ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

9
ಮೇ

ಒಂದು ರಾಜಕೀಯ ವಿಡಂಬನೆ:ಬಪ್ಪರೆ ಬಪ್ಪ.. ತಿಪ್ಪರ್ ಲಾಗ ಹಾಕಪ್ಪಾ…

– ತುರುವೇಕೆರೆ ಪ್ರಸಾದ್

indian-politician1            ಎಲೆಕ್ಷನ್ ಆದ್ಮೇಲೆ ಯಾವ ಯಾವ ಮುಖಂಡರು ಏನೇನು ಮಾಡ್ತಿದಾರೆ ಅಂತ ಸಮೀಕ್ಷೆ ಮಾಡೋಕೆ ರಾಂಪ ಪಕ್ಷಭೇದ ಮರೆತು ಎಲ್ಲರ ಮನೆ, ಪಕ್ಷಗಳ ಅಡ್ಡೆಗೆ ಬಿಜುಗೈದ. ವಿವಿಧ ರಾಜಕೀಯ ಮುಖಂಡರು ರಿಸಲ್ಟ್ ಬರೋತನಕ ಏನು ಸ್ಟಾಪ್‍ಗ್ಯಾಪ್ ಅರೇಂಜ್‍ಮೆಂಟ್ ಮಾಡ್ಕೊಂಡಿದಾರೆ ಅನ್ನೋ ರಾಂಪನ ಪ್ರಶ್ನೆಗೆ ಬಂದ ಪ್ರತಿಕ್ರಿಯೆಗಳು ಕೆಳಕಂಡಂತಿವೆ.

ಜೋಕುಮಾರ್:ನಿಜ! ರಿಸಲ್ಟ್ ಗೆ ಒಂದು ತಿಂಗಳು ಕಾಯೋದು ಅಂದ್ರೆ ತುಂಬಾ ಕಷ್ಟ. ಈ ಕಾಲ್ದಲ್ಲಿ ಸಿಇಟಿ ರಿಸಲ್ಟೇ 15ದಿನಕ್ಕೆ ಬರುತ್ತೆ. ಅಂತಾದ್ರಲ್ಲಿ ಎಲೆಕ್ಷನ್ ರಿಸಲ್ಟ್ ಇಷ್ಟು ಲೇಟಾದ್ರೆ ಹೇಗೆ? ಈ ಒಂದು ತಿಂಗಳಲ್ಲಿ ಎಲ್ಲಾ ದೇಸೀ ಅಂಗಮರ್ದನ, ಫಾರಿನ್ ಮಸಾಜ್ ಸೆಂಟರ್‍ಗಳನ್ನ ವಿಸಿಟ್ ಮಾಡ್ಬೇಕು ಅಂದ್ಕೊಂಡಿದೀನಿ. ಹಾಗೇ ಹೊಸ ಚಿತ್ರ ‘ಕಣ್ಣೀರ್ ಕಣ್ಣೀರ್’ ಡಾಕ್ಯುಮೆಂಟರಿನ ಸಹಾರಾ ಡೆಸರ್ಟ್‍ನಲ್ಲಿ ಶೂಟ್ ಮಾಡ್ಬೇಕು ಅಂತ ಪ್ಲಾನಿದೆ. ರೈತರಿಗಾಗಿ ನೀರು ಮರುಪೂರಣ ತರ ಕಣ್ಣೀರು ಮರುಪೂರಣ ಮಾಡೋ ಬಗ್ಗೆ ಹೊಸ ಹೊಸ ಯೋಜನೆಗಳ ಸ್ಕೆಚ್ ಹಾಕಿದೀನಿ. ಇದು ಯಾವಾಗ್ಲೂ ಕಣ್ಣಿರು ಸುರಿಸೋ ರೈತರಿಗೆ ಹಾಗೂ ರಾಜಕೀಯ ಮುಖಂಡರಿಗೆ ಉಪಯೋಗ ಆಗುತ್ತೆ.

ಮುದ್ದೇಗೌಡರು:ಮುದ್ದೆ ತಿಂದ ತಕ್ಷಣ ಕಣ್ ಎಳ್ಕೊಂಡು ಹೋಗ್ತಿತ್ತು. ಈಗ ಯಾಕೋ ಕಾಂಪೋಸ್ ನುಂಗುದ್ರೂ ನಿದ್ದೆ ಹತ್ತುತ್ತಿಲ್ಲ. ಕೇಳ್ಕೊಂಡು ತೂಕಡಿಸೋಣ ಅಂದ್ರೆ ಲೋಕಲ್ ಭಾಷಣಗಳೂ ಇಲ್ಲ. ಕೇರಳದಲ್ಲಿ ಯಾರೋ ನಿದ್ದೆಗೆ ಆಯುರ್ವೇದ ಔಷಧಿ ಕೊಡ್ತಾರಂತೆ, ಅಲ್ಲಿಗೆ ಹೋಗೋಣ ಅಂದ್ಕೊಂಡಿದೀನಿ..ಹಾಗೇ ಬರ್ತಾ ನಮ್ ಪಕ್ಷದ ಬಗ್ಗೆ ಹೀನಾಯವಾಗಿ ಮಾತಾಡ್ದೋರಿಗೆ ನಿದ್ದೆ ಕೆಡಿಸೋಕೆ ಏನಾದ್ರೂ ಮದ್ದು, ನಿಂಬೇಹಣ್ಣು ತಂದೇ ತರ್ಬೇಕು ಅಂದ್ಕೊಂಡಿದೀನಿ..

ಹುಡ್ಕೋ ಕುಮಾರ್:ಸಂಜಯ್ ಬಾರು ಅವರ ಪುಸ್ತಕ ಸ್ವಲ್ಪ ಲೇಟಾಗಿ ಸಿಕ್ತು. ಇಲ್ಲ ಅಂದಿದ್ರೆ ಕೈ ಪಕ್ಷದೋರು ಬಾರಲ್ಲೇ ಕೂದಲು ಕಿತ್ಕೊಳೋ ಹಾಗೆ ಮಾಡ್ತಿದ್ದೆ. ಈಗ ಅದನ್ನ ಸ್ಟಡಿ ಮಾಡ್ತಿದೀನಿ. ಅದೇ ಮಾದರಿಲಿ ‘ಮೇಕಿಂಗ್ ಆಫ್ ಮುದ್ದರಾಮಯ್ಯ- ಭಾಗ್ಯ ಬಂಡಲ್ಸ್ ‘ ಅಂತ ಒಂದು ನಾವೆಲ್ ಬರೆಯೋ ಸಿದ್ಧತೇಲಿದೀನಿ.ಹಾಗೇ ಒಂದು ಪದ್ಯ ಬರ್ದಿದೀನಿ ಕೇಳಿ..

ಸಂಜಯ ಬರು

ಎಬ್ಸಿದ್ದಾರೆ ಕೈ ಸಿಬಿರು

ಸಿಂಗ್ ಬರೀ ಡಾಲು

ಸೋನಿಯಾದೇ ಡೌಲು?

ಚಂದನ್ ಕಣಿ:‘ದೇಹಕೆ ಉಸಿರೇ ಸದಾ ಭಾರ, ಇಲ್ಲ ಆಧಾರ’ ಈ ಹಳೇ ಹಾಡಿಗೆ ‘ಕೈ ಪಕ್ಷಕೆ ಸಂಜಯ ಸದಾ ಭಾರ, ಆರೋಪಕಿಲ್ಲ ಆಧಾರ’ ಅಂತ ಹೊಸ ಟ್ಯೂನ್ ಹಾಕ್ತಿದೀನಿ. ಎಲ್ಲರ ಅಧಿಕೃತ, ಅನಧಿಕೃತ ಹೆಂಡ್ತೀರನ್ನ ಹುಡುಕೋ ಒಂದು ಹೊಸ ಸಾಫ್ಟ್ವೇರ್ ಡವಲಪ್ ಮಾಡ್ಬೇಕು ಅಂತ ಪ್ಲಾನ್ ಮಾಡ್ತಿದೀನಿ ಮತ್ತಷ್ಟು ಓದು »

17
ಏಪ್ರಿಲ್

ಕಾಂಗ್ರೆಸ್ ರಹಿತ ಭಾರತ ಸಾಧ್ಯವೇ?

