ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

23
ಸೆಪ್ಟೆಂ

ಕುರುಡಾಗದಿರು ಭಾರತೀಯ ನಿನ್ನ ಕಣ್ಣುಗಳಿರುವ ತನಕ..

ಅಶ್ವಿನ್ ಎಸ್ ಅಮೀನ್

ಕೋಮುವಾದ, ಜಾತಿವಾದ,  ಇವುಗಳ ನಡುವಿನ ಸಂಘರ್ಷಗಳು ಯಾವ ದೇಶದಲ್ಲಿ ಎಷ್ಟರವರೆಗೆ ಇರುತ್ತವೆಯೋ ಅಲ್ಲಿಯ ತನಕ ಆ ದೇಶದ ಬೆಳವಣಿಗೆ ಕುಂಠಿತವಾಗಿ ಸಾಗುತ್ತದೆ. ಅದರಲ್ಲೂ ಆಳುವ ಸರಕಾರಗಳು ನಡೆಸುವ ಒಂದು ಸಮುದಾಯದವರ ಓಲೈಕೆ ಅದು ಅಲ್ಪಸಂಖ್ಯಾತರನ್ನಾಗಲೀ, ಬಹುಸಂಖ್ಯಾತರನ್ನಾಗಲೀ ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ.

ನಮ್ಮೀ ಭಾರತ ಇದೆಲ್ಲ ಸಮಸ್ಯೆಗಳಿಂದ ಹೊರತಾಗಿಲ್ಲ.. ಬಹುಶಃ ಈ ತರಹದ ಕೋಮು ವಿಂಗಡಣೆ, ಜಾತಿ ವಿಂಗಡಣೆ ರಾಜಕೀಯ ಭಾರತದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣಸಿಗದು..! ತಾಜಾ ಉದಾಹರಣೆಯಾಗಿ ಕೇಂದ್ರದ NAC ಸಿದ್ದಪಡಿಸಿದ ಕೋಮು ಸಂಘರ್ಷ ನಿಯಂತ್ರಣಾ ಕಾಯಿದೆಯ ಕರಡು ರೂಪದಲ್ಲೊಮ್ಮೆ ಕಣ್ಣಾಡಿಸಿ. ಇಲ್ಲಿ ಕಾಣಸಿಗುವುದು ಅಲ್ಪ ಸಂಖ್ಯಾತ, ಬಹು ಸಂಖ್ಯಾತ, ಪರಿಶಿಷ್ಟ ವರ್ಗ – ಪಂಗಡಗಳೆಂಬ ವಿಂಗಡಣಾ ರಾಜಕೀಯ.
ಕೋಮು ಸಂಘರ್ಷಗಳಲ್ಲಿ ತಪ್ಪಿತಸ್ಥರಾದವರಿಗೆ ಎಲ್ಲರಿಗೂ ಶಿಕ್ಷೆಯಾಗುವುದಾದರೆ ಈ ಕೋಮು ಸಂಘರ್ಷ ನಿಯಂತ್ರಣ ಕಾಯಿದೆ ಸ್ವಾಗತಾರ್ಹವಾಗುತಿತ್ತು. ಇಡೀ ಭಾರತಕ್ಕೆ ಭಾರತವೇ NAC ಯ ಮುಖ್ಯಸ್ಥೆ ಸೋನಿಯಾ ಗಾಂದಿಯವರನ್ನು ಅಭಿನಂದನೆಗಳಿಂದ ಮುಳುಗೇಳಿಸುತ್ತಿತ್ತು. ಆದರೆ ಹಾಗಾಗಲಿಲ್ಲ..! ಕಾರಣ ಇಲ್ಲಿ ಕೇವಲ ಬಹುಸಂಖ್ಯಾತರಿಗಷ್ಟೇ ಶಿಕ್ಷೆ.. ಅಲ್ಪಸಂಖ್ಯಾತರು ಯಾವುದೇ ಗಲಬೆಗಳಲ್ಲಿ ಪಾಲ್ಗೊಂಡರೂ ಈ ಕಾಯಿದೆಯಡಿ ಶಿಕ್ಷೆಯಿಲ್ಲ. ಅದರಲ್ಲೂ ಬೆಂಕಿಗೆ ತುಪ್ಪ ಸುರಿದಂತೆ ಬಹುಸಂಖ್ಯಾತ ಹಿಂದೂ ಧರ್ಮದಿಂದ ಪರಿಶಿಷ್ಟ ವರ್ಗ-ಪಂಗಡಗಳನ್ನು ಬೇರ್ಪಡಿಸಿರುವುದು..! ಪರಿಶಿಷ್ಟ ವರ್ಗ-ಪಂಗಡಗಳಿಗೆ ಸೌಲಭ್ಯ ಕಲ್ಪಿಸಿರುವುದು ಒಳ್ಳೆಯದೇ ಆಗಿದೆ. ಆದರೆ ಇಲ್ಲಿ ಭಾರತದ ಮೂಲ ಧರ್ಮವಾದ ಸನಾತನ ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರ ಅಡಗಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮತ್ತಷ್ಟು ಓದು »
12
ಸೆಪ್ಟೆಂ

ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦!?

– ಕೆ.ಎಸ್ ರಾಘವೇಂದ್ರ ನಾವಡ

  “ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦ “ ಎ೦ಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆಯಲ್ಲ!!

ಪ್ರಕರಣ: ಏಳು ತೃಣಮೂಲ ಕಾ೦ಗ್ರೆಸ್  ಕಾರ್ಯಕರ್ತರ ಹಠಾತ್ ಕಣ್ಮರೆ..

