ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

2
ಡಿಸೆ

ಇಷ್ಟಕ್ಕೂ ,ಚುನಾವಣೆಯೆನ್ನುವುದೂ ಕ್ರಿಕೆಟ್ ಆಟದ೦ತಲ್ಲ ಎನ್ನುವುದು ನೆನಪಿರಲಿ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Voteಇನ್ನೇನು ಕೆಲವೇ ತಿ೦ಗಳುಗಳಲ್ಲಿ ರಾಜಕೀಯದ ಇನ್ನೊ೦ದು ಅ೦ಕಕ್ಕೆ ತೆರೆಬೀಳಲಿದೆ.ಚುನಾವಣೆಯೆ೦ಬ ಮತ್ತೊ೦ದು ಮಹಾಪರ್ವಕ್ಕೆ ದೇಶ ಸಜ್ಜಾಗುತ್ತಿದೆ.ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರಕ್ಕೆ ರಣತ೦ತ್ರಗಳನ್ನು ರೂಪಿಸಿವೆ,ಪ್ರಚಾರ ಆರ೦ಭಿಸಿವೆ.ಈ ಬಾರಿ ದೇಶದ ಜನತೆಯೂ ಅಷ್ಟೇ ಉತ್ಸಾಹದಿ೦ದ ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ.ಸಾಮಾಜಿಕ ತಾಣಗಳಲ್ಲಿ ನೆಚ್ಚಿನ ನಾಯಕರ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿವೆ,ವಾಗ್ವಾದಗಳಾಗುತ್ತಿವೆ.ದಿನ ಪತ್ರಿಕೆಗಳಲ್ಲಿ ಪು೦ಖಾನುಪು೦ಖವಾಗಿ ಪ್ರತಿಯೊ೦ದು ರಾಜಕೀಯ ಪಕ್ಷದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಪರ ವಿರೋಧ ಲೇಖನಗಳು ಪ್ರಕಟವಾಗುತ್ತಿವೆ.ಇರಲಿ,ದೇಶದ ಮಹಾನಾಯಕನ ಆಯ್ಕೆಗಾಗಿ ನಡೆಯುವ ಚುನಾವಣೆಯೆ೦ದ ಮೇಲೆ ಈ ಬಿಸಿ,ಈ ರೋಚಕತೆ ಇರಬೇಕಾದದ್ದೇ. ಮತದಾನವೆನ್ನುವುದು ಪ್ರಜೆಗಳ ವೈಯಕ್ತಿಕ ವಿಷಯವೆ೦ಬುದು ಎಲ್ಲರಿಗೂ ಗೊತ್ತಿರುವ ವಿಷಯವೇ.ಗೋಪ್ಯತೆ ಕಾಪಾಡಿಕೊಳ್ಳುವ೦ತಹ ಮಹತ್ವದ ವಿಚಾರವೂ ಹೌದು.ಸುಮ್ಮನೆ ಮತದಾನದ ಗೌಪತ್ಯೆಯನ್ನು ಪಕ್ಕಕ್ಕಿಟ್ಟು ನಿಮ್ಮ ಸುತ್ತಮುತ್ತಲಿನವರನ್ನು ’ಈ ಬಾರಿ ಯಾರಿಗೆ ಮತದಾನ ಮಾಡಲಿದ್ದೀರಿ ಮತ್ತು ಆ ಪಕ್ಷ ಅಥವಾ ವ್ಯಕ್ತಿಗೆ ಮತ ಹಾಕಲು ಕಾರಣಗಳೇನು..’? ಎ೦ದು ಕೇಳಿ ನೋಡಿ.ನಿಮಗೆ ತರಹೇವಾರಿ ಉತ್ತರಗಳು ಸಿಗಬಹುದು.

ಮತ್ತಷ್ಟು ಓದು »

29
ನವೆಂ

ತೀರಾ ತುಘಲಕ್ ದರ್ಬಾರ್ ಬೇಡ್ರೀ ಸಿಧ್ಧರಾಮಣ್ಣ…

 – ಕೆ.ಎಸ್ ರಾಘವೇಂದ್ರ ನಾವಡ

Sidduತೀರಾ ಬೇಸರಗೊ೦ಡು ರಾಜ್ಯದ ಮುಖ್ಯ ಮ೦ತ್ರಿಗಳಿಗೆ ಈ ಮಾತನ್ನು ಹೇಳಿತಿದ್ದೇನೆ ! ಸಮಾಜವಾದಿ ಹಿನ್ನೆಲೆ.. ಹೋರಾಟದ ಹಿನ್ನೆಲೆ..  ಎಲ್ಲದ್ದಕ್ಕಿ೦ತಲೂ ಕರ್ನಾಟಕದ ಗ್ರಾಮೀಣ ಸೊಗಡಿನಿ೦ದ ಮೇಲೆದ್ದು ಬ೦ದವರು ಸಿಧ್ಧರಾಮಯ್ಯ. ಆದರೆ ಹಿ೦ದಿನ ಸಮಾಜವಾದಿ ಹಿನ್ನೆಲೆಗಳಿ೦ದ ಬ೦ದ ಮುಖ್ಯಮ೦ತ್ರಿಗಳಿಗೂ (ಮಾನ್ಯ ಹೆಗಡೇಜಿ, ಬ೦ಗಾರಪ್ಪನವರು, ಜೆ.ಹೆಚ್ ಪಟೇಲರು)ನಮ್ಮ ಸಿಧ್ಧರಾಮಯ್ಯನವರಿಗೂ ಅಜಗಜಾ೦ತರ ವ್ಯತ್ಯಾಸ…ಇವರು ಇದೇ ಥರ ಮು೦ದುವರಿದಲ್ಲಿ ಮು೦ಬರುವ ಲೋಕಸಭಾ ಚುನಾವಣೆಯಲ್ಲಿ ಕಾ೦ಗ್ರೆಸ್ ಕರ್ನಾಟಕದಲ್ಲಿ ನೆಲಕಚ್ಚುವುದ೦ತೂ ಖಚಿತ!

ಪಾಪ.. ಏನೂ ಮಾಡೋದಕ್ಕಾಗೋದಿಲ್ಲ.. ನಮಗೆ ಸಿಧ್ಧರಾಮಯ್ಯನವರ ಅಸಹಾಯಕತೆಯ ಅರಿವು ಇದೆ.ಆದರೆ ಕೈಯಲ್ಲಿ ಆಗದಿದ್ದವರ ಪರಿಸ್ಥಿತಿ ಏನೂ ಸಿಧ್ಧರಾಮಯ್ಯನವರದಲ್ಲ! ಹಾಗ೦ತ ತೀರಾ ಸಾರಾಸಗಟಾಗಿ ತಳ್ಳಿ ಹಾಕುವ೦ತಹ ವ್ಯಕ್ತಿತ್ವವೂ ಸಿಧ್ಧರಾಮಯ್ಯನವರದಲ್ಲ.ಆದರೆ ಒ೦ದ೦ತೂ ಖಚಿತ! ಏನೋ ಆಗಿದೆ… ಒ೦ದರ ಮೇಲೊ೦ದು ಎಡವಟ್ಟುಗಳನ್ನೇ ಸೃಷ್ಟಿಸಿಕೊಳ್ಳುತ್ತಿರುವ ಸಿಧ್ಧರಾಮಯ್ಯನವರು ಕೊನೇ ಪಕ್ಷ ತಮ್ಮ ನಿರ್ಧಾರಗಳಿಗೆ ಜೋತು ಬೀಳುವ೦ತಹ ಯಡಿಯೂರಪ್ಪನವರ ಛಾತಿಯನ್ನೂ ತೋರಿಸುತ್ತಿಲ್ಲ!

ಆರ೦ಭದಲ್ಲೇನೋ ಶೂರತನ ಮೆರೆದ ಅಶ್ವವೀರ.. ಕುದುರೆಗೆ ಸುಸ್ತಾದ೦ತೆ ತಾನೂ ನಡೆಯುತ್ತ ಸಾಗಿದ.. ಎನ್ನುವ ಹಳೇ ಮಾತೀಗ ಸಿಧ್ಧರಾಮಯ್ಯನವರ ವಿಚಾರದಲ್ಲಿ ಖಚಿತವಾಗುತ್ತಿದೆ! ಚುನಾವಣಾ ಪ್ರಣಾಳಿಕೆಯ ಅರ್ಧದಷ್ಟು ಅ೦ಶಗಳನ್ನು ಅನುಷ್ಠಾನಕ್ಕೆ ತರುವುದು ಹೆಚ್ಚುಗಾರಿಕೆಯೇ ಆದರೂ ಕೊಟ್ಟ ಮಾತುಗಳಾದರೂ ಎ೦ಥಾದ್ದಾಗಿದ್ದವು ಎನ್ನುವುದು ಬಹಳ ಮುಖ್ಯ!

ಮತ್ತಷ್ಟು ಓದು »

27
ನವೆಂ

ಯಾವುದು ನಂಬಿಕೆ?ಯಾವುದು ಮೂಢನಂಬಿಕೆ?

-ಡಾ.ಕಿರಣ್ ಎಂ ಗಾಜನೂರು

Karnataka Anti Superstition Billಕರ್ನಾಟಕ ಸರ್ಕಾರ ಮೂಢನಂಬಿಕೆಗಳ ಕುರಿತು ವಿಧೇಯಕ ಮಂಡಿಸಲು ಮುಂದಾಗಿರುವುದು ನಿಜಕ್ಕೂ ಸ್ವಾಗತಾರ್ಹ ಕ್ರಮ. ಏಕೆಂದರೆ ಭಾರತ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಸೋ-ಕಾಲ್ಡ್ ನಂಬಿಕೆಗಳ ಹೆಸರಿನಲ್ಲಿ ಶೋಷಣೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ.ಅದರಲ್ಲಿಯೂ ಯಾವುದೇ ಜನ-ಚಳುವಳಿಯಿಲ್ಲದೆ,ನಮ್ಮ ಘನಸರ್ಕಾರ ಸ್ವತಃ ಈ ನಿರ್ಧಾರಕ್ಕೆ ಮುಂದಾಗಿರುವುದು ಪ್ರಶಂಸನೀಯ.ಪಕ್ಕದ ಮಹಾರಾಷ್ಟ್ರದಲ್ಲಿ ಈ ಮಾದರಿಯ ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಳ್ಳಬೇಕಾದರೆ,ಒಂದು ದೊಡ್ಡ ಜನಚಳುವಳಿಯೆ ನಡೆಯಬೇಕಾಯಿತು ಮತ್ತು ಈ ಕುರಿತು ಹೋರಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆಯು ಆಯಿತು.ಈ ನೆಲೆಯಲ್ಲಿ ಕರ್ನಾಟಕ ಸರ್ಕಾರ ಜನಪರವಾಗಿದೆ ಎಂಬುದನ್ನು ನಾವು ಒಪ್ಪಬಹುದು.ಆದರೆ,  ಭಾರತದಂತಹ ಬಹುಸಂಸ್ಕೃತಿಯ ದೇಶದಲ್ಲಿ ಈ ಕ್ರಮ ಕೇವಲ ಪ್ರಗತಿಪರ ಮತ್ತು ಕಾನೂನಾತ್ಮಕ ಅಂಶವಾಗಿರದೆ ಸಮುದಾಯ ಸತ್ವದ ಪ್ರಶ್ನೆಯು ಆಗಿರುತ್ತದೆ ಎಂಬುದನ್ನು ನಾವು ಅರಿತುಕೊಳ್ಳಬೇಕು.ಅದೂ ಅಲ್ಲದೆ ಸದರಿ ವಿಧೇಯಕದ ಕುರಿತು ನಡೆಯುತ್ತಿರುವ ಚರ್ಚೆ ಪರ-ವಿರೋಧವೆಂಬ ಸಂಕುಚಿತ ಅರ್ಥದಲ್ಲಿ ನಡೆಯುತ್ತಿದೆ.ಒಂದು ಸಂಶೋಧನೆ ಅಥವಾ ಚರ್ಚೆಯಲ್ಲಿ ಸಂಶೋಧನೆ/ಚರ್ಚೆಗೆ ಒಳಪಡಿಸಬೇಕಾದ ವಿದ್ಯಾಮಾನದ ಕುರಿತು ಸಂಶೋಧಕನಿಗೆ ಪರ ಅಥವಾ ವಿರೋಧ ಅಭಿಪ್ರಾಯಗಳು ಇರಬೇಕು ಎಂದು ನೀರಿಕ್ಷಿಸುವುದೇ ಸಂಶೋಧನೆ/ಚರ್ಚೆಯ ಲಕ್ಷಣವಲ್ಲ. ಉದಾಹರಣೆಗೆ : ಕರ್ನಾಟಕದ ಮೂಢನಂಬಿಕೆ ವಿರೋಧಿ ವಿಧೇಯಕ ಕುರಿತು ನೀವು ಇದರ ಪರವೂ ವಿರೋಧವೂ ಎಂದು ಕೇಳಿದರೆ ನಾನು ನನಗೆ ಗೊತ್ತಿಲ್ಲ ಎಂದಷ್ಟೆ ಉತ್ತರಿಸಬಲ್ಲೆ. ಏಕೆಂದರೆ ನಿಜಕ್ಕೂ ನನಗೆ ಅದು ಸರಿಯೋ/ತಪ್ಪೋ ಗೊತ್ತಿಲ್ಲ ಅಥವಾ ಪ್ರಸ್ತುತ ಚರ್ಚೆ ಮತ್ತು ಮಾಹಿತಿಯ ಆಧಾರದಲ್ಲಿ ಒಂದು ನಿರ್ಣಯಕ್ಕೆ ಬರಲೂ ಸಾಧ್ಯವಾಗುತ್ತಿಲ್ಲ. ಆದರೆ,ಒಬ್ಬ ಸಮಾಜ ಸಂಶೋಧಕನಾಗಿ ನನ್ನ ಸಮಸ್ಯೆ ಇರುವುದು ಪರವಾಗಿ ಮತ್ತು ವಿರೋಧವಾಗಿ ಮಾತನಾಡುತ್ತಿರುವ ಎರಡೂ ಗುಂಪಿನ ವಾದ ಆ ವಿದ್ಯಮಾನವನ್ನು ಸಮರ್ಥಿಸಲು ಅಥವಾ ವಿರೋಧಿಸಲು ಶಕ್ತವಾಗಿಲ್ಲ ಮತ್ತು ಆದನ್ನು ಆಚರಿಸುತ್ತಿರುವ ಜನರಿಗೆ ಅರ್ಥವಾಗುತ್ತಿಲ್ಲ ಎಂಬುದು.

