ಅಧಿಕಾರ ಸಿಗುವುದಾದರೆ ಇವರು ಕಸಬ್ ಗೂ ಸ್ಮಾರಕ ಕಟ್ಟಲಾರರೆ?
-ಎ ಕೆ ಕುಕ್ಕಿಲ
1984 ಜೂನ್ 5ರಂದು ಭಾರತೀಯ ಸೇನೆಯು ಆಪರೇಶನ್ ಬ್ಲೂಸ್ಟಾರ್ (Operation Blue Star) ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳುತ್ತದೆ. ಪ್ರತ್ಯೇಕತಾವಾದಿಗಳ ಹಿಡಿತದಿಂದ ಸಿಕ್ಖರ ಪವಿತ್ರ ಕ್ಷೇತ್ರ ಸ್ವರ್ಣ ಮಂದಿರವನ್ನು ಬಿಡುಗಡೆಗೊಳಿಸುವುದು ಕಾರ್ಯಾಚರಣೆಯ ಉದ್ದೇಶವೆಂದು ಪ್ರಧಾನಿ ಇಂದಿರಾ ಗಾಂಧಿ ಘೋಷಿಸುತ್ತಾರೆ. ಜನರಲ್ ಎ.ಎಸ್. ವೈದ್ಯ ಮತ್ತು ಲೆಫ್ಟಿನೆಂಟ್ ಜನರಲ್ ಕುಲ್ ದೀಪ್ ಸಿಂಗ್ ಬ್ರಾರ್ರ ನೇತೃತ್ವದಲ್ಲಿ ನೂರಾರು ಯೋಧರು ಕಾರ್ಯಾಚರಣೆಗಿಳಿಯುತ್ತಾರೆ. ಜರ್ನೈಲ್ ಸಿಂಗ್ ಬಿಂದ್ರನ್ವಾಲೆ ಮತ್ತು ನಿವೃತ್ತ ಮೇಜರ್ ಜನರಲ್ ಶಾಹೆಬ್ ಸಿಂಗ್ರ ನೇತೃತ್ವದಲ್ಲಿ ಸ್ವರ್ಣ ಮಂದಿರದೊಳಗೆ ಅಡಗಿ ಕೂತಿದ್ದ ಪ್ರತ್ಯೇಕತಾವಾದಿಗಳು, ಸೇನೆಗೆ ತೀವ್ರ ಪ್ರತಿರೋಧ ಒಡ್ಡುತ್ತಾರೆ. ಟ್ಯಾಂಕ್, ಹೆಲಿಕಾಪ್ಟರ್, ಶಸ್ತ್ರಾಸ್ತ್ರ ವಾಹನಗಳು, ಆರ್ಟಿಲರಿಗಳನ್ನು ಕಾರ್ಯಾಚರಣೆಯ ವೇಳೆ ಸೇನೆ ಬಳಸಿಕೊಂಡರೆ, ಪ್ರತ್ಯೇಕತಾವಾದಿಗಳು ಮೆಶಿನ್ ಗನ್, ಕ್ಷಿಪಣಿಗಳು, ರಾಕೆಟ್ ಲಾಂಚರುಗಳನ್ನು ಬಳಸುತ್ತಾರೆ. ಒಂದು ರೀತಿಯಲ್ಲಿ ಸ್ವರ್ಣ ಮಂದಿರದೊಳಗೆ ಯುದ್ಧವೇ ನಡೆಯುತ್ತದೆ. ಜೂನ್ 3ರಿಂದ 36 ಗಂಟೆಗಳ ಕಾಲ ಇಡೀ ಪಂಜಾಬ್ನಲ್ಲೇ ಕಫ್ರ್ಯೂ ವಿಧಿಸಲಾಗಿದ್ದರೂ ಸಂಚಾರ, ವ್ಯಾಪಾರ-ವಹಿವಾಟುಗಳನ್ನು ನಿಷೇಧಿಸಲಾಗಿದ್ದರೂ ವಿದ್ಯುತ್ ಕಡಿತಗೊಳಿಸಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಸಿಕ್ಖರು ಚೌಕ್ ಮೆಹ್ತಾದಲ್ಲಿ, ಹರಿಕ್ ಪಟನ್ನಲ್ಲಿ ನೆರೆಯುತ್ತಾರೆ. ಈ ಮಧ್ಯೆ ಸ್ವರ್ಣ ಮಂದಿರದ ಆಸುಪಾಸಿನ ಹೊಟೆಲ್ಗಳಲ್ಲಿ ಉಳಕೊಂಡಿದ್ದ ಎಲ್ಲ ಪತ್ರಕರ್ತರನ್ನೂ ಜೂನ್ 5ರ ಬೆಳಿಗ್ಗೆ 5 ಗಂಟೆಗೆ ಮಿಲಿಟರಿ ವಾಹನದಲ್ಲಿ ಹರ್ಯಾಣಕ್ಕೆ ಸಾಗಿಸಿ ಅಲ್ಲಿ ಬಂಧಿಸಿಡಲಾಗುತ್ತದೆ. ಮಾಧ್ಯಮಗಳನ್ನು ಸಂಪೂರ್ಣ ಸೆನ್ಸಾರ್ಶಿಪ್ಗೆ ಒಳಪಡಿಸಲಾಗುತ್ತದೆ. ಹೀಗೆ ಹೊರ ಜಗತ್ತಿನಿಂದ ಪಂಜಾಬನ್ನು ಸಂಪೂರ್ಣ ಪ್ರತ್ಯೇಕಿಸಿ ನಡೆಸಲಾದ ಆ ಕಾರ್ಯಾಚರಣೆ ಜೂನ್ 7ರಂದು ಕೊನೆಗೊಳ್ಳುವಾಗ 700ರಷ್ಟು ಯೋಧರೇ ಸಾವಿಗೀಡಾಗಿರುತ್ತಾರೆ. ಬಿಂದ್ರನ್ವಾಲೆ, ಶಾಹೆಬ್ ಸಿಂಗ್ ಸಹಿತ 400ರಷ್ಟು ಉಗ್ರವಾದಿಗಳು ಹತ್ಯೆಗೊಳಗಾಗುತ್ತಾರೆ. ಇಷ್ಟಕ್ಕೂ ಸಾವಿಗೀಡಾದ ಸಿಕ್ಖರ ನಿಖರ ಸಂಖ್ಯೆ ಎಷ್ಟು, ಎಷ್ಟು ಮಂದಿ ಗಾಯ ಗೊಂಡರು, ಆ ಕಾರ್ಯಾಚರಣೆ ಹೇಗಿತ್ತು ಎಂಬುದನ್ನೆಲ್ಲಾ ಹೇಳುವುದಕ್ಕೆ ಅಲ್ಲಿ ಅಸೋಸಿಯೇಟೆಡ್ ಪ್ರೆಸ್ನ (AP) ವರದಿಗಾರ ಬ್ರಹ್ಮ ಚಲ್ಲಾನಿಯ ಹೊರತು ಇನ್ನಾರೂ ಇದ್ದರಲ್ಲವೇ? ಮಿಲಿಟರಿಯ ಕಣ್ತಪ್ಪಿಸಿ ಅವರು ಮಾಡಿದ ಅಷ್ಟಿಷ್ಟು ವರದಿಯನ್ನು ಮುಂದೆ ನ್ಯೂಯಾರ್ಕ್ ಟೈಮ್ಸ್, ದಿ ಟೈಮ್ಸ್ ಆಫ್ ಲಂಡನ್, ದಿ ಗಾರ್ಡಿಯನ್ ಪತ್ರಿಕೆಗಳೆಲ್ಲಾ ಮುಖಪುಟದಲ್ಲಿ ಪ್ರಕಟಿಸುತ್ತವೆ. ಶವಸಂಸ್ಕಾರ ಮಾಡಿದವರ ಪ್ರಕಾರ, ಒಟ್ಟು 3,300 ಮಂದಿ ಆ ಕಾರ್ಯಾಚರಣೆಯಲ್ಲಿ ಸಾವಿಗೀಡಾಗಿದ್ದಾರೆ. ಇಂದಿರಾ ಗಾಂಧಿಯವರ ಕುರಿತಂತೆ ಪುಸ್ತಕ ಬರೆದಿರುವ ಮಾರ್ಕ್ ಟುಲಿಯ ಪ್ರಕಾರ ಸತ್ತವರ ಸಂಖ್ಯೆ 2,093. ಆದರೂ,
ಈ ಸ್ವಾತಂತ್ರ್ಯಕ್ಕೆ ಅಸ್ಸಾಮಿನ ಉರಿಯ ಅರಿವುಂಟೇ?
– ಸಂತೋಶ್ ತಮ್ಮಯ್ಯ
ನೇಪಾಳದ ಹಿಂದೂ ರಾಜನನ್ನು ಪದಚ್ಯುತಗೊಳಿಸಿದಾಗ ಭಾರತದಲ್ಲಿ ಯಾವ ಕಮ್ಯುನಿಷ್ಟ್ ಕಾಮ್ರೆಡನಿಗೂ ಪೆಟ್ಟು ಬಿದ್ದಿರಲಿಲ್ಲ. ಪಾಕಿಸ್ಥಾನದ ರಿಂಕಲ್ ಕುಮಾರಿಯನ್ನು ಮತಾಂಧರು ಮತಾಂತರಿಸಿದಾಗ ಇಲ್ಲಿನ ಯಾವ ಹಿಂದುವೂ ಬೀದಿಗೆ ಇಳಿದಿರಲಿಲ್ಲ. ಅಲ್ಲೆಲ್ಲೋ ಪಾಶ್ಚಾತ್ಯ ದೇಶದಲ್ಲಿ ಗಣಪತಿ, ಲಕ್ಷ್ಮಿ, ಬ್ರಹ್ಮದೇವರನ್ನು ಹೆಂಗಸರ ಚಡ್ಡಿಗಳಲ್ಲಿ ಚಿತ್ರಿಸಿ ರಾಂಪ್ವಾಕ್ ಮಾಡಿದಾಗಲೂ ಹಿಂದುಗಳಾರೂ ಬಸ್ಸುಗಳಿಗೆ ಕಲ್ಲು ಬಿಸಾಡಿರಲಿಲ್ಲ. ಅದಾವುದೋ ಕೆರೆಬಿಯನ್ ದೇಶದಲ್ಲಿ ಹಿಂದುವಾದವನು ಅಧ್ಯಕ್ಷನಾಗಬಾರದು ಎಂದಾಗ ಜಗತ್ತಿನಾದ್ಯಂತ ಹಿಂದುಗಳಾರೂ ಖಂಡಿಸಲಿಲ್ಲ. ಅವೆಲ್ಲಾ ಬಿಡಿ. ಕಾಶಿ ವಿಶ್ವನಾಥನ ದರ್ಶನಕ್ಕೆ ಹೋದರೂ ಹಿಂದುಗಳಿಗೆ ಪಕ್ಕದ ಪರಮ ಅಸಹ್ಯವಾದ ಕಟ್ಟಡವೊಂದು ಸಾಮರಸ್ಯದ ಪ್ರತೀಕದಂತೆಯೇ ಕಾಣುತ್ತದೆ. ಅಯೋಧ್ಯೆಯ ರಾಮ ಇನ್ನೂ ಟೆಂಟ್ ವಾಸಿಯಾದರೂ ಬಹುತೇಕರಿಗೆ ಅದೇನೂ ಅಂಥ ಕೊರಗಿನಂತೆ ಕಾಣುವುದಿಲ್ಲ. ಯಾವ ಹಿಂದೂ ಸಂನ್ಯಾಸಿಯೂ ಮೌಲ್ವಿಗಳಂತೆ ಅಬ್ಬರಿಸುವುದಿಲ್ಲ. ಒಂದು ವೇಳೆ ಸಂನ್ಯಾಸಿ ಅಬ್ಬರಿಸಿದರೂ ಯಾರಿಗೂ ಹೆದರಿಕೆಯಾಗುವಂತೆ ಕಾಣುವುದೂ ಇಲ್ಲ.
