ಯುನಿಸಂನ ದಟ್ಟ ಛಾಯೆಯಿದ್ದದ್ದು ಸುಸ್ಪಷ್ಟ. ಆದರೆ 1970ರ ನಂತರ ರಷ್ಯಾ ಹಲವು ಹೋಳುಗಳಾಗಿ ಒಡೆದುಹೋಗಿ ಶೀತಲಸಮರ ಅಘೋಷಿತ ಅಂತ್ಯ ಕಂಡಿದ್ದರಿಂದ ಕಮ್ಯುನಿಸಂ ಹಿನ್ನಡೆಯನುಭವಿಸಿತು. ಅಲ್ಲದೆ ಕಮ್ಯುನಿಸಂನ್ನು ಅಪ್ಪಿಕೊಂಡ ದೇಶಗಳೆಲ್ಲ ಸರ್ವಾಧಿಕಾರಿಗಳ ನಿಯಂತ್ರಣಕ್ಕೊಳಪಟ್ಟು ಬೃಹತ್ ಪ್ರಮಾಣದ ಹತ್ಯಾಕಾಂಡಗಳಿಗೆ ಸಾಕ್ಷಿಯಾದ್ದರಿಂದ, ಮಾರ್ಕ್ಸ್ ನ ಚಿಂತನೆಗಳ ಮೇಲಿದ್ದ ಭರವಸೆಗಳೆಲ್ಲ ಕಮರಿಹೋದವು. ಕಮ್ಯುನಿಸಂನ ಮೆಕ್ಕಾ ಎಂದೇ ಕರೆಸಿಕೊಳ್ಳುತ್ತಿದ್ದ ರಷ್ಯಾದೊಳಗಿನ ಬಡತನ, ಶೋಷಣೆ, ಸ್ವಾತಂತ್ರ್ಯಹರಣ, ಹಿಂಸಾಚಾರಗಳ ಕಟು ಕತೆಗಳು ಹೊರಜಗತ್ತಿಗೆ ತಿಳಿಯತೊಡಗಿದ್ದು 70ರ ದಶಕದ ನಂತರ; ಅದೂ ತುಣುಕು ತುಣುಕಾಗಿ. ಮತ್ತಷ್ಟು ಓದು »

17
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )

– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
karl-marx-wikimedia-commonsಕಾರ್ಲ್ ಮಾರ್ಕ್ಸ್ ನ ಒಟ್ಟು ಚಿಂತನೆಯನ್ನು ಹೀಗೆ ಸಂಗ್ರಹಿಸಬಹುದು: ಕೈಗಾರಿಕೆಗಳು ಬೆಳೆದು, ಯಂತ್ರ ಸಂಸ್ಕೃತಿಯ ಮೂಲಕ ಆಧುನಿಕತೆಯು ಸಮಾಜವನ್ನು ಪ್ರವೇಶಿಸಿರುವುದರಿಂದ ಮನುಷ್ಯ ಜಾಗೃತನಾಗಬೇಕು. ಯಂತ್ರಗಳು ಮನುಷ್ಯನ ಉದ್ಯೋಗವನ್ನು ಕಸಿಯುವುದು ಮಾತ್ರವಲ್ಲ; ಸಮಾಜದಲ್ಲಿ ಬಹು ದೊಡ್ಡ ಆರ್ಥಿಕ ಅಸಮತೋಲನವನ್ನು ಸೃಷ್ಟಿಸುತ್ತವೆ. ಯಂತ್ರಗಳಿಂದ ಮನುಷ್ಯ ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುತ್ತಾನೆ. ಯಾವ ಕೆಲಸವನ್ನು ಯಾರೂ ಮಾಡಬಹುದೆಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬರಿಗೂ ಕೆಲಸದಲ್ಲಿದ್ದ ಶ್ರದ್ಧೆ, ಪ್ರೀತಿ, ಆತ್ಮೀಯತೆಗಳು ಕಾಣೆಯಾಗುತ್ತವೆ. ತಾವು ಬಯಸಿದಂತೆ ಕೆಲಸಗಾರರನ್ನು ಬಳಸಿಕೊಳ್ಳುವ ಸ್ವಾತಂತ್ರ್ಯವನ್ನು ಬಂಡವಾಳಶಾಹಿಗಳು ಪಡೆಯುತ್ತಾರೆ. ಇದರಿಂದಾಗಿ ಕಾರ್ಮಿಕರನ್ನು ಅತಿ ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಹೊಸ ಬಗೆಯ ಗುಲಾಮಗಿರಿ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಬಂಡವಾಳಶಾಹಿಗಳು ಲಾಭ ಎಂದು ಏನನ್ನು ಕರೆಯುತ್ತಾರೋ ಅದು ಶೋಷಣೆಯ ಮೂರ್ತ ಮೊತ್ತ. ಮತ್ತಷ್ಟು ಓದು »

