ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

17
ಆಕ್ಟೋ

ವೈದ್ಯೋ ನಾರಾಯಣೋ ಹರಿ

ಮಧುಚಂದ್ರ ಭದ್ರಾವತಿ 

ಪ್ರತಿ ಸೇವೆಗೆ ಸೇವಾ ಶುಲ್ಕವೆಂದು ಪ್ರತಿಯೊಂದು ಕಾರ್ಮಿಕ ವರ್ಗವು  ಪಡೆಯುತ್ತದೆ . ಇಂದು  ಸೇವಾ ಶುಲ್ಕದಲ್ಲಿ ಸೇವೆ ಎನ್ನುವ ಪದ ತಾನಾಗೆ ಬೇರ್ಪಟ್ಟಿದೆ. ಈಗ ಶುಲ್ಕದ ಮೇಲೆ ಮತ್ತೊಂದು ರೀತಿಯ ಶುಲ್ಕವನ್ನು ಹಾಕಿ ಹಲ್ಕಿರಿಯುತ್ತ  ಗ್ರಾಹಕರನ್ನು ಶೋಷಣೆ ಮಾಡುವ ವ್ಯಾಮೋಹಕ್ಕೆ  ತಮ್ಮ ಸಂಸ್ಕಾರವನ್ನು ಮರೆತು ಬಿಟ್ಟು ಹಗಲು  ದರೋಡೆಯಲ್ಲಿ ಹಲವು  ಕಾರ್ಮಿಕ ವರ್ಗಗಳು  ನಿರತವಾಗಿವೆ. ಕೆಳ ಮಟ್ಟದ  ಕಾರ್ಮಿಕ ವರ್ಗದಿಂದ  ಹಿಡಿದು ಅತ್ಯುತ್ತಮ ಮಟ್ಟದ ಕಾರ್ಮಿಕ ವರ್ಗದವರೆಗೂ ಈ  ಸಂಸ್ಕಾರ ಅಂಟಿಕೊಂಡಿದೆ(ಎಲ್ಲರು ಈ ವರ್ಗಕ್ಕೆ  ಸೇರುವುದಿಲ್ಲ ,ಕೆಲವರು ಇದಕ್ಕೆ  ಅಪವಾದ ).

ಅದಕ್ಕೆ  ” ವೈದ್ಯ ” ಎಂಬ ಕಾರ್ಮಿಕ ವರ್ಗವು ಸಹ ತಡವಾಗಿ ಸೇರಿದರು ಎಲ್ಲ ವರ್ಗವನ್ನು ಮಿರಿ ಅತ್ಯಂತ ವೇಗವಾಗಿ ಮುನ್ನುಗುತ್ತಿದೆ. ಬಹುಶ ನಮ್ಮ ಸುತ್ತಮುತ್ತಲಿರುವ ವೈದ್ಯರನ್ನು ಮತ್ತು ಆಸ್ಪತ್ರೆಗಳನ್ನು ನೀವಾಗಿ ನಿಮ್ಮ ಮನದಲ್ಲಿ ಪ್ರಸ್ತಾಪಿಸಿದರೆ ಅದಕ್ಕೆ ತಕ್ಕ ಮಟ್ಟಿಗೆ ಉತ್ತರ ನಿಮಗೆ ದೊರೆಯುತ್ತದೆ . ಸೇವಾ ಮನೋಭಾವ ಎಂಬುದನ್ನು ಮರೆತು, ಕೇವಲ  ಹಣಕ್ಕಾಗಿ ತಮ್ಮನ್ನು ಮಾರಿಕೊಂಡು ತಮ್ಮ ಮೂಲ ವೃತ್ತಿಗೆ ದ್ರೋಹ ಬಗೆಯುತ್ತ  ಜೀವನವೆಂಬ ರಥವನ್ನು ಎಳೆಯುತ್ತಾ ರೋಗಿಗಳ ರಕ್ತವನ್ನು ಕುಡಿಯುತ್ತಿರುತ್ತಾರೆ. ವಾಸ್ತವ ಹೇಗಿದೆ ಎಂದರೆ ಇಂದು ವೈದ್ಯನೆಂದರೆ ಹಣ ಕೀಳುವ ಜಿಗಣೆ  ಎಂಬಂತಾಗಿದೆ.

ಮತ್ತಷ್ಟು ಓದು »

9
ಆಕ್ಟೋ

ಟೆಕ್ಕಿಗಳಿಂದ ಕನ್ನಡ ಹಾಸ್ಯ ನಾಟಕೋತ್ಸವ

ಪವನ್ ಪಾರುಪತ್ತೇದಾರ

ಪ್ರತಿದಿನ C++, Java,.net ಸರ್ವರ್ರುಗಳ ಮಧ್ಯೆ ಇರುವ ಸಾಫ್ಟ್ವೇರ್ ಇಂಜಿನಿಯರುಗಳ ತಂಡವೇ ರಂಗತಂತ್ರ. 2008ರಲ್ಲಿ ಸ್ಥಾಪಿತವಾದ ಈ ತಂಡ, ಹವ್ಯಾಸಿ ನಾಟಕಕಾರರನ್ನು ಹೊಂದಿದ್ದು, ಇಲ್ಲಿಯವರೆಗೂ 8 ಪ್ರದರ್ಶನಗಳನ್ನು ನೀಡಿದೆ. ಈ ಹವ್ಯಾಸಿ ಟೆಕ್ಕಿ ಕಲಾವಿದರು ತಮ್ಮ ಕಚೇರಿಯ ಬಿಡುವಿಲ್ಲದ ಸಮಯದ ಮಧ್ಯೆ, ತಮ್ಮ ವೀಕೆಂಡುಗಳನ್ನೆಲ್ಲ ಬದಿಗಿಟ್ಟು, ಬಹಳಷ್ಟು ಕಷ್ಟ ಪಟ್ಟು ಅಭ್ಯಾಸ ಮಾಡಿ, ಅಕ್ಟೋಬರ್ ತಿಂಗಳಲ್ಲಿ ನಿಮ್ಮ ಮುಂದೆ ಹಾಸ್ಯ ನಾಟಕೋತ್ಸವ ನಡೆಸಲು ಸಜ್ಜಾಗಿದ್ದಾರೆ.

