ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

14
ಆಕ್ಟೋ

ನಮ್ಮ ನಮ್ಮ ಭಾಷೆಯ ಸಮಸ್ಯೆ

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು.

ಕನ್ನಡ ಕಲಿವಾರಗಳ ಹಿಂದೆ ಭಾರತದ ಖಗೋಳ ವಿಜ್ಞಾನಿಗಳ ತಂಡ ಮಂಗಳನ ಕಕ್ಷೆಗೆ ಉಪಗ್ರಹವನ್ನು ಯಶಸ್ವಿಯಾಗಿ ಸೇರಿಸಿತು. ಈ ಸಂದರ್ಭದಲ್ಲಿ ಬಹುತೇಕ ಕನ್ನಡ ವಾಹಿನಿಗಳು ಚರ್ಚೆಯನ್ನು ಏರ್ಪಡಿಸಿದ್ದವು. ಖಗೋಳ ಅನ್ನುತ್ತಿದ್ದಂತೆ ಈ ಕುರಿತ ಭಾರತದ ಪ್ರಾಚೀನ ಜ್ಞಾನವೇತ್ತರನ್ನು ಹಾಗೂ ಇಂದಿನ ವಿಜ್ಞಾನಿಗಳನ್ನು ಅಥವಾ ಅವರ ಪ್ರತಿನಿಧಿಗಳು ಅಂದುಕೊಂಡವರನ್ನು ಚರ್ಚೆಗೆ ಆಹ್ವಾನಿಸಬೇಕಲ್ಲ? ವಾಹಿನಿಗಳೂ ಹಾಗೆಯೇ ಮಾಡಿದವು. ಎರಡೂ ಕ್ಷೇತ್ರದವರನ್ನು ಜೊತೆಗೆ ನಡುವೆ ವಿಚಾರವಾದಿಗಳನ್ನು ಕರೆತಂದು ಕೂರಿಸಲಾಗಿದ್ದ ಚರ್ಚೆಯೊಂದನ್ನು ನೋಡುತ್ತಿದ್ದೆ. ಜ್ಯೋತಿಷಶಾಸ್ತ್ರದಲ್ಲಿ ಮಂಗಳನ ಬಗ್ಗೆ ಹೀಗೆ ಹೇಳಿದೆ, ಹಾಗೆ ಹೇಳಿದೆ. ಅದೇ ಸತ್ಯ; ಭಾರತೀಯ ಋಷಿ ಮುನಿಗಳು ಅಣುವಿನ ಬಗ್ಗೂ ಪ್ರಸ್ತಾಪಿಸಿದ್ದಾರೆ, ಅವರಿಗೆಲ್ಲ ತಿಳಿದಿತ್ತು ಎಂಬಂತೆ ಆ ಶಾಸ್ತ್ರದವರು ಅನ್ನುತ್ತಿದ್ದರೆ ಮತ್ತೊಂದೆಡೆ ಹಾಗಾದ್ರೆ ಅವರಿಗೆ ಅಣುಬಾಂಬ್ ತಿಳಿದಿತ್ತಾ? ಇದೆಲ್ಲ ನಾನ್ಸೆನ್ಸ್ ಎಂದು ಆಧುನಿಕ ಜ್ಞಾನ ಪ್ರತಿಪಾದಕರು ಬಿಸಿಬಿಸಿ ಚರ್ಚೆ ಮಾಡುತ್ತಿದ್ದರು.ತಮ್ಮ ತಮ್ಮ ಪ್ರತಿಪಾದನೆಗೆ ಎರಡೂ ಗುಂಪಿನವರೂ ಬಲವಾಗಿ ಅಂಟಿಕೊಂಡೇ ಇದ್ದರು. ಸಮಯವಾಯ್ತು, ಚರ್ಚೆ ನಿಂತಿತು. ಇಂಥ ಚರ್ಚೆಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ.

ಕಾರಣ ಇಷ್ಟೇ. ಭಾರತದ ಪ್ರಾಚೀನ ಜ್ಞಾನ ಅಂದರೆ ಇಲ್ಲಿ ಚಂದ್ರ, ಸೂರ್ಯ, ಮಂಗಳ ಮೊದಲಾದವುಗಳ ಬಗ್ಗೆ ಜ್ಯೋತಿಷಶಾಸ್ತ್ರದಲ್ಲಿ ಹೇಳಿರುವ ಮಾತುಗಳು ಅಥವಾ ಪಾರಂಪರಿಕ ಜ್ಞಾನ. ಇವುಗಳ ವಿವರ ಭಾಸ್ಕರಾಚಾರ್ಯ, ವರಾಹಮಿಹಿರ ಮೊದಲಾದವರ ಕೃತಿಗಳಲ್ಲಿ ತಕ್ಕಮಟ್ಟಿಗೆ ದೊರೆಯುತ್ತದೆ. ಇದನ್ನು ಇಂದಿನ ಜ್ಯೋತಿಷ್ಕರು ತುಸು ತಿಳಿದಿರುತ್ತಾರೆ. ಇನ್ನು ಆಧುನಿಕ ವಿಜ್ಞಾನ ಕುರಿತು ಮಾತನಾಡುವವರು ವಿಜ್ಞಾನಿಗಳ ಸಾಧನೆಯನ್ನು ಪತ್ರಿಕೆಗಳಲ್ಲಿ ಓದಿದವರೋ ವಿಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಪಾಠ ಮಾಡುವವರೋ ಆಗಿದ್ದವರು. ಇವರಲ್ಲಿ ಎರಡೂ ವರ್ಗದವರೂ ಈ ಎರಡೂ ಕ್ಷೇತ್ರದ ಜ್ಞಾನ ಸೃಷ್ಟಿಗೆ ಕಾರಣರಾದವರಲ್ಲ, ಬದಲಿಗೆ ಯಾರೋ ಮಾಡಿದ ಪ್ರಯೋಗ-ಅದರ ಫಲಿತಗಳ ಅಂತಿಮ ಫಲಾನುಭವಿಗಳು.

ಮತ್ತಷ್ಟು ಓದು »

14
ಸೆಪ್ಟೆಂ

ಧರ್ಮ ಮತ್ತು ಅಂಧತ್ವ

-ಡಾ ಅಶೋಕ್ ಕೆ ಆರ್.

World_Religionಆಗ ನಾನು ಕಲ್ಬುರ್ಗಿಯಲ್ಲಿ ಓದುತ್ತಿದ್ದೆ. ಗೆಳೆಯನೊಬ್ಬನನ್ನು ಕಾಣುವ ಸಲುವಾಗಿ ಕಲ್ಬುರ್ಗಿಯಿಂದ ಲಿಂಗಸೂರು ಕಡೆಗೆ ಹೋಗುವ ಬಸ್ಸನ್ನೇರಿದೆ. ದಾರಿ ಮಧ್ಯದಲ್ಲಿ ಕುಟುಂಬವೊಂದು ಬಸ್ಸಿನೊಳಗೆ ಬಂತು. ಮಗ, ಸೊಸೆ ಮತ್ತು ಅತ್ತೆ ಎಂಬುದು ಅವರ ಮಾತಿನಿಂದ ಅರಿವಾಗುತ್ತಿತ್ತು. ಅದು ಮುಸ್ಲಿಂ ಕುಟುಂಬವೆಂದು ತಿಳಿದಿದ್ದು ಬುರ್ಖಾ ಧರಿಸಿದ್ದ ಸೊಸೆಯ ಉಡುಪಿನಿಂದ. ಉತ್ತರ ಕರ್ನಾಟಕದ ಕಡೆ (ನಂತರದ ದಿನಗಳಲ್ಲಿ ಕರಾವಳಿ ಭಾಗದಲ್ಲೂ ಕಂಡಂತೆ) ಮುಸ್ಲಿಮರನ್ನು ಅವರ ಮಾತಿನ ದಾಟಿಯಿಂದ ಗುರುತು ಹಿಡಿಯಲಾಗುವುದಿಲ್ಲ ನಮ್ಮ ಹಳೆ ಮೈಸೂರು ಭಾಗದಲ್ಲಿ ಗುರುತಿಸುವಂತೆ, ಮತ್ತು ಬಹುತೇಕ ಎಲ್ಲ ಕನ್ನಡ ಚಿತ್ರಗಳಲ್ಲೂ ತೋರಿಸಿರುವಂತೆ. ಅಂದು ಬಸ್ಸೇರಿದ ಕುಟುಂಬದಲ್ಲಿ ಅತ್ತೆ ಉತ್ತರ ಕರ್ನಾಟಕದ ಕಡೆಯ ಸೀರೆಯನ್ನು ಉಟ್ಟಿದ್ದರು, ಸೊಸೆ ಬುರ್ಖಾಧಾರಿಯಾಗಿದ್ದರು.

