ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !
– ರಾಕೇಶ್ ಶೆಟ್ಟಿ
ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.
ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!
‘ಸತ್ಯ ಸಾಯಿ’ ಮತ್ತು ‘ಸತ್ಯ ಸಾಯಿಸುವ’ ಮಾಧ್ಯಮಗಳು
ಅರೆಹೊಳೆ ಸದಾಶಿವರಾಯರು
ಫೇಸ್ ಬುಕ್ನಲ್ಲಿ ಒಂದು ಸಾಲು ಓದಿದೆ. ‘ಮ್ಯಾಜಿಷಿಯನ್’ ಸತ್ಯ ಸಾಯಿಬಾಬಾ ಇನ್ನಿಲ್ಲ ಎಂದು ಒಬ್ಬರು ವ್ಯಂಗ್ಯವಾಗಿ ಬರೆದುಕೊಂಡಿದ್ದರು. ಮುಂದುವರಿಯುತ್ತಾ, ಈ ಸತ್ಯಸಾಯಿಬಾಬಾ ಎಂಬ ಜಾದೂಗಾರನನ್ನು ಕೇವಲ ಮಾಧ್ಯಮಗಳು ಈ ಮಟ್ಟಿಗೆ ದೇವಮಾನವನನ್ನಾಗಿ ಮಾಡಿವೆ ಎಂದೂ ಸೇರಿಸಿಕೊಂಡಿದ್ದರು.
ಮೊದಲಾಗಿ ಮಾನವ ಎಂದರೆ ಏನು ಎಂಬತ್ತ ಗಮನ ಹರಿಸಬೇಕು. ಅದಕ್ಕೂ ಮೊದಲಾಗಿ ಒಂದು ವಿಷಯ ಸ್ಪಷ್ಟೀಕರಣದೊಂದಿಗೇ ಲೇಖನ ಆರಂಭಿಸಬೇಕು. ಅದೆಂದರೆ ನಾನು ಸಾಯಿ ಬಾಬಾ ಅವರ ಭಕ್ತನೂ ಅಲ್ಲ ಮತ್ತು ಅವರ ಪವಾಡಗಳ ಕುರಿತು ಪರ-ವಿರೋಧ ಎಂದು ಹೇಳಿಕೊಳ್ಳುವಷ್ಟು, ಜ್ಞಾನಿಯೂ ಅಲ್ಲ. ಆ ಮಟ್ಟಿಗೆ ಈ ವಿಷಯದಲ್ಲಿ ನಾನು ತಟಸ್ಥ. ಇನ್ನು ಮಾನವ ಎಂದರೆ…..!. ಜೀವಂತ ಇರುವ ಎಲ್ಲವೂ ಮಾನವನಾಗುವುದಿಲ್ಲ ಅಥವಾ ಮನುಷ್ಯಗರ್ಭದಲ್ಲಿ ಜನಿಸಿದ ಎಲ್ಲರೂ ಮಾನವನಂತೆ ಬದುಕುವುದಿಲ್ಲ. ಪರಸ್ಪರರನ್ನು ಪ್ರೀತಿಸುತ್ತಾ ಸಾಧ್ಯವಾದಷ್ಟೂ ಜನರ ಬಳಿ, ಜನರನ್ನು ಗೌರವಿಸುತ್ತಾ ಬದುಕುವುದು ಮಾನವೀಯ ಧರ್ಮ ಎನಿಸುತ್ತದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜನಸೇವೆಯೇ ಜನಾರ್ದನ ಸೇವೆ ಎಂದುಕೊಂಡು, ಅಕ್ಷರಶ: ಅದನ್ನೇ ಪಾಲಿಸಿದರೆ ಆತ ಜನರ ಪಾಲಿಗೆ ಜನಾರ್ದನನಾಗುತ್ತಾನೆ;ದೇವತ್ವವನ್ನು ಪಡೆಯುತ್ತಾನೆ-ಸಾಯಿಬಾಬಾ ವಿಷಯದಲ್ಲಿಯೂ ಅದೇ ಆಗಿದೆ. ಮತ್ತಷ್ಟು ಓದು 
ಕ್ರಾಂತಿಗೆ ಅಕ್ಷರದ ಹಂಗೇಕೆ?
