ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

14
ಫೆಬ್ರ

ವ್ಯಾಲೆಂಟೈನ್ಸ್ ಡೇ ಮತ್ತು ಅದರ ಒಳ ಸುಳಿಗಳು

ಮಹೇಶ್ ಪ್ರಸಾದ್ ನೀರ್ಕಜೆ

ವ್ಯಾಲೆಂಟೈನ್ಸ್ ಡೇಹೌದ್ರೀ, ನಾನು ಕನ್ನಡ ಪ್ರೇಮಿಯೇ. ಇಂಗ್ಲಿಷ್ ವ್ಯಾಮೋಹದಿಂದ ಶೀರ್ಷಿಕೆಯಲ್ಲಿ ‘ಪ್ರೇಮಿಗಳ ದಿನ’ ಅನ್ನದೇ ವ್ಯಾಲೆಂಟೈನ್ಸ್ ಡೇ ಅಂದಿದ್ದಲ್ಲ. ಪ್ರೇಮಿಗಳ ದಿನ ಅಂತ ಹೇಳದೇ ಇದ್ದಿದ್ದಕ್ಕೆ ಕಾರಣ ತುಂಬಾ ಇದೆ. ಯಾಕೆಂದರೆ ವ್ಯಾಲೆಂಟೈನ್ಸ್ ಡೇ ಎನ್ನುವುದರ ಅರ್ಥ ನಾವೆಲ್ಲರು ತಿಳಿದಿರುವಂತೆ ಪ್ರೇಮಿಗಳ ದಿನ ಅಲ್ಲ! ಅದು ಹೇಗೆ ಅಂತ ಹೇಳುವ ಮೊದಲು ಇನ್ನೊಂದು ವಿಷಯ ಸ್ಪಷ್ಟಪಡಿಸುತ್ತೇನೆ. ಸಾಮಾನ್ಯವಾಗಿ ವ್ಯಾಲ್ಲೆಂಟೈನ್ಸ್ ಡೇ ವಿರೋಧಿಸುವ ಬಲ ಪಂಥೀಯರಿಗೂ, ಅಥವಾ ಏನೇ ಇದ್ದರೂ ವ್ಯಾಲೆಂಟೈನ್ಸ್ ಡೇ ಎನ್ನುವುದನ್ನು ಮಾನವತೆಯ ಮಟ್ಟಕ್ಕೆ ಎತ್ತರಿಸಿ ಸಮರ್ಥಿಸುವ ಎಡ ಪಂಥೀಯರಿಗೂ (ಕೆಲ ಎಡಪಂಥೀಯರು ಕೂಡ ಬೇರೆ ಕಾರಣಕ್ಕೆ ವ್ಯಾಲೆಂಟೈನ್ಸ್ ಡೇ ವಿರೋಧಿಸುತ್ತಾರೆ) ಈ ಬರಹ ಅಪಥ್ಯವಾಗಬಹುದು. ನನ್ನ ಪ್ರಯತ್ನವೇನಿದ್ದರೂ ಇವೆರಡನ್ನು ಬಿಟ್ಟು ಅವುಗಳಿಗಿಂತಲೂ ಮೇಲಿನ ಮಟ್ಟದಲ್ಲಿ ಮೂರನೇ ದೃಷ್ಟಿಕೋನವೊಂದನ್ನು ಅನ್ವೇಷಿಸುವುದು.

ಮೊದಲನೆಯದಾಗಿ ವ್ಯಾಲೆಂಟೈನ್ಸ್ ಡೇ ಮೂಲ ಕೆದಕಿದರೆ ನಮಗೆ ಇತಿಹಾಸದಲ್ಲಿ ಸಿಗುವುದು ಒಬ್ಬ ಪ್ರೇಮಿಯೋ ರಸಿಕನೋ ಅಥವಾ ಒಂದು ಪೌರಾಣಿಕ ಕಥೆಯ ಜನಪ್ರಿಯ ಪಾತ್ರವೋ ಅಲ್ಲ. ವ್ಯಾಲೆಂಟೈನ್ಸ್ ಎಂಬುದು ಮೂಲತಹ ಒಬ್ಬ ಸಂತನ ಹೆಸರು. ಇನ್ನೂ ಸರಿಯಾಗಿ ಹೇಳಬೇಕೆಂದರೆ ಕ್ರಿಶ್ಚಿಯಾನಿಟಿ ಇನ್ನೂ ಪಸರಿಸುತ್ತಿದ್ದ ಕಾಲದಲ್ಲಿ ಪೆಗನರ (ಶಬ್ದಾರ್ಥ : ಅನಾಗರಿಕ) ಕೈಯಲ್ಲಿ ಸಾಯುತ್ತಿದ್ದ ಕ್ರೈಸ್ತ ಸಂತರನ್ನು ವ್ಯಾಲೆಂಟೈನ್ ಎಂದು ಕರೆಯಲಾಗುತ್ತಿತ್ತಂತೆ. ಮತ್ತಷ್ಟು ಓದು »

12
ಜನ

ಭಾರತದ ಯುವವರ್ಗದ ಚೈತನ್ಯವನ್ನು ಬಡಿದೆಬ್ಬಿಸಿದ ಸಿಡಿಲ ಸಂತ ಸ್ವಾಮಿ ವಿವೇಕಾನಂದ

-ಶ್ರೀವಿದ್ಯಾ

ಜನವರಿ ೧೨, ೧೮೬೩ ರಂದು ಕೊಲ್ಕತ್ತಾದ ಸಿಮ್ಲ ಎಂಬ ಭಾಗದಲ್ಲಿ ನರೇಂದ್ರನಾಥ ದತ್ತ ಜನಿಸಿದನು. ಸ್ವಾಮಿ ವಿವೇಕಾನಂದರ ಹುಟ್ಟು ಹೆಸರು ನರೇಂದ್ರನಾಥ ದತ್ತ. ತಂದೆ ವಿಶ್ವನಾಥ ದತ್ತ, ತಾಯಿ ಭುವನೇಶ್ವರಿ.

ತಂದೆ ವಕೀಲರಾಗಿದ್ದು, ಬೇಕಾದಷ್ಟು ವಿಷಯಗಳನ್ನು ತಿಳಿದುಕೊಂಡಿದ್ದರು ಮತ್ತು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ತಾಯಿ ನೋಡುವುದಕ್ಕೆ ಮತ್ತು ನಡೆನುಡಿಗಳಲ್ಲಿ ರಾಣಿಯಂತಿದ್ದಳು. ಎಲ್ಲರೂ ಆಕೆಯನ್ನು ಗೌರವ ಆದರಗಳಿಂದ ಕಾಣುತ್ತಿದ್ದರು.ಅವಳಿಗೆ ಭಗವಂತನಲ್ಲಿ ತುಂಬ ಭಕ್ತಿ. ಅವಳಿಗೆ ಇದ್ದ ಒಂದು ವಿಶೇಷ ಶಕ್ತಿಯೆಂದರೆ ಅಸಾಧಾರಣವಾದ ನೆನಪು. ರಾಮಾಯಣ, ಮಹಾಭಾರತದ ಅನೇಕ ಭಾಗಗಳು ಅವಳಿಗೆ ಬಾಯಲ್ಲೇ ಬರುತ್ತಿದ್ದವು.

