ಒಂದಿಡಿ ಜನಾಂಗಕ್ಕೆ ಕಂಟಕವಾದವರನ್ನು ವೈಭವೀಕರಿಸುವುದೇಕೆ?
– ಡ್ಯಾನಿ ಪಿರೇರಾ,ಹಳ್ಳಿಮೈಸೂರು
ನ.16 ರ ಕನ್ನಡಪ್ರಭ ದಿನಪತ್ರಿಕೆಯಲ್ಲಿ ‘ಫ್ರಾನ್ಸಿಸ್ ಕ್ಸೇವಿಯರ್ ಪಾರ್ಥಿವ ಶರೀರ ಪ್ರದರ್ಶನಕ್ಕೆ ಅಪಸ್ವರ’ ಎಂಬ ಶೀರ್ಷಿಕೆ ಅಡಿಯಲ್ಲಿ ಸಂತನೆಂದು ಹೇಳಲಾಗುವ ಪ್ರಾನ್ಸಿಸ್ ಕ್ಸೇವಿಯರ್ರ ಬಗ್ಗೆ ವರದಿಯಾಗಿತ್ತು. ಆತನ ಪಾರ್ಥಿವ ಶರೀರ ನ.22 ರಿಂದ ಜ.4 ರ ವರೆಗೆ ಸಾರ್ವಜನಿಕ ದರ್ಶನಕ್ಕಿಡಲಾಗುತ್ತಿದೆ.
ಈ ನಡುವೆ ಈ ವಿವಾದಿತ ಸಂತನ ವಿಚಾರದಲ್ಲಿ ಆತನು ನಡೆಸಿದ ಮತಾಂತರದ ಕ್ರೌರ್ಯ ಹಾಗೂ ಮಾರಣಹೋಮ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದೂ ಈತ ಒಬ್ಬ ಮಹಾನ್ ಸಂತ ಎಂದು ಆತನನ್ನು ವೈಭವೀಕರಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಭಾರತದ ಸಂತ ಪರಂಪರೆಗೂ ಪಾಶ್ಚತ್ಯ ಸಂತ ಪರಂಪರೆಗೂ ಅಜಗಜಾಂತರ ವ್ಯತ್ಯಾಸವಿದೆ. ಒಬ್ಬ ವ್ಯಕ್ತಿ ಆತ ಯಾವುದೇ ಜಾತಿಗೆ ಸೇರಿರಲಿ ಆತ ಮಾಡಿದ ಮಾನವತೆಯ ಸೇವೆಯನ್ನು ಅತ್ಯಂತ ಕೃತಜ್ಞತೆಯನ್ನು ಸ್ಮರಿಸಿ, ಆತನಿಗೆ ಸಂತ ಪದವಿ ನೀಡುವುದು ಈ ನೆಲದ ಪರಂಪರೆ. ಆದರೆ ಪಾಶ್ಚತ್ಯ ಜಗತ್ತಿನ ಸಂತ ಪದವಿಯನ್ನೇರಲು ಇಂಥಹ ಮಾನದಂಡವೇನಿಲ್ಲ ಎನಿಸುತ್ತದೆ! ಒಬ್ಬ ವ್ಯಕ್ತಿ ತನ್ನ ಮತದ ಹಿತಕ್ಕೆ ಪೂರಕವಾಗಿ ನಡೆದು, ಇತರ ಮತಗಳ ಅವಹೇಳನ ಗೈದು ಇತರ ಮತೀಯರ ಮೇಲೆ ಮರಣ ಮೃದಂಗ ಬಾರಿಸಿದರೆ ಆತ ಶ್ರೇಷ್ಠನೆಂದು ಪರಿಗಣಿತವಾಗುತ್ತದೆ ಎನ್ನುವುದಕ್ಕೆ ಕ್ಸೇವಿಯರ್ ಸಂತ ಪದವಿ ಅಲಂಕರಿಸಿದ್ದೇ ಸಾಕ್ಷಿ ಎನ್ನಬೇಕಾಗುತ್ತದೆ. ಇನ್ನೊಂದು ಮತದ ನಂಬಿಕೆಗಳ ವಿರುದ್ಧ ನಡೆದುಕೊಂಡಾಗಲೂ ಅವನನ್ನು ಆರಾಧಿಸುವ ಮನಸ್ಥಿತಿ ಏರ್ಪಟ್ಟರೆ ಅತನನ್ನು ಯಾವ ಅರ್ಥದಲ್ಲಿ ಸಂತ ಎನ್ನ ಬಹುದು ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಈ ಹಿನ್ನೆಲೆಯಲ್ಲಿ ಕ್ಸೇವಿಯರ್ ಒಬ್ಬ ಸಂತನೆಂದು ಕ್ರೈಸ್ತ ಸಮಾಜ ಒಪ್ಪಿಕೊಂಡರೂ ಮಾನವತೆಯ ನೆಲೆಗಟ್ಟಿನಲ್ಲಿ ಯೋಚಿಸುವ ಯಾವುದೇ ಜನಾಂಗ ಇದನ್ನು ಒಪ್ಪಲು ಸಾಧ್ಯವಾಗುವುದಿಲ್ಲ.
ಮತ್ತಷ್ಟು ಓದು 
ಭಾರತವನ್ನು “ಕಾಂಗ್ರೆಸ್ಸ್ ಮುಕ್ತ”ವಾಗಿಸಲು,ಕರ್ನಾಟಕದಲ್ಲಿ “ಬಿಜೆಪಿಯೇ ಇಲ್ಲ”!
– ರಾಕೇಶ್ ಶೆಟ್ಟಿ
ಕುರುಕ್ಷೇತ್ರದ ಯುದ್ದಕ್ಕೆ ಬೆಂಬಲ ಕೋರಿ ಬಂದ ಅರ್ಜುನನಿಗೆ,”ನಾರಾಯಣ ಬೇಕೋ?”,”ನಾರಾಯಣಿ ಸೈನ್ಯ ಬೇಕೋ?” ಎಂದು ಕೇಳುತ್ತಾನೆ ಶ್ರೀಕೃಷ್ಣ.’ಸಂಖ್ಯೆ’ ಗಿಂತ ‘ವ್ಯಕ್ತಿ’ ಮತ್ತು ‘ವ್ಯಕ್ತಿ’ಗಿಂತ ‘ವ್ಯಕ್ತಿತ್ವ’ದ ಮಹತ್ವ ಅರಿತಿದ್ದ ಅರ್ಜುನ “ನಾರಾಯಣ” ಎನ್ನುತ್ತಾನೆ. ಅರ್ಜುನನೆಡೆಗೆ ಕನಿಕರ ತೋರಿದ ದುರ್ಯೋಧನ “ನಾರಾಯಣಿ ಸೈನ್ಯ” ಪಡೆದು ಹೋಗುತ್ತಾನೆ.ಕಡೆಗೆ ಯುದ್ಧದಲ್ಲಿ ಗೆದ್ದಿದ್ದು ಯಾರು ಎನ್ನುವುದು ಎಲ್ಲರಿಗೂ ತಿಳಿದ ವಿಷಯವೇ. ಇಲ್ಲಿ ನನ್ನ ಗಮನವಿರುವುದು ಯುದ್ಧದ ಮೇಲಲ್ಲ.ಯುದ್ಧಕ್ಕೆ ಹೊರಟು ನಿಂತವನು ಮಾಡಿಕೊಳ್ಳುವ ತಯಾರಿಯ ಮೇಲೆ.ಕುರುಕ್ಷೇತ್ರದ ಯುದ್ಧಕ್ಕೆ ಕಾರಣನಾದ ದುರ್ಯೋಧನ,ಯುದ್ಧಕ್ಕೆ ಬೇಕಾದ ಜನರನ್ನು (ಸಂಖ್ಯೆ) ಒಟ್ಟುಗೂಡಿಸಿಕೊಂಡು ಹೊರಟು ನಿಂತನೇ ಹೊರತು,ಯುದ್ದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ.
