ಮುಂದಿದೆ ಮಾರಿ ಹಬ್ಬ : ಯಡಿಯೂರಪ್ಪ ಅವರ ಮುಂದಿನ ರಾಜಕೀಯ ನಡೆಯೇನು?
-”ಸಿದ್ಧಾರ್ಥ ”
೨೪ ದಿನಗಳ ಸೆರೆಮನೆ ವಾಸದ ನಂತರ ಅಂತೂ ಇಂತೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ. ಇದನ್ನೇ ಒಂದು ವಿಜಯೋತ್ಸವವೆಂಬಂತೆ ಅವರ ಬೆಂಬಲಿಗರು ಬಾಣ ಬಿರುಸು, ಪಟಾಕಿಗಳನ್ನು ಸಿಡಿಸಿ ಹರ್ಷಿಸಿದ್ದಾರೆ. ಯಡಿಯೂರಪ್ಪ ಅವರು ದೇಗುಲಗಳ, ಮಠಗಳ ದರ್ಶನ ಕಾರ್ಯದಲ್ಲಿ ಮುಳುಗಿದಂತೆ ನಟಿಸುತ್ತಿದ್ದರು, ಅವರ ಅಂತರ್ಯ್ಯದಲ್ಲಿ ಮುಕ್ಕಾಗಿ ಹೋದ ವೈಬವವನ್ನು, ಅಧಿಕಾರವನ್ನು ಮರಳಿ ಪಡೆಯುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ. ಅದಕ್ಕೆ ಪೂರಕವೆನ್ನುವಂತೆ ಅವರ ಆಪ್ತ ಮಂತ್ರಿಗಳನೇಕರು ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಕಾರಣೀಭೂತರಾದ ಯಡಿಯೂರಪ್ಪನವರೇ ಪಕ್ಷದ ಪ್ರಶ್ನಾತೀತ ನಾಯಕರು ಆದ್ದರಿಂದ ಅವರನ್ನೇ ರಾಜ್ಯದ ಪಕ್ಷಾದ್ಯಕ್ಷರನ್ನಾಗಿ ಮಾಡಿ ಎಂಬ ಬೆದರಿಕೆ ರೂಪದ ಒತ್ತಡವನ್ನು ಹೈಕಮಾಂಡ್ಗೆ ರವಾನಿಸಿದ್ದಾರೆ.
ಸೆರಮನೆ ವಾಸ, ಅದೆಷ್ಟೇ ಅಲ್ಪಾವಧಿಯಾದಾಗಿರಲಿ ಅದಷ್ಟೇ ಸುಖ ವೈಬೋಗಗಳಿಂದ ಕೂಡಿರಲಿ, ಮಾನಸಿಕವಾಗಿ ಅದು ಸೆರಮನೆ ವಾಸವೇ. ಪರಿಸ್ಥಿತಿಯ ಶಿಶುವಾಗಿ ತಮ್ಮದಲ್ಲದ ತಪ್ಪಿಗೆ ಸೆರಮನೆ ವಾಸ ಕಂಡ ಯಡಿಯೂರಪ್ಪನವರಿಗೆ ಕಡ್ಡಾಯ ಬಂದನ ಒಂದು ರೀತಿಯಲ್ಲಿ ಪಾಠವಾಗಬೇಕಾಗಿತ್ತು. ಸಾಮಾನ್ಯವಾಗಿ ಸೆರೆಮನೆಯಲ್ಲಿ ಸಿಗುವ ಏಕಾಕಿತನದಲ್ಲಿ ವ್ಯಕ್ತಿಯೊಬ್ಬರ ಮನಸ್ಸು ಹಲವು ಬದಲಾವಣೆಗೆ ಒಳಪಡುತ್ತದೆ. ಸರಿ ತಪ್ಪುಗಳ ವಿಮರ್ಶೆಯ ಆತ್ಮಾವಲೋಕನಕ್ಕೆ ಅದು ಸಕಾಲವಾಗುತ್ತದೆ. ಕೆಲವೊಮ್ಮೆ ಏಕಾಂಗಿ ತನದಲ್ಲಿ ವ್ಯಕ್ತಿಯ ಮನಸ್ಸು, ಪ್ರತಿಭೆ ಅರಳುತ್ತದೆ. ಮತ್ತಷ್ಟು ಓದು 
ಯಡಿಯೂರಪ್ಪ ರಾಜಕೀಯದಲ್ಲಿ ‘ಮಾಜಿ’ ಆಗಿದ್ದಾರೆಯೇ?
-‘ಸಿದ್ಧಾರ್ಥ‘
೩೩ ವರ್ಷಗಳ ವೃತ್ತಿ ಜೀವನದಲ್ಲಿ ಅರ್ಧಾಂಶಕ್ಕೂ ಹೆಚ್ಚು ಕಾಲ ಅಧಿಕಾರಕ್ಕೆ ರಾಜಕಾರಣಿಗಳ ಪತ್ರಿಕಾ ಕಾರ್ಯದರ್ಶಿಯಾಗಿ ಆಪ್ತ ಸಿಬ್ಬಂದಿ ವರ್ಗದಲ್ಲಿ ಕೆಲಸ ಮಾಡಿರುವ ನನಗೆ ಅಧಿಕಾರ ತರುವ ಸಂತೋಷ, ಅಧಿಕಾರ ತ್ಯಾಗದಿಂದ ಬರುವ ವಿಷಾದ ಎರಡನ್ನೂ ಅತೀ ಸಂಮೀಪದಿಂದ ನೋಡಿ ಅನುಭವಿಸುವ ಅವಕಾಶ ಸಿಕ್ಕಿದೆ. ಅಧಿಕಾರ ಹೋದ ಕೂಡಲೇ, ಚುನಾವಣೆ ಸೋತ ಕೂಡಲೇ, ಆಕಾಶವೇ ಕಳಚಿ ಬಿದ್ದಂತೆ ಮೂಲೆಗೆ ಬೀಳುವ ರಾಜಕಾರಣಿಗಳನ್ನು, ಹೋದದ್ದು ಅಧಿಕಾರ ತಾನೇ? ಎಂದು sportive DV ಆಗಿ ನಗು ಮುಖ ಧರಿಸುವ ಧುರೀಣರನ್ನು ನೋಡಿದ್ದೇನೆ. ಹೊಟ್ಟೆಯಲ್ಲಿನ ನೋವು, ಮತ್ಸರ, ಈರ್ಷೆಗೆ ಸಿಲುಕಿ ಉತ್ತರಾಧಿಕಾರಿಯ ಪ್ರಮಾಣ ವಚನ ಸಮಾರಂಭಕ್ಕೆ ಗೈರುಹಾಜರಾದ ನಿರ್ಗಮಿತ ಮುಖ್ಯಮಂತ್ರಿಗಳನೇಕರನ್ನು ನೋಡಿದ್ದೇನೆ. ಅಧಿಕಾರ ಗ್ರಹಣದ ನಂತರ ಖುದ್ದಾಗಿ ಕಛೇರಿಗೆ ಕೊಂಡೊಯ್ದು ಪ್ರತಿಷ್ಠಾಪಿಸಿ ಶುಭ ಹಾರೈಸಿ ಹಗುರ ಹೃದಯದೊಂದಿಗೆ ಖಾಸಗಿ ವಾಹನದಲ್ಲಿ ಮನೆಗೆ ತೆರಳಿದ ವಿವೇಕಿಗಳನ್ನು, ಸಾಮಾನ್ಯ ಶಾಸಕರಾಗಿ ಅತೀವ ಉತ್ಸ್ಸಾಹ ದಿಂದ ಶಾಸನ ಸಭೆಗೆ ಮರಳಿ ಕ್ರಿಯಾತ್ಮಕವಾಗಿ ಕಲಾಪಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಿದ ಹಿರಿಯರನೇಕರ ಮಾತುಗಳು ನನ್ನ ಕಿವಿಗಳಲ್ಲಿ ಇನ್ನೂ ರಿಂಗಣಿಸುತ್ತಿವೆ.
