ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

17
ಡಿಸೆ

ಸಲಿಂಗ ಕಾಮ ಕಾನೂನು ಬಾಹಿರ ಯಾಕೆ?

-ಬಾಲಚಂದ್ರ ಭಟ್

Salinga Kamigaluಸಲಿಂಗ ಕಾಮದ ಬಗ್ಗೆ ಸುಪ್ರೀಮ್ ಕೋರ್ಟ್ ಕೊಟ್ಟ ಬಹಳ ಕಾರಣಗಳಿಗಾಗಿ ಹುಬ್ಬೇರಿಸುವಂತೆ ಮಾಡಿದೆ. ಬಹಳಷ್ಟು ಜನರು ತೀರ್ಪಿನ ಬೆಂಬಲಕ್ಕಿದ್ದರೆ, ಇನ್ನು ಕೆಲವರು ಇದು ಸಲಿಂಗಿಗಳ ಹಕ್ಕು ಚ್ಯುತಿ ಎಂದು ತರ್ಕಿಸುತ್ತಿದ್ದಾರೆ. ಮೂಲತಹ ಸಲಿಂಗ ಕಾಮವೆಂಬುದು ಪೌರಾತ್ಯ, ಹಾಗೂ ಅರಬ್ ದೇಶಗಳಲ್ಲಿ ನಿಷೇಧಕ್ಕೊಳಗಾಗಲು ಮುಖ್ಯ ಕಾರಣ ಅಲ್ಲಿನ ರಿಲಿಜಿಯನ್ ಸಂಸ್ಕೃತಿ. ಮುಸ್ಲೀಮ್ ಕ್ರಿಶ್ಚಿಯನ್ ಮತ್ತಿತರ ಅಬ್ರಾಹಮಿಕ್ ಧರ್ಮಗ್ರಂಥಗಳು ಸಲಿಂಗ ಕಾಮವನ್ನು ಧರ್ಮವಿರೋಧಿ ಎಂದು ಬೋಧಿಸುತ್ತವೆಯಾದ್ದರಿಂದ ಅದನ್ನು ಅಪರಾಧ ಎಂದು ಸ್ವೀಕರಿಸಲಾಗಿತ್ತು. ವೈಜ್ನಾನಿಕ ಎಂದು ಹೇಳಲ್ಪಡುವ ನಾಸ್ತಿಕರ ರಾಜಕೀಯ ಪಕ್ಷ ಕಮ್ಯುನಿಸ್ಮ್ ಕೂಡ ಸಲಿಂಗ ಕಾಮದ ಬಗೆಗೆ ಬೇರೆಯದೆ ನಿರ್ಧಾರವನ್ನು ಹೊಂದಿರಲಿಲ್ಲ. ಬದಲಾಗಿ ರಿಲಿಜಿಯನ್ ಗಳು ಕೊಟ್ಟ ತೀರ್ಪನ್ನೆ ಸಲಿಂಗಿಗಳ ಮೇಲೆ ಹೇರಿತು. ಆದರೆ ಕಾರಣದ ವ್ಯಾಖ್ಯಾನವನ್ನಷ್ಟೆ ಬದಲು ಮಾಡಿತು. ಇದು ‘ಅನಾಗರಿಕ’ ಎಂಬ ಕಾರಣಕ್ಕೆ ಸ್ಟಾಲಿನ್ ನ ರಾಜಕಾರಣದಲ್ಲಿ ಅಪರಾಧವೆಂದು ಪರಿಗಣಿಸಲಾಗಿತ್ತು. (ಅನಾಗರಿಕ ಎಂದು ತೀರ್ಮಾನಿಸುವಲ್ಲಿ ವೈಜ್ನಾನಿಕ ಧೋರಣೆಯೇ ಇಲ್ಲದಿದ್ದದ್ದು ಕಮ್ಯುನಿಸ್ಮ್ ನ ವೈಜ್ನಾನಿಕ ನಿಲುವನ್ನು ಅನುಮಾನಪಡುವಂತಾಗಿದೆ).

ಮತ್ತಷ್ಟು ಓದು »

30
ನವೆಂ

ದಾಸರ ದಾಸ ಸಂತ ಶ್ರೀ ಭದ್ರಗಿರಿ ಅಚ್ಯುತದಾಸರು

– ರಾಘವೇಂದ್ರ ಅಡಿಗ ಎಚ್ಚೆನ್

Bhadragiri Achyuta Dasaಕನ್ನಡ ಹರಿದಾಸ ಪರಂಪರೆ, ಕೀರ್ತನಾ ಲೋಕದ ಕೊಂಡಿಯೊಂದು ಕಳಚಿದೆ. ಸಂತ, ಹಿರಿಯ ಕೀರ್ತನೆಗಾರರಾದ ‘ಕೀರ್ತನ ಕೇಸರಿ’ ಭದ್ರಗಿರಿ ಅಚ್ಯುತದಾಸರು ತಮ್ಮ 83 ನೇ ವಯಸ್ಸಿನಲ್ಲಿ ತಾವು ಕಟ್ಟಿ ಬೆಳೆಸಿದ ಹರಿಕಥಾ ಪ್ರಪಂಚವನ್ನು ತೊರೆದು ಶ್ರೀಹರಿಯತ್ತ ನಡೆದಿದ್ದಾರೆ. ಕೀರ್ತನಾ ಕಲಾಪರಿಷತ್ ಗೌರವಾಧ್ಯಕ್ಷರಾಗಿದ್ದ ಸಂತ ಭದ್ರಗಿರಿ ಅಚ್ಯುತದಾಸರು ತಮ್ಮ ವಾಕ್ ಸಾಮರ್ಥ್ಯ, ಸಂಗೀತ, ಹಾಸ್ಯ ಚಟಾಕಿಗಳ ಮೂಲಕ ಜನಮಾನಸದಲ್ಲಿ ನೆಲೆಯೂರಿದ್ದರು. ಕನ್ನಡ, ಮರಾಠಿ, ಕೊಂಕಣಿ, ತುಳು ಹೀಗೆ ನಾನಾ ಭಾಷೆಗಳಾಲ್ಲಿ ಪ್ರೌಢಿಮೆ ಸಾಧಿಸಿದ್ದ ಸಂತ ಅಚ್ಯುತದಾಸರು ತಾವು ಹರಿವಂಶ, ಭಾಗವತ, ರಾಮಾಯಣ, ಮಹಾಭಾರತದ ತಾತ್ವಿಕ ಅಂಶಗಳನ್ನು ಸಾಮಾನ್ಯರ ಮನಮುಟ್ಟುವಂತೆ ವಿವರಿಸಿ ಹೇಳುವ ಸಾಮರ್ಥ್ಯವನ್ನು ಹೊಂದಿದ್ದರು.

ಇಂದಿನ ಆಧುನಿಕ ಯುಗದಲ್ಲಿ ನಶಿಸುತ್ತಿರುವ ಸಂಕೀರ್ತನಾ ಕಲೆಯನ್ನು ಜನಪ್ರಿಯಗೊಳಿಸುವುದರಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದ್ದ ಅಚ್ಯುತದಾಸರು ತಮ್ಮ ಸಹೋದರ ದಿ. ಭದ್ರಗಿರಿ ಕೇಶವದಾಸರ ಜತೆಗೂಡಿ ಅನೇಕ ಹರಿಕಥಾ ಸಮ್ಮೇಳನಗಳನ್ನು ನಡೆಸಿದ್ದರು. ಅಣ್ಣ-ತಮ್ಮಂದಿರಿಬ್ಬರೂ ತಮ್ಮ ಸ್ವ ಪ್ರತಿಭೆಯಿಂದ ‘ಸಂತ’ ಪದವಿಗೆ ಭಾಜನರಾಗಿದ್ದರು. ಸಂತ ಭದ್ರಗಿರಿ ಕೇಶವ ದಾಸರು ವಿದೇಶಗಳಲ್ಲಿಯೂ ಆಂಗ್ಲ ಭಾಷೆಯಲ್ಲಿ ಸಂಕೀರ್ತನೆಗಳನ್ನು ನಡೆಸಿ ಪ್ರಸಿದ್ದರಾಗಿದ್ದರೆ,ಸಂತ ಭದ್ರಗಿರಿ ಅಚ್ಯುತ ದಾಸರು ಭರತ ಖಂಡವ್ಯಾಪಿ ತಮ್ಮ ಹರಿಕಥಾ ಶ್ರವಣ ಮಾಡುವ ಮೂಲಕ ನಾಡಿನ ಮೂಲೆ ಮೂಲೆಗಳಾಲ್ಲಿ ಮನೆಮಾತಾಗಿದ್ದರು.

ವ್ಯಕ್ತಿ ಪರಿಚಯ :

ಉಡುಪಿಯ ಸಮೀಪದ ಬ್ರಹ್ಮಾವರದ ಬಳಿಯಲ್ಲಿನ ಬೈಕಾಡಿ ಗ್ರಾಮದ ಪುಟ್ಟ ಹಳ್ಳಿಯಲ್ಲಿ ವೆಂಕಟರಮಣ ಪೈ ಹಾಗೂ ರುಕ್ಮಿಣಿಬಾಯಿ ದಂಪತಿಗಳಿಗೆ ನಾಲ್ಕನೆ ಮಗನಾಗಿ ಜನಿಸಿದ (1931 ಮಾರ್ಚ್ 31)ಸಂತ ಶ್ರೀ ಭದ್ರಗಿರಿ ಅಚ್ಯುತದಾಸರು ಬಾಲ್ಯದಿಂದಲೂ ಸಂಗೀತದ ಬಗ್ಗೆ ಒಲವಿದ್ದವರು. ಇದಕ್ಕೆ ಅವರು ಹುಟ್ತಿದ ಮನೆಯ ಪರಿಸರವೂ ಪೋಷಕವಾಗಿತ್ತು. ತ್ಂದೆ ವೆಂಕಟರಮಣಾ ಪೈಗಳು ಯಕ್ಷಗಾನದ ಬಗ್ಗೆ ಒಲವುಳ್ಳವರಾಗಿದ್ದರೆ ತಾಯಿ ರುಕ್ಮಿಣಿಬಾಯಿ ತಾವು ದೇವರ ಭಜನೆಗಳನ್ನು ಶುಶ್ರಾವ್ಯವಾಗಿ ಹಾಡಬಲ್ಲವರಾಗಿದ್ದರು.
ಮತ್ತಷ್ಟು ಓದು »

26
ನವೆಂ

ಆಚರಣೆ, ಸಂಪ್ರದಾಯ,ನಂಬಿಕೆ ಮತ್ತು ಕಾಕತಾಳಿಯಗಳು

-ಮು.ಅ ಶ್ರೀರಂಗ,ಬೆಂಗಳೂರು

Indian Tradition N Heritageಒಬ್ಬ ಬ್ರಾಹ್ಮಣನ  ಮನೆಯಲ್ಲಿ ಬೆಕ್ಕೊಂದು ಓಡಾಡಿಕೊಂಡಿತ್ತು. ಹಳೆಯ ಕಾಲದ ಆ ಮನೆಯಲ್ಲಿದ್ದ ಇಲಿ,ಹೆಗ್ಗಣಗಳನ್ನು ತಿಂದುಕೊಂಡು ಅವುಗಳ ಕಾಟ ತಪ್ಪಿಸ್ಸಿದ್ದರಿಂದ ಸಹಜವಾಗಿ ಆ ಬೆಕ್ಕನ್ನು ಕಂಡರೆ ಮನೆಮಂದಿಗೆಲ್ಲಾ ಅಕ್ಕರೆಯಿತ್ತು.ಆ ಕುಟುಂಬದ  ಯಜಮಾನನ ತಂದೆಯದೋ ತಾಯಿಯದೋ  ತಿತಿ ಮಾಡಬೇಕಾದ ದಿನ ಬೆಕ್ಕು ಮನೆಯೊಳಗೆಲ್ಲಾ ಓಡಾಡಿ ಮೈಲಿಗೆ ಮಾಡುವುದು ಸರಿಯಲ್ಲ ಎಂದು ಅದನ್ನು ಮನೆಯ ಕಂಬವೊಂದಕ್ಕೆ ಕಟ್ಟಿಹಾಕಿದರು. ಆ ದಿನದ ಕೆಲಸ, ಊಟ ಎಲ್ಲಾ ಮುಗಿದ ನಂತರ ಆ ಬೆಕ್ಕಿಗೆ ಬಂಧನದಿಂದ ಬಿಡುಗಡೆಯಾಯ್ತು. ಕಾಲ ಕಳೆದಂತೆ ಆ ಮನೆಯ ಯಜಮಾನ ತೀರಿಕೊಂಡ. ಅವನ ಮಕ್ಕಳು ಅಪ್ಪನ ತಿತಿ ಮಾಡುವ ಸಮಯ ಬಂತು. ಆಗ ಮನೆಯಲ್ಲಿ  ಬೆಕ್ಕು ಇರಲಿಲ್ಲ. ಹೀಗಾಗಿ ಅಕ್ಕ ಪಕ್ಕದ ಮನೆಯವರಿಂದ ಕಾಡಿ ಬೇಡಿ ಬೆಕ್ಕೊಂದನ್ನು ತಂದು ಕಂಬಕ್ಕೆ ಕಟ್ಟಿದರು. ಅಂದಿನ ಕೆಲಸ ಮುಗಿದ ನಂತರ ವಾಪಸ್ಸು ಕೊಟ್ಟರು. ಇದು ಹೀಗೆ ಪ್ರತಿ ಸಾರಿ ತಿತಿ ಮಾಡುವಾಗಲೂ ಮುಂದುವರಿಯಿತು.  ಇದೊಂದು ಕಾಲ್ಪನಿಕ ಕಥೆ ಎಂಬುದರಲ್ಲಿ ಸಂದೇಹವಿಲ್ಲ. ಹಾಗೆ ನೋಡಿದರೆ ಐತಿಹಾಸಿಕವಾದುದನ್ನು ಬಿಟ್ಟರೆ ನಾವು ಓದುವ ಕತೆ ಕಾದಂಬರಿಗಳೆಲ್ಲ ಕಾಲ್ಪನಿಕವಾದವುಗಳೇ. ಅದರ  ಬಗ್ಗೆ ಚರ್ಚೆ ಈಗ ಬೇಡ. ಏಕೆಂದರೆ ಈ ಬರಹ ಸಾಹಿತ್ಯಕ್ಕೆ ಸಂಬಧಿಸಿದ್ದಲ್ಲ. ಈ ಬೆಕ್ಕಿನ ಕತೆಯಲ್ಲಿ ನಾವು ತಿಳಿದುಕೊಳ್ಳಬೇಕಾದ ಅಂಶ ಒಂದಿದೆ. ನಾವುಗಳು ಕೆಲವೊಂದು ಆಚರಣೆಗಳಿಗೆ ಇದು ಏಕೆ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವುದಿಲ್ಲ. ಮಕ್ಕಳೇನಾದರು ಕೇಳಿದರೆ “ನೀನೊಬ್ಬ ಅಧಿಕ ಪ್ರಸಂಗಿ, ತಲೆಹರಟೆ”ಎಂದು ಬೈದು ಅವರನ್ನು ಸುಮ್ಮನಾಗಿಸುತ್ತೇವೆ. ತಂದೆ ತಾಯಿಗೆ  ಅಜ್ಜಿ, ತಾತನಿಗೆ ಹೆದರಿದ ಆ ಮಕ್ಕಳು ಸುಮ್ಮನಾಗುತ್ತವೆ. ಅವರು ದೊಡ್ಡವರಾದ ಮೇಲೆ ಹಿಂದಿನವರು ತಮಗೆ  ಮಾಡಿದ್ದನ್ನೇ ತಮ್ಮ ಮಕ್ಕಳಿಗೂ ಮಾಡುತ್ತಾರೆ. ಈ ಕೊಂಡಿಗಳು ಒಂದಕ್ಕೊಂದು ಸೇರಿಕೊಳ್ಳುತ್ತಾಹೋಗಿ ಆಚರಣೆಗಳಾಗಿ,ಸಂಪ್ರದಾಯಗಳಾಗಿ ಮುಂದುವರಿಯುತ್ತವೆ.
ಮತ್ತಷ್ಟು ಓದು »

