ನಿರ್ಭೀತಿಯೇ ಮೈವೆತ್ತಿರುವ ಆಸಾಮಿ,ಈ ಸುಬ್ರಮಣಿಯನ್ ಸ್ವಾಮಿ!
– ಸಹನಾ ವಿಜಯ್ ಕುಮಾರ್
ಸುಬ್ರಮಣಿಯನ್ ಸ್ವಾಮಿ! ಹೆಸರನ್ನು ಕೇಳಿದ ತಕ್ಷಣ ಎಂಥವರೂ ಎಚ್ಚೆತ್ತುಕೊಳ್ಳಲೇ ಬೇಕು. ಪ್ರತಿಕ್ರಿಯಿಸಲೇ ಬೇಕು. ಸಿಟ್ಟೋ, ಗೊಂದಲವೋ, ಹೆಮ್ಮೆಯೋ, ಪ್ರೀತಿಯೋ ಒಟ್ಟಿನಲ್ಲಿ ಯಾವುದಾದರೊಂದು ಭಾವವಂತೂ ಹೊಮ್ಮಲೇ ಬೇಕು! ಅವರನ್ನು ಉಪೇಕ್ಷೆ ಮಾಡಿ ತಲೆಯನ್ನೊಮ್ಮೆ ಅಡ್ಡಡ್ಡಲಾಗಿ ಕೊಡವಿಕೊಂಡು ಎದ್ದು ಬಿಡುವುದು ಎಂಥವರಿಗೂ ಸಾಧ್ಯವಿಲ್ಲ! ಮೊನ್ನೆ ಜನವರಿ 23ರಂದು ಮೈಸೂರಿನಲ್ಲಿ ಅವರನ್ನು ಭೇಟಿಯಾಗಲು ದೌಡಾಯಿಸುವಾಗ ಮನಸ್ಸಿನಲ್ಲಿ ಹಲವಾರು ಚಿತ್ರಗಳು. ಟಿವಿ ಚಾನೆಲ್ಗಳಲ್ಲಿ ವಾದಕ್ಕೆ ನಿಂತಾಗಲೆಲ್ಲ ಗುಂಡು ಹೊಡೆದ ಹಾಗೆ ಮಾತನಾಡುವ, ಎದುರಾಳಿಯನ್ನು ತಬ್ಬಿಬ್ಬುಗೊಳಿಸಿ ಮುಖದ ನೀರಿಳಿಸಿಬಿಡುವ ಅವರನ್ನು ನೇರಾನೇರ ಕಂಡು ಮಾತನಾಡುವ ಕಾತುರ. ಎದುರಿಗೆ ಹೋಗಿ ನಿಂತು ಸುರಿಸಿದ ಪ್ರಶ್ನೆಗಳ ಮಳೆಗೆ ಅವರದ್ದು ಸಿಡಿಲಬ್ಬರದ ಉತ್ತರ. ಸೆಕ್ಯುರಿಟಿಯವರ ಕೈಯಲ್ಲಿದ್ದ ಎಕೆ 47 ಬಂದೂಕನ್ನೂ ನಾಚಿಸುವಂಥ ಮಾತಿನ ವರಸೆ!
‘ಸರ್, ಸೋನಿಯಾ ಪ್ರಧಾನಿಯಾಗುವುದು ಕಾನೂನಿನ್ವಯ ಸಾಧ್ಯವಿಲ್ಲ ಎನ್ನುವ ವಿಷಯ ನೀವು ಹೇಳುವವರೆಗೂ (ಅಂದಿನ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂರಿಗೆ ಪತ್ರ ಬರೆದು) ಯಾರಿಗೂ ಗೊತ್ತೇ ಇರಲಿಲ್ಲ, ಯಾವ ಸತ್ಯವನ್ನೇ ಆಗಲಿ ನೀವೇ ಶೋಧಿಸಬೇಕು, ನೀವಲ್ಲದೆ ಬೇರೆ ಯಾರೂ ದಿಕ್ಕಿಲ್ಲ ಎನ್ನುವ ಹಾಗಿಬಿಟ್ಟಿದೆಯಲ್ಲ, ಮುಂದೆ ಹೇಗೆ?’ ಎಂಬ ಕಳಕಳಿಯ ಪ್ರಶ್ನೆಗೆ ಅವರು ನಗುತ್ತಾ ಕೊಟ್ಟ ಉತ್ತರ – ‘ಅಯ್ಯೋ, ನನ್ನ ಕಥೆ ಈಗಲೇ ಮುಗಿದುಹೋಗುತ್ತದೆ ಅಂದುಕೊಂಡುಬಿಟ್ಟಿರೇನು? ಯಾರಿಗೆ ಗೊತ್ತು, ನಾನು ನೂರಿಪ್ಪತ್ತು ವರ್ಷಗಳ ಕಾಲ ಬದುಕಿದರೂ ಬದುಕಬಹುದು’ ಎಂದು! ‘ನಾನೊಬ್ಬ ಸಾಧಾರಣ ಹಿನ್ನೆಲೆಯಿಂದ ಬಂದಂಥ ಮನುಷ್ಯ. ಉಳಿದವರಿಗೂ ನನಗೂ ಇರುವ ಒಂದೇ ವ್ಯತ್ಯಾಸವೆಂದರೆ ನಾನು ಯಾರಿಗೂ, ಯಾವುದಕ್ಕೂ ಹೆದರುವುದಿಲ್ಲ. ಗಾಂಧೀಜಿಯವರು ಇದ್ದುದೂ ಹಾಗೇ ಅಲ್ಲವೇ?’ ಎಂದು ತಿರುಗಿ ಪ್ರಶ್ನಿಸಿದರು ಸ್ವಾಮಿ.
ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ
ಇತ್ತೀಚೆಗೆ, ಲೇಖಕ ರೋಹಿತ್ ಚಕ್ರತೀರ್ಥ ಅವರ ಕಥಾಸಂಕಲನಕ್ಕೆ ಹಿರಿಯ ಲೇಖಕರಾದ ಬೊಳುವಾರ ಮಹಮ್ಮದ್ ಕುಂಞ್ ಯವರು ಮುನ್ನುಡಿ ಬರೆದಿರುವ ವಿಷಯವಾಗಿ ಫೇಸ್ಬುಕ್ಕಿನಲ್ಲಿ ವಾದ-ವಿವಾದಗಳು ನಡೆಯುತ್ತಿವೆ.ಅದಕ್ಕೆ ಪ್ರತಿಕ್ರಿಯಿಸಿದ ಬೊಳುವಾರರು, ಮೂವತ್ತು ವರ್ಷಗಳ ಹಿಂದೆ ಬರೆದಿದ್ದ “ಮುಸ್ಲಿಮನಾಗಿರುವುದೆಂದರೆ…” ಲೇಖನವನ್ನು ನೆನೆಸಿಕೊಂಡರು.ಆ ಲೇಖನದ ಕುರಿತಾಗಿ ಕಥೆಗಾರರು ಮತ್ತು ವಿಜಯವಾಣಿಯ ಅಂಕಣ ಬರಹಗಾರರಾದ ಪ್ರೇಮಶೇಖರ ಅವರು ತಮ್ಮ ವಾಲ್ನನಲ್ಲೊಂದು ಅಭಿಪ್ರಾಯ ಹಾಕಿದ್ದರು.ಆ ಅಭಿಪ್ರಾಯದ ಕುರಿತು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಅವರು “ಪ್ರೇಮಶೇಖರ ಅವರೇ, ನಿಮ್ಮಲ್ಲಿ ಲೇಖನ ಇದ್ದರೆ ಮತ್ತೊಮ್ಮೆ ಓದಿ. ಯಾವುದು ಬದಲಾಗಿದೆ? ಮುಸ್ಲಿಮರನ್ನು ಹಿಂದುತ್ವವಾದಿಗಳು ನೋಡುವ ಯಾವ ದೃಷ್ಟಿ ಬದಲಾಗಿದೆ ಎಂದು ಒಂದೊಂದಾಗಿ ಹೇಳಿಬಿಡಿ” ಎಂದಿದ್ದರು.ಪ್ರೇಮಶೇಖರ ಅವರು ಅಮೀನರಿಗೆ ಕೊಟ್ಟ ಉತ್ತರ ಇಲ್ಲಿದೆ… ಜೊತೆಗೆ ಬೊಳುವಾರರ ಹಳೇ ಲೇಖನದ ಪ್ರತಿಯೂ ಇದೆ – ನಿಲುಮೆ
– ಪ್ರೇಮ ಶೇಖರ ಅವರ ಮೊದಲ ಅಭಿಪ್ರಾಯ
ಬೊಳುವಾರರು “ಸುಧಾ” ಸಾಪ್ತಾಹಿಕದಲ್ಲಿ “ಮುಸ್ಲಿಮನಾಗಿರುವುದೆಂದರೆ…” ಎಂಬ ಲೇಖನ ಬರೆದು ಮೂವತ್ತನಾಲ್ಕೂವರೆ ವರ್ಷಗಳಾಗುತ್ತಾ ಬಂದಿವೆ. ಈ ಆವಧಿಯಲ್ಲಿ ನೇತ್ರಾವತಿಯಲ್ಲಿ ಅದೆಷ್ಟು ನೀರು ಹರಿದಿದೆ! ಹಾಗೆಯೇ ಬೊಳುವಾರರು ಬೆಳೆಯುತ್ತಾ ಹೋಗಿದ್ದಾರೆ, ಅದು ಅವರ ಹೆಗ್ಗಳಿಕೆ. ಆದರೆ ಅದಕ್ಕೆ ವಿರುದ್ಧವಾಗಿ, ಆ ಲೇಖನವನ್ನು ಅಂದು ಓದಿದವರು ಅಲ್ಲೇ ಉಳಿದುಬಿಟ್ಟಿದ್ದಾರೆ. ಹೀಗಾಗಿ ಕರ್ನಾಟಕದ ಸಾಂಸ್ಕೃತಿಕ ವಾತಾವರಣ ಅಧಃಪಾತಾಳಕ್ಕಿಳಿಯುತ್ತಿದೆ.
ಮೂವತ್ತೂ ದಾಟದ ಆ ದಿನಗಳಲ್ಲಿ ಬೊಳುವಾರರು ಬರೆದ, ವೈಚಾರಿಕತೆಗಿಂತಲೂ ಭಾವನಾತ್ಮಕತೆಗೆ ಒತ್ತುಕೊಟ್ಟಿದ್ದ, ಆ ಲೇಖನದಲ್ಲಿ ಒಳ್ಳೆಯ ಒಳನೋಟಗಳಿದ್ದಂತೇ ಉಪಖಂಡದ ಇತಿಹಾಸದ ಬಗ್ಗೆ, ದೇಶವಿಭಜನೆಯ ಬಗ್ಗೆ ಹಲವು ತಪ್ಪುಗ್ರಹಿಕೆಗಳೂ ಇದ್ದವು. ಭಾರತಕ್ಕೆ ಮುಸ್ಲಿಮರ, ನಂತರ ಬ್ರಿಟಿಷರ ಆಗಮನದ ಸ್ವರೂಪದ ಬಗ್ಗೆ, ದೇಶವಿಭಜನೆಯ ಬಗ್ಗೆ ಬೊಳುವಾರದ ತಿಳುವಳಿಕೆಗಳಲ್ಲಿ ಅಸ್ಪಷ್ಟತೆಯಿತ್ತು. ನನಗೆ ತಕ್ಷಣಕ್ಕೆ ನೆನಪಾಗುವುದು ಇದು- “ಪಾಕಿಸ್ತಾನ ಬೇಕೇ ಬೇಡವೇ ಎಂದು ಒಂದು ಜನಮತಗಣನೆ ನಡೆಯಿತಂತೆ, ಆದರೆ ಅಂಥದು ನಡೆದ ಬಗ್ಗೆ ನನ್ನ ತಂದೆಯವರಿಗೆ ಗೊತ್ತೇ ಇಲ್ಲ” ಎಂಬುದಾಗಿ ಬೊಳುವಾರರು ಬರೆದಿದ್ದರು. ವಾಸ್ತವವೆಂದರೆ ಬೊಳುವಾರರ ತಂದೆಯವರಿಗೆ ಆ ಜನಮತಗಣನೆಯ ಬಗ್ಗೆ ಗೊತ್ತಾಗಿ ಅವರದರಲ್ಲಿ ಭಾಗಿಯಾಗುವ ಸಾಧ್ಯತೆಯೇ ಇರಲಿಲ್ಲ. ಯಾಕೆಂದರೆ ಅಂಥದೊಂದು ಆಯ್ಕೆ ಎದುದಾದದ್ದು ಗಡಿನಾಡು ಪ್ರಾಂತ್ಯ ಮತ್ತು ಸಿಲ್ಹೆಟ್ (ಈಗ ಬಾಂಗ್ಲಾದೇಶದಲ್ಲಿದೆ) ಜಿಲ್ಲೆಯ ಜನತೆಗೆ ಮಾತ್ರ. ದೇಶವಿಭಜನೆಯ ನಿಜವಾದ ಆರೋಪಿಗಳಾದ ಮುಸ್ಲಿಂ ಲೀಗ್ ಮತ್ತು ಬ್ರಿಟಿಷರ ಪಾತ್ರವನ್ನು ಕಡೆಗಣಿಸಿ ಪರಿಸ್ಥಿತಿಯ ಕೈಗೊಂಬೆಯಾದ ಕಾಂಗ್ರೆಸ್ನ ಪಾತ್ರವನ್ನು ದೊಡ್ಡದಾಗಿ ತೋರಿಸುವ ಪ್ರಯತ್ನವೂ ಆ ಲೇಖನದಲ್ಲಿತ್ತು. ಕೋಮುವಾದದ ಉಗಮದ ಬಗೆಗೂ ಅಂಥದೇ ತಪ್ಪುತಿಳುವಳಿಕೆಯ ಭಾವನಾತ್ಮಕ ವಿವರಣೆಗಳಿದ್ದವು. ಅಂಥದೊಂದು ತಪ್ಪುಗ್ರಹಿಕೆಯನ್ನು ಎರಡುವಾರಗಳ ನಂತರ ಸಮುದ್ರಮಧನ ವಿಭಾಗದಲ್ಲಿ ಪ್ರಜ್ಞಾವಂತ ಓದುಗರೊಬ್ಬರು “ಮುಸ್ಲಿಂ ಲೀಗ್ ಯಾವಾಗ ಸ್ಥಾಪನೆಯಾಯಿತು, ಆರ್ಎಸ್ಎಸ್ ಯಾವಾಗ ಸ್ಥಾಪನೆಯಾಯಿತು ಎಂದು ನೋಡಿದರೆ ಯಾವುದು ಯಾವುದಕ್ಕೆ ಪ್ರತಿಕ್ರಿಯೆ ಎಂದು ತಿಳಿಯುತ್ತದೆ” ಎಂಬುದಾಗಿ ಹೇಳುವುದರ ಮೂಲಕ ಬೊಳುವಾರರಿಗೆ ಈ ದೇಶದ ಚರಿತ್ರೆಯ ಒಂದು ಸತ್ಯವನ್ನು ಮನಗಾಣಿಸಲು ಪ್ರಯತ್ನಿಸಿದ್ದರು. ನಂತರ ಬೊಳುವಾರದು ಬೆಳೆಯುತ್ತಾ ಹೋದರು. ಐದೇ ತಿಂಗಳಲ್ಲಿ “ದೇವರುಗಳ ರಾಜ್ಯದಲ್ಲಿ” ಎಂಬ ಅದ್ಭುತ ಕಥೆ ರಚಿಸಿದರು. ಅವರ ಬೆಳವಣಿಗೆಯ ಓಟ ಇನ್ನೂ ಸಾಗಿದೆ. ನನಗವರು ಅನುಕರಣೀಯವಾಗುವುದು, ಈ ನಾಡಿಗೆ ಅವರು ಮುಖ್ಯವಾಗುವುದು ಈ ಕಾರಣಕ್ಕಾಗಿ.