ಇವೆಲ್ಲವೂ ನೆನಪಾದದ್ದು ಯಡಿಯೂರಪ್ಪನವರು ಅಧಿಕಾರ ಕಳೆದುಕೊಂಡ ಮರುಕ್ಷಣವೇ ಅವರ ಮನೆಯ ಮುಂದೆ ತುಂಬಿದ್ದ ಗೋಜುಗೋಜು ಜನ ಜಂಗುಳಿ ಏಕಾಏಕಿ ಮಾಯವಾದಾಗ. ಅಧಿಕಾರ ತರುವ ಜನ ಭಾಹುಳ್ಯವನ್ನು ಅಧಿಕಾರ ನಂತರದ ಜನ ವಿಯೋಗವನ್ನು ಪತ್ರಿಕೆಯೊಂದು ಛಾಯಾಚಿತ್ರಗಳ ಮೂಲಕ ಸಮರ್ಥವಾಗಿ ಪ್ರತಿಬಿಂಬಿಸಿತ್ತು. ಗಾದೆ ಮಾತೇ ಇಲ್ಲವೇ. ನಗುವಾಗ ಎಲ್ಲ ನೆಂಟರು ಅಳುವಾಗ ಯಾರೂ ಇಲ್ಲ.
ಇದಾವ ಪರಿಯ ‘ಜನಚೇತನ ???
-ಅರೆಹೊಳೆ ಸದಾಶಿವರಾವ್
ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಡೀ ಮಂಗಳೂರೇ ಸ್ತಬ್ಧ!!. ಬಜಪೆಂದ ಮಂಗಳೂರಿನ ನೆಹರೂ ಮೈದಾನದ ತನಕ ರಸ್ತೆಯ ಇಕ್ಕೆಲಗಳಿಗೂ ಆದಿನ ಒಂದು ರೀತಿಯ ವಿಶ್ರಾಂತಿ. ಎಲ್ಲೆಲ್ಲೂ ಪಾರ್ಕಿಂಗ್ ಇಲ್ಲ, ರಸ್ತೆಯ ಇಕ್ಕೆಲಗಳಲ್ಲೂ ಪೋಲೀಸರೇ ಪೋಲಿಸರು!
ಅಡ್ವಾಣಿ ಬರುತ್ತರೆಂದಾಗಲೇ ಪೋಲಿಸರಿಗೆ
ಶುರುವಾಗಿತ್ತು ಒಂದು ರೀತಿಯ ಚಳಿ-ಮಳೆ!
ಹಾಗಾಗಿ ಎದುರು ಸಿಕ್ಕವರಿಗೆಲ್ಲಾ ಸಿಕ್ಕಿದ್ದು ಕೇವಲ
ಪೋಲಿಸ್ ಭಾಷೆಯ ಬೈಗುಳದ ಸುರಿಮಳೆ!!
ಇದು ವಿಐಪಿಗಳು ಯಾವುದೇ ಊರಿಗೂ ಬಂದರೂ ಇರುವ ಸಾಮಾನ್ಯ ತೊಂದರೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ ಇದರ ಬಗ್ಗೆ ಹೇಳುವುದು ಕೇಳುವುದು ಏನೂ ಬೇಕಿಲ್ಲ ಬಿಡಿ. ಆದರೆ ಇಲ್ಲಿ ಭಾರತೀಯ ಜನತಾ ಪಕ್ಷದ ಈ ನೇತಾರನ ಈ ಪರಿಯ ಜನ ಚೇತನ ಯಾತ್ರೆಯ ಬಗ್ಗೆ ಬರೆಯದಿದ್ದರೆ ಅದೇನೋ ಒಂದು ರೀತಿಯ ಕಿರಿ ಕಿರಿ ಕೊರೆಯುತ್ತಲೇ ಇರುತ್ತದೆ.
ಇಂದು ಕರ್ನಾಟಕದ ಪರಿಸ್ಥಿತಿ ನೋಡಿ. ಏನೋ ಮಾಡಲು ಹೋದ ಭಾಜಪ ಎಂಬ ಆಡಳಿತಾರೂಢ ಪಕ್ಷ, ಕಂಡ ಕಂಡಲ್ಲಿ ಗಳಿಸಿಕೊಂಡದ್ದು ಭ್ರಷ್ಟಾಚಾರದ ಹಣೆ ಪಟ್ಟಿ. ಸಂಪುಟದ ಹೆಚ್ಚಿನ ಸಚಿವರ ಮೇಲೆ ಒಂದಲ್ಲ ಒಂದು ರೀತಿಯ ಆಪಾದನೆ ಬಂದಾಗ, ದೆಹಲಿಯ ನಾಯಕರು ತೇಪೆ ಹಚ್ಚುವ ನೆಪದಲ್ಲಿ ಯಡ್ಯೂರಪ್ಪನವರಿಗೆ ಮತ್ತೆ ಮತ್ತೆ ಅಧಿಕಾರದಲ್ಲಿ ಮುಂದುವರಿಯುವ ಅವಕಾಶವನ್ನು ಕೊಟ್ಟರೇ ಹೊರತು, ಆಗಿದ್ದೇನು ಎಂದು ನೋಡುವ ಪ್ರಾಥಮಿಕ ಜ್ಞಾನವನ್ನೂ ತೋರಲಿಲ್ಲ. ಒಂದೆಡೆ ರೆಡ್ಡಿ ಬಣ, ಮತ್ತೊಂದೆಡೆ ಯಡ್ಡಿಬಣ, ಇದೆರಡಲ್ಲದೇ ಬೇರೆ ಬೇರೆ ಇನ್ನಿತರ ಬಣಗಳು, ಹೊರ ಪ್ರಪಂಚದಲ್ಲಿ ಕೈ ಕೈ ಹಿಡಿದು, ಕಮಲವನ್ನು ಒಡೆದು ‘ದಳ ದಳ’ವನ್ನೂ ಬೇರೆ ಮಾಡಿದ್ದಂತೂ ಸತ್ಯ. ಎಷ್ಟೇ ಸಲ ಇದರ ಬಗ್ಗೆ ವರಿಷ್ಠರಿಗೆ ದೂರು ಹೋದರೂ, ವರಿಷ್ಠರದ್ದು ಅಲ್ಲಿ ಜಾಣ ಕುರುಡು.
