ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

21
ಮೇ

ಪಾಕಿಸ್ತಾನದ ಭೂಪಟ 17.05.2011ರ ಕನ್ನಡಪ್ರಭದಲ್ಲಿ…

– ಪಿ.ಎಸ್.ರಂಗನಾಥ

ಒಂದು ದೇಶದ ಭೂಪಟ ಅಂದರೆ  ಅದರ ಭೌಗೋಳಿಕ ವಿನ್ಯಾಸ ಹಾಗು ಅದರ ಸರಿಹದ್ದು ಗಳನ್ನು ತೋರಿಸುವ ಚಿತ್ರ ಅಂತ ನಮ್ಮೆಲ್ಲರಿಗು ಗೊತ್ತಿರುವ ವಿಷಯ. ಪ್ರತಿಯೊಂದು ದೇಶವೂ ತನ್ನದೇ ಆದ ಒಂದು ನಕ್ಷೆಯನ್ನು ಸಿದ್ದಪಡಿಸಿಕೊಂಡು ಅಂತರಾಷ್ಟ್ರೀಯವಾಗಿ ತನ್ನನ್ನು ಗುರುತಿಸಿಕೊಳ್ಳುತ್ತದೆ. ಸದ್ಯಕ್ಕೆ ನಮ್ಮ ದೇಶಕ್ಕೆ ಬಂದರೆ ನಮ್ಮ ಕೆಲವು ಪ್ರಾಂತ್ಯಗಳು ಪಾಕಿಸ್ತಾನ ಹಾಗು ಚೀನಾದ ವಶದಲ್ಲಿದ್ದರು ನಾವುಗಳು ನಮ್ಮ ದೇಶದ ಗಡಿಯನ್ನು ಹಾಕಿ ನಾವು ಗುರುತಿಸಿಕೊಂಡಿದ್ದೇವೆ ಹಾಗು ಸರಕಾರ ಅದನ್ನು ಒಪ್ಪಿ ಅಧಿಕೃತವಾಗಿ ಮುದ್ರೆ ಹಾಕಿದೆ ಜತೆ ರಾಷ್ಟ್ರದ ಪ್ರಜೆಗಳಿಗೆ ಸಹ ಒಪ್ಪಿಗೆ ಯಾಗಿದೆ. ಯಾವುದೇ ಪುಸ್ತಕಗಳಲ್ಲಿ, ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಹಾಗು ರಾಷ್ಟ್ರದ ಮೂಲೆ ಮೂಲೆ ಗಳಲ್ಲಿ ಮುದ್ರಿತವಾಗಿ ಪ್ರಸಾರ ವಾಗುತ್ತಿರುವುದು POK (Pak Occupied Kashmir) ಹಾಗು ಚೈನಾ ಆಕ್ರಮಿತ ಕೆಲ ಭಾಗವನ್ನು ಒಳಗೊಂಡ ಭೂಪಟ ಮಾತ್ರ. ಆದರೆ ಪಾಕಿಸ್ತಾನ POK ಪ್ರಾಂತ್ಯವನ್ನು ತನ್ನ ಅಧಿಕೃತ ನಕ್ಷೆ ಯಾಗಿ ಉಪಯೋಗಿಸುತ್ತಿದೆ. ಅದನ್ನು ನಮ್ಮ ರಾಷ್ಟ್ರದವರು ಒಪ್ಪುವುದಿಲ್ಲ ಹಾಗು ಆ ಪ್ರಾಂತ್ಯ ಪಾಕಿಸ್ತಾನದ ವಶದಲ್ಲಿದ್ದರು ಸಹ ಅದಕ್ಕೆ ಅಂತರಾಷ್ಟ್ರೀಯ ಮನ್ನಣೆ ಇನ್ನು ದೊರಕಿಲ್ಲ. ಅದು disputed area ಅಂತ ಬೇರೆ ದೇಶದವರು dotted / dashed line ನಲ್ಲಿ ತೋರಿಸುತ್ತಾರೆ.

ನಾನು ಕಳೆದ ೪ ವರ್ಷಗಳಿಂದ ಕೊಲ್ಲಿ ರಾಷ್ಟ್ರಗಳಲ್ಲಿ ದುಡಿಯುತಿದ್ದೀನಿ, ಸಾಮನ್ಯವಾಗಿ ಭಾರತದ ಭೂಪಟ, ರಾಷ್ಟ್ರದ ಲಾಂಛನ, ಭಾವುಟ ಗಳನ್ನು ನೋಡಿ ನನಗೆ ಬಹಳ ಖುಶಿ ಯಾಗುತ್ತೆ. ಯಾವುದಾದರು ಕಛೇರಿ ಗಳಲ್ಲಿ ಹಾಕಿರುವ ಪ್ರಪಂಚದ ಭೂಪಟ ದಲ್ಲಿ ನಮ್ಮ ಭಾರತ ದೇಶವನ್ನು ಗಮನಿಸುವುದು ನನ್ನ ಅಭ್ಯಾಸ, ಒಂದು ವೇಳೆ ಭಾರತದ ಭೂಪಟದಲ್ಲಿ ಏನಾದರು ವ್ಯತ್ಯಾಸ ಗಳಿದ್ದರೆ, ಅಲ್ಲಿರುವ ಭಾರತೀಯ ಸಿಬ್ಬಂದಿ ಯವರ ಗಮನಕ್ಕೆ ತರುವ ಪ್ರಯತ್ನ ಮಾಡಿ ಬದಲಾಯಿಸಲು ಯತ್ನಿಸುವೆ. ಕೆಲವರು ನನ್ನ ವಿಚಾರಕ್ಕೆ ಸಹಮತ ವ್ಯಕ್ತ ಪಡಿಸಿ ವಿಷಾದ ವ್ಯಕ್ತ ಪಡಿಸುದ್ದುಂಟು. ಇನ್ನು ಕೆಲವರು, ಇಲ್ಲಿ ಸಿಗೋದೆ ಇದೇ ಮ್ಯಾಪ್ ಇದು ಬಿಟ್ರೆ ಬೇರೆ ವಿಧಿಯಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತಿದ್ದರು, .