ತಂಡದ ಮೇಷ್ಟ್ರು ಮಹದೇವ್ ಪ್ರಸಾದ್ ಯುವಪಡೆಯೊಂದನ್ನು ಸಜ್ಜು ಮಾಡಿಕೊಂಡಿದ್ದು, ನಾಟಕ ಪ್ರಿಯರಿಗೆ ನಗೆಯ ಹಬ್ಬದೂಟ ಬಡಿಸಲು ತಯಾರಿ ನಡೆಸುತಿದ್ದಾರೆ. ಲಾಕ್ ಔಟ್ ಅಲ್ಲ ನಾಕೌಟ್, ಶ್ರೀ ಕೃಷ್ಣ ಸಂಧಾನ ಮತ್ತು ಬಂಡ್ವಾಳವಿಲ್ಲದ ಬಡಾಯಿಯಂತಹ ಪ್ರಸಿದ್ಧ ಹಾಸ್ಯ ನಾಟಕಗಳನ್ನು ನಿಮ್ಮ ಮುಂದಿಡಲು ಕಾತುರದಿಂದ ಕಾಯುತಿದ್ದಾರೆ. ನಾಟಕ ಪ್ರಿಯರೆಲ್ಲ ಬಂದು ಸಾಫ್ಟ್ ವೇರ್ ಟೆಕ್ಕಿಗಳ ಪ್ರಯತ್ನವನ್ನು ಪ್ರೋತ್ಸಾಹಿಸಿ ಹರಸಬೇಕಾಗಿ ವಿನಂತಿ.

ನಾಟಕ ಪ್ರದರ್ಶನ ನಡೆಯುವ ದಿನಾಂಕಗಳು ಕೆಳಗಿನಂತಿವೆ.

ಅಕ್ಟೋಬರ್ 12 – ಶ್ರೀ ಕೃಷ್ಣ ಸಂಧಾನ

ಅಕ್ಟೋಬರ್ 13 – ಬಂಡ್ವಾಳವಿಲ್ಲದ ಬಡಾಯಿ

ಶ್ರೀ ಕೃಷ್ಣ ಸಂಧಾನ : ರಚನೆ : ವಿ ಎನ್ ಅಶ್ವಥ್

ವಿದ್ಯೆ ಇಲ್ಲದ ಹಳ್ಳಿ ಜನ ನಾಟಕ ಮಾಡಲು ಹೊರಟಾಗ ಎದುರಾಗುವ ಛಾಲೆಂಜುಗಳೇನು, ಅ ಹಳ್ಳಿ ಜನಕ್ಕೆ ನಾಟಕ ಹೇಳಿಕೊಡಲು ಬರುವ ಮೇಷ್ಟ್ರಿಗೆ ಅದರ ಅರಿವಿರೋದಿಲ್ಲ. ಬಂದು ಇವ್ರಿಗೆ ನಾಟಕ ಹೇಳಿಕೊಡಕ್ಕೆ ಶುರು ಮಾಡಿ ಗೆಜ್ಜೆಗ್ ಪೂಜೆ ಮಾಡ್ಸೋ ಅಷ್ಟ್ರಲ್ಲಿ ಮೇಷ್ಟ್ರು ಗೋಳು ಕೇಳಕ್ಕಾಗಲ್ಲ. ಅಂತಹ ಮೇಷ್ಟ್ರು ಮತ್ತೆ ಶಿಶ್ಯಂದಿರ ನಡುವೆ ನಡೆವ ನಗೆ ನಾಟಕ ಕೃಷ್ಣ ಸಂಧಾನ. ಈ ನಾಟಕ ಈಗಾಗ್ಲೆ ಕನ್ನಡದ ನಾಟಕ ಪ್ರಿಯರಿಗೆಲ್ಲ ಚಿರಪರಿಚಿತ. ಆದಕ್ಕೆ ಕಾರಣ ನಾಟಕದ ಪ್ರತಿಯೊಂದು ಸಾಲಿನಲ್ಲು ಇರುವ ನಗೆಮಿಠಾಯಿ ಅಂದ್ರೆ ತಪ್ಪಾಲ್ಲ ಬಿಡಿ. ನಾಟಕದ ಪ್ರತಿಯೊಂದು ಲೈನ್ ಸಹ ಪಂಚ್ ಲೈನ್. ನೀವೆಷ್ಟು ಬಾರಿ ನೋಡಿದರೂ ಬೇಜಾರಾಗದ ನಾಟಕ ಇದು. ಇಂತಹ ನಗೆಯ ರಸಾಯನ ಸಹ ರಂಗತಂತ್ರದ ಹಾಸ್ಯೋತ್ಸವದ ಕೊಡುಗೆ. 

ಮತ್ತಷ್ಟು ಓದು »

6
ಆಕ್ಟೋ

ಆಯಸ್ಕಾಂತ

-ಪ್ರಜ್ವಲ್ ಕುಮಾರ್

ಈ ಮೊಬೈಲ್ ಅಲ್ಲಿ ಬ್ಯಾಟರಿನೆ ಇರಲ್ಲ ಗೇಮ್ ಆಡೋಣ ಅಂದ್ರೆ”,

“ಲೋ! ಬ್ಯಾಟಲ್ ಫೀಲ್ಡ್ ಗೇಮ್ ಸಿ.ಡಿ. ಇದ್ರೆ ಕೊಡೋ ಆ ಗೇಮ್ ಆಡಿಲ್ಲ ನಾನು”,

“ಒಂಥರಾ ಬೋರ್ ಹೊಡೀತಾ ಇದೆ ಕಣೆ! ಯಾವ್ದಾದ್ರು ಮೂವಿ ನೋಡೋಣ? ಟಿ.ವಿ. ಆನ್ ಮಾಡು, ಹೇಯ್! ಹ್ಯಾರಿ ಪಾಟರ್ ಬರ್ತಾ ಇದೆ ಕಣೆ. ಇರ್ಲಿ ಬಿಡು”

ಪೇಟೆಯಲ್ಲಿಯೇ ಹುಟ್ಟಿ, ಬೆಳೆದ ಅದೆಷ್ಟೋ ಸಣ್ಣ ಮಕ್ಕಳು ಇಷ್ಟು ಹೊತ್ತಿನ ತನಕ ಹೇಳಿದ ರೀತಿಲೇ ಮಾತಾಡ್ತಾ ಇರೋದನ್ನ ಕೇಳ್ತಾ ಇರ್ತೀವಿ. ಅದ್ಯಾಕೋ ಗೊತ್ತಿಲ್ಲ, ಕೆಲವು ಜನ ತಮ್ಮ ಮಕ್ಕಳಿಗೆ ಮತ್ತಷ್ಟು ಓದು »