– ಚಿತ್ರ ಸಂತೋಷ್
ಮಧ್ಯಪ್ರದೇಶದ ತಲನ್ಪುರ ಗ್ರಾಮದಲ್ಲಿ ಓದು ಬರಹ ತಿಳಿಯದ ಬುಡಕಟ್ಟು ಮಹಿಳೆಯರೇ ಸಾಮಾಜಿಕ ಕ್ರಾಂತಿಗೆ ಮುನ್ನುಡಿಯಾಗಿದ್ದಾರೆ. ನಿತ್ಯ ಕುಡಿದು, ಸಂಸಾರದ ಒಂದಿಷ್ಟು ಚಿಂತೆಯಿಲ್ಲದ
ಪುರುಷರಿಗೆ ಬುದ್ಧಿ ಕಲಿಸಬೇಕೆಂಬ ಉದ್ದೇಶದಿಂದ ಇಡೀ ಹಳ್ಳಿಯ ಮಹಿಳೆಯರು ಒಂದಾಗಿ ಸಾರಾಯಿ ನಿಷೇಧ ಮಾಡಿದ್ದಾರೆ.
ಆ ಹಳ್ಳಿಯೇ ಹಾಗೆಯೇ. ಬುಡಕಟ್ಟು ಬದುಕುಗಳ ಸಂಗಮ. ನೂರಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳನ್ನು ಹೊಂದಿರುವ ಆ ಹಳ್ಳಿಯಲ್ಲಿ ಹೊತ್ತಿನ ಊಟಕ್ಕೂ ಕಷ್ಟ. ಪತಿ-ಪತ್ನಿಯರು ಎಲ್ಲಾರೂ ಕೂಲಿಗಾಗಿ ಅರಸುವವರು. ವಿದ್ಯೆ, ಶಿಕ್ಷಣ ಎಂಬುವುದು ಅವರ ಪಾಲಿಗೆ ಮರೀಚಿಕೆ. ಸಾಂಪ್ರದಾಯಿಕ ಬದುಕಿನ ಚೌಕಟ್ಟಿನಲ್ಲಿಯೇ ಇಂದಿಗೂ ಬದುಕು ಸವೆಸುವ ಅಲ್ಲಿನ ಕುಟುಂಬಗಳಲ್ಲಿ ಆಧುನಿಕತೆಯ ಥಳುಕಿಲ್ಲ. ಸಿನಿಮಾ, ಫ್ಯಾಷನ್ ಯಾವುದೂ ಗೊತ್ತಿಲ್ಲ. ದುಡಿಯುವುದು, ದಿನದ ಮೂರು ಹೊತ್ತಿನ ಅನ್ನ ತುಂಬಿಸಿಕೊಳ್ಳುವುದಷ್ಟೇ ಅವರಿಗೆ ಗೊತ್ತು.
ಅದು ಮಧ್ಯಪ್ರದೇಶದ ತಲನ್ಪುರ್ ಎಂಬ ಹಳ್ಳಿ. ಇಲ್ಲಿನ ಜನಸಂಖ್ಯೆ ಸುಮಾರು ೩೦೦೦. ಇಂದೋರ್ನಿಂದ ಇಲ್ಲಿಗೆ ಸುಮಾರು ೧೮೦ ಕಿ.ಮೀ. ದೂರವಿದೆ.
ಹಿಂದಿ ಬೇಕು …. ಕೂಪಮಂಡೂಕತನ ಬೇಡ……..
