ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

26
ಫೆಬ್ರ

ನಾವು ಸ್ವತಂತ್ರರೇ..?

ಮಮತ ಕಂಡ್ಲೂರು

ಅಂದು ಸಿಕ್ಕಿತ್ತು ಮುಕ್ತಿ

ಕಳಚಿತ್ತು ಆ ಪರರ ಕಪಿಮುಷ್ಟಿ

ಅಂತೂ ಇಂತೂ ಸ್ವಾತಂತ್ರ್ಯ ಬಂತೆಂದರು ಹಿರಿಯರು

ತನ್ನ ಕರುಳಕುಡಿಗಳಿವರೆಲ್ಲ ಒಂದೆಂಬ ಭಾವದಿ

ಇಹರೆಂದು ‘ಭರತಮಾತೆ’ಯ ಎದೆಯು ಮಿಡಿದಿತ್ತು.

ಆಹಾ, ಎಂಥಾ ಪರಮಾನಂದವಾಗುತ್ತಿದೆ.

ನಮ್ಮದೇ ನೆಲ,ಜಲ,ಗಾಳಿ ಕೊನೆಗೆ ನಮ್ಮದೇ ‘ಸರಕಾರ’.

ನೆಮ್ಮದಿಯ ಉಸಿರು ಬಿಡುತ್ತಿದ್ದಂತೆ,

ಆರಂಭವಾಯ್ತು ಪ್ರಗತಿಯ ಅರಸುವಿಕೆ!

ಜನ್ಮತಾಳಿದುವು ಕಟ್ಟಡಗಳು ಗೆದ್ದಲಗೂಡಿನ ತೆರದಿ.

ಬಲಿಯಾಗಿ ಪಕ್ಷಪಕ್ಷಗಳ ಸ್ವಾರ್ಥರಾಜಕೀಯಕ್ಕೆ

ಅನಾಥಭಾವದಿ ನರಳುವಂತಾಯ್ತು ಬಡಜನತೆ.

ಬೆಳೆದವು ಸರಕಾರದ ಯೋಜನೆಗಳು ಹನುಮಂತನ ಬಾಲದಂತೆ…… ಮತ್ತಷ್ಟು ಓದು »

23
ಫೆಬ್ರ

ವೋಟ್ ಬ್ಯಾಂಕ್ ಜಪ – ಕಾನೂನು ಸುವ್ಯವಸ್ಥೆ ನೆಪ !

– ರಾಕೇಶ್ ಶೆಟ್ಟಿ
ಈ ಲೇಖನವನ್ನ ಬರೆದಿದ್ದು ಕಳೆದ ವರ್ಷ ರಾಜೀವ್ ಗಾಂಧೀಯವ್ರ ಹುತಾತ್ಮರಾದ ದಿನದಂದು,ಆದರೆ ಇಂದಿಗೂ ಇದು ಪ್ರಸ್ತುತವೇ,ಬಹುಶಃ ಈ ಕಾಂಗ್ರೆಸ್ಸ್ ಸರ್ಕಾರ ಈ ಅವಧಿ ಮುಗಿದ ಮೇಲೂ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ಇನ್ನ ೬-೭ ವರ್ಷ ಈ ಲೇಖನ ಪ್ರಸ್ತುತವೇ! ಯಾವ್ದಪ್ಪ ಇದು ಅಂತ ವಿಷ್ಯಾ ಅಂತೀರಾ,ಅದೇ ಸ್ವಾಮಿ ಅಫ಼್ಜಲ್ ಗುರು ಅನ್ನೋ ಉಗ್ರಗಾಮಿಯನ್ನ ಗಲ್ಲಿಗೇರಿಸೊದು.ಮೊನ್ನೆ ಕಸಬ್ಗೆ ಹೈ-ಕೊರ್ಟ್ ಗಲ್ಲು ಶಿಕ್ಷೆ ನೀಡಿದೆ ಅಂದಾಗ ನನಗೆ ಮತ್ತೆ ಮತ್ತೆ ನೆನಪಾಗಿದ್ದು ಅಫ಼್ಜಲ್! (ಹಳೇ ಲೇಖನದಲ್ಲಿ ಕಸಬ್ ಇರಲಿಲ್ಲ ಈಗ ಅವನು ಸೇರಿಕೊಂಡಿದ್ದಾನೆ.ಮತ್ತೆ ಇದೇ ಲೇಖನವನ್ನ ಪ್ರಕಟಿಸುವ ದಿನ ಬಾರದಿರಲಿ 😦 )

ಇಂದು ರಾಜೀವ್ ಗಾಂಧೀ ಹುತಾತ್ಮರಾದ ದಿನ.ಆದರೆ ನನಗೆ ಈಗ ನೆನಪಾಗುತ್ತಿರುವವರು ಅವರಮ್ಮ ಇಂದಿರಾ.’ಇಂದಿರಾ ಗಾಂಧಿ!’ ಬಹುಷಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ದೇಶದ ರಕ್ಷಣೆಯ ವಿಷಯದಲ್ಲಿ ಯಾವ ರಾಜಿ ಮಾಡಿಕೊಳ್ಳದೆ ಮುನ್ನುಗ್ಗುತಿದ್ದ ಅವರಂತ ಇನ್ನೊಬ್ಬ ಪ್ರಧಾನಿ ಈ ದೇಶಕ್ಕೆ ಮತ್ತಿನ್ಯಾರು ಸಿಕ್ಕಿಲ್ಲ ಅಂದರೆ ಅದು ಉತ್ಪ್ರೇಕ್ಷೆಯಾಗಲಾರದು!