– ಡಾ.ಅಶೋಕ್. ಕೆ. ಆರ್

indian-politician1‘ಯಥಾಸ್ಥಿತಿಗೋ ಬದಲಾವಣೆಗೋ ಸ್ಥಿರತೆಗೋ ಅಭಿವೃದ್ಧಿಗೋ ಸ್ಥಳೀಯ ಅನಿವಾರ್ಯತೆಗೋ ಮತ್ತೊಂದಕ್ಕೋ ಮಗದೊಂದಕ್ಕೋ ಒಟ್ಟಿನಲ್ಲಿ ಹೋಗಿ ವೋಟ್ ಮಾಡಿ!’

ಮೋದಿ ಜಪದ ಭಾಜಪ ಕಾಂಗ್ರೆಸ್ಸನ್ನು ಭಾರತದಿಂದ ಸಂಪೂರ್ಣ ನಿರ್ನಾಮವಾಗಿಸುವುದೇ ನಮ್ಮ ಗುರಿ ಎಂದು ಬಹಳಷ್ಟು ಪ್ರಚರಿಸುತ್ತಿದೆ. ಅನೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಏಳಿಗೆಯಿಂದ ರಾಷ್ಟ್ರೀಯ ಪಕ್ಷಗಳೆನ್ನಿಸಿಕೊಂಡ ಕಾಂಗ್ರೆಸ್ ಮತ್ತು ಭಾಜಪ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳಲೂ ಎಣಗುತ್ತಿರುವ ಪರಿಸ್ಥಿತಿಯಿದೆ. ಒಂದಷ್ಟು ರಾಜ್ಯಗಳಲ್ಲಿ ಭಾಜಪ ಪ್ರಭಾವಶಾಲಿಯಾಗಿ ಮಗದೊಂದಷ್ಟು ಕಡೆ ಕಾಂಗ್ರೆಸ್ ಪ್ರಭಾವಶಾಲಿಯಾಗಿ ಮತ್ತೊಂದು ಪಕ್ಷದ ಏಳಿಗೆಗೆ ಅಡ್ಡಿಯಾಗಿದ್ದರೆ ಇನ್ನುಳಿದವುಗಳಲ್ಲಿ ಮತದಾರ ಒಮ್ಮೆ ಕಾಂಗ್ರೆಸ್ಸಿಗೆ ಮತ್ತೊಮ್ಮೆ ಭಾಜಪಕ್ಕೆ ಅವಕಾಶ ನೀಡುವ ಮನಸ್ಸು ಮಾಡಿದ್ದಾನೆ.
ಕಾಂಗ್ರೆಸ್ಸಿಗರು ಮಾಡುವ ಭ್ರಷ್ಟಾಚಾರದಿಂದ ರೋಸಿ ಹೋಗಿ ಬೇರೊಂದು ಪಕ್ಷಕ್ಕೆ ಮತ ಹಾಕುವ ಜನರ ತೀರ್ಮಾನ ಬಹಳಷ್ಟು ಸಲ ಬೆಂಕಿಯಿಂದ ಬಾಣಲೆಗೆ ಹಾಕಿಸಿಕೊಂಡಂತೆ ಆಗುತ್ತಿದೆ. ಮತ್ತಷ್ಟು ಓದು »

15
ಏಪ್ರಿಲ್

ಪ್ರತ್ಯಕ್ಷ ಕಂಡು ಪರಾಂಬರಿಸಿ ನೋಡಿದ ಮೇಲೂ ನಮೋ ಎನ್ನದಿದ್ದರೆ…

– ರಾಜೇಶ್ ರಾವ್

ಮೋದಿಯಾವ ಘಟನೆ ಸಹನೆಯ ಕಟ್ಟೆಯೊಡೆದು ಸ್ವಾಭಿಮಾನ ಸಿಡಿದೆದ್ದು ನಡೆದಿತ್ತೋ ಆ ಘಟನೆ ಆತನನ್ನು ಜಗತ್ತಿಗೇ ಪರಿಚಯಿಸಿತು. ಜಗತ್ತಿಗೆ ಜಗತ್ತೇ ಆತನನ್ನು ಖಳನಾಯಕನನ್ನಾಗಿ, ರಾಕ್ಷಸನನ್ನಾಗಿ ಕಂಡು ದೂಷಿಸಿತು. ಜೊತೆಯಲ್ಲಿದ್ದವರೂ ದೂರವಾದರು. ಮಾಧ್ಯಮಗಳಿಂದ ನಿತ್ಯ ದೂಷಣೆಗಳ ಸಹಸ್ರನಾಮ. ರಾಷ್ಟ್ರವಿರೋಧಿ ಶಕ್ತಿಗಳಂತೂ ಹಬ್ಬದೂಟವೆಂಬಂತೆ ಈ ಸನ್ನಿವೇಶವನ್ನು ತಮಗೆ ತಕ್ಕಂತೆ ಮಾರ್ಪಡಿಸಿಕೊಂಡು ಕಣ್ಣಿಗೆ ರಾಚುವ ಸತ್ಯವನ್ನು ಕಾಲಗರ್ಭದಲ್ಲಿ ಅಡಗುವಂತೆ ಮಾಡಿದರು. ಮಾಧ್ಯಮಗಳು ಮುಚ್ಚಿಟ್ಟ ಕಾರಣ ಸಾಮಾನ್ಯ ಜನರಿಗೂ ಸತ್ಯ ತಿಳಿಯದೆ ಅವರೂ ದ್ವೇಷಿಸತೊಡಗಿದರು. ಅವನದೆಲ್ಲವನ್ನೂ ಮೌನವಾಗಿ ಸಹಿಸಿದ. ಮೌನವಾಗಿಯೇ ಕೆಲಸವನ್ನು ಮಾಡುತ್ತಾ ತನ್ನ ಜವಾಬ್ದಾರಿಯನ್ನು ಚ್ಯುತಿಯಿಲ್ಲದಂತೆ ಪೂರೈಸಿದ. ಯಾಕೆಂದರೆ ಅವನಲ್ಲೊಬ್ಬ ನಾಯಕನಿದ್ದ, ಸಂಘಟನಕಾರನಿದ್ದ, ಸಂಘದ ಶಿಸ್ತು, ಸಂಯಮ, ಸೇವಾಗುಣದ ಮೂರ್ತರೂಪವಿತ್ತು!