ಕನ್ನಡಪ್ರಭ ೧೭.೦೫.೨೦೧೧ ಪುಟ ೯ರಲ್ಲಿ ಪ್ರಕಟವಾಗಿರುವ ಲೇಖನ “ದಾವುದ್ ನ ಮುಗಿಸುವ ಗುಂಡು ಸಿದ್ಧವಾಗಿಲ್ಲವೇ? ರಲ್ಲಿ ಮುದ್ರಿತವಾಗಿರುವ ಪಾಕಿಸ್ತಾನದ ಭೂಪಟ, ನಮ್ಮ ದೇಶದ ಕಾಶ್ಮಿರದ ಒಂದು ಭಾಗವನ್ನು ಅದರಲ್ಲಿ ಒಳಗೊಂಡಿದೆ.

ಮತ್ತಷ್ಟು ಓದು »

18
ಮೇ

ನೈತಿಕತೆಯ ದ್ರಷ್ಟಾರರ ನೈತಿಕತೆಯ ಸಿಧ್ಧಾ೦ತ!!

– ರಾಘವೇಂದ್ರ ನಾವಡ

ಮೂರು ವರ್ಷಗಳ ಹಿ೦ದೆ ಕನ್ನಡಿಗರು ಭಾ.ಜ.ಪಾವನ್ನು ಕಾ೦ಗ್ರೆಸ್ ಹಾಗೂ ಜೆ.ಡಿ,.ಎಸ್. ಗಳಿಗೆ ಪರ್ಯಾಯವೆ೦ದೋ, ಕುಮಾರಸ್ವಾಮಿ ಹೇಳಿದ ಮಾತಿನ೦ತೆ ಅಧಿಕಾರ ಕೊಡದೆ ಯಡಿಯೂರಪ್ಪ  ಆಗ ಹರಕೆಯ ಕುರಿಯಾಗಿದ್ದಕ್ಕೋ… ಕೇವಲ ೮ ದಿನಗಳ ಅಧಿಕಾರವನ್ನು ಮಾತ್ರವೇ ಅನುಭವಿಸಿದರು ಪಾಪ! ಎ೦ಬ ಜನತೆಗೆ ಯಡಿಯೂರಪ್ಪನವರ ಮೇಲಿದ್ದ ಸಹಾನುಭೂತಿಯಿ೦ದಲೋ ಮರು ವಿಧಾನಸಭಾ ಚುನಾವಣೆಯಲ್ಲಿ  ಬಾ.ಜ.ಪಾ. ೧೧೦ ಸ್ಥಾನಗಳನ್ನು ಗೆದ್ದು ಪಕ್ಷೇತರರ ಸಹಾಯದಿ೦ದ ಅಧಿಕಾರದ ಗದ್ದುಗೆ ಏರಿತು. ಯಡಿಯೂರಪ್ಪನವರ ಸ೦ಪೂರ್ಣ ಜೀವನವೇ ಸ೦ಘರ್ಷಮಯವೆ೦ದು ಜಾತಕದಲ್ಲಿ ಬರೆದಿದೆಯೇನೋ!! ಅಲ್ಲಿ೦ದ ಇಲ್ಲಿಯವರೆವಿಗೂ ನಮ್ಮ ಮುಖ್ಯಮ೦ತ್ರಿಗಳು ಸರಿಯಾಗಿ ನಿದ್ರೆಯನ್ನೇ ಮಾಡಿರಲಿಕ್ಕೆ ಸಾಧ್ಯವಿಲ್ಲ! ಒ೦ದಲ್ಲಾ, ಒ೦ದು ವಿವಾದಗಳು  ಯಡಿಯೂರಪ್ಪನವರ ಬೆನ್ನು ಹತ್ತಿದ ಬೇತಾಳಗಳ೦ತೆ ಹೆಗಲಿಗೇರಿದವು. ಆದರೂ ಅದೃಷ್ಟ ಗಟ್ಟಿಯಿದ್ದುದ್ದಕ್ಕೋ ಏನೋ.. ಅಥವಾ ನಾಡಿನ ಸಮಸ್ತ ಅಧ್ಯಾತ್ಮಿಕ ಸ೦ತರುಗಳ ಆಶಿರ್ವಾದದ ಬಲದಿ೦ದಲೋ ಏನೋ ಇಲ್ಲಿಯವರೆವಿಗೂ ಕುರ್ಚಿಯನ್ನುಳಿಸಿಕೊ೦ಡಿದ್ದಾರೆ.. ಇನ್ನು ಮು೦ದೆ ಅದ್ಯಾವ ದಿವ್ಯ ಹಸ್ತವೂ ಯಡಿಯೂರಪ್ಪನವರ ನೆತ್ತಿಯನ್ನು ನೇವರಿಸಲಾರದು ಎ೦ಬ ಸತ್ಯ ಅರಿವಾಗಿದೆ!

