‘ತುರ್ತು ಪರಿಸ್ಥಿತಿ’ ವಿರುದ್ಧದ ಹೋರಾಟದಲ್ಲಿ ಹಾಸನ ಜಿಲ್ಲೆ ವಹಿಸಿದ ಪಾತ್ರ
-ಕ.ವೆಂ.ನಾಗರಾಜ್
ಪರಕೀಯರ ಸಂಕೋಲೆಯಿಂದ ೧೯೪೭ರಲ್ಲಿ ದೇಶ ಸ್ವತಂತ್ರಗೊಂಡ ಕೇವಲ ೨೮ ವರ್ಷಗಳ ನಂತರದಲ್ಲಿ ಸ್ವಕೀಯರಿಂದಲೇ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಗಂಡಾಂತರ ೧೯೭೫ರಲ್ಲಿ ತುರ್ತುಪರಿಸ್ಥಿತಿ ರೂಪದಲ್ಲಿ ಬಂದೆರಗಿತ್ತು. ಎರಡು ವರ್ಷಗಳ ಈ ತುರ್ತುಪರಿಸ್ಥಿತಿಯ ಅವಧಿ ದೇಶದ ಅತ್ಯಂತ ಕಲಂಕಿತ ಅವಧಿಯಾಗಿದ್ದು, ಇಂದು ಕಂಡುಬರುತ್ತಿರುವ ಅಧಿಕಾರದ ಹಪಾಹಪಿಗೆ ಭದ್ರ ತಳಪಾಯ ಒದಗಿಸಿತ್ತು. ಅಲಹಾಬಾದ್ ಉಚ್ಚನ್ಯಾಯಾಲಯವು ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಮೇಲಿದ್ದ ಭ್ರಷ್ಠಾಚಾರದ ಆರೋಪವನ್ನು ಎತ್ತಿ ಹಿಡಿದು ಅವರ ಚುನಾವಣೆಯ ಗೆಲುವನ್ನು ಅನೂರ್ಜಿತಗೊಳಿಸಿದ್ದಲ್ಲದೆ ಮುಂದಿನ ಆರು ವರ್ಷಗಳು ಅವರು ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದನ್ನು ಅವರು ಲೆಕ್ಕಿಸದೆ ಹೇಯಮಾರ್ಗ ಹಿಡಿದು ದೇಶದ ಮೇಲೆ ಅನಗತ್ಯವಾದ ತುರ್ತುಪರಿಸ್ಥಿತಿ ಹೇರಿ ಸರ್ವಾಧಿಕಾರಿಯಾಗಿ ಅಟ್ಟಹಾಸದಿಂದ ಮೆರೆದರು. ಕಹಿಯಾದ ಕಠಿಣ ಸತ್ಯವೆಂದರೆ ಭ್ರಷ್ಠಾಚಾರ ತಪ್ಪಲ್ಲವೆಂಬ ಭಾವನೆಗೆ, ಭ್ರಷ್ಠಾಚಾರ ಇಂದು ಮುಗಿಲೆತ್ತರಕ್ಕೆ ಬೆಳೆದಿರುವುದಕ್ಕೆ ಅಂದು ಹಾಕಿದ್ದ ಈ ಭದ್ರ ಬುನಾದಿಯೇ ಕಾರಣ. ಕಾಯದೆ, ಕಾನೂನುಗಳನ್ನು ಅನುಕೂಲಕ್ಕೆ ತಕ್ಕಂತೆ ತಿದ್ದಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘವೂ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಯಿತು. ಲೋಕಸಭೆಯ ಅವಧಿ ಪೂರ್ಣಗೊಂಡರೂ ಸಂಸತ್ತಿನಲ್ಲಿ ನಿರ್ಣಯ ಮಾಡಿ ಮತ್ತೆ ಎರಡು ವರ್ಷಗಳ ಅವಧಿಗೆ ಮುಂದುವರೆಸಲಾಯಿತು. ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ಮಾಡಲಾಯಿತು. ೧೯೭೫ರ ಜೂನ್ ೨೬ರ ಬೆಳಕು ಹರಿಯುವಷ್ಟರಲ್ಲಿ ಭಾರತದ ಸ್ವತಂತ್ರತೆ ನಿರ್ಬಂಧಿಸಲ್ಪಟ್ಟಿತು. ಅಭಿವ್ಯಕ್ತಿ ಸ್ವಾತಂತ್ರ್ಯ, ಲೇಖನ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಸ್ವಂತ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ, ಇತ್ಯಾದಿ ಎಲ್ಲಾ ನಾಗರಿಕ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ದೇಶಾದ್ಯಂತ ನೂರಾರು ವಿರೋಧ ಪಕ್ಷದ ನಾಯಕರುಗಳನ್ನು ಬಂಧಿಸಿ ಸೆರೆಯಲ್ಲಿರಿಸಿದರು. ಜನರು ಸರ್ಕಾರದ ವಿರುದ್ಧ ಮಾತನಾಡಲು ಅಂಜುವಂತೆ ಆಯಿತು. ಆಕಾಶವಾಣಿ ಇಂದಿರಾವಾಣಿ ಆಯಿತು, ದೂರದರ್ಶನ ಇಂದಿರಾದರ್ಶನವಾಯಿತು. ಇಂದಿರಾ ಪರ ಸುದ್ದಿಗಳಿಗೆ ಮಾತ್ರ ಅವಕಾಶ. ‘ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದರೆ ಇಂದಿರಾ’ ಆಗಿಹೋಯಿತು.
ಜಾತೀಯತೆ: ಏನು? ಎತ್ತ?