14
ಸೆಪ್ಟೆಂ

ಸಾಧಕರ ಹೆಸರಲ್ಲಿ ಅಸ್ಮಿತೆಯ ಹುಡುಕಾಟ

– ಡಾ.ಬಿ.ವಿ.ವಸಂತ ಕುಮಾರ್

basavannaಭಾರತ ದೇಶ ಪ್ರಪಂಚದ ಒಂದು ವಿಶಿಷ್ಟ ದೇಶ. ಭಾರತದ ಬದುಕಿನ ದಾರಿಗಳನ್ನು ಇಲ್ಲಿನ ಮಹಾತ್ಮರು ನಿರ್ಮಿಸಿದ್ದಾರೆ. ಕಾಡಿನಿಂದ ಒಡಮೂಡಿದ ಈ ದಾರಿಗಳೆಡೆಗೆ ನಗರ ಮಹಾನಗರಗಳ ಜನರು ಮುಖಮಾಡಿದ್ದನ್ನೂ, ಮಾಡುತ್ತಾ ಇರುವುದನ್ನೂ, ಮುಂದೆ ಮಾಡುವುದನ್ನೂ ನೋಡಬಹುದು. ಇವರೇ ನಿಜವಾದ ರಾಷ್ಟ್ರ ನಿರ್ಮಾಪಕರು, ಸಂಸ್ಕೃತಿ ಸೃಷ್ಟಿಕರ್ತರು, ಕಲ್ಯಾಣದ ಮಹಾಕನಸುಗಾರರು. ಇಂಥವರನ್ನು ಸಂತರು, ಮಹಂತರು, ಶರಣರು, ಋಷಿಮುನಿಗಳು, ದಾರ್ಶನಿಕರು ಎಂದೆಲ್ಲ ಕರೆಯುತ್ತಾರೆ. ಅವರನ್ನು ಸಮಾಜದ ಜನ ಸದಾ ತಮ್ಮ ಬಾಳಿಗೆ ಆದರ್ಶದ ನಂದಾದೀವಿಗೆಯನ್ನಾಗಿಸಿಕೊಂಡಿದ್ದಾರೆ. ಅವರನ್ನು ಗುರುವೆಂದು ಸ್ವೀಕರಿಸಿ ತಾವು ಭಕ್ತರಾಗಿ ಗುರು-ಶಿಷ್ಯ ಪರಂಪರೆಯ ಆಧ್ಯಾತ್ಮಕ್ಕೂ ಅನುಭವಕ್ಕೂ ಕಾರಣರಾಗಿದ್ದಾರೆ. ಮತ್ತಷ್ಟು ಓದು »

11
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)

– ರೋಹಿತ್ ಚಕ್ರತೀರ್ಥ

karl-marx-wikimedia-commonsಹತ್ತೊಂಬತ್ತು ಮತ್ತು ಇಪ್ಪತ್ತನೇ ಶತಮಾನದ ಪ್ರಪಂಚವನ್ನು ಹೆಚ್ಚು ಪ್ರಭಾವಿಸಿದ, ಬದಲಾಯಿಸಿದ ಸಿದ್ಧಾಂತಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವುದು ಕಮ್ಯುನಿಸಂ. ಇಪ್ಪತ್ತನೇ ಶತಮಾನದಲ್ಲಿ ನಡೆದ ಹಲವು ಮಹತ್ವದ ರಾಜಕೀಯ ಚಳುವಳಿಗೆ ಕಮ್ಯುನಿಸಂ ಮೂಲದ್ರವ್ಯವಾಗಿ ಒದಗಿಬಂತು. ಕಮ್ಯುನಿಸಂ ಎಂದರೇನು, ಅದು ಜಗತ್ತನ್ನು ಪ್ರಭಾವಿಸಿದ ಬಗೆ ಹೇಗೆ, 1970ರ ನಂತರ ಅದು ಅವನತಿಯತ್ತ ಸಾಗಲು ಕಾರಣವಾದ ಸನ್ನಿವೇಶಗಳೇನು, ಇಂದಿನ ಯುಗಕ್ಕೆ ಕಮ್ಯುನಿಸಂ ಪ್ರಸ್ತುತವೇ ಎಂಬ ವಿಚಾರಗಳನ್ನು ತಿಳಿದುಕೊಳ್ಳಲು, ಮೊದಲಿಗೆ ನಾವು ಅದರ ಹುಟ್ಟಿನ ದಿನಗಳ ಅವಲೋಕನ ಮಾಡಬೇಕಾಗುತ್ತದೆ. ಮತ್ತಷ್ಟು ಓದು »

10
ಸೆಪ್ಟೆಂ

ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)

ನಿಲುಮೆ ತಂಡ ನಡೆಸಿದ ಕಾಶ್ಮೀರದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪ್ರೊ.ಪ್ರೇಮಶೇಖರವರ ಮಾತುಗಳನ್ನು ಶೋಭ ರಾವ್ ರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..

