ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

9
ಫೆಬ್ರ

ಕರ್ನಾಟಕ ಬಿ.ಜೆ.ಪಿ ನಾಯಕರೇ ಏನ್ರೀ ನಿಮ್ ಅವಸ್ಥೆ…?

-ನಿತಿನ್ ರೈ ಕುಕ್ಕುವಳ್ಳಿ
ಅತೀ  ಪ್ರಸಿದ್ದಿ ಪಡೆದ ಗಾದೆ ಮಾತೊಂದಿದೆ “ನಾಯಿ ಬಾಲ ಯಾವತ್ತಿದ್ರೂ ಡೊಂಕೆ ” ಈ ಮಾತು ಕರ್ನಾಟಕದ ಬಿ.ಜೆ.ಪಿ ನಾಯಕರಿಗೆ ಅತ್ಯಂತ ಹತ್ತಿರದ ಗಾದೆ ಮಾತು ..  ಒಂದೇ ಒಂದು ವ್ಯತ್ಯಾಸ ಅಂದ್ರೆ ಇಲ್ಲಿ ನಾಯಿಯ ಬಾಲ ಮಾತ್ರ ಡೊಂಕು ಅಲ್ಲರೀ.. ನಾಯಿಯೇ  ಡೊಂಕಾಗಿಬಿಟ್ಟಿದೆ. ಇವರ ಸ್ಟೋರಿನೇ ವಿಚಿತ್ರ ಮಾದ್ಯಮಗಳಿಗೆ ಏನ್ ನ್ಯೂಸ್ ಸಿಕ್ಕಿಲ್ಲ ಅಂದ್ರೆ, ಯಾಕ್ರಿ ಸುಮ್ನೆ ಕುತ್ಕೊತಿರಾ  ನಿಮಗೆ ನ್ಯೂಸ್ ತಾನೇ …? ನಾವ್ ಕೊಡ್ತಿವ್ರಿ ಅಂತ ಬರೋ ವಿಶಾಲ ಮನಸ್ಸಿನ ನಾಚಿಕೆ ಇಲ್ಲದ ನಾಯಕರು.

ಪಾಪ ನಮ್ ಜನ ಬಿ.ಜೆ.ಪಿ ಯವರನ್ನ ವಿರೋದ ಪಕ್ಷದಲ್ಲಿ ನೋಡಿ ನೋಡಿ ಬೇಸತ್ತು ಇವರು ಒಂದು 5 ವರ್ಷ ಆಡಳಿತ ಮಾಡ್ಲಿ ಬಿಡಿ… ಅಂಥ ಇವರನ್ನ ಆಡಳಿತಕ್ಕೆ ತಂದ್ರು, ಆದರೆ ಈ ನಾಯಕರು ಕೊಟ್ಟ ಆಡಳಿತ 100 ವರುಷ ಕಳೆದರೂ ಮರೆಯಲು ಸಾದ್ಯವಾಗದ ಆಡಳಿತ. (ದಯವಿಟ್ಟು ಕ್ಷಮಿಸಿ ಓದುಗರೇ “ಅವರು-ಇವರು” ಪದವನ್ನ ಇಲ್ಲಿ ಬಳಸಿದರೆ ಆ ಪದಕ್ಕೆ ಇರುವ ಗೌರವ ಸ್ವಲ್ಪ ಕಡಿಮೆ ಆಗಬಹುದು ಅದ್ದರಿಂದ ಈ ಪದವನ್ನ ಇಲ್ಲಿ ನಿಷೇದಿಸಲಾಗಿದೆ) ಇವರಲ್ಲಿ ಒಬ್ಬ ಬರೋಬ್ಬರಿ ರಾಜ್ಯದ ಸಂಪತ್ತನ್ನ ದೋಚುತ್ತಾನೆ. ಇನ್ನೊಬ್ಬ ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಮಾಡುತ್ತಾನೆ, ಇನ್ನೊಬ್ಬ ನರ್ಸ್ ಜೊತೆ ಮೊಬೈಲ್ ನಲ್ಲಿ ಹರಿದಾಡುತ್ತಾನೆ.

ಇವರೆಲ್ಲಾ  ನಮ್ ನಾಯಕ್ರು. ಕುಟುಂಬ ಕಲ್ಯಾಣ ಯೋಜನೆಯನ್ನ ಪಾಲಿಸುವವನು ರಾಜ್ಯದ ಸಂಪತ್ತನ್ನ ತನ್ನ ಪ್ರೀತಿಯ ಕುಟುಂಬದವರ ಹೆಸರಲ್ಲಿ ಮಾಡಿ ಕೊಟ್ಟಂತಹ ಪುಣ್ಯಾತ್ಮ, ಇದೆಲ್ಲವನ್ನು ದಾಟಿ ನಿನ್ನೆ ನಮ್ಮ ತ್ರಿಮೂರ್ತಿ ಮಂತ್ರಿಗಳು ಸದನದ ಕಲಾಪ ನಡಯುತ್ತಿದ್ದ ಸಂದರ್ಭದಲ್ಲೇ “ಬ್ಲೂ ಫಿಲಂ” ನೋಡಿ ಸಿಕ್ಕಿಬಿದ್ದ ನಾಮಧೇಯ ನಾಯಕ್ರು.. ಯಾಕ್ರಿ ಹಿಂಗ್ ಮಾಡ್ತಿದ್ದೀರ..? ಯಾವಾಗ ಸಾರ್ ನೀವೆಲ್ಲಾ ಸರಿ ಆಗ್ತೀರಾ ? ಗೌರವಾನ್ವಿತ ಶ್ರೀ ಅಟಲ್ ಬಿಹಾರಿ ವಾಜಪಾಯಿ ಕಟ್ಟಿ ಬೆಳೆಸಿದ ಬಿ.ಜೆ.ಪಿ ಪಕ್ಷವನ್ನ ಯಾವ ಮಟ್ಟಕ್ಕೆ ತಂದು ಬಿಟ್ರಿ ನೀವು..  ನಿಮ್ಮನ್ನ ಒಂದು  ವಿಷಯದಲ್ಲಂತೂ ಅಭಿನಂಧಿಸಬೇಕ್ರಿ.,!! 50 ವರುಷದಲ್ಲಿ ಮಾಡಬೇಕಾದ ಸಾಧನೆಯನ್ನ ಕೇವಲ 3 ವರುಷದಲ್ಲೇ ಸಾಧಿಸಿದ್ದೀರ, ಅಭಿನಂದನೆಗಳು ಬಿ.ಜೆ.ಪಿ ನಾಯಕರೇ  ಅಭಿನಂದನೆಗಳು..!! ಮತ್ತಷ್ಟು ಓದು »