ದುರಂತವೆಂದರೆ ಆ ಲೇಖನವನ್ನು ಅಂದು ಓದಿದವರು ಅದನ್ನೇ ಪವಿತ್ರಗ್ರಂಥವೆಂದು ಇಂದಿಗೂ ನಂಬಿಬಿಟ್ಟಿದ್ದಾರೆ. ಅದರಾಚೆಗೆ ಬೆಳೆಯುವ ಪ್ರಯತ್ನವನ್ನೇ ಅವರು ಮಾಡಿಲ್ಲ. ತಾವೂ ಬೆಳೆಯಲಿಲ್ಲ, ಕರ್ನಾಟಕವನ್ನೂ ಬೆಳೆಯಲು ಬಿಡುತ್ತಿಲ್ಲ. ಬೊಳುವಾರರನ್ನೂ ಅಂದಿನ ದಿನಗಳಿಗೇ ಕಟ್ಟಿಹಾಕಲು ನೋಡುತ್ತಿದ್ದಾರೆ. ನಮ್ಮ ಬೊಳುವಾರರನ್ನೂ, ನಮ್ಮ ನಾಡನ್ನೂ, ನಮ್ಮ ಸಾಂಸ್ಕೃತಿಕ ಚಿಂತನೆಯನ್ನೂ ಈ ಪ್ರತಿಗಾಮಿಗಳಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.
ಹಣದ ಹೊಳೆ ನಿಲ್ಲಿಸಿ, ಮೇಲ್ಮನೆ ಮಾನ ಉಳಿಸಿ
– ಎಸ್. ಸುರೇಶ್ ಕುಮಾರ್, ಮಾಜಿ ಸಚಿವರು,ಹಿರಿಯ ಬಿಜೆಪಿ ನಾಯಕ
ಕರ್ನಾಟಕದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ 25 ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆ ಮುಗಿದು ಫಲಿತಾಂಶಗಳೂ ಪ್ರಕಟವಾಗಿವೆ. ಈಗೇನಿದ್ದರೂ ಆಯಾ ಪಕ್ಷ ಎಷ್ಟು ಸ್ಥಾನಗಳನ್ನು ಗೆದ್ದಿದೆ? ಸೋತಿರುವ ಕ್ಷೇತ್ರಗಳಲ್ಲಿ ಕಾರಣಗಳೇನು? ಎಂಬುದರ ಲೆಕ್ಕಾಚಾರ ನಡೆಯುವ ಸಮಯ. ಈ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ನನ್ನದೊಂದು ಈ ಮನವಿ ಪತ್ರ.
ಕೆಲವು ವರ್ಷಗಳ ಹಿಂದೆ ನನ್ನ ಮೊಬೈಲ್ಗೆ ಒಂದು ವಿಚಿತ್ರವಾದ, ಆದರೆ ಅರ್ಥಗರ್ಭಿತ ಸಂದೇಶ ಬಂದಿತ್ತು. ‘ಸ್ನೇಹಿತರೇ. ನಾನು ಮಹಾತ್ಮಾ ಗಾಂಧೀಜಿಯವರ ಫೋಟೋಗಳನ್ನು ಸಂಗ್ರಹಿಸುತ್ತಿದ್ದೇನೆ. ನನ್ನ ಈ ಸಂಗ್ರಹ ಕಾರ್ಯದಲ್ಲಿ ನೀವು ಸಹಕರಿಸಿ. ನಿಮ್ಮ ಕೊಡುಗೆಯನ್ನು ನೀಡಿ. ಆದರೆ ಒಂದು ಷರತ್ತು. ನನಗೆ ಸಂಗ್ರಹವಾಗಬೇಕಿರುವ ಮಹಾತ್ಮಾ ಗಾಂಧೀಜಿ ಪೋಟೋಗಳು ಒಂದು ಸಾವಿರ ರೂಪಾಯಿ ನೋಟುಗಳ ಮೇಲೆ ಇರಬೇಕು.’ ಇದು ಆಘಾತಕಾರಿ ಎನಿಸಿದರೂ ಇಂದಿನ ಅತ್ಯಂತ ಕಟು ಸತ್ಯವನ್ನು ಬಿಂಬಿಸುತ್ತದೆ.
ಭಾರತದ ಚುನಾವಣಾ ವ್ಯವಸ್ಥೆಯಲ್ಲಿ ಹಣದ ಬಲ ವಹಿಸುವ ಪಾತ್ರ ಎಲ್ಲರಿಗೂ ತಿಳಿದಿದೆ. ಟಿ. ಎನ್.ಶೇಷನ್ ಅವರು ಭಾರತದ ಮುಖ್ಯ ಚುನಾವಣಾಧಿಕಾರಿ ಆಗಿದ್ದಾಗ ಈ ಕುರಿತು ಕೈಗೊಂಡ ಕೆಲವು ಕಠಿನ ಕ್ರಮಗಳು ಚುನಾವಣಾ ಸುಧಾರಣೆಯ ಪಥದಲ್ಲಿ ಮಹತ್ವ ಪಡೆದುಕೊಂಡಿದ್ದವು. ಆದರೆ, ದಿನೇ ದಿನೇ ಚುನಾವಣೆಗಳಲ್ಲಿ ಹಣದ ಪಾತ್ರ ಹೆಚ್ಚಾಗುತ್ತಿದೆ ಎಂಬುದು ಎಲ್ಲರ ಅನುಭವ. ನಗರ ಪಾಲಿಕೆ ಚುನಾವಣೆಗಳಲ್ಲಿಯೂ ಹಲವಾರು ಕೋಟಿ ರೂ. ಖರ್ಚು ಮಾಡುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಒಂದೊಮ್ಮೆ ಮಹಾತ್ಮ ಗಾಂಧೀಜಿ, ಅಬ್ದುಲ್ ಕಲಾಂ ಅಥವಾ ಅಣ್ಣಾ ಹಜಾರೆಯಂಥವರು ನಿಲ್ಲಲು ಬಯಸಿದರೆ ಅವರ ಬಳಿ ಹಣವಿಲ್ಲವೆಂಬ ಅಂಶವೇ ದೊಡ್ಡ ತೊಡಕೆಂದು ಇಂದಿನ ರಾಜಕಾರಣದಲ್ಲಿ ಆಗಾಗ ಕೇಳಿ ಬರುವ ಮಾತು.