ಮತ್ತಷ್ಟು ಓದು »

22
ಫೆಬ್ರ

ಮಂಗಳಮುಖಿಯರಿಗೂ ದಕ್ಕಿದ ಹಕ್ಕುಗಳು

ನಾಗರಾಜ್ ಜಿ

ಭಾರತದಲ್ಲಿ ಫೆಬ್ರವರಿ 9ರಿಂದ ಪ್ರಾರಂಭವಾಗಿರುವ ಜನಗಣತಿಯಲ್ಲಿ ಸ್ತ್ರೀ ಪುರುಷರ ಜೊತೆಗೆ ಪ್ರಥಮ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರನ್ನೂ ಸೇರಿಸಲು ನಿರ್ಧರಿಸಿರುವುದನ್ನು ಸ್ವಾಗತಿಸಿರುವುದಾಗಿ ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಹೇಳಿದೆ.

ಗುರುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜನಗಣತಿ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಕಾರ್ಯಕರ್ತರು ಸರಕಾರಕ್ಕೆ ತಾವು ಸಲ್ಲಿಸುತ್ತಿರುವ ಬೇಡಿಕೆಗಳ ಬಗ್ಗೆ ವಿವರ ನೀಡಿದರು.

ಭಾರತದಲ್ಲಿ 1872ರಿಂದ ಜನಗಣತಿ ಪ್ರಾರಂಭವಾಗಿ ಪ್ರತಿ 10 ವರ್ಷಗಳಿಗೊಮ್ಮೆ ನಡೆಯುತ್ತಿದೆ. ಸರಣಿಯಲ್ಲಿ 15ನೆಯ ಹಾಗೂ ಸ್ವಾತಂತ್ರ್ಯ ಬಳಿಕದ 7ನೇ ಜನಗಣತಿ ಇದಾಗಿದೆ. ಈಗಾಗಲೇ ಜನಗಣತಿಗೆ ಸಕಲ ಸಿದ್ದತೆಗಳಾಗಿದ್ದು ಸ್ತ್ರೀ ಪುರುಷರ ಜೊತೆಗೆ ಭಾರತ ಇತಿಹಾಸದಲ್ಲೇ ಪ್ರಥಮ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರನ್ನು ದಾಖಲಿಸಲು ಮುಂದಾಗಿದೆ. ಇದನ್ನು ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಸ್ವಾಗತಿಸುತ್ತದೆ ಎಂದು ವೇದಿಕೆ ಹರ್ಷ ವ್ಯಕ್ತಪಡಿಸಿತು.

ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ : ಈ ವೇದಿಕೆಯು ಕರ್ನಾಟದ ಲೈಂಗಿಕ ಅಲ್ಪಸಂಖ್ಯಾತರ ಸಮುದಾಯದವರ ರಾಜ್ಯಮಟ್ಟದ ಪ್ರಜಾಸತ್ತಾತ್ಮಕ ಸಂಸ್ಥೆಯಾಗಿದ್ದು, 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಾರ್ಯನಿರತವಾಗಿದೆ. ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಲೈಂಗಿಕ ಅಲ್ಪಸಂಖ್ಯಾತರ ಮಾನವ ಹಕ್ಕುಗಳನ್ನು ಸಂರಕ್ಷಿಸುವುದು ಮತ್ತು ಅವರ ಪರವಾಗಿ ಸರ್ಕಾರ, ಮಾದ್ಯಮ, ಸರ್ಕಾರೇತರ ಸಂಸ್ಥೆಗಳು ಮತ್ತು ಸಮುದಾಯ ಆಧಾರಿತ ಸಂಸ್ಥೆಗಳೊಂದಿಗೆ ವಕಾಲತ್ತು ನಡೆಸುತ್ತಿದೆ. ವೇದಿಕೆಯು ಲೈಂಗಿಕ ಅಲ್ಪಸಂಖ್ಯಾತರ ವಿಷಯದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವುದು, ಸಾಮಾಜಿಕ ಚಳವಳಿಗಳೊಂದಿಗೆ ಕೈ ಜೋಡಿಸಿ ಸಾರ್ವಜನಿಕ ಕಾರ್ಯಕ್ರಮಗಳ ಮುಖಾಂತರ ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಸಮಾಜ ಬದಲಾವಣೆ ಕೆಲಸ ಮಾಡುತ್ತಿದೆ. ಮತ್ತಷ್ಟು ಓದು »

22
ಫೆಬ್ರ

ರಾಜ್ಯಸಭೆಗೆ ಕನ್ನಡೇತರರು – ಎಷ್ಟು ಸರಿ ?