ನರೇನ್ ಬೆಳೆಯುತ್ತ ಬೆಳೆಯುತ್ತ ಅಸಾಧ್ಯ ತುಂಟನಾದ. ಅವನ ಬದುಕಿನಲ್ಲಿ ಮೊದಲ ದೊಡ್ಡ ಗುರು ತಾಯಿ. ತಾಯಿಯಿಂದ ನರೇನ್ ರಾಮಾಯಣ, ಮಹಾಭಾರತಗಳನ್ನು ಕೇಳಿದ್ದಷ್ಟೇ ಅಲ್ಲದೇ ಧೈರ್ಯ, ಸತ್ಯಪ್ರಿಯತೆಗಳನ್ನೂ ಕಲಿತ. ಜೊತೆಯಲ್ಲಿ ಔದಾರ್ಯ ಗುಣ ಬೆಳೆಯಿತು. ಬಡವರು ಹಾಗೂ ಸಂನ್ಯಾಸಿಗಳು ಭಿಕ್ಷೆ ಬೇಡಿದಾಗ ಅವನ ಮನಸ್ಸು ಕರಗಿ ಕೈಯಲ್ಲಿ ಏನು ಇರುತ್ತದೆಯೋ ಅದನ್ನು ದಾನ ಮಾಡುತ್ತಿದ್ದನು. ವೈರಾಗ್ಯ ಮತ್ತು ಅಲೌಕಿಕತೆಗಳು ಬಾಲ್ಯದಿಂದಲೇ ನರೇಂದ್ರನ ಸ್ವಭಾವವಾಗಿ ಮೈಗೂಡಿದ್ದವು. ಚಿಕ್ಕಂದಿನಿಂದಲೂ ನರೇಂದ್ರನಿಗೆ ಅಸಾಧಾರಣವಾದ ಅನುಭವವಿತ್ತು. ಅವನು ಕಣ್ಣು ಮುಚ್ಚಿದಾಗ ಅವನಿಗೆ ಹುಬ್ಬುಗಳ ನಡುವೆ ಒಂದು ಬೆಳಕು ಕಾಣಿಸಿಕೊಳ್ಳುತ್ತಿತ್ತು. ಅವನಲ್ಲಿ ವಿಶಿಷ್ಟವಾದ ಏಕಾಗ್ರತೆಯ ಗುಣ ಇತ್ತು. ವಿರಾಮದ ವೇಳೆಗಳಲ್ಲಿ ಧ್ಯಾನದಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಿದ್ದನು.

ಮತ್ತಷ್ಟು ಓದು »

2
ಜನ

ನಾವು ಈಗ ಯಾಕೆ ಹೀಗಾಗಿರುವೆವು?

-ರೂಪಲಕ್ಷ್ಮಿ

ನಾನು ಸಣ್ಣವಳಾಗಿದ್ದಾಗ, ಅಜ್ಜನ ಊರಿಗೆ ಹೋಗಿದ್ದಾಗ (ಮಂಗಳೂರಿನ ಬಳಿಯ ಪುಟ್ಟ ಹಳ್ಳಿ) ಬಾಗಿಲುಗಳಿಗೆ ಚಿಲಕವೇ ಹಾಕುತ್ತಿರಲಿಲ್ಲ, ಮನೆಗಳಲ್ಲಿ ಅಲ್ಮೇರಾ ಇವುಗಳು ಕೂಡ ಮರದ್ದೇ ಆಗಿದ್ದು, ಬೀಗ ಎಂಬುದೆಲ್ಲಾ ನಾನು ನೋಡಿರಲಿಲ್ಲ. ತಾಮ್ರದ ಬಿಂದಿಗೆಗಳು ಹಾಗೇಯೇ ಬಾವಿ ಕಟ್ಟೆಯ ಬಳಿ ಇಟ್ಟು ಬರುತ್ತಿದ್ದರು. ನಾನು ಬೆಂಗಳೂರಿನಿಂದ ಹೋಗುತ್ತಿದ್ದರಿಂದ ನನಗೆ ಇವೆಲ್ಲವೂ ಆಶ್ಚರ್ಯ! ಅಣ್ಣನನ್ನು ಕೇಳಿದ್ದಕ್ಕೆ, ಯಾರೂ ತೆಗೆದುಕೊಂಡು ಹೋಗುವುದಿಲ್ಲ, ಅಷ್ಟು ನಂಬಿಕೆ ಇದೆ ಎಂದು ಹೇಳುತ್ತಿದ್ದ. ಆದರೆ ಆಗ ಬೆಂಗಳೂರಿನಲ್ಲಿ ಸ್ವಲ್ಪ ಕಳ್ಳತನದ ಭಯವಿತ್ತು. ಆದರೂ ಸಿಕ್ಕಿದನ್ನಷ್ಟೇ ಅಂದರೆ, ಕಿಟಕಿಯಲ್ಲಿಟ್ಟ ವಾಚು, ರೇಡಿಯೋ, ಹೊರಗೆ ಒಣಗಿ ಹಾಕಿದ ಬಟ್ಟೆಗಳು, ಇಂತಹವುಗಳನ್ನೇ ತೆಗೆದುಕೊಂಡು ಹೋಗುತ್ತಿದ್ದರೇ ವಿನಃ ಮನೆಗೆ ನುಗ್ಗಿ, ದೋಚಲು ಅಥವಾ ಮನೆಯವರನ್ನು ಕೊಲೆ ಮಾಡಲು ಭಯವಾಗುತ್ತಿತ್ತು. ಏಕೆಂದರೆ ಒಂದು ಕೂಗು ಹಾಕಿದ ತಕ್ಷಣ ಅಕ್ಕ, ಪಕ್ಕದ ಮನೆಯವರೆಲ್ಲರೂ ಸೇರಿ, ಕಳ್ಳನನ್ನು ಚಚ್ಚಿ ಹಾಕುತ್ತಿದ್ದರು. ಇನ್ನೂ ಜಿಂಡಾಲ್ ಮುಂತಾದ ಕ್ವಾರ್ಟರ್ಸ್ ಮನೆಗಳಲ್ಲಿ (ಬೆಂಗಳೂರಿನಲ್ಲಿಯೂ ಕೂಡ) ಹೊರಗೆ ಎಲ್ಲಿಗೆ ಹೋಗುವಾಗಲೂ ಚಿಲಕ ಹಾಕುವ ಪದ್ಧತಿ ಇರುತ್ತಿರಲಿಲ್ಲ. ನೆರೆಹೊರೆಯವರಲ್ಲಿ ಅಷ್ಟೊಂದು ನಂಬಿಕೆ ಆಗ.

