ಈ ಯುದ್ಧ ಭೂಮಿಯಲ್ಲಿ ಸೈನಿಕರ ಬಡಿದಾಟ ಪ್ರಕೃತಿಯೊಂದಿಗೆ!
– ಡಾ ಅಶೋಕ್. ಕೆ. ಆರ್
ಇದು ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ ಪಾಕಿಸ್ತಾನದ ಮೂರು ಸಾವಿರ ಮತ್ತು ಭಾರತದ ಐದು ಸಾವಿರಕ್ಕೂ ಹೆಚ್ಚು ಸೈನಿಕರು ಇಲ್ಲಿ ಹತರಾಗಿದ್ದಾರೆ [ಅನಧಿಕೃತ ವರದಿ; ಅಧಿಕೃತ ವರದಿಯನ್ನು ಎರಡೂ ದೇಶದ ಸರಕಾರಗಳು ಬಹಿರಂಗಗೊಳಿಸುವುದಿಲ್ಲ]. ಬಹಳಷ್ಟು ಮಂದಿಯ ದೇಹವನ್ನು ಇನ್ನೂ ಪತ್ತೆ ಹಚ್ಚಲಾಗಿಲ್ಲ. 80%ಗಿಂತ ಹೆಚ್ಚು ಸಂಖ್ಯೆಯ ಸೈನಿಕರ ಮರಣಕ್ಕೆ ಕಾರಣವಾಗಿದ್ದು ಎದುರಾಳಿಗಳ ಬಂದೂಕಾಗಲೀ, ಆಧುನಿಕ ಕ್ಷಿಪಣಿಗಳಾಗಲೀ ಅಲ್ಲ. ದೇಶಗಡಿಗಳ ಲೆಕ್ಕಿಸದೆ ಈ ಸೈನಿಕರನ್ನು ಬಲಿ ತೆಗೆದುಕೊಂಡಿರುವುದು ಪ್ರಕೃತಿ! ಪ್ರಕೃತಿಯ ಪ್ರಮುಖಾಯುಧ ಹಿಮ!! ಇದು ಸಿಯಾಚಿನ್ ಯುದ್ಧಭೂಮಿ.
ಆಪರೇಷನ್ ಮೇಘದೂತ: –
ಬಾಂಗ್ಲಾದೇಶದ ವಿಮೋಚನಾ ಯುದ್ಧದ ನಂತರ 1972ರಲ್ಲಿ ಸಿಮ್ಲಾ ಒಪ್ಪಂದಕ್ಕೆ ಯು.ಎನ್ ನೇತೃತ್ವದಲ್ಲಿ ಭಾರತ ಮತ್ತು ಪಾಕಿಸ್ತಾನ ಸಹಿ ಹಾಕುತ್ತವೆ. ಗಡಿರೇಖೆಯನ್ನು ವಿವರಿಸುವ ಆ ಒಪ್ಪಂದದಲ್ಲಿ ಸಿಯಾಚಿನ್ ಸೇರಿರಲಿಲ್ಲ. ಹಿಮಚ್ಛಾದಿತ ಮರುಭೂಮಿಯ ಮೇಲೆ ಹಕ್ಕು ಸಾಧಿಸಲು ಇವೆರಡೂ ದೇಶಗಳು ಬಡಿದಾಡಲಾರವು ಎಂದುಕೊಂಡಿತ್ತು ಯು.ಎನ್. ಆದರೆ ನಡೆದಿದ್ದೇ ಬೇರೆ! 1967ರಿಂದಲೇ ಅಮೆರಿಕಾದ ರಕ್ಷಣಾ ಸಂಸ್ಥೆಗಳು ತಯಾರಿಸಿದ ನಕ್ಷೆಗಳಲ್ಲಿ ಸಿಯಾಚಿನ್ ಪ್ರದೇಶವನ್ನು ಯಾವುದೇ ಐತಿಹಾಸಿಕ ಆಧಾರಗಳಿಲ್ಲದಾಗ್ಯೂ ಪಾಕಿಸ್ತಾನದ ಭಾಗವಾಗಿ ತೋರಿಸಲಾರಂಭಿಸಿತು. ಪಾಕಿಸ್ತಾನ ಕೂಡ ಅಮೆರಿಕದ ಕುಮ್ಮಕ್ಕಿನಿಂದಾಗಿ ಕ್ರಮೇಣವಾಗಿ ಸಿಯಾಚಿನ್ ಪ್ರದೇಶದ ಮೇಲೆ ಹಕ್ಕು ಚಲಾಯಿಸಲಾರಂಭಿಸಿತು. ಪಾಕಿನ ಈ ವರ್ತನೆಯನ್ನು ಗಮನಿಸಿದ ಭಾರತ ಸರಕಾರ ಕೂಡ ತನ್ನ ಸೈನ್ಯವನ್ನು ‘ಎತ್ತರದ ಪ್ರದೇಶಗಳಲ್ಲಿ ಯುದ್ಧ ತರಬೇತಿಯ’ ನೆಪದಲ್ಲಿ ಸಿಯಾಚಿನ್ ಪ್ರದೇಶಕ್ಕೆ ನಿಯೋಜಿಸಲಾರಂಭಿಸಿತು.
