ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

17
ಜೂನ್

ಬೌದ್ದರನ್ನು ಓಡಿಸಲು ಶಂಕರರೇನು ಅರಸರಾಗಿದ್ದರೇ?

– ಸಂತೋಶ್ ತಮ್ಮಯ್ಯ

Shankaraacharya1ಕೆಲವರ ಮನಸ್ಸೇ ವಿಚಿತ್ರವಾದುದು. ಅವರದ್ದು ವಿನಾಕಾರಣ ನಿರಾಕರಣವಾದ. ಇದ್ದುದನ್ನು ಇಲ್ಲವೆನ್ನುವುದು, ಇಲ್ಲದ್ದನ್ನು  ಇದೆ ಎನ್ನುವುದು , ವಿನಾಕಾರಣ ಖಂಡಿಸುವುದು, ವಿಪರೀತವನ್ನು ಮಂಡಿಸುವುದು, ವಿಚಿತ್ರ ಸ್ವಭಾವಗಳು. ಉದಾಹರಣೆಗೆ ಎಲ್ಲರಿಗೂ ಇಷ್ಟವಾಗುವ ಸಿನೆಮಾವನ್ನು ಕೆಲವರು ವಿನಾಕಾರಣ ಬಯ್ಯುತ್ತಾರಲ್ಲಾ ಅಂಥವರು.  ಆ ಮನಸ್ಸನ್ನು  ಸಿನಿಕವೆನ್ನಿ, ಪೂರ್ವಗ್ರಹವೆನ್ನಿ, ಅಬದ್ಧವೆನ್ನಿ, ಅಸ್ವಸ್ಥವೆನ್ನಿ ಎಲ್ಲವೂ ಸರಿಯೇ. ನಮ್ಮ ಸಾಹಿತ್ಯಲೋಕದಲ್ಲಿ ಅಂಥವರನೇಕರು ಸಿಗುತ್ತಾರೆ. ಅವರೆಲ್ಲರೂ   ಸಂದರ್ಭ ಸಿಕ್ಕಾಗಲೆಲ್ಲಾ ಹೀಗೆ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ. ಭೈರಪ್ಪನವರು ಬರೆದಾಗ, ನ್ಯಾಯನೀತಿಯನ್ನು ಇನ್ಯಾರೋ ಎತ್ತಿ ಹಿಡಿದಾಗ, ಚಿದಾನಂದ ಮೂರ್ತಿಗಳು ಏನನ್ನೋ ಶೋಧಿಸಿದಾಗಲೆಲ್ಲಾ   ಅದಕ್ಕೆ ಸಂಪೂರ್ಣ ನೇತ್ಯಾತ್ಮಕವಾದುದನ್ನು ಹಿಡಿದು ಹೇಳಿಕೆಗಳನ್ನು ನೀಡಲಾರಂಭಿಸುತ್ತಾರೆ. ಅದಕ್ಕೆ ಕೆಲವು ಪತ್ರಕರ್ತರು ಕನ್ನಡದ ಮನಸ್ಸು ಎಂಬ ಹೆಸರು ಕೊಟ್ಟುಬಿಡುತ್ತಾರೆ. ಇಂಥ ಸತ್ಯದ ಆವರಣವನ್ನೇ ಕನ್ನಡದ ಮನಸ್ಸು ಎನ್ನುವುದಾದರೆ ಅದು ಕನ್ನಡಕ್ಕೆ ಮುಸುಕಿರುವ ಆವರಣ ಎನ್ನದೆ  ವಿಧಿ ಇಲ್ಲ. ಇಂಥವರ ಗುಂಪಿಗೆ ಈಗ ಮತ್ತೊಬ್ಬರು ಸೇರಿದ್ದಾರೆ.

ಯಾರೋ ಕೇಶವ ಮೂರ್ತಿಯಂತೆ. ಇದುವರೆಗೆ ಅವರ ಮುಖ ನೋಡಿದವರಿಲ್ಲ. ಸಾಹಿತ್ಯ ಓದಿದವರಿಲಿಲ್ಲ. ಈ ಮಧ್ಯೆ ಕಾಂಗ್ರೆಸ್ ಆಡಳಿತಕ್ಕೆ ಬಂತು. ಗುರುತಿಸಿಕೊಳ್ಳುವುದು ಲಾಭದ ದೃಷ್ಟಿಯಿಂದ ಉತ್ತಮ ಎನಿಸಿತ್ತೋ ಏನೋ ಹೇಳಿಕೆಯೊಂದನ್ನು ಕೊಟ್ಟರು.”ನರೇಂದ್ರ  ಮೋದಿಗಿಂತ ಶಂಕರಾಚಾರ್ಯರು ಹೆಚ್ಚು ಕ್ರೂರಿ” ಎಂದರು. ನರೇಂದ್ರಮೋದಿಯವರನ್ನು ನವನವೀನವಾಗಿ ಟೀಕಿಸುವ ಜನರಿಗೆ ಒಮ್ಮೆ ಈ ಮಾದರಿಯ ಟೀಕೆ ಸ್ವಜನಶೀಲವಾಗಿ ಕಂಡಿರಬೇಕು. ಏಕೆಂದರೆ ಅಲ್ಲಿ ಮೋದಿಯೂ ಇದ್ದರೂ, ಶಂಕರಾಚಾರ್ಯರೂ ಇದ್ದರು. ಇತಿಹಾಸವನ್ನೂ ಬಯ್ದಂತಾಯಿತು. ವರ್ತಮಾನವನ್ನೂ ತೆಗಳಿದಂತಾಯಿತು. ವೋಟ್ ಬ್ಯಾಂಕ್‌ ರಾಜಕಾರಣಕ್ಕಂತೂ ಇಂಥ ಹೇಳಿಕೆಗಳ ಆವಶ್ಯಕತೆ ತುಂಬಾ ಇತ್ತು. ಖಂಡಿಸುವ ಈ ಹೇಳಿಕೆಗಳಿಗಾಗಿ ಅವರು ಸಾಕಷ್ಟು  ಶ್ರಮವನ್ನೇ ಪಟ್ಟಿರಬೇಕು.
ಬಹುಶಃ ಕೇಶವಮೂರ್ತಿಯವರಿಗೆ ಈ ಸಂಗತಿಗಳು ತಿಳಿದಿರಲಿಕ್ಕಿಲ್ಲ.

೧೯೮೪ರ ಸಿಕ್ಖ್ ನರಮೇಧದಲ್ಲಿ ಸತ್ತವರು ೨೭೩೩ ಎಂಬುದು ಸರಕಾರದ ದಾಖಲೆ. ಆದರೆ ದಂಗೆಯಲ್ಲಿ  ೨೫,೦೦೦ಕ್ಕೂ ಹೆಚ್ಚು ಜನರು ಸತ್ತರು ಮತ್ತು ಗಾಯಗೊಂಡಿದ್ದರು. ನೂರಾರು ಸಿಕ್ಖ್ ಮಹಿಳೆಯರ ಮೇಲೆ ಅತ್ಯಾಚಾರ ನಡೆಯಿತು. ಸುಮಾರು ೩ ಲಕ್ಷ ಸಿಕ್ಖರು ಮನೆಮಾರುಗಳನ್ನು ಬಿಟ್ಟು ಓಡಿ ಹೋದರು ಮತ್ತು ತಲೆ ಮರೆಸಿಕೊಂಡರು. ನೂರಾರು ಗುರುದ್ವಾರಗಳನ್ನು ಕೆಡವಲಾಯಿತು ಮತ್ತು ಧರ್ಮಗ್ರಂಥವನ್ನು ಸುಡಲಾಯಿತು.  ದೇಶ ಕಾಯುತ್ತಿದ್ದ ೩೦೦ ಜನ ಸಿಕ್ಖ್ ಯೋಧರನ್ನ್ನು  ಕೊಲ್ಲಲಾಯಿತು. ಬೊಕಾರೋ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ೧೨೦ ಜನ  ಸಿಕ್ಖರನ್ನು  ಸಾಮೂಹಿಕವಾಗಿ  ದಹಿಸಲಾಯಿತು. ಖಾನ್‌ಪುರದಲ್ಲಿ ೧೩ ವರ್ಷದ ಸಿಕ್ಖ್ ಬಾಲಕನನ್ನು  ಗ್ಯಾಸ್ ಸ್ಟವ್‌ನಲ್ಲೇ ಕೋಳಿ ಸುಡುವಂತೆ ಸುಡಲಾಯಿತು. ಅಗರ್ತಲಾದಲ್ಲಿ ವಾಸಿಸುತ್ತಿದ್ದ ೩೦ ಸಿಕ್ಖ್ ಕುಟುಂಬಗಳು ಜೀವರಕ್ಷಣೆಗಾಗಿ ಪೊಲೀಸ್ ಠಾಣೆಯ  ಮೆಟ್ಟಲೇರಿದರು. ಪೊಲೀಸರೇ ಅವರೆಲ್ಲರನ್ನು ಸಜೀವವಾಗಿ ಸುಟ್ಟರು. ಮಧ್ಯಪ್ರದೇಶದ ಜಬಲ್‌ಪುರದಲ್ಲಿ ೧೨ ಜನ ಸಿಕ್ಖರನ್ನು ರೈಲು ನಿಲ್ದಾಣದ  ಪ್ಲಾಟ್‌ಫಾರ್ಮ್‌ನಲ್ಲೇ ನೇಣು ಹಾಕಿ ಕೊಲ್ಲಲಾಯಿತು.

