ಜಾನ್ ಮೆಕೇನ್ ಸ್ಪರ್ಧಿಯಾಗುವ ಮುನ್ನವೇ ಗೆದ್ದಿದ್ದರು ಒಬಾಮಾ, ಹಾಗೆಯೇ ಮೋದಿಯೂ!
– ಗೋಪಾಲ ಕೃಷ್ಣ
ಅದು 2008ರ ನವೆಂಬರ್ 04ನೇ ತಾರೀಖು. ಹಲವು ಕಾರಣಗಳಿಗೆ ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವಿಶೇಷತೆ ಪಡೆದುಕೊಂಡಿತ್ತು. ಅದಕ್ಕೆ ಮುಖ್ಯವಾಗಿ ಕಾರಣವಾಗಿದ್ದು ಬರಾಕ್ ಒಬಾಮಾ. ಎಲ್ಲಾ ಅಡೆತಡೆಗಳನ್ನು ದಾಟಿ ಚುನಾವಣೆಯ ಹೊಸ್ತಿಲಲ್ಲಿ ನಿಂತ ಒಬಾಮಾಗೆ ರಿಪಬ್ಲಿಕನ್ ಪಕ್ಷದ ಜಾನ್ ಮೆಕೇನ್ ಪ್ರತಿಸ್ಪರ್ಧಿಯಾಗಿದ್ದರು. ಒಬಾಮಾ ಅವರೇ ಗೆಲ್ಲುತ್ತಾರೆ ಎನ್ನುವುದು ಚುನಾವಣೆಗೂ ಮುನ್ನವೆ ಅಮೇರಿಕಾದಲ್ಲಿ ಮಾತ್ರವಲ್ಲ ಇಡಿ ವಿಶ್ವದಲ್ಲೇ ನಿರೀಕ್ಷೆಗಳನ್ನು ಹುಟ್ಟಿಸಿತ್ತು. ಆ ಪರಿಯ ಸಂಚಲನ ಮೂಡಿಸಿದ್ದರು ಒಬಾಮಾ. ಅವರ ಪ್ರಚಾರ ವೈಖರಿ, ಬದಲಾವಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ್ದು, ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡದ್ದು ಎಲ್ಲವೂ ಒಬಾಮಾ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದವು. ಅಂತೆಯೇ ಗೆದ್ದು, ಅಧ್ಯಕ್ಷರಾದರು.
ಒಬಾಮಾ ಗೆಲುವಿನ ಹಾದಿಗೆ ಸಾಮ್ಯತೆ ಎನಿಸುವಂತಹ ಬೆಳವಣಿಗೆಗಳು ಭಾರತದಲ್ಲಿಯೂ ಗೋಚರಿಸುತ್ತಿವೆ, ಅದು ಮುಂದಿನ ಲೋಕಸಭಾ ಚುನಾವಣೆಗೆ. ಇದಕ್ಕೆ ಕಾರಣವಾಗಿರುವುದು ನರೇಂದ್ರ ಮೋದಿಯವರ ನಡೆಗಳು ಮತ್ತು ಅವರ ವಿರೋಧಿಗಳ ಅಡ್ಡಗಾಲುಗಳು.
ಒಬಾಮಾ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗುವುದು ಸುಲಭವಾಗಿರಲಿಲ್ಲ. ಜಾನ್ ಎಡ್ವಡ್ರ್ಸ್ ಮತ್ತು ಹಿಲರಿ ಕ್ಲಿಂಟನ್ ಅವರಿಂದ ಭಾರೀ ಸ್ಪರ್ಧೆಯನ್ನೇ ಎದುರಿಸಬೇಕಾಯಿತು. ಅದರಲ್ಲೂ ಹಿಲರಿ ಕ್ಲಿಂಟನ್ ಕೊನೆಯ ಕ್ಷಣದವರೆಗೂ ಒಬಾಮಾ ಹಾದಿಗೆ ಮುಳ್ಳಾಗುತ್ತಲೇ ಇದ್ದರು. ಅಧ್ಯಕ್ಷೀಯ ಚುನಾವಣೆಗಿಂತಲೂ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಆಯ್ಕೆಯೇ ಅಮೇರಿಕಾದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದು ಒಬಾಮಾ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನೂ ವಹಿಸಿತ್ತು. ‘We ಓeeಜ ಅhಚಿಟಿge’ ‘ಅಊಂಓಉಇ, ತಿe ಛಿಚಿಟಿ’ ಎಂಬ ಘೋಷವಾಕ್ಯಗಳೊಂದಿಗೆ ಒಬಾಮಾ ಜನರ ಬಳಿಗೆ ಹೋದರು. ಹಿಲರಿ ಕ್ಲಿಂಟನ್ ‘ಇxಠಿeಡಿieಟಿಛಿe’ ಬಗ್ಗೆ ಮಾತನಾಡುತ್ತ ಜನರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸಿದರು. ಮೊದಮೊದಲು ಜನರ ಭಾವನೆಗಳು ಅನುಭವಿ ಎಂಬ ಕಾರಣಕ್ಕೆ ಹಿಲರಿಯತ್ತ ವಾಲುತ್ತಿದ್ದವು. ಒಬಾಮಾರಾದರೂ ಹೊಸಬರು, ಇನ್ನು ಕಲಿಯಬೇಕಾದ್ದು ಬಹಳಷ್ಟಿದೆ ಎಂಬ ಅಭಿಪ್ರಾಯವೂ ಮೂಡಿತ್ತು. ಆದರೆ ವಾಸ್ತವವನ್ನರಿತು ಬದಲಾವಣೆ ತರಲು ತನ್ನಲ್ಲಿರುವ ಸಾಮಥ್ರ್ಯವನ್ನು ಜನರಿಗೆ ಬಿಡಿಬಿಡಿಯಾಗಿ ಬಿಚ್ಚಿಟ್ಟರು ಒಬಾಮಾ. ಹಿಲರಿ ತಮ್ಮ ಅನುಭವದ ಬಗ್ಗೆ ಹೇಳಿದರೆ ಹೊರತು, ಬದಲಾವಣೆಯ ಬಗ್ಗೆ ಜನರನ್ನು ಸೆಳೆಯಲಿಲ್ಲ. ಅಭ್ಯರ್ಥಿ ಆಯ್ಕೆಯಲ್ಲಿ ಒಬಾಮಾಗೆ ಶೇ.52ರಷ್ಟು ಮತ ಬಂದಿದ್ದರೆ, ಹಿಲರಿ ಶೇ.42 ಮತಗಳಿಗೆ ತೃಪ್ತಿಪಡಬೇಕಾಯಿತು. ಹಿರಿತನಕ್ಕಿಂತಲೂ ಇಚ್ಛಾಶಕ್ತಿಯೇ ಮುಖ್ಯ ಎಂಬುದನ್ನು ಸಾಬೀತುಪಡಿಸಿದರು. ಇದು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಅವಕಾಶವನ್ನು ಒಬಾಮಾಗೆ ತಂದಿತ್ತಿತು.
ಕೃಷ್ಣ ಗಾರುಡಿ ವರ್ಸಸ್ ನರೀಂದ್ರ ಮೋಡಿ!
– ತುರುವೇಕೆರೆ ಪ್ರಸಾದ್
ಮೋದಿ: ಗುರುಗಳೇ, ಕಮಲ ಸೈನ್ಯದ ಮುಂದಿನ ಮಹಾಸಮರ ದಳಪತಿಯಾಗಿ ನೇಮಿಸಲ್ಪಟ್ಟಿರುವೆ. ಕೃಪೆ ಮಾಡಿ ಆಶೀರ್ವದಿಸಿ
ಅಡ್ವಾನಿ: ಛೀ! ಗುರುದ್ರೋಹಿ, ತೊಲಗಿಲ್ಲಿಂದ! ನಿನ್ನ ಮುಖ ತೋರಿಸಬೇಡ ನನಗೆ..!
ಮೋದಿ: ಈ ದುರಾಗ್ರಹವೇಕೆ ಗುರುವೇ! ಇದು ನೀವೇ ಕಲಸಿಕೊಟ್ಟ ಪಟ್ಟು.. ಏಕೀ ವಿರೋಧ? ಗುರು ಮಿಂಚಿನ ಶಿಷ್ಯಡು ಎಂದು ಎದೆ ತಟ್ಟಿ ಹೇಳುವುದು ಬಿಟ್ಟು! ನಿಮ್ಮ ಮುಖವಾಣಿಯಾಗಿದ್ದ ನನಗೇ ನೀವು ಅಡ್ಡವಾಣಿಯಾಗುವುದೇ?
ಅಡ್ವಾನಿ: ರಥ ಹತ್ತಿ ಅತಳ ಸುತಳ ಪಾತಾಳ ಸುತ್ತಿದ ಈ ಅತಿರಥ ಮಹಾರಥನ ಮುಂದೆ ನೀನ್ಯಾವ ಲೆಕ್ಕ?
