ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

29
ಆಗಸ್ಟ್

ಎಲ್ಲಿದೇ ನಮ್ಮಲ್ಲಿ ಭಾರತೀಯತೆ?

-ಮಧುಚಂದ್ರ ಭದ್ರಾವತಿ

 ಆಗಸ್ಟ್ ೧೫ರ ಸಂಭ್ರಮ ನೋಡಿ ಏನಾದ್ರು ಬರೆಯಲೇ ಬೇಕೆನಿಸಿತು. ೧೪ನೆ  ತಾರಿಖು ಮಧ್ಯರಾತ್ರಿ ೧೧.೫೯ ರಿಂದ ೧೨.೦೦ಗೆ ಸರಿಯಾಗಿ ಗಡಿಯಾರದ ಮುಳ್ಳು ತಿರುಗಿದಾಗ ಮನೆಯ ಹೊರಗೆ ಪಟಾಕಿ ಶಬ್ಧದ ಅಬ್ಬರ ಕೇಳಿಸಿತು. ಒಂದರ್ಥದಲ್ಲಿ ಭಾರತ ಯಾವುದಾದರು ಕ್ರೀಡೆಯಲ್ಲಿ(ಕೇವಲ ಕ್ರಿಕೆಟ್ ಮಾತ್ರ)  ವಿಜಯಿ ಆದರೆ ಆಚರಿಸುವ ಪಟಾಕಿಯ ಸಂಭ್ರಮ ಅದು. ಭಾರತೀಯರಿಗೆ ಭಾರತೀಯತೆ ಅರಿವು ಮೂಡುವುದು ಎರಡು ಸಂದರ್ಭದಲ್ಲಿ ಮಾತ್ರ ಒಂದು ಸ್ವತಂತ್ರ ದಿವಸದಂದು ಮತ್ತೊಂದು ಕ್ರಿಕೆಟ್ನಲ್ಲಿ ಗೆದ್ದಾಗ ಬಿಟ್ಟರೆ, ಸತ್ – ಪ್ರಜೆಗಳು ಉಳಿದ ೩೬೩ ದಿನ ಬೇರೆಯವರ ಗುಲಾಮರಗಿರುತ್ತಾರೆ. ಒಂದೆಡೆ ಮಾಹಿತಿ ತಂತ್ರಜ್ಞಾನವೆಂಬ ಗುಲಾಮ ಗಿರಿಯಲ್ಲಿ ಜ್ಞಾನಿಗಳು ಮತ್ತೊಂದೆಡೆ ಗಣಿಗಾರಿಕೆ,ಬ್ರಷ್ಟಚಾರ,ಸ್ವಜನ ಪಕ್ಷಪಾತ  ಹೆಸರಿನಲ್ಲಿ ಅಜ್ಞಾನಿಗಳು.ಇಂತಹವರನ್ನು ತನ್ನ ಮಡಿಲಲ್ಲಿಟ್ಟು ಸಲಹುತ್ತಿರುವ ಕರುಣಾ ಮಾಯಿ ಭಾರತ ಮಾತೆ ಎಷ್ಟು ದಿನ ಸಹಿಸಿಯಾಳು?
ಅಂದು ಒಂದೇ ಒಂದು ದಾಳಿಗೆ ಜಪಾನ್ , ಇರಾಕ್,  ಜರ್ಮನಿಗಳು ನುಚ್ಚು ನೋರಾದವು. ಆದರೆ ಅಂದು ಅಲೆಗ್ಸಾಂಡರ್, ಘೋರಿ, ಘಜನಿ, ಮೊಘಲರು, ಪೋರ್ಚುಗೀಸರು, ಡಚ್ಚರು, ಆಂಗ್ಲರು, ಫ್ರೆಂಚರು ಹೀಗೆ ಸಾಲು ಸಾಲು ಕೊಳ್ಳೆ ಹೊಡೆದು ಲೂಟಿ ಮಾಡಿ ಭಾರತ ಮಾತೆಯನ್ನು ಬೆತ್ತಲಾಗಿಸುವ ಪ್ರಯತ್ನ ಮಾಡಿದರೂ , ಭಾರತಾಂಬೆ ಕರುಣಾಮಯಿ ಅವರನೆಲ್ಲ ತನ್ನ ಮಕ್ಕಳೆಂದು ಕ್ಷಮಿಸಿ ಶಾಂತಿಯ ಮಂತ್ರ ಭೋದಿಸಿ, ತಾನು ವಿಶ್ವಕ್ಕೆಲ್ಲ ಮಾದರಿಯಾದಳು. ಅದರೂ ಲೂಟಿ ಅಲ್ಲಿಗೆ ನಿಲ್ಲದೆ ರಾಜಕಾರಣ ಎಂಬ ನೀಚ ಧರ್ಮದ ತಳಹದಿಯಲ್ಲಿ ಪ್ರಜಾತಂತ್ರ ವ್ಯವಸ್ಥೆ ಎಂಬ ನೆಪವೊಡ್ಡಿ ಇಂದಿಗೋ ಅದೇ ಭಾರತ ಮಾತೆಯನ್ನು ಬೆತ್ತಲಾಗಿಸುವ ಪ್ರಯತ್ನ ನಡೆಯುತ್ತಲೇ ಇದೆ. ನಮ್ಮ ಧರ್ಮವೇ ಶ್ರೇಷ್ಟ ನಾವು ಮೇಲು , ನಮ್ಮವರಿಗಿಂತ ಮೇಲೆ ಯಾರು ಇಲ್ಲ , ಎಲ್ಲರು ನಮ್ಮ ಧರ್ಮವನ್ನು ಒಪ್ಪಿರಿ ಎಂದು ಸಾರಿ ಧರ್ಮದ ಹೆಸರಲ್ಲಿ ಭಯೋತ್ಪಾದನೆ ಎಂಬ ಅಸ್ತ್ರದಿಂದ ದೇಶವನ್ನು ಅಸ್ಥಿರಗೊಳಿಸುವ ಯತ್ನಗಳು ಒಂದೆಡೆಯಾದರೆ, ಸ್ವಜನ ಪಕ್ಷಪಾತ, ಬ್ರಷ್ಟಚಾರ, ಮರ್ಯಾದೆ ಹತ್ಯೆಗಳು, ವೋಟು ರಾಜಕಾರಣಗಳು ಮತ್ತೊಂದಡೆ.
27
ಆಗಸ್ಟ್

