ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

9
ಜೂನ್

ಯೋಗದಿನಕ್ಕಾಗಿ ಮೋದಿ ಸರಕಾರದ ವಿಶೇಷ ಶವಾಸನ

– ರೋಹಿತ್ ಚಕ್ರತೀರ್ಥ

Yoga Dayನಮ್ಮ ದೇಶ ಜಾತ್ಯತೀತ ದೇಶ. ಆದರೆ ಹೆಜ್ಜೆಹೆಜ್ಜೆಗೂ ನಿಮಗಿಲ್ಲಿ ನಿಮ್ಮ ಜಾತಿಯ ನೆನಪು ಅಳಿಯದಂತೆ ನೋಡಿಕೊಳ್ಳಲಾಗುತ್ತದೆ. ಶಾಲೆಗೆ ಸೇರುವ ಮೊದಲ ದಿನ ಅಡ್ಮಿಷನ್ ಮಾಡಿಕೊಳ್ಳುವ ಮುಖ್ಯೋಪಾಧ್ಯಾಯರು ಹೆಸರು, ಅಪ್ಪನ ಹೆಸರು, ಜಾತಿ ಎಂದು ಬರೆದ ಅಪ್ಲಿಕೇಶನ್ನನ್ನು ಕಣ್ಣಮುಂದೆ ಹಿಡಿಯುತ್ತಾರೆ. ಪರೀಕ್ಷೆ ಬರೆಯಲು ಅರ್ಜಿ ತುಂಬುವಾಗ ಯಾವ ಜಾತಿ ಎಂದು ಕೆದಕಿ ವಿಚಾರಿಸಿಕೊಂಡು ನೀವು ಕಟ್ಟಬೇಕಾದ ಫೀಸು ನಿರ್ಧರಿಸುತ್ತಾರೆ. ಕೆಲಸಕ್ಕೆ ಹೋಗುವಾಗ ನಿಮ್ಮ ಪದವಿ ಸರ್ಟಿಫಿಕೇಟು ಯಾರಿಗೆ ಬೇಕು ಸ್ವಾಮಿ! ನಾಯಿಯೂ ಮೂಸುವುದಿಲ್ಲ ಅದನ್ನು! ನೀವು ಯಾವ ಜಾತಿ ಹೇಳಿ, ಅದರ ಆಧಾರದ ಮೇಲೆ ನಿಮಗೆ ಕೆಲಸ ಸಿಗುತ್ತದೋ ಇಲ್ಲವೋ ಎನ್ನುವುದು ನಿರ್ಧಾರಿತವಾಗುತ್ತದೆ. ಈ ದೇಶದಲ್ಲಿ ಶಿಕ್ಷಣ, ಉದ್ಯೋಗ, ಮದುವೆ, ಮುಂಜಿ, ಸಾವು, ತಿಥಿಗಳೆಲ್ಲ ನಿರ್ಧಾರವಾಗುವುದು ನಿಮ್ಮ ಜಾತಿಯ ಮೇಲೆ. ಯಾಕೆಂದರೆ ನಾವು ಬದುಕುತ್ತಿರುವುದು ಜಾತ್ಯತೀತ ದೇಶದಲ್ಲಿ ನೋಡಿ!

ಜೂನ್ 21ರಂದು ವಿಶ್ವ ಯೋಗದಿನ ಆಚರಿಸಬೇಕು ಎಂದು ನಮ್ಮ ದೇಶದ ಪ್ರಧಾನಿ ಕರೆಕೊಟ್ಟರು. ಅವರು ಅಲ್ಲಿ ಅದನ್ನು ಹೇಳಿ ಮುಗಿಸಿದ್ದರೋ ಇಲ್ಲವೋ ಇತ್ತ ಜಾತ್ಯತೀತ ಕೋಮುಸೌಹಾರ್ದ ಬಳಗದ ಬುಜೀಗಳಿಗೆ ಕಡಿತ ಶುರುವಾಯಿತು. ಈ ಮೋದಿ ಮಹಾ ಜಾತೀವಾದಿ. ಹಿಂದೂಗಳ ಯೋಗವನ್ನು ಸನಾತನಿಗಳಂತೆಯೇ ಜಾತಿಧರ್ಮಗಳಿಗೆ ಅತೀತರಾದ ಪ್ರಗತಿಪರ ಅಲ್ಪಸಂಖ್ಯಾಕ ಪಂಗಡಗಳಿಗೂ ವಿಸ್ತರಿಸುವ ಯೋಜನೆ ಹಾಕಿದ್ದಾರೆ ಎಂದು ಅವರಿಗೆ ಗುಮಾನಿ ಬಂತು. ಅಷ್ಟಲ್ಲದೆ ಜೂನ್ ಇಪ್ಪತ್ತೊಂದು – ಮುಸ್ಲಿಮರ ಹಬ್ಬ ಬೇರೆ. ಹೋಗಿಹೋಗಿ ಆ ದಿನ ಯೋಗ ಮಾಡುವುದೇ? ಸಾಧ್ಯವೇ ಇಲ್ಲ ಎಂದು ಈ ಅಲ್ಪಸಂಖ್ಯಾತ ಮತದ ನಾಯಕ ಓವೈಸಿ ಕೂಗಿದ. ಅವನ ಹಿಂದೆ ಅವನ ಇಡೀ ಗಾಂಪರ ಗುಂಪೇ ಎದ್ದುನಿಲ್ಲುವ ಸೂಚನೆ ಸಿಕ್ಕಿತು. ಕೇಂದ್ರ ಸರಕಾರ ಈಗ ನಿಜವಾಗಿಯೂ ಇಲ್ಲದ ಇಕ್ಕಳದಲ್ಲಿ ತಲೆ ಸಿಕ್ಕಿಸಿಕೊಂಡಿದ್ದೇನೆಂದು ಸುಳ್ಳೇ ಭಾವಿಸಿ ನಡುಗಿತು. ಯೋಗದಿನ ಮಾಡೋಣ, ಆದರೆ ಸೂರ್ಯನಮಸ್ಕಾರ ಕೈಬಿಡೋಣ ಎಂದು ಠರಾವು ಮಂಡಿಸಿತು. ಮೋದಿ ಹೇಳಿಕೊಟ್ಟಂತೆ ಅವರ ಸರಕಾರದ ಎಲ್ಲ ಮಂತ್ರಿಗಳೂ “ಸೂರ್ಯನಮಸ್ಕಾರ ಕಠಿಣ ಆಸನ. ಹಾಗಾಗಿ, ಅದನ್ನು ಬಿಟ್ಟು ಮಿಕ್ಕಿದ್ದನ್ನು ಮಾಡಲು ಚಿಂತನೆ ನಡೆಸಿದ್ದೇವೆ” ಎಂದು ತಿಪ್ಪೆ ಸಾರಿಸಿದರು.
ಮತ್ತಷ್ಟು ಓದು »

15
ಏಪ್ರಿಲ್

ನೆಹರೂ ಎಂಬ ಸ್ವಾರ್ಥ ರಾಜಕಾರಣಿ ಮತ್ತು ನೇತಾಜಿ ಎಂಬ ಸ್ವಾತಂತ್ರ್ಯ ಸೇನಾನಿ

– ರಾಕೇಶ್ ಶೆಟ್ಟಿ

Mission Netaji

“ಸುಭಾಷ್ ಸೈನ್ಯವೇನಾದರೂ ಭಾರತಕ್ಕೆ ಬಂದರೆ ನಾನು ಕತ್ತಿ ಹಿಡಿದು ಹೋರಾಡುತ್ತೇನೆ”. ಹೀಗೆ ಹೇಳಿದ ಕಠಾರಿವೀರ ಯಾವುದೋ ಬ್ರಿಟಿಷನಲ್ಲ.ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಶ್ರೀಮಾನ್ ಚಾಚಾ ನೆಹರೂ.ಅಷ್ಟಕ್ಕೂ ನೆಹರೂವನ್ನು “ಗಾಂಧಿ ಪಕ್ಷದೊಳಗಿನ ಬ್ರಿಟಿಷ್” ಎಂದು ನಾನು ಕರೆಯುತ್ತಿಲ್ಲ.ಖುದ್ದು ನೆಹರೂ ಅವರ ಅಮೇರಿಕಾದ ಗೆಳೆಯನಾಗಿದ್ದ ಜಾನ್ ಕೆನೆತ್ ಗಾಲ್ಬ್ರೈತ್ ಬಳಿ “ಭಾರತವನ್ನು ಆಳುವ ಕಡೆಯ ಬ್ರಿಟಿಷ್ ನಾನೇ” ಎಂದು ಹೇಳಿಕೊಂಡಿದ್ದರು. (ಈ ಜಾನ್ ಎಂತ ಮಹಾನುಭಾವನೆಂದರೆ, ಭಾರತವು ಬ್ರಿಟಿಷ್ ಆಳ್ವಿಕೆಗೆ ಒಳಪಟ್ಟಿದ್ದು ಪುಣ್ಯ ಎನ್ನುವಂತ ಮನಸ್ಥಿತಿಯವ)

ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಎನ್ನಲಿಕ್ಕೆ ಇನ್ನೊಂದು ಸತ್ಯವೂ ಈಗ ಬಹಿರಂಗವಾಗಿದೆ.ಭಾರತವು ಸ್ವತಂತ್ರವಾಗಿ, ಸುಮಾರು ೨೦ ವರ್ಷಗಳ ಕಾಲ ನೇತಾಜಿ ಕುಟುಂಬದ ಮೇಲೆ ಶ್ರೀಮಾನ್ ನೆಹರೂ ಅವರ ಘನ ಸರ್ಕಾರ “ಗೂಢಚಾರಿಕೆ”ಯನ್ನು ಮಾಡಿದೇ ಎಂಬುದೇ ಆ ಸತ್ಯ.ಅದೂ ಬ್ರಿಟಿಷರ MI15 ಎಂಬ ಗೂಢಚಾರ ಸಂಸ್ಥೆಯೊಂದಿಗೆ ಸೇರಿಕೊಂಡು! ಹೀಗಿರುವಾಗ ನೆಹರೂ ತನ್ನನ್ನು ತಾನು “I am the last Englishman to rule in India.” ಎಂದಿದ್ದು ಸರಿಯಾಗಿಯೇ ಇದೆ ಅಲ್ಲವೇ? ಅಷ್ಟಕ್ಕೂ ಬ್ರಿಟಿಷರಿಗೆ ನೇತಾಜಿಯವರ ಮೇಲೆ ಗೂಢಚಾರಿಕೆ ಮಾಡಲಿಕ್ಕೆ ಕಾರಣಗಳಿದ್ದವು.ಆದರೆ ನೆಹರೂ ಮಹಾಶಯರಿಗೇನಿತ್ತು ಅಂತ ಕಾರಣ? “ಅಭದ್ರತೆ” ಭಾವವೇ?ನೇತಾಜಿಯವರು ತೈಪೆಯ ವಿಮಾನಾಪಘಾತದಲ್ಲಿ ಮರಣಹೊಂದಿದರು ಎಂದು ಸೃಷ್ಟಿಸಲಾಗಿದ್ದ ಸುದ್ದಿಯನ್ನು ಇತರರಂತೆ ನೆಹರೂ ಸಹ ನಂಬಿರಲಿಲ್ಲ.ಒಂದು ವೇಳೆ ಸ್ವತಂತ್ರ ಭಾರತಕ್ಕೆ ನೇತಾಜಿ ಕಾಲಿಟ್ಟರೆ,ಗಾಂಧೀಜಿಯ ಮರಣದ ನಂತರ ಏಕಮೇವಾದ್ವೀತಿಯನಂತಿರುವ ತನ್ನ ಕುರ್ಚಿ ಉಳಿಯುವುದಿಲ್ಲವೆಂಬ ಘೋರ ಸತ್ಯ ತಿಳಿದಿದ್ದರಿಂದಲೇ? ನೆಹರೂವಿಗೆ,ನೇತಾಜಿಯವರ ಮೇಲೆ ಅಂತದ್ದೊಂದು ಅಭದ್ರತೆ,ಈರ್ಷ್ಯೆ ಇರಲಿಲ್ಲವೆಂದಾದರೇ, ಬ್ರಿಟನ್ ಪ್ರಧಾನಿಯಾಗಿದ್ದ ಕ್ಲೆಮೆಂಟ್ ಆಟ್ಲಿಯವರಿಗೆ,ಸುಭಾಷ್ ರಷ್ಯಾದಲ್ಲಿ ಇರುವ ಬಗ್ಗೆ ಮತ್ತು ರಷ್ಯಾ ಮಿತ್ರಪಡೆಗಳಿಗೆ ನಂಬಿಕೆ ದ್ರೋಹ ಮಾಡಿದಂತೆ ಎಂಬಂತ ಸಾಲುಗಳಿರುವ ಪತ್ರವೊಂದನ್ನು ಬರೆದಿದ್ದರು ಎನ್ನುವುದು ಸುಳ್ಳೇ? ಅದೆಲ್ಲಾ ಬಿಡಿ.ಸ್ವಾತಂತ್ರ್ಯ ಸಿಕ್ಕ ನಂತರ ಐ.ಎನ್.ಎ ಸೈನಿಕರನ್ನು ನೆಹರೂ ನಡೆಸಿಕೊಂಡ ರೀತಿ ನೋಡಿ.ಆ ಸೈನಿಕರಿಗೆ ಭಾರತೀಯ ಸೈನ್ಯದಲ್ಲಿ ಕಾಲಿಡಲು ಬಿಡಲಿಲ್ಲ.ಪಿಂಚಣಿಗಾಗಿ ಆ ಸೈನಿಕರು ೧೯೭೭ರವರೆಗೂ ಕಾಯಬೇಕಾಯಿತು! ಆಜಾದ್ ಹಿಂದ್ ಸೈನಿಕರು ಭಾರತೀಯ ಸೇನೆ ಸೇರಿಕೊಂಡ ಮೇಲೆ ನೇತಾಜಿ ಪ್ರತ್ಯಕ್ಷವಾದರೇ,ಸೈನ್ಯ ಅವರ ಪರ ನಿಂತೀತೂ ಎಂಬ ಭಯವಿತ್ತೇ? ನೆಹರೂ ಅವರ ಈ ನಡೆಗಳನ್ನೆಲ್ಲ ಹೇಗೆ ಅರ್ಥೈಸಿಕೊಳ್ಳಬೇಕು?

ಮತ್ತಷ್ಟು ಓದು »

14
ಫೆಬ್ರ

ಸಿಕ್ಕಾಪಟ್ಟೆ ನಿರೀಕ್ಷೆ ಮುಕ್ತಾಯವಾಗುವುದು ಶೂನ್ಯದೊ೦ದಿಗೇ!!

– ಕೆ.ಎಸ್ ರಾಘವೇಂದ್ರ ನಾವಡ

Bedi,Kejriwal,Makenಯಾವಾಗ ಭಾ.ಜ.ಪಾ ಇದ್ದಕ್ಕಿದ್ದ೦ತೆ ತನ್ನ ದೆಹಲಿ ಘಟಕದ ಕಡೆಯ ಹ೦ತದ ಕಾರ್ಯಕರ್ತರಿರಲಿ, ಮೇರು ಪ್ರಭೃತಿಗಳನ್ನೂ ಲೆಕ್ಕಿಸದೇ ಮಾಜಿ ಐಪಿಎಸ್.ಅಧಿಕಾರಿಣಿ ಕಿರಣ್ ಬೇಡಿಯವರನ್ನು ದೆಹಲಿಯ ತನ್ನ ಮುಖ್ಯಮ೦ತ್ರಿ ಅಭ್ಯರ್ಥಿಯೆ೦ದು ಘೋಷಿಸಿತ್ತೋ ದೆಹಲಿಯಲ್ಲಿ ಮು೦ದಿನ ಐದು ವರುಷಗಳ ಕಾಲ ತಣ್ಣನೆ ರಜಾಯಿ ಹೊದ್ದು ಮಲಗಬೇಕಾಗುತ್ತದೆ೦ದು ಆಗಲೇ ಗೊತ್ತಾಗಿ ಹೋಗಿತ್ತು! ದೆಹಲಿ ಜನರು ತೀಕ್ಷ್ಣ ಬೇಡಿಕೆಗಳ ಈಡೇರಿಕೆಗೆ ಒಲಿಯುವವರೇ ವಿನ: ದೂರಗಾಮಿ ಯೋಜನೆಗಳಿಗಲ್ಲ!