31
ಆಕ್ಟೋ

“ಓಲೈಕೆ ಮತ್ತು ತುಷ್ಟೀಕರಣ” ಜಾತ್ಯಾತೀತತೆಯ ಸಂಕೇತಗಳೇ?

ಮು ಅ ಶ್ರೀರಂಗ ಬೆಂಗಳೂರು

Mindsetಒಂದು ರಾಜಕೀಯ ಧೋರಣೆಗೆ ಕಂಕಣಬದ್ಧವಾದ “ಹೊಸತು”ಎಂಬ ಮಾಸಪತ್ರಿಕೆಯ ಜುಲೈ ೨೦೧೩ರ ಸಂಚಿಕೆಯಲ್ಲಿ “ಆಧುನಿಕೋತ್ತರವಾದವೂ ಸಿ. ಎಸ್. ಎಲ್. ಸಿ. ಚಿಂತನಾಕ್ರಮವೂ”ಎಂಬ ಲೇಖನವನ್ನು ಬೆಂಗಳೂರಿನ ಕೆ. ಪ್ರಕಾಶ್ ಎಂಬುವವರು ಬರೆದಿದ್ದಾರೆ. ೫ ಪುಟಗಳಷ್ಟು ವಿಸ್ತಾರವಾದ ಆ ಲೇಖನದ ೧೬ ಪ್ಯಾರಾಗಳಲ್ಲಿ ಸುಮಾರು ೧೫ ಜನ ಬುದ್ಧಿಜೀವಿಗಳ,ಚಿಂತಕರ,ಉದ್ದುದ್ದದ ವಾಕ್ಯಗಳನ್ನು(ಉದ್ಧರಣೆಗಳು)ಪ್ರಕಾಶ್ ಅವರು ತಮ್ಮ ಲೇಖನಕ್ಕೆ “ಬಲ”ಬರಲಿ ಎಂದು ಉಪಯೋಗಿಸಿಕೊಂಡಿದ್ದಾರೆ. ಆ ದೊಡ್ಡ ದೊಡ್ಡ ವಾಕ್ಯಗಳ ನಡುವೆ “ಫಿಲ್ಲರ್”ತರಹ ತಮ್ಮ ನಾಲ್ಕೈದು ಸಾಲುಗಳನ್ನು ಸೇರಿಸಿದ್ದಾರೆ. ಆ “ಫಿಲ್ಲರ್”ಗಳ ಮುಖ್ಯ ಉದ್ದೇಶ ಕುವೆಂಪು ವಿ. ವಿ.ಯಲ್ಲಿನ ಸಿ ಎಸ್ ಎಲ್ ಸಿ ಯನ್ನು ಖಂಡಿಸುವುದಷ್ಟೇ ಆಗಿದೆ.

“ಮಡೆ ಸ್ನಾನ”ದಿಂದ ಪ್ರಾರಂಭವಾಗುವ ಈ ಲೇಖನ ಕೊನೆಗೆ ಬಂದು ನಿಲ್ಲುವುದು  “ವಚನಗಳು vs ಜಾತಿ ವ್ಯವಸ್ಥೆ”ಬಗ್ಗೆ  “ಪ್ರಜಾವಾಣಿ”ಪತ್ರಿಕೆಯಲ್ಲಿ ಸುಮಾರು ಮೂರು ತಿಂಗಳಿನಷ್ಟು ಕಾಲ ನಡೆದ ವಾದ-ಪ್ರತಿವಾದದ “ಅನುಭವ ಮಂಟಪದಲ್ಲಿ”. ಪ್ರಕಾಶ್ ಅವರು ತುಂಬಾ ಆರಾಧಿಸುವ ಪ್ರೊ। ಐಜಾಜ್ ಅಹ್ಮದ್ ಅವರೇ “ಆಧುನಿಕೋತ್ತರವಾದವು ಹಲವು ವಿಭಿನ್ನ ಎಳೆಗಳಿಂದ ರಚಿತವಾಗಿದ್ದು ಅದನ್ನು ಒಂದು ಸುಸಂಬದ್ಧ ಚಿಂತನೆಯಾಗಿ ಮಂಡಿಸುವುದು ಕಷ್ಟ ಎಂದು ಎಚ್ಚರಿಸುತ್ತಲೇ ಅದರ ಪ್ರಮುಖ ಲಕ್ಷಣಗಳನ್ನು ಗುರುತಿಸುತ್ತಾರಂತೆ”(ಹೊಸತು ಜುಲೈ ೨೦೧೩ ಪುಟ ೩೦). ಸಿ ಎಸ್ ಎಲ್ ಸಿ ಯದೂ ಆ ಹಲವು ಹಾದಿಗಳಲ್ಲಿ ಒಂದು ಎಳೆ ಎಂದು  ಪ್ರಕಾಶ್ ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲ.