14088692_10154596775090649_5386569408904041755_nಕಾಶ್ಮೀರದ ಬಗ್ಗೆ ಇಂದು ಹಲವಾರು ಜನ ತಮ್ಮ ಅಲ್ಪಜ್ಞಾನದಿಂದ ಹಲವಾರು ತರಹ ಮಾತಾಡುತ್ತಾರೆ. ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ದುರಂತವೆಂದರೆ ಅದನ್ನು ಕೇಳಲು ಕೂಡ ಬಹಳಷ್ಟು ಜನರಿದ್ದಾರೆ. ನಾವು ಅವರ ಬಳಿ ಹೋಗಿ ಬೀದಿ ಜಗಳ ಮಾಡಬೇಕಿಲ್ಲ. ವಸ್ತುನಿಷ್ಠ ಚರ್ಚೆಯನ್ನು ಏರ್ಪಡಿಸಿ ನಿಜಸಂಗತಿಗಳನ್ನ ತಿಳಿಸಿದರೆ ಸಾಕು. ಕಾಶ್ಮೀರ ನಮ್ಮದೂ ಎಂದು ಭಾರತವೂ ಹೇಳುತ್ತೆ, ಪಾಕಿಸ್ತಾನವೂ ಹೇಳುತ್ತೆ. ನಾವು ಇವೆರೆಡಕ್ಕೂ ಸೇರಿಲ್ಲ ಎಂದು ಮತ್ತೊಂದು ಗುಂಪು ಕೂಡ ಹೇಳುತ್ತೆ. ಇದೇ ಕಾಶ್ಮೀರದ ನಿಜವಾದ ಸಮಸ್ಯೆ. ಮತ್ತಷ್ಟು ಓದು »

7
ಸೆಪ್ಟೆಂ

ಫ್ರಾನ್ಸಿನ ಸೆಕ್ಯುಲರಿಸಂ ಮತ್ತು ಇಸ್ಲಾಮಿನ ಜಗಳದಲ್ಲಿ ಭಾರತಕ್ಕೇನು ಪಾಠ?

– ವಿನಾಯಕ ಹಂಪಿಹೊಳಿ

726567-burqaಸದ್ಯಕ್ಕೆ ಫ್ರಾನ್ಸಿನಲ್ಲಿ ಬುರ್ಕ ಬ್ಯಾನ್ ಕುರಿತು ಚರ್ಚೆ ನಡೆಯುತ್ತಿದೆ. ಬುರ್ಕಾ ಬ್ಯಾನ್ ತುಂಬಾ ಹಿಂದೆಯೇ ಆಗಿದೆ. ಈ ರೀತಿಯ ನಿಷೇಧಗಳಿಗೆ ಫ್ರಾನ್ಸ್ ಕೊಡುತ್ತಿರುವ ಕಾರಣ ರಿಲಿಜನ್ನುಗಳು ಪ್ರತಿಪಾದಿಸುವ ವಸ್ತ್ರಸಂಹಿತೆಯನ್ನು ಪಬ್ಲಿಕ್ ವಲಯದಲ್ಲಿ ಪಾಲಿಸುವುದು ಅಲ್ಲಿನ ಸೆಕ್ಯುಲರಿಸಂ ಐಡಿಯಾಲಜಿಯೊಂದಿಗೆ ಸರಿಹೊಂದದಿರುವದು. ಫ್ರಾನ್ಸಿನಲ್ಲಿ ಪ್ರಜಾಪ್ರಭುತ್ವದ ಆಡಳಿತವನ್ನು ಚರ್ಚಿನಿಂದ ಪ್ರತ್ಯೇಕಿಸುವ ಪ್ರಕ್ರಿಯೆ ತುಂಬ ಕಟ್ಟುನಿಟ್ಟಾಗಿತ್ತು. ಫ್ರಾನ್ಸಿನ ಸೆಕ್ಯುಲರಿಸಂ ರಿಲಿಜನ್ನನ್ನು ಕೇವಲ ರಾಜಕೀಯದಿಂದಷ್ಟೇ ಪ್ರತ್ಯೇಕಿಸುವದಷ್ಟೇ ಅಲ್ಲ, ಫ್ರಾನ್ಸ್ ದೇಶವು ಯಾವ ರಿಲಿಜನ್ನಿನೊಂದಿಗೂ ಗುರುತಿಸಿಕೊಳ್ಳಬಾರದು ಎನ್ನುವದು ಅದರ ಆಶಯ. ಆದ್ದರಿಂದ ಫ್ರಾನ್ಸ್ ದೇಶವು ತನ್ನನ್ನು ತಾನು ರಿಪಬ್ಲಿಕ್ ಮತ್ತು ಸೆಕ್ಯುಲರ್ ದೇಶವೆಂದು ಘೋಷಿಸಿಕೊಂಡಿತ್ತು. ಈ ರೀತಿಯ ಲಿಬರಲ್ ಸೆಕ್ಯುಲರಿಸಂ ಅನ್ನು ಬರೀ ಕ್ರಿಶ್ಚಿಯನ್ನರೇ ತುಂಬಿಕೊಂಡಿದ್ದ ದೇಶದಲ್ಲಿ ಈ ರೀತಿಯ ಸೆಕ್ಯುಲರಿಸಂ ಅನ್ನು ಜಾರಿಗೆ ತರುವದು ಅಷ್ಟು ಕಷ್ಟವಾಗಿರಲಿಲ್ಲ. ಮತ್ತಷ್ಟು ಓದು »