– ಡಾ. ಶ್ರೀಪಾದ ಭಟ್
ಸೆಪ್ಟೆಂಬರ್ 13, 2007ರಂದು 11 ನೇ ಪಂಚವಾರ್ಷಿಕ ಯೋಜನೆ ಕುರಿತ ಯೋಜನಾ ಆಯೋಗದ ಸಮಾಲೋಚನಾ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ “ಸ್ಪೆಶಲ್ ಅಟೆನ್ಷನ್ ವುಡ್ ನೀಡ್ ಟು ಬಿ ಪೇಯ್ಡ್ ಟು ಡಿಸ್ಟ್ರಿಕ್ಟ್ಸ್ ವಿತ್ ಎಸ್ಸಿ, ಎಸ್ಟಿ, ಒಬಿಸಿ ಆಂಡ್ ಮೈನಾರಿಟಿ ಕಾನ್ಸನ್ಟ್ರೇಶನ್’’ ಎಂದು ಭಾಷಣ ಮಾಡಿದ್ದರು. ಅಲ್ಪ ಸಂಖ್ಯಾತರಿಗೆ ಸರ್ಕಾರಿ ಯೋಜನೆಯಲ್ಲಿ ಸಿಂಹಪಾಲು ದೊರೆಯಬೇಕು ಎಂದೂ ಅವರು ಹೇಳಿದ್ದರು. ಸಿಂಗ್ ಮೂಲತಃ ಅರ್ಥಶಾಸ್ತ್ರಜ್ಞರು, ರಾಜಕಾರಣಿಯಲ್ಲ. ಆದರೆ ಅವರ ಧಾಟಿ ಮತಬ್ಯಾಂಕಿನ ಮೇಲೆ ಕಣ್ಣಿಟ್ಟ ಯಾವ ರಾಜಕಾರಣಿಗೂ ಕಡಿಮೆ ಇರಲಿಲ್ಲ. ಅಂದಿನ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಅಧಿಕಾರಿಗಳು ಎಲ್ಲ ಹಾಜರಿದ್ದರು. ಸರ್ಕಾರದ ಯೋಜನೆಯ ಲಾಭ ಬಡವರಿಗೆ ದೊರೆಯಬೇಕು ಎಂದು ಹೇಳುವ ಬದಲು ಅಲ್ಪ ಸಂಖ್ಯಾತರಿಗೆ ದೊರೆಯಬೇಕು ಎಂದು ಅವರು ಹೇಳಿದ್ದರಲ್ಲಿ ಅಭಿವೃದ್ಧಿಗಿಂತಲೂ ಮತಗಳಿಕೆಯ ವಾಸನೆ ಢಾಳಾಗಿ ರಾಚಿದರೆ ಅದರಲ್ಲಿ ಅವರ ತಪ್ಪಿಲ್ಲ. ಕರ್ನಾಟಕದಲ್ಲಿ ಶಾದಿ ಭಾಗ್ಯ ಯೋಜನೆ ಕುರಿತ ಸರ್ಕಾರದ ನಿಲುವನ್ನು ಕೂಡ ಇದೇ ದೃಷ್ಟಿಯಲ್ಲಿ ನೋಡಬಹುದು. ಆ ಸರ್ಕಾರ, ಈ ಸರ್ಕಾರ ಎಂದಲ್ಲ ಎಲ್ಲ ಸರ್ಕಾರಗಳ ಯೋಜನೆಗಳೂ ಮತಗಳಿಕೆಯತ್ತ ನೆಟ್ಟಿರುವುದರಿಂದ ಅವರ ಘೋಷಣೆಗಳು ಹೀಗಾಗಿಬಿಡುತ್ತವೆ ಅಷ್ಟೆ.
ರಾಜಿನಾಮೆ ಕೊಡಲು ಸಿದ್ಧ !
– ನವೀನ್ ನಾಯಕ್
ರಾಜಿನಾಮೆ ಕೊಡಲು ಸಿದ್ಧ !
ಯಾರು ಗೊತ್ತೇ ಹೀಗೆ ಹೇಳಿದ್ದು ? ನರೇಂದ್ರ ಮೋದಿಯವರು !
ಅಡ್ವಾಣಿ ಮತ್ತು ಅಟಲ್ ಜೀಯರ ನಡುವೆ ಎದ್ದ ಭಿನ್ನಾಭಿಪ್ರಾಯಗಳಲ್ಲಿ ಮಹತ್ವದ ಎರಡು ಘಟನೆಗಳು ಒಂದು ಅಯೋಧ್ಯಾ ವಿಚಾರ ಇನ್ನೊಂದು ಮೋದಿಯವರ ರಾಜಿನಾಮೆ ವಿಚಾರ. ಮೋದಿಯವರ ವಿಚಾರದಲ್ಲಿ ಅಡ್ವಾಣಿಯವರು ತಮ್ಮ ದೃಷ್ಟಿಕೋನವನ್ನು ಬೇರೆ ರೀತಿಯಾಗಿಸಿಕೊಂಡರು. ದಂಗೆಯ ಸಮಯದಲ್ಲಿ ಗುಜರಾತಿಗೆ ತೆರಳಿ ಅಲ್ಲಿಯ ಸಮಾಜದ ವಿವಿಧ ವರ್ಗಕ್ಕೆ ಸೇರಿದ ಅಪಾರ ಜನದೊಂದಿಗೆ ಮಾತನಾಡಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಅರಿತುಕೊಂಡರು. ಕ್ರಮಗಳ ಕುರಿತು ಅಲ್ಲಿಯ ಜನತೆ ತೃಪ್ತಿಯನ್ನು ಹೊಂದಿತ್ತು. ಇದರಿಂಧ ಮೋದಿಯವರು ಅಪರಾಧಿಯಾಗಿರಲಿಲ್ಲ ಬದಲಾಗಿ ಅವರು ಸ್ವಯಂ ರಾಜಕೀಯ ಬಲಿಪಶುವಾಗಿದ್ದಾರೆಂಬುದು ತಿಳಿದುಕೊಂಡರು. ಆದ್ದರಿಂದ ಮುಖ್ಯಮಂತ್ರಿಯಾಗಿ ಒಂದು ವರ್ಷವೂ ಕಳೆಯದ ಮೋದಿಯವರನ್ನು ಸಂಕೀರ್ಣ ಕೋಮು ಸನ್ನಿವೇಶಕ್ಕೆ ರಾಜಿನಾಮೆ ಪಡೆಯುವುದು ಅನ್ಯಾಯವಾಗುತ್ತದೆ. ಅದಲ್ಲದೇ ರಾಜಿನಾಮೆ ಪಡೆಯುವುದರಿಂದ ಗುಜರಾತಿನ ಸಾಮಾಜಿಕ ಸ್ಥಿತಿಗತಿಯನ್ನು ಧೀರ್ಘಕಾಲೀನವಾಗಿ ಹದಗೆಡಬಹುದೆಂದು ಅಡ್ವಾಣಿಯವರು ಅರಿತುಕೊಂಡರು.
ಪೆಪ್ಪರ್ ಸ್ಪ್ರೇ ಮತ್ತು ಕಾಂಗ್ರೆಸ್ಸ್
– ಪ್ರಸನ್ನ,ಬೆಂಗಳೂರು
ಇತ್ತೀಚೆಗೆ ಸಂಸತ್ತಿನಲ್ಲಿ ನಡೆದ ಪ್ರಸಂಗವನ್ನು ಎಲ್ಲ ಮಾಧ್ಯಮಗಳು ಒಕ್ಕೊರಲಿನಿಂದ ಪೆಪ್ಪರ್ ಸ್ಪ್ರೇಯಷ್ಟೇ ಖಾರವಾದ ಮತ್ತು ಚಾಕುವಿನಷ್ಟೇ ಹರಿತವಾದ ಶಬ್ದಗಳಲ್ಲಿ ಖಂಡಿಸಿವೆ. ಆದರೆ ಈ ಘಟನೆಗೆ ಕಾರಣಾರು? ಎಂಬುದನ್ನು ಎಲ್ಲಿಯಾದರೂ ವಿಶ್ಲೇಷಣೆಗೊಳಪಡಿಸಿವೆಯೆ?
