ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

16
ಮೇ

ಸಾಮಾನ್ಯ ಭಾರತೀಯನೊಬ್ಬನ ಪ್ರಶ್ನೆಗಳು

– ಶಿವಶಂಕರ್ ಪುತ್ರನ್, ಕೊಡಿಯಾಲ್ ಬೈಲ್

ಅಲ್ಲಾ ಸ್ವಾಮಿ, ಮಹಾತ್ಮರ ಸಿದ್ದಾ೦ತಗಳನ್ನು ಪಾಲಿಸುವವರೆ, ಯಾರೋ ಒಬ್ಬ ಸ೦ಸತ್ ಸದಸ್ಯ ಶಫಿಯಕುರ್ ರೆಹಮಾನ್ ವಂದೇಮಾತರ೦ನ್ನ ಗೌರವಿಸದೆ,ಆಮೇಲೆ ತಾನು ಯಾಕೆ ಗೌರವಿಸಿಲ್ಲ Vandಅನ್ನೋದಕ್ಕೆ ಸ್ಪಷ್ಟನೆ ನೀಡ್ತಾನೆ.ಆತನ ಆ ಕ್ರಿಯೆ ದೇಶದಲೆಲ್ಲ ದೊಡ್ಡ ಅಲ್ಲೋಲಕಲ್ಲೋಲವನ್ನ ಉ೦ಟು ಮಾಡುತ್ತೆ.ಸಾಮಾಜಿಕ ತಾಣಗಳಾದ ಫೇಸ್ಬುಕ್,ಟ್ವಿಟ್ಟರ್ಗಳಲ್ಲಿ ಅವನ ವಿರುದ್ದ ಜನ ತಮ್ಮ ಕ್ರೋಧ ವ್ಯಕ್ತಪಡಿಸುತ್ತಾರೆ.ಕನ್ನಡದ ಬ್ಲಾಗೊ೦ದರಲ್ಲಿ ಸತ್ಯವಿಶ್ವಾಸಿಗಳಿಗೆ ದೇಶಪ್ರೇಮವನ್ನ ಬೋಧಿಸಲು ಹೋದವನ ಲೇಖನಕ್ಕೆ ಉತ್ತರಿಸುವ ನೆಪದಲ್ಲಿ ಹಲವಾರು ವ್ಯಕ್ತಿಗಳು ತಾವು ಹಾಗು ತಮ್ಮವರು ಯಾಕೆ ವಂದೇಮಾತರ೦ ಹಾಡಬಾರದು,ಯಾಕೆ ಗೌರವಿಸಬಾರದೆ೦ದು ತಮ್ಮ ಸ೦ಸದನ ವರ್ತನೆಯನ್ನ ಸಮರ್ಥಿಸಿಕೊಳ್ಳುವಾಗ ಒಬ್ಬ ಹುಲು ಭಾರತಿಯನಾಗಿ,ಒಬ್ಬ ಸಾಮಾನ್ಯ ಹಿ೦ದುವಾಗಿ, ಅದರೆ ಒಬ್ಬ ಅಪ್ಪಟ್ಟ ಭಾರತೀಯನಾಗಿ ಮನದಲ್ಲಿ ಹುಟ್ಟುವ ಹಲವಾರು ಗೊ೦ದಲಗಳಿಗೆ ಉತ್ತರವೆ ಸಿಗುತ್ತಿಲ್ಲ.ಹಾಗೆ ಮು೦ದುವರಿದು ಕೆಲವು ಮಿತ್ರರಲ್ಲಿ ಕೇಳಿದೆ, ಅವರಿಗೂ ಅದೇ ಗೊಂದಲ.ಅವರಲ್ಲಿ ಕೆಲವರು ಸದ್ಯಕಷ್ಟೆ ರಾಜ್ಯದ ಚುನಾವಣೆಯಲ್ಲಿ ಬಾಗಿಯಾಗಿ ಕೆಲವರು ಭ್ರಮನಿರಸಗೊ೦ಡರೆ,ಕೆಲವರು ಪಕ್ಷ ನಿಷ್ಟೆ ಬದಲಿಸಿ ಹೊಟ್ಟೆತು೦ಬಿಸಿಕೊ೦ಡವರು.ಹಾಗಾಗಿ,ಅವರಲ್ಲಿ ಕೇಳುವುದು ವ್ಯರ್ಥವೆಂದೆನಿಸಿ ಯಾಕೆ ನಮ್ಮ ಮುಸಲ್ಮಾನ ಬ೦ಧುಗಳಲ್ಲೆ ಕೇಳಬಾರದು ಅನಿಸಿತು.ಸ೦ಸಾರದ ಗೊಂದಲಗಳ ನಡುವೆ ಪ್ರತಿಯೊಬ್ಬ ನನ್ನ ಭೇಟಿಮಾಡುವಸ್ಟು ಸಮಯವಿಲ್ಲದಿರುವುದರಿ೦ದ ಇಲ್ಲೇ ಕೇಳುತ್ತಿದ್ದೇನೆ.ಅಷ್ಟೆ ಅಲ್ಲದೆ, ಇನ್ನು ಕೆಲವು ದಿನಗಳಿ೦ದ ಮನಸಿನಲ್ಲಿ ನನ್ನ ಮುಂದಿನ ಜನಾ೦ಗದ ಬಗ್ಗೆ ಯೋಚಿಸಿ ಇನ್ನು ಕೆಲವು ಪ್ರಶ್ನೆಗಳನ್ನ ಇಡುತ್ತಿದೇನೆ.ಇದನ್ನ ನೇರವಾಗಿ ಕೇಳಿದರೆ ನನ್ನ ಜೀವಕ್ಕೆ ಅಪಾಯ ಯಾಕೆ೦ದರೆ ನಾನೊಬ್ಬ ಹಿ೦ದು ಹಾಗು ನನ್ನ ಜಾತಿಯ ಆಧಾರದಲ್ಲಿ ಚುನಾವಣೆಯ ಸಮಯದಲ್ಲಿ ನನ್ನ ಮತಕ್ಕೆ ಮಾತ್ರ ಮರ್ಯಾದೆ ಅಲ್ಲದೆ ನನ್ನ ರಕ್ಷಣೆಗಲ್ಲ ಎ೦ದು ಸಣ್ಣ೦ದಿನಲ್ಲೆ ನನಗೆ ಅರ್ಥವಾಗಾಗಿದೆ.ಆದುದರಿ೦ದ ನನ್ನ ಪ್ರಶ್ನೆ ಪ್ರತಿಯೊಬ್ಬ ಸಾಮಾನ್ಯ ಭಾರತೀಯನ(ನಿಮ್ಮ ಪ್ರಕಾರ ಸತ್ಯವಿಶ್ವಾಸಿಯಲ್ಲದ ಅಬ್ರಾಹಂನ ಸಿದ್ದಾ೦ತಗಳಿಗೆ ಒಳಪಡದ ಅಪ್ಪ-ಅಮ್ಮನಿಲ್ಲದ ಜನಾ೦ಗ)ಪ್ರಶ್ನೆಯೆಂದು ತಿಳಿಯಬಹುದು.