ಕಾನೂನಿನಂಗಳ ೭ : ಗಂಡ-ಹೆಂಡತಿ ಉತ್ತರ ದಕ್ಷಿಣ- ವಿಚ್ಛೇದನ

-ಉಷಾ ಐನಕೈ  ಶಿರಸಿ

ವಿವಾಹ  ಒಂದು ಪವಿತ್ರ ಧಾರ್ಮಿಕ ಸಂಸ್ಕಾರ. ಇದರ ಹಿಂದೆ ಮದುವೆಯಾದ ಗಂಡು -ಹೆಣ್ಣಿಗೆ ಅವರದೇ ಆದ ಸಾಮಾಜಿಕ ಹಾಗೂ ಭಾವನಾತ್ಮಕ ಬದ್ಧತೆ ಇರುತ್ತದೆ. ಕಷ್ಟವಿರಲಿ, ಸುಖವಿರಲಿ ಗಂಡ-ಹೆಂಡತಿ ಸಮನಾಗಿ ಹಂಚಿ ಕೊಂಡು ಸಹಬಾಳ್ವೆ ನಡೆಸಬೇಕೆಂಬುದೇ ವಿವಾಹ ಬಂಧನದ ಹಿಂದಿರುವ ತತ್ವ. ಅದಕ್ಕಾಗೇ ಪತ್ನಿಗೆ ‘ಅರ್ಧಾಂಗಿ’ ಎಂದು ಕರೆದಿರುವುದು. ಆದರೆ ಆಧುನಿಕ ಯುಗದಲ್ಲಿ ಇದು ಸಾಧ್ಯವೇ? ಬದಲಾದ ಕಾಲ, ಆಧುನಿಕ ಶಿಕ್ಷಣ, ವೈಚಾರಿಕ ಸ್ವಾತಂತ್ರ್ಯ, ಸಮಾನತೆಯ ಹೋರಾಟ ಮುಂತಾದ ಬೆಳವಣಿಗೆಯಲ್ಲಿ ಸಾಂಪ್ರದಾಯಿಕ ಮೌಲ್ಯಗಳು ಉಳಿದುಕೊಳ್ಳಲು ಸಾಧ್ಯವೇ? ಆಧುನಿಕ ಸಂಪರ್ಕ, ವೈವಿಧ್ಯಮಯ ಮಾಧ್ಯಮಗಳು ಹಾಗೂ ವ್ಯಕ್ತಿ ಸ್ವಾತಂತ್ರ್ಯದ ಹಂಬಲಗಳ ನಡುವೆ ಪರಸ್ಪರ ನಂಬಿಕೆ, ವಿಶ್ವಾಸ, ಸಹನೆ, ಸಹಬಾಳ್ವೆ ಸ್ವಾಭಾವಿಕವಾಗೇ ಶಿಥಿಲವಾಗತೊಡಗಿವೆ. ವೈಯಕ್ತಿಕ ಪ್ರತಿಷ್ಠೆ ದಿನದಿಂದ ದಿನಕ್ಕೆ ಗಂಡು-ಹೆಣ್ಣು ಇಬ್ಬರಲ್ಲೂ ಹೆಚ್ಚಾಗತೊಡಗಿವೆ. ಗಂಡ-ಹೆಂಡತಿಯ ನಡುವೆ ಹೆಚ್ಚು ವಯಸ್ಸಿನ ಅಂತರವಿದ್ದರೂ ಕಲಹ, ಅಂತರವೇ ಇಲ್ಲದಿದ್ದರೂ ಕಲಹ. ಹೀಗೆ ಹಲವಾರು ಕಾರಣಗಳಿಂದ ವಿವಾಹ ವಿಚ್ಛೇದನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ದಾಂಪತ್ಯದ ನಡುವೆ ವಿರಸ ಹಿಂದೆಯೂ ಇತ್ತು. ಆದರೆ ಆಗ ನ್ಯಾಯಾಲಯದ ಮೆಟ್ಟಿ ಲೇರುವ ಅವಕಾಶ ಮತ್ತು ಧೈರ್ಯ ಎರಡೂ ಇಲ್ಲವಾಗಿತ್ತು. ಅದರಲ್ಲೂ ಹೆಣ್ಣು ದನಿ ಇಲ್ಲದೇ ಸಹಿಸಿಕೊಂಡೇ ಬಾಳಬೇಕಾಗಿತ್ತು. ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ಚಿಕ್ಕ ಚಿಕ್ಕ ಕಾರಣಗಳಿಗೂ ಕಾನೂನಿಗೆ ಮೊರೆಹೋಗುವುದು ಸ್ವಾಭಾವಿಕವಾಗಿದೆ. ಮಹಿಳಾ ಶೋಷಣೆಯನ್ನು ತಪ್ಪಿಸುವ ಸಲುವಾಗಿ ಹುಟ್ಟಿ ಕೊಂಡ ಕಾನೂನುಗಳು ಇದಕ್ಕೆ ಅವಕಾಶ ಮಾಡಿ ಕೊಡುತ್ತಿವೆ.

ಮತ್ತಷ್ಟು ಓದು »

