ವಿಷಯದ ವಿವರಗಳಿಗೆ ದಾಟಿರಿ

Posts from the ‘ವಿಜ್ಞಾನ’ Category

29
ಮಾರ್ಚ್

ಕುಲಾಂತರಿ ಚರ್ಚೆ: ಇನ್ನೊಂದು ಮುಖ

– ಪ್ರಸನ್ನ ಆಡುವಳ್ಳಿ,ಧಾರವಾಡ

ಕುಲಾಂತರಿಗಳ ಬಗ್ಗೆ  “ಕನ್ನಡಪ್ರಭ”  ಪತ್ರಿಕೆಯಲ್ಲಿ ಶಾಂತು ಶಾಂತಾರಾಮ್ ಹಾಗೂ ಎಮ್ ಮಹದೇವಪ್ಪ ಅವರು ಬರೆದ ಬರಹ ಓದುಗರನ್ನು ದಾರಿತಪ್ಪಿಸುವಂತಿದೆಯೇ ವಿನಹಾ ಅವುಗಳ ಕುರಿತು ಸರಿಯಾದ ಮಾಹಿತಿಯನ್ನು ನೀಡುವಲ್ಲಿ ವಿಫಲವಾಗಿದೆ. ಕುಲಾಂತರಿಗಳನ್ನು ಅಭಿವೃದ್ದಿಯ ಹೆಸರಲ್ಲಿ, ಅಧಿಕ ಅಹಾರ ಉತ್ಪಾದನೆಯ ನೆಪದಲ್ಲಿ ರೈತರ ಹಾಗೂ ಗ್ರಾಹಕರ ಮೇಲೆ ಹೇರುವ ಪ್ರಯತ್ನದ ಒಂದು ಭಾಗವಾಗಿ ಈ ಬರಹಗಳು ಮೂಡಿಬಂದಿವೆಯಷ್ಟೇ.

ವಿಜ್ನಾನವು ಸತ್ಯ ಶೋಧನೆಯಿಂದ ರೂಪಗೊಳ್ಳುವುದೇ ವಿನಹ ಸಂಖ್ಯಾ ಬಲದಿಂದಲ್ಲ ಎಂಬ ಮಹದೇವಪ್ಪನವರ ಮಾತುಗಳು ಒಪ್ಪತಕ್ಕದ್ದೇ . ಆದರೆ ಬಿ.ಟಿ. ಬದನೆ ಕುರಿತ ಚರ್ಚೆ ಯಲ್ಲಿ ವಿಜ್ನಾನಿಗಳಿಗೆ ಸೂಕ್ತ ಕಾಲಾವಕಾಶ ಸಿಗಲಿಲ್ಲ ಎಂಬ ಮಾತು ಸತ್ಯಕ್ಕೆ ದೂರ. ತಾತ್ಕಾಲಿಕ ನಿಷೇಧ ಹೇರುವ ಮುನ್ನ ದೇಶದ ಹಲವೆಡೆಗಳಲ್ಲಿ ಪರ-ವಿರೋಧಗಳ ಬಗ್ಗೆ ಪರಿಸರ ಸಚಿವಾಲಯ ವಿಸ್ತೃತ ಚರ್ಚೆ ನಡೆಸಿತ್ತು. ಇಷ್ಟಲ್ಲದೇ  ದೇಶದ ಪ್ರತಿಷ್ಟಿತ ಆರು ವಿಜ್ನಾನ ಅಕಾಡೆಮಿಗಳಿಂದ ಅಭಿಪ್ರಾಯ ಕೇಳಿತ್ತು. ಆದರೆ ಅಲ್ಲಿನ ವಿಜ್ನಾನಿಗಳು ಕೊಟ್ಟ ಬೇಜಾವಾಬ್ದಾರಿಯುತ ವರದಿ ಎಲ್ಲರಿಂದ ಟೀಕೆಗೆ ಒಳಗಾಗಿದ್ದು ನೆನಪಿರಬಹುದು. ಎಲ್ಲದಕ್ಕೂ ವೈಜ್ನಾನಿಕ ಆಧಾರ ಕೇಳುವವರು ತಮ್ಮ ವರದಿಯ ಬಗ್ಗೆ ಏಕೆ ಚಕಾರ ಎತ್ತುವುದಿಲ್ಲ? ಅಲ್ಲೇಕೆ ಯಾವುದೇ ವೈಜ್ನಾನಿಕ ಆಧಾರ ನೀಡದೇ ತೀರ ಕಳಪೆ ಗುಣಮಟ್ಟದ ವರದಿ ಕೊಟ್ಟರು?

ಬಿ.ಟಿ. ಹತ್ತಿ ಬಂದ ಮೇಲೆ ಹತ್ತಿಯನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತ ಹತ್ತಿ ರಫ್ತು ಮಾಡುವ ದೇಶವಾಯ್ತೆಂದು ಹೆಮ್ಮೆಯಿಂದ ಹೇಳುವವರು ಇತ್ತೀಚೆಗೆ ಹತ್ತಿಯ ಒಟ್ಟಾರೆ ಉತ್ಪಾದನೆ ಕಡಿಮೆಯಾಗಿದೆಯೆಂದು ಕೇಂದ್ರ ರಫ್ತು ನಿಷೇಧ ಮಾಡಲು ಹೊರಟಿದ್ದನ್ನೇಕೆ ಪ್ರಜ್ನಾಪೂರ್ವಕವಾಗಿ ಮರೆಮಾಚುತ್ತಾರೆ? ದೇಶದ ಶೇಕಡಾ 93ರಷ್ಟು ಭಾಗದಲ್ಲಿ ಬಿ.ಟಿ.ಹತ್ತಿಯನ್ನೇ ಬೆಳೆಯುತ್ತಿದ್ದರೂ ಹೀಗಾಗಿದ್ದೇಕೆ?!