ಮತ್ತಷ್ಟು ಓದು »

16
ಮೇ

ವಂದೇ ಮಾತರಂ ಹಾಡಲಾಗದಿದ್ದರೆ…

-ಅಶ್ವಿನ್ ಅಮೀನ್

Vande Mataram BSPಅದನ್ನು ಬರಿ ಗೀತೆ ಅನ್ನಬಹುದೇ?ಊಹೂಂ ಅದು ಗೀತೆಯಲ್ಲ, ಅದು ಭಾರತದ ಸ್ವಾತಂತ್ರ್ಯ ಹೋರಾಟದ ಬೀಜಮಂತ್ರ.ಬ್ರಿಟಿಷರ ನಿದ್ದೆ ಕೆಡಿಸುತ್ತಿದ್ದ ಮಂತ್ರವದು.ಎದೆಯುಬ್ಬಿಸಿ ಗರ್ವದಿಂದ ಗರ್ಜಿಸುವಾಗ ಮೈ ಮನಸ್ಸುಗಳು ರೋಮಾಂಚನಗೊಳ್ಳುತ್ತವೆ.. ಅದೆಂತಾ ಶಕ್ತಿಯಿದೆ ಈ ‘ವಂದೇ ಮಾತರಂ’ ನಲ್ಲಿ. ಅದೆಷ್ಟೋ ಹೋರಾಟಗಳ ಸ್ಪೂರ್ತಿ ಇದು, ದೇಶ ಪ್ರೇಮವ ಬಡಿದೆಬ್ಬಿಸುವ ಬೀಜಮಂತ್ರವಿದು. ಪ್ರತಿಯೊಬ್ಬ ಭಾರತೀಯನ ನಾಡಿ ಮಿಡಿತವಿದು… ವಂದೇ ಮಾತರಂ ಅನ್ನು ವಿಶ್ಲೇಷಿಸ ಹೊರಟರೆ ಆ ವಿಶ್ಲೇಷಣೆಯೇ ಒಂದು ವೀರ ಗೀತೆಯಾದೀತು…!!!!

ಆದರೆ…ವಂದೇ ಮಾತರಂ ಅನ್ನು ಗೌರವಿಸುವ ಮನಸ್ಸುಗಳ ನಡುವೆ ಧರ್ಮದ ನೆಪವೊಡ್ಡಿ ಅದನ್ನು ವಿರೋಧಿಸುವ ಕೆಲ ವಿಷ ಮನಸ್ಸುಗಳೂ ತುಂಬಿರುವುದು ಖೇದಕರ..

ಮೊನ್ನೆ ಮೊನ್ನೆ ತಾನೆ ತಾನು ಮುಸ್ಲಿಂ ಎಂಬ ಕಾರಣಕ್ಕೆ ವಂದೇ ಮಾತರಂ ಹಾಡುವುದಿಲ್ಲ ಎಂದು ವಂದೇ ಮಾತರಂ ಹಾಡಿನ ಮಧ್ಯೆಯೇ ಸಂಸತ್ತಿನಿಂದ ಹೊರನಡೆದು ಉದ್ದಟತನ ತೋರಿದ ಬಿಎಸ್ಪಿ ಸಂಸದ ಶಫಿಕುರ್ ರೆಹಮಾನ್ ಬಗ್ಗೆ ಕೇಳಿರುತ್ತೀರಿ. ಇಂತಹ ಮತಾಂಧವಾದದ ನಡೆ ಇದೇ ಮೊದಲಲ್ಲ. ವಂದೇ ಮಾತರಂ ಅನ್ನು ವಿರೋಧಿಸಿ ಭಾರತೀಯರಲ್ಲಿ ವಿಷ ಬೀಜ ಬಿತ್ತಿದವರಲ್ಲಿ ಆಲಿ ಸಹೋದರರು ಮೊದಲಿಗರಾಗಿ ಕಂಡು ಬರುತ್ತಾರೆ.

ಆ ಘಟನೆ ಹೀಗಿದೆ;

1923. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ಸ್ ನ ರಾಷ್ಟ್ರೀಯ ಅಧಿವೇಶನ ನಡೆಯುತ್ತಿತ್ತು. ಆಗ ಪ್ರತಿ ಅಧಿವೇಶನದಲ್ಲಿ ವಂದೇ ಮಾತರಂ ಹಾಡುವ ಸಂಪ್ರದಾಯ ಬೆಳೆದು ಬಂದಿತ್ತು. ಪಂಡಿತ್ ವಿಷ್ಣು ದಿಗಂಬರ ಫಲುಸ್ಕರ್ ಪ್ರತಿ ವರ್ಷದಂತೆ ವಂದೇ ಮಾತರಂ ಹಾಡ ಹೊರಟಾಗ ಆಗಿನ ಕಾಂಗ್ರೆಸ್ಸ್ ಅಧ್ಯಕ್ಷ (ಮುಸ್ಲಿಂ ಲೀಗ್ ನ ಸ್ಥಾಪಕರಲ್ಲೊಬ್ಬರಾದ) ಮೌಲಾನ ಅಹಮದ್ ಆಲಿ ಆತನ ಸಹೋದರ ಶೌಕತ್ ಆಲಿ ತಡೆದರು. ಇಸ್ಲಾಂನ ಕಾನೂನಿನಂತೆ ಸಂಗೀತ ನಿಷಿದ್ಧ ಎಂಬುದು ಅವರು ಕೊಟ್ಟ ಕಾರಣವಾಗಿತ್ತು. ಹಠಾತ್ ಬೆಳವಣಿಗೆಯಿಂದ ಕೆಂಡಾ ಮಂಡಲರಾದ ಫಲುಸ್ಕರ್ ಇದು ಕಾಂಗ್ರೆಸ್ಸ್ ನ ಅಧಿವೇಶನ, ಒಂದು ಧರ್ಮದ ಸಭೆಯಲ್ಲ.. ಮುಸ್ಲಿಮರ ದರ್ಗಾ, ಮಸೀದಿಯೂ ಅಲ್ಲ.. ಈ ರಾಷ್ಟ್ರೀಯ ವೇದಿಕೆ ಮೇಲೆ ವಂದೇ ಮಾತರಂಗೆ ಅಡ್ಡಿಪಡಿಸಲು ನಿಮಗೇನು ಅಧಿಕಾರವಿದೆ? ಅಧಿವೇಶನ ಪ್ರಾರಂಭವಾಗುವ ಮೊದಲು ಅಧ್ಯಕ್ಷೀಯ ಮೆರವಣಿಗೆ ಯಲ್ಲಿ ವಿಜೃಂಭಣೆಯ ಸಂಗೀತ ವಾದ್ಯಗಳೊಂದಿಗೆ ಬರುವಾಗ ನಿಮಗೆ ಹಿಡಿಸಿತೇ ?! ವಂದೇ ಮಾತರಂಗೆ ವಿರೋಧ ಇರುವವರು ಧಾರಾಳವಾಗಿ ಹೊರ ನಡೆಯಬಹುದು ಎಂದು ಆಲಿ ಸಹೋದರರನ್ನು ಜಾಡಿಸಿದರು. ನಂತರ ವಂದೇ ಮಾತರಂ ಅನ್ನು ಪೂರ್ತಿಯಾಗಿ ಹಾಡಿ ವಂದಿಸಿ ಕೆಳಗಿಳಿದರು.
ಮತ್ತಷ್ಟು ಓದು »

4
ಮೇ

‘ಕುಮಾರ’ ಮುಖ್ಯಮಂತ್ರಿ ಗಾದಿಗೆ! ‘ಮೋದಿ’ ಪ್ರಧಾನಿ ಹುದ್ದೆಗೆ!