ಸ್ಠಳ: ಪಶ್ಚಿಮ ಮಿಡ್ನಾಪುರದ “ಪಿಸಾಯಲ“ ಹೆಸರಿನ ಪ್ರದೇಶ

ಕಾಲ : ೨೦೦೨

ಆ ನರಮೇಧದ ಹಿ೦ದಿನ ರೂವಾರಿಯ  ಹೆಸರು ಸುಶಾ೦ತ್ ಘೋಷ್!!

ಪಶ್ಚಿಮ ಭಾಗದ ಅಭಿವೃಧ್ಧಿ ಸಚಿವ, ಪಶ್ಚಿಮ ಬ೦ಗಾಳ ಸರ್ಕಾರ..

 

ಅ೦ತೂ ಕಮ್ಯೂನಿಸ್ಟರ ಬಣ್ಣ ಬಯಲಾಗತೊಡಗಿದೆ. ೩೫ ವರ್ಷಗಳಷ್ಟು ದೀರ್ಘ ಕಾಲ ಪಶ್ಚಿಮ ಬ೦ಗಾಳದಲ್ಲಿ ಸಾಧಿಸಿದ್ದೇನು? ಎ೦ಬುದಕ್ಕೆ ಈಗ ಉತ್ತರಗಳು ಸಿಗತೊಡಗಿವೆ! ಆದರೆ ಈ ರೀತಿಯ ಉತ್ತರ ಮಾತ್ರ ಯಾರೂ ನಿರೀಕ್ಷಿಸಿರಲಾರರು!   ಒಮ್ಮೆ ಮಮತಾ ದೀದಿ   ಥರಗುಟ್ಟಿ ಹೋಗಿದ್ದಾರೆ! ದೇಶದ ಅತ್ಯ೦ತ ಸುದೀರ್ಘ ಕಾಲದವರೆಗಿನ ಮುಖ್ಯಮ೦ತ್ರಿ ಜ್ಯೋತಿ ಬಸು ಹಾಗೂ ಆನ೦ತರದ ಕಾಮ್ರೇಡ್ ಬುಧ್ಧದೇವ ಭಟ್ಟಾಚಾರ್ಯ ಹೀಗೆ ಒಟ್ಟಾರೆ ಸತತ ೩೫ ವರ್ಷಗಳ ಕಾಲ ಬ೦ಗಾಳವನ್ನು  ಅಭಿವೃಧ್ಧಿ (?)ಗೊಳಿಸಿದ ಕಮ್ಯೂನಿಷ್ಟರ ಆಡಳಿತ ಹೇಗಿತ್ತು ಎನ್ನುವುದಕ್ಕೆ ಪುರಾವೆಗಳು ಸಿಗುತ್ತಿವೆ!

ಮತ್ತಷ್ಟು ಓದು »

12
ಸೆಪ್ಟೆಂ

ರೇಲ್ವೇ ಇಲಾಖೆ ಮತ್ತು ಹಿಂದಿ ಹೇರಿಕೆ.!

– ಮಹೇಶ.ಎಮ್.ಆರ್

ವಿ.ಸೂ: ಬೇರೆ ಒಂದು ಬಾಶೆಯನ್ನು ಗೌರವಿಸುವುದಕ್ಕೂ ಅದನ್ನು ನಮ್ಮ ಮೇಲೆ ಹೇರಿಸಿಕೊಳ್ಳುವುದಕ್ಕೂ ಇರುವ ವ್ಯತ್ಯಾಸವನ್ನು ತಿಳಿದಿರುವವರು ಮಾತ್ರ ಮುಂದುವರಿಯಲು ಕೋರಿಕೆ.!

ಸ್ವಾತಂತ್ರ್ಯ ನಂತರ, ಬಾರತೀಯತೆಗೂ ಹಿಂದಿಗೂ ತಳುಕು ಹಾಕಿ ಅದನ್ನು ರಾಶ್ಟ್ರ ಬಾಶೆ ಮಾಡಲು ಹೊರಟ ಕೇಂದ್ರ ಸರಕಾರದ ಮತ್ತು ಕೆಲವರ ಪ್ರಯತ್ನ ಅನೇಕ ಹಿಂದಿಯೇತರರ ವಿರೋದಿ ಹೋರಾಟದ ಫಲವಾಗಿ ವಿಫಲವಾಯಿತು. ಇದರ ತರುವಾಯ ಮುಂದೆ ಕೇಂದ್ರ ಸರಕಾರ ನೋಡಿಕೊಂಡ ದಾರಿಯೇ ಆಡಳಿತ ಬಾಶೆಯೆಂಬ ಹಿಂದಿನ ಬಾಗಿಲು. ಹಿಂದಿಯನ್ನು ಆಡಳಿತ ಬಾಶೆಯನ್ನಾಗಿ ಮಾಡಿ ತನ್ನ ಸಂಸ್ಥೆ, ಇಲಾಖೆ, ಬ್ಯಾಂಕುಗಳನ್ನು ಉಪಯೋಗಿಸಿ ಹಿಂದಿನ ಬಾಗಿಲ ಮೂಲಕ.

ಮತ್ತಷ್ಟು ಓದು »

9
ಸೆಪ್ಟೆಂ

ಯಾರು ಅಪಾಯಕಾರಿ!?