ಕಳೆದೊಂದು ವಾರದಿಂದ ಅಂತರ್ಜಾಲ ತಾಣಗಳಲ್ಲಿ ಬುರ್ಖಾದ ಬಗೆಗಿನ ಚರ್ಚೆ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಮೇಲಿನ ಘಟನೆ ನೆನಪಾಯಿತು. ‘ನಾನು ವಿವಾದದ ವಿಷಯಗಳನ್ನು ಎತ್ತಿಕೊಂಡು ಮಾತನಾಡುತ್ತಿದ್ದೇನೋ ಅಥವಾ ನಾನು ಮಾತನಾಡಿದ್ದೆಲ್ಲವೂ ವಿವಾದವಾಗುತ್ತೋ ಗೊತ್ತಿಲ್ಲ’ ಎಂದೇ ಮಾತುಗಳನ್ನಾರಂಭಿಸಿದ್ದ ದಿನೇಶ್ ಅಮೀನ್ ಮಟ್ಟುರವರ ಮಾತುಗಳು ಮತ್ತೆ ಚರ್ಚೆಗಳೊಂದಷ್ಟನ್ನು ಹುಟ್ಟುಹಾಕಿವೆ. ಪತ್ರಕತ್ರ ಬಿ.ಎಂ.ಬಷೀರ್‍ರವರ “ಬಾಡೂಟದ ಜೊತೆ ಗಾಂಧಿ ಜಯಂತಿ” ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ. ಅವರು ಮೋದಿಯ ಬಗ್ಗೆ, ಮಾಧ್ಯಮದ ಬಗ್ಗೆ, ಮಂಗಳೂರಿನ ಕೋಮು ಸಾಮರಸ್ಯದ ಬಗ್ಗೆ, ಆ ಕೋಮು ಸಾಮರಸ್ಯದಿಂದಲೇ ಹುಟ್ಟಿದ ಕೋಮುವಾದತನದ ಬಗ್ಗೆ, ಕೋಮುವಾದಿಗಳ ಅಟ್ಟಹಾಸದ ನಡುವೆಯೇ ನಿಜ ಜಾತ್ಯತೀತ ಮನೋಭಾವದ ಧರ್ಮಸಹಿಷ್ಣುಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ಕೊನೆಗೆ ಅವರ ಭಾಷಣ ಚರ್ಚೆಗೊಳಗಾಗುತ್ತಿರುವುದು ಅವರು ಪ್ರಸ್ತಾಪಿಸಿದ ಬುರ್ಖಾ ಪದ್ಧತಿಯ ಬಗೆಗೆ ಮಾತ್ರ! ಅವರು ಬುರ್ಖಾ ವಿಷಯಕ್ಕೆ ಬರುವುದಕ್ಕೆ ಮೊದಲು ಮುಸ್ಲಿಂ ಸಮಾಜದ ಒಳಬೇಗುದಿಗಳನ್ನು ಸಮಾಜದ ಮುಂದೆ ತೆರದಿಡುವ ಕೆಲಸವನ್ನು ಬೋಳುವಾರ ಮೊಹಮದ್, ಸಾರಾ ಅಬೂಬಕ್ಕರ್, ಫಕೀರ್ ಮೊಹಮದ್ ಕಟ್ಪಾಡಿ ಸಮರ್ಥವಾಗಿ ನಿರ್ವಹಿಸಿದ್ದಾರೆ. ಅವರು ಹಾಕಿದ ದಾರಿಯಲ್ಲಿ ಜ್ಯೋತಿಯನ್ನಿಡಿದು ನಡೆಯುವವರ ಕೊರತೆ ಎದ್ದು ಕಾಣುತ್ತಿದೆ ಎಂಬ ಮಾತುಗಳನ್ನು ಹೇಳಿದ್ದಾರೆ. ಬಿ.ಎಂ.ಬಷೀರ್ ಸ್ವಲ್ಪ ಸಾಫ್ಟ್ ಕಾರ್ನರಿನಲ್ಲಿ ಬರೆಯೋದು ಜಾಸ್ತಿ. ಮುಸ್ಲಿಂ ಸಮುದಾಯದ ತಲ್ಲಣಗಳು ಈ ಪುಸ್ತಕದಲ್ಲಿ ಕಾಣಸಿಗುತ್ತಿಲ್ಲ ಎಂದು ಸಲಹೆಯನ್ನು ಕೊಟ್ಟಿದ್ದಾರೆ. ಮುಸ್ಲಿಮನಾದವನು ಆ ಸಮುದಾಯದ ತಲ್ಲಣಗಳನ್ನು ಸಮರ್ಥವಾಗಿ ಬಿಂಬಿಸಲು ಸಾಧ್ಯ ಎಂಬುದು ಎಷ್ಟು ಸತ್ಯವೋ ಮುಸ್ಲಿಂ ಲೇಖಕನಾದ ಮಾತ್ರಕ್ಕೆ ಮುಸ್ಲಿಂ ಸಮುದಾಯದ ತಲ್ಲಣಗಳನ್ನಷ್ಟೇ ಬರೆಯಬೇಕು ಎಂಬುದೂ ಒಪ್ಪತಕ್ಕ ವಿಷಯವೇನಲ್ಲ. ಮತ್ತಷ್ಟು ಓದು »

12
ಸೆಪ್ಟೆಂ

ಕಿಡಿ ಹಚ್ಚಲು ಸುಟ್ಟು ಬೂಧಿಯಾಗುವ ಹೆಣಕ್ಕೆ ನೂರು ವಿಧಿಗಳ ಅಂತ್ಯ ಸಂಸ್ಕಾರ….

-ಎಸ್.ಎನ್.ಭಾಸ್ಕರ್‍

ihk

 