ಅದು ಹಿಂದುವಿನ ಅತಿಯಾದ ಸಾತ್ತ್ವಿಕತೆಯೋ ಅಥವಾ ಭಂಡತನ ಮಿಶ್ರಿತ ಅತಿಯಾದ ಭಯವೋ ಎಂದು ವಿಶ್ಲೇಷಿಸುವುದು ಕಷ್ಟ. ಆದರೆ ಆತನಿಗೆ ಹಿಂದು ಎಂಬ ಕಾರಣಕ್ಕೆ ಸಿಟ್ಟು ಬರದಿರುವುದಂತೂ ಸತ್ಯ. ಮೇಲಿನ ಎಲ್ಲಾ ಸಂದರ್ಭಗಳಲ್ಲಿ ಅದು ಸಾಭೀತಾಗಿದೆ. ಬೀದಿಗಿಳಿಯಲು, ಪ್ರತಿಭಟಿಸಲು ಹಿಂದುವಿಗೆ ದಿನಕ್ಕೊಂದು ಕಾರಣವಾದರೂ ಸಿಗುತ್ತವೆ. ಆದರೆ ಅದು ನಡೆಯುವುದಿಲ್ಲ. ಏಕೆಂದರೆ ಹಿಂದುವಿಗೆ ಸಮಾಜಕ್ಕಾಗಿ ಎಂದಿಗೂ ಸಿಟ್ಟು ಬರುವುದಿಲ್ಲ.
ಸಾಮಾನ್ಯರ ಭ್ರಷ್ಟತೆ ನಿರ್ಲ್ಯಕ್ಷಿಸಿ ಜನರ ಬಳಿಗೆ ಹೊರಟವರ ಕಥೆ…
-ಅಶೋಕ್ ಕೆ ಆರ್
ನನ್ನ ಮತ್ತು ನನ್ನಂಥವರ ನಿರೀಕ್ಷೆಯಂತೆ ಅಣ್ಣಾ ತಂಡದ ‘ಭ್ರಷ್ಟಾಚಾರ ವಿರೋಧಿ ಆಂದೋಲನ’ ಮಗ್ಗಲು ಬದಲಿಸಿ ಸುಮ್ಮನಾಗಿದೆ. ನಮ್ಮ ನಿರೀಕ್ಷೆ ಹುಸಿಗೊಳ್ಳದೆ ಅಣ್ಣಾ ತಂಡ ವಿಫಲಗೊಂಡಿದ್ದಕ್ಕೆ ಸಂತಸ ಪಡಬೇಕಾ? ಖಂಡಿತ ಇಲ್ಲ. ಅಣ್ಣಾ ತಂಡದ ಸರ್ವಾಧಿಕಾರಿ ಧೋರಣೆಯನ್ನು ಪ್ರಶ್ನಿಸಿದವರಿಗೆ ‘ಸಿನಿಕರು’ ‘ದೇಶದ್ರೋಹಿಗಳು’ ‘ಭ್ರಷ್ಟರು’ ಎಂದು ನಾನಾ ಬಿರುದಾವಳಿಗಳನ್ನು ಕೊಟ್ಟವರು ಮಳೆಗಾಳಿಗೆ ಬೆಚ್ಚನೆ ಹೊದ್ದಿ ಮಲಗಿಬಿಟ್ಟಿದ್ದಾರೇನೋ?!