ನಮ್ಮ ನ್ಯಾಯಾಲಯಗಳೂ ಕೂಡ ಎಲ್ಲ ಪ್ರಕರಣಗಳಲ್ಲೂ ಉತ್ತೇಜನಕಾರಿ ಮತ್ತು ಅಪರಾಧಕ್ಕೆ ಕಾರಣವಾಗುವ ಪ್ರಚೋದನಾಕಾರಿ ಅಂಶಗಳನ್ನು ಹುಡುಕಲು ಪ್ರಯತ್ನಿಸುತ್ತದೆ. ಬಲವಾದ ಕಾರಣವಿಲ್ಲದೆ ನಡೆದ ಪ್ರಕರಣಗಳನ್ನು ನ್ಯಾಯಾಲಯ ಹೆಚ್ಚು ಕಠಿಣ ಶಿಕ್ಷೆಗೆ ಗುರಿ ಪಡಿಸಲು ಹೋಗುವುದಿಲ್ಲ. ಕೆಲವೊಮ್ಮೆ ಕಾರಣವಿಲ್ಲದೆ ಜರುಗುವ ಅಪರಾಧಗಳನ್ನು ಕೇವಲ ಕಣ್ತಪ್ಪಿನಿಂದಾದ ಅನಾಹುತಗಳೆಂದೆ ಪರಿಗಣಿಸಿದ ಉದಾಹರಣೆಗಳಿವೆ.
೨೦೦೪ ರಲ್ಲಿ ಕೇವಲ ಪ್ರಾದೇಶಿಕ ಪಕ್ಷಗಳ ವೈಫಲ್ಯದಿಂದ ಚುಕ್ಕಾಣಿ ಹಿಡಿದ ಸರಕಾರದ ನಡವಳಿಕೆಗಳನ್ನು ಒಮ್ಮೆ ಸಿಂಹಾವಲೋಕನ ಮಾಡಿ ನೋಡಿ. ಇಂದಿನ ಸಂಸದರ ನಡವಳಿಕೆಗೆ ಒಂದು ಸಣ್ಣ ಕಾರಣದ ಎಳೆ ಕಾಣಿಸಿಕೊಳ್ಳುತ್ತದೆ. ಅದು ಹೇಗೋ ಹಿಂದಿನ ಸರಕಾರದ ಆರ್ಥಿಕ ನೀತಿಗಳಿಂದ ಮೊದಲ ಮೂರು ವರ್ಷ ತಳ್ಳಿದ ಈ ಸರಕಾರ, ಯುಪಿಎ-೧ರ ಕೊನೆಯ ೨ ವರ್ಷಗಳಲ್ಲಿ ನಡೆಸಿದ ಹಗರಣಗಳು ಹೊರ ಬರುವಷ್ಟರಲ್ಲಿ ಎರಡನೇ ಬಾರಿ ಚುನಾವಣೆ ಗೆದ್ದಿತ್ತು. ಅದರಲ್ಲೂ ನಮ್ಮ ಮೂಕ ಪ್ರಧಾನಿಯವರು ನಾವು ಚುನಾವಣೆ ಗೆದ್ದಿದ್ದೇವೆ ಹಾಗಾಗಿ ನಾವು ಮಾಡಿದ್ದೆಲ್ಲ ಸರಿ ೫ ವರ್ಷ ನಮಗೆ ಅಧಿಕಾರ ಕೊಟ್ಟಿದ್ದಾರೆ ನಾವು ಯಾರಿಗೂ ಉತ್ತರದಾಯಿಗಳಲ್ಲ ಎನ್ನುವಂತೆ ಹೇಳಿಕೆಗಳನ್ನು ಕೊಟ್ಟು ಅಂತೆಯೇ ನಡೆದು ಕೊಂಡರು.
ಮತ್ತಷ್ಟು ಓದು 
ಚುನಾವಣಾ ಸಮೀಕ್ಷೆಗಳನ್ನೆಲ್ಲಾ ಸುಳ್ಳು ಮಾಡಬಹುದಾ ೨೦೧೪ ರ ಚುನಾವಣಾ ಫಲಿತಾಂಶ ?
– ಅನಿಲ್ ಚಳಗೇರಿ
೨೦೧೪ ರ ಚುನಾವಣಾ ಸಮೀಪಿಸುತ್ತಲೇ ರಾಜಕೀಯ ಪಕ್ಷಗಳ ಪ್ರಚಾರದ ಕಾವು ಏರುತ್ತಿದೆ, ಒಂದಡೆ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರದ ಅಬ್ಬರ, ಮತ್ತೊಂದಡೆ ರಾಹುಲ್ ಗಾಂಧಿಯನ್ನು ಶತಾಯ ಗತಾಯ ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕೆನ್ನುವ ಕಾಂಗ್ರೆಸ್ ನಾಯಕರ ಹಠ, ನಾವು ಕಾಂಗ್ರೆಸ್ಸಿನ ಜೊತೆಗೂ ಇಲ್ಲ, ಬಿಜೆಪಿಯ ಜೊತೆಗೂ ಇಲ್ಲ ಎನ್ನುವ ಥರ್ಡ್ ಫ್ರಂಟ್ ನ ಎನ್ನುವ ಪ್ರಾದೇಶಿಕ ಪಕ್ಷಗಳ ಗುಂಪು, ಈ ತ್ರಿಕೋಣ ಪೈಪೋಟಿಯಲ್ಲಿ ಅತ್ಯಂತ ಮುಂಚುಣಿಯಲ್ಲಿರುವವರು ನರೇಂದ್ರ ಮೋದಿ ಎನ್ನುವದರಲ್ಲಿ ಯಾವುದೇ ಸಂಶವೇಯಿಲ್ಲ, ಆದರೆ ೨೦೦೯ ರ ಚುನಾವಣೆಯಲ್ಲಿ ಒಂಬತ್ತು ರಾಜ್ಯಗಳಲ್ಲಿ ತನ್ನ ಖಾತೆಯನ್ನೇ ತಗೆಯದ ಬಿಜೆಪಿ ೨೦೧೪ ಚುನಾವಣೆಯಲ್ಲಿ ೨೭೨ ಮುಟ್ಟಬಹುದೆ? ಎನ್ನುವ, ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಮೋದಿಯವರು ಸುಳ್ಳು ಮಾಡುವ ಎಲ್ಲ ಲಕ್ಷಣಗಳು ಎದ್ದು ಕಾಣಿಸುತಲ್ಲಿವೆ.