ಇನ್ನೂ ಮನೆಯಲ್ಲಿ ಕೆಲಸದವಳನ್ನು ಇಟ್ಟುಕೊಳ್ಳುವ ಪದ್ಧತಿ ಕೂಡ ಇರಲಿಲ್ಲ. ಮನೆಯವರೇ ಮಕ್ಕಳಾದಿಯಾಗಿ ಎಲ್ಲರೂ ಸೇರಿಕೊಂಡು ಮನೆಕೆಲಸವನ್ನೆಲ್ಲಾ ಮಾಡಿಕೊಳ್ಳುತ್ತಿದ್ದರು. ಮನೆಯಲ್ಲಿನ ದೊಡ್ಡವರು ಎಲ್ಲಿಗಾದರೂ ಹೋಗುವುದಾದರೆ, ಮಕ್ಕಳು ಶಾಲೆಯಿಂದ ಬಂದ ಮೇಲೆ ಪಕ್ಕದ ಮನೆಯವರು ನೋಡಿಕೊಳ್ಳುತ್ತಿದ್ದರು. ಒಬ್ಬರಿಗೊಬ್ಬರು ಸಹಾಯ ಮಾಡುತ್ತಿದ್ದರು. ಎಲ್ಲರಲ್ಲಿಯೂ ಒಂದು ಬದ್ಧತೆ ಇತ್ತು. ಸಹಕಾರವಿತ್ತು. ಕಿತ್ತಾಡಿದರೂ ಅದು ಆ ಕ್ಷಣಕಷ್ಟೇ ಆಗಿರುತ್ತಿತ್ತು. ನಂತರ ಒಂದಿಷ್ಟು ದಿವಸಗಳಾದ ಮೇಲೆ, ಯಾವುದೋ ಜಾತ್ರೆಯೋ, ಹಬ್ಬವೋ ಬಂದಾಗ ಮತ್ತೆ ಒಂದಾಗುತ್ತಿದ್ದರು. ಮಕ್ಕಳು ಕೂಡ ಹೊಡೆದಾಡಿಕೊಂಡರೂ, ಒಂದಷ್ಟು ಕ್ಷಣಗಳಾದ ಮೇಲೆ ಮತ್ತೆ ಒಂದುಗೂಡಿ ಆಡುತ್ತಿದ್ದರು. ಇಲ್ಲಿ ಅವರು ಶ್ರೀಮಂತರು, ನಾವು ಬಡವರು, ಅವರು ಓದಿದವರು, ನಾವು ಅನಕ್ಷರಸ್ಥರು ಎಂಬ ಭೇಧ ಭಾವ ಇರುತ್ತಿರಲಿಲ್ಲ. ಮಕ್ಕಳು ಮನೆಯಲ್ಲಿ ಗಲಾಟೆ ಮಾಡದಿದ್ದರೇ ಸೈ, ಹೊರಗೆ ಹೋಗಿ ಆಡಿಕೊಳ್ಳಲಿ ಎಂಬುದಷ್ಟೇ ದೊಡ್ಡವರು ಯೋಚಿಸುತ್ತಿದ್ದರು. ಅಣ್ಣ ಒಮ್ಮೆ ಕೆಟ್ಟ ಪದವನ್ನು ಕಲಿತು ಬಂದಾಗ ಅಮ್ಮ ಬಾಸುಂಡೆ ಬರುವಂತೆ ಬಾರಿಸಿದ್ದು ನನಗೆ ಈಗಲೂ ನೆನಪಿದೆ. ಅಮ್ಮ ಒಂದಕ್ಷರವೂ ಪಕ್ಕದ ಮನೆಯ ಹುಡುಗನಿಗೆ ಬೈದಿರಲಿಲ್ಲ. ನಮ್ಮ ಮನೆಯಲ್ಲಿ ಇಷ್ಟು ಸಂಸ್ಕಾರವಿದ್ದು ನೀನು ಕಲಿತಿದ್ದು ಹೇಗೆ? ಎಂಬುದಷ್ಟೇ ಅವಳ ಪ್ರಶ್ನೆಯಾಗಿತ್ತು! ಅಷ್ಟೇ ಕೊನೆ, ಅಣ್ಣ ಇವತ್ತಿಗೂ ಎಷ್ಟೇ ಕೋಪ ಬಂದರೂ, ಕೆಟ್ಟ ಪದಗಳನ್ನು ಉಪಯೋಗಿಸುವುದಿಲ್ಲ. ಅವನಿಗೆ ಹೊಡೆದದ್ದು ನೋಡಿದ ನನಗೇ ಬುದ್ಧಿ ಕಲಿಯಲು ಅಷ್ಟೇ ಸಾಕಿತ್ತು!

ಮತ್ತಷ್ಟು ಓದು »

24
ಡಿಸೆ

‘ಈಗ ಮದುವೆ ಆಗಿದೆ, ಆದರೆ ಕೆಲವು ಗಂಡಸರಿಗೆ ತಾಳಿಯೂ ಕಾಣೋದಿಲ್ಲ

-ರೂಪಾರಾವ್

ಒಂದು ಹುಡುಗಿ ಹೆಣ್ಣಾಗುವ ಘಳಿಗೆ ಅತಿ ಸಂಭ್ರಮದ ಘಳಿಗೆ. ಆದರೆ ಅ ಘಳಿಗೆ ಸುಮಾರು ಎಲ್ಲಾರ ಅಮ್ಮಂದಿರು ಅಳುತ್ತಾರೆ. ಮಗಳು ಹೆಣ್ಣಾದಳಲ್ಲ ಎಂಬ ಕಾರಣಕ್ಕಲ್ಲ. ತಾನು ಅನುಭವಿಸಿದ ನೋವು ನರಕಗಳನ್ನು ಮಗಳೂ ಅನುಭವಿಸಬೇಕಾಗುತ್ತಲ್ಲ ಎಂದು.

ಅಂತಹ ಘಳಿಗೆ ಬರುವುದಕ್ಕೂ ಮುಂಚೆಯೇ ಆ ಭಯ ನನಗೆ ಕಾಡಿತ್ತು. ಆಗಿನ್ನೂ ಒಂಬತ್ತನೇ ತರಗತಿಗೆ ಕಾಲಿಟ್ಟಿದ್ದೆ. ಯಾವುದೋ ಅಂಗಡಿಗೆ ಹೋಗುವ ಕಾರಣಕ್ಕಾಗಿ ಹೋದಾಗ , ಯಾವುದೋ ಗಂಡಸು ಏನೇನೋ ಅಸಭ್ಯವಾಗಿ ಹೇಳುತ್ತಾ ನನ್ನ ಹಿಂದೆಯೇ ಬರತೊಡಗಿದ.ಎಂಥ ವಿಷಮ ಘಳಿಗೆ ಎಂದರೆ ಅವನ್ಯಾಕೆ ಹಾಗೆಲ್ಲಾ ಹೇಳ್ತಿದಾನೆ ಅಂತಲೂ ನನಗೆ ಅರ್ಥ ಆಗಿರಲಿಲ್ಲ. ಮನೆಗೆ ಬಂದು ಯಾರಿಗೂ ಹೇಳದೆ ಅತ್ತಿದ್ದೆ.

ಅಲ್ಲಿಂದ ಮುಂದೆ ನಾನು ಹೇಗಿರಬೇಕೆಂಬ ಪಾಠ ಅಮ್ಮನಿಂದ ಬಂತು. ಆಗ ಹೆಣ್ಣಾಗಿದ್ದೆ…. ಒಳ್ಳೆಯ ಸ್ಪರ್ಷ ಕೆಟ್ಟ ಸ್ಪರ್ಷ ನೋಟಗಳ ವ್ಯತ್ಯಾಸ ತಿಳಿಯುತ್ತಿತ್ತು. ಆದರೂ ಬಸ್ ನಲ್ಲಿ ಸ್ಕೂಲಿಗೆ ಹೋಗುವಾಗ ಬೇಕಾಗಿಯೇ ಕೈ ಹಾಕಿ ನೂಕುವ ಕಂಡಕ್ಟರ್, ನನ್ನ ಹಿಂದೆ ಬಂದು ನಿಲ್ಲು ಎನ್ನುತ್ತಿದ್ದ ಡ್ರೈವರ್ ಇವರುಗಳನ್ನು ಎದುರಿಸಲಾಗಿರಲಿಲ್ಲ. ಸುಮ್ಮನೆ ಇವರುಗಳ ಸ್ಪರ್ಷ ತೀಟೆಗೆ ಮೂಕ ಪಶುಗಳಾಗುತ್ತಿದ್ದೆವು(ಅಕಸ್ಮಾತ್ ತಿರುಗಿಸಿ ಕೇಳಿದರೆ ಆ ಬಸ್ ನಮ್ಮ ಸ್ಟಾಪಿನಲ್ಲಿ ನಿಲ್ಲುತ್ತಿರಲಿಲ್ಲ. ನಿಂತರೂ ಒಂದಷ್ಟು ದೂರ ನಿಲ್ಲುತ್ತಿದ್ದೆವೆ. ನಾವುಗಳು ಓಡಿ ಹೋಗಿ ಹತ್ತಬೇಕಿತ್ತು.)