ಟೀಂ ವರ್ಕಿನ ತಂಡವೇ ಸರಿಯಿರಲಿಲ್ಲ! –
ರಿಲೇ ಓಟದಲ್ಲಿ ಓಡುವ ನಾಲ್ವರ ಪಾತ್ರವೂ ಹಿರಿದು. ಒಬ್ಬನ ಓಟ ಕೊಂಚ ನಿಧಾನವಿರಬಹುದು, ಮತ್ತೊಬ್ಬ ಉಳಿದೆಲ್ಲರಿಗಿಂತ ವೇಗಿಯಿರಬಹುದು; ಕೊನೆಗೆ ಎಲ್ಲರೂ ಓಡಿದರೆ ಮಾತ್ರ ತಂಡ ಗೆಲುವು ಸಾಧಿಸಲು ಸಾಧ್ಯ. ಈ ಮೂಲಭೂತ ಅಂಶವೇ ಅಣ್ಣಾ ಹಜಾರೆ ಆರಂಭಿಸಿದ ಚಳುವಳಿಯಲ್ಲಿ ಇಲ್ಲವಾಗಿತ್ತು. ಅಣ್ಣಾ ಹಜಾರೆ, ಅರವಿಂದ್ ಕೇಜ್ರಿವಾಲಾ, ಕಿರಣ್ ಬೇಡಿಯವರ ಉದ್ದೇಶ ಸರಿಯಾಗಿತ್ತೇನೋ ಆದರೆ ನಡೆದ ಹಾದಿಯಲ್ಲಿ ಜೊತೆ ಮಾಡಿಕೊಂಡ ತಂಡ? ಎಡವಿ ಬಿದ್ದವರನ್ನು ಮೇಲೆತ್ತುವ ಗೋಜಿಗೆ ಹೋಗದೆ ನಗುತ್ತಾ ಮುಂದೆ ಸಾಗುವವರ ತಂಡ ಕಟ್ಟಿಕೊಂಡು ಚಳುವಳಿಯನ್ನು ಬೆಳೆಸಿ ಗೆಲ್ಲಲಾದೀತೇ? ಮೇಧಾವಿಗಳೆನ್ನಿಸಿಕೊಂಡವರು, ಹಲವು ಹೋರಾಟಗಳಲ್ಲಿ ಪಾಲ್ಗೊಂಡ ಜನರೇ ಇದ್ದ ಅಣ್ಣಾ ತಂಡದಲ್ಲಿ ಭ್ರಷ್ಟಾಚಾರವನ್ನು ಅರ್ಥೈಸುವ ದೃಷ್ಟಿಕೋನವೇ ಸರಿಯಿರಲಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರವರ್ಗವಷ್ಟೇ ಭ್ರಷ್ಟರ ಕೂಟ ಎಂಬ ತೀರ್ಮಾನಕ್ಕೆ ಬಂದ ಚಳುವಳಿಯಿಂದ ಮತ್ತೇನನ್ನು ನಿರೀಕ್ಷಿಸಲು ಸಾಧ್ಯ? ಸಾಮಾನ್ಯ ಜನರೂ ಭ್ರಷ್ಟಾಚಾರದ ಬಹುಮುಖ್ಯ ಭಾಗ. ಅವರು ಬದಲಾಗದೆ – ಅವರನ್ನು ಬದಲಿಸಲಾಗದೆ – ಚಳುವಳಿ ಗೆಲ್ಲಲಾಗದು ಎಂದಿವರಿಗೆ ತಿಳಿಯಲಿಲ್ಲ.
ಮುಸ್ಲಿಮರ ವಿರುದ್ಧ ಕೆಂಡಕಾರುವುದಕ್ಕಷ್ಟೇ ಹಿಂದೂ ಜಾಗೃತಿ ಸೀಮಿತವಾಗಬೇಕಾ?
– ಡಾ. ಅಶೋಕ್ ಕೆ.ಆರ್
ಅನಾಗರೀಕ, ಹಿಂದುಳಿದ ರಾಜ್ಯಗಳೆಂಬ ಹಣೆಪಟ್ಟಿ ಹೊತ್ತ ದೂರದ ಬಿಹಾರ, ಉತ್ತರಪ್ರದೇಶದಲ್ಲಿ ನಡೆಯುತ್ತದೆಂದು ಕೇಳುತ್ತಿದ್ದ ಅಮಾನವೀಯ ಘಟನೆಯೊಂದು ನಮ್ಮ ಕರ್ನಾಟಕದ ಮಂಡ್ಯಜಿಲ್ಲೆಯಲ್ಲಿ ನಡೆದುಹೋಗಿದೆ. ನಾಲ್ವರು ಯುವಕರು ಯಶವಂತಪುರ – ಮೈಸೂರು ರೈಲಿನಲ್ಲಿ ಮಹಿಳೆಯೊಬ್ಬಳನ್ನು ಚುಡಾಯಿಸಿದ್ದಾರೆ. ಬೇಸತ್ತ ಯುವತಿ ಬಾಗಿಲಿನ ಬಳಿ ಬಂದು ನಿಂತಿದ್ದಾಳೆ. ಅಲ್ಲಿಗೂ ಬಂದು ರೇಗಿಸಲಾರಂಭಿಸಿದವರಿಗೆ ಪೋಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾಳೆ. ಕೋಪಗೊಂಡ ಆ ನಾಲ್ಕು ಮನುಷ್ಯರೂಪಿ ರಾಕ್ಷಸರು ಚಲಿಸುವ ರೈಲಿನಿಂದ ಆಕೆಯನ್ನು ಹೊರತಳ್ಳಿಬಿಟ್ಟಿದ್ದಾರೆ. ರೈಲಾಗ ಮದ್ದೂರಿನ ಶಿಂಷಾ ನದಿಯ ಸೇತುವೆಯ ಮೇಲೆ ಚಲಿಸುತ್ತಿತ್ತು. ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಬೆನ್ನುಹುರಿಗೆ ಬಿದ್ದ ಏಟು, ಮೂಳೆಮುರಿತದಿಂದ ಎಷ್ಟರ ಮಟ್ಟಿಗೆ ಆ ಯುವತಿ ಚೇತರಿಸಿಕೊಳ್ಳುತ್ತಾಳೆ ಎಂಬುದನ್ನು ಕಾದುನೋಡಬೇಕಷ್ಟೇ.