6
ಆಗಸ್ಟ್

ಹಿಂದುತ್ವ ಬೋನ್ಸಾಯ್ ಮರವಲ್ಲ, ವಿಶಾಲ ಆಲದ ಮರ

-ಚಕ್ರವರ್ತಿ ಸೂಲಿಬೆಲೆ

ದಾಳಿಗೆ ಮುನ್ನ ಎದುರಾಳಿಗಳ ಶಕ್ತಿಯನ್ನು ಅರಿತುಕೊಳ್ಳಬೇಕು. ದಾಳಿಯ ವೇಳೆ ತಲೆ ಹೋದರೂ ಸರಿ ಎಂದು ಕಾದಾಡಬೇಕು. ಕದನದ ನಂತರ ಆಗುವ ಲಾಭ ನಷ್ಟಗಳ ಅರಿವಿರಬೇಕು ಪ್ರತಿಯೊಬ್ಬ ಸೇನಾಪತಿಗೆ ಗೊತ್ತಿರಲೇಬೇಕಾದ ಅಂಶಗಳಿವು. ಇವುಗಳ ಆಧಾರದ ಮೇಲೆ ರೂಪುಗೊಂಡದ್ದೇ ಯೋಜನೆ. ಮೊದಲೇ ರೂಪಿಸಿದ ಯೋಜನೆ ಒಮ್ಮೊಮ್ಮೆ ಕೈಕೊಟ್ಟರೂ ಕೊಡಬಹುದು. ಪೂರ್ವ ತಯಾರಿಯೇ ಇಲ್ಲದೆ ಗೆದ್ದರೂ ಗೆಲ್ಲಬಹುದು. ಎಲ್ಲ ಅಪರೂಪ. ಆದರೆ, ಹಳೆಯ ನೆನಪುಗಳನ್ನು ಹಸಿರಾಗಿಸಿಕೊಂಡು, ಭವಿಷ್ಯದ ಕಷ್ಟ ನಷ್ಟಗಳನ್ನು ಆಲೋಚಿಸಿ, ವರ್ತಮಾನದಲ್ಲಿ ಕ್ರಿಯಾಶೀಲರಾಗುವವರು ಜಯಶಾಲಿಗಳಾಗುತ್ತಾರೆ. ಇಲ್ಲವಾದರೆ ತಮಗೂ ಸಮಾಜಕ್ಕೂ ತೊಂದರೆ ತಂದಿಡುತ್ತಾರೆ.
೧೮೫೭ರ ಸಂಗ್ರಾಮಕ್ಕೆ ಸುದೀರ್ಘ ತಯಾರಿ ನಡೆದಿತ್ತು. ನಾನಾ, ತಾತ್ಯಾ, ಲಕ್ಷ್ಮೀ ಬಾಯಿ, ಕುವರ ಸಿಂಗರೆಲ್ಲ ತಯಾರಾಗಿದ್ದರು. ಯಾರು, ಎಲ್ಲಿ, ಹೇಗೆ ದಾಳಿ ಮಾಡಬೇಕೆಂಬುದನ್ನೂ ರೂಪಿಸಿಯಾಗಿತ್ತು. ಎಲ್ಲ ಮುಗಿದ ಮೇಲೆ ದೇಶ ಒಪ್ಪುವ ನಾಯಕನ ಕೈಗೆ ಆಡಳಿತ ನೀಡಬೇಕೆಂದು ಬಹಾದ್ದೂರ್ ಷಾಹನೇ ಹೇಳಿದ್ದ. ಎಡವಟ್ಟು, ಬ್ಯಾರಕ್‌ಪುರದಲ್ಲಿ ಆಯಿತು. ಅಂದುಕೊಂಡಿದ್ದಕ್ಕಿಂತ ಒಂದು ತಿಂಗಳು ಮುಂಚೆ ಸಿಡಿದ ಕ್ರಾಂತಿಯ ಸಿಡಿಮದ್ದು ಪೂರ್ಣ ಜಯ ಕೊಡಿಸುವಲ್ಲಿ ವಿಫಲವಾಯಿತು. ಅಷ್ಟೇ ಅಲ್ಲ, ಮುಂದಿನ ಅನೇಕ ವರ್ಷಗಳ ಕಾಲ ಬ್ರಿಟಿಷರ ವಿರುದ್ಧ ಕಾದಾಡಿ ಗೆಲ್ಲುವುದು ಅಸಾಧ್ಯವೆಂದು ಜನಮಾನಸದಲ್ಲಿ ಹುದುಗಿಹೋಗಿತ್ತು. ಮೌನವಾಗಿ ಸಹಿಸುವ, ಇದ್ದುದರಲ್ಲೆ ಸಂಧಾನ ಮಾಡಿಕೊಂಡು ಬದುಕುವ ಯುವ ಸಮೂಹ ರೂಪುಗೊಳ್ಳಲು ಆರಂಭಿಸಿದ್ದೂ ಆಗಲೇ. ಸರಿಯಾಗಿ ಹೇಳಬೇಕೆಂದರೆ, ಗುಲಾಮೀ ಮಾನಸಿಕತೆಯ ನಿರ್ಮಾಣದ ಹಂತ ಅದು. ಇವಿಷ್ಟಕ್ಕೂ ಕಾರಣ- ಕೈಕೊಟ್ಟ ಒಂದು ಯೋಜನೆ!
ನಾಯಕನಾದವ ಯಾವಾಗಲೂ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಇಟ್ಟ ಹೆಜ್ಜೆಯನ್ನು ಪ್ರಾಣ ಬಿಟ್ಟರೂ ಹಿಂದೆ ತೆಗೆದುಕೊಳ್ಳದವನಾಗಿರಬೇಕು. ಜೋ ಸಿರ್‌ದಾರ್, ವಹೀ ಸರ್‌ದಾರೆಂದು ಹೇಳೋದು ಅದಕ್ಕೇ. ಗೆದ್ದಾಗ ಹೊಗಳಿಕೆ ಸಿಕ್ಕಷ್ಟೇ ಸೋತಾಗ ತೆಗಳಿಕೆಯೂ ಸಿಗುತ್ತದೆ. ಎಲ್ಲಕ್ಕೂ ತಯಾರಾದವ ಮಾತ್ರ ಮುಂದೆ ಬಂದು ನಿಂತಿರಬೇಕು.
ಈ ಎಲ್ಲ ಘಟನೆಗಳನ್ನು ಕಣ್ಣ ಮುಂದಿಟ್ಟುಕೊಂಡು ಒಮ್ಮೆ ಮಂಗಳೂರಿನ ಗಲಾಟೆಗಳನ್ನು ಅವಲೋಕಿಸಿ ನೋಡಿ. ಹಿಂದೂ ಸಮಾಜ ಅಂತ ಹೇಳಿ ಇಂಥದೊಂದು ರಾದ್ಧಾಂತ ಎಬ್ಬಿಸುವ ಅಗತ್ಯವಿತ್ತೆ? ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಇಂದಿನ ಸಿನಿಮಾ ಟ್ರೈಲರ್‌ಗಳಂತೆ ಬಿತ್ತರಿಸುವ ಜರೂರತ್ತು ಇತ್ತೆ? ಒಮ್ಮೆ ಯೋಚಿಸಿ.