ಬಹುಷಃ, ತನ್ನ ಜೊತೆಗೆ ಭೀಷ್ಮ,ದ್ರೋಣಾಚರ್ಯರಂತ ಅಸಾಧಾರಣ ಸಾಮರ್ಥ್ಯದ “ವ್ಯಕ್ತಿ”ಗಳಿದ್ದಾರೆ ಎನ್ನುವ ಅಹಂ ದುರ್ಯೋಧನನಿಗಿದ್ದೀತು.ವ್ಯಕ್ತಿಗಳಿದ್ದರೇನಂತೆ “ವ್ಯಕ್ತಿತ್ವ” ಇರಲಿಲ್ಲವಲ್ಲ!
ಏನಿದು,ಭೀಷ್ಮನಂತ ಭೀಷ್ಮ,ದ್ರೋಣಾಚಾರ್ಯರಿಗೆ ವ್ಯಕ್ತಿತ್ವವಿರಲಿಲ್ಲ ಎನ್ನುತ್ತಿದ್ದೇನೆ ಎನ್ನಿಸಬಹುದು.ಧರ್ಮ-ಅಧರ್ಮದ ಪ್ರಶ್ನೆ ಬಂದಾಗ ಅದಿನ್ನೇನೋ ಸಬೂಬು ಕೊಟ್ಟು ಅಧರ್ಮದ ಪರ ನಿಲ್ಲುವ ವ್ಯಕ್ತಿಯ “ವ್ಯಕ್ತಿತ್ವ”ಕ್ಕೆ ಬೆಲೆ ಉಳಿಯುತ್ತದೆಯೇ? ಕಡೆಗೂ ಮಹಾಭಾರತದ ಯುದ್ಧದಲ್ಲಿ ಗೆದ್ದಿದ್ದು ಧರ್ಮದ ಪರನಿಂತ ವ್ಯಕ್ತಿಗಳೇ.
ನಂಬಿಕೆ-ಮೂಢನಂಬಿಕೆ ಗೆರೆ ಎಳೆಯುವುದು ಹೇಗೆ?
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ
ಬೆಂಗಳೂರಿನಲ್ಲಿ ಇನ್ನೂರಾ ಎಂಟು ಪ್ರಗತಿಪರ ಸ್ವಾಮೀಜಿಗಳೆಂದು ಕರೆದುಕೊಂಡಿರುವವರು ಮೂಢ ನಂಬಿಕೆ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಸಂತೋಷ. ಯಾರಲ್ಲೂ ಮೌಢ್ಯ ಎಂಬುದು ಇರಬಾರದು. ಯಾಕೆಂದರೆ ನಾವೆಲ್ಲ ವೈಜ್ಞಾನಿಕ (ಹಾಗೆಂದರೇನು ಎಂಬುದೇ ಬೇರೆ ಚರ್ಚೆಯ ಸಂಗತಿ) ಯುಗದಲ್ಲಿದ್ದೇವೆ! ಈಗ ಧರಣಿ ಕುಳಿತಿದ್ದ ಸ್ವಾಮೀಜಿಗಳು ಕಾವಿ ಧರಿಸಿದ್ದಾರೆ, ಕೆಲವರು ವಿಭೂತಿಯನ್ನೂ ರುದ್ರಾಕ್ಷಿ ಮಾಲೆಯನ್ನೂ ಧರಿಸಿದ್ದಾರೆ. ಅನೇಕಾನೇಕ ಜನರ ನಂಬಿಕೆಯನ್ನು ಪ್ರತಿನಿಧಿಸುವ ಮಠಾಧೀಶರಾಗಿದ್ದಾರೆ. ಇವೆಲ್ಲದರ ಗೋಜಿಲ್ಲದೇ ಆರಾಮವಾಗಿ ದೇಶದ ಸಂವಿಧಾನಕ್ಕೆ ಅನುಸಾರವಾಗಿ ನಾನಂತೂ ಬದುಕುತ್ತಿದ್ದೇನೆ. ನನ್ನ ದೃಷ್ಟಿಯಲ್ಲಿ ಈ ಸ್ವಾಮೀಜಿಗಳ ವೇಷವೇ ಮೌಢ್ಯ. ಅವರು ಪ್ರತಿನಿಧಿಸುವ ಮಠಗಳೂ ಮೌಢ್ಯ. ಆದರೂ ಅವರು ಇವುಗಳಿಗೆ ಹೊರತಾದ ಯಾವುದೋ ಮೌಢ್ಯ ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ತಮಾಷೆ ಎಂದರೆ ನವೆಂಬರ್ ಎರಡನೆಯ ವಾರದಲ್ಲಿ ಸಿದ್ಧಗಂಗಾ ಕ್ಷೇತ್ರದಲ್ಲಿ ನಡೆದ ಸಂತರ ಸಮ್ಮೇಳನದಲ್ಲಿ ಪಾಲ್ಗೊಂಡು ಭಾರತೀಯ ಪ್ರಾಚೀನ ಪರಂಪರೆಯ ಉಳಿವಿನ ಪಣ ತೊಟ್ಟ ಕೆಲವು ಸ್ವಾಮೀಜಿಗಳೂ ಈ ಧರಣಿಯಲ್ಲಿದ್ದಾರೆ. ಮೂಢ ನಂಬಿಕೆ ನಿಷೇಧದ ಪಟ್ಟಿಯಲ್ಲಿರುವ ಪೂಜೆ, ಪಾದಪೂಜೆಯಾದಿಯಾಗಿ ಅನೇಕಾನೇಕ ಸಂಗತಿಗಳನ್ನು ಸದ್ಯ ಆಚರಿಸುತ್ತಿರುವ ಸ್ವಾಮೀಜಿಗಳು ಇವರು!