ಮತ್ತಷ್ಟು ಓದು »

9
ಆಕ್ಟೋ

ಫ್ಯೂಡಲ್, ಲಿಬರಲ್, ಸ್ಲೇವರಿ: ಪರಿಕಲ್ಪನೆಗಳ ಭೌದ್ದಿಕ ದಾರಿದ್ರ್ಯ

empty_mind_440ಡಾ. ಸಂತೋಷ್ ಕುಮಾರ‍್ ಪಿ.ಕೆ 

ಹೀಗೋಮ್ಮೆ ಮಾಸ್ತಿ ಹಾಗು ಕುರ್ತಕೋಟಿಯವರ ಲೇಖನಗಳನ್ನು ಓದುವಾಗ ಅವರು ಹೇಳುತ್ತಿದ್ದ ವಿಚಾರಗಳು ಎಷ್ಟು ಆಪ್ತವಾಗಿದ್ದವು ಎಂದರೆ ಅವು ಇಂದಿಗೂ ಪ್ರಸ್ತುತ ಎನಿಸುತ್ತದೆ. ಕೆ.ವಿ.ನಾರಾಯಣ ಸ್ವಾಮಿಯವರು ಮಾಸ್ತಿಯವರನ್ನು ಒಮ್ಮೆ ಸಂದರ್ಶನ ಮಾಡುವ ಸಂದರ್ಭದಲ್ಲಿ ಕೆ.ವಿ.ಎನ್ ರವರು ಪ್ರಶ್ನೆ ಕೇಳುವ ರಭಸದಲ್ಲಿ ಲಿಬರಲ್/ಉದಾರವಾದಿ ಶಬ್ದವನ್ನು ಪ್ರಯೋಗಿಸದರಂತೆ, ಅದಕ್ಕೆ ಮಾಸ್ತಿಯವರು ಹಾಗೆಂದರೇನು? ಎಂದು ಮರುಪ್ರಶ್ನೆ ಮಾಡಿದರಂತೆ, ಕೊನೆಗೂ ಲಿಬರಲ್ ಅಥವಾ ಉದಾರವಾದಿ ಎಂದರೇನು ಎಂಬುದನ್ನು ವಿವರಿಸುವಲ್ಲಿ ಕೆ.ವಿ.ಎನ್ ವಿಫಲರಾಗಿ ತಬ್ಬಿಬ್ಬಾಗಿದ್ದನ್ನು ಅವರೇ ಒಪ್ಪಿಕೊಳ್ಳುತ್ತಾರೆ. ಒಟ್ಟಿನಲ್ಲಿ ನಮ್ಮದಲ್ಲದ ಜೊತೆಗೆ ನಮಗೆ ಅರ್ಥವಾಗದ ಪದಗಳನ್ನು ಬಳಸುವುದರಿಂದ ನಿರುಪಯುಕ್ತವಾದ ಸಂಭಾಷಣೆಯಾಗುತ್ತದೆ ಎಂಬುದು ಅದರ ತಾತ್ಪರ್ಯವಾಗಿತ್ತು. ಅದೇ ರೀತಿ ‘ನಿರೂಪಣಾ ಶಕ್ತಿ’ ಎಂಬ ಕುರ್ತಕೋಟಿಯವ ಲೇಖನವಿದೆ. ಆ ಲೇಖನದಲ್ಲಿ ಕುಂ.ವೀರಭದ್ರಪ್ಪನವರು ‘ಫ್ಯೂಡಲ್’ ಪದವನ್ನು ಬಳಸುವ ಮೂಲಕ ಅವರ ತಂದೆಯವರ ಚಿತ್ರಣವನ್ನು ಎಷ್ಟು ಹದಗೆಡಿಸಿದರೆಂದರೆ, ಕುಂ.ವಿ.ಯವರು ಅವರ ತಂದೆಯ ಚಿತ್ರಣವನ್ನೂ ಪ್ರೇಕ್ಷಕರಿಗೆ ಸರಿಯಾಗಿ ಕಟ್ಟಿಕೊಡಲಾಗಲಿಲ್ಲ, ಜೊತೆಗೆ ಫ್ಯೂಡಲ್ ಎಂಬುದನ್ನೂ ಸರಿಯಾಗಿ ಅರ್ಥಮಾಡಿಸಲು ಆಗಲಿಲ್ಲ.

ಇಂತಹ ಅನುಭವ ಭೌದ್ದಿಕವಲಯದ ಪರಿಚಯವಿದ್ದವರಿಗೆ ಸರ್ವೇಸಾಮಾನ್ಯವಾದುದು. ಅದರಲ್ಲಿಯೂ ಪ್ರಗತಿಪರರ ಭಾಷಣಗಳನ್ನು ಕೇಳಿದರೆ ಅವುಗಳಲ್ಲಿ ಅರ್ಥವಾದ್ದಕ್ಕಿಂತ ಅರ್ಥವಾಗದೆ ಇರುವ ಪದಗಳೇ ಹೆಚ್ಚಾಗಿರುತ್ತವೆ. ಇದು ಕೇವಲ ಪ್ರಗತಿಪರರಗೆ ಮಾತ್ರ ಸೀಮಿತವಾಗಿರದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ಅಲ್ಲಿ ಕಾಣಸಿಗುತ್ತದೆ. ಲಿಬರಲ್, ಫ್ಯೂಡಲ್, ನಂತಹ ಶಬ್ದಗಳು ನಮ್ಮ ಸಂಸ್ಕೃತಿಯ ಮೂಲದವುಗಳಲ್ಲ. ಬದಲಿಗೆ ಪಾಶ್ಚಾತ್ಯರ ಸಂಸ್ಕೃತಿಯನ್ನು ವಿವರಿಸಲು ಬೆಳೆದುಬಂದಿರುವ ಪದಗಳಾಗಿವೆ. ಭಾರತದಲ್ಲಿ ಜಮೀನುದಾರರನ್ನು ಹಾಗೂ ಅವರ ದರ್ಪವನ್ನು ವಿವರಿಸಲು ಫ್ಯೂಡಲ್ ಪದವನ್ನು ಸಾಮಾನ್ಯವಾಗಿ ಬುದ್ದಿಜೀವಿಗಳು ಬಳಸುತ್ತಾರೆ. ಆದರೆ ಅದು ನಿಜವಾಗಿಯೂ ಫ್ಯೂಡಲಿಸಂನ್ನು ಪ್ರತಿನಿಧಿಸುತ್ತದೆಯೆ? ಎಂದು ಕೇಳಿಕೊಂಡರೆ, ಖಂಡಿತವಾಗಿಯೂ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಫ್ಯೂಡಲ್ ನ ಅರ್ಥವನ್ನು ನೋಡುತ್ತಾ ಹೋದರೆ, ಸಾಮಾನ್ಯವಾಗಿ ಕೆಲವೊಂದು ಕಾನೂನು ಹಾಗೂ ಮಿಲಿಟರಿ ಶಕ್ತಿ ಅಥವಾ ಅದಕ್ಕೆ ಪರ್ಯಾಯವಾದ ಶಕ್ತಿಯನ್ನು ಒಗ್ಗೂಡಿಸಿಕೊಂಡು ಸಮಾಜವನ್ನು ಅದಕ್ಕೆ ತಕ್ಕಂತೆ ರೂಪಿಸುವುದು, ಹಾಗೂ ಅದನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ಎಂದರ್ಥವಾಗುತ್ತದೆ.  ಅದರ ಒಟ್ಟಿಗೆ ಸರ್ಫ್ ಡಮ್ ಎಂಬುದಾಗಿಯೂ ಅದನ್ನು ಕರೆಯುತ್ತಾರೆ, ಅಂದರೆ ಲ್ಯಾಂಡ್ ಲಾರ್ಟ್ ಮತ್ತು ಸರ್ಫ್ ಗಳ ಸಂಬಂಧವು ಪ್ರಧಾನ ಭೂಮಿಕೆಯಲ್ಲಿರುತ್ತದೆ. ಹಾಗೂ ಸ್ಲೇವರಿ ಎಂದು ಬಳಸುವ ಪರಿಕಲ್ಪನೆಯ ಹಿಂದೆ ಮಾಸ್ಟರ್ ಮತ್ತು ಸ್ಲೇವ್ ಎಂಬ ಸಾಮಾಜಿಕ ಮತ್ತು ಅಂತಸ್ತಿನ ವಿಭಾಗವಿರುತ್ತದೆ. ಇಲ್ಲಿ ಸ್ಲೇವ್ ಆದವನಿಗೆ ಯಾವುದೇ ರೀತಿಯ ಸ್ವಂತಿಕೆ (ಸೆಲ್ಫ್) ಇರುವುದಿಲ್ಲ. ಆತ ಕೇವಲ ವ್ಯಾಪಾರ ಒಂದು ವಸ್ತುವಾಗಿ  ಅಸ್ತಿತ್ವದಲ್ಲಿ ಇರುತ್ತಾನೆ. ಆದರೆ ಭಾರತದಲ್ಲಿ ಇಂತಹ ರಚನೆಯನ್ನು ಎಲ್ಲಿ ಕಾಣಬಹುದು? ಅಬ್ಬಬ್ಬಾ ಎಂದರೆ ಜಮೀನುದಾರರನ್ನು ಕಾಣಬಹುದು, ಅಥವಾ ಅವರ ಒಕ್ಕಲುಗಳನ್ನು ಕಾಣಬಹುದು, ಜಮೀನುದಾರರಲ್ಲೇ ಒಳ್ಳೆಯವರನ್ನೂ  ಹಾಗೂ ಕೆಟ್ಟವರನ್ನೂ ಕಾಣಬಹುದು, ಆದರೆ ಫ್ಯೂಡಲ್ ಲಾರ್ಡಗಳನ್ನು ಕಾಣುವುದು ಎಲ್ಲಿ? ಯಾವ ಸಮುದಾಯಗಳು ಮಿಲಿಟರಿ ಶಕ್ತಿಯನ್ನು ಹೊಂದಿ ಕಾನೂನು ಗಳ ಮೂಲಕ ಇಡೀ ಸಮಾಜವನ್ನು ಅವರಿಗೆ ಬೇಕಾದ ರೀತಿಯಲ್ಲಿ ಮಾರ್ಪಡಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ?