೯ ರಾಜ್ಯಗಳಲ್ಲಿ ನಿಮ್ಮ ಖಾತೆಯೇ ತೆರೆದಿಲ್ಲ, ಅಂದರೆ ಒಂದು ಲೋಕಸಭಾ ಸೀಟ್ ಗೆಲ್ಲಿಸಲಾಗಿಲ್ಲ, ಅದ್ಹೇಗೆ ಬಿಜೆಪಿ ದೆಹಲಿಯ ಕನಸು ಕಾಣುತ್ತಿದೆ ಎನ್ನುವವರು ಇತ್ತೀಚಿಗಿನ ಮೋದಿಯವರ ಜನಪ್ರೀಯತೆ ಹಾಗು ಹಿಂದೆಂದಿಗೂ ಇರದ ರಾಜ್ಯಗಳಲ್ಲಿ ಬಿಜೆಪಿಯ ದೊಡ್ಡ ಸಂಖ್ಯೆಯ ಕಾರ್ಯಕರ್ತರನ್ನು ನೋಡಿ ಹುಬ್ಬೇರಿಸುವಂತೆ ಮಾದಿದೆ. ೨೦೦೯ ರಲ್ಲಿ ನಡೆದ ಚುನಾವಣೆ ಫಲಿತಾಂಶ ನೋಡಿದರೆ ಆಂಧ್ರ ಪ್ರದೇಶ, ದೆಹಲಿ, ಹರ್ಯಾಣ, ಜಮ್ಮು ಕಾಶ್ಮೀರ , ಕೇರಳ, ಒರಿಸ್ಸಾ, ತಮಿಳ್ ನಾಡು ಹಾಗು ಉತ್ತರಾಖಂಡದಲ್ಲಿ ಬಿಜೆಪಿ ಒಬ್ಬ ಲೋಕಸಭಾ ಸದಸ್ಯನನ್ನು ಗೆಲ್ಲಿಸಲಾಗಲಿಲ್ಲ, ಅದನ್ನೇ ಗುರಿಯಾಗಿಟ್ಟುಕೊಂಡ ಬಿಜೆಪಿ ನರೇಂದ್ರ ಮೋದಿಯವರ ಈ ಅಲೆಯನ್ನು ಈ ರಾಜ್ಯಗಳಲ್ಲಿ ತನ್ನ ಪ್ರಭಾವ ಹೆಚ್ಚಿಸುವದರಲ್ಲಿ ಒಂದಿಷ್ಟರ ಮಟ್ಟಿಗೆ ಯಶಸ್ವಿಯಾಗಿದೆ. ಯಾವ ಜಮ್ಮು ಹಾಗು ಕಾಶ್ಮೀರ ಅಬ್ದುಲ್ಲಾ ಗಳ ಕೈಯಲ್ಲಿ ಕಳೆದ ೬೦ ವರ್ಷಗಳಿಂದ ಬೇರೆ ರಾಜಕೀಯ ವಿಕಲ್ಪವೇ ಇಲ್ಲವೇನು ಅನ್ನುತ್ತಿತ್ತೋ ಅಲ್ಲಿಂದ ಪ್ರಾರಂಭಿಸಿ, ಬರಿ ಡಿಎಂಕೆ ಹಾಗು ಎಐಡಿಎಂಕೆಗಳಿಗೆ ಮಾತ್ರ ಇಲ್ಲಿ ಉಳಿಗಾಲ ಎನ್ನುವ ತಮಿಳು ನಾಡಿನ ರಾಜಕೀಯ ಲೆಕ್ಕಾಚಾರವನ್ನು ಸುಳ್ಳು ಮಾಡಲು ಹೊರಟಿದೆ, ಇದಕ್ಕೆ ಸಾಕ್ಷಿಯಾಗಿದ್ದೆ ಜಮ್ಮು ಹಾಗು ತಮಿಳು ನಾಡಿನಲ್ಲಿ ನಡೆದ ಬೃಹತ್ತ್ ಸಮಾವೇಶ ಹಾಗು ಸಾಲು ಸಾಲು ಬಿರುಸಿನ ರಾಜಕೀಯ ಚಟುವಟಿಕೆಗಳೇ ಸಾಕ್ಷಿ.
ಮತ್ತಷ್ಟು ಓದು 
ಜನ ಮನ್ನಣೆ
– ಮಧು ಚಂದ್ರ, ಭದ್ರಾವತಿ
ಇಂದು ಅತ್ಯಂತ ಪ್ರಸ್ತುತದಲ್ಲಿರುವ ಪದ ಎಂದರೆ ” ಜನ ಮನ್ನಣೆ “. ಅದಕ್ಕಾಗಿ ನಾವು ಏನೆಲ್ಲಾ ಮಾಡುತ್ತೇವೆ. ದಾನ ಮಾಡಿದಾಗ ನಮ್ಮ ಹೆಸರು, ಶಂಕು ಸ್ಥಾಪನೆ ಮಾಡಿದಾಗ ನಮ್ಮ ಹೆಸರು( ಕಾಮಗಾರಿ ಆಗುತ್ತೋ ಇಲ್ಲವೋ), ಕಂಡ ಕಂಡಲೆಲ್ಲ ಹೆಸರು ರಾರಜಿಸುವುದಕ್ಕೆ ಏನೆಲ್ಲಾ ಮಾಡಬಹುದು ಎಲ್ಲಾ ಮಾಡುತ್ತೇವೆ. ಆದರೆ ಅದನ್ನು ಇಂದಿನ ಮಾನವ ಕೇವಲ ಕ್ಷಣಕ್ಕೆ ಮಾತ್ರ ಪರಿಗಣಿಸಿ ನಂತರ ಕಡೆಗಣಿಸುತ್ತಾನೆ. ಅವರಾರು ತಮ್ಮ ಹೆಸರನ್ನು ಕಡೆಯವರೆಗೂ ಉಳಿಸಿಕೊಂಡು ಮನ್ನಣೆ ಪಡೆಯಲು ಸಾಧ್ಯವಾಗದೆ ಅಳಿದು ಹೋಗುತ್ತಾರೆ .ಇಂದು ಸೇವಾ ಮನೋಭಾವವಿಲ್ಲದ ದಾನ ಕೇವಲ ಪ್ರಚಾರಕ್ಕೆ ಮಾತ್ರ ನಿಮಿತ್ತ. ಅಂದರೆ ದಾನಿಗಳು ಇರುವವರೆಗೂ ಮಾತ್ರ, ಅವರಳಿದ ಮೇಲೆ ಅವು ಸಹ ಅಳಿಯುತ್ತದೆ. ಅವು ಎಂದೂ ಜನರ ಮನದಲ್ಲಿ ಉಳಿಯುವುದೇ ಇಲ್ಲ. ಸ್ವಾರ್ಥದ ಸೇವೆ ಎಲ್ಲಿಯೂ ಸಲ್ಲುವುದಿಲ್ಲ. ನಿಸ್ವಾರ್ಥ ಸೇವೆ ಇಂದು ಕಣ್ಮರೆಯಾಗುತ್ತಿದೆ. ನಿಸ್ವಾರ್ಥ ಸೇವೆ ಎನ್ನುವುದು ಎಂದೆಂದಿಗೂ ಶಾಶ್ವತ ಎನ್ನುವುದಕ್ಕೆ ಒಂದು ಚಿಕ್ಕ ಉದಾಹರಣೆ ನಿಮ್ಮ ಮುಂದೆ ನೀಡುತ್ತಿದ್ದೇನೆ. ಆಮೇಲೆ ಸೇವೆ ಎನ್ನುವ ಪದಕ್ಕೆ ಸಮಾನಾರ್ಥಕ ಪದ ನೀವೇ ನಿರ್ಧರಿಸಿ.