3
ಆಕ್ಟೋ

ಕಾನೂನಿನಂಗಳ ೯ : ಹೆಣ್ಣಿಗೆ ಆಸ್ತಿಯಲ್ಲಿ ಸಮಾನ ಹಕ್ಕು

ಉಷಾ ಐನಕೈ  ಶಿರಸಿ

ಭಾರತೀಯ ಸಂಸ್ಕೃತಿಗೆ ಜಾಗತಿಕ ಮಟ್ಟದಲ್ಲಿ ಒಂದು ವಿಶಿಷ್ಟವಾದ ಸ್ಥಾನಮಾನ ಇದೆ. ವೈವಿಧ್ಯಮಯವಾದ ಭೌಗೋಲಿಕ ಸ್ವರೂಪ, ವಿಭಿನ್ನವಾದ ಭಾಷೆ, ಆಚಾರ, ರೂಢಿ ಹೀಗೆ ಭಾರತದಲ್ಲಿ ಸಾಂಸ್ಕೃತಿಕ ವೈವಿಧ್ಯತೆ ಅಪಾರ. ಈ ಕಾರಣಕ್ಕಾಗೇ ಭಾರತದೇಶ ಜಾಗತಿಕ ಕುತೂಹಲದ ತಾಣವಾಗಿದೆ. ಭಾರತೀಯ ಸಮಾಜಕ್ಕೆ ಸಾವಿರಾರು ವರ್ಷಗಳ ಪರಂಪರೆ ಇದೆ. ಇಷ್ಟೊಂದು ವರ್ಷ ಈ ಸಂಸ್ಕೃತಿ ಸುಸಂಬದ್ಧವಾಗಿ ಸಾಗಿಬಂದಿದೆ ಅಂದರೆ ಇದರ ಹಿಂದೆ ನ್ಯಾಯ, ನೀತಿ, ಧರ್ಮ ಮುಂತಾದವುಗಳು ಇದೆ ಅಂತಲೇ ಅರ್ಥ. ಅಂದರೆ ಒಂದು ರೀತಿಯ ಕಾನೂನುಗಳ ಪರಿಕಲ್ಪನೆಯಲ್ಲೇ ನಮ್ಮ ಸಂಸ್ಕೃತಿ ಸಾಗಿಬಂದಿದೆ. ಅದನ್ನೇ ಸಂಪ್ರದಾಯ, ರೂಢಿ, ಶ್ರುತಿ, ಸ್ಮೃತಿ, ಉಪನಿಷತ್ ಮುಂತಾದವುಗಳಾಗಿ ಕಾನೂನಿನ ಅಂಗವೆಂದು ಗುರುತಿಸಲ್ಪಟ್ಟಿವೆ. ನಾವಿಂದು ನೋಡುತ್ತಿರುವ ಹಿಂದೂ ಕಾನೂನು ಪ್ರಾಚೀನ ಭಾರತದಲ್ಲಿನ ಸಂಪ್ರದಾಯ, ಪದ್ದತಿ, ಸ್ಮೃತಿಗಳನ್ನಾಧರಿಸಿಯೇ ಇದೆ.

ಈ ಹಿಂದೂ ಕಾನೂನು ಎನ್ನುವುದು ಎಲ್ಲ ಭಾರತೀಯರಿಗೆ ಅಥವಾ ಹಿಂದೂಗಳು ಎನಿಸಿಕೊಂಡ ಭಾರತೀಯರಿಗೆ ಅನ್ವಯಿಸುತ್ತದೆ. ಇದರಲ್ಲಿ ವಿವಾಹ, ಜೀವನಾಂಶ, ದತ್ತಕ, ವಾರಸಾ, ಸಂರಕ್ಷ ಅಧಿನಿಯಮ, ಆಸ್ತಿ ವಿಭಾಗ ಮುಂತಾದವುಗಳೆಲ್ಲ ಬರುತ್ತವೆ.

ಮತ್ತಷ್ಟು ಓದು »

27
ಸೆಪ್ಟೆಂ

ಕಾವೇರಿ ನದಿನೀರು ಹಂಚಿಕೆಯಲ್ಲಿ ನಾಡಿಗಾದ ಅನ್ಯಾಯ – ಕಿರು ವರದಿ

– ಜಯಪ್ರಕಾಶ್ ಪಿ., ಕರುನಾಡ ದನಿ

ಕಾವೇರಿ ನದಿಯು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಬ್ರಹ್ಮಗಿರಿ ತಪ್ಪಲಿನ ’ತಲಕಾವೇರಿ’ ಯಲ್ಲಿ ಹುಟ್ಟಿ ಕರ್ನಾಟಕದ ಬಹುತೇಕ ಭಾಗದಲ್ಲಿ ಹರಿದು ತಮಿಳುನಾಡು ಮತ್ತು ಕೇರಳದ ಕೆಲ ಭಾಗಗಳಲ್ಲಿ ಹರಿದು ಹೋಗುತ್ತದೆ. 1883 ರಲ್ಲಿ ಅಂದಿನ ಮೈಸೂರು ಪ್ರಾಂತ್ಯದ ದಿವಾನರು ಕಾವೇರಿ ನದಿನೀರನ್ನು ನೀರಾವರಿ ಯೋಜನೆಗೆ ಬಳಸಿಕೊಳ್ಳಲು ಮುಂದಾದಾಗ, ಅಂದಿನ ಬ್ರಿಟಿಷ್ ಆಳ್ವಿಕೆಯಲ್ಲಿದ್ದ ಮದರಾಸು ಪ್ರಾಂತ್ಯ ಅದನ್ನು ಸಹಿಸದೆ, ಮದರಾಸಿಗೆ ಅನುಕೂಲವಾಗುವಂತ ಅನೇಕ ಕಟ್ಟಳೆಗಳನ್ನು ಮಾಡುವ ಮೂಲಕ ತಾರತಮ್ಯ ನೀತಿ ಆರಂಭಿಸಿತು. ಅಂದು ಆರಂಭವಾದ ಕಾವೇರಿ ನದಿನೀರಿನ ಸಮಸ್ಯೆ ಸುಮಾರು 120ವರ್ಷಗಳೇ ಕಳೆದಿದ್ದರೂ,ಸರಿಯಾದ ಒಂದು ನಿಷ್ಪಕ್ಷಪಾತ ಜಲನೀತಿ ಇಲ್ಲದ ಪರಿಣಾಮವಾಗಿ ಇಂದು ಬಗೆಹರಿಯದ ಕಗ್ಗಂಟಾಗಿ ಬೆಳೆದು ನಿಂತಿದೆ.
21
ಸೆಪ್ಟೆಂ

ಬರಹಗಾರನ ಭಾಷೆ ಮತ್ತು ಸ್ಮಾರಕ

ಡಾ ಅಶೋಕ್. ಕೆ. ಆರ್.