ಮತ್ತಷ್ಟು ಓದು »

22
ನವೆಂ

ಸ್ವಾಭಿಮಾನದ ಬದುಕು ಕಟ್ಟಿಕೊಟ್ಟ “ಸರ್ಕಾರ್ “

-ಅಜಿತ್ ಎಸ್ ಶೆಟ್ಟಿ

ಕೇಸರಿ ಅಂಗಿ, ಕೇಸರಿ ಶಾಲು, ಕೇಸರಿ ಟೋಪಿ , ಕೇಸರಿ ಶೂಗಳು , ಕೇಸರಿ ಬಣ್ಣದ ಸೈಕಲ್ , ಅದಕ್ಕೆ ಕೇಸರಿ ಬಣ್ಣದ ಚಕ್ರಗಳು ,ಕೇಸರಿ ಪೆನ್ ಯಿಂದ ಹಿಡಿದು ಕೇಸರಿ ಬಣ್ಣದ ಮೊಬೈಲ್ ತನಕ ಎಲ್ಲವೂ ಕೆಸರಿನೇ.  ಹಿಂದುತ್ವವಾದಿ ಯಾದರೂ  ಮನೆಯಲ್ಲಿ ಯಾವದೇ ದೇವರ ಫೋಟೋ ಇಲ್ಲ.  ಇರುವದು ಎರಡೇ ಎರಡು ಫೋಟೋಗಳು ಅವರುಗಳೇ ಇವನ ಪಾಲಿಗೆ ದೇವರು. ಆ ಫೋಟೋ ಗಳು ಬೇರೆ ಯಾರದ್ದು ಅಲ್ಲಾ ಮರಾಠ ಸೇನಾಧಿಪತಿ , ಹಿಂದೂ ಹೃದಯ ಸಾಮ್ರಾಟ್ , ಹುಲಿ, ಬಾಳಾ ಸಾಹೇಬ್  ಠಾಕ್ರೆ ಮತ್ತು ಅವರ ಪತ್ನಿ ಮೀನಾ ಅವರದ್ದು . ಅವರನ್ನು ಅರಾಧಿಸುತಿರುವವರು 52 ರ ಹರೆಯದ ಪೂನಾ ಜಿಲ್ಲೆಯ  ನಂಗೋನ್ ಎಂಬಲ್ಲಿನ ಮಹಾದೇವ್ ಯಾದವ್. ನಾವು ಇಂಥ ಸಾವಿರಾರು   ಠಾಕ್ರೆ ಅಭಿಮಾನಿಗಳನ್ನು ಮಹಾರಾಷ್ಟ್ರದಲ್ಲಿ ನೋಡಬಹುದು . 

ಇಂದು ಬಾಳಾ ಸಾಹೇಬ್ ಯನ್ನು “ತಮಿಳು ವಿರೋಧಿ” “ಕನ್ನಡಿಗರ ಪಾಲಿನ ಶತ್ರು ” ಉತ್ತರ ಭಾರತೀಯರು ಮತ್ತು ಗುಜರಾತಿಗಳ ಪಾಲಿಗೆ ಕಂಟಕರಾಗಿದ್ದವರೆಂದು ಬೆರಳೆಣಿಕೆ ಎಷ್ಟು ಇರುವ ಅವರ ವಿರೋಧಿಗಳು ಕರೆಯಬಹುದು . ಆದರೆ ಅದು ಬಾಳಾ ಸಾಹೇಬ್  ಠಾಕ್ರೆ ಯವರ   ವ್ಯಕ್ತಿತ್ವದ ಮುಂದೆ ಗೌಣವಾಗುತದೆ . ಠಾಕ್ರೆ ವ್ಯಕ್ತಿತ್ವ ಅಂತಹುದು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳುತಿದ್ದ . ಎಲ್ಲಿಯೂ ಎಡಬಿಡಂಗಿ ತರ ವರ್ತಿಸುತಿರಲಿಲ್ಲ.  ಉದಾಹರಣೆ ಸಮೇತ ಸಮರ್ಥಿಸಿಕೊಳ್ಳುತಿದ್ದರು. ಅದು ಇಂದಿರೆ ಹೇರಿದ ತುರ್ತು ಪರಿಸ್ಥಿತಿಯಿಂದ ಹಿಡಿದು ಹಿಟ್ಲರ್ ಬಗೆಗಿನ ಠಾಕ್ರೆ  ಅಭಿಮಾನದವರೆಗೆ. ದೇಶಕ್ಕೆ ಕಳಂಕದಂತಿದ್ದ , ಗುಲಾಮತೆಯ ಪ್ರತೀಕದಂತೆ ಭಾಸವಾಗುತಿದ್ದ ಬಾಬ್ರಿ ಮಸೀದಿ ದ್ವಂಸದಿಂದ, ಭಾರತ-ಪಾಕ್ ಕ್ರಿಕೆಟ್ ಪಂದ್ಯದ ತನಕ. ಎಲ್ಲಿಯೂ ರಾಜಿ ಇರಲಿಲ್ಲ. ಬಾಳಾ ಸಾಹೇಬ್ ಠಾಕ್ರೆ ಒಬ್ಬ ಭಾಷಾಪ್ರೇಮಿಯಾಗಿದ್ದರು ಅಪ್ರತಿಮ ದೇಶಭಕ್ತ, ಒಬ್ಬ ಹುಟ್ಟು ಹೋರಾಟಗಾರ, ಅಂಜದೇ ಅಳುಕದೇ ಯಾರಿಗೂ ತಲೆಬಾಗದೆ ತಾನು ನಂಬಿಕೊಂಡು ಬಂದಿರುವ ತತ್ವ ಸಿದ್ದಾಂತವನ್ನು  ಪ್ರತಿಪಾದಿಸುವವ. ತಮ್ಮವರ ಹಕ್ಕಿಗಾಗಿ ಹೋರಾಡಿದ ಧೀಮಂತ ನಾಯಕ. ತನ್ನ ಶಕ್ತಿಯ ಮೇಲೆ, ತನ್ನ ಜನರ ನಂಬಿಕೆ ಮೇಲೆ ಅಪಾರ ಭರವಸೆ ಇಟ್ಟುಕೊಂಡಿದ್ದ ಅದ್ಬುತ ಮಾತುಗಾರ. ತನ್ನ ನಂಬಿರುವ ತನ್ನ ಜನರ ಭರವಸೆ ಎಂದು ಹುಸಿಗೊಳಿಸದ, ಅವರಿಗೆ ಸ್ವಾವಲಂಬಿ ಬದುಕು ಕಟ್ಟಿಸಿಕೊಟ್ಟ “ಸರ್ಕಾರ್” . ಉಳಿದವರಿಗೆ ಸ್ಪೂರ್ತಿಯ ಚಿಲುಮೆ . ಒಬ್ಬ ವ್ಯಂಗ್ಯ ಚಿತ್ರಗಾರ ನಾಗಿ ಬದುಕು ಪ್ರಾರಂಭಿಸಿದ ಬಾಳಾ ಸಾಹೇಬ್ ಠಾಕ್ರೆ  ಬೆಳೆದು ಬಂದ ಅವನ ವಿರೋಧಿಗಳು ಮೆಚ್ಚುವಂಥಹುದು . ಅದಕ್ಕೊಂದು ಸಲಾಂ ಹೇಳಲೇ ಬೇಕು. ವಿವಾದಾತ್ಮಕ ವಾಗಿದ್ದರೂ ವರ್ಣರಂಜಿತ ಬದುಕು.
ಮತ್ತಷ್ಟು ಓದು »