ಈ ಯಡಿಯೂರಪ್ಪನವರು ಹುಟ್ಟಾ “ಮು೦ಗೋಪಿ“ ಎ೦ಬುದು ಸರ್ವವೇದ್ಯ! ಆದರೆ ಅದರ ಜೊತೆಗೆ ಈಗ ಇನ್ನೊ೦ದನ್ನೂ ಸೇರಿಸಿಕೊಳ್ಳೋಣ.. ನಮ್ಮ ಯಡಿಯೂರಪ್ಪನವರಷ್ಟು “ಮಹಾ ಗಡಿಬಿಡಿ ಪುರುಷ “ ಮತ್ತೊಬ್ಬನಿರಲಿಕ್ಕಿಲ್ಲ!! ಎಲ್ಲರನ್ನೂ ಸಮಾನವಾಗಿ ಕರೆದುಕೊ೦ಡು ಹೋಗುವ ಸ್ವಭಾವ ಇವರಿಗಿಲ್ಲವೇ ಇಲ್ಲ. ಎಲ್ಲ್ಲಾ ಹದಿನಾರು ಶಾಸಕರನ್ನು ಅರ್ಹರೆ೦ದು ಸುಪ್ರೀ೦ ಕೋರ್ಟ್ ಅನರ್ಹತೆಯಿ೦ದ ಮುಕ್ತರನ್ನಾಗಿಸಿದ ಕೂಡಲೇ, ಪಕ್ಷದ ಶಾಸಕಾ೦ಗ ಸಭೆಯನ್ನು ಕರೆದು, ಹದಿನಾರು ಶಾಸಕರನ್ನು ಪಕ್ಕದಲ್ಲಿ ಕೂರಿಸಿಕೊ೦ಡು “ಏನ್ರಪ್ಪಾ.. ಏನು ನಿಮ್ಮ ನಿರ್ಧಾರ?“ ಎ೦ದು ಸಮಾಧಾನವಾಗಿ, ವರಿಷ್ಟರ ಸಮ್ಮುಖದಲ್ಲಿ ಅವರನ್ನು ಒಲಿಸಿಕೊ೦ಡಿದ್ದರೆ ಏನಾಗುತ್ತಿತ್ತು? ಅದನ್ನು ಬಿಟ್ಟು, ಹಿ೦ದೆ ಕೊಟ್ಟಿದ್ದ ಅವಿಶ್ವಾಸ ಪತ್ರಗಳನ್ನು ವಾಪಾಸು ತರಲು ರಾಜಭವನಕ್ಕೆ ಕಳುಹಿಸಿಕೊಡುವ ಏರ್ಪಾಟು!ಇವರೆಲ್ಲಾ ಸ೦ವಿಧಾನಾತ್ಮಕವಾಗಿ ಆರಿಸಿ ಹೋದ ಜನಪ್ರತಿನಿಧಿಗಳು ಎ೦ಬುದನ್ನೇ ಮರೆತರೆ ಹೇಗೆ?
ಮತ್ತಷ್ಟು ಓದು »

17
ಮೇ

ಅ”ರಾಜಕೀಯ”

– ವಿಜಯ ಹೆರಗು

     ರ್ನಾಟಕದ ಮಹಾಜನತೆಯ ದೌರ್ಭಾಗ್ಯಕ್ಕೆ ಅಂತ್ಯವೇ ಇಲ್ಲವೇನೋ ಎನ್ನಿಸುತ್ತಿದೆ. ಕರ್ನಾಟಕದ ರಾಜಕೀಯ ವಿದ್ಯಮಾನ ದಿನಕ್ಕೊಂದು, ಕ್ಷಣಕ್ಕೊಂದು ಬಣ್ಣ ಬದಲಾಯಿಸುತ್ತಿದೆ. ರಾಜಕೀಯ ರಂಗದ ಅನಿಶ್ಚಿತತೆ, ಅರಾಜಕತೆ ಮತ್ತೊಮ್ಮೆ ತನ್ನ ವಿರಾಟ್ ರೂಪದ ಪ್ರದರ್ಶನ ನೀಡಿದೆ. ಹದಿನಾರು ಶಾಸಕರ ಅನರ್ಹತೆಯ ಆದೇಶವನ್ನು ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿದ ಬೆನ್ನಲ್ಲೇ ಆಡಳಿತ ಪಕ್ಷ, ವಿರೋಧ ಪಕ್ಷಗಳು ತಮ್ಮ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ.

 ಅತ್ತ ಬಿಜೆಪಿ ಹೈಕಮಾಂಡಿನ ಹಿರಿತಲೆಗಳು ಹನ್ನೊಂದು ಮಂದಿ ಬಂಡಾಯ ಶಾಸಕರಲ್ಲಿ ಹತ್ತು ಮಂದಿಯನ್ನು ಕರೆದು ಓಲೈಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಯಡಿಯೂರಪ್ಪನವರ ನಾಯಕತ್ವವನ್ನು ಪ್ರಶ್ನಿಸಿ ಬಂಡೆದಿದ್ದರೋ ಅದೇ ಯಡಿಯೂರಪ್ಪನ ಮುಂದೆ ಮಂಡಿಯೂರಿ ಶರಣಾಗಿ ನೀವೇ ನಮ್ಮ ನಾಯಕ ಎನ್ನುತ್ತಾ ತಲೆಬಾಗಿ ನಿಂತ ಇವರ ಭಂಗಿ ಅಸಹ್ಯವನ್ನುಂಟು ಮಾಡುತ್ತದೆ. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುವಲ್ಲ-ಶಾಶ್ವತ ಮಿತ್ರರಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ.
                            ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಖುರ್ಚಿ ಉಳಿಸಿಕೊಳ್ಳುವ ಸಲುವಾಗಿ ಹೊರಾದುವುದನ್ನೇ ಆಡಳಿತ ಎಂದು ತಿಳಿದಂತಿದೆ. ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ ತಮ್ಮದೇ ಪಕ್ಷದ ನಾಯಕರಿಂದ, ಹೊರಗಿನವರಿಂದ ಪ್ರಬಲ ಪ್ರತಿರೋಧ ಎದುರಿಸುತ್ತಿದ್ದರೂ ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳುವ ಸಲುವಾಗಿ ದಿನಕ್ಕೊಂದು ಪಟ್ಟು ಹಾಕುತ್ತಿದ್ದಾರೆ. 
16
ಮೇ

ಒಸಾಮ ಸತ್ತ… ಭಾರತ ಬದುಕಿದೆಯಾ!?