ಅದು 2013ರ ಜೂನ್ ತಿಂಗಳು. ಶಾಂತವಾಗಿದ್ದ ಗಂಗೆ ಉಕ್ಕಿ ಹರಿದಿದ್ದಳು. ಉತ್ತರ ಭಾರತ ಜಲ ಪ್ರಳಯದಿಂದ ತತ್ತರಿಸಿತ್ತು. ಚಾರ್ ಧಾಮಗಳಲ್ಲಿ ಯಾತ್ರಿಕರು ನಾಲ್ಕೂ ಕಡೆ ದಿಕ್ಕಾಪಾಲಾಗಿದ್ದರು. ಉತ್ತರಾಖಂಡದ ಜನರ ಬವಣೆಗೆ ಉತ್ತರ ಹೇಳುವವರಿರಲಿಲ್ಲ. ಕೇಂದ್ರ, ರಾಜ್ಯ ಸರಕಾರಗಳೆರಡೂ ನಿಷ್ಕ್ರಿಯವಾಗಿದ್ದ ಅಂತಹ ಕ್ಲಿಷ್ಟಕರ ಸಮಯದಲ್ಲಿ ಸಹಾಯಕ್ಕಾಗಿ ಪರಿತಪಿಸುತ್ತಿದ್ದ ಸಾವಿರಾರು ಸಂತ್ರಸ್ಥರಲ್ಲಿ ಸುಮಾರು 15,000 ಮಂದಿ ಸಂತ್ರಸ್ಥರನ್ನು ಹುಡುಕಾಡಿ ಅವರ ನೆರವಿಗೆ ಧಾವಿಸಿದ ಆತನ ಪಡೆ, ಸುಮಾರು 80 ಟೊಯೊಟಾ ಇನ್ನೋವಾ ಕಾರುಗಳಲ್ಲಿ ಅವರನ್ನು ಡೆಹ್ರಾಡೂನಿನ ಸುರಕ್ಷಿತ ಸ್ಥಳಕ್ಕೆ ಸಾಗಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರಲ್ಲದೆ, ಅಲ್ಲಿಂದ 25 ಐಷಾರಾಮಿ ಬಸ್ಸುಗಳ ಸಹಾಯದಿಂದ ನವದೆಹಲಿಗೆ ಪ್ರಯಾಣ ವ್ಯವಸ್ಥೆ ಕಲ್ಪಿಸಿದರು. ಇದು ಒಬ್ಬ ನಾಯಕನಾದವ ಮಾಡುವ ಕಾರ್ಯ.ಪಾಕಿಸ್ತಾನದ ಪ್ರಧಾನಿ ನಮ್ಮ ದೇಶದ ಪ್ರಧಾನಿಯನ್ನು ಹಳ್ಳಿ ಹೆಂಗಸು ಎಂದು ಜರೆದಾಗ ಬೇರೆ ನಾಯಕರಿರಲಿ ಪ್ರಧಾನಿಯ ಪಕ್ಷದ ನಾಯಕರೇ ತುಟಿಪಿಟಿಕ್ಕೆನ್ನದಿದ್ದಾಗ ನಮ್ಮ ದೇಶದ ಪ್ರಧಾನಿಯನ್ನು ಹೀಯಾಳಿಸುವ ಅಧಿಕಾರ ತಮಗಿಲ್ಲವೆಂದು ಹೇಳುವ ಮೂಲಕ ಯುಧಿಷ್ಟಿರನ “ಮೂರನೆಯವ ಎದುರಾದಾಗ ನಾವು ನೂರೈವರು” ಎಂಬ ಮಾತನ್ನು ಅಕ್ಷರಷಃ ಪಾಲಿಸಿದ ನಾಯಕ ಪ್ರಸಕ್ತ ಸನ್ನಿವೇಶದಲ್ಲಿ ಆತನೊಬ್ಬನೇ!

ಮುನ್ನುಗ್ಗುತ್ತಿದ್ದ ವಿಸ್ತರಣಾ ಮನೋಭಾವದ ಚೀನಾಕ್ಕೆ ಖಡಕ್ಕಾಗಿ ಉತ್ತರ ನೀಡಿದ ನಾಯಕ ಆತನಲ್ಲದೆ ಮತ್ಯಾರು? ವೀಸಾಕ್ಕಾಗಿ ಅಂಗಲಾಚದೇ ಅಮೇರಿಕಾದವರನ್ನೇ ಭಾರತದ ವೀಸಾಕ್ಕಾಗಿ ಸರತಿಯಲ್ಲಿ ನಿಲ್ಲುವಂತೆ ಮಾಡುತ್ತೇನೆಂದು ಘೋಷಿಸುವ ಧೈರ್ಯ ಮತ್ಯಾರಿಗಿದೆ? ಹೌದು, ಯಾವ ದೊಣ್ಣೆನಾಯಕನ ಅಪ್ಪಣೆಗೆ ಕಾಯದೇ ಸಂಧಿಗ್ಧ ಪರಿಸ್ಥಿತಿಯಲ್ಲಿ ಸ್ವಯಂ ಖಚಿತ ನಿರ್ಧಾರದೊಂದಿಗೆ ಮುನ್ನುಗ್ಗುವುದು ಮಾತ್ರವಲ್ಲ ಅದನ್ನು ಯಶಸ್ವಿಯಾಗಿ ಪೂರೈಸುವುದನ್ನು ಹಾಗೂ ದೇಶದ ಘನತೆ, ಸ್ವಾಭಿಮಾನ, ಗೌರವಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳುವ ಧೈರ್ಯ-ಸ್ಥೈರ್ಯ ಪ್ರದರ್ಶಿಸುವುದನ್ನು ಸರ್ದಾರ ಪಟೇಲ್ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿಯವರ ನಂತರದ ರಾಜಕೀಯ ನಾಯಕರಲ್ಲಿ ನೋಡಬಹುದಾದ ಏಕೈಕ ವ್ಯಕ್ತಿ ನರೇಂದ್ರ ಮೋದಿ!

ಮತ್ತಷ್ಟು ಓದು »

14
ಏಪ್ರಿಲ್

ತುಷ್ಟೀಕರಣ ನಿಲ್ಲದ ಹೊರತು ಕಾಶ್ಮೀರ ತಣಿಯದು

– ಯೋಗೀಶ ತೀರ್ಥಪುರ

J&Kಕಾಶ್ಮೀರ ಹಿಂದೂಗಳ ಪಾಲಿಗೆ ನರಕವಾಗಿ ಪರಿವರ್ತಿತವಾಗಿದೆ. ಹಿಂಸೆ, ಶೋಷಣೆಯ ದಳ್ಳುರಿಯಲ್ಲಿ ಇಲ್ಲನ ಹಿಂದೂಗಳ ಸ್ಥಿತಿ ತೀರಾ ದಯನೀಯವಾಗಿದೆ. ಇಷ್ಟೆಲ್ಲ ನಡೆದಿದ್ದರೂ ಕಾಶ್ಮೀರ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತುಷ್ಟೀಕರಣ ರಾಜಕಾರಣದಲ್ಲೇ ಮುಂದುವರಿದಿರುವುದು ದುರದೃಷ್ಟಕರ.

1947ರ ವಿಭಜನೆಯ ನಂತರದ ಕಾಲದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ದಿಂದ ಸುಮಾರು 4.5 ಲಕ್ಷ ಹಿಂದುಗಳು ಕಾಶ್ಮೀರಕ್ಕೆ ಸ್ಥಳಾಂತರಗೊಂಡರು. ಈ ಹಿಂದುಗಳಿಗೆ ಕಾಶ್ಮೀರದಲ್ಲಿ ಮತದಾನದ ಹಕ್ಕಿಲ್ಲ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ಹಿಂದುಗಳಿಗೆ ವಿಧಾನಸಭೆಯಲ್ಲಿ 31% ರಷ್ಟೇ ಪ್ರತಿ ನಿಧಿತ್ವ ಸಿಗುವಂತೆ ಒಟ್ಟು ಸ್ಥಾನಗಳ ಹೊಂದಾಣಿಕೆಯನ್ನು ಮಾಡಲಾಗಿದೆ.

