ಕನ್ನಡಕ್ಕೆ ಚಪ್ಪಲಿ ತೋರಿಸಿದವರು ಮಣ್ಣು ಮುಕ್ಕಲಿ…!
– ಜಯತೀರ್ಥ ನಾಡಗೌಡ, ವಿಜಾಪುರ
ಕನ್ನಡಕ್ಕೆ ಚಪ್ಪಲಿ ತೋರಿಸಿ ಕರ್ನಾಟಕದಲ್ಲೇ ಮೇಯರ್ ಆಗಲು ಸಾಧ್ಯವೇ! ಹೌದು ಇಂಥ ಘನಘೋರ ಕೃತ್ಯಗಳು ನಮ್ಮ ರಾಜ್ಯದಲ್ಲಿ ಮಾತ್ರ ಕಾಣ ಸಿಗುತ್ತವೆ. ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ
ವಿಶ್ವಕನ್ನಡ ಸಮ್ಮೇಳನ, ನಡೆಸಕೂಡದು ಎಂದು ಅಡ್ಡಿಪಡಿಸಿ ಚಪ್ಪಲಿ ತೋರಿಸಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನ ನಿರ್ಲಜ್ಜ ಮಹಿಳೆ ಮಂದಾ ಬಾಳೆಕುಂದ್ರಿ ಬೆಳಗಾವಿಯ ಮೇಯರ್ ಆಗಿರುವುದು, ಎಲ್ಲ ಕನ್ನಡಿಗರು ತಮ್ಮ ಎಕ್ಕಡದಿಂದ ತಾವೇ ಹೊಡೆದುಕೊಂಡಂತೆ.
ಎಲ್ಲ ವರದಿ, ತೀರ್ಪುಗಳು ಬಂದು ಬೆಳಗಾವಿ ಕನ್ನಡದ ಅವಿಭಾಜ್ಯ ಅಂಗ ಅಂತ ಸಾಬೀತಾದರೂ, ಹಾಳು .ಈ.ಎಸ್ ನ ಕಾರ್ಯಕರ್ತರು ಪುಂಡಾಟಿಕೆ ಮಾಡುತ್ತಿರುವುದು ನಮ್ಮ ಆಳಿದ/ಆಳುವ ಘನಂದಾರಿ ಪಕ್ಷಗಳ ಕಾಣಿಕೆಯೇ ಸರಿ. ಕ.ರ.ವೇ ಸತತ ಪರಿಶ್ರಮದಿಂದ ಜಾಗ ಖಾಲಿ ಮಾಡಿದ್ದ ಶಿವಸೇನೆ, ಎಂಇಎಸ್ ನವರನ್ನು ಮತ್ತೆ ಬೆಳೆಯಲು ಬಿಟ್ಟು ಇಂಥ ರಾಜದ್ರೋಹಿಗಳೊಂದಿಗೆ ಚುನಾವಣ ಹೊಂದಾಣಿಕೆ ಮಾಡಲು ಕೂಡ ನಮ್ಮ ಕೆಲ ಧುರೀಣರು ಮನಸ್ಸು ಮಾಡಿದ್ದು ಎಲ್ಲರಿಗೂ ಗೊತ್ತಿದ್ದ ಸತ್ಯ.
ರಾಷ್ಟ್ರೀಯ ಪಕ್ಷಗಳ ಒಡೆದು ಆಳುವ ನೀತಿ…!
– ಚೇತನ್ ಜೀರಾಳ್
ಕಳೆದ ಎರಡು ವಾರಗಳಲ್ಲಿ ನಡೆದಿರುವ ಸುದ್ದಿಗಳ ಬಗ್ಗೆ ನಿಮ್ಮ ಗಮನ ಹರಿಸಲು ಇಷ್ಟಪಡುತ್ತೇನೆ. ಪತ್ರಿಕೆಗಳಲ್ಲಿ ಕೇವಲ ಸುದ್ದಿ ಎನ್ನುವಂತೆ ಇವುಗಳನ್ನು ಬಿತ್ತರಿಸಲಾಯಿತು, ಆದರೆ ಇವುಗಳ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ.
