ಹಳ್ಳೀಗ್ಬಂದ ಗುಂಡಣ್ಣ ಮತ್ತು ಆನ್ಲೈನ್ ಕೋರ್ಸು
ಪ್ರಶಸ್ತಿ. ಪಿ, ಸಾಗರ
ಪಟ್ಣದಿಂದ ಜಗ್ಗಣ್ಣನ ಮಗ ಗುಂಡಣ್ಣ ಬತ್ತವ್ನಂತೆ. ಅದೆಂತದೋ ಕಾಂಪೂಟ್ರಂತ ಡಬ್ಬ ತತ್ತವ್ನಂತೆ ಅನ್ನೋ ಸುದ್ದೀನ ಊರೆಲ್ಲಾ ಟಾಂ ಟಾಂ ಮಾಡ್ತಿದ್ದ ಜಮೀನ್ದಾರ ಜಗ್ಗಣ್ಣನ ಮನೆ ಕೆಲ್ಸದ ಕಿಟ್ಟಪ್ಪ. ಊರಿಗೆ ಬರೋ ಮಗೀನ ತತ್ತಾರಲಾ ಅಂತ ಧಣೀರೆ ಕಿಟ್ಟಪ್ಪಂಗೆ ಗಾಡಿ ಕಟ್ಕಂಡು ಹೋಗಕ್ಕೆ ಹೇಳಿದ್ರು. ಕಿಟ್ಟಪ್ಪ ರಾಜ್ಕುಮಾರ್ನ ಅಣ್ಣತಂಗಿ ಸಿನೀಮಾದಾಗೆ ನೋಡಿದ್ನಂತೆ. ಅದ್ರಲ್ಲಿ ಪಟ್ಣದ ಹೀರೋ ತನ್ನಳ್ಳಿಗೆ ಬಂದಾಗ ಅವನ ಕೋಟು ಬೂಟೇನು ,ಅವಂಗೆ ಹಾರ ತುರಾಹಿ ಹಾಕೋದೇನೂ.. ಅಬ್ಬಬ್ಬಾ ಅಂದ್ಕಂಡಿದ್ದ. ಅದೇ ತರ ಚಿಕ್ಕೆಜಮಾನ್ರೂ ಬತ್ತಾರೆ ಅಂತ ಕನ್ಸು ಕಾಣ್ತಾ ಇದ್ದ. ಮುಖ, ಮೈಮೇಲೆಲ್ಲಾ ಯಾರೋ ನೀರು ಹುಯ್ದಂಗಾಗಿ ಕಣ್ಬಿಟ್ಟ. ಯಾವನ್ಲೇ ಅವ ಕೆಸ್ರು ಹಾರಿಸಿದವ.. ಅಂತ ಬಾಯ್ತುದೀವರ್ಗೂ ಬಂದಿತ್ತು.ನೋಡಿದ್ರೆ ಪಟ್ಣದ ಬಸ್ಸು ಹಾರ್ನು ಹೊಡಿತಾ ಐತೆ. ಯಾವುದೋ ಪಟ್ಣದ ಹುಡ್ಗಿ ಇಳಿತಾ ಐತೆ. ಅದೆಂತದೋ ಪ್ಯಾಂಟು, ಶರ್ಟು, ಕನ್ನಡಕ ಹಾಕ್ಕೊಂಡು. ಒಂದ್ಕಿವಿಗೆ ರಿಂಗು ಬೇರೆ. ಈಗಿನ ಹುಡ್ಗೀರು ಹಿಂಗೆ ಇರ್ಬೇಕು, ಆದ್ರೂ ಕೂದಲು ಬಿಟ್ಕಂಡು , ಕಿವಿಗೆ ರಿಂಗೆಲ್ಲಾ ಹಾಕ್ಕಂವ್ಳಲ್ಲಾ ಅಂತ ಸಮಾಧಾನ ಮಾಡ್ಕಂಡ. ಅಷ್ಟರಲ್ಲೇ ಆ ಹುಡ್ಗಿ ಇವ್ನ ಹತ್ರವೇ ಬಂದು ಜಮೀನ್ದಾರ ಜಗ್ಗಣ್ಣ ಅವ್ರ ಮನೇ ಇಂದ ನನ್ನ ಕರ್ಕೊಂಡೋಗಕ್ಕೆ ಯಾರೋ ಬರ್ತಾರೆ ಅಂದಿದ್ರು. ನೀವ್ಯಾರ್ನೂ ನೋಡಿದ್ರಾ ಅಂದ್ಳು. ಮತ್ತಷ್ಟು ಓದು 
ಸಂತಾನಹೀನತೆಯ ಕಾರಣ ಶೋಧಿಸುತ್ತ….