ಮೋದಿ: ಯಾರು ತಿಳಿಯರು ನಿಮ್ಮ ರಥಬಲದ ಪರಾಕ್ರಮ
ಸಂದಿಗೊಂದಿಗಳೊಳ್ ಸಂಚರಿಸಿದ ನಿಮ್ಮ ರಥಯಾತ್ರೆಗಳ ಕರ್ಮ
ಎಲ್ಲದಕೂ ಕಾರಣವು ಶ್ರೀ ರಾಮ ನಾಮ
ಕಲ್ಯಾಣಸಿಂಗ್ ಇಲ್ಲದಿದ್ದರೆ ಮೂರು ನಾಮ
ಕಡಾಣಿ ಮುರಿದ ರಥದೊಡೆಯ ನೀವು ತೃಣಕ್ಕೆ ಸಮಾನ..!
ಅಡ್ವಾನಿ: ಜನಸಂಘ ಶೂರ ನಾ ಶ್ರೀರಾಮ ಬಲನೋ, ಸಂಘದೊಡನೆ ಹೋರಾಡಿ ಅಧ್ಯಕ್ಷ ಗಾದಿಯಂ ಪಡೆದವನೋ,ಗಡ್ಕರಿಯ ಉತ್ಸವಕೆ ಸಂಚಕಾರ ತಂದವನೋ? ಪ್ರಧಾನಿ ಪಟ್ಟಕ್ಕೆ ಎದುರಾಗೋ ಕುರಿಗಳಂ ನೀವಾಳಿಸೋ ವ್ಯಾಘ್ರನಿವನೋ..ಉಗ್ರ ಪ್ರತಾಪಿ..
೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!
-ರಾಘವೇಂದ್ರ ನಾವಡ
ಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರು ಹಾಜರಾದಾಗಲೇ ಏನೋ ಮಹತ್ತರವಾದುದು ನಡೆಯುತ್ತದೆ ಎ೦ಬುದನ್ನು ಊಹೆಯಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ! ಮೋದಿಯ ಮೇಲಿನ ಅಡ್ವಾಣಿಯವರ ವಿರೋಧದ ಅ೦ತ್ಯ ಹೇಗಾಗಬಹುದೆ೦ದು ಯೋಚಿಸುತ್ತಿದ್ದೆ.. ಮೋದಿಯ ಪದೋನ್ನತಿಯನ್ನು ಊಹಿಸಿಯಾಗಿತ್ತು! ಅದಕ್ಕಿದ್ದ ಅಡ್ವಾಣಿಯವರ ವಿರೋಧವನ್ನೂ ಅರ್ಥೈಸಿಕೊ೦ಡಿತ್ತು! ಆದರೆ ಅಡ್ವಾಣಿಯವರ ಈ ನಡೆ ಪಕ್ಷವನ್ನಷ್ಟೇ ಅಲ್ಲ! ಸಮಸ್ತ ಭಾ.ಜ.ಪಾ ಕಾರ್ಯಕರ್ತರಲ್ಲದೆ ಅದರ ಲಕ್ಷಾ೦ತರ ಅಭಿಮಾನಿಗಳಿಗೂ ಕ್ಷಣ ನಿಟ್ಟುಸಿರು ಬಿಡ್ಶುವ೦ತೆ ಮಾಡಿದೆ! ಕೇವಲ “ ಕೃಷ್ಣ “ ನ ಕೈಯಲ್ಲಿ ಆಯುಧ ಹಿಡಿಸಲೆ೦ದೇ ಕುರುಕ್ಷೇತ್ರದಲ್ಲಿ ಪಾ೦ಡವರೊ೦ದಿಗೆ ಹಿಗ್ಗಾಮುಗ್ಗ ಹೋರಾಡಿದ ಭೀಷ್ಮರು ತನ್ನ ಗುರಿ ಈಡೇರಿದ ನ೦ತರ ಶರಶಯ್ಯೆಯಲ್ಲಿ ಮಲಗಿದ೦ತೆ.. ಭಾಜಪಾದ “ ಲಾಲಕೃಷ್ಣ“ ಶಸ್ತ್ರ ತ್ಯಾಗ ಮಾಡಿರುವುದು ಬೇಸರವನ್ನು೦ಟು ಮಾಡಿದುದರ ಜೊತೆಗೆ… ಹೆ೦ಡತಿಯ ಒತ್ತಾಯಕ್ಕೋ… ವಯಸ್ಸಿನ ಪ್ರಭಾವವೋ… ಶಕ್ತಿಯ ಕೊರತೆಯೋ ಎ೦ಬುದರ ಗೊ೦ದಲದಲ್ಲಿ ತನ್ನ ಅಪ್ರಸ್ತುತತೆಯನ್ನು ಮನಗ೦ಡ ತ೦ದೆಯೊಬ್ಬ ಏಕದ೦ ಕುಟು೦ಬದ ಜವಾಬ್ದಾರಿಯನ್ನು ಮಕ್ಕಳಿಗೆ ತಲ್ಲಣದಿ೦ದಲೇ ನೀಡಿ, ಹೊರಬರುವುದನ್ನು ಕಲ್ಪಿಸಿಕೊಳ್ಳುವ೦ತೆ ಮಾಡುತ್ತದೆ!
ಅದು ೧೯೮೦ ರ ಕಾಲ.. ಜನಸ೦ಘದಿ೦ದ ಬೇರ್ಪಟ್ಟು ಭಾ.ಜ.ಪಾದ ಹುಟ್ಟಿಗೆ ಕಾರಣಕರ್ತರಾದವರಿಬ್ಬರಲ್ಲಿ ವಾಜಪೇಯಿಯ ಜೊತೆಗೆ ಅಡ್ವಾಣಿಯೂ ಒಬ್ಬರು. ೧೯೮೬ ರಲ್ಲಿ ಆ ಪಕ್ಷದ ರಾಷ್ತ್ರೀಯ ಅಧ್ಯಕ್ಷರಾಗುವವರೆಗೂ ಚುನಾವಣೆಗಳಲ್ಲಿ ಭಾಜಪಾದ ಸಾಧನೆಯೇನೂ ಹೇಳಿಕೊಳ್ಳುವ೦ತಹದ್ದಾಗಿರಲಿಲ್ಲ! ಆದರೆ ನ೦ತರದ್ದು ಇತಿಹಾಸ.. ಚುನಾವಣೆಯಿ೦ದ ಚುನಾವಣೆಗೆ ಸುಧಾರಿಸುತ್ತಲೇ ಹೋದ ಭಾಜಪಾ.. ಅಡ್ವಾಣಿಯವರು ಆರ೦ಭಿಸಿದ “ಶ್ರೀರಾಮ ರಥಯಾತ್ರೆಯ“ ಲಾಭವನ್ನು ಭರಪೂರವಾಗಿ ಪಡೆದುಕೊ೦ಡಿತು! ಕಾ೦ಗ್ರೆಸ್ಸಿಗೆ ಸಮಾನವಾಗಿ ಸೆಡ್ದುಹೊಡೆದು ನಿಲ್ಲಲು ಭಾಜಪಾಕ್ಕೆ ಶಕ್ತಿ ತು೦ಬಿದವರೆ೦ದರೆ ಇಬ್ಬರೇ.. ವಾಜಪೇಯಿ ಹಾಗೂ ಅಡ್ವಾಣಿ! ಲಕ್ಷಾ೦ತರ ಕಾರ್ಯಕರ್ತರ ಅಮಿತೋತ್ಸಾಹವೂ ಇವರೊ೦ದಿಗಿತ್ತು! ಬೆನ್ನಿಗೆ ಉಗ್ರ ಹಿ೦ದುತ್ವದ ಅಜೆ೦ಡಾ… ಬೆನ್ನು ಬೆನ್ನಿಗೆ ರಥಯಾತ್ರೆಗಳು.. ಭಾರತ ರಾಜಕೀಯದಲ್ಲಿ “ ರಾಮ-ಲಕ್ಷ್ಮಣ“ರೆ೦ದೇ ಖ್ಯಾತವಾದ ಈ ಜೋಡಿ ಕಾ೦ಗ್ರೆಸ್ ಗೆ ಪರ್ಯಾಯವಾಗಿ ಭಾ.ಜ.ಪಾವನ್ನು ಬೆಳೆಸಿದ್ದಲ್ಲದೆ, ದೇಶದ ರಾಜಕೀಯದಲ್ಲಿ ಕಾ೦ಗ್ರೆಸ್ಸಿಗೆ ಬಹುದೊಡ್ಡ ಪರ್ಯಾರವಾಗಿ ಬೆಳೆದು ನಿ೦ತಿತು. ೧೯೯೬ ರ ಚುನಾವಣೆಯಲ್ಲಿ ಏಕೈಕ ಬಲು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಾ.ಜ.ಪಾಕ್ಕೆ ವಾಜಪೇಯಿ ನೇತಾರರಾದರು. ಚುನಾವಣೆಗೂ ಮುನ್ನ ಅಡ್ವಾಣಿ ವಾಜಪೇಯಿಯವರನ್ನು ಬಾ.ಜ.ಪಾ ದ ಪ್ರಧಾನ ಮ೦ತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಫಲ ನೀಡಿತು! “ ಬದಲಾವಣೆಗಾಗಿ ಭಾ.ಜ.ಪಾ.ವನ್ನು ತನ್ನಿ“ , “ ಈ ಬಾರಿ ಬಿ.ಜೆ.ಪಿ“ ಎ೦ಬ ಕಾರ್ಯಕರ್ತರ ಚುನಾವಣಾ ಘೋಷಣೆಗಳು ಫಲ ನೀಡಿದವು. ವಾಜಪೇಯಿಯವರ ಅಕಳ೦ಕಿತ ವ್ಯಕ್ತಿತ್ವ, ರಾಜಕೀಯ ಅನುಭವ ಹಾಗೂ ಅಡ್ವಾಣಿಯವರ ಪ್ರಖರ ಹಿ೦ದುತ್ವವಾದಕ್ಕೆ ಮತದಾರರು ಮಣೆ ಹಾಕಿದರು!