ಮರುಚುನಾವಣೆ ಹಾಗೂ ತೆಲುಗಿನಲ್ಲಿ ಭಾಷಣ:
ಮೊನ್ನೆ ನಡೆದ ಮರುಚುನಾವಣೆಯ ಪ್ರಚಾರಕ್ಕಾಗಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡವು, ಅದಕ್ಕಾಗಿಯೇ ಹೊರರಾಜ್ಯದ ಚಲನಚಿತ್ರ ನಟ/ನಟಿಯರನ್ನು ಕರೆಸಿದ್ದವು. ಮತದಾರನನ್ನು ಓಲೈಸುವ ಭರದಲ್ಲಿ ನಮ್ಮ ರಾಜಕೀಯ ಪಕ್ಷಗಳು ಮಾಡುತ್ತಿರುವ ತಪ್ಪುಗಳು ಮಾತ್ರ ಬಹಳ ದೊಡ್ಡದಾಗಿವೆ. ಬಂಗಾರ ಪೇಟೆಯಲ್ಲಿ ನಡೆದ ಉಪಚುನಾವಣೆಗಾಗಿ ನಡೆಸಿದ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಲಗು ಚಿತ್ರನಟ ಚಿರಂಜೀವಿಯನ್ನು ಬಳಸಿಕೊಂಡಿತ್ತು. ಅವರು ಸಹ ಭರ್ಜರಿಯಾಗಿ ತೆಲುಗಿನಲ್ಲಿ ಭಾಷಣ ಮಾಡಿ ಹೊರಟು ಹೋದರು. ಇದರಲ್ಲಿ ತಪ್ಪೇನು ಅಂತೀರಾ? ಮತದಾರನನ್ನು ಓಲೈಸುವ ಭರದಲ್ಲಿ ಕರ್ನಾಟಕದ ವಿವಿಧ ಭಾಷಿಕರಲ್ಲಿ ಒಡಕುಂಟು ಮಾಡಲಾಗುತ್ತಿದೆ. ಮೊನ್ನೆ ನಡೆದಿದ್ದು ಸಹ ಅದೇ, ಹಲವು ಶತಮಾನ ಅಥವಾ ಹಲವು ದಶಕಗಳಿಂದ ಇಲ್ಲಿ ನೆಲೆಸಿರುವ ತೆಲುಗು ಭಾಷಿಕರು ಕನ್ನಡದವರೇ ಆಗಿಹೋಗಿದ್ದಾರೆ. ಆದರೆ ನೀವು ತೆಲುಗರು ನೀವು ಕನ್ನಡಿಗರಲ್ಲಾ ಅಂತಾ ತೋರಿಸೋ ಪ್ರಯತ್ನಗಳೇ ಚಿರಂಜೀವಿ ಯಂತಹ ತೆಲುಗು ನಟರನ್ನು ಕರೆದುಕೊಂಡು ಬಂದು ಕರ್ನಾಟಕದಲ್ಲಿ ಭಾಷಣ ಮಾಡಿಸುವುದು. ಕರ್ನಾಟಕದ ಜನರನ್ನ ಓಲೈಸಲು ಆಂಧ್ರಪ್ರದೇಶದ ಕರಾವಳಿ ತೀರದ ಒಬ್ಬ ನಟ ಬಂದು ನೀವು ಕನ್ನಡಿಗರಲ್ಲಾ ಎಂದು ಸಂದೇಶ ನೀಡಿಸುವ ಕೆಲಸ ಮಾಡುತ್ತಿರುವ ಪಕ್ಷಗಳು ಮಾಡುತ್ತಿರುವುದಾದರು ಏನು ಅನ್ನೋದನ್ನ ತಾವೇ ಪ್ರಶ್ನಿಸಿಕೊಳ್ಳಲಿ.
ಅವರೆತ್ತರಕ್ಕೆ ಏರಲಾಗದಿದ್ದರೆ ತೆಪ್ಪಗಿರಿ…!