ಮಾನವನನ್ನೂ ಒಳಗೊಂಡಂತೆ ಹಸಿವು, ನಿದ್ರೆ, ಊಟ, ವಿಸರ್ಜನೆಗಳು, ಕಾಮ ಇವು ಯಾವುದೇ ಜೀವಿ ಅಥವಾ ಪ್ರಾಣಿಯ ಮೂಲಭೂತ ಕ್ರಿಯೆಗಳು. ಈ ಕ್ರಿಯೆಗಳಲ್ಲಿ ಸ್ವಲ್ಪವೇ ಏರು ಪೇರಾದರೂ ಸಹಾ ಜೀವಿಯ ಪ್ರಾಣಕ್ಕೆ ಸಂಚಕಾರ ಕಟ್ಟಿಟ್ಟ ಬುತ್ತಿ. ಬುದ್ದಿಶಕ್ತಿ, ತರ್ಕ, ಜ್ಞಾನ, ಚಿತ್ತ ಇವುಗಳ ಕಾರಣವಾಗಿ ಮಾತ್ರ ಮಾನವ ಇತರ ಪ್ರಾಣಿಗಳಿಗಿಂತ ಬಿನ್ನವಾಗಿದ್ದಾನೆಯೇ ಹೊರತು ಉಳಿದಂತೆ ಮಾನವ ಸಹಾ ಮೂಲತಃ ಪ್ರಾಣಿಯೇ ಎಂಬುದು ಎಲ್ಲರು ಒಪ್ಪಿರತಕ್ಕಂತಹ ಸಂಗತಿಯೇ ಆಗಿದೆ. ಈ ಮೂಲಭೂತ ಕ್ರಿಯೆಗಳನ್ನು ಮೀರಿ ನಿಲ್ಲುವುದು ಅಥವಾ ಇವುಗಳನ್ನು ಗೆದ್ದು ಜೀವಿಸಲು ಯತ್ನಿಸುವುದು ತಾನು ಪ್ರಾಣಿಯೇ ಅಲ್ಲ ಎಂದು ತೋರ್ಪಡಿಸುಚ ಯತ್ನವಾಗಿರುತ್ತದೆ. ಅಸಲಿಗೆ ಗೆಲುವಾದರೂ ಯಾರ ವಿರುದ್ದ ? ಸಕಲ ಜೀವಸಂಕುಲದ ವಿರುದ್ದವೇ ? ಈ ಪ್ರಕೃತಿಯ ವಿರುದ್ದವೇ ? ಜೀವಿ ಹಾಗೂ ಪ್ರಕೃತಿಯನ್ನು ಹೊತ್ತ ಭೂಮಂಡಳದ ವಿರುದ್ದವೇ ? ಭೂಮಿಯ ಅಸ್ತಿತ್ವದ ಆಧಾರವಾಗಿರುವ ಸೂರ್ಯವ ವಿರುದ್ದವೇ ? ಅದಕ್ಕೂ ಮೀರಿ ಇಡೀ ವಿಶ್ವದ ವಿರುದ್ದವೇ ? ಸುತ್ತಲೂ ಗೆರೆಯೊಂದನ್ನು ಗೀಚಿ ಮೀರಿ ನಡೆದರೆ ಶಿಕ್ಷಿಸಲು ಭ್ರಮೆಯೊಂದನ್ನು ಹುಟ್ಟಿಸಿ ಹತ್ತು ಹಲವು ನಿಷೇಧಗಳನ್ನು ತಾವೇ ಹೇರಿಕೊಂಡು, ತಿನ್ನಲೊಂದು ನಿಯಮ, ತೇಗಲೊಂದು ನಿಯಮಗಳನ್ನು ಹಾಕಿಕೊಂಡು ಬಾಳುವ ಬದುಕಿನ ಸಾರ್ಥಕ್ಯವಾದರೂ ಏನು ? ಡಾ.ಯು.ಆರ್‍. ಅನಂತ ಮೂರ್ತಿ ಯವರ ಸಂಸ್ಕಾರ ಕಾದಂಬರಿಯ ಒಟ್ಟು ಸಾರಾಂಶ ಸಹಾ ಇದೇ ಆಗಿದೆ. ಅರ್ಥವಿಲ್ಲದ ಆಚಾರಗಳನ್ನು, ತರ್ಕಹೀನ ಸಂಪ್ರದಾಯಗಳನ್ನು ಕಡೆಗಣಿಸಿ ಬದುಕಿನ ನೆಲೆಯನ್ನು ವಿಸ್ತರಿಸಿ ಅರಿಯುವ ಪ್ರಯತ್ನ ಈ ಕಾದಂಬರಿಯಲ್ಲಿ ಕಂಡು ಬರುತ್ತದೆ. ಹಲವು ವಿವಾದಗಳನ್ನೂ ಮೀರಿ ಉನ್ನತ ವೈಚಾರಿಕ ಚಿಂತನೆಯ ಹರಿವಿನೊಂದಿಗೆ ಡಾ. ಯು.ಆರ್‍. ಅನಂತ ಮೂರ್ತಿಯವರ ಬರಹಗಳು ಪ್ರಿಯವೆನಿಸುತ್ತದೆ.

ಮತ್ತಷ್ಟು ಓದು »

22
ಆಗಸ್ಟ್

ಸತ್ಯ ಕೂಡ ಚಲನಶೀಲ ಎಂದರಿವು ಮೂಡಿಸಿದ ಅನಂತಮೂರ್ತಿ

-ಡಾ ಅಶೋಕ್ ಕೆ ಆರ್. 

kirananna_n

ಜಾತ್ಯತೀತವಾಗಿಯೇ ಬದುಕಿ ಬರೆದು ಬೆಳೆದ ಅವರು ಕುಮಾರಸ್ವಾಮಿ, ದೇವೇಗೌಡರನ್ನು ಇದ್ದಕ್ಕಿದ್ದಂತೆ ಬೆಂಬಲಿಸಿಬಿಡುತ್ತಾರೆ, ಕೆಲವೇ ವರುಷಗಳಲ್ಲಿ ಜೀವನಪರ್ಯಂತ ವಿರೋಧಿಸಿಕೊಂಡೇ ಬಂದಿದ್ದ ಕಾಂಗ್ರೆಸ್ಸನ್ನು ಸಿದ್ಧರಾಮಯ್ಯನವರ ಮೇಲಿನ ನಂಬುಗೆಯಿಂದ ಗೆಲ್ಲಿಸಿ ಎಂದು ಪತ್ರಿಕಾ ಹೇಳಿಕೆ ಕೊಡುತ್ತಾರೆ. ಮೋದಿಯನ್ನು ವಿರೋಧಿಸುವ ಏಕೈಕ ಕಾರಣಕ್ಕೆ ಅದರಷ್ಟೇ ಅಪಾಯಕಾರಿ ಎಂಬ ಅರಿವಿದ್ದೂ ಕಾಂಗ್ರೆಸ್ಸಿಗೆ ಮತಹಾಕಿ ಎಂದು ಹೇಳಿಬಿಡುತ್ತಾರೆ. ಇನ್ನೊಂದೈದು ವರುಷಗಳು ಅವರು ಬದುಕಿದ್ದರೆ ಮೋದಿ ಸಂಪೂರ್ಣ ಸರಿಯಿಲ್ಲದಿದ್ದರೂ ಪರ್ಯಾಯಗಳಿಲ್ಲದ ಕಾರಣ, ಇರುವ ಪರ್ಯಾಯಗಳು ಮೋದಿಗಿಂತ ಅಪಾಯಕಾರಿಯಾಗಿರುವ ಕಾರಣ ಮೋದಿಯನ್ನೇ ಗೆಲ್ಲಿಸಿದರೆ ಒಳ್ಳೆಯದೇನೋ ಎಂದು ಹೇಳಿಕೆ ನೀಡಿದ್ದರೂ ಅನಂತಮೂರ್ತಿಯವರ ಬಗೆಗೆ ಅಚ್ಚರಿಯಾಗುತ್ತಿರಲಿಲ್ಲ. ಇದು ಅವಕಾಶವಾದಿತನ, ಸ್ವಾರ್ಥಕ್ಕಾಗಿ ಕ್ಷಣಕ್ಕೊಂದು ಬಣ್ಣ ಬದಲಿಸುವ ನೀಚತನ – ಇನ್ನು ಅನೇಕಾನೇಕ ರೀತಿಯಲ್ಲಿ ಅವರನ್ನು ಟೀಕಿಸಿದ್ದರೂ ಅವರದಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳುತಿರಲಿಲ್ಲವೇನೋ. ಯಾಕೆಂದರೆ ಅನಂತಮೂರ್ತಿ (ನಾನವರನ್ನು ಅವರ ಬರಹಗಳ ಮೂಲಕ ತಿಳಿದುಕೊಂಡಂತೆ) ಇದ್ದಿದ್ದೇ ಹಾಗೆ. ಸತ್ಯವೆಂಬುದು ಅವತ್ತಿನ ಆ ಮಟ್ಟಿಗಿನ ವಾಸ್ತವವೇ ಹೊರತು ಅದು ಸರ್ವಕಾಲಿಕ ಸತ್ಯವಾಗಲು ಸಾಧ್ಯವೇ ಇಲ್ಲ ಎಂಬುದು ಅವರ ಲೇಖನಗಳನ್ನು ಓದಿದಾಗ ಅರಿವಾಗುತ್ತದೆ.

ಉಂಡವರ ತೇಗು ಉಳಿದವರ ಕೊರಳ ಉರುಲಾಗದಿರಲಿ – ಯು.ಆರ್.ಎ

ಅನಂತಮೂರ್ತಿ ಕೆಲವರಿಗೆ ಮೇಷ್ಟ್ರಾಗಿ, ಕೆಲವರಿಗೆ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಯಾಗಿ, ಇನ್ನು ಹಲವರಿಗೆ ಚಳುವಳಿಕಾರನಾಗಿ ದಕ್ಕಿದರೆ ಬಹುತೇಕರಿಗೆ ಅವರು ದಕ್ಕಿದ್ದು ಅವರ ಬರಹಗಳ ಮೂಲಕ ಲೇಖಕರಾಗಿ. ಅವರ ಕೆಲವು ಇತ್ತೀಚಿನ ಲೇಖನಗಳನ್ನು ಓದುತ್ತಿದ್ದಾಗ ಅವರ ಹಳೆಯ ಲೇಖನಗಳಲ್ಲಿ ಇದಕ್ಕೆ ತದ್ವಿರುದ್ದವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಂತಿತ್ತಲ್ಲ ಎಂಬ ಆಲೋಚನೆ ಮೂಡಿದರೆ ಅದು ಸಮಾಜದ ಚಲನಶೀಲತೆಯ ಬಗೆಗಿನ ನಂಬುಗೆಯನ್ನು ಧೃಡಪಡಿಸುತ್ತಿತ್ತೇ ಹೊರತು ಅನಂತಮೂರ್ತಿಯವರ ಅನುಕೂಲ ಸಿದ್ಧಾಂತವನ್ನಲ್ಲ. ಒಂದು ಇಸಂಅನ್ನು ಒಪ್ಪಿಕೊಂಡವರು ಆ ಇಸಂನಲ್ಲಿ ತಪ್ಪುಗಳಿದ್ದಾಗ್ಯೂ ಅದನ್ನೇ ಅಪ್ಪಿ ಒಪ್ಪಬೇಕೆನ್ನುವವರಿಗೆ ಅನಂತಮೂರ್ತಿ ದ್ವಂದ್ವದ ಮೂರ್ತಿಯಾಗಿ ಕಂಡಿದ್ದರೆ ಅಚ್ಚರಿಪಡಬೇಕಿಲ್ಲ. ಹಳೆಯ ಅಭಿಪ್ರಾಯ ತಪ್ಪಾಗಿದ್ದರೆ ಅದನ್ನು ಒಪ್ಪುವ ಗುಣ ಎಲ್ಲರಲ್ಲೂ ಕಾಣುವುದು ಕಷ್ಟಸಾಧ್ಯ. ಮತ್ತಷ್ಟು ಓದು »