ಕಾಶ್ಮೀರಿ ಹಿಂದುಗಳಲ್ಲಿ ಸಾಕ್ಷರತಾ ಪ್ರಮಾಣವು 88%ರಷ್ಟು ಇದ್ದರೂ ರಾಜ್ಯ ಸರಕಾರದ ಸೇವೆ, ಸಾರ್ವಜನಿಕವಲಯ ಮತ್ತು ಸರಕಾರಿ ಕಂಪೆನಿಗಳಲ್ಲಿ ಹಿಂದು ಕಾರ್ಮಿಕರ ಪ್ರಮಾಣವು 4.8% ರಷ್ಟು ಮಾತ್ರ ಇದೆ. 1980 ರಿಂದ 1990ರ ಅವಧಿಯಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾದ ಮೇಲೆ ಈ ಪ್ರಮಾಣವು 1.7%ಕ್ಕೆ ಇಳಿಯಿತು. ಕಾಶ್ಮೀರದಲ್ಲಿನ ಯಾವ ಆರ್ಥಿಕ ವ್ಯವಹಾರವೂ ಹಿಂದೂಗಳ ಕೈಯಲ್ಲಿ ಇಲ್ಲ. ಕಾಶ್ಮೀರದ 97.4% ಭೂಮಿಯು ಮುಸಲ್ಮಾನರ ಒಡೆತನದಲ್ಲಿದೆ. ಕೇವಲ 2.6% ಭೂಮಿಯು ಮಾತ್ರ ಹಿಂದು ಮತ್ತು ಇತರ ಅಲ್ಪಾಸಂಖ್ಯಾತರ ಒಡೆತನದಲ್ಲಿದೆ. 1985ರಲ್ಲಿ ಕಾಶ್ಮೀರದಲ್ಲಿ ನೋದವಣೆ ಮಾಡಲ್ಪಟ್ಟ ಲಘು ಉದ್ಯೋಗಗಳ ಸಂಖ್ಯೆ 46,293 ಇತ್ತು. ಇದರಲ್ಲಿ 0.01% ರಷ್ಟು ಉದ್ಯೋಗಗಳು ಹಿಂದುಗಳ ಒಡೆತನದಲ್ಲಿದ್ದವು ಮತ್ತು ವಿದ್ಯುತ್ ಆಧಾರಿತ ಉದ್ಯೋಗಗಳ ಪೈಕಿ 98.9%ರಷ್ಟು ಮುಸಲ್ಮಾನರ ಒಡೆತನದ್ದಲಿವೆ. ಕಾಶ್ಮೀರದಲ್ಲಿನ 96%ರಷ್ಟು ಸೇಬು ತೋಟಗಳ ಜಮೀನು ಮುಸಲ್ಮಾನರ ಒಡೆತನದ್ದಲಿದೆ.

ಮತ್ತಷ್ಟು ಓದು »

9
ಏಪ್ರಿಲ್

ಮಹಾತ್ಮಾ ಗಾಂಧಿಯವರ ಆಸೆಯನ್ನು ನೆರವೇರಿಸಲಿರುವ ಸೋನಿಯಾ!

– ನರೇಂದ್ರ ಕುಮಾರ್

Sonia1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ, ಕಾಂಗ್ರೆಸ್ಸಿನ ನಾಯಕರ ಮುಂದೆ ಮಹಾತ್ಮಾ ಗಾಂಧಿಯವರು ತಮ್ಮ ಆಸೆಯೊಂದನ್ನು ಹೇಳಿದರು. ಅದೆಂದರೆ, “ಭಾರತಕ್ಕೆ ಸ್ವಾತಂತ್ರ್ಯ ಪಡೆಯುವುದು ಕಾಂಗ್ರೆಸ್ಸಿನ ಉದ್ದೇಶವಾಗಿತ್ತು. ಈಗ ಅದು ನೆರವೇರಿದೆ. ಹೀಗಾಗಿ, ಇನ್ಮುಂದೆ ಕಾಂಗ್ರೆಸ್ಸಿನ ಆವಶ್ಯಕತೆಯಿರುವುದಿಲ್ಲ. ಈಗ ಕಾಂಗ್ರೆಸ್ಸನ್ನು ವಿಸರ್ಜಿಸಿಬಿಡೋಣ. ನಿಮಗೆ ಅಗತ್ಯವೆನಿಸಿದರೆ ಹೊಸದೊಂದು ರಾಜಕೀಯ ಪಕ್ಷವನ್ನು ಕಟ್ಟಿಕೊಳ್ಳಿ”. ಇದಕ್ಕೆ ಸರ್ದಾರ್ ಪಟೇಲರ ಸಮ್ಮತಿಯೂ ಇತ್ತು. ಆದರೆ, ಸ್ವತಂತ್ರ ಭಾರತದ ಪ್ರಧಾನಿಯಾಗುವ ಕನಸು ಕಾಣುತ್ತಿದ್ದ ಪಂಡಿತ್ ನೆಹರೂ ಅವರು ಇದಕ್ಕೆ ಒಪ್ಪಲಿಲ್ಲ. ಇಷ್ಟು ವರ್ಷಗಳ ಕಾಲ ಕಷ್ಟಪಟ್ಟ ನಂತರ, ಅದರ ಫಲವನ್ನು ಉಣ್ಣುವುದರಲ್ಲಿ ತಪ್ಪೇನಿದೆ ಎನ್ನುವುದು ಅವರ ವಾದವಾಗಿತ್ತು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರಿಂದ ಬಂದಿದ್ದ ಪ್ರಸಿದ್ಧಿಯನ್ನು ಅಧಿಕಾರದ ಖುರ್ಚಿಗೆ ಏರುವುದಕ್ಕೆ ಉಪಯೋಗಿಸಿಕೊಳ್ಳುವುದೇ ಸರಿ ಎಂದು ಅವರು ಹೇಳಿದರು. ಇದಾದ ಸ್ವಲ್ಪ ದಿನದಲ್ಲೇ ಗಾಂಧೀಜಿಯವರ ಕೊಲೆಯೂ ಆಗಿಹೋಯಿತು. ಗಾಂಧೀಜಿಯವರ ಆಸೆ ಹಾಗೆಯೇ ಉಳಿದು ಬಿಟ್ಟಿತ್ತು!

1947ರಲ್ಲಿ “ಸಂವಿಧಾನ ಸಭೆ” (Constituent Assembly) ಅಸ್ತಿತ್ವಕ್ಕೆ ಬಂದಿತು. ನೆಹರೂ ಪ್ರಧಾನಿಯಾದರು. ವಿವಿಧ ಪಕ್ಷಗಳಿಗೆ ಸೇರಿದವರಿಗೂ ಸರಕಾರದಲ್ಲಿ ಅವಕಾಶ ನೀಡಿದರು. ಆ ನಂತರ, ಸರಕಾರದಲ್ಲಿ ಕಾನೂನು ಮಂತ್ರಿಯಾಗಿದ್ದ ಡಾ||ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತದ ಸಂವಿಧಾನ ರಚನೆಯಾಯಿತು. 1951ರಲ್ಲಿ ಮೊದಲ ಚುನಾವಣೆಯಾಯಿತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 364 ಸ್ಥಾನಗಳು ಲಭಿಸಿದವು. ಮತ್ತಾವ ಪಕ್ಷವೂ ಮೂರಂಕಿ ಮುಟ್ಟಲಿಲ್ಲ. 1957ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸ್ಥಾನಗಳು 371 ಆದವು. ಈ ಬಾರಿಯೂ ಮತ್ತಾವ ಪಕ್ಷವೂ ಮೂರಂಕಿ ಮುಟ್ಟಲಿಲ್ಲ.
ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗಳಿಸಿದ ಸ್ಥಾನಗಳು ಕೆಳಗಿನ ಕೋಷ್ಟಕದಲ್ಲಿದೆ:

ಮತ್ತಷ್ಟು ಓದು »

30
ಮಾರ್ಚ್

ಕೃತಘ್ನ ಜಸ್ವಂತ್ ಸಿಂಗ್?