ಕೆಲವು ತಿಂಗಳುಗಳ ಹಿಂದೆ ರಾಜ್ಯದಲ್ಲಿ ಸರ್ಕಾರದಿಂದ ರಚಿತವಾದ ಸಮಿತಿಯೊಂದು ಮೂಢ ನಂಬಿಕೆ ನಿಷೇಧ ಕಾಯ್ದೆಯ ಕರಡು ಪ್ರತಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ಅದಿನ್ನೂ ಸರ್ಕಾರದ ಪರಿಶೀಲನೆಯ ಹಂತದಲ್ಲೇ ಇದೆ. ಸಾರ್ವಜನಿಕ ಚರ್ಚೆಗೆ ಅದಿನ್ನೂ ತೆರೆದುಕೊಂಡಿಲ್ಲ. ಅದರಲ್ಲಿ ಹೇಳಲಾದ ಕೆಲವು ಸಂಗತಿಗಳು ಅಂತರ್ಜಾಲದ ಕೆಲವು ಮೂಲಗಳಿಂದ ಅಷ್ಟಿಷ್ಟು ಲಭ್ಯವಾಗಿದೆ. ಹತ್ತಾರು ಬಗೆಯ ಆಚಾರ ವಿಚಾರಗಳನ್ನು, ನಂಬಿಕೆ ನಿಷೇಧಗಳನ್ನು ಅನುಸರಿಸುವ ಆದರೂ ಜೊತೆಯಲ್ಲೇ ಬದುಕುವ ವೈವಿಧ್ಯಮಯ ಸಮಾಜ ನಮ್ಮದು. ಸಾಲದ್ದಕ್ಕೆ ಜನತಂತ್ರ ವ್ಯವಸ್ಥೆ ಬೇರೆ ಇದೆ. ಧಾರ್ಮಿಕ ಆಚರಣೆಯ ಸ್ವಾತಂತ್ರ್ಯ ಅಂದರೇನೆಂದು ನಾವು ಅನುಸರಿಸುವ ಸಂವಿಧಾನವೂ ಸ್ಪಷ್ಟವಾಗಿ ಹೇಳಿದೆ. ಇಂಥ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಮುಕ್ತ ಚರ್ಚೆಗೆ ಕರಡನ್ನು ತೆರೆದು ಕೂಲಂಕಷವಾಗಿ ತಿದ್ದುಪಡಿ ಮಾಡದೇ ಸರ್ಕಾರ ನೇಮಿಸಿದ ಸಮಿತಿಯ ಕೆಲ ಸದಸ್ಯರ ಹಾಗೂ ತಾವು ಸಂದರ್ಶಿಸಿದ್ದೇವೆ ಎಂದು ಹೇಳಲಾದ ಆಯ್ದ ಕೆಲವರ ಅಭಿಪ್ರಾಯವನ್ನು ಸಮಾಜದ ಸಕಲರ ಅಭಿಪ್ರಾಯ ಎಂದು ಸ್ವೀಕರಿಸುವುದಾದರೂ ಹೇಗೆ? ಇಂಥ ಮೂಲಭೂತ ಸಂಗತಿ ಕರಡನ್ನು ಸರ್ಕಾರಕ್ಕೆ ಸಲ್ಲಿಸಿದಾಗಲೇ ಸಾಕಷ್ಟು ಚರ್ಚೆಯಾಗಿದೆ. ಅದಿರಲಿ.
ಕಾನೂನು Vs ಪ್ರತ್ಯೇಕತೆ – ಬದಲಾಗಬೇಕಾಗಿದ್ದು ಯಾರು ?
– ಶೈಲೇಶ್ ಕುಲ್ಕರ್ಣಿ
ಕಾಲಕಾಲಕ್ಕೆ ಭಾರತದ ಕೆಲವೊಂದು ರಾಜ್ಯಗಳ ಆಡಳಿತಾರೂಢ ಜನಪ್ರತಿನಿಧಿಗಳೇ ಭಾರತವಿರೋಧಿ ಭಾವನೆಗಳನ್ನ ಸಾರ್ವಜನಿಕವಾಗಿ ಪ್ರದರ್ಶನಕ್ಕಿಡೋದು ಅವ್ಯಾಹತವಾಗಿ ನಡೆದುಕೊಂಡು ಬಂದಿದೆ.ಈಗ್ಗೆ ಸ್ವಲ್ಪ ಸಮಯದ ಕೆಳಗೆ ಜಮ್ಮುಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂವಿಧಾನದ ೩೭೦ನೆ ವಿಧಿ ಆ ರಾಜ್ಯದಲ್ಲಿ ಜಾರಿಗೊಂಡ ಪಕ್ಷದಲ್ಲಿ ಆ ರಾಜ್ಯ ಭಾರತದಭಾಗವಾಗಿ ಮುಂದುವರೆಯೋದಿಲ್ಲ ಅಂತ ಸಾರ್ವಜನಿಕವಾಗಿಯೇ ಹೇಳಿದ್ದರು.ಹೀಗೆ ಪ್ರತೀ ಬಾರಿ ಒಡಕಿನ ರಾಗ ಆಲಾಪಿಸಿದಾಗಲೂ ಅವರೆಲ್ಲರ ದುಃಖಕ್ಕೆ AFSPA ನಂಥ ಕಾನೂನನ್ನೇ ಹೊಣೆಯಾಗಿಸೋದು ಮಾಮೂಲಿ ಸಂಗತಿ .
ಜಮ್ಮು-ಕಾಶ್ಮೀರದ ಜೊತೆಗೇ ಭಾರತದ ನೈಋತ್ಯದ ರಾಜ್ಯಗಳ(ಅಸ್ಸಾಂ, ಮಣಿಪೂರ್) ಕೆಲ ಚುನಾಯಿತ ಪ್ರತಿನಿಧಿಗಳು ತಮ್ಮ ರಾಜ್ಯಗಳಲ್ಲಿ ಭಾರತೀಯ ಸೈನ್ಯ AFSPA (ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ೧೯೫೮) ಕಾನೂನಿನ ಅಡಿಯಲ್ಲಿ ಇರೋದನ್ನ ಬಲವಾಗಿ ವಿರೋಧಿಸಿಕೊಂಡೆ ಬಂದಿದ್ದಾರೆ. ಈ ವಿಶೇಷಾಧಿಕಾರದ ಅನ್ವಯದಿಂದ ತಮ್ಮ ರಾಜ್ಯಗಳು ಸೈನ್ಯದ ಛಾಯೆಯಲ್ಲೇ ಬದುಕಬೇಕಾದ ಅನಿವಾರ್ಯಕ್ಕೆ ಸಿಲುಕಿವೆ. ಸಂಪೂರ್ಣರಾಷ್ಟ್ರವೇ ಮಿಲಿಟರಿಯ ಹಂಗಿಲ್ಲದೆ ಮನಸೋಇಚ್ಛೆ ಬಾಳ್ವೆ ನಡೆಸುತ್ತಿರುವಾಗ ಪ್ರಜಾತಂತ್ರದ ಹೆಸರಿನಡಿಯಲ್ಲಿ ಹಾಡುಹಗಲೇ ತಮ್ಮ ಸ್ವಾತಂತ್ರ್ಯಹರಣಕ್ಕೆ ಸೈನ್ಯದಬಳಕೆ ಪ್ರಜಾತಂತ್ರಕ್ಕೆ ಮತ್ತು ಮಾನವೀಯತೆಗೆ ಮಾಡಿದ ಅಪಚಾರ ಅನ್ನೋದು ಅವರ ವಾದ .
ಪರಿಸ್ಥಿತಿಯ ಲಾಭಪಡೆವ ಸೈನ್ಯ ಅಲ್ಲಿನ ಪ್ರಜೆಗಳ ಮೇಲೆ ದೌರ್ಜನ್ಯಕ್ಕೂ ಮುಂದಾಗುತ್ತದೆ ಅನ್ನೋದು ಆ ವಾದದ ಸರಣಿ. .
ಕೂಲಂಕುಶವಾಗಿ ಈ ಎಲ್ಲ ವಾದಗಳ ಮೂಲ ಕೆದಕಿದಲ್ಲಿ ಅಲ್ಲಿ ಅಡಗಿರೋದು ಕ್ಷುದ್ರರಾಜಕಾರಣವಲ್ಲದೆ ಜನಪರ ಕಾಳಜಿ ಅಥವ ಮಾನವಸಂವೇದನೆ ಖಂಡಿತ ಅಲ್ಲ ಅನ್ನೋದು ಸ್ಪಷ್ಟವಾಗಿ ಕಾಣಬಹುದು.
ತಮಿಳ್ ಮಕ್ಕಳನ್ನು ಆತಂಕದ ಗುಮ್ಮನ ಕೈಗಿತ್ತ ‘ಅಮ್ಮ’!