16
ಆಗಸ್ಟ್

ಸಾಮಾನ್ಯನ ಕಣ್ಣಲ್ಲಿ ಕರಾವಳಿ ಕೋಮುವಾದ

-ಪ್ರಸಾದ್ ಗಣಪತಿ 

kOmuvaadaಪದೇ ಪದೇ ಕರಾವಳಿಯಲ್ಲಿ ಗಲಭೆಯಾದಾಗ ಕರಾವಳಿ ಕೋಮುವಾದ, ಕರಾವಳಿ ತಾಲಿಬಾನ್ ಎನ್ನುವ ಮಾತುಗಳು ಕೇಳಿ ಬರುತ್ತವೆ. ಪಕ್ಷವೊಂದರ ಆಡಳಿತಾವಧಿಯಲ್ಲಿ ನಡೆದ ಒಂದು ಸಮುದಾಯದ ಓಲೈಕೆ ನೀತಿಗಳು, ಹಾಗೂ ಒಂದು ಸಮುದಾಯದ ಮೇಲಿನ ಹಲ್ಲೆಗಳ ಬಗ್ಗೆ ತಳೆದ ಮೃದು ನೀತಿಗಳು ಈ ಅಸಹನೆ ಇದರ ಬೆನ್ನಿಗಿದ್ದಾವೆ ಎಂದು ಯಾರು ಹೇಳುವುದಿಲ್ಲ. ಪುತ್ತೂರಿನ ಹಿಂದೂ ಯುವತಿ ಸೌಮ್ಯ ಭಟ್ ಳನ್ನು ಇರಿದು ಕೊಂದಿದ್ದು, ಕಾಟಿಪಳ್ಳದಲ್ಲಿ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ, ಬಳ್ಕುಂಜೆ ರೇಪ್ ಮತ್ತು ಆತ್ಮಹತ್ಯೆ, ಲವ್ ಜಿಹಾದ್ ಮತ್ತು ಸಾಮಾಜಿಕ ತಾಣಗಳಲ್ಲಿ ಬೆತ್ತಲೆ ಚಿತ್ರಗಳ ( ಹಿಂದೂ ಯುವತಿಯರ ಚಿತ್ರ) ಈ ರೀತಿಯ ಪ್ರಕರಣಗಳಾದಗ ಸುಮ್ಮನಿರುವ ಬುದ್ಧಿ ಜೀವಿ ಬಳಗ, ಇನ್ನೊಂದು ಸಮುದಾಯದ ಮೇಲೆ ಹಲ್ಲೆ ನಡೆದಾಗ ಮಾತನಾಡುವುದು, ದೂರದೂರಲ್ಲಿ ಕುಳಿತು ಒಂದು ಪ್ರದೇಶದ ಜನರನ್ನು ಕೋಮುವಾದಿಗಳೆನ್ನುವುದು ಸತ್ಯಕ್ಕೆ ಅಪಚಾರವೆಸಗುವ ಕೆಲಸ. ಹಿಂದೆ ರೆಸಾರ್ಟ್ ಅಟ್ಯಾಕ್ ಆದಾಗ ಬರೆದ ಒಂದು ಲೇಖನದಲ್ಲಿ ನನ್ನ ಗ್ರಹಿಕೆಯನ್ನು ಬರೆದಿದ್ದೇನೆ.

ದೃಶ್ಯ ಮಾಧ್ಯಮದಲ್ಲಿ ಒಂದೇ ಸವನೆ ಮಂಗಳೂರಿನ ಪಡೀಲ್‌ನಲ್ಲಿ ನಡೆದ ಯುವಕ- ಯುವತಿಯರ ಮೇಲಿನ ಹಲ್ಲೆಯನ್ನು ನೋಡುತ್ತಾ ಯಾವುದು ಸರಿ ? ಯಾವುದು ತಪ್ಪು ? ಎಂದು ನಿರ್ಧರಿಸಲಾಗದ ಸ್ಥಿತಿಯಲ್ಲಿ ಜನರು ಇರಬಹುದುದಾದ ಈ ಹೊತ್ತಿನಲ್ಲಿ ನನ್ನ ಅಭಿಪ್ರಾಯ ಬರೆಯುತ್ತಿರುವೆ. ಸಾಮಾನ್ಯವಾಗಿ ಕೋಮುವಾದ, ಧರ್ಮ ರಕ್ಷಣೆಯ ಕೃತ್ಯವೆಂದು ಹೇಳಲ್ಪಡುತ್ತಿರುವ ಇವು ಇನ್ನೊಂದು ಮಗ್ಗುಲಲ್ಲಿ ನೋಡಿದರೆ ಸಾಂಸ್ಕೃತಿಕ,ಸಾಮಾಜಿಕ, ಸಂಘರ್ಷವಾಗಿ ಗೋಚರಿಸುತ್ತವೆ. ಸಾಮಾನ್ಯವಾಗಿ ಇಲ್ಲಿ ಏನು ನಡೆಯುತ್ತಿದೆ ಎಂದು ಇತರೆ ಪ್ರದೇಶದಲ್ಲಿ ಕುಳಿತವರಿಗೆ ಅರ್ಥವಾಗುವುದು ಕೊಂಚ ಕಷ್ಟ.

ಮತ್ತಷ್ಟು ಓದು »

11
ಆಗಸ್ಟ್

ಜನಮಾನಸದ “ಚಾಚಾ ಚೌಧರಿ” – ಪ್ರಾಣ್ ಕುಮಾರ್ ಶರ್ಮಾ

ರಾಘವೇಂದ್ರ ಅಡಿಗ ಎಚ್ಚೆನ್.

pran

(ಖ್ಯಾತ ವ್ಯಂಗ್ಯಚಿತ್ರಕಾರ, ‘ಚಾಚಾ ಚೌಧರಿ’, ‘ರಾಮನ್’, ‘ಶ್ರೀಮತಿ’, ‘ಪಿಂಕಿ’ ಇವೇ ಮೊದಲಾದ  ಸದಾ ಕಾಲ ನೆನಪಿನಲ್ಲಿ ಉಳಿಯುವಂತಹಾ ಪಾತ್ರಗಳ ಸೃಷ್ಟಿಕರ್ತರಾಗಿದ್ದ ಪ್ರಾಣ್ ಕುಮಾರ್ ಶರ್ಮ ಇದೇ ಆಗಸ್ಟ್ ೦6 ರಂದು ದೆಹಲಿಯ ಗುರ್ಗಾಂವ್ ನಲ್ಲಿ ನಿಧನರಾಗಿದ್ದಾರೆ. ಈ ಸಮಯದಲ್ಲಿ ಪ್ರಾಣ್ ಎಂಬ ವ್ಯಂಗ್ಯಚಿತ್ರಕಾರನ ಬದುಕಿನ ಚಿತ್ರಣವನ್ನೊಮ್ಮೆ ಅವಲೋಕಿಸೋಣ……)

 ಬಾಲ್ಯವೃತ್ತಿ ಬದುಕು

ಇಂದಿನ ಪಾಕಿಸ್ತಾನದಲ್ಲಿನ ಲಾಹೋರ್ ಬಳಿಯ ಕಸೂರ್ ಎಂಬ ಚಿಕ್ಕ ಗ್ರಾಮದಲ್ಲಿ 1938, ಆಗಸ್ಟ್ 15 ರಂದು ಪ್ರಾಣ್ ಕುಮಾರ್ ಶರ್ಮಾರವರ ಜನನವಾಯಿತು. 1947 ರ ಬಳಿಕ ಪ್ರಾಣ್ ರವರ ಕುಟುಂಬ ಗ್ವಾಲಿಯರ್ ನಗರಕ್ಕೆ ತನ್ನ ವಾಸವನ್ನು ಬದಲಾಯಿಸಿತು.ಪ್ರಾಣ್ ರವರು ಗ್ವಾಲಿಯರ್ ನ ಇವ್ನಿಂಗ್ ಕ್ಯಾಂಪ್ ಕಾಲೇಜಿನಲ್ಲಿ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಬಳಿಕ ಮುಂಬೈನ ಜೆಜೆ ಸ್ಕೂಲ್ ಆಫ್ ಆರ್ಟ್ಸ್ ನಲ್ಲಿ ನಾಲ್ಕು ವರ್ಷಗಳ ಫೈನ್ ಆರ್ಟ್ಸ್(ಚಿತ್ರಕಲಾ ತರಬೇತಿ) ಪದವಿ ಶಿಕ್ಷಣವನ್ನುಪಡೆದುಕೊಂಡರು.