ರಹಸ್ಯಗಳನ್ನು ಹುಡುಕತ್ತ…!
– ವಿಷ್ಣುಪ್ರಿಯ
ಸೌರಮಂಡಲದ ತುದಿಯಲ್ಲಿ ನೀರಿನ ಗುಳ್ಳೆಗಳ್ಳಂಥ ಗುಳ್ಳೆಗಳಿವೆ. ಇವು 10 ಕೋಟಿ ಮೈಲಿಗಳಷ್ಟು ವಿಶಾಲವಾಗಿವೆ ಎಂಬುದನ್ನು ಕೂಡಾ ತಿಳಿಸಿದ್ದು ಇವೇ ವಾಯೇಜರ್ ನೌಕೆಗಳು. ಜಗತ್ತು ಹೇಗಿರಬಹುದು? ಎಂಬ ಕಲ್ಪನೆ ನಮ್ಮಲ್ಲಿ ವೇದ, ಪುರಾಣಗಳ ಕಾಲದಿಂದಲೂ ಬೆಳೆದು ಬಂದಿದೆ. ಆವಾಗ ಭೂಮಿಯಿಂದ ಬೇರೆ ಜಗತ್ತಿನತ್ತ ಚಲಿಸಲು ಈಗಿರುವಂಥ ರಾಕೆಟ್ಗಳಿರಲಿಲ್ಲ. ಗಗನನೌಕೆಗಳಿರಲಿಲ್ಲ. ಆದರೂ ಅಂದಿನ ದಿನಗಳಲ್ಲಿ ಹೇಳಿದ್ದು ಈಗ ಸತ್ಯವಾಗುತ್ತಿದೆ. ಹಾಗಿದ್ದರೆ ವೇದಗಳ ಕಾಲದಲ್ಲಿ ಜೀವಿಸಿದ್ದ ಜನರು ಯಾವ ಮಟ್ಟದ ಜ್ಞಾನವನ್ನು ಹೊಂದಿದ್ದರು? ಸಪ್ತ ಸಾಗರಗಳ ಬಗ್ಗೆ ವೇದಗಳು ಹೇಳುತ್ತವೆ. 14 ಲೋಕಗಳ ಬಗ್ಗೆಯೂ ನಮ್ಮ ಪುರಾಣಗಳಲ್ಲಿ ಪ್ರಸ್ತಾಪವಿದೆ.
ಅಯೊಡಿನ್ ಹೆಸರಿನ ಮಹಾದ್ರೋಹ.!!!
-ಶ್ರೀ ಹರ್ಷ ಸಾಲೀಮಠ
ಅಯೊಡಿನ್ಯುಕ್ತ ಉಪ್ಪಿನ ಬಗ್ಗೆ ಸಾಕಷ್ಟು ಪ್ರಚಾರ ನಡೆದಿದೆ. ಇದಕ್ಕೆ ಸರ್ಕಾರದ ಕುಮ್ಮಕ್ಕೂ ಸಾಕಷ್ಟಿದೆ. ಸರ್ಕಾರದ ಈ ಕುಮ್ಮಕ್ಕಿನ ಹಿಂದೆ ಅನೇಕ ದುಷ್ಟ ಕೈಗಳ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.ಅಯೊಡಿನ್ ನಮ್ಮ ದೇಹಕ್ಕೆ ಮೈಕ್ರೊ ಪ್ರಮಾಣದಲ್ಲಿ ಬೇಕಾದ ಅಂಶ. ಅಯೋಡಿನ್ ಅಂಶ ನಮ್ಮ ದೇಹದಲ್ಲಿ ಕಡಿಮೆಯಾದಾಗ ಥೈರಾಯಿಡ್ ಗ್ರಂಥಿ ಅಯೋಡಿನ್ ಅನ್ನು ಹೆಚ್ಚಾಗಿ ಹೀರಿಕೊಳ್ಳಲು ಊದಿಕೊಳ್ಳತೊಡಗುತ್ತದೆ. ಇದೇ ಗಾಯ್ಟರ್ ರೋಗ.