– ಗೋಪಾಲಕೃಷ್ಣ

KMಅಭಿವೃದ್ಧಿಯೇ ಮಾತನಾಡುವುದಾದರೆ; ‘ಕುಮಾರಣ್ಣ’ ಮುಖ್ಯಮಂತ್ರಿ ಗಾದಿಗೆ! ‘ಮೋದಿಜಿ’ ಪ್ರಧಾನಿ ಹುದ್ದೆಗೆ!

ಅರವತ್ತಾರು ವಸಂತಗಳ ಬಂಧಮುಕ್ತ ಬದುಕು.ಈ ನಡುವೆ ದೇಶ ಕಂಡದ್ದು 13 ಮಂದಿ ಪ್ರಧಾನಮಂತ್ರಿಗಳನ್ನು. ರಾಜ್ಯವನ್ನಾಳಿದ್ದು 21 ಮುಖ್ಯಮಂತ್ರಿಗಳು.  ಇವರೆಲ್ಲರಲ್ಲಿಯೂ; ದೇಶದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಪಿ.ವಿ.ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿಯವರನ್ನು ಮತ್ತೆ ಮತ್ತೆ ನೆನದರೆ, ರಾಜ್ಯದಲ್ಲಿ ದೇವರಾಜ ಅರಸು ಅವರ ಸಾಮಾಜಿಕ ಪರಿಕಲ್ಪನೆ, ರಾಮಕೃಷ್ಣ ಹೆಗಡೆ ಅವಧಿಯ ಜನಪರ ಕಾರ್ಯಕ್ರಮಗಳು, ಎಸ್.ಎಂ.ಕೃಷ್ಣ ಅವರ ಲಯ ತಪ್ಪದ ಆಡಳಿತ, ಹೆಚ್.ಡಿ.ಕುಮಾರಸ್ವಾಮಿಯವರ ಇಪ್ಪತ್ತೇ ತಿಂಗಳ ಆಡಳಿತವನ್ನು ಮಾತ್ರ ಇಂದಿಗೂ ಮೆಲುಕು ಹಾಕುವಂತಾಗಿದೆ.

ಭಾರತದ ಜನಸಂಖ್ಯೆ 121 ಕೋಟಿಯನ್ನು ದಾಟಿರಬಹುದು.  ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸುಮಾರು 5400 ಮಂದಿಯಷ್ಟೇ.  ಆದರೆ, ಇಷ್ಟು ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನರ ಆಶಯಗಳಿಗೆ ತಕ್ಕಂತೆ ನಡೆಯುವುದು ಅಪರೂಪ.  ಅವರುಗಳ ನಿಷ್ಠೆಯೇನಿದ್ದರೂ ದೇಶವಾದರೆ ಪ್ರಧಾನಿಗೆ! ರಾಜ್ಯವಾದರೆ ಮುಖ್ಯಮಂತ್ರಿಗೆ ಮೀಸಲು ಎಂಬಂತಿರುತ್ತದೆ.  ಸಂವಿಧಾನದ ಪ್ರಕಾರ ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಯನ್ನು ಶಾಸಕರು, ಲೋಕಸಭಾ ಸದಸ್ಯರು ಆಯ್ಕೆ ಮಾಡಬೇಕು.  ಆ ಪರಿಪಾಠ ಮುರಿದು ಬಿದ್ದು ಎಷ್ಟೋ ವರ್ಷಗಳು ಆಗಿವೆ.  ಈಗೇನಿದ್ದರೂ ಚುನಾವಣಾ ಪೂರ್ವದಲ್ಲಿಯೇ ನಾಯಕನ ಆಯ್ಕೆ ಇಲ್ಲವೇ ಹೈಕಮಾಂಡ್ ಹೇಳಿದವರು ಅತ್ಯುನ್ನತ ಹುದ್ದೆಯಲ್ಲಿ ಕೂರುತ್ತಾರೆ.

ಮತ್ತಷ್ಟು ಓದು »

29
ಏಪ್ರಿಲ್

ನೂರರ ನೋಟು ಮತ್ತು ನೈತಿಕತೆ

– ಪ್ರಸನ್ನ

100 Rupayiನನ್ನದು ಕುಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ. ಸಹಪಾಠಿ ದಯಾನಂದ ನಮ್ಮೂರ ಪಟೇಲರ ಮೊಮ್ಮಗ. ಆಗ ಕಾಂಗ್ರೆಸ್ ಮತ್ತು  ಜನತಾ ಪಕ್ಷ ಎರಡೇ ಪಕ್ಷಗಳಿದ್ದಂತೆ ತೋರುತ್ತದೆ. ಯಾವ ಚುನಾವಣೆ ಎಂಬುದು ನೆನಪಿಲ್ಲ. ಕಾಂಗ್ರೆಸ್ಸಿನ ಚಿಹ್ನೆ ಹಸು ಮತ್ತು ಕರುವಿನದ್ದು. ತಗಡಿನ ಬಿಲ್ಲೆಯ ಮೇಲೆ ಮುದ್ರಿತಗೊಂಡಿದ್ದ ಆ ಬಿಲ್ಲೆ ನಮಗೆ ಅಚ್ಚುಮೆಚ್ಚು, ಕಾರಣ ಎರಡು ತೂತ ಹಾಕಿ ದಾರ ಕಟ್ಟಿ ಜುಯ್ ಎಂದೆಳೆಯುವ ಮೋಜಿನ ಬಿಲ್ಲೆಗೆ ಅದು ಅತ್ಯಂತ ಸೂಕ್ತವಾಗಿತ್ತು. ಆಗ ಜನತಾ ಪಕ್ಷದವರು ಸಂಘರ್ಷ ಚಿತ್ರದ “ಯೌವನದ ಹೊಳೆಯಲ್ಲಿ ಈಜಾಟವಾಡಿದರೆ ಓ ಹೆಣ್ಣೆ ಸೋಲು ನಿನಗೆ” ಹಾಡಿನ ರೀಮಿಕ್ಸ್ ಮಾಡಿ, ಓ ಇಂದಿರಾ ಸೋಲು ನಿನಗೆ ಎಂಬ ಹಾಡನ್ನು ಎಲ್ಲೆಡೆ ಬಿತ್ತರಿಸುತ್ತಿದ್ದ ನೆನಪು ಇದೇ ಚುನಾವಣೆಯ ಅಥವ ನಂತರದ್ದ ನೆನಪಿಲ್ಲ.

ಒಂದು ದಿನ ದಯಾನಂದ ಮಧ್ಯಾಹ್ನ ಊಟದ ನಂತರ ಬಂದು ನೂರು ರೂಪಾಯಿ ನೋಡಿದ್ಯ? ಅಂತ ಕೇಳ್ದ, ಇಲ್ಲಾ ಅಂತ ತಲೆ ಆಡಿಸಿದೆ. ನೋಡ್ತಿಯ? ಅಂದವನಿಗೆ ಗೋಣು ಹಾಕಿ ಇಚ್ಚೆ ವ್ಯಕ್ತ ಪಡಿಸಿದೆ. ಸರಿ ಬಾ ತೋರಿಸ್ತಿನಿ. ಭಯದಿಂದ ಕೇಳಿದೆ ನಿನ್ ಹತ್ರ ಹೇಗ್ ಬಂತು. ನನ್ ಹತ್ರ ಇಲ್ಲ. ನಮ್ಮನೆಲಿದೆ ತೋರಿಸ್ತಿನಿ ಬಾ.