ತಮ್ಮ ವೃತ್ತಿ ಬದುಕಿನ ಪ್ರಾರಂಭದಲ್ಲಿ ಕೆಲಕಾಲ ಚಿತ್ರಕಲಾ ಶಿಕ್ಷಕರಾಗಿ ಕೆಲಸ ಮಾಡಿದ್ದ ಪ್ರಾಣ್ 1960 ರಲ್ಲಿ ದೆಹಲಿ ಮೂಲದ ‘ಮಿಲಾಪ್’ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಅಲ್ಲಿ ವರು ‘ಬಾಬು’ ಎನ್ನುವ ಪಾತ್ರವನ್ನು ಸೃಷ್ಟಿಸಿವ್ಯಂಗ್ಯಚಿತ್ರಗಳನ್ನು ರಚಿಸಿದ್ದರು. 1969 ರಲ್ಲಿ ಹಿಂದಿ ನಿಯತಕಾಲಿಕೆ ‘ಲಾಟ್ ಪಾಟ್’ ಗಾಗಿ ಅವರು ರಚಿಸಿದ ‘ಚಾಚಾ ಚೌಧರಿ’ ವ್ಯಂಗ್ಯಚಿತ್ರ ಪಾತ್ರವು ಅವರಿಗೆ ದೇಶ ವಿದೇಶಗಳಲ್ಲಿ ಖ್ಯಾತಿಯನ್ನು ತಂದುಕೊಟ್ಟಿತು. ಪ್ರಾಣ್ ಚಾಚಾ ಚೌಧರಿಯ ಪಾತ್ರವನ್ನು ಸೃಷ್ಟಿಸಿದವೇಳೆಯಲ್ಲಿ ದೇಶಾದ್ಯಂತ ಜನರು ಸೂಪರ್ ಮ್ಯಾನ್, ಪ್ಯಾಂಟಮ್ ನಂತಹಾ ವ್ಯಂಗ್ಯಚಿತ್ರ ಸರಣಿಯನ್ನು ಮೆಚ್ಚಿಕೊಂಡಿದ್ದರು. ಅವೆಲ್ಲವೂ ವಿದೇಶೀ ಮೂಲದ ವ್ಯಂಗ್ಯಚಿತ್ರಗಳಾಗಿದ್ದವು. ಆದರೆ ಪ್ರಾಣ್ ರವರ ‘ಚಾಚಾ ಚೌಧರಿ’ಪ್ರಾರಂಭವಾದ ಅತ್ಯಂತ ಶೀಘ್ರದಲ್ಲಿ ದೇಸವಿದೇಶಗಳ ಜನರು ಮೆಚ್ಚುವಂತಾಯಿತು. ಪ್ರಾಣ್ ರವರೇ ತಮ್ಮ ಒಂದು ಸಂದರ್ಶನದಲ್ಲಿ ಚಾಚಾ ಚೌಧರಿ ಪಾತ್ರದ ಕುರಿತು ಈ ರೀತಿಯಾಗಿ ಅಭಿಪ್ರಾಯ ಪಟ್ಟಿದ್ದಾರೆ – “Each family has its own wise old man. He solved his problems with common sense, but with a touch of humor. Humor is the basis of my cartoon.” ‘ರಾಮನ್’, ‘ಪಿಂಕಿ’, ‘ಬಿಲ್ಲೂ’, ‘ಶ್ರೀಮತಿ’ ಇವೇ ಮೊದಲಾದವು ಪ್ರಾಣ್ ಕುಮಾರ್ ಶರ್ಮಾರವರ ಇತರೆ ವ್ಯಂಗ್ಯಚಿತ್ರ ಪಾತ್ರಗಳಾಗಿದ್ದವು. ಮತ್ತಷ್ಟು ಓದು »

7
ಆಗಸ್ಟ್

ಏನಿದು “ಪುರೋಹಿತಶಾಹಿ”? ಅದೆಲ್ಲಿದೆ? ಅದರ ಮೇಲೇಕೆ ಇವರಿಗೆ ಈ ಪರಿ ಕೋಪ?”

– ರಾಕೇಶ್ ಶೆಟ್ಟಿ

ಗಂಗಾ ಪೂಜೆಫೇಸ್ಬುಕಿನಲ್ಲಿ ದಿನಕ್ಕೆ ಅದೆಷ್ಟು ಲಕ್ಷ ಸ್ಟೇಟಸ್ ಅಪ್ಡೇಟ್ ಗಳು ಬರುತ್ತವೆಯೋ ಗೊತ್ತಿಲ್ಲ.ಅವುಗಳಲ್ಲಿ ಜೊಳ್ಳು-ಕಾಳು ಎಲ್ಲವೂ ಇರುತ್ತವೆ.ಇತ್ತೀಚೆಗೆ ನಮ್ಮ ಮೀಡಿಯಾಗಳಲ್ಲಿ “ಪ್ರಭಾ” ಎನ್ನುವವರ ಫೇಸ್ಬುಕ್ ಟಿಪ್ಪಣಿಯ ಮೇಲೆ “ವಿ.ಆರ್ ಭಟ್” ಅವರು ಮಾಡಿದ ಪ್ರತಿಕ್ರಿಯೆ ದೊಡ್ಡ ವಿವಾದವನ್ನೇ ಸೃಷ್ಟಿಸಿ, ಭಟ್ಟರ ಮೇಲೆ ಕೇಸು ದಾಖಲಾಗಿ ಅವರ ಬಂಧನವೂ ಆಯಿತು. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾದ ಆ ಸ್ಟೇಟಸ್ಸಿನಲ್ಲಿ,ಪ್ರಭಾ ಅವರು “ಪುರೋಹಿತಶಾಹಿ” ಗಳನ್ನು ಟೀಕಿಸಿ ಅವರ ಮೇಲೆ ಸಿಟ್ಟು ಮಾಡಿಕೊಂಡು ಬರೆದಿದ್ದರು. ಭಟ್ಟರ ಕಮೆಂಟಿನ ಗಲಾಟೆಯಲ್ಲಿ ಕಳೆದು ಹೋಗಿದ್ದು, ಪ್ರಭಾ ಅವರು ಬರೆದ ಸ್ಟೇಟಸ್ಸಿನಲ್ಲಿದ್ದ “ಪುರೋಹಿತಶಾಹಿ”ಯ ಬಗ್ಗೆ ಆಗಬೇಕಿದ್ದ ಚರ್ಚೆ.

ಈ ಲೇಖನವನ್ನು ಓದುತ್ತಿರುವ ಬಹುತೇಕ ಜನ ಸಾಮಾನ್ಯರಿಗೆ “ಪುರೋಹಿತಶಾಹಿ” ಎಂದರೇನು ಎನ್ನುವ ಪ್ರಶ್ನೆ ಮೂಡಿದ್ದರೆ ಆಶ್ಚರ್ಯವೇನಿಲ್ಲ. ಹಾಗಾಗಿ ಪುರೋಹಿತಶಾಹಿಯನ್ನು ಅರ್ಥವೇನು ನೋಡೋಣ.