ಗಾಯ್ಟರ್ ಅಥವಾ ಗಳಗಂಡ ರೋಗ ನಮ್ಮ ದೇಶದಲ್ಲಿ ಕಂಡುಬರುವುದೇ ವಿರಳ. ಅಯೋಡಿನ್ ಕೊರತೆಯನ್ನು ದೊಡ್ಡ ಗಂಡಾಂತರವೆಂಬಂತೆ ಬಿಂಬಿಸಿ ಅಯೋಡೀಕರಿಸಿದ ಉಪ್ಪನ್ನು ಬಲವಂತವಾಗಿ ಎಲ್ಲರಿಗೂ ತಿನ್ನಿಸಲಾಗುತ್ತಿದೆ. ಗಳಗಂಡ ರೋಗ ನಮ್ಮ ದೇಶದಲ್ಲಿ ಕಂಡು ಬರುವುದು ಲಡಾಕ್, ಶಿಮ್ಲಾ ರೀತಿಯ ಅತಿ ಹೆಚ್ಚಿನ ಮಣ್ಣಿನ ಸವೆತ ಇರುವ ಗುಡ್ಡಗಾಡು ಪ್ರದೇಶಗಳಲ್ಲಿ ಮಾತ್ರ. ಎಲ್ಲಾ ಸೇರಿದರೇ ಅಯೋಡಿನ್ ಕೊರತೆಯನ್ನು ಎದುರಿಸುತ್ತಿರುವುದು ಶೇ.೨ ರಷ್ಟು ಜನರು ಮಾತ್ರ. ಶೇ.೨ರ ಕೊರತೆಯನ್ನು ನೀಗಿಸುವುದಕ್ಕಾಗಿ ಉಳಿದ ಶೇ.೯೮ ರಷ್ಟು ಜನರಿಗೆ ಅಯೋಡಿನ್ ತಿನ್ನಿ ಎಂದು ಪ್ರಚಾರ ಮಾಡಲಾಗುತ್ತಿದೆ.
ಅನೇಕ ವ್ಯಕ್ತಿಗಳಲ್ಲಿ ಅಯೋಡಿನ್ ಅಲರ್ಜಿ ಇರುತ್ತದೆ. ಗಳಗಂಡ ಚಿಕಿತ್ಸೆಗಾಗಿ ಅಯೋಡಿನ್ ನೀಡಬೇಕಾದರೂ ಈ ಅಲರ್ಜಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಲರ್ಜಿ ಇರುವ ವ್ಯಕ್ತಿಗಳಲ್ಲಿ ಚಿಕ್ಕ ಪ್ರಮಾಣದ ಅಯೋಡಿನ್ ಸಹ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಲ್ಲುದು. ಇದಲ್ಲದೇ ದೇಹದಲ್ಲಿ ಅಯೋಡಿನ್ನ ಅನವಶ್ಯಕ ಹೆಚ್ಚಳದಿಂದಾಗಿ ಖಿನ್ನತೆ, ಉಸಿರಾಟದ ತೊಂದರೆಗಳು ನಪುಂಸಕತ್ವ, ಕೂದಲುದುರುವಿಕೆ,ಚರ್ಮದ ರೋಗಗಳು , ಗಳಗಂಡ ನಿಶ್ಯಕ್ತಿ ಇತ್ಯಾದಿ ಆರೋಗ್ಯಕ್ಕೆ ಹಾನಿಕಾರಕ ತೊಂದರೆಗಳು ಉಂಟಾಗುವ ಸಾಧ್ಯತೆಗಳಿವೆ. ಅಯೋಡಿನ್ ತಿನ್ನುವುದನ್ನು ಕಡಿಮೆ ಮಾಡುವುದರಿಂದ ಗಂಟಲಿನ ಕ್ಯಾನ್ಸರ್ ಕಡಿಮೆಯಾಗುವ ಸಾಧ್ಯತೆಯ ಬಗ್ಗೆ ಜಪಾನ್ನಲ್ಲಿ ಸಂಶೋಧನೆಗಳು ತಿಳಿಸುತ್ತವೆ. ಅಯೋಡಿನ್ ಕೊರತೆ ಇರುವ ಜರ್ಮನಿ ದೇಶದಲ್ಲಿ ಗಂಟಲು ಕ್ಯಾನ್ಸರ್ ಕೂಡ ಕಡಿಮೆಯೆ. ಅಲ್ಲದೇ ಗರ್ಭಿಣಿ ಸ್ತ್ರೀಯರಿಗೂ ಅಯೋಡಿನ್ ಅಪಾಯ ಉಂಟುಮಾಡುತ್ತದೆ. ಮತ್ತಷ್ಟು ಓದು 
ಕಂದಮ್ಮನಿಗೆ ಎಲ್ಲವೂ ಅರ್ಥವಾಗುತ್ತೆ!