ಭಾಜಪದಲ್ಲಿ ಎಲ್ಲವೂ ಸರಿ ಇಲ್ಲ ಅಂದುಕೊಂಡವರೇ
ಎಲ್ಲರೂ; ಅಲ್ಲಿ ಏನೂ ಸರಿ ಇಲ್ಲ ಎಂದುಕೊಳ್ಳಲಾರದೇ
ಹೋದವರೇ ವರಿಷ್ಠರು; ಅದಕ್ಕೇ ಯಡ್ಯೂರಪ್ಪನವರು
ಮಾಡುತ್ತಾ ಹೋದರು ತಪ್ಪು ಒಂದಲ್ಲ ನೂರು!!
ಮತ್ತಷ್ಟು ಓದು 
ಅಶ್ಫಾಕುಲ್ಲಾ ಖಾನ್” — ದೇಶಭಕ್ತಿಯ ಮೂರ್ತರೂಪ..
– ಭೀಮಸೇನ್ ಪುರೋಹಿತ್
ಆಗಸ್ಟ್ 9 – 1925.. ಅವತ್ತಿನ ರಾತ್ರಿ ಭಾರತದ ಕ್ರಾಂತಿಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾದ ದಿನ.. ಇನ್ನೂ ಮೀಸೆ ಚಿಗುರದ ನವತರುಣರು ಆಂಗ್ಲಶಾಹಿಯೆದುರಿಗೆ ತೊಡೆತಟ್ಟಿ ನಿಂತ ದಿನ ಅದು.. ಅದೇ “ಕಾಕೋರಿ” ಪ್ರಕರಣ..
ಆ ಹೊತ್ತಿಗಾಗಲೇ, ಅಮೇರಿಕಾದ “ಗದರ್” ಪಾರ್ಟಿಯ ಪ್ರಖರತೆ ಕಮ್ಮಿಯಾಗಿತ್ತು. ಭಾರತದಲ್ಲಿ, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಗದರ್ ಪಾರ್ಟಿಯ ಹಳೆಯ ಕೆಲವು ನಾಯಕರು ಸೇರಿ “ಹಿಂದುಸ್ತಾನ್ ರಿಪಬ್ಲಿಕನ್ ಅಸೋಸಿಯೇಶನ್” ಎಂಬ ಕ್ರಾಂತಿಸಮಿತಿಯನ್ನು ಶುರು ಮಾಡಿದ್ರು. ಗದರ್ ಪಾರ್ಟಿಯ ಪತನದ ನಂತರ ಕ್ರಾಂತಿ ತಣ್ಣಗಾಗಿದೆ ಅಂತ, ಆಂಗ್ಲರು ಈ HRA ಅನ್ನು ಉಪೇಕ್ಷಿಸಿದ್ದರು.. ಅವರ ಆ ಅಲಕ್ಸ್ಯವೇ ಕ್ರಾಂತಿಕಾರಿಗಳಿಗೆ ವಾರವಾಯಿತು..
ರಾಮಪ್ರಸಾದ್ ಮತ್ತು ಅಶ್ಫಾಕ್ ಇಬ್ರೂ ಜೀವಕ್ಕೆ ಜೀವ ಕೊಡೊ ಗೆಳೆಯರು.. ಅವರ ಸ್ನೇಹದ ನಡುವೆ ಧರ್ಮ ಯಾವತ್ತೂ ಅಡ್ಡಿ ಬರ್ಲಿಲ್ಲ.. ಹಾಗೆ ನೋಡಿದರೆ, ರಾಮ್, ಪಕ್ಕಾ ಅರ್ಯಸಮಾಜದ ಹಿಂದೂವಾದಿ. ಆದ್ರೆ ಅವನು ಅಶ್ಫಾಕ್ ನನ್ನು ಅಪಾರವಾಗಿ ಗೌರವಿಸುತ್ತಿದ್ದ. ಹಾಗೆಯೇ ಅಶ್ಫಾಕ್ ಕೂಡ ಯಾವಾಗಲೂ “ನನ್ನ ರಾಮ” ಅಂತಾನೆ ಜಪಿಸುತ್ತಿದ್ದ.. ಅಶ್ಫಾಕ್ ಉತ್ತರಪ್ರದೇಶದ ಷಹಜಹಾನ್ ಪುರದವನು. ಅಶ್ಫಾಕ್ ಒಬ್ಬ ಮಹಾನ್ ಉರ್ದು ಕವಿ ಕೂಡ ಆಗಿದ್ದ.. ಅತ್ಯಂತ ಉದ್ಬೋಧಕ ದೇಶಭಕ್ತಿ ಗೀತೆಗಳನ್ನು ಬರೆದ ಸಾಹಿತಿ ಅವನು.. ಅದೇ ಅಶ್ಫಾಕ್ ಬಿಸ್ಮಿಲ್ಲನ ಸಹವಾಸಕ್ಕೆ ಬಂದೊಡನೆ, ಅವನ ಪಟ್ಟಶಿಷ್ಯನಾಗಿ ದೇಶಕ್ಕೆ ಅರ್ಪಿಸಿಕೊಂಡಿದ್ದ..
