ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

29
ಡಿಸೆ

ಸರ್ವಾಧಿಕಾರಿ ಧೋರಣೆಯ ಪ್ರಗತಿಪರರು ಮತ್ತು ಮೋದಿ

– ಪ್ರಸನ್ನ,ಬೆಂಗಳೂರು

Modiಅಹಮದಾಬಾದಿನ ಮೆಟ್ರೊಪಾಲಿಟನ್ ನ್ಯಾಯಾಲಯ ಪ್ರಗತಿಪರರಿಗೆ ಒಂದು ತಡೆಯಲಾರದ ಆಘಾತ ನೀಡಿದೆ. ಈ ಆಘಾತವನ್ನು ಸಹಿಸಿಕೊಂಡು ಈಗಲಾದರೂ ಈ ಬುದ್ದಿಗೇಡಿಗಳು ತಮ್ಮ ಮಾರ್ಗ ಸರಿ ಪಡಿಸಿಕೊಳ್ಳುತ್ತರೇನೋ ಎಂಬ ನಮ್ಮ ನಿರೀಕ್ಷೆ ಹುಸಿಯಾಗುವಂತಿದೆ, ಯಥಾ ಪ್ರಕಾರ ಅವರು ತಮ್ಮ ಪ್ರಜಾಪ್ರಭುತ್ವ ವಿರೋಧಿ ಧೋರಣೆಯಲ್ಲೇ ಇನ್ನೂ ಬಿದ್ದು ಒದ್ದಾಡುತ್ತಿದ್ದಾರೆ. ನಾನಂತೂ ಇವರನ್ನು ಪ್ರಜಾಪ್ರಭುತ್ವ ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತದ ಕಾನೂನಗಳನ್ನು ಗೌರವಿಸದ ದೇಶದ್ರೋಹಿಗಳೆಂದೆ ಪರಿಗಣಿಸುತ್ತೇನೆ. ಹೇಗೆಂದಿರಾ?

ನೀವೆ ಗಮನಿಸಿ ೨೦೦೨ದಿಂದೀಚೆಗೆ ಇವರು ಹಾಡುತ್ತಿದ್ದುದು ಒಂದೇ ರಾಗ ಅದು ಮೋದಿ ನರಹಂತಕ ಎಂಬುದು, ಇವರ ಅಧಿನಾಯಕಿಯಂತೂ ಆತನನ್ನು ಸಾವಿನ ವ್ಯಾಪಾರಿಯೆಂದು ಜರೆದು ನಾಲಿಗೆ ಕುಲ ಹೇಳುತ್ತದೆಂಬುವುದನ್ನು ತೋರಿಸಿಕೊಟ್ಟುಬಿಟ್ಟಿದ್ದಲ್ಲದೇ ತನ್ನ ನಾಲಿಗೆಯನ್ನು ತಾನೆ ಕಚ್ಚಿ ಕೊಳ್ಳುವಂತಾಯ್ತು. ಗುಜರಾತಿನ ಜನರು ಸತತ ೩ ಬಾರಿ ಇವರ ತಲೆಯ ಮೇಲೆ ಕಲ್ಲು ಹಾಕಿದ್ದೂ ಆಯ್ತು. ಆದರೂ ನಮ್ಮ ಕರ್ನಾಟಕದ ಪ್ರಗತಿಪ್ರರು ಮಾತ್ರ ಇನ್ನೂ ಆ ರೋಗದಿಂದ ಹೊರಬರಲೇ ಇಲ್ಲ.

ಮತ್ತಷ್ಟು ಓದು »