ಸ್ವಲ್ಪ ಹಿ೦ದೆ ಹೋಗೋಣ.. ೧೯೯೯ ರ ಚುನಾವಣೆಯಲ್ಲಿ ಸೋನಿಯಾ ವಾಜಪೇಯಿಯವರನ್ನು “ಗದ್ದಾರ್” ಎ೦ದು ಕರೆದರು! ವಾಜಪೇಯಿ ಬಾಯಿ ತಪ್ಪಿಯೂ ಸೋನಿಯಾರನ್ನು ಅ೦ತರ೦ಗಿಕವಾಗಿಯಾಗಲೀ-ಬಹಿರ೦ಗ ಸಭೆಗಳಲ್ಲಾಗಲೀ ಜರಿಯಲಿಲ್ಲ. ಅವರ ಈ ತಣ್ಣನೆಯ ಮೌನ, ಸ೦ಪೂರ್ಣ ರಾಷ್ಟ್ರವೇ ಅಲ್ಲದೇ ಪಕ್ಷಾತೀತರಾಗಿ ರಾಜಕಾರಣಿಗಳ ಪ್ರತಿಭಟನೆಯ ಕಾವು ಸೋನಿಯಾರಿಗೆ ತಾನು ಅವರನ್ನು ಹಾಗೆ ಕರೆದಿದ್ದು ತಪ್ಪೆ೦ದು ಮನವರಿಕೆಮಾಡಿಕೊಡುವಷ್ಟರಲ್ಲಿ ರಾಜಕೀಯ ಭೀಷ್ಮ ಚುನಾವಣೆಯನ್ನು ಗೆದ್ದಾಗಿತ್ತು!   ಸೋನಿಯಾ ತಾನುದುರಿಸಿದ  ಆ ಪದಕ್ಕೆ ಭಾರೀ ಬೆಲೆಯನ್ನೇ ತೆರಬೇಕಾಯಿತೆ೦ಬುದೂ ಸತ್ಯವೇ!. ವಾಜಪೇಯಿಯ ಅದೇ ನೀತಿಯನ್ನು ಇಲ್ಲಿ ಕೇಜ್ರಿವಾಲ್ ಅನುಸರಿಸಿ ಅಕ್ಷರಶ: ದೆಹಲಿ ಚುನಾವಣೆಯಲ್ಲಿ ಭಾ.ಜ.ಪಾ.ವನ್ನು ಮಕಾಡೆ ಮಲಗಿಸಿದರು! ನರೇ೦ದ್ರ ಮೋದಿಯವರ ಅಥವಾ ಬೇರವುದೇ ಭಾ.ಜ.ಪಾ ನಾಯಕರ ಬಹಿರ೦ಗ ಊದುವಿಕೆಗೆ ಕೇಜ್ರಿವಾಲ್ ಕಿವಿಗೊಡಲೂ ಇಲ್ಲ… ಮರುತ್ತರಿಸಲೂ ಇಲ್ಲ! ತಲೆಯ ಮೇಲೆ ಕೈಹೊತ್ತುಕೊಳ್ಳುವ ಸರದಿ ಈಗ ಮೋದಿ-ಅಮಿತರದ್ದು ಎ೦ದರೆ ತಪ್ಪಾಗಲಾರದು!
ಮತ್ತಷ್ಟು ಓದು »

9
ಫೆಬ್ರ

ಪ್ರಸ್ಥಾನ: ಕಲ್ಕತ್ತಾದಿಂದ ಬರ್ಲಿನ್ನಿನ ವರೆಗೆ; ದಾಸ್ಯದಿಂದ ಮುಕ್ತಿಯವರೆಗೆ

– ಎಸ್.ಎನ್.ಭಾಸ್ಕರ್‍

NSC-Bose-Airಕಲ್ಕತ್ತಾ ನಗರದ ಎಲ್ಗಿನ್ ರಸ್ತೆಯ ಮನೆಯೊಂದರಲ್ಲಿನ ಪ್ರತ್ಯೇಕ ಕೋಣೆ. ದಿನಾಂಕ ೧೬ ನೇ ಜನವರಿ, ಇಸವಿ ೧೯೪೧.

“ರಾಷ್ಟ್ರಂ ಧಾರಯತಾಂ ಧ್ರೃವಂ”

“ರಾಷ್ಟ್ರಂ ಅಶ್ವಮೇಧಃ”

ಇದು ಸಂಕಲ್ಪ. ಈ ಧೀರ ಸಂಕಲ್ಪ ಮನೆಮಾಡಿದ್ದ ಆ ವ್ಯಕ್ತಿ ಪದ್ಮಾಸನ ಹಾಕಿ ಕುಳಿತಿದ್ದಾರೆ. ಎಡಗೈನಲ್ಲಿ ಜಪಮಾಲೆ ಮನದಲ್ಲಿ ಪ್ರಣವಮಂತ್ರ. ಮುಚ್ಚಿದ ಕಣ್ಗಳ ಹಿಂದೆ ಅದೆಂತಹ ಉಜ್ವಲ ಭವಿತವ್ಯದ ನೋಟವಿತ್ತೋ..! ಅರಿಯಬಲ್ಲವರು ತಾನೇ ಯಾರಿದ್ದರು ?

ಮಂದಸ್ಮಿತ ಅಂತರ್ಮುಖಿಯಾದ ಮುಖಾರವಿಂದದ ನೆರಳಿನಲ್ಲಿ ಸ್ಪಷ್ಟ ನಿಲುವು ಅಪ್ರಯತ್ನಪೂರ್ವಕವಾಗಿ ನಳನಳಿಸುತಲಿತ್ತು. ಆಳವಾದ ಧ್ಯಾನ. ಜಪಮಾಲೆಯನ್ನು ಹಿಡಿದಿದ್ದ ಕೈ ಬೆರಳುಗಳನ್ನು ಹೊರತು ಪಡಿಸಿ ಇಡೀ ದೇಹ ನಿರ್ಲಿಪ್ತ. ಮನದಲ್ಲಿ ಜ್ವಾಲಾಮುಖಿಯೇ ಇದ್ದರೂ, ಹಿಮಾಲಯದ ಪರ್ವತದಂತೆ ಶಾಂತಸ್ಮಿತ. ಮುಂಜಾನೆಯ ಮೊಗ್ಗರಳುವಂತೆ ನಿಧಾನವಾಗಿ ಕಣ್ಣಗಳನ್ನು ತೆರೆಯುತ್ತಾರೆ. ಎದುರಿಗೆ ಗೋಡೆಯ ಮೇಲೆ ಸ್ವಾಮಿ ವಿವೇಕಾನಂದರ ಭಾವಚಿತ್ರ ಅದರ ಎಡಗಡೆಗೆ ರಾಮಕೃಷ್ಣ ಪರಮಹಂಸರು, ಬಲಗಡೆಗೆ ಮಹರ್ಷಿ ಅರವಿಂದರು. ತನ್ನೆರಡೂ ಕೈಗಳನ್ನೂ ಕಟ್ಟಿ ನಸುನಗುತ್ತಾ ನಿಂತಿದ್ದ ವಿವೇಕಾನಂದರ ಭಾವಚಿತ್ರವನ್ನೇ ನೋಡುತ್ತಾ ನಿಶ್ಚಲರಾಗಿ ಕುಳಿತೇ ಇದ್ದರು. ಅದೆಂತಹ ದಿವ್ಯ ಚೈತನ್ಯ, ದೇದೀಪ್ಯಮಾನವಾದ ಪ್ರಾಂಜ್ವಲ ಕಣ್ಗಳಲ್ಲಿ ಹೊಳೆಯುತ್ತಿದ್ದ ಅಚಲ ವಿಶ್ವಾಸ. ನೋಡುತ್ತಿದ್ದರೇ ಆ ಕಣ್ಗಳೆಂಬ ಸಾಗರದಲ್ಲಿ ಮುಳುಗೇ ಹೋಗುತ್ತೇವೆ. ಸೂಜಿಗಲ್ಲಿಗೆ ಸೆಳೆಯಲ್ಪಡುವ ಕಬ್ಬಿಣದ ಚೂರುಗಳಂತೆ ಸೆಳೆದು ಬಂಧಿಯಾಗುತ್ತೇವೆ. ಎಂತಹ ಆಕರ್ಷಣೀಯ ವ್ಯಕ್ತಿತ್ವ…!! ಕಣ್ತುಂಬಿ ಬಂತು ಮೂಡಿದ ಹನಿಗಳು ಧಳ ಧಳನೇ ಇಳಿಯತೊಡಗಿದವು ನೋಟ ಮಾತ್ರ ನಿಶ್ಚಲ..ನಿರ್ಲಿಪ್ತ. ರೋಮ ರೋಮಗಳಲ್ಲೂ ವಿದ್ಯುತ್ ಸಂಚಾರ. ಅವರ ನಿರ್ಧಾರ ಸಂಪೂರ್ಣವಾಗಿತ್ತು. ರೂಪುರೇಷೆಗಳು ಸಿದ್ದವಾಗಿದ್ದವು. ಇಟ್ಟ ಹೆಜ್ಜೆ ಹಿಂತೆಗೆದ ನಿದರ್ಶನ ಜಾಯಮಾನದಲ್ಲೇ ಇಲ್ಲವಲ್ಲ. “ರಾಷ್ಟ್ರಂ ಧಾರಯತಾಂ ದ್ರೃವಂ: ರಾಷ್ಟ್ರಂ ಅಶ್ವಮೇಧಃ:”.