ಮತ್ತಷ್ಟು ಓದು »

9
ಆಕ್ಟೋ

ಇತಿಹಾಸಕಾರರಿ೦ದ ಮರೆಯಾದ ಸಸ್ಯಶಾಸ್ತ್ರದ ಪಿತಾಮಹ, ನಮ್ಮೀ ಭೋಧಿಧರ್ಮ……

– ಶಂಕರ್ ನಾರಾಯಣ್

Bodhi Dharma N Oshoಸ್ವಾಮೀ ವಿವೇಕಾನ೦ದರು, ಚಿಕಾಗೋದಲ್ಲಿದ್ದ ಸಮಯ. ಅವರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿತ್ತು. ಮೇಲಿ೦ದ ಮೇಲೆ, ಪ್ರಶ್ನೆಗಳು ತೂರಿಬರುತ್ತಿದ್ದವು. ಅದೊ೦ದು ದಿನ ಒಬ್ಬ ಅಮೇರಿಕಾದ ಪ್ರಜೆಯೊಬ್ಬ, “ಬುದ್ಧನೇಕೆ ಧರ್ಮ ಪ್ರಸರಣೆಗಾಗಿ ಯುರೋಪು, ಅಮೇರಿಕಾಗಳಿಗೆ ಬರಲಿಲ್ಲ..!?” ಎ೦ದು ಕೇಳುತ್ತಾನೆ. ಅದಕ್ಕೆ, ವಿವೇಕಾನ೦ದರು, “ಬುದ್ಧನ ಕಾಲದಲ್ಲಿ ಯುರೋಪ್ ಎಲ್ಲಿತ್ತು..? ನಿನ್ನ ಅಮೇರಿಕಾ ಎಲ್ಲಿತ್ತು..? ಎನ್ನುತ್ತಾರೆ. ಹೌದು. ಚೀನಾವೂ ಸೇರಿ, ಪಾಶ್ಚಿಮಾತ್ಯ ದೇಶಗಳು ಕಣ್ಣುಬಿಡುವ ಮೊದಲೇ ಭಾರತ ಸುಸ೦ಸ್ಕೃತ ದೇಶವಾಗಿತ್ತು. ಭಾರತೀಯರಿಗೆ, ಚಿನ್ನ-ಬೆಳ್ಳಿಗಳ ಪರಿಚಯವಿತ್ತು. ಚಿನ್ನದ ಆಭರಣಗಳನ್ನು ಇಲ್ಲಿನ ಮಹಿಳೆಯರು ತೊಡುತ್ತಿದ್ದರು. ಇದಕ್ಕೆ ಉದಾಹರಣೆ ಎ೦ದರೆ, ಹರಪ್ಪ ಮತ್ತು ಮೊಹೆ೦ಜದಾರೋ ನಗರಗಳು. ನಾಗರೀಕತೆಗಳು. ಪಾಶ್ಚಿಮಾತ್ಯ ದೇಶೀಯರು, ಮರದಲ್ಲಿ ವಾಸಿಸುವ ಸ೦ಧರ್ಭದಲ್ಲಿ, ಒ೦ದು ವ್ಯವಸ್ಥಿತ ನಗರ ಭಾರತದಲ್ಲಿತ್ತು. ಖಗೋಳ ವಿಜ್ನಾನದಲ್ಲಿ ಆರ್ಯಭಟನೂ, ಆಯುರ್ವೇದದಲ್ಲಿ ಚರಕನೂ, ಶಸ್ತ್ರಚಿಕಿತ್ಸೆಯಲ್ಲಿ ಸುಶ್ರುತನೂ, ಅರ್ಥಶಾಸ್ತ್ರದಲ್ಲಿ ಚಾಣಕ್ಯನೂ ಹೀಗೆ ಒ೦ದೊ೦ದು ವಿಭಾಗದಲ್ಲಿ ಒಬ್ಬೊಬ್ಬರು ಪ್ರಖ೦ಡ ಜ್ನಾನಿಗಳಾಗಿದ್ದರು. ಭಾರತ ಬಿಟ್ಟರೆ, ಚೀನಾದಲ್ಲೂ ನಾಗರೀಕತೆಗಳು ಹುಟ್ಟಿಕೊ೦ಡಿದ್ದವು. ಆದರೆ, ಅವುಗಳನ್ನು ಹರಪ್ಪ, ಮೊಹೆ೦ಜದಾರೋಗಳೊ೦ದೆಗೆ ಹೋಲಿಸಲಾಗದು..

ಆದರೆ,

ಮತ್ತಷ್ಟು ಓದು »