– ರಾಕೇಶ್ ಶೆಟ್ಟಿ
“ಇಂದಿನ ಪರಿಸ್ಥಿತಿಯಲ್ಲಿ ಮಹಾತ್ಮ ಗಾಂಧೀಜಿ ಅವರು ಇದ್ದಿದ್ದರೆ, ಅವರು ಕೂಡಾ ಭ್ರಷ್ಟರಾಗುತ್ತಿದ್ದರು. ರಾಜಕೀಯದಲ್ಲಿ ಉಳಿಯಬೇಕಾದರೆ ಭ್ರಷ್ಟರಾಗದೆ ಇರಲು ಸಾಧ್ಯವೇ ಇಲ್ಲ” ಇಂತ ಹೇಳಿಕೆ ಕೊಟ್ಟೊವ್ರು ಯಾರು ಅನ್ನೋದು ಎಲ್ರಿಗು ಗೊತ್ತಿದೆಯಲ್ವಾ? ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವ್ರು.ಒಂದ್ ಕಡೆ ದೇವೆಗೌಡ್ರು ಫೋಟೊ,ಇನ್ನೊಂದ್ ಕಡೆ ಇದೇ ಮಹಾತ್ಮನ ಫೋಟೊ ಹಾಕೊಂಡಿರೋ ಪಕ್ಷದ ರಾಜ್ಯಾಧ್ಯಕ್ಷರ ಬಾಯಿಯಲ್ಲಿ ಬಂದ ಮುತ್ತಿನಂತ ಮಾತುಗಳಿವು.
ಮುತ್ತುಗಳು ಬಿದ್ದಾಗ ಆರಿಸಿ ಮನೆಗ್ ತಗೊಂಡು ಹೋಗೊದು ರೂಢಿ,ಆದ್ರೆ ಕುಮಾರ ಸ್ವಾಮಿ ಅವ್ರ ಮುತ್ತನ್ನ ಹಿಡಿದು ಅವರಿಗೆ ಪೈಡ್ ಪೈಡ್ ಅಂತ ಎಲ್ಲ ಕಡೆಯಿಂದ ಬಾರಿಸುತಿದ್ದಾರೆ.ಬಾರಿಸದೆ ಬಿಡ್ಬೇಕಾ? ಒಂದು ಕಡೆ ಮಹಾತ್ಮರ ಹೋರಾಟದಿಂದ ಸ್ಪೂರ್ತಿ ಪಡೆದ ೭೬ ವರ್ಷದ ಅಣ್ಣಾ ಹಜಾರೆಯಂತವರು ಸತ್ತತಿಂಹರನ್ನ ಬಡಿದೆಬ್ಬಿಸಲು ಉಪವಾಸ ಕೂತರೆ,ಇನ್ನೊಂದು ಕಡೆ ಈ ಕುಮಾರಸ್ವಾಮಿ ಮಹಾತ್ಮರ ಬಗ್ಗೆ ಇಂತ ಮಾತನಾಡಲು ಹೊರಟಿದ್ದಾರೆ!
ಇನ್ನೊಂದು ಸಮರಕ್ಕೆ ಸಿದ್ಧರಾಗಿ…
-ಸಂಪತ್ ಕುಮಾರ್
ಅಣ್ಣ ಹಜಾರೆಯವರ ಉಪವಾಸವೇನೋ ಮುಗಿಯಿತು. ರಂಗೋಲೆಯ ಕೆಳಗೆ ನುಸುಳುವ ಬುದ್ಧಿ ಉಳ್ಳ ರಾಜಕಾರಣಿಗಳು ಎಂತಹ ಕಾನೂನು ತಯಾರಿಸುತ್ತರೋ ಕಾದುನೋಡಬೇಕು.
ಈಗಾಗಲೇ ಅಸ್ತಿತ್ವದಲ್ಲಿರುವ ಲೋಕಾಯುಕ್ತದಂತಹ ಸಂಸ್ಥೆಯಿಂದ ಆಗುತ್ತಿರುವ ಭ್ರಷ್ಟಾಚಾರಿಗಳ ಬೇಟೆ ಅವರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿರುವುದು ಸರ್ವವೇದ್ಯ. ಅಲ್ಲದೆ ಇಂತಹ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವುದೂ ಅನುಮಾನ.ಇಂತಹ ಪರಿಸ್ತಿತಿಯಲ್ಲಿ ಇನ್ನೊದು ಹೋರಾಟದ ಅಗತ್ಯ ಇದೆ.