27
ಡಿಸೆ

ಗೊಂಬೆಯಾಟವಯ್ಯಾ…

ಮೂಲ ಲೇಖಕರು : ತನ್ಯರಾಜ್ ಪುರೋಹಿತ್
ಕನ್ನಡಕ್ಕೆ : ಪ್ರಶಾಂತ್ ಭಟ್

Chessಅಧಿಕಾರದ ಮೇಲಿನ ಹಂತಗಳಲ್ಲಿ ನಡೆಯುವ ಒಳಸಂಚುಗಳ ಮತ್ತು ತಂತ್ರಗಳ ಕತೆ ಯಾವತ್ತಿಗೂ ಕುತೂಹಲ ಹುಟ್ಟಿಸುತ್ತದೆ. ನಮಗೆಲ್ಲ ಅಂತಹ ವಿಷಯಗಳನ್ನು ಕೇಳಲು ಮತ್ತು ಇನ್ನೊಬ್ಬರಿಗೆ ಹೇಳಲು ತುಂಬಾ ಆಸಕ್ತಿ; ಅವು ನಮ್ಮ ಅರಿವನ್ನೂ ಮೀರಿ ನಮ್ಮನ್ನ ದಂಗು ಬಡಿಸುತ್ತದೆ! ಯಾಕೆಂದರೆ ಅಧಿಕಾರ ಪಡೆಯಲು ವ್ಯಕ್ತಿ/ಸಂಘಟನೆಗಳು ಮಾಡುವ, ಹೂಡುವ ಆಟಗಳು ನಾವೆಲ್ಲ ಕಲ್ಪನೆ ಮಾಡಲೂ ಅಸಾಧ್ಯವಾದದ್ದು!

ಈಗ ನೋಡಿ, ರಾಜಕೀಯದಲ್ಲಿ ಮೋದಿಯವರ ಮುಂದಿನ ದೊಡ್ಡ ನಡೆ ಏನು? ಅಥವಾ ಬಿ.ಜೆ.ಪಿ. ಗೆಗಂಡಾಂತರ ತಂದೊಡ್ಡಲು ರಾಹುಲ್ ಹೆಣೆಯುತ್ತಿರುವ ತಂತ್ರವೇನು? ಇಂತಹ ಪ್ರಶ್ನೆಗಳಿಗೆ ನಮಗೆ ಉತ್ತರ ಸಿಗುವುದು ಇವೆಲ್ಲಾ ಸಂಪೂರ್ಣವಾಗಿ ಕಾರ್ಯಗತವಾದ ಮೇಲೇ. ನಾವು ಅಂದುಕೊಳ್ಳುತ್ತೇವೆ ಏನೆಂದರೆ ಈ ರಾಜಕಾರಣಿಗಳಿಗೆ, ಮಂತ್ರಿಗಳಿಗೆ ಎಲ್ಲವೂ ತಿಳಿದಿದೆ ಯಾಕೆಂದರೆ ಅವರು ಈ ಆಟವನ್ನೆಲ್ಲಾ ಹತ್ತಿರದಿಂದ ನೋಡಿರುತ್ತಾರೆ ಅಂತ; ಈ ಮಾತು ಸಂಪೂರ್ಣ ನಿಜವಲ್ಲ. ಮೇಲಿನ ಹಂತಗಳಲ್ಲಿ ನಡೆಯುವ ದೊಡ್ಡ ದೊಡ್ಡ ಆಟಗಳ ಬಗ್ಗೆ ಅವರಿಗೆಅರಿವೇ ಇರುವುದಿಲ್ಲ ಮತ್ತು ತಾವು ಪಾನ್ ಗಳಾಗಿ ನಡೆಸಲ್ಪಡುವುದೂ ಗೊತ್ತಿರುವುದಿಲ್ಲ.ಈ ಆಟಗಳು ಕೇವಲ ದೊಡ್ಡವರ ಮೇಲೆ  ಕೇಂದ್ರೀಕೃತವಾಗಿರುತ್ತದೆ. ಕೆಲವು ನಂಬಿಕಸ್ಥ ದಳಪತಿಗಳ ಹೊರತು ಮತ್ತಾರಿಗೂ ಇದರ ಸಳುಹೂ ಸಿಕ್ಕಿರುವುದಿಲ್ಲ ನಮ್ಮ ನಿಮ್ಮೆಲ್ಲರಂತೆ!