ಮತ್ತಷ್ಟು ಓದು »

21
ಫೆಬ್ರ

ಎಷ್ಟು ಶುದ್ಧ ಮಾಡಿದರೂ ಕೊಚ್ಚೆ ಕೊಚ್ಚೆಯೇ

ವಿಷ್ಣುಪ್ರಿಯ

ತಾನು ಎಲ್ಲವನ್ನೂ ನಿಯಂತ್ರಿಸಬಲ್ಲೆ ಎಂಬ ಮಾನವಭ್ರಮೆಗೆ ಪ್ರತಿ ಬಾರಿಯೂ ತಡೆ ಬೀಳುತ್ತಿದೆ ಎಂಬುದು ದಿಟವಾಯಿತು. ಪ್ರಕೃತಿಯ ನಿರ್ಧಾರಗಳ ಮೇಲೆ ಮಾನವ ತನ್ನ ಪ್ರಭಾವ ಬೀರುವ ಪ್ರಯತ್ನ ಮಾಡಿದರೆ ಪ್ರಕೃತಿ ಮಾನವನಿಗಿಂತಲೂ ಎತ್ತರಕ್ಕೆ ಬೆಳೆಯುತ್ತದೆ ಎಂಬುದು ಕೂಡಾ ಸ್ಪಷ್ಟವಾಯಿತು.

ಈ ಚರಂಡಿಗಳಲ್ಲಿ ಹರಿಯುವ ನೀರನ್ನು ನೊಡಿದರೆ ಮೈಯೆಲ್ಲಾ ಜಿರಳೆ ಹರಿದಂತಾಗುತ್ತದೆ! ಬೆಂಗಳೂರಿಗರಿಗಂತೂ ಮಳೆ ಬಂದು ಚರಂಡಿಯಲ್ಲಿ ನೀರುಕ್ಕಿ ಹರಿದರೆ ಜೀವನವೇ ಬೇಡ ಎನ್ನುವಷ್ಟರ ಮಟ್ಟಿಗೆ ಜಿಗುಪ್ಸೆ ಬಂದೀತು! ಬೆಂಗಳೂರಿನಲ್ಲಿ ಚರಂಡಿಗಳ ನೀರು ಅದ್ಯಾವ ಕೆರೆ ಸೇರುತ್ತದೆ ಎಂದು ನೋಡುವುದಕ್ಕೆ ಹೊರಟರೆ ಆ ಕೆರೆಯಿಂದಲೇ ನಮಗೆ ವಿತರಣೆಯಾಗುವಂಥ ನೀರನ್ನು ಕುಡಿಯುವುದಕ್ಕೆ ಸಾಧ್ಯವಿಲ್ಲ. ನಿರನ್ನು ಶುದ್ಧೀಕರಿಸಿಯೇ ಕೆರೆಗೆ ಬಿಡಲಾಗುತ್ತದೆ, ಕೆರೆಯ ನಿರನ್ನು ಶುದ್ಧೀಕರಿಸಿಯೇ ಕುಡಿಯುವುದಕ್ಕೆ ನೀಡಲಾಗುತ್ತದೆ. ಹೀಗಾಗಿ ಆ ನೀರಿನಿಂದ ಏನೂ ಸಮಸ್ಯೆ ಆಗದು ಎಂದು ಆಧಿಕಾರಿಗಳು ಹೇಳಿದರು ಎಂದಾದರೆ ಅವರ ಮಾತನ್ನು ನಂಬಬೇಡಿ. ಯಾಕೆಂದರೆ ಕೊಚ್ಚೆ ನೀರನ್ನು ಅದೆಷ್ಟೇ ಶುದ್ಧೀಕರಿಸಿದರೂ ಸಹ, ಅದ್ಯಾವ ಅತ್ಯಾಧುನಿಕ ತಂತ್ರಜ್ಞಾನದಿಂದ ಶುದ್ಧೀಕರಿಸಿದರೂ ಸಹ ಅದರಲ್ಲಿರುವ ವೈರಾಣುಗಳು ಸಂಪೂರ್ಣವಾಗಿ ನಾಶವಾಗುವುದಿಲ್ಲ ಎಂದು ವಿಜ್ಞಾನಿಗಳ ತಂಡವೊಂದರ ಸಂಶೋಧನೆ ಹೇಳುತ್ತಿದೆ.

ಯೂನಿವರ್ಸಿಟಿ ಆಫ್ ಮಿನೆಸೋಟಾದ ವಿಜ್ಞಾನಿಗಳು ನಡೆಸಿದ ಸಂಶೋಧನೆಯ ಪ್ರಕಾರ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಶುದ್ಧೀಕರಿಸಿದ ನೀರಿನಲ್ಲಿಯೂ ಸಹ ಬಹಳಷ್ಟು ಹಾನಿಕಾರಕ ಬ್ಯಾಕ್ಟೀರಿಯಾಗಳು ಮತ್ತು ಇತರ ವೈರಾಣುಗಳು ಇರುತ್ತವೆ. ಈ ವೈರಾಣುಗಳು ಸೋಂಕು ನಿರೋಧಕಗಳು ಅಥವಾ ಆಂಟಿಬಯಾಟಿಕ್ ಗಳಿಂದ ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನೂ ಹೊಂದಿರುತ್ತವೆ. ಇವುಗಳ ಕಾರಣದಿಂದಾಗಿಯೇ ಹಲವು ರೋಗಗಳು ಹರಡುತ್ತವೆ ಎಂಬ ವಾಸ್ತವಾಂಶ ತಿಳಿದುಬಂದಿದೆ.