ಭಾರತದ ರಾಜಕಾರಣಿಗಳ ಕೋಟಿ ಕೋಟಿ ಕಪ್ಪು ಹಣ ಸ್ವಿಸ್ ಬ್ಯಾಂಕಿನಲ್ಲಿ ಕೊಳೆಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಹಣವನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿದರೆ ಭಾರತ ತನ್ನೆಲ್ಲ ಸಾಲದಿಂದ ಮುಕ್ತವಾಗಿ, ಹಣ ದುಬ್ಬರ, ಬಡತನ, ಮುಂತಾದ ತನ್ನೆಲ್ಲ ಕಷ್ಟ ಕೋಟಲೆಗಳಿಂದ ಹೊರಬರಲು ಸಾಧ್ಯ. ಇದಕ್ಕಾಗಿ ಅಣ್ಣ ಹಜಾರೆ ಅವರನ್ನು ಈ ಉದ್ದೇಶಕ್ಕಾಗಿ ಪುನಃ ಉಪವಾಸ ಕೂರಲು ಹೇಳುವುದು ಸ್ವಾರ್ಥ ಎನಿಸಬಹುದು. ಈ ವಿಚಾರವನ್ನೇ ತನ್ನ ಚುನಾವಣ ಪ್ರಾಣಾಳಿಕೆ ಮಾಡಿಕೊಂಡಿರುವ ಭಾ.ಜ.ಪ. ದಿಂದ ಇದನ್ನು ರಾಜಕೀಯಗೊಳಿಸಬಾರದು.
ಮತ್ತಷ್ಟು ಓದು 
ಕನ್ನಡಕ್ಕಿಂತ ತಮಿಳು ಯಾವುದರಲ್ಲಿ ಮುಂದಿದೆ?
ಹಳ್ಳಿಗರೇ ಕರೆಂಟ್ ಉಳಿಸಿ, ಎಂಜಿ ರೋಡಿಗೆ ಲೈಟ್ ಹಾಕಬೇಕು
ಪ್ರಪಂಚ ಹೀಗೆನೇ!
ಯಾರು ಪಾಲಿಸ್ತಾರೋ ಅವರ ಮೇಲೆಯೇ ಎಲ್ಲವನ್ನು ಹೇರಿ ಅರಾಮದಲ್ಲಿ ಇದ್ದು ಬಿಡುತ್ತೆ. ‘ಉಳಿಸಿ’ ಅಂತ ಸರ್ಕಾರ ಯಾವುದಾದ್ರು ಅಭಿಯಾನ ಮಾಡಿದ್ರೆ ಅದರ ಟಾರ್ಗೆಟ್ ಮಧ್ಯಮ ಇಲ್ಲವೇ ಕೆಳವರ್ಗವೇ ಆಗಿರುತ್ತೆ. ಅದು ನೀರುಳಿಸಿ ಎಂಬುದೋ, ಪೆಟ್ರೋಲ್ ಉಳಿಸಿ ಅಂತಲೋ, ಕಡೆಗೆ ವಿದ್ಯುತ್ ಉಳಿಸಿ ಅಂತಾನೋ ಇರಬಹುದು. ಇಲ್ಲಿ ‘ಉಳಿಸಬೇಕಾದವರು’ ಯಾವುದನ್ನು ಕಡಿಮೆ ಪಡೆಯುತ್ತಿರುತ್ತಾರೋ ಅವರೇ! ವಿಚಿತ್ರ, ಆದ್ರೂ ಸತ್ಯ.