ಮತ್ತಷ್ಟು ಓದು »

11
ಜನ

ನಿಜ಼ಾಮ ಗ್ರೇಟ್ ಸೆಕ್ಯುಲರ್ ಆಗಿದ್ದರೆ, ಆಪರೇಷನ್ ಪೋಲೊ ನಡೆದದ್ದು ಸುಳ್ಳೇ?

– ಪ್ರವೀಣ್ ಪಟವರ್ಧನ್

Nizam and Sardarಕೆಲ ದಿನಗಳ ಹಿಂದಷ್ಟೇ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನಿಜ಼ಾಮನನ್ನು ಕೊಂಡಾಡಿದ್ದಾರೆ. ನಿಜ಼ಾಮ ಒಂದೊಳ್ಳೆಯ ರಾಜ್ಯಭಾರ ಮಾಡಿದವನೆಂದೂ, ಅವನಿಂದ ಹಲವಾರು ಕಲ್ಯಾಣಕರ ಕಾರ್ಯಗಳು ನಡೆದಿವೆ ಎಂದೂ, ಜೊತೆಗೆ ಆತ ದೇಶಭಕ್ತ, ಜಾತ್ಯಾತೀತ ರಾಜನಾಗಿದ್ದನೆಂದೂ ಕೆಸಿಆರ್ ನಿಜ಼ಾಮನನ್ನು ಬಣ್ಣಿಸಿದ್ದಾರೆ. ಅಷ್ಟೇ ಅಲ್ಲದೆ ಒಂದು ಹೆಜ್ಜೆ ಮುಂದೆ ನಡೆದು ಇದುವರೆಗಿನ ಆಂಧ್ರ ಸರಕಾರಗಳು ನಿಜ಼ಾಮನನ್ನು ತುಚ್ಛವಾಗಿ ಕಂಡಿದ್ದವು, ಆ ಅಕ್ಷಮ್ಯ ಅಪರಾಧವನ್ನು ಇವರ ಸರ್ಕಾರ ಖಂಡಿಸುತ್ತದೆ ಹಾಗೂ ಆ ತಪ್ಪು ಮರುಕಳಿಸದಂತೆ ನೋಡಿಕೊಳ್ಳುತ್ತದೆ ಎಂದೂ ಕೆಸಿಆರ್ ತಿಳಿಸಿದ್ದಾರೆ. ನಿಜ಼ಾಮನ ಆಳ್ವಿಕೆಯಲ್ಲಿ ಕೆಲ ತಪ್ಪುಗಳು ಗತಿಸಿರಬಹುದು. ಆದರೆ ತಪ್ಪುಗಳು ಎಲ್ಲಾ ರಾಜರುಗಳ ರಾಜ್ಯಭಾರದಲ್ಲೂ ನಡೆದಿವೆಯೆಂದು ಸಮಝಾಯಿಷಿಯೂ ನೀಡುತ್ತಾರೆ. ಈ ಘಟನೆ ನಡೆಯುವ ಕೆಲ ವಾರಗಳ ಹಿಂದೆ ನಮ್ಮ ದೇಶದ ಮಾಧ್ಯಮಗಳಲ್ಲಿ ಗಾಂಧಿಜೀಯ ಹತ್ಯೆಗೈದ ಗೋಡ್ಸೆ ಒಬ್ಬ ದೇಶಭಕ್ತ ಎಂದು ಆಡಿದ ಮಾತನ್ನು ಆಧರಿಸಿಯೇ ಚರ್ಚೆಗಳು ಮುಗಿಲು ಮುಟ್ಟಿದ್ದ ಪರಿಯ ಕಂಡು ನಿಜ಼ಾಮನ ಬಗ್ಗೆಯೂ ಡಿಬೇಟ್ ಸರಣಿಗಳು ನಡೆಯುತ್ತವೆ ಎಂದು ಕಾದದ್ದೇ ಬಂತು. ಆದರೆ  ಕೆಸಿಆರ್ ರ ಹೇಳಿಕೆ, ವಿಷಯ, ವರದಿ ಅಥವಾ ಆ ಬಗೆಗಿನ ಜಿಜ್ಞಾಸೆ, ಮುಖ್ಯ ವಾಹಿನಿಯ ಚರ್ಚೆಗೆ ಒಳಪಟ್ಟಿದ್ದನ್ನು ಕಂಡಿರಾ? ಊಹೂಂ. ಅರ್ನಬ್ ಗೋಸ್ವಾಮಿ, ರಾಜದೀಪ ಸರದೇಸಾಯಿ, ಕರಣ್ ಥಾಪರ್, ಬರ್ಖಾ ದತ್ತ ಇತ್ಯಾದಿಯಾಗಿ ಯಾರೂ ಏಕೆ ಚರ್ಚೆಗೆ ಈ ವಿಷಯ ತೆಗೆದುಕೊಳ್ಳಲಿಲ್ಲ? ಅದೇನು ಟಿ.ಆರ್.ಪಿ ಸಂಬಂಧಿತ ನಿರಾಕರಣೆಯೋ ಅಥವಾ ಒಂದು ಕೋಮಿನ ಸುತ್ತದ ಕಥೆಯನ್ನು ಕೆದಕುವ ರಗಳೆ ಏಕೆಂದು ಸುಮ್ಮನಾದರೋ ಗೊತ್ತಿಲ್ಲ. ಟಿವಿ ಮಾಧ್ಯಮದಲ್ಲಿನ ವಾರ್ತೆಗಳಲ್ಲಿ ಕೆಸಿಆರ್ ವಿರುದ್ಧದ ಹೇಳಿಕೆಗಳು ಪ್ರತಿಪಕ್ಷದಿಂದ ಬಂದರೂ ನಿಜ಼ಾಮನ ಕುರಿತಾಗಿ ಮಾತನಾಡಿದ್ದು ಕಾಣಲಿಲ್ಲ ಅಥವಾ ತೋರಿಸಲಿಲ್ಲ. ಸಾಮಾನ್ಯವಾಗಿ ಟ್ವಿಟರ್ ನಲ್ಲಿಯಾದರೂ ನಡೆಯುವ ಚರ್ಚೆ ಈ ಬಾರಿ ನಡೆಯಲಿಲ್ಲ. ತತ್ಸಂಬಂಧದ ೫೦ ಟ್ವೀಟ್ ಗಳಲ್ಲಿ, ಶೇಖಡ ೯೫ ರಷ್ಟು ಕೆಸಿಆರ್ ನ ಮಾತನ್ನು ಒಪ್ಪಿರದಿದ್ದರೂ ವಿಷಯ “Trending” ಆಗಲೇ ಇಲ್ಲ. ಹಾಗಾದರೆ ನಿಜವಾಗಿಯೂ ನಿಜ಼ಾಮನು ಆ ಮಟ್ಟದ ದೇಶಭಕ್ತನೇ, ಜಾತ್ಯಾತೀತ ರಾಜನೇ; ಒಮ್ಮೆ ಬೂಧಿ ಮುಚ್ಚಿದ ಕೆಂಡವನ್ನು ಕೆದಕೋಣ.