ಕುದಿಯಲಾರಂಭಿಸಿದ ದ್ವೇಷ 1984ರಲ್ಲಿ ಯುದ್ಧ ರೂಪವನ್ನು ಪಡೆಯಿತು. ಸಿಯಾಚಿನ್ ಪ್ರದೇಶವನ್ನು ಹಿಂಪಡೆದುಕೊಳ್ಳಲು ಆಪರೇಷನ್ ಮೇಘದೂತದ ಹೆಸರಿನಲ್ಲಿ ಭಾರತದ ಸೈನಿಕರು ಸಿಯಾಚಿನ್ ಏರಲಾರಂಭಿಸಿದರು. ಸರಿಸುಮಾರು ಸಾವಿರ ಚದುರ ಮೈಲು ಪ್ರದೇಶವನ್ನು ವಶಪಡಿಸಿಕೊಳ್ಳುವುದರಲ್ಲಿ ಭಾರತ ಸಫಲವಾಗಿ ಯುದ್ಧದಲ್ಲಿ ಗೆಲುವು ಪಡೆಯಿತು.
ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ
– ಚಕ್ರವರ್ತಿ ಸೂಲಿಬೆಲೆ
ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!?
ನಾಲ್ಕು ವರ್ಷಗಳ ತಪಸ್ಸು ಪೂರ್ಣಗೊಂಡಿದೆ. ೭೦೦ ಕಿ.ಮೀ.ದೂರದವರೆಗೂ ಹೋಗಿ ಶತ್ರು ಠಾಣ್ಯ ನಾಶ ಮಾಡಿಬರಬಲ್ಲ. ಅಗ್ನಿ ೧ನ್ನು ನಭಕ್ಕೆ ಹಾರಿಬಿಟ್ಟಾಗಿನಿಂದಲೂ ೫,೦೦೦ ಕಿ.ಮೀ. ದೂರಕ್ಕೆ ಹೋಗಬಲ್ಲ ಅಗ್ನಿಯ ಕನಸು ಕಾಣುತ್ತಲೇ ಇದ್ದವರು ನಾವು. ಮೊನ್ನೆ ಅಗ್ನಿ ೫ ಯಶಸ್ವಿಯಾಗಿ ಉಡಾವಣೆಗೊಂಡು ಸೈನ್ಯದ ಶಕ್ತಿಯನ್ನು ನೂರ್ಮಡಿಗೊಳಿಸಿದಾಗ ಆ ಕನಸು ನನಸಾಯಿತು. ಕನಸು ನನಸುಗಳ ಕತೆ ಏನೇ ಇರಲಿ. ಸೈನ್ಯದ ಸಾಮರ್ಥ್ಯದ ಕುರಿತಂತೆ ನಡೆಯುತ್ತಿದ್ದ ವಾದ ವಿವಾದಗಳಿಂದ ಈ ಪರೀಕ್ಷೆ ಕೇಂದ್ರ ಸರ್ಕಾರವನ್ನಂತೂ ಪಾರುಮಾಡಿತು. ಅಗ್ನಿಯೂ ತಂಪೆರೆಯಬಲ್ಲದೆಂದರೆ ಹೀಗೇ ನೋಡಿ!
ಈ ನಾಲ್ಕು ವರ್ಷಗಳ ಪ್ರಯತ್ನ ಅಂತ್ಯ ಕಾಣಲು ಇನ್ನೂ ಸ್ವಲ್ಪ ಕಾಲಾವಕಾಶ ಬೇಕಿತ್ತು. ಆದರೆ ರಕ್ಷಣಾ ಸಚಿವ ಆಂಟನಿ ವಿಜ್ಞಾನಿಗಳಿಗೆ ದುಂಬಾಲು ಬಿದ್ದು ಈ ಪ್ರಯೋಗವನ್ನು ಸಾಧ್ಯವಾಗಿಸಿ ಯಶಸ್ಸು ಗಳಿಸಿಕೊಂಡರು. ಈ ನಿಟ್ಟಿನಲ್ಲಿ ಡಿಆರ್ಡಿಓಗೆ ಸಹಕಾರಿಯಾಗಿ ಹಲವು ವೈಜ್ಞಾನಿಕ ಸಂಸ್ಥೆಗಳು ದುಡಿದಿವೆ. ಯಶಸ್ಸಿನ ಈ ಹೊತ್ತಿನಲ್ಲಿ ಆ ವಿಜ್ಞಾನಿಗಳಿಗೆಲ್ಲ ಒಂದು ಪ್ರೀತಿಯ ಸಲಾಮು.