ಮತ್ತಷ್ಟು ಓದು »

26
ನವೆಂ

ಆಚರಣೆ, ಸಂಪ್ರದಾಯ,ನಂಬಿಕೆ ಮತ್ತು ಕಾಕತಾಳಿಯಗಳು

-ಮು.ಅ ಶ್ರೀರಂಗ,ಬೆಂಗಳೂರು

Indian Tradition N Heritageಒಬ್ಬ ಬ್ರಾಹ್ಮಣನ  ಮನೆಯಲ್ಲಿ ಬೆಕ್ಕೊಂದು ಓಡಾಡಿಕೊಂಡಿತ್ತು. ಹಳೆಯ ಕಾಲದ ಆ ಮನೆಯಲ್ಲಿದ್ದ ಇಲಿ,ಹೆಗ್ಗಣಗಳನ್ನು ತಿಂದುಕೊಂಡು ಅವುಗಳ ಕಾಟ ತಪ್ಪಿಸ್ಸಿದ್ದರಿಂದ ಸಹಜವಾಗಿ ಆ ಬೆಕ್ಕನ್ನು ಕಂಡರೆ ಮನೆಮಂದಿಗೆಲ್ಲಾ ಅಕ್ಕರೆಯಿತ್ತು.ಆ ಕುಟುಂಬದ  ಯಜಮಾನನ ತಂದೆಯದೋ ತಾಯಿಯದೋ  ತಿತಿ ಮಾಡಬೇಕಾದ ದಿನ ಬೆಕ್ಕು ಮನೆಯೊಳಗೆಲ್ಲಾ ಓಡಾಡಿ ಮೈಲಿಗೆ ಮಾಡುವುದು ಸರಿಯಲ್ಲ ಎಂದು ಅದನ್ನು ಮನೆಯ ಕಂಬವೊಂದಕ್ಕೆ ಕಟ್ಟಿಹಾಕಿದರು. ಆ ದಿನದ ಕೆಲಸ, ಊಟ ಎಲ್ಲಾ ಮುಗಿದ ನಂತರ ಆ ಬೆಕ್ಕಿಗೆ ಬಂಧನದಿಂದ ಬಿಡುಗಡೆಯಾಯ್ತು. ಕಾಲ ಕಳೆದಂತೆ ಆ ಮನೆಯ ಯಜಮಾನ ತೀರಿಕೊಂಡ. ಅವನ ಮಕ್ಕಳು ಅಪ್ಪನ ತಿತಿ ಮಾಡುವ ಸಮಯ ಬಂತು. ಆಗ ಮನೆಯಲ್ಲಿ  ಬೆಕ್ಕು ಇರಲಿಲ್ಲ. ಹೀಗಾಗಿ ಅಕ್ಕ ಪಕ್ಕದ ಮನೆಯವರಿಂದ ಕಾಡಿ ಬೇಡಿ ಬೆಕ್ಕೊಂದನ್ನು ತಂದು ಕಂಬಕ್ಕೆ ಕಟ್ಟಿದರು. ಅಂದಿನ ಕೆಲಸ ಮುಗಿದ ನಂತರ ವಾಪಸ್ಸು ಕೊಟ್ಟರು. ಇದು ಹೀಗೆ ಪ್ರತಿ ಸಾರಿ ತಿತಿ ಮಾಡುವಾಗಲೂ ಮುಂದುವರಿಯಿತು.  ಇದೊಂದು ಕಾಲ್ಪನಿಕ ಕಥೆ ಎಂಬುದರಲ್ಲಿ ಸಂದೇಹವಿಲ್ಲ. ಹಾಗೆ ನೋಡಿದರೆ ಐತಿಹಾಸಿಕವಾದುದನ್ನು ಬಿಟ್ಟರೆ ನಾವು ಓದುವ ಕತೆ ಕಾದಂಬರಿಗಳೆಲ್ಲ ಕಾಲ್ಪನಿಕವಾದವುಗಳೇ. ಅದರ  ಬಗ್ಗೆ ಚರ್ಚೆ ಈಗ ಬೇಡ. ಏಕೆಂದರೆ ಈ ಬರಹ ಸಾಹಿತ್ಯಕ್ಕೆ ಸಂಬಧಿಸಿದ್ದಲ್ಲ. ಈ ಬೆಕ್ಕಿನ ಕತೆಯಲ್ಲಿ ನಾವು ತಿಳಿದುಕೊಳ್ಳಬೇಕಾದ ಅಂಶ ಒಂದಿದೆ. ನಾವುಗಳು ಕೆಲವೊಂದು ಆಚರಣೆಗಳಿಗೆ ಇದು ಏಕೆ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವುದಿಲ್ಲ. ಮಕ್ಕಳೇನಾದರು ಕೇಳಿದರೆ “ನೀನೊಬ್ಬ ಅಧಿಕ ಪ್ರಸಂಗಿ, ತಲೆಹರಟೆ”ಎಂದು ಬೈದು ಅವರನ್ನು ಸುಮ್ಮನಾಗಿಸುತ್ತೇವೆ. ತಂದೆ ತಾಯಿಗೆ  ಅಜ್ಜಿ, ತಾತನಿಗೆ ಹೆದರಿದ ಆ ಮಕ್ಕಳು ಸುಮ್ಮನಾಗುತ್ತವೆ. ಅವರು ದೊಡ್ಡವರಾದ ಮೇಲೆ ಹಿಂದಿನವರು ತಮಗೆ  ಮಾಡಿದ್ದನ್ನೇ ತಮ್ಮ ಮಕ್ಕಳಿಗೂ ಮಾಡುತ್ತಾರೆ. ಈ ಕೊಂಡಿಗಳು ಒಂದಕ್ಕೊಂದು ಸೇರಿಕೊಳ್ಳುತ್ತಾಹೋಗಿ ಆಚರಣೆಗಳಾಗಿ,ಸಂಪ್ರದಾಯಗಳಾಗಿ ಮುಂದುವರಿಯುತ್ತವೆ.
ಮತ್ತಷ್ಟು ಓದು »