’ಗೌಡಾನಂದ’ದ ಕಾರಣಗಳು ಮತ್ತು………
-ಅರೆಹೊಳೆ ಸದಾಶಿವರಾವ್
ಗಗನಕ್ಕೇರಿದ ಬೆಲೆ, ರಾಜಕಾರಣಿಗಳ ಜೈಲು ಯಾತ್ರೆ, ಕರೆಂಟಿಲ್ಲದೆ ಕತ್ತಲಾಗಿರುವ ಮನೆ, ಅಕಾಲದಲ್ಲಿ ಉಪದ್ರವಕಾರಿಯಾಗಿರುವ ಮಳೆ……..ಈ ಎಲ್ಲದರ ನಡುವೆ ಮತ್ತೆ ಬಂದಿರುವುದು ಹಬ್ಬಗಳ ಸಾಲು ಸಾಲು. ದಸರೆಯನ್ನು ಉಸಿರು ಬಿಗಿ ಹಿಡಿದು ಮಾಡಿಯಾಯ್ತು, ದೀಪಾವಳಿಯನ್ನು ಈ ಸಂದಿಗ್ಧದಲ್ಲಿಯೇ ಆಚರಿಸಿಕೊಳ್ಳುತ್ತಿದ್ದೇವೆ. ಇನ್ನೇನು ನಮ್ಮ ನಾಡಿನ ಮಟ್ಟಿಗೆ ಹೆಮ್ಮೆಯ ಕನ್ನಡ ರಾಜ್ಯೋತ್ಸವವೂ ಇದೆ. ಈ ಎಲ್ಲದರ ನಡುವೆ ನಮ್ಮ ಪರಿಸ್ಥಿತಿ ಏನಾಗಿದೆಯೋ ನೋಡಿ.ಬಂದಿದೆ ಹಬ್ಬಗಳ ಸಾಲು ಸಾಲು
ಜೈಲಿಗೆ ಹೊರಟಿದೆ ನಮ್ಮ ನಾಯಕರ ಸಾಲುಹೀಗೆಂದು ಇಂದಿನ ನಮ್ಮ ರಾಜ್ಯದ ರಾಜಕಾರಣವನ್ನು ವಿವರಿಸಬಹುದೇನೋ. ಬಹುಶ: ಇಂದಿನ ಪರಿಸ್ಥಿತಿ ನೋಡಿದರೆ, ಅತೀ ಶೀಘ್ರದಲ್ಲಿಯೇ ನಮ್ಮ ರಾಜ್ಯ ಸರಕಾರದ ಆಡಳಿತ ಪರಪ್ಪನ ಅಗ್ರಹಾರ ಜೈಲಿನಿಂದಲೇ ಆದರೂ ಆಶ್ಚರ್ಯವಿಲ್ಲ. ಆರೋಪಿ ಎಂದು ಹೆಸರು ಕೇಳಿದಾಕ್ಷಣ ಎಲ್ಲರೂ ಅಪರಾಧಿಗಳೇ ಅಲ್ಲವಾದರೂ, ಈ ಪರಿ ಆರೋಪಿಗಳಾಗುತ್ತಿರುವುದು ನಮ್ಮ ಮಟ್ಟಿಗೆ ಆಶ್ಚರ್ಯ ಮತ್ತು ಅನಪೇಕ್ಷಿತ ಎಂಬುದು ಸುಳ್ಳಲ್ಲ.ಈ ದೀಪಾವಳಿಯನ್ನು ಹಿಂಬಾಲಿಸಿ ಕರ್ನಾಟಕ ರಾಜ್ಯೋತ್ಸವವೂ ಬರುತ್ತಿದೆ. ಕನ್ನಡಿಗರ ಪಾಲಿಗೆ ಇದು ಮತ್ತೊಂದು ದೀಪಾವಳಿ ಆಗುತ್ತಿದ್ದ ದಿನಗಳಿಂದ ಈಗದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಬಿಕರಿಗೆ ಸೀಮಿತವಾಗಿದೆ. ಈ ಸಲ ಕೇವಲ ಐವತ್ತು ಜನರಿಗೆ ಮಾತ್ರ ಪ್ರಶಸ್ತಿ ಕೊಡುವ ತೀರ್ಮಾನ ತನ್ನದು ಎಂದು ಮಾನ್ಯ ಮುಖ್ಯ ಮಂತ್ರಿಗಳು ಹೇಳುತ್ತಿರುವುದು ಸ್ವಲ್ಪ ಮಟ್ಟಿಗೆ ಕಳೆದು ಹೋಗಿರುವ ಪ್ರಶಸ್ತಿಯ ಬೆಲೆ ಹೆಚ್ಚಿಸಿದೆ. ಕಳೆದ ವರ್ಷ ಈ ಪ್ರಶಸ್ತಿಗೂ ವಿಪರೀತ ’ಬೆಲೆ’ ಹೆಚ್ಚದ್ದು, ಅದಕ್ಕಾಗಿ ದಲ್ಲಾಳಿಗಳು ಹುಟ್ಟಿಕೊಂಡಿದ್ದು ಎಲ್ಲವೂ ಸುದ್ದಿಯಾಗಿತ್ತು. ಪ್ರಶಸ್ತಿಯ ಹಣದಲ್ಲಿ ದಲ್ಲಾಳಿಗೆ ಪಾಲು ಹೋಗಿ, ಪ್ರಶಸ್ತಿ ವಿಜೇತರಿಗೆ ಚಿನ್ನದ ನಾಣ್ಯವೇ ಗಟ್ಟಿಯಾಗುತ್ತಿತ್ತು ಎಂಬುದು ಈಗ ಹಳೆ ಸುದ್ದಿ. ಈಗಿನ ಸುದ್ದಿ ಎಂದರೆ, ಈ ಸಲದ ಐವತ್ತು ಪ್ರಶಸ್ತಿಗೆ ಬಂದಿರುವ ಒಟ್ಟೂ ಅರ್ಜಿಗಳು ನಾಲ್ಕು ಸಾವಿರಕ್ಕೂ ಹೆಚ್ಚು!!. ಓಹ್ ಕನ್ನಡಿಗ..! ನೀನೆಷ್ಟು ಪುಣ್ಯವಂತ ಅನಿಸದಿರದೆ?