ಆರ್. ಕೆ. ನಾರಾಯಣ್ ಯಾರಿಗೆ ಸೇರಿದವರು? ಅವರು ಮೂಲತಃ ತಮಿಳಿಗ, ಕರ್ನಾಟಕದ ಮೈಸೂರಿನಲ್ಲೂ ವಾಸಿಸಿದ್ದರು. ಬರೆದಿದ್ದು ತಮಿಳಿನಲ್ಲೂ ಅಲ್ಲ, ಕನ್ನಡದಲ್ಲೂ ಅಲ್ಲ; ನಮ್ಮ ದೇಶದ್ದೇ ಅಲ್ಲದ ಆಂಗ್ಲ ಭಾಷೆಯಲ್ಲಿ. ಇದೊಂದೇ ಕಾರಣಕ್ಕೆ ಅವರನ್ನು ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ ಕೊನೆಗೆ ಭಾರತದವರೇ ಅಲ್ಲ ಎನ್ನಲಾದೀತೆ? ಬರಹಗಳು ಒಂದು ಭಾಷೆ, ರಾಜ್ಯ, ರಾಷ್ಟ್ರಕ್ಕಷ್ಟೇ ಸೀಮಿತವಾದ ಸಂಗತಿಯೇ? ಮನದ ಭಾವನೆ ತುಮುಲಗಳನ್ನು, ಸಮಾಜದ ಜೀವನ ವಿಧಾನವನ್ನು ಬರಹರೂಪದಲ್ಲಿ ಕಟ್ಟಬಯಸುವ ಲೇಖಕನಿಗೆ ತನಗೆ ಹಿಡಿತವಿರುವ ಭಾಷೆಯಲ್ಲಿ ಬರೆಯುವ ಸ್ವಾತಂತ್ರ್ಯವಿದ್ದೇ ಇದೆ. ಪ್ರಾದೇಶಿಕ ಭಾಷೆಗಳ ಪುಸ್ತಕಗಳು ಮೇಲ್ನೋಟಕ್ಕೆ ಆ ಭಾಷಿಗರಿಗಷ್ಟೇ ಸೀಮಿತವೆಂಬಂತೆ ತೋರಿದರೂ ಅನುವಾದಗಳ ಮುಖಾಂತರ ಅನ್ಯಭಾಷಿಗರನ್ನೂ ತಲುಪುತ್ತದೆ. ರಷಿಯನ್ ಭಾಷೆಯಲ್ಲಿ ಬರೆದ ಲಿಯೋ ಟಾಲ್ ಸ್ಟಾಯ್, ದಸ್ತೋವಸ್ಕಿ ಪ್ರಪಂಚವನ್ನೆಲ್ಲ ತಲುಪಲು ಸಾಧ್ಯಾವಾಗಿದ್ದು ಅನುವಾದದಿಂದ. ತೆಲುಗಿನ ಯಂಡಮೂರಿ ವಿರೇಂದ್ರನಾಥ್ ನಮ್ಮವನೆನಿಸಿದ್ದು ಅನುವಾದದಿಂದ. ಭಾಷೆಗಿಂತ ಬರಹಗಳಲ್ಲಿನ ಮಾನವೀಯತೆ, ಸಾರ್ವತ್ರಿಕತೆಯಷ್ಟೇ ಕೊನೆಗೆ ಮುಖ್ಯವಾಗುಳಿಯುವುದು. ಆರ್. ಕೆ. ನಾರಾಯಣ್ ರ ಬಹುತೇಕ ಕೃತಿಗಳು ಕನ್ನಡಕ್ಕೆ ಅನುವಾದಗೊಂಡು ಕನ್ನಡಿಗರನ್ನೂ ತಲುಪಿದೆ. ಓದಲು ಬಾರದವರಿಗೆ, ಓದಲು ಇಚ್ಛಿಸದವರಿಗೆ ಶಂಕರ್ ನಾಗ್ ರ ಸಮರ್ಥ ನಿರ್ದೇಶನದಲ್ಲಿ ಮೂಡಿಬಂದ ಮಾಲ್ಗುಡಿ ಡೇಸ್ ಧಾರಾವಾಹಿಯ ಮುಖಾಂತರ ಹಿಂದಿ ಅರ್ಥೈಸಿಕೊಳ್ಳುವ ಜನರಿಗೂ ತಲುಪಿದೆ. ಎಲ್ಲರ ಮನಸ್ಸು ತಟ್ಟುವ ನಮ್ಮದೇ ಜೀವನದ ತುಣುಕುಗಳಂತೆ ಕಾಣುವ ನಾರಾಯಣ್ ರ ಕಥೆಗಳು ಭಾಷೆಯನ್ನು ಮೀರಿ ನಮ್ಮನ್ನು ತಲುಪುತ್ತದೆ.

kuvempu's house

 ಕುವೆಂಪು ವಾಸಿಸಿದ್ದ ಮನೆ

ಮೈಸೂರಿನಲ್ಲಿ ಆರ್. ಕೆ. ನಾರಾಯಣ್ ವಾಸವಿದ್ದ ಮನೆಯನ್ನು ಸ್ಮಾರಕವಾಗಿಸಬೇಕೆಂಬ ಸರಕಾರದ ಉದ್ದೇಶವನ್ನು ಕನ್ನಡದ ಕೆಲವು ಲೇಖಕರು ವಿರೋಧಿಸಿದ್ದಾರೆ. ‘ಕನ್ನಡಕ್ಕೆ ಆರ್. ಕೆ. ನಾರಾಯಣರ ಕೊಡುಗೆ ಏನು?’ ಎಂದು ಪ್ರಶ್ನಿಸಿದ್ದಾರೆ. ಆರ್. ಕೆ. ನಾರಾಯಣ್ ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ, ಭಾರತೀಯರೂ ಅಲ್ಲವೆಂಬ ಭಾವನೆ ಅವರ ಬರಹದ ಭಾಷೆಯ ಚೌಕಟ್ಟಿನಿಂದಾಗಿ ಉದ್ಭವವಾಗುವುದಾದರೆ ಆರ್. ಕೆ. ನಾರಾಯಣ್ ಒಬ್ಬ ಶ್ರೇಷ್ಠ ಸಾಹಿತಿ ಎಂಬ ದೃಷ್ಟಿಕೋನವಾದರೂ ಇರಬೇಕಲ್ಲವೇ? ಇಂಥ ಒಬ್ಬ ಸಾಹಿತಿ ವಾಸವಿದ್ದ, ಬರವಣಿಗೆ ನಡೆಸಿದ ಮನೆಯನ್ನು ಸ್ಮಾರಕ ಮಾಡುವುದನ್ನು ವಿರೋಧಿಸುವುದಕ್ಕೆ ಭಾಷೆಯೊಂದೇ ಕಾರಣವಾಗುವುದು ಸರಿಯಲ್ಲ. ಆರ್. ಕೆ. ನಾರಾಯಣ್ ರ ಸಾಹಿತ್ಯಿಕ ಕೊಡುಗೆಯನ್ನು ಗಮನಿಸುವಾಗ ಭಾಷೆ ಗೌಣವಾಗಬೇಕು. ನಾರಾಯಣ್ ರ ಮನೆಯವರು ಅವರು ವಾಸವಿದ್ದ ಮನೆಯನ್ನು ಸರಕಾರಕ್ಕೆ ‘ಮಾರಿದ್ದಾರೆ’ ಎಂಬ ಆರೋಪವೂ ಇದೆ. ಅದು ಅವರ ಮನೆಯವರ ಅನಿವಾರ್ಯತೆಯೇನೋ? ಖಾಸಗಿ ವ್ಯಕ್ತಿ ಖರೀದಿಸಿ ವಾಸ್ತುವಿನ ಹೆಸರಲ್ಲೋ, ನವೀಕರಣದ ಹೆಸರಲ್ಲೋ ಮನೆಯನ್ನು ಕೆಡವಿ ಕೆಡಿಸುವುದಕ್ಕಿಂತ ಸರಕಾರ ಖರೀದಿಸುವುದೇ ಸೂಕ್ತವಲ್ಲವೇ?