*ಅನಿರುದ್ಧ ಕುಮಟ
ಮಕ್ಕಳ ಜಗಳದಲ್ಲಿ ಅಮ್ಮ ಬಡಪಾಯಿಯಾದಳು ಅಂತ ಒಂದು ಗಾದೆ ಮಾತು ಇದೆಯಾ? ಇಲ್ಲದಿರಲೂಬಹುದು. ಆದರೆ ನಿಮ್ಮ ಕನ್ನಡದ ಜಗಳ, ಆ ನೀರಿನ ಜಗಳ, ಆ ಧಾರ್ಮಿಕ ಕಲಹ ಇವನ್ನೆಲ್ಲ ನೋಡಿದಾಗ ನನಗೆನಿಸಿದ್ದು ಅಮ್ಮ ಬಡವಾಗಿದ್ದಾಳೆ ಅಂತ. ಅಲ್ಲಾರಿ ನೀವು ಪಕ್ಕದ ಮರಾಠಿಗರನ್ನು ಕಂಡರೆ ಬೆಂಕಿಕಾರುತ್ತಿರಿ. ಪಾಪ ಆ ತಮಿಳರು ಇಲ್ಲಿ ಬೆಳೆದರೆ ಕರಬುತ್ತೀರಿ. ಅಥವಾ ನೀರಿನ ವಿಷಯ ಹಿಡಿದುಕೊಂಡು ಸುನಾಮಿಯಂತೆ ಜಗಳ ಮಾಡುತ್ತೀರಿ…ಥಕ್ ನಿಮ್ಮ ಇಂತಹ ಜಗಳದಲ್ಲಿ ಬಡವಾದದ್ದು ಯಾರು. ಭಾರತವಲ್ಲವೇ. ಇಡೀ ಭಾರತದ ಬಗ್ಗೆ ಯೋಚಿಸಬೇಕಾದ ನಾವೆಲ್ಲ, ದಾಯಾದಿಗಳ ತರಹ ಯಾಕೆ ಕಿತ್ತಾಡಿಕೊಳ್ಳಬೇಕು? ನಿಮಗೆ ನಿಮ್ಮ ಬಗ್ಗೆಯೇ ಅಸಹ್ಯ ಎನಿಸುವುದಿಲ್ಲವೇ?
ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ ಅನ್ನೋ ಹೆಡ್ ಲೈನ್ ನಲ್ಲಿ ಪ್ರಕಟವಾದ ಲೇಖನವನ್ನೇ ನೋಡಿ. ಪತ್ರಿಕೆಯಲ್ಲಿ ವಿದೇಶಿಯರ ಹಿಂದಿ ಮೋಹ ಅನ್ನೋ ಲೇಖನ ಪ್ರಕಟಗೊಂಡರೆ ಸಾಕು. ಜಗತ್ತಿನಲ್ಲಿರುವ ಸಮಸ್ತ ಕನ್ನಡ ಪುಸ್ತಕಗಳೆಲ್ಲ ಬೆಂಕಿಯಲ್ಲಿ ಉರಿದು ಹೋಯ್ತು ಅನ್ನೋ ತರಹ ಯಾಕೆ ಉರಿದು ಹೋಗ್ತಿರಿ. ಅರೇ ಅದೊಂದು ಪತ್ರಿಕೆ. ಅದರಲ್ಲಿ ಭಿನ್ನ, ವಿಭಿನ್ನ ವಿಚಾರಧಾರೆಯ ಲೇಖನಗಳು ಪ್ರಕಟಗೊಳ್ಳುತ್ತವೆ. ಅವರೇನೂ ಹಿಂದಿಯಲ್ಲಿ ಬರೆದಿಲ್ಲ ನನಗಂತೂ ಕನ್ನಡಿಗರಲ್ಲಿ ಹಿಂದಿ ಕಲಿಸುವ ಒಂದು ಪ್ರಯತ್ನದಂತೆ ಆ ಲೇಖನ ಕಾಣಲೇ ಇಲ್ಲ. ನನ್ನ ಪ್ರಕಾರ ಕನ್ನಡಿಗರು ಮತ್ತಷ್ಟು ಓದು 
ಸೀಟ್ ಬೇಕು ಆದ್ರೆ ರಾಜ್ಯ ಬೇಡಾ….
– ಚೇತನ್ ಜೀರಾಳ್
ಡಾ. ಬಿ. ಆರ್. ಅಂಬೇಡ್ಕರ್ ಅವರ ಜನುಮ ದಿನದಂದು ಒಂದು ಸೋಜಿಗದ ವಿಷಯ ಹೊರಬಿದ್ದಿದೆ. ಪತ್ರಿಕೆಗಳಲ್ಲಿ ಇದರ ಬಗ್ಗೆ ವರದಿಯಾದರು ಸಹ, ಇದನ್ನ ಪತ್ರಿಕೆಗಳು ಗಂಭೀರವಾಗಿ ಪರಿಗಣಿಸಿದಂತೆ ಕಾಣಲಿಲ್ಲ. ವಿಷಯ ಏನಪ್ಪ ಅಂದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ ಸಿಂಗ್ ಅವರು, ಸದ್ಯಕ್ಕೆ ಅಸ್ಸಾಂ ರಾಜ್ಯದಲ್ಲಿ ನೆಲೆಸುತ್ತಿದ್ದಾರೆ ಅನ್ನೋದನ್ನ ದಾಖಲೆಗಳು ಹೇಳುತ್ತಿವೆ. ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ದಿಸ್ಪುರ್ ಕ್ಷೇತ್ರದ ಮತದಾರರಾಗಿದ್ದು, ಈ ಸಾರಿಯ ಚುನಾವಣೆಯಲ್ಲಿ ಮತದಾನ ಮಾಡಿಲ್ಲ ಅಂತ ಪತ್ರಿಕೆಗಳಲ್ಲಿ ವರದಿಯಾಗಿದೆ ಹಾಗೂ ಇದನ್ನ ಆ ಕ್ಷೇತ್ರದ ಉಸ್ತುವಾರಿ ವಹಿಸಿದ್ದ ಚುನಾವಣಾ ಅಧಿಕಾರಿ ಸಹ ನಿಜವೆಂದು ಹೇಳಿದ್ದಾರೆ.
ಮುಖ್ಯವಾದ ವಿಷ್ಯ ಏನಪ್ಪಾ ಅಂದ್ರೆ ಡಾ. ಮನಮೋಹನ್ ಸಿಂಗ್, ಅಸ್ಸಾಂನಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಬಂದಿದ್ದಾರೆ ಹಾಗೂ ಹಿಂದೆಯೂ ಆಯ್ಕೆಯಾಗಿದ್ದರು. ಮತದಾನ ಪ್ರತಿಯೊಬ್ಬ ನಾಗರೀಕನ ಮೂಲ ಕರ್ತವ್ಯ ಎಂದು ನಮ್ಮ ಸಂವಿಧಾನದಲ್ಲಿ ಹೇಳಲಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಒಂದು ಜನಪ್ರಿಯ ಸರ್ಕಾರವನ್ನು ಆರಿಸಲು ಪ್ರತಿಯೊಬ್ಬ ಪ್ರಜೆಗೂ ನೀಡಲಾಗಿರುವ ಪವಿತ್ರ ಹಕ್ಕು ಅನ್ನೋದನ್ನ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮರೆತು ಬಿಟ್ಟಿದ್ದಾರೆಯೇ?? ಪ್ರಜ್ಞಾವಂತ ಜನರು ಚುನಾವಣೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಹೇಳುತ್ತಿರವ ಈ ಸಮಯದಲ್ಲಿ ಒಬ್ಬ ರಾಜಕಾರಣಿ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಮನಮೋಹನ್ ಸಿಂಗ್ ಅವರಿಂದ ಇಂತಹ ನಡೆ ಸರಿಯಾದುದಲ್ಲ.
ಡಬ್ಬಿಂಗ್ ಬೇಕು/ಬೇಡ ಅನ್ನೋದನ್ನ ಪ್ರೇಕ್ಷಕ ನಿರ್ಧಾರ ಮಾಡ್ಲಿ
ಮನೋರಂಜನೆ ಎನ್ನೋದು ಎಲ್ಲರ ಹಕ್ಕು, ಒಬ್ಬ ವ್ಯಕ್ತಿ ಮನೊರಂಜನೆಯನ್ನು ತನ್ನ ಭಾಷೆಯಲ್ಲೆ ಪಡೆಯುವುದು ಕೂಡ ಆ ವ್ಯಕ್ತಿಯ ಹಕ್ಕೂ ಕೂಡ. ಇದನ್ನ ತಡೆಯಲು ಯಾವುದೇ ಕಾನೂನು ಮುಂದೆಬರುವುದಿಲ್ಲ. ಇದಕ್ಕಾಗಿಯೇ ಇರಬೇಕು ಇಂದಿಗೂ ಕನ್ನಡಕ್ಕೆ ಡಬ್ ಮಾಡಬಾರದು ಅನ್ನೋ ಕಾನೂನು ಇಲ್ಲ.
ಕನ್ನಡ ಆಡಳಿತ ಭಾಷೆ ಯಾಕಾಗಿಲ್ಲ ಗೊತ್ತೆ!?