25
ನವೆಂ

ಧರ್ಮವನ್ನು ಅಫೀಮು ಎಂದವರಿಂದ ಮತ್ತೇನು ನಿರೀಕ್ಷಿಸಲಾದೀತು?

– ನರೇಂದ್ರ ಕುಮಾರ ಎಸ್.ಎಸ್

Tarun Tejpalತೆಹಲ್ಕಾ’ದ ತರುಣ್ ತೇಜಪಾಲ್ ಅವರು ನಡೆಸಿರುವರೆನ್ನಲಾದ ಲೈಂಗಿಕ ಹಲ್ಲೆ ಪ್ರಕರಣ, ಮಾಧ್ಯಮದ ಮುಖವಾಡವನ್ನು ಕಿತ್ತೆಸೆದಿದೆ. ಇದೇ ’ತೆಹಲ್ಕಾ’ವು, ಆಗಾಗ “ಕುಟುಕು ಕಾರ್ಯಾಚರಣೆ”ಯ ಮೂಲಕ ರಾಜಕಾರಣಿಗಳನ್ನು ಸಿಕ್ಕಿಹಾಕಿಸುತ್ತಿತ್ತು. ಒಂದು ಗುಪ್ತ ಕ್ಯಾಮೆರಾ ಜೊತೆಗೆ ತೆರಳುವ ಈ “ಕುಟುಕು ಕಾರ್ಯಾಚರಣೆ ಪಡೆ”, ರಾಜಕಾರಣಿಗಳಿಗೆ ತಿಳಿಯದಂತೆ ಬಲೆ ಬೀಸುತ್ತಿತ್ತು. ಅವರಿಗೆ ಆಮಿಷವನ್ನು ತೋರಿಸಿ, ಆಗ ನಡೆಯುವ ಪೂರ್ಣ ಸಂಭಾಷಣೆಯನ್ನು ಕ್ಯಾಮೆರಾ ಮೂಲಕ ಸೆರೆಹಿಡಿದು, ಆ ನಂತರ ವಿಡಿಯೋವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿತ್ತು. ಆ ವಿಡಿಯೋ ನೋಡಿದ ಜನ, ಅದರಲ್ಲಿರುವ ರಾಜಕಾರಣಿ ಭ್ರಷ್ಟಾಚಾರಿಯೇ ಎಂದು ನಿರ್ಧಾರಕ್ಕೆ ಬರುವ ರೀತಿಯಲ್ಲಿ ಅದನ್ನು ಪ್ರಸ್ತುತ ಪಡಿಸಲಾಗುತ್ತಿತ್ತು. ನ್ಯಾಯಾಂಗ ವಿಚಾರಣೆಯ ಬದಲು ಮಾಧ್ಯಮಗಳೇ ವಿಚಾರಣೆ ನಡೆಸಿ, ರಾಜಕಾರಣಿಯನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿಬಿಡುತ್ತಿತ್ತು.

ವ್ಯಕ್ತಿಯೊಬ್ಬ ಭ್ರಷ್ಟಾಚಾರಿ ಅಲ್ಲದಿದ್ದರೂ, ಆಮಿಷಕ್ಕೊಳಗಾಗಿ ಕೆಲವು ತಪ್ಪುಗಳನ್ನು ಮಾಡುವನು. ಉದಾಹರಣೆಗೆ, ಮನೆಗೆಲಸಕ್ಕೆ ಬರುವ ಹುಡುಗ/ಹುಡುಗಿ ಕಳ್ಳರಾಗಿರುವುದಿಲ್ಲ. ಅವರು ಕಷ್ಟಪಟ್ಟು ಕೆಲಸ ಮಾಡಿ ಸಂಪಾದಿಸುವ ಉದ್ದೇಶ ಹೊಂದಿಯೇ ಕೆಲಸಕ್ಕೆ ಬಂದಿರುತ್ತಾರೆ. ಆದರೆ, ಅವರು ಕೆಲಸ ಮಾಡುವ ಮನೆಯಲ್ಲಿ, ಈ ಹುಡುಗ/ಹುಡುಗಿಯ ಕಣ್ಣಿಗೆ ಕಾಣಿಸುವಂತೆ ಹಣವನ್ನೋ ಇಲ್ಲವೇ ಆಭರಣಗಳನ್ನೋ ಇಟ್ಟಿದ್ದರೆ, ಅವರು ಆಮಿಷಕ್ಕೆ ಒಳಗಾಗಿಬಿಡುತ್ತಾರೆ. ಅಲ್ಲಿ ಇಟ್ಟಿರುವ ಹಣ/ಆಭರಣವನ್ನು ಯಾರೂ ಗಮನಿಸುತ್ತಿಲ್ಲವೆಂದು ತಿಳಿದಾಗ, ಅದನ್ನು ತೆಗೆದುಕೊಳ್ಳೋಣ ಎಂದೆನ್ನಿಸಿಬಿಡಬಹುದು. ಆಮಿಷದಿಂದ ಉಂಟಾದ ಆಸೆಯಿಂದ ತಪ್ಪಿಸಿಕೊಳ್ಳಲಾಗದೆ “ಕಳ್ಳತನ” ನಡೆದುಬಿಡುತ್ತದೆ. ಇಲ್ಲಿ ಕಳ್ಳತನ ಮಾಡಿದ ಹುಡುಗ/ಹುಡುಗಿಯದು ಎಷ್ಟು ತಪ್ಪೋ, ಅಷ್ಟೇ ತಪ್ಪು ಆ ಹಣ/ಆಭರಣಗಳನ್ನು ಇವರ ಕಣ್ಣಿಗೆ ಕಾಣುವಂತೆ ಇಟ್ಟು ಆಮಿಷ ಕೊಟ್ಟವರದೂ ಆಗಿರುತ್ತದೆ, ಅಲ್ಲವೆ?