ರಾಜಕಾರಣಿಗಳು ನಾವಂದುಕೊಂಡಿರುವುದಕ್ಕಿಂತ ಬುದ್ಧಿವಂತರಾಗಿರುತ್ತಾರೆ. ಅವರಿಗೆ ಒಂದು ಸಾಮಾನ್ಯ ಗಣಿತದ ಲೆಕ್ಕಾಚಾರ ತಿಳಿಯದಿರಬಹುದು ಆದರೆ ಎದುಗಿರುವ ವ್ಯಕ್ತಿಯ ಆಳ, ಅಗಲವ ಕ್ಷಣಾರ್ಧದಲ್ಲಿ ಅಳೆಯಬಲ್ಲರು; ಒಂದು ವಿಷಯವನ್ನ ಹತ್ತಾರು ವರ್ಷಗಳಿಗೆ ಧಕ್ಕೆ ಬಾರದಂತೆ ತಂತ್ರ ಹೆಣೆಯುವ ಚಾತುರ್ಯ ಅವರದ್ದು, ಆ ತಂತ್ರವನ್ನು ಜಾರಿಗೊಳಿಸುವುದರಲ್ಲಂತೂ ಅವರ ಮೀರಿಸಿದವರಿಲ್ಲ! ರಾಹುಲ್ ಗಾಂಧಿ ಎಂಬ ಹೆಸರು ನಗುವ ಸರಕಾಗಿ ತುಂಬ ಕಾಲವಾಯ್ತು. ‘ಪಪ್ಪು’, ‘ಬುದ್ಧು’ ನಂತಹ ಹೆಸರುಗಳು ಆ ಹೆಸರೊಂದಿಗೇ ಸೇರಿ ಹೋಗಿದೆ. ಮೋದಿ ಮಾತ್ರವಲ್ಲ ಯಾವ ಪ್ರೊಫ಼ೆಷನಲ್ ರಾಜಕಾರಣಿಗೂ ಸರಿದೂಗದ, ಜನರಲ್ಲಿ ಉತ್ಸಾಹ ತುಂಬಲಾರದ ನಾಯಕ(?) ರಾಹುಲ್ ಎಂದು ನಮಗೆಲ್ಲಾ ಅಗತ್ಯಕ್ಕಿಂತ ಸ್ಪಷ್ಟವಾಗೇ ಗೊತ್ತಾಗಿ ಹೋಗಿದೆ. ಹಾಗಾದರೆ ಇದು ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲವೇ? ಅಥವಾ ಇದನ್ನೂ ಕಾಣಲಾರದಷ್ಟು ಅವರು ಮೂರ್ಖರಾಗಿದ್ದಾರೆಯೆ? ಅಥವಾ ಕಾಂಗ್ರೆಸ್ ಅದಾಗಲೇ ತನ್ನ ‘ಪ್ಲಾನ್ ಬಿ’ ಯನ್ನ ಜಾರಿಗೊಳಿಸಿದೆಯೇ?
ಮತ್ತಷ್ಟು ಓದು »

25
ಡಿಸೆ

ಆಪ್ ಎಂಬ ನೀರಮೇಲಣ ಗುಳ್ಳೆ …

– ಅವಿನಾಶ್ ಹೆಗ್ಡೆ

AAPಒಂದು ರಾಜಕೀಯ ಪಕ್ಷಕ್ಕೆ ಸೈದ್ದಾಂತಿಕ ಹಿನ್ನೆಲೆ ಇಲ್ಲದೆ ಇದ್ದರೆ, ಮತ್ತು ಸ್ಪಷ್ಟ ಗುರಿಯಿಲ್ಲದೆ ಇದ್ದರೆ ಏನಾಗಬಹುದು ಅನ್ನುವುದಕ್ಕೆ ಒಂದು ಸ್ಪಷ್ಟ ಉದಾಹರಣೆ ಆಮ್ ಆದ್ಮಿ ಪಾರ್ಟಿ …. ಆಪ್ ರಾಜಕೀಯಕ್ಕೆ ಪ್ರವೇಶ ಕೊಡುತ್ತೇವೆ ಅಂದಾಗ ಅವರನ್ನ ಗಂಭೀರವಾಗಿ ಪರಿಗಣಿಸಿದವರ ಸಂಖ್ಯೆ ತುಂಬಾ ಕಡಿಮೆ.ಆದರೆ ದೆಹಲಿ ಚುನಾವಣಾ ಆಪ್ ಕಡೆ ದೇಶ ನೋಡುವಂತೆ ಮಾಡಿದ್ದು ಸುಳ್ಳಲ್ಲ ..