19
ನವೆಂ

ಡಾ ಅಂಬೇಡ್ಕರ್, ಸಾಮರಸ್ಯ ಮತ್ತು ಆರೆಸ್ಸೆಸ್

-ರಾಜೇಶ್  ಪದ್ಮಾರ

ಮಲೆನಾಡಿನ ಪೂರ್ಣಚಂದ್ರ ತೇಜಸ್ವಿ ಇರಲಿ ಕರಾವಳಿಯ  ಪ್ರೊ|| ಅಮೃತ ಸೋಮೇಶ್ವರ ಇರಲಿ ಅಥವಾ ಕೋಲಾರದ ಗುಡಿಬಂಡೆಯ ಡಾ|| ಎಂ.ಟಿ.ಕಾಂಬೈ ಇರಲಿ ‘ಸಾಮರಸ್ಯ’ ನನಗದು ಅತ್ಯಂತ ಪ್ರಿಯವಾದ ಶಬ್ದ ಎನ್ನುವುದುಂಟು. ಅದು ಮನೆಯಲಿರಲಿ, ವ್ಯಾಪಾರವಿರಲಿ ಕೊನೆಗೆ ರಾಜಕಾರಣವೇ ಇರಲಿ ಸಾಮರಸ್ಯಬೇಕು.

ಈ ಸಾಮರಸ್ಯ ಮನುಷ್ಯನಲ್ಲೇ ಇದೆ. ಕಾಲಿರಲಿ, ಕೈಯಿರಲಿ, ತಲೆಯಿರಲಿ ಒಂದಕ್ಕೊಂದು ಪೂರಕವೇ. ಕಾಲಿಗೆ ಮುಳ್ಳು ಚುಚ್ಚಿದಾಗ ಕೈ ‘ತನಗೇನೂ ಆಗಿಲ್ವಲ್ಲ’ ಎಂದು ಸುಮ್ಮನಿರುವುದಿಲ್ಲ. ಹೀಗೆ ಒಂದಕ್ಕೊಂದು, ಒಬ್ಬರಿಗೊಬ್ಬರು ಪೂರಕವಾಗಿ ಯೋಚಿಸುವುದು, ನೆರವಿಗೆ ಮುಂದಾಗುವುದೇ ಸಾಮರಸ್ಯ. ಶರೀರದಲ್ಲಿರುವ ಈ ಸಮರಸತೆ, ಸಮಾಜದಲ್ಲೂ ಬರಬೇಕಷ್ಟೆ.

ಹಾಗೇ ಸಮಾಜ ಸಾಮರಸ್ಯದಿಂದಿರಲು ತೊಡಕುಗಳೂ ಇವೆ. ವಿದ್ಯೆ, ಆಸ್ತಿ, ಅಂತಸ್ತು, ಜಾತಿ, ಭಾಷೆ ತೊಡಕು ತಂದುಹಾಕುತ್ತೇವೆ. ವಿದ್ಯೆ, ಸಿರಿವಂತಿಕೆ ಇದೆಯಲ್ಲ ಅದು ಅವರವರು ಗಳಿಸಿದ್ದು, ಆದರೆ ಜಾತಿ- ಅದು ಗಳಿಸಿದ್ದಲ್ಲ. ಅದು ಹುಟ್ಟಿದಾಗ ಅಂಟಿಕೊಂಡಿದ್ದು.

‘ಮಂಡಲ್ ವರದಿ’ ಖ್ಯಾತಿಯ ಆ ಬಿಂದೇಶ್ವರ ಪ್ರಸಾದ್ ಮಂಡಲ್ ಪ್ರಕಾರ ಭಾರತದಲ್ಲಿ 5600 ಜಾತಿಗಳು. ಜಾತಿ ಇರೋದೆ ತಪ್ಪಾ? ಹಾಗೆ ಹೇಳೋರು ಇದಾರೆ. ಅವರೊಂದಿಗೆ ಹೊಸ ಜಾತಿನೇ ಆಗಿದ್ದಾರೆ. ಯಾವುದರಲ್ಲಿ ಜಾತಿ ಇಲ್ಲ? ಭತ್ತದಲ್ಲಿ ಅದೆಷ್ಟು ನಮೂನೆ? ಮಾವಿನಹಣ್ಣಿನಲ್ಲಿ ಅದೆಷ್ಟು ಥರಾ? ಬದನೆಕಾಯಿಯಲ್ಲೂ ಅದೆಷ್ಟು ರೀತಿ? ಹೋಗಲಿ ನಮ್ಮ ದೇಶದ ಮಣ್ಣಿದೆಯಲ್ಲ ಅದೆಷ್ಟು ಬಗೆ? ಈ ನಮೂನೆ, ಥರ, ಬಗೆ, ರೀತಿಗಳೇ ಜಾತಿಗಳಾಗೋದು. ಬಣ್ಣವೋ, ರುಚಿಯೋ, ಗುಣ ಸ್ವಭಾವವೋ  ಜಾತಿ ಆಗಿಬಿಡುತ್ತದೆ ಸರಿ. ಆದರೆ ‘ನಾನೇ ಮೇಲು’ ಎಂಬ ಈ ‘ಶ್ರೇಷ್ಠತೆಯ ವ್ಯಸನ’ ಇದೆಯಲ್ಲ ಇದು; ವಿವೇಕ’ ಇರೋ ಮನುಷ್ಯ ಸಂಕುಲದಲ್ಲಿ ಮಾತ್ರ. ಅದು ಯಾವುದೇ, ಯಾರದೇ ಭಾಷಣವಿರಲಿ ಸಾಮಾನ್ಯವಾಗಿ ಶುರುವಾಗುವುದು ‘ಅಣ್ಣತಮ್ಮಂದಿರೇ’ ಎಂದಲ್ಲವೇ? ಆಸ್ತಿ ಹಂಚಿಕೊಳ್ಳುವುದು ಬೇಡ ಸ್ವಾಮಿ, ಒಟ್ಟಿಗೆ ಕೂತು ಒಂದೇ ಸಾಲಿನಲ್ಲಿ ಊಟ ಮಾಡಲೇನು ಅಡ್ಡಿ? ಹೆಗಲ ಮೇಲೆ ಕೈಹಾಕಿ ಪ್ರೀತಿಯಿಂದ ಮಾತನಾಡಿಸಲೇನು ಸಂಕಟ? ನಮ್ಮೂರ ದೇವಸ್ಥಾನಕ್ಕೆ ಇದೇ ಅಣ್ಣತಮ್ಮಂದಿರೆಲ್ಲ ಬಂದರೇಕೆ ಕಿರಿಕಿರಿ?

