ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

4
ಜುಲೈ

ಯಡಿಯೂರಪ್ಪನವರಿಂದ ಜನರು ನಿರೀಕ್ಷಿಸುತ್ತಿರುವುದೇನು?

– ರಾಕೇಶ್ ಶೆಟ್ಟಿ

800x480_IMAGE55065639ಸಂಸತ್ತಿನ ಸೆಂಟ್ರಲ್ ಹಾಲಿನಲ್ಲಿ ಪ್ರಧಾನಿ ಮೋದಿಯವರ ಭಾಷಣದಿಂದ ಪ್ರೇರಿತರಾಗಿ, ತಾನು ಸ್ವಇಚ್ಚೆಯಿಂದ ಕರ್ನಾಟಕ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡು ೨೦೧೪ರ ಮೇ ೨೨ನೇ ತಾರೀಖಿನಂದು ಯಡ್ಯೂರಪ್ಪನವರು ಮೋದಿಯವರಿಗೊಂದು ಪತ್ರ ಬರೆದಿದ್ದರು.

ಆ ಪತ್ರ ಬರೆದು ಸುಮಾರು ೨ ವರ್ಷಗಳ ನಂತರ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆ ಯಡ್ಯೂರಪ್ಪನವರಿಗೆ ಒಲಿಯಿತು. ಈ ಬೆಳವಣಿಗೆಗೆ ಪಕ್ಷದೊಳಗೆ ಹಾಗೂ ಹೊರಗೆ ಭರ್ಜರಿ ಸ್ವಾಗತವೇ ಸಿಕ್ಕಿತು. ಅಧ್ಯಕ್ಷರಾಗುತ್ತಿದ್ದಂತೆ ‘ಎಲ್ಲರನ್ನೂ ವಿಶ್ವಾಸಕ್ಕೆ’ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದಿದ್ದರು ಯಡ್ಯೂರಪ್ಪ. ಮುಖ್ಯಮಂತ್ರಿಯಾಗಿದ್ದಾಗ ಸ್ವಯಂಕೃತಾಪರಾಧದ ಜೊತೆಗೆ, ಬೆನ್ನಿಗಂಟಿಕೊಂಡಿದ್ದ ಭಟ್ಟಂಗಿಗಳು, ಕಿಂಕರರಂತೆ ಆಜೂ-ಬಾಜೂ ಕಾಣಿಸಿಕೊಳ್ಳುತ್ತಿದ್ದವರು, ಪಕ್ಷದೊಳಗಿನ ಮೀರ್ ಸಾಧಿಖರ ಕುತಂತ್ರವೂ ಸೇರಿ ಅಧಿಕಾರವನ್ನೂ ಕಳೆದುಕೊಂಡು, ಕಾನೂನಿನ ಪೆಟ್ಟನ್ನು ತಿಂದು, ಕಡೆಗೆ ನ್ಯಾಯಾಲಯದಲ್ಲಿ ಜಯಿಸಿ ಸಾಕು ಸಾಕೆನಿಸುವಷ್ಟು ಹೈರಾಣಾದ ನಂತರ ದೊರೆತ ರಾಜ್ಯಾಧಕ್ಷ್ಯ ಹುದ್ದೆಯನ್ನು ಯಡ್ಯೂರಪ್ಪನವರು ಸರಿಯಾಗಿ ನಿರ್ವಹಿಸಿದ್ದಾರೆಯೇ? ಮತ್ತಷ್ಟು ಓದು »