ಮತ್ತಷ್ಟು ಓದು »

30
ಜುಲೈ

ಸಹಿಸಿಕೊಳ್ಳುವುದಕ್ಕಿಂತ ತಿರುಗೇಟು ನೀಡುವುದೇ ಒಳ್ಳೇದು ಎಂದು ಅನಿಸಲ್ವಾ?

-ರಶ್ಮಿ ಕಾಸರಗೋಡು

ದಿನಪತ್ರಿಕೆ ತೆರೆದು ನೋಡಿದರೆ ಪ್ರತಿದಿನವೂ ಮಹಿಳೆಯ ಮೇಲೆ ದೌರ್ಜನ್ಯ ಎಂಬ ಒಂದು ಸುದ್ದಿ ಇದ್ದೇ ಇರುತ್ತದೆ. ಅತ್ತೆಯ ದೌರ್ಜನ್ಯ, ಪತಿಯ ದೌರ್ಜನ್ಯ, ಕಚೇರಿಯಲ್ಲಿ ದೌರ್ಜನ್ಯ ಅಬ್ಬಾ ಎಷ್ಟೊಂದು ವಿಧದ ದೌರ್ಜನ್ಯಗಳು!. ನಾವು ಮುಂದುವರಿದಿದ್ದೇವೆ, ಅಬಲೆಯಲ್ಲ ಸಬಲೆ ಎಂದು ನಾನೂ ಸೇರಿದಂತೆ ಮಹಿಳೆಯರೆಲ್ಲಾ ಗಟ್ಟಿಯಾಗಿ ಕೂಗಿ ಹೇಳುತ್ತಿದ್ದೇವೆ. ಹೆಣ್ಣು ಅಬಲೆಯಿಂದ ಸಬಲೆಯಾಗಿ ಬಡ್ತಿ ಪಡೆದಿದ್ದರೂ ದೌರ್ಜನ್ಯ , ಕಿರುಕುಳಗಳು ಮಾತ್ರ ಅವಳ ನೆರಳಂತೆ ಹಿಂಬಾಲಿಸುತ್ತಿವೆ. ಹಳ್ಳಿಯಲ್ಲಿದ್ದರೂ, ನಗರದಲ್ಲಿದ್ದರೂ ಮಹಿಳೆ ದೌರ್ಜನ್ಯಕ್ಕೊಳಗಾಗುವುದು ತಪ್ಪಿಲ್ಲ. ಅಲ್ಲಿ ಹಾಗಾಯ್ತು, ಇಲ್ಲಿ ಹೀಗಾಯ್ತು ಎಂದು ಎಂಬ ವರದಿಗಳನ್ನೋದಿದಾಗ ಅಯ್ಯೋ ಪಾಪ ಎಂದು ಎನಿಸುತ್ತದೆ. ಆದರೆ ಇದಕ್ಕೆ ಪರಿಹಾರ ಏನು? ಎಂಬುದರ ಬಗ್ಗೆ ಚಿಂತಿಸತೊಡಗಿದಾಗಲೇ ಸಮಸ್ಯೆಯ ಗಂಭೀರತೆ ಅರಿವಿಗೆ ಬರುವುದು. ಇತ್ತೀಚೆಗೆ ನಮ್ಮ ದೇಶದಲ್ಲಿ ಇಂಥಾ ದೌರ್ಜನ್ಯಗಳ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಅದರಲ್ಲೂ ಬೆಂಗಳೂರು ಸುರಕ್ಷಿತವಲ್ಲ ಎಂದು ಹೇಳಲಾಗುತ್ತದೆ. ಎನ್ ಸಿಆರ್ ಬಿ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರದಿ ಪ್ರಕಾರ 2011ರಲ್ಲಿ ಬೆಂಗಳೂರಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯಗಳ ಬಗ್ಗೆ ದಾಖಲಾದ ಪ್ರಕರಣಗಳ ಸಂಖ್ಯೆ 1,890, ಇನ್ನು ದಾಖಲಾಗದೇ ಇರುವ ದೌರ್ಜನ್ಯಗಳ ಸಂಖ್ಯೆ ಎಷ್ಟಿರಬಹುದೇನೋ. ನವದೆಹಲಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 4,489. ಅಂದರೆ ದೆಹಲಿಯ ನಂತರ ಬೆಂಗಳೂರು ನಗರವೇ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದಕ್ಕೆ ಈ ಪ್ರಕರಣಗಳ ಸಂಖ್ಯೆಯೇ ಸಾಕ್ಷಿ.