– ವಸಂತ್ ಶೆಟ್ಟಿ
ಕನ್ನಡ ನಾಡು ಏಕೀಕರಣಗೊಂಡು ದಶಕಗಳೇ ಕಳೆದರೂ ಕನ್ನಡ ಎಲ್ಲ ಹಂತದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಂಡಿಲ್ಲ ಅನ್ನುವ ಕೂಗು ನಾವೆಲ್ಲರೂ ಕೇಳಿಯೇ ಇರುತ್ತೇವೆ. ಇದಕ್ಕೆ ಸರ್ಕಾರದ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದೂ ಕೇಳಿರುತ್ತೇವೆ. ಭಾಷಾ ವಿಜ್ಞಾನಿ ಕೆ.ವಿ.ನಾರಾಯಣ ಅವರ ಕನ್ನಡ ಜಗತ್ತು: ಅರ್ಧ ಶತಮಾನ ಅನ್ನುವ ಹೊತ್ತಗೆ ಓದುತ್ತಾ ಇದ್ದೆ. ಅಲ್ಲಿ ಈ ಬಗ್ಗೆ ಅವರು ಕೊಡುವ ವಿವರಣೆ ಒಂದು ರೀತಿಯಲ್ಲಿ ಬೇರೆಯಾಗಿದೆ ಅನ್ನಬಹುದು. ಸರ್ಕಾರದ ಹೆಚ್ಚಿನ ಪ್ರಯತ್ನ (ಬಾಯಿ ಮಾತಲ್ಲಿ ಅಂತ ಬೇಕಾದ್ರೂ ಅಂದುಕೊಳ್ಳೊಣ 🙂 )ದ ನಂತರವೂ ಆಡಳಿತದಲ್ಲಿ ಕನ್ನಡ ಬಳಕೆ ಒಂದು ರೀತಿಯಲ್ಲಿ ಪಿರಮಿಡ್ ನಂತೆ ನಮಗೆ ಗೋಚರಿಸುತ್ತೆ. ಕೆಳ ಹಂತದಲ್ಲಿ ಕನ್ನಡ ವ್ಯಾಪಕವಾಗಿ ಬಳಕೆಯಾದರೆ, ಮೇಲೆ ಮೇಲೆ ಹೋದಂತೆ ಅದರ ಪ್ರಮಾಣ ಕಡಿಮೆಯಾಗುತ್ತ ಹೋಗುತ್ತದೆ. ಹಾಗಿದ್ದರೆ ಆಡಳಿತದಲ್ಲಿ ಕನ್ನಡದ ಬಳಕೆ ಅಂದುಕೊಂಡ ಮಟ್ಟದಲ್ಲಿ ಗೆಲುವು ಪಡೆಯದಿರಲು ಕಾರಣವೇನು ಎಂದು ಅವರು ಕೊಟ್ಟ ವಿವರಣೆಯನ್ನು ಈ ಕೆಳಗೆ ಕೊಟ್ಟಿರುವೆ.
ಈ ಅಪಯಶಸ್ಸನ್ನು ಎರಡು ದಿಕ್ಕಿನಿಂದ ವಿಶ್ಲೇಷಿಸಬೇಕಾದ ಅಗತ್ಯವಿದೆ. ಕಾರ್ಯಕ್ರಮ ಯಶಸ್ಸು ಪಡೆಯದಿರಲು ಅದರ ಹಿಂದಿನ ಯೋಜನಾ ತಂತ್ರಗಳಲ್ಲಿ ಕೊರತೆ ಇರುತ್ತದೆ. ಅಥವಾ ಅನುಷ್ಠಾನದ ಹಂತದಲ್ಲಿ ಹಲವು ಎಡರು ತೊಡರುಗಳಿರಬೇಕು. ಈ ದಿಕ್ಕಿನಿಂದ ನೋಡಿದಾಗ ಕನ್ನಡ ಅನುಷ್ಠಾನಕ್ಕೆ ಬೇಕಾದ ಭಾಷಾನೀತಿ ಮತ್ತು ಯೋಜನೆಗಳು ರಾಜ್ಯ ಸರ್ಕಾರಕ್ಕೆ ಇಲ್ಲವೆಂಬ ನಿರ್ಣಯಕ್ಕೆ ಬರುವುದು ಸಾಧ್ಯ. ಆದರೆ ಇದನ್ನು ಇನ್ನೊಂದು ದಿಕ್ಕಿನಲ್ಲಿ ನೋಡಿದಾಗ ಬೇರೆಯ ಸಾಧ್ಯತೆ ಗೋಚರಿಸುತ್ತದೆ.