ಅಕ್ಷರದ ಜಾಗದಲ್ಲಿ ಅಸಹನೆ ಬಿತ್ತುವುದು ನಿಜವಾದ ಕೇಡುಗಾಲ ಮಹಾದೇವ ಅವರೇ
– ರಾಕೇಶ್ ಶೆಟ್ಟಿ
ಹಿರಿಯರಾದ ದೇವನೂರು ಮಹಾದೇವ ಅವರಿಗೆ ನಮಸ್ಕಾರಗಳು,
ನೀವು ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಹಿಂದಿರುಗಿಸಿ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಓದಿದೆ.ಇಷ್ಟು ದಿವಸ ಪ್ರಶಸ್ತಿಗಳನ್ನು ಹಿಂತಿರುಗಿಸಿದವರು ಬರೆದಂತೆಯೇ ಯಾವುದೇ “ನಿರ್ದಿಷ್ಟ ಕಾರಣ”ಗಳಿಲ್ಲದೇ ವಿರೋಧಿಸಲೇಬೇಕು ಎಂಬ ಹಟಕ್ಕೆ ಬಿದ್ದ ಪತ್ರಗಳ ಸಾಲಿಗೇ ನಿಮ್ಮ ಪತ್ರವೂ ಸೇರುತ್ತದೆ.ಪತ್ರದ ಸಾರಾಂಶ,ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ಭಾರತದಲ್ಲಿ ಭೂಮಿ ಬಾಯಿ ತೆರೆದು ಕುಳಿತಿದೆ ಎಂಬಂತಿದೆ.ಅದೇನೋ ಇದ್ದಕ್ಕಿದ್ದಂತೆ ದೇಶದಲ್ಲಿ ಅಸಹಿಷ್ಣುತೆಯ ವಾತವರಣ ಮೂಡಿದೆ ಎನ್ನುತ್ತೀರಿ.ಆದರೆ,ಅದನ್ನು ಸ್ಪಷ್ಟವಾಗಿ ವಿವರಿಸಿಲ್ಲ.ನಿಜವಾಗಿಯೂ ಅಂತದ್ದೊಂದು ವಾತವರಣ ಇದ್ದಿದ್ದೇ ಆದರೆ ನಿಮಗೇಕೆ ವಿವರಿಸಲಾಗಿಲ್ಲ?
ದಾದ್ರಿ ಘಟನೆ,ಕಲ್ಬುರ್ಗಿ ಹತ್ಯೆಯಂತ ಘಟನೆಗಳು ಆಯಾ ರಾಜ್ಯದ ಕಾನೂನು ಸುವ್ಯವಸ್ಥೆಯ ಹೊತ್ತವರ ಹೊಣೆಯೆಂದು ಕೇಂದ್ರ ಸರ್ಕಾರ ಹೇಳುವುದರಲ್ಲಿ ತಪ್ಪೇನಿದೆ? ಒಂದು ವೇಳೆ ರಾಜ್ಯ ಸರ್ಕಾರಗಳೇ ತಮ್ಮಿಂದ ಕಾನೂನು-ಸುವ್ಯವಸ್ಥೆ ನಿರ್ವಹಿಸಲಾಗುತ್ತಿಲ್ಲ ಎಂದು ಹೇಳಿಕೊಂಡ ಮೇಲೂ ಕೇಂದ್ರ ಕೈ ತೊಳೆದುಕೊಂಡಿದ್ದರೇ,ನೀವು ಹೇಳಿದಂತೆ “ದುರಂತ”ವಾಗುತಿತ್ತು.ಆದರೇ,ಸಂವಿಧಾನ ಬದ್ಧವಾಗಿ ಹೇಗೆ ನಡೆದುಕೊಳ್ಳಬೇಕಿತ್ತೋ ಅದೇ ರೀತಿಯೇ ಕೇಂದ್ರ ನಡೆದುಕೊಂಡಿದೆಯಲ್ಲವೇ ಮಹಾದೇವರೇ? ಹಾಗಿದ್ದ ಮೇಲೆ ನಿಮ್ಮ ಆಕ್ಷೇಪಕ್ಕೇನಾದರೂ ತರ್ಕವುಂಟೇ?ನಿಮ್ಮ ಪ್ರಕಾರ ಕೇಂದ್ರವೇನು ಮಾಡಬೇಕಿತ್ತು? ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನೇರಿ ಕಾನೂನು-ಸುವ್ಯವಸ್ಥೆಯನ್ನು ಪಾಲಿಸಬೇಕಿತ್ತೇ? ಸಂವಿಧಾನವೇ ಧರ್ಮಗ್ರಂಥವೆನ್ನುವ ಪ್ರಗತಿಪರರಿಗೆ ಪ್ರಸ್ತುತ ಕೇಂದ್ರ ಸರ್ಕಾರವೂ ಅದೇ ಸಂವಿಧಾನದ ಅನುಸಾರವೇ ಕಾರ್ಯ ನಿರ್ವಹಿಸುತ್ತಿದೆಯೆಂಬುದು ಮರೆತು ಹೋಗಿದೆಯೇ?
ಪ್ರಶಸ್ತಿ ಹಿಂತಿರುಗಿಸುವಿಕೆಗೆ ನೀವು ನೀಡಿರುವ ಬಹುಮುಖ್ಯವಾದ ಕಾರಣವೆಂದರೆ,ಪ್ರಶಸ್ತಿ ಹಿಂತಿರುಗಿಸುತ್ತಿರುವವರ ನಡೆಯನ್ನು ಕೆಲ ಲೇಖಕ-ಕಲಾವಿದರು ವಿರೋಧಿಸಿದ್ದು.ಆಳುವ ಸರ್ಕಾರದ ಪರ ಅವರು ನಿಂತದ್ದು ತಮಗೇ ಕೇಡಿನ ಲಕ್ಷಣದಂತೆ ಕಾಣಿಸಿತು ಎಂದಿದ್ದೀರಿ.ಅಂದರೇ,ನಿಮ್ಮ ಪ್ರಕಾರ ಯಾವುದೇ ಲೇಖಕರು-ಕಲಾವಿದರು ಅವರ ಐಡಿಯಾಲಜಿಗೆ ಹೊಂದಿಕೊಳ್ಳುವ ಪಕ್ಷ ಅಧಿಕಾರಕ್ಕೇರಿ ಸರ್ಕಾರ ರಚಿಸಿದ ಮೇಲೆ ಅದನ್ನು ಬೆಂಬಲಿಸುವುದು ಪ್ರಜಾಪ್ರಭುತ್ವದಲ್ಲಿ ಕೇಡಿನ ಲಕ್ಷಣವೆಂದಾಗುತ್ತದೆಯಲ್ಲವೇ?
ಇದೇ ಲಾಜಿಕ್ ನಮ್ಮ ರಾಜ್ಯದಲ್ಲಿಯೂ ಅನ್ವಯವಾದರೇ,ಈ ರಾಜ್ಯದ ಪ್ರಗತಿಪರರು-ಬುದ್ಧಿಜೀವಿಗಳು ನಿಂತಿರುವುದು ಸರ್ಕಾರದ ಪರವಾಗಿಯೋ? ಅಥವ ವಿರುದ್ಧವಾಗಿಯೋ?