– ತುರುವೇಕೆರೆ ಪ್ರಸಾದ್
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 18 ವರ್ಷಗಳ ನಂತರ ಅವರ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು ಇದೀಗ ಶಿಕ್ಷೆಯಾಗಿದೆ. ಅಧಿಕಾರ ಹಾಗೂ ಕೀರ್ತಿಯ ಉತ್ತುಂಗದಲ್ಲಿದ್ದಾಗಲೇ ಅವರು ಜೈಲು ಸೇರುವಂತಾಗಿದೆ. ಹಾಲಿ ಮುಖ್ಯಮಂತ್ರಿಯೊಬ್ಬರು ಭ್ರಷ್ಟಾಚಾರ ಹಾಗೂ ಅಕ್ರಮ ಸಂಪತ್ತು ಗಳಿಕೆ ಆರೋಪದ ಮೇಲೆ ಜೈಲು ಸೇರುತ್ತಿರುವುದೂ ಇದೇ ಮೊದಲ ಬಾರಿಯಾದ್ದರಿಂದ ಈ ಪ್ರಕರಣ ಭಾರೀ ಮಹತ್ವ ಹಾಗೂ ಪ್ರಚಾರ ಪಡೆದಿದೆ. ಎಲ್ಲಾ ತತ್ವ, ಸಿದ್ಧಾಂತ,ಕಾನೂನಿನ ನಿಯಂತ್ರಣ ಮೀರಿ ಅಪರಾಧೀಕರಣಗೊಳ್ಳುತ್ತಿರುವ ರಾಜಕೀಯ ಕ್ಷೇತ್ರಕ್ಕೆ ನ್ಯಾಯಾಲಯದ ತೀರ್ಪು ಒಂದು ಎಚ್ಚರಿಕೆಯ ಗಂಟೆ ಎಂದರೆ ತಪ್ಪಾಗಲಾರದು. ಇದು ಜಯಲಲಿತಾ ವಿರೋಧಿಗಳಿಗೆ ಸಿಕ್ಕ ಜಯವೂ ಹೌದು, ಹಾಗೆಯೇ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸತ್ಯ, ನ್ಯಾಯಕ್ಕೆ ಸಿಕ್ಕ ಜಯವೂ ಹೌದು.
ಆದರೆ ಈ ಪ್ರಕರಣದ ಹಿನ್ನಲೆಯಲ್ಲಿ ಕೆಲವೊಂದು ಅಂಶಗಳನ್ನು ಯೋಚಿಸಬೇಕಿದೆ. ಜಯಲಲಿತಾ ಅವರಿಗೆ ಅಕ್ರಮ ಸಂಪತ್ತು ಗಳಿಕೆ ಆರೋಪದ ಹಿನ್ನಲೆಯಲ್ಲಿ ಶಿಕ್ಷೆಯಾಗಿರುವುದರಿಂದ ಇನ್ನು ಮುಂದಾದರೂ ನಮ್ಮ ರಾಜಕೀಯ ಕ್ಷೇತ್ರ ಶುದ್ಧೀಕರಣಗೊಳ್ಳುತ್ತದೆ ಎಂದು ನಂಬುವ ಹಾಗಿಲ್ಲ. ಯಾಕೆಂದರೆ ಜಯಲಲಿತಾ ಅವರ ಅಕ್ರಮ ಅಸ್ತಿ ಪ್ರಮಾಣ ಕೇವಲ 66 ಕೋಟಿ. ಆದರೆ ಸಾವಿರಾರು ಕೋಟಿ ಅಕ್ರಮ ಆಸ್ತಿ ಮಾಡಿ, ಸ್ವಿಸ್ ಬ್ಯಾಂಕಿನಲ್ಲಿ ಕೋಟ್ಯಂತರ ರೂಪಾಯಿ ಇಟ್ಟಿರುವ ನೂರಾರು ರಾಜಕಾರಣಿಗಳು, ಉದ್ಯಮಿಗಳು ಹಾಗೂ ಅಧಿಕಾರಿಗಳು ಇದ್ದಾರೆ. ಅವರೆಲ್ಲರ ವಿರುದ್ಧ ನಮ್ಮ ಕಾನೂನು ಏನೂ ಮಾಡಲಾಗಿಲ್ಲ. ಸ್ವಾತಂತ್ಯ್ರ ಬಂದ ನಂತರ ದೇಶದಲ್ಲಿ ನಡೆದಿರುವ ಒಟ್ಟಾರೆ ಹಗರಣಗಳಲ್ಲಿ ರೂ.91063323430000 ರಷ್ಟು ದೊಡ್ಡ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ. ಈ ಅಕ್ರಮ ಹಣದ ಫಲಾನುಭವಿಗಳಲ್ಲಿ ಎಷ್ಟು ಮಂದಿಗೆ ಶಿಕ್ಷೆ ಆಗಿದೆ? ಯಾಕೆ ಆಗಿಲ್ಲ? ಎಂದು ಯೋಚಿಸಬೇಕಿದೆ.
ಹಾಗಾದರೆ ಜಯಲಲಿತಾ ಅವರಿಗೆ ಶಿಕ್ಷೆ ಆಗಿದ್ದೇಕೆ? ಜಯಲಲಿತಾ ಅನುಭವದ ಕೊರತೆ ಹಾಗೂ ಮಿತಿ ಮೀರಿದ ಉದ್ಧಟತನದಿಂದ ಎಲ್ಲಾ ತೊಂದರೆಗಳನ್ನು ತಾವೇ ಆಹ್ವಾನಿಸಿಕೊಂಡರು. 1991-96 ರ ಅಧಿಕಾರಾವಧಿಯಲ್ಲಿ ಅವರು ತೆಗೆದುಕೊಂಡ ತಪ್ಪು ನಿರ್ಧಾರಗಳಿಗೆ ಅವರು ಈಗ ಭಾರೀ ಬೆಲೆ ತೆರುವಂತಾಗಿದೆ. ಆ ಅವಧಿಯಲ್ಲಿ ಅವರಿಗೆ ರಾಜಕೀಯ ಪ್ರಬುದ್ಧತೆ ಇರಲಿಲ್ಲ, ರಾಜಕೀಯಕ್ಕೆ ಬೇಕಾದ ಸೂಕ್ಷ್ಮತೆ, ದೂರಾಲೋಚನೆ , ಅನುಭವ ಯಾವುದೂ ಅವರಿಗಿರಲಿಲ್ಲ. ಹೋಗಲೆಂದರೆ ಅವರಿಗೆ ಆ ಸಮಯದಲ್ಲಿ ಸೂಕ್ತ ಮಾರ್ಗದರ್ಶನವೂ ಸಿಗಲಿಲ್ಲ. ಅವರ ಬಂಧುಗಳು ಅಧಿಕಾರದಲ್ಲಿ ಭಾರೀ ಹಸ್ತಕ್ಷೇಪ ನಡೆಸಿದರು.ನೂರಾರು ಕೋಟಿ ರೂಗಳ ಅಕ್ರಮ ನಡೆಯಿತು. ಜೊತೆಗೆ ಜಯಲಲಿತಾ ತಮ್ಮ ರಾಜಕೀಯ ಜೀವನದುದ್ದಕ್ಕೂ ವಿರೋಧಿಗಳನ್ನೇ ಸೃಷ್ಟಿಸಿಕೊಳ್ಳುತ್ತಾ ಹೋದರು. ಸುಬ್ರಹ್ಮಣ್ಯಸ್ವಾಮಿ, ಟಿ.ಎನ್.ಶೇಷನ್, ಚಿದಂಬರಂ ಎಲ್ಲರನ್ನೂ ಎದುರು ಹಾಕಿಕೊಂಡರು. ಪ್ರಜಾಪ್ರಭುತ್ವದಿಂದ ಬಂದ ಅಧಿಕಾರವನ್ನು ಸರ್ವಾಧಿಕಾರಿಯ ಧೋರಣೆಯಿಂದ ನಡೆಸಿದರು.ಅವರಲ್ಲಿ ಅಹಂ ತುಂಬಿ ತುಳುಕುತ್ತಿತ್ತು. ವಿರೋಧಿಗಳೊಂದಿಗೆ ರಾಜಕೀಯ ದ್ವೇಷಕ್ಕೆ ಮೀರಿದ ವೈಯಕ್ತಿಕ ಸೇಡಿನ ಮನೋಭಾವ ಬೆಳೆಸಿಕೊಂಡರು. ಯಾರನ್ನೂ ಬೇಕಾದರೂ ದುಡ್ಡು ಚೆಲ್ಲಿ ಕೊಂಡುಕೊಳ್ಳಬಲ್ಲೆ ಎಂಬ ದರ್ಪ ಮೆರೆದರು.