ಮತ್ತಷ್ಟು ಓದು »

8
ಜನ

ರಾಷ್ಟ್ರದ ಹಿತ ದೃಷ್ಟಿಯಿಂದಾದರು ಈ ಭಯೋತ್ಪಾದನೆಯ ರಾಜಕೀಯಕ್ಕೆ ಅಂತ್ಯ ಹಾಡಬೇಕಲ್ಲವೇ?

– ಅನಿಲ ಚಳಗೇರಿ

Terror Boatಡಿಸೆಂಬರ್ ೩೧ ರ ರಾತ್ರಿ ಶಂಕಿತ ಉಗ್ರರ ಹಡಗನ್ನು ನೌಕ ಪಡೆ ಪತ್ತೆ ಹಚ್ಚಿ ಅದನ್ನು ಹಿಂಬಾಲಿಸಿ ಹೋದಾಗ ಅದರಲ್ಲಿರುವವರು ಹಡಗನ್ನು ಸ್ಪೋಟಿಸಿದರು ಎನ್ನುವ ವಿಷಯ ತಿಳಿದೊಡನೆ ನಮ್ಮಲ್ಲಿ ಅನೇಕರಿಗೆ ನೌಕಾಪಡೆಗೆ ಒಂದು ಶಬ್ಭಾಶ್ ಹೇಳಬೇಕೆನ್ನಿಸಿರಬಹುದು, ಅದಾಗಲೇ ರಾಜಕೀಯ ಪಕ್ಷಗಳು ಇಂತಹ ಒಂದು ಹಡಗು ಇತ್ತಾ? ಅದರಲ್ಲಿ ನಿಜವಾಗಲು ಉಗ್ರರಿದ್ದರಾ ? ಅದು ಪಾಕಿಸ್ತಾನಕ್ಕೆ ಸೇರಿದ ಹಡಗಾಗಿತ್ತಾ ? ಹಾಗಿದ್ದರೆ ಅವುಗಳ ದಾಖಲೆ ವೀಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿ, ನಮಗೆ ಇದರ ಮೇಲೆ ಶಂಕೆಯಿದೆಯೆಂದು ಪ್ರಶ್ನಿಸಲು ಪ್ರಾರಂಭಿಸಿದನ್ನು ನೋಡಿ ನೋಡಿ ನಮ್ಮಲ್ಲಿ ಅನೇಕರಿಗೆ ಬೇಜಾರಾಗಿರಬೇಕು.  ಪ್ರತಿ ಬಾರಿ ಉಗ್ರಗಾಮಿಯೊಬ್ಬ ಸಿಕ್ಕಾಗ, ಬಾಂಬ್ ದಾಳಿಯಾದಾಗ ಅಥವಾ ಯಾವುದೇ ಉಗ್ರ ಚಟುವಟಿಕೆ ನಡೆದಾಗ, ತನಿಖೆಯ ಪ್ರಾರಂಭದಿಂದಲೇ  ಒಂದಲ್ಲ ಒಂದು ರಾಜಕೀಯ ಪಕ್ಷಗಳು ಅಥವಾ ಬುದ್ಧಿ ಜೀವಿಗಳು ಈ ಶಕಿಂತ ಆರೋಪಿಗಳ ನಿಂತೇಬಿಡುತ್ತಾರೆ. ತನಿಖೆ ನಡೆಯುತ್ತಿರುವಾಗಲೇ ಕ್ಲೀನ್ ಚಿಟ್ ಕೊಡುವದು, ರಾಜಕೀಯ ಬಣ್ಣ ಕಟ್ಟಲು ಪ್ರಯತ್ನಿಸುವದು ಅಥವಾ ಇಂತಹ ಗಂಭೀರ ವಿಷಯದಲ್ಲಿ ಜಾತಿ ಅಥವಾ ಧರ್ಮದ ಮಾತುಗಳನ್ನು ಆಡುವದು ನೋಡುತ್ತಲೇ ಇರುತ್ತೇವೆ, ಕೆಲವಿರಿಗೆ ಇದು ಇದು ಓಲೈಕೆಯ ಒಂದು ಭಾಗವಾದರೆ ಇನ್ನು ಕೆಲವರಿಗೆ ಇದು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳಲು ಒಂದು ಗಿಮಿಕ್.  ಇಂತಹ ಹೇಳಿಕೆಗಳನ್ನು  IC – 814 ಹೈ ಜಾಕ್ ನಿಂದ ಹಿಡಿದು ಅಫ್ಜಲ್ ಗುರು, ಬಾಟ್ಲ ಹೌಸ್ ಎನ್ಕೌಂಟರ್, ಇಶ್ರಾತ್ ಜಹಾ ಎನ್ಕೌಂಟರ್, ಹೈದರಾಬಾದ್ ಬ್ಲಾಸ್ಟ್, ಜರ್ಮನ್ ಬೇಕರಿ ಬ್ಲಾಸ್ಟ್ ಹಾಗು ಮುಂಬೈ ತಾಜ್ ಅಟ್ಯಾಕ್ ಆದಗಲು  ಕೇಳುತ್ತಲೇ ಬಂದಿದ್ದೇವೆ. ಪ್ರತ್ಯೇಕತೆಯ ಹೆಸರಿನಲ್ಲಿ ಉಗ್ರವಾದ, ನಕ್ಸಲ್ ಹೆಸರಿನಲ್ಲಿ ಉಗ್ರವಾದ ಹಾಗು ಮಾವೋವಾದಿಗಳ ಉಗ್ರ ಚಟುವಟಿಕೆಯನ್ನು ವಹಿಸಿಕೊಂಡು ಮಾತನಾಡುವಂತಹ ಬುದ್ಧಿ ಜೀವಿಗಳು ಇಡೀ ದೇಶದಲ್ಲಿ ತುಂಬಿದ್ದಾರೆ. ಕೆಲವೊಮ್ಮ ರಾಜಕೀಯ ಪಕ್ಷಗಳ ಜೊತೆ, ಕೆಲವೊಮ್ಮೆ ಮಾಧ್ಯಮಗಳ ಜೊತೆ ಇನ್ನು ಕೆಲವೊಮ್ಮೆ ಮಾನವ ಹಕ್ಕು ಹೋರಾಟದ ನೆಪದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ದಶಕಗಳ ಹಿಂದೆಯೇ ಧರ್ಮ ಮತ್ತು  ರಾಜಕೀಯದ ಹೆಸರಿನಲ್ಲಿ ಇಂಥಹ ಸಂಘಟನೆಗಳನ್ನು ಸಮರ್ಥಿಸಿಕೊಂಡ ಪಾಕಿಸ್ತಾನ, ಆಫ್ತಾನಿಸ್ತಾನ, ಇರಾಕ್ ಹಾಗು ಇಂತಹ ಅನೇಕ ರಾಷ್ಟ್ರಗಳು ತಾವೇ ಬೆಳಸಿದ ಈ ಉಗ್ರರಿಂದ ತಮ್ಮ ದೇಶವನ್ನು ಕಾಪಾಡಿಕೊಳ್ಳಲು ಇಂದು ಕಷ್ಟಪಡುತ್ತಿರುವದನ್ನು ನಾವೆಲ್ಲ ನೋಡುತ್ತಿದ್ದೇವೆ.
ಮತ್ತಷ್ಟು ಓದು »

6
ಜನ

ಪ್ರತೀ ಬಾರಿಯೂ ಹಿಂದೂ ಧರ್ಮವೇ ವಿಮರ್ಷೆಗೊಳಪಡಬೇಕೇ?