ಮತ್ತಷ್ಟು ಓದು »

15
ನವೆಂ

ಗಾ೦ಧಿ ಹ೦ತಕ ಗೋಡ್ಸೆ ಮತ್ತು ಆರ್.ಎಸ್.ಎಸ್ ಎನ್ನುವ ಭಯೋತ್ಪಾಧಕ ಸ೦ಘಟನೆ ..!!!

– ಗುರುರಾಜ್ ಕೊಡ್ಕಣಿ

Godse-Gandhijiಆತ ಹೇಳುತ್ತಲೇ ಹೋದ .’ನೀವು ಏನೇ ಹೇಳಿ ಸರ್,ಆರ್.ಎಸ್.ಎಸ್ ಕೂಡಾ ಒ೦ದು ರೀತಿಯ ಭಯೋತ್ಪಾದನಾ ಸ೦ಘಟನೆಯೇ,ಅ೦ಥ ಮಹಾನ ವ್ಯಕ್ತಿ ಗಾ೦ಧಿಯನ್ನು ಕೊ೦ದನಲ್ಲ ಆ ಬೋಳಿ ಮಗ ಗೋಡ್ಸೆ,ಅವನು ಆರ್.ಎಸ್.ಎಸ್ ನವನೇ.ಅ೦ದಮೇಲೆ ಅದು ಭಯೋತ್ಪಾದನಾ ಸ೦ಘಟನೆಯಲ್ಲದೇ ಮತ್ತೇನು’ ಎ೦ದ.ಆತ ನನಗೆ ಪರಿಚಿತ.ಇದುವರೆಗೂ ಆತ ಇತಿಹಾಸವನ್ನು ವಿಷಯವಾಗಿಯೋ ಅಥವಾ ಅಸಕ್ತಿಗಾಗಿಯೋ ಓದಿಕೊ೦ಡವನಲ್ಲ. ಕನಿಷ್ಟ ಪಕ್ಷ ಆತ ಒ೦ದೇ ಒ೦ದು ಕಾದ೦ಬರಿಯನ್ನು ಕೂಡಾ ಓದಿದ್ದನ್ನು ನಾನು ನೋಡಿಲ್ಲ. ಆತನಿಗೆ ’ಆರ್.ಎಸ್.ಎಸ್’ನ ವಿಸ್ತೃತ ರೂಪವಾದರೂ ತಿಳಿದಿದಿಯೋ ನನಗೆ ಅನುಮಾನ.ಕಾ೦ಗ್ರೆಸ್ಸಿನಲ್ಲಿ ಪುಢಾರಿಯಾಗಿರುವ ಆತನ ದೂರದ ಸ೦ಬ೦ಧಿಯೊಬ್ಬನ ಮಾತುಗಳನ್ನು ಕೇಳಿ ಬ೦ದಿದ್ದ.ಅದನ್ನೇ ನನ್ನ ಮು೦ದೇ ಒದರುತ್ತಿದ್ದ.ಇನ್ನು ಈತನಿಗೆ ಆರ್.ಎಸ್.ಎಸ್.ನ ಧೋರಣೆಗಳು,ಗಾ೦ಧಿ ಹತ್ಯೆಯ ಹಿನ್ನಲೆ ಇವುಗಳನ್ನು ವಿವರಿಸುವುದು ನನ್ನಿ೦ದಾಗದ ಕೆಲಸವೆ೦ದೆನಿಸಿ ’ಬರ್ತಿನಿ’ ಎ೦ದಷ್ಟೇ ಹೇಳಿ ಅಲ್ಲಿ೦ದ ಹೊರಟೆ.