ಆದರೆ ಬಂಗಾಳದಲ್ಲಿ ೩೪ ವರ್ಷದ ಸರಕಾರವನ್ನ ಬೇರು ಸಮೇತ ಕಿತ್ತು ಹಾಕಿದ್ದ ಮಮತಾ ಬ್ಯಾನರ್ಜಿಗೆ ಕೂಡ ಕೊಡದ ಪ್ರಚಾರವನ್ನ ಮಾಧ್ಯಮಗಳು ಆಪ್ ಗೆ ಕೊಟ್ಟಿದ್ದವು ಮತ್ತು  ಅದರ ಹಿಂದೆ ಮಾದ್ಯಮಗಳ ಸ್ಪಷ್ಟ ಕಮ್ಯುನಿಸ್ಟ್ ಹಿತಾಸಕ್ತಿ ಇತ್ತು,ಬಿಜೆಪಿಯ ಗೆಲುವನ್ನ ಮರೆಮಾಚುವ ಉದ್ದೇಶ ಸ್ಪಷ್ಟವಾಗಿತ್ತು. ಲೋಕಪಾಲ್ ಚಳುವಳಿಯ ಹೋರಾಟವನ್ನ ಮತ್ತು ಅಣ್ಣ ಹಜಾರೆಯವರನ್ನ ಬಳಸಿಕೊಂಡಿದರ ಬಗ್ಗೆ ಮಾಧ್ಯಮಗಳು ಈ ಸಂದರ್ಭದಲ್ಲಿ ಯಾಕೆ ಕಣ್ಣು ಮುಚ್ಚಿಕೊಂಡವು ಅನ್ನುವುದು ಎಲ್ಲರಿಗು ಗೊತ್ತಿರುವಂತದೆ.ಇರಲಿ …..

ಮತ್ತಷ್ಟು ಓದು »

24
ಡಿಸೆ

ಕೇವಲ ಬ್ರಾಹ್ಮಣರ ಟೀಕೆಗೆ ಮಾತ್ರ ಮೀಸಲೇ ಈ ಪತ್ರಿಕೆ?

– ವಿದ್ಯಾ ಕುಲಕರ್ಣಿ

ಬ್ರಾಹ್ಮಣನವೆಂಬರ್ 18 ನೇ ತಾರೀಖಿನಿಂದ ಇವತ್ತಿನ ವರೆಗೆ ವಾತಾ೯ಭಾರತಿ ಪತ್ರಿಕೆಯಲ್ಲಿನ ಅಂಕಣಗಳನ್ನು ನಾನು ಓದುತ್ತಿದ್ದೇನೆ. ಸುಮಾರು ನಾಲ್ಕೈದು ಅಂಕಣಗಳು ಕಾರಣವಿಲ್ಲದೇ ಬ್ರಾಹ್ಮಣರ ಟೀಕೆಯನ್ನು ಮಾಡಿವೆ. ಯಾಕೆ ಹೀಗೆ ಇವರೆಲ್ಲ ಕಾರಣವಿಲ್ಲದೇ ಬ್ರಾಹ್ಮಣರನ್ನು ಹುರಿದು ಮುಕ್ಕುತ್ತಿದ್ದಾರೆ ? ಮನನೊಂದು ಈ ಲೇಖನ ಬರೆಯುತ್ತಿದ್ದೇನೆ.

ಯಾವ ಲೇಖನಗಳಲ್ಲಿ ಬ್ರಾಹ್ಮಣರನ್ನು ಎಳೆದು ತರುವ ಅವಶ್ಯಕತೆಯೇ ಇಲ್ಲವೋ ಅಲ್ಲೆಲ್ಲ ವಿನಾಕಾರಣ ಬ್ರಾಹ್ಮಣರನ್ನು ಎಳೆದು ತಂದು ಗೂಬೆ ಕೂರಿಸಿದ್ದಾರೆ . ಕೆಳಗಿನ ಉಧಾಹರಣೆಗಳಿಂದ ನೀವಿದನ್ನು ತಿಳಿಯಬಹುದು.