8
ಫೆಬ್ರ

ಟಿ.ಆರ್.ಪಿಗಾಗಿ ನೀಲಿ ಚಿತ್ರದ ಬೆಂಬತ್ತಿದ ಮಾಧ್ಯಮ

ವಿಜಯ್ ಹೆರಗು

ನಾನು : ಸರ್ ನಮಸ್ಕಾರ ನಾನು ವಿಜಯ್ ಅಂತ, ವಿಜಯ್ ಹೆರಗು ನಿಮ್ಮ ಫೇಸ್ಬುಕ್ ಗೆಳೆಯ
ಸಂಪಾದಕ : ಹೇಳಿ ವಿಜಯ್
ನಾನು : ಸರ್ ನಾನು ನಿಮ್ಮ ಟಿವಿ ಚಾನೆಲ್ ನೋಡ್ತಾ ಇದ್ದೀನಿ. ನಂದೊಂದು request ನೀವು ತೋರಿಸ್ತಾ ಇರೋ  ವೀಡಿಯೊ ತುಂಬಾ ಕೆಟ್ಟದಾಗಿದೆ. blur ಆಗಿ (ಮಸುಕಾಗಿ) ತೋರಿಸಿ.
ಸಂ : ನೀವೇನೋ blur ಆಗಿ ತೋರಿಸಿ ಅಂತೀರ, ನಾವೂ ಮೊದ್ಲು ಹಾಗೇ ತೋರಿಸ್ತಾ ಇದ್ವಿ ಆದ್ರೆ ಸಾಕಷ್ಟು ಜನ phone ಮಾಡಿ ಉಗೀತಾ ಇದಾರೆ … blur ಮಾಡ್ಬೇಡಿ ಹಾಗೇ ತೋರಿಸಿ ಅಂತ.
ನಾನು : ಹಾಗಲ್ಲ ಸರ್, ಮನೆಯಲ್ಲಿ ಮಕ್ಕಳು-ಮರಿ ನೋಡ್ತಾ ಇರ್ತಾರೆ ಇಷ್ಟು ಕೀಳು ಅಭಿರುಚಿ ವೀಡಿಯೊ ತೋರಿಸಿದ್ರೆ ಹೇಗೆ?
ಸಂ : ಈಗ ಸ್ವಲ್ಪ ಮುಂಚೆ ನನಗೊಬ್ಬ ಹಿರಿಯರು call ಮಾಡಿ thanks ಹೇಳಿದ್ರು, ನಂಗೆ ಬ್ಲೂ ಫಿಲಂ ಅಂದ್ರೆ ಗೊತ್ತಿರ್ಲಿಲ್ಲ ಈಗ ನಿಮ್ ಚಾನೆಲ್ ನೋಡಿ ಗೊತ್ತಾಯ್ತು ಅಂದ್ರು. ಮೊದ್ಲು blur ಆಗಿ ತೋರಿಸಿದ್ವಿ ಈಗ detail ಆಗಿ ತೋರಿಸ್ತೀವಿ.
ನಾನು : ನೋಡೀ ಸರ್, ಒಂದು ಜವಾಬ್ದಾರಿಯುತ ಮಾಧ್ಯಮದಲ್ಲಿರುವ ನೀವು ಹೀಗೆ ಮಾತಾಡೋದು ಸರಿಯಲ್ಲ, ಸದನದಲ್ಲಿ ಅಶ್ಲೀಲ ವೀಡಿಯೊ ನೋಡಿ ಆ ಮಿನಿಸ್ಟರುಗಳು ತಪ್ಪು ಮಾಡಿದ್ದಾರೆ ನಿಜ…….. ಆದ್ರೆ ನೀವು ಅದೇ ವೀಡಿಯೊಗಳನ್ನು ಇಡೀ ಕರ್ನಾಟಕಕ್ಕೇ ತೋರಿಸ್ತಾ ಇದ್ದೀರ, ಮನೆಯಲ್ಲಿ ದೊಡ್ಡವರ – ಚಿಕ್ಕವರ ಜೊತೆ ಕುಳಿತು ನ್ಯೂಸ್ ನೋಡೋಕೆ ಮುಜುಗರ ಹಾಗೋ ಹಾಗೆ ಕ್ಲಿಪ್ಪಿಂಗ್ಸ್ ತೋರಿಸ್ತಿದ್ದೀರಲ್ಲ….. ಆ ಮಿನಿಸ್ಟರುಗಳಿಗೂ ನಿಮಗೂ ಏನು ವ್ಯತ್ಯಾಸ.
ಸಂ :  ಇಲ್ಲ ನಾವು ಹಾಗೆ ತೋರಿಸದಿದ್ರೆ ಜನ ನಮಗೆ ಉಗೀತಾರೆ ಅಷ್ಟೇ
ನಾನು : ನೋಡಿ ಸರ್ ನಿಮಗೂ ಒಬ್ಬ ಮಗ ಇದ್ದಾನೆ, ಅವನ ಜೊತೆ ಕೂತ್ಕೊಂಡು ನೋಡಬಹುದಾದ quality ನಿಮ್ಮ ವೀಡಿಯೊ ಕ್ಲಿಪ್ಪಿಂಗುಗಳಿಗೆ ಇದೆ ಅಂತ ನಿಮಗೆ ಅನ್ನಿಸಿದ್ರೆ ಧಾರಾಳವಾಗಿ ಪ್ರಸಾರ ಮಾಡಿ …….
1
ಫೆಬ್ರ

ಇಂದಿನ ರಾಜಕೀಯ ಮತ್ತು ಮಾಧ್ಯಮಗಳ ನಡುವೆ ಕಂಡುಬರುವಂತಹ ಸಾಮ್ಯತೆಗಳು

-ರಾಜುವಿನಯ್ ದಾವಣಗೆರೆ

ಇತ್ತೀಚಿಗೆ ನಾವು ಪ್ರಚಲಿತ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ.ಇಂದಿನ ರಾಜಕೀಯ ವ್ಯವಸ್ಥೆಗೂ,  ಇಂದಿನ  ಮಾಧ್ಯಮ (ದೃಶ್ಯ)ಗಳಿಗೂ ವ್ಯತ್ಯಾಸಗಳೇ ಕಾಣುತ್ತಿಲ್ಲ.