ಮತ್ತಷ್ಟು ಓದು »

10
ಫೆಬ್ರ

ಅಳಿದ ಬಳಿಕ ಚಿಂತಿಸಿ ಫಲವೇನು?

ವಿಷ್ಣುಪ್ರಿಯ

ಉಲ್ಕಾಪಾತದಂಥ ಘಟನೆ ಸಂಭವಿಸಿದರೆ ಅದನ್ನು ತಡೆಯುವುದಕ್ಕೆ ನಮ್ಮಿಂದಾಗದು. ಭೂಮಿಯಾಳದಿಂದ ನುಗ್ಗಿ ಬರುವ ಜ್ವಾಲಾಮುಖಿಯನ್ನು ತಡೆಯಲು ಹೊರಟರೆ ಬೆಂಕಿ ಕೆಂಡವನ್ನು ರಟ್ಟಿನ ಪೆಟ್ಟಿಗೆಯೊಳಗೆ ಅಡಗಿಸಿಡುವ ಸಾಹಸ ಮಾಡಿದಂತಾದೀತು. ಹಾಗಂತ ಮಾನವ ಸೃಷ್ಟಿಸಿರುವ, ಸೃಷ್ಟಿಸುತ್ತಿರುವ ಪ್ರತಿಕೂಲ ವಿಚಾರಗಳಿಂದಾಗಿ ಜೀವಿಗಳು ಅವಸಾನಗೊಳ್ಳುವುದನ್ನು ತಡೆಯುವ ಪ್ರಯತ್ನ ಮಾಡಬಹುದಲ್ಲವೇ?

ಇದ್ದಾಗ ಗೊತ್ತಾಗದ ಮೌಲ್ಯ ಸತ್ತ ಮೇಲೆ ಗೊತ್ತಾಗುತ್ತದೆಯಂತೆ! ಇದು ಸಾರ್ವತ್ರಿಕವಾಗಿ ಅನ್ವಯವಾಗುವಂಥ ಮಾತು. ಅದು ಮನುಷ್ಯರೇ ಇರಲಿ, ಪ್ರಾಣಿಗಳೇ ಇರಲಿ ಯಾವ ಜೀವಿಯೇ ಆದರೂ ಆದು ಇಲ್ಲದಿದ್ದಾಗಲೇ ಅದರ ಬಗ್ಗೆ ಕುತೂಹಲ ಹೆಚ್ಚುತ್ತದೆ. ಈ ಮಾತು ಡೈನೋಸಾರ್ ಗಳ ವಿಚಾರದಲ್ಲಿ ಸಮರ್ಪಕವಾಗಿ ಅನ್ವಯವಾಗುತ್ತದೆ. ಹಲವು ಸಾವಿರ ವರ್ಷಗಳ ಹಿಂದೆ ಭೂಮಿಯ ಮೇಲೆ ಇದ್ದವು ಎಂದು ಹೇಳಲಾಗುವಂಥ ಡೈನೋಸಾರ್ ಗಳು ಹೇಗಿದ್ದವು? ಅವುಗಳ ಶಾರೀರಿಕ ರಚನೆ ಹೇಗಿತ್ತು? ಅವುಗಳು ನಾವಂದುಕೊಂಡಿರುವಂತೆಯೇ ಕ್ರೂರ ಮೃಗಗಳಾಗಿದ್ದವೇ? ಡೈನೋಸಾರ್ ಗ ಳ ಬಗೆಗೆ ಪ್ರಶ್ನೆಗಳು ಹುಟ್ಟಿಕೊಳ್ಳುವುದಕ್ಕೆ ಶುರುವಾಗಿ ದಶಕಗಳೇ ಕಳೆದವು. ಸಮರ್ಪಕವಾದ ಉತ್ತರಗಳಿಗೆ ಮಾತ್ರ ಇನ್ನೂ ಹುಡುಕಲಾಗುತ್ತಿದೆ. ಡೈನೋಸಾರ್ ಗಳ ಪಳೆಯುಳಿಕೆಗಳನ್ನು ವಿಜ್ಞಾನಿಗಳು ಸಂಶೋಧನೆಗೆ ಒಳಪಡಿಸುತ್ತಿದ್ದಾರೆ.

ಮತ್ತಷ್ಟು ಓದು »

3
ಫೆಬ್ರ

ಪ್ರಪಾತ……ವಿಮಾನಯಾನ ಬಲುಪ್ರಾಚಿನ….!!!

 – ಫಿಲ್ಮಿ ಪವನ್

ವಿಮಾನ ಎಂದರೆ ಏನೋ ಅಚ್ಚರಿ, ರಾಮಾಯಣದಲ್ಲಿ ಪುಷ್ಪಕ ವಿಮಾನ ಇತ್ತಂತೆ. ಕಾಡಿಂದ ಸೀತೆಯನ್ನು ಅದರಲ್ಲೇ ರಾವಣ ಎತ್ಕೊಂದೋಗಿದ್ದಂತೆ. ಇವೆಲ್ಲ ಕೇಳ್ದಾಗ ನಮ್ಮೋರು ವಿದೆಶಿಯರಿಗಿಂತ ಮುಂಚೆಯೇ ವಿಮಾನ ಕಂಡುಹಿಡಿದಿದ್ರ ಅಂತ ಡೌಟ್ ಬರೋದು ಸಾಮಾನ್ಯ. ಇಂತಹ ಡೌಟ್ clear ಮಾಡೋ ಸಿನಿಮ ನೋಡೋ ಅವಕಾಶ ಈ ನಡುವೆ ಒದಗಿ ಬಂದಿತ್ತು.