shivaram karant's house in puttur

ಪುತ್ತೂರಿನ ಬಾಲವನ

ಇನ್ನು ಲೇಖಕರ ಮನೆಯನ್ನು ಸ್ಮಾರಕವನ್ನಾಗಿಸಿ ಪ್ರವಾಸಿ ತಾಣದಂತೆ ಮಾರ್ಪಡಿಸುವುದು ಎಷ್ಟರಮಟ್ಟಿಗೆ ಸಾಹಿತ್ಯಕ್ಕೆ ಉಪಯೋಗಕಾರಿ? ಸ್ಮಾರಕಗಳಿಗೆ ವೆಚ್ಚ ಮಾಡುವ ಹಣವನ್ನು ಸಾಹಿತಿಯ ಪುಸ್ತಕಗಳನ್ನು ಮುದ್ರಿಸಿ ಜನರಿಗೆ ತಲುಪಿಸುವುದು ಹೆಚ್ಚು ಸೂಕ್ತವೆಂಬ ವಾದವೂ ಇದೆ. ಪ್ರತಿಮೆಗಳಿಗೆ ವೆಚ್ಚ ಮಾಡುವುದನ್ನು ವಿರೋಧಿಸುವುದು ಅರ್ಥಪೂರ್ಣ. ಆದರೆ ಸ್ಮಾರಕಗಳಿಂದ ಸಾಹಿತ್ಯಿಕ ಉಪಯೋಗವಿಲ್ಲ ಎಂಬುದನ್ನು ಸಂಪೂರ್ಣವಾಗಿ ಒಪ್ಪುವುದು ಕಷ್ಟ. ಮೋಜಿಗಾಗಿ, ಪ್ರವಾಸಕ್ಕಾಗಿ ಇಂಥ ಸ್ಮಾರಕಗಳಿಗೆ ಭೇಟಿ ನೀಡುವವರು ಇದ್ದಾರಾದರೂ ಸಾಹಿತಿಯ ಬರಹಗಳನ್ನು ಓದಿದ ಓದುಗನಿಗೆ ಆ ಸಾಹಿತಿ ಓಡಾಡಿದ, ಆ ಸಾಹಿತ್ಯ ಪಡಿಮೂಡಿದ ಜಾಗವನ್ನು ನೋಡುವ ಕುತೂಹಲವೂ ಇರುತ್ತದೆ. ಪುತ್ತೂರಿನ ಶಿವರಾಮ ಕಾರಂತ ಬಾಲವನ, ಕುವೆಂಪುರವರ ಕುಪ್ಪಳ್ಳಿಗೆ ಭೇಟಿ ನೀಡಿದಾಗ ಓದುಗರಿಗೆ ಸಿಗುವ ಉಲ್ಲಾಸ, ‘ನಾನೂ ಬರೆಯಬೇಕೆಂದು’ ಕೊಂಡವರಿಗೆ ಸಿಗುವ ಉತ್ಸಾಹ – ಪ್ರೇರಣೆಯನ್ನು ಕಡೆಗಣಿಸಲಾದೀತೆ? ಪುಸ್ತಕಗಳನ್ನು ಜನರಿಗೆ ತಲುಪಿಸುವುದು ಸಾಹಿತಿಗೆ ತೋರುವ ಶ್ರೇಷ್ಠ ಗೌರವವೆಂಬುದು ಸತ್ಯ, ಇದರೊಟ್ಟಿಗೆ ಸಾಹಿತಿಗಳ ಮನೆಯನ್ನು ಸ್ಮಾರಕವಾಗಿಸುವುದು ಕೂಡ ಅವರನ್ನು ಮತ್ತಷ್ಟು ಅರಿಯಲು, ಮಗದಷ್ಟು ಓದಲು ಸಹಾಯಕ.

 

ಚಿತ್ರಗಳು – ಡಾ ಅಶೋಕ್ ಕೆ ಆರ್, churumuri

 

14
ಸೆಪ್ಟೆಂ

ಎಷ್ಟು ಕಷ್ಟ ಒಂದ್ ಮದ್ವೆ ಅಂದ್ರೆ

-ಪರೇಶ್ ಸರಾಫ್

ಡಾಕ್ಟರ್ ಮಾಮನ ಆಸ್ಪತ್ರೆಯ ಹಿಂದಿನ ಹಾಲ್ನಲ್ಲಿ ಆಗಾಗ ಚಿಕ್ಕ ಪುಟ್ಟ ಸಮಾಜ ಸೇವಾ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ. ಅದರಲ್ಲಿ ಪ್ರತಿ ರವಿವಾರ ನಡೆಯುವ ಮ್ಯಾರೇಜ್ ಬ್ಯುರೋ ಸಹ ಒಂದು. ನಮ್ಮ ಸಮುದಾಯದ ಹುಡುಗ, ಹುಡುಗಿಯರ ಮಾಹಿತಿ ಸಂಗ್ರಹ, ಜಾತಕ ಮೇಳಾಮೇಳಿ, ಮಾತುಕತೆಯಿಂದ ಹಿಡಿದು, ಬಡವರಿದ್ದರೆ ಮದುವೆಗೆ ಸಹಾಯ ಮಾಡುವಷ್ಟರವರೆಗೆ ಸಮಾಜಸೇವೆ ನಡೆಯುತ್ತಿತ್ತು. ಪ್ರಭು ಮಾಸ್ತರರು, ಮಹಾಲೆ ಮಾಮನ ಸಾರಥ್ಯದಲ್ಲಿ ಈ ಕಾರ್ಯ ಬಹಳ ಸಮರ್ಥವಾಗಿ ಮುಂದುವರೆದುಕೊಂಡು ಹೋಯಿತು. ಬರೀ ವಧು ವರರ ಮಾಹಿತಿ ನೀಡುವುದಷ್ಟೇ ಅಲ್ಲದೇ ಹುಡುಗನ, ಹುಡುಗಿಯ ಹಿನ್ನೆಲೆಗಳನ್ನು ನೋಡಿ, ಜೋಡಿ ಸರಿ ಹೊಂದುತ್ತದೆಯೋ, ಹುಡುಗನಿಗೆ ವ್ಯಸನಗಳಿವೆಯೋ ಎಂಬುದನ್ನೆಲ್ಲ ಪರೀಕ್ಷಿಸಿ ತಮ್ಮ