ಸಮಸ್ಯೆ ಇರುವುದೇ ಈ ನಡೆನುಡಿಯ ನಡುವಿನ ಅಂತರದಲ್ಲಿ. ಅಸಲಿಗೆ ನಮ್ಮ ವೇದಗಳು, ಉಪನಿಷತ್ತುಗಳು ಜಗತ್ತಿನ ಹಿತವನ್ನೇ ಮಾತನಾಡುತ್ತವೆ. ಆದರೆ ವೇದದ ವಕ್ತಾರಿಕೆ ಹಿಡಿದೋರು ಜಗತ್ತಿನಲ್ಲಿ ಪಕ್ಕದ ಕೇರಿಯವನನ್ನೂ ಹತ್ತಿರ ಸೇರಿಸುವುದಿಲ್ಲ, ಶರಣರನ್ನು, ವಚನಕಾರರನ್ನು ಕಂಠಪಾಠ ಮಾಡಿರೋರು ಇದಾರೆ, ಅರ್ಥ ತಿಳಿದು ಆಚರಿಸುವವರನ್ನು ಹುಡುಕಬೇಕಷ್ಟೆ. ಕೋಲಾರ ಜಿಲ್ಲೆಯಲ್ಲಿ ಬಸ್ಸಿನಲ್ಲೊಮ್ಮೆ ಪ್ರಯಾಣಸಾಗಿತ್ತು. ಹಳ್ಳಿಯೊಂದರಲ್ಲಿ ಬಸ್ಸು ನಿಂತಾಗ ಕೆಲವು ಕಾಲೇಜು ಹುಡುಗರು ಹತ್ತಿದರು. ಹಾಗೆ ಬಂದು ಪಕ್ಕದಲ್ಲಿ ಕೂತವನ ಹತ್ತಿರ ಮಾತಿಗಿಳಿದಿದ್ದೆ. ಹೆಸರು, ಊರು, ಕಾಲೇಜು, ಕೋರ್ಸು, ಕಾಂಬಿನೇಶನ್ ಕೇಳುತ್ತಲೇ ‘ನಿಮ್ಮ ಊರಲ್ಲೊಂದು ಚರ್ಚ್ ಆಗಿದೆಯಂತಲ್ಲ, ಹೌದಾ?’ ಎಂದೆ. ಮತ್ತಷ್ಟು ಓದು »

15
ನವೆಂ

ಮೊಬೈಲಿನಲ್ಲಿ ಕನ್ನಡ ಒಂದು ಸರ್ವೇ

-ರವಿ ಸಾವ್ಕರ್

ಕೆಲ ದಿನಗಳ ಹಿಂದೆ ಮೊಬೈಲುಗಳಲ್ಲಿ ಕನ್ನಡದ ಬೆಂಬಲಕ್ಕೆ ಬೇಡಿಕೆ ಹೇಗಿದೆ ಅನ್ನುವುದರ ಬಗೆಗೆ ಒಂದು ಆನ್ಲೈನ್  ಸರ್ವೆ ಮಾಡಲಾಗಿತ್ತು. ಸರ್ವೇಯಲ್ಲಿ ನಮಗೆ ಸಿಕ್ಕ ಕೆಲವು ಮುಖ್ಯ ಅಂಶಗಳು ಹೀಗಿವೆ.

ಸರ್ವೆಯಲ್ಲಿ 564 ಜನರು ಭಾಗವಹಿಸಿದ್ದರು . 31%  ಜನರ ಮೊಬೈಲುಗಳಲ್ಲಿ ಕನ್ನಡ SMS  ಅನ್ನು  ಓದಬಹುದು ಎಂದು ತಿಳಿಸಿದ್ದಾರೆ .

6
ನವೆಂ

“ ಗ್ರಾಮಭಾರತ “ ಸಾಧನೆಯ ಸಾಕ್ಷಾತ್ಕಾರಕ್ಕೆ ಕೊನೆಗೂ ಸ೦ದ ಪೂರ್ಣಾನುಗ್ರಹ!

-ರಾಘವೇಂದ್ರ ನಾವಡ

ಏನೂ ಮಾಡದೇ ಇರುವುದಕ್ಕಿ೦ತ ಏನನ್ನಾದರೂ ಮಾಡುವುದು ಸಾವಿರ ಪಾಲು ಉತ್ತಮವೆ೦ಬ ನಾವಡ ಉವಾಚವಿದೆ.. ಏನನ್ನಾದರೂ ಮಾಡುತ್ತಲೇ ಇರುವುದು ವ್ಯಕ್ತಿಯೋರ್ವನ ಸತತ ಕ್ರಿಯಾಶೀಲತೆಯನ್ನು ಅಭಿವ್ಯಕ್ತಿಸುತ್ತದೆ. ಏನನ್ನು ಮಾಡಬೇಕು ಮತ್ತು ಮಾಡಬಾರದು ಎನ್ನುವ ಆಯ್ಕೆ ಮಾತ್ರ ನಮ್ಮದು! ಕೆಲವರು ತಾವು ಬೆಳೆದುಬ೦ದದ್ದನ್ನು ಮರೆಯದೇ ಬೆಳೆದ ನ೦ತರ ಊರವರಿಗೆ ತನ್ನ ಗ್ರಾಮಕ್ಕೆ ಏನನ್ನಾದರೂ ಕೊಡುಗೆಯನ್ನು ನೀಡಬೇಕೆ೦ದು ಬಯಸಿದರೆ, ಏನನ್ನೂ ಮಾಡದಿದ್ದವರು ಇರುವವರಿ೦ದಲೇ ಎಲ್ಲವನ್ನೂ ಕಿತ್ತುಕೊ೦ಡು ತಮ್ಮ ಬೇಳೆ ಬೇಯಿಸಿಕೊಳುತ್ತಾರೆ!

ಎಲ್ಲವುದಕ್ಕಿ೦ತಲೂ ಮುಖ್ಯವಾಗಿ ಒಬ್ಬ ವ್ಯಕ್ತಿ ಸಮಾಜದಲ್ಲಿ ಒ೦ದು ಹ೦ತದಕ್ಕೆ ಮುಟ್ಟಿದನೆ೦ದರೆ ಜನತೆ ಅವರಿ೦ದ ನಿರೀಕ್ಷಿಸುವುದು ಬಹಳಷ್ಟಿರುತ್ತದೆ! ಕೆಲವರು ಆ ನಿರೀಕ್ಷೆಯ ಸಾಫಲ್ಯತೆಗಾಗಿ ಸ್ವಲ್ಪವಾದರೂ ಪ್ರಯತ್ನ ಪಟ್ಟರೆ.. ಇನ್ನು ಕೆಲವರು  ನಿರೀಕ್ಷೆಗಳ ಹಿ೦ದೆ ಓಡುತ್ತಾ ತಮ್ಮ ಬದುಕನ್ನು ಗೋಜಲಿನೊಳಗೆ ಸಿಲುಕಿಸಿಕೊಳ್ಳಲು ಇಷ್ಟಪಡುವುದಿಲ್ಲ.. ದೇವರಿಟ್ಟ ಹಾಗೆ ಇರಲಿ! ಎನ್ನುವ೦ತೆ…

ಅದಕ್ಕೆ೦ದೇ ಮಾನವ ಕನಸನ್ನು ಕಾಣಬೇಕು ಎನ್ನುವುದು!.. ಕನಸು ಮು೦ದಿನ ಸಾಧನೆಯ ಹ೦ತಕ್ಕೆ ನಮ್ಮನ್ನು ಕೊ೦ಡೊಯ್ಯುವ ದಾರಿ  ದೀಪ. ಕೆಲವರು ಕ೦ಡ ಕನಸಿನ ಬೆನ್ನನ್ನು ಹತ್ತುತ್ತಾರೆ.. ಇನ್ನು ಕೆಲವರು ರಾತ್ರಿ ಕ೦ಡ ಕನಸನ್ನು ಮತ್ತೊಬ್ಬರೊ೦ದಿಗೆ ಚರ್ಚಿಸುತ್ತಾ ಸುಮ್ಮನಿದ್ದು ಬಿಡುತ್ತಾರೆ!