– ರಾಕೇಶ್ ಶೆಟ್ಟಿ

ತನ್ನ ಮಕ್ಕಳಿಗೆ ಮಾತ್ರ ’ಜಿಹಾದ್’ನೆಡೆಗೆ ಬರಬೇಡಿ ನನ್ನಾಣೆ ಅಂತೇಳಿ, ಕಂಡೋರ ಮಕ್ಕಳ ಬೆನ್ನ ಹಿಂದೆ ಅವಿತು ಕುಳಿತು ಮನುಶ್ಯರನ್ನ ಹುಳಗಳಿಗಿಂತ ಕಡೆಯದಾಗಿ ಸಾಯಿಸಿದ ಒಸಾಮ ಅನ್ನುವ ಸೈತಾನನೊಬ್ಬ ಸತ್ತರೆ ನಾವ್ಯಾಕೆ ಕುಣಿಯಬಾರದು!? ಕುಣಿದರೇನು ತಪ್ಪು?ಇನ್ನೇನು ಅಳಬೇಕಿತ್ತಾ?

ಒಸಾಮ ಸತ್ತರೆ ನಾವ್ಯಕೆ ಕುಣಿಯಬೇಕು? ಅನ್ನುವ ಬರಹವನ್ನೋದಿದೆ.ಅದರಲ್ಲಿ ’ದೇಶ ಪ್ರೇಮ’ ಅನ್ನುವ ಪದದ ಬಗ್ಗೆಯೂ ಉಡಾಫ಼ೆಯಿದೆ.ದೇಶಪ್ರೇಮ ಅನ್ನುವುದನ್ನ ತಾವು ವಿರೋಧಿಸುವ ಪಕ್ಷ/ಸಂಘಟನೆಯ ಗುತ್ತಿಗೆ ಕೊಡಲಾಗಿದೆಯೆಂಬಂತೆ,ಅವರು ಮಾತ್ರವೇ ದೇಶ ಪ್ರೇಮಿಗಳು ಅಂದುಕೊಂಡು,ಅವರ ಮೇಲಿನ ಅಸಹನೆಯನ್ನ ’ದೇಶ ಪ್ರೇಮಿ’ಗಳು ಅನ್ನುವ ಪದಕ್ಕೆ ಜೋಡಿಸಿ ಮಾತನಾಡಿದ್ದಾರೆ ಲೇಖಕರು.

ಮತ್ತಷ್ಟು ಓದು »

12
ಮೇ

ಎಂಥಾ ಮರುಳಯ್ಯಾ ಇದು…

ಚಾಮರಾಜ ಸವಡಿ

ತುಂಬ ದಿನಗಳ ಹಿಂದೆ ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಸಂದರ್ಶನವೊಂದರಲ್ಲಿ ಹೇಳಿದ ಮಾತೊಂದು ನೆನಪಾಗುತ್ತಿದೆ. ಓದುಗರನ್ನು ಈ ಪರಿ ಸೆಳೆಯುವಲ್ಲಿ ನೀವು ಯಶಸ್ವಿಯಾಗಿದ್ದು ಹೇಗೆ? ಎಂಬಂರ್ಥದ ಪ್ರಶ್ನೆಗೆ ಯಂಡಮೂರಿ ಉತ್ತರ: ಅವರ ದೌರ್ಬಲ್ಯವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ.

ಇವತ್ತು ನಮ್ಮ ಸುತ್ತಮುತ್ತ ನಡೆಯುತ್ತಿರುವ ಹಲವಾರು ವಿಷಯಗಳನ್ನು ನೋಡಿದಾಗ ನನಗೆ ಈ ಮಾತು ಪದೆ ಪದೆ ನೆನಪಿಗೆ ಬರತೊಡಗಿದೆ.

ಸ್ವಾಮಿಗಳು, ಕಪಟ ಜ್ಯೋತಿಷಿಗಳು, ಬಹುತೇಕ ರಾಜಕಾರಣಿಗಳು, ಟಿವಿಗಳು, ಪತ್ರಿಕೆಯವರು, ಸರ್ಕಾರಿ ನೌಕರರು, ವಕೀಲರು, ವೈದ್ಯರು- ಹೀಗೆ ನೀವು ಯಾವುದೇ ರಂಗ ನೋಡಿದರೂ ಸಾಕು, ಯಂಡಮೂರಿ ಹೇಳಿದ ಮಾತು ಸತ್ಯ ಎಂಬುದು ಸ್ಪಷ್ಟವಾಗುತ್ತ ಹೋಗುತ್ತದೆ. ಪ್ರತಿಯೊಬ್ಬರೂ ಜನರ ದೌರ್ಬಲ್ಯ ಹಾಗೂ ಅನಿವಾರ್ಯತೆಗಳನ್ನೇ ಬಳಸಿಕೊಳ್ಳುವವರು. ಎಲ್ಲೋ ಒಬ್ಬಿಬ್ಬರು ಪುಣ್ಯಾತ್ಮರು ಇರಬಹುದು. ಆದರೆ, ಬಹುತೇಕರ ಜೀವನ ನಡೆಯುತ್ತಿರುವುದೇ ಜನರನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವುದರಿಂದ.

