ಕಮ್ಯುನಿಸ್ಟರ ರಕ್ತ ಚರಿತ್ರೆಯ ಪುಟಗಳು
– ರಾಕೇಶ್ ಶೆಟ್ಟಿ
ಇತ್ತೀಚೆಗೆ ಹೈದರಾಬಾದ್ ಯುನಿವರ್ಸಿಟಿಯ ರೋಹಿತ್ ವೆಮುಲ ಎಂಬ ಯುವಕನ ಆತ್ಮಹತ್ಯೆ ಹಾಗೂ ದೆಹಲಿಯ ಜೆ.ಎನ್.ಯು ವಿವಾದಗಳ ಸಮಯದಲ್ಲಿ ಕಾಕಗಳು (ಕಾಂಗ್ರೆಸ್+ಕಮ್ಯುನಿಸ್ಟ್) ಮೋದಿಯವರ ಸರ್ಕಾರ ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿವೆ ಎಂದು ಉಯಿಲೆಬ್ಬಿಸಿದ್ದಾರೆ.ಕರ್ನಾಟಕದಲ್ಲಿರುವ ಇವರ ಅಣ್ತಮ್ಮಂದಿರು ದಿನ ಬೆಳಗಾದರೆ ಟೌನ್ ಹಾಲ್ ಎದುರು ನಿಲ್ಲುತ್ತಿದ್ದಾರೆ. ಆದರೆ,ಯುನಿವರ್ಸಿಟಿ,ವಿದ್ಯಾರ್ಥಿಗಳ ಬಗ್ಗೆ ಮಾತನಾಡುವ ನೈತಿಕತೆ ಕಾಕಗಳಿಗಿದೆಯೇ? ಕರ್ನಾಟಕದ ಕುವೆಂಪು ಯುನಿವರ್ಸಿಟಿಯಲ್ಲಿದ್ದ CSLC ಎಂಬ ಸಂಶೋಧನಾ ಕೇಂದ್ರವನ್ನು ಮುಚ್ಚಿಸಿದ್ದು ಇದೇ ಕಾಂಗ್ರೆಸ್ ಸರ್ಕಾರ,ಮುಚ್ಛಿಸುವಂತೆ ಒತ್ತಡ ಹಾಕಿದ್ದು ಟೌನ್ ಹಾಲ್ ಬುದ್ಧಿಜೀವಿಗಳೇ. ಕಾಂಗ್ರೆಸ್ಸಿನವರ ಇತಿಹಾಸ ಎಲ್ಲರಿಗೂ ತಿಳಿದಿರುವುದೇ.ಆದರೆ ಈ ಕಮ್ಯುನಿಸ್ಟರ ಪುಣ್ಯ ಕಾರ್ಯಗಳ ಬಗ್ಗೆ ಸ್ವಲ್ಪ ಹೇಳಬೇಕು. (ಇದು ಕೇವಲ ಕೇರಳದ ಕಮ್ಯುನಿಸ್ಟರ ಇತಿಹಾಸ.ಬಂಗಾಳದ ಕಾಮ್ರೇಡುಗಳ ಕತೆ ಇದಕ್ಕೂ ದೊಡ್ಡದು)
ಅದು ಸೆಪ್ಟಂಬರ್ ೧೭,೧೯೯೬ರ ದಿನ.ಕೇರಳದ ಪರುಮಲ ಜಿಲ್ಲೆಯ ದೇವಸ್ವೋಮ್ ಕಾಲೇಜಿನ ಕ್ಯಾಂಪಸ್ಸಿಗೆ ಲಗ್ಗೆಯಿಟ್ಟ ಕಮ್ಯುನಿಸ್ಟರು ‘ಅನು,ಸುಜಿತ್,ಕಿಮ್’ ಎಂಬ ಎಬಿವಿಪಿಯ ಕಾರ್ಯಕರ್ತರ ಮೇಲೆ ಮುಗಿಬಿದ್ದರು.ಎಬಿವಿಪಿಯೊಂದಿಗೆ ಗುರುತಿಸಿಕಂಡಿದ್ದೇ ಈ ಹುಡುಗರು ಮಾಡಿದ್ದು ತಪ್ಪು,ಕೇರಳದಲ್ಲಿ ಕಮ್ಯುನಿಸ್ಟರು ನಿಮ್ಮನ್ನು ಸುತ್ತುವರೆದರೆಂದರೇ ಸ್ಟಾಲಿನ್/ಮಾವೋ ಪ್ರೇತಾತ್ಮ ಮೃತ್ಯು ರೂಪದಲ್ಲಿ ನಿಮ್ಮೆದುರು ಬಂದು ನಿಂತಂತೆಯೇ ಸರಿ.ಪ್ರಾಣ ಉಳಿಸಿಕೊಳ್ಳಲು ಓಡಿದ ಈ ಹುಡುಗರು ಪಂಪಾ ನದಿಗೆ ಹಾರಿ ಈಜಲಾರಂಭಿಸಿದ್ದರು.ನೀರಿಗೆ ಬಿದ್ದ ವಿದ್ಯಾರ್ಥಿಗಳ ಮೇಲೆ ಕಮ್ಯುನಿಸ್ಟ್ ಗೂಂಡಾಗಳು ಕಲ್ಲು ತೂರಲಾರಂಭಿಸಿದರು. ಆಚೆ ದಡದಲ್ಲಿ ಬಟ್ಟೆ ಒಗೆಯುತ್ತಿದ್ದ ಹೆಣ್ಣು ಮಕ್ಕಳು ಕಮ್ಯುನಿಸ್ಟರ ಕಲ್ಲಿನೇಟಿಗೆ ತುತ್ತಾಗಿ ಮುಳುಗುತ್ತಿದ್ದ ಹುಡುಗರತ್ತ ಸೀರೆಗಳನ್ನೆಸೆದು ಅವರನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೇ,ಮಹಿಳಾವಾದದ ಭಾಷಣ ಬಿಗಿಯುವ ಕಾಮ್ರೇಡುಗಳು ಅವರ ಮೇಲೆ ಕಲ್ಲಿನ ಮಳೆ ಸುರಿದರು.ವಿಧಿಯಿಲ್ಲದೇ ಆ ಹೆಣ್ಣುಮಕ್ಕಳು ಪ್ರಾಣ ಉಳಿಸಿಕೊಳ್ಳಲು ಓಡಿದರು.ಇತ್ತ ಹದಿಹರೆಯದ ವಿದ್ಯಾರ್ಥಿಗಳ ಪ್ರಾಣಕ್ಕೆ ಆಜಾದಿ ಸಿಕ್ಕಿತ್ತು.ಸ್ಟಾಲಿನ್ ಘೋರಿಯೊಳಗಿಂದಲೇ ಲಾಲ್ ಸಲಾಂ ಎಂದನೇನೋ. ಕಡೆಗೇನಾಯ್ತು.ಅವರದ್ದೇ ಸರ್ಕಾರ,ಅವರು ಮಾಡಿದ್ದೇ ಕಾನೂನು.ಯಾರೆಂದರೇ ಯಾರಿಗೂ ಶಿಕ್ಷೆಯಾಗಲಿಲ್ಲ.ಇಂದು ಅದೇ ಕಮ್ಯುನಿಸ್ಟರು ವಿದ್ಯಾರ್ಥಿಗಳ ಆಜಾದಿ ಬಗ್ಗೆ ಮಾತನಾಡುತಿದ್ದಾರೆಂದರೇ ಎಂತ ವ್ಯಂಗ್ಯವಲ್ಲವೇ?