ಉದಾಹರಣೆಗೆ ನೀರು ಉಳಿಸಿ-ಮಿತವಾಗಿ ಬಳಸಿ ಅಂತ ಹೇಳಲಾಗುತ್ತೆ. ಆದ್ರೆ ಅದನ್ನು ಪಾಲಿಸಬೇಕಾದ ಜನತೆಗೆ ವಾರಕ್ಕೆ ಒಮ್ಮೆಯೋ ಎರಡು ಬಾರಿಯೋ ನೀರು ಬಂದ್ರೆ ಅದೇ ಹೆಚ್ಚು. ಒಮ್ಮೆ ಎಲ್ಲಿಯಾದ್ರೂ ಈ ಜನರು ಈ ನಿಯಮಗಳನ್ನು ಪಾಲಿಸುವಲ್ಲಿ ಸೋತರೆ ನಾವೆಲ್ಲ ಬೊಬ್ಬೆ ಹಾಕಿ ಬಿಡ್ತೇವೆ. ಅದ್ರೆ ಆ ಬೊಬ್ಬೆಯಲ್ಲಿ ಸತ್ಯವೊಂದು ಮುಚ್ಚಿ ಹೋಗಿರುತ್ತೆ. ಒಬ್ಬ ಶ್ರೀಮಂತನ ಮನೆಯ ಟಾಯ್ಲೆಟ್ ನಲ್ಲಿ ಬಳಕೆಯಾಗುವ ನೀರಿನಷ್ಟು ಸಾಮಾನ್ಯ ಜನರ ಕುಡಿಯುವ ನೀರು ಶುದ್ಧವಾಗಿರಲ್ಲ.
ಸುನಾಮಿ ಕಾವು – ಮಾಧ್ಯಮಗಳಿಗೆ ಮೇವು
ತಲೆಕೆಟ್ಟ ಮಾಧ್ಯಮಗಳ ಮಾತಿಗೆ ಹೆದರಿ ಕಂಗಾಲಾದವರು, ಮತ್ತೆ ಮತ್ತೆ ಮುರ್ಖರಾಗುವವರು ಅದೇ ಸಾಮಾನ್ಯ ಜನ.
ಮಾರ್ಚ್ ೧೯ ರಂದು ಸುಪರ್ ಮೂನ್ ಪ್ರಭಾವದಿಂದ ಸಮುದ್ರ ಉಕ್ಕಿ ಹರಿದು ಇಡೀ ಮಂಗಳೂರಿಗೆ ಮಂಗಳೂರೇ ಮುಳುಗಿ ಹೋಗುತ್ತೆ ಅಂತ ಯಾವಾಗ ಟೀವಿಯಲ್ಲಿ ಸುದ್ದಿ ಬಂತೋ ಪರವೂರಗಳಿಂದ ಬಂದು ಇಲ್ಲಿ ಕೆಲಸ ಮಾಡ್ತಾ ಇರೋ ಜನ ಬೆವತು ಹೋದರು. ಮೊದಲೇ ಇಲ್ಲಿನ ಪ್ರಕೃತಿಯ ಸರಿಯಾದ ಅಂದಾಜಿಲ್ಲದ ಜನರಂತೂ ನಿಜಕ್ಕೂ ಒಂದು ಕ್ಷಣ ಅವಕ್ಕಾದರು. ಅವರವರ ಮನೆಗಳಿಂದ ಪೋನಿನ ಮೇಲೆ ಪೋನ್ ಬರತೊಡಗಿದವು. ಎಲ್ಲರದ್ದೂ ಒಂದೇ ಮಾತು ಈ ಕ್ಷಣವೇ ಅಲ್ಲಿಂದ ಹೊರಟು ಬಾ ಅಂತ.