– ವಿಷ್ಣುಪ್ರಿಯ
ಮಕ್ಕಳು ಮೂರೇ ತಿಂಗಳು ಪ್ರಾಯವಾಗಿದ್ದಾಗಲೇ ಅಮ್ಮನ ಮಾತುಗಳನ್ನು ಅರ್ಥ ಮಾಡಿಕೊಳ್ಳುವ ಸಾಮಥ್ರ್ಯ ಹೊಂದಿರುತ್ತವಂತೆ. ಒಂದು ಜೀವ ತಾಯಗರ್ಭದಲ್ಲಿ ಮೊಳಕೆಯೊಡೆಯಬೇಕು
ಎಂದಾದರೆ ಅಲ್ಲಿ ತಂದೆಯ ರೇತಸ್ಸು (ವೀರ್ಯ) ಮತ್ತು ತಾಯಿ ಆತ್ಮಭೂಯದ (ಅಂಡಾಣು ಎನ್ನಬಹುದು) ಮಿಲನವಾಗಬೇಕು. ಗರ್ಭದಲ್ಲಿರುವ ಮಗುವಿನ ನಾಭಿಯಿಂದ ಹೊರಟಂಥ ಕರುಳಬಳ್ಳಿ ತಾಯಿಯ ಜೊತೆಗೆ ನಂಟು ಬೆಳೆಸುತ್ತದೆ. ತಾಯಿಯ ಆತ್ಮಭೂಯ ಮತ್ತು ತಂದೆಯ ರೇತಸ್ಸಿನಲ್ಲಿ ಹಲವು ತಲೆಮಾರುಗಳ ವಂಶವಾಹಿಗಳು ಹರಿಯುವುದರಿಂದ ಸಂಬಂಧ ಬಹಳ ದೂರದವರೆಗೆ ವಿಸ್ತರಿಸುತ್ತದೆ.
ಮಕ್ಕಳ ಗ್ರಹಣಶಕ್ತಿ ಎಷ್ಟಿರುತ್ತದೆ? ಯಾವಾಗಿನಿಂದ ಮಕ್ಕಳಿಗೆ ಈ ಶಕ್ತಿ ಲಭ್ಯವಾಗುತ್ತದೆ? ಎಂಬೆಲ್ಲ ವಿಚಾರಗಳ ಬಗ್ಗೆ ಹಲವು ವರ್ಷಗಳಿಂದ ಜಿಜ್ಞಾಸೆ ಇದೆ. ಮಕ್ಕಳಿಗೆ ಬುದ್ಧಿ ಬರುವಾಗ ಮೂರ್ನಾಲ್ಕು ವರ್ಷ ಆಗುತ್ತೆ. ಅಲ್ಲಿಯವರೆಗೆ ಆವರಿಗೆ ಏನೂ ಅರ್ಥ ಆಗಲ್ಲ ಅಂತ ಒಂದು ವಾದ ಹೇಳಿದರೆ, ನಮ್ಮ ಪುರಾಣಗಳು ಮಗು ಅಮ್ಮನ ಗರ್ಭದಲ್ಲಿರುವಾಗಲೇ ಎಲ್ಲವನ್ನೂ ಅರ್ಥ ಮಾಡಿಕೊಳ್ಳುತ್ತದೆ ಎಂದು ಹೇಳುತ್ತವೆ. ಹೀಗಿರುವಾಗ ಯಾವುದು ಸರಿ ಎಂಬ ಗೊಂದಲವೂ ಕಾಡುವುದು ಸಹಜ. ಪುರಾಣಗಳನ್ನು, ವೇದ, ಉಪನಿಷತ್ತುಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗದವರು, ಸಾಧ್ಯವಿದ್ದರೂ ಅವುಗಳತ್ತ ಕಣ್ಣೆತ್ತಿಯೂ ನೋಡದವರು, ವೇದ, ಉಪನಿಷತ್ತುಗಳು, ಪುರಾಣಗಳೆಂದರೆ ಕಟ್ಟುಕಥೆಗಳೆಂದು ಭಾವಿಸುವವರು ಮೊದಲಿನ ವಾದವನ್ನೇ ಒಪ್ಪಬಹುದು. ವೇದ, ಉಪನಿಷತ್ತುಗಳು ಮತ್ತು ಪುರಾಣಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡುವವರು ಖಂಡಿತಕ್ಕೂ ಮೊದಲ ವಾದನನ್ನು ಸಾರಾಸಗಟು ತಳ್ಳಿಹಾಕುತ್ತಾರೆ.