1) ವಿಜಯಾ ಮಹೇಶ್ ಎಂಬುವವರು ‘ ರಾಜ ಕನಕನಾಯಕ ಕನಕದಾಸನಾದ ಕಥೆ’ ಎಂಬ ಅಂಕಣದಲ್ಲಿ ಕನಕದಾಸರ ಕೃತಿಗಳ ಬಗ್ಗೆ ವಿಮಶಾ೯ತ್ಮಕವಾಗಿ ಬರೆಯಬಹುದಿತ್ತು. ಆ ಮೂಲಕ ಕನಕರ ಕೆಲವು ಕೃತಿಗಳ ಬಗ್ಗೆ ಸಾಮಾನ್ಯ ಜನತೆಗೆ ವಿಷಯ ತಿಳಿಯುತ್ತಿತ್ತು. ಹೆಚ್ಚಿನ ಜನ ಕನಕರ ಕೃತಿಯಾದ ‘ರಾಮಧಾನ್ಯ ಚರಿತೆ’ಯನ್ನು ‘ರಾಮಧ್ಯಾನ ಚರಿತೆ’ ಎಂದು ತಪ್ಪಾಗಿ ಓದುತ್ತಾರೆ. ಇನ್ನು ಈ ಕೃತಿಗೆ ಅಷ್ಟಾಗಿ ವಿಮಶೆ೯ ಬಂದಿಲ್ಲವೆಂದು ಓದುಗ ವಲಯದಲ್ಲಿ ಅಪಸ್ವರವಿದೆ. ಈ ಎಲ್ಲವನ್ನು ಲೇಖಕಿ ಈ ಅಂಕಣದಲ್ಲಿ ವಿಮಶಿ೯ಸಬಹುದಿತ್ತು. ಆದರೆ ಇವರು ತಮ್ಮ ಲೇಖನವನ್ನು ಕನಕರ ಕೃತಿ ವಿಮಶೆ೯ಗೆ ಅಥವಾ ಅವರ ಜೀವನ ವಿಮಶೆ೯ಗೆ ಮೀಸಲಿಡದೇ ಕೇವಲ ಬ್ರಾಹ್ಮಣರ ಟೀಕೆಗೆ ಮೀಸಲಾಗಿರಿಸಿದ್ದಾರೆ. ಅವರು ಹೇಳುತ್ತಾರೆ ; ಕೃಷ್ಣದೇವರಾಯನ ಒಂದು ಯುದ್ಧದಲ್ಲಿ ಕನಕರ ಅಪಾರ ಶ್ರಮದಿಂದ ಸೋಲುವ ಹಂತದಲ್ಲಿದ್ದ ರಾಯ ಗೆಲುವು ಸಾಧಿಸಿದನಂತೆ.ಗೆಲುವಿನ ಸುದ್ದಿ ಕೇಳಿದ ವ್ಯಾಸರಾಯರು ಕನಕನನ್ನು ಯಾವುದೇ ರೀತಿಯಿಂದ ಗೌರವಿಸದೇ ಇತ್ತ ಕೃಷ್ಣದೇವರಾಯನೂ ಗೌರವಿಸದೆ ಕನಕರು ಬುದ್ಧಿಭ್ರಮಣರಾದರಂತೆ.

ಮತ್ತಷ್ಟು ಓದು »

18
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೩

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಭಾಗ ೧ ಮತ್ತು ೨ ರಲ್ಲಿ ‘370ನೇ ವಿಧಿಯ ಸಾಂವಿಧಾನಿಕ ಸಿಂಧುತ್ವ’ ಮತ್ತು ‘370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ’ಯ ಬಗ್ಗೆ ಮಾತನಾಡಿದೆವು. ಭಾಗ ೩ ರಲ್ಲಿ ಮುಂದಿನ ಹಾದಿಯ ಬಗ್ಗೆ ಚಿಂತಿಸೋಣ