ಹೆದರಿದವರ ಮೇಲೆ ಹಾವು ಎಸೆದಂತೆ ಜಪಾನಿನಲ್ಲಿ ಎದ್ದ ಸುನಾಮಿ ಇನ್ನಷ್ಟು ಹೆದರಿಕೆ ಹುಟ್ಟಿಸಿತು. ಇದರೆಲ್ಲರ ಪರಿಣಾಮ ದೂರದ ಊರಿಗೆ ಹೋಗೋ ಎಲ್ಲ ಬಸ್ಸುಗಳು ಬಸುರಿಯಂತೆ ತುಂಬಿ ಹೋದವು. ರಾತ್ರೋ ರಾತ್ರಿ ಖಾಸಗಿ ಬಸ್ಸಿನವರು ಪ್ರಯಾಣ ದರವನ್ನು ಹೆಚ್ಚಿಸಿ ಉರಿಯುವ ಮನೆಯಲ್ಲಿ ಗಳ ಹಿರಿಯುವ ಕೆಲಸ ಮಾಡಿದರು. ಒಂದಕ್ಕೆ ಎರಡು ನೀಡಿ ತಮ್ಮ ಊರಿಗೆ ಹೊರಟು ನಿಂತಿತು ಜನತೆ. ೫೦ ಜನರು ಇರಬೇಕಾದ ಬಸ್ಸಿಲ್ಲಿ ೬೦-೭೦ ಜನ ಪ್ರಯಾಣ ಮಾಡಿದರು.
ಮಕ್ಕಳು, ಮರಿ, ಹೆಂಗಸರು, ಗಂಡಸರು ಎಂಬ ಬೇಧಭಾವವಿಲ್ಲದೇ ಹೊರಟೆ ಹೊರಟರು. ಇವರೆಲ್ಲ ಮಾಸಿಕ ಪಗಾರ ಎಣಿಸೋ ಸರ್ಕಾರಿ ಬಾಬುಗಳಲ್ಲ. ದಿನಗೂಲಿಗೆ ದೂರದ ಉತ್ತರ ಕರ್ನಾಟಕದಿಂದ ಬಂದ ಜನ. ಒಪ್ಪತ್ತಿಗೆ ಪರದಾಡುತ್ತಿರುವ ಇವರು, ಪ್ರಕೃತಿಯ ಮುನಿಸಿಗೆ ಒಳಗಾದ ನೆರೆಪೀಡಿತ ಜನ.
ಪಕ್ಷಗಳ ಆಟಕ್ಕೆ ಜನರ ಹಣವೇಕೆ ಬಲಿ?
– ರಾಕೇಶ್ ಶೆಟ್ಟಿ
ಮತ್ತೆ ೩ ಕ್ಷೇತ್ರಗಳಲ್ಲಿ ಉಪಚುನಾವಣೆ ಬಂದು ನಿಂತಿದೆ.ಮೊದಲೆಲ್ಲ ಜನಪ್ರತಿನಿಧಿಗಳ ಮರಣದಿಂದಾಗಿಯೇ ಉಪಚುನಾವಣೆಗಳು ನಡೆಯುತಿದ್ವು.ಅದರ ನಡುವೆ ನಮ್ಮ ಚುನಾವಣ ಆಯೋಗದ
ತಲೆ ಕೆಟ್ಟ ಒಂದು ಕಾನೂನು ಇದ್ಯಲ್ಲ : ’ಒಂದೇ ಕಾಲದಲ್ಲಿ ಒಬ್ಬ ಅಭ್ಯರ್ಥಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು’ ಅಂತ.ಅದೂ ಕೂಡ ಕೆಲವೊಮ್ಮೆ ಉಪಚುನಾವಣೆಗೆ ಕಾರಣವಾಗಿದ್ದಿದೆ.ಉದಾಹರಣೆಗೆ ಸೋನಿಯ ಮೇಡಂ ಬಳ್ಳಾರಿಲಿ ಗೆದ್ದು ’ಕೈ’ ಎತ್ತಿ ಹೊರಟಿದ್ದು ಗೊತ್ತಿದೆ ಅಲ್ವಾ?