ಪಟೇಲರು ವಂಶಪಾರಂಪರ್ಯವಾಗಿ ಕಾಂಗ್ರೆಸ್ಸಿನ ಸದಸ್ಯರು. ಅವರ ವಂಶದ ಯಾರೋ ಒಬ್ಬರು ನೆಹರುರೊಡನೆ ಇದ್ದ ಫೋಟೊವೊಂದು ಅವರ ಮನೆಯ ನಡುಮನೆಯ ಮುಂಬಾಗಿಲಿನ ಎದುರು ನೇತಾಡುತ್ತಿತ್ತು.

ಅವ್ವ ಒಳ್ಗೆ ಕೆಲ್ಸ ಮಾಡ್ತವ್ಳೆ ಎಂದ, ಮೆಲ್ಲಗೆ ನಡುಮನೆ ದಾಟಿ ಹಿಂದೆ ಕೋಣೆಯೊಂದಕ್ಕೆ ನನ್ನನ್ನು ಎಳೆದುಕೊಂಡು ಹೋದ. ಕೊಟೆಯೊಳಗೆ ನುಸುಳಿದಂತ ಅನುಭವ ದೊಡ್ಡಮನೆ, ದವಸ ಧಾನ್ಯಗಳ ತುಂಬಿತುಳುಕುತ್ತಿದ್ದ ಕೋಣೆಯ ಮೂಲೆಯೊಂದರಲ್ಲಿ ನಾಲ್ಕಾರು ತೆಳ್ಳನೆ ಗೋಣಿ ಚೀಲದ ಮೂಟೆಯ ಬಳಿಗೆ ಕರೆದೊಯ್ದು ಬೆರಳಿನಿಂದ ಚೀಲದ ದಾರಗಳನ್ನು ಬಿಡಿಸಿ ತೂತಿನಿಂದ ನೋಡು ಎಂದ ಉಹುಂ ಕತ್ತಲೆಯಲ್ಲಿ ಕಾಣುತ್ತಿರಲಿಲ್ಲ. ಮೆಲ್ಲಗೆ ಸ್ವಿಚ್ ಹಾಕಿದಾಗ ಮಂದ ಬೆಳಕು ಹರಿಯಿತು. ಯಾರ್ಲಾ ಅದು  ಕೋಣ್ಯಾಗೆ? ಎಂಬ ವಯಸ್ಸಾದ ಹೆಣ್ಣಿನ ಧ್ವನಿ ತೂರಿ ಬಂತು. ನಾನು ನಡುಗಿ ಹೋಗಿದ್ದೆ. ಏ ನಾನೆ ಕಣಜ್ಜಿ ದಯಾ ಎಂದು ರೇಗಿದ. ಅಲ್ಲೇನ್ಲಾ ಕ್ಯಾಮೆ ನಿಂಗೆ ಇಸ್ಕೂಲ್ಗೆ ಓಗಿಲ್ವೆನ್ಲಾ? ಏಯ್ ಓಗಿದಿನಿ, ಪುಸ್ಕ ಮರ್ತೋಗಿದ್ದೆ ತಗೊಂಡೋಯ್ತಿನಿ.

ಮತ್ತಷ್ಟು ಓದು »

17
ಏಪ್ರಿಲ್

ಪಂಜಾಂಬಿನಲ್ಲಿ ಖಲಿಸ್ತಾನಿ ಕರಾಳ ದಿನಗಳು ಮರುಕಳಿಸಲಿವೆಯೇ?

– ರಾಕೇಶ್ ಶೆಟ್ಟಿ

OBS ಆ ದಂಪತಿಗಳು  ಮರುದಿನ ಸಂಜೆ ರಜೆಯ ಮೇಲೆ ಮಣಿಲಕ್ಕೆ ಹೊರಡುವವರಿದ್ದರು.ಪ್ರಯಾಣದ ಟಿಕೆಟ್ಟು ಎಲ್ಲವೂ ನಿಗದಿಯಾಗಿತ್ತು.ಅಷ್ಟರಲ್ಲಿ ಟೆಲಿಫೋನ್ ರಿಂಗಣಿಸಿತ್ತು.ಕರೆ ಸ್ವೀಕರಿಸಿದವರಿಗೆ ಮರುದಿನ ತುರ್ತು ಮಾತುಕತೆಗಾಗಿ ದೆಹಲಿಗೆ ಬರುವ ಆದೇಶ ಸಿಕ್ಕಿತು.

ಹೆಂಡತಿಯ ಜೊತೆ ಮೀರತ್ ಬಿಟ್ಟು ದೆಹಲಿಯ ಕಡೆ ಹೊರಟವರು, ಸಂಜೆಯೊಳಗೆ ಬರುವೆ ಮಣಿಲಕ್ಕೆ ಹೊರಟು ಬಿಡೋಣ ಅಂತೇಳಿ, ಚಾಂದಿಮಂದಿರದ II ಕಾರ್ಪ್ಸ್ ಅರ್ಮಿ ಹೆಡ್ ಕ್ವಾರ್ಟರ್ ತಲುಪಿಕೊಂಡರು.ತಲುಪಿಕೊಂಡವರೇ ಆಪರೇಷನ್ ರೂಮಿನೊಳ ಹೊಕ್ಕರು.ಅಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್ ನಕ್ಷೆಗಳನ್ನು ಹರವಿ ಕುಳಿತಿದ್ದರು ಸೈನ್ಯಾಧಿಕಾರಿಗಳು.ಒಳ ಬಂದವರಿಗೆ ಏನೊಂದು ಅರ್ಥವಾಗುವ ಮೊದಲೇ “ನಿನಗೆ ಅಮೃತಸರದ ಪರಿಸ್ಥಿತಿ ಕೈ ತಪ್ಪುತ್ತಿರುವುದು ಗೊತ್ತಿದೆಯಲ್ಲ?,ಆದಷ್ಟು ಬೇಗ ನೀನು ಅಮೃತಸರ ತಲುಪಿಕೊಂಡು ಸ್ವರ್ಣಮಂದಿರದೊಳಗೆ ಸೇರಿಕೊಂಡಿರುವ ಖಲಿಸ್ತಾನಿ ಉಗ್ರಗಾಮಿಗಳನ್ನ ಹೊರಹಾಕಬೇಕು” ಅಂತ ಆದೇಶಿಸಲಾಯಿತು.ಹಾಗೆ,ಇದ್ದಕ್ಕಿದ್ದಂತೆ ಸಿಕ್ಕ ಅಪ್ಪಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ,ಪಂಜಾಬ್ ರಾಜ್ಯ ಭಾರತದಿಂದ ಸಿಡಿದು “ಖಲಿಸ್ತಾನ” ಆಗುವುದನ್ನು ತಪ್ಪಿಸಿದ್ದು “ಆಪರೇಷನ್ ಬ್ಲೂ-ಸ್ಟಾರ್” ಅನ್ನುವ ಮಿಲಿಟರಿ ಕಾರ್ಯಾಚರಣೆ ಮತ್ತದರ ನೇತೃತ್ವ ವಹಿಸಿದ್ದ ಆ ಯೋಧನ ಹೆಸರು ಜನರಲ್.ಕೆ.ಎಸ್ ಬ್ರಾರ್.