ಮತ್ತಷ್ಟು ಓದು

ಹಸಿವಿನ ಹಾದರಕ್ಕೆ ಹುಟ್ಟಿದ ಭ್ರಷ್ಟಾಚಾರ…
-ಸಾತ್ವಿಕ್ ಎನ್ ವಿ
ಮೊನ್ನೆ ಮೂರು ದಿವಸ ಬೆಂಗಳೂರಿನಲ್ಲಿ ಇದ್ದೆ. ನಗರ ಸಾರಿಗೆ ಬಸ್ಸುಗಳೇ ನನ್ನ ಓಡಾಟದ ಒಡನಾಡಿಗಳು. ಮಂಗಳೂರಿನ ಬಸ್ಸುಗಳಲ್ಲಿ ಓಡಾಡಿದವರಿಗೆ ಇಲ್ಲಿನ ವ್ಯವಸ್ಥೆ ತುಸು ನಿಧಾನ ಆನ್ನಿಸೀತು. ಇದ್ದ ಮೂರು ದಿನವು ಓಡಾಟದ ಸಲುವಾಗಿ ಹತ್ತಾರು ಬಸ್ಸುಗಳಲ್ಲಿ ಪ್ರಯಾಣಿಸುವಾಗಲು ಒಂದು ಸಾಮಾನ್ಯ ಕ್ರಿಯೆಯೊಂದು ನನ್ನ ಗಮನಕ್ಕೆ ಬಂತು. ನೀವು ಬಸ್ಸು ಹತ್ತಿ ಒಂದೆರಡು ನಿಲ್ದಾಣಗಳ ನಂತರ ಇಳಿಯುವವರಾಗಿದ್ದರೆ ನೀವು ಸರಿಯಾದ ಹಣಕೊಟ್ಟರೂ ಕಂಡಕ್ಟರ್ ನಿಮಗೆ ಟಿಕೇಟ್ ಕೊಡುವುದಿಲ್ಲ!! ಒಮ್ಮೆ ನಾನು ಬಾಯಿ ಬಿಟ್ಟು ಕಂಡಕ್ಟರನ್ನು ಟಿಕೇಟ್ ಕೊಡುವಂತೆ ಕೇಳಿದೆ. ಅವನು ಕೈಯಲ್ಲಿಯೇ ಸನ್ನೆ ಮಾಡಿ ಸುಮ್ಮನಿರುವಂತೆ ಹೇಳಿದ. ನಿಧಾನಕ್ಕೆ ೫ ರೂಪಾಯಿಯನ್ನು ನನ್ನ ಕೈಗೆ ಕೊಟ್ಟ. ನನಗೆ ಏನು ಹೇಳಬೇಕೋ ತಿಳಿಯಲಿಲ್ಲ. ನಾನು ಇಳಿಯಬೇಕಿದ್ದ ಸ್ಟಾಪ್ ಗೆ ಮೆಜೆಸ್ಟಿಕ್ ನಿಂದ ೮ ರೂಪಾಯಿ ಟಿಕೇಟ್ ಕೊಳ್ಳಬೇಕು. ಆದರೆ ಕೊಟ್ಟ ಹತ್ತು ರೂಪಾಯಿಯಲ್ಲಿ ಐದು ರೂಪಾಯಿ ತೆಗೆದುಕೊಂಡು ಉಳಿದ ಐದು ರೂಪಾಯಿ ವಾಪಸ್ಸು ಕೊಟ್ಟ. ಟಿಕೇಟ್ ಮಾತ್ರ ಇಲ್ಲ. ಅವನ ಮುಖದಲ್ಲಿ ವಿನ್ ವಿನ್ ಸಿದ್ದಾಂತದ ಮಂದ ನಗೆಯಿತ್ತು. ನನ್ನ ಮನದಲ್ಲಿ ಇಡೀ ದಿನ ತಪ್ಪು ಮಾಡಿದ ಅಪರಾಧಿ ಪ್ರಜ್ಞೆ.
ಇಂಥ ಪ್ರಸಂಗಗಳು ಬೆಂಗಳೂರಿಗರಿಗೆ ಸಾಮಾನ್ಯವಿರಬಹುದು. ಆದರೆ ಒಮ್ಮೆಮ್ಮೆ ಭೇಟಿಕೊಡುವ ನನ್ನಂಥವರಿಗೆ ತೀರಾ ಮಜುಗರವನ್ನು ತಂದು ಬಿಡುತ್ತವೆ. ನನಗಂತೂ ಈ ಪ್ರಸಂಗವಾದ ನಂತರ ಬೆಂಗಳೂರಿನ ಕಂಡಕ್ಟರಗಳ ಬಗ್ಗೆ ವಿಪರೀತ ಕೋಪ ಬಂದದ್ದೂ ನಿಜ. ಅಗಲೇ ನಿಶ್ಚಯ ಮಾಡಿದೆ, ಮತ್ತೊಮ್ಮೆ ಹೀಗೇನಾದರೂ ಕಡಿಮೆ ಹಣ ತೆಗೆದುಕೊಂಡು ಟಿಕೇಟ್ ಕೊಡದಿದ್ದರೆ ಸರಿಯಾಗಿ ಬೈಯ್ಯಬೇಕು ಅಂತ. ಮರುದಿನವೂ ಕಂಡಕ್ಟರ್ ಅದೇ ಕೆಲಸ ಮಾಡಿಬಿಡಬೇಕೇ? ನನಗೆ ಎಲ್ಲಿತ್ತೋ ಸಿಟ್ಟು … ಬಾಯಿಗೆ ಬಂದಂತೆ ಮಾತಾಡಲು ಆರಂಭಿಸಿದೆ. ಆದರೆ ಮಹಾನುಭಾವನಿಗೆ ಅದು ತಾಗಿದಂತೆ ಕಾಣಲೇ ಇಲ್ಲ!!! ಏನೂ ಆಗಿಯೇ ಇಲ್ಲ ಎಂಬಂತೆ ನನ್ನ ಪಕ್ಕದಲ್ಲಿ ಖಾಲಿ ಇದ್ದ ಸೀಟಿನಲ್ಲಿ ಕುಳಿತು ನಸುನಗುತ್ತ ಕೇಳಿದ ’ಸಾರ್, ನೀವು ಈ ಊರಿಗೆ ಹೊಸಬರಾ? ಅಂತ. ನಾನು ’ಅದೆಲ್ಲ ಇರಲಿ ಟಿಕೇಟ್ ಕೊಡಿ’ ಅಂದೆ. ಅವನು ಮತ್ತೂ ಕೂಲ್ ಆಗಿ ಮಾತಾಡೋಕೆ ಸ್ಟಾರ್ಟ್ ಮಾಡಿದ. ’ಸಾರ್, ನಿಮಗೆ ನಾವು ಟಿಕೇಟ್ ಕೊಡದೇ ಉಳಿಸಿದ ೫೦ – ೧೦೦ ರೂಪಾಯಿ ಬಗ್ಗೆ ಮಾತ್ರ ಗೊತ್ತು. ಅದರ ಬಗ್ಗೆ ನಿಮಗೆ ಸಿಟ್ಟು ಬರುತ್ತೆ. ಆದರೆ ನಮಗೆ ನಮ್ಮ ಜೀವನದ ಬಗ್ಗೆಯೇ ಸಿಟ್ಟು ಬರುತ್ತೆ ಸರ್. ಒಂದು ಕಡೆ ಮೇಲಾಧಿಕಾರಿಗಳ ಒತ್ತಡ, ಇನ್ನೊಂದು ಕಡೆ ಪ್ರಯಾಣೀಕರ ಕಿರಿಕಿರಿ, ಒಂದು ಸರಿಯಾದ ಊಟ ನಿದ್ದೆಯನ್ನು ಮಾಡೋಕೆ ಆಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ ಸರ್. ಮತ್ತಷ್ಟು ಓದು 
ಅವತ್ತು ಎದೆ ನೋವೂ ಬಂದಿರಲಿಲ್ಲ, ಶರಣರೂ ಬರಲಿಲ್ಲ..!