ನಮ್ ದೇವೆಗೌಡ್ರು ಪ್ರಧಾನಿ ಕುರ್ಚಿಯಿಂದ ಇಳಿದು ಬಂದ್ಮೇಲೆ ಎದುರಿಸಿದ ಲೋಕಸಭಾಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಿ ಸೋತು,ಆ ನಂತರ ಕನಕಪುರದಲ್ಲಿ ನಡೆದ ಉಪಲೋಕಸಭೆ ಚುನಾವಣೆಯಲ್ಲಿ ಗೆದ್ದು ಬಂದಿದ್ರು.ಆ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತೆ ಕನಕಪುರ ಎರಡೂ ಕ್ಷೇತ್ರದಿಂದ ಸ್ಪರ್ಧಿಸಿದ್ರು.ಒಂದು ವೇಳೆ ಎರಡೂ ಕಡೆ ಗೆದ್ದಿದ್ರೆ ಹಾಸನ ಕೈ ಬಿಡ್ತಾ ಇದ್ರೂ ಅಂತ ಆಗ ಜನ ಮಾತಡಿಕೊಳ್ತಾ ಇದ್ರು.ದೇವರ ದಯೆ ಹಾಸನದಲ್ಲಿ ಮಾತ್ರ ಗೆದ್ರು! 🙂
ದೇವರ ದಯೆ ಅಂತ್ಯಾಕ್ ಹೇಳ್ದೆ ಅಂದ್ರೆ, ಹೀಗೆ ಎರಡೂ ಕಡೆ ನಿಂತೂ ಎರಡೂ ಕಡೆ ಗೆದ್ರೆ, ಅವ್ರು ಒಂದು ಕ್ಷೇತ್ರವನ್ನ ಬಿಟ್ಟುಕೊಡಲೇಬೇಕಲ್ವಾ? ಆಗ ತೆರವಾದ ಸ್ಥಾನಕ್ಕೆ ಮತ್ತೊಮ್ಮೆ ಉಪಚುನಾವಣೆ ಬಂದು ನಿಲ್ಲುತ್ತೆ. ಮತ್ತೆ ನಮ್ಮ ಜನರು ಬೆವರು ಸುರಿಸಿದ ತೆರಿಗೆ ಹಣ ಪೋಲು ಆಗೋದಿಲ್ವಾ?
ಈ ಬಾರಿಯ ಬಿಜೆಪಿ ಸರ್ಕಾರ ಬಂದು ಆಪರೇಶನ್ ಕಮಲ ಅಂತ ಹೇಳಿಕೊಂಡು ಮಾಡಿದ್ದು ಜನರ ತೆರಿಗೆ ಹಣದ ಆಪರೇಶನ್ ಅಲ್ವಾ?… ಈ ಮಧ್ಯೆ ಕುಮಾರಸ್ವಾಮಿಯವ್ರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂ.ಪಿ ಆದ್ರು,ಈಗ ಮತ್ತೆ ಚನ್ನಪಟ್ಟಣ ಉಪಚುನಾವಣೆಗೆ ನಿಲ್ತಾ ಇದ್ದರೆ.ಅಲ್ಲಿ ಗೆದ್ರೆ ಮತ್ತೆ ಲೋಕಸಭೆಯ ಸ್ಥಾನಕ್ಕೆ ಉಪಚುನಾವಣೆ ನಡಿಬೇಕಲ್ವಾ?…
ಎರಡು ಕೋಟಿಗೆಷ್ಟು ಮನೆ ಕಟ್ಟಿಸಬಹುದು ಯಡ್ಯೂರಪ್ಪನವ್ರೇ?