ಹೋದವಾರ ಗಣರಾಜ್ಯೋತ್ಸವದ ಪ್ರಯುಕ್ತ ನಮ್ ಕಂಪನಿ ರಜೆ ಇತ್ತು. ಏನು ಮಾಡೋದು ಅಂತ ಯೋಚಿಸುತ್ತಿರುವಾಗಲೇ ನಮ್ಮ ನೆಂಟರೋಬ್ರು ಫೋನ್ ಮಾಡಿ, ಅವರು ಅಬಿನಯಿಸಿರೋ ಚಿತ್ರದ ಉಚಿತ ಪ್ರದರ್ಶನ ಇದೆ ಬಾ ಅಂತ ಕರೆದರು. ಬಿಟ್ಟಿಯಾಗಿ ಆಗೋಹಾಗಿದ್ರೆ 100 ರು ಕೆಲಸಕ್ಕೆ ಇನ್ನೂರು ರು ಖರ್ಚು ಮಾಡಕ್ಕು ತಯಾರು ಅಲ್ವೇ ನಾವು, ಸರಿ ಸರ್ ಬರ್ತೀನಿ ಅಡ್ರೆಸ್ ಕೊಡಿ ಅಂದೆ. ಸೀತ ಸರ್ಕಲ್ ಹತ್ರ ಯೋಗಶ್ರಿ ಆಶ್ರಮ ಸಿನಿಮ ಹೆಸರು ಪ್ರಪಾತ ಅಂದ್ರು. ನನಗೆ ಆ ಸಿನಿಮ ಬಗ್ಗೆ ಮೊದಲೇ ಸ್ವಲ್ಪ ಗೊತ್ತಿತ್ತು. ಥಿಯೇಟರ್ ಅಲ್ಲಿ ರಿಲೀಸ್ ಆಗಲಿ ಅಂತ ಕಾಯ್ತಿದ್ದೆ, ಆದ್ರೆ ಅಲ್ಲಿ ಹೋಗಿ ನೋಡಿದಾಗಲೇ ತಿಳಿದಿದ್ದು ಇದು ಪ್ರಪಾತದ ನೂರ ಎರಡನೇ ಶೋ ಅಂತ. ಅಷ್ಟು ಕಡೆ ಅದು ಸ್ಕ್ರೀನಿಂಗ್ ಆಗಿದೆ ಆದರೆ ಥಿಯೇಟರ್ ಅಲ್ಲಿ ರಿಲೀಸ್ ಆಗೋ ಯೋಗ ಮಾತ್ರ ಬಂದಿಲ್ಲ ಯಾಕೆ ಅಂತ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರೇ ಹೇಳ್ಬೇಕು. ಚಿತ್ರದ ನಿರ್ದೇಶಕ ಕನ್ನಡದ ಕಿರುತೆರೆ ಹಿರಿತೆರೆ ಮತ್ತು ಆಕಾಶವಾಣಿಗೆ ಬಹಳಷ್ಟು ಕೊಡುಗೆ ನಿದಿರುವಂತಹ ವಜ್ರ ಖಂಟದ ಶ್ರೀ ಸುಚೇಂದ್ರ ಪ್ರಸಾದರು. ಆ ದಿನ ಅಲ್ಲಿ ಪ್ರದರ್ಶನ ಹಮ್ಮಿಕೊಂದಿದ್ದವರು ಪ್ರೇರಣ ಟ್ರಸ್ಟ್ ಎಂಬ NGO ಅವರು ಬಡವರಿಗೆ ಉಚಿತ ಡಯಾಲಿಸಿಸ್ ಮಾಡಿಸುವ ಉತ್ತಮ ಕಾರ್ಯಕ್ಕೆ ಕೈ ಹಾಕಿದ್ದಾರೆ. ಮತ್ತಷ್ಟು ಓದು »

3
ಫೆಬ್ರ

ಅಪಘಾತ ಎಂಬ ಬಹಿರಂಗ ಹತ್ಯೆ

– ಚಾಮರಾಜ ಸವಡಿ

ಪುಣೆಯಲ್ಲಿ ಬುಧವಾರ ಸಂಭವಿಸಿದ ಘಟನೆ ನಿರ್ಲಕ್ಷ್ಯದ ಚಾಲನೆ ಅಥವಾ ರೋಷಾವೇಶದ ಚಾಲನೆ ಕುರಿತ ಪ್ರಶ್ನೆಗಳನ್ನು ಮತ್ತೆ ಎತ್ತಿದೆ. ತಲೆ ಕೆಟ್ಟ ಚಾಲಕನೊಬ್ಬ ಸರ್ಕಾರಿ ಬಸ್ಸನ್ನು ಮನಸೋಇಚ್ಛೆ ಚಾಲನೆ ಮಾಡಿ ೧೦ ಜನ ಅಮಾಯಕರ ಸಾವಿಗೆ ಹಾಗೂ ೩೫ಕ್ಕೂ ಹೆಚ್ಚು ಜನ ಗಾಯಗೊಳ್ಳಲು ಕಾರಣನಾಗಿದ್ದಾನೆ.

ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿರುವುದೇಕೆ?

ನಿಜ, ಎಲ್ಲರಿಗೂ ಅವರದೇ ಆದ ವೈಯಕ್ತಿಕ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ, ಭಾವಾವೇಶಕ್ಕೆ ಒಳಗಾಗಿ ರಸ್ತೆಗಿಳಿಯುವ ಮನಃಸ್ಥಿತಿ ಎಂಥದು? ಅದರಲ್ಲೂ ಪಕ್ಕದಲ್ಲಿ ಹಾಗೂ ಎದುರು ಇರುವ ವಾಹನಗಳನ್ನು ಹಿಂದಿಕ್ಕಿ ಹೋಗಬೇಕೆನ್ನುವ ಚಪಲ ಏಕೆ ಉಂಟಾಗುತ್ತದೆ? ರಸ್ತೆ ಸೂಚನೆಗಳನ್ನು ಉಲ್ಲಂಘಿಸುವ, ಇತರರ ಸರಾಗ ಚಲನೆಗೆ ಅಡ್ಡಿಪಡಿಸುವ ಮನಃಸ್ಥಿತಿ ಏಕೆ ಮೂಡುತ್ತದೆ?

ಹೆಚ್ಚುತ್ತಿರುವ ಒತ್ತಡ

ಇತ್ತೀಚಿನ ದಿನಗಳಲ್ಲಿ ಒತ್ತಡ ಪ್ರಮಾಣ ಹೆಚ್ಚುತ್ತಿದೆ. ಕೆಲಸದ ಸ್ಥಳಗಳ ಒತ್ತಡ ಬಹಳಷ್ಟು ಸಾರಿ ಇಂಥ ತಲೆಕೆಟ್ಟ ನಡತೆಗಳಿಗೆ ಕಾರಣವಾಗಿದ್ದೂ ಉಂಟು. ಮೇಲಧಿಕಾರಿಗಳ ಒತ್ತಡ, ಹಿಂಸೆ, ಸಹೋದ್ಯೋಗಿಗಳ ಕಿರಿಕಿರಿ, ಕೆಲಸದ ಸ್ಥಳದಲ್ಲಿ ಮೂಲಸೌಕರ್ಯಗಳ ಕೊರತೆ, ಅಸ್ತವ್ಯಸ್ತ ಕೆಲಸದ ಅವಧಿ, ರಜೆ ಕೊಡದಿರುವುದು, ಸರಿಯಾದ ವೇತನ/ಸೌಲಭ್ಯ ನೀಡದಿರುವುದು- ಹೀಗೆ ಹಲವಾರು ಕಾರಣಗಳಿಂದ ಒತ್ತಡ ಉಂಟಾಗುತ್ತದೆ. ಇದಕ್ಕೆ ವೈಯಕ್ತಿಕ ಸಮಸ್ಯೆಗಳ ಒತ್ತಡವೂ ಸೇರುತ್ತದೆ. ಮತ್ತಷ್ಟು ಓದು »

2
ಫೆಬ್ರ

ಏನ್ ಗುರು ರಾಜಕೀಯನಾ?

-ಅಶ್ವಿನ್ ಎಸ್ ಅಮೀನ್

ಇತ್ತೀಚೆಗೆ ಬನವಾಸಿ ಬಳಗದವರು ನಡೆಸುತ್ತಿರುವ  ‘ಏನ್ ಗುರು’ ಎಂಬ ಬ್ಲಾಗ್ ನಲ್ಲಿ ಪ್ರಕಟವಾದ ‘RSS ಕಣ್ಣಲ್ಲಿ ಭಾಷಾ ನೀತಿ, ಒಕ್ಕೂಟ ಮತ್ತು ಸಮಾಜ’ ಎಂಬ ಲೇಖನವನ್ನು ಓದಿದೆ. ಲೇಖಕರ ಮಾತುಗಳು ಏಕಮುಖಿಯಾಗಿವೆಯೇನೋ ಎನಿಸಿ ಈ ಪ್ರತಿಕ್ರಿಯೆಯನ್ನು ದಾಖಲಿಸುತ್ತಿದ್ದೇನೆ.

ಲೇಖನ ಆರಂಭದಲ್ಲಿ ಅರೆಸ್ಸಿಸಿನ ಧನಾತ್ಮಕ ಅಂಶಗಳ ಕುರಿತು ಲೇಖಕರು ಗಮನ ಸೆಳೆಯುತ್ತಾರೆ. ಆದರೆ ಒಂದು ಕಡೆ ನೆರೆ ಬರ ಹಾಗು ಇತರ ವಿಕೋಪಗಳ ಸಂದರ್ಭದಲ್ಲಿ ಜಾತಿ ಮತ ಲೆಕ್ಕಿಸದೆ ಜನತೆಯ ಸಹಾಯಕ್ಕೆ ಧಾವಿಸುವ ಆರೆಸ್ಸೆಸ್ ನ ಬಗ್ಗೆ ಹೊಗಳುವ ಲೇಖಕರು ಮತ್ತೊಂದು ಕಡೆ ಪ್ರಾಂತೀಯ ವಿರೋಧದ ಬಗ್ಗೆ ಮಾತನಾಡುತ್ತಾರೆ.! ಪ್ರಾಂತೀಯ ಹಾಗು ವೈವಿಧ್ಯತಾ ವಿರೋಧವಿದ್ದರೆ ಆರೆಸ್ಸೆಸ್ ದೇಶದ ಯಾವದೇ ಭಾಗದಲ್ಲಿ ಉಂಟಾಗುವ ವಿಕೋಪಗಳ ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿತ್ತೆ..?!