-ಕಾಲಂ ೯
ನೂರು ವರ್ಷ ದಾಟಿದ ಸಿದ್ಧಗಂಗಾ ಸ್ವಾಮೀಜಿ ಜೈಲು-ಆಸ್ಪತ್ರೆ ಹುಡುಕಿಕೊಂಡು ಯಡಿಯೂರಪ್ಪನವರನ್ನು ನೋಡಲು ಹೋಗಿದ್ದಾರಲ್ಲ? ಏನಿದರ ಹಿಂದಿನ ಹಕೀಕತ್ತು? ಧರ್ಮಾಚರಣೆಗೂ ಪುರುಸೊತ್ತು ಇಲ್ಲದಷ್ಟು ಸಾಮ್ರಾಜ್ಯ ಕಟ್ಟಿಕೊಂಡು ಸ್ವಾಮೀಜಿಯೊ ಅಥವಾ JSS ಕಂಪೆನಿಯ CEO ನೋ ಎಂಬಂತಿರುವ ಜಗದ್ಗುರುಗಳು ಧಾವಿಸಿ ಬಂದರಲ್ಲ? ಅಂತಹದೇನು ಆಗಿತ್ತಲ್ಲಿ? ರಂಭಾಪುರಿಗಳು ಸೇರಿದಂತೆ ಅನೇಕ ಸಣ್ಣ-ಪುಟ್ಟ ವೀರಶೈವ ಸ್ವಾಮೀಜಿಗಳು ಯಡಿಯೂರಪ್ಪನವರನ್ನು ಸಂತೈಸಲು ಸಾಲುಗಟ್ಟಿದ್ದು ಮಾಧ್ಯಮಕ್ಕೆ ಆಶ್ಚರ್ಯವೆನಿಸಿರಲಿಲ್ಲ. ಆದರೆ ಈ ಹಿರಿತಲೆಗಳು ಹಾಗೇ ದೌಡಾಯಿಸಿದ್ದರ ಹಿಂದೇನು ನಡೆದಿದೆ? ಇದು ಮಾಧ್ಯಮದ ಒಳಗೂ-ಹೊರಗೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೋಮವಾರದ ತಮ್ಮ ಅಂಕಣದಲ್ಲಿ ಅಮೀನ್ಮಟ್ಟು ತುಂಬಾ ಆಪ್ತವಾಗಿಯೇ ಯಡಿಯೂರಪ್ಪನವರ ಪ್ಲಸ್ಸು-ಮೈನಸ್ಸುಗಳನ್ನು ಹೊರಹಾಕಿದ್ದನ್ನು ಓದಿದ ಅನೇಕರು ’ಈ ಮಠಾಧಿಪತಿಗಳನ್ನೇಕೆ ಬಿಟ್ಟಿರಿ’ ಎಂದು ಪ್ರತಿಕ್ರಿಯಿಸಿದ್ದಾರೆ. ಸರ್ವ ವೀರಶೈವ ಮಠಗಳಿಗೂ ಒಬ್ಬನೇ ಆಡಳಿತಾಧಿಕಾರಿ ಎಂಬಂತಿರುವ ಸಚಿವ ಸೋಮಣ್ಣ ಬೆನ್ನುಹತ್ತಿ ಇವರನ್ನೆಲ್ಲ ಹೊರಡಿಸಿಕೊಂಡು ಬರುತ್ತಿದ್ದಾರೆಯೇ? ಸರ್ಕಾರದಿಂದ ದೇಣಿಗೆಯಾಗಿ ಪಡೆದ ೩-೫ ಕೋಟ ರೂಗಳ ಹಂಗು ಹಿಂಗೆಲ್ಲ ಮಾಡುವಂತೆ ಮಾಡಿತೆ?
ಒಟ್ಟು ರಾಜ್ಯದ ನಾಯಕತ್ವದ ಎಲ್ಲ ಲಕ್ಷಣಗಳು ಕರಗಿ ಶುದ್ಧ ವೀರಶೈವ ಮುಖಂಡನಂತೆ ಗೋಚರಿಸುತ್ತಿರುವ ಯಡಿಯೂರಪ್ಪನವರ ಜೈಲು-ಆಸ್ಪತ್ರೆಗಳ ಹರಾಕಿರಿ ನಗೆಪಾಟಲಾಗಿ ಹೋಗಿರುವಾಗ ಈ ’ಗೌರವಾನ್ವಿತ’ರೇಕೆ ಹರಸಲು ಹೊರಟರು? ಮತ್ತಷ್ಟು ಓದು 
ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!