ಮತ್ತಷ್ಟು ಓದು »

11
ಜೂನ್

ಹೊಸ ಚಳುವಳಿಯ ಅರುಣೋದಯ

Desktopಪ್ರೊ. ವಿವೇಕ ಧಾರೇಶ್ವರ, ಬೆಂಗಳೂರು

ವಚನ ಚಳುವಳಿ ಹಾಗೂ ಜಾತಿ ವ್ಯವಸ್ಥೆಯ ಕುರಿತ ಡಂಕಿನ್ ಅವರ ಪ್ರಬಂಧದ ವಿರುದ್ಧವಾಗಿ ನಡೆದ ವಾಗ್ದಾಳಿಯನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ಅದರಲ್ಲೂ ಪ್ರೊ. ಶಿವಪ್ರಕಾಶರನ್ನು ಬಿಟ್ಟರೆ ಮತ್ಯಾರೂ ಆ ಪ್ರಬಂಧವನ್ನು ಓದಿದಂತೆ ಕಾಣುವುದಿಲ್ಲ. ಇಲ್ಲಿ ಗಮನಿಸಬೇಕಾದ ಎರಡು ಅಂಶಗಳಿವೆ: 1) ಇದು ಡಂಕಿನ್ ವಿಚಾರಕ್ಕೊಂದೇ ಹುಟ್ಟಿದ ವಿರೋಧವಲ್ಲ ಎಂಬುದು ಸ್ಪಷ್ಟ. ಬಾಲಗಂಗಾಧರರ ‘ಹೀದನ್..’ (ಸ್ಮೃತಿ-ವಿಸ್ಮೃತಿ) ಗ್ರಂಥವು ಹುಟ್ಟುಹಾಕಿದ ಸಂಶೋಧನಾ ಕಾರ್ಯಕ್ರಮದ ಕುರಿತ ಚರ್ಚೆಯಿಂದಾಗಿ ಹುಟ್ಟಿಕೊಂಡ ಚಿಂತನಾ ಪರಿಸರವನ್ನೇ ಇಲ್ಲಿ ಗುರಿಯಾಗಿಟ್ಟುಕೊಳ್ಳಲಾಗಿದೆ ಎಂಬುದು ಖಚಿತ. 2) ಇದನ್ನು ನಾನು ಗುಂಪು, ಸಮುದಾಯ ಎಂಬುದಾಗಿ ಗುರುತಿಸದೇ ಪರಿಸರ ಎಂದು ಏಕೆ ಕರೆಯುತ್ತೆನೆಂದರೆ, ಇಲ್ಲಿರುವವರು ಬೇರೆ ಬೇರೆ ದೇಶಗಳಿಗೆ ಸೇರಿದ್ದಾರೆ, ಬೇರೆ ಬೇರೆ ಭಾಷೆಗಳನ್ನು ಆಡುತ್ತಾರೆ, ವಿಭಿನ್ನ ಸಂಸ್ಥೆಗಳು ಹಾಗೂ ಸಾಮಾಜಿಕ ಹಿನ್ನೆಲೆಗಳಿಗೆ ಸೇರಿದ್ದಾರೆ. ಈ ಸಂಶೋಧಕರು ತಮಗಿರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ನೆಲೆಯಲ್ಲಿ ಮಾತ್ರವೇ ಒಟ್ಟಿಗೆ ಬಂದಿದ್ದಾರೆ. ಸಂಶೋಧನಾಸಕ್ತಿಯೇ ಇವರನ್ನೆಲ್ಲ ಒಟ್ಟಿಗೆ ತಂದಿದೆಯೇ ವಿನಃ ಯಾವುದೇ ರಾಜಕೀಯ ಉದ್ದೇಶವಾಗಲೀ, ಸಾಮಾಜಿಕ ಹೋರಾಟವಾಗಲೀ ಅಲ್ಲ. ಅವರ ಮೇಲೆ ನಡೆಯುತ್ತಿರುವ ದಾಳಿಯ ರಭಸವನ್ನು ಹಾಗೂ ಕೆಸರೆರಚಾಟದ ಸ್ವರೂಪವನ್ನು ವಿಶ್ಲೇಷಿಸುವುದಕ್ಕೂ ಮೊದಲು ಈ ಮೇಲಿನ ಎರಡೂ ಅಂಶಗಳನ್ನು ಗುರುತಿಸಿಕೊಳ್ಳುವುದು ಮುಖ್ಯ.

ಈ ಸಂಶೋಧಕರ ಸಂಶೋಧನೆಯ ಕುರಿತು ಚರ್ಚೆಯೇ ನಡೆಯುತ್ತಿಲ್ಲ, ಬದಲಾಗಿ ಈ ಸಂಶೋಧನೆಯ ರಾಜಕೀಯ ಪರಿಣಾಮದ ಕುರಿತು ಕಟು ಟೀಕೆಗಳು ಬರುತ್ತಿವೆ. ಒಂದು ಸಂಶೋಧನಾ ಕಾರ್ಯಕ್ರಮದ ಪರಿಣಾಮದ ಕುರಿತು ಚರ್ಚಿಸಲೇ ಬಾರದು ಎಂದು ನಾನು ಹೇಳುತ್ತಿಲ್ಲ. ಆದರೆ ಅಂಥ ಚರ್ಚೆಗೂ ಮುನ್ನ ಆ ಸಂಶೋಧಕರ ವಾದ ಹಾಗೂ ಸಂಶೋಧನೆಗಳು ಏನು ಎಂಬುದನ್ನು ತಿಳಿದುಕೊಳ್ಳುವುದಾದರೂ ಬೇಡವೆ? ಈ ಸಂಶೋಧನೆಯು ಹೊಸದೇ ಆದ ವಿಚಾರವೊಂದನ್ನು ತಿಳಿಸುತ್ತಿದೆ, ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾಗಿದೆ, ಹಾಗೂ ಬೌದ್ಧಿಕ ಸವಾಲನ್ನು ಎಸೆಯುತ್ತದೆ ಎಂಬ ಕಾರಣಕ್ಕಾದರೂ ಅದನ್ನು ಗಂಭೀರವಾಗಿ ಪರಿಶೀಲಿಸುವ ಒಂದು ಪ್ರಯತ್ನವಾದರೂ ಕಾಣಬೇಡವೆ? ಸ್ಮೃತಿ-ವಿಸ್ಮೃತಿಯಲ್ಲಿ ಬರುವ ಹೇಳಿಕೆಯೊಂದು ನಮ್ಮಲ್ಲಿ ಅನೇಕರನ್ನು ಕಾಡಿದೆ: ಅದೆಂದರೆ, “ಹಿಂದೂಯಿಸಂ” ಎಂಬುದು ಅಸ್ತಿತ್ವದಲ್ಲಿ ಇಲ್ಲವೊಂದೇ ಅಲ್ಲ ಯುರೋಪಿಯನ್ನರು ಅಂಥದ್ದೊಂದು ಸಂಗತಿ ಇದೆ ಎಂಬುದಾಗಿ ಅಂದುಕೊಂಡೇ ಭಾರತೀಯ ಸಂಸ್ಕೃತಿಯನ್ನು ಅನುಭವಿಸಿದರು. ಈ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಿಕ್ಕಾಗಿ ಸ್ಮೃತಿ-ವಿಸ್ಮೃತಿಯಲ್ಲಿ ರಿಲಿಜನ್ನಿನ ಕುರಿತು ಒಂದು ಸಿದ್ಧಾಂತವನ್ನು ರಚಿಸಿ ರಿಲಿಜನ್ನೆಂದರೆ ಏನು? ಅದು ಭಾರತದಲ್ಲಿ ಇರಲಿಕ್ಕೆ ಹೇಗೆ ಸಾಧ್ಯವಿಲ್ಲ ಎಂಬುದನ್ನು ವಿವರಿಸಲಾಗಿದೆ. ಇವು ಗಹನವಾದ ಹೇಳಿಕೆಗಳಾಗಿದ್ದು ಈ ವಾದವನ್ನು ಅರ್ಥಮಾಡಿಕೊಂಡ ನಮ್ಮಲ್ಲಿ ಕೆಲವರಾದರೂ ರೋಮಾಂಚಿತರಾದೆವಷ್ಟೇ ಅಲ್ಲ ಸಮಾಜ ವಿಜ್ಞಾನಗಳಲ್ಲಿ ಸಿದ್ಧಾಂತವನ್ನು ಕಟ್ಟುವುದು ಸಾಧ್ಯ ಎಂಬ ಹೇಳಿಕೆಗೆ ದೃಷ್ಟಾಂತವನ್ನು ಕಣ್ಣಾರೆ ನೋಡಿ ಸ್ಫೂರ್ತಿಗೊಂಡೆವು. ಅಂದರೆ ನಮಗೆ ಸಾಮಾಜಿಕ ಜಗತ್ತಿನ ಜ್ಞಾನವನ್ನು ನಿಸರ್ಗ ವಿಜ್ಞಾನಗಳ ದಾರಿಯಲ್ಲೇ, ಅದಕ್ಕೂ ಭಿನ್ನವಾಗಿ ಕಟ್ಟಬಹುದು ಎಂಬುದನ್ನು ಅದು ತೋರಿಸಿತು. ಈ ಸಿದ್ಧಾಂತವನ್ನು ಕಟ್ಟುವ ಕೆಲಸವೇ ಇಂದು ನಾನು ಉಲ್ಲೇಖಿಸುತ್ತಿರುವ ಈ ಹೊಸ ಸಂಶೋಧನಾ ಪರಿಸರವನ್ನು ರೂಪಿಸಿದೆ.

ಮತ್ತಷ್ಟು ಓದು »

4
ಜೂನ್

ಸಂಶೋಧನೆಯ ದಾರಿಯನ್ನು ಯಾರು ನಿರ್ಧರಿಸಬೇಕು?