1
ಜುಲೈ

ಕ್ಯೂಬಾದಂತೆ ಕಾಣುವ ಪಿಣರಾಯಿ

– ಸಂತೋಷ್ ತಮ್ಮಯ್ಯ

skulls communism russians 1920x1200 wallpaper_www.wallpapername.com_18

ನಾಳೆ ಸಮಸ್ತ ಕೇರಳಕ್ಕೂ ಇದೇ ಗತಿ
ಬಹುಶಃ ಇದುವರೆಗೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ಯಾವ ಸರ್ಕಾರಗಳೂ ಇಷ್ಟೊಂದು ಸಾಧನೆಯನ್ನು ಮಾಡಿರಲಾರರು. ಅದೂ ಒಂದು ತಿಂಗಳೊಳಗಾಗಿ ತನ್ನ ಕೆಲಸವನ್ನು ಅಷ್ಟೊಂದು ಶೀಘ್ರವಾಗಿ, ಅಚ್ಚುಕಟ್ಟಾಗಿ ಮಾಡಲು ಸಾಧ್ಯವಾಗುವುದು ಕಮ್ಯುನಿಸ್ಟರಿಗೆ ಮಾತ್ರ. ಕೇರಳದಲ್ಲಿ ಅವರ ಈ ಒಂದು ತಿಂಗಳಿನ ಸಾಧನೆಯನ್ನು ನೋಡಿದರೆ ಮುಂದಿನ ಐದು ವರ್ಷಗಳ ‘ಸಾಧನೆ’ ಇನ್ನೆಷ್ಟಿರಬಹುದು ಎಂಬ ಅಂದಾಜು ಸಿಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಕೇರಳ ಕೇರಳವಾಗಿಯೇ ಉಳಿಯುತ್ತದೆಯೋ ಎಂಬ ಸಂಶಯವೂ ಬರುತ್ತದೆ.
ಕೇರಳದಲ್ಲಿ ಕಮ್ಯುನಿಸ್ಟರು ಅಡಳಿತ ಆರಂಭಿಸಿ ನಿನ್ನೆಗೆ ಒಂದು ತಿಂಗಳಾಯಿತು. ಈ ಒಂದು ತಿಂಗಳಿನಲ್ಲಿ ಎದೆ ನಡುಗಿಸುವ ಹಲವು ಘಟನೆಗಳು ನಡೆದವು. ಆದರೂ ಬಿಜೆಪಿ ಆಡಳಿತವನ್ನು ಎರಡೇ ದಿನಗಳಲ್ಲಿ ವಿಮರ್ಶೆಗೆ ಒಡ್ಡುವಂತೆ ಯಾರೂ ಕಮ್ಯುನಿಸ್ಟ್ ಅಡಳಿತವನ್ನು ವಿಮರ್ಶೆ ಮಾಡಲಿಲ್ಲ. ಅಚ್ಯುತಾನಂದರನ್ನು ಪಿಣರಾಯಿ ವಿಜಯನ್ ಮೂಲೆಗುಂಪು ಮಾಡಿದ ಎಂಬ ಎಂಬ ಒಂದು ಸಂಗತಿಯನ್ನು ಮಾಧ್ಯಮಗಳು ಇನ್ನೂ ಗುನುಗುತ್ತಿವೆ. ಈ ಒಂದು ತಿಂಗಳಲ್ಲಿ ನಡೆದ ಘಟನೆಗಳನ್ನು ಯಾವ ಚಿತ್ರನಟನೂ ಅಸಹಿಷ್ಣುತೆ ಎಂದು ಕರೆಯಲಿಲ್ಲ, ಯಾವ ಪತ್ರಕರ್ತನೂ ಅರಾಜಕತೆ ಎಂದು ಬಣ್ಣಿಸಲಿಲ್ಲ. ಹಾಗಾದರೆ ಕೇರಳ ಕಮ್ಯುನಿಸ್ಟರ ತಿಂಗಳ ಸಾಧನೆ ಏನು? ಮತ್ತಷ್ಟು ಓದು »

28
ಜೂನ್

ಗಾಂಧಿ ತಾತಾ ಯಾಕಾಗಿ ಹೀಗೆಲ್ಲಾ ಮಾಡಿದಿರಿ?

– ಶ್ರೀಕಾಂತ್ ಆಚಾರ್ಯ

mahatma_gandhiನೇರಾ ನೇರಾ ವಿಷಯಕ್ಕೆ ಬರುತ್ತೀನಿ. ಕೆಲವಷ್ಟು ವಿಷಯಗಳಲ್ಲಿ ಗಾಂಧೀ ತಾತಾ ತುಂಬಾ ಇಷ್ಟವಾಗಿ ಬಿಡುತ್ತಾರೆ. ಆದರೆ ಉಳಿದ ಕೆಲವು ವಿಷಯಗಳಲ್ಲಿ ನನಗೆ ಗಾಂಧೀಜಿಯ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ. ಅಷ್ಟಕ್ಕೂ ನನ್ನ ಅಭಿಪ್ರಾಯ ಇಲ್ಲಾರಿಗೂ ಅನಿವಾರ್ಯವಲ್ಲ ಬಿಡಿ. ಹೇಳಿದ್ದೆಲ್ಲವನ್ನ ಸುಖಾಸುಮ್ಮನೆ ನಂಬಿ ಬಿಡಿ ಅಂತ ನಿಮ್ಮಲ್ಲಿ ಅಂಗಾಲಾಚುವುದೂ ಇಲ್ಲ. ಸಮಾನ ಮನಸ್ಕರಿದ್ದರೆ ಓದಿಕೊಳ್ಳಬಹುದು. ಹೌದು ಅಂತನ್ನಿಸಿದರೆ ಮಾತ್ರ ತಾಕಲಾಟಕ್ಕೆ ಎಡತಾಕುತ್ತೀರಿ. ಯೋಚನೆಗೆ ಬೀಳುತ್ತೀರಿ. ಅಖಂಡ ಭಾರತದ ಕೋಟ್ಯಾಂತರ ಜನರ ಹೃದಯ ಹೊಕ್ಕಿ ಕುಳಿತ ಗಾಂಧೀಜಿಯನ್ನ ಕೆಲವೊಂದು ಕಾರಣಕ್ಕೆ ದ್ವೇಷಿಸುತ್ತಿದ್ದೀನಿ ಅಂದರೆ ಬಹುಷಃ ನೀವೂ ತಕರಾರು ಮಾಡಲಿಕ್ಕಿಲ್ಲ(ವಿಷಯ ಬಲ್ಲವರಿಗೆ ಮಾತ್ರ) ಅಲ್ಲವಾ? ಮತ್ತಷ್ಟು ಓದು »