ಮುಂದಿನ ಹಾದಿ

ಮೇಲೆ ನೀಡಿದ ಎಲ್ಲ ಉದಾಹರಣೆಗಳು ಸಾಬೀತುಪಡಿಸುವುದಿಷ್ಟೇ, ಸಂವಿಧಾನದ 370ನೇ ವಿಧಿ ಪ್ರಜಾಪ್ರಭುತ್ವದ ಆದರ್ಶಗಳು ಮತ್ತು ನಾಗರಿಕತೆ, ಮಾನವ ಹಕ್ಕುಗಳ ಕುರಿತ ಅಂತರಾಷ್ಟ್ರೀಯ ಕಾನೂನುಗಳ ಕಲ್ಪನೆಗಳ ಮೇಲೆ ನಡೆಯತ್ತಿರುವ ಅತಿಯಾದ ಅಣಕ. ಇದು ಭಾರತದ ಜನಸಂಖ್ಯೆ ಗಣನೀಯ ಪ್ರಮಾಣದ ಭಾಗವೊಂದನ್ನು ದ್ವತೀಯ ದರ್ಜೆಯ ಮತ್ತು ನಾಗರಿಕರೇ ಅಲ್ಲದ ಸ್ಥಿತಿಗೆ ಇಳಿಸುತ್ತದೆ. ವಿಪುಲ್ ಕೌಲನ ಪ್ರಕರಣವನ್ನು ಮತ್ತೆ ನೋಡುವುದಾದರೆ, ಅಂದಿನ ಮುಖ್ಯಮಂತ್ರಿ ಗುಲಾಮ್ ನಬೀ ಆಜಾದ್ರ ಕಾರ್ಯದರ್ಶಿ ನೀಡಿದ “ರಾಜ್ಯಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯ ಅಡಿಯಲ್ಲಿ ಭಾರತ ಸರ್ಕಾರದ ಗೃಹ ಇಲಾಖೆ ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರ ಬಾಧ್ಯವಲ್ಲ. ಆದ್ದರಿಂದ ನಿಮ್ಮ ಮಗುವಿನ ವೈದ್ಯಕೀಯ ವೆಚ್ಚವನ್ನು ಪಾವತಿಸಲು ಸಾಧ್ಯವಿಲ್ಲ” ಎನ್ನುವ ನಿರ್ದಯ ಉತ್ತರ ಕೌಲ್ ಕುಟುಂಬದಲ್ಲಿ ಅಣುಮಾತ್ರವಷ್ಟಾದರೂ ಜೀವಂತವಾಗಿದ್ದ ಭರವಸೆಯನ್ನು ತುಂಡರಿಸಿ ಅಡಗಿಸಿತು. ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ ಹದಿಮೂರು ವರ್ಷದ ಅದೃಷ್ಟಹೀನ ಬಾಲಕನ ಬವಿಷ್ಯವನ್ನು ಅಂಧಕಾರಕ್ಕೆ ನೂಕಿತು.

ಮತ್ತಷ್ಟು ಓದು »

16
ಡಿಸೆ

ಸೆಕ್ಯುಲರ್ ಮೀಡಿಯಾದ ನವಕಣ್ಮಣಿ ’ಕೇಜ್ರಿವಾಲ್’

– ಪ್ರಹ್ಲಾದ್ ಜೋಷಿ

AAPಇನ್ನು 6 ತಿಂಗಳಲ್ಲಿಯೇ ಲೋಕಸಭಾ ಚುನಾವಣೆ ಬರಲಿದೆ ಬಹುತೇಕ ಎಲ್ಲ ಪಕ್ಷಗಳು ಇದಕ್ಕೆ ತಯಾರಿ ನಡೆಸಿವೆ, ದೇಶದ ೨ ಪಕ್ಷಗಳಾದ ಕಾಂಗ್ರೆಸ್ ಇಲ್ಲವೇ ಬಿಜೆಪಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸಿವೆ. ಕಾಂಗ್ರೆಸ್ಸಿನ ಜನ ವಿರೋಧಿ ನೀತಿಗಳು ಅಧಿಕಾರ ಹಿಡಿಯಲು ಮುಳುವಾಗಿದೆ, ಇನ್ನು ಬಿಜೆಪಿ ಮೋದಿಯನ್ನು ಅಖಾಡಕ್ಕೆ ಇಳಿಸುತ್ತಿದೆ ಇನ್ನು ಮೊನ್ನೆ ನಡೆದ ಚುನಾವಣಾ ಫಲಿತಾಂಶ ನೋಡಿದರೆ ಮೋದಿಯ ಕಾರ್ಯತಂತ್ರ ಫಲ ಕೊಟ್ಟಿದೆ, ಇದು ಇನ್ನು ಕಾಂಗ್ರೆಸ್ಸಗೆ ಚಿಂತೆಗಿಡುಮಾಡಿದೆ.ಮೋದಿಯ ಜನಪ್ರಿಯತೆ ಕಾಂಗ್ರೆಸ್ಸಿಗೆ ಚಿಂತೆ ಉಂಟು ಮಾಡಿದೆ, ಇಂತಹ ಸ್ಥಿತಿಯನ್ನು ಕಾಂಗ್ರೆಸ್ ಮೊದಲೇ ಊಹೆ ಮಾಡಿತ್ತು.