– ಸಚಿನ್

ನಮ್ಮ ನಿಮ್ಮ ಮಧ್ಯೆಯಿರುವ ಕೆಲ ಎಡಬಿಡಂಗಿ ಗಳು ನಿನ್ನೆ ದೆಹಲಿ ಹೈಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಒಂದು ಹೇಳಿಕೆ ಕೊಟ್ಟರು. ” ಬಿಜೆಪಿಗೆ ಅವಮಾನ ಆಗುವ ಸಂಧರ್ಭ ಗಳಲ್ಲಿ ಬಾಂಬ್ ಸ್ಪೋಟ ನಡೆಯುತ್ತಿದೆ ಹಾಗಾಗಿ ರೆಡ್ಡಿಯ ಬಂಧನದ ಸಂಧರ್ಭ ದಲ್ಲಿ ಈ ಸ್ಪೋಟ ನಡೆದಿರುವುದು ಹಲವಾರು ಉಹಾಪೋಹಗಳಿಗೆ ಎಡೆ ಮಾಡಿಕೊಡುತ್ತಿದೆ. ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಯಾ ಸಿಂಗ್ ನಡೆಸಿದ ಬಾಂಬ್ ಸ್ಪೋಟಗಳೇ ಇದಕ್ಕೆ ಸಾಕ್ಷಿ. ಅಣ್ಣಾ ಹಜಾರೆ ಮತ್ತು ರೆಡ್ಡಿ ಬಂಧನದ ಅಬ್ಬರ ಗಳಿಗಿಂತ ಹೆಚ್ಚಿನರೀತಿಯಲ್ಲಿ ಬಿಜೆಪಿ ದೇಶ ಭಕ್ತರು ಕಿರುಚಾಟಗಳನ್ನು ಶುರುಮಾಡ್ತಾರೆ ನೋಡ್ತಾಯಿರಿ” ಎಂದು ಎರಡು ಲೈನ್ ಬರೆದು ತಮ್ಮ ಮನಸ್ಸಿನಲ್ಲಿರುವ ಅಸಹ್ಯವನ್ನು ಹೊರಹಾಕಿದರು.

ಸ್ನೇಹಿತರೇ ನಾವು ಗಮನಿಸ ಬೇಕಾದ ಮುಖ್ಯವಾದ ಅಂಶವೆಂದರೆ ಈಗ ನಡೆಯುತ್ತಿರುವುದು ಭಯೋತ್ಪಾದಕರು ಮತ್ತು ಭಾರತ ದೇಶದ ಮಧ್ಯೆ ಯುದ್ದ, ಈ ಯುದ್ದ ದಲ್ಲಿ  ಭಯೋತ್ಪಾದಕರು ವಿಜಯಿಯಾಗುತಿದ್ದಾರೆ. ಈ ಭಯೋತ್ಪಾದನೆ ಕೃತ್ಯಗಳನ್ನ ಯಾವುದೇ ದೇಶ ಸುಮ್ಮನೆ ಸಹಿಸಿ ಕೊಳ್ಳುವುದಿಲ್ಲ. ಹಾಗು ಕೃತ್ಯ ನಡೆಸಿದವರಿಗೆ ಸರಿಯಾದ ಶಿಕ್ಷೆ ಕೊಡುವ ವ್ಯವಸ್ಥೆ ಬೇರೆ ದೇಶಗಳಲ್ಲಿದೆ. ಒಂದು ಸಣ್ಣ ಪ್ರಮಾದ ದಿಂದ ಬೆಂಗಳೂರಿನ ವೈದ್ಯ ಹನೀಫ್ ಆಸ್ಟ್ರೇಲಿಯಾದಲ್ಲಿ ಹೇಗೆ ನರಳಿದ ಎಂದು ನಮಗೆ ಗೊತ್ತಿಲ್ಲವೆ.

ಪಕ್ಷಗಳನ್ನು ಸಮರ್ಥಿಸಿಕೊಂಡು ಜಗಳವಾಡುವ ಸಮಯ ಇದಲ್ಲ. ಸುಮ್ಮನೆ ವಿತಂಡವಾದ ಮಾಡಿ ಎಲ್ಲದಕ್ಕು ಒಂದೊಂದು ಸಂಭಂದ ಕಲ್ಪಿಸಿ ನಿಮ್ಮ ಹೊಲಸನ್ನು ಕಾರಬೇಡಿ. ನಿಮ್ಮ ಭಂಡತನದ ನಿಲುವುಗಳು ಏನೆಂದು ಅಣ್ಣಾ ಹಜಾರೆ ಹೋರಾಟದ ಸಂಧರ್ಭದಲ್ಲಿ ನಮ್ಮ ಭಾರತದ ಎಲ್ಲ ಸತ್ಪ್ರಜೆಗಳಿಗೆ ಗೊತ್ತಾಗಿವೆ.

 

ಮತ್ತಷ್ಟು ಓದು »

7
ಸೆಪ್ಟೆಂ

ಅಣ್ಣಾ ಹಜಾರೆ – ಶ್ರೀ ಸಾಮಾನ್ಯನ ಮನೆ – ಮನಗಳ ದೀಪ.