4
ಜೂನ್

“ಚಪ್ಪಟೆ ಪಾದದ ಕನ್ನಡಿಗರು”

-ದೀಕ್ಷಿತ್ ಪೊಯ್ಯೆಕಂಡ
indian-airport“100 ಮೀಟರ್ ಓಟವನ್ನು 15 ಸೆಕೆಂಡುಗಳಲ್ಲಿ ಮುಗಿಸಬಹುದು ಬಿಡು ಮತ್ತೆ ಹಗ್ಗ ಹತ್ತೋದು ಕಂಬ ಹತ್ತೋದು ಕಷ್ಟ ಬಿಡು” ಎಂದು ಮಂಜು ವೈದ್ಯಕೀಯ ಪರೀಕ್ಷೆಯ ಬಳಿಕ ಕೊಚ್ಚಿಕೊಳ್ಳತೊಡಗಿದ. ನನ್ನದೇನೂ ಹೊರತಾಗಿರಲಿಲ್ಲ, “ಅಯ್ಯೋ ಮೆಡಿಕಲ್ ಹೆಂಗೂ ಆಯ್ತು ಇನ್ನು ಫಿಸಿಕಲ್ ಟೆಸ್ಟ್ ಹೇಗೆ ಪಾಸ್ ಮಾಡೊದಪ್ಪಾ” ಅನ್ನುತ್ತಾ ಜೊತೆಗಿದ್ದವರೊಂದಿಗೆ ಮಾತಿಗಿಳಿದೆ. ಮತ್ತೊಬ್ಬನದೂ ಅದೇ ರಾಗ. ನಮಗಿದ್ದ ಸಂತೋಷದ ವಿಷಯವೆಂದರೆ ಆ ದಿನ 8 ಮಂದಿ ಕನ್ನಡಿಗರು ಅಲ್ಲಿದ್ದೆವು. ಸರಿಸುಮಾರು ಮೂರು ಗಂಟೆ ಕಾದ ಬಳಿಕ ಮೆಡಿಕಲ್ ರಿಸಲ್ಟ್ ಬಂತು. ಅದನ್ನು ಹಿಡಿದುಕೊಂಡು ಬಂದ ಏರ್ಪೋರ್ಟ್ ಮುಖ್ಯಸ್ಥ “ನಾನು ರಿಜೆಕ್ಟ್ ಆದ ಅಭ್ಯರ್ಥಿಗಳ ಹೆಸರು ಮಾತ್ರ ಕರೆಯುತ್ತಿದ್ದೇನೆ’ ಎಂದು ಮಲಯಾಳಿ ಮಿಶ್ರಿತ ಆಂಗ್ಲ ಭಾಷೆಯಲ್ಲಿ ಓದತೊಡಗಿದ. ರಮೇಶ್.. ಸುರೇಶ್.. ಹೀಗೆ ಹೆಸರು ಕೇಳಿದಾಗ, ನನಗೇನೋ ಫೈವ್ ಸ್ಟಾರ್ ಜಾಹೀರಾತು ಕೇಳಿದಂತಾಗುತಿತ್ತು. ಉಫ್ ಅದೇನೋ ಎದೆಯಲಿ ಡವ ಡವ! ವರುಷಗಳ ಕನಸು. ಲಿಖಿತ ಪರೀಕ್ಷೆಯ ಬಳಿಕದ ತಯಾರಿ, ಬಯಲಲ್ಲಿ ಪಟ್ಟ ಕಷ್ಟ ಎಲ್ಲವೂ ನೆನಪಾಗುತಿದ್ದವು. ಒಂದೊಂದೇ ಹೆಸರನ್ನು ಕೇಳಿಸಿಕೊಳ್ಳುತ್ತಾ ಹೋದಂತೆ ಸಿಡಿಲು ಬಡಿದಂತೆ ದೀಕ್ಷಿತ್ ಕುಮಾರ್ ಅಂತ ಹೆಸರನ್ನೂ ಕೇಳಿಬಿಟ್ಟೆ. ಆಯ್ತು ನನ್ನ ಕನ್ನಂಬಾಡಿ ಕಟ್ಟೆ ಒಡೆದೋಯ್ತು. ಕಣ್ಣು ಮಂಜಾಗತೊಡಗಿತು. ನನ್ನ ಹೆಸರನ್ನೂ ಹೇಳಿಯೇಬಿಟ್ಟರು. ಈ ಕೆಲಸಕ್ಕಾಗಿ ಇನ್ನಿಲ್ಲದಂತೆ ಪಟ್ಟ ಶ್ರಮವೆಲ್ಲಾ ವ್ಯರ್ಥವಾಗಿ ಹೋಯಿತು. ಮತ್ತೆ ಮಂಜು, ತ್ರಿಭುವನ್ ಹೀಗೇ ಮುಂದುವರಿದಿತ್ತು. ಅಷ್ಟೂ ಕನ್ನಡಿಗರ ಯಾತ್ರೆ ಮುಗಿದಿತ್ತು. ಕಾರಣ ಕೇಳಿದ್ರೆ, ನಮ್ಮದು ಚಪ್ಪಟೆ ಪಾದ ಅಂತೆ ! ಮತ್ತಷ್ಟು ಓದು »