22
ಆಗಸ್ಟ್

ರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು” ಪುಸ್ತಕದ ಕುರಿತು

– ಮು . ಅ . ಶ್ರೀರಂಗ  ಯಲಹಂಕ  ಬೆಂಗಳೂರು

ನಮಗೆ ನಾವೇ ಪರಕೀಯರುರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು ” (ನ. ನಾ. ಪ) (ಪ್ರಕಾಶಕರು : ರಾಷ್ಟ್ರೋತ್ಹಾನ ಸಾಹಿತ್ಯ ಬೆಂಗಳೂರು -೧೯ )ಪುಸ್ತಕ ಓದುವ ಮುನ್ನ ನಾನು ಪ್ರೊ .ಎಸ್ .ಎನ್. ಬಾಲಗಂಗಾಧರ (ಬಾಲು)ಅವರ ವಿಚಾರಗಳನ್ನು ಆಧರಿಸಿದ ಕನ್ನಡಕ್ಕೆ ಅನುವಾದವಾಗಿರುವ ಮೂರುಪುಸ್ತಕಗಳನ್ನು ಓದಿದ್ದೆ (ಪೂರ್ವಾವಲೋಕನ ,ಭಾರತದಲ್ಲಿ ಜಾತಿ ವ್ಯವಸ್ಥೆ ಇದೆಯೆ? ಮತ್ತು ಹುಡುಕಾಟವನ್ನು ನಿಲ್ಲಿಸದಿರೊಣ). ಸ್ಮೃತಿ-ವಿಸ್ಮೃತಿ ;ಭಾರತೀಯ ಸಂಸ್ಕೃತಿ ತನ್ನ ವಿಚಾರ ಮತ್ತು ಗಾತ್ರದಲ್ಲಿ ತುಂಬಾ ಘನವಾಗಿದೆ ಹೀಗಾಗಿ ನಿಧಾನವಾಗಿ ಓದಿ ಅರ್ಥಮಾಡಿಕೊಳ್ಳಬೇಕಾಗಿದೆ. ಇದುವರೆಗೆ ಸುಮಾರು ಇನ್ನೂರು ಪುಟಗಳನ್ನು ಓದಿದ್ದೆನೆ. ರಮಾನಂದರ ಪ್ರಸ್ತುತ ಪುಸ್ತಕ ಮೇಲೆ ಹೇಳಿದ ಬಾಲು ಅವರ ನಾಲ್ಕು ಪುಸ್ತಕಗಳ ಅದರಲ್ಲೂ ಮುಖ್ಯವಾಗಿ ಸ್ಮೃತಿ-ವಿಸ್ಮೃತಿ ಪುಸ್ತಕದಲ್ಲಿರುವ ವಿಷಯಗಳನ್ನು ನೇರವಾಗಿ ಭಟ್ಟಿ ಇಳಿಸಿರುವುದರ ಪ್ರತಿಫಲ! ಇದಕ್ಕೆ ಪುರಾವೆಗಳು ರಮಾನಂದರ ನ.ನಾ.ಪ.. ಪುಸ್ತಕದಲ್ಲೇ ಇವೆ.

,         ೧. ಬಾಲು ಅವರೇ ತಮ್ಮ ಮುನ್ನುಡಿಯಲ್ಲಿ—ರಮಾನಂದರ ಎಲ್ಲಾ ಲೇಖನಗಳು ಈ ವಿಷಯಗಳ ಕುರಿತಾಗಿ ಬೆಲ್ಜಿಯಂ ಹಾಗೂ ಭಾರತದಲ್ಲಿ ಕುವೆಂಪು ವಿ. ವಿ. ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳಿಂದ ಪ್ರಭಾವಿತವಾಗಿವೆ ಎಂದ್ದಿದ್ದಾರೆ (ಪುಟxii)

೨. ಲೇಖಕರ ಮಾತಿನಲ್ಲಿ ಸ್ವತಃ ರಮಾನಂದ ಐನಕೈ ಅವರೇ ಮೇಲೆ ಹೇಳಿದ ಬಾಲು ಅವರ ಮಾತುಗಳನ್ನೇ ಅನುಮೋದಿಸಿದ್ದಾರೆ—ಬಾಲು ಅವರ ಮೂಲ ಸಿದ್ಧಾಂತಕ್ಕೆ ಚ್ಯುತಿ ಬಾರದ ಹಾಗೆ ಅವರ ವಿಚಾರಗಳನ್ನು ನನ್ನ ಅನುಭವಗಳ ಮೂಲಕ ಸರಳವಾಗಿ ನಿರೂಪಿಸುವ ಕೆಲಸ ಮಾಡಿದ್ದೇನೆ (ಪುಟ xvi )(ರಮಾನಂದರ ಅನುಭವಗಳ ಪ್ರಮಾಣ ಈ ಪುಸ್ತಕದ ವಿಚಾರದಲ್ಲಿ ತೀರಾ ಕಡಿಮೆ ಎಂಬುದು ಓದುಗರಿಗೆ ಮನವರಿಕೆಯಾಗುತ್ತದೆ!)

೩. ರಮಾನಂದರ ಪ್ರಸ್ತುತ ಪುಸ್ತಕ್ಕಕ್ಕೆ (ನ.ನಾ.ಪ) ಹಿನ್ನೆಲೆ ಬರೆದಿರುವ ದಾ॥ ರಾಜಾರಾಮ ಹೆಗಡೆಯವರು ಸಹ ರಮಾನಂದರದು ಸ್ವತಂತ್ರ ಲೇಖನಗಳಾದರೂ ಕೂಡ ಭಾರತೀಯ ಸಂಸ್ಕೃತಿಯ ಕುರಿತು ಎಸ್ . ಎನ್ . ಬಾಲಗಂಗಧರ ಅವರ ಹೊಸ ವಾದಗಳಿಂದ ಪ್ರಭಾವಿತವಾಗಿವೆ. (ಪುಟ xviii)

ಮತ್ತಷ್ಟು ಓದು »

17
ಜುಲೈ

‘ಹಿಂದು’ ಶಬ್ದ ಕೇಳುತ್ತಲೇ ಇವರೇಕೆ ಹುಯಿಲೆಬ್ಬಿಸುತ್ತಾರೆ?

– ಪ್ರವೀಣ್ ಪಟವರ್ಧನ್

Modi12ಕೆಲ ದಿನಗಳ ಹಿಂದಷ್ಟೇ ಬೋಧ್ಗಯಾ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ನೀಡಿದ್ದ ವಿಚಿತ್ರ- ವಿಕೃತ ಹೇಳಿಕೆಗಳನ್ನು ಆಧರಿಸಿ, ತಮಗೆ ಸಮಯ ಬಂದಾಗಲೆಲ್ಲಾ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಿ, ಇತರರ (ಉದ್ದೇಶಪೂರ್ವಕವಾಗಿ ಗುಜರಾತಿನ ಮುಖ್ಯಮಂತ್ರಿ ಮೋದಿಯವರ) ತೇಜೋವಧೆ ಮಾಡುವ ಕಾಂಗ್ರೆಸ್ಸಿಗ “ಒಸಾಮಾ ಜೀ” ಎಂದು ಮುಕ್ತ ಮನಸ್ಸಿನಿಂದ ಮರ್ಯಾದೆ ನೀಡಿದ ಖ್ಯಾತಿಯ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯಸಿಂಗ್ ಅವರನ್ನು ಕುರಿತು Facebook  ಜಾಲತಾಣದಲ್ಲಿ ಒಂದು ವ್ಯಂಗ್ಯ ಚಿತ್ರ ಹರಿದಾಡುತ್ತಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ ವ್ಯಂಗ್ಯಚಿತ್ರದಲ್ಲಿ ಇದ್ದುದು ಇಷ್ಟೇ. “ಟೀವಿಯಲ್ಲಿ ದಿಗ್ವಿಜಯಸಿಂಗ್ ಒಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದಾಗ ಮನೆಯಲ್ಲಿನ ಸಾಕಿದ ನಾಯಿಗಳು ಟೀವಿ ನೋಡುತ್ತಾ ಬೊಗಳುತ್ತಿವೆ. ಮುಂದೇನೂ ಹೇಳಲಾರೆ. ನೀವೇ ಅರ್ಥ ಮಾಡಿಕೊಳ್ಳಬಲ್ಲಿರಷ್ಟೇ.