ಆವತ್ತು ಅಮೃತಸರಕ್ಕೆ ಬಂದಿಳಿದ ಬ್ರಾರ್ ಅವರಿಗೆ ಸರಿಯಾಗಿ ಸ್ವರ್ಣಮಂದಿರದ ನಕ್ಷೆಯೂ ಗೊತ್ತಿರಲಿಲ್ಲ.ತಕ್ಷಣ ಅವರು ಅಲ್ಲಿನ ಸರ್ಕಾರಿ ಅಧಿಕಾರಿಗಳು ಮತ್ತು ಪೋಲಿಸರನ್ನು ಭೇಟಿಯಾಗಿ ಹೆಚ್ಚಿನ ಮಾಹಿತಿ ಕೇಳಿದರು.ಊಹೂಂ! ಅವರಲ್ಲಿ ಯಾವ ಮಾಹಿತಿಯೂ ಇರಲಿಲ್ಲ.ತಿಂಗಳುಗಟ್ಟಲೆ ಕೆಲಸವಿಲ್ಲದೆ ಕುಳಿತಿದ್ದ ಅವರಿಂದ ಏನು ನಿರೀಕ್ಷಿಸುವಂತೆಯೂ ಇರಲಿಲ್ಲ.ಭಿಂದ್ರನ್ ವಾಲೆಯ ಕಪಿಮುಷ್ಟಿಗೆ ಅದಾಗಲೇ ಸ್ವರ್ಣಮಂದಿರ ಸಿಕ್ಕಿಯಾಗಿತ್ತು.ಒಳಗೇನು ನಡೆಯುತ್ತಿದೆ ಯಾರಿಗೂ ಗೊತ್ತಿರಲಿಲ್ಲ.ಭಿಂದ್ರನ್ ವಾಲೆಯ ಖ್ಯಾತಿ ಆಗ ಪಂಜಾಬಿನಲ್ಲಿ ಉತ್ತುಂಗಕ್ಕೇರಿದ ಸಮಯ.ಜನ ಅವನನ್ನು ದೈವತ್ವಕ್ಕೇರಿಸುವ ಮಟ್ಟಕ್ಕೇ ಅವನ ಅಮಲೇರಿತ್ತು.

ಮತ್ತಷ್ಟು ಓದು »

6
ಏಪ್ರಿಲ್

ಇನ್ನೂ ಬೇಕೆ ಇಂಥ ರಾಜಕೀಯ ಮೀಸಲಾತಿ?

-ಸಾತ್ವಿಕ್ ಎನ್.ವಿ.

ಒಂದು ವಿಷಯವಂತೂ ಸಂಸತ್ತಿನಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ಸರ್ವಾನುಮತದಿಂದ ಅನುಮೋದನೆ ಪಡೆಯುತ್ತದೆ. ಸಂಸದರು ಇದಕ್ಕೆ ವಿರೋಧ ಇಲ್ಲವೆ ಅನುಮಾನ ವ್ಯಕ್ತಪಡಿಸುವುದು ಪ್ರತಿಗಾಮಿತನ ಎಂದೇ ಭಾವಿಸುತ್ತಾರೆ. ಪಕ್ಷಬೇಧ ಮರೆತು ಬೆಂಬಲಿಸುತ್ತಾರೆ. ಅದುವೇ ಚುನಾವಣೆಯಲ್ಲಿ ನೀಡಲಾಗಿರುವ ರಾಜಕೀಯ ಮೀಸಲಾತಿಯ ನವೀಕರಣ. ಇದು ಪ್ರತಿ ಹತ್ತು ವರ್ಷಕ್ಕೊಮ್ಮೆ ನವೀಕರಣಕ್ಕೆ ಬರುತ್ತದೆ. ಆಗ ಸಂಸತ್ತು ಈ ಪದ್ಧತಿಯನ್ನು ನಿರಾಕರಿಸಬಹುದು ಇಲ್ಲವೇ ಮುಂದಿನ ಹತ್ತು ವರ್ಷಕ್ಕೆ ನವೀಕರಿಸಬಹುದು. ಆದರೆ ಸಂಸತ್ತು ಯಾವುದೇ ಚರ್ಚೆಯಿಲ್ಲದೇ ನವಿಕರಿಸುತ್ತಲೇ ಬಂದಿದೆ. ಸರ್ಕಾರ ಯಾ ರಾಜಕೀಯಪಕ್ಷಗಳಿಗೆ ದಲಿತ/ಹಿಂದುಳಿದ ವರ್ಗಗಳ ಬಗ್ಗೆ ಇಷ್ಟೊಂದು ಪ್ರೀತಿ ಎಲ್ಲಿಂದ ಉಕ್ಕಿತೆಂದು ಆಶ್ಚರ್ಯವಾಗಬಹುದು. ಆದರೆ ಇದರ ಹಿಂದಿನ ತಂತ್ರ ಬೇರೆಯದೇ ಇದೆ.

ಯಾಕೆಂದರೆ ಸಂವಿಧಾನದಲ್ಲಿ ದಲಿತ ಜನವರ್ಗದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ನೀಡಲಾದ ಈ ಮೀಸಲಾತಿಯು ರಾಜಕೀಯ ಪಕ್ಷಗಳ ಕೈಯಲ್ಲಿ ಸಿಕ್ಕಿ ತನ್ನ ಮೂಲ ಉದ್ದೇಶವನ್ನು ಎಂದೋ ಮರೆತಿದೆ. ಮೀಸಲು ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆ. ಗೆದ್ದ ಸ್ಪರ್ಧಿಯು ತನ್ನ ಸಮುದಾಯದ ಪ್ರತಿನಿಧಿಯಾಗಿರುತ್ತಾನೆ. ತನ್ನ ಸಮುದಾಯದ ಅಭಿವೃದ್ಧಿಯ ಸಲುವಾಗಿ ಸದನದಲ್ಲಿ ಧ್ವನಿ ಎತ್ತುವುದು ಆತನ ಕರ್ತವ್ಯವಾಗಿರುತ್ತದೆ. ಆದರೆ ಪಕ್ಷವೊಂದರ ಹಂಗಿನಲ್ಲಿರುವ ವ್ಯಕ್ತಿಯಿಂದ ಇಂಥ ದೃಢ ಮತ್ತು ನಿಷ್ಠುರ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯವೇ? ಆತ ದಲಿತವರ್ಗದಿಂದ ಬಂದಿದ್ದರೂ ತನ್ನ ಪಕ್ಷಕ್ಕಾಗಿಯೇ ತಯಾರಾದವನು. ಆತ ತನ್ನ ಪಕ್ಷದ ಸಿದ್ಧಾಂತದಿಂದ ಎಷ್ಟು ಹೊರಗೆ ನಿಂತು ಕೆಲಸ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿವೆ? ಹೆಚ್ಚಿನ ಸಂದರ್ಭದಲ್ಲಿ ಆಯ್ಕೆಯಾದ ವ್ಯಕ್ತಿಯು ಪಕ್ಷವೊಂದರಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸುವ ಇಲ್ಲವೇ ಹೌದಪ್ಪನಾಗಿ ಬಳಕೆಯಾಗುವ ಸಂದರ್ಭವೇ ಹೆಚ್ಚು. ಇಂಥ ಸಂದರ್ಭದಲ್ಲಿ ದಲಿತ ಸದಸ್ಯನೊಬ್ಬನಿಗೆ ಇತರೆ ವರ್ಗದ ರಾಜಕೀಯ ನೇತಾರನಿಗಿಂತ ಹೆಚ್ಚಿನ ಜವಾಬ್ದಾರಿ ಮತ್ತು ಹೊಣೆಗಾರಿಕೆ ಇರಬೇಕಾಗುತ್ತದೆ. ಮತ್ತಷ್ಟು ಓದು »

4
ಏಪ್ರಿಲ್

ಬದಲಾವಣೇ ತರಲು ಬೇಕಿರುವುದು “ಮನಸ್ಸು” ವಯಸ್ಸಲ್ಲ…!