1
ಜೂನ್

ಇಂದಿನವರೆಗೂ ಬುದ್ದಿಜೀವಿಗಳ ಬುದ್ಧಿ ನೆಟ್ಟಗಾಗಿಲ್ಲ. ಮುಂದಾದರೂ ಆದೀತಾ?

-ಶ್ರೀಕಾಂತ್ ಆಚಾರ್ಯ

1ಇಲ್ಲೇ ಹುಟ್ಟಿ, ಇಲ್ಲೇ ಬೆಳೆದು ಈ ದೇಶದ ಅಷ್ಟೂ ಸವಲತ್ತನ್ನ ಚಪ್ಪರಿಸಿಕೊಂಡು ಅನುಭವಿಸಿದವರಿಂದ ಭಾರತದ ‘ಬರ್ಬಾದಿಗೆ’ ಜಂಗ್(?) ಶುರುವಾಯ್ತಲ್ಲ. ಆಶ್ಚರ್ಯ ಅನ್ನಿಸಿತಾ? ಬಹುಶಃ ಇರಲಿಕ್ಕಿಲ್ಲ. ಈ ದೊಂಬರಾಟಗಳನ್ನ ನಾವೆಲ್ಲಾ ಕಂಡವರೇ. ಬದುಕಿನಲ್ಲಿ ತನಗೊಂದು ‘ಐಡೆಂಟಿಟಿ’ಯೇ ಇಲ್ಲದೇ ಪರಿತಪಿಸುವ ಮಂದಿ ಬಹಳಷ್ಟು ಬಾರಿ ಹೀಗೆಲ್ಲ ಮಾಡಿಯೇ ಹೆಸರಿಗೆ ಬರೋದಿದೆ. ಹಾಗಂತ ಇವರನ್ನ ಅಸಡ್ಡೆ ಮಾಡಿ ಬದಿಗಿಡುವಂತಿಲ್ಲ. ಯಾಕೆಂದರೆ ಇವರೆಲ್ಲರ ಹೋರಾಟ ಇರೋದು ಕೆಟ್ಟದರ ಬಗ್ಗೆಯಲ್ಲ, ಈ ದೇಶಕ್ಯಾವುದೋ ಮಾರಕವಾಗಿದ್ದರೆ ಅದರ ಬಗ್ಗೆಯೂ ಅಲ್ಲ. ಇವರ ‘ಜಂಗ್’ ಇರೋದು ಈ ದೇಶದ ಸಮಗ್ರತೆಯ ಬಗ್ಗೆ. ಈ ದೇಶದ ಸನಾತನತೆಯ ಬಗ್ಗೆ. ಒಟ್ನಲ್ಲಿ ಈ ದೇಶದ ಬಗ್ಗೆಯೇ. ಇವೆಲ್ಲಾ ‘ಬುದ್ಧಿಮಾಂದ್ಯ’ ಜೀವಗಳಿಗೆ ಹೆಗಲಾಗಿ ನಿಂತು ಪೋಷಿಸುತ್ತಿರುವುದು ಇಲ್ಲಿನ ಬುದ್ಧಿ ಜೀವಿಗಳೆಂಬ ಅಡಕಸುಬಿಗಳು. ಅದಲ್ಲದೇ ಇನ್ನೇನು? ಮತಿ ತಪ್ಪಿದವ ಮಾಡಿದ ತಪ್ಪನ್ನ, ತಪ್ಪು ಅನ್ನೋದು ಬಿಟ್ಟು ಅವರೊಲ್ಲಬ್ಬರಾಗಿ ನಿಂತು ಗುರಾಣಿ ಹಿಡಿದು ಮತ್ತಷ್ಟು ಇನ್ನಷ್ಟು ಪ್ರಪಾತಕ್ಕೆ ಇಳಿಯೋಕೆ, ಎಳೆಯೋಕೆ ತಯಾರಾದರೆ? ಮತ್ತಷ್ಟು ಓದು »