ಶಾರ್ಟ್ ವೇವ್ ರೇಡಿಯೋ ಪ್ರಸಾರದಲ್ಲಿ ಕನ್ನಡದ ದನಿಯಿಲ್ಲ
-ಸಾತ್ವಿಕ್ ಎನ್ ವಿ
ಕನ್ನಡಿಗನೊಬ್ಬ ತನ್ನ ಕೆಲಸದ ನಿಮಿತ್ತ ಕರ್ನಾಟಕದ ಹೊರಗೆ ಬದುಕಬೇಕಾಗಿ ಬಂದರೆ ಆತನಿಗೆ ಕನ್ನಡ ಆಕಾಶವಾಣಿ ಕೇಳಲು ಸಾಧ್ಯವಿಲ್ಲ. ಕಾರಣ, ಕಿರುತರಂಗಾಂತರ ಅಂದರೆ ಶಾರ್ಟ್ವೇವನಲ್ಲಿ ಕನ್ನಡದ ಯಾವುದೇ ಆಕಾಶವಾಣಿ ಕೇಂದ್ರ ಪ್ರಸಾರ ಮಾಡುತ್ತಿಲ್ಲ. ಆದರೆ ಇಂಥ ಪರಿಸ್ಥಿತಿ ಇತರೆ ಭಾಷಿಕರಿಗೆ ಇದೆಯೇ? ಇಲ್ಲ. ಕನ್ನಡವನ್ನು ಬಿಟ್ಟು ಮಿಕ್ಕೆಲ್ಲ ದಕ್ಷಿಣಭಾರತದ ಭಾಷೆಗಳಿಗೂ ಈ ಸೌಲಭ್ಯವಿದೆ.
ಏನಿದು ಕಿರುತರಂಗಾತರದಲ್ಲಿ ರೇಡಿಯೋ ಪ್ರಸಾರ?
ಬಾನುಲಿ ಪ್ರಸಾರದಲ್ಲಿ ಶಾರ್ಟ್ ವೇವ್(SW), ಮೀಡಿಯಂ ವೇವ್(MW) ಮತ್ತು ಫ್ರಿಕ್ವೇನ್ಸಿ ಮೊಡೊಲೇಷನ್ (FM) ಎಂಬ ಮೂರು ರೀತಿಯ ತರಂಗಾತರಗಳನ್ನು ಬಳಸಲಾಗುತ್ತದೆ. ಈಗ ಕರ್ನಾಟಕದ ಆಕಾಶವಾಣಿ ಕೇಂದ್ರಗಳು ಕೇವಲ ಎಂ.ಡಬ್ಲ್ಯೂ ಮತ್ತು ಎಫ್.ಎಂ ಗಳಲ್ಲಿ ಮಾತ್ರ ತಮ್ಮ ಕಾರ್ಯಕ್ರಮಗಳನ್ನು ಪ್ರಸರಿಸುತ್ತಿವೆ. ಆದರೆ ಎಂ.ಡಬ್ಲ್ಯೂ ಮತ್ತು ಎಫ್.ಎಂ ತರಂಗಗಳ ದೊಡ್ಡ ಕೊರತೆ ಎಂದರೆ ಈ ಅಲೆಗಳು ಬಹಳ ದೂರ ಚಲಿಸಲಾರವು. ಆದರೆ ಶಾರ್ಟ್ ವೇವ್ ಹಾಗಲ್ಲ. ಅದರ ಚಲನೆಯ ಶಕ್ತಿ ಖಂಡಾಂತರ ವ್ಯಾಪ್ತಿಯದ್ದು. ಇಂದು ನಾವು ಕೇಳುತ್ತಿರುವ ಬಿಬಿಸಿ, ವಾಯ್ಸ್ ಆಫ್ ಅಮೆರಿಕಾ, ರೇಡಿಯೋ ಸಿಲೋನ್, ಚೈನಾ ರೇಡಿಯೋ ಇಂಟರ್ ನ್ಯಾಷನಲ್ ಇತ್ಯಾದಿಗಳು ಇದೇ ತರಂಗಗಳನ್ನು ಬಳಸಿಕೊಳ್ಳುತ್ತವೆ. ಈ ತರಂಗಗಳನ್ನು ಬಳಸಿ ಪ್ರಪಂಚದ ಯಾವುದೇ ನಿರ್ದಿಷ್ಟ ಭಾಗಕ್ಕೆ ಪ್ರಸಾರವನ್ನು ತಲುಪಿಸಲು ಸಾಧ್ಯ. ಇದನ್ನು ಬೀಮಿಂಗ್ ಎಂದು ಕರೆಯಲಾಗುತ್ತದೆ. ಮತ್ತಷ್ಟು ಓದು 
ದನ ತಿಂದ್ರೆ ತಪ್ಪು ಜನಾನ್ ಬೇಕಾದ್ರೆ ತಿವ್ಕೊಳ್ಳಿ! …
-ಅಶೋಕ್ ಕೆ.ಆರ್

ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ
– ರಾಕೇಶ್ ಶೆಟ್ಟಿ
ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…
ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!