ರಾಜಕೀಯದಲ್ಲಿ  ರಾಜಕಾರಣಿಗಳು ಪಕ್ಷದಿಂದ ಪಕ್ಷಗಳಿಗೆ ಹಾರುತ್ತಾ, ವಲಸೆ ಹೋಗುವುದು ಸಾಮಾನ್ಯವಾಗಿದೆ.
ದೃಶ್ಯ ಮಾಧ್ಯಮಗಳಲ್ಲೂ ಇದನ್ನು ಕಾಣುತ್ತಿದ್ದೇವೆ.

———–*ಪಕ್ಷಾಂತರ*———–

ಇಂದು   ಒಂದು  ಟಿವಿಯಲ್ಲಿ ಇದ್ದವರು ನಾಳೆ ಬೇರೆ ವಾಹಿನಿಯಲ್ಲಿರುತ್ತಾರೆ. ಸುವರ್ಣದಲ್ಲಿದ್ದವರು ಇನ್ಯಾವುದೋ ವಾಹಿನಿಗೆ ಜಿಗಿದಿರುತ್ತಾರೆ. ಇದು ನಿರಂತರವಾಗಿ ಆಗುತ್ತಿದೆ.
ರಾಜಕಾರಣಿಗಳು ತಮ್ಮ ಸ್ವಾರ್ಥ ಸಾಧನೆಗೆ ತಮ್ಮ ರಾಜಕೀಯ ಭವಿಷ್ಯಕ್ಕೆ ಜಿಗಿದಾಟಗಳು ಪರದಾಟಗಳು ಮಾಡುತ್ತಿದ್ದರೆ, ಅವರುಗಳ ತಪ್ಪುಗಳನ್ನು ಜನರಿಗೆ ತೋರಿಸುತ್ತಿದ್ದೇವೆ ಎಂಬ ಭ್ರಾಂತಿಯಲ್ಲಿರುವ ನಮ್ಮ ಮಾಧ್ಯಮಗಳು ತಮ್ಮ ನೆಲೆಗಳಲ್ಲಿ ಉಳಿಯಲು ಸಾಧ್ಯವಾಗುತ್ತಿಲ್ಲ.  ರಾಜಕಾರಣಿಗಳ ಪಕ್ಷಾಂತರಗಳ ಬಗ್ಗೆ ಗಂಟೆಗಟ್ಟಲೇ ಟಿ.ವಿ ಸ್ಟುಡಿಯೋದಲ್ಲಿ ಮಾತಾನಾಡುವ ಬಹುತೇಕ ಪತ್ರಕರ್ತ ಮಿತ್ರರು ಅವರುಗಳು ತಮ್ಮ ಮೂಲ ವಾಹಿನಿಗಳಿಂದ ಜಿಗಿದು ಮತ್ತೊಂದು ವಾಹಿನಿಯಲ್ಲಿ ಕುಳಿತಿರುತ್ತಾರೆ.

ಮತ್ತಷ್ಟು ಓದು »

1
ಫೆಬ್ರ

ನೆನಪಿನ ಮೂಸೆಯಲಿ ‘ಕೋಲ್ಕಾತ್ತಾದ ಕಾಲೇಜಿನಲ್ಲಿ’

-ನಟರಾಜು 

ಒಂದು ಬಾರಿ ಗೆಳೆಯನೊಬ್ಬನ ಜೊತೆ ಕೊಲ್ಕತ್ತಾದ ವೈದ್ಯ ವಿದ್ಯಾಲಯದ ಕ್ಯಾಂಪಸ್ ಗೆ ಹೋಗಿದ್ದೆ. ಅಂದು ಪ್ರಥಮ ವರ್ಷದ ಎಂಬಿಬಿಎಸ್ ಪದವಿಯ ಪ್ರವೇಶಕ್ಕಾಗಿ ಕೌಂಸಿಲಿಂಗ್ ನಡೆಯುತ್ತಿತ್ತು. ಆ ಜಾಗದಲ್ಲಿ ರಾಜಕೀಯ ಪಕ್ಷಗಳ ವತಿಯಿಂದ ಮೂರ್ನಾಲ್ಕು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ರಾಜಕೀಯ ಪಕ್ಷದ ಮಾಹಿತಿ ಇರುವ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ನೋಡಿ, ಕಾಲೇಜಿನ ಆವರಣದಲ್ಲಿ ರಾಜಕೀಯ ಪಕ್ಷದವರಿಗೇನು ಕೆಲಸ ಅಂತ ನಾನು ಕುತೂಹಲದಿಂದ ಆ ಮಳಿಗೆಯ ಬಳಿ ಹೋಗಿದ್ದೆ. ಆ ಮಳಿಗೆಯ ಒಬ್ಬ ವ್ಯಕ್ತಿ ನಾನು ಹೊಸ ವಿದ್ಯಾರ್ಥಿ ಇರಬೇಕು ಅಂತ ತಮ್ಮ ಸಂಘದ ಭಿತ್ತಿ ಪತ್ರವೊಂದನು ಕೈಗಿತ್ತಿದ್ದ. ಬೆಂಗಾಳಿ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿದ್ದ ಭಿತ್ತಿ ಪತ್ರವನು ಓದಿ ನನ್ನ ಗೆಳೆಯನೆಡೆಗೆ ತಿರುಗಿದ್ದೆ. ಆತ ಮುಗಳ್ನಕ್ಕಿದ್ದ. ಕಾಲೇಜಿಗೆ ಪ್ರವೇಶ ಪಡೆದ ಮೊದಲ ದಿನದಿಂದಲೇ ತಮ್ಮ ತಮ್ಮ ರಾಜಕೀಯ ಪಕ್ಷದ ಒಲವನ್ನು ವಿದ್ಯಾರ್ಥಿಗಳು ತಮಗಿಷ್ಟ ಬಂದ ಪಕ್ಷದ ವಿದ್ಯಾರ್ಥಿ ಸಂಘದಲಿ ನೋಂದಾಯಿಸುವುದರ ಮೂಲಕ ವ್ಯಕ್ತಪಡಿಸಬಹುದು ಅಂತ ನನ್ನ ಗೆಳೆಯ ಹೇಳಿದ್ದ.