ನಮೋ ಬ್ರಿಗೇಡ್ ಮೇಲಿನ ಕೋಪಕ್ಕೆ ನರೇಶ್ ತುತ್ತಾದರೇ?
– ಹನುಮ೦ತ ಕಾಮತ್
ವಿನಾಯಕ ಪಾಂಡುರಂಗ ಬಾಳಿಗಾ, ಇತ್ತೀಚೆಗೆ ಕೊಲೆಯಾದ ಆರ್ಟಿಐ ಕಾರ್ಯಕರ್ತ.ಬಹುಶಃ ಆರು ವರ್ಷಗಳ ಹಿಂದಿನ ಒಂದು ದಿನ. ವಿನಾಯಕ ಬಾಳಿಗಾ ನನ್ನ ಹತ್ತಿರ ಬಂದಿದ್ದರು. ‘ನನಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯುವುದು ಹೇಗೆ ಎನ್ನುವುದರ ಬಗ್ಗೆ ಒಂದಿಷ್ಟು ಮಾಹಿತಿ ಬೇಕು’ ಎಂದರು. ಕಾರಣ ಕೇಳಿದೆ.. ವಿನಾಯಕ ಬಾಳಿಗಾ ಅವರಿಗೆ ತನ್ನ ಮನೆಯಿಂದ ಕೊಡಿಯಾಲ್ ಬೈಲ್ಗೆ ಹೋಗುವ ರಸ್ತೆಯಲ್ಲಿರುವ ಪ್ರಖ್ಯಾತ ಬಿಲ್ಡರ್ ರಮೇಶ್ ಕುಮಾರ್ ಅವರ ಮೌರಿಷ್ಕಾ ವಸತಿ ಸಮುಚ್ಚಯ ಮತ್ತು ಅದರ ಎದುರಿರುವ ಶಾರದಾ ವಿದ್ಯಾಲಯದ ಮೇಲೆ ತುಂಬಾ ಸಿಟ್ಟಿದ್ದಂತೆ ಕಾಣುತ್ತಿತ್ತು. ಸಾಮಾನ್ಯವಾಗಿ ಯಾವುದಾದರೂ ಒಂದು ಸಂಸ್ಥೆ ಅಥವಾ ವ್ಯವಸ್ಥೆಯಿಂದ ಸಾರ್ವಜನಿಕರ ಮೇಲೆ ಅನ್ಯಾಯ, ದೌರ್ಜನ್ಯ ನಡೆದಾಗ ಆ ಸಂಸ್ಥೆ ಅಥವಾ ವ್ಯವಸ್ಥೆ ಎಷ್ಟರ ಮಟ್ಟಿಗೆ ನಿಯಮ, ಕಾನೂನುಗಳನ್ನು ಪರಿಪಾಲಿಸುತ್ತಿದೆ, ಯಾವ ಹಂತದಲ್ಲಿ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ತನ್ನ ಇಚ್ಚೆ ಬಂದಂತೆ ವರ್ತಿಸುತ್ತದೆ ಎಂದು ಲಿಖಿತ ದಾಖಲೆಗಳು ನಮ್ಮ ಬಳಿ ಇದ್ದಲ್ಲಿ ಆಗ ನ್ಯಾಯಾಲಯದಲ್ಲಿ ಹೋರಾಟ ಮಾಡುವುದು ಸುಲಭ. ಬಹುಶಃ ಮೌರಿಷ್ಕಾ ವಸತಿ ಸಮುಚ್ಚಯ ಮತ್ತು ಶಾರದಾ ವಿದ್ಯಾಲಯದ ವಿರುದ್ಧ ಅಂತಹ ದಾಖಲೆಗಳನ್ನು ಪಡೆದು, ಕಾನೂನು ಹೋರಾಟ ಮಾಡಲು ಬಾಳಿಗಾ ತೀರ್ಮಾನಿಸಿದ್ದರು.ಮೌರಿಷ್ಕಾ ಅಪಾರ್ಟಮೆಂಟಿನಿಂದ ಏನು ಸಮಸ್ಯೆಯಾಗುತ್ತಿದೆ ಎಂದು ಕೇಳಿದೆ. ಮತ್ತಷ್ಟು ಓದು 
ಸಾವರ್ಕರ್ ಬಗ್ಗೆ ಮಾತಾಡುವುದಕ್ಕೂ ಯೋಗ್ಯತೆ ಬೇಕು
-ಡ್ಯಾನಿ ಪಿರೇರಾ
ಹಳ್ಳಿಮೈಸೂರು-573210
23-03-2016 ರಂದು ಭಗತ್ ಸಿಂಗ್, ರಾಜಗುರು ಸುಖದೇವರ ಬಲಿದಾನದ ದಿನ ಸಾಮಾಜಿಕ ಜಾಲತಾಣದಲ್ಲಿ ಇದ್ದಕ್ಕಿದ್ದಂತೆ ಒಂದು ಸುದ್ಧಿ ಕಾಣಿಸಿತು. ಅದು ಕಾಂಗ್ರೆಸ್ಸಿನ ಅಧಿಕೃತ ಐಎನ್ಸಿ ಟ್ವಿಟರ್ ನಲ್ಲಿ ಪ್ರಕಟವಾದ ಸಂದೇಶ ವಾಗಿತ್ತು. ಅದರಲ್ಲಿ ಹೇಳುತ್ತಿರುವುದೇನು?! ಭಗತ್ ಸಿಂಗ್, ಸ್ವಾತಂತ್ರ್ಯವೀರ ಸಾವರ್ಕರ್ರ ಭಾವಚಿತ್ರದಡಿಯಲ್ಲಿ ಒಬ್ಬರನ್ನು ದೇಶಭಕ್ತ ಮತ್ತೊಬ್ಬರನ್ನು ದೇಶದ್ರೋಹಿ ಎಂದು ಟ್ವಿಟ್ ಮಾಡಲಾಗಿರುವ ಸಂದೇಶವದು! ಈ ದೇಶದ ಸ್ವಾತಂತ್ರ್ಯ ಯೋಧರ ಬಗೆಗಿನ ಕಾಂಗ್ರೆಸ್ಸಿನ ಮಾನಸೀಕತೆಯನ್ನು ಬಲ್ಲವರಿಗೆ ಈ ಹೇಳಿಕೆಯನ್ನು ನೋಡಿದಾಗ ಆಶ್ಚರ್ಯವಾಗುವುದಿಲ್ಲವಾದರೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲಾತಾಣಗಳಲ್ಲಿ ಒಂದಷ್ಟು ಹುಡುಕಾಟ ನಡೆಸುವ ಯುವ ಮನಸ್ಸುಗಳಿಗೆ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಮಾತ್ರವಲ್ಲದೇ ಇಡೀ ಜೀವನವನ್ನೇ ದೇಶ ಮಾತೆಯ ಸೇವೆಗಿಟ್ಟ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಪ್ರೇರಣೆ ಕೊಡಬೇಕಾಗುವ ವಿಷಯವಾಗಬೇಕಾದ ಹಿನ್ನೆಲೆಯಲ್ಲಿ ಅವರ ಬಗೆಗಿನ ಕಾಂಗ್ರೆಸ್ ಪಕ್ಷದ ಮಾತು ನಿಜಕ್ಕೂ ತಪ್ಪು ಸಂದೇಶ ಕೊಡುವಂತದ್ದು! ಇವರೇಕೆ ಹೀಗೆ? ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ನಡುವೆ ಭಿನ್ನಾಭಿಯವಿದ್ದೊಡನೇ ಆ ವ್ಯಕ್ತಿ ವಿದ್ರೋಹಿ ಆಗಬಲ್ಲನೇ?! ಮತ್ತಷ್ಟು ಓದು 
ಕಾಂಗ್ರೆಸ್-ಕಮ್ಯುನಿಷ್ಟರ ಮೈತ್ರಿ, ಬಂಗಾಳಕ್ಕೆ ಸಿಕ್ಕಿದ್ದು ಕರಾಳ ರಾತ್ರಿ
-ಶ್ರೀನಿವಾಸ ರಾವ್
ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ದಾಳಿ – ಭಯೋತ್ಪಾದನೆಗೆ ಧರ್ಮವಿಲ್ಲ- ಕಮ್ಯುನಿಷ್ಟರು
26/11ರ ಮುಂಬೈ ದಾಳಿ, ದಾಳಿ ಮಾಡಿದ್ದು ಇಸ್ಲಾಮ್ ನ ಭಯೋತ್ಪಾದಕರು -ಭಯೋತ್ಪಾದನೆಗೆ ಧರ್ಮವಿಲ್ಲ- ಬುದ್ಧಿಜೀವಿಗಳು, ಕಮ್ಯುನಿಷ್ಟರು. ಉಗ್ರ ಯಾಕೂಬ್ ಮೆಮನ್ ಗೆ ಗಲ್ಲು ಶಿಕ್ಷೆ – ಭಯೋತ್ಪಾದನೆಗೆ ಧರ್ಮವಿಲ್ಲ!
ಭಾರತದಲ್ಲಾಗಲೀ ಅಥವಾ ವಿದೇಶಗಳಲ್ಲಿ ಇಸ್ಲಾಂ ನ ಮೂಲಭೂತವಾದಿಗಳು, ಮತಾಂಧ ಉಗ್ರರು ದಾಳಿ ನಡೆಸಿದಾಗಲೆಲ್ಲಾ ’ಭಯೋತ್ಪಾದನೆಗೆ ಧರ್ಮವಿಲ್ಲ’ವೆಂಬ ಹೇಳಿಕೆ (ready made statement) ಸಿದ್ಧವಾಗಿರುತ್ತದೆ. ಇಂಥದ್ದೊಂದು ಹೇಳಿಕೆಯನ್ನು coin(ಪರಿಚಯಿಸಿದ್ದೇ)ಮಾಡಿದ್ದೇ ಈ ಕಮ್ಯುನಿಷ್ಟರು ಹಾಗೂ ಕಮ್ಯುನಿಷ್ಟರ ಕೃಪಾಪೋಷಿತ ಬುದ್ಧಿಜೀವಿಗಳು. ಭಯೋತ್ಪಾದಕರ ದಾಳಿ ನಡೆದಾಗಲೆಲ್ಲಾ ಇವರಿಂದ ಇಂಥಹ ಹೇಳಿಕೆ ಬರುವುದಾದರೂ ಯಾಕೆ ಅಂದುಕೊಂಡಿದ್ದೀರಿ? ಇಸ್ಲಾಮ್ ಗೆ ಪರ್ಯಾಯವಾದ, ಅಂಥಹದ್ದೇ ಒಂದು ಭಯೋತ್ಪಾದನೆಯನ್ನು ಇವರೂ ಪರಿಚಯಿಸಿದ್ದಾರೆ ಆದ್ದರಿಂದ…
ಮತ್ತಷ್ಟು ಓದು 
ಕಾಂಗ್ರೆಸ್ ಮುಕ್ತ ಸುಳ್ಯದಲ್ಲಿ ಅರಳಿದ ಕಮಲ
– ತಾರನಾಥ ನಡುಮನೆ
ಸುಳ್ಯ- ಇಂದು ಇದು ರಾಜಕೀಯವಾಗಿ ದಕ್ಷಿಣಕನ್ನಡಕ್ಕೆ ಸೇರಿದರೂ, ಇನ್ನೂ ಕೊಡಗಿನ ಕೆಲವು ಸಂಪ್ರದಾಯವನ್ನು ಉಳಿಸಿಕೊಂಡು ಬಂದ ಪ್ರದೇಶ. ಕರ್ನಾಟಕದ ಪ್ರಮುಖ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವನ್ನು ಹೊಂದಿರುವ ತಾಲೂಕು.