3
ಸೆಪ್ಟೆಂ

ಅಂಬೇಡ್ಕರ್, ಮಾರ್ಕ್ಸ್ ಮತ್ತು ಬುದ್ಧ…..

– ಗುರುರಾಜ ಕೋಡ್ಕಣಿ. ಯಲ್ಲಾಪುರ
buddha_or_karl_marx“ಅದೊಮ್ಮೆ ಬುದ್ಧನ ಅಗ್ರಗಣ್ಯ ಶಿಷ್ಯರಲ್ಲಿ ಒಬ್ಬನಾದ ಅನಾಥಪಿಂಡಿಕನು ಬುದ್ದನಿರುವಲ್ಲಿಗೆ ಆಗಮಿಸುತ್ತಾನೆ. ಹಾಗೆ ಬಂದವನೇ ಬುದ್ಧನಿಗೆ ವಂದಿಸಿ, ಪಕ್ಕದಲ್ಲಿದ್ದ ಆಸನದಲ್ಲಿ ಕುಳಿತುಕೊಳ್ಳುತ್ತ ‘ಹೇ ಮಹಾಜ್ಞಾನಿಯೇ, ಗೃಹಸ್ತನೆನಿಸಿಕೊಂಡವನಿಗೆ ತುಂಬ ಆಸಕ್ತಿದಾಯವೆನ್ನಿಸುವ ಹಿತನೀಡುವ, ಆದರೆ ಅಷ್ಟೇ ಕಷ್ಟವೆನಿಸುವ ಕಾರ್ಯ ಯಾವುದೆಂದು ನಿನಗನ್ನಿಸುತ್ತದೆ .’? ಎಂದು ಪ್ರಶ್ನಿಸುತ್ತಾನೆ. ಹೀಗೊಂದು ಪ್ರಶ್ನೆಯನ್ನು ಕೇಳಿ ಮುಗುಳ್ನಕ್ಕ ಗೌತಮ, ‘ಅಂತಹ ಹಲವಾರು ಕೆಲಸಗಳಿವೆ ಶಿಷ್ಯೋತ್ತಮನೇ. ನ್ಯಾಯಬದ್ಧವಾಗಿ ಸಂಪತ್ತನ್ನು ಗಳಿಸುವುದು ಅಂಥದ್ದೊಂದು ಬಹುಮುಖ್ಯ ಕಾರ್ಯ. ಮೊದಲು ವ್ಯಕ್ತಿ ತಾನು ಧರ್ಮಯುತವಾಗಿ ಸಂಪತ್ತನ್ನು ಗಳಿಸಿಕೊಳ್ಳಬೇಕು. ನಂತರ ತನ್ನ ಹತ್ತಿರದ ಬಂಧುಗಳೂ ಸಹ ನ್ಯಾಯಸಮ್ಮತವಾಗಿಯೇ ಸಂಪತ್ತಿನ ಗಳಿಕೆ ಮಾಡುವಂತೆ ನೋಡಿಕೊಳ್ಳಬೇಕು. ಮೂರನೆಯದ್ದಾಗಿ ವ್ಯಕ್ತಿಯೊಬ್ಬ ತುಂಬ ಕಾಲ ಬದುಕಿ ದೀರ್ಘಾಯುಷಿಯೆನ್ನಿಸಿಕೊಳ್ಳಬೇಕು. ಇವೆಲ್ಲವೂ ಮನುಷ್ಯನಿಗೆ ಇಷ್ಟವಾಗುವ, ಹಿತವೆನಿಸುವ ಕಾರ್ಯಗಳೇ. ಆದರೆ ಅವುಗಳ ಸಾಧನೆ ಸುಲಭಸಾಧ್ಯವಲ್ಲ. ಇಂಥಹ ಐಹಿಕ ಭೋಗಗಳ ಗಳಿಕೆಗೂ ನಂಬಿಕೆ, ಸಚ್ಚಾರಿತ್ರ್ಯ, ಉದಾರತೆ ಮತ್ತು ವಿವೇಕವೆನ್ನುವ ನಾಲ್ಕು ಮೌಲ್ಯಗಳ ಆಶೀರ್ವಾದ ಬೇಕು. ಸಚ್ಚಾರಿತ್ರ್ಯವೆನ್ನುವುದು ಮನುಷ್ಯನ ಮನಸ್ಸು ಚಂಚಲವಾಗದೇ ಕುಡಿತ, ಕಳ್ಳತನ ಕೊಲೆಗಳಂತಹ ಕೆಟ್ಟ ಕಾರ್ಯಗಳನ್ನು ಮಾಡದಂತೆ ಆತನನ್ನು ತಡೆಯುತ್ತದೆ. ಉದಾರತೆಯ ಭಾವವು ಮನುಷ್ಯನನ್ನು ದುರಾಸೆಯಂತಹ ದುರ್ಗುಣಗಳಿಂದ ಮುಕ್ತವಾಗಿಸಿ ತೆರೆದ ಮನಸ್ಸಿನಿಂದ ದಾನಧರ್ಮಗಳನ್ನು ಮಾಡುವಂತೆ ಪ್ರೋತ್ಸಾಹಿಸುತ್ತದೆ. ವಿವೇಕವೆನ್ನುವುದು ಮನುಷ್ಯನನ್ನು ವಿಮೋಚನೆಯತ್ತ ಕರೆದೊಯ್ಯುವ ಮಾರ್ಗ. ವಿವೇಕವೆನ್ನುವ ಹಾರೈಕೆ, ಮನುಷ್ಯನನ್ನು ಜಡತ್ವ, ಕುಯುಕ್ತಿ, ಆಲಸ್ಯ ಅನುಮಾನದಂತಹ ಅವಗುಣಗಳಿಂದ ದೂರವಿರಿಸುತ್ತದೆ. ಹಾಗಾಗಿ ನೈತಿಕತೆಯಿಂದ, ನ್ಯಾಯಸಮ್ಮತ ದುಡಿಮೆಯಿಂದ ಬೆವರು ಸುರಿಸಿ ಗಳಿಸಿದ ಆಸ್ತಿಯೂ ಸಾಮಾನ್ಯ ಮನುಷ್ಯನಿಗೆ ಒಂದು ವರದಾನವಿದ್ದಂತೆಯೇ ಸರಿ. ಹೀಗೆ ಸಿರಿವಂತನಾಗುವ ಗೃಹಸ್ತ, ಬದುಕಿನುದ್ದಕ್ಕೂ ತಾನು ಸಂತಸವಾಗಿರುವುದಲ್ಲದೇ, ಸದಾಕಾಲ ತನ್ನ ಹೆತ್ತವರು, ಮಡದಿ ಮಕ್ಕಳು ಮತ್ತು ಸ್ನೇಹಿತರನ್ನೂ ಸಹ ಸಂತೋಷವಾಗಿರಸಬಲ್ಲ. ಸಂತಸವೇ ಸಾಮಾನ್ಯನೊಬ್ಬನ ಬದುಕಿನ ಸಾರ್ಥಕತೆ ‘ಎನ್ನುತ್ತ ಉತ್ತರಿಸುತ್ತಾನೆ’ ಎಂದು ಬರೆಯುತ್ತಾರೆ, ಸಂವಿಧಾನ ಶಿಲ್ಪಿ ಡಾ.ಭೀಮರಾವ್ ಅಂಬೇಡ್ಕರ್ ತಮ್ಮ ‘Buddha Or Karl Marx’ಎನ್ನುವ ಕೃತಿಯಲ್ಲಿ. ಮತ್ತಷ್ಟು ಓದು »