ಆದರೆ ಅವನ ಮಾತಿನಲ್ಲಿನ ಎರಡು ಅ೦ಶಗಳು ನನ್ನನ್ನು ಯೋಚಿಸುವ೦ತೇ ಮಾಡಿದವು. ಅವನ೦ತೇ ಅಲೋಚಿಸುವ ಅನೇಕ ವಿದ್ಯಾವ೦ತರನ್ನು,ಜಾತ್ಯಾತೀತವಾದಿಗಳನ್ನು ನಾನು ನೊಡಿದ್ದೇನೆ.ಗೋಡ್ಸೆ ಗಾ೦ಧಿಯನ್ನು ಹತ್ಯೆಗೈದ ಎನ್ನುವುದೇನೋ ಸರಿ, ಆದರೆ ಆರ್.ಎಸ್.ಎಸ್ ಭಯೋತ್ಪಾಧನಾ ಸ೦ಘಟನೆಯಾಗಿದ್ದು ಯಾವಾಗ..? ಗೊಡ್ಸೆ ಕೆಲಕಾಲ ಆರ್.ಎಸ್.ಎಸ್ ನ ಸದಸ್ಯನಾಗಿದ್ದ ಎ೦ಬುದನ್ನೂ ಒಪ್ಪಿಕೊಳ್ಳೋಣ.ಅ೦ದ ಮಾತ್ರಕ್ಕೆ ಅರ್.ಎಸ್.ಎಸ್ ಭಯೋತ್ಪಾದನಾ ಸ೦ಘಟನೆಯಾಗಿಬಿಡಬೇಕೇ..? ಇದನ್ನು ಮೂರ್ಖರ ಆಲೋಚನಾ ಧಾಟಿಯೆನ್ನದೇ ಬೇರೆ ವಿಧಿಯಿಲ್ಲ.ಗೋಡ್ಸೆಯ ಗಾ೦ಧಿ ಹತ್ಯೆಯನ್ನೇ ಮಾನದ೦ಡವಾಗಿಟ್ಟುಕೊ೦ಡು ಆರ್.ಎಸ್.ಎಸ್ ಅನ್ನು ಭಯೋತ್ಪಾದಕ ಸ೦ಘಟನೆ ಎ೦ದು ಹೆಸರಿಸಬಹುದಾದರೇ,ಇ೦ದಿರಾ ಗಾ೦ಧಿಯವರ ಹತ್ಯೆಗೈದವನು ಸಿಖ್ಖ ಎ೦ಬ ಕಾರಣಕ್ಕೆ ಸಿಖ್ಖರೆಲ್ಲರೂ ಕೊಲೆಗಾರರು ಎನ್ನವುದು ಮೂರ್ಖತನವೆನಿಸುವುದಿಲ್ಲವೇ..? ಅಥವಾ ಇ೦ದಿರಮ್ಮನ ಹತ್ಯೆಯ ನ೦ತರ ಸಾವಿರಾರು ಸಿಖ್ಖರ ನರಮೇಧಕ್ಕೆ ಕಾರಣವಾಯಿತಲ್ಲ ಕಾ೦ಗ್ರೆಸ್ ಅದನ್ನು ’ಸಿಖ್ಖ ವಿರೋಧಿ ಪಕ್ಷ’ ಎ೦ದು ಕರೆಯಬಹುದೇ..?

ಮತ್ತಷ್ಟು ಓದು »

14
ನವೆಂ

ಚಾಚಾ… Oh My God… !!!

– ಅಶ್ವಿನ್ ಅಮೀನ್

Neharu Gandhijiನವೆಂಬರ್ 14. ನೆಹರೂ ಜನ್ಮ ದಿನ. ನಾವು ಶಾಲಾ ದಿನಗಳಲ್ಲಿರುವಾಗ ನಮಗೆಲ್ಲ ಖುಷಿಯ ದಿನ..  ಕಾರಣ ಅಂದು ನಮ್ಮ ದಿನ.. ಮಕ್ಕಳ ದಿನ.. ಮನೋರಂಜನಾ ಕಾರ್ಯಕ್ರಮಗಳು, ಆಟೋಟ, ಸಿಹಿ ತಿಂಡಿ, ಅರ್ಧ ದಿವಸ ರಜಾ ಬೇರೆ.. !! ಆಹಾ ಮಕ್ಕಳಿಗೆ ಅದೇ ಚಂದ.. ಅಂದು ನಾವೆಲ್ಲಾ ‘ಚಾಚಾ…’ ಎನ್ನುತ್ತಾ ಶಿಕ್ಷಕರು ಕೊಟ್ಟ ಸಿಹಿ ತಿನ್ನುತ್ತಾ ಖುಷಿಪಡುತ್ತಿದ್ದೆವು.

ಆದರೆ…

ಆ ಸಿಹಿ ತಿನ್ನುತ್ತಿದ್ದ ಬಾಯಿ ಯಾಕೋ ಇಂದು ಕಹಿಯೆನಿಸುತ್ತಿದೆ.ಮತ್ತೆ ‘ಚಾಚಾ…’ ಎಂದು ಕೂಗಲು ಮನಸ್ಸೇ ಬರುತ್ತಿಲ್ಲ. ನೆಹರೂ ಹೆಸರು ಕೇಳಿದರೇನೇ ಏನೋ ಒಂದು ಆಕ್ರೋಶ, ಅಸಹ್ಯತನ…!ಅಂತಹ ಒಬ್ಬ ದುರ್ಬಲ ಪ್ರಧಾನಿಯನ್ನು ಭಾರತ ಹೊಂದಿತ್ತಾ ಎಂಬ ಬಗ್ಗೆ ಅನುಮಾನ.ಖಂಡಿತಾ ನಾನು ಬದಲಾಗಿಲ್ಲ.ನಾನು ಈಗಲೂ ಅದೇ ದೇಶ ಪ್ರೇಮಿ.ಆದರೆ ನನ್ನ ಜ್ಞಾನ ಬದಲಾಯಿತು.ನನ್ನ ಮುಂದಿದ್ದ ಸುಳ್ಳಿನ ಇತಿಹಾಸ ಕರಗುತ್ತಾ ಹೋದಂತೆ ನೆಹರೂ ಬಗೆಗಿನ ತೆರೆಮರೆಯ ರಹಸ್ಯಗಳು ಒಂದೊಂದಾಗಿ ಗೋಚರಿಸತೊಡಗಿದವು.ಆ ತೆರೆಯ ಹಿಂದೆ ಕಂಡದ್ದೆಲ್ಲ ಸ್ವಾರ್ಥದ,ನಾಚಿಕೆಗೇಡಿನ,ಅಸಹ್ಯಕರ,ಹೇಡಿ ಹಾಗೂ  ಮೂರ್ಖತನದ ಪರಮಾವಧಿ…!

ಕಾಂಗ್ರೆಸ್ಸಿನ ಆಗಿನ ಅಧ್ಯಕ್ಷ ಮೋತಿಲಾಲರು ತನ್ನ ಮಗ ನೆಹರೂರವರನ್ನು ತನ್ನ ನಂತರ ಕಾಂಗ್ರೆಸ್ಸ್ ಅಧ್ಯಕ್ಷ ಪಟ್ಟಕ್ಕೇರಿಸಲು ಗಾಂಧೀಯ ಬೆನ್ನು ಬಿದ್ದಿದ್ದ ಕಾಲವದು.ಹಲವು ವರ್ಷಗಳ ಒತ್ತಡದ ನಂತರ ಗಾಂಧೀ ಮೊತಿಲಾಲರ ಹಠಕ್ಕೆ ಬಗ್ಗಲೇಬೇಕಾಯಿತು. ಉಕ್ಕಿನ ಮನುಷ್ಯ ವಲ್ಲಭ ಭಾಯಿ ಪಟೇಲರಿಗೆ ಬಹುಮತ ಇದ್ದ ಹೊರತಾಗಿಯೂ ಪಟೇಲ್ ಅವರನ್ನು ತಣ್ಣಗಾಗಿಸಿ ನೆಹರೂರವರನ್ನು ಕಾಂಗ್ರೆಸ್ಸ್ ಅಧ್ಯಕ್ಷ ಗಾದಿಯಲ್ಲಿ ಕೂರಿಸಿಯೇ ಬಿಟ್ಟರು.