ಆರೆಸ್ಸೆಸಿನ ಪೂಜನೀಯ ಗುರುಗಳಾದ ಮಾಧವ ಸದಾಶಿವ ಗೋಳವಾಲ್ಕರ್ ಗುರೂಜಿಯವರ ‘ಚಿಂತನ ಗಂಗಾ’ ಪುಸ್ತಕವನ್ನಾಧರಿಸಿ ಆ ಲೇಖನವನ್ನು ಬರೆಯಲಾಗಿದೆ. ಆ ಸಮಗ್ರ ಗ್ರಂಥವನ್ನು ಲೇಖಕರು ಓದಿರುವುದು ಸಂತೋಷದಾಯಕ. ಆದರೆ ಅದನ್ನು ಸರಿಯಾಗಿ ಅರ್ಥೈಸುವಲ್ಲಿ ಎಡವಿದ್ದಾರೆ ಎಂಬುದೇ ವಿಪರ್ಯಾಸ.! ಮತ್ತಷ್ಟು ಓದು »

2
ಫೆಬ್ರ

ನಿಮ್ಮ XP SERVICE PACK 2 ಅನ್ನು SERVICE PACK 3 ಗೆ ಬದಲಾಯಿಸಿ.

-ಆದೇಶ್ ಕುಮಾರ್

ನಿಮ್ಮ XP SERVICE PACK 2 ಅನ್ನು SERVICE PACK 3 ಗೆ ಬದಲಾಯಿಸಿ.
ಕೆಲವೊಮ್ಮೆ ನೀವು ನಿಮ್ಮ ಗಣಕಕ್ಕೆ ಕೆಲವೊಂದು ತಂತ್ರಾಂಶಗಳನ್ನು ಇನ್ಸ್ಟಾಲ್ ಮಾಡಬೇಕಾಗಿರುತ್ತದೆ. ಈ ತಂತ್ರಾಂಶಗಳು ಕೆವಲ SP3 ಅಲ್ಲಿ ಮಾತ್ರ ಕಾರ್ಯ ನಿರ್ವಹಿಸುತ್ತವೆ. ಆದರೆ ನಿಮ್ಮ ಗಣಕದಲ್ಲಿ XP SP 2 ಇನ್ಸ್ಟಾಲ್ ಮಾಡಿರುತ್ತೀರಿ.
ಈಗ ಹೊಸದಾಗಿ SP3 ಇನ್ಸ್ಟಾಲ್ ಮಾಡುವ ಬದಲು, SP2 ಅನ್ನೇ SP3 ಅನ್ನಾಗಿ ಬದಲಾಯಿಸಬಹುದು.

೧)ಮೊದಲು Registery Editor(Start–>Run ಅಲ್ಲಿ regedit ಎಂದು ಟೈಪಿಸಿ Enter ಒತ್ತಿ) ತೆರೆಯಿರಿ.
೨)ಈಗ Registery Editor ನ ಎಡ ಭಾಗದಲ್ಲಿರುವ ತೆರೆಯ ಮೂಲಕ ಕೆಳಗಿನಂತೆ ಹೋಗಿ.
HKEY_LOCAL_MACHINE >>> SYSTEM >>> CurrentControlSet >>>Control >>> Windows
ಗೆ ಹೋಗಿ
ಈಗ ನಿಮ್ಮ ಬಲ ಭಾಗದಲ್ಲಿರುವ “CSDVersion” ಮೇಲೆ ಎರಡು ಬಾರಿ ಕ್ಲಿಕ್ಕಿಸಿ, ತದನಂತರ ತೆರೆದುಕೊಳ್ಳುವ ತೆರೆಯಲ್ಲಿ Value data: ಅನ್ನು 200 ರ ಬದಲು 300 ಎಂದು ಬದಲಾಯಿಸಿ OK ಒತ್ತಿ ನಂತರ ನಿಮ್ಮ ಗಣಕವನ್ನು ರಿಸ್ಟಾರ್ಟ್ ಮಾಡಿ.
ಈ ಒಂದು ತಂತ್ರ SP3 ಅಲ್ಲಿ ಮಾತ್ರ ಕೆಲಸ ಮಾಡುವ ತಂತ್ರಾಂಶಗಳನ್ನು SP2 ವಿನಲ್ಲೂ ಕೆಲಸ ಮಾಡುವಂತೆ ಮಾಡುತ್ತದೆ.
ಪ್ರತಿಕ್ರಿಯಿಸಲು ಮರೆಯಬೇಡಿ.