– ಲಕ್ಷ್ಮೀಶ ಜೆ.ಹೆಗಡೆ

Ganeshaಪೇಷಾವರದಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಭಯೋತ್ಪಾದಕರು ಶಾಲೆಯ ಮೇಲೆ ದಾಳಿ ನಡೆಸಿ ಅಮಾಯಕ ಮಕ್ಕಳ ಮಾರಣ ಹೋಮ ನಡೆಸಿದಾಗ ನಮ್ಮಲ್ಲಿನ ಕೆಲವು ವಿಚಾರವಾದಿಗಳಿಗೆ ಅನ್ನಿಸಿದ್ದು ಧರ್ಮಗ್ರಂಥಗಳ   ನಿಷ್ಕರ್ಷೆಯಾಗಬೇಕೆಂದು.ಅದರಲ್ಲೂ ವಿಶೇಷವಾಗಿ ‘ಹಿಂಸೆಗೆ ಪ್ರಚೋದನೆ’ ಕೊಡುವ ಭಗವದ್ಗೀತೆಯ ವಿಮರ್ಷೆಯಂತೂ ಆಗಲೇಬೇಕು.ಆಗ ಮಾತ್ರ ಜಗತ್ತು ಶಾಂತಿಯ ದಿನಗಳನ್ನು ನಿರೀಕ್ಷಿಸಬಹುದು.ಜಗತ್ತಿನ ಶಾಂತಿಗೆ ಭಂಗ ತರಲು ಪ್ರಮುಖ ಕಾರಣವಾಗಿರುವುದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದು ಎಲ್ಲರಿಗೂ ಗೊತ್ತಿದ್ದರೂ ಪ್ರಾಮಾಣಿಕವಾಗಿ ವಿಮರ್ಷೆಗೊಳಪಡಬೇಕಾಗಿರುವುದು ಭಗವದ್ಗೀತೆಯಂತೆ.ಅದೇ ಸಮಯದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿಸುವ ಕುರಿತೂ ಚರ್ಚೆ ನಡೆಯುತ್ತಿರುವುದರಿಂದ ಅವರ ಮಾತುಗಳು ಸಾಂಧರ್ಬಿಕವೋ, ಕಾಕತಾಳೀಯವೋ ಎಂಬುದನ್ನು ಅವರುಗಳೇ ಹೇಳಬೇಕು.

ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿ ಘೋಷಿಸಕೂಡದು ಎಂದಾದರೆ ಬೇರೆ ಯಾವ ಗ್ರಂಥವಾಗಬೇಕೆಂದು ಕೇಳಿದರೆ ನಮಗೆ ನಮ್ಮ ಸಂವಿಧಾನವೇ ಸಾಕು ಎನ್ನುತ್ತಾರೆ.ಸಂವಿಧಾನ ಎಂದಿಗೂ ಧಾರ್ಮಿಕ ಗ್ರಂಥವಾಗಲಾರದು. ಅದು ಎಲ್ಲ ಧರ್ಮಗಳನ್ನೂ ಮೀರಿದ್ದು.ಅದನ್ನು ಎಲ್ಲರೂ ಗೌರವಿಸಲೇಬೇಕು.ಜಗತ್ತಿನ ಇತರ ಅನೇಕ ರಾಷ್ಟ್ರಗಳೂ ತಮ್ಮದೇ ಆದ ಸಂವಿಧಾನವನ್ನು ಹೊಂದಿವೆ ಮತ್ತು ಅದನ್ನು ಗೌರವಿಸುತ್ತವೆ ಕೂಡಾ.ಆದರೆ ಆ ಇತರ ರಾಷ್ಟ್ರಗಳು ತಮ್ಮದೇ ಆದ ಧಾರ್ಮಿಕ ಮೌಲ್ಯ,ಧರ್ಮಗ್ರಂಥಗಳನ್ನು ಘೋಷಿಸಿ,ಪೋಷಿಸುತ್ತಿರುವಾಗ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಅದರದ್ದೇ ಆದ ಧಾರ್ಮಿಕ ಮೌಲ್ಯ,ರಾಷ್ಟ್ರೀಯ ಗ್ರಂಥ ಇರಬೇಡವೇ?ಅದು ಈ ದೇಶದ ಬಹುಸಂಖ್ಯಾತ ಹಿಂದೂಗಳ ಭಗವದ್ಗೀತೆಯಾದರೆ ಇತರ ಧರ್ಮಗಳ ಅಸ್ತಿತ್ವಕ್ಕೇನಾದರೂ ಧಕ್ಕೆ ಬರುತ್ತದೆಯೇ?ರಾಷ್ಟ್ರೀಯ ಗ್ರಂಥವಾಗಿ ಘೋಷಣೆಯಾದ ಕೂಡಲೇ ಕಡ್ಡಾಯವಾಗಿ ಎಲ್ಲರೂ ಭಗವದ್ಗೀತೆಯನ್ನು ಪಠಣ ಮಾಡಬೇಕು ಎಂಬ ಕಾನೂನನ್ನು ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜಾರಿಗೆ ತರಲು ಸಾಧ್ಯವೇ?ಇದನ್ನು ಅರ್ಥಮಾಡಿಕೊಳ್ಳದ ಕೆಲವರು ಭಗವದ್ಗೀತೆ,ಹಿಂದೂ ಧರ್ಮ,ಸನಾತನ ಧರ್ಮ ವಿಮರ್ಷೆಗೊಳಗಾಗಬೇಕೆಂದು ಕೂಗುತ್ತಿದ್ದಾರೆ.

ಮತ್ತಷ್ಟು ಓದು »

5
ಜನ

ಪುಸ್ತಕ ಪರಿಚಯ : ಶಿಲಾಕುಲ ವಲಸೆ

– ವಿದ್ಯಾ ಕುಲಕರ್ಣಿ

ಶಿಲಾಕುಲ ವಲಸೆಕಾದಂಬರಿ : – ಶಿಲಾಕುಲ ವಲಸೆ

ಲೇಖಕರು :- ಕೆ. ಎನ್ ಗಣೇಶಯ್ಯ

ಸಾರಾಂಶ :- ಆರ್ಯರು ಪಶ್ಚಿಮದಿಂದ ಭಾರತಕ್ಕೆವಲಸಿಗರಾಗಿ ಬರಲಿಲ್ಲ.ಪಶ್ಚಿಮಕ್ಕೆ ವಲಸೆ ಹೋದರು.