  ಪ್ರೊ.ರಾಜಾರಾಮ ಹೆಗಡೆ

{20-5-2013 ಕನ್ನಡ ಪ್ರಭದಲ್ಲಿ ವರದಿಯಾದಂತೆ ಡಾ. ಎಂ.ಎಂimages. ಕಲ್ಬುರ್ಗಿಯವರು ಬಸವಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಕುವೆಂಪು ವಿಶ್ವವಿದ್ಯಾನಿಲಯದ ಸಂಶೋಧಕರ ಕುರಿತು ಆಡಿದ ಮಾತಿಗೆ ಈ ಪ್ರತಿಕ್ರಿಯೆ.}

“ವಚನ ಚಳುವಳಿಯ ಚರ್ಚೆಯಲ್ಲಿ ಪ್ರಜಾವಾಣಿ ಪತ್ರಿಕೆಯು ಒಂದು ಪಕ್ಷದವರ ನಿಲುವುಗಳನ್ನು ಹೆಚ್ಚಾಗಿ ಬೆಂಬಲಿಸಿ ಈಗ ಚರ್ಚೆಯನ್ನು ಸಂಪೂರ್ಣವಾಗಿ ಆ ಪತ್ರಿಕೆಯು ನಿಲ್ಲಿಸಿಯಾಗಿದೆ. ಆದರೆ ಆ ಚರ್ಚೆಯ ಪರಿಣಾಮಗಳು ಗಾಢವಾಗಿವೆ ಎಂಬುದು ಸ್ಪಷ್ಟ. ಹಲವಾರು ಪ್ರಗತಿಪರ ಸಂಘಟನೆಗಳು ನಮ್ಮ ಸಂಶೋಧನಾ ಕೇಂದ್ರವನ್ನು ಮತ್ತು ಸಂಶೋಧನೆಯನ್ನು ನಿಲ್ಲಿಸುವಂತೆ ಸರ್ಕಾರದ ಮಟ್ಟದಲ್ಲಿ, ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಬೀರುತ್ತಾ ಒತ್ತಡ ತರುತ್ತಿವೆ. ಇಂತಹ ಸಮಯದಲ್ಲಿ ಬಸವಶ್ರೀ ಪ್ರಶಸ್ತಿ ಪಡೆದ ಎಂ.ಎಂ.ಕಲಬುರ್ಗಿಯವರು ವಿಕೃತ ಸಂಶೋಧನೆಯನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳ ಮುಂದೆ ಅಲವತ್ತುಕೊಂಡಿರುವುದು ಹಲವಾರು ಪತ್ರಿಕೆಗಳಲ್ಲಿ ಪಕ್ರಟವಾಗಿದೆ. ಅವರ ಕೋರಿಕೆಗೆ ಕೆಲವಾದರೂ ಪರಿಣಾಮಗಳು ಇದ್ದೇ ಇರುತ್ತವೆ. ಕನ್ನಡಪ್ರಭದಲ್ಲಿ ಪ್ರಕಟವಾದ ಅವರ ಅಂಬೋಣಕ್ಕೆ ಪ್ರತಿಕ್ರಿಯೆಯಾಗಿ ಈ ಲೇಖನವನ್ನು ಬರೆದು ಕನ್ನಡಪ್ರಭ ಪತ್ರಿಕೆಗೆ ಕಳುಹಿಸಲಾಗಿತ್ತು. ಆದರೆ ಪ್ರಕಟವಾಗಿಲ್ಲ.”

ವಿಶ್ವವಿದ್ಯಾನಿಲಯದ ಸಿಂಡಿಕೇಟು ಸದಸದ್ಯರು ಈ ಅಧ್ಯಾಪಕರಿಗೆ ಎಚ್ಚರಿಕೆ ನೀಡಬೇಕೆಂದು ಅವರು ಕರೆಕೊಟ್ಟಿದ್ದಾರೆ. ಅದೇ ಭಾಷಣದಲ್ಲಿ ಅವರು ವಚನಗಳ ಕುರಿತು ಕುವೆಂಪು ವಿಶ್ವವಿದ್ಯಾಲಯದ ಸಂಶೋಧಕರು ನಡೆಸುತ್ತಿರುವುದು ವಿಕೃತ ಸಂಶೋಧನೆ, ಅದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೂ ಕೇಳಿಕೊಂಡಿದ್ದಾರೆ ಎಂಬುದನ್ನು ಇತರ ಪತ್ರಿಕೆಗಳೂ ಪ್ರಕಟಿಸಿವೆ.

ಕನ್ನಡ ಸಾರಸ್ವತ ಲೋಕದಲ್ಲಿ ಕಲಬುರ್ಗಿಯವರನ್ನು ಸಂಶೋಧಕರು ಎಂದೇ ಗುರುತಿಸಲಾಗುತ್ತದೆ. ಅವರು ಹಂಪಿ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದಾರೆ. ಅದಕ್ಕಿಂತ ಸ್ವತಃ ಅವರೇ ತಮ್ಮ ಮಾರ್ಗ 2 ಸಂಪುಟದಲ್ಲಿನ ಲೇಖನವೊಂದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ಎದುರಿಸಬೇಕಾದ ಪರಿಸ್ಥಿತಿ ಕೂಡ ಒಮ್ಮೆ ಬಂದಿತ್ತು. ಆಗ ಅಭಿಪ್ರಾಯ ಸ್ವಾತಂತ್ರ್ಯದ ಮೌಲ್ಯ ಅವರಿಗೆ ರಕ್ಷಣೆಯಾಗಿ ಬಂದಿತ್ತು. ಆದರೆ ಈಗ ಒಂದು ವಿಪರ್ಯಾಸವನ್ನು ನೋಡುತ್ತಿದ್ದೇವೆ. ನಮ್ಮ ಶಿಕ್ಷಣ ವ್ಯವಸ್ಥೆಯು ಸಂಶೋಧಕನೊಬ್ಬನಿಗೆ ನೀಡುವ ಯಾವ ಭರವಸೆಯು ಕಲಬುರ್ಗಿಯವರ ಸಂಶೋಧನೆಯನ್ನು ಸಾಧ್ಯ ಮಾಡಿತೊ ಹಾಗೂ ಅದರ ಹೆಸರಿನಲ್ಲಿ ಎದ್ದ ವಿವಾದಗಳಿಗೆ ಎದುರಾಗಿ ಅವರನ್ನು ರಕ್ಷಿಸಿತೊ ಅದು ಮುಂದಿನ ತಲೆಮಾರಿನ ಸಂಶೋಧಕರಿಗೆ ಬೇಡ ಎಂಬ ಅಭಿಪ್ರಾಯಕ್ಕೆ ಅವರು ಬಂದಂತಿದೆ. ಅಥವಾ ಅವರು ಈಗ ಸಂಶೋಧನೆಗೆ ಬೇರೆಯದೇ ಆದ ಅರ್ಥ ಹಚ್ಚುತ್ತಿರಲೂಬಹುದು

ಮತ್ತಷ್ಟು ಓದು »

17
ಮೇ

ಹೇಗೆ ಹೇಳಲಿ? ಏನು ಹೇಳಲಿ?

– ಪ್ರೊ.ರಾಜಾರಾಮ ಹೆಗಡೆ
Vachana Charche ದೇವನೂರು ಮಹಾದೇವರವರ ಲೇಖನಕ್ಕೆ ಪ್ರತಿಕ್ರಿಯೆ {ಪ್ರಜಾವಾಣಿಯಲ್ಲಿ ಅಪ್ರಕಟಿತ ಲೇಖನ}

ದೇವನೂರು ಮಹಾದೇವರ ಪ್ರತಿಕ್ರಿಯೆಯನ್ನು ಓದಿದ ನಂತರ, ಅವರು ಏನನ್ನು ಹೇಗೆ ಹೇಳಿದ್ದಾರೆ ಎಂಬುದನ್ನು ಕಂಡ ನಂತರ ಅವರನ್ನು ಕಾಡಿದ ಆ “ಹೇಗೆ ಹೇಳಲಿ? ಏನು ಹೇಳಲಿ?” ಎಂಬ ಪ್ರಶ್ನೆ ಈಗ ಅವರದಕ್ಕಿಂತ ನನ್ನದೇ ಆಗಿದೆ. ಅವರು ನಮ್ಮ ಕುರಿತು ಏಕೆ ಇಂಥ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟ. ಅವರಿಗೆ ಸಿಟ್ಟಿದೆ. ದೇವನೂರರು ಒಂದು ಸಮೂಹದ ಹಿತದೃಷ್ಟಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೀವನ ಈ ಕುರಿತಾಗಿಯೇ ಒಂದು ಹೋರಾಟ ಎಂದರೂ ತಪ್ಪಿಲ್ಲ. ಇಷ್ಟನ್ನು ಖಚಿತವಾಗಿ ಹೇಳಬಲ್ಲಷ್ಟು ನಾನು ಅವರನ್ನು ಬಲ್ಲೆ. ಹಾಗೂ ಅದನ್ನು ಗಮನಿಸುವುದು ಮುಂದಿನ ಸಂವಾದಕ್ಕೆ ನಿರ್ಣಾಯಕ ಎಂಬುದಾಗಿ ನನಗನಿಸುತ್ತದೆ. ಏಕೆಂದರೆ ಯಾರದೇ ಪ್ರಾಮಾಣಿಕತೆಯ ಮೇಲೆ ಅಪನಂಬಿಕೆಯನ್ನಿಟ್ಟು ಬೌದ್ಧಿಕ ಚರ್ಚೆಯನ್ನು ಪ್ರಾರಂಭಿಸುವುದರಿಂದ ಚರ್ಚಿಸತಕ್ಕ ವಿಷಯಕ್ಕೆ ನ್ಯಾಯ ಸಲ್ಲುವುದಿಲ್ಲ.