– ನರೇಂದ್ರ ಕುಮಾರ್

ಜಸ್ವಂತ್ ಸಿಂಗ್ಚುನಾವಣೆ ಘೋಷಣೆಯಾದಂತೆ ರಾಜಕಾರಣಿಗಳ ಬಣ್ಣ ಬಯಲಾಗಲು ಆರಂಭಿಸುತ್ತದೆ. ಚುನಾವಣೆಗೆ ಮುನ್ನ ಸಿದ್ಧಾಂತದ ಕುರಿತು ಮಾತನಾಡುವ ರಾಜಕಾರಣಿಗಳಿಗೆ, ಸಿದ್ಧಾಂತವೆನ್ನುವುದು ಕೇವಲ ರಾಜಕೀಯ ಪಕ್ಷದಲ್ಲುಳಿಯಲು ಇರುವ ಸಾಧನವಷ್ಟೇ ಎನ್ನುವುದು ಚುನಾವಣೆಯ ಸಮಯದಲ್ಲಿ ಸಾಬೀತಾಗುತ್ತದೆ. ಪ್ರತಿ ಚುನಾವಣೆಯ ಸಮಯದಲ್ಲೂ ಬಹಿರಂಗಗೊಳ್ಳುವ ಸಂಗತಿಯಿದು. ಇದೀಗ ಈ ರೀತಿ ಮುಖವಾಡ ಕಳಚಿ ನೈಜತೆ ಗೋಚರಿಸಿರುವುದು ಜಸ್ವಂತ್ ಸಿಂಗ್ ಅವರ ವಿಷಯದಲ್ಲಿ!

ಜಸ್ವಂತ್ ಸಿಂಗ್ ಕಳೆದ ಹಲವು ದಶಕಗಳಿಂದ ಭಾಜಪದೊಂದಿಗೆ ಜೋಡಿಸಿಕೊಂಡಿದ್ದಾರೆ. ಅವರು ತಮ್ಮನ್ನು ಭಾಜಪದೊಂದಿಗೆ ಜೋಡಿಸಿಕೊಂಡಿದ್ದಾರೆ ಎನ್ನುವುದಕ್ಕಿಂತ, ಭಾಜಪ ಪಕ್ಷವೇ ಅವರನ್ನು ತನ್ನೊಡನೆ ಸೇರಿಸಿಕೊಂಡಿದೆ ಎಂದು ಹೇಳಿದರೆ ಸರಿಯಾದೀತು. ಜಸ್ವಂತ್ ಸಿಂಗ್ ಎಂದೂ ಜನನಾಯಕರಾಗಿರಲಿಲ್ಲ. ಹೀಗಿದ್ದಾಗ್ಯೂ ಭಾಜಪ ಅವರಿಗೆ ತನ್ನ ಪಕ್ಷದಲ್ಲಿ ಸ್ಥಾನ ನೀಡಿತ್ತು. ವಾಜಪೇಯಿ ಸರಕಾರದಲ್ಲಿ ಅವರು ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನೂ ಪಡೆದರು. ಮುಂದೆ ಅವರ ಮಗನಿಗೂ ಭಾಜಪದಲ್ಲಿ ಸ್ಥಾನ ಸಿಕ್ಕಿತು ಮತ್ತು ವಿಧಾನಸಭೆಯಲ್ಲಿ ಶಾಸಕರಾದರು.

ಜಸ್ವಂತ್ ಸಿಂಗ್ ಅವರಿಗೆ ಒಂಬತ್ತು ಬಾರಿ ಸಂಸದರಾಗಲು ಭಾಜಪ ಅವಕಾಶ ನೀಡಿತು. 1989ರಲ್ಲಿ ಜೋಧಪುರ್ ಮತ್ತು 1991 ಹಾಗೂ 1996ರಲ್ಲಿ ಚಿತ್ತೋರಘರ್ ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿದರು. ಆದರೆ ಮುಂದಿನ ಚುನಾವಣೆಯಲ್ಲಿ, ಅಂದರೆ 1998ರಲ್ಲಿ ಅವರು ಚುನಾವಣೆಯಲ್ಲಿ ಸೋಲಬೇಕಾಯಿತು. ಹೀಗಿದ್ದಾಗ್ಯೂ ಅವರನ್ನು ರಾಜ್ಯಸಭೆಯ ಮೂಲಕ ಪ್ರವೇಶ ಮಾಡಿಸಿ, ಅವರನ್ನು ವಾಜಪೇಯೀ ಮಂತ್ರಿಮಂಡಲದಲ್ಲಿ ವಿದೇಶಾಂಗ ಮಂತ್ರಿಯನ್ನಾಗಿ ಮಾಡಲಾಯಿತು. ಮುಂದೆ 2002ರಲ್ಲಿ ಅವರು ವಿತ್ತಸಚಿವರಾಗಿ ಎರಡು ಬಾರಿ ಬಜೆಟ್ ಮಂಡಿಸುವ ಅವಕಾಶವನ್ನೂ ಪಡೆದರು. 2004ರಲ್ಲಿ ರಾಜ್ಯಸಭೆಗೆ ಪುನರ್ನಾಮಕರಣಗೊಂಡ ಜಸ್ವಂತ್ ಸಿಂಗ್ ಅವರು, 2009ರಲ್ಲಿ ಲೋಕಸಭಾ ಚುನಾವಣೆಗೆ ಡಾರ್ಜಿಲಿಂಗ್ ಇಂದ ಸ್ಪರ್ಧಿಸಿದರು. ಆ ಚುನಾವಣೆಯಲ್ಲಿ ಭಾಜಪಾವು ಗೋರ್ಖಾ ಜನಮುಕ್ತಿ ಮೋರ್ಚಾದೊಡನೆ ಹೊಂದಾಣಿಕೆ ಮಾಡಿಕೊಂಡದ್ದರಿಂದಾಗಿ ಜಸ್ವಂತ್ ಸಿಂಗ್ ಚುನಾವಣೆಯಲ್ಲಿ ಗೆದ್ದರು. 2012ರಲ್ಲಿ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಭಾಜಪಾವು ಚುನಾವಣೆಯಲ್ಲಿ ನಿಲ್ಲಿಸಿತ್ತು. ಆದರೆ, ಭಾಜಪಕ್ಕೆ ಆವಶ್ಯಕ ಬಹುಮತ ಇಲ್ಲದ್ದರಿಂದ ಜಸ್ವಂತ್ ಸಿಂಗ್ ಆ ಚುನಾವಣೆಯಲ್ಲಿ ಗೆಲ್ಲಲಿಲ್ಲ; ಹಮೀದ್ ಅನ್ಸಾರಿಯವರು ಉಪರಾಷ್ಟ್ರಪತಿಯಾದರು.