ಸುದ್ಧಿಮಾಧ್ಯಮ: ದೇಶ ಬೆನ್ನಿಗೆ ಕಟ್ಟಿಕೊಂಡ ಕೆಂಡ
– ಪ್ರೇಮಶೇಖರ
26/11ರ ಮುಂಬೈ ಧಾಳಿಗಳ ರೂವಾರಿಯೊಬ್ಬ ಕರಾಚಿಯಿಂದ ಹೊರಡುತ್ತಿದ್ದ ಅಜ್ಮಲ್ ಕಸಾಬ್ ಸೇರಿದಂತೆ ಹತ್ತು ಭಯೋತ್ಪಾದಕರಿಗೆ ನೀಡಿದನೆನ್ನಲಾದ ‘ಉಪದೇಶ’ ಹೀಗಿತ್ತು: “ತಾಜ್ ಹೋಟೆಲ್ ಆಕ್ರಮಿಸಿಕೊಂಡ ನಂತರ ಯಾವುದಾದರೊಂದು ಕೋಣೆ ಸೇರಿ ಅಲ್ಲಿರುವ ಟೀವಿ ಚಾಲೂ ಮಾಡಿ ಭಾರತೀಯ ನ್ಯೂಸ್ ಚಾನಲ್ ಒಂದನ್ನು ನೋಡಿ. ಭಾರತೀಯ ಭದ್ರತಾ ಪಡೆಗಳು ನಿಮ್ಮ ವಿರುದ್ಧ ಕೈಗೊಳ್ಳುತ್ತಿರುವ ತಂತ್ರಗಳ ಇಡೀ ವಿವರ ಅದರಲ್ಲಿ ನಿಮಗೆ ದೊರೆಯತೊಡಗುತ್ತದೆ. ಅದಕ್ಕನುಗುಣವಾಗಿ ನಿಮ್ಮ ಪ್ರತಿತಂತ್ರಗಳನ್ನು ನೀವು ರೂಪಿಸಿಕೊಳ್ಳಬಹುದು.” ನಮ್ಮ ಮಾಧ್ಯಮಗಳು ಅತ್ಯುತ್ಸಾಹದಿಂದ ಪ್ರಸಾರ ಮಾಡುತ್ತಿದ್ದ ವಿವರಗಳೇ ತಾಜ್ ಹೋಟೆಲ್ ಮೇಲೆ ಪಾಕ್ ಉಗ್ರರ ಹಿಡಿತ ದೀರ್ಘವಾಗಲು ಕಾರಣವಾಯಿತು ಎಂಬ ಕಟುವಾಸ್ತವದ ಹಿನ್ನೆಲೆಯಲ್ಲಿ ಆ ಪಾಕ್ ಭಯೋತ್ಪಾದಕ ನಮ್ಮ ಮಾಧ್ಯಮಗಳ ನಾಡಿಮಿಡಿತವನ್ನು ಅದೆಷ್ಟು ಚೆನ್ನಾಗಿ ಅರಿತಿದ್ದ ಎಂಬ ಕಹಿಸತ್ಯ ಎದೆಗೆ ನಾಟುತ್ತದೆ. ಈ ಪೀಠಿಕೆಯೊಂದಿಗೆ ಭಯೋತ್ಪಾದನೆಯ ವಿಷಯದಲ್ಲಿ ನಮ್ಮ ಮಾಧ್ಯಮಗಳು ಅನುಸರಿಸುವ ಕುನೀತಿಯ ಪರಿಚಯ ಮಾಧ್ಯಮಗಳ ಬಗೆಗಿನ ಲೇಖನದ ಮೂರನೆಯ ಹಾಗೂ ಅಂತಿಮ ಕಂತಿನ ವಸ್ತುವಿಷಯ. ನನ್ನ ಅವಲೋಕನವನ್ನು ಕಾಲು ಶತಮಾನದಷ್ಟು ದೀರ್ಘವಾದ ಕಾಶ್ಮೀರದಲ್ಲಿನ ಭಯೋತ್ಪಾದನೆಯೊಂದಿಗೆ ಪ್ರಾರಂಭಿಸುತ್ತೇನೆ.
ಹಿಂದೂ-ವಿರೋಧಿ ಮಾಧ್ಯಮ: ಸೃಷ್ಟಿ ಮತ್ತು ಸ್ಥಿತಿ
– ಪ್ರೇಮಶೇಖರ
ಪ್ರಕರಣ ೧: ಪ್ರಮುಖ ಕನ್ನಡ ದೈನಿಕವೊಂದರಲ್ಲಿ ಸೌದಿ ಅರೇಬಿಯಾದ ಬಗ್ಗೆ ಪರಿಚಯಾತ್ಮಕ ಲೇಖನವೊಂದು ಪ್ರಕಟವಾಗುತ್ತದೆ. ಅಚ್ಚರಿಯೆಂದರೆ ಮರುದಿನವೂ ಅದೇ ಲೇಖನ ಮತ್ತೆ ಕಾಣಿಸಿಕೊಳ್ಳುತ್ತದೆ! ಅದರ ಕೆಳಗೆ ಹೀಗೊಂದು ವಿವರಣೆ: “ನಿನ್ನೆಯ ದಿನ ಸೌದಿ ಅರೇಬಿಯಾವನ್ನು ಕುರಿತು ನೀಡಿದ ವಿವರಣೆಯಲ್ಲಿ ಮಹಮದ್ ಪೈಗಂಬರ್ ಮೆಕ್ಕಾದಿಂದ ಮದೀನಾಕ್ಕೆ ಕ್ರಿ.ಶ. ೬೨೨ರಲ್ಲಿ ಓಡಿಹೋದರು. ಅಂದಿನಿಂದ ಹಿಜ್ರಾ ಶಕೆ ಪ್ರಾರಂಭವಾಗುತ್ತದೆ ಎಂದು ಪ್ರಕಟವಾಗಿತ್ತು.ಇದರಿಂದ ಅನೇಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ತಿಳಿದುಬಂದಿದೆ. ಅದಕ್ಕಾಗಿ ಪತ್ರಿಕೆ ಕ್ಷಮೆ ಯಾಚಿಸುತ್ತದೆ ಹಾಗೂ ಇಂದು ಅದೇ ಲೇಖನವನ್ನು ತಿದ್ದಿ ಪ್ರಕಟಿಸಲಾಗಿದೆ.” ಮರುಪ್ರಕಟವಾಗಿದ್ದ ಲೇಖನದಲ್ಲಿ ಪೈಗಂಬರರು ಮದೀನಾಗೆ ಓಡಿಹೋದ ಬಗೆಗಿನ ಒಂದು ಸಾಲು ಮಾಯವಾಗಿರುತ್ತದೆ.
ಪ್ರಕರಣ ೨: ಕೆಲದಿನಗಳ ನಂತರ ಅದೇ ಪತ್ರಿಕೆಯಲ್ಲಿ ಸ್ವಾಮಿ ವಿವೇಕಾನಂದರ ಬಗ್ಗೆ ಲೇಖನವೊಂದು ಪ್ರಕಟವಾಗುತ್ತದೆ.ವಿವೇಕಾನಂದರ ದೈಹಿಕ ಸಮಸ್ಯೆಗಳು,ಬಲಹೀನತೆಗಳ ಬಗ್ಗೆ ಅದರಲ್ಲಿನ ವಿಷಯಗಳಾವುವೂ ಹೊಸದಾಗಿರುವುದಿಲ್ಲ. ಅವೆಲ್ಲವೂ ಕೊಲ್ಕತಾದ ರಾಮಕೃಷ್ಣ ಮಿಶನ್ ಮತ್ತು ಅಲ್ಮೋರಾದ ಅದ್ವೈತಾಶ್ರಮಗಳ ಪ್ರಕಟಣೆಗಳಲ್ಲೇ ಇವೆ.ಆದರೆ ಲೇಖನದ ಭಾಷೆ, ಕೆಲ ಪದಗಳು ಅಕ್ಷೇಪಾರ್ಹವಷ್ಟೇ ಅಲ್ಲ, ಪತ್ರಿಕೆಯ ಘನತೆಗೂ ಶೋಭೆ ತರುವಂತಿರುವುದಿಲ್ಲ.ಇದರಿಂದಾಗಿ ಹಲವರ ಭಾವನೆಗಳಿಗೆ ಧಕ್ಕೆಯಾಗುತ್ತದೆ.ಅದು ರಾಜ್ಯದ ವಿವಿಧೆಡೆ ಸಾರ್ವಜನಿಕವಾಗಿಯೂ ವ್ಯಕ್ತವಾಗುತ್ತದೆ.ಅದಕ್ಕೆ ಪತ್ರಿಕೆಯ ಪ್ರತಿಕ್ರಿಯೆ? ಒಂದಕ್ಷರದ ಕ್ಷಮಾಯಾಚನೆಯೂ ಇಲ್ಲ!