ಹೊಸ ಚಳುವಳಿಯ ಅರುಣೋದಯ
ಪ್ರೊ. ವಿವೇಕ ಧಾರೇಶ್ವರ, ಬೆಂಗಳೂರು
ವಚನ ಚಳುವಳಿ ಹಾಗೂ ಜಾತಿ ವ್ಯವಸ್ಥೆಯ ಕುರಿತ ಡಂಕಿನ್ ಅವರ ಪ್ರಬಂಧದ ವಿರುದ್ಧವಾಗಿ ನಡೆದ ವಾಗ್ದಾಳಿಯನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ಅದರಲ್ಲೂ ಪ್ರೊ. ಶಿವಪ್ರಕಾಶರನ್ನು ಬಿಟ್ಟರೆ ಮತ್ಯಾರೂ ಆ ಪ್ರಬಂಧವನ್ನು ಓದಿದಂತೆ ಕಾಣುವುದಿಲ್ಲ. ಇಲ್ಲಿ ಗಮನಿಸಬೇಕಾದ ಎರಡು ಅಂಶಗಳಿವೆ: 1) ಇದು ಡಂಕಿನ್ ವಿಚಾರಕ್ಕೊಂದೇ ಹುಟ್ಟಿದ ವಿರೋಧವಲ್ಲ ಎಂಬುದು ಸ್ಪಷ್ಟ. ಬಾಲಗಂಗಾಧರರ ‘ಹೀದನ್..’ (ಸ್ಮೃತಿ-ವಿಸ್ಮೃತಿ) ಗ್ರಂಥವು ಹುಟ್ಟುಹಾಕಿದ ಸಂಶೋಧನಾ ಕಾರ್ಯಕ್ರಮದ ಕುರಿತ ಚರ್ಚೆಯಿಂದಾಗಿ ಹುಟ್ಟಿಕೊಂಡ ಚಿಂತನಾ ಪರಿಸರವನ್ನೇ ಇಲ್ಲಿ ಗುರಿಯಾಗಿಟ್ಟುಕೊಳ್ಳಲಾಗಿದೆ ಎಂಬುದು ಖಚಿತ. 2) ಇದನ್ನು ನಾನು ಗುಂಪು, ಸಮುದಾಯ ಎಂಬುದಾಗಿ ಗುರುತಿಸದೇ ಪರಿಸರ ಎಂದು ಏಕೆ ಕರೆಯುತ್ತೆನೆಂದರೆ, ಇಲ್ಲಿರುವವರು ಬೇರೆ ಬೇರೆ ದೇಶಗಳಿಗೆ ಸೇರಿದ್ದಾರೆ, ಬೇರೆ ಬೇರೆ ಭಾಷೆಗಳನ್ನು ಆಡುತ್ತಾರೆ, ವಿಭಿನ್ನ ಸಂಸ್ಥೆಗಳು ಹಾಗೂ ಸಾಮಾಜಿಕ ಹಿನ್ನೆಲೆಗಳಿಗೆ ಸೇರಿದ್ದಾರೆ. ಈ ಸಂಶೋಧಕರು ತಮಗಿರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ನೆಲೆಯಲ್ಲಿ ಮಾತ್ರವೇ ಒಟ್ಟಿಗೆ ಬಂದಿದ್ದಾರೆ. ಸಂಶೋಧನಾಸಕ್ತಿಯೇ ಇವರನ್ನೆಲ್ಲ ಒಟ್ಟಿಗೆ ತಂದಿದೆಯೇ ವಿನಃ ಯಾವುದೇ ರಾಜಕೀಯ ಉದ್ದೇಶವಾಗಲೀ, ಸಾಮಾಜಿಕ ಹೋರಾಟವಾಗಲೀ ಅಲ್ಲ. ಅವರ ಮೇಲೆ ನಡೆಯುತ್ತಿರುವ ದಾಳಿಯ ರಭಸವನ್ನು ಹಾಗೂ ಕೆಸರೆರಚಾಟದ ಸ್ವರೂಪವನ್ನು ವಿಶ್ಲೇಷಿಸುವುದಕ್ಕೂ ಮೊದಲು ಈ ಮೇಲಿನ ಎರಡೂ ಅಂಶಗಳನ್ನು ಗುರುತಿಸಿಕೊಳ್ಳುವುದು ಮುಖ್ಯ.
ಈ ಸಂಶೋಧಕರ ಸಂಶೋಧನೆಯ ಕುರಿತು ಚರ್ಚೆಯೇ ನಡೆಯುತ್ತಿಲ್ಲ, ಬದಲಾಗಿ ಈ ಸಂಶೋಧನೆಯ ರಾಜಕೀಯ ಪರಿಣಾಮದ ಕುರಿತು ಕಟು ಟೀಕೆಗಳು ಬರುತ್ತಿವೆ. ಒಂದು ಸಂಶೋಧನಾ ಕಾರ್ಯಕ್ರಮದ ಪರಿಣಾಮದ ಕುರಿತು ಚರ್ಚಿಸಲೇ ಬಾರದು ಎಂದು ನಾನು ಹೇಳುತ್ತಿಲ್ಲ. ಆದರೆ ಅಂಥ ಚರ್ಚೆಗೂ ಮುನ್ನ ಆ ಸಂಶೋಧಕರ ವಾದ ಹಾಗೂ ಸಂಶೋಧನೆಗಳು ಏನು ಎಂಬುದನ್ನು ತಿಳಿದುಕೊಳ್ಳುವುದಾದರೂ ಬೇಡವೆ? ಈ ಸಂಶೋಧನೆಯು ಹೊಸದೇ ಆದ ವಿಚಾರವೊಂದನ್ನು ತಿಳಿಸುತ್ತಿದೆ, ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾಗಿದೆ, ಹಾಗೂ ಬೌದ್ಧಿಕ ಸವಾಲನ್ನು ಎಸೆಯುತ್ತದೆ ಎಂಬ ಕಾರಣಕ್ಕಾದರೂ ಅದನ್ನು ಗಂಭೀರವಾಗಿ ಪರಿಶೀಲಿಸುವ ಒಂದು ಪ್ರಯತ್ನವಾದರೂ ಕಾಣಬೇಡವೆ? ಸ್ಮೃತಿ-ವಿಸ್ಮೃತಿಯಲ್ಲಿ ಬರುವ ಹೇಳಿಕೆಯೊಂದು ನಮ್ಮಲ್ಲಿ ಅನೇಕರನ್ನು ಕಾಡಿದೆ: ಅದೆಂದರೆ, “ಹಿಂದೂಯಿಸಂ” ಎಂಬುದು ಅಸ್ತಿತ್ವದಲ್ಲಿ ಇಲ್ಲವೊಂದೇ ಅಲ್ಲ ಯುರೋಪಿಯನ್ನರು ಅಂಥದ್ದೊಂದು ಸಂಗತಿ ಇದೆ ಎಂಬುದಾಗಿ ಅಂದುಕೊಂಡೇ ಭಾರತೀಯ ಸಂಸ್ಕೃತಿಯನ್ನು ಅನುಭವಿಸಿದರು. ಈ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಿಕ್ಕಾಗಿ ಸ್ಮೃತಿ-ವಿಸ್ಮೃತಿಯಲ್ಲಿ ರಿಲಿಜನ್ನಿನ ಕುರಿತು ಒಂದು ಸಿದ್ಧಾಂತವನ್ನು ರಚಿಸಿ ರಿಲಿಜನ್ನೆಂದರೆ ಏನು? ಅದು ಭಾರತದಲ್ಲಿ ಇರಲಿಕ್ಕೆ ಹೇಗೆ ಸಾಧ್ಯವಿಲ್ಲ ಎಂಬುದನ್ನು ವಿವರಿಸಲಾಗಿದೆ. ಇವು ಗಹನವಾದ ಹೇಳಿಕೆಗಳಾಗಿದ್ದು ಈ ವಾದವನ್ನು ಅರ್ಥಮಾಡಿಕೊಂಡ ನಮ್ಮಲ್ಲಿ ಕೆಲವರಾದರೂ ರೋಮಾಂಚಿತರಾದೆವಷ್ಟೇ ಅಲ್ಲ ಸಮಾಜ ವಿಜ್ಞಾನಗಳಲ್ಲಿ ಸಿದ್ಧಾಂತವನ್ನು ಕಟ್ಟುವುದು ಸಾಧ್ಯ ಎಂಬ ಹೇಳಿಕೆಗೆ ದೃಷ್ಟಾಂತವನ್ನು ಕಣ್ಣಾರೆ ನೋಡಿ ಸ್ಫೂರ್ತಿಗೊಂಡೆವು. ಅಂದರೆ ನಮಗೆ ಸಾಮಾಜಿಕ ಜಗತ್ತಿನ ಜ್ಞಾನವನ್ನು ನಿಸರ್ಗ ವಿಜ್ಞಾನಗಳ ದಾರಿಯಲ್ಲೇ, ಅದಕ್ಕೂ ಭಿನ್ನವಾಗಿ ಕಟ್ಟಬಹುದು ಎಂಬುದನ್ನು ಅದು ತೋರಿಸಿತು. ಈ ಸಿದ್ಧಾಂತವನ್ನು ಕಟ್ಟುವ ಕೆಲಸವೇ ಇಂದು ನಾನು ಉಲ್ಲೇಖಿಸುತ್ತಿರುವ ಈ ಹೊಸ ಸಂಶೋಧನಾ ಪರಿಸರವನ್ನು ರೂಪಿಸಿದೆ.