ಮತ್ತಷ್ಟು ಓದು »

30
ಜನ

ಪ್ರೀತಿಯ ಮಟ್ಟು ಸರ್, ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.

– ಪೂರ್ಣಚಂದ್ರ

(ಇತ್ತೀಚಿಗೆ ದಿನೇಶ್ ಅಮಿನ್  ಮಟ್ಟು ಅವರು ಬರೆದ ಬಹುಚರ್ಚಿತ ಲೇಖನಕ್ಕೆ ಪೂರ್ಣಚಂದ್ರ ಅವರು ಪ್ರತಿಕ್ರಿಯಯನ್ನು ಕಳುಹಿಸಿದ್ದಾರೆ. ಓದಿ..)

ಪ್ರೀತಿಯ ಮಟ್ಟು ಸರ್,

ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.
ನಮಸ್ಕಾರಗಳು. ನನ್ನ ಪರಿಚಯ ನಿಮಗೆ ಇಲ್ಲ ಎಂದು ಕಾಣುತ್ತೆ. ಆದರೆ, ನಿಮ್ಮ ಪರಿಚಯ ನನಗೆ ೧೦ ವರ್ಷದ್ದು. ನಿಮ್ಮ ಅಂಕಣಗಳನ್ನು ಓದುತ್ತಾ ಬೆಳೆದವನು ನಾನು.

ವಿವೇಕಾನಂದರ ಬಗ್ಗೆ ನೀವು ಬರೆದ ಲೇಖನ ಓದಿದ ಬಳಿಕ, ನನಗನಿಸಿದ್ದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕು ಅನಿಸಿತು. ಅಷ್ಟರಲ್ಲಿಯೇ ವಿವೇಕಾನಂದರ ಪರ ಎಂದು ಭ್ರಮಿಸಿರುವ, ಭಾವಿಸಿಕೊಂಡಿರುವ ಬಲಪಂಥೀಯ ಮೂಲಭೂತವಾದಿಗಳು ನಿಮ್ಮ ವಿರುದ್ಧ ಕತ್ತಿ ಬೀಸಲಾರಂಭಿಸಿದರು.
ಇದಕ್ಕೆ ಪ್ರತಿಯಾಗಿ, ತಾವು ಮಟ್ಟು ಪರ(ವಿವೇಕನಂದ ಪರ ಅಲ್ಲ) ಎಂದು ಭ್ರಮಿಸಿರುವ ಎಡಪಂಥೀಯ ಹಾಗೂ ಪ್ರಗತಿಪರ ಮೂಲಭೂತವಾದಿಗಳು ಕೂಡ ತಮ್ಮ ಕತ್ತಿಗೆ ಸಾಣೆ ಹಿಡಿಯಲಾರಂಭಿಸಿದರು.

ಈ ಎರಡೂ ವರ್ಗದ ಮೂಲಭೂತವಾದಿಗಳು ಶಿವಮೊಗ್ಗ ಮತ್ತು ಬೆಂಗಳೂರಿನ ಬೀದಿಗಳಲ್ಲಿ, ನಿಮ್ಮ ಕಚೇರಿ ಎದುರು, ಬ್ಲಾಗ್‌ಗಳಲ್ಲಿ ಕತ್ತಿ ಬೀಸಾಡುವಾಗ ಮಧ್ಯೆ ಪ್ರವೇಶಿಸಲು ಭಯವಾಯಿತು. ಯಾರದ್ದಾದರೂ ಕತ್ತಿ ನನ್ನನ್ನೇ ತಿವಿದುಬಿಡಬಹುದು ಎಂದು ಸುಮ್ಮನಾದೆ. ಈಟಿ, ಭರ್ಜಿ, ಕತ್ತಿ ಗುರಾಣಿಗಳ ಅಬ್ಬರ ಕಡಿಮೆಯಾಗಿದೆ. ಹಾಗಾಗಿ ಇದು ಸೂಕ್ತ ಸಮಯ ಎಂದು ನನಗನಿಸಿದ್ದ ಕೆಲ ಸಂಗತಿಗಳನ್ನು ಹೇಳಲು ಪ್ರಯತ್ನಿಸುವೆ. ಮತ್ತಷ್ಟು ಓದು »

9
ಜನ

ಸಂಸ್ಕೃತಿ ಸಂಕಥನ – 17 ಜಾತಿ, ರಿಲಿಜನ್ ಹಾಗೂ ಸೆಕ್ಯುಲರಿಸಂ ಭಗವದ್ಗೀತೆ ವಿವಾದ

-ರಮಾನಂದ ಐನಕೈ

ಕೇವಲ ಭಗವದ್ಗೀತೆ ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಪ್ರ ದಾಯಗಳಿಗೆ ಸಂಬಂಧಪಟ್ಟಂತೆ ಅನೇಕ ಸಂಗತಿ ಗಳು ವಿವಾದಕ್ಕೆ ಕಾರಣವಾಗುತ್ತಿವೆ. ಹಾಗೂ ಇವೆಲ್ಲ ರಾಜಕೀಯ ಸ್ವರೂಪ ಪಡೆದು ಸೆಕ್ಯುಲರ್ ಪ್ರಭುತ್ವ ಸಂದಿಗ್ಧದಲ್ಲಿ ಸಿಲುಕುವಂತಾಗುತ್ತಿದೆ. ಹಾಗಾದರೆ ಈ ದೇಶದಲ್ಲಿ ಏನು ನಡೆಯುತ್ತಿದೆ?