ಸಾಮಾನ್ಯ ವ್ಯಕ್ತಿಯಂತೆ ಓಡಾಡಿಕೊಂಡವ ಕಾವಿ ಬಟ್ಟೆ ಧರಿಸಿದ ಕೂಡಲೇ ಆತ ಸ್ವಾಮೀಜಿಯಾಗಿಬಿಡುತ್ತಾನೆ. ಕಿಂಚಿತ್ತೂ ವಿಚಾರ ಮಾಡದೇ ಆತನ ಕಾಲಿಗೆ ಬೀಳಲು ಜನ ಹಾತೊರೆಯತೊಡಗುತ್ತಾರೆ. ಖಾಲಿ ಓಡಾಡಿಕೊಂಡವ, ಒಂದಕ್ಕೆರಡು ಪಟ್ಟು ಹಣ ಕೊಡುತ್ತೇನೆ ಎಂದ ಕೂಡಲೇ ಸಾಲ ಮಾಡಿ ಹಣ ಕೊಡಲು ಜನ ಮುಂದಾಗುತ್ತಾರೆ. ಜ್ಯೋತಿಷಿಗಳು ಹೇಳಿದಂತೆ ನಡೆದುಕೊಳ್ಳುವವರು, ಜಾಹೀರಾತು ನೋಡಿ ಔಷಧಿ ಕೊಳ್ಳುವವರು, ಕೆಲಸಕ್ಕೆ ಹಣ ಕಟ್ಟುವವರು, ಅರ್ಧ ರೇಟಿಗೆ ಚಿನ್ನ ಕೊಳ್ಳಲು ಹಾತೊರೆಯುವವರು, ಕೆಲಸ ಕೊಡುತ್ತೇನೆ ಎಂದರೆ ಕರೆದಲ್ಲಿಗೆ ಹೋಗುವವರು ನಮ್ಮ ಸುತ್ತಮುತ್ತಲೇ ಇದ್ದಾರೆ. ಮಾತಿಗೆ ಬಂದರೆ, ಅವರೂ ರಾಜಕಾರಣಿಗಳನ್ನು, ಜ್ಯೋತಿಷಿಗಳನ್ನು, ಸ್ವಾಮೀಜಿಗಳನ್ನು, ನಕಲಿ ವೈದ್ಯರನ್ನು, ವಂಚಕರನ್ನು ಬೈಯುವವರೇ. ಆದರೆ, ತಮಗೆ ಲಾಭವಾಗುತ್ತದೆ ಎಂದು ಅನಿಸಿದ ತಕ್ಷಣ ವಿವೇಚನೆ ಮರೆತುಬಿಡುತ್ತಾರೆ. ಕಣ್ಣು ಮುಚ್ಚಿಕೊಂಡು ಹಳ್ಳಕ್ಕೆ ಬೀಳುತ್ತಾರೆ.

ಮತ್ತಷ್ಟು ಓದು »

10
ಮೇ

‘ಕಾಪ’ ಪಂಚಾಯಿತಿ!

– ಪ್ರಶಾಂತ್ ಯಾಳವಾರಮಠ

ಸುನೀತಾ(21) ಮತ್ತು ‘ಜಸ್ಸಾ’ ಉರ್ಫ್ ಜಸ್ಬೀರ್ ಸಿಂಗ(22) ಒಬ್ಬರನ್ನೊಬ್ಬರು ಪ್ರೀತಿಸಿ.. ’ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು’ ಅಂದು ಕೊಂಡು ಮನೆಯವರ ಮತ್ತು ಊರಿನವರ ವಿರೋಧದ ನಡುವೆ ಮದುವೆಯಾಗಿದ್ದರು! ತಮ್ಮ ಪುಟ್ಟ ಸಂಸಾರ, ಪುಟ್ಟ ಮನೆ ಮತ್ತೆ ತಮಗೆ ಒಂದು ಪುಟ್ಟ ಮಗುವಿನ ಬರುವಿಗೆ ಕಾಯ್ತಾ ಹಾಯಾಗಿದ್ದರು ಅಂದರೆ ಸುನೀತಾ ೫ ತಿಂಗಳ ಗರ್ಭಿಣಿ!.
ಹೀಗೆ ಎಲ್ಲವೂ ಚೆನ್ನಾಗಿರುವಾಗ ಒಂದು ದಿನ ಮುಂಜಾನೆ ಸುನಿತಾಳ ತಂದೆಯ ಮನೆ ಮುಂದೆ ಅತೀ ಕ್ರೂರತನಕ್ಕೆ ಸಾಕ್ಷಿಯಾಗಿ ಎರಡು ದೇಹಗಳು ಬಿದ್ದಿದ್ದವು! ಅಬ್ಬಾ ಎಂತಹ ರಾಕ್ಷಸರು ಅಂತೀರಾ ಗರ್ಭಿಣಿಯ ಹೊಟ್ಟೆಗೆ ಒದ್ದಿದ್ದರು, ಮುಖಕ್ಕೆ ಗುದ್ದಿದ್ದರು ಮತ್ತು ಎರಡು ದೇಹಗಳಿಗೆ ಇರಿದಿದ್ದರು!

ಮತ್ತಷ್ಟು ಓದು »

8
ಮೇ

ಅಂಕಿತಾರಾಣೆ – ಪಾನಿಪುರಿ ಪುರಾಣ…!

– ಉಮೇಶ ದೇಸಾಯಿ

ನೀವು ಪಾನಿಪೂರಿ ಪ್ರಿಯರೇ? ಹಾಗಿದ್ದರೆ ಇದನ್ನು ತಪ್ಪದೇ ಓದಿ…!

ಹೌದು ಇದೊಂಥರಾ ವಿಚಿತ್ರ ಟೈಟಲ್ಲು.ಹತ್ತು ನಿಮಿಷದ ತನ್ನ  ಬೊಗಳೆಯಲ್ಲಿ ರಾಜಪುರೋಹಿತ್ ಎಂಬ ವ್ಯಕ್ತಿ ಸ್ವತಃ ಕೆಡುವುದಲ್ಲದೇ ತನ್ನ ಪಾರ್ಟಿ ಬಿಜೆಪಿಯ ವರ್ಚಸ್ಸನ್ನೂ ಹಾಳುಗೆಡವಿದ.ಅಂಕಿತಾಳ ವ್ಯಕ್ತಿತ್ವ ಮತ್ತು ಚಾರಿತ್ರ್ಯ ವಧೆ ಮಾಡುವ ಮಾತು ಆಡಿದ ರಾಜಪುರೋಹಿತ್ ಈಗ ಅವಳ ಕ್ಷಮೆ ಕೇಳಿದ್ದಾನೆ.