ಸಂಶೋಧನೆಯ ದಾರಿಯನ್ನು ಯಾರು ನಿರ್ಧರಿಸಬೇಕು?
ಪ್ರೊ.ರಾಜಾರಾಮ ಹೆಗಡೆ
{20-5-2013 ಕನ್ನಡ ಪ್ರಭದಲ್ಲಿ ವರದಿಯಾದಂತೆ ಡಾ. ಎಂ.ಎಂ
. ಕಲ್ಬುರ್ಗಿಯವರು ಬಸವಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಕುವೆಂಪು ವಿಶ್ವವಿದ್ಯಾನಿಲಯದ ಸಂಶೋಧಕರ ಕುರಿತು ಆಡಿದ ಮಾತಿಗೆ ಈ ಪ್ರತಿಕ್ರಿಯೆ.}
“ವಚನ ಚಳುವಳಿಯ ಚರ್ಚೆಯಲ್ಲಿ ಪ್ರಜಾವಾಣಿ ಪತ್ರಿಕೆಯು ಒಂದು ಪಕ್ಷದವರ ನಿಲುವುಗಳನ್ನು ಹೆಚ್ಚಾಗಿ ಬೆಂಬಲಿಸಿ ಈಗ ಚರ್ಚೆಯನ್ನು ಸಂಪೂರ್ಣವಾಗಿ ಆ ಪತ್ರಿಕೆಯು ನಿಲ್ಲಿಸಿಯಾಗಿದೆ. ಆದರೆ ಆ ಚರ್ಚೆಯ ಪರಿಣಾಮಗಳು ಗಾಢವಾಗಿವೆ ಎಂಬುದು ಸ್ಪಷ್ಟ. ಹಲವಾರು ಪ್ರಗತಿಪರ ಸಂಘಟನೆಗಳು ನಮ್ಮ ಸಂಶೋಧನಾ ಕೇಂದ್ರವನ್ನು ಮತ್ತು ಸಂಶೋಧನೆಯನ್ನು ನಿಲ್ಲಿಸುವಂತೆ ಸರ್ಕಾರದ ಮಟ್ಟದಲ್ಲಿ, ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಬೀರುತ್ತಾ ಒತ್ತಡ ತರುತ್ತಿವೆ. ಇಂತಹ ಸಮಯದಲ್ಲಿ ಬಸವಶ್ರೀ ಪ್ರಶಸ್ತಿ ಪಡೆದ ಎಂ.ಎಂ.ಕಲಬುರ್ಗಿಯವರು ವಿಕೃತ ಸಂಶೋಧನೆಯನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳ ಮುಂದೆ ಅಲವತ್ತುಕೊಂಡಿರುವುದು ಹಲವಾರು ಪತ್ರಿಕೆಗಳಲ್ಲಿ ಪಕ್ರಟವಾಗಿದೆ. ಅವರ ಕೋರಿಕೆಗೆ ಕೆಲವಾದರೂ ಪರಿಣಾಮಗಳು ಇದ್ದೇ ಇರುತ್ತವೆ. ಕನ್ನಡಪ್ರಭದಲ್ಲಿ ಪ್ರಕಟವಾದ ಅವರ ಅಂಬೋಣಕ್ಕೆ ಪ್ರತಿಕ್ರಿಯೆಯಾಗಿ ಈ ಲೇಖನವನ್ನು ಬರೆದು ಕನ್ನಡಪ್ರಭ ಪತ್ರಿಕೆಗೆ ಕಳುಹಿಸಲಾಗಿತ್ತು. ಆದರೆ ಪ್ರಕಟವಾಗಿಲ್ಲ.”
ವಿಶ್ವವಿದ್ಯಾನಿಲಯದ ಸಿಂಡಿಕೇಟು ಸದಸದ್ಯರು ಈ ಅಧ್ಯಾಪಕರಿಗೆ ಎಚ್ಚರಿಕೆ ನೀಡಬೇಕೆಂದು ಅವರು ಕರೆಕೊಟ್ಟಿದ್ದಾರೆ. ಅದೇ ಭಾಷಣದಲ್ಲಿ ಅವರು ವಚನಗಳ ಕುರಿತು ಕುವೆಂಪು ವಿಶ್ವವಿದ್ಯಾಲಯದ ಸಂಶೋಧಕರು ನಡೆಸುತ್ತಿರುವುದು ವಿಕೃತ ಸಂಶೋಧನೆ, ಅದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೂ ಕೇಳಿಕೊಂಡಿದ್ದಾರೆ ಎಂಬುದನ್ನು ಇತರ ಪತ್ರಿಕೆಗಳೂ ಪ್ರಕಟಿಸಿವೆ.