ಪುರೋಹಿತರು ಎಂದರೆ ದೇವರು ಮತ್ತು ಮಾನವನ ನಡುವಿನ ಮಧ್ಯವರ್ತಿಗಳು ಹಾಗೂ ಧರ್ಮದ ಏಕಸ್ವಾಮ್ಯ (ಒಂದರ್ಥದಲ್ಲಿ Copy Rights) ವನ್ನು ಹೊಂದಿದ್ದಾರೆ. ಶಾಹಿ ಎಂದರೆ ಆಳ್ವಿಕೆ ಎಂದರ್ಥ. ಪುರೋಹಿತರ ಆಳ್ವಿಕೆಯೇ “ಪುರೋಹಿತಶಾಹಿ”.

ಏನಿದು “ಪುರೋಹಿತಶಾಹಿ”? ಅದೆಲ್ಲಿದೆ? ಅದರ ಮೇಲೆಕೆ ಇವರಿಗೆ ಈ ಪರಿ ಕೋಪ?”

ಬುದ್ಧಿಜೀವಿಗಳ Definitionನ ಪ್ರಕಾರ “ಪುರೋಹಿತಶಾಹಿ”ಯೆಂದರೆ ದೇವರ ಬಗ್ಗೆ ಭಯ ಮೂಡಿಸಿ ಜನರನ್ನು ಮೂರ್ತಿ ಪೂಜೆಗಳಲ್ಲಿ ತೊಡಗಿಸಿ,ನೆಪ ಹೇಳಿ ಜೇಬು ತುಂಬಿಸಿಕೊಳ್ಳುವವರು ಮತ್ತು ಭವಿಷ್ಯ ಇತ್ಯಾದಿ ನೆಪದಲ್ಲಿ ಮೋಸ ಮಾಡುವವರು” ಅನ್ನುವ ಧಾಟಿಯಲ್ಲಿರುತ್ತದೆ. (ಬಹುಷಃ ಇದಕ್ಕಿಂತ ಉತ್ತಮ Definition ಇದ್ದರೂ ಇರಬಹುದು)

ಒಟ್ಟಾರೆಯಾಗಿ ಬುದ್ಧಿಜೀವಿಗಳ ಈ ಪುರೋಹಿತಶಾಹಿಯ ಕುರಿತ ಮೇಲಿನ Definition ಅನ್ನು ಅರ್ಥಮಾಡಿಕೊಂಡಾಗ ತಿಳಿಯುವುದೇನೆಂದರೆ, ದೇವರು ಮತ್ತು ಜನ ನಡುವಿನ ಮಧ್ಯವರ್ತಿಗಳಾದ ಈ ಪುರೋಹಿತರು ಜನರನ್ನು ನಮ್ಮ ಧರ್ಮ ಗ್ರಂಥಗಳು ಮತ್ತು ಆಚರಣೆಗಳಿಂದ ದೂರವಿರಿಸಿ ಮೂರ್ತಿ ಪೂಜೆಯ ಮೂಲಕ ಮೋಸ ಮಾಡಿ ಸಮಾಜವನ್ನು/ಧರ್ಮವನ್ನು ಹಾಳು ಮಾಡುತಿದ್ದಾರೆ”

ನಮ್ಮ ಬುದ್ಧಿಜೀವಿಗಳ ಈ ವಾದದ ಮೂಲವನ್ನು ನಿಮ್ಮ ಮುಂದೆ ಇಡಲು ಬಯಸುತ್ತೇನೆ.ಆಗ ನಮಗೆ ಮುಂದಿನ ಚರ್ಚೆಯ ಹಾದಿ ಸುಲಭವಾಗಾಹುದು.

ಮತ್ತಷ್ಟು ಓದು »

28
ಜುಲೈ

ನಾಡು- ನುಡಿ: ಮರುಚಿಂತನೆ-‘ಕರ್ಣಾಟಕ’ ದ ಇತಿಹಾಸ’-ಭಾಗ 1

ಪ್ರೊ.ರಾಜಾರಾಮ್ ಹೆಗಡೆ, ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ.

Social Science Column Logo

ಕರ್ಣಾಟಕ ಶಬ್ದದ ವ್ಯುತ್ಪತ್ತಿ ಹಾಗೂ ಇತಿಹಾಸದ ಕುರಿತು ಏಕೀಕರಣ ಹೋರಾಟ ಕಾಲದಲ್ಲಿ ಶಂಬಾ ಜೋಶಿಯವರಾದಿಯಾಗಿ ಅನೇಕ ವಿದ್ವಾಂಸರು ಚರ್ಚಿಸಿದ್ದಾರೆ. ಈ ಶಬ್ದದ ಉಲ್ಲೇಖವನ್ನು ಬಹುಶಃ ಕ್ರಿಸ್ತಶಕದ ಆದಿಯಿಂದ ವಿಭಿನ್ನ ಸಂಸ್ಕೃತ ಗ್ರಂಥಗಳಲ್ಲಿ ಗುರುತಿಸಬಹುದು. ಕನ್ನಡ ಶಾಸನಗಳಲ್ಲಿ ಈ ಶಬ್ದವು ರಾಷ್ಟ್ರಕೂಟರ ಕಾಲದಿಂದ ಕಾಣಿಸಿಕೊಳ್ಳುವುದಾಗಿ ತಿಳಿದುಬರುತ್ತದೆ. ತದನಂತರ ಇಲ್ಲಿಯ ರಾಜರನ್ನು ಕರ್ಣಾಟ ರಾಜರೆಂದೂ, ಸೈನ್ಯವನ್ನು ಕರ್ಣಾಟ ಬಲವೆಂದೂ ಸಂಸ್ಕೃತದಲ್ಲಿ ಕರೆದರೆ, ಕನ್ನಡ ನುಡಿ, ಕನ್ನಡನಾಡು ಎಂಬುದಾಗಿ ಇಲ್ಲಿಯ ಜನರು ರಾಷ್ಟ್ರಕೂಟರ ಕಾಲದಿಂದಲೇ ಕನ್ನಡ ಸಾಹಿತ್ಯದಲ್ಲಿ ಈ ಶಬ್ದವನ್ನು ಬಳಸಿದ್ದಾರೆ. ತಮಿಳರು ಇವರನ್ನು ಕನ್ನಡಿ, ಕನ್ನಡಿ ಅರಸರ್ ಎಂದು ಕರೆದಿರುವುದೂ ಕಂಡುಬರುತ್ತದೆ. ಈ ಕುರಿತು ಇಲ್ಲಿ ನೀಡಿದ ವಿವರಗಳಿಗೆ ಇನ್ನಷ್ಟು ಈಚೆಗಿನ ಹಾಗೂ ಮುಂದಿನ ವಿವರಗಳು ಸೇರಿ ಈ ಶಬ್ದ ಇನ್ನೂ ಪ್ರಾಚೀನವೆಂದು ಸಿದ್ಧವಾಗಲೂಬಹುದು. ಅದರಿಂದ ಕರ್ನಾಟಕವೊಂದು ಭೂಪ್ರದೇಶ, ಹಾಗೂ ಅದರಲ್ಲಿ ಆಡುತ್ತಿದ್ದ ಭಾಷೆ ಕನ್ನಡ ಎಂಬ ಸತ್ಯಗಳಿಗೇನೂ ಕುಂದುಬರಲಾರದೆಂಬ ತರ್ಕದಿಂದ ಮುಂದುವರಿಯೋಣ.