ಮತ್ತಷ್ಟು ಓದು »

13
ನವೆಂ

ಮತಾಂಧ ಭಯೋತ್ಪಾದಕರೊಡನೆ ವೇದಿಕೆ ಹಂಚಿಕೊಂಡರೂ ಇವರು “ಜಾತ್ಯಾತೀತ”ರೇ!!

– ನರೇಂದ್ರ ಕುಮಾರ್

Chidambaram with Talibaniಮುಲ್ಲಾ ಅಬ್ದುಲ್ ಸಲಾಂ ಜ಼ಯೀಫ಼್ ಎನ್ನುವ ಹೆಸರು ಭಾರತದಲ್ಲಿ ಹೆಚ್ಚಿನ ಜನರಿಗೆ ತಿಳಿದಿರಲಾರದು. 1990ರ ದಶಕದಲ್ಲಿ ಆಫ಼್ಘಾನಿಸ್ತಾನದಲ್ಲಿ ತಾಲಿಬಾನ್ ಸ್ಥಾಪನೆಯಾಯಿತು. ಆಫ಼್ಘಾನಿಸ್ತಾನ ಮತ್ತು ಪಾಕಿಸ್ತಾನಗಳಲ್ಲಿ ತಾಲಿಬಾನ್ ನಡೆಸಿರುವ ಮತಾಂಧ ಕೆಲಸಗಳು ಜಗತ್ಪ್ರಸಿದ್ಧ. ಆಫ಼್ಘಾನಿಸ್ತಾನದ ಹಜ಼ರತ್ ಪ್ರದೇಶದಲ್ಲಿರುವ ಬಾಮ್ವಾಮ್ ಕಣಿವೆಯಲ್ಲಿದ್ದ ೬ನೇ ಶತಮಾನದ ಬೃಹತ್ ಬುದ್ಧ ಭಗವಾನನ ಪ್ರತಿಮೆಗಳನ್ನು 2001ರಲ್ಲಿ ಭಗ್ನಗೊಳಿಸಿದಾಗ, ತಾಲಿಬಾನ್ ಹೆಸರು ಜಗತ್ತಿನಲ್ಲೆಲ್ಲಾ ಪ್ರಸಿದ್ಧವಾಯಿತು. ಜಗತ್ತಿನೆಲ್ಲೆಡೆಯಿಂದ ಬುದ್ಧನ ಪ್ರತಿಮೆಗಳನ್ನು ಹಾಳುಗೆಡವಿದ ಕಾರ್ಯವನ್ನು ಖಂಡಿಸಲಾಯಿತು. ಆದರೆ, ತಾಲಿಬಾನ್ ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳಲಿಲ್ಲ. ಮೇಲೆ ಹೇಳಿದ “ಮುಲ್ಲಾ ಅಬ್ದುಲ್ ಸಲಾಂ ಜ಼ಯೀಫ಼್” ಎನ್ನುವವರು ಈ ತಾಲಿಬಾನ್‌ನ ಸಂಸ್ಥಾಪಕರಲ್ಲಿ ಒಬ್ಬರು. ತಾಲಿಬಾನ್ ಸಂಸ್ಥಾಪನೆ ಮಾಡಿದ ಮುಲ್ಲ ಮೊಹಮ್ಮದ್ ಓಮರ್ ಹೆಸರು ಸ್ವಲ್ಪಮಟ್ಟಿಗೆ ಎಲ್ಲರಿಗೂ ತಿಳಿದಿರುತ್ತದೆ. ಈ ಮುಲ್ಲಾ ಅಬ್ದುಲ್ ಸಲಾಮ್ ಜ಼ಯೀಫ಼್, ಮುಲ್ಲಾ ಓಮರ್^ನ ಬಲಗೈ ಭಂಟನಾಗಿದ್ದ. 2001ರಲ್ಲಿ ಅಮೆರಿಕಾದಲ್ಲಿ ಭಯೋತ್ಪಾದಕ ಕೃತ್ಯ ನಡೆಸಿದ ನಂತರದಲ್ಲಿ, ಒಸಾಮಾ ಬಿನ್ ಲಾಡೆನ್ನಿಗೆ ಆಫ್ಘಾನಿಸ್ತಾನದಲ್ಲಿ ಆಶ್ರಯ ಒದಗಿಸಿದವರು ಇವರೇ!

ಮತ್ತಷ್ಟು ಓದು »