– ವಸಂತ್ ಶೆಟ್ಟಿ
ರಾಜ್ಯ ಸಭೆ ಸದಸ್ಯರಾದ ರಾಜಶೇಖರ್ ಮೂರ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಹಿಂದಿ ನಟಿ ಹೇಮಾಮಾಲಿನಿ ಅನ್ನುವವರ ಹೆಸರನ್ನು ಬಿಜೆಪಿಯ ಹೈಕಮಾಂಡ್ ತೀರ್ಮಾನಿಸಿದೆ ಅನ್ನುವ ಸುದ್ದಿ ನಿನ್ನೆ ಪತ್ರಿಕೆಗಳಲ್ಲಿ, ಟಿವಿಯಲ್ಲಿ ನೋಡಿದೆ. ಹೀಗೆ ಕನ್ನಡ, ಕರ್ನಾಟಕಕ್ಕೆ ಯಾವ ಕೊಡುಗೆಯನ್ನು ನೀಡದ, ಯಾವ ಸೇವೆಯನ್ನು ಮಾಡದ, ಕನ್ನಡಿಗರ ಬದುಕಿನ ಯಾವ ಸಮಸ್ಯೆಗಳ ಬಗ್ಗೆಯೂ ಒಂದಿನಿತು ಅರಿವಿಲ್ಲದ ಒಬ್ಬ ಮಾಜಿ ಚಿತ್ರ ನಟಿ, ಈ ರೀತಿ ರಾಜ್ಯ ಸಭೆ ಅನ್ನುವ ಒಕ್ಕೂಟ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸಲೆಂದೇ ಹುಟ್ಟಿದ ವ್ಯವಸ್ಥೆಗೆ, ಆಯ್ಕೆಯಾಗುವುದನ್ನು ನೋಡಿದಾಗ ಈ ರಾಜ್ಯಸಭೆ ಅನ್ನುವ ವ್ಯವಸ್ಥೆಯ ಅರ್ಥವಾದರೂ ಏನು? ಅದು ಯಾಕಾಗಿ ಬೇಕಾಗಿದೆ ಅನ್ನುವ ಪ್ರಶ್ನೆ ಮನದಲ್ಲಿ ಹುಟ್ಟಿತು.

ರಾಜ್ಯ ಸಭೆ ಹುಟ್ಟಿದ್ದು ಯಾಕೆಂದು ಗೊತ್ತೇ?

ರಾಜ್ಯಸಭೆ ಅನ್ನುವುದು ಮಾಂಟೆಗೊ-ಚೆಮ್ಸಫರ್ಡ್ ಅನ್ನುವ ಬ್ರಿಟಿಷ್ ಸರ್ಕಾರದ ಅಧಿಕಾರಿಗಳ ವರದಿಯನ್ನಾಧರಿಸಿ 1918ರಲ್ಲಿ ಹುಟ್ಟಿದ ವ್ಯವಸ್ಥೆ. ಸ್ವಾತಂತ್ರ್ಯ ಬಂದ ನಂತರ ಲೋಕಸಭೆ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯಸಭೆ ಅನ್ನುವ Council of States ಮುಂದುವರೆಯಬೇಕೇ, ಅದರ ಅಗತ್ಯ ಇದೆಯೇ ಅನ್ನುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆದಿತ್ತು. ಭಾರತದಂತ ಹೆಜ್ಜೆ ಹೆಜ್ಜೆಗೂ ವೈವಿಧ್ಯತೆಯುಳ್ಳ ದೇಶಕ್ಕೆ ಒಕ್ಕೂಟ ವ್ಯವಸ್ಥೆಯೇ ಸರಿಯಾದ ವ್ಯವಸ್ಥೆ ಅಂಬುದನ್ನು ಅಂದಿನ ರಾಜಕೀಯ ನಾಯಕರು ಒಪ್ಪಿ ಭಾರತವನ್ನು ಒಂದು ಒಕ್ಕೂಟ ವ್ಯವಸ್ಥೆಯೆಂದೇ ಘೋಷಿಸಿದ್ದರು. ಜನರಿಂದಲೇ ನೇರವಾಗಿ ಆಯ್ಕೆಯಾಗುವ ಲೋಕಸಭೆಯೊಂದಕ್ಕೆ ಜನರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗದು, ಆದ್ದರಿಂದ ರಾಜ್ಯಸಭೆ ಅನ್ನುವ ಪ್ರತಿ ರಾಜ್ಯದ ಜನ ಪ್ರತಿನಿಧಿಗಳಿಂದಲೇ ಆಯ್ಕೆಯಾಗಿ ಬರುವ ವಿಶೇಷ ಪ್ರತಿನಿಧಿಗಳ ಸಂಸ್ಥೆಯನ್ನು ಲೋಕಸಭೆಗೆ complimentory ಎಂಬಂತೆ ಇಟ್ಟುಕೊಳ್ಳಲಾಯಿತು. ಅದರ ಸ್ಥಾಪಿತ ಉದ್ದೇಶವನ್ನು ರಾಜ್ಯಸಭೆಯ ವೆಬ್ ಸೈಟ್ ಹೀಗೆ ಬಣ್ಣಿಸುತ್ತೆ (ಕೆಳಗೆ ಕೆಲ ಅಂಶಗಳನ್ನು ನಾನೇ ಹೈಲೈಟ್ ಮಾಡಿದ್ದೇನೆ)
21
ಫೆಬ್ರ

ಕಾಂಗ್ರೆಸ್ ಸಂಸದ ಭಾರತಕ್ಕೆ ಸೇರಿದವನಲ್ಲವೇ?