-ರಾಕೇಶ್ ಶೆಟ್ಟಿ

ARONMN“ರಾಜಕಾರಣಕ್ಕೆ ಯುವಕರು ಬರಬೇಕು” ಹಾಗೂ “ರಾಜಕಾರಣಿಗಳಿಗೆ ನಿವೃತ್ತಿ ವಯೋಮಿತಿಯಿರಬೇಕು” ಅನ್ನುವ ಚರ್ಚೆಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ.ನನ್ನ ಮಟ್ಟಿಗೆ ಯುವಕರು ರಾಜಕೀಯಕ್ಕೆ ಬಂದರೆ/ಯುವಕರ ಕೈಗೆ ಅಧಿಕಾರ ಸಿಕ್ಕರೆ ಎಲ್ಲವೂ ಬದಲಾಗುತ್ತದೆ ಅನ್ನುವುದು ಒಂದು ’ಮಿಥ್’ ಅಷ್ಟೇ.ನಿಜಕ್ಕೂ ಬದಲಾವಣೆ ಬಯಸಲು/ಮಾಡಲು ಬೇಕಾಗಿರುವುದು ವಯಸ್ಸೋ? ಮನಸ್ಸೋ?

ಭಾರತದ ಅತಿಕಿರಿಯ ಮುಖ್ಯಮಂತ್ರಿ ಅನ್ನುವ ಹೆಗ್ಗಳಿಕೆ ಉ.ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ (೩೯) ಅವರದ್ದು.ಅವರು ಗಾದಿಯ ಮೇಲೆ ಕುಳಿತು ಮೊನ್ನೆ ಮೊನ್ನೆಗೆ ಒಂದು ವರ್ಷ ಕಳೆದಿದೆ.ಈ ಒಂದು ವರ್ಷದಲ್ಲಿ ಈ ಬಿಸಿ ರಕ್ತದ ಯುವ ಮುಖ್ಯಮಂತ್ರಿ ಅಧಿಕಾರ ಚಲಾವಣೆಯಲ್ಲಿ ಯಾವುದಾದರೂ ಭರವಸೆಯುತ (’ಕ್ರಾಂತಿಕಾರಕ’ ಅನ್ನುವ ದೊಡ್ಡ ಪದವೂ ಬೇಡ) ರೀತಿಯಲ್ಲಿ ರಾಜ್ಯಭಾರ ಮಾಡಿದ್ದಾರೆಯೇ? ಕನಿಷ್ಟ ಮಂತ್ರಿಮಂಡಲ ರಚನೆ ಮಾಡುವಾಗಲಾದರೂ ಆರೋಪ ಮುಕ್ತರಿಗೆ ಸ್ಥಾನ ಕೊಟ್ಟರೇನು? ಇವರ ಮಂತ್ರಿಮಂಡಲದಲ್ಲಿ ಶೇ.೫೩ರಷ್ಟು ಮಂದಿ ಸಚಿವರ ಮೇಲೆ ಕ್ರಿಮಿನಲ್ ಆರೋಪಗಳಿವೆ.ವರ್ಷದಿಂದ ಉತ್ತರ ಪ್ರದೇಶ ಸುದ್ದಿಯಲ್ಲಿದ್ದರೆ ಅದು ಬರಿ ಕೆಟ್ಟ ಸುದ್ದಿಗಳ ಮೂಲಕವಷ್ಟೇ.ಇತ್ತೀಚೆಗೆ ತಾನೇ ಪ್ರತಾಪ್ ಗಢದಲ್ಲಿ ಡಿವೈಎಸ್ಪಿ ಜಿಯಾ-ಉಲ್-ಹಕ್ ರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದ್ದು ನೆನಪಿರಬೇಕಲ್ಲ.ಒಬ್ಬ ಯುವ (ಅನನುಭವಿ) ಮುಖ್ಯಮಂತ್ರಿಗೆ ಭರವಸೆಯ ಕಾರ್ಯಕ್ರಮ ರೂಪಿಸುವಲ್ಲಿ ಇನ್ನೊಂದಿಷ್ಟು ಸಮಯ ಬೇಕು ಅಂತ ಇಟ್ಟುಕೊಂಡರೂ, ಅಪರಾಧ,ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೊದಲಿಗೆ ಬೇಕಿದಿದ್ದು ಗಟ್ಟಿ ಮನಸ್ಸು.ಬಹುಷಃ ಅದೇ ಈ ಯುವ ಮುಖ್ಯಮಂತ್ರಿಯಲ್ಲಿ ಕಾಣುತ್ತಿಲ್ಲ.ತನ್ನ ಸುತ್ತಲೂ ಕ್ರಿಮಿನಲ್ ಆರೋಪಿಗಳ ಸಂಪುಟವನ್ನಿಟ್ಟುಕೊಂಡು “ಗೂಂಡಾ ರಾಜ್ಯ”ವನ್ನು ಅಳಿಸಿ ಹಾಕುತ್ತೇವೆ ಅನ್ನುವುದೆಷ್ಟು ಸತ್ಯ? “ಬದಲಾವಣೆ ತರಲು ವಯಸ್ಸು ಮುಖ್ಯವೋ,ಮನಸ್ಸು ಮುಖ್ಯವೋ” ಅನ್ನುವ ಈ ಚರ್ಚೆಯ ಮೊದಲ ಉದಾಹರಣೆ ಅಖಿಲೇಶ್ ಯಾದವ್ ರನ್ನು ನೋಡಿದರೇ ಯುವಕರು ರಾಜಕೀಯಕ್ಕೆ/ಅಧಿಕಾರಕ್ಕೆ ಬಂದರೆ ಬದಲಾವಣೆಯಾಗುತ್ತದೆ ಅನ್ನುವುದು ಮಿಥ್ ಅನ್ನಿಸುತ್ತದೆ.ಬದಲಾಯಿಸಲೇಬೇಕು ಅನ್ನುವ ಮನಸಿದ್ದರೆ ವಯಸ್ಸು ಅಷ್ಟು ಅಡ್ಡಿಯಾಗಲಾರದು.

ಮತ್ತಷ್ಟು ಓದು »

29
ಮಾರ್ಚ್

ಉಪಖಂಡದಲ್ಲಿ ಏಕಾಂಗಿ ಭಾರತ?