ಆ ನಾಲ್ಕೂ ಯುವಕರನ್ನು ಪೋಲೀಸರು ಬಂಧಿಸಿದ್ದಾರೆ. ಮಾರನೇ ದಿನ ನ್ಯಾಯಾಲಯಕ್ಕೆ ಅವರನ್ನು ಕರೆದೊಯ್ಯುವಾಗ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮುತ್ತಿಗೆ ಹಾಕಿ ಅಪರಾಧಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಊರಿನ ಹೆಣ್ಣುಮಗಳ ಜೀವಕ್ಕೆ ಅಪಾಯತಂದ ಯುವಕರ ಮೇಲಿನ ಕೋಪ ಸಹಜವಾದುದು. ಆದರೆ? ಹಿಂದೂ ಜಾಗರಣ ವೇದಿಕೆ ಜಾಗೃತಗೊಂಡು ಆ ನಾಲ್ವರನ್ನು ಥಳಿಸಿದ್ದು ಯುವತಿಯ ಮೇಲೆ ಹಲ್ಲೆಯಾದ ಕಾರಣಕ್ಕೆ ಮಾತ್ರವಲ್ಲ! ಹಲ್ಲೆ ಮಾಡಿದ ನಾಲ್ವರು ಮುಸ್ಲಿಮರೆಂಬುದೇ ಇವರು ಜಾಗೃತಿಯಾಗಲು ಕಾರಣ! ಹಲ್ಲೆ ಮಾಡಿದವರು ಮುಸ್ಲಿಮರಾಗದೇ ಹಿಂದೂಗಳಾಗಿದ್ದಲ್ಲಿ ಅದರಲ್ಲೂ ಯಾವುದೋ ‘ಮೇಲುಜಾತಿಗೆ’[?] ಸೇರಿದವರಾಗಿದ್ದಲ್ಲಿ ಖಂಡಿತವಾಗ್ಯೂ ಹಿಂದೂ ಜಾಗರಣ ವೇದಿಕೆ ಜಾಗೃತವಾಗುತ್ತಿರಲಿಲ್ಲ ಎಂಬುದೇ ಇಂಥ ಸಂಘಟನೆಗಳ – ಹಿಂದೂ ಧರ್ಮದ ವೈಫಲ್ಯ.
ಕಪಟ ನಾಟಕ ಸೂತ್ರಧಾರಿ ನೀನೇ…
– ಅಶ್ವಿನ್ ಅಮಿನ್
ದೇಶದ ಯಾವುದೇ ಮೂಲೆಯಲ್ಲಿ ಆಡ್ವಾಣಿ, ವಾಜಪೇಯಿಯಂತಹ ಹಿರಿಯ ಬಿಜೆಪಿ ಮುತ್ಸದ್ದಿಗಳು ‘ಜೈ ಶ್ರೀ ರಾಮ್ ಎಂದರೆ ಸಾಕು ಅದು ಮಂಗಳೂರಿನವರ ಬಾಯಲ್ಲಿ ಮಾರ್ದನಿಸುತ್ತದೆ. ಹಿಂದುತ್ವ ಎಂದರೆ ಉಸಿರು, ಹಿಂದುತ್ವ ಎಂದರೆ ಜೀವನ, ಹಿಂದುತ್ವ ಎಂದರೆ ಸರ್ವಸ್ವ ಎಂದು ಹಿಂದುತ್ವವನ್ನೇ ಮೈಗೂಡಿಸಿಕೊಂಡ ನಾಡು ಈ ಕರಾವಳಿಯ ಮಂಗಳೂರು ಹಾಗು ಉಡುಪಿ ಜಿಲ್ಲೆಗಳು… ಬರೀ ವೋಟ್ ಬ್ಯಾಂಕ್ ಗಷ್ಟೇ ಹಿಂದುತ್ವದ ಸೋಗು ಹಾಕಿಕೊಳ್ಳುವ ಈ ಕಾಲದಲ್ಲಿ ಹೃದಯದಿಂದ ಹಿಂದುತ್ವವನ್ನು ಅಪ್ಪಿಕೊಂಡವರಿವರು.ಇಲ್ಲಿ ಬಿಜೆಪಿಯಿಂದ ಹಿಂದುತ್ವ ಬಂದಿಲ್ಲ ಬದಲಾಗಿ ಹಿಂದುತ್ವದಿಂದ ಬಿಜೆಪಿ ಬಂದಿದೆ ಆದರೆ ಈಗ ನಾವೆಷ್ಟು ಮೂರ್ಖರಾಗಿದ್ದೆವು ಎಂಬುದರ ಅರಿವಾಗುತ್ತಿದೆ. ವೋಟ್ ಬ್ಯಾಂಕ್ ಗಾಗಿ ನಮ್ಮ ಹಿಂದುತ್ವವನ್ನು ಬಳಸಿಕೊಂಡರಲ್ಲ ಎಂಬ ಬಗ್ಗೆ ಖೇದವಾಗುತ್ತಿದೆ. ಇದಕ್ಕೆ ಕಾರಣರಾದವರ ಮೇಲೆ ಕೋಪ, ಸಿಟ್ಟು, ಅಸಹನ, ಜೊತೆ ಜೊತೆಗೆ ನಮ್ಮ ಮೇಲೆಯೇ ಅಸಹನೆ ಹುಟ್ಟುತ್ತಿದೆ…!
ಈಗಿನ ಕಾಲಘಟ್ಟದಲ್ಲಿ ಕರ್ನಾಟಕದಲ್ಲಿ ಬಿಜೆಪಿ ನಿಜವಾಗಲೂ ಅದರ ಸಿದ್ಧಾಂತಗಳನ್ನು ಉಳಿಸಿಕೊಂಡಿದ್ದರೆ ಅದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಮಾತ್ರವೇನೋ… ಪ್ರತಿ ಸಲದ ಚುನಾವಣೆಯಲ್ಲೂ ಬಿಜೆಪಿಗೆ ಅತ್ಯಧಿಕ ಶಾಸಕರನ್ನು ಕೊಟ್ಟ, ಪಕ್ಷದ ಯಾವ ಕ್ಲಿಷ್ಟ ಸಂದರ್ಭಗಳಲ್ಲೂ ಕೈ ಹಿಡಿಯುವಂತಹ ಜಿಲ್ಲೆಯಿದು. ಆದರೆ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಮಾತ್ರ ಎಲ್ಲರಿಂದಲೂ ಕಡೆಗಣಿಸಲ್ಪಟ್ಟಿತು. ಚುನಾವಣಾ ಗೆಲ್ಲುವವರೆಗೆ ಹಿಂದುತ್ವ ಎಂದು ಮಾತನಾಡುತ್ತಿದ್ದ ರಾಜ್ಯದ ಹಿರಿಯ ನಾಯಕರುಗಳು ಲಿಂಗಾಯಿತ, ಒಕ್ಕಲಿಗ ಎಂದು ಶುರುವಿಟ್ಟುಕೊಂಡರು. ‘ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು’ ಎಂದು ಭಾಷಣ ಮಾಡುವ ಮಂದಿ ಜಾತಿ ಲೆಕ್ಕ ಆರಂಭಿಸಿದರು.