ಮಹೇಶ ಪ್ರಸಾದ ನೀರ್ಕಜೆ

ಅರುಣಾಚಲ ಪ್ರದೇಶ ಪ್ರವಾಸದಲ್ಲಿರುವ ಬಾಬಾ ರಾಮ್ ದೇವ್ ಸಮಾವೇಶಕ್ಕೆ ಬಂದಿದ್ದ ಅಲ್ಲಿನ ಕಾಂಗ್ರೆಸ್ ಸಂಸದ ನಿನಾಂಗ್ ಎರಿಂಗ್ ಬಾಬಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂಬುದು ಇತ್ತೀಚಿನ ಸುದ್ದಿ. “ಯು ಬ್ಲಡಿ ಇಂಡಿಯನ್”, “ಸಾಲೆ ಕುತ್ತೇ, ಮೈಕ್ ತೋಡ್ ದೂಂಗಾ, ಸ್ಟೇಜ್ ಫೋಡ್ ದೂಂಗಾ, ಯೋಗಾ ಕರ್ನೇ ಆಯೀ ಹೇ, ಯೋಗಾ‌ ಕರ್. ಕರಪ್ಷನ್ ಕೆ ಬಾರೇ ಮೇ ಬೋಲೇಗಾ ತೋ ಮಾರ್ ಡಾಲೂಗಾ!” ಇತ್ಯಾದಿ. ಈ ಬಗ್ಗೆ ಸಾಕಷ್ಟು ವಿವರಗಳು ಸಿಗುತ್ತಿವೆ ಅಂತರ್ಜಾಲದಲ್ಲಿ. ನಮ್ಮ ಟಿವಿ ಮಾಧ್ಯಮಗಳು ಭಾರತ ಬಾಂಗ್ಲಾದೇಶ ಕ್ರಿಕೆಟ್ ಪಂದ್ಯದಲ್ಲಿ ಹೇಗೆ ಭಾರತ ಬಾಂಗ್ಲಾದೇಶದ ಮೇಲೆ ಸೇಡು ತೀರಿಸಿಕೊಂಡಿತು ಎಂದು ವಿಮರ್ಷಿಸುವುದರಲ್ಲಿ ಬ್ಯುಸಿಯಾಗಿದ್ದವು. ಅವುಗಳಿಗೆ ಹೇಗೆ ಈಶಾನ್ಯ ಭಾರತದ ಮಂದಿ ಹೇಗೆ ಭಾರತದ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಬೇಕಿಲ್ಲ. ಇರಲಿ. ಈಗ ಪ್ರಶ್ನೆಯೇನೆಂದರೆ ಕಾಂಗ್ರೆಸ್ ಸಂಸದ ಬಾಬಾರನ್ನು “ಯೂ ಬ್ಲಡಿ ಇಂಡಿಯನ್”ಅನ್ನಬೇಕಿದ್ದರೆ ಆತ ಇಂಡಿಯನ್ ಅಲ್ಲವೇ? ಎಲ್ಲಿಯವನು ಆತ? ಚೈನಾದವನೇ? ಅಥವಾ ಬೋಡೋ ದೇಶದವನೇ? ಅಥವಾ ಬೇರೆ ಪಾಶ್ಚಿಮಾತ್ಯ ದೇಶದವನೇ?
ಮತ್ತಷ್ಟು ಓದು »

19
ಫೆಬ್ರ

ನಮ್ಮ ರಾಜ್ಯವನ್ನು ಪ್ರತಿನಿಧಿಸಲು ಜನರಿಲ್ವಾ???

– ಚೇತನ್ ಜೀರಾಳ್

ಇದು ಖಂಡಿತಾ ಕರ್ನಾಟಕದ ದೌರ್ಭಾಗ್ಯದ ಪರಮಾವಧಿ. ಹೈಕಮಾಂಡ್ ದಾಸ್ಯಕ್ಕೆ ಸಿಲುಕಿರುವ ಬಿಜೆಪಿ ಪಕ್ಷ ಮತ್ತೊಂದು ಎಡವಟ್ಟು ತೀರ್ಮಾನ ಕೈಗೊಂಡಿದೆ. ಹಿರಿಯ ರಾಜಕಾರಣಿ ಶ್ರೀ ರಾಜಶೇಖರ ರ್ಮೂರ್ತಿಯವರ ನಿಧನದಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಹಿಂದಿ ಚಲನಚಿತ್ರ ನಟಿ ಶ್ರೀಮತಿ ಹೇಮಾ ಮಾಲಿನಿ ಅವರನ್ನ ರಾಜ್ಯದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.

ರಾಜ್ಯಸಭಾ ಸದಸ್ಯತ್ವ ಅಂದರೇನು?
ಒಬ್ಬ ರಾಜ್ಯಸಭಾ ಸದಸ್ಯ ಮುಖ್ಯವಾಗಿ ಆಯಾ ರಾಜ್ಯದ ಪ್ರತಿನಿಧಿಯಾಗಿ ಸಂಸತ್ತಿನ ಮೇಲ್ಮನೆಯಲ್ಲಿ ಕೆಲಸಮಾಡುತ್ತಾರೆ. ರಾಜ್ಯಸಭೆ ಅನ್ನುವುದು ಒಕ್ಕೂಟ ವ್ಯವಸ್ಥೆಯ ಒಂದು ಮುಖ್ಯ ಭಾಗ. ಕೇಂದ್ರದಲ್ಲಿ ಲೋಕಸಭೆಗಿರುವಷ್ಟೇ ಪ್ರಾಮುಖ್ಯತೆ ರಾಜ್ಯಸಭೆಗೂ ಇದೆ. ರಾಜ್ಯಸಭಾ ಸದಸ್ಯರನ್ನು ಆಯಾ ರಾಜ್ಯದ ಶಾಸಕರು ಆಯ್ಕೆ ಮಾಡುತ್ತಾರೆ.