ಈಗ ಎಲ್ಲರ ಚಿತ್ತ ಬಿಹಾರದತ್ತ…..!!!
– ಕೆ.ಎಸ್ ರಾಘವೇಂದ್ರ ನಾವಡ
ಬಿಹಾರದಲ್ಲಿ ಮತ್ತೊಮ್ಮೆ ನರೇ೦ದ್ರ ಮೋದಿಯವರ ಚರಿಶ್ಮಾ ಸಾಬೀತಾಗಲು ಆಖಾಡ ಸಿಧ್ಧವಾಗಿದೆ! ತನ್ನ ೧೮ ವರ್ಷಗಳ ಮಿತ್ರಪಕ್ಷವೀಗ ಬಿಹಾರದಲ್ಲಿ ಭಾ.ಜ.ಪಾಕ್ಕೆ ಎದುರಾಗಿ ಚುನಾವಣಾ ಆಖಾಡದಲ್ಲಿ ತನ್ನೆಲ್ಲ ವಿರೋಧಿಗಳೊ೦ದಿಗೆ ಕೈ ಜೋಡಿಸಿಕೊ೦ಡು ಮೈಕೊಡವಿ ಮೇಲೆದ್ದಿದೆ! ಎ೦ದಿಗೂ ಮೈತ್ರಿ ಸಾಧ್ಯವೇ ಇಲ್ಲವೇನೋ ಎ೦ಬ೦ತೆ ಬಧ್ಧ ಎದುರಾಳಿಗಳಾಗಿದ್ದ ಲಾಲು-ನಿತೀಶ್ ಒ೦ದಾಗಿದ್ದಾರೆ. ರಾಜಕೀಯದಲ್ಲಿ ಶಾಶ್ವತವಾಗಿ ಯಾರೂ ಮಿತ್ರರಲ್ಲ ಹಾಗೆಯೇ ಶತ್ರುಗಳೂ ಅಲ್ಲ ! ಎ೦ಬುದು ಸಾಬೀತಾಗಿದೆ! ಜೊತೆಗೆ ಕಾ೦ಗ್ರೆಸ್, ಜೆ.ಎಮ್. ಸೊರೇನ್ ಎಲ್ಲಾ ನಿತೀಶ್ರೊ೦ದಿಗೆ ಕೈ ಜೋಡಿಸಿದ್ದಾರೆ! ಇತ್ತ ಭಾ.ಜ.ಪಾದೊ೦ದಿಗೆ ಮಾ೦ಜಿ, ರಾಮ್ ವಿಲಾಸ್ ಪಾಸ್ವಾನ್ ಜೊತೆಯಾಗಿದ್ದಾರೆ. ಒಟ್ಟಾರೆ ರ೦ಗ ಸಿಧ್ಧವಾಗಿದೆ.ನಾಟಕ ಇನ್ನಷ್ಟೇ ಶುರುವಾಗಬೇಕಿದೆ!
ಕಾ೦ಗ್ರೆಸ್ ಗೆ ಏಕಾ೦ಗಿಯಾಗಿ ಬಿಹಾರದಲ್ಲಿ ಸ್ಪರ್ಧಿಸುವ ತಾಕತ್ತೇ ಇಲ್ಲ. ಬಿ.ಜೆ.ಪಿಗಾದರೂ ಸ್ವಲ್ಪವಾದರೂ ತಾಕತ್ತಿದೆಯೇನೋ ಎನ್ನಬಹುದು! ಬೇರಾವ ಪಕ್ಷಗಳಿಗೂ ಅಲ್ಲಿ ಸ್ವ೦ತ ನೆಲೆ ಇಲ್ಲ! ಪಕ್ಕದಲ್ಲಿ ಯಾರದರೊಬ್ಬರು ಇರಲೇಬೇಕು. ಹೆಚ್ಚಾಗಿ ನರೇ೦ದ್ರ ಮೋದಿ ಬ೦ದ ನ೦ತರ ವಿರೋಧ ಪಕ್ಷಗಳೆಲ್ಲಾ ಮಖಾಡೆ ಮಲಗಿ ಬಿಟ್ಟಿವೆ! ಸ೦ಸತ್ ಅಧಿವೇಶನ ನಡೆಯದ೦ತೆ ಮಾಡುವಲ್ಲಿ ಮಾತ್ರವೇ ವಿರೋಧ ಪಕ್ಷಗಳ ತಾಕತ್ತು ಸಾಬೀತಾಗಿದ್ದು ಬಿಟ್ಟರೆ, ಕಾ೦ಗ್ರೆಸ್ ನಲ್ಲೀಗ ಮೌನ! ರಾಹುಲ್ ಹಿ೦ದೆ ಸರಿದಿದ್ದಾರೆ. ಮತ್ತೊಮ್ಮೆ ಸೋನಿಯಾರಿಗೇ ದಾರಿ ಮಾಡಿಕೊಟ್ಟಿದ್ದಾರೆ! ರಾಹುಲ್ ಗಾ೦ಧೀಯದ್ದೀಗ ಮೌನ ಕ್ರಾ೦ತಿ! ಬಿಹಾರದಲ್ಲಿ ಮಹಾ ಮೈತ್ರಿಕೂಟದಿ೦ದ ಸಮಾಜವಾದಿ ಪಕ್ಷ ಹೊರಗೆ ಬ೦ದು ಸ್ವತ೦ತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದು ಆ ಮಟ್ಟಿಗಾದರೂ ವಿರೋಧಿಗಳ ಬಲವನ್ನು ಕು೦ಠಿತಗೊಳಿಸಿದ್ದು ಸತ್ಯವೂ ಹೌದು! ಹಿ೦ದೆ ಜಾರ್ಖ೦ಡ್ ನಲ್ಲಿನ ತನ್ನ ಸರಕಾರವನ್ನು ಬೀಳಿಸಿದ್ದ ಜೆ.ಎಮ್.ಎಮ್ ಇಲ್ಲಿ ಭಾ.ಜ.ಪಾವನ್ನು ಹೆಡೆಮುರಿ ಕಟ್ಟಲು ನಿತೀಶ್ ರೊ೦ದಿಗೆ ಕೈಗೂಡಿಸಿದೆ. ಒಟ್ಟಾರೆ ಅಲ್ಲೀಗ ಎರಡು ಬಣಗಳು!. ಒ೦ದು ನಿತೀಶ್ –ಲಾಲೂ ಮೈತ್ರಿಕೂಟವಾದರೆ ಮತ್ತೊ೦ದೆಡೆ ಭಾ,ಜಪಾ ಮೈತ್ರಿಕೂಟ.
ಮತ್ತಷ್ಟು ಓದು 
ಕಂಡವರ ಮಕ್ಕಳನ್ನು ಕಾಡಿಗಟ್ಟುತ್ತಿರುವವರು ಯಾರು?
– ವಿಘ್ನೇಶ್, ಯಲ್ಲಾಪುರ
ಮೊನ್ನೆ ಮೊನ್ನೆ ನಡೆದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯನ್ನು ನೋಡಿ ಕೆಲವು ಪ್ರಗತಿಪರರು “ಯೋಧ”ರನ್ನು ಕುರಿತು,ಬಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಾರೆ ಎಂದು ಬೊಬ್ಬೆ ಹಾಕುತಿದ್ದರು.ಇದು 24 – 11- 2008ರಂದು ಕನ್ನಡ ಪ್ರಭದಲ್ಲಿ ಪ್ರಕಟವಾಗಿದ್ದ ಲೇಖನ.ಈ ಲೇಖನವನ್ನೊಮ್ಮೆ ಓದಿ.ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿದವರು ಯಾರು ಎಂಬುದು ಅರ್ಥವಾಗಬಹುದು
ಅವಳು ಪಾರ್ವತಿ!