ಭ್ರಷ್ಟ ಜಯಲಲಿತಾ ಯಾವೆಲ್ಲದರ ಫಲಿತಾಂಶ?
– ಚೇತನಾ ತೀರ್ಥಹಳ್ಳಿ
ಅಧಿಕೃತವಾಗಿ ತನ್ನ ಸ್ವಂತದವರೆಂದು ಹೇಳಿಕೊಳ್ಳಲು ಮತ್ತೊಂದು ಜೀವ ಜೊತೆಗಿರದ ಜಯಲಲಿತಾ ಇವೆಲ್ಲವನ್ನೂ ಮಾಡಿಟ್ಟಿದ್ದು ಯಾಕಾಗಿ? ತನ್ನ ನೆಲದ ಬಡ ಜನರಿಗೆ ರೂಪಾಯಿಗೊಂದು ಇಡ್ಲಿ, ಕುಡಿಯುವ ನೀರು, ಸೂರು ಎಂದೆಲ್ಲ ಜನಪರ – ಜನಪ್ರಿಯ ಯೋಜನೆಗಳನ್ನು ರೂಪಿಸಿದ ಜಯಲಲಿತಾ ಅದೇ ಜನರ ತೆರಿಗೆ ಹಣವನ್ನು ನುಂಗಿ ಕೂತಿರುವುದು ಯಾಕೆ? ನಿಜಕ್ಕೂ ಈ ಪರಿಯ ಹಪಾಹಪಿ ಅವರಲ್ಲಿದೆಯೇ? ತುಸು ಜಂಭದ, ಆದರೆ ಅಪ್ರಮಾಣಿಕತೆ ಕಾಣದ ಅವರ ಮುಖ ಹಾಗೂ ನಿಲುವಿನಲ್ಲಿ ಮೋಸವಿದೆಯೇ? ಇಂದು ನಾವು ನೋಡುತ್ತಿರುವ ಭ್ರಷ್ಟ ರಾಜಕಾರಣಿ ಜಯಲಲಿತಾ ರೂಪುಗೊಂಡಿದ್ದು ಹೇಗೆ?
ಬದುಕನ್ನು ಗಂಡು – ಹೆಣ್ಣೆಂಬ ಭೇದ ಮೀರಿದ ದೃಷ್ಟಿಕೋನದಿಂದ ನೋಡಬೇಕೆನ್ನುವುದು ನಿಜವಾದರೂ ಅದರ ಹೊರಳಾಟಗಳನ್ನು ನೋಡುವಾಗ ಈ ಭೇದದ ಊರುಗೋಲು ಅಗತ್ಯವಾಗಿಬಿಡುತ್ತದೆ. ಏಕೆಂದರೆ, ಬದುಕು ಒಂದೇ ಆದರೂ ಅದನ್ನು ಹೆಣ್ಣು ಎದುರುಗೊಳ್ಳುವ ಬಗೆಯೇ ಬೇರೆ ಮತ್ತು ಗಂಡು ಒಳಗೊಳಿಸಿಕೊಳ್ಳುವ ಬಗೆ ಬೇರೆ. ಏಕೆಂದರೆ, ನಾಗರಿಕತೆಯ ಆರಂಭಕಾಲದಿಂದಲೂ ಗಂಡು ಹೆಣ್ಣಿಗೆ ಕೊಡಲಾಗಿರುವ ಅವಕಾಶಗಳು ಹಾಗಿವೆ.
ಸದ್ಯದ ಭಾರತೀಯ ರಾಜಕಾರಣದ ಮುಖ್ಯಧಾರೆಯಲ್ಲಿರುವ ಐವರು ಹೆಣ್ಣುಗಳ ಬದುಕು ಮತ್ತು ಸಾಧನೆಗಳು ವಿಶಿಷ್ಟವೇ. ಅವರ ಹಗರಣಗಳೂ ಕೂಡಾ. ಭ್ರಷ್ಟಾಚಾರದ ವಿಷಯಕ್ಕೆ ಬಂದಾಗ ಅಲ್ಲಿ ಕೂಡ ಲಿಂಗ ತಾರತಮ್ಯ ಇರುವುದಿಲ್ಲ. ವಿಚಾರಣೆ, ಶಿಕ್ಷೆ, ಪರಿಣಾಮಗಳಿಗೆ ಸಂಬಂಧಿಸಿದಂತೆ ಅದನ್ನು ತರತಮವಿಲ್ಲದೆಯೇ ನೋಡಬೇಕಾಗುತ್ತದೆ. ಈ ಸಾಮಾಜಿಕ ಆಯಾಮವನ್ನು ಮೀರಿ, ಮಾನಸಿಕ ಸ್ತರದಲ್ಲಿ ನೋಡುವಾಗ, ಮಾನವೀಯ ಚಿಂತನೆಗೆ ಹಚ್ಚಿ ನೋಡುವಾಗ ಬಿಚ್ಚಿಕೊಳ್ಳುವ ದೃಶ್ಯಗಳೂ ಬೇರೆಯೇ ಇರುತ್ತವೆ. ಅಲ್ಲಿ ಮಾಯಾವತಿಯ ಮೂರ್ತಿಗಳಿಗೆ, ಚಿನ್ನದ ಕತ್ತಿಗಳಿಗೆ ಬೇರೆಯೇ ಅರ್ಥ ಕಾದಿರುತ್ತದೆ. ಹಿಂಜಿಹೋದ ಕಾಟನ್ ಸೀರೆಯನ್ನಷ್ಟೆ ಉಡುವ ಮಮತಾ ಬ್ಯಾನರ್ಜಿಯ ಹೆಸರು ಯಾಕೆ ಚೀಟಿ ವ್ಯವಹಾರದಂಥದರಲ್ಲಿ ಕಾಣಿಸುತ್ತದೆ ಎಂಬುದರ ಅರಿವಾಗುತ್ತದೆ. ಯಾಕೆ ಉಮಾ ಭಾರತಿ ಹಾಗೆ ರಚ್ಚೆ ಹಿಡಿದ ಮಗುವಿನಂತಾಡುತ್ತಾರೆ ಎಂದರೆ ಅವರ ಸೋತ ಹೃದಯದ ನೋವು ಕೇಳಿಸುತ್ತದೆ. ಸೋನಿಯಾರ ನಗುವಿಲ್ಲದ ಮುಖವೂ ಅವರ ಪರಿವಾರದೊಂದಿಗೆ ಹೆಣೆದುಕೊಂಡ ಹಗರಣಗಳು, ಹಣದ ವ್ಯವಹಾರಗಳು ಮತ್ತೊಂದೇ ಕಥೆ ಹೇಳತೊಡಗುತ್ತವೆ. ಈ ಎಲ್ಲವನ್ನು ಆ ಎಲ್ಲರ ಅಪರಾಧಗಳ ಸಮರ್ಥನೆಗಾಗಿ ಖಂಡಿತ ಬಳಸಬಾರದು. ಆದರೆ ಅರ್ಥೈಸಿಕೊಳ್ಳಲು ಮತ್ತು ನಮ್ಮನಮ್ಮ ಸ್ತರಗಳಲ್ಲಿ ಅವನ್ನು ಅನ್ವಯಿಸಿಕೊಂಡು ನೋಡಲು ಇವು ಬೇಕಾಗುತ್ತವೆ.