ನಮ್ಮ ರಾಜ್ಯವನ್ನೂ ಪ್ರತಿನಿಧಿಸಲು ಅರ್ಹ ಜನಪ್ರತಿನಿಧಿಗಳು ಇಲ್ಲವೇ?
ಇಷ್ಟಕ್ಕೂ ರಾಜ್ಯಸಭೆ ಸ್ಥಾನಕ್ಕೆ ಹೇಮಾ ಮಾಲಿನಿಯವರನ್ನು ಕಣಕ್ಕಿಳಿಸಲು ಇರುವ ಅರ್ಹತೆಯಾದರೂ ಏನು? ಮೊದಲನೆಯದಾಗಿ ಹೇಮಾ ಮಾಲಿನಿ ನಮ್ಮ ನಾಡಿನವರಲ್ಲ, ಹೋಗಲಿ ಆ ಕಾರಣವನ್ನು ಬದಿಗಿಟ್ಟು ನೋಡೋಣವೆಂದರೆ ಅವರಿಂದ ನಮ್ಮ ರಾಜ್ಯಕ್ಕೆ ಆಗಿರುವ ಉಪಯೋಗವಾದರೂ ಏನು? ನಮ್ಮ ನಾಡಿನ ಯಾವ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ಪ್ರಯತ್ನ ರಾಜ್ಯ ಮಟ್ಟದಲ್ಲಾಗಲಿ ಅಥವಾ ಕೇಂದ್ರ ಮಟ್ಟದಲ್ಲಾಗಲಿ ಪ್ರಯತ್ನಿಸಿದ್ದಾರೆ? ನಮ್ಮ ನೆಲ, ಜಲ, ಭಾಷೆ, ಉದ್ಯೋಗ, ಉದ್ದಿಮೆ ಹೀಗೆ ಯಾವ ಕಾರಣಕ್ಕಾಗಿ ನಮ್ಮ ನಾಡಿಗಾಗಿ ಕೆಲಸ ಮಾಡಿದ್ದಾರೆ? ಯಾವುದೇ ದೃಷ್ಠಿಯಿಂದ ನೋಡಿದರೂ ಸಹ ಹೇಮಾ ಮಾಲಿನಿ ನಮ್ಮ ರಾಜ್ಯದ ಪ್ರತಿನಿಧಿಯಾಗಿ ರಾಜ್ಯಸಭೆ ಪ್ರವೇಶಿಸಲು ಅರ್ಹರಲ್ಲ. ಇಂತಹುದೇ ತಪ್ಪನ್ನು ಹಿಂದೆ ಬಿಜೆಪಿ ಹೈಕಮಾಂಡ್ ವೆಂಕಯ್ಯ ನಾಯ್ಡು ಅವರನ್ನ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿವಾಗ ಮಾಡಿತ್ತು. ಕಾಂಗ್ರೆಸ್ ಹಾಗೂ ಜನತಾದಳ ಪಕ್ಷಗಳು ಸಹಿತ ಇಂತಹುದೇ ತಪ್ಪನ್ನು ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ.
ಮತ್ತಷ್ಟು ಓದು »

15
ಫೆಬ್ರ

‘ಭಾರತದ ಬಳಿಯಿದೆ ನಿಂಬೆಯ ಶಕ್ತಿ’ !

ಪಾಕಿಸ್ತಾನದ ಬಳಿ ಭಾರತಕ್ಕಿಂತ ೧೦೦ಕ್ಕೊ ಹೆಚ್ಚು  ಅಣ್ವಸ್ತ್ರಗಳಿವೆ ಅನ್ನೋ ಸುದ್ದಿ ಮೊನ್ನೆ ಪತ್ರಿಕೆಗಳಲ್ಲಿ ಬಂದಿದೆ.ಆದರೆ ಭಾರತೀಯರು ಈ ಸುದ್ದಿಗೆ ಗಲಿಬಿಲಿಯಾಗಬೇಕಿಲ್ರಿ! ಯಾಕೆ ಅಂತಿರಾ? ಯಾಕಂದ್ರೆ ‘ಭಾರತದ ಬಳಿಯಿದೆ ನಿಂಬೆಯ ಶಕ್ತಿ’ !

ಇದೇನಿದು ಯಾವ್ದೋ ಬಟ್ಟೆ ತೊಳ್ಯೋ ಸೋಪ್ ಜಾಹಿರಾತಿನ ಡೈಲಾಗ್ ತರ ಇದ್ಯಲ್ಲಪ್ಪ ಅಂತಿರಾ?ರೀ,ಇದು ಆ ತರ ನಿಂಬೆ ಅಲ್ಲ.ನಾನ್ ಹೇಳೋಕ್ ಹೊರಟಿದ್ದು,ಕಳೆದ ಬಾರಿ ಒಂದಿಷ್ಟು ಜನ ಎಂ.ಎಲ್.ಎಗಳು ಹೋಗಿ ಗೋವಾದಲ್ಲಿ ಕೂತು,ಅಲ್ಲಿಗೆ ಕುಮ್ಮಿನು ಹೋದ್ಮೇಲೆ,ಈ ಕಡೆ ಯಡ್ಡಿ ಕುರ್ಚಿ ಗಡ-ಗಡ ನಡುಗಲು ಶುರು ಮಾಡಿದಾಗ.ವಿಧಾನ ಸೌಧದ ಎದುರು ಕಾಣಿಸಿತ್ತಿಲ್ಲ ಹರಿಶಿನ ಕುಂಕುಮ ಹಚ್ಚಿದ ನಿಂಬೆಹಣ್ಣು ಅದರ ಬಗ್ಗೆ. ಮತ್ತೀಗ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಕಾಣಿಸಿಕೊಂಡ ಪವರ್ಫುಲ್ ನಿಂಬೆಯ ಬಗ್ಗೆ! (ಆ ಪರಿ ಕಾಡ್ತಾ ಇರೋ ರಾಜಭವನದ ಬಳಿ ಯಾಕೆ ಇನ್ನ ನಿಂಬೆ ಬಿದ್ದಿಲ್ಲ ಅಂತ ನಾನ್ ಕೇಳೋಲಪ್ಪ 😉 ).ಇದೇ,ಈ ಮಂತ್ರಿಸಿದ ನಿಂಬೆಹಣ್ಣು ಕಣ್ರೀ ಭಾರತದ ಶಕ್ತಿಯಾಗಬೇಕು.ಅದ್ಹೆಂಗೆ ಸಿವಾ ಅಂತಿರ? ಹೇಳ್ತೀನಿ ಕೇಳಿ…