ಸುಳ್ಯ ಪರಿಸರ ಮಂಗಳೂರಿನಂತೆ ಸಮತಟ್ಟಾಗಿರದೆ , ಕೊಡಗಿನಂತೆ ಸಣ್ಣ ಬೆಟ್ಟ-ಗುಡ್ಡ ವನ್ನು ಹೊಂದಿರೋ ಪ್ರದೇಶ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಹಸಿರು ಸಿರಿಯಲ್ಲಿ ಮಲಗಿರುವ ಊರು. ಇಲ್ಲಿನ ಜನ ಸ್ವಾಭಿಮಾನಿಗಳು , 1837 ರಲ್ಲಿ ನಡೆದ ಅಮರ ಸುಳ್ಯದ ರೈತ ದಂಗೆ ಇದಕ್ಕೆ ಸಾಕ್ಷಿ. ಅಂದು ಕಂದಾಯ ಪಾವತಿ ಹಾಗೂ ಕೊಡಗಿನ ಅರಸ ಚಿಕ್ಕವೀರರಾಜೇಂದ್ರನ ಪದಚ್ಯುತಿ ಕಾರಣಕ್ಕಾಗಿ ತಮ್ಮನಾಳುತ್ತಿದ್ದ ಬ್ರಿಟಿಷರ ವಿರುದ್ದ ದಂಗೆ ಎದ್ದ ರೈತರು ಮಂಗಳೂರಿಗೆ ಮುತ್ತಿಗೆ ಹಾಕಿದ್ದರು. ಮೊದಲು ಮಂಗಳೂರನ್ನು ಗೆದ್ದರೂ ನಂತರ ಆಂಗ್ಲರಿಗೆ ಬಿಟ್ಟು ಕೊಡಬೇಕಾಯಿತು.
ಪ್ರೀತಿಯ ನೆಹರೂಜಿ,ನೆಮ್ಮದಿಯಾಗಿರಬೇಕಲ್ಲ? ಕಂಗ್ರಾಜುಲೇಷನ್ಸ್!
– ಪಲ್ಲವಿ ರಾವ್
ಅಂತೂ ಭಾರತದ ಯುವ ಜನತೆಗೆ ದೇಶವೆಂದರೆ ಭೌಗೋಳಿಕ ಇರುವಿಕೆಯೇ ಅರ್ಥಹೀನ, ಇಲ್ಲಿನ ನಂಬಿಕೆಗಳೆಲ್ಲವೂ ಅವೈಜ್ನಾನಿಕ, ಆಚರಣೆಗಳೆಲ್ಲ ತುಚ್ಚ , ಹೆಮ್ಮೆ ಪಡುವಂತದ್ದೂ ಇಲ್ಲೇನೂ ಇಲ್ಲ , ದೇಶವೆಂದರೆ ತಾಯಿ ಅನ್ನುವ ಕಲ್ಪನೆಯೇ ಬುಲ್ಶಿಟ್ ಅನ್ನುವ ಮನೋಭಾವವನ್ನು ನಿಮ್ಮ ಕನಸಿನ ವೈಜ್ನಾನಿಕ ಆಧುನಿಕ ಪಾಶ್ಚಾತ್ಯ ಶಿಕ್ಷಣ ಬಹಳ ಯಶಸ್ವಿಯಾಗಿ ಬಿತ್ತಿದೆ. ನೀವು ಬಹಳವಾಗಿ ಆರಾಧಿಸಿದ ಇತಿಹಾಸ ತಜ್ನರಿಂದ ಬರೆಸಿದ ಇತಿಹಾಸ ಈ ದೇಶದ ತರುಣರಲ್ಲಿ ಸಿನಿಕತೆಯನ್ನು,ದೇಶ ಕಾಯುವ ಸೈನಿಕರ ಬಗ್ಗೆ ತಿರಸ್ಕಾರವನ್ನೂ ಪ್ರಜಾಪ್ರಭುತ್ವದ ಬುನಾದಿಯ ಮೇಲೆ ದಾಳಿ ನಡೆಸಿದವರನ್ನೂ ಆರಾಧಿಸುವ ಮಟ್ಟಕ್ಕೆ ಬೆಳೆಸಿದೆ. ನೀವು ಇದನ್ನೇ ಬಯಸಿದ್ದೀರಿ ಅಲ್ವ? ಪ್ರತಿಯೊಂದನ್ನೂ ಪ್ರಶ್ನಿಸುವ, ತಿರಸ್ಕರಿಸುವ ಎಡಬಿಡಂಗಿ ಮನೋಭಾವವನ್ನೇ ವೈಜ್ನಾನಿಕ ಎಂದು ಅರ್ಥೈಸಿದ್ದವರಿಗೆ ಇಂದಿನ ವಿಶ್ವವಿದ್ಯಾನಿಲಯಗಳ ದಿಕ್ಕುದೆಶೆ ಇಲ್ಲದ ಭವಿಷ್ಯದ ಬಗ್ಗೆ ಕನಸು, ದೇಶದ ಬಗ್ಗೆ ಕಾಳಜಿ ಎರಡೂ ಇಲ್ಲದ ಸಿನಿಕ ಯುವಭಾರತ ಹೆಮ್ಮೆ ತಂದಿರಬೇಕು ,
ಕಂಗ್ರಾಜ್ಯುಲೇಷನ್ಸ್!