ನಮಗೆ ಇಲ್ಲಿರುವ ಸಮಸ್ಯೆ ಎಂದರೆ ಈ ಶಬ್ದವನ್ನು ಇಂದಿನ ನಮ್ಮ ವ್ಶೆಜ್ಞಾನಿಕ ಇತಿಹಾಸದ ಪರಿಕಲ್ಪನೆಗೆ ನಾವು ಹೇಗೆ ಒಗ್ಗಿಸಿದ್ದೇವೆ ಹಾಗೂ ಅದು ಆ ಕಲ್ಪನೆಗೆ ಎಷ್ಟರಮಟ್ಟಿಗೆ ಒಗ್ಗುತ್ತದೆ ಎಂಬ ವಿಚಾರ. ಕರ್ನಾಟಕದ ಏಕೀಕರಣ ಕಾಲದಲ್ಲಿ ಕರ್ನಾಟಕದ ಇತಿಹಾಸವನ್ನು ವ್ಶೆಜ್ಞಾನಿಕವಾಗಿ ರಚಿಸಲಾಯಿತು. ಈ ರಚನೆಯಲ್ಲಿ ಇದ್ದ ಪೂರ್ವಗೃಹೀತಗಳೆಂದರೆ: 1) ಕನ್ನಡ ಭಾಷೆಯ ಮೂಲಕ ಒಂದು ಪ್ರದೇಶವನ್ನು ಕಲ್ಪಿಸಿಕೊಳ್ಳಲು ಸಾಧ್ಯ, ಅಂಥ ಪ್ರದೇಶವೇ ಕರ್ನಾಟಕವಾಗಿದೆ. ಕರ್ನಾಟಕ ಎಂಬುದು ಒಂದು ಪ್ರಕಾರದ ರಾಷ್ಟ್ರ ಕಲ್ಪನೆ ಹಾಗೂ ಅದು ಭಾರತ ಎಂಬ ರಾಷ್ಟ್ರದ ಅಂಗಭೂತವಾಗಿದೆ. 2) ಇದೊಂದು ಸಾಂಸ್ಕೃತಿಕ ಪ್ರಭೇದವಾಗಿದೆ ಹಾಗೂ ಇದು ಭಾಷೆಯನ್ನು ಆಧರಿಸಿದೆ, ಅಂದರೆ ಕನ್ನಡ ಬಾಷೆಯ ಮೂಲಕ ಕನ್ನಡ ಸಂಸ್ಸೃತಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯ. 3) ಈಗ ಈ ಎರಡೂ ಸಂಗತಿಗಳನ್ನು ನಾವು ಮರೆತಿರುವುದರಿಂದ ಅವನ್ನು ಕಲ್ಪಿಸಿಕೊಳ್ಳುವ ಅವಸ್ಥೆ ಬಂದಿದೆ. ಆದರೆ ಅವು ಸತ್ಯವಾಗಿದ್ದಲ್ಲಿ ಅವು ಇತಿಹಾಸದಲ್ಲಿ ಸಿಕ್ಕಲೇಬೇಕು. 4) ಈ ಸಂಸ್ಕೃತಿ ಈ ಕರ್ನಾಟಕವೆಂಬ ಪ್ರದೇಶದ ಇತಿಹಾಸದ ಮೂಲಕ ಮೈದಳೆದಿರುವುದರಿಂದ ಇದರ ಇತಿಹಾಸವನ್ನು ತಿಳಿದುಕೊಂಡರೆ ಈ ಸಂಸ್ಕೃತಿಯನ್ನು ತಿಳಿದುಕೊಳ್ಳಲು ಸಾಧ್ಯ. 5) ಹಾಗಾಗಿ ಕರ್ನಾಟಕದ ಇತಿಹಾಸದ ಕುರಿತ ತಿಳುವಳಿಕೆಯಿಂದ ಅದರ ಸಂಸ್ಕೃತಿಯ ಕುರಿತ ಜಾಗೃತಿ ಮೂಡುತ್ತದೆ. 6) ಈ ಜಾಗೃತಿ ಏಕೆ ಬೇಕೆಂದರೆ: ಈ ಭಾಷೆ, ಪ್ರದೇಶ, ಸಂಸ್ಕೃತಿ ಹಾಗೂ ಇತಿಹಾಸದ ಆಧಾರದ ಮೇಲೆ ಒಂದು ಪ್ರಭುತ್ವವನ್ನು ರಚಿಸುವುದು ಸಾಧ್ಯ ಹಾಗೂ ಅಂಥ ಪ್ರಭುತ್ವವು ಈ ಭಾಷೆಯನ್ನಾಡುವ ಜನರ ಸರ್ವತೋಮುಖ ಏಳ್ಗೆಗೆ ಮಾರ್ಗವಾಗಲು ಸಾಧ್ಯ. ಈ ರೀತಿ ಇಲ್ಲಿಯ ಜನರ ಏಳ್ಗೆಗೂ ಇವರ ಇತಿಹಾಸಕ್ಕೂ ಅವಿನಾಭಾವಿ ಸಂಬಂಧ ಇದೆ ಎಂದು ನಂಬಿಕೊಂಡು ಕರ್ನಾಟಕದ ಇತಿಹಾಸದ ರಚನೆಯಾಯಿತು. ಮತ್ತಷ್ಟು ಓದು »

19
ಜೂನ್

ಕಲ್ಬುರ್ಗಿ,ಕಲ್ಲು ಮತ್ತು Colonial Consciousness

– ರಾಕೇಶ್ ಶೆಟ್ಟಿ

consciousnessಬೆಂಗಳೂರಿನ ವಿಜ್ಞಾನ ಭವನದಲ್ಲಿ ಜೂನ್ ೯ರ ಸೋಮವಾರ ನಡೆದ ಮೌಢ್ಯಮುಕ್ತ ಸಮಾಜ, ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ವಯಸ್ಸಿನಲ್ಲಿ ಹಿರಿಯರಾದ (ಕೇವಲ ವಯಸ್ಸಿನಲ್ಲಷ್ಟೇ) ಪ್ರೊ.ಎಂ.ಎಂ. ಕಲ್ಬುರ್ಗಿಯವರು, ” ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದು. ಅವುಗಳಿಗೆ ಕಾಯುವ ಶಕ್ತಿಯೂ ಇಲ್ಲ, ಕಾಡುವ ಶಕ್ತಿಯೂ ಇಲ್ಲ. ದೇವತೆ, ದೇವಾಲಯಗಳ ವಿರುದ್ಧ ಚಳವಳಿ ನಡೆಯಬೇಕು.” ಅಂತೆಲ್ಲ ಬಡಬಡಿಸಿ ಎಲ್ಲರಿಂದ ತಪರಾಕಿ ಹಾಕಿಸಿಕೊಂಡ ಮೇಲೆ “ನಾ ಹಂಗೇ ಹೇಳೇ ಇಲ್ಲಾರೀ, ನಾನು ಹಿಂದೂ ಇದ್ದೀನಿ, ನಾನ್ಯಾಕೇ ಮೂತ್ರ ಮಾಡಿ ಅಂತ ಹೇಳ್ತೀರ್ರೀ… ಅನಂತಮೂರ್ತಿ ಹಿಂಗ್ ಬರ್ದಾರಾ ಅಂತ ನಾನ್ ಸಭಿಯೋಳಗ ಹೇಳಿನ್ರೀ… ತಪ್ಪ್ ತಿಳಿ ಬ್ಯಾಡರ್ರೀ…” ಅಂತೆಲ್ಲ ಸೃಷ್ಟೀಕರಣ ಕೊಟ್ಟರು.

ನಿಜವಾಗಿ ಕಲ್ಬುರ್ಗಿಯವರ ಮನಸ್ಸಿನಲ್ಲಿದ್ದಿದ್ದು “ಮೂರ್ತಿ”ಗಳ ಮೇಲೆ ಮೂತ್ರ ಮಾಡಿದ ಹೊರೆ ಹೊರಿಸಿ ಅದರ ಜೊತೆಗೆ ಮೂರ್ತಿ ಪೂಜೆ ಮಾಡುವ ಜನರ “ಮೌಢ್ಯ” (ಅವರ ಮಂದ ಬುದ್ದಿಯ ಪ್ರಕಾರ) ನಿವಾರಿಸುವುದಾಗಿತ್ತು ಅನ್ನಿಸುತ್ತದೆ.ಕಲ್ಬುರ್ಗಿಯವರು ಹೀಗೆ ಹೇಳಿಕೆ ಕೊಡುವುದರಿಂದ ಒಂದೇ ಕಲ್ಲಿಗೆ ಎರಡು ಹಕ್ಕಿ (“ಮೂರ್ತಿ” ಮತ್ತು “ಮೌಢ್ಯ”) ಹೊಡೆಯುವ ಆಲೋಚನೆಯಲ್ಲಿದ್ದರೇನೋ.ಪಾಪ!

“ಮೂರ್ತಿ”ಗಳ ಮೇಲೆ ಕಲ್ಬುರ್ಗಿಯವರಿಗೆ ಈ ವಿಶೇಷ ಮಮತೆ ಯಾಕೆ? ಪ್ರಜಾವಾಣಿಯಲ್ಲಿ “ಮೂರ್ತಿ”ಗಳಿಗೆ ೧೦ ಲಕ್ಷ ಸರ್ಕಾರಿ ಕಾಣಿಕೆ ಕೊಟ್ಟದ್ದನ್ನು ವಿರೋಧಿಸಿ ಸೋತುಹೋಗಿದ್ದ ಕಲ್ಬುರ್ಗಿಗಳು,”ಮೂರ್ತಿಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗುವುದಿಲ್ಲ” ಅನ್ನುವ ಮೂಲಕ ಸೇಡು ತೀರಿಸಿಕೊಂಡರು, ಅನ್ನುವಲ್ಲಿಗೆ ಅವರ ಹೇಳಿಕೆಯ ಮೊದಲನೇ “ಹಕ್ಕಿ” ಯಾವುದೆಂದು ಹೊಳೆಯುತ್ತದೆ.