ಕನ್ನಂಬಾಡಿ ಆಣೆಕಟ್ಟು ನಿರ್ಮಾಣವಾದ ನಂತರ ಪ್ರತಿದಿನವೂ ದೇಶ ವಿದೇಶಗಳಿಂದ ಜನರು ಭೇಟಿ ನೀಡುತ್ತಿದ್ದರು. ಅ ಸಮಯದಲ್ಲಿ ಕನ್ನಂಬಾಡಿ ಕಟ್ಟೆಯ ನಿರ್ಮಾತರ ಹೆಸರಿನ ಫಲಕಗಳು, ಗುರುತುಗಳು ಸಹ ಇರಲಿಲ್ಲ. ಓಮ್ಮೆ ಆಂಧ್ರದ ಹಳ್ಳಿಯ ರೈತನೊಬ್ಬ ಕನ್ನಂಬಾಡಿ ಆಣೆಕಟ್ಟನ್ನು ಸಂದರ್ಶಿಸಿದನು. ಅಲ್ಲಿದ್ದ ಕಾವೇರಿಯ ಮೂರ್ತಿಗೆ ನಮಸ್ಕರಿಸಿ ಅಣೆಕಟ್ಟಿನ ಸೊಬಗನ್ನು ಸವಿಯುತ್ತಿದ್ದನು. ಹೀಗಿರುವಾಗ ಅಲ್ಲಿಗೆ ಬಂದ ಹಿರಿಯರೊಬ್ಬರು ಅಲ್ಲೇ ಇದ್ದ ಮಕ್ಕಳ ಹತ್ತಿರ ರೈತನಿಗೆ ” ಕನ್ನಂಬಾಡಿ ಆಣೆಕಟ್ಟು ನಿರ್ಮಿಸಿದವರು ಯಾರು ಗೊತ್ತೇ? ” ಎಂದು ಕೇಳಲು ಹೇಳಿದರು.
ಅಗ ರೈತನು ” ಏಮಂಡಿ, ಆ ಮಹಾನುಭಾವಲು ವಿಶ್ವೇಶ್ವರಯ್ಯಗಾರು ಚೆಸಿಂದಿಕಾದ ” (‘ ಏನು ಸ್ವಾಮಿ , ಆ ಮಹಾನುಭಾವ ವಿಶ್ವೇಶ್ವರಯ್ಯನವರು ಕಟ್ಟಿಸಿದ್ದಲ್ಲವೇ ? ‘) ಎಂದು ಉತ್ತರಿಸಿದನು.
ನಿಜವಾದ ಸೇವೆಗೆ ಶಿಲೆಯ ಮೇಲಿನ ಶಾಸನವಾಗಲಿ, ಫ್ಲೆಕ್ಸ್ ಬ್ಯಾನರ್ ಅಗಲಿ ಬೇಕಿಲ್ಲ. ಸೇವೆಯು ನಿರಂತರವಾಗಿ ತಲುಪುವ ಹಾಗಿರಬೇಕು. ಅಗ ಮಾತ್ರ ಜನಮನ್ನಣೆ ಪಡೆದು ಚಿರಸ್ಥಾಯಿಯಾಗಿರುತ್ತದೆ. ನಮ್ಮವರು ಇದರಿಂದ ಕಲಿಯುವುದು ಯಾವಾಗ ಎಂದು ನೀವೇ ಹೇಳಬೇಕು.
***********************************************************************
ಚಿತ್ರ ಕೃಪೆ : ಅಂತರ್ಜಾಲ
ಬೇಕಾಗಿರುವುದು ರಾಜಕೀಯ ಅಸ್ತಿತ್ವವೇ ವಿನಃ ಕೇವಲ ಭ್ರಷ್ಟಚಾರ ನಿಗ್ರಹವಲ್ಲ
– ನವೀನ್ ನಾಯಕ್
ಅಣ್ಣಾ ನೇತೃತ್ವದ ಜನಲೋಕಪಾಲ ಹೋರಾಟದಿಂದ ಪ್ರಸಿದ್ದರಾದ ಅರವಿಂದ್ ಕೇಜ್ರಿವಾಲ್ ದೆಹಲಿ ಗದ್ದುಗೆಗೇರಿ ಬದಲಾವಣೆಯ ಪರ್ವ ತರಲು ಹೊರಟಿದ್ದಾರೆ. ಸರಕಾರ ರಚಿಸಲು ಜನರ ಅಭಿಪ್ರಾಯ ಸಂಗ್ರಹಿಸಿದ ಕಾರಣಕ್ಕೆ ಹಗಲು ರಾತ್ರಿ ಮಾಧ್ಯಮಗಳು ತಲೆದೂಗಿದ್ದೇ ತೂಗಿದ್ದು. ಎಲ್ಲಾ ಮಾಧ್ಯಮಗಳಲ್ಲಿ ಒಂದೇ ಕೂಗು. ಇದೇ ನೈಜ ಪ್ರಜಾಪ್ರಭುತ್ವ!. ಈ ಮಾಧ್ಯಮಗಳ ಕಣ್ಣಿಗೆ ಮೂರು ರಾಜ್ಯಗಳಲ್ಲಿ ಭರ್ಜರಿ ಜಯಗಳಿಸಿದ ಮತ್ತು ದೆಹಲಿಯಲ್ಲಿ ಮೊದಲ ಸ್ಥಾನ ಪಡೆದ ಬಿಜೆಪಿ ನೈಜ ಪ್ರಜಾಪ್ರಭುತ್ವದಲ್ಲಿ ಗೆದ್ದಿದ್ದಲ್ಲ ! ಪಕ್ಷ ಕಟ್ಟಿ ಒಂದು ವರ್ಷದಲ್ಲೇ ಎರಡನೆಯ ಸ್ಥಾನಕ್ಕೆ ಬರುವುದು ಅಚ್ಚರಿಯೇ, ಅವರ ಪ್ರಯತ್ನಕ್ಕೆ ನಾವು ಶಹಭಾಸ್ ಹೇಳಲೇ ಬೇಕು. ದೇಶದ ಭವಿಷ್ಯಕ್ಕೆ ಉತ್ತಮ ಆಡಳಿತ ನೀಡಲು ಆಪ್ ಪಕ್ಷವೇ ಮುಂಚೂಣಿಗೆ ಬರಬೇಕೆಂಬ ನಿರ್ಧಾರವನ್ನು ಕೇಜ್ರಿವಾಲ್ ಯಶಸ್ವಿಯಾಗಿ ಯುವಕರ ಮನಸ್ಸಲ್ಲಿ ತುಂಬಿದ್ದರು. ರಾಜಕೀಯ ಮಾಡುವುದು ಹೇಗೆ ಅಂತ ನಾವು ಕಲಿಸುತ್ತೇವೆ, ನಮಗೆ ಕೆಂಪು ಗೂಟದ ಕಾರು ಬೇಕಿಲ್ಲ, ನಮಗೆ ಭದ್ರತೆ ಬೇಕಿಲ್ಲ, ಸರಕಾರಿ ಭವ್ಯ ಮನೆಯೂ ಬೇಕಿಲ್ಲ ಹೀಗೆ ಒಂದರ ಮೇಲೊಂದಂತೆ ಘೋಷಿಸತೊಡಗಿದರು. ಯುವಕರ ಉತ್ಸಾಹ ಇಮ್ಮಡಿಯಾಗಿತ್ತು. ತಮ್ಮ ನಾಯಕನಿಗೆ ಈ ಜಗದಲ್ಲಿ ಬೇರಾರು ಸರಿಸಾಟಿ ಇಲ್ಲವೆಂಬತೆ ವರ್ತಿಸತೊಡಗಿದರು. ಅಣ್ಣಾ ಹಜಾರೆಯವರು ಯಾವಾಗ ತನ್ನ ಹೆಸರನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಳ್ಳಬೇಡಿ ಎಂದರೋ ಕೇಜ್ರಿವಾಲ್ ಅಭಿಮಾನಿಗಳು ಬುಸುಗುಡತೊಡಗಿದರು. ಸಾಲದೇ ಐಎಸಿ ಚಳುವಳಿಯ ಹಣದ ಲೆಕ್ಕ ಕೇಳಿದರೋ ಎಲ್ಲ ಅಭಿಮಾನಿಗಳು ಸಿಡಿದೆದ್ದರು. ಅಣ್ಣಾ ಮುದುಕರಾಗಿದ್ದಾರೆ ಹುಚ್ಚರಂತೆ ವರ್ತಿಸುತಿದ್ದಾರೆ ಎಂಬ ಕ್ಷುಲ್ಲಕ ಮಾತುಗಳನ್ನು ಸಾಮಾಜಿಕ ತಾಣದ ತುಂಬ ಪಸರಿಸತೊಡಗಿದರು. ಯಾರ ಏಳಿಗೆಗೆ ಯಾರು ಕಾರಣರಾಗಿದ್ದರೋ ಅವರು ಮದುಕರಾಗಿದ್ದರು ಹುಚ್ಚರಾಗಿದ್ದರು.
ವಿಧಿ 370 – ಚರ್ಚೆ
– ಪ್ರವೀಣ್ ಪಟವರ್ಧನ್
ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರು ಜಮ್ಮುವಿನಲ್ಲಿ ನಡೆದ ಇತ್ತೀಚೆಗಿನ ಸಮಾವೇಶದಲ್ಲಿ ನಮ್ಮ ದೇಶದ ಮೊದಲ ಪ್ರಧಾನ ಮಂತ್ರಿಯವರ ನಿಲುವನ್ನು ಪ್ರಶ್ನಿಸಿದ್ದಾರೆ. ಡಾ|| ಶ್ಯಾಮಾ ಪ್ರಸಾದ್ ಮುಖರ್ಜೀ ಯವರ ಜಮ್ಮು ಕಾಶ್ಮೀರದಲ್ಲಿನ ಹೋರಾಟವನ್ನು, ಬಲಿದಾನವನ್ನು (ನಿಗೂಢ ಸಾವು ಎಂದರೆ ತಪ್ಪಾಗಲಾರದು) ನೆನಪಿಸಿಕೊಂಡಿದ್ದಾರೆ. ಭಾರತ ಸಂವಿಧಾನದ ವಿಧಿ 370 (Article 370) ಯನ್ನು ಚರ್ಚಿಸಬೇಕೆಂದು ಕೇಳಿಕೊಂಡಿದ್ದಾರೆ. ಸಹಜವಾಗಿಯೇ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿಸುವ ಕೆಲ ಮಾಧ್ಯಮ ವರ್ಗದವರು ಮೋದಿಯ ಭಾಷಣವನ್ನು ಆಕ್ಷೇಪಿಸಿದ್ದಾರೆ.ಕಾರಣ ಮಾಜಿ ಪ್ರಧಾನಿ ನೆಹರೂರಿಗೆ ಅವಮಾನವಾಯ್ತೆಂದೋ, ಅಥವಾ ನೆಹರೂರವರು ಕಾಶ್ಮೀರದಲ್ಲಿ ಗೊಂದಲ ಸೃಷ್ಟಿಸಿದ್ದನ್ನು ಒಪ್ಪಿಕೊಳ್ಳಲಾಗದೆಂದೋ ಗೊತ್ತಿಲ್ಲ. ಹಿಂದೊಮ್ಮೆ ಸರ್ದಾರ್ ವಲ್ಲಭ ಭಾಯಿ ಪಟೇಲ್, ನೆಹರೂರ ತುಲನೆ ಮಾಡಿದ್ದ ಮೋದಿಯನ್ನು ಆಕ್ಷೇಪಿಸಿದ್ದು ಸ್ಮರಿಸಬಹುದು. ನೆಹರೂ ರವರು ಅಪ್ರತಿಮ ದೇಶಭಕ್ತ, ದ್ರಷ್ಟಾರ; ಅವರ ಬಗ್ಗೆ ಲಘುವಾಗಿ ಮಾತನಾಡಿದ್ದು ಮೋದಿಯವರ ತಪ್ಪು ಎಂದು ಅವರು ಸಮರ್ಥಿಸಿಕೊಂಡರೆ ಅದಕ್ಕಿಂತ ದೊಡ್ಡ ಹಾಸ್ಯ ಮತ್ತೊಂದಿರಲಿಕ್ಕಿಲ್ಲ.