– ಕೆ.ಎಸ್ ರಾಘವೇಂದ್ರ ನಾವಡ
“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“ ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“ ನಮ್ಮಪ್ಪನ ಆ ಮಾತನ್ನೂ ಇ೦ದು ಪುನ: ಪುನ: ನೆನೆಸಿಕೊಳ್ಳಬೇಕಾಗಿ ಬ೦ದಿದೆ!! ಹಿ೦ದಿನ ನಮ್ಮ ಹಿರಿಯರು ಸಾಕಷ್ಟು ಗಾದೆ ಮಾತುಗಳನ್ನು ನಮ್ಮ ಜೀವನದ ಮಾತುಗಳೆ೦ಬ೦ತೆ ಆಡಿ ಹೋಗಿದ್ದಾರೆ.. ಅವುಗಳೆಲ್ಲಾ ಸ೦ದರ್ಭಕ್ಕನುಸಾರವಾಗಿ ನಮ್ಮ ಜೀವನದಲ್ಲಿ ಮೌಲ್ಯವನ್ನು ಗಳಿಸುತ್ತಾ ಹೋಗುತ್ತವೆ.. ನಮಗೆ ಅಚ್ಚರಿಯನ್ನು ಮೂಡಿಸುತ್ತವೆ!! “ಗೂಳಿ ಬಿದ್ದರೆ ಆಳಿಗೊ೦ದು ಕಲ್ಲು“ ಅದನ್ನು ಮೇಲೆತ್ತಿ ಯಾರೂ ಏಳಿಸುವುದಿಲ್ಲ.. ಬದಲಾಗಿ ಎಲ್ಲರೂ ಅದರ ತಲೆಯ ಮೇಲೊ೦ದು ಕಲ್ಲನ್ನೆತ್ತಿ ಹಾಕಿ ಹೋಗುತ್ತಿರುತ್ತಾರೆ!! ಆ ಗಾದೆಯು ಇ೦ದಿನ ಕರ್ನಾಟಕ ರಾಜಕೀಯದಲ್ಲಿ ನಿಜವಾಗಿರುವಾಗ ಅದನ್ನೂ ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿ ಬ೦ದಿದೆ..
ಅದು ೧೯೮೩ ರ ಚುನಾವಣೆಯ ಕಾಲ.. ಕರ್ನಾಟಕ ರಾಜಕೀಯದಲ್ಲಿ ಭಾ.ಜ.ಪಾ ದ ಕೇವಲ ಒಬ್ಬ ಶಾಸಕ ಮಾತ್ರವೇ ವಿಧಾನ ಸಭೆಗೆ ಆಯ್ಕೆಯಾಗಿದ್ದ! ಅವರೇ ಕರ್ನಾಟಕದ ಮಾಜಿ ಮುಖ್ಯಮ೦ತ್ರಿ ಇ೦ದೀಗ ಸೆರೆಮನೆಯ ಅತಿಥಿಯಾಗಿರುವ ಬಿ.ಎಸ್.ಯಡಿಯೂರಪ್ಪ! ಕೇವಲ ಒಬ್ಬ ಶಾಸಕನಿ೦ದ ಆರ೦ಭವಾದ ಕರ್ನಾಟಕ ಭಾ.ಜ.ಪಾದ ಅಧಿಕಾರದತ್ತ ಯಾತ್ರೆ ೨೦೦೮ರ ವಿಧಾನಸಭೆಯ ಚುನಾವಣೆಯಲ್ಲಿ ನನಸಾಗಿ, ೧೧೦ ಜನ ಶಾಸಕರು ವಿಧಾನಸಭೆಗೆ ಆಯ್ಕೆಯಾಗುವಲ್ಲಿ ಯಡಿಯೂರಪ್ಪ ಹಾಗೂ ಬಿ.ಬಿ. ಶಿವಪ್ಪರ ಪರಿಶ್ರಮವನ್ನು ಮರೆಯುವ೦ತಿಲ್ಲ.. ನಿಜ.. ಇ೦ದು ಯಡಿಯೂರಪ್ಪ ರಾಜ್ಯ ಭಾ,ಜ,ಪಾ ದ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿಯೇ ಕೆಡಿಸಿದ್ದಾರೆ. ರಾಜ್ಯ ಭಾ.ಜ.ಪಾ. ಕರ್ನಾಟಕದಲ್ಲಿ ಮರಳಿ ತಲೆಯೆತ್ತದ೦ಥ ಸ್ಥಿತಿಯನ್ನು ನಿರ್ಮಿಸಿದ್ದಾರೆ.. ಎಲ್ಲವೂ ಸರಿ.. ಆದರೆ ಅವರು ಸೆರೆಮನೆ ಪಾಲಾದ ನ೦ತರ ಕರ್ನಾಟಕ ರಾಜಕೀಯ ದ ವಿರೋಧ ಪಕ್ಷಗಳು ಹಾಗೂ ಪ್ರಜಾಪ್ರಭುತ್ವದ ಆಧಾರಸ್ಥ೦ಭಗಳೆನ್ನಿಸಿರುವ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ನಡೆದುಕೊ೦ಡಿವೆಯೇ? ಎ೦ಬ ಪ್ರಶ್ನೆ ಮನಸ್ಸಿನಲ್ಲಿ ಏಳುವುದಿಲ್ಲವೇ? ಏಳುತ್ತದೆ! ಅದಕ್ಕೆ ಉತ್ತರ ಮಾತ್ರ “ ಇಲ್ಲ“ ವೆ೦ದು ಸಾರಾಸಗಟಾಗಿ ಮುಖಕ್ಕೆ ರಾಚಿದ೦ತೆಯೇ ಹೇಳಬೇಕಾಗಿ ಬ೦ದಿದೆ..