ನಮ್ಮ ದುರುದ್ದೇಶದ ಕುರಿತು ಅವರು ಕಟ್ಟಿಕೊಂಡಿರುವ ಚಿತ್ರಗಳನ್ನು ಅವರ ಲೇಖನದ ಮೂಲಕ ಗ್ರಹಿಸುತ್ತ ಹೋದಾಗ ನಮ್ಮ ಕುರಿತು ಯಾವ ರೀತಿಯ ಚಿತ್ರಣವು ಅವರ ವಲಯದಲ್ಲಿ ಗಟ್ಟಿಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ದೃಷ್ಟಾಂತ ಸಿಕ್ಕಂತಾಯಿತು. ಹಾಗಂತ ಇದೇನೂ ನನಗೆ ಆಘಾತ ನೀಡಲಿಲ್ಲ. ಈ ಥೆರಪಿಯನ್ನು ನನಗೆ ಹಾಗೂ ನನ್ನ ಗುಂಪಿಗೆ ನಾವು ಬಾಲು ಜೊತೆ ಸೇರಿ ಸಂಶೋಧನೆ ಪ್ರಾರಂಭಿಸಿದಾಗಿನಿಂದಲೂ ನೀಡಲಾಗುತ್ತಿದೆ. ಸಂಶೋಧನೆ ಮಾಡುವುದು ಕೇವಲ ಬೌದ್ಧಿಕ ಪ್ರಶ್ನೆಯೊಂದೇ ಅಲ್ಲ, ಅದು ಪ್ರವಾಹದ ವಿರುದ್ಧ ಈಜುವ ಕೆಲಸ ಕೂಡ ಆಗಿದೆ ಎಂಬುದು ನಮಗೆ ಈಗಾಗಲೇ ಅನುಭವ ವೇದ್ಯವಾಗಿದೆ. ನಮ್ಮ ದುರುದ್ದೇಶದ ಕುರಿತು ಹುಟ್ಟುತ್ತಿರುವ ಕಥೆ ಸಾಕಷ್ಟು ಬೇರುಬಿಡುತ್ತಿದೆ ಎಂಬುದನ್ನು ಪ್ರಜಾವಾಣಿ ಪ್ರತಿಕ್ರಿಯೆಗಳಿಂದ ಮನಗಾಣುತ್ತಿದ್ದೇನೆ. ದೇವನೂರರೇ ಕೊಟ್ಟ ಆಡಿನ ಕಥೆಯಂತೆ ಹತ್ತಾರು ಮಂದಿ ಒಂದು ಸುಳ್ಳನ್ನು ಹೇಳುತ್ತಿದ್ದರೆ, ಹಾಗೂ ನಾವು ಸುಮ್ಮನೇ ಇದ್ದರೆ ಜನ ಅದನ್ನೇ ಸತ್ಯವೆಂದು ನಂಬಿಬಿಡುವ ಸಾಧ್ಯತೆಯಿದೆ. ಒಂದೊಮ್ಮೆ ನಮ್ಮ ಸಂಶೋಧನೆಯು ದೇವನೂರರು ಅಂದುಕೊಂಡಂತೇ ಯಾವುದೇ ಮಾನವ ಸಮುದಾಯದ ಅಹಿತವನ್ನು ಬಯಸುವ ದುರುದ್ದೇಶವನ್ನು ಹೊಂದಿಲ್ಲ ಅಂತಾದರೆ, ಈ ನಿಟ್ಟಿನಲ್ಲಿ ಈಗಿರುವ ಜ್ಞಾನದ ಮಿತಿಗಳನ್ನು ಕಳೆದು ಇನ್ನೂ ಹೆಚ್ಚು ಸ್ಪಷ್ಟತೆಯನ್ನು, ನ್ಯಾಯವನ್ನು ಸಾಧಿಸುವುದು ಅಂತಾದರೆ, ದೇವನೂರರ ನೋವಿಗೆ ಇರಬಹುದಾದ ಕಾರಣಗಳೇ ಮಾಯವಾಗುತ್ತವೆ. ಮುಂದೆ ಅವರ ಜೊತೆ ಅರ್ಥಪೂರ್ಣ ಸಂವಾದ ಸಾಧ್ಯವಾಗಬಹುದು ಎಂಬ ಆಶಯದಿಂದ ಈ ಲೇಖನ.

ಮತ್ತಷ್ಟು ಓದು »

16
ಮೇ

ವಂದೇ ಮಾತರಂ ಹಾಡಲಾಗದಿದ್ದರೆ…

-ಅಶ್ವಿನ್ ಅಮೀನ್

Vande Mataram BSPಅದನ್ನು ಬರಿ ಗೀತೆ ಅನ್ನಬಹುದೇ?ಊಹೂಂ ಅದು ಗೀತೆಯಲ್ಲ, ಅದು ಭಾರತದ ಸ್ವಾತಂತ್ರ್ಯ ಹೋರಾಟದ ಬೀಜಮಂತ್ರ.ಬ್ರಿಟಿಷರ ನಿದ್ದೆ ಕೆಡಿಸುತ್ತಿದ್ದ ಮಂತ್ರವದು.ಎದೆಯುಬ್ಬಿಸಿ ಗರ್ವದಿಂದ ಗರ್ಜಿಸುವಾಗ ಮೈ ಮನಸ್ಸುಗಳು ರೋಮಾಂಚನಗೊಳ್ಳುತ್ತವೆ.. ಅದೆಂತಾ ಶಕ್ತಿಯಿದೆ ಈ ‘ವಂದೇ ಮಾತರಂ’ ನಲ್ಲಿ. ಅದೆಷ್ಟೋ ಹೋರಾಟಗಳ ಸ್ಪೂರ್ತಿ ಇದು, ದೇಶ ಪ್ರೇಮವ ಬಡಿದೆಬ್ಬಿಸುವ ಬೀಜಮಂತ್ರವಿದು. ಪ್ರತಿಯೊಬ್ಬ ಭಾರತೀಯನ ನಾಡಿ ಮಿಡಿತವಿದು… ವಂದೇ ಮಾತರಂ ಅನ್ನು ವಿಶ್ಲೇಷಿಸ ಹೊರಟರೆ ಆ ವಿಶ್ಲೇಷಣೆಯೇ ಒಂದು ವೀರ ಗೀತೆಯಾದೀತು…!!!!

ಆದರೆ…ವಂದೇ ಮಾತರಂ ಅನ್ನು ಗೌರವಿಸುವ ಮನಸ್ಸುಗಳ ನಡುವೆ ಧರ್ಮದ ನೆಪವೊಡ್ಡಿ ಅದನ್ನು ವಿರೋಧಿಸುವ ಕೆಲ ವಿಷ ಮನಸ್ಸುಗಳೂ ತುಂಬಿರುವುದು ಖೇದಕರ..

ಮೊನ್ನೆ ಮೊನ್ನೆ ತಾನೆ ತಾನು ಮುಸ್ಲಿಂ ಎಂಬ ಕಾರಣಕ್ಕೆ ವಂದೇ ಮಾತರಂ ಹಾಡುವುದಿಲ್ಲ ಎಂದು ವಂದೇ ಮಾತರಂ ಹಾಡಿನ ಮಧ್ಯೆಯೇ ಸಂಸತ್ತಿನಿಂದ ಹೊರನಡೆದು ಉದ್ದಟತನ ತೋರಿದ ಬಿಎಸ್ಪಿ ಸಂಸದ ಶಫಿಕುರ್ ರೆಹಮಾನ್ ಬಗ್ಗೆ ಕೇಳಿರುತ್ತೀರಿ. ಇಂತಹ ಮತಾಂಧವಾದದ ನಡೆ ಇದೇ ಮೊದಲಲ್ಲ. ವಂದೇ ಮಾತರಂ ಅನ್ನು ವಿರೋಧಿಸಿ ಭಾರತೀಯರಲ್ಲಿ ವಿಷ ಬೀಜ ಬಿತ್ತಿದವರಲ್ಲಿ ಆಲಿ ಸಹೋದರರು ಮೊದಲಿಗರಾಗಿ ಕಂಡು ಬರುತ್ತಾರೆ.

ಆ ಘಟನೆ ಹೀಗಿದೆ;

1923. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ಸ್ ನ ರಾಷ್ಟ್ರೀಯ ಅಧಿವೇಶನ ನಡೆಯುತ್ತಿತ್ತು. ಆಗ ಪ್ರತಿ ಅಧಿವೇಶನದಲ್ಲಿ ವಂದೇ ಮಾತರಂ ಹಾಡುವ ಸಂಪ್ರದಾಯ ಬೆಳೆದು ಬಂದಿತ್ತು. ಪಂಡಿತ್ ವಿಷ್ಣು ದಿಗಂಬರ ಫಲುಸ್ಕರ್ ಪ್ರತಿ ವರ್ಷದಂತೆ ವಂದೇ ಮಾತರಂ ಹಾಡ ಹೊರಟಾಗ ಆಗಿನ ಕಾಂಗ್ರೆಸ್ಸ್ ಅಧ್ಯಕ್ಷ (ಮುಸ್ಲಿಂ ಲೀಗ್ ನ ಸ್ಥಾಪಕರಲ್ಲೊಬ್ಬರಾದ) ಮೌಲಾನ ಅಹಮದ್ ಆಲಿ ಆತನ ಸಹೋದರ ಶೌಕತ್ ಆಲಿ ತಡೆದರು. ಇಸ್ಲಾಂನ ಕಾನೂನಿನಂತೆ ಸಂಗೀತ ನಿಷಿದ್ಧ ಎಂಬುದು ಅವರು ಕೊಟ್ಟ ಕಾರಣವಾಗಿತ್ತು. ಹಠಾತ್ ಬೆಳವಣಿಗೆಯಿಂದ ಕೆಂಡಾ ಮಂಡಲರಾದ ಫಲುಸ್ಕರ್ ಇದು ಕಾಂಗ್ರೆಸ್ಸ್ ನ ಅಧಿವೇಶನ, ಒಂದು ಧರ್ಮದ ಸಭೆಯಲ್ಲ.. ಮುಸ್ಲಿಮರ ದರ್ಗಾ, ಮಸೀದಿಯೂ ಅಲ್ಲ.. ಈ ರಾಷ್ಟ್ರೀಯ ವೇದಿಕೆ ಮೇಲೆ ವಂದೇ ಮಾತರಂಗೆ ಅಡ್ಡಿಪಡಿಸಲು ನಿಮಗೇನು ಅಧಿಕಾರವಿದೆ? ಅಧಿವೇಶನ ಪ್ರಾರಂಭವಾಗುವ ಮೊದಲು ಅಧ್ಯಕ್ಷೀಯ ಮೆರವಣಿಗೆ ಯಲ್ಲಿ ವಿಜೃಂಭಣೆಯ ಸಂಗೀತ ವಾದ್ಯಗಳೊಂದಿಗೆ ಬರುವಾಗ ನಿಮಗೆ ಹಿಡಿಸಿತೇ ?! ವಂದೇ ಮಾತರಂಗೆ ವಿರೋಧ ಇರುವವರು ಧಾರಾಳವಾಗಿ ಹೊರ ನಡೆಯಬಹುದು ಎಂದು ಆಲಿ ಸಹೋದರರನ್ನು ಜಾಡಿಸಿದರು. ನಂತರ ವಂದೇ ಮಾತರಂ ಅನ್ನು ಪೂರ್ತಿಯಾಗಿ ಹಾಡಿ ವಂದಿಸಿ ಕೆಳಗಿಳಿದರು.
ಮತ್ತಷ್ಟು ಓದು »