ಈಗಾಗ್ಲೇ ಚೀನಾ ಅನ್ನೋ ನಂಬಿಕೆಗೆ ಅರ್ಹವಲ್ಲದ ದೇಶ ಭಾರತವನ್ನ ಇರೋ ಬರೋ ದಿಕ್ಕುಗಳಿಂದ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಕಡೆಯಿಂದ ಸುತ್ತಿ ಕುಳಿತಿದೆ.ಹೀಗೆ ಪಾಕಿಸ್ತಾನ,ಶ್ರೀಲಂಕ,ಬಾಂಗ್ಲ,ನೇಪಾಳ,ಬರ್ಮಾ ಕಡೆ ಹರಡಿಕೊಂಡಿರೋ ಚೀನಿಗಳು ವಾಪಸ್ ಚೈನಗೆ ಹೋಗೋ ಹಾಗೆ ಮಾಡ್ಬೇಕು.ಹೇಗ್ ಮಾಡೋದು?

ಹೆಗಂದ್ರೆ,ಹೇಗಿದ್ರು ಅಲ್ಲಿ ಪ್ರಜಾಪ್ರಭುತ್ವಕ್ಕಾಗಿ ಚಿಕ್ಕದಾಗಿ ಕೂಗೆದ್ದಿದೆ.ಅಲ್ಲಿನ ಜನರಿಗೆ ದೈತ್ಯ ಶಕ್ತಿ ಆವಹನೆಯಾಗುವಂತೆ ಭಾರತ ನಿಂಬೆ ಶಕ್ತಿಯನ್ನ ಪ್ರಯೋಗಿಸ್ಬೇಕು ರೀ,ಆಗ ಅಲ್ಲಿ ರೊಚ್ಚಿಗೆಳೋ ಚೀನೀ ಜನರನ್ನ ಕಂಟ್ರೋಲ್ ಮಾಡೋಕೆ ಅಂತ ಚೀನಿಗಳೆಲ್ಲ ವಾಪಸ್ ಅವ್ರ ದೇಶಕ್ಕೆ ಹೋಗ್ತಾರೆ.ಅವರೆಲ್ಲ ಕಾಲ್ಕಿತ್ತ ಮೇಲೆ ಭಾರತ ಸೋಯ್ಯಿ-ಟಪಕ್ ಅಂತ ಮತ್ತಿನ್ನೊಂದು ಕೆಲ್ಸ ಮಾಡ್ಬೇಕಪ್ಪ.ಗಡಿಯುದ್ದಕ್ಕೂ ನಿಂಬೆ ಬೆಳೆಯೋದು ಕಡ್ಡಾಯ ಮಾಡಿ, ಗಡಿ ಬೇಲಿ ತರ ಮಂತ್ರಿಸಿದ ನಿಂಬೆ ಬೇಲಿ ಮಾಡಿಬಿಡ್ಬೇಕು.ಅಲ್ಲಿಗೆ ದೇಶ ಫುಲ್ ಸೆಕ್ಯೂರ್ ಆಗಿಬಿಡುತ್ತೆ! (ಹಿಂಗ್ ಮಾಡೋಕೆ ನಮ್ ದೇಸದ ಸಿಕ್ಯುಲರ್ಗಳು ಬಿಡೋಲ್ಲ ಅಂತಿರ, ಅವ್ರು ಯಾವ್ ಒಳ್ಳೆ ಕೆಲ್ಸ ತಾನೇ ಮಾಡೋಕ್ ಬಿಡ್ತಾರೆ ನೀವೇ ಹೇಳಿಪ್ಪ ;))

ಇಷ್ಟು ಮಾಡಿದ್ರೆ ಪಾಕಿಸ್ತಾನದ ಸದ್ದು ಸಹ ಅಡಗಿಬಿಡುತ್ತೆ,ಇಲ್ಲ ಅಂದ್ರೆ ಭಾರತದಲ್ಲಿಡಿ ಕಡ್ಡಾಯ ನಿಂಬೆ ಬೆಳೆಯುವಂತೆ ಮಾಡಿ ಅದೇ ನಿಂಬೆ ಹಣ್ಣು ಪಾಕಿಸ್ತಾನಕ್ಕೆ ಎಸೆಯುವಂತೆ ಮಾಡಿದ್ರೂ ಆ ದೇಶ ನಿಂಬೆಯಲ್ಲಿ ಮುಚ್ಚಿ ಹೋಗುತ್ತೆ! ಹೇಗಿದೆ ‘ನಿಂಬೆಯ ಶಕ್ತಿ’, ಸಕ್ಕತ್ತ್ ಅಲ್ವಾ?  ಮತ್ತಷ್ಟು ಓದು »

10
ಫೆಬ್ರ

ನಾಸ್ತಿಕನಾಗೋದು ಅಂದ್ರೆ….