ಮತ್ತಷ್ಟು ಓದು »

22
ಮಾರ್ಚ್

೨೦೧೪ರ ಚುನಾವಣ ಕಣದ ಸುತ್ತ

– ಡಾ.ಕಿರಣ್ ಎಂ ಗಾಜನೂರು

Modi vs Rahulಭಾರತದಲ್ಲಿ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಂಡಿದೆ.ಹಾಗೆ ನೋಡುವುದಾದರೆ ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳಿಗಿಂತ ೨೦೧೪ರ ಈ ಲೋಕಸಭಾ ಚುನಾವಣೆ ಹೆಚ್ಚು ಚರ್ಚೆಯಲ್ಲಿದೆ ಮತ್ತು ಜನ ಸಮಾನ್ಯರಲ್ಲಿಯು ಒಂದು ಸಹಜ ಕುತೂಹಲವನ್ನು ಈ ಚುನಾವಣೆ ಹುಟ್ಟುಹಾಕಿದೆ.ಭಾರತದಲ್ಲಿನ ಪ್ರಮುಖ ರಾಜಕೀಯ ಚಿಂತಕರು,ಮಾಧ್ಯಮಗಳು ಈ ವಿದ್ಯಮಾನಕ್ಕೆ ಹಲವಾರು ಕಾರಣಗಳನ್ನು ಗುರುತಿಸಿದ್ದಾರೆ ಅದರಲ್ಲಿ ಬಹಳ ಮುಖ್ಯವಾದದ್ದು

೧) ಆಡಳಿತಾತ್ಮಕ ಮತ್ತು ಭ್ರಷ್ಟಾಚಾರದ ಕಾರಣಕ್ಕಾಗಿ (ಮುಖ್ಯವಾಗಿ ಬೆಲೆ ಎರಿಕೆ) ರೂಪಿತಗೊಂಡ ಕಾಂಗ್ರೆಸ್ಸ್ ವಿರೋಧಿ ನಿಲುವು
೨) ಬಿ.ಜೆ.ಪಿ ತನ್ನ ಪ್ರಧಾನಿ ಆಭ್ಯರ್ಥಿ ನರೆಂದ್ರ ಮೋದಿಯವರ ಹಿನ್ನಲೆಯಲ್ಲಿ ರೂಪಿಸಿಕೊಂಡ ಜನಪ್ರಿಯತೆ.

ಹಾಗಾದರೆ, ೨೦೧೪ ರ ಚುನಾವಣೆ ಈ ಎರಡು ನಿಲುಗಳ ಆಧಾರದಲ್ಲಿಯೆ ನಡೆಯುತ್ತದಾ? ದೇಶದ ಎಲ್ಲಾ ಭಾಗದ ಮತದಾರ ಈ ನಿಲುವುಗಳ ಆಧಾರದಲ್ಲಿಯೆ ಮತ ಚಲಾಯಿಸುತ್ತಾನಾ?  ಎಂಬ ಪ್ರಶ್ನೆಯನ್ನು ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳ ಹಿನ್ನಲೆಯಲ್ಲಿ ವಿಶ್ಲೇಷಿಸಿ ಕೇಳಿಕೊಂಡರೆ, ’ಖಂಡಿತಾ ಇಲ್ಲಾ’ ಎಂಬ ಉತ್ತರವನ್ನೂ ಯಾರಾದರೂ ನೀರಿಕ್ಷಿಸಬಹುದಾಗಿದೆ…! ಏಕೆಂದರೆ ಕಳೆದ ಹತ್ತು ವರ್ಷಗಳ ಕಾಲ ಈ ದೇಶವನ್ನು ಆಳಿದ ಯುಪಿಎ ಸರ್ಕಾರ ಹಲವಾರು ಹಗರಣಗಳನ್ನು ತನ್ನ ಮೇಲೆ ಎಳೆದುಕೊಂಡಿದ್ದರೂ ಆದರ ಜೊತೆ ಜೊತೆಗೆ ’ಆರ್.ಟಿ.ಐ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನ”ಯಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಸಮಾಜದ ಹಲವು ವರ್ಗಗಳ ಜನರ ಬೆಂಬಲವನ್ನು ಗಳಿಸಿಕೊಂಡಿದೆ .ಅದೂ ಅಲ್ಲದೆ, ಈ ದೇಶವನ್ನು ಹೆಚ್ಚು ಕಾಲ ಆಳಿದ ಕಾಂಗ್ರೆಸ್ಸ್ ಪಕ್ಷ ಅದರದ್ದೆ ಆದಂತಹ ಒಂದು ಮತದಾರರ ವರ್ಗ ಮತ್ತು ಬುದ್ದಿಜೀವಿಗಳ ಗುಂಪನ್ನು ಸೃಷ್ಟಿಸಿಕೊಂಡಿದೆ ಅವರು ಎಂದಿಗೂ ಕಾಂಗ್ರೆಸ್ಸ್ ಅನ್ನು ಬೆಂಬಲಿಸುತ್ತಾರೆ ಮತ್ತು ಚುನಾವಣೆಯಲ್ಲಿ ಈ ಅಂಶ ಖಂಡಿತವಾಗಿ ಪ್ರಭಾವ ಬೀರಲಿದೆ.ಇದರ ಜೊತೆಗೆ ದೇಶದ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ಸ್ ವಲಯದಲ್ಲಿ ಗುರುತಿಸಿಕೊಂಡಿರುವ ರಾಹುಲ್ ಗಾಂಧಿಯವರು ಇತ್ತಿಚೆಗೆ “ಭಾರತಕ್ಕೆ ಬೇಕಿರುವುದು ಇಲ್ಲಿನ ವಿವಿಧತೆಯನ್ನು ಅವುಗಳ ನೆಲೆಯಲ್ಲಿಯೆ ಗುರುತಿಸಿ ಬೆಳೆಸಬೇಕಾದ ರಾಜಕೀಯ ಪಕ್ಷವೆ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಲ್ಲ” ಎಂಬ ಮಾದರಿಯ ಪ್ರಜಾಸತ್ತಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಕಾಂಗ್ರೆಸ್ಸಿನಲ್ಲಿ ತಮ್ಮ ಈ ನಿಲುವನ್ನು ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಇದಕ್ಕೆ ಉದಾಹರಣೆ ಇತ್ತೀಚೆಗೆ ಕಾಂಗ್ರೆಸ್ಸ್ ಪಕ್ಷದೊಳಗೆ ನಡೆದ ಆಂತರಿಕ ಚುನಾವಣೆ.ಈ ಅಂಶವು ದೇಶದ ಮಧ್ಯಮ ವರ್ಗದ ಮತದಾರರನ್ನು ಖಂಡಿತಾ ಸೆಳೆಯುತ್ತದೆ.

ಮತ್ತಷ್ಟು ಓದು »