ನಮ್ಮಲ್ಲಿ ಒಂದು ಗಾದೆ ಇದೆ “ಗೋಡೆಯಲ್ಲಿರುವ ಮೊಳೆ ತಗೊಂಡು…ದಲ್ಲಿ ಚುಚ್ಚಿಕೊಂಡ” ಅಂತ.ಈ ಗಾದೆ ರಾಜಪುರೋಹಿತ ಸಾಹೇಬಗೆ ಅಕ್ಷರಶಃ ಅನ್ವಯವಾಗುತ್ತದೆ.

ಅಂಕಿತಾ ಮಾಡಿದ್ದು ಏನು.ತಾ  ವಾಸಿಸುತ್ತಿರುವ ಬಿಲ್ಡಿಂಗಿನ ಹೊರಗೆ ಇರುವ ಪಾನಿಪುರಿ ಅಂಗಡಿಯವ ಹಾಡುಹಗಲಲ್ಲಿ ತನ್ನ ಗಾಡಿಯ ಕೆಳಗೆ ಶೆಲ್ಫನಲ್ಲಿಟ್ಟ ಜಗ್ನಲ್ಲಿ ಮೂತ್ರ ಉಯ್ಯುವುದನ್ನು ಅವಳ ಮೊಬೈಲಿನಲ್ಲಿ ಸೆರೆಹಿಡಿದಳು.ಪಾನಿಪುರಿ ಅದನ್ನು ತಿಂದು ಆಗಬಹುದಾದ ಅಪಾಯಗಳನ್ನು ಪುಷ್ಟಿಕರಿಸಲು ತಾ ತೆಗೆದ ವಿಡಿಯೋ ಸಹಾಯ ಆಗಬಹುದು ಇದು ಅವಳ ಹವಣಿಕೆ.ಅದೇ ಹಂಬಲದಲ್ಲಿ ಅವಳು ವಿಡಿಯೋ ನೆಟ್ನಲ್ಲಿ ಹರಿಯಬಿಟ್ಟಳು.
ಮತ್ತಷ್ಟು ಓದು »

6
ಮೇ

ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!

– ರಾಘವೇಂದ್ರ ನಾವಡ ಕೆ ಎಸ್

  ಊಹೆ ನಿಜವಾಗುವ ಎಲ್ಲಾ ಲಕ್ಷಣಗಳೂ ಕ೦ಡುಬರುತ್ತಿವೆ! ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧೀ ಆ೦ದೋಲನ ಠುಸ್ಸಾಗುವ ಎಲ್ಲಾ ಸಾಧ್ಯತೆಗಳೂ ಇವೆ! ಇಲ್ಲಿ ನಾನೀಗ ಹೇಳ ಹೊರಟಿರುವುದು ಅಣ್ಣಾ ಹಜಾರೆಯವರ ಶಕ್ತಿ ಕು೦ದಿತೆ೦ದಲ್ಲ… ಅಥವಾ ಉತ್ತರ ಕುಮಾರನ ಪೌರುಷವನ್ನು ಅಣ್ಣಾ ಹಜಾರೆ ತೋರಿಸಿದರೆ೦ದಲ್ಲ! ಬದಲಾಗಿ ಹೇಗೆ ನಾವೇ ಆರಿಸಿ ಕಳುಹಿಸಿದ ನಮ್ಮ ಕಲ್ಯಾಣದ ಬಗ್ಗೆ ಯೋಚಿಸಬೇಕಾದ ನಾಯಕರು ತಮ್ಮನ್ನು ಹಾಗೂ ತಮ್ಮ ಗಳಿಕೆಯನ್ನು ರಕ್ಷಿಸಿಕೊಳ್ಳಲು ಮು೦ದಾಗಿರುವ ಬಗ್ಗೆ.. ಅದಕ್ಕಾಗಿ ತುಳಿದಿರುವ ಹಾದಿಗಳ ಬಗ್ಗೆ..!

ಮೊದಲನೆಯದಾಗಿ ಭಾರತದ ಯಾವ ರಾಜಕೀಯ ನಾಯಕನಿಗೂ ಲೋಕಪಾಲ ಮಸೂದೆಯ ಮ೦ಡನೆಯಾಗುವುದು ಬೇಕಿಲ್ಲ! ಆ ಮೂಲಕ ತಾವು ಬಟಾ ಬಯಲಿಗೆ ಬೀಳುವುದು ಇಷ್ಟವಿಲ್ಲ.. ತನ್ನ ಮಕ್ಕಳು ಮರಿ ಮೊಕ್ಕಳು ಅವರ… ಹೀಗೆ ಹತ್ತಾರು ತಲೆಮಾರುಗಳು ಆರಾಮಾಗಿ ಕುಳಿತು ತಿನ್ನಲೆ೦ದು ಮಾಡಿಕೊ೦ಡ ಆಸ್ತಿಯನ್ನು ಯಾರು ತಾನೇ ತನ್ನ ಜಮಾನಾದಲ್ಲೇ ಅದನ್ನು ಕಳೆದುಕೊಳ್ಳಲು ಇಷ್ಟ ಪಡುತ್ತಾನೆ? ಮು೦ದೆ ನಮ್ಮ ಅಪ್ಪ ನಮಗಾಗಿ ಏನನ್ನೂ ಮಾಡಿಟ್ಟಿಲ್ಲ! ಎ೦ಬ ಮಾತನ್ನು ಕೇಳಲು ಅವರು ಸಿಧ್ಧರಿಲ್ಲ! ನಾಯಕರ ಈ ಹಪಾಹಪಿಯೇ ಆದಷ್ಟೂ ಹಜಾರೆ ಹಾಗೂ ಅವರ ಟೀಮ್ ನ ದಿಕ್ಕು ತಪ್ಪಿಸುವತ್ತ ತನ್ನೆಲ್ಲಾ ಪಟ್ಟುಗಳನ್ನೂ ಬಳಸಿಕೊ೦ಡು ಆಖಾಡಕ್ಕೆ ಇಳಿದಿದೆ! ಮು೦ದೇನು? ಕಾದು ನೋಡಬೇಕು!!