24
ಮೇ

ತಲೆಕೆಟ್ಟ ಕಾನೂನುಗಳು ಮತ್ತು ಸ್ವಂತ ಬುದ್ಧಿಯಿಲ್ಲದ ಜೀವಿಗಳು

–  ರಾಕೇಶ್ ಶೆಟ್ಟಿ

ಬುದ್ಧಿಜೀವಿಗಳ ಮೂಢನಂಬಿಕೆಗಳುಇತ್ತೀಚೆಗೆ ಮತ್ತೂರಿನಲ್ಲಿ ನಡೆದ ಸೋಮಯಾಗದಲ್ಲಿ ಸಂಕೇತಿ ಬ್ರಾಹ್ಮಣರು ಮೇಕೆ ಬಲಿ ಕೊಟ್ಟು ತಿಂದರಂತೆ, ಸೋಮರಸ ಕುಡಿದರಂತೆ ಅಂತ ಪ್ರಗತಿಪರರ ವಾಣಿಯೊಂದು ಸುಳ್ಳು ಸುದ್ದಿ ಬರೆಯಿತು. ಈ ಸುದ್ದಿಯಿಂದಾಗಿ ಟೌನ್ ಹಾಲ್ ಮುಂದೆ ನಿಂತು ದನ ತಿನ್ನುವುದನ್ನು ಬೆಂಬಲಿಸುವ ಕಬಾಬ್ ಕ್ರಾಂತಿಕಾರಿಗಳಿಗೂ ಹೊಟ್ಟೆನೋವು ಕಾಣಿಸಲಾರಂಭಿಸಿತು. ಇವರನ್ನು ಕರೆಯದೇ ತಿಂದರೂ ಎಂದು ಹೊಟ್ಟೆ ನೋವಾಗಿತ್ತೋ ಏನೋ. PhD ಮಹಾಶಯನೊಬ್ಬ ಬ್ರಾಹ್ಮಣರು ಮಾಂಸ ತಿನ್ನಲು ಶುರು ಮಾಡಿದರೆ ರೇಟ್ ಜಾಸ್ತಿಯಾಗುತ್ತೆ ಅಂತ ಅಳ್ತಾ ಇದ್ದ. ಎಂತೆಂತವರೆಲ್ಲ ವಿವಿಗಳಲ್ಲಿ ಪಾಠ ಮಾಡುತ್ತಾರಪ್ಪಾ ಅನಿಸಿತು. ಎಲ್ಲಾ (ಜಾತಿ/ಪಂಗಡದ) ಬ್ರಾಹ್ಮಣರು ಸಸ್ಯಹಾರಿಗಳು ಅನ್ನೋದು “ಮೂಢನಂಬಿಕೆ”. ಸಿದ್ರಾಮಯ್ಯನವರಿಗೆ ಹೇಳಿ ಮೌಢ್ಯ ನಿಷೇಧ ಕಾಯ್ದೆಯ ಮೂಲಕ ಈ ಮೂಢನಂಬಿಕೆಯನ್ನು ನಿಷೇಧಿಸಬೇಕು. ಕಾಶ್ಮೀರಿ ಪಂಡಿತರಿಗೆ ಶಿವರಾತ್ರಿ ಹಬ್ಬದಂದು ಮಾಂಸದಡುಗೆಯೇ ವಿಶೇಷವಾದದ್ದು. ಬಂಗಾಳಿ, ಓಡಿಶಾದ ಬ್ರಾಹ್ಮಣರೂ, ಗೌಡ ಸಾರಸ್ವತ ಬ್ರಾಹ್ಮಣರಲ್ಲೂ ಮಾಂಸಹಾರಿಗಳಿದ್ದಾರೆ. ಮತ್ತಷ್ಟು ಓದು »

18
ಮೇ

ನಂಜುಂಡೇಗೌಡರು ಮೋದಿಗೆ ಬರೆದ ಪತ್ರಕ್ಕೊಂದು ಆತ್ಮೀಯ ಪ್ರತಿಕ್ರಿಯೆ

– ವಿಜಯ್ ಪೈ

pvec16may16editmainಸನ್ಮಾನ್ಯ ಹೊನಕೆರೆ ನಂಜುಂಡೇಗೌಡರಿಗೆ ವಂದನೆಗಳು.