– ಹೊಳೆನರಸೀಪುರ ಮಂಜುನಾಥ್

ಅಣ್ಣಾ ಹಜಾರೆಯವರ ಬೇಡಿಕೆಗಳನ್ನು ಕೇ೦ದ್ರ ಸರ್ಕಾರ ಒಪ್ಪಿಕೊಳ್ಳುವುದರ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ೧೨ ದಿನಗಳ ಉಪವಾಸ ಸತ್ಯಾಗ್ರಹ, ದೇಶದ ಮೂಲೆಮೂಲೆಯಿ೦ದ ಎ೦ದೂ ಕ೦ಡರಿಯದ೦ಥ ಅಭೂತಪೂರ್ವ ಜನಬೆ೦ಬಲ, ಕೇ೦ದ್ರಸರ್ಕಾರವನ್ನು ಮಣಿಸಿ, ಜನಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಸ೦ಸತ್ತಿನಲ್ಲಿ ಎಲ್ಲ ಪಕ್ಷಗಳೂ ಒಗ್ಗಟ್ಟಾಗಿ ಅನುಮೋದಿಸುವ೦ತೆ ಮಾಡಿದೆ. ಬಹುಶಃ ಸ್ವಾತ೦ತ್ರ್ಯಾನ೦ತರ ಭಾರತ ಕ೦ಡ ಅತ್ಯ೦ತ ಪರಿಣಾಮಕಾರಿ ಅಹಿ೦ಸಾತ್ಮಕ ಆ೦ದೋಲನವಿದು ಎ೦ದರೆ ತಪ್ಪಾಗಲಾರದು. ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಸಿಕ್ಕಿರುವ ಜಯ, ಯಾವುದೇ ಒ೦ದು ಪಕ್ಷಕ್ಕೆ, ಸ೦ಘಟನೆಗೆ ಅಥವಾ ವ್ಯಕ್ತಿಗೆ ಸಿಕ್ಕಿರುವ ಜಯವಲ್ಲ. ಇದು ದೇಶದ ಶ್ರೀಸಾಮಾನ್ಯನಿಗೆ ಸಿಕ್ಕಿರುವ ಅಪ್ರತಿಮ ವಿಜಯ. ತನ್ನ ದಿನನಿತ್ಯದ ಬದುಕಿನಲ್ಲಿ ಪ್ರತಿಯೊ೦ದು ಹೆಜ್ಜೆಯಲ್ಲಿಯೂ ಕ೦ಡು, ಅನುಭವಿಸಿ, ತನ್ನನ್ನು ಹೈರಾಣು ಮಾಡಿದ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ಈ ದೇಶದ ಸಾಮಾನ್ಯ ನಾಗರಿಕನ ಸಾತ್ವಿಕ ಕೋಪಕ್ಕೆ ಸಿಕ್ಕ ವಿಜಯ ಇದಾಗಿದೆ.
ಮತ್ತಷ್ಟು ಓದು »

3
ಸೆಪ್ಟೆಂ

“ ಹೌದು..ಹಾಗಿದ್ದರು ಹೆಗಡೇಜಿ ” !!!

ಕೆ ಎಸ್ ರಾಘವೇಂದ್ರ ನಾವಡ

ಇತ್ತೀಚೆಗೆ ಯಡಿಯೂರಪ್ಪ ಅಧಿಕಾರ ಉಳಿಸಿಕೊಳ್ಳುವ ಕೊನೆಯ ತ೦ತ್ರಗಳೆಲ್ಲಾ ವಿಫಲವಾದ ನ೦ತರ ಜನತೆಗೆ ಆಷಾಢ ಮಾಸವೆ೦ಬ ಯಕಶ್ಚಿತ್ ಕಾರಣ ನೀಡಿ, ಅಲ್ಲಿಯವರೆಗೂ ಎಳೆದಾಡಿ, ಕೊನೆಗೆ ಪದತ್ಯಾಗ ಅನಿವಾರ್ಯವಾದಾಗ ರಾಜೀನಾಮೆ ನೀಡಿದ್ದು, ಕೂಡಲೇ ರಾಜೀನಾಮೆ ನೀಡುವ ಮೂಲಕ ತಮ್ಮ ಮರ್ಯಾದೆ ಉಳಿಸಿಕೊಳ್ಳಬಹುದಾದ ಏಕೈಕ ಮಾರ್ಗವನ್ನೂ ತೊರೆದು, ಇ೦ದು ಬ೦ದು ನಾಳೆ ಹೋಗುವ “ಅಧಿಕಾರ“ ವೆ೦ಬ