ಮತ್ತಷ್ಟು ಓದು »

6
ಮೇ

ಅಮೇರಿಕಾ ಕಲಿಸಿದ ಪಾಠ…?

 ಅರೆಹೊಳೆ ಸದಾಶಿವ ರಾವ್

ಅಂತ:ಶಕ್ತಿ ಮತ್ತು ಅಂತರಿಕ ದೌರ್ಬಲ್ಯದ ಬಗ್ಗೆ ಒಂದು ಮಾತಿದೆ. ಅಂತ:ಶಕ್ತಿ ಲಾಭದಾಯಕವಾದರೆ, ಅಂತರಿಕ ದೌರ್ಬಲ್ಯ ಅಪಾಯಕಾರಿ. ವಿಶ್ವದ ಉಗ್ರರ ಪಟ್ಟಿಯಲ್ಲಿ ನಂ.೧ ನೆಯ ಸ್ಥಾನದಲ್ಲಿದ್ದವನು ಒಸಾಮಾ ಬಿನ್ ಲ್ಯಾಡೆನ್. ಅಮೇರಿಕಾ ಅವನನ್ನು ಹತ್ತುವರ್ಷಗಳ ಭೇಟೆಯ ನಂತರ ಕೊಂದು ಮುಗಿಸಿದೆ. ಗುಣಕ್ಕೆ ಮತ್ಸರವಿಲ್ಲದಂತೆ ಭಾವಿಸಿದರೆ, ಅಮೆರಿಕಾಕ್ಕೆ ಈ ವಿಷಯದಲ್ಲಿ ಹ್ಯಾಟ್ಸ್ ಆಫ್ ಹೇಳಲೇ ಬೇಕು.
ಹಾಗೇ ಸುಮ್ಮನೇ ಒಮ್ಮೆ ನಮ್ಮ ಪರಿಸ್ಥಿತಿಗೆ ಈ ಘಟನೆಯನ್ನು ಸಮೀಕರಿಸಿಕೊಳ್ಳೋಣ. ಭಾರತದ ಪವಿತ್ರ ಸಂಸತ್ತಿನ ಮೇಲೆ ಉಗ್ರ ಅಫ್ಜಲ್ ದಾಳಿ ಮಾಡಿದ ಮತ್ತು ಸಿಕ್ಕಿ ಬಿದ್ದ. ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿಯಲ್ಲಿ ಕಸಬ್ ಸಿಕ್ಕಿ ಬಿದ್ದ. ನಾವು, ಇಬ್ಬರನ್ನೂ ಕಟ Pಟೆಯಲ್ಲಿ ನಿಲ್ಲಿಸಿದೆವು. ಇಬ್ಬರಿಗೂ ಅವರ ಪರವಾಗಿ ವಾದ ಮಾಡಲೆಂದು, ಒಲ್ಲೆ ಒಲ್ಲೆನೆಂದರೂ ವಕೀಲರನ್ನು ಸರಕಾರಿ ಖರ್ಚಿನಲ್ಲಿ ಒದಗಿಸಿಕೊಟ್ಟೆವು. ವಾದ ವಿವಾದಗಳು ನಡೆದುವು. ಎಲ್ಲರೂ ನಿರೀಕ್ಷಿಸಿದ್ದಂತೆ, ನ್ಯಾಯಾಲಯ ನ್ಯಾಯ ನೀಡಿತು. ಜೊತೆಗಿದ್ದ ಕೆಲವರು ಆರೋಪ ಮುಕ್ತರಾದರೆ, ಈ ದಾಳಿಗಳ ರೂವಾರಿಗಳಾದ ಅಫ್ಜಲ್, ಕಸಬ್‌ರಿಗೆ ಮರಣದಂಡನೆಯನ್ನು ನ್ಯಾಯಾಲಯ ಘೋಷಿಸಿತು. ಈಗ ಕಸಬ್ ಕಾನೂನು ಸಮರ ಮುಂದುವರಿಸಿದ್ದರೆ, ಅಫ್ಜಲ್ ದಯಾ ಭಿಕ್ಷೆಯನ್ನುಕೇಳಿಕೊಂಡು, ಕೆಲವು ವರ್ಷಗಳಿಂದ ಜೈಲಿನಲ್ಲಿಯೇ ಇದ್ದಾನೆ. ಅಫ್ಜಲ್‌ನ ಕಥೆ ಏನು ಎಂಬುದಕ್ಕೆ ಯಾವ ಸರಕಾರವೂ ಸ್ಪಷ್ಟ ಉತ್ತರ ನೀಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ‘ರಾಜಕೀಯ’ ಲೆಕ್ಕಾಚಾರದಲ್ಲಿ ಸಿಗಬಹುದಾದ ಲಾಭಕ್ಕಾಗಿ ಕಾದು ಕುಳಿತಿದ್ದಾರೆ.
ಹಲವು ಸಾವಿಗೆ ಕಾರಣರಾದ ಉಗ್ರರಾದ ಅಫ್ಜಲ್ ಮತ್ತು ಕಸಬ್‌ರ ‘ರಕ್ಷಣೆ’ಗಾಗಿ ನಮ್ಮ ಸರಕಾರಗಳು ಕೋಟಿ ಕೋಟಿ ವ್ಯಯಿಸುತ್ತಿವೆ. ಮತ್ತೊಂದರ್ಥದಲ್ಲಿ ನಮ್ಮ ಮೇಲೆ, ನಮ್ಮ ಸ್ವಾಭಿಮಾನದ ಮೇಲೆ ಮತ್ತು ತೀರಾ ನಮ್ಮ ಮಾತ್ರಭೂಮಿಯ ಮೇಲೆ, ದಾಳಿಯ ಮೂಲಕ ಅಕ್ಷಮ್ಯ ಅಪರಾಧವನ್ನು ಮಾಡಿದ ಈ ಉಗ್ರರನ್ನು ನಾವು ‘ರಕ್ಷಿ’ಸುತ್ತಿದ್ದೇವೆ. ಮತ್ತಷ್ಟು ಓದು »