– ಡಾ ಅಶೋಕ್ ಕೆ ಆರ್

ISPCತೀರ ಹಿಂದಿನ ಮಾತಲ್ಲ. ಕೆಲವೇ ದಿನಗಳ ಹಿಂದೆ ಅಫ್ಜಲ್ ಗುರುವನ್ನು ನೇಣಿಗೇರಿಸಿ ಅವನ ದೇಹವನ್ನು ಆತನ ಮನೆಯವರಿಗೆ ನೀಡದೆ ಜೈಲಿನಲ್ಲೇ ಮಣ್ಣು ಮಾಡಲಾಗಿತ್ತು. ಕಾಶ್ಮೀರದಲ್ಲಿ ಪ್ರತಿಭಟನೆಗಳಾದವು, ಅಫ್ಜಲ್ ಗುರು ಅಲ್ಲಿಯವನಾಗಿದ್ದರಿಂದ. ಇದೇ ಸಮಯದಲ್ಲಿ ಪಾಕಿಸ್ತಾನದ ರಾಜಕೀಯ ಪಕ್ಷಗಳು ಅಫ್ಜಲ್ ಗುರುವಿನ ದೇಹವನ್ನು ಆತನ ಮನೆಯವರಿಗೆ ಹಿಂದಿರುಗಿಸಬೇಕು ಎಂಬ ನಿರ್ಣಯ ತೆಗೆದುಕೊಂಡವು, ನಿರ್ಣಯ ಮಾಡಿದ್ದು ಹಾದಿಬೀದಿಯಲ್ಲಾಗಿರದೆ ಸಂಸತ್ತಿನಲ್ಲಾಗಿತ್ತು.ಈ ಕಾರಣದಿಂದ ನಿರ್ಣಯಕ್ಕೆ ಅಧಿಕೃತತೆಯ ಮುದ್ರೆ ಲಭಿಸಿತ್ತು. ಪಾಕಿಸ್ತಾನದ ಈ ನಡೆಗೆ ಭಾರತದಲ್ಲಿ ಅಗಾಧ ವಿರೋಧ  ವ್ಯಕ್ತವಾಗಿದ್ದು ಸಹಜ ಪ್ರತಿಕ್ರಿಯೆಯಾಗಿತ್ತು. ನಮ್ಮ ಮನೆಯ ವಿಷಯದಲ್ಲಿ ಅನ್ಯರು ಮೂಗು ತೂರಿಸುವುದು ಕೋಪ ತರಿಸುವ  ವಿಷಯವೇ ಸರಿ.

ಶ್ರೀಲಂಕಾದ ಎಲ್ ಟಿ ಟಿ ಇ ಸಂಘಟನೆಯ ಹುಟ್ಟಿಗೆ ಅನೇಕ ಐತಿಹಾಸಿಕ ಕಾರಣಗಳಿವೆ.ಶ್ರೀಲಂಕಾದ ಈ ಆಂತರಿಕ ಸಮಸ್ಯೆಯ ಉದ್ಭವವಾಗಿದ್ದು ಬ್ರೀಟೀಷರ ಆಡಳಿತದ ಕಾರಣದಿಂದ ಎಂದರೆ ತಪ್ಪಾಗಲಾರದು.ಶ್ರೀಲಂಕಾದ ಎಸ್ಟೇಟುಗಳಲ್ಲಿ ಕೆಲಸ ಮಾಡಲೆಂದು ಶ್ರಮಜೀವಿಗಳಾದ ತಮಿಳರನ್ನು ಕರೆದುಕೊಂಡು ಹೋಗಿತ್ತು ಅಂದಿನ ಬ್ರಿಟೀಷ್ ಆಡಳಿತ. ಬ್ರಿಟೀಷರು ಶ್ರೀಲಂಕ ತೊರೆದ ನಂತರ ಅಲ್ಲಿನ ಬಹುಸಂಖ್ಯಾತರಾದ ಸಿಂಹಳೀಯರು ಲಂಕ ತಮಿಳರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ನೋಡಕಲಾರಂಭಿಸಿದ್ದರು.

ಮತ್ತಷ್ಟು ಓದು »

23
ಮಾರ್ಚ್

‘ಸತ್ತು ಬದುಕುವುದು ಹೇಗೆ!?’ ಎಂದು ತೋರಿಸಿಕೊಟ್ಟವನ ನೆನಪಿಗೆ…

– ರಾಕೇಶ್ ಶೆಟ್ಟಿ

ಕ್ರಾಂತಿಕಾರಿಗಳೆಂದರೆ ಹಾದಿ ತಪ್ಪಿದ ದೇಶ ಭಕ್ತರಲ್ಲ, ಅವರಿಗೂ ಧ್ಯೇಯ,ಗುರಿ,ಆದರ್ಶಗಳಿರುತ್ತವೆ.ಮತ್ತು ಆ ಆದರ್ಶಗಳನ್ನ ಪಾಲಿಸಲು ತಮ್ಮ ಜೀವವನ್ನು ಸಹ ಅವರು ಅರ್ಪಿಸಬಲ್ಲರು ಅಂತ ಜಗತ್ತಿಗೆ ತೋರಿಸಿಕೊಟ್ಟವರು, ಹುಟ್ಟಿ ಬಂದು ಅಷ್ಟೇ ಬೇಗ ಅದಿನ್ಯಾವ್ದೋ ತುರ್ತು ಕೆಲಸವಿದೆ ಅನ್ನುವಂತೆ ಎದ್ದು ಹೊರಟವರು,ಸತ್ತು ಬದುಕುವುದು ಹೇಗೆ ಅಂತ ತೋರಿಸಿಕೊಟ್ಟು ಹೋದವರು ಭಗತ್ ಸಿಂಗ್,ರಾಜಗುರು ಮತ್ತು ಸುಖದೇವ್.

ಅವರು ಹುತಾತ್ಮರಾಗಿ ಇಂದಿಗೆ ೮೦ ವರ್ಷಗಳಾಯಿತು.ಬಹುಷಃ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ  ಕ್ರಾಂತಿಯ ಕಿಡಿಯನ್ನ ಭಾರತೀಯರಲ್ಲಿ ಬಡಿದ್ದೆಬ್ಬಿಸಿದ ಅಪ್ರತಿಮ ವ್ಯಕ್ತಿ ಭಗತ್ ಸಿಂಗ್.ಚಂದ್ರ ಶೇಖರ್ ಆಜಾದ್ರಂತ ಮಹಾನ್ ಗುರುವಿನ ಶಿಷ್ಯ ಗುರುವನ್ನು ಮೀರಿಸುವಂತೆ ಮುನ್ನಡೆದು ಬಿಟ್ಟರು.ಜಲಿಯನ್ ವಾಲ ಬಾಗ್ನ ದುರಂತ ಭಾರತದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯ ಉದಯಕ್ಕೆ ಮುನ್ನುಡಿ ಬರೆದಿತ್ತು.ಗಾಂಧೀಜಿಯವರ ಅಸಹಕಾರ ಚಳುವಳಿಗೆ ಓ ಕೊಟ್ಟು ಬೀದಿಗಿಳಿದ ಭಾರತೀಯರಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ಮುದುಕರವರೆಗೂ ಎಲ್ಲರು ಇದ್ದರು.ಅಂತವರ ಮಧ್ಯೆ ಬಾಲಕ ಭಗತ್ ಕೂಡ ಇದ್ದ.ಚೌರಿ-ಚೌರಾದ ಘಟನೆಯ ನಂತರ ಗಾಂಧೀಜಿ ಏಕಾಏಕಿ ಚಳುವಳಿಯನ್ನ ಹಿಂದೆ ಪಡೆದಾಗ,ಮತ್ತು ಆ ನಂತರ ಗಾಂಧೀಜಿಯ ಮಾತು ಕೇಳಿ ಶಾಲೆ ಬಿಟ್ಟು ಹೊರಬಂದು ಪಟ್ಟ ಪಾಡು ಇವೆಲ್ಲ ಭಗತ್ ಮನಸಿನಲ್ಲಿ ಗಾಂಧೀವಾದದ ಬಗ್ಗೆ ನಂಬಿಕೆ ಕಳೆಯುವಂತೆ ಮಾಡಿತು.ಬಹುಷಃ ಇವೆರಡು ಘಟನೆಗಳು ಭಗತ್ ಸಿಂಗ್ನ  ಮುಂದಿನ ಜೀವನ ದಿಕ್ಕನ್ನು ಬದಲಾಯಿಸಿದವು ಅನ್ನಬಹುದೇನೋ?