( ಅದೂ ಜನತೆ ನೀಡಿದ್ದು) ಹಾಸಿಗೆಯ ಮೇಲೆ ಆರಾಮಾಗಿ ಮಲಗಿ, ಕಾಲ ಕಳೆದದ್ದರ ಬಗ್ಗೆ ಹಾಗೂ ಆ ಮೂಲಕ ಭಾಜಪಾದ ಶಕ್ತಿಯೇ ತಾನೆ೦ಬುದನ್ನು ತನ್ನ ಹೈಕಮಾ೦ಡ್ ಗೆ ಮನವರಿಕೆ ಮಾಡಿಕೊಡುವ ಯತ್ನದಲ್ಲಿ ಗೆದ್ದರೂ, ಸದಾನ೦ದ ಗೌಡರು ಮುಖ್ಯಮ೦ತಿರ್ಗಳಾಗಿ ರಹಸ್ಯ ಮತದಾನದ ಮೂಲಕ ಗೆಲ್ಲುವಲ್ಲಿ ಇಟ್ಟ ರಾಜಕೀಯ ಚಾಣಾಕ್ಷ ಹೆಜ್ಜೆಗಳು, ಅದಕ್ಕವರು ತೆಗೆದುಕೊ೦ಡ ತೀರ್ಮಾನಗಳು, ಒ೦ದರ ನ೦ತರ ಮತ್ತೊ೦ದರ೦ತೆ ನ್ಯಾಯಾಲಯಕ್ಕೆ ಅವರು ತಮ್ಮ ಮೊಕದ್ದಮೆಗಳ ಮೇಲಿನ ವಿಚಾರಣೆ ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಸುಮಾರು ೬ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದ್ದು ( ದಿನಕ್ಕೊ೦ದು-ಎರಡರ೦ತೆ) ನ್ಯಾಯಾಲಯದ ತು೦ಬೆಲ್ಲಾ ಯಡಿಯೂರಪ್ಪನವರೇ ಚರ್ಚಾವಸ್ತುವಾಗಿದ್ದಾರೆ೦ಬ ವಿಚಾರಗಳನ್ನು ತಿಳಿದು ಫಕ್ಕನೆ ನನಗೆ ನೆನಪಾಗಿದ್ದು ರಾಮಕೃಷ್ಣ ಹೆಗಡೆ!!
ರಾಜಕೀಯದಲ್ಲಿ ಯಾವಾಗಲೂ ಹಾಗೆಯೇ…. ಸಾಧಾರಣವಾಗಿ ಜನಮಾನಸದಿ೦ದ ನಿರೀಕ್ಷೆಗಳನ್ನು ಹೊತ್ತಲ್ಪಟ್ಟವರು ಅಧಿಕಾರದ ಗದ್ದುಗೆಯನ್ನೇರಿದ ಕೂಡಲೇ ಜನತೆ ತಮ್ಮ ಮೇಲಿಟ್ಟಿರಬಹುದಾದ ನಿರೀಕ್ಷೆಗಳ ಅರಿವಿದ್ದೋ ಅರಿವೆಲ್ಲದೆಯೋ… ಅವುಗಳ ಗೋಜಿಗೇ ಹೋಗುವುದಿಲ್ಲ! ಆದರೆ ಕೆಲವೊಮ್ಮೆ ಯಾವುದೇ ನಿರೀಕ್ಷೆಯಿರದಿದ್ದ.. ಜನರು ಯೋಚನೆಯನ್ನೇ ಮಾಡಿರದ ವ್ಯಕ್ತಿಗಳನೇಕರು ಉತ್ತಮ ಮಾದರಿಯ ಪ್ರಜಾಸತ್ತೆಯನ್ನು ನೀಡಿ ಹೋಗಿದ್ದಾರೆ… ೧೯೯೦ ರ ದಶಕದಲ್ಲಿ ಪ್ರಧಾನಿಯಾಗಿ ಸ೦ಪೂರ್ಣ ಐದು ವರ್ಷಗಳ ಸುಭದ್ರ ಆಡಳಿತ ನೀಡಿದ ಪಿ.ವಿ. ನರಸಿ೦ಹರಾಯರ ಮೇಲೆ ಯಾರೂ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟೇ ಇರಲಿಲ್ಲ!! ಆದರೂ ಸ್ವತ೦ತ್ರ ಭಾರತದ ಆರ್ಥಿಕ ಇತಿಹಾಸದಲ್ಲಿ ಪಿ.ವಿ. ನರಸಿ೦ಹರಾವ್ ಹಾಗೂ ಆಗಿನ ಅರ್ಥ ಸಚಿವ ಮನಮೋಹನಸಿ೦ಗರ ಜುಗಲ್ ಬ೦ದಿಯು ಸುವರ್ಣಾಕ್ಷರಗಳಲ್ಲಿ ಬರೆದಿಡುವ೦ಥಾದ್ದು! ಈಗಿನ ಭಾರತದ ಸದೃಢ ಆರ್ಥಿಕತೆ ಆಗಿನ ಆ ಮಹನೀಯರುಗಳ ಪ್ರಯತ್ನದ ಹಾಗೂ ಅವರುಗಳು ತೆಗೆದುಕೊ೦ಡ ದಿಟ್ಟ ಕ್ರಮಗಳ ಫಲ..

ಮತ್ತಷ್ಟು ಓದು »

25
ಆಗಸ್ಟ್

ಗುಂಡಣ್ಣನ ಗೂ+ ಪುರಾಣ

ಪ್ರಶಸ್ತಿ. ಪಿ, ಸಾಗರ

fb ಹೋಯ್ತು ಗೂ+ ಬಂತು ಢಂ ಢಂ ಢಂ..” ಅಂತ ಕಟ್ಟಾ ಗೂಗಲ್ ಪ್ರೇಮಿ ಗುಂಡಣ್ಣ ಕಾಲೇಜ್ ಗ್ರೌಂಡಲ್ಲಿ ಗುನುಗ್ತಿರ್ಬೇಕಿದ್ರೆ ಅವನಂಗೆ ಕೆಲಸಿಲ್ಲದ ಕೆಲ ದೋಸ್ತುಗಳು ಅಲ್ಲಿಗೆ ವಕ್ಕರಿಸಿದ್ರು. ಗುಂಡಣ್ಣ ಪೇಟೆಗೆ ಬಂದು ಅಲ್ಲಿನ ಕೆಲ ದೋಸ್ತುಗಳ ಬಾಯಲ್ಲಿ ಮಿ.ರೌಂಡ್ ಆಗಿದ್ದ. ಏನು ಮಿ.ರೌಂಡ್ ತುಂಬಾ ಖುಷಿಯಾಗಿದ್ದೀರಿ ಅಂದ್ಳು ಇಳಾದೇವಿ ಅಲಿಯಾಸ್ ಇಳಾ. ಆಗ್ದೇ ಇನ್ನೇನು ಆರ್ಕುಟು, ಜೈಕು,ವೇವು,ಬಜ್ಜು ಎಲ್ಲಾ ಆದ್ಮೇಲೆ ಹೊಸಾದು ಬಂದಿದ್ಯಲ್ಲಾ ಗೂಗಲ್ ಪ್ಲಸ್ಸು ಅದ್ರಿಂದ ಸಾಹೇಬ್ರು ಸಿಕ್ಕಾಪಟ್ಟೆ ಖುಷಿಯಾಗಿದಾರೆ ಅಂದ ಟಾಂಗ್ ತಿಪ್ಪ ಅಲಿಯಾಸ್ ಟಿಪ್ಸ್. ಆರ್ಕುಟ್ ಅನ್ನೋದನ್ನ ಆರ್ಕುಟ್ ಬಯೋಕ್ಕೊಟೇನ್ ಅನ್ನೋ ಮಹಾಶಯ ಕಂಡು ಹಿಡಿದಿದ್ದಲ್ವಾ ಮಾರಾಯ್ರೇ ಅಂತ ತನ್ನನುಮಾನ ಹೇಳ್ದ ಮಂಗಳೂರು ಮಂಜ ಅಲಿಯಾಸ್ ಮಿ.ಮ್ಯಾಂಜ್.ಹೌದು   ಆದ್ರೆ ಅವ್ನು ಈಗ ಗೂಗಲ್ ಅಲ್ಲಿ ಪ್ರಾಡಕ್ಟ್ ಮ್ಯಾನೇಜರ್. ಆರ್ಕುಟ್ ನ ಗೂಗಲ್ ಕೊಂಡ್ಕಂಡು ಸುಮಾರು ವರ್ಷ ಆಯ್ತು, ನೀವೆಲ್ಲಿದೀರಾ ಮಿ.ಮ್ಯಾಂಜ್ ಅಂದ್ಳು ಸರಸ್ವತಿ ಅಲಿಯಾಸ್ ಸರ್. ತಾನೇ ಬುದ್ದಿವಂತ ಅಂದ್ಕಂಡಿದ್ದ ಮಂಜನ ಮುಖ ಹುಳ್ಳಗಾಯ್ತು.