ತಾವು ಪ್ರಧಾನ ಮಂತ್ರಿಗಳಿಗೆ ಪ್ರಜಾವಾಣಿ ಪತ್ರಿಕೆಯಲ್ಲಿ ಬರೆದ ‘ಆತ್ಮೀಯ’ ಪತ್ರವನ್ನು ಓದಿದ ನಂತರ ನಿಮಗೊಂದು ಆತ್ಮೀಯ ಪ್ರತಿಕ್ರಿಯೆ ನೀಡಬೇಕಾಯಿತು.

(ನಂಜುಂಡೇಗೌಡರ ಪತ್ರ : www.prajavani.net/columns/ಗೌರವಾನ್ವಿತ-ಪ್ರಧಾನಿಗೆ-ಆತ್ಮೀಯ-ಪತ್ರ )

ಮೋದಿ ಆಡಳಿತದಿಂದ ಈ ದೇಶದಲ್ಲಿ ಬಂದ ಒಂದು ಅತ್ಯುತ್ತಮ ಬದಲಾವಣೆಯೆಂದರೆ, ‘ಬುದ್ಧಿಜೀವಿ’ಗಳೆಂದು / ಪತ್ರಕರ್ತರೆಂಬ ಅಪಾದನೆಗೊಳಲ್ಪಟ್ಟವರು ಆಗಾಗ ಪ್ರಧಾನಿಗೆ ಪತ್ರ ಬರೆಯುವ, ಬುದ್ಧಿವಾದ ಹೇಳುವ/ ಎಚ್ಚರಿಸುವ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು. ದಶಕಗಳ ಕಾಲ ಕೋಮಾಕ್ಕೆ ಒಳಗಾಗಿದ್ದ ಇವರುಗಳು, ಈಗ ಮೋದಿ ಎಂಬ ಸಂಜೀವಿನಿಯಿಂದ ಮತ್ತೆ ಜೀವಂತಗೊಂಡು ಮತ್ತೆ ‘ಸಾಕ್ಷಿ ಪ್ರಜ್ಞೆ’ಗಳಾಗಿದ್ದಾರೆ ಎಂದು ಜನ ಭಾವಿಸಿದರೆ, ನೀವೂ ಕೂಡ ಅಲ್ಲಗೆಳೆಯುವುದಿಲ್ಲ ಅಂದುಕೊಳ್ಳುತ್ತೇನೆ. ಮೊನ್ನೆ-ಮೊನ್ನೆ ಬರವನ್ನು ಹೇಗೆ ನಿರ್ವಹಿಸಬೇಕು, ಈ ವಿಷಯದಲ್ಲಿ ಸರಕಾರದ ನ್ಯೂನತೆಗಳೇನು ಎಂಬ ಬಗ್ಗೆ ನಮ್ಮ ದೇಶ ಕಂಡ ಕೆಲವು ಬಹುಮುಖ್ಯ ಸಾಕ್ಷಿಪ್ರಜ್ಞೆಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈಗ ನೀವು ಕೂಡ ಸರಕಾರದ ಎರಡನೆಯ ವರ್ಷಾಚರಣೆಯ ಸಂದರ್ಭದಲ್ಲಿ ಪತ್ರ ಬರೆದಿದ್ದೀರಿ. ತಮ್ಮ ಕಾಳಜಿಗೆ ವಂದನೆಗಳು. ಮತ್ತಷ್ಟು ಓದು »