ಎನ್ ಸಿಆರ್ ಬಿ ನೀಡಿರುವ ಅಂಕಿ ಅಂಶಗಳ ಪ್ರಕಾರ 2011ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ಲೆಕ್ಕಾಚಾರ ಹೀಗಿದೆ.

ಮತ್ತಷ್ಟು ಓದು »

27
ಜುಲೈ

ನಮ್ಮ ಬರಹ ಇನ್ನೊಬ್ಬರ ಬದುಕಿಗೆ ಬೆಂಕಿ ಇಡಬಾರದು

– ರಾಕೇಶ್ ಶೆಟ್ಟಿ

ಛೆ..! ದೆಹಲಿ,ಉತ್ತರ ಭಾರತದ ಕಡೆಯಿಂದ ಸಾಮಾನ್ಯವಾಗಿ ಸುದ್ದಿಯಾಗುತಿದ್ದ ಅತ್ಯಾಚಾರದಂತ ರಾಕ್ಷಸಿ ವರ್ತನೆ ಕರ್ನಾಟಕದಲ್ಲೂ ದಾಖಲಾಯಿತಲ್ಲ ಅಂತ ಮೊನ್ನೆಯ ‘ಮದ್ದೂರಿನ ರೈಲಿನಲ್ಲಿ ನಡೆದ ದುರ್ಘಟನೆ’ ಸುದ್ದಿಯಾದಾಗ ನಾಡಿನ ಬಹಳಷ್ಟು ಜನರಿಗೆ ಅನ್ನಿಸಿರಲಿಕ್ಕೂ ಸಾಕು.ಅದೃಷ್ಟವೆಂದರೆ ಆ ಹುಡುಗಿ ಪ್ರಾಣಾಪಾಯದಿಂದ ಪಾರಾಗಿದ್ದು.ಕಡೆಗೂ ರೈಲಿನಲ್ಲಿದ್ದ ಜನ ಧೈರ್ಯ ತಂದುಕೊಂಡು ಆ ರಾಕ್ಷಸರಿಗೆ ಬಡಿದು ಪೋಲಿಸರಿಗೆ ಒಪ್ಪಿಸಿದ್ದು ಮತ್ತೆ ಮರು ದಿನ ಹಿಂದೂ ಜಾಗರಣ ವೇದಿಕೆಯವರು ನೀಡಿದ ತಪರಾಕಿ ಎಲ್ಲವೂ ಸುದ್ದಿಯಾದವು.