‘ಕೋಮುವಾದ ಮತ್ತು ಮಹಿಳೆ’ ಎಂಬ ಲೇಖನಕ್ಕೊಂದು ಪ್ರತಿಕ್ರಿಯೆ
– ಡಾ.ಜಿ. ಭಾಸ್ಕರ ಮಯ್ಯ
ಸಬಿಹಾರವರ ಮಹಿಳೆ ಮತ್ತು ಕೋಮುವಾದ ಇಂದು ವಿವಾದಕ್ಕೆ ಒಳಗಾಗಿರುವುದು ಜನರ ಕೋಮುವಾದೀಕರಣದ ಪ್ರಕ್ರಿಯೆ ಎಷ್ಟೊಂದು ಉಲ್ಬಣಿಸಿದೆ ಎನ್ನುವುದಕ್ಕೆ ಸಾಕ್ಷಿ. ಸಬಿಹಾರವರ ಲೇಖನದ
ಯಾವ ಒಂದು ವಾಕ್ಯವೂ ಅಸತ್ಯದಿಂದ ಕೂಡಿಲ್ಲ. ಪೂರ್ವಾಗ್ರಹಪೀಡಿತವಾಗಿಲ್ಲ. ಅದು ವಾಸ್ತವಕ್ಕೆ ಹಿಡಿದ ಕನ್ನಡಿಯಂತಿದೆ. ಹಾಗೆ ನೋಡಿದರೆ, ಗುಜರಾತಿನ ಬಗ್ಗೆ ಲೇಖಕಿ ಹೇಳಿರುವುದು ಕಡಿಮೆಯೆ. ಅಲ್ಲಿಯ ನರಮೇಧ ಮತ್ತು ಮಹಿಳೆಯರ ಮೇಲಿನ ಭಯಾನಕ ಅತ್ಯಾಚಾರ ಮಧ್ಯಯುಗದ ಯಾವುದೇ ಧರ್ಮಯುದ್ಧ, ಕ್ರುಸೇಡ್ ಮತ್ತು ಜಿಹಾದ್ಗೆ ಕಡಿಮೆಯಿಲ್ಲ. ಮನುಷ್ಯತ್ವದಲ್ಲಿ ನಂಬಿಕೆ ಇರುವವರಿಗೆ ಆಕ್ರೋಶ ಉಂಟಾಗುವಂತಹ ಸನ್ನಿವೇಶದ ಚಿತ್ರಣವನ್ನು ಲೇಖಕಿ ಅತ್ಯಂತ ಸಹನೆಯಿಂದ ಉಲ್ಲೇಖಿಸುತ್ತಾರೆ. ಕೋಮುವಾದದ ವಿವಿಧ ಮುಖಗಳನ್ನು ಮತ್ತು ಆಯಾಮಗಳನ್ನು ಚರ್ಚಿಸುತ್ತಾರೆ. ಆದರೆ, ಲೇಖನದ ಆರಂಭದಲ್ಲಿ ಫಣಿರಾಜರವರು ಕೋಮುವಾದದ ಕುರಿತು ಹೇಳಿದ ಮಾತಿನ ಒಂದು ಉಲ್ಲೇಖವಿದೆ. ಅದು …ಬಹುಸಂಖ್ಯಾತರ ಸಂಸ್ಕೃತಿಗೆ ಅಲ್ಪಸಂಖ್ಯಾತರು ಹೊರಗಿನವರು ಎಂದು ವಾದಿಸಿ ದ್ವೇಷ ತಿರಸ್ಕಾರಗಳನ್ನು ಬೆಳೆಸುವುದೇ ಕೋಮುವಾದ – ಕೋಮೂವಾದಕ್ಕೆ ಇಂತಹ ಸರಳ ವ್ಯಾಖ್ಯೆ ಸರಿಯಲ್ಲ. ಫಣಿರಾಜ್ ಮತ್ತು ಜಿ. ರಾಜಶೇಖರ್ ಕೋಮುವಾದವನ್ನು ವಿರೋಧಿಸುವಲ್ಲಿ ನಿಷ್ಪಕ್ಷಪಾತಿಗಳಾಗಿರದೆ, ಒಂದು ಕೋಮಿನ ಕೋಮುವಾದದ ಕುರಿತು ಮೌನವಹಿಸುವುದು ಅಥವಾ ಅಂತಹ ಸಂಸ್ಥೆಗಳೊಂದಿಗೆ ಸಂಬಂಧವನ್ನಿರಿಸಿಕೊಳ್ಳುವುದು ನಿಜಕ್ಕೂ ಆಕ್ಷೇಪಾರ್ಹ. ಆದರೆ ಸಬಿಹಾರವರ ಬರವಣಿಗೆ ಈ ನಿಟ್ಟಿನಲ್ಲಿ ದೋಷಮುಕ್ತವಾಗಿದೆ. ಅವರು ಪಾಕಿಸ್ತಾನ, ಬಾಂಗ್ಲಾ ಮತ್ತು ತಸ್ಲೀಮಾ ನಜರೀನ್ ಅವರನ್ನು ಉಲ್ಲೇಖಿಸುತ್ತಾ ನೆರೆಯ ದೇಶಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲಿನ ದೌರ್ಜನ್ಯದ ಕುರಿತೂ ಹೇಳುತ್ತಾರೆ. ಸಬಿಹಾರವರ ಲೇಖನ ಈ ನಿಟ್ಟಿನಲ್ಲಿ ವಾಸ್ತವವಾದೀ, ಮಾನವತಾವಾದೀ ಬರವಣಿಗೆಯೆಂಬುದು ನಿಸ್ಸಂಶಯ.
ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ – ಪ್ರಗತಿಪರರು
– ಡಾ.ಭಾಸ್ಕರ್ ಮಯ್ಯ
ಆಧುನಿಕ ತತ್ವಶಾಸ್ತ್ರದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ. ವೇದಾಂತ ದರ್ಶನಕ್ಕೆ ನೂರಾರು ವ್ಯಾಖ್ಯಾನಗಳಿವೆ. ಆದರೆ ಅವುಗಳಲ್ಲಿ ಪ್ರಮುಖ ಸ್ಥಾನವಿರುವುದು `ಶಾಂಕರ ವೇದಾಂತ’ಕ್ಕೆ. ಆದರೆ, ಶಂಕರರು ವೇದಾಂತ ದರ್ಶನಕ್ಕೆ ವ್ಯಾಖ್ಯಾನ ಬರೆದಿರುವುದು ಭಾವವಾದೀ ದೃಷ್ಟಿಯಿಂದ ಶಂಕರರು ಭಾವವಾದದ ಮೇರು ಶಿಖರ ಎಂಬಲ್ಲಿ ಎರಡು ಮಾತಿಲ್ಲ. ಅವರಿಗೆ ಸರಿಗಟ್ಟುವ ಭಾವವಾಣಿ ದಾರ್ಶನಿಕರುಪಾಶ್ಚಾತ್ಯ ದರ್ಶನ ಶಾಸ್ತ್ರದಲ್ಲಿ ದೊರಕುವುದಿಲ್ಲ. ಆದರೆ, ವಿವೇಕಾನಂದರು ವೇದಾಂತಕ್ಕೆ ವ್ಯವಹಾರಿಕ ರೂಪವನ್ನು ಕೊಟ್ಟರು. ಈ ಬಗೆಯ ವ್ಯಾಖ್ಯಾನ ಕೂಡಾ ತತ್ವಶಾಸ್ತ್ರಕ್ಕೆ ನವನವೀನ.
ಅಗಾಧ ಪ್ರತಿಭೆ
1863ನೆಯ ಇಸವಿ ಜನವರಿ 12 ರಂದು ಕಲ್ಕತ್ತಾದ ಒಂದು ಕ್ಷತ್ರಿಯ ಕುಟುಂಬದಲ್ಲಿ ಜನಿಸಿದ ವಿವೇಕಾನಂದರು ಅಗಾಧ ಪ್ರತಿಭೆಯ ವ್ಯಕ್ತಿ. ಆ ಕಾಲದಲ್ಲಿಯೇ ಬಿ.ಎ. ಶಿಕ್ಷಣ ಮುಗಿಸಿದ ವಿವೇಕಾನಂದರು ( ಮೂಲ ಹೆಸರು ನರೇಂದ್ರನಾಥ) ವಿದ್ಯಾರ್ಥಿ ಜೀವನದಲ್ಲಿ ನಾಸ್ತಿಕರಾಗಿದ್ದರು. ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ಅವರ ಚಿಂತನಾ ಕ್ರಮವೇ ಬದಲಾಯಿತು.ರಾಮಕೃಷ್ಣರು ಮಹಾನ್ ಸಂತರಾಗಿದ್ದರೂ ಅನಕ್ಷರಸ್ತರು. ವಿವೇಕಾನಂದರು ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯ ಪ್ರಖಾಂಡ ಪಂಡಿತರು. ರಾಮಕೃಷ್ಣ ಪರಮಹಂಸರು ಮತ್ತು ವಿವೇಕಾನಂದರು ಒಂದೇ ಜೀವನದ ಎರಡು ಮುಖಗಳು ಅಥವಾ ಒಂದೇ ಸತ್ಯದ ಎರಡು ರೂಪಗಳು. ಇನ್ನೊಂದು ಬಗೆಯಲ್ಲಿ ಹೇಳುವುದಾದರೆ ರಾಮಕೃಷ್ಣರು ಅನುಭೂತಿ ಆದರೆ ವಿವೇಕಾನಂದರು ಅವರ ವ್ಯಾಖ್ಯಾನ ಅಭಿವ್ಯಕ್ತಿ.
ವಿವೇಕಾನಂದರು ಹಾರ್ಬರ್ತ್ ಸ್ಪೆನ್ಸರ್ ಹಾಗೂ ಜಾನ್ ಸ್ಟುವರ್ಟ್ರಮಿಲ್ ಅವರ ಪ್ರೇಮಿಯಾಗಿದ್ದರು. ಶೆಲಿ, ವರ್ಡ್ಸ್ವರ್ತ್ರ ದಾರ್ಶನಿಕತೆ, ಹೆಗಲ್ನ ವಸ್ತುನಿಷ್ಠ ಆದರ್ಶವಾದ ಹಾಗೂ ಫ್ರಾನ್ಸಿನ ರಾಜ್ಯಕ್ರಾಂತಿ ವಿವೇಕಾನಂದರನ್ನು ತೀವ್ರವಾಗಿ ಪ್ರಭಾವಿಸಿತ್ತು.