ಜಾತಿ ರಾಜಕೀಯದ ನಡುವೆ ಜಾತಿ ಇಲ್ಲದವನ ಪಾಡು..!
-ಶ್ರೀಧರ್ ಜಿ ಬನವಾಸಿ
ಮೊನ್ನೆ ರಾಜ್ಯ ಒಕ್ಕಲಿಗರ ಸಮಾವೇಷ ಅದ್ದೂರಿಯಾಗಿ ನೇರವೇರಿತು. ಜಗದ್ಗುರು ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಲಾಯಿತು. ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಒಕ್ಕಲಿಗರ ಘಟಾನಘಟಿ ನಾಯಕರುಗಳನ್ನೆಲ್ಲಾ ಒಂದೇ ವೇದಿಕೆಯಲ್ಲಿ ಕೂರಿಸಲಾಗಿತ್ತು. ಒಕ್ಕಲಿಗರ ಬೇರೆ ಬೇರೆ ಮಠದ ಸ್ವಾಮೀಜಿಗಳು ಕೂಡ ಒಂದೇ ವೇದಿಕೆಯಲ್ಲಿ ಸೇರಿಕೊಂಡಿದ್ದು ಆ ದಿನದ ವಿಶೇಷವಾಗಿತ್ತು. ಒಕ್ಕಲಿಗರಲ್ಲಿ ಮೂರ್ನಾಲ್ಕು ಪಂಗಡಗಳಿದ್ದರೂ ನಾವೆಲ್ಲಾ ಒಂದೇ ಅಂತ ತೋರಿಸುವ ಪ್ರಯತ್ನ ಹಾಗೂ ರಾಜಕೀಯ ಪಕ್ಷಗಳ ನಡುವೆಯೂ ಒಕ್ಕಲಿಗರು ಒಂದು ತೋರಿಸವ ಪ್ರಯತ್ನ ಕೂಡ ಮಾಡಲಾಯಿತು. ಮುಖ್ಯಮಂತ್ರಿ ಸದಾನಂದ ಗೌಡರು ತಮಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದ್ದೇ ತಾವು ಒಕ್ಕಲಿಗ ಅನ್ನುವ ಕಾರಣ ಅಂತ ಸಭೆಯಲ್ಲಿ ಉದ್ಗೋಷಿಸಿದರು.
ಧರ್ಮವೆಂಬ ಅಫೀಮು ಮತ್ತು ಜಾತಿಯೆಂಬ ಮರಿಜುವಾನ….
– ಡಾ. ಅಶೋಕ್ ಕೆ.ಆರ್
ಮಾರ್ಕ್ಸ್ ವಾದ ಮತ್ತದರ ವಿವಿಧ ಸರಣಿವಾದಗಳು ಪದೇ ಪದೇ ವಿಫಲವಾದ ನಂತರೂ ಮತ್ತೆ ಮತ್ತೆ ಪ್ರಸ್ತುತವೆನ್ನಿಸುತ್ತಲೇ ಸಾಗುವುದಕ್ಕೆ ಕಾರಣಗಳೇನು? ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದಾಗ “Religion is opium” ಎಂದು ದಶಕಗಳ ಹಿಂದೆ ಯಾವಗಲೋ ಮಾರ್ಕ್ಸ್ ಹೇಳಿದ್ದ ಮಾತುಗಳು ನೆನಪಾಗದೇ ಇರದು. ‘ಭಿನ್ನ’ ಪಕ್ಷವೆಂದು ತನ್ನ ಬೆನ್ನು ತಾನೇ ತಟ್ಟಿಕೊಳ್ಳುವ ಭಾ.ಜ.ಪದ ಭಿನ್ನತೆ ಇಷ್ಟೊಂದು ಅಸಹ್ಯಕರವಾಗಿರಬಲ್ಲದು ಎಂದು ಸ್ವತಃ ಅದರ ಕಾರ್ಯಕರ್ತರೇ ನಿರೀಕ್ಷಿಸಿರಲಿಲ್ಲವೇನೋ?!
ಯಾವ್ ಜಾತಿಯ ಮುಖ್ಯಮಂತ್ರಿ ಬೇಕು!?
– ರಾಕೇಶ್ ಶೆಟ್ಟಿ
ಯಡ್ಡಿ ಕೆಳಗಿಳಿದಾಗ ಬರೆದಿದ್ದು.. ಈಗ ಸದಾ ಇಳಿಯುವಾಗಲೂ ಅಪ್ಪ್ಲೈ ಆಗುತ್ತೆ…! ಅತಿ ಕೆಟ್ಟ ರಾಜಕಾರಣಕ್ಕೆ ನಮ್ಮ ರಾಜ್ಯ ಸಾಕ್ಷಿಯಾಗಿರುವುದು ದೌರ್ಭಾಗ್ಯ…!