ಸಾತ್ವಿಕ್ ಎನ್ ವಿ 

ಅಂದು ಕೊಂಡ ತಕ್ಷಣ ಆಯಿತೆ? ನಾವು ನಮ್ಮೆಲ್ಲ ಕಷ್ಟಗಳನ್ನು ಪರಿಪಾಟಲುಗಳನ್ನು ದೇವರ ತಲೆಗೆ ಹಾಕಿ ಒಂದು ಕ್ಷಣ ನೆಮ್ಮದಿಯ ನಿಟ್ಟುರಸಿರು ಬಿಟ್ಟುಬಿಡುತ್ತೇವೆ. ಆದರೆ ಆ ಅಧಾರದ ಬಗ್ಗೆಯೇ ಅಪನಂಬಿಕೆ ಇರುವ ನಾಸ್ತಿಕರ ಕಥೆಯೇನು? ಒಂದೆಡೆ  ತಲೆಯಲ್ಲಿನ ಒತ್ತಡಗಳನ್ನು ನಿವಾರಿಸಿಕೊಳ್ಳಲು ಇರುವ ಆಧಾರ ತಪ್ಪಿತು. ಮತ್ತೊಂದೆಡೆ  ದೇವರನ್ನು ನಂಬದೇ ಇರುವುದರಿಂದ ಆಗುವ ಭಯಂಕರ ಸಮಸ್ಯೆಗಳ ಬಗ್ಗೆ ಜನರು ಹೇಳುವ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಪುಕ್ಕಲನಾಗಿದ್ದರೆ  ದೇವರೆ ಗತಿ!! ಒಟ್ಟಾರೆ ಸಾಕಷ್ಟು ಮನೋದಾರ್ಢ್ಯವಿಲ್ಲದೆ ನಾಸ್ತಿಕನಾಗಲು ಸಾಧ್ಯವಿಲ್ಲ. ನಾನು ದೇವರನ್ನು ನಂಬುವುದಿಲ್ಲ ಎಂದು ಹೇಳುವುದು ಸುಲಭ. ಆದರೆ ಇಡೀ ಜೀವನವೆಲ್ಲ ಹಾಗೆಯೇ ಬದುಕುವುದು ಇದೆಯಲ್ಲ ಅದು ನಿಜಕ್ಕೂ ಚಾಲೆಂಜಿಂಗ್.
ನಮ್ಮ ‘ಅವಸ್ಥೆಯ’ ಹಿಂದೆ, ನಮ್ಮ ಮನಸ್ಸು ಕೆಲಸ ಮಾಡುತ್ತಿರುತ್ತದೆ. ಈ ಮನಸ್ಸು ತನ್ನ ಒಳಬೇಗುದಿಗಳನ್ನು ಕಡಿಮೆ ಮಾಡಿಕೊಳ್ಳಲು ಹಲವಾರು ಉಪಾಯಗಳನ್ನು ಹುಡುಕಿಕೊಂಡಿರುತ್ತದೆ. ಒಂದರ್ಥದಲ್ಲಿ ಸೇಫ್ಟಿ ವಾಲ್ವ್ ನ ಹಾಗೆ. ಮನುಷ್ಯನಿಗೆ ಆಗಾಗ ಕಾಡುವ ಒಂಟಿತನ, ಬೇಸರ, ಅಭದ್ರತೆ ಇತ್ಯಾದಿಗಳನ್ನು ಪರಿಹಾರ ಮಾಡಿಕೊಳ್ಳಲು ಇರುವ ಏಕೈಕ ಉಪಾಯ ಅದನ್ನು ವರ್ಗಾಯಿಸುವುದು. ಆಗ ಆ ಕ್ಷಣಕ್ಕಾದರೂ ಆ ವಿಷಯದಿಂದ ಮುಕ್ತಿ ಸಿಗುತ್ತದೆ. ಈ ವಿಷಯದಲ್ಲಿ ದೇವರು ದಯಾಮಯಿ. ನಮಗೆ ಯಾವಾಗಲೂ ಇಂಥ ಸಂದರ್ಭದಲ್ಲಿ ಸಹಾಯಕ್ಕೆ ಒದಗಿ ಬರುತ್ತಾನೆ.    ಮತ್ತಷ್ಟು ಓದು »

9
ಫೆಬ್ರ

ಮದರ್ ತೆರೇಸಾ ಸೋಗುಗಾತಿ ಎಂದವನು ಓಶೋ!!!