ಮತ್ತಷ್ಟು ಓದು »

5
ನವೆಂ

ಯಾವಾಗ ಪಂದ್ಯ ಮುಗಿಯುತ್ತದೆ ಅನ್ನುವುದನ್ನು ವಿಧಿಯೇ ನಿರ್ಧರಿಸಲಿ ಅನ್ನುವುದು ನನ್ನ ಆಸೆ, ನಿನ್ನದು?

– ರಾಕೇಶ್ ಎನ್ ಎಸ್

ಇಷ್ಟೇ ಬರೆದು ಪತ್ರ ವ್ಯವಹಾರ ಶುರು ಮಾಡುವುದು ಪತ್ರ ಸಂಪ್ರದಾಯದ ಉಲ್ಲಂಘನೆ ಅನ್ನುವುದೇನೋ ನಿಜ. ಆದರೆ ನಾನು ಏನುಮಾಡಲಿ? ಯಾವ ಪ್ರಿಫಿಕ್ಸ್,ಸಫಿಕ್ಸ್ ಬಳಸೋದು ಅಂತ ಗೊತ್ತೇ ಆಗುತ್ತಿಲ್ಲ ಮಾರಾಯ್ತಿ. ಕಲ್ಲನ್ನು ಕಲ್ಲು ಎಂದು ಕರೆಯುವುದನ್ನು ಬಿಟ್ಟುಅದಕ್ಕೆ ಯಾವುದೇ ಪ್ರಿಫಿಕ್ಸ್ ಆಥವಾ ಸಫಿಕ್ಸ್ ಸೇರಿಸಿದರೂ ಅದು ತನ್ನ ಗುಣ, ಗುಣಮಟ್ಟ, ಆಕಾರ, ಆಕೃತಿ, ದೃವ್ಯರಾಶಿಗಳಲ್ಲಿ ಕಿಂಚಿತ್ತುಬದಲಾವಣೆ ತಂದು ಕೊಳ್ಳಲಾರದು ಎಂಬುದು ಕಲ್ಲು ಹೃದಯದವಳಾದ (ನೀನೇ ಕರೆದುಕೊಂಡಂತೆ) ನಿನಗೆ ಚೆನ್ನಾಗಿಯೇ ಗೊತ್ತಿದೆ.ನಾನು ನಿನ್ನನ್ನು ಏಕೆ ಗೌರವಿಸುತ್ತಿದ್ದೆ ಎಂದು ಕಾರಣ ಕೊಟ್ಟು ಹೇಳಬಹುದಾದ ಕೆಲವೇ ಕೆಲವು ಕಾರಣಗಳಲ್ಲಿ ಒಂದು ನೀನು stone hearted ಆಗಿದ್ದರೂ ಅದಕ್ಕಿಂತ ಹೆಚ್ಚು strong hearted ಆಗಿದ್ದದ್ದು. ಈ ಕಲ್ಲು ಹೃದಯಕ್ಕು ಗಟ್ಟಿ ಹೃದಯಕ್ಕೂ ಅಂಗ್ಲ ಭಾಷೆಯಲ್ಲಿಎರಡೇ ಎರಡು ಸ್ಪೆಲ್ಲಿಂಗ್‌ನ ವ್ಯತ್ಯಾಸವಷ್ಟೇ ಇದ್ದರೂ ಕೂಡ ಆ ಎರಡು ಸ್ಪೆಲ್ಲಿಂಗ್‌ಗಳು ನಮ್ಮ ವ್ಯಕ್ತಿತ್ವ, ವ್ಯವಹಾರ, ನಡೆ ನುಡಿಗಳಲ್ಲಿತರುವ ವ್ಯತ್ಯಯ ಅಪಾರವಾದದ್ದು. ಈ ಸ್ಪೆಲ್ಲಿಂಗ್ ವಿಷಯ ಬಿಟ್ಟು ಬಿಡೋಣ. ಏಕೆಂದರೆ ಈ ಎರಡು ಭಾಷೆಗಳಲ್ಲೂ ’ಅಪಾರ ಪಾಂಡಿತ್ಯ’ಸಂಪಾದಿಸಿರುವ ನಿನಗೆ ನಾನಂತೂ ಏನೂ ಹೇಳಲಾಗದು. “ನನ್ನದು ಏನೇ ಇದ್ದರೂ ಹೇಳಿ ಕೇಳಿ ಮೊದಲೇ ಚೂರು… ಪಾಪಿ ನಾನು”…

ಆದರೂ ನನಗೆ ನನ್ನ ಭಾವ ಮತ್ತು ಜ್ಞಾನ ಪರಿಧಿಯಲ್ಲಿ ಹೊಳೆದ ಒಂದು ಅಂಶವನ್ನು ನಿನ್ನ ಮುಂದೆ ಇಡುತ್ತೇನೆ. ಒಪ್ಪಿಕೊ ಎಂದುಒತ್ತಾಯಿಸಲಾರೆ… ಒಪ್ಪದಿದ್ದರೂ ನಾನೇನು ಕಳೆದುಕೊಳ್ಳಲಾರೆ. ನನ್ನ ಪ್ರಕಾರ ಕಲ್ಲು ಹೃದಯ ಎಂದರೆ ಪಲಾಯನವಾದ. ಯಾವುದೇಸ್ಥಿತಿ, ಪರಿಸ್ಥಿತಿ ಎದುರಾದಗಲೂ ಅದಕ್ಕೆ ಬೆನ್ನು ಹಾಕಿ ಓಡುವುದು. ಉದಾಹರಣೆಗೆ ನಾನು ನಿನಗೆ ಬೈದದ್ದೆ ಆದರೆ ಆಮೇಲೆ ಫೋನ್ರಿಸೀವ್ ಮಾಡದಿರುವುದು, ಮೆಸೆಜ್‌ಗೆ ರಿಪ್ಲೈ ಮಾಡದಿರುವುದು ಇತ್ಯಾದಿ. ಅದೇ ಗಟ್ಟಿ ಹೃದಯ ಎಂದರೆ ನಾನು ನಿನ್ನಲ್ಲಿ ಅದೇಷ್ಟೆ ಪರಿಪರಿಯಾಗಿ ಪಪ್ಪಿ ಕೇಳಿದ್ದರೂ ಕೂಡ ಅದನ್ನು ಕೊಡದೆ ಆದರೆ ನನ್ನನ್ನು ಕಳೆದುಕೊಳ್ಳದೆ ವ್ಯವಹರಿಸುತ್ತಿದ್ದಿ ಅಲ್ವಾ ಅದು. ಇದರಿಂದ ನಿನ್ನಬಗ್ಗೆ ನನಗಿದ್ದ ಪ್ರೀತಿ ಹೆಚ್ಚೇನು ಆಗಿಲ್ಲ. ಅದು ಆಗಲೂ, ಈಗಲೂ, ಆ ಕ್ಷಣವೂ, ಈ ಕ್ಷಣವೂ ಹಾಗೇ ಇದೆ ಸಾಗರದಂತೆ. ಅದರಸಾಂದ್ರತೆ, ತೀವೃತೆಯಲ್ಲಿ ಹೆಚ್ಚು ಕಡಿಮೆಯಾಗಿಲ್ಲ. ಅದ್ದರಿಂದ ನಾನು ನಿನ್ನಿಂದ ಏನು ನಿರೀಕ್ಷಿಸುತ್ತಿದ್ದೇನೆ ಎಂಬುದನ್ನು ನೀನು ಅರ್ಥಮಾಡಿಕೊಳ್ಳುವಲ್ಲೆ ಸಂಪೂರ್ಣ ಎಡವಿದ್ದಿ ಎಂದು ನನಗನಿಸುತ್ತೆ. ಅದ್ದರಿಂದಲೇ ಈ ಎಲ್ಲ ಸಮಸ್ಯೆ.