ಕೈಲಾದ ಮಟ್ಟಿಗೆ ಉತ್ತಮ ಸೇವೆ ನೀಡಿ, ಮದುವೆಯ ನೈತಿಕ ಹೊಣೆಯನ್ನು ಸಹ ಹೊತ್ತು  ಮನೆ ಮಾತಾದರು. ಹೀಗೆ ಬರುವವರ ಸಂಖ್ಯೆ ಸಹ ಜಾಸ್ತಿಯಾಗುತ್ತ ಹೋಯಿತು. ಸಂಖ್ಯೆಗಳು ಜಾಸ್ತಿಯಾದಂತೆ ಹಲವು ಸಿಹಿ ಕಹಿ ಅನುಭವಗಳು ಸಹ ಆಗುತ್ತಾ ಹೋಯಿತು. ಪ್ರತಿ ಅನುಭವವೂ ಈಗಿನ ಸಾಮಾಜಿಕ ಜೀವನ,

ಮತ್ತಷ್ಟು ಓದು »

7
ಸೆಪ್ಟೆಂ

ಮರೆಯಾಯಿತೇ, ನಮ್ಮ ಕ್ರಿಯಾಶೀಲತೆ ?

ಮಧುಚಂದ್ರ ಭದ್ರಾವತಿ
ಅಮೇರಿಕ ಖಂಡವನ್ನು ಅನ್ವೇಷಣೆ ಮಾಡಿದ ಸಲುವಾಗಿ ಸ್ಪೇನ್ ದೇಶದ ರಾಣಿ ಇಸಬೆಲ ಒಂದು ಕೂಟವನ್ನು ಏರ್ಪಡಿಸಿದ್ದಳು. ಅಲ್ಲಿಗೆ ಕೊಲಂಬಸ್ ಸಹ ಬಂದಿದ್ದನು. ಎಲ್ಲರೂ ಮೇಜಿನ ಮುಂದೆ ಕುಳಿತಿರುವಾಗ ಅಲ್ಲಿ ನೆರೆದಿದ್ದ ಅಮಂತ್ರಿತರನ್ನು ಕುರಿತು ” ಮೊಟ್ಟೆಯನ್ನು ಯಾರು ಮೇಜಿನ ಮೇಲೆ ನಿಲ್ಲಿಸುತ್ತಿರ ” ಎಂದು ಪ್ರಶ್ನೆಯನ್ನು ಇಟ್ಟಳು. ಅಲ್ಲಿದ್ದ ಮಹಾ ಜನರು ಅದೇನು ಮಹಾ ಎಂದು ಮೊಟ್ಟೆಯನ್ನು ಮೇಜಿನ ಮೇಲೆ ನಿಲ್ಲಿಸಲು ಪ್ರಯತ್ನಿಸಿ ವಿಫಲರಾದರು. ಆಗ ಕೊಲಂಬಸ್ ಬೆಂದ ಮೊಟ್ಟೆಯನ್ನು ಕುಕ್ಕಿ ನಿಲ್ಲಿಸಿದಾಗ ಅಲ್ಲಿ ನೆರೆದಿದ್ದ ಕೆಲವರು ಹೊಗಳಿದರೆ, ಮತ್ತೆ ಕೆಲವರು ಇದನ್ನು ನಾನು ಮಾಡುತಿದ್ದೆ ಇದರಲ್ಲಿ ಏನು ಇದೆ ಎಂದು ತಿರಸ್ಕಾರದಿಂದ ತೆಗಳಿದರು.

ಮೇಲಿನ ಕತೆ ಯಾಕೆ ಬಂತು ಅಂದರೆ ನಮ್ಮ ಸುತ್ತಲಿನ ಪರಿಸರದಲ್ಲಿ ಮೇಲಿನ ಅಪಸ್ವರಗಳು ನಿತ್ಯ ನಡೆಯುತ್ತಲೇ ಇವೆ. ಕೆಲವರು ಬೇರೆಯವರ ಶೈಲಿಯನ್ನು ಅನುಕರಣೆ ಮಾಡಿ ಇದರ ಮೂಲ ತಮ್ಮದೆಂದು ಪ್ರತಿಪಾದಿಸುತ್ತ ಮೇಲೇರುತ್ತಾರೆ. ಕೇವಲ ಪುಸ್ತಕ , ಕಾದಂಬರಿಗೆ ಸೀಮಿತವಾದ ಕೃತಿ ಚೌರ್ಯ ಎಲ್ಲೆಡೆ ವಿರಾಜಮಾನವಾಗಿ ಬಿಟ್ಟಿದೆ. ಬೆಂಗಳೂರಿನ ಎಸ್ ಪಿ ರಸ್ತೆ, ನ್ಯಾಷನಲ್ ಮಾರ್ಕೆಟ್ ಮತ್ತು ರೋಡ್ ಸೈಡ್ ನಲ್ಲಿರುವ ಪುಟ್ಟ ಅಂಗಡಿಗಳಿಗೆ ಹೋದಲ್ಲಿ ನಿಮಗೆ ಬೇಕಾದ ವಸ್ತುವಿನ ನಕಲಿನ ಮಾಲು ಕೊಳ್ಳಲು ಸಿದ್ದವಾಗಿರುತ್ತದೆ. ಐಫೋನ್, ಎಯೇಫೋನ್ ನೋಕಿಯಾ ನಕಿಯ, ರೈಬ್ಯಾನ್ , ರಬನ್ ಎಂದು ಬ್ರಾಂಡ್ ಹೆಸರಲ್ಲಿ ಮಾರಾಟಕಿರುತ್ತವೆ. ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಕೊಂಡು ಕೊಳ್ಳುವವರು ಸಂಖ್ಯೆ ತಸು ಜಾಸ್ತಿನೇ.