———————————————————————————————————————————————-
ಅಂತು ಬಿಜೆಪಿ ಹೈಕಮಾಂಡ್ ಧೈರ್ಯ ಮಾಡಿದೆ…! ಯಡ್ಯೂರಪ್ಪನವ್ರಿಗೆ ಕುರ್ಚಿ ಬಿಡಿ ಅನ್ನುವ ಸಂದೇಶವನ್ನ ರವಾನಿಸಿದೆ.ಸಂದೇಶ ಮಾಧ್ಯಮದ ಮೂಲಕ ಬಂದಿದ್ದು ನಿನ್ನೆ ಬೆಳಿಗ್ಗೆಯೇ.ಆದ್ರೆ ಇನ್ನ ಯಡ್ಯೂರಪ್ಪ ಮಾತ್ರ ಜಪ್ಪಯ್ಯ ಅನ್ನುತ್ತಿಲ್ಲ..!
ಕಳೆದ ೧೦-೧೫ ದಿನಗಳಿಂದ ಕರ್ನಾಟಕ ಸರ್ಕಾರ ಜನರ ಸಮಸ್ಯೆಯನ್ನ ನೋಡೋದು ಬಿಟ್ಟು ತನ್ನ ಬುಡ ಭದ್ರ ಮಾಡಿಕೊಳ್ಳುವ ಬಗ್ಗೆಯೇ ತಲೆಕೆಡಿಸಿಕೊಂಡು ಕೂತಿದೆ.ಕಳೆದ ಹತ್ತು ದಿನ ಬಿಡಿ, ಉತ್ತರ ಕರ್ನಾಟಕದಲ್ಲಿ ನೆರೆ ಬಂದು ಜನ ತುತ್ತು ಅನ್ನಕ್ಕೆ ಸೂರಿಗೆ ಪರದಾಡುತ್ತಿರುವಾಗಲೇ ರೆಡ್ಡಿಗಳು ಬಂಡಾಯದ ಬಾವುಟ ಹಾರಿಸಿದಾಗಲೂ ಜನ ಸತ್ತರೆ ಸಾಯಲಿ ಕುರ್ಚಿ ಉಳಿದರೆ ಸಾಕು ಅಂತ ಬಿಜೆಪಿ ಸರ್ಕಾರವೇ ದೆಹಲಿಗೆ ಓಡಿ ಹೋಗಿತ್ತು…! ಹಾಗೇನಾದರೂ ಯಡ್ಯೂರಪ್ಪ ಬಂಡಾಯಕ್ಕೆ ಬಗ್ಗದೇ ರಾಜೀನಾಮೆ ಕೊಟ್ಟಿದ್ದರೆ ಜನ ಮತ್ತೆ ಗೆಲ್ಲಿಸಿ ಕಳಿಸುತಿದ್ದರೇನೋ.ಆದರೆ ಯಡ್ಯೂರಪ್ಪ ಶರಣಾಗಿ ಕುರ್ಚಿಯ ಮುಂದೆ ಬೋರಲು ಬಿದ್ದಿದ್ದರು..!
ಹಾಗೇ ನೋಡಿದರೆ ಈ ಸರ್ಕಾರ ರೆಡ್ಡಿಗಳ ಬಂಡಾಯದ ಸಮಯದಲ್ಲಿ ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಕ್ಕಿ ತತ್ತರಿಸುತ್ತಿದ್ದರೂ ಹಾಳು ಬಿದ್ದು ಹೋಗಿ ಅನ್ನುವಂತೆ ಸುಮ್ಮನಿದ್ದಿದ್ದೇ ಕಡೆ ಬಾರಿಯೇನಲ್ಲ,ಅದಾದ ಮೇಲೆ ರೆಸಾರ್ಟ್ನಲ್ಲಿ ಕತ್ತೆ ವ್ಯಾಪರಕ್ಕಿಳಿದಾಗಲೂ ತಿಂಗಳುಗಟ್ಟಲೇ ರಾಜ್ಯ ಅನಾಥವಾಗಿತ್ತು.ಸರ್ಕಾರಿ ಯಂತ್ರಕ್ಕೆ ತುಕ್ಕು ಹಿಡಿದಿತ್ತು.
ಮತ್ತೆ ಮುಖ್ಯಮಂತ್ರಿಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿದಾಗ ಖುದ್ದು ಆಡಳಿತ ಪಕ್ಷವೇ ಬಂದ್ ಕರೆ ಕೊಟ್ಟೂ ವೋಟ್ ಹಾಕಿ ಕಳುಹಿಸಿದ ಜನಸಾಮಾನ್ಯರಿಗೆ ತೊಂದರೆ ಕೊಟ್ಟಿದ್ದು ಮಹಾನ್ ಸಾಧನೆಯೇ (?) ಸರಿ.ಅದೆಲ್ಲಾ ಆಗಿ ಮತ್ತೆ ಸುಪ್ರಿಂ ಕೋರ್ಟ್ ತೀರ್ಪು ಬಂದ ಮೇಲೂ ಮತ್ತೆ ದೆಹಲಿಯಲ್ಲಿ ಕುರ್ಚಿ ಸವಾರಿ ಮಾಡಿ ಬಂದಾಗಲೂ ಕರ್ನಾಟಕ ಅನಾಥವಾಗಿತ್ತು.
ಡಬ್ಬಿಂಗ್ ಅವಶ್ಯಕವೇ?