6
ಏಪ್ರಿಲ್

ಇನ್ನೂ ಬೇಕೆ ಇಂಥ ರಾಜಕೀಯ ಮೀಸಲಾತಿ?

-ಸಾತ್ವಿಕ್ ಎನ್.ವಿ.

ಒಂದು ವಿಷಯವಂತೂ ಸಂಸತ್ತಿನಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ಸರ್ವಾನುಮತದಿಂದ ಅನುಮೋದನೆ ಪಡೆಯುತ್ತದೆ. ಸಂಸದರು ಇದಕ್ಕೆ ವಿರೋಧ ಇಲ್ಲವೆ ಅನುಮಾನ ವ್ಯಕ್ತಪಡಿಸುವುದು ಪ್ರತಿಗಾಮಿತನ ಎಂದೇ ಭಾವಿಸುತ್ತಾರೆ. ಪಕ್ಷಬೇಧ ಮರೆತು ಬೆಂಬಲಿಸುತ್ತಾರೆ. ಅದುವೇ ಚುನಾವಣೆಯಲ್ಲಿ ನೀಡಲಾಗಿರುವ ರಾಜಕೀಯ ಮೀಸಲಾತಿಯ ನವೀಕರಣ. ಇದು ಪ್ರತಿ ಹತ್ತು ವರ್ಷಕ್ಕೊಮ್ಮೆ ನವೀಕರಣಕ್ಕೆ ಬರುತ್ತದೆ. ಆಗ ಸಂಸತ್ತು ಈ ಪದ್ಧತಿಯನ್ನು ನಿರಾಕರಿಸಬಹುದು ಇಲ್ಲವೇ ಮುಂದಿನ ಹತ್ತು ವರ್ಷಕ್ಕೆ ನವೀಕರಿಸಬಹುದು. ಆದರೆ ಸಂಸತ್ತು ಯಾವುದೇ ಚರ್ಚೆಯಿಲ್ಲದೇ ನವಿಕರಿಸುತ್ತಲೇ ಬಂದಿದೆ. ಸರ್ಕಾರ ಯಾ ರಾಜಕೀಯಪಕ್ಷಗಳಿಗೆ ದಲಿತ/ಹಿಂದುಳಿದ ವರ್ಗಗಳ ಬಗ್ಗೆ ಇಷ್ಟೊಂದು ಪ್ರೀತಿ ಎಲ್ಲಿಂದ ಉಕ್ಕಿತೆಂದು ಆಶ್ಚರ್ಯವಾಗಬಹುದು. ಆದರೆ ಇದರ ಹಿಂದಿನ ತಂತ್ರ ಬೇರೆಯದೇ ಇದೆ.

ಯಾಕೆಂದರೆ ಸಂವಿಧಾನದಲ್ಲಿ ದಲಿತ ಜನವರ್ಗದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ನೀಡಲಾದ ಈ ಮೀಸಲಾತಿಯು ರಾಜಕೀಯ ಪಕ್ಷಗಳ ಕೈಯಲ್ಲಿ ಸಿಕ್ಕಿ ತನ್ನ ಮೂಲ ಉದ್ದೇಶವನ್ನು ಎಂದೋ ಮರೆತಿದೆ. ಮೀಸಲು ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆ. ಗೆದ್ದ ಸ್ಪರ್ಧಿಯು ತನ್ನ ಸಮುದಾಯದ ಪ್ರತಿನಿಧಿಯಾಗಿರುತ್ತಾನೆ. ತನ್ನ ಸಮುದಾಯದ ಅಭಿವೃದ್ಧಿಯ ಸಲುವಾಗಿ ಸದನದಲ್ಲಿ ಧ್ವನಿ ಎತ್ತುವುದು ಆತನ ಕರ್ತವ್ಯವಾಗಿರುತ್ತದೆ. ಆದರೆ ಪಕ್ಷವೊಂದರ ಹಂಗಿನಲ್ಲಿರುವ ವ್ಯಕ್ತಿಯಿಂದ ಇಂಥ ದೃಢ ಮತ್ತು ನಿಷ್ಠುರ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯವೇ? ಆತ ದಲಿತವರ್ಗದಿಂದ ಬಂದಿದ್ದರೂ ತನ್ನ ಪಕ್ಷಕ್ಕಾಗಿಯೇ ತಯಾರಾದವನು. ಆತ ತನ್ನ ಪಕ್ಷದ ಸಿದ್ಧಾಂತದಿಂದ ಎಷ್ಟು ಹೊರಗೆ ನಿಂತು ಕೆಲಸ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿವೆ? ಹೆಚ್ಚಿನ ಸಂದರ್ಭದಲ್ಲಿ ಆಯ್ಕೆಯಾದ ವ್ಯಕ್ತಿಯು ಪಕ್ಷವೊಂದರಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸುವ ಇಲ್ಲವೇ ಹೌದಪ್ಪನಾಗಿ ಬಳಕೆಯಾಗುವ ಸಂದರ್ಭವೇ ಹೆಚ್ಚು. ಇಂಥ ಸಂದರ್ಭದಲ್ಲಿ ದಲಿತ ಸದಸ್ಯನೊಬ್ಬನಿಗೆ ಇತರೆ ವರ್ಗದ ರಾಜಕೀಯ ನೇತಾರನಿಗಿಂತ ಹೆಚ್ಚಿನ ಜವಾಬ್ದಾರಿ ಮತ್ತು ಹೊಣೆಗಾರಿಕೆ ಇರಬೇಕಾಗುತ್ತದೆ. ಮತ್ತಷ್ಟು ಓದು »

27
ಮಾರ್ಚ್

ವಸಾಹತು ಪ್ರಜ್ಞೆಯ ವಿಶ್ವರೂಪ ೨ : ಏನೀ ಮೂಢನಂಬಿಕೆ?

ಕನ್ನಡ ನಿರೂಪಣೆ: ರಾಜಾರಾಮ ಹೆಗಡೆ

Prof Balu ವಿದ್ಯಾವಂತರಿಗೆ ಈ ಶಬ್ದ ಸುಪರಿಚಿತ. ‘ಭಾರತೀಯ ಸಮಾಜದಲ್ಲಿ ಮೂಢನಂಬಿಕೆ ಆಳವಾಗಿ ಬೇರುಬಿಟ್ಟಿದೆ’, ಅಥವಾ ‘ಭಾರತೀಯರು ಯಾವ್ಯಾವುದೋ ಮೂಢನಂಬಿಕೆಗಳನ್ನು ಇಟ್ಟುಕೊಂಡಿದ್ದಾರೆ’,‘ಈ ಮೂಢನಂಬಿಕೆಗಳನ್ನು ತೊಡೆದು ಹಾಕದ ಹೊರತೂ ನಮ್ಮ ಸಮಾಜ ಉದ್ಧಾರವಾಗುವುದಿಲ್ಲ, ಇತ್ಯಾದಿ ಹೇಳಿಕೆಗಳನ್ನು ಪ್ರತಿಯೊಬ್ಬನೂ ಭಾಷಣ-ಲೇಖನಗಳಲ್ಲಿ, ತರಗತಿಯ ಪಾಠಗಳಲ್ಲಿ ಸಾಕಷ್ಟು ಕೇಳಿರುತ್ತಾನೆ. ಈ ಶಬ್ದದ ಜೊತೆಗೆ ಸಮಾನಾರ್ಥಕವಾಗಿ ‘ಕುರುಡು ನಂಬಿಕೆ’, ‘ಅಂಧ ಶ್ರದ್ಧೆ’, ‘ಗೊಡ್ಡು ಸಂಪ್ರದಾಯಗಳು’ ಇತ್ಯಾದಿ ಶಬ್ದಗಳೂ ಬಳಕೆಯಲ್ಲಿವೆ. ಈ ಶಬ್ದಗಳೆಲ್ಲ ನಮಗೆ ಅರ್ಥವಾಗುತ್ತಿವೆ ಎಂಬುದಾಗಿ ಭಾವಿಸಿಕೊಂಡೇ ನಾವು ಅವನ್ನು ಉಪಯೋಗಿಸುತ್ತಿರುತ್ತೇವೆ. ಇವುಗಳ ಅರ್ಥವನ್ನು ಕೇಳಿದರೆ ‘ಅವು ಅವೈಜ್ಞಾನಿಕ, ಅಜ್ಞಾನದಿಂದ ಮಾಡುವಂಥವು, ಹಾಗಾಗಿ ಅವು ಮೌಢ್ಯ’ ಎಂಬ ಉತ್ತರ ಬರುತ್ತದೆ.