ಮೊದಲನೆಯದಾಗಿ ನೆಹರೂ ಭಾರತದ ಜೊತೆಗಿನ ಕಾಶ್ಮೀರದ ವಿಲೀನವನ್ನು ಗೊಂದಲಕ್ಕೆ ಮಾರ್ಪಾಟು ಮಾಡಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಈಗಾಗಲೇ ಹಲವಾರು ಲೇಖಕರು, ಚಿಂತಕರು ತೋರಿಸಿಕೊಟ್ಟಿದ್ದಾರೆ. ಇನ್ನು ನೆಹರೂ ದೇಶಭಕ್ತರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಕ್ಕೆ ಬ್ರಿಟಿಷರಿಂದ ಬಿಡುಗಡೆ ತಂದುಕೊಟ್ಟವರಲ್ಲಿ ಅಗ್ರಗಣ್ಯರು – ಹಾಗಾಗಿ ನೆಹರೂ ರವರನ್ನು ದೂಷಿಸಬಾರದು ಎಂದಾದರೆ – ಅದೂ ಒಪ್ಪಿಕೊಳ್ಳುವ ಮಾತಲ್ಲವೇ ಅಲ್ಲ. ಒಬ್ಬರ ನಿಲುವನ್ನು ಪ್ರಶ್ನಿಸುವ, ತೆಗೆದುಕೊಂಡ ನಿಷ್ಕರ್ಷೆಯಿಂದ ದೇಶಕ್ಕೇ ಮಾರಕವಾದಾಗಲೂ ನಿಲುವನ್ನು ಪ್ರಷ್ನಿಸಬಾರದು ಎನ್ನುವುದು ಮೂರ್ಖತನದ ಪರಮಾವಧಿ. ಈ ದೇಶದ ಸಾಮಾನ್ಯ ಪ್ರಜೆಗೂ ಆ ಹಕ್ಕು ಇದ್ದೇ ಇರುತ್ತದೆ. ಅದೇ ರೀತಿಯಲ್ಲಿ, ಕೆಲ ವರ್ಷಗಳ ನಂತರ ಮೋದಿಯವರು ತೆಗೆದುಕೊಂಡ ಯವುದೋ ನಿಲುವು ತಪ್ಪೆಂದು ಜನರು ಮೋದಿಯವರ ನಿರ್ಧಾರವನ್ನು ಟೀಕಿಸಬಹುದಲ್ಲವೇ?
ಆರ್ವೇಲ್ ನ ಕಾದ೦ಬರಿ ’ಎನಿಮಲ್ ಫಾರ್ಮ್’ನೊಳಗೊ೦ದು ಪ್ರಸ್ತುತ ಭಾರತವನ್ನು ಕಾಣುತ್ತ…
– ಗುರುರಾಜ್ ಕೊಡ್ಕಣಿ
ಅದು ಇ೦ಗ್ಲೆ೦ಡಿನ ಒ೦ದು ತೋಟ.ಒ೦ದು ದಿನ ಅಲ್ಲಿನ ಹಿರಿಯ ಹ೦ದಿಯೊ೦ದು ತೋಟದಲ್ಲಿನ ಎಲ್ಲಾ ಪ್ರಾಣಿಗಳನ್ನು ಸೇರಿಸಿ ಗುಪ್ತ ಸಭೆಯೊ೦ದನ್ನು ಆಯೋಜಿಸುತ್ತದೆ.ಪ್ರಾಣಿಗಳ ಮೇಲೆ ಮನುಷ್ಯನ ದೌರ್ಜನ್ಯ, ದಬ್ಬಾಳಿಕೆಗಳನ್ನು ಪರಿಪರಿಯಾಗಿ ವರ್ಣಿಸುತ್ತಾ,ತಮ್ಮ ಮೇಲಿನ ದೌರ್ಜನ್ಯಗಳು ಕೊನೆಗಾಣಬೇಕಾದರೇ ಸ್ವಾತ೦ತ್ರ್ಯವೊ೦ದೇ ದಾರಿ ಎ೦ದು ಸಾರುತ್ತಾ,’ಇ೦ಗ್ಲೆ೦ಡಿನ ಪಶುಗಳು’ ಎ೦ಬ ಕ್ರಾ೦ತಿಗೀತೆಯೊ೦ದನ್ನು ಹಾಡಿ ಪ್ರಾಣಿಗಳನ್ನು ಕ್ರಾ೦ತಿಯತ್ತ ಉತ್ತೇಜಿಸುತ್ತದೆ.ಉತ್ತೇಜಿತ ಪ್ರಾಣಿಗಳು ಒ೦ದು ಅನೀರಿಕ್ಷಿತ ಸ೦ದರ್ಭದಲ್ಲಿ ತೋಟದ ಮಾಲೀಕನ ಮೇಲೆ ತಿರುಗಿ ಬೀಳುವ ಮೂಲಕ,ಅವನನ್ನು ತೋಟದಿ೦ದ ಓಡಿಸಿ ಸ್ವಾತ೦ತ್ರ್ಯವನ್ನು ಪಡೆದುಕೊ೦ಡು ಬಿಡುತ್ತವೆ.ತೋಟದ ಹೆಸರನ್ನು ’ಪ್ರಾಣಿಗಳ ತೋಟ’ ಎ೦ದು ಬದಲಾಯಿಸುವ ಪ್ರಾಣಿಗಳ ನಾಯಕತ್ವವನ್ನು ’ಸ್ನೋಬಾಲ್’ ಮತ್ತು ’ನೆಪೋಲಿಯನ್’ ಎ೦ಬ ಎರಡು ಬುದ್ದಿವ೦ತ ಹ೦ದಿಗಳು ವಹಿಸಿಕೊಳ್ಳುತ್ತವೆ.ಸ್ನೋಬಾಲ್ ಪ್ರಾಣಿಗಳಿಗೆ ಓದು ಬರಹ ಹೇಳಿಕೊಡುವ ಜವಾಬ್ದಾರಿ ವಹಿಸಿಕೊ೦ಡರೇ,ನೆಪೋಲಿಯನ್ ಪಶುತ್ವದ ಮೂಲತತ್ವಗಳನ್ನು ಪ್ರಾಣಿಗಳಿಗೆ ಹೇಳಿಕೊಡಲಾರ೦ಭಿಸುತ್ತದೆ. ’ಎಲ್ಲ ಪ್ರಾಣಿಗಳೂ ಸಮಾನ’ ಎನ್ನುವ ಧ್ಯೇಯವಾಕ್ಯದಡಿ ಈ ಪ್ರಾಣಿ ಸಾಮ್ರಾಜ್ಯ ನಡೆಯುತ್ತಿರುತ್ತದೆ