ಓ ಹೌದಾ? ಅದೆಂತದು ಜೈಕು ಅಂದ್ಯಲಾ ಅದೆಂತದು ಮಾರಾಯ ಅಂದ ತಿಮ್ಮ ವಿಷಯ ಬದಲಾಯಿಸಕ್ಕೆ .  ಅದೂ fb ತರ  ಒಂದು ಸಾಮಾಜಿಕ ತಾಣ. ಮಿಕ್ರೋ ಬ್ಲಾಗಿಂಗ್, ಲೈಫ್ ಸ್ಟ್ರೀಮ್ ಅನ್ನೋ ಸೇವೆ ಗಳನ್ನ ಟ್ವಿಟ್ಟರ್ ಗೆ ಕೊಡುತ್ತೆ ಅಂದ ತಿಪ್ಪ. ಹಂಗದ್ರೇ ಏನು ಅಂತ ಇಳಾ ಕೇಳೋದ್ರೊಳಗೆ ಅದನ್ನ 2006 ರಲ್ಲಿ ಫಿನ್ ಲ್ಯಾಂಡಿನ ಜೆರ್ರಿ ಮತ್ತೆ ಪೆಟ್ರಿ ಅನ್ನೋರು ಕಂಡು ಹಿಡಿದ್ರು ಅಂದ್ಳು ಸರು. ಅದನ್ನೂ ನಂಗೂಗಲ್ ನವ್ರು 2007 ರಲ್ಲಿ ತಂಗೊಡ್ರು. ಉಪ್ಪಿಗಿಂತ ರುಚಿ ಬೇರೆ ಇಲ್ಲ. ಗೂಗಲ್ಗಿಂತ ಬ್ರೌಸರ್ ಬೇರೆ ಇಲ್ಲ… ಅಂತ ಹಾಡೋಕೆ ಶುರು ಮಾಡ್ದ ಗುಂಡಣ್ಣ. ಎಲ್ಲ ಸ್ವಲ್ಪ ಹೊತ್ತು ಕಿವಿ ಮುಚ್ಕಂಡ್ರು.  ಮತ್ತಷ್ಟು ಓದು »

24
ಆಗಸ್ಟ್

ಡಿ ಬಿ ಚಂದ್ರೇಗೌಡರು ಪುಸ್ತಕದಲ್ಲಿ

– ಕಾಲಂ ೯

ಮಲೆನಾಡಿನ ರಾಜಕಾರಣಿ ಡಿ.ಬಿ. ಚಂದ್ರೇಗೌಡರು 75ರ ಹೊಸ್ತಿಲಲ್ಲಿ ಇದ್ದಾರೆ. ಅವರ ನಿರೂಪಿತ  ಆತ್ಮಕಥೆ ‘ಪೂರ್ಣಚಂದ್ರ’ ಪ್ರಕಟಣೆಗೆ ಸಿದ್ಧವಾಗಿದೆ.

ಕಾಂಗ್ರೆಸ್ಸು, ಜನತಾದಳ, ಬಿಜೆಪಿ ಎಲ್ಲ ಪಕ್ಷಗಳಲ್ಲೂ ರಾಜಕೀಯ ಯಾತ್ರೆ ಮಾಡಿ ಕಾನೂನು, ಸಂಸದೀಯ ವ್ಯವಹಾರದಲ್ಲಿ ಹಿಡಿತ ಸಾಧಿಸಿರುವ ರಾಜಕಾರಣಿ ಚಂದ್ರೇಗೌಡರು.

ಆಕಾಶವಾಣಿಯ ಹಿರಿಯ ಪತ್ರಕರ್ತರೊಬ್ಬರು ಚಂದ್ರೇಗೌಡರ ಈ ಆತ್ಮಕಥೆ ‘ಪೂರ್ಣಚಂದ್ರ’(ಚಂದ್ರೇಗೌಡರ ಮನೆಯಾಕೆ ಪೂರ್ಣಿಮಾ)ವನ್ನು ನಿರೂಪೊಸಿದ್ದಾರೆ.

1977ರ ತುರ್ತುಪರಿಸ್ಥಿತಿಯ ತರುವಾಯ ತಿರಸ್ಕೃತಗೊಂಡಿದ್ದ ಇಂದಿರಾಗಾಂಧಿಗೆ ‘ರಾಜಕೀಯ ಮರುಪ್ರವೇಶ’ಕ್ಕಾಗಿ ತಾವು ಗೆದ್ದಿದ್ದ ಚಿಕ್ಕಮಗಳೂರು ಕ್ಷೇತ್ರವನ್ನು ಬಿಟ್ಟುಕೊಟ್ಟ ಕುಟುಂಬ ನಿಷ್ಠೆ ಚಂದ್ರೇಗೌಡರದ್ದು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಚಿಕ್ಕಮಗಳೂರಿನ ದತ್ತಪೀಠದ ವಿವಾದದ ಸಂಧರ್ಭದಲ್ಲಿ ಸ್ವತಃ ತಾವೇ ಪೂಜೆಗೆ ಕೂತು ಸಿಟಿ ರವಿ, ಮುತಾಲಿಕರಂತಹವರ ಚಳುವಳಿಗಾರರನ್ನು, ಗೌರಿ ಲಂಕೇಶ, ಶಿವಸುಂದರ್ ಇತ್ಯಾದಿ ವಿರೋಧಿ ಬಣದವರನ್ನು ದಂಗುಬಡಿಸಿದ್ದರು.

ಕೊನೆಗಾಲದಲ್ಲಿ ಬಿಜೆಪಿ ಸೇರಿ ಬೆಂಗಳೂರಿನಲ್ಲೊಂದು ಸಂಸದೀಯ ಕ್ಷೇತ್ರ ಹುಡುಕಿಕೊಂಡು ಸಂಸತ್ ಸದಸ್ಯರಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಯಡಿಯೂರಪ್ಪನವರಿಗೆ ಮನೆದಾರಿ ತೋರಿಸಿದಾಗ ವಕಾಲತ್ತಿಗೆ ನಿಂತ ಋಣಸಂದಾಯ ನಿಷ್ಠೆ ಅವರದು.

ಈ ತಿಂಗಳ ಕೊನೆಯಲ್ಲಿ ಪುಸ್ತಕ ಬರಬೇಕು. ಆದರೆ ಅಗಸ್ಟ್ 27ಕ್ಕೆ ಯಡಿಯೂರಪ್ಪನವರಿಗೆ ಇರುವ ಸಮನ್ಸ್ ಮತ್ಯಾವ ರೂಪ ಪಡೆದುಕೊಳ್ಳುತ್ತದೋ ಎಂಬ ಆತಂಕದಲ್ಲಿರುವ ಚಂದ್ರೇಗೌಡರು ಮುಹೂರ್ತದ ದಿನ ಹುಡುಕುತ್ತಿದ್ದಾರೆ.

ಈ ಹಿಂದೆ ಪ್ರಜಾವಾಣಿಯ ಬಿ. ಎಂ. ಹನೀಫ಼್ ನಿರೂಪಿಸಿದ್ದ ಮೈಸೂರಿನ ರಾಜಕಾರಣಿ ಹೆಚ್. ವಿಶ್ವನಾಥರವರ ಆತ್ಮಕಥೆ ಸಾಕಷ್ಟು ಗಮನ ಸೆಳೆದಿದ್ದನ್ನು ಸ್ಮರಿಸಬಹುದು.

*********

20
ಆಗಸ್ಟ್

ಸಂಸ್ಕೃತಿ ಸಂಕಥನ – ೫

– ರಮಾನಂದ ಐನಕೈ

ಆಧುನಿಕ ಇತಿಹಾಸದಲ್ಲಿ ಪದೇ ಪದೇ ಕಲ್ಯಾಣ ರಾಜ್ಯ ‘ವೆಲ್ಫೇರ್ ಸ್ಟೇಟ್’ದ ಕುರಿತು ಉಲ್ಲೇಖವಾಗುತ್ತದೆ. ಕಲ್ಯಾಣ ರಾಜ್ಯ ಅಂದರೆ ಏನು? ಪ್ರಜೆಗಳ ಸರ್ವತೋಮುಖ ಕ್ಷೇಮವನ್ನು ಹೆಗಲ ಮೇಲೆ ಹೊತ್ತ ಪರಿಕಲ್ಪನೆ ಇದು. ಸಾಮಾಜಿಕ ಭದ್ರತೆ (ಸೋಶಿಯಲ್ ಸೆಕ್ಯುರಿಟಿ) ಕಲ್ಯಾಣ ರಾಜ್ಯದ ಒಂದು ಆದರ್ಶ. ಪ್ರತಿಯೊಬ್ಬ ಪ್ರಜೆಗೆ ಸಾಮಾಜಿಕ ಭದ್ರತೆ ನೀಡುವುದೂ ಕಲ್ಯಾಣ ರಾಜ್ಯದ ಒಂದು ಗುರಿ.