ಕೊಪ್ಪ ತಾಲೂಕಿನ ಸೂರ್ಯದೇವಸ್ಥಾನದ ಹುಡುಗಿ. ಕಾಲೇಜು ವಿದ್ಯಾಭ್ಯಾಸಕ್ಕೆಂದು ಹೋಗಿ ಸೇರಿದ್ದು ಶಿವಮೊಗ್ಗೆಯನ್ನು. ತನ್ನ ಕುಟುಂಬದಲ್ಲಿದ್ದ ಬಡತನ ಅವಳಲ್ಲಿ ಸಾಮಾಜಿಕ ಕಳಕಳಿಯನ್ನು ಹುಟ್ಟುಹಾಕಿತ್ತು; ಶಿವಮೊಗ್ಗದಲ್ಲಿದ್ದಷ್ಟು ವರ್ಷವೂ ಒಂದಲ್ಲ ಒಂದು ಸಾಮಾಜಿಕ ವಿಷಯದ ಕುರಿತು ಹೋರಾಟ ಮಾಡಲು ಪ್ರೇರೇಪಿಸಿತ್ತು. ಅದಕ್ಕಾಗಿ ವಿವಿಧ ಸಂಘಟನೆಗಳನ್ನು ಸೇರಿದಳು. ‘ಮಹಿಳಾ ಜಾಗೃತಿ’ಯ ಕಾರ್ಯಕರ್ತೆಯಾಗಿ ಹಗಲಿರುಳು ದುಡಿದಳು, ನಾಯಕಿಯಾಗಿ ಬೆಳೆದಳು. ಶಿವಮೊಗ್ಗದ ಕೆಲ ಉಪನ್ಯಾಸಕರು ದೂರದ ಆಂಧ್ರದಿಂದ ಗದ್ದರ್ನನ್ನು ಕರೆಸಿ ನಡೆಸಿದ ಸಭೆಗಳಲ್ಲಿ ನಡುರಾತ್ರಿಯವರೆಗೂ ಭಾಗವಹಿಸಿದಳು. ರೈತ ಹೋರಾಟದಿಂದ ಹಿಡಿದು ನದೀಮೂಲ ರಕ್ಷಣೆಯಂತಹ ವಿಷಯದವರೆಗೆ, ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆಯಿಂದ ಹಿಡಿದು ಕೊಳಚೆ ನಿವಾಸಿಗಳ ದನಿಯಾಗುವವರೆಗೆ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಳು. ಹೀಗೆ ಅತ್ಯಂತ ಕ್ರಿಯಾಶೀಲಳಾಗಿದ್ದ ಹುಡುಗಿ, ಇದ್ದಕ್ಕಿದ್ದಂತೆ ಒಂದು ದಿನ ಕಣ್ಮರೆಯಾದಳು. ನಾಲ್ಕೈದು ವರ್ಷ ಪಾರ್ವತಿ ಎಲ್ಲಿದ್ದಾಳೆ ಎಂಬುದೇ ನಾಗರಿಕ ಸಮಾಜಕ್ಕೆ ತಿಳಿದಿರಲಿಲ್ಲ. ಸಮಾಜದ ಕುರಿತು ಅಪಾರ ಕಳಕಳಿಯನ್ನಿಟ್ಟುಕೊಂಡು ಹಗಲಿರುಳೂ ಸೈಕಲ್ ತುಳಿಯುತ್ತಿದ್ದ ಹುಡುಗಿ ಹೀಗೆ ಇದ್ದಕ್ಕಿದಂತೆ ಕಣ್ಮರೆಯಾಗಿದ್ದು ಏಕೆ? ಎಲ್ಲಿ ಹೋದಳು?
ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, 2003ರ ನವೆಂಬರ್ 17ನೇ ತಾರೀಖು. ಕಾರ್ಕಳ ತಾಲೂಕಿನ ಈದು ಬಳಿಯ ಬೊಲ್ಲೊಟ್ಟುವಿನ ಮನೆಯೊಂದರಲ್ಲಿ ರಾತ್ರಿ ಸಿಡಿದ ಪೋಲೀಸರ ಗುಂಡಿನ ಬೆಳಕಲ್ಲಿ ಪಾರ್ವತಿ ಗೋಚರಿಸಿದಳು. ಹರೆಯದ ಕನಸುಗಳೆಲ್ಲ ಅರಳಿ,ಬದುಕಿನ ಗಾಂಭೀರ್ಯದತ್ತ ಹೊರಳಬೇಕಾದ ವಯಸ್ಸಿನಲ್ಲಿ ಪಾರ್ವತಿ ಹೆಣವಾಗಿ ಬಿದ್ದಿದ್ದಳು! ಅವಳ ಜೊತೆಗೇ ಮಸಣ ಸೇರಿದ ಹಾಜಿಮಾಳ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ! ಮತ್ತಷ್ಟು ಓದು 
“ವಿಧ್ವಂಸಕತೆ”ಯೆಂಬುದು ಪ್ರಗತಿಪರರ ಹುಟ್ಟುಗುಣವೇ?
– ರಾಕೇಶ್ ಶೆಟ್ಟಿ
ಎಲ್ಲಾ ಚುನಾವಣಾ ಸಮೀಕ್ಷೆಗಳನ್ನು ತಲೆಕೆಳಗು ಮಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿಯೇ ಬಹುಮತ ಪಡೆದಾಗ,ದಶಕಗಳಿಂದ ನಡೆಸಿಕೊಂಡು ಬರಲಾಗಿದ್ದ “ಮೋದಿ ವಿರೋಧಿ ಕ್ಯಾಂಪೇನ್”ನ ಶವ ಪೆಟ್ಟಿಗೆಗೆ ಅಂತಿಮ ಮೊಳೆ ಬಿದ್ದಿತ್ತು.ಆದರೆ ಅತೃಪ್ತ ಆತ್ಮಗಳೇನು ಸುಮ್ಮನಿರುವ ಪೈಕಿಯೇ? ಅವುಗಳು ಶವಪೆಟ್ಟಿಗೆಯೊಳಗಿಂದಲೂ ಸದ್ದು ಮಾಡುತಿದ್ದವು.ಬಿಜೆಪಿಯ ವೋಟ್ ಶೇರ್ ಇರುವುದು ೩೧% ಮಾತ್ರ,ಇನ್ನು ೬೯% ಎಲ್ಲಿ ಅಂತ.ಪ್ರಗತಿಪರರ ಈ ಲೆಕ್ಕಾಚಾರವನ್ನು,ಕಷ್ಟಪಟ್ಟು ೩೫ ಅಂಕ ಪಡೆದು ಪಾಸ್ ಆದ ವಿದ್ಯಾರ್ಥಿಯೊಬ್ಬನ ಮುಂದೆ ನಿಂತು, “ನೋಡಪ್ಪಾ ನೀನು ತೆಗೆದಿರುವುದು ೩೫ ಮಾತ್ರ,ಇನ್ನು ೬೫ ತೆಗೆದಿಲ್ಲವಾದ್ದರಿಂದ ನೀನು ಪಾಸಾದರೂ,ಫೇಲ್ ಆದಂತೆ ಲೆಕ್ಕ” ಹೇಳಿದರೆ ಕೆನ್ನೆಯೂದುವುದು ಖಚಿತ.ಮೋದಿ ಸರ್ಕಾರದ ವಿರುದ್ಧ ಹೀಗೆ ಶುರುವಾದ ನರಳಾಟ ಮುಂದುವರೆಯುತ್ತಲೇ ಇದೆ.