ಮೊದಮೊದಲು ಎಲ್ಲವೂ ಸರಿಯಿರುತ್ತದಾದರೂ ಕೆಲಕಾಲದ ನ೦ತರ ಪ್ರಾಣಿಗಳ ನಾಯಕತ್ವದ ಗುರುತರ ಜವಾಬ್ದಾರಿ ತಮ್ಮ ಮೇಲಿರುವುದರಿ೦ದ ತಮ್ಮ ಆರೋಗ್ಯಕ್ಕೆ ಮುಖ್ಯವೆ೦ಬ ಕಾರಣಕ್ಕೆ ತೋಟದಲ್ಲಿ ಉತ್ಪತ್ತಿಯಾಗುವ ಹಾಲು ಮತ್ತೀತರ ಪೌಷ್ಠಿಕ ಆಹಾರಗಳನ್ನು ಪ್ರಾಣಿಗಳ ಮುಖ್ಯಸ್ಥರಾದ ಹ೦ದಿಗಳು ತಮಗಾಗಿ ಮಾತ್ರ ಮೀಸಲಿಡಲು ತೀರ್ಮಾನಿಸುತ್ತವೆ.ನಾಯಕರುಗಳಾದ ನೆಪೋಲಿಯನ್ ಮತ್ತು ಸ್ನೋಬಾಲ್ ನಡುವೆ ಭಿನ್ನಾಬಿಪ್ರಾಯದ ಕ೦ದಕವೇರ್ಪಡುತ್ತದೆ.ಪ್ರಾಣಿಗಳ ಏಳಿಗೆಗಾಗಿ ಗಾಳಿಗೋಪುರವೊ೦ದನ್ನು ನಿರ್ಮಿಸಬೇಕೆ೦ಬ ತನ್ನ ಯೋಜನೆಯನ್ನು ಸ್ನೋಬಾಲ್ ವಿವರಿಸಿದಾಗ,ನೆಪೋಲಿಯನ್ ಸ್ನೋಬಾಲ್ ನನ್ನು ತಾನು ಸಾಕಿದ ಗುಪ್ತ ನಾಯಿಗಳ ಸಹಾಯದಿ೦ದ ಬೆದರಿಸಿ, ತೋಟದಿ೦ದ ಓಡಿಸಿ ತೋಟಕ್ಕೆ ತಾನು ಏಕೈಕ ನಾಯಕನಾಗುತ್ತದೆ.
ಕೇಜ್ರಿವಾಲ್ ಮತ್ತು ಮೋದಿ – ಹೀಗೊಂದು ಮುನ್ನೋಟ
– ಗಣೇಶ್ ಕೆ. ದಾವಣಗೆರೆ
ರಾಹುಲ ಗಾಂಧೀ ಮತ್ತು ಅರವಿಂದ ಕೇಜ್ರಿವಾಲ್ ಒಂದೇ ವಯಸ್ಸಿನವರು. ಇಬ್ಬರಿಗೂ ಎಷ್ಟು ವ್ಯತ್ಯಾಸಗಳಿವೆ. ಒಬ್ಬವ ತೀರಾ ಎಳಸು. ಇನ್ನೊಬ್ಬವ ಜನರ ಗಮನವನ್ನ ತನ್ನ ಮಾತುಗಳತ್ತ ಸೆಳೆದ ಯುವಕ. ಹೊಸ ಹೊಸ ಚಿಂತನೆಗಳನ್ನ ಹರಿಯಬಿಟ್ಟವ. ಆಡಳಿತದಲ್ಲಿ ಪಳಗಿದ ಮೋದಿಗೆ ರಾಹುಲ ಯಾವ ರೀತಿಯಲ್ಲೂ ಸರಿಸಮನಲ್ಲ. ಜೊತೆಗೆ, ಪ್ರತಿಸ್ಪರ್ಧಿಯೂ ಅಲ್ಲ. ರಾಹುಲಗಾಂಧೀ ವಯಸ್ಸಿನವನೇ ಆದ ಕೇಜ್ರಿವಾಲ್ ಯಾವ ರಾಜಕೀಯ ಅನುಭವವೂ ಇಲ್ಲದೇ ಪಕ್ಷವೊಂದನ್ನ ಕಟ್ಟಿ ಆರು ತಿಂಗಳಲ್ಲಿ ಆಧಿಕಾರದ ಹೊಸ್ತಿಲತ್ತ ತಂದು ನಿಲ್ಲಿಸುವುದು ಸಾಮಾನ್ಯ ಸಂಗತಿಯಲ್ಲ.
ನಮ್ಮೆಲ್ಲ ಪೂರ್ವಾಗ್ರಹಗಳನ್ನ ಬದಿಗಿಟ್ಟು ಈ ಯಶಸ್ಸನ್ನ ಗಮನಿಸಬೇಕಾದ ಅಗತ್ಯವಿದೆ. ಕೆಲವರಿಗೆ ಕೇಜ್ರಿವಾಲನನ್ನ ಹೊಗಳಿದರೆ, ಮೆಚ್ಚಿಕೊಂಡರೆ, ಮೋದಿ ಗತಿಯೇನು ಅನ್ನುವ ಚಿಂತೆ. ದೆಹಲಿಯಲ್ಲಿ ಕಾಂಗ್ರೇಸ್ ವಿರೋಧಿ ಅಲೆ ಇತ್ತು ಅನ್ನೋದು ಸರ್ವವಿದಿತವಾದ ಸಂಗತಿ. ಆದರೆ, ಆ ಅಧಿಕಾರ ವಿರೋಧಿ ಅಲೆಯ ಸಂಪೂರ್ಣ ಲಾಭ ಪಡೆಯಲಿಕ್ಕೆ ಬಿಜೆಪಿಗೆ ಏಕೆ ಸಾಧ್ಯವಾಗಲಿಲ್ಲ? ಮೋದಿಯೂ ಕೂಡಾ ಬಂದು ಹೋಗಿದ್ದರಲ್ಲ? ಕಾಂಗ್ರೇಸ್ ಆಡಳಿತ ವಿರೋಧಿ ಅಲೆಯಿರುವಾಗ ಮೋದಿಯವರ ಭಾಷಣಕ್ಕೆ ಸರಳ ಬಹುಮತ ಕೊಡಿಸುವಷ್ಟೂ ಶಕ್ತಿ ಸಾಮರ್ಥ್ಯಗಳಿಲ್ಲವೇ? ಹಾಗಾದರೆ, ಬಿಜೆಪಿ ಎಡವಿದ್ದೆಲ್ಲಿ?
ಮತ್ತಷ್ಟು ಓದು 