ಮೋದಿ ಮಾಡಿದ ಅಭಿವೃದ್ಧಿ ಯಾವಾಗ ಜನರ ತಲುಪಿತೋ ಯಾವಾಗ ಮೋದಿಯನ್ನು ಮುಸ್ಲಿಮರು ಬೆಂಬಲಿಸಿದರೋ ಕಾಂಗ್ರೆಸ್ ನಾಯಕರು ಸಣ್ಣದಾಗಿ ಬೆವರತೊಡಗಿದರು, ಮೋದಿಯ ಸಮನಾದ ನಾಯಕರನ್ನು ಹುಡುಕತೊಡಗಿದರು, ರಾಹುಲನಿಂದ ಉತ್ತರ ಪ್ರದೇಶ ಅದಾಗಲೇ ಸೋತಾಗಿತ್ತು, ಮೋದಿಯ ಮುಂದೆ ರಾಹುಲ್ ನಿಲ್ಲುವುದಿಲ್ಲ ಎಂಬುದು ಕಾಂಗ್ರೆಸ್ಸಿಗೆ ಚೆನ್ನಾಗಿ ಗೊತ್ತಿತ್ತು, ಕಾಂಗ್ರೆಸ್ಸಿನ ಹಗರಣಗಳು ಜನರನ್ನು ಕಾಂಗ್ರೆಸ್ಸಿನಿಂದ ದೂರಮಾಡುತ್ತಿದ್ದವು, ಕಾಂಗ್ರೆಸ್ ಒಬ್ಬ ಸಮರ್ಥ ನಾಯಕನಿಗೆ ಹುಡುಕುತ್ತಿತ್ತು ಆಗ ಕಂಡವರೇ ಅರವಿಂದ ಕೇಜ್ರಿವಾಲ್.

ಮತ್ತಷ್ಟು ಓದು »

12
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ

370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6  ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988,  ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.

ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.

ಮತ್ತಷ್ಟು ಓದು »

11
ಡಿಸೆ

ಎಎಪಿ ಗೆಲುವಿನ ಗುಂಗಿನಲ್ಲಿ ‘ಪೊರಕೆ’ ಹಿಡಿಯಲು ಹೊರಟವರು

ರಾಕೇಶ್ ಶೆಟ್ಟಿ

AAPಮಿನಿ ಲೋಕಸಭಾ ಚುನಾವಣೆ ಎಂದೇ ಪರಿಗಣಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಯಂತೆಯೇ ೪ ರಾಜ್ಯಗಳಲ್ಲಿ ಬಿಜೆಪಿ ಮತ್ತು ೧ ರಾಜ್ಯದಲ್ಲಿ ಕಾಂಗ್ರೆಸ್ಸ್ ತನ್ನ ಮುದ್ರೆಯೊತ್ತಿದೆ.ಆದರೆ,ಆಮ್ ಆದ್ಮಿ ಪಕ್ಷಕ್ಕೆ ೨೮ ಸ್ಥಾನಗಳನ್ನು ನೀಡುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದು ದೆಹಲಿಯ ಮತದಾರರು.

ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಎಎಪಿ ಪಕ್ಷ ೧೦-೧೫ ಸೀಟು ಪಡೆಯಬಹುದು ಮತ್ತು ಆ ಮೂಲಕ ಸರ್ಕಾರ ರಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಹುದು ಅನ್ನುವ ಅಭಿಪ್ರಾಯಗಳೇ ಬಂದಿತ್ತು.ಆದರೆ ಮತದಾರಪ್ರಭು ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದೆಡೆಗೆ ಹೆಚ್ಚು ಉದಾರಿಯಾಗಿದ್ದಾನೆ.’ರಾಜಕಾರಣಿಗಳೆಲ್ಲ ಭ್ರಷ್ಟರು’ ಅನ್ನುತಿದ್ದ ಕೇಜ್ರಿವಾಲ್ ತಾವೇ ಒಂದು ರಾಜಕೀಯ ಪಕ್ಷ ಸ್ಥಾಪಿಸುತ್ತೇವೆ ಅಂತ ಹೊರಟು ನಿಂತು ಪ್ರಸಕ್ತ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ ಅದನ್ನು ಕಟ್ಟಿಕೊಳ್ಳುತ್ತ ಹೊರಟಾಗ ಯಾವ ರಾಜಕಾರಣಿಗಳು ಅದನ್ನು ಲೆಕ್ಕಕ್ಕೇ ತೆಗೆದುಕೊಳ್ಳಲಿಲ್ಲ. ದೆಹಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸ್ ನಡುವೆ ನೇರಾನೇರ ಹಣಾಹಣಿ ನಡೆಯಲಿದೆ ಅನ್ನುವಷ್ಟು ನಿರ್ಲಕ್ಷ್ಯದಲ್ಲಿದ್ದ ಶೀಲಾ ದಿಕ್ಷೀತ್ ಕೂಡ,ಕೇಜ್ರಿವಾಲ್ ಮುಂದೆ ಸೋತು ಸುಣ್ಣವಾಗಿದ್ದಾರೆ.