ಮತ್ತಷ್ಟು ಓದು »

25
ಆಕ್ಟೋ

ದೆಹಲಿಗೂ ಹರಿಯಲಿ ಕಾವೇರಿ; ಇಲ್ಲದೇ ಹೋದರೆ ಸೋಲುವಿರಿ

-ರಾಕೇಶ್ ಎನ್ ಎಸ್ 

ಗಂಗಾ, ಯಮುನಾ ನದಿಗಳ ಹೆಸರು ಕೇಳಿದರೆ ನಿಮಗೆ ಯಾವುದಾದರೂ ರಾಜ್ಯದ ನೆನಪು ಆಗುತ್ತದೆಯೇ ಎಂದು ಹಿರಿಯ ಪತ್ರಕರ್ತರೊಬ್ಬರು ಕೇಳಿದರು. ನಾನು ಅವಾಕ್ಕಾದೆ. ಗಂಗಾ ನದಿಯೂ ಉತ್ತರಾ ಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಗಳಲ್ಲಿ ಜೀವ ನದಿಯಾಗಿ ಹರಿಯುತ್ತದೆ. ಉತ್ತರಾ ಖಂಡ, ಉತ್ತರ ಪ್ರದೇಶ, ಹರಿಯಾಣ, ದೆಹಲಿಗಳಿಗೆ ಯಮುನೆಯ ಜೀವದಾಯಿ. ಮಾತು ಮುಂದುವರಿಸಿದ ಅವರು ನನಗೆ ಕಾವೇರಿ ಅಂದರೆ ತಮಿಳುನಾಡಿನ ನೆನಪಾಗುತ್ತದೆ ಎಂದರು. ಹೌದು, ಕಾವೇರಿ ನದಿ ಸಂಪೂರ್ಣವಾಗಿ ತಮಿಳುನಾಡಿಗೆ ಸೇರಿದಾಗಿದ್ದು, ಕರ್ನಾಟಕ ಸುಮ್ಮನೆ ಕಿರಿಕ್ ಮಾಡುತ್ತಿದೆ ಎಂಬ ಭಾವನೆ ಕರ್ನಾಟಕದ ಹೊರಗೆ ಮಡುಗಟ್ಟಿದೆ ಎಂಬುದನ್ನು ಅವರು ನನಗೆ ಸೂಚ್ಯವಾಗಿ ಮನದಟ್ಟು ಮಾಡಿಕೊಟ್ಟಿದ್ದರು.

ಈ ಹಿಂದೆ ಕಾವೇರಿ ವಿವಾದ ೨೦೦೨-೦೩ರಲ್ಲಿ ಉಚ್ಚ್ರಾಯ ಹಂತದಲ್ಲಿದ್ದಾಗ ದೆಹಲಿಯ ಪ್ರಗತಿ ಮೈದಾನದಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನದಿ ಬಗ್ಗೆ ಒಂದು ಪ್ರದರ್ಶನ ಕಾರ್ಯಕ್ರಮ ಇಟ್ಟುಕೊಂಡಿತ್ತಂತೆ. ಅದರಲ್ಲಿ ಕಾವೇರಿ ನದಿ ತಮಿಳುನಾಡಿನ ಸಂಸ್ಕೃತಿ, ಪರಂಪರೆಯ ಮೇಲೆ ಬೀರಿದ ಪರಿಣಾಮಗಳ ಬಗ್ಗೆ, ತಮಿಳು ಜೀವನದಲ್ಲಿ ಕಾವೇರಿಯ ಪಾತ್ರದ ಬಗ್ಗೆ, ತಮಿಳಿನ ಕಾವ್ಯ, ಕೃತಿಗಳಲ್ಲಿ ಕಾವೇರಿಯ ಬಣ್ಣನೆ ಸೇರಿದಂತೆ, ಕಾವೇರಿ ಸೀಮೆಯ ಕೃಷಿ ಚಟುವಟಿಕೆಗಳ ಬಗ್ಗೆ ಛಾಯಾಚಿತ್ರ ಸಹಿತ ವಿವರಣೆಗಳಿದ್ದವು. ಕಾವೇರಿ ನದಿ ಪೂಂಪ್‌ಹಾರ್‌ನಲ್ಲಿ ಬಂಗಾಳ ಕೊಲ್ಲಿಯಲ್ಲಿ ಲೀನವಾಗುವ ಮೊದಲು ಅದು ಹೇಗೆ ಅಲ್ಲಿನ ಜನಜೀವನದ ಮೇಲೆ ಪರಿಣಾಮ ಉಂಟು ಮಾಡಿದೆ ಎಂಬುದನ್ನು ದೇಶದ ಜನರಿಗೆ ತಿಳಿಯಪಡಿಸಲು ಅಲ್ಲಿನ ಸರ್ಕಾರ ಕೈಗೊಂಡ ಕ್ರಮವಾದು.ಆದರೆ ನಾವು ಕಾವೇರಿ ನಮ್ಮ ತಾಯಿ ಎಂದು ಭಾವನಾತ್ಮಕವಾಗಿ ಬೊಬ್ಬಿರಿಯುತ್ತೇವೆ, ಆ ತಾಯಿಯನ್ನು ಬಳಸಿಕೊಂಡು ಅದೇಷ್ಟು ರಾಜಕೀಯ ಲಾಭ ಪಡೆಯಬಹುದೋ ಅಷ್ಟನ್ನೂ ಬಾಚಿಕೊಳ್ಳಲು ಬಯಸುತ್ತೇವೆ. ಕಾವೇರಿ ಹೆಸರಲ್ಲಿ ಅದೇಷ್ಟು ಸಾಧ್ಯವೋ ಅಷ್ಟು ಸಂಘಟನೆಗಳನ್ನು ಕಟ್ಟಿ ದೊಣ್ಣೆ ನಾಯಕರಾಗಲು ಹೊರಡುತ್ತೇವೆ. ಆದರೆ ಕಾವೇರಿ ನಮ್ಮ ರಾಜ್ಯಕ್ಕೆ ನೀಡಿದ ಸಾಂಸ್ಕೃತಿಕ, ಸಾಹಿತ್ಯಿಕ, ಚಾರಿತ್ರಿಕ, ಆರ್ಥಿಕ ಕೊಡುಗೆಗಳನ್ನು ರಾಷ್ಟ್ರ ಮಟ್ಟದಲ್ಲಿ ಬಿಂಬಿಸುವ ಪ್ರಯತ್ನವನ್ನು ಮಾಡುವುದೇ ಇಲ್ಲ. ಅದ್ದರಿಂದ ಕಾವೇರಿ ವಿವಾದ ಭುಗಿಲೆದ್ದ ಸಂದರ್ಭಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯಕ್ಕೆ ಸಿಗಬೇಕಾದ ನೈತಿಕ ಬೆಂಬಲ ಸಿಗದೇ ಅದು ತಮಿಳುನಾಡಿನ ಪಾಲಾಗುತ್ತಿದೆ. ಮತ್ತಷ್ಟು ಓದು »