12
ನವೆಂ

ರಾಹುಲ್ ಗಾ೦ಧಿ ,ಬೆ೦ಗಳೂರು ರಾಜ್ಯ ಮತ್ತು ಕನ್ನಡ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Rahul N Kannda’ಕರ್ನಾಟಕ ಮತ್ತು ಬೆ೦ಗಳೂರಿಗೆ ಜನ ಉದ್ಯೋಗ ಅರಸಿ ಹೋಗುತ್ತಾರೆ,ಏಕೆ೦ದರೆ ಇವೆರಡೂ ಕಾ೦ಗ್ರೆಸ್ ಆಡಳಿತವಿರುವ ರಾಜ್ಯಗಳು ’ ಎ೦ದು ಹೇಳಿಕೆ ನೀಡಿದ್ದರೆ೦ಬ ಕಾರಣಕ್ಕೇ ದೇಶದ ಅತೀ ದೊಡ್ಡ ರಾಜಕೀಯ ಪಕ್ಷದ ನಾಯಕ ರಾಹುಲ್ ಗಾ೦ಧಿ ಅಪಹಾಸ್ಯಕ್ಕೀಡಾಗಿದ್ದರು.ಆದರೆ ನಿಜಕ್ಕೂ ಅವರು ಹಾಗೆ ಹೇಳಿದ್ದರಾ ಎನ್ನುವುದರ ಬಗ್ಗೆ ಅನೇಕ ಅನುಮಾನಗಳಿವೆ. ಒ೦ದು ವೇಳೆ ಅವರು ಹಾಗೆ ಹೇಳಿದ್ದೇ ಹೌದಾದಲ್ಲಿ ರಾಜ್ಯದ ರಾಜಧಾನಿಯ ಬಗ್ಗೆಯೇ ಯುವನಾಯಕನಿಗೆ ತಿಳಿಯದಿರುವುದು ಅತ್ಯ೦ತ ಖೇದಕರ. ರಾಹುಲ್ ಗಾ೦ಧಿ ಹೇಳಿದ್ದಾರಾ ,ಇಲ್ಲವಾ ಎನ್ನುವುದನ್ನು ಪಕ್ಕಕ್ಕಿಟ್ಟು ಮೇಲಿನ ಮಾತನ್ನು ಒಮ್ಮೆ ಗ೦ಭೀರವಾಗಿ ಪರಾಮರ್ಶಿಸಬೇಕಾದ ಪರಿಸ್ಥಿತಿ ಇ೦ದು ಕನ್ನಡಿಗರಿಗಿದೆ ಎನ್ನುವುದೂ ಸತ್ಯವೇ. ಇ೦ದಿಗೂ ಅನೇಕ ಉತ್ತರ ಭಾರತೀಯರಿಗೆ ಬೆ೦ಗಳೂರು ಕರ್ನಾಟಕಕ್ಕೆ ಸೇರಿದುದು ಎ೦ಬುದು ತಿಳಿದ೦ತಿಲ್ಲ.ಕೆಲವರ೦ತೂ ಇದನ್ನೊ೦ದು ’ಕೇ೦ದ್ರಾಡಳಿತ ಪ್ರದೇಶ’ ಎ೦ದೂ ಭಾವಿಸಿರಲಿಕ್ಕೆ ಸಾಕು..!!

ಮತ್ತಷ್ಟು ಓದು »

11
ನವೆಂ

“ಮೂಢನಂಬಿಕೆ” ಅನ್ನುವ ಮೊದಲು “ನಂಬಿಕೆ” ಅನ್ನುವುದನ್ನು ಡಿಫೈನ್ ಮಾಡಲಾಗಿದೆಯೇ?

– ರಾಕೇಶ್ ಶೆಟ್ಟಿ

Anti Superstition Bill Karntakaಸೋ-ಕಾಲ್ಡ್ ಪ್ರಗತಿಪರರು,ಬುದ್ಧಿಜೀವಿಗಳು,ಚಿಂತಕರು ಮತ್ತು ಸರ್ಕಾರಿ ಸಾಹಿತಿಗಳು ಸೇರಿಕೊಂಡು ಹೊರತಂದಿರುವ “ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – ೨೦೧೩” ಅನ್ನು ಓದಿದ ಮೇಲೆ ಮತ್ತದಕ್ಕೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ಇದನ್ನು ವಿದಾಯಕವಾಗಿ ಮಂಡಿಸುತ್ತೇನೆ ಅಂತೇಳಿ ಮತ್ತೆ ಯು-ಟರ್ನ್ ತೆಗೆದುಕೊಂಡಾಗ,ನನಗೆ ನೆನಪಾಗಿದ್ದು “ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತ್ತಂತೆ…!” ಅನ್ನೋ ಗಾದೆ.

‘ಕಿಚನ್ ಕ್ಯಾಬಿನೇಟ್’ ಅಣತಿಯಂತೆ ಸರ್ಕಾರಗಳು ಕಾರ್ಯ ನಿರ್ವಹಿಸುತ್ತವೆ ಅನ್ನುವುದು ಕೆಲವು ಮುಖ್ಯಮಂತ್ರಿಗಳ ಕಾಲದಲ್ಲಿ ಕೇಳಿಬರುತಿದ್ದಂತ ಮಾತು.ಆದರೆ,ಸಿದ್ದರಾಮಯ್ಯನವರ ಸರ್ಕಾರ ‘ಸರ್ಕಾರಿ ಸಾಹಿತಿಗಳ ಕ್ಯಾಬಿನೇಟ್’ ನ ಅಣತಿಯೇ ನಡೆಯುತ್ತದೆಯೇ? ಹಾಗೆಯೇ ಅನ್ನಿಸುತ್ತಿದೆ.ಸಮಾಜ ವಿಜ್ನಾವನ್ನು ಅಕಾಡೆಮಿಕ್ ಆಗಿ ಕಲಿಸುತಿದ್ದ ಸಂಶೋಧನಾ ಕೇಂದ್ರದ ಮೇಲೆ ವಕ್ರ ದೃಷ್ಟಿ ಬೀರಿದ ಸರ್ಕಾರವೇ ಈಗ ಸಾಮಾಜಿಕ ಸಮಸ್ಯೆಗಳ ಬಗ್ಗೆ ಕರಡು ಸಿದ್ದ ಮಾಡಿ ಅಂತ ಕೇಳಿಕೊಂಡು ಅದನ್ನು ಜಾರಿಗೆ ತರಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ.

ಈ ನಾಸ್ತಿಕ ಮಹಾಶಯರುಗಳ ಪ್ರಕಾರ, “ಫಲಜ್ಯೋತಿಷ್ಯ,ಕಾಲ ಜ್ನಾನ,ಸಂಖ್ಯಾ ಶಾಸ್ತ್ರ,ವಾಸ್ತು ಶಾಸ್ತ್ರ,ಮಠಾಧೀಶರ,ಸ್ವಾಮೀಜಿಗಳ ಪಾದ ಪೂಜೆ,ಸರ್ಕಾರಿ ಕಚೇರಿಗಳಲ್ಲಿ ಪೂಜೆ,ಹೋಮ-ಹವನ,ದೇವಸ್ಥಾನಗಳಲ್ಲಿ ಪ್ರಾಣಿಬಲಿ ಕೊಡುವುದು,ಜಪಮಾಲೆಗಳು,ರುದ್ರಾಕ್ಷಿ,ಆಧ್ಯಾತ್ಮ ಬಗ್ಗೆ ಮಾತನಾಡುವುದು” ಇವೆಲ್ಲ ನಿಷೇಧವಾಗಬೇಕಂತೆ…!
ಮತ್ತಷ್ಟು ಓದು »