5
ಮೇ

ಒಸಾಮಾ – ಒಬಾಮಾ…!

ಡಾ.ಅಜಕ್ಕಳ ಗಿರೀಶ್ ಭಟ್

ಅಂತೂ ಅಮೆರಿಕ ಒಸಾಮಾನನ್ನು ಕೊಂದಿದೆ ಅನ್ನುವುದನ್ನು ಅದು ಅಧಿಕೃತವಾಗಿ ಘೋಷಿಸಿದೆ. ಹೀಗೆ ಕೊಲ್ಲುವುದು ಅಮೆರಿಕಕ್ಕೆ ಏನೂ ಕಷ್ಟದ ಸಂಗತಿಯಲ್ಲ. ಅದು ಅದನ್ನು ದಕ್ಕಿಸಿಕೊಳ್ಳಬಲ್ಲುದು. ಆದರೆ ಹಲವು ಪ್ರಶ್ನೆಗಳು ಎಲ್ಲರ ಮನಸ್ಸಲ್ಲೂ ಏಳುವುದು ಸಹಜ. ಕೆಲದಿನಗಳಾದ ನಂತರ ಆ ಪ್ರಶ್ನೆಗಳನ್ನು ಎಲ್ಲರೂ ಮರೆಯುತ್ತಾರೆ ಅನ್ನೋದು ಕೂಡ ನಮಗೆಲ್ಲ ಗೊತ್ತು.ನಾವು ಕೂಡ ಮರೀತೇವೆ.ಹಾಗೆ ಮರೆಯುವುದು ನಮ್ಮ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಮುಖ್ಯ.ಆದರೂ ಈಗ ಮನಸಲ್ಲಿ ಬಂದ ಆಲೋಚನೆಗಳಲ್ಲಿ ಕೆಲವನ್ನು ಮರುನೆನೆದುಕೊಳ್ಳುತ್ತೇನೆ.ಇವು ನನ್ನ ಮನಸಲ್ಲಿ ಮಾತ್ರ ಬಂದ ಪ್ರಶ್ನೆಗಳಲ್ಲವಾದ್ದರಿಂದ ಈ ಪ್ರಶ್ನೆಗಳ ಬಗ್ಗೆ ನಾನು ಯಾವುದೇ ಕಾಪಿರೈಟ್ ಕ್ಲೈಮ್ ಮಾಡುವುದಿಲ್ಲ!!!

ನೋಡಿ,ಇದು ಅನ್ಯಾಯವಲ್ಲವೇ? ವ್ಯಕ್ತಿಯನ್ನು ವಿಚಾರಣೆಯಿಲ್ಲದೆ ಕೊಲ್ಲುವುದು ನ್ಯಾಯವೇ?

ಆಧುನಿಕ ನ್ಯಾಯಶಾಸ್ತ್ರದಲ್ಲಿ ಎಲ್ಲಾದರೂ ವಿಚಾರಣೆಯಿಲ್ಲದೆ ಹೀಗೆ ಶಿಕ್ಷೆ ನೀಡುವುದನ್ನು ಸಮರ್ಥಿಸಲಾಗಿದೆಯೇ? ಲಾಡೆನ್ ಗೆ ಫೇರ್ ಟ್ರಯಲ್ ನೀಡಲಾಗಿಲ್ಲ. ಅವನನ್ನು ಯಾವ ಕೋರ್ಟಿನಲ್ಲಿ ವಿಚಾರಣೆ ಮಾಡಲಾಗಿದೆ? ತಾನು ಕೊಲೆ ಮಾಡಿದ್ದೇನೆ ಅಂತ ಒಬ್ಬ ವ್ಯಕ್ತಿ ಹೇಳಿದ ಕೂಡಲೇ ಯಾವ ಕೋರ್ಟು ಕೂಡ ವಿಚಾರಣೆಯಿಲ್ಲದೆ ಆ ವ್ಯಕ್ತಿಯನ್ನು ಗಲ್ಲಿಗೆ ಹಾಕುವುದಿಲ್ಲ. ಹಾಗಿರುವಾಗ ,ಅಮೆರಿಕವಿರಬಹುದು ಅಥವಾ ಅದರಪ್ಪನಿರಬಹುದು, ಕಾನೂನನ್ನು ಕೈಗೆ ತೆಗೆದುಕೊಳ್ಳುವುದೆಂದರೇನು? ಓಯ್!! ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅನ್ನುವ ಸಂಸ್ಥೆಯವರೇ!!!ಎಲ್ಲಿದ್ದೀರಿ? ಒಸಾಮಾನ ಮಾನವ ಹಕ್ಕಿಗೆ ಬೆಲೆ ಇಲ್ಲವೇ???

ಮತ್ತಷ್ಟು ಓದು »