ಮತ್ತಷ್ಟು ಓದು 
ಧರ್ಮ ಮತ್ತು ಅಂಧತ್ವ
-ಡಾ ಅಶೋಕ್ ಕೆ ಆರ್.
ಆಗ ನಾನು ಕಲ್ಬುರ್ಗಿಯಲ್ಲಿ ಓದುತ್ತಿದ್ದೆ. ಗೆಳೆಯನೊಬ್ಬನನ್ನು ಕಾಣುವ ಸಲುವಾಗಿ ಕಲ್ಬುರ್ಗಿಯಿಂದ ಲಿಂಗಸೂರು ಕಡೆಗೆ ಹೋಗುವ ಬಸ್ಸನ್ನೇರಿದೆ. ದಾರಿ ಮಧ್ಯದಲ್ಲಿ ಕುಟುಂಬವೊಂದು ಬಸ್ಸಿನೊಳಗೆ ಬಂತು. ಮಗ, ಸೊಸೆ ಮತ್ತು ಅತ್ತೆ ಎಂಬುದು ಅವರ ಮಾತಿನಿಂದ ಅರಿವಾಗುತ್ತಿತ್ತು. ಅದು ಮುಸ್ಲಿಂ ಕುಟುಂಬವೆಂದು ತಿಳಿದಿದ್ದು ಬುರ್ಖಾ ಧರಿಸಿದ್ದ ಸೊಸೆಯ ಉಡುಪಿನಿಂದ. ಉತ್ತರ ಕರ್ನಾಟಕದ ಕಡೆ (ನಂತರದ ದಿನಗಳಲ್ಲಿ ಕರಾವಳಿ ಭಾಗದಲ್ಲೂ ಕಂಡಂತೆ) ಮುಸ್ಲಿಮರನ್ನು ಅವರ ಮಾತಿನ ದಾಟಿಯಿಂದ ಗುರುತು ಹಿಡಿಯಲಾಗುವುದಿಲ್ಲ ನಮ್ಮ ಹಳೆ ಮೈಸೂರು ಭಾಗದಲ್ಲಿ ಗುರುತಿಸುವಂತೆ, ಮತ್ತು ಬಹುತೇಕ ಎಲ್ಲ ಕನ್ನಡ ಚಿತ್ರಗಳಲ್ಲೂ ತೋರಿಸಿರುವಂತೆ. ಅಂದು ಬಸ್ಸೇರಿದ ಕುಟುಂಬದಲ್ಲಿ ಅತ್ತೆ ಉತ್ತರ ಕರ್ನಾಟಕದ ಕಡೆಯ ಸೀರೆಯನ್ನು ಉಟ್ಟಿದ್ದರು, ಸೊಸೆ ಬುರ್ಖಾಧಾರಿಯಾಗಿದ್ದರು.
ಕಳೆದೊಂದು ವಾರದಿಂದ ಅಂತರ್ಜಾಲ ತಾಣಗಳಲ್ಲಿ ಬುರ್ಖಾದ ಬಗೆಗಿನ ಚರ್ಚೆ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಮೇಲಿನ ಘಟನೆ ನೆನಪಾಯಿತು. ‘ನಾನು ವಿವಾದದ ವಿಷಯಗಳನ್ನು ಎತ್ತಿಕೊಂಡು ಮಾತನಾಡುತ್ತಿದ್ದೇನೋ ಅಥವಾ ನಾನು ಮಾತನಾಡಿದ್ದೆಲ್ಲವೂ ವಿವಾದವಾಗುತ್ತೋ ಗೊತ್ತಿಲ್ಲ’ ಎಂದೇ ಮಾತುಗಳನ್ನಾರಂಭಿಸಿದ್ದ ದಿನೇಶ್ ಅಮೀನ್ ಮಟ್ಟುರವರ ಮಾತುಗಳು ಮತ್ತೆ ಚರ್ಚೆಗಳೊಂದಷ್ಟನ್ನು ಹುಟ್ಟುಹಾಕಿವೆ. ಪತ್ರಕತ್ರ ಬಿ.ಎಂ.ಬಷೀರ್ರವರ “ಬಾಡೂಟದ ಜೊತೆ ಗಾಂಧಿ ಜಯಂತಿ” ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ. ಅವರು ಮೋದಿಯ ಬಗ್ಗೆ, ಮಾಧ್ಯಮದ ಬಗ್ಗೆ, ಮಂಗಳೂರಿನ ಕೋಮು ಸಾಮರಸ್ಯದ ಬಗ್ಗೆ, ಆ ಕೋಮು ಸಾಮರಸ್ಯದಿಂದಲೇ ಹುಟ್ಟಿದ ಕೋಮುವಾದತನದ ಬಗ್ಗೆ, ಕೋಮುವಾದಿಗಳ ಅಟ್ಟಹಾಸದ ನಡುವೆಯೇ ನಿಜ ಜಾತ್ಯತೀತ ಮನೋಭಾವದ ಧರ್ಮಸಹಿಷ್ಣುಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ಕೊನೆಗೆ ಅವರ ಭಾಷಣ ಚರ್ಚೆಗೊಳಗಾಗುತ್ತಿರುವುದು ಅವರು ಪ್ರಸ್ತಾಪಿಸಿದ ಬುರ್ಖಾ ಪದ್ಧತಿಯ ಬಗೆಗೆ ಮಾತ್ರ! ಅವರು ಬುರ್ಖಾ ವಿಷಯಕ್ಕೆ ಬರುವುದಕ್ಕೆ ಮೊದಲು ಮುಸ್ಲಿಂ ಸಮಾಜದ ಒಳಬೇಗುದಿಗಳನ್ನು ಸಮಾಜದ ಮುಂದೆ ತೆರದಿಡುವ ಕೆಲಸವನ್ನು ಬೋಳುವಾರ ಮೊಹಮದ್, ಸಾರಾ ಅಬೂಬಕ್ಕರ್, ಫಕೀರ್ ಮೊಹಮದ್ ಕಟ್ಪಾಡಿ ಸಮರ್ಥವಾಗಿ ನಿರ್ವಹಿಸಿದ್ದಾರೆ. ಅವರು ಹಾಕಿದ ದಾರಿಯಲ್ಲಿ ಜ್ಯೋತಿಯನ್ನಿಡಿದು ನಡೆಯುವವರ ಕೊರತೆ ಎದ್ದು ಕಾಣುತ್ತಿದೆ ಎಂಬ ಮಾತುಗಳನ್ನು ಹೇಳಿದ್ದಾರೆ. ಬಿ.ಎಂ.ಬಷೀರ್ ಸ್ವಲ್ಪ ಸಾಫ್ಟ್ ಕಾರ್ನರಿನಲ್ಲಿ ಬರೆಯೋದು ಜಾಸ್ತಿ. ಮುಸ್ಲಿಂ ಸಮುದಾಯದ ತಲ್ಲಣಗಳು ಈ ಪುಸ್ತಕದಲ್ಲಿ ಕಾಣಸಿಗುತ್ತಿಲ್ಲ ಎಂದು ಸಲಹೆಯನ್ನು ಕೊಟ್ಟಿದ್ದಾರೆ. ಮುಸ್ಲಿಮನಾದವನು ಆ ಸಮುದಾಯದ ತಲ್ಲಣಗಳನ್ನು ಸಮರ್ಥವಾಗಿ ಬಿಂಬಿಸಲು ಸಾಧ್ಯ ಎಂಬುದು ಎಷ್ಟು ಸತ್ಯವೋ ಮುಸ್ಲಿಂ ಲೇಖಕನಾದ ಮಾತ್ರಕ್ಕೆ ಮುಸ್ಲಿಂ ಸಮುದಾಯದ ತಲ್ಲಣಗಳನ್ನಷ್ಟೇ ಬರೆಯಬೇಕು ಎಂಬುದೂ ಒಪ್ಪತಕ್ಕ ವಿಷಯವೇನಲ್ಲ. ಮತ್ತಷ್ಟು ಓದು 