ಮತ್ತಷ್ಟು ಓದು »

4
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !

ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.

ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.

ಮತ್ತಷ್ಟು ಓದು »

3
ಡಿಸೆ

ದಿನೇ ದಿನೇ ಹೆಚ್ಚುತ್ತಿರುವ ‘ಮೋದಿ ಜಪ’

– ನರೇಂದ್ರ ಕುಮಾರ ಎಸ್.ಎಸ್

NaModiದಿನಗಳೆದಂತೆ, ೨೦೧೪ರ ಮಹಾ ಚುನಾವಣೆಯು ಹತ್ತಿರ ಬಂದಂತೆ ಭಾರತದಾದ್ಯಂತ ‘ಮೋದಿ ಜಪ’ ಹೆಚ್ಚುತ್ತಿದೆ. ಇದನ್ನು ಕೆಲವರು ‘ಮೋದಿ ಜ್ವರ’, ‘ಮೋದಿತ್ವ’ ಎಂದೂ ಬಣ್ಣಿಸುತ್ತಿರುವರು. ಯಾರು ಏನೇ ಹೇಳಲಿ, ಭಾರತದಾದ್ಯಂತ ನಿತ್ಯವೂ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ “ನರೇಂದ್ರ ಮೋದಿ”. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಾದ ಟ್ವಿಟ್ಟರ್ ಹಾಗೂ ಪೇಸ್^ಬುಕ್ ಗಳಲ್ಲಿ, ಯುವಕರು ನಡೆಸುವ ಚರ್ಚೆಗಳಲ್ಲಿ, ಕ್ಷೌರಿಕನ ಅಂಗಡಿಯಲ್ಲಿ ನಡೆಯುವ ವಾರ್ತಾಲಾಪಗಳಲ್ಲಿ, ಹಳ್ಳಿಗಳಲ್ಲಿ ನಡೆಯುವ ಸಂಭಾಷಣೆಗಳಲ್ಲಿ – ಎಲ್ಲರೂ ಮೋದಿಯ ಕುರಿತು ಮಾತನಾಡುತ್ತಿದ್ದಾರೆ! ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಜನರ ಚರ್ಚೆಗಳಲ್ಲಿ ಇಷ್ಟರಮಟ್ಟಿಗೆ ಹೊಕ್ಕಿರುವ ಮತ್ತೊಂದು ಹೆಸರಿಲ್ಲ.

ನಾನು ಕೆಲವು ದಿನಗಳ ಹಿಂದೆ, ಬೆಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದೆ. ರಸ್ತೆಗಳೆಲ್ಲ ಗುಂಡಿಗಳಿಂದ ಗಬ್ಬೆದ್ದು ಹೋಗಿದ್ದವು. ಈ ರೀತಿ ಸ್ವಲ್ಪ ಹೊತ್ತು ಪ್ರಯಾಣಿಸಿದ ನಂತರ, ನನಗೆ ನಾನೇ “ಯಾವಾಗ ಸರಿ ಹೋಗುತ್ತೋ ನಮ್ಮ ಬೆಂಗಳೂರು” ಎಂದು ಸ್ವಲ್ಪ ಗಟ್ಟಿಯಾಗಿ ಹೇಳಿಕೊಂಡೆ. ಕೂಡಲೇ, ಆಟೋ ರಿಕ್ಷಾದ ಚಾಲಕ, “ಸಾರ್, ನರೇಂದ್ರ ಮೋದಿಯವರಿಗೆ ಒಂದು ಚಾನ್ಸ್ ಕೊಟ್ಟು ನೋಡಿ, ಎಲ್ಲಾ ಸರಿ ಹೋಗುತ್ತೆ” ಎಂದು ಬಿಡೋದೇ!?

ಮತ್ತಷ್ಟು ಓದು »