20
ಮಾರ್ಚ್

ಹೊಸ ಚಿಂತನೆ ಮೂಡಿ ಬರಲಿ

– ಡ್ಯಾನಿ ಪಿರೇರಾ,ಹಳ್ಳಿಮೈಸೂರು

ಸೆಕ್ಯುಲರ್ನಿಜ ಹೇಳಬೇಕೆಂದರೆ 2014ರ ಲೋಕಸಭಾ ಚುನಾವಣೆ ನಮ್ಮಲ್ಲಿನ ನೈಜ ರಾಷ್ಟ್ರೀಯತೆಗೆ ಅದರ ಪರಂಪರಾಗತವಾದ ಜಾತ್ಯಾತೀತತೆಯ ನಿಜ ಅರ್ಥವಂತಿಕೆಗೆ ಮತದಾರ ಕೊಡಬೇಕಾದ ಪ್ರಬುದ್ಧ ತೀರ್ಪು ಎನ್ನಬಹುದುದೇನೋ!  ಅದರಲ್ಲೂ ಈ ಚುನಾವಣೆ ಈ ದೇಶದ ಅಲ್ಪಸಂಖ್ಯಾತ-ಬಹುಸಂಖ್ಯಾತರೆಂಬ ಸಂಕುಚಿತ ಅವಕಾಶವಾದಿ ಮನೋಭೂಮಿಕೆಯನ್ನೊದ್ದು, ಈ ದೇಶ ಒಂದು ರಾಷ್ಟ್ರವಾಗಿ, ಜಾತಿ-ಮತಗಳ ಸಣ್ಣತನವನ್ನು ಬದಿಗಿಟ್ಟು, ಈ ದೇಶದ ಭವ್ಯ ಭವಿಷ್ಯವನ್ನು ಕಣ್ತುಂಬಿಕೊಳ್ಳಲು ಈ ದೇಶದ ಶ್ರೀಸಾಮಾನ್ಯನಿಗೆ ಸ್ವತಃ ಆ ಭಗವಂತನೇ ನೀಡಿದ ಅವಕಾಶವೆಂದರೆ ಖಂಡಿತ ಉತ್ಪ್ರೇಕ್ಷೆ ಎಂದು ಭಾವಿಸಬೇಕಿಲ್ಲ. ಅದಲ್ಲೂ ಇಲ್ಲಿನ ಅಲ್ಪಸಂಖ್ಯಾತರೆಂದೇ ಬಿಂಬಿಸಲ್ಪಡುವ ಕ್ರೈಸ್ತ-ಮುಸುಲ್ಮಾನ ಬಂಧುಗಳಿಗೂ ಈ ಚುನಾವಣೆ ಈ ದೇಶದ ತಮ್ಮ ವಾರಸಿಕೆ ಶೃತಪಡಿಸಲು ಇದೊಂದು ಸದವಕಾಶ ಎನ್ನಲು ಅವರು ಸಂಕೋಚಪಡಬೇಕಿಲ್ಲ. ಈ ದೇಶದ ಬಹುತೇಕ ರಾಜಕೀಯ ನಾಯಕರು ಬುದ್ಧಿಜೀವಿವರ್ಗ ಅಕ್ಷರಶಃ ಈ ದೇಶದ ನೈಜ ರಾಷ್ಟ್ರೀಯತೆ ಮತ್ತದರ ಪಾರಂಪರಿಕ ಜಾತ್ಯಾತೀತತೆಯ ವೈಶಾಲ್ಯತೆಯನ್ನು ಪ್ರತಿಪಾದಿಸಲು ಸಂಪೂರ್ಣ ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ದೇಶದ ಜಾತಿ-ಪಂಥಗಳಿಗೆ ಮೀರಿದ ಈ ರಾಷ್ಟ್ರ ನನ್ನದು, ಈ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಸವಾಲಾಗಿರುವ ಭಾರತದ ಇಂದಿನ ಜಾತ್ಯಾತೀತತೆಯ ವ್ಯಾಖ್ಯಾನದ ನೈಜ ಅರ್ಥವನ್ನು ಪುನರ್‍ರೂಪಿಸುವ ಅವಕಾಶ ಒದಗಿಬಂದಿರುವುದು ಈ ದೇಶದ ಅಲ್ಪಸಂಖ್ಯಾತರೆಂದು ಕರೆಯಲ್ಪಡುತ್ತಿರುವವರು ಮಾಡಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎಂದರೆ ತಪ್ಪಲ್ಲ.  ಈ ದೇಶವನ್ನು ಬ್ರಿಟಿಷರು ಆಳುತ್ತಿದ್ದಾಗ ಹಿಂದುಗಳ ಗುಮ್ಮವನ್ನು ಮುಸಲ್ಮಾನರ ಮುಂದೆ, ಮುಸಲ್ಮಾನರ ಗುಮ್ಮವನ್ನು ಹಿಂದುಗಳ ಮುಂದೆ ತೋರಿಸಿ ಅಖಂಡ ಭಾರತವನ್ನು ತುಂಡಾಗಿಸಿ ಅವರ  ಸುತ್ತ ಗಿರಕಿ ಹೊಡೆಯುತ್ತಿದ್ದ ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಒಂದೊಂದು ತುಂಡನ್ನು ಆಳಲು ಕೊಟ್ಟು, ಬ್ರಿಟಿಷರು ಹೋದ ಮೇಲೆ ಇಲ್ಲಿ ಸುದೀರ್ಘ ಆಡಳಿತ ನಡೆಸಿದ ಕಾಂಗ್ರೆಸ್ಸ್ ಮಾಡಿದ್ದೇನು?

ಮತ್ತಷ್ಟು ಓದು »

19
ಮಾರ್ಚ್

ಸಿಂಧುರಕ್ಷಕ್ ಮುಳುಗಿತೆಂದರೆ ಹಿಂದೂಸ್ಥಾನವೂ ಮುಳುಗಿದಂತೆ!

– ರಾಜೇಶ್ ರಾವ್

ಸಿಂಧು ರಕ್ಷಕ್ಭಾರತೀಯ ನೌಕೋದ್ಯಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ನೌಕೆಗಳ ಉಲ್ಲೇಖವಿದೆ. ವೇದಕಾಲದಲ್ಲಿ ನೌಕೆಗಳ ಬಗ್ಗೆ, ಅವುಗಳನ್ನು ತಯಾರಿಸುವ, ಬಳಸುವ ಬಗ್ಗೆ ಜನತೆಗೆ ಅರಿವು ಇತ್ತು. ಅಂದರೆ ಸಾಗರ ಗರ್ಭದೊಳಗಡಗಿರುವ ಅಪಾರ ಸಂಪನ್ಮೂಲಗಳ ಬಗ್ಗೆ ಜನ ತಿಳಿದಿದ್ದರು. ಆಧುನಿಕ ವಿಜ್ಞಾನದ ಅರಿವಿಗೆ ದೊರಕಿದ ಮಾಹಿತಿಯನ್ನು ಆಧರಿಸಿದರೂ ಭಾರತವೇ ನೌಕೋದ್ಯಮದ ತವರು. ಕ್ರಿ.ಪೂ 2300ರ ಸುಮಾರಿಗೆ ಗುಜರಾತಿನ ಲೋಥಲ್ ಎಂಬ ಪ್ರದೇಶದಲ್ಲಿರುವ ಮಾಂಗ್ರೋಲ್ ಬಂದರಿನ ಬಳಿ ಸಿಂಧೂ ನಾಗರೀಕತೆಯ ಸಮಯದಲ್ಲಿ ಮೊದಲ ಉಬ್ಬರವಿಳಿತದ ಹಡಗು ನಿರ್ಮಾಣವಾಯಿತು. ಮೌರ್ಯರ ಆಳ್ವಿಕೆಯ ಸಮಯದಲ್ಲಿ ಜಲಮಾರ್ಗದ ಸಮಸ್ತ ಆಗು ಹೋಗುಗಳು ನವಾಧ್ಯಕ್ಷನ ನಿಯಂತ್ರಣದಲ್ಲಿತ್ತು. ಕೌಟಿಲ್ಯನ ಅರ್ಥ ಶಾಸ್ತ್ರದಲ್ಲಿ ನೌಕೆಗಳ ಬಗೆಗಿನ ಅಗಾಧ ಮಾಹಿತಿಯಿದೆ. ಮೌರ್ಯರಲ್ಲದೆ ಚೋಳ, ಶಾತವಾಹನ, ಗುಪ್ತ, ಪಾಲ, ಪಾಂಡ್ಯ, ವಿಜಯನಗರ, ಕಳಿಂಗ, ಮರಾಠರ ಆಳ್ವಿಕೆಯ ಕಾಲದಲ್ಲೂ ನೌಕೋದ್ಯಮ ಪ್ರಸಿದ್ದಿ ಪಡೆದಿತ್ತು. ಪಾಶ್ಚಿಮಾತ್ಯ ದೇಶಗಳೊಡನೆ ವ್ಯಾಪಾರ ವಹಿವಾಟು ಬಹು ಹಿಂದಿನಿಂದಲೂ ಸಾಗರ ಮಾರ್ಗವಾಗಿಯೇ ನಡೆದಿತ್ತು. ಮರಾಠ ನೌಕಾ ಪಡೆಯಂತೂ ಮೂರು ಶತಮಾನಗಳ ಕಾಲ ತನ್ನ ಪಾರುಪತ್ಯ ಸ್ಥಾಪಿಸಿತ್ತು. ಯೂರೋಪಿನ ನೌಕಾಪಡೆಗಳು ಅನೇಕ ಸಲ ಮರಾಠರ ನೌಕಾಪಡೆಗಳೆದುರು ನಿಲ್ಲಲಾರದೆ ಓಡಿ ಹೋಗಿದ್ದವು. ಕನ್ಹೋಜಿ ಆಂಗ್ರೇಯಂತಹ ಸಾಗರ ವೀರ ಎಂದೆಂದಿಗೂ ಅಮರ.