ವಿವೇಕಾನಂದರು ಕೇವಲ 39 ವರ್ಷಗಳ ಕಾಲ ಜೀವಿಸಿದ್ದರೂ ಅವರ ಸಂದೇಶ ಇವತ್ತಿನ ಕೋಮುವಾದಿ ರಾಜಕೀಯಕ್ಕೆ ಅತ್ಯಂತ ಪ್ರಬಲವಾದ ಶಸ್ತ್ರ. ರಾಮಮೋಹನ್ ರಾಯ್, ಕೇಶವ ಚಂದ್ರ ಸೇನ್, ದಯಾನಂದ ಸರಸ್ವತಿ, ರಾನಡೆ, ಅನಿಬೆಸೆಂಟ್ ಮತ್ತು ರಾಮಕೃಷ್ಣರು ಹದಮಾಡಿದ ನೆಲದಲ್ಲಿ ವಿವೇಕಾನಂದರು ಅಶ್ವತ್ಥದಂತೆ ಬೆಳೆದು ನಿಂತರು. ಇಂದು ಕೋಮುವಾದಿಗಳು ಆ ಅಶ್ವತ್ಥದ ರೆಂಬೆಕೊಂಬೆಗಳನ್ನು ಕಡಿದು ಯೂಪಸ್ಥಂಭ (ಬಲಿಸ್ಥಂಭ)ವನ್ನಾಗಿ ರೂಪಿಸುತ್ತಿದ್ದಾರೆ.
ಕಾಲದ ಕನ್ನಡಿ: ನೈತಿಕತೆಗೆ ಇ೦ಬು ನೀಡದ,ಬುಧ್ಧಿ ಬಲಿತಿರದ ರಾಜಕಾರಣವೆ೦ದರೆ ಇದೇ!
– ಕೆ.ಎಸ್ ರಾಘವೇಂದ್ರ ನಾವಡ
ಸುಮಾರು ೩ ತಿ೦ಗಳಾಯಿತು.. ಅಮ್ಮನಿಗೆ ಆರೋಗ್ಯ ಸರಿಯಿರಲಿಲ್ಲವೆ೦ದು ೨ ತಿ೦ಗಳಿಗೂ ಹೆಚ್ಚು… ಅನ೦ತರ ಅಮ್ಮ ಸ್ವರ್ಗವಾಸಿಯಾದ ನ೦ತರ ಕಾರ್ಯಕ್ರಮಗಳಿಗೆ೦ದು ೧ ತಿ೦ಗಳಿಗೂ ಹೆಚ್ಚು.. ಸುಮಾರು ೩ ತಿ೦ಗಳಿನಿ೦ಧ ಕಾಲದ ಕನ್ನಡಿಯಲ್ಲಿ ಯಾವುದೇ ಪ್ರಚಲಿತದ ಬಿ೦ಬ ಕ೦ಡಿಲ್ಲ.. ಏನು ಬರೆಯೋದಪ್ಪಾ? ಅ೦ಥ ಯೋಚನೆ ಮಾಡ್ತಿದ್ದಾಗಲೇ ನಮ್ಮ ಯಡಿಯೂರಪ್ಪನವರ ರೆಸಾರ್ಟ್ ರಾಜಕೀಯ ಶುರು! ಒಳ್ಳೆಯ ವಿಷಯಕ್ಕಾಗಿ ಒದ್ದಾಡ್ತಿದ್ದ ನನಗೆ … ಈಗ ಈ ಲೇಖನ..
ಕಾಲದ ಕನ್ನಡಿಗೆ ಅನಿಸುವುದಿಷ್ಟೇ.. ಮು೦ದೆ೦ದೂ ಭಾ.ಜ.ಪಾ. ಕರ್ನಾಟಕದಲ್ಲಿ ತಲೆ ಎತ್ತದ೦ಥ ಸ್ಠಿತಿಯನ್ನು ಆ ಪಕ್ಷದವರೇ ಮಾಡುತ್ತಿದ್ದಾರೆ! ಬುಧ್ಧಿವ೦ತರ ಪಕ್ಷ.. ಎಲ್ಲರೂ ಆದರು.. ಇವರನ್ನೊಮ್ಮೆ ನೋಡೋಣ.. ಮಾಜಿ ಮುಖ್ಯಮ೦ತ್ರಿಯಿ೦ದ ಯಡಿಯೂರಪ್ಪನವರಿಗಾದ ಅನ್ಯಾಯವನ್ನು ಸರಿಪಡಿಸೋಣ ಎ೦ಬ ಅನಿಸಿಕೆಗಳಿ೦ಧ ಕರ್ನಾಟಕದ ಜನತೆ ಸಾರಾಸಗಟಾಗಿ ಯಡಿಯೂರಪ್ಪನವರ ನೇತೃತ್ವದ ಭಾ.ಜ.ಪಾ.ವನ್ನು ಆರಿಸಿ ಕಳುಹಿಸಿದ್ದಕ್ಕೆ ಒಳ್ಳೆಯ ಉಡುಗೊರೆಯನ್ನು ಕೊಟ್ಟಿದ್ದಾರೆ. ಹತ್ತಾರು ಉಪಚುನಾವಣೆಗಳು.. ಒ೦ದರ ಮೇಲೊ೦ದರ೦ತಿನ ಸಚಿವರ ಭಾನಗಡಿಗಳು.. ಯಡಿಯೂರಪ್ಪನವರ ಜೈಲು ವಾಸ.. ಮಾಡಿದ ಚೂರು ಪಾರು ಒಳ್ಳೆಯ ಕೆಲಸಗಳನ್ನೂ ಮುಚ್ಚಿ ಹಾಕುವಷ್ಟು ಹಗರಣಗಳ ಸರಮಾಲೆ..!