– ರಾಕೇಶ್ ಶೆಟ್ಟಿ
ಸೂಪರ್ ಮೂನ್ ಎಫ಼ೆಕ್ಟ್ ಬಗ್ಗೆ ಮಾತಾಡುತ್ತ ಏನೋ ವಿಪತ್ತು ಕಾದಿದೆಯಂತೆ ಮಾರಾಯ ಅಂತ ಗುಸು ಗುಸು ಶುರುವಾಗಿತ್ತು,ಊಟಕ್ಕೆ ಹೋಗಿ ಬಂದವ ತಾಜ ಸುದ್ದಿಯೇನು ಅಂತ ನೋಡ ಹೋಗಿ
ಮೈ ಒಮ್ಮೆ ತಣ್ಣಗಾಯಿತು.ಜಪಾನ್ನಲ್ಲಿ ಸುನಾಮಿಯೆದ್ದಿದೆ! ಕ್ಷಣಕಾಲ ಅವಕ್ಕಾದೆ,ನಂತರ ಗೂಗಲ್ ಮಹರಾಜನ ಮೊರೆ ಹೋಗಿ ವಿಡಿಯೋ ನೋಡಿ ದಂಗಾಗಿ ಹೋದೆ,ಅದಿನ್ನೆಂತ ರಾಕ್ಷಸ ಅಲೆಗಳು ಅವು!ತಮ್ಮ ಹರಿವಿನಳೊಗೆ ಸಿಕ್ಕಿದ್ದನ್ನೆಲ್ಲ ಆಪೋಷನ ತೆಗೆದುಕೊಳ್ಳುತ್ತ ಹೊರಟಿತಲ್ಲ,ಅದಿನ್ನೆಷ್ಟು ಸಾವಿರ ಜನರ ಬದುಕು ಮೂರಾ ಬಟ್ಟೆಯಾಯಿತು,ಜಪಾನ್ ಅನ್ನುವ ಸ್ವಾಭಿಮಾನಿಗಳ ದೇಶಕ್ಕೆ ಇದೊಂದು ದೊಡ್ಡ ಪೆಟ್ಟು.ಈ ಆಘಾತದಿಂದ ಜಪಾನ್ ಸಹೋದರರು ಎದ್ದು ಬರಲಿ,ಮತ್ತೆ ಜಪಾನ್ ಗೆಲ್ಲಲೇಬೇಕು ಇದು ಬಹುಷಃ ಬಹುತೇಕರ ಪ್ರಾರ್ಥನೆ.
ಪ್ರವಾಹ! … ಸುನಾಮಿಯ ರಕ್ಕಸ ಅಲೆಗಳನ್ನ ನೋಡಿದಾಗ ನನಗೆ ತಟ್ಟನೆ ನೆನಪಾಗಿದ್ದು, ಎರಡು ವರ್ಷದ ಹಿಂದೆ ಬೆಂಗಳೂರಿನಲ್ಲಿ ರಾತ್ರೋ ರಾತ್ರಿ ಸುರಿದ ಮಳೆಯಲ್ಲಿ ಸಿಕ್ಕಿ ಹಾಕಿಕೊಂಡು almost ಎದೆಯ ಹತ್ತಿರ ಹರಿದು ಬರುತಿದ್ದ ನೀರಿನಲ್ಲಿ ನಾವು ಪಟ್ಟ ಪಾಡು! ಮತ್ತು ಆಗ ನೀರಿನ ರಭಸಕ್ಕೆ ಪಲ್ಸರ್ ಬೈಕಿನಲ್ಲಿ ತೇಲಿಕೊಂಡು ಬಂದ ಆಸಾಮಿಯೊಬ್ಬ ಸಾವರಿಸಿಕೊಂಡು ಹೇಳಿದ ಮಾತು!
“‘ಸರ್,ಈ ತರ ಟೀ.ವಿಯಲ್ಲಿ ನೋಡಿದ್ದೇ,ಅನುಭವಿಸಿರಲಿಲ್ಲ.ಈ ಮಳೆಗೆ ಹಿಂಗೆ ನಾವು ಚಡಪಡಿಸ್ತ ಇದ್ದಿವೀ, ಇನ್ನ ಪಾಪ ಉತ್ತರ ಕರ್ನಾಟಕದ ಪ್ರವಾಹದಲ್ಲಿ ಸಿಕ್ಕಿಕೊಂಡ ಜನರ ಕತೆ ಹೇಗಾಗಿರಬೇಡ”. ಅವನಂದ ಮಾತು ನಿಜ ಅಂತ ಅನ್ನಿಸಿತ್ತು.
ನಾರಾಯಣ ಮೂರ್ತಿ ಅವರಿಂದ ಏನ್ ಕಲಿಬೇಕು, ಏನ್ ಬೇಡ ?
ಮೂರ್ತಿಯವರಿಂದ ಕಲಿಯಬೇಕಾದದ್ದು ಸಾಕಷ್ಟಿದೆ !







![Media_goofup_photo[1]](https://nilume.net/wp-content/uploads/2011/03/media_goofup_photo1.jpg?w=300&h=240)