ಅಲ್ಲಿ ಆಲ್ಫಾ ಅಂತಿದೆ ನೋಡಿ, ಮೊದಲ ಪ್ರಯತ್ನಕ್ಕೆ ಸಹಕಾರ ನೀಡಿ
– ಕಾಲಂ 9
ಗೂಗಲ್ ಸಂಸ್ಥೆಯು ಇತ್ತೀಚಿಗೆ ತನ್ನ ಭಾಶಾಂತರ ಸೇವೆಯ ಕನ್ನಡ ಅವತರಣಿಕೆಯ ಆಲ್ಫಾ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇಂಗ್ಲಿಷ್ ಭಾಷೆಯಿಂದ ಕನ್ನಡಕ್ಕೆ ಯಾಂತ್ರೀಕೃತ ಭಾಶಾಂತರಕ್ಕೆ ಇದು ಮೊದಲ ಪ್ರಯತ್ನ. ಆದರೆ ಇದು ಕನ್ನಡದ ಕೊಲೆ ಎಂದು ಉದಯವಾಣಿಯು ‘ವಾಷಿಂಗ್ಟನ್ನಿಂದ’ ವರದಿ ಮಾಡಿದ್ದಾರೆ.
ಉದಯವಾಣಿಯ ವಾಷಿಂಗ್ಟನ್ ವರದಿಗಾರರಲ್ಲಿ ನನ್ನ ಮನವಿ: ನೀವು ಪುಕ್ಕಟೆ ಪ್ರಯತ್ನಕ್ಕೆ ಸಿಟ್ಟಾಗುವ ಮೊದಲು ಸಾಧ್ಯವಾದರೆ ಮೌಂಟೆನ್ ವ್ಯೂ ನಲ್ಲಿರುವ ಗೂಗಲ್ ಕಛೇರಿಗೆ ಒಮ್ಮೆ ಹೋಗಿ ಭಾಷಾಂತರ ಪ್ರಾಜೆಕ್ಟ್ ಬಗ್ಗೆ ಸ್ವಲ್ಪ ಕೇಳಿ. ಅಥವಾ translate.google.com ಪುಟದ ಕೊನೆಗಿರುವ About Google Transate ಕೊಂಡಿಯನ್ನೊಮ್ಮೆ ಬಳಸಿ ಅದರ ಬಗ್ಗೆ ಸ್ವಲ್ಪ ಓದಿ. ಮೊದಲನೆಯದಾಗಿ ಇದೂ ಇನ್ನೂ ಆಲ್ಫಾ ಆವೃತ್ತಿ. ಇನ್ನೂ ಬೀಟ ಆವೃತ್ತಿಯ ನಂತರ ಸೇವೆಯು ಸಾಧಾರಣ ಬಳಕೆಗೆ ಲಭ್ಯವಾಗುತ್ತದೆ. ಆಲ್ಫಾ ಆವೃತ್ತಿಯ ಬಗ್ಗೆ ಗೂಗಲಿಸಿದರೆ ನಿಮಗೆ ಹಾಗೆಂದರೇನೆಂಬುದು ತಿಳಿಯುತ್ತದೆ. ಮತ್ತಷ್ಟು ಓದು 
ಅಮೇರಿಕದಲ್ಲೀಗ ನಾಯಿ ಬೆಕ್ಕುಗಳಿಗೂ ಸಕ್ಕರೆ ಖಾಯಿಲೆ
ಗೋವಿಂದ ಭಟ್