ಇನ್ನೇನೂ ಬಾಕಿ ಉಳಿದಿಲ್ಲ.. ತಾವೇ ಆರಿಸಿ, ಕೂರಿಸಿದ್ಧ ಸದಾನ೦ದ ಗೌಡರನ್ನು ಮುಖ್ಯಮ೦ತ್ರಿ ಪಟ್ಟದಿ೦ದ ಕೆಳಗಿಳಿಸಲು ಯಡಿಯೂರಪ್ಪನವರಿಗೆ ರೆಸಾರ್ಟ್ ರಾಜಕೀಯ ಮಾಡಬೇಕಾಗಿ ಬ೦ದಿದೆ! “ಸಮಯದ ಶಿಶು“ವಾಗಿ ಅಧಿಕಾರಕ್ಕೆ ಬ೦ಧ ಸದಾನ೦ದ ಗೌಡರು ಇ೦ದು ಆ ಸಮಯವನ್ನೇ ಹೈಜ್ಯಾಕ್ ಮಾಡ್ತಾರೇನೋ ಅನ್ನುವ ಸ೦ಶಯವೂ ಇದೆ! ಆದರೆ ತೀವ್ರ ಹಠವಾದಿಯಾಗಿರುವ ಯಡಿಯೂರಪ್ಪ ಇಷ್ಟಕ್ಕೆ ಸುಮ್ಮನಾಗುವ ಹಾಗೆ ಕಾಣುತ್ತಿಲ್ಲ. ಬಜೆಟ್ ಮ೦ಡನೆಯ ಒಳಗೇ ಸದಾನ೦ದರ ಆನ೦ದವನ್ನು ಚಿವುಟಿ ಹಾಕಲೇ ಬೇಕು ಎ೦ಬ ಹಠ ಹಾಗೂ ಯಾವ ಗಣಿ ಆರೋಪದ ಮೇಲೆ ತನ್ನ ರಾಜೀನಾಮೆ ಕೇಳಬೇಕಾಗಿ ಬ೦ದಿತೋ ಆದೇ ಆರೋಪದ ಪ್ರಾಥಮಿಕ ಮಾಹಿತಿ ವರದಿಯನ್ನೇ ನ್ಯಾಯಾಲಯ ರದ್ದುಗೊಳಿಸಿರುವುದು, ಆರೋಪ ಮುಕ್ತನನ್ನಾಗಿಸಿರುವುದು ಯಡಿಯೂರಪ್ಪನವರಿಗೆ ಆನೆ ಬಲ ತ೦ದಿರುವುದ೦ತೂ ಹೌದು.
ಅಟಲ್ ಜಿ ನಮಗೆಷ್ಟು ಗೊತ್ತು?
-ನಾಗರಾಜ್ ಎಂ ಎಂ
ಸ್ನೇಹಿತರೇ ಹೇಗಿದ್ದೀರಿ? ಇವತ್ತು ಮತ್ತೆ ಸ್ವಲ್ಪ ಟೈಮ್ ಮಾಡ್ಕೊಳಿ, ಏನಾದ್ರೂ ಹಾಗೆ ಮಾತಾಡೋಣ ಅಲ್ವಾ? ನೀವೇ ನೋಡಿದ್ದೀರಲ್ಲ ಇತ್ತೀಚೆಗೆ ಟಿವಿ ಚಾನಲ್ ಗಳನ್ನ ನೋಡೋಕೆ ಆಗದೆ ಇರೋವಷ್ಟರಮಟ್ಟಿಗೆ ನಮ್ಮ ಮಾನ್ಯ ಮಂತ್ರಿಗಳು, ರಾಜಕಾರಣಿಗಳು ಹೊಲಸು ಮಾಡೋದನ್ನ, ಇನ್ನೂ ಕೆಲವರು ಅದರ ಪರ ವಿರೋಧ ಮಾತಾಡಿ ಮಜಾ ಕೊಡೋದನ್ನ!! ಅಲ್ವೇ? ಆದರೆ ನಿಷ್ಟಾವಂತರಾಗಿ ದೇಶಕ್ಕಾಗಿ ದೇಶದ ಪ್ರಗತಿಗಾಗಿ ಹೋರಾಡಿದ ಎಷ್ಟೋ ಜನರಿದ್ದಾರೆ ಅವರಲ್ಲಿ ಒಬ್ಬರು ಹಾಗೂ ಮುಖ್ಯವಾದವರು ಮಾನ್ಯ ಅಟಲ್ ಬಿಹಾರಿ ವಾಜಪೇಯಿಯವರು…….. ಅವರ ಬಗ್ಗೆ ನಮಗೆ ಎಷ್ಟು ಗೊತ್ತು? ತಿಳಿಯುವ ಸಣ್ಣ ಪ್ರಯತ್ನ ಮಾಡೋಣ ಬನ್ನಿ.