ಮತ್ತಷ್ಟು ಓದು »

5
ಸೆಪ್ಟೆಂ

ವಿಲಕ್ಷಣ ದಾರ್ಶನಿಕ ಯೂ.ಜಿ,ಕೃಷ್ಣಮೂರ್ತಿ(ಯೂಜಿ)

-ಡಾ| ಜ್ಞಾನದೇವ್ ಮೊಳಕಾಲ್ಮುರು

ತನ್ನಲ್ಲಿ ನೀಡುವುದಕ್ಕೆ ಯಾವ ಸ೦ದೇಶವೂ ಇಲ್ಲವೆ೦ದು, ಈ ಜಗತ್ತಿನಲ್ಲಿ ನೀವು ಅರ್ಥಮಾಡಿಕೊ೦ಡು ಬದುಕುವ೦ಥದು ಏನೂ ಇಲ್ಲವೆ೦ದು ಸಾರಿಕೊ೦ಡೇ ಜಗತ್ತಿನ ಆಧ್ಯಾತ್ಮಿಕ ಜಿಜ್ಞಾಸುಗಳಲ್ಲಿ, ಚಿ೦ತಕರಲ್ಲಿ ಗಾಢ ಆಸಕ್ತಿ ಕೆರಳಿಸಿದ ಒಬ್ಬ ವರ್ಣರ೦ಜಿತ ದಾರ್ಶನಿಕ ಚಿ೦ತಕ ಉಪ್ಪಾಲೂರಿ ಗೋಪಾಲ ಕೃಷ್ಣಮೂರ್ತಿ.ಯೂಜಿಯೆ೦ದೇ ವಿಶ್ವಾದ್ಯ೦ತ ಚಿರಪರಿಚಿತ. ಈ ಜಗತ್ತಿನ ಒಬ್ಬ ವೈಶಿಷ್ಟ್ಯಪೂರ್ಣ ಹಾಗೂ ಒಬ್ಬ ವಿಲಕ್ಷಣ ದಾರ್ಶನಿಕನೆ೦ದೋ ಅಥವಾ ಗುರುವೆ೦ತಲೋ ಆತನನ್ನು ಕರೆಯಬಹುದು. ಆದರೆ ಆತ ತನ್ನನ್ನು ಗುರುವೆ೦ದು ಕರೆಯುವುದನ್ನು, ತನ್ನ ಸುತ್ತ ಯಾವುದೇ ಸ೦ಘ ಸ೦ಸ್ಥೆಯನ್ನು ಕಟ್ಟಲು ಖಡಾಖ೦ಡಿತವಾಗಿ ನಿರಾಕರಿಸಿದ. ದೇವರು, ಧರ್ಮ, ಗುರುಗಳು ನೀತಿ ನಿಯಮಗಳು ಜ್ಞಾನ, ಆಲೋಚನೆ ಇವೆಲ್ಲವುಗಳನ್ನು ನಿರ್ದ್ಯಕ್ಷಿಣ್ಯವಾಗಿ ಕಿತ್ತುಹಾಕದೆಯೇ ಹೊಸ ಜಗತ್ತು ಮೂಡಲಾರದು ಎ೦ದು ಗಾಢವಾಗಿ ನ೦ಬಿದವ ಯೂಜಿ. ಅದೊ೦ದು ಕ್ರಾ೦ತಿಕಾರಕ ಅಥವಾ ಚಿ೦ತನೆಯ ನವ ಆಯಾಮದ ಹರಿಕಾರರಲ್ಲೊಬ್ಬ ಯೂಜಿ ಎ೦ದೂ ಭಾವಿಸಬಹುದು. ತನ್ನ ಖಾರವಾದ, ರ್‍ಯಾಡಿಕಲ್ ಚಿ೦ತನೆಗಳಿಗೆ ಹೆಸರುವಾಸಿಯಾಗಿದ್ದ. ತನ್ನ ಬಳಿ ಹೋಗುವವರನ್ನು ಪೂರಾ ನಗ್ನಗೊಳಿಸುತ್ತಾನೆ. ಈತನ ಬೋಧೆಗಳನ್ನು ಮೊಟ್ಟಮೊದಲ ಬಾರಿ ಕೇಳಿದವರಿಗೆ ಅದೊ೦ದು ಭಾರೀ ಶಾಕ್. ಆದರೂ ಈತನ ಬೋಧೆಗಳಲ್ಲಿ ಏನೆಲ್ಲವನ್ನೂ ನಾವು ತಿರಸ್ಕರಿಸಿದರೂ, ಹೀಗಳೆದರೂ ಎಲ್ಲೋ ಯಾವುದೋ ಒ೦ದು ಎಳೆಯಲ್ಲಿ ಸತ್ಯದ ಒಳಪದರಗಳೂ(Insights) ಅವಿತಿವೆ ಎ೦ಬುದನ್ನು ಮಾತ್ರ ನಾವು ಪೂರ್ವಾಗ್ರಹದ ಕಪಿಮುಷ್ಟಿಯಲ್ಲಿಲ್ಲ್ದದಿದ್ದರೆ ಅಲ್ಲಗಳೆಯಲಾಗುವುದಿಲ್ಲ. ಅನೇಕರನ್ನು ಪ್ರಭಾವಗೊಳಿಸಿದ್ದಾನೆ. ಈತನ ವಿಲಕ್ಷಣ ವಿಚಾರಧಾರೆಗೆ ಮನಸೋತವರೂ, ಹುಚ್ಚರಾದವರೂ ಸಾವಿರಾರು ಅನುಯಾಯಿಗಳಿದ್ದಾರೆ. ಸ೦ಪ್ರದಾಯವಾದಿಗಳನ್ನು ದ೦ಗುಬಡಿಸಿ ಕೆರಳಿಸಿದ್ದಾನೆ. ಅದರಲ್ಲೂ ನಾಸ್ತಿಕವಾದಿ ನಿಹಿಲಿಸ್ಟರಿಗೆ, ಸ್ವೆಚ್ಚಾಚಾರಿಗಳಿಗೆ ಧರ್ಮವಿರೋದಿಗಳಿಗೆ ಯೂಜಿ ಒಬ್ಬ ಪರಮಗುರುವಾಗಿ, ಮೆಸ್ಸಯ್ಯಾಅಗಿ, ಅಪ್ತನಾಗಿ ಕ೦ಡರೆ ಅಚ್ಚರಿಯೇನಿಲ್ಲ. ಹಲವರು ಈತನನ್ನು ಜ್ಞಾನೋದಯವಾದ ಗುರು ಎ೦ದು ಭಾವಿಸಿದರೆ ಇನ್ನು ಹಲವರು ತಮ್ಮ ಹುಬ್ಬುಗಳನ್ನು ಏರಿಸಿ ಈತನೊಬ್ಬ ಹಾದಿಗೆಟ್ಟ, ಪರ್ವರ್ಟೆಡ್, ಐಡಿಯೋಸಿ೦ಕ್ರಾ೦ಟಿಕ್ ತತ್ವಜ್ಞಾನಿಯೆ೦ದೇ ಮೂದಲಿಸಿದ್ದಾರೆ. “‘ ನೀವು ಬೇರೆ ಯಾರಿ೦ದಲೂ ಕೇಳಿಸಿಕೊಳ್ಳದಿರುವ೦ಥ ಆಲೋಚನೆಯ ಬಗ್ಗೆ ಸ್ವಲ್ಪ ಹೇಳಿ. ಅಲ್ಲಿರುವುದು ಯೋಚನೆ ಮತ್ತು ಯೋಚನೆಯ ಬಗ್ಗೆಯೇ ಅಷ್ಟೇ.” ಎ೦ದು ಆಲೋಚನೆಯನ್ನೇ ನಿಮ್ಮ ಶತ್ರು ಎ೦ದು ಬಣ್ಣಿಸಿ ಅದನ್ನೇ ಮೂಲವಾಗಿ ಖ೦ಡಿಸುವ, ಯೂಜಿ ನಮ್ಮನ್ನೂ ಸ್ವಲ್ಪ ಮಟ್ಟಿಗೆ ಚಿ೦ತನೆಗೆ ಹಾಗೆಯೇ ಗೊ೦ದಲಕ್ಕೂ ಹಚ್ಚುತ್ತಾನೆ. ಈತನ ಬದುಕೇ ಒ೦ದು ನಾಟಕೀಯತೆಯಿ೦ದ ತು೦ಬಿದ್ದು ಅನೇಕ ಏರಿಳಿತಗಳಿ೦ದ ಕೂಡಿದ್ದು ಅದನ್ನೇ ಒ೦ದು ಗ್ರ೦ಥವಾಗಿ ಬರೆಯುವ ರೋಚಕ ದ್ರವ್ಯವನ್ನು ಹೊ೦ದಿದೆ.