ಭಗವದ್ಗೀತೆ ವಿವಾದಕ್ಕೆ ಸಂಬಂಧಪಟ್ಟಂತೆ ಪತ್ರಿಕೆಗಳಲ್ಲಿ ದಿನನಿತ್ಯ ಹೇಳಿಕೆಗಳು ಬರುತ್ತಲಿವೆ. ಈ ಕುರಿತು ಒಂದು ಅಭಿಪ್ರಾಯ ರೂಪಿಸುವ ಪ್ರಯತ್ನ ನಡೆಯುತ್ತಿದೆ. ಅಂದರೆ ಭಾರತೀಯ ಸಂಸ್ಕೃತಿಯ ಕುರಿತಾದ ಪರಸ್ಪರ ತಪ್ಪು ತಿಳುವಳಿಕೆ ಗಾಗಿ ಭಗವದ್ಗೀತೆಯನ್ನು ಬಹಿರಂಗವಾಗಿ ಹರಾಜಿಗೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಗೀತೆಯಿಂದ ಶೂದ್ರರಿಗೆ ಹಾಗೂ ದಲಿತರಿಗೆ ಭಾರೀ ಅಪಾಯವಿದೆ ಎಂದು ಭಯ ಹುಟ್ಟಿಸಲು ಪ್ರಯತ್ನಿ ಸುತ್ತಿದ್ದಾರೆ. ಇಲ್ಲಿ ಒಂದನ್ನು ಗಮನಿಸಬೇಕು. ಇವೆಲ್ಲ ಸಾಮಾನ್ಯ ಜನರ ಅಥವಾ ಸಮೂಹದ ಅಭಿಪ್ರಾಯಗಳಲ್ಲ. ಆಯಾ ಸಮುದಾಯದ ವಕ್ತಾರರು ಅಥವಾ ಚಿಂತಕರೆನಿಸಿಕೊಂಡವರು ಮಾಧ್ಯಮಗಳ ಮೂಲಕ ಈ ರೀತಿ ಧರ್ಮಯುದ್ಧ ಮಾಡುತ್ತಿದ್ದಾರೆ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತಾಗಿದೆ ಪರಿಸ್ಥಿತಿ. ಈ ಪರಿ ಅರೆಬರೆ ಚಿಂತಕರನ್ನು ನೋಡಿದರೆ ಒಂದು ದಿನ ದೇವರ ವಿಗ್ರಹಗಳನ್ನು ಕಿತ್ತು ಕೈಯಲ್ಲಿ ಆಯುಧ ವಾಗಿ ಹಿಡಿದು ಹೊಡೆದುಕೊಂಡರೆ ಅಚ್ಚರಿಯೇ ನಿಲ್ಲ.

ಈ ಪರಿಸ್ಥಿತಿಗೆ ಮುಖ್ಯ ಕಾರಣವೆಂದರೆ ಭಾರತೀಯ ಸಂಸ್ಕೃತಿಯನ್ನು ರಿಲಿಜನ್ ಎಂದು ವ್ಯಾಖ್ಯಾನಿಸಿಕೊಳ್ಳುತ್ತಿರುವುದು. ಯುರೋಪಿ ಯನ್ನರು ಇಡೀ ಭಾರತೀಯ ಸಂಸ್ಕೃತಿಯನ್ನು ಸೇರಿಸಿ ಹಿಂದೂಯಿಸಂ ಎಂದು ಕರೆದು ಅದಕ್ಕೆ ರಿಲಿ ಜನ್ನಿನ ಲಕ್ಷಣ ಸೇರಿಸಲು ಪ್ರಯತ್ನಿಸಿದರು. ಆದ್ದರಿಂದಲೇ ನಾವಿಂದು ಹಿಂದೂಯಿಸಂ ಅಂದರೆ ಇಸ್ಲಾಂ ಹಾಗೂ ಕ್ರಿಶ್ಚಿಯಾನಿಟಿ ಇದ್ದಹಾಗೆ ಒಂದು ಅಖಂಡವಾದ ರಿಲಿಜನ್ ಎಂದು ತಿಳಿದುಕೊಂಡಿ ದ್ದೇವೆ. ಹಾಗಾಗಿ ಹಿಂದೂ ಸಂಪ್ರದಾಯಗಳನ್ನೆಲ್ಲ ರಿಲೀಜಿಯಸ್ ಚಟುವಟಿಕೆಯೆಂಬಂತೆ ಅತ್ಯಂತ ಗುಮಾನಿಯಿಂದ ನೋಡಲಾಗುತ್ತದೆ. ರಿಲಿಜೀ ಯಸ್ ಚಟುವಟಿಕೆಗಳ ಸಾರ್ವಜನೀಕರಣವನ್ನು ಸೆಕ್ಯುಲರ್ ನೀತಿ ಒಪ್ಪುವುದಿಲ್ಲ. ಅದಕ್ಕಾಗಿ ಎಡ ಪಂಥೀಯ ಚಿಂತಕರಿಗೆ ಇಂಥ ಸಾಂಪ್ರದಾಯಿಕ ಆಚರಣೆಗಳೆಲ್ಲ ನಿಷಿದ್ಧ ಹಾಗೂ ಮೌಢ್ಯ.

ಮತ್ತಷ್ಟು ಓದು »

28
ಡಿಸೆ

“ಯೂನಿವರ್ಸಲ್ ಬ್ರದರ್‌ಹುಡ್” ಬರೀ ಬೂಟಾಟಿಕೆಯೇ ?