Of course ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನ ಧ್ವನಿಗಳಿಗೆ ಮನ್ನಣೇ ನೀಡಲೇಬೇಕು.ಕೇಂದ್ರ ಸರ್ಕಾರವನ್ನು ವಿರೋಧಿಸಲೇ ಬಾರದೂ ಅಂತಲೂ ಏನಿಲ್ಲ.ಟೀಕೆ-ಟಿಪ್ಪಣಿಗಳಿರಲೇಬೇಕು.ಆದರೆ ಅವು ಸಕಾರಾತ್ಮಕವಾಗಿದ್ದರೆ ಸಮಾಜದ ಆರೋಗ್ಯಕ್ಕೂ ಒಳ್ಳೆಯದು.ಆದರೆ ನಮ್ಮ ಪ್ರಗತಿಪರರು ತಮ್ಮ “ಪುರಾತನ ಪದ್ಧತಿ”ಯಾದ ನಕಾರಾತ್ಮಕ ಟೀಕಾ ಶೈಲಿಯನ್ನೇ ಮುಂದುವರೆಸಿದ್ದಾರೆ.ಪುರಾತನ ಪದ್ಧತಿ ಎನ್ನಲು ಕಾರಣವಿದೆ.
ಮದರಾಸಿನ ಭಾಷಣವೊಂದರಲ್ಲಿ ಸ್ವಾಮಿ ವಿವೇಕಾನಂದರು,ಅಂದಿನ ಕಾಲದ ಸಮಾಜ ಸುಧಾರಕರ ಕುರಿತು “ಅವರದು ಧ್ವಂಸ ಮಾರ್ಗ.ನನ್ನದು ನಿರ್ಮಾಣ ಮಾರ್ಗ“ ಎಂದಿದ್ದರು.
ಬಡವರಿರಬೇಕು, ಮಾತ್ರವಲ್ಲ, ಅವರು ಹೆಚ್ಚಬೇಕು!
– ಡಾ. ಶ್ರೀಪಾದ ಭಟ್, ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಮೊದಲು ಒಂದು ಸಂಗತಿಯನ್ನು ಸ್ಪಷ್ಟಮಾಡಿಕೊಳ್ಳಬೇಕು: ಜನತಂತ್ರ ವ್ಯವಸ್ಥೆಯಲ್ಲಿ ಸರ್ಕಾರಗಳು ಜನರ ಕಲ್ಯಾಣಕ್ಕಾಗಿವೆಯೇ ವಿನಾ ಲಾಭ ಮಾಡುವುದಕ್ಕಲ್ಲ. ಆದರೆ ಸಮಾಜಕ್ಕೆ ಲಾಭವಾಗುವಂತೆ ಮಾಡುವುದು ಅವುಗಳ ಕರ್ತವ್ಯ. ಅಂಥ ಲಾಭ ದೀರ್ಘಕಾಲಿಕವಾಗುವಂತೆ ಅದು ನೋಡಿಕೊಳ್ಳಬೇಕಾಗುತ್ತದೆ. ಸಾಧ್ಯವಾದಷ್ಟು ವರ್ಷ ಅಧಿಕಾರದಲ್ಲಿ ಇರುವ ಆಸೆಯಿಂದ ಚುನಾಯಿತ ಸರ್ಕಾರಗಳು ಜನರನ್ನು ಓಲೈಸುವ ಅಗ್ಗದ ಜನಪ್ರಿಯ ಯೋಜನೆಗಳನ್ನು ಕೈಗೊಳ್ಳುವುದರಲ್ಲೇ ಆಸಕ್ತಿ ತೋರಿಸುತ್ತವೆ. ಇಂಥ ಯೋಜನೆಗಳ ಉದ್ದೇಶವನ್ನು ಯಾರೂ ಪ್ರಶ್ನಿಸುವಂತಿರುವುದಿಲ್ಲ, ಆದರೆ ಅವುಗಳ ಜಾರಿ, ಅವು ಉಂಟುಮಾಡುವ ದೀರ್ಘಕಾಲಿಕ ಪರಿಣಾಮ ಮೊದಲಾದ ಸಂಗತಿಗಳು ಚಿಂತನಾರ್ಹ.
ಹಿಂದೆ ವಯಸ್ಕ ಶಿಕ್ಷಣ ಎಂಬ ಸಾಕ್ಷರ ಯೋಜನೆಯೊಂದಿತ್ತು. ಎಲ್ಲರನ್ನೂ ಸಾಕ್ಷರರನ್ನಾಗಿಸಲು ಸಾವಿರಾರು ಕೋಟಿ ರೂ.ಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುರಿದವು. ಈಗಾಗಲೇ ಮಧ್ಯವಯಸ್ಸು ದಾಟಿದ, ಆದರೆ ಸಾಕ್ಷರರಲ್ಲದ ಜನಸಂಖ್ಯೆಯನ್ನು ಗುರುತಿಸಿ, ಸರಾಸರಿ ಆಯುರ್ಮಾನವನ್ನು ಎಣಿಸಿ ಅದರಂತೆ ಯೋಜನೆ ರೂಪಿಸಲಾಯಿತು. ಹೊಸದಾಗಿ ಜನಿಸುವವರಿಗೆ ಕಡ್ಡಾಯ ಶಿಕ್ಷಣದ ಮೂಲಕ ಸಾಕ್ಷರರನ್ನಾಗಿಸುವ ಯೋಜನೆ ಇದ್ದುದರಿಂದ ಅನಕ್ಷರಸ್ಥರು ಹುಟ್ಟುವ ಸಾಧ್ಯತೆ ಇರಲಿಲ್ಲ ಹಾಗೂ ದೇಶದ ಜನರ ಸರಾಸರಿ ಆಯಸ್ಸು 56-60 ಇದ್ದುದರಿಂದ ಈ ಯೋಜನೆಗೆ ನಿಗದಿತ ಅವಧಿ ಹಾಕಿಕೊಳ್ಳಲಾಯಿತು. 10ನೇ ಯೋಜನೆ ಮುಕ್ತಾಯದ ವೇಳೆಗೆ ನಿಗದಿತ ಗುರಿ ತಲಪುವಂತೆ ಕಾಲಮಿತಿ ಹಾಕಿಕೊಂಡ ಈ ಯೋಜನೆ ಈಗ ತನ್ನ ಸ್ವರೂಪ ಬದಲಿಸಿಕೊಂಡು ಔಪಚಾರಿಕ ಶಿಕ್ಷಣ ದೊರಕದವರಿಗೆ ಕೌಶಲ್ಯ ಕಲಿಸತೊಡಗಿ, ಸಾಕ್ಷರರಿಗೆ ಸ್ವಾವಲಂಬನೆ ಮಾರ್ಗ ತೋರಿಸುತ್ತಿದೆ. ಇದು ನಿಜಕ್ಕೂ ಸ್ತುತ್ಯರ್ಹವಾದುದು. ಹೀಗೆ ಸದುದ್ದೇಶದ ಯೋಜನೆಯೊಂದು ಬೆಳವಣಿಗೆ ಕಾಣಬೇಕು; ಸಮಾಜವನ್ನು ಸ್ವಾಸ್ಥ್ಯದತ್ತ ಕೊಂಡೊಯ್ಯಬೇಕು. ಸರ್ಕಾರಗಳ ಬಹಳಷ್ಟು ಯೋಜನೆಗಳಲ್ಲಿ ಇಂಥ ಬೆಳವಣಿಗೆಯೇ ಇರುವುದಿಲ್ಲ.
ಮತ್ತಷ್ಟು ಓದು 