ಕನ್ನಡ ಸಾರಸ್ವತ ಲೋಕದಲ್ಲಿ ಕಲಬುರ್ಗಿಯವರನ್ನು ಸಂಶೋಧಕರು ಎಂದೇ ಗುರುತಿಸಲಾಗುತ್ತದೆ. ಅವರು ಹಂಪಿ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದಾರೆ. ಅದಕ್ಕಿಂತ ಸ್ವತಃ ಅವರೇ ತಮ್ಮ ಮಾರ್ಗ 2 ಸಂಪುಟದಲ್ಲಿನ ಲೇಖನವೊಂದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ಎದುರಿಸಬೇಕಾದ ಪರಿಸ್ಥಿತಿ ಕೂಡ ಒಮ್ಮೆ ಬಂದಿತ್ತು. ಆಗ ಅಭಿಪ್ರಾಯ ಸ್ವಾತಂತ್ರ್ಯದ ಮೌಲ್ಯ ಅವರಿಗೆ ರಕ್ಷಣೆಯಾಗಿ ಬಂದಿತ್ತು. ಆದರೆ ಈಗ ಒಂದು ವಿಪರ್ಯಾಸವನ್ನು ನೋಡುತ್ತಿದ್ದೇವೆ. ನಮ್ಮ ಶಿಕ್ಷಣ ವ್ಯವಸ್ಥೆಯು ಸಂಶೋಧಕನೊಬ್ಬನಿಗೆ ನೀಡುವ ಯಾವ ಭರವಸೆಯು ಕಲಬುರ್ಗಿಯವರ ಸಂಶೋಧನೆಯನ್ನು ಸಾಧ್ಯ ಮಾಡಿತೊ ಹಾಗೂ ಅದರ ಹೆಸರಿನಲ್ಲಿ ಎದ್ದ ವಿವಾದಗಳಿಗೆ ಎದುರಾಗಿ ಅವರನ್ನು ರಕ್ಷಿಸಿತೊ ಅದು ಮುಂದಿನ ತಲೆಮಾರಿನ ಸಂಶೋಧಕರಿಗೆ ಬೇಡ ಎಂಬ ಅಭಿಪ್ರಾಯಕ್ಕೆ ಅವರು ಬಂದಂತಿದೆ. ಅಥವಾ ಅವರು ಈಗ ಸಂಶೋಧನೆಗೆ ಬೇರೆಯದೇ ಆದ ಅರ್ಥ ಹಚ್ಚುತ್ತಿರಲೂಬಹುದು
ಸಾವರ್ಕರ್ ಮತ್ತು ನೆಹರೂ : ಹೋಲಿಸಬಾರದ ವ್ಯಕ್ತಿಗಳು
– ಚಕ್ರವರ್ತಿ ಸೂಲಿಬೆಲೆ
(ಮೇ ೨೮) ಸಾವರ್ಕರ್ ಜನ್ಮ ದಿನ. ಈ ಸಂಧರ್ಭದಲ್ಲಿ ಭಾರತದ ದಿಕ್ಕು ಬದಲಿಸಿದ ಇಬ್ಬರು ವ್ಯಕ್ತಿಗಳ ತುಲನಾತ್ಮಕ ಬರಹ ಇಲ್ಲಿದೆ. ಯಾರು ಯಾವ ಬಗೆಯಲ್ಲಿ ದಿಕ್ಕು ಬದಲಿಸಿದರು ಅಥವಾ ತಪ್ಪಿಸಿದರು ಎನ್ನುವುದು ಓದುಗರ ವಿವೇಚನೆಗೆ ಬಿಟ್ಟಿದ್ದು…
ಇತಿಹಾಸದ ಪುಟಗಳು ಅದೆಷ್ಟು ಬೇಗ ಹಿಂದೆ ಹಿಂದೆ ಹೋಗಿಬಿಡುತ್ತವಲ್ಲ! ಒಂದು ಪುಟವನ್ನು ತಿರುವಿಹಾಕಿದಂತೆ ಆ ಪುಟದಲ್ಲಿರುವ ಸಂಗತಿಗಳನ್ನೆಲ್ಲಾ ಮರೆತುಬಿಟ್ಟರೆ ಮುಗಿದೇಹೋಯಿತು. ನೆನಪಿಟ್ಟುಕೊಂಡು ಮುಂದಡಿ ಇಡುವವ ಮಾತ್ರ ವಿಜಯಿಯಾದಾನು. ನಮ್ಮ ಇತಿಹಾಸ ಒಂಥರಾ ಸೆಮಿಸ್ಟರ್ ಪದ್ಧತಿಯ ಶಿಕ್ಷಣದಂತಾಗಿಬಿಟ್ಟಿದೆ. ಈ ಸೆಮಿಸ್ಟರ್ ನಲ್ಲಿ ಕಲಿತದ್ದು ಮುಂದಿನ ಬಾರಿಗೆ ಬೇಕಾಗಲಾರದು. ಸದ್ಯಕ್ಕೆ ಸಾವರ್ಕರ್ ಭಾರತೀಯರ ಪಾಲಿಗೆ ಹಾಗೆಯೇ ಆಗಿಬಿಟ್ಟಿದ್ದಾರೆ. ಅವರು ಹುಟ್ಟಿ125 ವರ್ಷ ಕಳೆಯುವುದರೊಳಗಾಗಿ ಅವರು ಸಮಾಜದ ಕಣ್ಣಿಂದ ದೂರವೇ ಆಗಿಬಿಟ್ಟಿದ್ದಾರೆ. ಯಾವ ರಾಷ್ಟ್ರದ ಏಕತೆ- ಅಖಂಡತೆಗಾಗಿ; ಯಾವ ಪರಿಪೂರ್ಣ ಸಮಾಜದ ಪರಿಪೂರ್ಣ ಉನ್ನತಿಗಾಗಿ ತಮ್ಮ ಜೀವನವನ್ನೇ ತೇಯ್ದುಬಿಟ್ಟರೋ ಆ ವ್ಯಕ್ತಿ ಅದೇ ದೇಶದ ಸ್ಮೃತಿಯಿಂದ ದೂರವಾಗೋದು ದುರಂತವೇ ಸರಿ.
ಹಾಗೆ ನೋಡಿದರೆ ಕಳೆದ ಶತಕದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬೌದ್ಧಿಕವಾಗಿ ಹಾಗೆಯೇ ಪ್ರತ್ಯಕ್ಷವಾಗಿ ಪಾಲ್ಗೊಂಡ ಅಪರೂಪದ ಸಾಹಸಿ ಸಾವರ್ಕರರೇ ಎಂಬುದರಲ್ಲಿ ಅನುಮಾನವಿಲ್ಲ. ಸಿಕ್ಕಸಿಕ್ಕಲ್ಲಿ ಗುಂಡು ಹೊಡೆದು ಅದನ್ನೇ ಕ್ರಾಂತಿ ಎನ್ನುತ್ತಿರಲಿಲ್ಲ ಸಾವರ್ಕರ್. ಅವರ ಪ್ರತಿಯೊಂದು ಕೆಲಸದ ಹಿಂದೆ ಬೆಟ್ಟದಷ್ಟು ಚಿಂತನೆ, ಫಲಿತಾಂಶದ ನಂತರದ ಪರಿಸ್ಥಿತಿಯ ಕುರಿತು ಮುಂದಾಲೋಚನೆ- ಎಲ್ಲವೂ ಇರುತ್ತಿತ್ತು. ಅವರು ಲೇಖನಿ ಹಿಡಿದರೆ ಆ ಕಾಲಘಟ್ಟದ ಮಹಾಮಹಿಮ ಲೆಖಕರನ್ನೂ ಮೀರಿಸುವಷ್ಟು ಪ್ರತಿಭಾವಂತ. ಪಿಸ್ತೂಲು ಹಿಡಿದರೆ, ಎದುರಾಳಿಗಳ ರಕ್ತವೇ ತಣ್ಣಗಾಗುವಷ್ಟು ಕೆಚ್ಚೆದೆ. ಮಾತಿಗೆ ನಿಂತರೆ ಮೈಯೆಲ್ಲ ಕಿವಿಯಾಗಿ ಕೇಳಬೇಕೆನ್ನಿಸುವ ಮಧುರ ದನಿ, ಅಸ್ಖಲಿತ ವಿಚಾರಗಳ ಧಾರಾಪ್ರವಾಹ. ಬಿಡಿ. ಅಂತಹ ವ್ಯಕ್ತಿ ಯುಗಕ್ಕೊಬ್ಬರೇ!
ಈಶ್ವರಪ್ಪ ಅವರ ಎದುರು ನಿಂತು ಗೆದ್ದ ಕೆ.ಬಿ.ಪ್ರಸನ್ನಕುಮಾರ್ ಅವರ ಕುರಿತು
– ಪಿ.ಬಿಂದುಮಾಧವಿ, ಹೈದರಾಬಾದ್
ನಮ್ಮಲ್ಲಿ ಅನೇಕರು, ಇಂದಿನ ಸರ್ಕಾರ ಸರಿಯಾಗಿಲ್ಲ, ಎಲ್ಲೆಲ್ಲೂ ಭ್ರಷ್ಟಾಚಾರ, ಚುನಾವಣೆಗೆ ನಿಂತ ಯಾವ ಅಭ್ಯರ್ಥಿಯೂ ಪ್ರಾಮಾಣಿಕರಲ್ಲ, ಹಾಗಾಗಿ ನಾವು ಮತ ಏಕೆ ಚಲಾಯಿಸಬೇಕು ಎಂಬ ಜಿಜ್ನಾಸೆಯಲ್ಲೇ ಅನೇಕ ಸಂವತ್ಸರಗಳನ್ನು ಕಳೆಯುತ್ತೇವೆ. ಸರಿಯಾದ ಅಭ್ಯರ್ಥಿಯಿಲ್ಲ ಎಂದಾದರೆ ನಾನೇ ಏಕೆ ಚುನಾವಣೆಗೆ ನಿಲ್ಲಬಾರದು ಎಂದು ಎಷ್ಟು ಮಂದಿ ಧೈರ್ಯ ಮಾಡುತ್ತಾರೆ ಹೇಳಿ? ನಮಗೆ ನಾವೇ ಆ ಪ್ರಶ್ನೆಯನ್ನು ಮಾಡಿಕೊಂಡರೆ, ನಾವು ಕೊಟ್ಟಿಕೊಳ್ಳುವ ಉತ್ತರ, ಅಯ್ಯೋ ಬಿಡು, ನಮಗೆ ರಾಜಕೀಯದಲ್ಲಿ ಹಿಂದಿಲ್ಲ ಮುಂದಿಲ್ಲ, ಅದರ ಗಾಳಿ ಗಂಧದ ಪರಿಚಯವಿಲ್ಲ, ನಾನು ಹೋಗಿ ರಾಜಕೀಯದಲ್ಲಿ ಏಗಲಾರೆ ಎಂದುಕೊಳ್ಳುತ್ತೇವೆ. ಆದರೆ ಈ ರೀತಿ ಯಾವುದೇ ಹಮ್ಮು ಬಿಮ್ಮು ಇಲ್ಲದೇ ರಾಜಕೀಯಕ್ಕೆ ಧುಮುಕಿ, ಪ್ರಾಮಾಣಿಕವಾಗಿ ಜನಸೇವೆ ಮಾಡಿ ಈ ಬಾರಿಯ ಚುನಾವಣೆಯಲ್ಲಿ ಈಶ್ವರಪ್ಪ ಅವರ ಎದುರಿಗೆ ನಿಂತು ಗೆದ್ದ ಅಭ್ಯರ್ಥಿ ಕೆ.ಬಿ.ಪ್ರಸನ್ನಕುಮಾರ್.