-ಸಾಗರ್ ಮೈಸೂರು

ಸ್ವಾಮೀ,
ಯಾಕೆ ಮುಗ್ಧ ಜನರ ತಲೆಯಲ್ಲಿ ವಿಷದ ಬೀಜ ಬಿತ್ತುತ್ತಿದ್ದೀರಿ? ನೀಮಗೂ ಭಯೋತ್ಪಾದಕರನ್ನು ಹುಟ್ಟು ಹಾಕುವ ಮುಲ್ಲಾ ಗಳಿಗೂ ಅಥವಾ ಭಾಷಾ ದುರಭಿಮಾನಿಗಳಿಗೂ ಏನು ವ್ಯತ್ಯಾಸ? ಸಾಮರಸ್ಯದಿಂದ ಬದುಕುವ ಬಗೆ ಹೇಗೆಂದು ತಿಳಿದಿದ್ದರೆ ಬರೆಯಿರಿ. ಇಲ್ಲಾಂದ್ರೆ ಸುಮ್ಮನಿರಿ. ನಿಮ್ಮನ್ತವರನ್ತು ಬರೆದು , ಬೆಂಕಿ ಹಚ್ಚಿ ತಣ್ಣಗೆ ಕುಳಿತು ಚಂದ ನೋಡುತ್ತಿರಿ. ಅಮಾಯಕರು ನಿಮ್ಮಿಂದ ಪ್ರೇರಿತರಾಗಿ ಯಾರದೋ ಮೈಮೇಲೆ ಬಿದ್ದು ಸಮಾಜದ ಶಾಂತಿ ಕದದುತ್ತಾರೆ ಅಥವಾ ಜೀವ ಬಿಡುತ್ತಾರೆ. ದುರಭಿಮಾನ, ಭಯೋತ್ಪಾದನೆ ಹುಟ್ಟುವುದು ಮೊದಲು ಮನಸ್ಸಿನಲ್ಲಿ. ಪ್ರೇರಿತರದವರು ಕೆಲವರು ಚಾಕು ಬಳಸುತ್ತಾರೆ, ಕೆಲವರು ಬಾಂಬು ಹಾಕುತ್ತಾರೆ, ಅವರವರ ಯೋಗ್ಯತೆಗೆ ತಕ್ಕಂತೆ. ನಿಮ್ಮಂಥವರು ಚಂದ ನೋಡುತ್ತೀರಿ.
“ಬೆಂಗಳೂರಿನ ಜುಟ್ಟು ಈಗಾಗಲೇ ರೆಡ್ಡಿಗಳ ಕೈಯ್ಯಿಗೆ ಕೊಟ್ಟಾಗಿದೆ” ಎಂದು ಮಹಾನ್ ಮೇಧಾವಿಯೊಬ್ಬರು (ಹಾಗೆಂದು ತಿಳಿದ) ಹೇಳಿದಾಗ ಅದ್ಯಾವನೋ ‘ವಿಷ್ಣು’ ಎಂಬುವವ ನೀಡಿದ್ದ ‘ಪ್ರತಿಕ್ರಿಯೆ’ ಅದು! ಹೌದಾ?! ಅದು ನಿಜಾನಾ? ನಮ್ಮ ಬೆಂಗಳೂರನ್ನ ನಿಜವಾಗಿಯೂ ‘ಅನ್ಯರು’, ‘ಕನ್ನಡೇತರರು’ ಆಳುತ್ತಿದ್ದಾರಾ ಎಂಬ ಪ್ರಶ್ನೆಯನ್ನ ನಮಗೆ ನಾವೇ ಹಾಕಿಕೊಂಡು serious ಆಗಿ ‘ಪರೀಕ್ಷಿಸಲು’ ಹೊರಟರೆ ಆ ‘ವಿಷ್ಣು’ ಎಂಬುವವನ ‘ಅಡ್ರಸ್ಸ್ ಹುಡುಕು’ವ ಮನಸ್ಸಾಗುತ್ತದೆ! ಅವನಿಗೊಂದು ವಿಶೇಷವಾದ ‘ದೊಣ್ಣೆ’ ರೆಡಿಮಾಡಿಸುವ ಕನಸು ಮೂಡುತ್ತದೆ!! ಆ ಮೇಧಾವಿ ಎಂಬ ಪತ್ರಕರ್ತ ಯಾವಾಗ ನೋಡಿದರೂ ‘ಭಾರತ’, ‘ಭಾರತೀಯತೆ’ ಎಂದು ಕಿರುಚಾಡುವವ. ಅಂಥವನೇ “ಪರಭಾಷಿಕರನ್ನ ಮಟ್ಟ ಹಾಕದಿದ್ದರೆ ಅಪಾಯ ತಪ್ಪಿದ್ದಲ್ಲ” ಎಂಬ ಸತ್ಯವನ್ನ ಕಂಡುಕೊಂಡಿದ್ದಾನೆ ಎಂದರೆ, ಅದರ ಮಹತ್ವವನ್ನ ನೀವೇ ಅರ್ಥಮಾಡಿಕೊಳ್ಳಿ.

ಮತ್ತಷ್ಟು ಓದು »

27
ಡಿಸೆ

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಉತ್ತಮ ಭವಿಷ್ಯ ಇಲ್ಲವೇ?

-ರಾವ್ ಎವಿಜಿ 

ಇಲ್ಲ ಎಂದು ಬಹುಮಂದಿ ನಂಬಿರುವುದರಿಂದ ತಮ್ಮ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಹಿಂಜರಿಯುವ ಜನ್ಮದಾತೃಗಳ ಸಂಖ್ಯೆ ಹೆಚ್ಚುತ್ತಿದೆ. ತತ್ಪರಿಣಾಮವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಶಾಲೆಗಳು, ವಿಶೇಷತಃ ಸರ್ಕಾರೀ ಶಾಲೆಗಳು ದುಸ್ಥಿತಿಯಲ್ಲಿವೆ. ಈ ಪರಿಸ್ಥಿತಿಗೆ ಕಾರಣ?