ಹಸಿರುಕಾನನದ ಮಗಳೀಕೆ ಗೌರಾದೇವಿ…..
– ಚಿತ್ರ ಸಂತೋಷ್
ಉತ್ತರ ಖಾಂಡದ ರೇನಿ ಗ್ರಾಮದಲ್ಲಿ ಮರಗಳನ್ನು ಕಡಿಯಲು ಬಂದ ಅಧಿಕಾರಿಗಳ ವಿರುದ್ಧ ಬಂಡೆದ್ದವಳು ಗೌರಾದೇವಿ. ಬುಡಕಟ್ಟು ಜನರಿಗೆ ದಟ್ಟಾರಣ್ಯಗಳೇ ತವರು. ಕಾಡಿಗೂ-ನಮಗೂ ಇರುವುದು ಅಮ್ಮ-ಮಕ್ಕಳ ಸಂಬಂಧ.ಬದುಕಿದರೆ ನಮಗೆ ಆಸರೆ ನೀಡಿದ ಈ ಹಸಿರು ಕಾಡುಗಳಿಗಾಗಿ ಬದುಕಿ …ಎಂದು ಹಳ್ಳಿ ಮನೆಗಳ ಜಗುಲಿಯಲ್ಲಿ ಕುಳಿತು ಜಾಗೃತಿಯ ಕಹಳೆ ವೊಳಗಿಸಿದವಳು ಇವಳೇ ಗೌರಾದೇವಿ. ದೇಶದ್ಯಾಂತ ಪರಿಸರ ಕ್ರಾಂತಿ ಮಾಡಿದ ಚಿಪ್ಕೋ ಚಳವಳಿನ್ನು ಹುಟ್ಟು ಹಾಕಿದ್ದೇ ಇವಳು. ಇಂಥ ಗೌರಾದೇವಿಯನ್ನು ಗೌರವದಿಂದ ನೆನೆಯುವ ಕೆಲಸವನ್ನು ನಾವು ಮಾಡಬೇಕಿದೆ.
“ಸಹೋದರರೇ ಈ ಅರಣ್ಯ ಪ್ರದೇಶ ನಮ್ಮ ಜೀವಮೂಲ. ನಮ್ಮ ಹುಟ್ಟಿನಿಂದ ಸಾವಿನ ತನಕದ ಜೀವನ ಬಂಡಿಗೆ ಸಾಥ್ ನೀಡುವುದು ಇದೇ ಹಸಿರು ಕಾನನ. ಈ ‘ರಮೆಯೇ ನಮ್ಮಮ್ಮ. ನೀವು ನಿಮ್ಮ ಹರಿತವಾದ ಗರಗಸವನ್ನು ನಮ್ಮಮ್ಮನ ಕರುಳಿಗೆ ಇಡುವ ವೊದಲು ನನ್ನ ಎದೆಗೆ ಹಿಡಿ”
ಬಹುಶಃ ಚಿಪ್ಕೋ ಚಳವಳಿ ಹುಟ್ಟುವ ವೊದಲು ಓರ್ವ ಬುಡಕಟ್ಟು ಮಹಿಳೆ ಉತ್ತರ ಖಾಂಡದ ಆ ಬೃಹತ್ ಅರಣ್ಯದಲ್ಲಿ ಈ ರೀತಿ ಮರಗಳನ್ನು ತಬ್ಬಿಕೊಂಡು ಸರ್ಕಾರದ ಅಕಾರಿಗಳ ಎದುರು ಈ ರೀತಿ ಅಳಲು ತೋಡಿಕೊಂಡಿದ್ದು ಬಹಳಷ್ಟು ಜನರಿಗೆ ನೆನಪು ಇರಲಿಕ್ಕಿಲ್ಲ. ಚಿಪ್ಕೋ ಚಳವಳಿ ಕುರಿತು ಮಾತೆತ್ತಿದ್ದರೆ ತಕ್ಷಣಕ್ಕೆ ನೆನಪಿಗೆ ಬರುವುದು ಸುಂದರ್ ಲಾಲ್ ಬಹುಗುಣ ಎಂಬ ಮಹಾನ್ ವ್ಯಕ್ತಿ. ಆದರೆ, ಇವರಿಗಿಂತಲೂ ವೊದಲು ಅಲ್ಲಿ ಮಹಿಳೆಯೊಬ್ಬಳ ದನಿಯಿತ್ತು, ದೇಶದಾದ್ಯಂತ ಬೃಹತ್ ಪರಿಸರ ಕ್ರಾಂತಿಗೆ ಮುನ್ನುಡಿಯಾದ ಆ ಚಳವಳಿಯ ಹಿಂದೆ ಅನಕ್ಷರಸ್ಥೆ ಮಹಿಳೆಯ ಶ್ರಮ ಇತ್ತು, ಕಣ್ಣೀರಿತ್ತು, ಜಾಗೃತಿಯ ಕಹಳೆಯಿತ್ತು.