ಮತ್ತಷ್ಟು ಓದು »

21
ಮಾರ್ಚ್

“ಅರ್ನೆಸ್ಟೊ ಚೆಗುವಾರ ಕ್ರಾಂತಿಕಾರಿ ಭಾವಜೀವಿ”

– ನಾರಾಯಣ್ ಕೆ ಕ್ಯಾಸಂಬಳ್ಳಿ

Cheguvera‘ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ. ಸೋಲಿಗಿಂತ ಸಾವನ್ನೆ ಹೆಚ್ಚು ಇಚ್ಛಿಸುತ್ತೇನೆ’  ಎಂದು ಕ್ಯೂಬ ಬಿಡುವ ಮೊದಲು ಹೇಳಿದ ಮಾತಿನಂತೆಯೇ ನಿರಂತರವಾಗಿ ಹೋರಾಟದಲ್ಲೇ ತಮ್ಮ ಜೀವನವನ್ನು ಸವೆದು ಸೋಲಲು ಇಚ್ಛಿಸಿದೆ ತನನ್ನು ಸಾವಿಗೆ ಒಡ್ಡಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೊ ಚೆಗುವರ ಜಗತ್ತಿನ ಕ್ರಾಂತಿಕಾರಿ ಹೋರಾಟಗಾರರಲ್ಲಿ ಪ್ರಮುಖರು. ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಅರ್ನೆಸ್ಟೊ ಚೆಗುವಾರ ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ತಂದೆ ತಾಯಿಗಳ ಮೊದಲ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ. ಚೆಗುವರ ಚಿಕ್ಕಂದಿನಿಂದಲೇ ಬಡವರ, ಶ್ರಮಿಕರ ಪರವಾಗಿ ಹೆಚ್ಚು ಪ್ರೀತಿಯನ್ನು ಬೆಳೆಸಿಕೊಂಡವನು ಮತ್ತು ಎಡಪಂಥೀಯ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ಸ್ಪಷ್ಟ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯ ದೊರೆಯುತಿತ್ತು.

ಸ್ಪ್ಯಾನಿಷ್ ಅಂತರ್‍ಯುದ್ಧದ ಕಾಲದಿಂದಲೂ ಗಣತಂತ್ರ ವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತ್ತು.ಚೆಗುವಾರ ತನ್ನ 19ನೇ ವಯಸ್ಸಿನಲ್ಲಿ (1948) ವೈದ್ಯಕೀಯ ಕಲಿಕೆಗಾಗಿ ಬ್ಯೂನಸ್ ಐರ್ಸ್ ವಿಶ್ವವಿದ್ಯಾನಿಲಯಕ್ಕೆ ಸೇರುತ್ತಾನೆ. ಆದರೆ 1951ರಲ್ಲಿ ವಿಶ್ವವಿದ್ಯಾಲಯದಿಂದ ಒಂದು ವರ್ಷ ರಜೆ ಪಡೆದು ತನ್ನ ಆಪ್ತಮಿತ್ರ ಅಲ್ಬರ್ಟೊ ಗ್ರೆನಡೋ ಜೊತೆಗೂಡಿ ಮೋಟರ್ ಸೈಕಲ್ ಮೇಲೆ ದಕ್ಷಿಣ ಅಮೆರಿಕಾದ ಪ್ರವಾಸ ಹೊರಡುತ್ತಾನೆ. ಚೆಗುವಾರನ ಬದುಕಿನಲ್ಲಿ ಈ ಪ್ರವಾಸ ಬಹಳ ಪ್ರಮುಖವಾದದ್ದು ಮತ್ತು ಚೆಗುವಾರ ತಾನೊಬ್ಬ ಕ್ರಾಂತಿಕಾರಿಯಾಗಿರಲು ಪ್ರಮುಖ ಕಾರಣ ಈ ಪ್ರವಾಸದ ಅನುಭವಗಳೇ. ಅವನೆ ಹೇಳಿದ, ಬರೆದುಕೊಂಡಿರುವ ಹಾಗೆ “ಆಂಡೀಸ್ ಪರ್ವತಶ್ರೇಣಿಯ ಉನ್ನತ ಶಿಖರವಾದ ಮಾಚು ಪಿಚ್ಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂಮಾಲೀಕರಿಂದ ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನಸಮುದಾಯಗಳ ಹೀನಾಯ ಬದುಕು, ಕಡುಬಡತನ, ನನ್ನ ಮನಸ್ಸಿಗೆ ತಾಕಿತು. ಈ ಜನರಿಗೆ ನೆರವಾಗಬೇಕಿದ್ದಲ್ಲಿ ನಾನು ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ರಾಜಕೀಯ ರಂಗಕ್ಕೆ ಪ್ರವೇಶಿಸಬೇಕಿದೆ ಎಂದು ಮನವರಿಕೆಯಾಯಿತು” ಎಂದು ನಂತರ ಚೆಗುವಾರ ಬರೆದುಕೊಳ್ಲುತ್ತಾನೆ. ಹಾಗಾಗಿ ಈ ಮೋಟಾರ್ ಸೈಕಲ್ ಪ್ರವಾಸ್ ಚೆಗುವಾರನ ಕ್ರಾಂತಿ ಬದುಕಿನ ಬಹಳ ದೊಡ್ಡ ತಿರುವು. ಮೋಟಾರ್ ಸೈಕಲ್ ಪ್ರವಾಸದ ಜೊತೆಗಾರ ಆಲ್ಬರ್ಟೊ ಗ್ರಾನಡೊಸ್  ಚೆ ಕುರಿತು ಹೇಳುತ್ತಾ  ಟೆಟೆ (‘ಚೆ’ ನನ್ನು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು) ನನ್ನು ನಾನು ಮೊದಲು ಭೇೀಟಿ ಆಗಿದ್ದು 1941ರಲ್ಲಿ ಅದು ನನ್ನ ಸಹೋದರ ಥಾಮಸ್ ಮೂಲಕ. ಆಗ ನನಗೆ 13 ವರ್ಷ ವಯಸ್ಸು. ನಮ್ಮಿಬ್ಬರನ್ನು ಒಟ್ಟೊಟ್ಟಾಗಿ ತಂದ ವಿಷಯವೆಂದರೆ ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ. ಚೆ ಮನೆಗೆ ನಾನು  ವಾಡಿಕೆಯ ಅಥಿತಿಯಾಗಿದ್ದೆ. ಅಲ್ಲಿದ್ದ ಗ್ರಂಥಭಂಡಾರವನ್ನು ನನ್ನದೆಂಬತೆಯೇ ಬಳಸಿಕೊಳ್ಳುತ್ತಿದ್ದೆ. ಟೆಟೆ (ಚೆ) ಒಬ್ಬ ರೂಢಿಯ ಮಾತುಗಾರನಾಗಿದ್ದ.

ಮತ್ತಷ್ಟು ಓದು »