ನೀವು ಮತ್ತು ನಿಮ್ಮ ಕುಟುಂಬದ ಸ್ವತ್ತಾಗಿ ಹೋದ ಪಕ್ಷಕ್ಕೆ ಭಾರತದ ಬಗ್ಗೆ ಪ್ರೀತಿ, ಹೆಮ್ಮೆ ಹುಟ್ಟುವುದಾದರೂ ಹೇಗೆ? ಸದಾ ಪಾಶ್ಚಾತ್ಯ ಚಿಂತನೆ, ಅಲ್ಲಿನ ವಿದ್ಯಾಲಯಗಳ ಓದು, ಅಲ್ಲಿನದೇ ಬದುಕನ್ನು ಕಂಡ ನಿಮ್ಮವರಿಗೆ ಈ ದೇಶ ಬರಿಯ ಮೂಢನಂಬಿಕೆಗಳ , ಜಾತಿಗಳ, ತಾರತಮ್ಯದ ಆಡೊಂಬೊಲವಾಗಿಯೇ ಕಂಡಿತ್ತು. ನೀವೇನೋ ಡಿಸ್ಕವರಿ ಆಫ್ ಇಂಡಿಯ ಬರೆದುಬಿಟ್ಟಿರಿ. ಆದರೆ ನಿಮ್ಮ ಮರಿ ಮಕ್ಕಳಿಗೆ ಅದರ ಕಲ್ಪನೆಯಾದರೂ ಇದೆ ಅಂದು ಕೊಂಡಿದ್ದೀರ? ನೀವು ಅಷ್ಟೆಲ್ಲ ಕಾಳಜಿಯಿಂದ ಜತನವಾಗಿ ಅತ್ಯಂತ ಚಾಣಾಕ್ಶತನದಿಂದ ಅಡೆತಡೆಗಳನ್ನು ನಿವಾರಿಸಿ , ಕಾದಿಟ್ಟ ದೇಶಾಡಳಿತದ ಕಿರೀಟ ಕೈ ತಪ್ಪಿದ ಸಂಕಟದಲ್ಲಿ ನಿಮ್ಮದೇ ವಂಶದ ಕುಡಿ ದೇಶದ್ರೋಹಿಗಳಿಗೂ ಜೈಕಾರ ಹಾಕುತ್ತಾನೆ. ನಮಗವನ ಬಗ್ಗೆ ನಿರೀಕ್ಶೆಗಳೇನೂ ಇಲ್ಲ ಬಿಡಿ. ಎಷ್ಟಾದರೂ ಏನೂ ಬೆಳೆಯದ ಹಿಮದ ಮರುಭೂಮಿಯನ್ನೂ ಬೇರೆ ದೇಶಕ್ಕೆ ಕೊಟ್ಟರೇನೂ ತೊಂದರೆ ಇಲ್ಲ ಅಂದವರಲ್ಲವೆ ನೀವೂ? ನಿಮ್ಮ ವಾರಸುದಾರರು ನಿಮ್ಮ ಜೀನ್ಗಳಿಗೆ ನ್ಯಾಯ ಸಲ್ಲಿಸುತ್ತಿದ್ದಾರೆ ಬಿಡಿ. ಭಾರತದ ಸಾರ್ವಭೌಮತೆ ವಿಚ್ಛಿದ್ರವಾದರೂ ಚಿಂತೆ ಇಲ್ಲ, ಅವರ ಆಡಳಿತ ನಡೆಸಲು ತುಂಡು ಉಳಿದರೆ ಸಾಕು ಅನ್ನುತ್ತ ಭಾರತವನ್ನು ತುಂಡಾಗಿಸಲು ಹೋರಾಡುವವರ ಜತೆ ಧರಣಿ ಕೂರುತ್ತಿದ್ದಾರೆ. ನೀವು ಮಗಳನ್ನು ಪಟ್ಟಕ್ಕೇರಿಸಿದಾಗ ಇದನ್ನೇ ನಿರೀಕ್ಷಿಸಿದ್ದಿರೇನೋ ಅಲ್ವ?
ಟಿಪ್ಪು ಜಯಂತಿಗೆ ಕೊಡವರ ಭರ್ಜರಿ ಗಿಫ್ಟ್ “ಕಾಂಗ್ರೆಸ್ ಮುಕ್ತ ಕೊಡಗು”
– ಅನಿರುದ್ಧ ಎಸ್.ಆರ್ , ಭದ್ರಾವತಿ
ಕೋಮುವಾದಿ”ಗಳಿಗೆ ಕೊಡವರ ಗಿಫ್ಟ್ – ಓಲೈಕೆ ರಾಜಕಾರಣವೆಂಬ ರಕ್ತ ಬೀಜಾಸುರನ ಸಂಹಾರ ಆರಂಭ
ಓಲೈಕೆ ರಾಜಕಾರಣ ಎಂಬ ರಕ್ತಬೀಜಾಸುರನನ್ನು ಸ್ವಚ್ಛಂದವಾಗಿ ಬೆಳೆಸಿ, ಒಡೆದಾಳುವ ನೀತಿಯೇ ತಮ್ಮ ಧ್ಯೇಯವೆಂಬಂತೆ ನಡೆದುಕೊಂಡು ಬರುತ್ತಿರುವ ನೆಹರೂ ಕುಟುಂಬ ಅಂದರೆ ಸೋ ಕಾಲ್ಡ್ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ರಾಷ್ಟ್ರ ರಾಜಕಾರಣದಲ್ಲಿ ಎಬ್ಬಿಸಿರುವ ಹೊಲಸನ್ನು ತೊಳೆಯಲು ಇನ್ನೆಷ್ಟು ದಶಕಗಳು ಬೇಕೋ. ಆದರೆ, ತನ್ನ ಸ್ವಾರ್ಥಕ್ಕಾಗಿ ಅಮಾಯಕರನ್ನು ಬಲಿ ಕೊಡುವ, ಅಸಹಾಕಯಕರನ್ನೇ ಮೆಟ್ಟಿಲನ್ನಾಗಿ ಮಾಡಿಕೊಳ್ಳುವ ಇವರ ಪರಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತ ಮಾನ ಮೂರಾಬಟ್ಟೆಯಾಗಿದೆ.