ಬೌದ್ಧ, ಬ್ರಾಹ್ಮಣ ಮತ್ತು ಗೋಭಕ್ಷಣೆ
– ಸಾತ್ವಿಕ್ ಎನ್ ವಿ
ಪ್ರಾಚೀನ ಭಾರತದ ಇನ್ನೊ೦ದು ಮುಖ್ಯ ದಾರ್ಶನಿಕ ಪರ೦ಪರೆಯಾದ ಬೌದ್ಧ ಧರ್ಮದ ಕುರಿತು ಬಿ.ವಿ. ವೀರಭದ್ರಪ್ಪ ಅವರು ವೇದಾ೦ತ ರೆಜಿಮೆ೦ಟ್ ಮತ್ತು ಇತರ ಲೇಖನಗಳು ಎ೦ಬ ಕೃತಿಯ ಸುಮಾರು ೧೪ ಅ೦ಕಣಬರಹಗಳಲ್ಲಿ ಸವಿಸ್ತಾರವಾಗಿ ಚರ್ಚಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಬೌದ್ಧ ಮತ್ತು ವೈದಿಕರ ನಡುವಿನ ಹೋರಾಟವು ಮಹತ್ವದ್ದಾಗಿದೆ. ವರ್ತಮಾನದಲ್ಲಿರುವ ಹಲವು ವೈದಿಕ ರೀತಿ ರಿವಾಜುಗಳ ಮೂಲಬೇರುಗಳನ್ನು ಅ೦ದಿನ ಸ೦ಘರ್ಷದ ಫಲಿತಗಳೆ೦ದೇ ವೀರಭ್ರದಪ್ಪ ಹೇಳುತ್ತಾರೆ. ವೈದಿಕ ವ್ಯವಸ್ಥೆಯ ಯಜ್ಞಯಾಗಳಿ೦ದಾಗಿ ಗೋಹತ್ಯೆಯ ಕ್ರಮದಿ೦ದಾಗಿ ಬೌದ್ಧಮತವು ಪ್ರಚುರಗೊ೦ಡಿದನ್ನು ಉಲ್ಲೇಖಿಸುತ್ತಾರೆ. ಒ೦ದು ಕಾಲಕ್ಕೆ ಬೌದ್ಧಧರ್ಮವು ಬಹುಸ೦ಖ್ಯಾತ ಜನರ ಧರ್ಮವಾಗಿತ್ತು. ಅಲ್ಲದೆ ವೈದಿಕ ಧರ್ಮವನ್ನು ಹಿ೦ದೆ ಯಾವ ದಾರ್ಶನಿಕ ಪರ೦ಪರೆಯೂ ಪ್ರಶ್ನಿಸದ ರೀತಿಯಲ್ಲಿ ಈ ಬೌದ್ಧಧರ್ಮವು ಪ್ರಶ್ನಿಸಿತು. ಇದರಿ೦ದಾಗಿ ವೈದಿಕವಾದವು ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿತ್ತು. ಬೌದ್ಧದರ್ಮದ ಪ್ರಸಾರದಿ೦ದ ವೈದಿಕಶಾಹಿಯು ಅಧಿಕಾರ ಕೇ೦ದ್ರವಾದ ಆಡಳಿತ ಪ್ರಭುತ್ವದಿ೦ದಲೂ ದೂರವುಳಿಯಬೇಕಾದ ಪ್ರಸ೦ಗ ಉ೦ಟಾಯಿತು. ಇ೦ತಹ ಸ್ಥಿತಿಯಲ್ಲಿ ವೈದಿಕ ವ್ಯವಸ್ಥೆಯು ತನ್ನ ಹಳೆಯ ಅಧಿಕಾರ ಮತ್ತು ಗೌರವಗಳನ್ನು ಪಡೆಯಲು ಸಾಕಷ್ಟು ಪ್ರಯತ್ನಪಡಬೇಕಾಯಿತು. ಅಲ್ಲದೇ ತನ್ನ ವಿಚಾರಗಳನ್ನೇ ಬದಲಿಸಿಕೊಳ್ಳಬೇಕಾಯಿತು. ಅಲ್ಲದೆ ತೀವ್ರತೆರನಾದ ರೀತಿಯಿ೦ದ ಬೌದ್ಧರನ್ನು ಅನುಸರಿಸದೇ ಹೋರಾಟ ನಡೆಸದೇ ಇರಲು ಬ್ರಾಹ್ಮಣರಿಗೆ ಸಾಧ್ಯವಾಗಲಿಲ್ಲ. ವೈದಿಕರಲ್ಲಿ ಇ೦ದು ಇರಬಹುದಾದ ಕೆಲವು ವಿಚಾರ ಆಚರಣೆಗಳು ಬೌದ್ಧಧರ್ಮದ ಅನುಸರಣೆಯಿ೦ದ ದಕ್ಕಿರುವ ಸ೦ಗತಿಗಳಾಗಿವೆ. ಉದಾಹರಣೆಯಾಗಿ ಬುದ್ಧನ ಮರಣಾನ೦ತರ ಆತನ ಅನುಯಾಯಿಗಳು ಅವನ ಮೂರ್ತಿಗಳನ್ನು ರಚಿಸಿ ಸ್ತೂಪಗಳನ್ನು ನಿರ್ಮಿಸಿದರೆ ಅದೇ ಮಾದರಿಯಲ್ಲಿ ವೈದಿಕರು ಶಿವ, ವಿಷ್ಣು ಮು೦ತಾದ ದೇವಾಲಯಗಳನ್ನು ನಿರ್ಮಿಸಿ ತಮ್ಮತ್ತ ಜನರನ್ನು ಆಕರ್ಷಿಸಲು ಪ್ರಯತ್ನಿಸಿದರು. ಮತ್ತಷ್ಟು ಓದು 