ಅಟಲ್ ಅವರು ಹುಟ್ಟಿದ್ದು ಕ್ರಿಸ್ ಮಸ್ ದಿನದಂದು ಅದು 1924 ರಲ್ಲಿ ಕೃಷ್ಣ ದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರಿಗೆ, ಮಧ್ಯ ಪ್ರದೇಶದ ಗ್ವಾಲಿಯರ್ ಹತ್ತಿರದ ಶಿಂದೆ ಕಿ ಚವ್ವಾಣಿ ಅನ್ನೋ ಹಳ್ಳಿಯಲ್ಲಿ, ತಂದೆ ಒಬ್ಬ ಕವಿ ಹಾಗೆ ಸಾಮಾನ್ಯ ಶಾಲೆಯ ಮೇಷ್ಟ್ರು……. ಹಾಗೆ ಅಟಲ್ ಅವರ ಅಜ್ಜ ಪಂಡಿತ್ ಶ್ಯಾಮ್ ಲಾಲ್ ವಾಜಪೇಯಿಯವರು. ಅಟಲ್ ಅವರ ಪದವಿಯನ್ನ ವಿಕ್ಟೋರಿಯಾ ಕಾಲೇಜಿನಿಂದ (ಈಗ ಲಕ್ಷ್ಮಿ ಬಾಯಿ ಕಾಲೇಜು) ಪಡೆದರು. ಹಿಂದಿ, ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದ ಅಟಲ್ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನ ಕಾನ್ಪುರದ ಡಿ. ಎ. ವಿ ಕಾಲೇಜಿನಿಂದ ಪಡೆದರು. ನಂತರ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್. ಎಸ್. ಎಸ್ )ವನ್ನು ಸೇರಿದರು. ವೀರ ಅರ್ಜುನ ಹಾಗೂ ಪಾಂಚಜನ್ಯ ಅನ್ನುವ ಎರಡು ಪತ್ರಿಕೆಗಳಿಗೆ ಪತ್ರಕರ್ತರಾಗಿ ಕವಿಯಾಗಿ ಸೇವೆ ಸಲ್ಲಿಸಿದರು….. ನಿಮಗೆ ಗೊತ್ತ? ಭಾರತದ ಅವಿವಾಹಿತ ಪ್ರದಾನ ಮಂತ್ರಿ ಕೇವಲ ಅಟಲ್ ಜಿ ಮಾತ್ರ…..!!
ಅಟಲ್ ಅವರ ಮೊದಲ ರಾಜಕೀಯ ಜೀವನ ಶುರುವಾಗಿದ್ದು 1942 ರಲ್ಲಿ ಕ್ವಿಟ್ ಇಂಡಿಯ (ಬ್ರಿಟಿಷರೇ ಬಾರತ ಬಿಟ್ಟು ತೊಲಗಿ) ಚಳುವಳಿಯಲ್ಲೀ ಭಾಗವಹಿಸುವ ಮೂಲಕ, ನಂತರ 23 ದಿನಗಳ ಕಾಲ ಜೈಲು ವಾಸ ಅನುಭವಿಸ ಬೇಕಾಯಿತು, 1953 ರಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪರಿಚಯ ಭಾರತೀಯ ಜನ ಸಂಘದ ಮೂಲಕ ಆಯಿತು. 1957 ರಲ್ಲಿ ಮೊದಲ ಬಾರಿಗೆ ಲೋಕ ಸಭೆಯ ಸದಸ್ಯರಾಗಿ ಆಯ್ಕೆ ಆದರು. ನಂತರದ ದಿನಗಳಲ್ಲಿ ಇವರ ಚತುರತೆಯನ್ನ ಕಂಡ ನೆಹರು ಜಿ ಹೇಳಿದ್ರಂತೆ, ಈ ವ್ಯಕ್ತಿ ಮುಂದೆ ಪ್ರದಾನಿ ಆಗ್ತಾರೆ ಅಂತ. ಅವರ ಅಸಾಮಾನ್ಯ ಬುದ್ದಿವಂತಿಕೆಯಿಂದಾಗಿ ಎಷ್ಟರ ಮಟ್ಟಿಗೆ ಬೆಳೆದರು ಎಂದರೆ ಜನ ಸಾಮಾನ್ಯರಲ್ಲಿ ಭಾರತೀಯ ಜನ ಸಂಘ ಅನ್ನುವ ಹೆಸರೇ ಕೇಳದ ಪಕ್ಷವನ್ನ ಬುಡದಿಂದ ಕಟ್ಟಿ ಬೆಳಸಿದರು ಅದಕ್ಕೆ ಸಾಥ್ ಕೊಟ್ಟವರು ಲಾಲ್ ಕೃಷ್ಣ ಅಡ್ವಾಣಿ, ನಾನಾಜಿ ದೇಶಮುಖ್ ಹಾಗೂ ಬಾಲರಾಜ್ ಮಧೋಕ್ ಅವರು.
ಇದು ಭರತವರ್ಷ : ಆ ಹೆಣ್ಣು ಮಗಳ ಹೋರಾಟಕ್ಕೆ ಅಂತ್ಯ ಇದೆಯಾ???
– ರಾಕೇಶ್ ಶೆಟ್ಟಿ