ಅಸಲಿಗೆ ತಪ್ಪೆಲ್ಲ ಆಯ್ಕೆ ಸಮಿತಿಯದ್ದು!
“ಪರಾವಲಂಬಿ ಜೀವಿ”ಗಳ ನಡುವೆ “ಪ್ರಶಸ್ತಿ/ಹಣ”ವನ್ನು ಸಮನಾಗಿ ಹಂಚಿದ್ದರೆ ಮೂತ್ರ,ಮೂರ್ತಿ ಇತ್ಯಾದಿ ವಿವಾದಗಳೇ ಆಗ್ತಿರ್ಲಿಲ್ಲ ಮಾರ್ರೆ. ಎಲ್ಲವನ್ನೂ ಒಬ್ಬರಿಗೆ ಕೊಟ್ಟರೆ.ಇನ್ನೊಬ್ಬರಿಗೆ (ತಮಗಾದ) ಅನ್ಯಾಯವನ್ನು ಪ್ರಶ್ನಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ(!) ಇದ್ದೇ ಇರುತ್ತದಪ್ಪ… (ಸೂ : “ಪರಾವಲಂಬಿ ಜೀವಿ”ಗಳನ್ನು ಕೆಲವರು “ಬುದ್ಧಿಜೀವಿ”ಗಳು ಅನ್ನುತ್ತಾರೆ.ನಾನು ಇನ್ಮುಂದೆ ಪ್ರೀತಿಯಿಂದ “ಪರಾವಲಂಬಿ ಜೀವಿ” ಎನ್ನುತ್ತೇನೆ)

ಮತ್ತಷ್ಟು ಓದು »

14
ಮೇ

ಶ್ರೀ ಶಂಕರಾಚಾರ್ಯ ಜೀವನ ಸಂದೇಶ

– ರಾಘವೇಂದ್ರ ಅಡಿಗ ಎಚ್ಚೆನ್

Shankaraacharya1ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ಕಳೆದ ಮೇ 4 ರಂದು ಜಗದ್ಗುರು ಆದಿ ಶಂಕರಾಚಾರ್ಯರ ಜಯಂತಿಯನ್ನು ವಿಶ್ವಾದ್ಯಂತ ಆಚರಿಸಲಾಯಿತು.

ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ತಾವು ಬದುಕಿದ್ದು ಕೇವಲ 32 ವರ್ಷಗಳಷ್ಟೇ ಆದರೂ ಆದಿ ಶಂಕರರು ತಾವು ಮಾಡಿದ ಕಾರ್ಯ, ಗಳಿಸಿದ ಕೀರ್ತಿ , ಅಪಾರವಾದುದು. ಶ್ರೀಮದ್ಭಗವದ್ಗೀತೆ, ಉಪನಿಷತ್ತುಗಳು, ಬ್ರಹ್ಮಸೂತ್ರಗಳಿಗೆ ಭಾಷ್ಪಗಳನ್ನು ಬರೆದ ಮೊದಲಿಗರು ಶ್ರೀ ಶಂಕರಾಚಾರ್ಯರು. ಶಂಕರಾಚಾರ್ಯರು ಭಾರತೀಯ ವೈಚಾರಿಕ ರಂಗದಲ್ಲಿ ಕ್ರಾಂತಿಯನ್ನೇ ಮಾಡಿದ್ದವರು. ಇವರು ಯಾವೊಂದು ಹೊಸತಾದ ಮತ, ಪಂಥಗಳನ್ನು ಸ್ಥಾಪಿಸಿಲ್ಲವಾದರೂ ಹಿಂದೂ ಧರ್ಮದಲ್ಲಿನ ವೇದಸಂಪ್ರದಾಯವನ್ನೇ ಎತ್ತಿಹಿಡಿದರು. ವೇದಗಳಲ್ಲಿನ ಸತ್ವವನ್ನೂ, ಸಾರವನ್ನು ತಮ್ಮದೇ ಆದ ನೆಲೆಯಲ್ಲಿ ನಿಷ್ಕರ್ಷಿಸುವ ಮೂಲಕ ಜಗತ್ತಿಗೆ ಪ್ರಕಾಶಪಡಿಸಿದವರು ಆಚಾರ್ಯ ಶಂಕರರು ಎಂದರೆ ತಪ್ಪಾಗಲಾರದು.

ಜೀವನ

ಅದು ಎಂಟು-ಒಂಭತ್ತನೇ ಶತಮಾನಗಳ ಮಧ್ಯದ ಅವಧಿ. ಭಾರತ ದಕ್ಷಿಣ ಸಮುದ್ರ ತೀರದ ಕೇರಳ ರಾಜ್ಯದ ಕಾಲಟಿ ಎಂಬೊಂದು ಸಣ್ಣ ಹಳ್ಳಿ. ಆ ಹಳ್ಳಿಯಲ್ಲಿ ಶಿವಗುರು ಹಾಗೂ ಆರ್ಯಾಂಬರೆನ್ನುವ ಬಡ ಬ್ರಾಹ್ಮಣಾ ದಂಪತಿಗಳು ವಾಸವಾಗಿದ್ದರು. ಊಟ, ವಸತಿಗಳಎಲ್ಲಾ ಅದು ಹೇಗೋ ದಿನನಿತ್ಯವೂ ನಡೆಯುತ್ತಿದ್ದರೂ ಆ ದಂಪತಿಗಳೈಗೆ ‘ತಮ್ಮದಾದ ಒಂದು ಮಗುವಿಲ್ಲ, ತಮಗೆ ಸಂತಾನಭಾಗ್ಯವಿಲ್ಲ’ ಎನ್ನುವ ಚಿಂತೆಯು ಬಲವಾಗಿ ಕಾಡುತ್ತಿತ್ತು. ಹೀಗಿರಲು ಇದೇ ಚಿಂತೆಯಲ್ಲಿ ಆ ಈರ್ವರೂ ತಾವು ಈ ಕುರಿತು ಪರಮೇಶ್ವರನ ಮೊರೆಹೋಗಲು ತೀರ್ಮಾನಿಸಿ ಅದರಂತೆ ಪರಮೇಶ್ವರನನ್ನು ಶ್ರದ್ದಾ ಭಕ್ತಿಗಳಿಂದ ಆರಾಧಿಸಿಲು ಮುಂದಾದಾರು. ಅದೊಂದು ದಿನ ಪರಮೇಶ್ವರನು ತಾನು ಶಿವಗುರುವಿನ ಕನಸಿನಲ್ಲಿ ಕಾಣಿಸಿಕೊಂಡು- “ಭಕ್ತಾ, ನಿನ್ನ ಪೂಜೆಗೆ ಮೆಚ್ಚಿದ್ದೇನೆ. ನಿನ್ನ ಕೋರಿಕೆಯನ್ನು ನಾನು ಈಡೇರಿಸಲಿದ್ದೇನೆ, ನಿನಗೆಂತಹಾ ಮಗನು ಬೇಕು? ಮಹಾನ್ ಜ್ಞಾನಿಯಾದ, ಆದರೆ ಅಲ್ಪಾಯುವದ ಮಗನು ಬೇಕೋ, ಇಲ್ಲವೇ ಅಲ್ಪ ಜ್ಞಾನಿಯಾದ ದೀರ್ಘಾಯುವಾದ ಮಗನು ಬೇಕೋ?” ಎಂದೆನ್ನಲು ಶಿವಗುರುವು ತಾನು ಕ್ಷಣಕಾಲವೂ ಯೋಚಿಸದೆ- “ನನಗೆ ಮಹಾಜ್ಞಾನಿಯಾದ ಮಗನು ಬೇಕು” ಎಂದೆನ್ನಲು “ತಥಾಸ್ತು” ಎಂದ ಪರಮೇಶ್ವರನು ತಾನು ಅಂತರ್ಧಾನನಾದನು. ಅದಾದ ಕೆಲ ತಿಂಗಳಿನಲ್ಲಿಯೇ ಮಾತೆ ಆರ್ಯಾಂಬಾ ಜನ್ಮತಃ ಮಹಾಜ್ಞಾನಿಯಾದ ಶಂಕರನಿಗೆ ಜನ್ಮವಿತ್ತಳು.

ಮತ್ತಷ್ಟು ಓದು »