ಹೇಮಾ ಪವಾರ್, ಬೆಂಗಳೂರು

ದೂರದ ಅಲ್ಬೇನಿಯಾದಲ್ಲಿ ಹುಟ್ಟಿದ ಅಗ್ನೆಜ್ ಗಾಂಡ್ಜೆ ಬೊಜಾಕ್ಜಿಯು ಎಂಬ ಬಾಲಕಿ ಭಾರತದ ಕೊಳಚೆ ಪ್ರದೇಶಗಳ ರಾಜಧಾನಿ ಎಂದು ಹೆಸರುವಾಸಿಯಾಗಿದ್ದ ಕೊಲ್ಕತ್ತಾಗೆ ಕ್ರೈಸ್ತ ನನ್ ಆಗಿ ಆಗಮಿಸಿ ಕುಷ್ಠರೋಗಿಗಳ, ಅನಾಥ ಮಕ್ಕಳ ಪಾಲಿಗಷ್ಟೇ ಅಲ್ಲದೆ ಇಡೀ ಜಗತ್ತಿಗೆ ಮದರ್ ತೆರೆಸಾ ಎಂದು ಪರಿಚಿತಳಾದಳು. ಭಾರತದ ಕೊಳಚೆ ಪ್ರದೇಶಗಳ ವಾಸಿಗಳ ಏಳ್ಗೆಗಾಗಿ ಶ್ರಮಿಸಿದ್ದಕ್ಕಾಗಿ ನೊಬೆಲ್ ಬಹುಮಾನವನ್ನೂ ಪಡೆದಳು – ಇದಿಷ್ಟು ನಾವು ಆಕೆಯ ಬಗ್ಗೆ ತಿಳಿದ ವಿಚಾರಗಳು. ಆದರೆ ಗಾಂಧಿ ಇಂದ ಬುದ್ದನವರೆಗೂ, ಆಧ್ಯಾತ್ಮದಿಂದ ಲೈಂಗಿಕತೆಯವರೆವಿಗೂ ಎಲ್ಲವನ್ನೂ, ಎಲ್ಲವನ್ನೂ ತನ್ನ ಮಾತುಗಳಲ್ಲಿ ಹಿಡಿದು ಹೊಸ ಅರ್ಥ ಕೊಡುವ ಓಶೋ ರಜನೀಶ್ ಮದರ್ ತೆರೆಸಾ ಬಗ್ಗೆ ಬೇರೆಯದೇ ರೀತಿಯಾದ ಅಭಿಪ್ರಾಯ ವ್ಯಕ್ತಪಡಿಸುತ್ತಾನೆ. ನೊಬೆಲ್ ಪ್ರಶಸ್ತಿಯಿಂದ ಪ್ರಖ್ಯಾತಿಯನ್ನು ಪಡೆದ ತೆರೆಸಾರನ್ನು, ಸೋಗುಗಾರ್ತಿ, ಕಪಟಿ ಹಾಗೂ ಹಿಪೋಕ್ರಿಟ್ ಎಂದು ಕರೆಯುತ್ತಾನೆ. ತನ್ನ ಅಭಿಪ್ರಾಯಗಳು ವಿಪರೀತವಾಗಿರುವಂತೆ ನೋಡಿಕೊಳ್ಳುತ್ತಿದ್ದ ರಜನೀಶನ ಅಭಿಪ್ರಾಯವನ್ನು ಅಕ್ಷರಶಃ ಒಪ್ಪುವುದು ಯಾರಿಗೂ ಸಾಧ್ಯವಿಲ್ಲವಾದರೂ ಆತನ ದೃಷ್ಟಿಕೋನದ ಬೆಳಕಿನಲ್ಲಿ ನಮ್ಮ ತಿಳುವಳಿಕೆಯನ್ನು, ಅಭಿಪ್ರಾಯಗಳನ್ನು ಪುನರ್ವಿಮರ್ಶಿಸಿಕೊಳ್ಳುವುದು ನಮಗೆ ಉಪಯುಕ್ತವಾಗಬಹುದು. ತನ್ನ ಪ್ರವಚನವೊಂದರಲ್ಲಿ ರಜನೀಶ್ ತೆರೆಸಾರನ್ನು ಅವಲೋಕಿಸಿದ ಪರಿ ಇಂತಿದೆ:
ಮತ್ತಷ್ಟು ಓದು »

8
ಫೆಬ್ರ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ…!

– ಪವನ್ ಎಂ ಟಿ

ಸಾಮೂಹಿಕ ಆತ್ಮಹತ್ಯೆ: ಮಲೆಕುಡಿಯರ ಬೆದರಿಕೆ, ನಿಲ್ಲದ ಮಲೆಕುಡಿಯರ ಮೇಲಿನ ದೌರ್ಜನ್ಯ,

ಬಲಾತ್ಕಾರದಿಂದ ಎಬ್ಬಿಸಿದರೆ ಪ್ರಾಣತ್ಯಾಗ, ಸತ್ತರೂ-ಬದುಕಿದರೂ ಇಲ್ಲಿಯೇ: ಮಲೆಕುಡಿಯರ ಶಪಥ

ಪ್ರಜಾವಾಣಿ ಪತ್ರಿಕೆಯಲ್ಲಿ ಜನವರಿ ತಿಂಗಳ ಕೊನೆಯ ಕೆಲವು ದಿನಗಳಲ್ಲಿ ಬಂದ ಪ್ರಮುಖ ಸುದ್ದಿಗಳು. ಇವೆಲ್ಲಾ ‘ಕಾನೂನು ಪ್ರಕಾರವಾಗಿ ಎತ್ತಂಗಡಿ ಮಾಡಿಸಿದ್ದೇವೆ’ ಎಂದು ಹೇಳುತ್ತಿರುವ ಅಧಿಕಾರಿಗಳ ವಿರುದ್ಧವಾಗಿ ಮನೆ ಕಳೆದುಕೊಂಡ ಸುಲ್ಕೇರಿಯ ಮಲೆಕುಡಿಯರು ದು:ಖಭರಿತ ಅಸಹಾಯಕತೆಯ ದನಿ. ಇಷ್ಟಾದರೂ ಅಲ್ಲಿನ ಕಾಂಗ್ರೆಸ್ ಶಾಸಕರು ‘ಸುಲ್ಕೇರಿ ನಾಯ್ದಿಗುರಿಯಲ್ಲಿ ಒಕ್ಕಲೆಬ್ಬಿಸಿರುವ ಪ್ರಕರಣ ಕಾನೂನು ಪ್ರಕಾರವೇ ನಡೆದಿದೆ. ಸಂಸದರು, ಮಾಜಿ ಶಾಸಕರು ಹಾಗೂ ಬಿಜೆಪಿ ಮುಖಂಡರಿಂದ ನಾನು ಪಾಠ ಕಲಿಯಬೇಕಾಗಿಲ್ಲ. ನಾನು ಘಟನಾ ಸ್ಥಳಕ್ಕೆ ಕಾಲಿಡುವುದಿಲ್ಲ. ತಾಕತ್ತಿದ್ದರೆ ಅವರು ನನ್ನನ್ನು ಅಲ್ಲಿಗೆ ಬರುವಂತೆ ಮಾಡಲಿ’ಎಂದು ಘೋಷಿಸಿದ್ದಾರೆ. (ಪ್ರ.ವಾ) ಮತ್ತಷ್ಟು ಓದು »