ಇವರ ತಂದೆ ಕೃಷ್ಣಮೂರ್ತಿ, ತಾಯಿ ಭಾಗೀರಥಿ ಬಾಯಿ ಇಬ್ಬರೂ ವೃತ್ತಿಯಲ್ಲಿ ಅಧ್ಯಾಪಕರಾಗಿದ್ದರು. ಇವರಿಗೆ ಯಾವುದೇ ರೀತಿಯ ರಾಜಕೀಯ ಹಿನ್ನೆಲೆಯಿಲ್ಲ. ಬಂಧು ಬಾಂಧವರಲ್ಲಿ ಯಾರೂ ರಾಜಕೀಯ ರಂಗ ಪ್ರವೇಶ ಮಾಡಿಲ್ಲ. ಆದರೂ ಇವರು ರಾಜಕೀಯಕ್ಕೆ ಧುಮುಕಿದ್ದು ಹೇಗೆ?
ಶಿವಮೊಗ್ಗದ ಹಳೇ ತೀರ್ಥಹಳ್ಳಿ ರಸ್ತೆಯ ವಟಾರವೊಂದರಲ್ಲಿ ವಾಸಿಸುತ್ತಿದ್ದ ಇವರು ಚಿಕ್ಕಂದಿನಲ್ಲೇ ಪಿತೃವಿಯೋಗವನ್ನು ಎದುರಿಸಬೇಕಾಯಿತು. ಕುಟುಂಬಕ್ಕೆ ಆಧಾರವಾಗಲಿ ಎಂದು ಅವರು ಆಗಿನಿಂದಲೇ ಮನೆಮನೆಗೆ ದಿನಪತ್ರಿಕೆ ಹಂಚುವುದು ಇತ್ಯಾದಿ ಕೆಲಸಗಳನ್ನು ಮಾಡತೊಡಗಿದರು. ಇವರ ದೊಡ್ದಮ್ಮ ಶ್ರೀಮತಿ ಮಧುರಾಬಾಯಿ ಇವರಿಗೆ ಸ್ನಾನ ಸಂಧ್ಯಾವಂದನೆಗಳನ್ನು ಕಟ್ಟುನಿಟ್ಟಾಗಿ ಪರಿಪಾಲಿಸಲು ಹೇಳಿದ್ದರು. ಹಾಗಾಗಿ ಮುಂಜಾನೆ ಏಳುವ, ಸ್ನಾನ ಸಂಧ್ಯಾವಂದನೆಗಳನ್ನು ಮಾಡುವ, ದಿನಪತ್ರಿಕೆ ಹಂಚಲು ಸೂರ್ಯೋದಯಕ್ಕೂ ಮುನ್ನವೇ ಏಳುವ ಅಭ್ಯಾಸಗಳನ್ನು ಆಗಿನಿಂದಲೇ ಮೈಗೂಡಿಸಿಕೊಂಡವರು ಪ್ರಸನ್ನಕುಮಾರ್. OTroad ನಲ್ಲಿದ್ದ ಇವರ ಸಮವಯಸ್ಕರೆಲ್ಲಾ ಇವರ ಗೆಳೆಯರೇ. ಆಗಿನಿಂದಲೇ ಯಾವುದೇ ಜಾತಿ ಧರ್ಮದ ಭೇಧವಿಲ್ಲದೇ ಎಲ್ಲಾ ಧರ್ಮ, ಹಾಗೂ ಜಾತಿಯ ಹುಡುಗರೂ ಇವರ ಮಿತ್ರವೃಂದದಲ್ಲಿದ್ದರು. ನಾನೂ ಸಹ ಇವರ ವಟಾರದಲ್ಲೇ ಇದ್ದವಳು. ಬೇಸಿಗೆ ರಜದಲ್ಲಿ ಮಧ್ಯರಾತ್ರಿಯವರೆಗೂ ಐಸ್ ಪೈಸ್ ಆಡುತ್ತಿದ್ದುದು, ನಾನು ಚಿಕ್ಕವಳಾಗಿದ್ದರಿಂದ ನನ್ನನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಪರಿಗಣಿಸುತ್ತಿದ್ದುದು ನನಗೆ ಇಂದಿಗೂ ನಿನ್ನೆ ಮೊನ್ನೆಯ ವಿಷಯದಂತೆ ನೆನಪಿದೆ!
ಕಸಾಯಿಖಾನೆಗಳನ್ನು ಮುಚ್ಚುವ ಅವಕಾಶವಿದ್ದೂ ಯಾಕೆ ಮೌನ ವಹಿಸಿದಿರಿ,ಹೇಳಿ?
– ಎ.ಕೆ ಕುಕ್ಕಿಲ
ಗೋಹತ್ಯೆಗೆ ಸಂಬಂಧಿಸಿ 1959 ಮತ್ತು 1961ರ ಮಧ್ಯೆ ಸುಪ್ರೀಮ್ ಕೋರ್ಟ್ ನ ಮುಂದೆ ಮೂರು ಪ್ರಕರಣಗಳು ದಾಖಲಾಗಿದ್ದುವು. ಮುಹಮ್ಮದ್ ಹನೀಫ್ ಖುರೇಷಿ ಮತ್ತು ಬಿಹಾರ ಸರಕಾರ; ಹಶ್ಮತುಲ್ಲಾ ಮತ್ತು ಮಧ್ಯಪ್ರದೇಶ ಸರಕಾರ; ಅಬ್ದುಲ್ ಹಕೀಮ್ ಮತ್ತು ಬಿಹಾರ ಸರಕಾರಗಳ ನಡುವಿನ ವ್ಯಾಜ್ಯವನ್ನು ವಿಚಾರಣೆಗೆ ಒಳಪಡಿಸುತ್ತಾ ಸುಪ್ರೀಮ್ ಕೋರ್ಟ್ ಅಂತಿಮವಾಗಿ ತೀರ್ಪು ಕೊಟ್ಟದ್ದು ಹೀಗೆ:
A total ban (on Cattle Slaughter) was not permisseble if, Under economic conditions, keeping useless bull or bullock be a burden on the society and therefore not in the public interest – ಸಮಾಜದ ಮೇಲೆ ಹೊರೆಯಾಗಬಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನೂ ಪ್ರತಿನಿಧಿಸದ ನಿರುಪಯುಕ್ತ ಜಾನುವಾರುಗಳಿರುವಲ್ಲಿ, ಜಾನುವಾರು ಹತ್ಯೆಗೆ ಸಂಪೂರ್ಣ ನಿಷೇಧ ವಿಧಿಸುವುದು ಅನುವದನೀಯವಲ್ಲ.’ (ವಿಕಿಪೀಡಿಯಾ)
ನಿಜವಾಗಿ, ಕರ್ನಾಟಕದಲ್ಲಿ ಈ ಮೊದಲೇ ಜಾರಿಯಲ್ಲಿದ್ದ ‘ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964’ರ ಬದಲು ರಾಜ್ಯ ಬಿಜೆಪಿ ಸರಕಾರವು ಜಾರಿಗೆ ತರಲು ಹೊರಟಿದ್ದ, ‘ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2010’ರಲ್ಲಿ ಇದ್ದದ್ದು ಈ ಗೊಂದಲಗಳೇ. ಒಂದು ಹಸು ಗರಿಷ್ಠ ಅಂದರೆ 14 ವರ್ಷಗಳ ವರೆಗೆ ಹಾಲು ಕೊಡುತ್ತದೆ. ಹಸು ಎಂದಲ್ಲ, ಎಮ್ಮೆ, ಕೋಣ, ಎತ್ತು, ಗೂಳಿಗಳೆಲ್ಲ ಉಪಯೋಗಕ್ಕೆ ಬರುವುದು 14-15 ವರ್ಷಗಳ ವರೆಗೆ ಮಾತ್ರ. ಹಾಗಂತ, ಆ ಬಳಿಕ ಅವು ತಕ್ಷಣ ಸಾಯುತ್ತವೆ ಎಂದಲ್ಲ. ಇನ್ನೂ 10 ವರ್ಷಗಳ ವರೆಗೆ ಬದುಕುವ ಸಾಮರ್ಥ್ಯ ಅವುಗಳಲ್ಲಿರುತ್ತವೆ. ಆದರೆ ಹಾಲು ಕೊಡದ, ಉಳುಮೆಗೆ ಬಾರದ ಈ ಅಯೋಗ್ಯ ಜಾನುವಾರುಗಳನ್ನು ಸಾಕುವ ಸಾಮರ್ಥ್ಯ ಎಷ್ಟು ರೈತರಲ್ಲಿದೆ? ಅವುಗಳಿಗೆ ಮೇವು, ಹಿಂಡಿಗಳನ್ನು ಒದಗಿಸುವುದಕ್ಕೆ ವರಮಾನ ಬೇಕಲ್ಲವೇ? ಉಳುಮೆಗೆ ಯೋಗ್ಯವಲ್ಲದ ಎತ್ತು ಕನಿಷ್ಠವೆಂದರೆ, 20ರಿಂದ 30 ಸಾವಿರದಷ್ಟು ಬೆಲೆ ಬಾಳುತ್ತದೆ. ಈ ಎತ್ತನ್ನು ಮಾರದೇ ಓರ್ವ ರೈತ ಉಳುಮೆಗೆ ಯೋಗ್ಯವಾದ ಬೇರೆ ಎತ್ತನ್ನು ಖರೀದಿಸುವುದಾದರೂ ಹೇಗೆ? ಖರೀದಿಸದಿದ್ದರೆ ಉಳುಮೆಗೆ ಏನು ಮಾಡಬೇಕು?