ರಾಜಕಾರಣಿಯೆಂದರೆ ಅಲ್ಲಿ ವಾದ-ವಿವಾದಗಳು ಸಾಮಾನ್ಯ. ಈಗಿನ ರಾಜಕಾರಣದಲ್ಲಿ ಜನಪರ ಕೆಲಸ ಮಾಡುವುದಕ್ಕಿಂತ ವಾದಗಳಿಗೆ ಸಿಲುಕಿಕೊಳ್ಳುವುದೇ ಹೆಚ್ಚು. ಒಬ್ಬರ ಮೇಲೋಬ್ಬರ ಕೆಸರೆರಚಾಟ. ವಿರೋಧ ಪಕ್ಷದ ವ್ಯಕ್ತಿಯ ತೇಜೋವಧೆ, ಸುಳ್ಳು ಆರೋಪ, ಅರ್ಥವಿಹೀನ ಹೇಳಿಕೆ ಇವೆಲ್ಲವೂ ಕೆಸರೆರೆಚಾಟದ ವಿವಿಧ ಮುಖಗಳು. ನಿಮ್ಮ ಸರ್ಕಾರ ಹೀಗೆ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗೆ ಸಿಗುವ ಉತ್ತರ, ನಮ್ಮ ಹಿಂದಿನ ಸರ್ಕಾರ ಇದಕ್ಕಿಂತಲೂ ಕೆಟ್ಟ ಕೆಲಸ ಮಾಡಿತ್ತು ಅದರ ಬಗ್ಗೆ ಮಾತಾಡೋಣವೇ ಎಂದು ಕುಟುಕಿ ತಮ್ಮ ಲೋಪಗಳನ್ನು cover-up ಮಾಡಿಕೊಳ್ಳುವವರೇ ಈ ದಿನ ಹೆಚ್ಚು.

ಮತ್ತಷ್ಟು ಓದು »

8
ಜುಲೈ

’ಹರಶರಣ ದೆನಿಲೋನ ಹಾದಿಯಲ್ಲಿ’ ಶಿವಪ್ರಕಾಶರ ಲೇಖನಕ್ಕೊಂದು ಪ್ರತಿಕ್ರಿಯೆ

-ಬಾಲಚಂದ್ರ ಭಟ್

Danielouಈ ಲೇಖನ ಪ್ರಜಾವಾಣಿಯಲ್ಲಿ ಪ್ರಕಟವಾದ ಎಚ್.ಎಸ್.ಶಿವಪ್ರಕಾಶರ ಜುಲೈ ೫ ರಂದು ಪ್ರಕಟವಾದ ’ಹರಶರಣ ದೆನಿಲೋನ ಹಾದಿಯಲ್ಲಿ’ ಬರಹಕ್ಕೆ ಪ್ರತಿಕ್ರಿಯೆ. ಬಹಳಷ್ಟು ವಿಷಯಗಳನ್ನು ಲೇಖನದಲ್ಲಿ ಉಲ್ಲೇಖಿಸಿದ್ದನ್ನು ಓದಿದ ನಂತರ ಸ್ವಲ್ಪ ಲೇಖನ ಏನು ಹೇಳಹೊರಟಿದೆಯೆಂಬುದರ ಬಗ್ಗೆ ಗೊಂದಲ ಮೂಡಿತು. ನಾನು ತಿಳಿದುಕೊಂಡಂತೆ ಲೇಖಕರು ಒಟ್ಟಾರೆಯಾಗಿ ಏನು ಹೇಳುತ್ತಾರೆಂದರೆ,

೧. ಆಲೆನ್ ದೆನಿಲೋ ನ ವಿಚಾರಗಳು, ಬಹುತೇಕ ಭಾರತೀಯ ಆಧ್ಯಾತ್ಮಿಕ ಪರಿಕಲ್ಪನೆಗಳಿಗಿಂತ(‘ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತ’) ಭಿನ್ನವಾಗಿತ್ತು, ಹಾಗೂ

೨. ಭಾರತದ ಆಧ್ಯಾತ್ಮಿಕ ವಿಷಯಗಳ ಬಗ್ಗೆ ’ಸ್ಟೀರಿಯೊಟೈಪಡ್ ಪೌರಾತ್ಯ’ ಚಿಂತನೆಗಳಿಂದ, ಹಾಗೂ ವಸಾಹತುಶಾಹಿ ಪರಿಕಲ್ಪನೆಗಳಿಂದ ಹೊರತಾಗಿದ್ದವು.

ಈ ಮೇಲಿನ ಎರಡು ಲೇಖಕರ ಅಭಿಪ್ರಾಯಗಳನ್ನು ಈ ಕೆಳಗಿನಂತೆ ವಿಮರ್ಶಿಸಿದ್ದೇನೆ.ಹಾಗೆಯೆ ಪ್ರಶ್ನೆಗಳ ಮೂಲಕ ನನ್ನಲ್ಲಿನ ಗೊಂದಲಗಳನ್ನ ಪ್ರಸ್ತಾಪಿಸಿದ್ದೇನೆ. ತಪ್ಪಿದ್ದಲ್ಲಿ ಸರಿಪಡಿಸಿ.

೧. ನಾನು ಹಾಗೆ ತಿಳಿದುಕೊಳ್ಳಲು ಕಾರಣ ಶಿವಪ್ರಕಾಶರು ಹೀಗೆ ಉಲ್ಲೇಖಿಸಿರುವದು: “ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತವನ್ನೇ ಭಾರತದ ಸಾರ ಸರ್ವಸ್ವವೆನ್ನುವರು ಆ ಕಾಲದ ಬಹಳ ಮಂದಿ ವಿದ್ವಾಂಸರು. ಅವರಲ್ಲಿ ಬಹುತೇಕ ಪ್ರಭೃತಿಗಳು ಭಾರತೀಯರೆಂದರೆ ಜೀವನೋತ್ಸಾಹ, ರಾಗರತಿಗಳಿಲ್ಲದ ಓಡುಗಾಲ ಯೋಗಿಗಳೆಂದು ಬಗೆದಿದ್ದರು. ಆದರೆ ವಿದ್ವತ್ತು, ರಸಗ್ರಾಹಿತ್ವ ಮತ್ತು ವ್ಯಕ್ತಿಗತ ಆಧ್ಯಾತ್ಮಿಕ ಸಾಧನೆಗಳ ತ್ರಿವೇಣಿಸಂಗಮವಾಗಿದ್ದ ದೆನಿಲೋ ಒತ್ತು ನೀಡಿದ್ದು ಭಾರತೀಯರ ರಸವಿಮುಖಿಯಾದ ಸಮಣಪಂಥೀಯ ಅಧ್ಯಾತ್ಮವಾದಕ್ಕಲ್ಲ, ಐಂದ್ರಿಕ ಜಗತ್ತಿಗೆ ತನ್ನನ್ನು ಪೂರ್ಣವಾಗಿ ತೆರೆದುಕೊಂಡು ಹಾಕುವ ಪ್ರತಿಯೊಂದು ತುತ್ತನ್ನೂ ಬಿಂದುವಾಗಿ ಮಾಡಿಕೊಂಡ ಶೈವ-ಶಾಕ್ತರ ಪೂರ್ಣಾದ್ವೈತಕ್ಕೆ.”

ಮತ್ತಷ್ಟು ಓದು »

22
ಜೂನ್

‘ಅಪಶೂದ್ರಾಧಿಕರಣ’ ಏನನ್ನು ಹೇಳುತ್ತದೆ?