ಮನುಷ್ಯನನ್ನು ದೇವರು ಸದಾ ಚಟುವಟಿಕೆಯಲ್ಲಿರುವಂತೆ ರೂಪಿಸಿದ್ದಾನೆ. ಜೀವನದ ಎರಡು ತುದಿಗಳಲ್ಲಿ ಅಂದರೆ ಹುಟ್ಟು ಸಾವಿನ ಆಸುಪಾಸು ಹೊರತು ಪಡಿಸಿದರೆ ಉಳಿದ ಸಮಯದಲ್ಲಿ ಸದಾ ತನ್ನ ಕಾಲಿನ ಮೇಲೆ ನಿಲ್ಲುವಂತೆ ಚಲಿಸುವಂತೆ ನಮ್ಮನ್ನು ವಿನ್ಯಾಸಗೊಳಿಸಲಾಗಿದೆ. ಆದರೆ ನಮಗೆ ಹೊರಿಸಿಕೊಳ್ಳುವುದೆಂದರೆ ಇಷ್ಟ. ನಡೆಯುವುದು ಕಷ್ಟ. ನಾಲ್ಕು ಹೆಜ್ಜೆ ಹೋಗಲೂ ವಾಹನವನ್ನೇ ಅವಲಂಬಿಸಲು ಇಷ್ಟ ಪಡುತ್ತೇವೆ. ಕಾಸಿಲ್ಲದವ ಮಾತ್ರ ನಡೆಯುವುದು ಎಂದು ನಮ್ಮವರ ಖಚಿತ ನಿಲುವು. ನಮಗೆ ಎಲ್ಲಕ್ಕೂ ಮಾದರಿಯಾದ ಅಮೇರಿಕದವರು ಶೌಚಾಲಯಕ್ಕೂ ಕಾರಲ್ಲಿ ಹೋಗುವರೋ ಅನ್ನುವ ಗುಮಾನಿ.
ಅಮೇರಿಕದಲ್ಲಿ ಚಲನಾತೀತ ಮನುಷ್ಯರಿಗೆ ಮಾತ್ರವಲ್ಲ ಅವರ ನಾಯಿ ಬೆಕ್ಕುಗಳಿಗೂ ಈಗ ಸಕ್ಕರೆ ಖಾಯಿಲೆ ಹಬ್ಬಲು ಪ್ರಾರಂಭಿಸಿದೆ. ಈ ಸಕ್ಕರೆ ಖಾಯಿಲೆ ಬಗೆಗೆ ಯೋಚಿಸಿದಾಗ ನನಗೆ ನೆನಪಿಗೆ ಬರುವುದು ತೇಜಸ್ವಿ ಕಥೆಯೊಂದರ ಪಾತ್ರಧಾರಿ. ಅವರು ತನಗೆ ಪರಂಗಿಯವರ ಸೀಕು ಉಂಟೆಂದು ಡಾಕ್ಟ್ರು ಹೇಳಿದರೆಂದು ಹೆಂಡತಿಯೊಂದಿಗೆ ಬಹಳ ಹೆಮ್ಮೆ ಪಟ್ಟುಕೊಳ್ಳುತ್ತಾರೆ. ಸಕ್ಕರೆ ಖಾಯಿಲೆ ಸಾಕುನಾಯಿಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಶೇಕಡಾ ಮೂವತ್ತಮೂರರಷ್ಟು ಏರಿದರೆ ಬೆಕ್ಕುಗಳಲ್ಲಿ ಶೇಕಡಾ ಹದಿನಾರು. ಹೋಲಿಕೆಯಲ್ಲಿ ಆ ದೇಶದಲ್ಲಿ ಮನುಷ್ಯರಲ್ಲಿ ಬರೇ ಶೇಕಡಾ ಹತ್ತು ಹೆಚ್ಚುವರಿಯಾಗಿ ಈ ಸೀಕು ಗುರುತಿಸಲ್ಪಟ್ಟಿದೆ. ಮತ್ತಷ್ಟು ಓದು 
ಆಯುರ್ವೇದವನ್ನು ಕಂಡರೆ ಪಾಶ್ಚಾತ್ಯರಿಗೆ ಭೀತಿ!