ನಾನು ಕಾದಂಬರಿಗಳನ್ನು ಓದಲು ಅಥವಾ ಓದುವ ಹುಚ್ಚು ರೂಢಿಸಿಕೊಂಡಿದ್ದು ಶ್ರೀ ತರಾಸು ಅವರ ಸಿಡಿಲ ಮೊಗ್ಗು ಕಾದಂಬರಿಯಿಂದ ಅಂತ ಹೇಳಬಹುದು.  ಆ ಕಾದಂಬರಿಯನ್ನು ನಮ್ಮಣ್ಣನ ತರಗತಿಗೆ ಪಠ್ಯ ಪುಸ್ತಕವಾಗಿ ಹಚ್ಚಿದ್ದರು. ಅವನು ನನಗೆ ಅದನ್ನು ಓದಲು ತಿಳಿಸಿದ್ದಲ್ಲದೇ ಅದರಲ್ಲಿನ ಕೆಲವಾರು ಅಂಶಗಳ ಕುರಿತು ಚರ್ಚಿಸಿ, ಅದನ್ನು ವಿವರಿಸಿ ಹೇಳಿದ್ದಲ್ಲದೇ ನಾನು ಸರಿಯಾಗಿ ತಿಳಿದಿರುವೆನೋ ಇಲ್ಲವೋ ಎಂದು ಪರೀಕ್ಷೆ ಸಹ ಮಾಡಿದ್ದ. ಹೀಗಾಗಿ ನಾನು ಸುಮಾರು 8 ನೇ ತರಗತಿಯಲ್ಲಿದ್ದಾಗಲೇ ಅದನ್ನು ಚನ್ನಾಗಿ ಓದಿ ಹಾಗೇನೇ ಓದುವ ಗೀಳು ಬೆಳೆಸಿಕೊಂಡಿದ್ದೆ. ಶ್ರೀಮತಿ ಗೀತಾ ನಾಗಭೂಷಣ ಅವರ ಕಥೆ ಹೂವ ತಂದವರು ಸಹ ನಮಗೆ ಪಠ್ಯಪುಸ್ತಕದಲ್ಲಿ ಪಾಠವಾಗಿತ್ತು. ಅದನ್ನು ನನ್ನಣ್ಣ ನನಗೆ ಚನ್ನಾಗಿ ವಿವರಿಸಿ ಓದಿಸಿ ಹೇಳಿದ್ದರಿಂದ ಓದುವ ಗೀಳನ್ನು ಬೆಳೆಸಿದ ಅವನಿಗೆ ನನ್ನ ಕೃತಜ್ಞತೆ ಮೊದಲು ಸಲ್ಲುತ್ತವೆ.

ನಂತರದ ದಿನಗಳಲ್ಲಿ ನಾನು ತ್ರಿವೇಣಿ , ಉಷಾ ನವರತ್ನರಾಂ , ರೇಖಾ ಕಾಖಂಡಕಿ ಎಚ್ . ಜಿ ರಾಧಾದೇವಿ. ಎಂ. ಕೆ ಇಂದಿರಾರ ಹಾಗೂ ಇನ್ನಿತರರ ಕಾದಂಬರಿಗಳನ್ನು ಹಾಗೆ ಕಾರಂತರ ಭೈರಪ್ಪರ ಕಾದಂಬರಿಗಳನ್ನು ಓದಿದೆ. ಆದರೆ ಈ ಎಲ್ಲಾ ಕಾದಂಬರಿಗಳಿಗಿಂತ ನನಗೆ ಅಚ್ಚು ಮೆಚ್ಚಾದದ್ದು ಶ್ರೀ ಎಂಡಮೂರಿ ಅವರ ಕಾದಂಬರಿಗಳು . ಅವುಗಳನ್ನು ಓದಲು ಆರಂಭಿಸಿದರೆ ಪುಸ್ತಕ ಕೆಳಗಿಡಲೇ ಆಗುವದಿಲ್ಲ. ಅಷ್ಟೊಂದು ಥ್ರಿಲ್ಲಿಂಗ್ ಇರುತ್ತವೆ. ಇಷ್ಟೊಂದು ಸುಂದರವಾಗಿ ಪುಸ್ತಕ ಕೆಳಗಿಡಲೇ ಆಗದಂತೆ ಕಾದಂಬರಿ ಬರೆಯುವವರು ಕನ್ನಡದಲ್ಲಿ ಇಲ್ಲವಲ್ಲಾ ಎಂದು ನಾನು ಕೊರಗುತ್ತಿದ್ದೆ. ಆ ಕೊರಗನ್ನು ತುಂಬಿದವರೇ ಶ್ರೀ ಕೆ. ಎನ್ ಗಣೇಶಯ್ಯನವರು.

ಶ್ರೀ ಗಣೇಶಯ್ಯನವರ ಕಾದಂಬರಿಗಳು ಯಾಕೆ ಇಷ್ಟವಾಗುತ್ತವೆಂದರೆ ಒಂದನೆಯದು ಬರವಣಿಗೆಯಲ್ಲಿನ ಥ್ರಿಲ್ಲಿಂಗ್. ಎರಡನೆಯದು ಆಧಾರ ಸಮೇತ ಇತಿಹಾಸದ ನಿರೂಪಣೆ.ಇತಿಹಾಸ ಪುಸ್ತಕವನ್ನು ಓದುವದೆಂದರೆ ತುಂಬಾ ಬೇಜಾರು ಮಾಡಿಕೊಳ್ಳುವವರಿಗಾಗಿ ಸುಂದರ ಚೌಕಟ್ಟಿನಲ್ಲಿ ಕಥಾ ರೂಪದಲ್ಲಿ ಇತಿಹಾಸ ತಿಳಿಸುವದು ಗಣೇಶಯ್ಯ ಕಾದಂಬರಿಯ ಉದ್ದೇಶಗಳೆನ್ನಬಹುದು. ಕೇವಲ ರೋಚಕತೆಗಾಗಿ ಏನೋ ಒಂದನ್ನು ಹೇಳದೇ ಅವರು ಐತಿಹಾಸಿಕ ಸಾಕ್ಷಿ ಪುರಾವೆಗಳ ಸಮೇತ ತಿಳಿಸುತ್ತಾರೆ. ಅವುಗಳನ್ನು ಯಾರೂ ಪರೀಕ್ಷೆ ಮಾಡಬಹುದಾಗಿದೆ.

ಮತ್ತಷ್ಟು ಓದು »

29
ಡಿಸೆ

ಮತಾಂತರ ಸರಿಯಾದರೇ ,ಮರುಮತಾಂತರವೇಕೆ ತಪ್ಪು?

– ರಾಕೇಶ್ ಶೆಟ್ಟಿ

Conversionಹೀಗೆ ಹತ್ತು ದಿನಗಳ ಹಿಂದೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರ ಒಂದು ಜಾಹೀರಾತು ಓದಿದ್ದೆ.”೧೫ ಕಥೆಗಳು ನಿಮ್ಮ ಜೀವನವನ್ನೇ ಬದಲಾಯಿಸುವವು” ಅಂತ ಬರೆದಿತ್ತು.ಇದ್ಯಾವುದೋ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದ ಜಾಹೀರಾತು ಎಂದುಕೊಂಡೆ.ಆದರೆ,ಇತ್ತೀಚೆಗೆ ದಿನ ಪತ್ರಿಕೆಗಳ ಮುಖಪುಟದಲ್ಲೂ ದೊಡ್ಡದಾಗಿ ಇದೇ ಜಾಹೀರಾತು “ಅನುಭವಿಸಿ ಬದಲಾಯಿಸುವ ಶಕ್ತಿ – ೧೫ ಕಥೆಗಳು ನಿಮ್ಮ ಜೀವನವನ್ನು ಬದಲಾಯಿಸುವುದು” ಎಂದು ಕಾಣಿಸಲಾರಂಭಿಸಿತು. ಪ್ರತಿದಿನ ಜಾಹೀರಾತು ಕೊಡುವಂತದ್ದು ಈ ಪುಸ್ತಕದಲ್ಲಿ ಅಂತದ್ದೇನಿದೆ ಎಂದು ಓದುವ ಕೂತುಹಲವಾಗಿ ಓದಿದೆ.ಮೂರ್ನಾಲ್ಕು ಪುಟ ಓದಿದಂತೆ ಪುಸ್ತಕದ ಮುಂದಿನ ಪುಟಗಳಲ್ಲಿ ಏನಿರಬಹುದು ಮತ್ತು ಈ ಪುಸ್ತಕ ಓದಿದವರು ಏನಾಗಿ ಬದಲಾಗಬೇಕು ಎಂಬ ಉದ್ದೇಶವಿದೆಯೆಂದು ಖುದ್ದು ಅನುಭವಿಸಿದೆ!