* * * * * * *

ಚಿತ್ರಕೃಪೆ : madrasgeek.com

20
ಡಿಸೆ

ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಇಂದು ಮತ್ತು ಮುಂದು

-ಓಂ ಶಿವಪ್ರಕಾಶ್

(ಗಂಗಾವತಿಯಲ್ಲಿ ನೆಡೆದ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಧುನಿಕ ಜಗತ್ತು ಮತ್ತು ಕನ್ನಡ ಗೋಷ್ಠಿಯಲ್ಲಿ  ಮಾಡಿದ ಭಾಷಣದ ಪ್ರತಿ )

ನಮಸ್ಕಾರ ಗಂಗಾವತಿ. ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಇಂದು ಮತ್ತು ಮುಂದು, ಈ ವಿಷಯವನ್ನು ಮಂಡಿಸುವ ಮುನ್ನ ಒಂದು ಸಣ್ಣ ರಿಯಾಲಿಟಿ ಚೆಕ್. ತಂತ್ರಜ್ಞಾನ ನಮಗೆಲ್ಲಿ ಅರ್ಥವಾಗುತ್ತದೆ ಎನ್ನುವಿರಾ? ಕನ್ನಡದಲ್ಲಿ ವಿಷಯವನ್ನು ಪ್ರಸ್ತಾಪಿಸಿದಲ್ಲಿ ರಾಕೆಟ್ ತಂತ್ರಜ್ಞಾನವನ್ನೂ ಕೂಡ ನೀವು ಅರ್ಥ ಮಾಡಿಕೊಳ್ಳಬಲ್ಲಿರಿ. ಆದ್ದರಿಂದ ಚಿಂತೆ ಬೇಡ. ನಮ್ಮಲ್ಲಿ ಎಷ್ಟು ಜನರ ಬಳಿ ಮೊಬೈಲ್ ಫೋನ್ ಇದೆ? ಅದರಲ್ಲಿ ಕನ್ನಡ ಬರುತ್ತಾ? ಕನ್ನಡದಲ್ಲಿ ಎಸ್.ಎಂ.ಎಸ್ ಬರುತ್ತಾ? ನೀವು ಕನ್ನಡದಲ್ಲಿ ಕಳಿಸಿದ ಎಸ್.ಎಂ.ಎಸ್ ಬೇರೆಯವರ ಮೊಬೈಲ್ ನಲ್ಲಿ ಓದ್ಲಿಕ್ಕಾಗುತ್ತಾ? ಹೌದು / ಇಲ್ಲ  ಎಂಬ ಉತ್ತರ ನಮ್ಮದು.

ಮಾಹಿತಿ ತಂತ್ರಜ್ಞಾನ ನಮ್ಮೆಲ್ಲರ ಜೀವನಗಳಲ್ಲಿ ಇಂದು ಹಾಸು ಹೊಕ್ಕಾಗಿದೆ. ಕಿಸೆಯಲ್ಲಿ ಕೂರುವ ಆ ಮೊಬೈಲ್ ಫೋನ್ ಕೂಡ ಮಾಹಿತಿ ತಂತ್ರಜ್ಞಾನದ ಮಹಾಪೂರವನ್ನು ನಿಮ್ಮ ಬೆರಳಂಚುಗಳಲ್ಲಿ ಹರಿಸುವ ಶಕ್ತಿಯನ್ನು ಹೊಂದಿದೆ. ಆದರೆ ಅದರಲ್ಲಿ ಕನ್ನಡ ಒಂದು ಪ್ರಶ್ನೆ. ಮೊಬೈಲ್‌ಗಳಿಂದ ಹಿಡಿದು ಹತ್ತಾರು ವಿಷಯಗಳಲ್ಲಿನ ಶಿಷ್ಟತೆ/ಸ್ಟಾಂಡರ್ಡ್ಸ್ ನ ಕೊರತೆಯಿಂದಾಗಿ ತಂತ್ರಜ್ಞಾನದಲ್ಲಿ ಕನ್ನಡದ ಬಳಕೆಗೆ ಬಹಳಷ್ಟು ತೊಡಕುಗಳಿವೆ. ಆದರೂ, ಕನ್ನಡ ಮಾಹಿತಿ ತಂತ್ರಜ್ಞಾನದ ಸುತ್ತ ಬೆಳದಿದೆ. ನಿಮಗೆ ಈ ವಿಷಯಗಳನ್ನು ಸುಲಭವಾಗಿ ವಿವರಿಸಲು ಒಂದೆರಡು ಕಥೆಗಳನ್ನು ಹೇಳುತ್ತೇನೆ.
ಮತ್ತಷ್ಟು ಓದು »

5
ಡಿಸೆ

ಬುವಿಯ ಸುಡುತ್ತವೆಯೇ ಸೌರಜ್ವಾಲೆಗಳು?

-ವಿಷ್ಣುಪ್ರಿಯ

ನಿಜಕ್ಕೂ ಪ್ರಳಯವಾಗುತ್ತದೆಯೇ? ಸೌರಜ್ವಾಲೆಗಳು ಭೂಮಿಯನ್ನು ಸುಡುತ್ತವೆಯೇ? ಸೂರ್ಯನಲ್ಲಿನ ಕಾಂತವಲಯದಲ್ಲಿ ಅತಿಯಾದ ಚಟುವಟಿಕೆಗಳು ಕಾಣಿಸಿಕೊಳ್ಳುವ ಮೂಲಕ ಉತ್ಪತ್ತಿಯಾಗುವಂಥ ಶಕ್ತಿಯುತ ಸೌರಜ್ವಾಲೆಗಳಿಂದ ಭೂಮಿ ಸರ್ವನಾಶವಾಗುತ್ತದೆ ಎಂಬ ಮಾತು ನಿಜವೇ?… ಈ ವಿಚಾರವಾಗಿ ಹುಟ್ಟಿಕೊಳ್ಳುವ ಪ್ರಶ್ನೆಗಳಿಗೆ ಕೊನೆಯಿಲ್ಲ. ಅವಕ್ಕೆ ಸ್ಪಷ್ಟವಾದ ಉತ್ತರಗಳೂ ಇಲ್ಲ.