ಮತ್ತಷ್ಟು ಓದು 
ಎರಡು ರಾಷ್ಟ್ರೀಯ ಪಕ್ಷಗಳ ತುಲನೆ
– ಚಕ್ರವರ್ತಿ ಸೂಲಿಬೆಲೆ
ಬ್ರಿಟಿಷರ ಕೊನೆಯ ವೈಸ್ರಾಯ್ ಮೌಂಟ್ ಬ್ಯಾಟನ್. ಹಾಗಾದರೆ ಭಾರತದ ಮೊದಲ ವೈಸ್ರಾಯ್ ಯಾರು ಗೊತ್ತ? ಮತ್ಯಾರು? ಈ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ!
ನೆಹರೂ ಅತ್ಯಂತ ಶ್ರದ್ಧೆಯಿಂದ ಆಂಗ್ಲರ ರಾಜನೀತಿಯನ್ನು ಅರಿತುಕೊಂಡರು. ಅದನ್ನು ಹಂತಹಂತವಾಗಿ ಪ್ರಯೋಗಿಸಲಾರಂಭಿಸಿದರು. ಅಧಿಕಾರ ಕೈಗೆ ದಕ್ಕುವ ಮುನ್ನಿನ ಚುನಾವಣೆಗಳಲ್ಲಿ ತಮ್ಮ ಚಾಕಚಕ್ಯತೆಯನ್ನು, ವಿಭಜಿಸಿ ಗೆಲ್ಲುವ ತಂತ್ರವನ್ನು ಚೆನ್ನಾಗಿಯೇ ಬಳಸಿದರು. ಒಂದೆಡೆ ಮುಸಲ್ಮಾನರನ್ನು ಓಲೈಸಿ ಗೆಲ್ಲುವುದು, ಮತ್ತೊಂದೆಡೆ ಪಟೇಲರನ್ನು ಕಡು ಹಿಂದೂವಾಗಿ ಬಿಂಬಿಸಿ ಹಿಂದೂಗಳ ಮತವನ್ನು ಸೆಳೆದುಕೊಳ್ಳುವ ತಂತ್ರಗಾರಿಕೆ ಯಶಸ್ವಿಯಾಯ್ತು. ನೆಹರೂ ಪಕ್ಕಾ ಇಂಗ್ಲೀಶ್ ಬಾಬುವಾಗಿಬಿಟ್ಟರು. ಆಗಲೇ ಗಾಂಧೀಜಿ ಗಾಬರಿಯಿಂದ ಹೇಳಿದ್ದು, ‘ದೇಶ ವಿಭಜನೆಗೊಂಡು ಸ್ವಾತಂತ್ರ್ಯ ಬಂತು. ಇನ್ನು ಮುಂದೆ ಕಾಂಗ್ರೆಸ್ಸನ್ನು ವಿಸರ್ಜಿಸಿಬಿಡೋಣ.’ ಸ್ವತಃ ಗಾಂಧೀಜಿಗೆ ಅಸಹ್ಯವಾಗಿತ್ತು. ತಾನೇ ಮೂಲೆ ಮೂಲೆಗೆ ಕೊಂಡೊಯ್ದ ಕಾಂಗ್ರೆಸ್ಸು ಮುಂದೊಮ್ಮೆ ದೇಶದ ದುರ್ಗತಿಗೆ ಕಾರಣವಾಗುತ್ತದೆಂಬ ಸ್ಪಷ್ಟ ಅರಿವು ಅವರಿಗಿತ್ತು.
ಬಿಜೆಪಿಗೂ ಕಾಂಗ್ರೆಸ್ಸಿಗೂ ಒಂದು ಎದ್ದುಕಾಣುವಂತಹ ಭಿನ್ನತೆ ಇದೆ. ಒಂದು, ಕಾರ್ಯಕರ್ತರಿಂದಲೇ ನಿರ್ಮಾಣಗೊಂಡ, ಕೆಡರ್ ಆಧಾರಿತ ಪಕ್ಷ. ಮತ್ತೊಂದು, ಅಗತ್ಯ ಬಿದ್ದಾಗ ಕಾರ್ಯಕರ್ತರನ್ನು ಕೊಂಡುಕೊಳ್ಳುವ ಪಕ್ಷ. ಇವತ್ತಿಗೂ ನಾನು ಕಾಂಗ್ರೆಸ್ಸಿಗ ಎಂದು ಎದೆ ತಟ್ಟಿ ಹೇಳುವ ಸಾಮಾನ್ಯ ಕಾರ್ಯಕರ್ತರನ್ನು ತೋರಿಸಿ ನೋಡೋಣ. ಅಲ್ಲಿ ಕರುಳ ಸಂಬಂಧಗಳಿಲ್ಲ. ಅದೊಂಥರಾ ನಕಲು ಮಾಡಿಸಿ ನೂರು ಪ್ರತಿಶತ ಅಂಕ ಗಳಿಸುವ ಶಾಲೆಯಿದ್ದಂತೆ. ಆ ಶಾಲೆಯಲ್ಲಿ ಕೆಲಸ ನಡೆಯುವುದೇ ಕೊನೆಯ ಆರು ದಿನಗಳಲ್ಲಿ. ಹೀಗಾಗಿ ಬಂದ ಫಲಿತಾಂಶಕ್ಕೆ ಬೆನ್ನು ತಟ್ಟಿಕೊಳ್ಳುವವರು ಇರುತ್ತಾರೆಯೇ ಹೊರತು, ಆನಂದ ಪಡುವವರಲ್ಲ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಬಿಟ್ಟು ಹೊರಬಂದಾಗ ತಾನು ತಾಯಿಯ ಮಡಿಲಿನಿಂದ ಹೊರಗೆ ಬಂದುಬಿಟ್ಟಿದ್ದೇನೆಂದು ಯಾರಿಗೂ ಅನ್ನಿಸೋದೇ ಇಲ್ಲ. ಅಲ್ಲಿ ತಪ್ಪಾದಾಗ ಪ್ರಶ್ನೆ ಯಾರನ್ನು ಕೇಳಬೇಕೆಂದು ಯಾರಿಗೂ ಗೊತ್ತೇಇರುವುದಿಲ್ಲ. ಗೋಹತ್ಯೆ ನಿಷೇಧ ಹಿಂತೆಗೆದುಕೊಂಡಿದ್ದನ್ನು ಕೇಳಿ ಅನೇಕ ಕಾಂಗ್ರೆಸ್ಸಿಗರೇ ಗರಮ್ ಆಗಿದ್ದಾರೆ. ದುರ್ದೈವ, ಈ ದರ್ದನ್ನು ಯಾರೆದುರು ತೋಡಿಕೊಳ್ಳಬೇಕೆಂದು ಗೊತ್ತಿಲ್ಲವಷ್ಟೆ. ಮುಖ್ಯಮಂತ್ರಿ ಸ್ಥಾನ ಸಿಗದಿದ್ದುದಕ್ಕೆ ಖರ್ಗೆಯ ಬಳಗ ಜಿಲ್ಲೆ ಜಿಲ್ಲೆಗಳಲ್ಲಿ ರಾಡಿ ಎಬ್ಬಿಸಿತಲ್ಲ, ಅದಕ್ಕೆಲ್ಲ ಪ್ರಚಾರವೇ ಸಿಗಲಿಲ್ಲ ಏಕೆ? ಬಹಳ ಸಿಂಪಲ್ಲು. ಈ ರೀತಿ ಜೀವ ಕೊಡುವ ಕಾರ್ಯಕರ್ತರು ಅಲ್ಲಿಲ್ಲ; ಖರೀದಿಸಿದವರಿಗಾಗಿ ತಲೆಕೆಡಿಸಿಕೊಳ್ಳಬೇಕಿಲ್ಲ ಅಂತರ್ಥ! ಇಷ್ಟು ಮಾತ್ರ ಬಿಜೆಪಿಯೊಳಗೆ ಕಿರಿಕಿರಿಯಾಗಿಬಿಟ್ಟಿದ್ದರೆ ಮಾಧ್ಯಮಗಳಿಗೆ ಹಬ್ಬವಾಗಿಬಿಟ್ಟಿರುತ್ತಿತ್ತು. ಏಕೆ ಗೊತ್ತೇನು? ರಾಯಚೂರಿನಲ್ಲಾಗುವ ಒಂದು ಸಣ್ಣ ಬೆಳವಣಿಗೆಗೂ ಮಡಿಕೇರಿಯ ಕಾರ್ಯಕರ್ತ ನೊಂದುಕೊಳ್ಳುತ್ತಾನೆ. ಅವನ ಹೃದಯ ಕಂಪಿಸುತ್ತದೆ.
ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’
– ರಾಕೇಶ್ ಶೆಟ್ಟಿ
ಮೇ೮ರಂದು ರಾಜ್ಯದ ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲ ತಲೆಕೆಳಕಾಗಿ ಖುದ್ದು ಕಾಂಗ್ರೆಸ್ಸಿಗರೇ ತಮ್ಮ “ಕೈ” ಚಿವುಟಿ ಚಿವುಟಿ ಕನಸೋ ನನಸೋ ಅನ್ನುವಷ್ಟರಲ್ಲಿ ಕಾಂಗ್ರೆಸ್ಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.ಪರಮೇಶ್ವರ್ ಸೋಲಿನಿಂದ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿಯೂ ಆಗಿಬಿಟ್ಟರು.
ಅತ್ತ ಕಾಂಗ್ರೆಸ್ಸ್ ಗೆದ್ದಿದ್ದೇ ತಡ,ಇತ್ತ ನಮ್ಮ ನಾಡಿನ ಪ್ರಗತಿಪರರು,ಬುದ್ದಿಜೀವಿಗಳು,ಸಾಕ್ಷಿಪ್ರಜ್ನೆಗಳು ಚುನಾವಣಾ ಫಲಿತಾಂಶದ ಬಗ್ಗೆ ಬರೆಯಲು ಕುಳಿತರು ನೋಡಿ. ಶುರುವಾಯ್ತು ಪದಪುಂಜಗಳ ಪಟ್ಟಿ.ಹೆಚ್ಚು ಕಡಿಮೆ ಆ ಎಲ್ಲಾ ಬರಹಗಳೂ ಈ ಧಾಟಿಯಲ್ಲಿದ್ದವು.
“ಸಂಘ ಪರಿವಾರದ ಪುಂಡಾಟಿಕೆಯಿಂದ,ವಿಷಮಯವಾದ ಹಿಂದುತ್ವದ ಅಜೆಂಡಾ,ಮತಾಂಧತೆ ಇತ್ಯಾದಿ ಇತ್ಯಾದಿಗಳಿಂದ ಅಲ್ಪಸಂಖ್ಯಾತರ ಜೀವನ ನರಕವಾಗಿದ್ದ ಕರ್ನಾಟಕ”ವನ್ನು ನೋಡಿ ಸಹಿಸಲಾಗದ ನಾಡಿನ ಪ್ರಜ್ಞಾವಂತ, ಪ್ರಗತಿಪರ,ಸಂವೇದನಾಶೀಲ,ಸಾಕ್ಷಿಪ್ರಜ್ನೆ ಕನ್ನಡಿಗರು ಕಾಂಗ್ರಸ್ ಪರ ನಿಂತರಂತೆ…!
ನಿಜವಾಗಿಯೂ ಕನ್ನಡಿಗರು ಕಾಂಗ್ರೆಸ್ಸ್ ಪರ ಮತ ಚಲಾಯಿಸದರೆ ಅಂತ ನೋಡ ಹೊರಟರೆ, ೬ ಸ್ಥಾನ ಗೆದ್ದ ಕೆ.ಜೆ.ಪಿ ೩೯ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಜೆ.ಪಿ ಸುಮಾರು ೩೦ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಆಸ್.ಆರ್ ಗೆದ್ದಿದ್ದು ೪ ಸೀಟುಗಳನ್ನು.ಅಂದರೆ ಬಿಜೆಪಿ+ಕೆಜೆಪಿ+ಬಿ.ಆಸ್.ಆರ್ ನಡುವೆ ಮತಗಳು ಚೆಲ್ಲಾಪಿಲ್ಲಿಯಾಗಿರುವುದರಿಂದ ಕಾಂಗ್ರೆಸ್ಸು ಗೆದ್ದಿದೆ.ಬಹುಷಃ ಬಿಜೆಪಿಯಿಂದ ಯಡ್ಯೂರಪ್ಪ ಹೊರಹೋಗದಿದ್ದರೆ ೮೦ರ ಹತ್ತಿರ ಬಂದು ತಲುಪುತಿತ್ತು.ಇನ್ನೂ ಸರಳವಾಗಿ ಹೇಳಬೇಕೆಂದರೆ ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’ ಅಷ್ಟೆ.ಗೆಲ್ಲಲ್ಲಿಕ್ಕೆ ಕಾಂಗ್ರೆಸ್ಸ್ ಏನಾದರೂ ವಿರೋಧ ಪಕ್ಷ ಕೆಲಸವನ್ನಾದರೂ ಸರಿಯಾಗಿ ನಿಭಾಯಿಸಿತ್ತೇ? ಇದೊಂತರ ಕೋಗಿಲೆ ಗೂಡಲ್ಲಿ ಕಾಗೆ ಮೊಟ್ಟೆ ಇಟ್ಟ ಹಾಗೆ …!!! ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಮರ್ಥ ವಿರೋಧ ಪಕ್ಷದ ಕೆಲಸ ಮಾಡಿದ್ದು ಜೆಡಿಎಸ್,ಗೆದ್ದಿದ್ದು ಕಾಂಗ್ರೆಸ್ಸ್ …!!!
ಇನ್ನು ಬಿಜೆಪಿ ಸೋಲಿಗೆ ಕಾರಣಗಳನ್ನು ದುರ್ಬೀನು ಹಾಕಿಕೊಂಡೇನು ಹುಡುಕಬೇಕಿಲ್ಲ.ಸಾಲು ಸಾಲು ಡಿ-ನೋಟಿಫಿಕೇಷನ್,ಭ್ರಷ್ಟಾಚಾರದ ಹಗರಣಗಳು,ಬ್ಲೂ-ಫಿಲಂ ಕರ್ಮಕಾಂಡ ಅದು ಇದು ಅಂತಲೇ ಪಟ್ಟಿ ಮಾಡಿಬಿಡಬಹುದು.ಇವೆಲ್ಲಕ್ಕೂ ಕಳಶವಿಟ್ಟಂತೆ ಬಿಜೆಪಿಯ ಮಾಸ್ ನಾಯಕ ಯಡ್ಯೂರಪ್ಪರನ್ನು, ಬೆಂಗಳೂರಿನ ತನ್ನ ಕ್ಷೇತ್ರವೊಂದನ್ನು ಬಿಟ್ಟು ಇನ್ನೆಲ್ಲೂ ನಿಂತು ಒಂದು ಸಂಸದನ ಸ್ಥಾನ ಗೆಲ್ಲಲಾಗದ ರಾಷ್ಟ್ರೀಯ ನಾಯಕ(?)ರೊಬ್ಬರ ಕುತಂತ್ರದಿಂದ ಪಕ್ಷ ತೊರೆದು ಹೋಗುವಂತೆ ಮಾಡಿದ್ದು ಮುಖ್ಯ ಕಾರಣ.ಇನ್ನು ದಕ್ಷಿಣ ಕನ್ನಡದಲ್ಲಿ ಹಾಲಾಡಿ,ಯೋಗಿಶ್ ಭಟ್,ನಾಗರಾಜ್ ಶೆಟ್ಟಿ ಅಂತವರ ವಿಷಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ನಡೆದುಕೊಂಡ ರೀತಿಯಿಂದ ಮತ್ತು ಸದಾನಂದ ಗೌಡರನ್ನ ವಿನಾಕಾರಣ ಕುರ್ಚಿಯಿಂದ ಇಳಿಸಿದ್ದು ಬಿಜೆಪಿಗೆ ಮುಳುವಾಯಿತು.