ಆರಂಭದಲ್ಲಿ ಹೇಳಿದ ರಕ್ತಬೀಜಾಸುರನ ಪ್ರಸ್ತಾಪಕ್ಕೆ ಉದಾಹರಣೆ ಟಿಪ್ಪು ಜಯಂತಿಯ ಅಂಗವಾಗಿ ಮಡಿಕೇರಿಯಲ್ಲಿ ನಡೆದ ಮೆರವಣಿಗೆ ಹಾಗೂ ಅದರ ಮೂರ್ತ ರೂಪ ಗಲಭೆ. ಹಿಂದೂ ಸಂಘಟನೆ ಹಾಗೂ ರಾಜ್ಯದ ನಾಗರಿಕರ ತೀವ್ಯ ವಿರೋಧದ ನಡೆವೆಯೂ ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಜಯಂತಿಗೆ ಅನುಮತಿ ನೀಡಿದ ಸಿದ್ಧರಾಮಯ್ಯ ಸರ್ಕಾರದ ನೀಚ ಕೃತ್ಯಕ್ಕೆ ವಿಎಚ್ ಪಿ ಮುಖಂಡ ದೇವದಂಡ ಕುಟ್ಟಪ್ಪ ಬಲಿಯಾಗಿದ್ದರು. ಅಂದು ನಡೆದ ಗಲಭೆಯಲ್ಲಿ ಎಲ್ಲಿಂದಲೋ ಬಂದವರು ಅಟ್ಟಹಾಸ ಮೆರೆದು, ತಮ್ಮ ವಿಕೃತ ಮನಸ್ಥಿತಿಯ ಸುಖಕ್ಕಾಗಿ ಅಮಾಯಕನನ್ನು ಕೊಂದರು. ಪ್ರಕರಣ ಕುರಿತಂತೆ ಇತ್ತೀಚಿಗೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದು, ಕುಟ್ಟಪ್ಪ ಸಾವು ಆಕಸ್ಮಿಕವಲ್ಲ ಕೊಲೆ ಎನ್ನುವುದನ್ನು ಸ್ಪಷ್ಟೀಕರಿಸಿದ್ದರು.
ಭಾರತದ ಎಡಪಂಥೀಯರು ದೇಶವಿರೋಧದತ್ತೇಕೆ ಸಾಗುತ್ತಾರೆ?
– ವಿನಾಯಕ್ ಹಂಪಿಹೊಳಿ
ಭಾರತದಲ್ಲಿ ಇಂದು ಎಡಪಂಥವು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಸರ್ಕಾರದಿಂದ ಎಲ್ಲ ಸವಲತ್ತುಗಳನ್ನು ಪಡೆದರೂ, ಶಿಕ್ಷಣ ಕ್ಷೇತ್ರದ ಎಲ್ಲ ಆಯಕಟ್ಟಿನ ಜಾಗಗಳನ್ನು ಆವರಿಸಿದರೂ, ಸೋಶಿಯಲ್ ಮೀಡಿಯಾ ಹೊರತುಪಡಿಸಿ ಬಹುತೇಕ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಎಡಪಂಥೀಯ ಚಿಂತನೆಯನ್ನೇ ಪ್ರಸಾರ ಮಾಡಿದ್ದರೂ, ಸರ್ಕಾರೀ ಪ್ರಶಸ್ತಿಗಳಲ್ಲಿ ಬಹುತೇಕ ಪಾಲನ್ನು ಎಡಪಂಥೀಯರಿಗೆ ಮೀಸಲಿಟ್ಟಿದ್ದರೂ, ಹಲವಾರು ಜನಪರ ಸರ್ಕಾರೀ ಯೋಜನೆಗಳು ಎಡಪಂಥೀಯ ಚಿಂತನೆಯನ್ನೇ ಅವಲಂಬಿಸಿಕೊಂಡಿದ್ದರೂ ಅದೇಕೋ ಬಹುತೇಕ ಭಾರತೀಯರು ಮಾತ್ರ ಎಡಪಂಥವನ್ನು ಒಪ್ಪಿಕೊಂಡೇ ಇಲ್ಲ.
ಎಡಪಂಥ ಶಬ್ದವು ಫ್ರೆಂಚ್ ಕ್ರಾಂತಿಯ ಅವಧಿಯಲ್ಲಿ ಹುಟ್ಟಿರುವ ಶಬ್ದವಾದರೂ ಕಾಲಕ್ರಮದಲ್ಲಿ, ಸೋಶಿಯಾಲಿಸಂ, ಕಮ್ಯುನಿಸಂ ಮುಂತಾದ ಕಲ್ಪನೆಗಳನ್ನು ಒಳಗೊಳ್ಳುತ್ತ ಹೋಯಿತು. ಸಮಾಜದಿಂದ ಹೆಚ್ಚು ಪ್ರಯೋಜನ ಪಡೆಯಲಾಗದವರ ಕುರಿತು ವಿಶೇಷ ಕಾಳಜಿಯನ್ನು ತೋರಿಸುವದು ಎಡಪಂಥದ ತತ್ತ್ವ. ಬಹುಸಂಖ್ಯಾತ ರಿಲಿಜನ್ನಿನವರಿಂದ ತುಳಿತಕ್ಕೊಳಗಾಗುವ ಅಲ್ಪಸಂಖ್ಯಾತ ರಿಲಿಜನ್ನಿನ ಜನರ ಕುರಿತು ಕಾಳಜಿ ತೋರಿಸುತ್ತದೆ. ಶ್ರೀಮಂತರಿಂದ ಅನ್ಯಾಯಕ್ಕೊಳಗಾದ ಬಡವರ ಪರವಾಗಿ ನಿಲ್ಲುತ್ತದೆ. ಒಟ್ಟಿನಲ್ಲಿ ಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಎಂಬ ಆದರ್ಶ ಸ್ಥಾಪಿಸುವದೇ ಇದರ ಉದ್ದೇಶ.
ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗೆ ಕಾರಣವಾಗುವ ಪ್ರತಿಯೊಂದನ್ನೂ ಎಡಪಂಥವು ವಿರೋಧಿಸುತ್ತದೆ. ಬಹುಸಂಖ್ಯಾತರಿರುವ ರಿಲಿಜನ್ನಿನ ಜನರಿಂದ ಅಲ್ಪಸಂಖ್ಯಾತರ ರಿಲಿಜನ್ನಿನ ಜನರಿಗೆ ಸಾಮಾಜಿಕ ಅನ್ಯಾಯಗಳಾಗುವದರಿಂದ ರಿಲಿಜನ್ನುಗಳನ್ನು ವಿರೋಧಿಸುತ್ತದೆ. ಖಾಸಗೀ ಉದ್ಯಮಗಳಿಂದಾಗಿ ಆರ್ಥಿಕ ಸಂಪತ್ತುಗಳು ಉದ್ದಿಮೆದಾದರಲ್ಲಿಯೇ ಕ್ರೋಢೀಕರಣಗೊಳ್ಳುವದರಿಂದ ಖಾಸಗೀಕರಣವನ್ನು ವಿರೋಧಿಸುತ್ತದೆ. ರೈತರು ಬೆಳೆಯುವ ಬೆಳೆಯನ್ನು ಸಂಗ್ರಹಿಸಿಟ್ಟುಕೊಳ್ಳುವ ಜಮೀನುದಾರರನ್ನು ವಿರೋಧಿಸುತ್ತದೆ.
ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ
– ಅನಿರುದ್ಧ ವಸಿಷ್ಟ,ಭದ್ರಾವತಿ
ಅರಾಜಕತೆ ತಂದೊಡ್ಡದಿರಲಿ ಧರ್ಮಾಧಾರಿತ ಕಾನೂನು
ಪ್ರಜಾಪ್ರಭುತ್ವ ದೇಶದಲ್ಲಿರುವ ಭಾರತೀಯರಿಗೆ ದೇಶದ ಸಂವಿಧಾನವೇ ಮೇಲ್ಪಂಕ್ತಿಯಾಗಿದ್ದು, ಸಂವಿಧಾನವೇ ಅಂತಿಮವಾದುದು. ಧರ್ಮ ಗ್ರಂಥಗಳಾದ ರಾಮಾಯಣ, ಮಹಾಭಾರತ, ಕುರಾನ್, ಬೈಬಲ್ಗಳು ಆಯಾ ಧರ್ಮದ ಅನುಯಾಯಿಗಳ ವೈಯಕ್ತಿಕವಾಗಿರಬೇಕು.ಆದರೆ,ವೋಟ್ ಬ್ಯಾಂಕ್ ರಾಜಕಾರಣದ ಫಲವಾಗಿ ಸರ್ಕಾರಗಳು ಕೈಗೊಂಡ ನಿರ್ಧಾರಗಳು ಸಂವಿಧಾನ ವಿರುದ್ಧ ನಡೆಯಲು ಪ್ರೇರಣೆಯಾಗುತ್ತವೆ ಎಂದರೆ ಅದು ಪ್ರಜಾಪ್ರಭುತ್ವದ ದುರಂತವೇ ಹೌದು.೩೦೦ ವರ್ಷಗಳ ಕಾಲ ಬ್ರಿಟೀಷರಿಂದ ಆಳಿಸಿಕೊಂಡ ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದರೂ, ಒಂದು ರೀತಿಯಲ್ಲಿ ಸರ್ವಾಧಿಕಾರಿ ಮನಸ್ಥಿತಿಯನ್ನೆ ಇಂದಿಗೂ ಹೊಂದಿದೆ ಎಂದರೆ ತಪ್ಪಲ್ಲ. ಇದು ಕೇವಲ ಆಳುವ ಪಕ್ಷಗಳ ಮನಸ್ಥಿತಿ ಮಾತ್ರವಲ್ಲ, ದೇಶದ ಪ್ರತಿ ಧರ್ಮ ಹಾಗೂ ಜಾತಿಗಳಲ್ಲಿ ಇದು ಹಾಸು ಹೊಕ್ಕಾಗಿದೆ.
೧೯೪೭ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರೂಪಿಸಲಾದ ಸಂವಿಧಾನ ಮಹೋನ್ನತ ಆಶಯಗಳನ್ನು ಹೊಂದಿದೆ.ಸಂವಿಧಾನವೇ ಭಾರತೀಯರಿಗೆ ಒಂದು ರೀತಿಯಲ್ಲಿ ಸವೋತ್ತಮ ಎಂದರೂ ತಪ್ಪಲ್ಲ. ಆದರೆ, ಸಂವಿಧಾನ ಆಶಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ಯಾವುದೇ ಸರ್ಕಾರ ಅಥವಾ ಧರ್ಮಗಳು ನಡೆದುಕೊಂಡಾಗ ಅದನ್ನು ನ್ಯಾಯಾಂಗದಲ್ಲಿ ಪ್ರಶ್ನೆ ಮಾಡುವ ಅಧಿಕಾರವನ್ನು ಇದೇ ಸಂವಿಧಾನ ಕಲ್ಪಿಸಿದೆ. ಆದರೆ, ಯಾವುದೇ ಒಂದು ಒಳ ವ್ಯವಸ್ಥೆ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸುತ್ತದೆ ಎಂದರೆ ಹೇಗೆ?