ಸಾಮಾನ್ಯನ ಕಣ್ಣಲ್ಲಿ ಕರಾವಳಿ ಕೋಮುವಾದ
-ಪ್ರಸಾದ್ ಗಣಪತಿ
ಪದೇ ಪದೇ ಕರಾವಳಿಯಲ್ಲಿ ಗಲಭೆಯಾದಾಗ ಕರಾವಳಿ ಕೋಮುವಾದ, ಕರಾವಳಿ ತಾಲಿಬಾನ್ ಎನ್ನುವ ಮಾತುಗಳು ಕೇಳಿ ಬರುತ್ತವೆ. ಪಕ್ಷವೊಂದರ ಆಡಳಿತಾವಧಿಯಲ್ಲಿ ನಡೆದ ಒಂದು ಸಮುದಾಯದ ಓಲೈಕೆ ನೀತಿಗಳು, ಹಾಗೂ ಒಂದು ಸಮುದಾಯದ ಮೇಲಿನ ಹಲ್ಲೆಗಳ ಬಗ್ಗೆ ತಳೆದ ಮೃದು ನೀತಿಗಳು ಈ ಅಸಹನೆ ಇದರ ಬೆನ್ನಿಗಿದ್ದಾವೆ ಎಂದು ಯಾರು ಹೇಳುವುದಿಲ್ಲ. ಪುತ್ತೂರಿನ ಹಿಂದೂ ಯುವತಿ ಸೌಮ್ಯ ಭಟ್ ಳನ್ನು ಇರಿದು ಕೊಂದಿದ್ದು, ಕಾಟಿಪಳ್ಳದಲ್ಲಿ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ, ಬಳ್ಕುಂಜೆ ರೇಪ್ ಮತ್ತು ಆತ್ಮಹತ್ಯೆ, ಲವ್ ಜಿಹಾದ್ ಮತ್ತು ಸಾಮಾಜಿಕ ತಾಣಗಳಲ್ಲಿ ಬೆತ್ತಲೆ ಚಿತ್ರಗಳ ( ಹಿಂದೂ ಯುವತಿಯರ ಚಿತ್ರ) ಈ ರೀತಿಯ ಪ್ರಕರಣಗಳಾದಗ ಸುಮ್ಮನಿರುವ ಬುದ್ಧಿ ಜೀವಿ ಬಳಗ, ಇನ್ನೊಂದು ಸಮುದಾಯದ ಮೇಲೆ ಹಲ್ಲೆ ನಡೆದಾಗ ಮಾತನಾಡುವುದು, ದೂರದೂರಲ್ಲಿ ಕುಳಿತು ಒಂದು ಪ್ರದೇಶದ ಜನರನ್ನು ಕೋಮುವಾದಿಗಳೆನ್ನುವುದು ಸತ್ಯಕ್ಕೆ ಅಪಚಾರವೆಸಗುವ ಕೆಲಸ. ಹಿಂದೆ ರೆಸಾರ್ಟ್ ಅಟ್ಯಾಕ್ ಆದಾಗ ಬರೆದ ಒಂದು ಲೇಖನದಲ್ಲಿ ನನ್ನ ಗ್ರಹಿಕೆಯನ್ನು ಬರೆದಿದ್ದೇನೆ.
ದೃಶ್ಯ ಮಾಧ್ಯಮದಲ್ಲಿ ಒಂದೇ ಸವನೆ ಮಂಗಳೂರಿನ ಪಡೀಲ್ನಲ್ಲಿ ನಡೆದ ಯುವಕ- ಯುವತಿಯರ ಮೇಲಿನ ಹಲ್ಲೆಯನ್ನು ನೋಡುತ್ತಾ ಯಾವುದು ಸರಿ ? ಯಾವುದು ತಪ್ಪು ? ಎಂದು ನಿರ್ಧರಿಸಲಾಗದ ಸ್ಥಿತಿಯಲ್ಲಿ ಜನರು ಇರಬಹುದುದಾದ ಈ ಹೊತ್ತಿನಲ್ಲಿ ನನ್ನ ಅಭಿಪ್ರಾಯ ಬರೆಯುತ್ತಿರುವೆ. ಸಾಮಾನ್ಯವಾಗಿ ಕೋಮುವಾದ, ಧರ್ಮ ರಕ್ಷಣೆಯ ಕೃತ್ಯವೆಂದು ಹೇಳಲ್ಪಡುತ್ತಿರುವ ಇವು ಇನ್ನೊಂದು ಮಗ್ಗುಲಲ್ಲಿ ನೋಡಿದರೆ ಸಾಂಸ್ಕೃತಿಕ,ಸಾಮಾಜಿಕ, ಸಂಘರ್ಷವಾಗಿ ಗೋಚರಿಸುತ್ತವೆ. ಸಾಮಾನ್ಯವಾಗಿ ಇಲ್ಲಿ ಏನು ನಡೆಯುತ್ತಿದೆ ಎಂದು ಇತರೆ ಪ್ರದೇಶದಲ್ಲಿ ಕುಳಿತವರಿಗೆ ಅರ್ಥವಾಗುವುದು ಕೊಂಚ ಕಷ್ಟ.
ಅವರೆಲ್ಲರೂ ಪ್ರತಿಭಾವಂತರೇ ಆದರೆ…..
ಭಾರತದಲ್ಲಿ ಹಗರಣಗಳು ಹೊಸದಲ್ಲ, ಹಗರಣಗಳ ಕುರಿತ ರಾಜಕೀಯ ಮತ್ತು ರಾಜಕೀಯೇತರ ಗದ್ದಲ, ಪ್ರತಿಭಟನೆಗಳು ಹೆಚ್ಚಾಗಿ ಚಳುವಳಿಗಳಾಗಿ ಮಾರ್ಪಟ್ಟ ನಂತರ ಅಧಿಕಾರದಲ್ಲಿರುವ ಪಕ್ಷಗಳು ಆ ಹಗರಣದ ತನಿಖೆಗೆ ವಿವಿಧ ಹಂತದ ತನಿಖಾ ಆಯೋಗಗಳನ್ನು ರಚಿಸುವುದೂ ಹೊಸದಲ್ಲ. ಸಿ.ಐ.ಡಿ ಪೋಲೀಸರಿಂದ ಹಿಡಿದು ನ್ಯಾಯಂಗ, ಸದನ ಸಮಿತಿ, ಸಿ.ಬಿ.ಐ ಸಂಸ್ಥೆಗಳೆಲ್ಲವನ್ನೂ ತನಿಖೆ ಮಾಡಲು ನಿಯೋಜಿಸುವುದು ಸಾಮಾನ್ಯ. ವಿಪರ್ಯಾಸದ ಸಂಗತಿಯೆಂದರೆ ಇಂತಹ ಎಷ್ಟೋ ತನಿಖಾ ಸಂಸ್ಥೆಗಳು ನೀಡಿದ ಅನೇಕಾನೇಕ ವರದಿಗಳು ಅನುಷ್ಠಾನಗೊಳ್ಳದೆ ಸರಕಾರದ ಯಾವುದೋ ಒಂದು ಕಛೇರಿಯಲ್ಲಿ ಧೂಳು ಹಿಡಿದು ಹಾಳಾಗುತ್ತವೆಯೇ ಹೊರತು ತನಿಖಾ ಆಯೋಗ ನೀಡಿದ ಸಲಹೆ ಸೂಚನೆಗಳನ್ನು ಯಥಾವತ್ತಾಗಿ ಜಾರಿಗೆ ತರುವುದು ಅಪರೂಪದ ಸಂಗತಿಯೇ ಆಗಿಹೋಗಿದೆ.