ಹೀಗೊಂದು ಪ್ರಶ್ನೆ ಕೇಳಿಕೊಳ್ಳುವಾ.ಒಂದು ಸಮಾಜದಲ್ಲಿ ಜನರು ಮಾಡುವ ಕೆಲಸಕ್ಕೆಲ್ಲವೂ ವೈಜ್ಞಾನಿಕ ಕಾರಣಗಳಿರಲು ಸಾಧ್ಯವೆ? ಅಂಥವೆಲ್ಲವೂ ಮೂಢನಂಬಿಕೆಯಾಗುತ್ತದೆಯೆ?  ಗುರು Mooda Nambikeಹಿರಿಯರಿಗೆ ಕಾಲುಮುಟ್ಟಿ ನಮಸ್ಕರಿಸುತ್ತೇವೆ, ಮನಸ್ಸಿಗೆ, ಸಂಬಂಧಕ್ಕೆ ಎಲ್ಲ ಹಿತವೇ, ಆದರೆ ವೈಜ್ಞಾನಿಕ ಕಾರಣ ಗೊತ್ತಿಲ್ಲ. ನಮ್ಮ ವಿದ್ಯಾವಂತರ ಆಧುನಿಕ ಸಮಾಜವನ್ನೇ ತೆಗೆದುಕೊಳ್ಳಿ: ಬೇಸಿಗೆಯಲ್ಲಿ ಸೆಕೆಯಾಗಿ ಬೆವರು ಕಿತ್ತುಕೊಂಡು ಹಿಂಸೆಯಾಗುತ್ತಿರುತ್ತದೆ. ಆದರೂ ಕೋಟು, ಟೈಗಳನ್ನು ಕಟ್ಟಿಕೊಂಡು ಆಫೀಸಿಗೆ ಬರುವುದು ಶಿಷ್ಟಾಚಾರ ಅಥವಾ ಡ್ರೆಸ್ ಕೋಡು. ಕೆಲವರಿಗೆ ಕಡ್ಡಾಯ. ಇದರಲ್ಲಿ ಏನು ವೈಜ್ಞಾನಿಕತೆಯಿದೆ?  ಹೀಗೆ ಯಾವುದೇ ಸಮಾಜವನ್ನು ನೋಡಿದರೂ ಕೂಡ ವೈಜ್ಞಾನಿಕ ಕಾರಣಗಳ ಯಾವುದೇ ಹಂಗಿಲ್ಲದೇ ಇಂಥ ಪದ್ಧತಿಗಳು ಅಥವಾ ರೂಢಿಗಳು ಸಮುದಾಯಗಳನ್ನು ಒಟ್ಟಿಗೇ ಹಿಡಿದಿರುತ್ತವೆ, ಸಂಬಂಧಗಳನ್ನು ಬೆಸೆಯುತ್ತಿರುತ್ತವೆ.‘ಅವೈಜ್ಞಾನಿಕ’ ಎಂಬ ಕಾರಣವನ್ನು ಇಟ್ಟುಕೊಂಡು ಇಂಥ ಆಚರಣೆಗಳನ್ನೆಲ್ಲ ತೊಡೆದುಹಾಕಿದರೆ ಯಾವುದಾದರೂ ಮನುಷ್ಯ ಸಮಾಜ ಅಸ್ತಿತ್ವದಲ್ಲಿರಲು ಸಾಧ್ಯವೆ? ಹಾಗಿದ್ದ ಪಕ್ಷದಲ್ಲಿ ಇಂಥ ರೂಢಿಗಳು ಭಾರತೀಯ ಸಮಾಜದಲ್ಲಿ ಮಾತ್ರವೇ ಉಚ್ಛಾಟಿಸಬೇಕಾದ ಪೆಡಂಭೂತವಾಗಿದ್ದು ಹೇಗೆ ಮತ್ತು ಯಾವಾಗ? ಮೂಢ ನಂಬಿಕೆ ಏಕೆ ತೊಡೆಯಬೇಕಾದ ಅನಿಷ್ಠವೆಂಬುದಾಗಿ ನಾವೆಲ್ಲ ನಂಬಿದ್ದೇವೆ?

ಈ ಮೂಢನಂಬಿಕೆ, ಅಂಧಶ್ರದ್ಧೆ ಇತ್ಯಾದಿ ಪದಗಳೆಲ್ಲ ಕನ್ನಡದಲ್ಲಿ ಅರ್ಥವಿಲ್ಲದ ಶಬ್ದಗಳು.ಅವು ಇಂಗ್ಲೀಷಿನ Superstition ಎಂಬ ಶಬ್ದದ ಕನ್ನಡಾನುವಾದಗಳು. ಭಾರತೀಯ ಭಾಷೆಗಳಲ್ಲಿ ಮೌಢ್ಯ ಎಂದರೆ ಅಜ್ಞಾನ ಎಂಬ ಅರ್ಥವಿದೆ. ಮೂಢ ಎಂದರೆ ಅಜ್ಞಾನಿ. ಆದರೆ ಮೂಢ ನಂಬಿಕೆ ಎನ್ನುವ ಪದಗುಚ್ಛವಿಲ್ಲ. ಅದೇ ಥರ ಅಂಧ ಶ್ರದ್ಧೆ. ಶ್ರದ್ಧೆ ಕುರುಡಾಗಿರುವುದು ಅಂದರೇನು? ಕಣ್ಣಿರುವ ಶ್ರದ್ಧೆ ಅಂತ ಒಂದಿದೆಯೆ? ಭಾರತೀಯ ಭಾಷೆಯಲ್ಲಿ ಈ ಪದವನ್ನು ಅರ್ಥೈಸಲು ಹೋದರೆ ನಗೆಪಾಟಲಾಗುತ್ತದೆ. ಸೂಪರ್‍ಸ್ಟಿಶನ್ ಎಂಬುದು ಕ್ರಿಶ್ಚಿಯನ್ ಥಿಯಾಲಜಿಯಲ್ಲಿ ಹಾಗೂ ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಒಂದು ಪರಿಕಲ್ಪನೆಯನ್ನು ಸೂಚಿಸುವ ಪರಿಭಾಷೆ. ಆ ಹಿನ್ನೆಲೆಯಲ್ಲಿ ಮಾತ್ರವೇ ಅರ್ಥವಾಗುವ ಶಬ್ದ.ಈ ಶಬ್ದವು ಮೂಲತಃ ರೋಮನ್ನರಲ್ಲಿ ಬಳಕೆಯಲ್ಲಿದ್ದು, ಅದರರ್ಥ ‘ದೇವರುಗಳ ಕುರಿತು ಅತಿಯಾದ ಹೆದರಿಕೆ’ ಎಂಬುದಾಗಿದೆ. ಇದನ್ನೊಂದು ಒಳ್ಳಯೆ ಲಕ್ಷಣ ಎಂಬುದಾಗಿ ರೋಮನ್ನರೇನೂ ಭಾವಿಸಿರಲಿಲ್ಲ. ಆದರೆ ರೋಮನ್ ಸಂಸ್ಕೃತಿಯನ್ನು ನಾಶಮಾಡಿ ಅದರ ಮೇಲೆ ಪ್ರತಿಷ್ಠಾಪಿತವಾದ ಕ್ರಿಶ್ಚಿಯಾನಿಟಿಯು ರೋಮನ್ನರ ದೇವತೆಗಳನ್ನು ಸುಳ್ಳು ದೇವತೆಗಳೆಂದು ನಿರೂಪಿಸಿತು. ಈ ಸುಳ್ಳು ದೇವತೆಗಳು ಕ್ರೈಸ್ತರ ಗಾಡ್‍ನ ವಿರೋಧಿಯಾದ ಡೆವಿಲ್ಲನ ಮೋಸಗಳು. ಈ ದೇವತೆಗಳ ಮೂಲಕ ಡೆವಿಲ್ಲನು ಜನರನ್ನು ದಾರಿತಪ್ಪಿಸುತ್ತಿದ್ದಾನೆ ಏಕೆಂದರೆ ಅವು ಗಾಡ್‍ನ ವೈರಿಗಳು ಎಂಬುದಾಗಿ ಶಾಸ್ತ್ರವನ್ನು ಬರೆದುಕೊಂಡರು. ಆಗ ಸೂಪರ್‍ಸ್ಟಿಶನ್ ಶಬ್ದಕ್ಕೆ ತನ್ನದೇ ಆದ ಹೊಸ ಅರ್ಥವೊಂದು ಪ್ರಾಪ್ತವಯಿತು. ಅದೆಂದರೆ ‘ ಸುಳ್ಳು ದೇವರುಗಳನ್ನು ಕುರಿತ ಭಯ ಅಥವಾ ಅವನ್ನು ಪೂಜಿಸುವುದು’ ಅಂತ.
ಮತ್ತಷ್ಟು ಓದು »

23
ಮಾರ್ಚ್

‘ಸತ್ತು ಬದುಕುವುದು ಹೇಗೆ!?’ ಎಂದು ತೋರಿಸಿಕೊಟ್ಟವನ ನೆನಪಿಗೆ…

– ರಾಕೇಶ್ ಶೆಟ್ಟಿ

ಕ್ರಾಂತಿಕಾರಿಗಳೆಂದರೆ ಹಾದಿ ತಪ್ಪಿದ ದೇಶ ಭಕ್ತರಲ್ಲ, ಅವರಿಗೂ ಧ್ಯೇಯ,ಗುರಿ,ಆದರ್ಶಗಳಿರುತ್ತವೆ.ಮತ್ತು ಆ ಆದರ್ಶಗಳನ್ನ ಪಾಲಿಸಲು ತಮ್ಮ ಜೀವವನ್ನು ಸಹ ಅವರು ಅರ್ಪಿಸಬಲ್ಲರು ಅಂತ ಜಗತ್ತಿಗೆ ತೋರಿಸಿಕೊಟ್ಟವರು, ಹುಟ್ಟಿ ಬಂದು ಅಷ್ಟೇ ಬೇಗ ಅದಿನ್ಯಾವ್ದೋ ತುರ್ತು ಕೆಲಸವಿದೆ ಅನ್ನುವಂತೆ ಎದ್ದು ಹೊರಟವರು,ಸತ್ತು ಬದುಕುವುದು ಹೇಗೆ ಅಂತ ತೋರಿಸಿಕೊಟ್ಟು ಹೋದವರು ಭಗತ್ ಸಿಂಗ್,ರಾಜಗುರು ಮತ್ತು ಸುಖದೇವ್.