17
ಮೇ

ಕಾಂಗ್ರೆಸ್‌ನ ವ್ಯಾಘ್ರ ದಾಳಿಗೆ ನಲುಗಿದ ಸಾಧ್ವಿ

– ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ

sadhvi-pragya-singh.before_afterಮಾಲೇಗಾಂವ್ ಸ್ಪೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ಗೆ ಕ್ಲೀನ್‌ಚಿಟ್ ನೀಡಿ ಆರೋಪಮುಕ್ತಗೊಳಿಸಲಾಗಿದೆ. ಹಾಗಾದರೆ, ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ನಿಜಕ್ಕೂ ಭಾಗಿಯಾದವರು ಯಾರು? ಸ್ಫೋಟದ ಹಿಂದಿರುವ ವ್ಯಕ್ತಿ ಹಾಗೂ ಸಂಘಟನೆಗಳು ಯಾರು ಎನ್ನುವುದರ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕಿದ್ದು, ಈ ಕುರಿತಂತೆ ಸತ್ಯ ಹೊರಬರಬೇಕಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೀಗ ತಾರ್ಕಿಕ ಅಂತ್ಯ ದೊರೆತಿದ್ದು, ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಆರು ಜನರ ಮೇಲೆ ಹೇರಲಾಗಿದ್ದ ಮೋಕಾ ಪ್ರಕರಣದಲ್ಲಿ ಇವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಚಾರ್ಜ್‌ಶೀಟ್ ಸಲ್ಲಿಸಿರುವ ತನಿಖಾ ಸಂಸ್ಥೆ ಎನ್‌ಐಎ ಆರೋಪಗಳಿಂದ ಕ್ಲೀನ್ ಚಿಟ್ ನೀಡಿದೆ.

ನಿಜಕ್ಕೂ ಇದು ಸತ್ಯಕ್ಕೆ ಸಂದ ಜಯ ಎಂದು ಸಂತಸ ಪಡುವ ವೇಳೆಯೇ ಈ ಸಂತಸವನ್ನು ಸಂಭ್ರಮಿಸುವ ಮನಸ್ಥಿತಿ ಹಾಗೂ ದೇಹಸ್ಥಿತಿಯಲ್ಲಿ ಸ್ವತಃ ಸಾಧ್ವಿ ಪ್ರಜ್ಞಾ ಸಿಂಗ್ ಇಲ್ಲ ಎನ್ನುವುದು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸಬೇಕಾದ ವಿಚಾರ. ಮತ್ತಷ್ಟು ಓದು »

15
ಮೇ

ಸಿದ್ಧಾಂತಗಳ ಸಂಗ ಸಾಕಾಗಿದೆ; ದೇಶಭಕ್ತಿಯ ಸಂಘ ಬೇಕಾಗಿದೆ

– ರೋಹಿತ್ ಚಕ್ರತೀರ್ಥ

indian-flag-rallyಕನ್ನಡದಲ್ಲಿ “ತಾಯಿನಾಡು” ಪತ್ರಿಕೆಯನ್ನು ನಾಲ್ಕು ದಶಕಗಳ ಕಾಲ ನಡೆಸಿದ ಮತ್ತು ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಮೊದಲ ಚುನಾಯಿತ ಶಾಸಕನಾಗಿದ್ದ ಪಿ.ಆರ್.ರಾಮಯ್ಯ ಬನಾರಸ್ ಹಿಂದೂ ವಿಶ್ವ ವಿದ್ಯಾಲಯದಲ್ಲಿ ಕಲಿಯುತ್ತಿದ್ದ ದಿನಗಳು. ಪದವಿಯ ಅಂತಿಮ ವರ್ಷದಲ್ಲಿದ್ದರು. ದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ದಿನದಿನಕ್ಕೆ ಏರುತ್ತಿದ್ದ ಹೊತ್ತು. ಗಾಂಧಿಯ ಮಾತುಗಳನ್ನು ಕೇಳಲು ಎಲ್ಲಿಂದ ಎಲ್ಲಿಯವರೆಗೂ ಕಾಲ್ನಡಿಗೆಯಲ್ಲೋ ರೈಲಿನಲ್ಲೋ ಹೋಗಿಬರಲು ತಯಾರಾಗಿದ್ದ ರಾಮಯ್ಯನವರಿಗೆ ಒಂದು ದಿನ ವಾರಾಣಸಿಯ ಪಕ್ಕದಲ್ಲೇ ಗಾಂಧಿ ಭಾಷಣ ಏರ್ಪಾಟಾಗಿದ್ದನ್ನು ಕಂಡು ಸಕ್ಕರೆ ಹಾಲು ಕುಡಿದಷ್ಟು ಸಂತೋಷವಾಯಿತು. ಅಂದಿನ ಭಾಷಣದಲ್ಲಿ ಗಾಂಧಿ, ಹೋರಾಟಕ್ಕೆ ಭೀಮಬಲ ಬರಬೇಕಾದರೆ ವಿದ್ಯಾರ್ಥಿಗಳೆಲ್ಲರೂ ತಮ್ಮ ಶಾಲಾ-ಕಾಲೇಜುಗಳಿಂದ ಹೊರಬಂದು ಹೋರಾಟದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಮಾತು ರಾಮಯ್ಯನವರ ಮೇಲೆ ಎಷ್ಟು ಪ್ರಭಾವ ಬೀರಿತೆಂದರೆ ಅವರು ತಕ್ಷಣ ತನ್ನ ಪದವಿ ವ್ಯಾಸಂಗವನ್ನು ಮೊಟಕುಗೊಳಿಸಿ ಚಳವಳಿಯಲ್ಲಿ ಭಾಗವಹಿಸಲು ನಿರ್ಧರಿಸಿಬಿಟ್ಟರು. ಇನ್ನೊಂದೆರಡು ವಾರಗಳು ಕಳೆದರೆ ಮುಖ್ಯಪರೀಕ್ಷೆಗಳು ಪ್ರಾರಂಭವಾಗುವುದರಲ್ಲಿದ್ದವು. ಈಗ ಏಕಾಏಕಿ ವಿಶ್ವವಿದ್ಯಾಲಯ ತೊರೆದರೆ ಗತಿಯೇನು ಎಂಬ ಸಣ್ಣದೊಂದು ಅಂಜಿಕೆಯೂ ಅವರ ಮನದ ಮೂಲೆಯಲ್ಲಿತ್ತು. ನೇರವಾಗಿ ವಿವಿಯ ಕುಲಪತಿಗಳಾಗಿದ್ದ ಮದನ ಮೋಹನ ಮಾಲವೀಯರಲ್ಲಿಗೆ ಹೋಗಿ ತನ್ನ ಇಬ್ಬಂದಿತನವನ್ನು ವಿವರಿಸಿ ಏನು ಮಾಡಲಿ ಎಂದು ಮಾರ್ಗದರ್ಶನ ಕೇಳಿದರು. ಮತ್ತಷ್ಟು ಓದು »