ಇಂಗಿಷ್ ವೈದ್ಯ ಪದ್ಧತಿಯು ಯಾವುದೇ ರೋಗವನ್ನು ಸಂಪೂರ್ಣ ಗುಣ ಮಾಡುವುದಿಲ್ಲ. ರೋಗದ ಲಕ್ಷಣಗಳನ್ನು ತಟಸ್ಥಗೊಳಿಸುವ ಮೂಲಕ ಆ ರೋಗವನ್ನು ಅಜ್ಞಾತವಾಗಿಡುತ್ತದೆ ಅಷ್ಟೆ. ಗುಳಿಗೆಗಳು ರೋಗಲಕ್ಷಣಗಳನ್ನು ತಟಸ್ಥವಾಗಿಸುವ ಕಾರಣ ರೋಗ ಗುಣವಾಗಿದೆ ಎಂಬ ಭ್ರಾಂತಿಗೊಳಗಾಗುತ್ತೇವೆ. ಆದರೆ ಆಯುರ್ವೇದ ವೈದ್ಯ ಪದ್ಧತಿ ಹಾಗಲ್ಲ, ರೋಗಮೂಲ ಏನು ಎಂಬುದನ್ನು ಅರಿತುಕೊಂಡು ಅದಕ್ಕೆ ಚಿಕಿತ್ಸೆ ಮಾಡುತ್ತದೆ. ನಾಗೇಶ್ ಹೆಗಡೆಯವರ ಮನೆಯಲ್ಲಿ ಒಂದೆರಡು ತಾಸು…
– ಹರ್ಷ ಕುಗ್ವೆ
ನಮ್ಮ ‘ದ ಸಂಡೆ ಇಂಡಿಯನ್’ ಪತ್ರಿಕೆಯ ’ಸಾಕ್ಷಿ ಪ್ರಜ್ಞೆ’ ಅಂಕಣಕ್ಕಾಗಿ ಈ ಸಲಕ್ಕೆ ನಾಗೇಶ್ ಹೆಗಡೆಯವರನ್ನು ಸಂದರ್ಶನ ಮಾಡೋಣ ಎಂದು ತೀರ್ಮಾನಿಸಿ ಅವರಿಗೆ ಕಾಲ್ ಮಾಡಿದಾಗ ನಿಮ್ಮ ಪ್ರಶ್ನೆಗಳೇನಿವೆ ಕಳುಹಿಸಿ, ನಾನು ಉತ್ತರ ಕಳುಹಿಸುತ್ತೇನೆ ಎಂದರು. ಸಂದರ್ಶನದ ನೆಪದಲ್ಲಿಯಾದರೂ ಅವರನ್ನು ಖುದ್ದಾಗಿ ಮಾತನಾಡಿಸುವ ಅವಕಾಶ ಮಿಸ್ ಆಗಿ ಬಿಡುತ್ತಲ್ಲಾ, ಛೆ ಎಂದು ಮನಸ್ಸಲ್ಲೇ ಹೇಳಿಕೊಂಡು ’ಆಯ್ತು ಸರ್ ಎಂದು ಮರುಮಾತಲ್ಲೇ ‘ನೀವು ಫ್ರೀ ಇರೋದಾದ್ರೆ ನಿಮ್ಮ ಮನೆಗೇ ಬರ್ತೀನಿ ಸರ್’ ಎಂದೆ. ಅದಕ್ಕವರು, ನಿಮಗೆ ಬರಬೇಕೆಂದರೆ ಬನ್ನಿ. ನಾನು ಬಿಡುವಾಗೇ ಇರ್ತೀನಿ. ಆದ್ರೆ ಪ್ರಶ್ನೆಗಳನ್ನು ಮೊದಲೇ ಕಳುಹಿಸಿರಿ ಎಂದರು. ’ಓಕೆ’ ಸರ್ ಹಾಗಾದ್ರೆ ಬೆಳಿಗ್ಗೆ ಬರ್ತೀನಿ ಎಂದು ಅವರ ಮನೆಯ ವಿಳಾಸ ಬರೆದುಕೊಂಡೆ.
ಗಜಮುಖ ಮೃದ್ವಸ್ತಿ ಅಥವಾ ಎಲಿಫೆಂಟ್ ಶಾರ್ಕ್ ಮೀನು
– ಆಜಾದ್