Shankaraacharya1ಡಾ.ರಾಜಾರಾಮ ಹೆಗಡೆ

ಶಂಕರಾಚಾರ್ಯರ ಬ್ರಹ್ಮಸೂತ್ರಭಾಷ್ಯದ ಅಪಶೂದ್ರಾಧಿಕರಣದಲ್ಲಿ ಮಂಡಿತವಾದ ವಿಚಾರಗಳ ಕುರಿತು ಬರುತ್ತಿರುವ ಟೀಕೆಗಳಿಗೆ ಸಂಬಂಧಿಸಿದಂತೆ ಈ ಪ್ರತಿಕ್ರಿಯೆ.

ಯಾರು ಎಷ್ಟೇ ದೊಡ್ಡ ವ್ಯಕ್ತಿಯಾಗಿರಬಹುದು, ಗ್ರಂಥವಾಗಿರಬಹುದು ಅದನ್ನು ಟೀಕೆ ಮಾಡುವುದರಲ್ಲಿ ಅಥವಾ ಅದರ ವಿಚಾರಗಳನ್ನು ಖಂಡಿಸುವುದರಲ್ಲಿ ಯಾವ ದೋಷವೂ ಇಲ್ಲ. ಆದರೆ ಈ ಕೆಲಸವನ್ನು ತರ್ಕಬದ್ಧವಾಗಿ ಪ್ರಮಾಣಪೂರ್ವಕವಾಗಿ ಮಾಡಬೇಕೆಂಬುದು ಒಂದು ಬೌದ್ಧಿಕ ಚರ್ಚೆಯ ನಿಬಂಧನೆ. ಪ್ರಸ್ತುತ ಟೀಕೆಗಳನ್ನೇ ಗಮನಿಸಿ. ಈ ಟೀಕೆಯನ್ನು ನಡೆಸುವವರು ಎರಡು ಹೆಜ್ಜೆಗಳನ್ನು ಇಡುತ್ತಿದ್ದಾರೆ. 1) ಶಂಕರಾಚಾರ್ಯರು ಏನನ್ನು ಹೇಳುತ್ತಿದ್ದಾರೆ ಎಂಬುದು ಮೊದಲನೆಯದು ಹಾಗೂ 2) ಅದು ಸ್ವೀಕಾರಾರ್ಹವಲ್ಲ ಎಂಬುದು ಎರಡನೆಯದು. ಮೊದಲನೆಯದು ಸಿದ್ಧವಾಗದೇ ಎರಡನೆಯದು ಸಾಧ್ಯವಿಲ್ಲ. ಒಂದೊಮ್ಮೆ ಶಂಕರರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನೇ ತಪ್ಪಾಗಿ ತಿಳಿಯಲಾಗಿದೆ ಅಂತಾದರೆ ಎರಡನೆಯ ಹೆಜ್ಜೆಯೂ ದಿಕ್ಕು ತಪ್ಪಿಹೋಗಿರುತ್ತದೆ. ಈ ಟೀಕೆಗಳಿಗೂ ಇದೇ ಗತಿಯಾಗಿದೆ ಎಂಬುದು ನನ್ನ ಅಭಿಪ್ರಾಯ.

ಮೊದಲನೆಯದು, ಅಂದರೆ ಶಂಕರಾಚಾರ್ಯರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂಬುದು ಬ್ರಹ್ಮಸೂತ್ರ್ರಭಾಷ್ಯದ ಅಪಶೂದ್ರಾಧಿಕರಣವನ್ನು ಓದಿದಾಗ ಸ್ಪಷ್ಟವಾಗುತ್ತದೆ. ಶಂಕರರು ಈ ಭಾಗದಲ್ಲಿ ಬ್ರಹ್ಮಸೂತ್ರದ ಕೆಲವು ಸೂತ್ರಗಳ ಅರ್ಥವನ್ನು ಶ್ರುತಿ, ಸ್ಮೃತಿಗಳ ಅಭಿಪ್ರಾಯಗಳನ್ನು ಆಧರಿಸಿ ನಿರ್ಣಯಿಸುತ್ತಾರೆ. ಈ ಭಾಗವು 1) ಶೂದ್ರರಿಗೆ ಬ್ರಹ್ಮಜ್ಞಾನ ಸಾಧ್ಯವಿಲ್ಲ ಎಂದು ನಿರ್ಣಯಿಸುತ್ತಿಲ್ಲ. 2) ಶೂದ್ರರಿಗೆ ಉಪನಯನಕ್ಕೆ ಹಾಗೂ ವೇದವಿದ್ಯೆಗೆ ಅಧಿಕಾರವಿಲ್ಲ ಎಂಬುದಾಗಿಯೂ ಹೇಳುತ್ತಿಲ್ಲ. 3)ವೇದಾಧ್ಯಯನದಿಂದ ಮಾತ್ರವೇ ಬ್ರಹ್ಮಜ್ಞಾನ ಸಾಧ್ಯ ಎಂಬುದಾಗಿ ಹೇಳುತ್ತಿಲ್ಲ. ಈ ಅಧಿಕರಣದಲ್ಲ್ಲಿ ಹೇಳುತ್ತಿರುವುದೇನೆಂದರೆ ಶೂದ್ರರಿಗೆ ವೇದಾಧ್ಯಯನದ ಮೂಲಕ ಜ್ಞಾನಾಧಿಕಾರವಿಲ್ಲ ಎಂಬುದಷ್ಟೇ. ಉಪನಯನ ಸಂಸ್ಕಾರವಿಲ್ಲದವರಿಗೆ ವೇದಾಧ್ಯಯನಕ್ಕೆ ಅರ್ಹತೆ ಬರುವುದಿಲ್ಲ ಎಂಬುದೇ ಶ್ರುತಿಗಳ ಅಭಿಪ್ರಾಯ ಎಂಬುದನ್ನು ನಿರ್ಣಯಿಸುತ್ತಿದ್ದಾರೆ. ಹುಟ್ಟಾ ಎಲ್ಲರೂ ಶೂದ್ರರು, ಉಪನಯನ ಸಂಸ್ಕಾರವನ್ನು ಹೊಂದಿದವನನ್ನು ದ್ವಿಜ (ಉಪನಯನ ಎರಡನೆಯ ಹುಟ್ಟು) ಎಂಬುದಾಗಿ ಕರೆಯಲಾಗಿದೆ. ಹಾಗಾಗಿ ಎರಡು ಪ್ರಕಾರದ ಶೂದ್ರರನ್ನು ಕುರಿತು ಅವರು ಚರ್ಚಿಸುತ್ತಾರೆ: 1) ಉಪನಯನ ಸಂಸ್ಕಾರವಾಗುವುದಕ್ಕೂ ಪೂರ್ವದ ಅವಸ್ಥೆ (ಇವರಲ್ಲಿ ಬ್ರಾಹ್ಮಣಾದಿ ನಾಲ್ಕು ವರ್ಣಗಳೂ ಬರುತ್ತವೆ) 2) ಜಾತಿ ಶೂದ್ರರು: ಪಾರಂಪರಿಕವಾಗಿ ಉಪನಯನ ಸಂಸ್ಕಾರದ ಆಚರಣೆಯನ್ನೇ ಹೊಂದಿಲ್ಲದ ಜಾತಿಗಳು. ಭಾಷ್ಯವು ವೇದಾಧಿಕಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರಲ್ಲೂ ಯಾವುದೇ ವ್ಯತ್ಯಾಸವನ್ನು ಮಾಡುತ್ತಿಲ್ಲ.

ಮತ್ತಷ್ಟು ಓದು »