ಭಾರತೀಯ ನೌಕಾಪಡೆ ಜಗತ್ತಿನ ಐದನೇಯ ಅತಿ ದೊಡ್ಡ ನೌಕಾಪಾಡೆಯಾಗಿದ್ದು, ಇದರಲ್ಲಿ ಸುಮಾರು 55,000 ಜನರು ಕಾರ್ಯನಿರತರಾಗಿದ್ದಾರೆ. ಇವರಲ್ಲಿ ಸುಮಾರು 5,000 ಜನ ನೌಕಾ ವಾಯುಪಡೆಗೆ ಸೇರಿದ್ದು ಮತ್ತು ಸುಮಾರು 2೦೦೦ ಜನ ನೌಕಾ ಕಮಾಂಡೋಗಳಾಗಿದ್ದಾರೆ. ಭಾರತೀಯ ನೌಕಾಪಡೆ 155 ನೌಕೆಗಳನ್ನು ಹೊಂದಿದ್ದು, ಐ.ಎನ್.ಎಸ್.ವಿರಾಟ್ ಎಂಬ ವಾಯು ಯುದ್ಧ ನೌಕೆಯನ್ನು ಹೊದಿದೆ. ಸಂಪೂರ್ಣ ಏಷ್ಯಾ ಖಂಡದಲ್ಲಿರುವ ಎರಡು ವಾಯು ಯುದ್ಧ ನೌಕೆಗಳಲ್ಲಿ ಇದು ಒಂದು. ಸ್ವತಂತ್ರ ಭಾರತದ ನೌಕಾಪಡೆ ಇತಿಹಾಸದಲ್ಲಿ ಹಡಗಿನೊಂದಿಗೇ ಜಲಸಮಾಧಿಯಾದ ಹಾಗೂ ಸಾಯುವ ಮೊದಲು 67 ಜನರ ಜೀವ ರಕ್ಷಣೆ ಮಾಡಿದ್ದ ಮೊದಲ ಹಾಗೂ ಏಕೈಕ ಕ್ಯಾಪ್ಟನ್ ಮಹೇಂದ್ರನಾಥ್ ಮುಲ್ಲಾರಂತಹ ವೀರರನ್ನು ಹೊಂದಿದ್ದ ನೌಕಾಪಡೆ ನಮ್ಮದ್ದು.

ಮತ್ತಷ್ಟು ಓದು »

18
ಮಾರ್ಚ್

ಜಾತ್ಯಾತೀತರೆನಿಸಿಕೊಳ್ಳಲು ಮುಸಲ್ಮಾನರ ಟೋಪಿ ಧರಿಸಲೇಬೇಕೆ?

– ನರೇಂದ್ರ ಕುಮಾರ್

Secular Nandan Nilekaniಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದನ್ ನೀಲೇಕಣಿಯವರು ಸ್ಪರ್ಧಿಸುತ್ತಿರುವುದು ಅಧಿಕೃತವಾಗಿ ಪ್ರಕಟವಾಗಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಣೆಯಾದ ಕೂಡಲೇ ಮುಸಲ್ಮಾನರ ಟೋಪಿ ಧರಿಸಿ ತಾವು ಕೂಡಾ “ಜಾತ್ಯಾತೀತ”ರೆಂದು ಲೋಕಕ್ಕೆಲ್ಲಾ ಸಾರಿದರು. ಈ ರೀತಿ ಮುಸಲ್ಮಾನ ಟೋಪಿ ಧರಿಸಿ “ಜಾತ್ಯಾತೀತ”ರಾಗುವುದು ಕಾಂಗ್ರೆಸ್ ಪರಂಪರೆಯೇ ಆದಂತಿದೆ. ಅದಕ್ಕಿಂತಲೂ ಮಿಗಿಲಾಗಿ, ಮುಸಲ್ಮಾನ ಟೋಪಿ ಧರಿಸದಿದ್ದವರನ್ನು “ಕೋಮುವಾದಿ” ಎಂದು ಖಂಡಿಸಲಾಗುತ್ತದೆ. ಒಂದೆರಡು ವರ್ಷದ ಹಿಂದೆ ಗುಜರಾತಿನಲ್ಲಿ ನಡೆದ ಸದ್ಭಾವನಾ ಸಭೆಯೊಂದರಲ್ಲಿ ನರೇಂದ್ರ ಮೋದಿಯವರಿಗೆ ಮುಸಲ್ಮಾನರೊಬ್ಬರು ಟೋಪಿ ನೀಡಿದರು. ಮೋದಿಯವರು ಆ ಟೋಪಿಯನ್ನು ಧರಿಸಲಿಲ್ಲ. ಆ ಕೂಡಲೇ ಅವರನ್ನು “ಕೋಮುವಾದಿ” ಎಂದು ಖಂಡಿಸಲಾಯಿತು.

ಇದು ಯಾವ ಸೀಮೆ ಜಾತ್ಯಾತೀತತೆ? ಒಂದು ಕೋಮಿನ ಟೋಪಿ ಧರಿಸಿದರೆ ಜಾತ್ಯಾತೀತ, ಧರಿಸದಿದ್ದರೆ ಕೋಮುವಾದಿ!? ಈ ದೇಶದಲ್ಲಿ ಬೇರೆ ಕೋಮುಗಳೇ ಇಲ್ಲವೆ? ಅವುಗಳಲ್ಲಿ ಅನೇಕ ಕೋಮುಗಳೂ ಅಲ್ಪಸಂಖ್ಯಾತವಲ್ಲವೇ? ಆ ಕೋಮುಗಳ ಲಾಂಚನವನ್ನೋ, ಟೋಪಿಯನ್ನೋ ಈ ರಾಜಕಾರಣಿಗಳು ಏಕೆ ಧರಿಸಿ ಪತ್ರಿಕೆಗಳಲ್ಲಿ ಚಿತ್ರ ಹಾಕಿಸಿಕೊಳ್ಳುವುದಿಲ್ಲ? ಮುಸಲ್ಮಾನ ಟೋಪಿ ಧರಿಸದಿದ್ದವರು ಕೋಮುವಾದಿಯಾಗುವುದಾದರೆ, ಆ ಉಳಿದ ಅಲ್ಪಸಂಖ್ಯಾತ ಕೋಮುಗಳ ಟೋಪಿ ಧರಿಸದಿದ್ದವರೂ ಕೋಮುವಾದಿ ಆಗಬೇಕಲ್ಲವೇ? ಮುಸಲ್ಮಾನರಿಗಿಂತ ಬಹಳ ಕಡಿಮೆ ಸಂಖ್ಯೆಯಲ್ಲಿರುವವರು ಜೈನರು. ಯಾವ ರಾಜಕಾರಣಿಯೂ ಜೈನರ ದಿರಿಸು ಧರಿಸಿ ತನ್ನ “ಜಾತ್ಯಾತೀತತೆ”ಯನ್ನು ಮೆರೆದದ್ದು ನನಗೆ ತಿಳಿದಿಲ್ಲ. ಅಥವಾ ಪಾರ್ಸಿ ಲಾಂಚನ ಧರಿಸಿಯೋ, ಇಲ್ಲವೇ ಬೌದ್ಧರ ದಿರಿಸು ಧರಿಸಿಯೋ, ಕ್ರೈಸ್ತರಂತೆ ವೇಷ ಹಾಕಿದ್ದೋ ಎಲ್ಲೂ ನೋಡಿಲ್ಲ.

ಮತ್ತಷ್ಟು ಓದು »