ನಾನು ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಯಲ್ಲಿ ಓದಿದವನು. ಪಿ ಯು ಸಿ ಮತ್ತು ಆನಂತರದ ಶಿಕ್ಷಣ ಪಡೆದದ್ದು ಇಂಗ್ಲಿಷ್ ಮಾಧ್ಯಮದಲ್ಲಿ. ಆಗ ಕೊಡಗಿನಲ್ಲಿ ಎಲ್ಲರೂ ಶಿಕ್ಷಣ ಪಡೆಯುತ್ತಿದ್ದದ್ದೇ ಹೀಗೆ. ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂಬ ಹಂಬಲವೇ ಆಗಲಿ, ಖಾಸಗಿ ಶಾಲೆಗಳು ಸರ್ಕಾರೀ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತವೆ ಎಂಬ ನಂಬಿಕೆಯೇ ಆಗಲಿ ಅಂದಿನ ಜನ್ಮದಾತೃಗಳಿಗೆ ಇರಲಿಲ್ಲ. ವಾಸ್ತವವಾಗಿ, ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮ, ಪಿ ಯು ಸಿ ಮತ್ತು ಆನಂತರದ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಆಗ ಅಲ್ಲಿ ಇರಲೇ ಇಲ್ಲ. (ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಮೈಸೂರು, ಮಂಗಳೂರು, ಬೆಂಗಳೂರುಗಳಂಥ ದೊಡ್ಡ ನಗರಗಳಲ್ಲಿ ಲಭ್ಯವಿತ್ತಂತೆ) ನನಗೆ ತಿಳಿದ ಮಟ್ಟಿಗೆ ಕೊಡಗಿನಲ್ಲಿ ಆಗ ಇದ್ದದ್ದು ಎರಡೋ ಮೂರೋ ಕ್ರಿಶ್ಚಿಯನ್ ಆಡಳಿತದ ಖಾಸಗಿ ಪ್ರೌಢಶಲೆಗಳು. ಖಾಸಗಿ ಕಾಲೇಜುಗಳು ಇರಲೇ ಇಲ್ಲ.  ಈ ಪದ್ಧತಿಯಲ್ಲಿ ಶಿಕ್ಷಣ ಪಡೆದ ನಾನು ಏನಾಗ ಬಯಸಿದ್ದೆನೋ ಅದೇ ಆದೆ. ಈ ಪದ್ಧತಿಯಲ್ಲಿ ಶಿಕ್ಷಣ ಪಡೆದವರು ಎಂಜಿನಿಯರುಗಳೂ ಡಾಕ್ಟರುಗಳೂ ಆಗುತ್ತಿದ್ದರು. ಎಂದೇ, ೧ ನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಆವಶ್ಯಕತೆ ಇದೆ ಎಂದು ಯಾರೂ ತಿಳಿದಿರಲಿಲ್ಲ. ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಗಳಲ್ಲಿ ವ್ಯಾಸಂಗ ಮಾಡಿದ್ದರಿಂದ ಯಾರ ಭವಿಷ್ಯವೂ ಅಂದು ಹಾಳಾದದ್ದು ನನಗೆ ತಿಳಿದಿಲ್ಲ. ಆಗ ಏಕೆ ಹಾಗಿತ್ತು?

ಮತ್ತಷ್ಟು ಓದು »

26
ಡಿಸೆ

ನನ್ನ ಬದುಕು ಪರಿವರ್ತಿಸಿದ ಬಂಗಾರಪ್ಪ

-ಬನವಾಸಿ ಸೋಮಶೇಖರ್, ಮಂಗಳೂರು
“1992 ನೇ ಇಸ್ವಿ.ನಾನು ಆಗಷ್ಟೇ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ಮುಗಿಸಿದ್ದೆ.ಫಲಿತಾಂಶ ಇನ್ನೂ ಬಂದಿರಲಿಲ್ಲ.ಅತ್ಯಂತ ಕಡು ಬಡತನದ ಕುಟುಂಬ ನಮ್ಮದು.ಒಂದು ಹೊತ್ತಿನ ತುತ್ತಿಗೂ ತತ್ವಾರ ಪಡುವಂತ ದಯನೀಯ ಮತ್ತು ಶೋಚನೀಯ ಸ್ಥಿತಿ.ತಂದೆ ನಾ ಮಗುವಾಗಿರುವಾಗಲೇ ಗತಿಸಿದ್ದರು.ಮೂರು ಜನ ಅಣ್ಣಂದಿರು, ಒಬ್ಬಳು ಸಹೋದರಿ.ದೊಡ್ಡಣ್ಣ 10-11ರ ಪ್ರಾಯದಲ್ಲಿಯೇ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದ.ಅಮ್ಮ ಅವನಿಗಾಗಿ ಹುಡುಕಾಡಿ ಹುಡುಕಾಡಿ ಹೈರಾಣಾಗಿದ್ದರು.ಉಳಿದ ಇಬ್ಬರು ಅಣ್ಣಂದಿರಲ್ಲಿ ಒಬ್ಬ ಮಾತ್ರ ಅತ್ಯಂತ ಶ್ರಮಜೀವಿ.ಇಬ್ಬರೂ ಕೂಲಿ ಕೆಲಸ ಮಾಡಿ ತುತ್ತಿನ ಚೀಲ ತುಂಬಿಸುತ್ತಿದ್ದರು. ಅನ್ನಕ್ಕಾಗಿ ಹಾತೊರೆಯುವ ಪರಿಸ್ಥಿತಿ ಅದಾಗಿತ್ತು. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ,ಅಣ್ಣಂದಿರೊಂದಿಗೆ ಜಗಳವಾಡಿದ್ದು ಇಂದಿಗೂ ನೆನಪಿದೆ. ಕೊನೆಯ ಮಗನಾದ ನನ್ನನ್ನು ಓದಿಸಬೇಕೆಂಬುದು ಅಮ್ಮನ ಮಹದಾಸೆ ಅಣ್ಣಂದಿರ ಹಿರಿಯಾಸೆಯಾಗಿತ್ತು.
ನಾನಾದರೋ ಮನೆಯ ದೈನ್ಯೇಸಿ ಸ್ಥಿತಿಯನ್ನು ನೋಡಿ ಮನೆ ಬಿಟ್ಟು ಹೋಗಿ ಏನಾದರೂ ಕೆಲಸ ಮಾಡಿ ಮನೆಗೆ ಆಸರೆಯೊದಗಿಸಬೇಕೆಂದು ಹಾತೊರೆದು ಮನೆ ತೊರೆದು ಬೆಂಗಳೂರಿನತ್ತ ಮುಖ ಮಾಡಿಯೇ ಬಿಟ್ಟಿದ್ದೆ. ಕೈಯಲ್ಲಿ  ಸಂಗ್ರಹಿಸಿಟ್ಟಿದ್ದ ಇಪ್ಪತ್ತು ರೂಪಾಯಿ ಇತ್ತಷ್ಟೇ.ಯಾವ್ಯಾವುದೋ ಬಸ್ ಹತ್ತಿ ನಿರ್ವಾಹಕನ ಕಣ್ ತಪ್ಪಿಸಿ ಟಿಕೇಟು ತೆಗೆಸದೇ ಬೆಂಗಳೂರಿಗೆ ಬಂದಿಳಿದಿದ್ದೆ.ಆಗ ನಾಡಿನ ದೊರೆಯಾಗಿದ್ದವರೇ ನಮ್ಮ ಸಾರೆಕೊಪ್ಪ ಬಂಗಾರಪ್ಪನವರು.ಅವರು ನಮ್ಮ ಪಕ್ಕದ ತಾಲೂಕಿನವರಾಗಿದ್ದರಿಂದಲೂ ನಮ್ಮೂರಲ್ಲಿ ಅವರ ಬಗ್ಗೆ ಅಪಾರ ಜನಪ್ರೀಯತೆ ಇದ್ದುದರಿಂದಲೂ ಅವರಲ್ಲಿಗೆ ಹೋಗಿ ಏನಾದರೂ ಸಹಾಯ ಪಡೆದು ಬೆಂಗಳೂರಲ್ಲಿ ಕೆಲಸ ಮಾಡಬಹುದೆಂದು ಯೋಚಿಸಿ ಸೊರಬದವನೆಂದು ಸುಳ್ಳು ಹೇಳಿ ಮುಖ್ಯಮಂತ್ರಿಗಳ ಗೃಹ ಕಛೇರಿಯನ್ನು ಹರಸಾಹಸ ಮಾಡಿ ಪ್ರವೇಶಿಸಿದ್ದೆ.ಸಾವಿರಾರು ಸಾರ್ವಜನಿಕರು ಅಹವಾಲು ಸಲ್ಲಿಸಲು ಸರತಿಯಲ್ಲಿ ನಿಂತು ಕಾಯುತ್ತಿದ್ದರು.ನಾನೂ ಹಾಗೆಯೇ ಮಾಡಿದೆ. ಮತ್ತಷ್ಟು ಓದು »
26
ಡಿಸೆ