ಆ ಪುಸ್ತಕದಲ್ಲಿ ಬಾಲಿವುಡ್ ನಟ ಜಾನಿಲಿವರ್,ನಟಿ ನಗ್ಮಾ ಇನ್ನೂ ಹಲವರು ತಮ್ಮ ತಮ್ಮ ಕತೆಗಳನ್ನು ಹೇಳಿ ಕೊಂಡಿದ್ದಾರೆ.ಈ ಪುಸ್ತಕದ ಸರಳ ಸಾರಾಂಶವೇನೆಂದರೆ,”ಬೈಬಲ್ ಮತ್ತು ಜೀಸಸ್” ಮಾತ್ರ ಸತ್ಯ ಮತ್ತು ಅವು ಮಾತ್ರವೇ “ಪಾಪಿ”ಗಳಾದ ಮನುಷ್ಯ ಬದುಕಿನ ಬಿಡುಗಡೆಯ ಹಾದಿ ಎಂಬುದು!.ಅದೊಂದೇ ಮಾತ್ರ ಸತ್ಯವೆಂದಾದರೆ,ಉಳಿದ ರಿಲಿಜನ್ನುಗಳು, ಸಂಪ್ರದಾಯಗಳು ಮತ್ತು ಭಿನ್ನ ಹಾದಿಗಳೆಲ್ಲವೂ ಸುಳ್ಳು ಅಂತಾಯಿತಲ್ಲ! ಈ ಪುಸ್ತಕದ ಉದ್ದೇಶವನ್ನು ಇನ್ನೂ ಸರಳ ಮಾಡುವುದಾದರೆ ಅಥವಾ ಸಾಮಾನ್ಯಜನರ ಭಾಷೆಯಲ್ಲಿ ಹೇಳುವುದಾದರೆ,ಜನರನ್ನು ಕ್ರಿಸ್ತ ಮತಕ್ಕೆ ಬನ್ನಿ ಎಂದು ಕರೆಯುವ ಮತಾಂತರದ ಹೊಸ ತಂತ್ರವಷ್ಟೇ.ಈ ಬಗ್ಗೆ ಯಾವ ಮೀಡಿಯಾಗಳು,ಯಾವ ಸೆಕ್ಯುಲರ್ ನಾಯಕನೂ ಅಬ್ಬರಿಸಿ ಬೊಬ್ಬಿರಿಯಲಿಲ್ಲ,ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂದು ಮೊಸಳೆ ಕಣ್ಣೀರೂ ಸುರಿಸಲಿಲ್ಲ.

ಮತ್ತಷ್ಟು ಓದು »

6
ಡಿಸೆ

ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು

– ರಾಕೇಶ್ ಶೆಟ್ಟಿ

Ayodhya Issue and Unityಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾಯಾಲಯ ಅಯೋಧ್ಯೆಯ “ರಾಮ ಜನ್ಮ ಭೂಮಿ/ಬಾಬರಿ ಮಸೀದಿ” ವಿವಾದದ ಕುರಿತು ತೀರ್ಪು ನೀಡುವ ದಿನವಾಗಿತ್ತದು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳಷ್ಟು ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದವು,ಸೂಕ್ಷ್ಮ,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆಯ ಕಣ್ಗಾವಲಿತ್ತು.ಜನರ ಜೊತೆಗೆ ವಿಶೇಷವಾಗಿ ಟಿ.ಆರ್.ಪಿ ಮಾಧ್ಯಮಗಳು ಕೂಡ ಸಂಯಮದಿಂದ ವರ್ತಿಸಬೇಕು ಎನ್ನುವ ಮನವಿಗಳು ಸರ್ಕಾರದಿಂದಲೇ ಬರುತಿತ್ತು.ಮಧ್ಯಾಹ್ನ ೩.೩೦ರ ಸುಮಾರಿಗೆ ತೀರ್ಪು ಹೊರಬರಲಿದೆ ಎನ್ನುವ ಸುದ್ದಿಗಳು ಹರಿದಾಡುತಿದ್ದವು.ನನ್ನ ವಿಮಾನವಿದ್ದಿದ್ದು ಸಂಜೆಯ ವೇಳೆಗೆ.ಆದರೆ,ಬಾಬರಿ ಮಸೀದಿ ಧರಾಶಾಹಿಯಾದ ಮೇಲೆ ಭೀಕರ ದಂಗೆಗೆ ಸಾಕ್ಷಿಯಾಗಿದ್ದ ಮುಂಬೈನಲ್ಲಿ ತೀರ್ಪು ಹೊರಬಂದ ಮೇಲೆ ಏನಾದರೂ ಆಗಬಾರದ್ದು ಶುರುವಾದರೇ,ಅದಕ್ಕೂ ಮುಖ್ಯವಾಗಿ ನಾನು ಹೋಗಬೇಕಾದ ದಾರಿಯಲ್ಲೇ “ಅತಿ ಸೂಕ್ಷ್ಮ ಪ್ರದೇಶ”ಗಳು ಇದ್ದವಾದ್ದರಿಂದ,ಸೇಫರ್ ಸೈಡ್ ಎಂಬಂತೆ ತುಸು ಬೇಗವೇ ನಾನು ಮತ್ತು ನನ್ನ ಸಹುದ್ಯೋಗಿ ಕ್ಯಾಬ್ ಹತ್ತಿಕೊಂಡೆವು.

ಕ್ಯಾಬ್ ಹೊರಟಂತೇ,ಡ್ರೈವರ್ ಅನ್ನು ಮಾತಿಗೆಳೆದೆ.”ಇವತ್ತು ತೀರ್ಪು ಬರಲಿಕ್ಕಿದೆಯಲ್ಲ.ನಿಮಗೇನನ್ನಿಸುತ್ತದೆ,ಆ ಜಾಗ ಯಾರಿಗೆ ಸೇರಿಬೇಕು ನಿಮ್ಮ ಪ್ರಕಾರ?”.ಅವರು ನನ್ನತ್ತ ತಿರುಗಿ “ತಪ್ಪು ತಿಳಿಯಬೇಡಿ ಸರ್.ನಿಮ್ಮ ಪ್ರಶ್ನೆಯೇ ಸರಿಯಿಲ್ಲ.ಜಾಗ ಯಾರಿಗೆ ಸೇರಬೇಕು ಎನ್ನುವುದು ‘ಅಹಂ’ನ ಪ್ರಶ್ನೆಯಾಗುತ್ತದೆ.ಆ ಅಹಂ ಮುಂದೇ ಪ್ರತಿಷ್ಟೆ, ದ್ವೇಷವನ್ನಷ್ಟೇ ಹೊರಡಿಸುತ್ತದೆ.ಅಸಲಿಗೆ ಇದು “ನಂಬಿಕೆ”ಯ ಪ್ರಶ್ನೆ.ಈ ಸಮಸ್ಯೆಯ ಪರಿಹಾರವಾಗಬೇಕಿರುವುದು ಪರಸ್ಪರ ಸಂವಾದ,ಸಾಮರಸ್ಯ,ಶಾಂತಿಯ ಅನುಸಂಧಾನದಿಂದಲೇ ಹೊರತು, ಇದು ಸರ್ಕಾರ,ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವಿಷಯವಲ್ಲ.ಆ ಜಾಗ ರಾಮ ಜನ್ಮಭೂಮಿಯೆಂಬುದು ಹಿಂದೂಗಳ ನಂಬಿಕೆಯಾಗಿದೆ.ಮೊಘಲ ಬಾಬರ್ ಆದೇಶಂತೆ ಅಲ್ಲಿದ್ದ ಮಂದಿರವೊಂದನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿರುವ ವಾದವಿದೆಯಲ್ಲ ಸರ್ ಅದು ನಿಜವೇ ಆದರೆ,ಅಲ್ಲಿ ಮಂದಿರವೇ ನಿರ್ಮಾಣವಾಗಬೇಕು.ಯಾಕೆಂದರೆ ರಾಮ,ರಾಮಾಯಣ,ಕೃಷ್ಣ,ಮಹಾಭಾರತವೆಲ್ಲ ಈ ದೇಶದ ಜನರಿಗೆ ಕೇವಲ ಪುರಾಣಗಳಲ್ಲ.ಅವು ಜನರ ಜೀವನದ ಭಾಗಗಳು.ಹೀಗಿರುವಾಗ ಅಲ್ಲಿನ ಜನರ ನಂಬಿಕೆಗಳಿಗೆ ಬೆಲೆ ಕೊಟ್ಟು ಬಾಬರಿನಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದ.

ಮತ್ತಷ್ಟು ಓದು »