ಜೆಎನ್ಯು : ಯೂನಿವರ್ಸಿಟಿಯ ಹೆಸರಲ್ಲೇ ದೋಷ ಇರಬಹುದೆ?!
– ರೋಹಿತ್ ಚಕ್ರತೀರ್ಥ
ನೇರಾನೇರವಾಗಿ ವಿಷಯಕ್ಕೆ ಬರೋಣ. ಜವಹರ್ಲಾಲ್ ನೆಹರೂ ಹೆಸರಲ್ಲಿರುವ ವಿಶ್ವವಿದ್ಯಾಲಯದಲ್ಲಿ ಮೊನ್ನೆ ಫೆಬ್ರವರಿ 9ನೇ ತಾರೀಖು ಡಿಎಸ್ಯು (ಡೆಮೊಕ್ರಾಟಿಕ್ ಸ್ಟೂಡೆಂಟ್ಸ್ ಯೂನಿಯನ್) ಎಂಬ ಸಂಘಟನೆಯ ವಿದ್ಯಾರ್ಥಿಗಳು ಎರಡು ವರ್ಷದ ಹಿಂದೆ ನೇಣುಗಂಬವೇರಿದ್ದ ಒಬ್ಬ ಭಯೋತ್ಪಾದಕನ “ಪುಣ್ಯತಿಥಿ”ಯನ್ನು ಆಚರಿಸಲು ನಿರ್ಧರಿಸಿದ್ದರು. ಕಾರ್ಯಕ್ರಮಕ್ಕೆ ಅವರು ಕೊಟ್ಟಿದ್ದ ಹೆಸರು “ಅಫ್ಜಲ್ ಗುರು ಮತ್ತು ಮಖ್ಬೂಲ್ ಭಟ್ರ ನ್ಯಾಯಾಂಗ ಹತ್ಯೆಯ ನೆನಪಿನಲ್ಲಿ” ನಡೆಸುವ ಕಾರ್ಯಕ್ರಮ ಎಂದು. ಈ ಡಿಎಸ್ಯು ಒಂದು ಮಾವೋವಾದಿ ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆ. ದೇಶದೊಳಗಿನ ಮಾವೋವಾದಿ ನಕ್ಸಲರಿಗೆ ಗುಟ್ಟಿನಿಂದಲ್ಲ, ಓಪನ್ ಆಗಿ ಬೆಂಬಲ ಸೂಚಿಸುವ ಸಂಘಟನೆ ಇದು! ಆದರೆ, ಎಲ್ಲಿಯವರೆಗೆ ಈ ಸಂಘಟನೆಯ ವಿದ್ಯಾರ್ಥಿಗಳು ತಾವಾಗಿ ಬಂದೂಕು ಹಿಡಿದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ತಿರುಗಾಡುವುದಿಲ್ಲವೋ ಅಲ್ಲಿಯವರೆಗೂ ಅವರನ್ನು ಸಹಿಸಿಕೊಳ್ಳಬಹುದು ಎಂಬುದು ವಿವಿಯ ಉದಾರ ಧೋರಣೆ. ಫೆಬ್ರವರಿ 9ರಂದು ಆಯೋಜನೆಯಾಗಿದ್ದ ಕಾರ್ಯಕ್ರಮದ ಬಗ್ಗೆ ಕಣ್ಮುಚ್ಚಿ ಕುಳಿತಿದ್ದ (ಅಸಲಿಗೆ ಮಾಹಿತಿಯೇ ಇರದಿದ್ದ) ವಿವಿಯ ಆಡಳಿತ ಮಂಡಳಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒಂದು ಪತ್ರ ಬರೆದು “ಸುಪ್ರೀಂ ಕೋರ್ಟಿನ ತೀರ್ಪಿಗೆ ಅನುಸಾರವಾಗಿ ಶಿಕ್ಷೆಗೊಳಪಟ್ಟ ಒಬ್ಬ ಉಗ್ರನ ಹೆಸರಲ್ಲಿ ಅವನ ಪುಣ್ಯತಿಥಿಯನ್ನು ಕ್ಯಾಂಪಸ್ ಒಳಗೆ ಆಚರಿಸುವುದು ಸರಿಯೇ? ಇದು ನ್ಯಾಯಾಂಗ ನಿಂದನೆ ಮಾತ್ರವಲ್ಲ; ದೇಶದ ಸಮಗ್ರತೆಯನ್ನೇ ಪ್ರಶ್ನಿಸುವ ಕೆಲಸ. ಇಂಥ ಅನರ್ಥಗಳು ನಡೆಯದಂತೆ ವಿವಿ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಕೇಳಿಕೊಂಡಿತು. ಬಹುಶಃ ಆಗ ವಿವಿಗೂ ಈ ಸಂಗತಿ ಮುಂದೆ ಹೇಗೆಲ್ಲ ಕವಲೊಡೆಯಬಹುದು, ಎಷ್ಟು ಸಮಸ್ಯೆಗಳನ್ನು ಹುಟ್ಟುಹಾಕಬಹುದು ಎಂಬ ಅಂದಾಜು ಸಿಕ್ಕಿರಬೇಕು. ಕೂಡಲೇ ಅದು ಡಿಎಸ್ಯು ಸಂಘಟನೆಯ ಮುಖಂಡರನ್ನು ಕರೆದು, ಇಂಥಾದ್ದನ್ನೆಲ್ಲ ಇಲ್ಲಿ ಇಟ್ಟುಕೊಳ್ಳಬೇಡಿ; ಕ್ಯಾಂಪಸ್ ಹೊರಗೆ ಏನು ಬೇಕಾದರೂ ಮಾಡಿಕೊಳ್ಳಿ ಎಂಬ ಸ್ಪಷ್ಟ ಸೂಚನೆ ಕೊಟ್ಟಿತು.