ಅವಳ ಹೆಸರು ಗೌರಾದೇವಿ.
ಗುಲ್ಬರ್ಗ ಜಿಲ್ಲೆ ಯಾವುದೇ ಕಲೆ/ಕಲಾವಿದರೂ ಇಲ್ಲದಂತಹಾ ಮರುಭೂಮಿಯೇ?
– ಅರುಣ್ ಜಾವಗಲ್
ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರಕಾರ ಹಲವಾರು ಜಿಲ್ಲೆಗಳಲ್ಲಿ ಉತ್ಸವಗಳನ್ನ ನಡೆಸುತ್ತಿದೆ.ಈ ಕಾರ್ಯಕ್ರಮಗಳು ಕರ್ನಾಟಕದ ಜನರ ತೆರಿಗೆ ಹಣದಲ್ಲಿ ನಡೆಯುತ್ತವೆ. ಈ ಕಾರ್ಯಕ್ರಮಗಳಲ್ಲಿ ಮುಖ್ಯವಾಗಿ ಆಯಾ ಜಿಲ್ಲೆಯ ಮತ್ತು ನಮ್ಮ ನಾಡಿನ ಕಲಾವಿದರ ಕಾರ್ಯಕ್ರಮಗಳಿಗೆ ಅವಕಾಶವಿರಬೇಕು.ಆದರೆ ಆ ಪ್ರದೇಶದ ಮತ್ತು ನಮ್ಮ ನಾಡಿನ ಇತರೇ ಕಲಾವಿದರನ್ನ ಮರೆತಿರುವ ಸರಕಾರ ಹೊರ ರಾಜ್ಯದಿಂದ ಕಲಾವಿದರನ್ನ ಕರೆಸಿ ಉತ್ಸವಗಳನ್ನ ನಡೆಸುತ್ತಿದೆ.
ಕೆಲವು ದಿನಗಳ ಹಿಂದೆ ನಡೆದ ಬೀದರ್ ಉತ್ಸವದಲ್ಲಿ ಶೇಕಡಾ 90% ರಷ್ಟು ಕಾರ್ಯಕ್ರಮ ನಡೆಸಿಕೊಟ್ಟವರು ಬೀದರ್ ಜಿಲ್ಲೆಗಾಗಲೀ ಅಥವಾ ನಮ್ಮ ನಾಡಿಗೆ ಯಾವುದೇ ಸಂಭಂದವಿಲ್ಲದವರು.ಇದೀಗ ಇದೇ ತಿಂಗಳ 15 ರಿಂದ 17 ರ ವರೆಗೆ ಕರ್ನಾಟಕ ಸರಕಾರ ಗುಲ್ಬರ್ಗ ಉತ್ಸವವನ್ನ ಆಯೋಜಿಸಿದೆ.ಯಾವುದೇ ಅನುಮಾನವಿಲ್ಲದಂತೆ ಈ ಕಾರ್ಯಕ್ರಮಕ್ಕೂ ಸಹ ಪರಭಾಷಿಕರಿಗೆ ಬಹುಪರಾಕ್ ಹೇಳಲಾಗಿದೆ.