ಸಲಹೆ ಸೂಚನೆಗಳು ಜಾರಿಗೆ ಬರದಿರಲು ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ, ರಾಜಕೀಯ ಪಕ್ಷಗಳ ವೋಟ್ ಬ್ಯಾಂಕ್ ಅನಿವಾರ್ಯತೆ, ಅಧಿಕಾರಸ್ಥ ಪಕ್ಷಗಳೇ ಬದಲಾವಣೆಗೊಳ್ಳುವುದು ಮತ್ತು ಕೆಲವು ಸಂದರ್ಭದಲ್ಲಿ ಆರೋಪಕ್ಕೊಳಗಾದವರು ಮತ್ತು ವಿವಿಧ ಕಾರಣಗಳಿಂದ ಅವರಿಗೆ ಬೆಂಬಲ ನೀಡುವವರು ಪ್ರತಿಭಟನೆಯ ರೂಪದಲ್ಲಿ ವಿರೋಧ ವ್ಯಕ್ತಪಡಿಸುವುದು. ಬಿಜೆಪಿಯ ದುರಾಡಳಿತದಿಂದ ಬೇಸತ್ತು ಕಾಂಗ್ರೆಸ್ಸಿಗೆ ಅವಕಾಶ ನೀಡಿದ ಕರ್ನಾಟಕದ ಮತದಾರ ಕಳೆದೊಂದೂವರೆ ವರುಷದಿಂದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ಭ್ರಮನಿರಸನಕ್ಕೊಳಗಾಗಿರುವುದೇ ಅಧಿಕ. ಮತ್ತಷ್ಟು ಓದು 
ತೂಕಡಿಸಿ ತೂಕಡಿಸಿ ಬೀಳದಿರು ಅಣ್ಣ …ನಮ್ಮ ಅಣ್ಣ….ಸಿದ್ರಾಮಣ್ಣ….!!
– ರಾಘವೇಂದ್ರ ನಾವಡ
ಇತ್ತೀಚಿನ ಸಿದ್ರಾಮಣ್ಣನವರನ್ನು ನೋಡುತ್ತಿದ್ದರೆ, ನನಗೆ ಒಮ್ಮೊಮ್ಮೆ ಅನುಮಾನಗಳು ಏಳುತ್ತವೆ! ಸಿದ್ರಾಮಣ್ಣನಲ್ಲಿ ಏನಾದರೂ ಕು೦ಭಕರ್ಣನ ಆತ್ಮ ಸೇರಿಬಿಟ್ಟಿದೆಯೇ? ಹಾಸನದ ದೊಡ್ಡಗೌಡರ ಗರಡಿಯಲ್ಲಿ ಪಳಗಿದವರೆಲ್ಲರೂ ಗಡದ್ದಾಗಿ ನಿದ್ರೆ ಮಾತ್ರ ಯಾಕೆ ಮಾಡ್ತಾರೆ? ದೊಡ್ಡ ಗೌಡರನ್ನೇ ತೆಗೆದುಕೊಳ್ಳಿ… ಪ್ರಧಾನಿಯಾಗಿದ್ದಾಗಲ೦ತೂ ಬಿಡಿ..ಸಿಕ್ಕಾಪಟ್ಟೆ ಕೆಲಸದ ಟೆನ್ಶನ್.. ಆದರೆ ಪಟ್ಟದಿ೦ದ ಇಳಿದ ೧೯೯೦ ರ ದಶಕದಿ೦ದ ಇಲ್ಲಿಯವರೆವಿಗೂ ಮಧ್ಯದಲ್ಲಿ ಎಲ್ಲಾದರೂ ಅಪರೂಪಕ್ಕೆ ಏಳ್ತಾರೆ! ಗದ್ದಕ್ಕೆ ಕೈಕೊಟ್ಟು ಗಡದ್ದಾಗಿ ನಿದ್ರೆ ಹೊಡಿತಾ ಕೂತು ಬಿಟ್ಟರೆ ಮುಗೀತು.. ಊರ ಗೌಡ ಏಕೆ.. ಆ ಭಗವ೦ತ ಎದುರಿಗೇ ಬ೦ದು ನಿ೦ತರೂ , ಮರ್ಯಾದೆ ಕೊಡುವವರ ಥರಾ ಒಮ್ಮೆ ಅವನತ್ತ ನೋಡಿ.. ಮತ್ತೆ ಕಣ್ಮುಚ್ಚಿ ಬಿಡ್ತಾರೆ! ಮೊನ್ನೆ ಅಧಿವೇಶನದಲ್ಲಿ ನಮ್ಮ ಮಾಜಿ ಮುಖ್ಯಮ೦ತ್ರಿ.. ದೊಡ್ಡಗೌಡರ ಪ್ರೀತಿಯ ಮಗ ಕುಮಾರಣ್ಣ ಅಪ್ಪ೦ದೇ ಶೈಲಿಯಲ್ಲಿ ಗದ್ದಕ್ಕೆ ಕೈಕೊಟ್ಟು ಅಲ್ಲಿಯೇ….. ದೊಡ್ಡಗೌಡರ ದೊಡ್ಡ ಮಗನವರೂ ಹಾಗೆಯೇ… ಹೀಗೆ ಮೊದಲಿನಿ೦ದಲೂ ಇದೇ ಗರಡಿಯಲ್ಲಿಯೇ ಅಣ್ಣತಮ್ಮ೦ದಿರ ಅಕ್ಕಪಕ್ಕವೇ ಬೆಳೆದು, ದೊಡ್ಡಗೌಡರ ಮಾನಸ ಪುತ್ರನೇ ಆಗಿ ಹೋಗಿದ್ದ ಸಿದ್ರಾಮಣ್ಣ, ಗೌಡ್ರ ಗರಡಿಯಿ೦ದ ಹೊರಗೆ ಬ೦ದ ಮೇಲೆ ಆ ದುಷ್ಟಬುಧ್ಧಿಯನ್ನು ಬಿಟ್ಟರೇನೋ ಎ೦ದು ಅ೦ದಾಜಿತ್ತು!
ಹೂ೦ ಹೂ೦.. ಎಲ್ಲಿ೦ದ ಬಿಡೋದು.. ಮುಖ್ಯಮ೦ತ್ರಿ ಆಗೋತನಕ ಬಿಟ್ಟಿದ್ರೇನೋ! ಒಮ್ಮೆ ಪಟ್ಟದ ಮೇಲೆ ಕುಳಿತರು ನೋಡಿ.. ಅಲ್ಲಿ೦ದ ಕು೦ಭಕರ್ಣನ ಅಪರಾವತಾರವೇ ಆಗಿಹೋಗಿದ್ದಾರೆ!!