ಸಂಸ್ಕೃತಿ ಸಂಕಥನ – ೭
– ರಮಾನಂದ ಐನಕೈ
ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ
ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ ಲ್ಲದ ವಿಷಯವಿಲ್ಲ. ಯಾವ ಕ್ಷೇತ್ರದ ಬಗ್ಗಾದರೂ ಘಂಟೆಗಟ್ಟಲೇ ಮಾತನಾಡುತ್ತಾರೆ. ತಮಗೆ ಸಿಕ್ಕಾ ಪಟ್ಟೆ ಜ್ಞಾನವಿದೆಯೆಂಬ ಅಹಂಕಾರವೂ ಇದೆ. ಆದರೆ ಒಂದು ತೊಂದರೆ ಅಂದರೆ ಅವರು ಅಂದು ಕೊಂಡಂತೆ ಒಂದೂ ಆಗುವುದಿಲ್ಲ. ಅವರ ಮಾತಿ ನಲ್ಲಿ ತೋರುವ ಚಾಕಚಕ್ಯತೆ ಕೃತಿಯಲ್ಲಿ ಕಾಣುವು ದಿಲ್ಲ. ಉದಾಹರಣೆಗೆ ಅವರು ಶಕ್ತಿಯ ಮೂಲದ ಬಗ್ಗೆ ಅಮೂಲಾಗ್ರ ತಿಳುವಳಿಕೆ ಹೊಂದಿದ್ದಾರೆ. ವಿದ್ಯುತ್ ಅನ್ವೇಷಣೆಯ ಕುರಿತು ಸವಿವರವಾದ ಮಾಹಿತಿ ನೀಡುತ್ತಾರೆ. ವಿದ್ಯುತ್ ಕಂಡು ಹಿಡಿದ ವರು, ವಿದ್ಯುತ್ ಹೇಗೆ ಉತ್ಪಾದಿಸಲ್ಪಡುತ್ತದೆ; ತಂತಿ ಹೇಗೆ ವಿದ್ಯುತ್ ವಾಹಕವಾಗುತ್ತದೆ; ಬಲ್ಪಿನ ಒಳ ಗಡೆಯಿಂದ ಹೇಗೆ ಪ್ರಕಾಶ ನೀಡುತ್ತದೆ ಇತ್ಯಾದಿ. ಅವರ ನೆಚ್ಚಿನ ಆಳು ಶಂಕರ. ಆತ ಅಕ್ಷರ ಜ್ಞಾನಿಯಲ್ಲ. ಅವನಿಗೆ ಈ ಪ್ರಪಂಚದ ಬಗ್ಗೆ ಕಡಿಮೆ ತಿಳುವಳಿಕೆ ಇದೆ. ಮೇಸ್ಟ್ರು ಹೇಳಿದಷ್ಟು ಮಾಡುವುದು ಅವನ ಕಾಯಕ. ವಿದ್ಯುತ್ತಿನ ಬಗ್ಗೆ ಇಷ್ಟೆಲ್ಲ ಮಾಹಿತಿ ನೀಡುವ ಪ್ರಾಧ್ಯಾಪಕರಿಗೆ ಮನೆಯಲ್ಲಿ ಫ್ಯೂಸ್ ಹೋದರೆ, ಹೋಲ್ಡರಿನಲ್ಲಿ ವಯರ್ ಬಿಟ್ಟರೆ ಹಾಕಲು ಬರುವುದಿಲ್ಲ. ಆ ಕೆಲಸ ಮಾಡುವವನು ಶಂಕರ. ವಿದ್ಯುತ್ತಿಗೆ ಸಂಬಂಧಿಸಿದ ಅಷ್ಟೂ ರಿಪೇರಿ ಕೆಲಸವನ್ನು ಶಂಕರ ಮಾಡುತ್ತಾನೆ. ಆತನನ್ನು ಕೇಳಿ ದರೆ ತನಗೆ ಇದರ ಬಗ್ಗೆ ತಿಳುವಳಿಕೆಯೇನಿಲ್ಲ. ಹೀಗೆ ಮಾಡಿ ಮಾಡಿ ಕಲಿತೆ ಅನ್ನುತ್ತಾನೆ. ಜೀವನದ ಚಿಕ್ಕ ಕೆಲಸಕ್ಕೆ ನೆರವಿಗೆ ಬಾರದ ಪ್ರಾಧ್ಯಾಪಕರ ಪಾಂಡಿತ್ಯವನ್ನು ಏನನ್ನೋಣ? ಪ್ರಾಧ್ಯಾಪಕರದ್ದು ಲೋಕಜ್ಞಾನ, ಶಂಕರನದ್ದು ಕ್ರಿಯಾಜ್ಞಾನ ಅನ್ನೋಣವೇ? ಉತ್ತರ ಗೊತ್ತಿಲ್ಲ. ಹುಡುಕಲು ಪ್ರಯತ್ನಿಸೋಣ.
ಮತ್ತಷ್ಟು ಓದು 
ಬಡವರ ಬದುಕಿಗೆ ‘ಅರ್ಥ’ವೇ ಇಲ್ವಾ?
-ಮರಳಿಧರ ದೇವ್
ದಿನಕ್ಕೆ ಒಬ್ಬ ವ್ಯಕ್ತಿ ಕೇವಲ ೨೫ ರೂಪಾಯಿಗಳನ್ನು ಗಳಿಸಿದರೆ ಸಾಕಂತೆ, ಇದಕ್ಕಿಂತ ಹೆಚ್ಚಿಗೆ ಖರ್ಚು ಮಾಡುವವರು ಬಡವರಲ್ಲವಂತೆ. ಈ ರೀತಿ ಮೂರ್ಖತನದ ಹೇಳಿಕೆ ದಾಖಲು ಮಾಡಿರುವುದು ಯೋಜನಾ ಆಯೋಗ. ಒಬ್ಬ ವ್ಯಕ್ತಿಯ ದೀನದ ಖರ್ಚು ೨೫ ರೂಪಾಯಿಗಳಿಗಿಂತ ಹೆಚ್ಚಿದ್ದರೆ ಅವರು ಸರಕಾರದಿಂದ ಯಾವುದೇ ವಿಶೇಷ ಅನುದಾನ ಪಡೆಯಲು ಅರ್ಹರಲ್ಲ.
ಈ ರೀತಿಯ ವರದಿ ತಯ್ಯಾರಿಸುವವರಿಗೆ ದೇಶದ ಹಣದುಬ್ಬರದ ಹಾಗು ದೈನಂದಿನ ಖರ್ಚುಗಳಿಗೆ ಬೇಕಾಗಿರುವ ಹಣದ ಬಗ್ಗೆ ಅರಿವಿದೆಯೇ? ಇಂತಹ ಜನರು ಯೋಜನಾ ಅಯೋಗದಲ್ಲಿರೋದ್ರಿಂದಾನೆ ದೇಶದಲ್ಲಿ ಹಣದುಬ್ಬರ ಗಗನಕ್ಕೆ ಏರ್ತಾ ಇದ್ರೂ ಸರಕಾರಗಳು ಏನು ಆಗೇ ಇಲ್ಲ ಅನ್ನೋ ರೀತಿ ತೂಕಡಿಸುತ್ತಾ ಕೂತಿವೆ. ಅಲ್ಲ ಸ್ವಾಮಿ ಪ್ರತಿ ತಿಂಗಳಿಗೊಮ್ಮೆ ಪೆಟ್ರೋಲ್ ದರವನ್ನು ಮನಸೋ ಇಚ್ಚೆ ಹೆಚ್ಚಿಸಿ ಎಲ್ಲ ಪದಾರ್ಥಗಳ ಬೆಲೆಯನ್ನು ನಿಯಂತ್ರಣಕ್ಕೆ ಬಾರದೆ ಹಾಗೆ ಮಾಡಿ ಈಗ ಬರಿ ೨೫ ರೂಪಾಯಿಗಳಲ್ಲಿ ನಿಮ್ಮ ಜೀವನ ನಡೆಸಬೇಕು ಅಂತ ಆಯೋಗದ ವರದಿ ಹೇಳಿದ್ರೆ ಜನ ಸಾಮಾನ್ಯರು ಎಲ್ಲಿಗೆ ಹೋಕ್ಬೇಕು? ಮತ್ತಷ್ಟು ಓದು 