ಅವರು ಹುತಾತ್ಮರಾಗಿ ಇಂದಿಗೆ ೮೦ ವರ್ಷಗಳಾಯಿತು.ಬಹುಷಃ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ  ಕ್ರಾಂತಿಯ ಕಿಡಿಯನ್ನ ಭಾರತೀಯರಲ್ಲಿ ಬಡಿದ್ದೆಬ್ಬಿಸಿದ ಅಪ್ರತಿಮ ವ್ಯಕ್ತಿ ಭಗತ್ ಸಿಂಗ್.ಚಂದ್ರ ಶೇಖರ್ ಆಜಾದ್ರಂತ ಮಹಾನ್ ಗುರುವಿನ ಶಿಷ್ಯ ಗುರುವನ್ನು ಮೀರಿಸುವಂತೆ ಮುನ್ನಡೆದು ಬಿಟ್ಟರು.ಜಲಿಯನ್ ವಾಲ ಬಾಗ್ನ ದುರಂತ ಭಾರತದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯ ಉದಯಕ್ಕೆ ಮುನ್ನುಡಿ ಬರೆದಿತ್ತು.ಗಾಂಧೀಜಿಯವರ ಅಸಹಕಾರ ಚಳುವಳಿಗೆ ಓ ಕೊಟ್ಟು ಬೀದಿಗಿಳಿದ ಭಾರತೀಯರಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ಮುದುಕರವರೆಗೂ ಎಲ್ಲರು ಇದ್ದರು.ಅಂತವರ ಮಧ್ಯೆ ಬಾಲಕ ಭಗತ್ ಕೂಡ ಇದ್ದ.ಚೌರಿ-ಚೌರಾದ ಘಟನೆಯ ನಂತರ ಗಾಂಧೀಜಿ ಏಕಾಏಕಿ ಚಳುವಳಿಯನ್ನ ಹಿಂದೆ ಪಡೆದಾಗ,ಮತ್ತು ಆ ನಂತರ ಗಾಂಧೀಜಿಯ ಮಾತು ಕೇಳಿ ಶಾಲೆ ಬಿಟ್ಟು ಹೊರಬಂದು ಪಟ್ಟ ಪಾಡು ಇವೆಲ್ಲ ಭಗತ್ ಮನಸಿನಲ್ಲಿ ಗಾಂಧೀವಾದದ ಬಗ್ಗೆ ನಂಬಿಕೆ ಕಳೆಯುವಂತೆ ಮಾಡಿತು.ಬಹುಷಃ ಇವೆರಡು ಘಟನೆಗಳು ಭಗತ್ ಸಿಂಗ್ನ  ಮುಂದಿನ ಜೀವನ ದಿಕ್ಕನ್ನು ಬದಲಾಯಿಸಿದವು ಅನ್ನಬಹುದೇನೋ?

ಮತ್ತಷ್ಟು ಓದು »

28
ಫೆಬ್ರ

ಅವರಿಗೆ ಸಾಚಾರ್ ವರದಿ: ನಮಗೇಕಿಲ್ಲ ಪಚೌರಿ ವರದಿ?

-ಸಂತೋಷ್ ತಮ್ಮಯ್ಯ

Rama Sethuveಭಾರತದಲ್ಲಿ ಹಿಂದುಗಳು ಎಂದರೆ ಎರಡನೇ ದರ್ಜೆಯ ಜನರು ಮತ್ತು ಹಿಂದುಗಳನ್ನು ಎಲ್ಲಿಡಬೇಕೋ ಅಲ್ಲೇ ಇಡಲಾಗುತ್ತಿದೆ ಎಂಬುದಕ್ಕೆ ರಾಮಸೇತು ಪ್ರಕರಣವೇ ಸಾಕ್ಷಿ. ಕೇಂದ್ರ ಸರಕಾರ ರಾಜೇಂದ್ರ ಪಚೌರಿ ವರದಿಯನ್ನು ತಿರಸ್ಕರಿಸುವುದರ ಮೂಲಕ ಅದನ್ನು ಸಾಭೀತುಪಡಿಸಿದೆ. ಸುಪ್ರಿಂಕೋರ್ಟಿಗೆ ತಾನು ಸೇತುಸಮುದ್ರಂ ಯೋಜನೆಯನ್ನು ಮಾಡಲು ಬಯಸಿರುವುದಾಗಿಯೂ, ಇಷ್ಟಿಷ್ಟು ಖರ್ಚುವೆಚ್ಚಗಳನ್ನು ಅದಕ್ಕಾಗಿ ಇಟ್ಟಿರುವುದಾಗಿಯೂ ಇದು ರಾಷ್ಟ್ರದ ಮಹತ್ತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂಬುದರ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸಿದೆ.
ಸಲ್ಲಿಸದೇ ಇನ್ನೇನು ತಾನೇ ಮಾಡಿಯಾರು? ರಾಮಸೇತು ಹಿಂದೂ ಭಾವನೆಗಳಿಗೆ ಸಂಬಂಧಪಟ್ಟ ಸಂಗತಿ, ರಾಮಸೇತು ರಾಮಾಯಣಕ್ಕೆ ಸಂಬಂಧಪಟ್ಟ ಸಂಗತಿ, ರಾಮಸೇತು ಹಿಂದೂ ತತ್ತ್ವಶಾಸ್ತ್ರ, ಅಧ್ಯಾತ್ಮದ ಪರಾಕಾಷ್ಠೆಗೆ ಸಂಬಂಧಪಟ್ಟ ಸಂಗತಿ, ರಾಮಸೇತು ವಿಶ್ವದ ಓರ್ವ ಮಹಾನ್ ಆದರ್ಶಪುರುಷನೊಬ್ಬನ , ಧರ್ಮಸಂಸ್ಥಾಪಕನೊಬ್ಬನಿಗೆ ಸಂಬಂಧಪಟ್ಟ ಸಂಗತಿ.  ಆ ಆದರ್ಶಪುರುಷ  ಹಿಂದೂ ದೇವರು ಎಂಬ ಉದಾಸೀನತನ ಸರಕಾರಕ್ಕೆ ಇರುವಾಗ ಈ ಸರಕಾರ ಅಫಿಡವಿಟ್ ಅನ್ನೂ ಸಲ್ಲಿಸುತ್ತದೆ ಮತ್ತು ಅಯೋಧ್ಯೆಯನ್ನೂ ತುಂಡುಮಾಡಿ ಹಂಚಿಬಿಡುತ್ತದೆ. ಅಂದು ಬಾಬರ್ ಮಾಡಿದಂತೆ ರಾಮಕುರುಹನ್ನೇ ಒಡೆಯುತ್ತದೆ. ಹಾಗಾಗಿ ರಾಜೇಂದ್ರ ಪಚೌರಿ ಎಂಬ ವಿಶ್ವವಿಖ್ಯಾತ ಪರಿಸರ ಶಾಸ್ತ್ರಜ್ನ, ಚಿಂತಕ ಹೇಳುವ ಮಾತನ್ನು ಸರಕಾರ ಕೇಳುವ ಸ್ಥತಿಯಲ್ಲಿರುವುದಿಲ್ಲ. ಅದನ್ನು ತಿರಸ್ಕರಿಸದೇ ಇರುವುದಿಲ್ಲ.
ಕೆಲವರ್ಷಗಳ ಹಿಂದೆ ರಾಜೇಂದ್ರ ಪಚೌರಿ ವರದಿ ಸರಕಾರದ ಸೇತುಸಮುದ್ರಂ  ಯೋಜನೆಯ ಅವೈಜ್ನಾನಿಕತೆ ಮತ್ತು ತಿಕ್ಕಲುತನಗಳನ್ನು ಎಳೆಎಳೆಯಾಗಿ ಬಿಡಿಸಿ ವರದಿಯನ್ನು ಸಿದ್ಧ ಮಾಡಿತ್ತು. ಭೂಗೋಳದ ದಕ್ಷಿಣದ ಸಮುದ್ರಗಳ ಜಲಚರಗಳ ತವರು ಮನೆ ಈ ಪ್ರದೇಶ ಎಂದು ಬಣ್ಣಿಸಿತ್ತು. ಈ ಪ್ರದೇಶದಲ್ಲಿ ನಡೆಯುವ ಯಾವುದೇ ಮಾನವ ಹಸ್ತಕ್ಷೇಪಗಳು ಈ ಜಲಚರಗಳ ಸಂತತಿಯನ್ನು ಕೊಲ್ಲುತ್ತದೆ ಎಂದು ಹೇಳಿತ್ತು. ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಕಡಲ್ಗಾಲುವೆಗೆ  ಪರ್ಯಾಯ ಮಾರ್ಗವನ್ನು ಸೂಚಿಸಿತ್ತು. ಆದರೆ ಸರಕಾರ, ಯಾವ ರಾಜೇಂದ್ರ ಪಚೌರಿಯವರ ಮಾತಿಗಾಗಿ ವಿಶ್ವಸಂಸ್ಥೆ ಕಾಯುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಒಂದು ಸಲಹೆಗಾಗಿ ಯುನೆಸ್ಕೋ ಬೇಡಿಕೊಳ್ಳುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಡೇಟ್‌ಗಾಗಿ ವಿದೇಶದ ವಿಶ್ವವಿದ್ಯಾಲಯಗಳು ಕಾಯುತ್ತವೆಯೋ, ಯಾವ ನೊಬೆಲ್ ಪ್ರಶಸ್ತಿ ಸಮಿತಿ ಯಾವ ರಾಜೇಂದ್ರ ಪಚೌರಿಯವರನ್ನು ಆಹ್ವಾನಿಸುತ್ತದೆಯೋ ಅಂಥ ಪಚೌರಿಯವರನ್ನು, ಅವರ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತದೆ. ಕಾರಣ ರಾಮ ಹಿಂದು. ರಾಮಸೇತು ಹಿಂದೂ ಭಾವನೆ.ಅದು ದೇಶದಲ್ಲಿ ಅಂಥಾ ದೊಡ್ಡ ಸಂಗತಿಯೇನಲ್ಲ ಎಂಬ ತನ್ನ ಎಂದಿನ ಕಾಂಗ್ರೆಸ್ ನೀತಿ. ಹಾಗಾಗಿ ಕಾಂಗ್ರೆಸ್‌ಗೆ ಯಾವಾಗಲೂ ಮುಸಲ್ಮಾನರಿಗೆ ಹೆಚ್ಚು ತಿನ್ನಿಸಿ, ಅವರಿಗೆ ಹೆಚ್ಚು ಕುಡಿಸಿ, ಹೆಚ್ಚು ಸಂಬಳ ಕೊಡಿಸಿ, ಹೆಚ್ಚುಹೆಚ್ಚಾಗಿ ಮಿಲಿಟರಿಗೆ ಸೇರಿಸಿಕೊಳ್ಳಿ, ಮೇಷ್ಟ್ರನ್ನಾಗಿ ನೇಮಿಸಿಕೊಳ್ಳಿ,ಗುಮಾಸ್ತರನ್ನಾಗಿಸಿಕೊಳ್ಳಿ. ಅವರನ್ನು ಜತನದಿಂದ ನೋಡಿಕೊಂಡಿರಿ. ಪಾಪ ಅವರು ಬಡವರು ನೋಡಿ, ಮೀಸಲಾತಿ ಸಿಗದೇ ಇದ್ದರೆ ಅವರು ಸತ್ತೇಹೋದಾರು ಎಂದೆಲ್ಲಾ ಆಲಾಪಿಸುವ ರಾಜೇಂದ್ರ ಸಾಚಾರ್ ವರದಿ ಮಾತ್ರ ಇಷ್ಟವಾಗುತ್ತದೆ. ರಾಜೇಂದ್ರ ಪಚೌರಿ ವರದಿ ಮೂಲೆಗುಂಪಾಗುತ್ತದೆ.