ಸಂಸ್ಕೃತಿ ಸಂಕಥನ 15 -ಭಾರತೀಯ ಪ್ರಭುತ್ವದ ಸೆಕ್ಯುಲರ್ ಗೊಂದಲಗಳು

ರಮಾನಂದ ಐನಕೈ

ಬಹುಸಂಸ್ಕೃತಿ ಹಾಗೂ ರಿಲಿಜನ್  ಎರಡೂ ಒಟ್ಟಿಗೇ ಬಾಳಬೇಕಾದ ಭಾರತದಂತಹ ದೇಶದಲ್ಲಿ ಪ್ರಭುತ್ವ  ತಟಸ್ಥವಾಗಿರಲು ಸಾಧ್ಯವೇ? ಏಕೆಂದರೆ ಇಲ್ಲಿ ನಂಬಿಕೆಯಲ್ಲಿ ಭಿನ್ನತೆ ಇದೆ. ಇಂಥಲ್ಲಿ ಸೆಕ್ಯುಲರ್ ಪ್ರಭುತ್ವ ಯಾರಿಗೆ ನ್ಯಾಯ ನೀಡುತ್ತದೆ? ಒಂದಕ್ಕೆ ನೀಡಿದ ನ್ಯಾಯ ಇನ್ನೊಂದಕ್ಕೆ ಅನ್ಯಾಯವಾಗಲು ಸಾಧ್ಯ. ಏಕೆಂದರೆ ರಿಲಿಜನ್ನವರು ಲೋಕಜ್ಞಾನದಲ್ಲಿ ಬದುಕುತ್ತಾರೆ. ಸಂಸ್ಕೃತಿಯಲ್ಲಿ ಕ್ರಿಯಾಜ್ಞಾನ ಇರುತ್ತದೆ. ಸೆಕ್ಯುಲರ್ ನೀತಿ ಲೋಕಜ್ಞಾನದಲ್ಲಿ ಉದಯಿಸಿದ್ದು. ಹಾಗಾಗಿ ಕ್ರಿಯಾಜ್ಞಾನದ ಸೂಕ್ಷ್ಮತೆಗೆ ಸ್ಪಂದಿಸುವಲ್ಲಿ ಸೋಲುವ ಸಾಧ್ಯತೆ ಇದೆ. ಹಾಗಾಗಿ ಸೆಕ್ಯುಲರ್ ನೀತಿಯನ್ನು ಭಾರತೀಯ ಸಂದರ್ಭದಲ್ಲಿ ಪುನರ್ಪರಿಶೀಲನೆ ಮಾಡುವ ಅಗತ್ಯ ಇದೆ.

ಭಾರತ ಸರಕಾರದ ಸೆಕ್ಯುಲರ್ ನೀತಿಯ ಸುತ್ತ ಹಲವು ಸಂದಿಗ್ಧಗಳಿವೆ. ನಮ್ಮ ಪ್ರಭುತ್ವಕ್ಕೆ ಈ ಪರಿಸ್ಥಿತಿ ಎದುರಾಗಲು ಕಾರಣವೇನು? ಸೆಕ್ಯುಲರ್ ಎಂಬ ಸಮಾನತೆಯ ಮಂತ್ರ ನಮ್ಮಲ್ಲಿ ಯಾವ ಫಲಿತಾಂಶ ನೀಡುತ್ತಿದೆ?

ಮತ್ತಷ್ಟು ಓದು »