ಪಾಶ್ಚಾತ್ಯರು ಈ ಸಮಾಜಿಕ ಭದ್ರತೆಯನ್ನು ಕಲ್ಪಿಸಿಕೊಂಡ ರೀತಿ ಭಿನ್ನವಾಗಿದೆ. ಈ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬ ಮನುಷ್ಯನಿಗೆ ಬದುಕುವ ಹಕ್ಕಿದೆ. ಇದನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಮನುಷ್ಯನಿಗೆ ಬದುಕಲು ಬೇಕಾದ ಅನ್ನ, ನೀರು, ಮನೆ, ಬಟ್ಟೆ ಮುಂತಾದ ಅನೇಕ ಅವಶ್ಯಕತೆಗಳನ್ನು ಪ್ರಭುತ್ವ (ಸ್ಟೇಟ್) ಪೂರೈಸಿ ಅವರಲ್ಲಿ ಭದ್ರತೆಯ ಭಾವನೆಯನ್ನು ಹುಟ್ಟಿಸಬೇಕು. ಆಗ ಪ್ರಜೆಗಳು ಸಂತೋಷವಾಗಿರುತ್ತಾರೆ ಎಂಬುದು ಅವರ ಚಿಂತನೆ. ಇದನ್ನೇ ಸಾಮಾಜಿಕ ಭದ್ರತೆ ಎಂದು ಕರೆದರು. ಇದಕ್ಕಾಗೇ ಅನೇಕ ರಾಷ್ಟ್ರಗಳು ತಮ್ಮನ್ನು ವೆಲ್ಫೇರ್ ಸ್ಟೇಟ್ಸ್ ಎಂದು ಕರೆದುಕೊಂಡವು. ಇದನ್ನು ಸರಳವಾಗಿ ಹೇಳಬಹುದಾದರೆ ಕನಿಷ್ಟ ಅವಶ್ಯಕತೆಯ ಭೌತಿಕ ಸವಲತ್ತುಗಳನ್ನು ನೀಡುವುದೇ ಅವರ ಪ್ರಕಾರ ಸಾಮಾಜಿಕ ಭದ್ರತೆ. ಪಾಶ್ಚಾತ್ಯರ ಈ ಲೋಕಜ್ಞಾನ ಭಾರತೀಯರಿಗೆ ರೋಮಾಂಚಕವಾಗಿ ಕಂಡದ್ದು ಸಹಜ. ಏಕೆಂದರೆ ಪಾಶ್ಚಾತ್ಯ ಸಂಸ್ಕೃತಿಯನ್ನು ಒಂದು ಪರಿಪೂರ್ಣ ಮಾದರಿ ಎಂದು ನಾವು ಸ್ವೀಕರಿಸಿಬಿಟ್ಟಿದ್ದೇವೆ.

ಮತ್ತಷ್ಟು ಓದು »

19
ಆಗಸ್ಟ್

ಜನಲೋಕಪಾಲ ಅನ್ನುವುದು ಮಾಯದಂಡವೇನಲ್ಲ…!

– ರಾಕೇಶ್ ಶೆಟ್ಟಿ

ಒಂದೆಡೆ ಅಣ್ಣಾರನ್ನ ಬೆಂಬಲಿಸಿ ಜನ ಬೀದಿಗಿಳಿದರೆ, ಇನ್ನೊಂದೆಡೆ ಅಣ್ಣಾ ಹೋರಾಟವನ್ನ ಪ್ರಶ್ನಿಸಿ ಹಲವಾರು ಪ್ರಶ್ನೆಗಳೆದ್ದಿವೆ.

’ಜನಲೋಕಪಾಲ್’ ಬಂದ ತಕ್ಷಣ ಎಲ್ಲ ಭ್ರಷ್ಟರು ಮಾಯವಾಗ್ತಾರೆ ಅಂತ ಖುದ್ದು ಅಣ್ಣಾ ಮತ್ತು ಸಿವಿಲ್ ಸೊಸೈಟಿಯವರ್ಯಾರು ಸಹ ಎಲ್ಲೂ ಹೇಳಿಲ್ಲ.ಹಾಗಾಗ್ಯೂ ಇಂತ ವಾದ ಹುಟ್ಟು ಹಾಕಿದ್ದು ಯಾರು? ಬಹುಷಃ ಕಪಿಲ್ ಸಿಬಲ್ ಇರಬೇಕು ಅದನ್ನೆ ಹಿಡಿದು ಕೆಲವರು ’ಜನಲೋಕಪಾಲ್’ ಬಂದ್ರೆ ಭ್ರಷ್ಟಚಾರ ಮಾಯವಾಗುತ್ತಾ!? ಅಂತ ಕೇಳ್ತಾ ಇದ್ದಾರೆ ಕೆಲವರು. ಅಂತವರಿಗೊಂದು ಪ್ರಶ್ನೆ ಪೋಲಿಸ್ ಇಲಾಖೆ ಅನ್ನುವುದು ಬಂದು ಎಷ್ಟು ವರ್ಷಗಳಾಯ್ತು? ಕಳ್ಳತನ-ಕೊಲೆ-ದರೋಡೆ ನಿಂತಿದೆಯಾ ಸ್ವಾಮಿ!? ಇಲ್ಲ ತಾನೆ..! ಆದರೆ ಜನ್ರಿಗೊಂದು ಹೆದರಿಕೆಯಂತೂ ಇರುತ್ತದೆ ತಪ್ಪು ಮಾಡೋಕೆ ಹಾಗೆ ತಪ್ಪು ಮಾಡಿದವರನ್ನ ಹಿಡಿದು ಜೈಲಿಗೆ ಅವರು ನೂಕುತಿದ್ದಾರಲ್ವಾ? ಹಾಗೆಯೇ ಜನಲೋಕಪಾಲ ಅನ್ನುವುದು ಸಹ.ಅದು ಬಂದ ತಕ್ಷಣ ಎಲ್ಲ ಸರಿ ಹೋಗದು.ಅದು ಸುಧಾರಣೆಯ ಒಂದು ಅಸ್ತ್ರವಷ್ಟೆ.

ಮತ್ತಷ್ಟು ಓದು »