ಇನ್ನು ಕೆಲವೇ ವಾರಗಳು. 2012ನೇ ಇಸವಿ ಕಾಲಿಡುತ್ತಿದೆ. `2012′ ಎಂಬ ಧ್ವನಿ ಕೆಳಿದ ತಕ್ಷಣ ಬಹಳಷ್ಟು ಜನ ಜೀವನದ ಬಗೆಗಿನ ಎಲ್ಲ ಆಸೆಗಳನ್ನೂ, ಭರವಸೆಗಳನ್ನೂ ಕಳೆದುಕೊಳ್ಳುತ್ತಿದ್ದಾರೆ. ಭೂಮಿಯ ಕಥೆಯೇ ಮುಗಿದು ಹೋಯಿತು; ಪ್ರಳಯ ಆಗುತ್ತೆ; ಸೂರ್ಯ ಉಗುಳಿದ ಸೌರಜ್ವಾಲೆಗಳು ಭೂಮಿಯನ್ನು ಸುಟ್ಟು ಹಾಕುತ್ತವೆ… ಎಂಬೆಲ್ಲ ಸುದ್ದಿಗಳು ಮೇಲಿಂದ ಮೇಲೆ ಪ್ರಸಾರವಾಗಿ ಜನರಲ್ಲಿನ ಭೀತಿಯನ್ನು ಇನ್ನಷ್ಟು ಹೆಚ್ಚಿಸುತ್ತಿವೆ. ಹಲವು ಜನರಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಭೀತಿಯಿದೆ ನಿಜ. ಆದರೆ ಅವರೆಲ್ಲ ಇಂಥದ್ದೇನೂ ಆಗುವುದಿಲ್ಲ ಎಂದು ತಮ್ಮನ್ನು ತಾವೇ ಸಮಾಧಾನ ಮಾಡಿಕೊಳ್ಳುತ್ತಿದ್ದಾರೆ.
ಮತ್ತಷ್ಟು ಓದು »

29
ನವೆಂ

ನಿರ್ವಾತದಲ್ಲಿ ಬೆಳಕಿನ ಸೃಷ್ಟಿ!

-ವಿಷ್ಣುಪ್ರಿಯ

ಕಾಂತವಲಯದ ದಿಕ್ಕನ್ನು ಪ್ರತಿ ಸೆಕೆಂಡಿಗೆ ಹಲವು ಬಿಲಿಯನ್ ಬಾರಿ ಬದಲಾಯಿಸುವ ಮೂಲಕ ವಿಜ್ಞಾನಿಗಳು ಈ ವಿಶೇಷ ಫಲಕವನ್ನು ಸೃಷ್ಟಿಸಿದ್ದಾರೆ. ಆದರೂ ಸಹ ಈ ಫಲಕವು ಬೆಳಕಿನ ವೇಗದ ಶೆಕಡಾ 25ರಷ್ಟು ವೇಗದಲ್ಲಷ್ಟೇ ಚಲಿಸುವುದಕ್ಕೆ ಸಾಧ್ಯವಾಯಿತು. ಆದಾಗ್ಯೂ ಇಷ್ಟು ವೇಗದಲ್ಲಿ ಫಲಕ ಚಲಿಸುತ್ತಿದ್ದ ಕಾರಣದಿಂದಾಗಿ ನಿರ್ವಾತದಲ್ಲಿ ಸೃಷ್ಟಿಯಾಗುತ್ತಿದ್ದ ಬೆಳಕಿನ ಕಣಗಳನ್ನು ಅರ್ಥಾತ್ ಜೊತೆ ಜೊತೆಯಾಗಿ (ಅವಳಿಗಳು) ಸೃಷ್ಟಿಯಾಗುತ್ತಿದ್ದ ಫೋಟಾನ್ಗಳನ್ನು ಗುರುತಿಸಿ ಅವುಗಳ ಗುಣಲಕ್ಷಣಗಳನ್ನು ಅಳೆಯುವುದಕ್ಕೆ ವಿಜ್ಞಾನಿಗಳಿಗೆ ಸಾಧ್ಯವಾಗಿದೆ.

ನಿರ್ವಾತ ಎಂದರೆ ಸಂಪೂರ್ಣ ಖಾಲಿ ಎಂದರ್ಥವಲ್ಲ. ಅಲ್ಲಿ ಮಿಂಚಿ ಮರೆಯಾಗುಂಥ ಫೋಟಾನ್ಗಳಿರುತ್ತವೆ. ಅಂದರೆ ವರ್ಚುವಲ್ ಅಥವಾ ಭ್ರಾಮಕ ಫೋಟಾನ್ಗಳಿರುತ್ತವೆ. ಈ ರೀತಿ ನಿರ್ವಾತದಲ್ಲಿ ಸೃಷ್ಟಿಯಾಗುವಂಥ ವರ್ಚುವಲ್ ಫೋಟಾನ್ಗಳು ಅಥವಾ ಭ್ರಾಮಕ ಫೋಟಾನ್ಗಳನ್ನು ಬಹುತೇಕ ಬೆಳಕಿನ ವೇಗದಲ್ಲಿ ಚಲಿಸುತ್ತಿರುವಂಥ ಫಲಕದಿಂದ ಪ್ರತಿಫಲಿಸುವಂತೆ ಮಾಡಿದರೆ ನೈಜ ಫೋಟಾನ್ಗಳ ಅರ್ಥಾತ್ ಬೆಳಕಿನ ಸೃಷ್ಟಿಯಾಗುತ್ತದೆ.
ಮತ್ತಷ್ಟು ಓದು »