ಮತ್ತಷ್ಟು ಓದು »

26
ಫೆಬ್ರ

ರಾಮಸೇತು: ಭಕ್ತಿ ಭಾವನೆಯ ಜೊತೆಗೆ ಜೀವನೋಪಾಯದ ಪ್ರಶ್ನೆಯೂ ಹೌದು

– ಅಜಿತ್ ಶೆಟ್ಟಿ,ಉಡುಪಿ

Raama Setuveರಾಮಾಯಣ ಮತ್ತು ಮಹಾಭಾರತ ಗ್ರಂಥಗಳು ಹಿಂದೂಗಳಿಗೆ ಧಾರ್ಮಿಕ ಪವಿತ್ರ ಗ್ರಂಥಗಳಾಗಿದ್ದು, ಈ ಎರಡೂ ಕೃತಿಗಳು ಇತಿಹಾಸದ ಕಥೆಗಳಾಗಿವೆ .ಅನಾದಿಕಾಲದಿಂದ ಮಹಾಪಂಡಿತರು, ತಿಳಿದವರು ಇವನ್ನು ಪಂಚಮವೇದವೆಂದು ಕೈ ಮುಗಿಯುತ್ತಾರೆ. ಸಾವಿರಾರು ವರ್ಷಗಳಿಂದ ಭಾರತೀಯರ ಜನಜೀವನದಲ್ಲಿ ಮಿಳಿತವಾಗಿರುವ ಈ ಪವಿತ್ರ ಗ್ರಂಥಗಳ ಯಥಾರ್ಥವೇನು ಎಂದು ಕೇಳಿದರೆ ಏನೂಂತ ಹೇಳಬೇಕು? ಆರ್ಯ-ದ್ರಾವಿಡರು ವೈರಿಗಳೆಂದು ಕಥೆ ಕಲ್ಪಿಸಿ, ರಾಮ ಯಾವ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದನೆಂದು ಸರ್ಟಿಫಿಕೇಟ್ ಕೊಡಿ,ಸಾಕ್ಷಧಾರ ಕೊಡಿ ಎನ್ನುವ ಮೂರ್ಖ ಕರುಣಾನಿಧಿಯಂಥವರಿಗೆ ಏನೆಂದು ಉತ್ತರಿಸಬೇಕು ?

ಮೊದಲು ಹಿಂದೂ ರಾಷ್ಟ್ರ ಅಖಂಡ ಭಾರತದ ಮೇಲೆ ಮಹಮದೀಯರ ಆಕ್ರಮಣವಾಯಿತು . ನಂತರ ವ್ಯವಹಾರಕ್ಕೆ ಬಂದ ಕ್ರೈಸ್ತ ಯುರೋಪಿಯನ್ನರ ಆಕ್ರಮಣ . ಮಹಮದೀಯರು ಹೆದರಿಸಿ ಬೆದರಿಸಿ,ಕೊಲೆ ಸುಲಿಗೆ ಮಾಡುತ್ತ ನಮ್ಮ ಸಂಪತ್ತು ಲೂಟಿ ಹೊಡೆದರು.ಮೋಸದಿಂದ, ವಿಶ್ವಾಸಘಾತುಕ ಕೆಲಸದಿಂದ,ಕುಟಿಲ ತಂತ್ರದಿಂದ ಹಿಂದೂ ದೊರೆಗಳನ್ನು ಸೋಲಿಸಿ,ಪ್ರಜೆಗಳನ್ನು ಹೆದರಿಸಿ,ಒಪ್ಪದವರ ಕೊಲೆ ಮಾಡಿ ಅವರ ಮತ ಪ್ರಚಾರ ಮಾಡಿ ಮತಾಂತರಿಸಿದರು.ಅಲ್ಲಾವುದ್ದೀನ್ ಖಿಲ್ಜಿ, ಔರಂಗಜೇಬ್,ತುಘಲಕ್ ಅವರಿಂದ ಟಿಪ್ಪುವಿನವರೆಗೆ ಎಲ್ಲರೂ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣದ ಆಡಳಿತ ನಡೆಸಿದವರೇ. ಅದಕ್ಕೆ ಇರಬೇಕು ವಿಲ್ ದುರಂಟ್ STORY OF CIVILIZATION ಕೃತಿಯಲ್ಲಿ ಭಾರತದ ಮೇಲೆ ನಡೆದ ಇಸ್ಲಾಮಿನ ಆಕ್ರಮಣ ವಿಶ್ವದ ಇತಿಹಾಸದ ಅತ್ಯಂತ ರಕ್ತಸಿಕ್ತ ಅದ್ಯಾಯವೆಂದಿದ್ದು.ಯುರೋಪಿಯನ್ನರು ಭಾರತೀಯರ ಶಕ್ತಿ ಅಡಗಿರುವುದು ಭಾರತೀಯ ಸಂಸ್ಕೃತಿಯಲ್ಲಿ ಎಂದು ಮನಗಂಡು ಹಿಂಸಾ ಮಾರ್ಗವನ್ನು ಬದಿಗಿಟ್ಟು, ಹಿಂದೂ ನಂಬಿಕೆ , ಅಚಾರ ವಿಚಾರ ದೇವರನ್ನು ಪ್ರಶ್ನಿಸುತ್ತಾ,ಲೇವಡಿ ಮಾಡುತ್ತ,ಹಣದ ಆಮಿಷವೊಡ್ಡಿ ಮಿಷನರಿಗಳ ಮೂಲಕ ಉಪಾಯದಿಂದ ಮತಾಂತರದ ಕ್ರೈಸ್ತಿಕರಣಕ್ಕೆ ಮುಂದಾದರು.ಹಿಂದೂ ಧರ್ಮ ಪ್ರಸಾರಕ್ಕೆ ಇಲ್ಲಿತನಕ ಎಲ್ಲಿಯೂ ಹಿಂದೂಗಳು ಯುದ್ದ ಮಾಡಿಲ್ಲ,ಇನ್ನೊಂದು ಧರ್ಮವನ್ನು ನಿಂದಿಸಿಲ್ಲ ತೀರ ವಿಪರೀತವಾಗುತ್ತಿದೆ,ಸ್ವಾಭಿಮಾನಕ್ಕೆ ದಕ್ಕೆಯಾಗುತ್ತಿದೆ ಎಂದೆನಿಸಿದಾಗ ಅದಕ್ಕೆ ಉತ್ತರಿಸಿದ್ದಾರೆ.

ಮತ್ತಷ್ಟು ಓದು »