ಮತ್ತಷ್ಟು ಓದು »

3
ಸೆಪ್ಟೆಂ

ಕಾನೂನಿನಂಗಳ ೮ : ಕಿರುಕುಳ, ಹಿಂಸೆ, ದೌರ್ಜನ್ಯ, ಅತ್ಯಾಚಾರ!

 ಉಷಾ ಐನಕೈ  ಶಿರಸಿ

ಆಧುನಿಕ ಯುಗದಲ್ಲಿ ಮಹಿಳೆಯರು ಪುರುಷರಿಗೆ ಸಮಾನಾಗಿ ನಡೆಯುತ್ತಿರುವುದು ಕಣ್ಣಿಗೆ ಕಾಣುವ ವಾಸ್ತವ, ಮಹಿಳೆಯರು ಸಬಲರಾಗಿದ್ದಾರೆ. ಸ್ವಾಭಿಮಾನಿಗಳಾಗಿದ್ದಾರೆ. ಆರ್ಥಿಕ ಹಾಗೂ ವೈಚಾರಿಕ ಸ್ವಾತಂತ್ರ್ಯವನ್ನು ಹೊಂದುತ್ತಿದ್ದಾರೆ. ಹೀಗಿದ್ದರೂ ಕಾನೂನು ಹಲವು ದೃಷ್ಟಿಯಲ್ಲಿ ಮಹಿಳೆಯರನ್ನು ಅಬಲೆಯರೆಂದೇ ಪರಿಗಣಿಸುತ್ತದೆ. ಇದಕ್ಕೆ ಕಾರಣವೇನೆಂದರೆ ಮಹಿಳೆಯರ ಪ್ರಾಕೃತಿಕ ಲಕ್ಷಣ. ಮಹಿಳೆಯ ದೈಹಿಕ ರಚನೆ ಹಾಗೂ ಮಾನಸಿಕ ಸ್ಥರಗಳು ಪುರುಷರಿಗಿಂತ ಭಿನ್ನವಾಗೇ ಇವೆ. ಆದ್ದರಿಂದ ಕುಟುಂಬದಲ್ಲಿರಲಿ,  ಸಮಾಜದಲ್ಲಿರಲಿ ಅಥವಾ ಅವಳು ಕೆಲಸ ಮಾಡುವ ಕಾರ್ಯಕ್ಷೇತ್ರಗಳಲ್ಲಿರಲಿ ಪ್ರತಿಯೊಂದು ರಂಗದಲ್ಲೂ ಮಹಿಳೆಗೆ ಪುರುಷರಿಗಿಂತ ಬೇರೆಯದೇ ರೀತಿಯ ರಕ್ಷಣೆಯ ಅಗತ್ಯವಿದೆ. ಇವನ್ನೆಲ್ಲ ಮನಗಂಡು ಮಹಿಳೆಯರಿ ಗಾಗಿಯೇ  ಒಂದಿಷ್ಟು ಕಾನೂನುಗಳು ಅಸ್ತಿತ್ವಕ್ಕೆ ಬಂದಿವೆ.

 ಮಹಿಳಾ ದೌರ್ಜನ್ಯ

ಮಹಿಳಾ ದೌರ್ಜನ್ಯ ಎಂದರೆ ಮಹಿಳೆಯರಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಎರಡೂ ರೀತಿಯಿಂದ ವಿನಾಕಾರಣ ಒತ್ತಡ ಹೇರುವುದು. ಹಾಗಾದರೆ ಈ ದೌರ್ಜನ್ಯಗಳ ಸಮರ್ಥನೆಗೆ ಮಾನ ದಂಡಗಳಾವವು? ದೈಹಿಕ ದೌರ್ಜನ್ಯಕ್ಕೆ ಕುರುಹುಗಳು ಸಿಗಬಹುದು. ಮಾನಸಿಕ ದೌರ್ಜನ್ಯಕ್ಕೆ ಸಾಕ್ಷಿ ಎಲ್ಲಿ? ಹಾಗಾಗಿ ಬಹುತೇಕ ಸಂದರ್ಭಗಳಲ್ಲಿ ಮಾನಸಿಕ ದೌರ್ಜನ್ಯಗಳಿಗೆ ಸಾಕ್ಷಾಧಾರಗಳಿಲ್ಲದೇ ಕೇವಲ ಆರೋಪ ಪ್ರತ್ಯಾರೋಪಗಳ ಹಂತದಲ್ಲೇ ನಿಂತುಬಿಡುತ್ತದೆ. ಮಹಿಳೆಯ ಮೇಲಿನ ಅತ್ಯಾಚಾರ, ಲೈಂಗಿಕ ಕಿರುಕುಳ, ವರದಕ್ಷಿಣೆ ಹಿಂಸೆ, ಕೌಟುಂಬಿಕ ಹಿಂಸೆಗಳನ್ನೆಲ್ಲ ಕಾನೂನಿನ ಪರಿಭಾಷೆಯಲ್ಲಿ ‘ದೌರ್ಜನ್ಯ’ ಎಂದು ಪರಿಗಣಿಸಲಾಗುತ್ತದೆ. ಮೇಲಿನ ಎಲ್ಲವನ್ನೂ ಕಾನೂನು ಪ್ರತ್ಯೇಕವಾಗಿ ವ್ಯಾಖ್ಯಾನಿಸುತ್ತದೆ.

ಮತ್ತಷ್ಟು ಓದು »