9
ಮೇ

ರಾಜ್ಯ ಸರ್ಕಾರ ರಾಜ್ಯವನ್ನು ಏನು ಮಾಡಲು ಹೊರಟಿದೆ?

ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ

sep1401siddaramaih1ಜಿಲ್ಲಾ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯಲ್ಲಿ ಇನ್ನಿಲ್ಲದ ತಂತ್ರಗಾರಿಕೆ ಮಾಡಿ, ತಮ್ಮ ಪಕ್ಷಕ್ಕೇ ಅಧಿಕಾರ ಬರುವಂತೆ ಮಾಡಿಕೊಂಡಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಈಗ್ಗೆ ಕೆಲವು ತಿಂಗಳ ಹಿಂದೆ ಪಂಚಾಯತ್‌ರಾಜ್ ಕಾಯ್ದೆಗೆ ತಿದ್ದುಪಡಿ ತಂದು ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿದೆ.ಇದರ ಪರಿಣಾಮ ಈಗ ಅಧ್ಯಕ್ಷರಾಗುವವರಿಗೆ ಮಾಸಿಕ ೩೫ ಸಾವಿರ ವೇತನ, ಆತಿಥ್ಯ ಭತ್ಯೆ ೨ ಲಕ್ಷ, ಮನೆ ಬಾಡಿಗೆಗೆ ಮಾಸಿಕ ೮೦ ಸಾವಿರ, ಮನೆ ನಿರ್ವಹಣೆಗೆ ೨೦ ಸಾವಿರ, ತಿಂಗಳಿಗೆ ೧ ಸಾವಿರ ಲೀಟರ್ ಡೀಸೆಲ್, ರೈಲು ಹಾಗೂ ವಿಮಾನ ಪ್ರಯಾಣ ದರ, ದಿನ ಭತ್ಯೆ ೨ ಸಾವಿರ, ವಸತಿ ಗೃಹ ಭತ್ಯೆ ೫ ವರ್ಷಕ್ಕೆ ೧೦ ಲಕ್ಷ ದೊರೆಯುತ್ತಿದೆ. ಇದರೊಂದಿಗೆ ಅಧ್ಯಕ್ಷರಿಗೆ ಗೂಟದ ಕಾರು, ಚಾಲಕ, ಪೊಲೀಸ್ ಭದ್ರತೆ ಸಹ ಲಭ್ಯವಾಗಲಿದೆ. ಇದು ನೇರವಾಗಿ ಅವರಿಗಾಗಿ ವೆಚ್ಚ ಮಾಡುವ ಲೆಕ್ಕವಾದರೆ, ಪರೋಕ್ಷವಾಗಿ ಇನ್ನು ಲಕ್ಷಗಟ್ಟಲೆ ಇವರಿಗಾಗಿ ಸರ್ಕಾರ ವ್ಯಯ ಮಾಡುತ್ತದೆ. ಮತ್ತಷ್ಟು ಓದು »