ಆದರೆ, ಆ ನಂತರ ಆ ಹುಡುಗಿಯ ಪೂರ್ವಾಪರ ಮತ್ತು ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡು ಮಾಧ್ಯಮಗಳು ಬರೆಯಲು ಶುರು ಮಾಡಿದವಲ್ಲ.ಒಂದು ವರದಿಯಲ್ಲಿ ಹುಡುಗಿಯ ನಿಜ ಹೆಸರನ್ನೇ ಬರೆದುಬಿಟ್ಟಿದ್ದರು.ಕಡೆಗೆ ಓದುಗರು ಗಮನಕ್ಕೆ ತಂದ ಮೇಲೆ ತಿದ್ದಿದರು.ಮತ್ತದೇ ಆನ್-ಲೈನ್ ಪತ್ರಿಕೆಯಲ್ಲಿ ಹಾಗೂ ರಾಜ್ಯಮಟ್ಟದ ದಿನಪತ್ರಿಕೆ ಪ್ರಜಾವಾಣಿಯಲ್ಲಿ (ನಾಡಿನ ವಿಚಾರಾವಂತರ ನೆಚ್ಚಿನ ಪತ್ರಿಕೆಯಿದು..!) ಹುಡುಗಿಯ ಪೊಟೋವನ್ನೇ ಹಾಕಿಬಿಡುವುದಾ? ಕನಿಷ್ಠ ಮುಖವನ್ನು ಬ್ಲರ್ ಮಾಡಬೇಕು ಅನ್ನುವ ಕಾಮನ್ ಸೆನ್ಸ್ ಕಾಣೆಯಾಯಿತಾ?ಇದೆಂತ Irresponsibility ? ವರದಿಗಾರಿಕೆ ಅನ್ನುವುದು ಇಷ್ಟೊಂದು ಕಾಟಾಚಾರವಾಗಿದೆಯಾ? ಈ ಮಧ್ಯೆ ಆ ಹುಡುಗಿಯ ಕೆಲಸ ಮಾಡುವ ಜಾಗ ಎಲ್ಲವನ್ನೂ ಹೇಳಿಯೂಬಿಟ್ಟವು.ಮುಂದೆ ಆ ಹುಡುಗಿಯ ಭವಿಷ್ಯವೇನು? ಅವಳನ್ನು ನೋಡಿದಾಗೆಲ್ಲ ಜನ ಅವಳನ್ನ ಏನೆಂದು ಗುರುತಿಸುತ್ತಾರೆ?

ಈ ಹಿಂದೆ ಸುವರ್ಣವಾಹಿನಿ ಶಿವಮೊಗ್ಗದ ಹುಡುಗಿಯೊಬ್ಬಳ ವಿಷಯದಲ್ಲೂ ಹೀಗೆ ಬೇಜವಬ್ದಾರಿತನ ತೋರಿತ್ತು.ಈ ವಿಷಯದ ಬಗ್ಗೆ ದಯಾನಂದ ಟಿ.ಕೆ ಸರಿಯಾಗಿ ಜಾಡಿಸಿ ಆ ವಾಹಿನಿಯ ಸಂಪಾದಕರಿಗೆ ಬಹಿರಂಗ ಪತ್ರ ಬರೆದಿದ್ದರು.ಉತ್ತರ ಬಂದ ಬಗ್ಗೆ ಸುದ್ದಿಯಿಲ್ಲ.ಇದೆ ನ್ಯೂಸ್ ಚಾನೆಲ್ಗಳೇ ತಾನೇ ಬ್ಲೂ ಬಾಯ್ಸ್ ಗಳನ್ನ ತೋರಿಸುವ ನೆಪದಲ್ಲಿ ಬ್ಲೂ-ಫಿಲಂ ತೋರಿಸಿದ್ದು,ಮುನ್ನಿ-ಶೀಲ,ಮದನಾರಿ ಅಂತೆಲ್ಲ ತಲೆ ಕೆಟ್ಟ ಕಾರ್ಯಕ್ರಮ ಮಾಡುತ್ತಿರುವುದು.ಮಕ್ಕಳಿರೋ ಮನೆಯಲ್ಲಿ ನ್ಯೂಸ್ ಚಾನೆಲಗಳನ್ನು ನೋಡಬೇಡಿ ಮಕ್ಕಳು ಹಾದಿ ತಪ್ಪುತ್ತಾರೆ ಅನ್ನುವ ಕಾಲ ಬಂದು ಬಿಟ್ಟಿತಲ್ಲ…!

ಮತ್ತಷ್ಟು ಓದು »

18
ಜುಲೈ

ಬಡವರ “ಕೊಳಚೆ” ಉಳಿದವರ “ಶುದ್ಧತೆ”

ಡಾ!! ಅಶೋಕ್ ಕೆ.ಆರ್

Imageಸನ್ಮಾನ್ಯ ಶ್ರೀ ಶ್ರೀ ಶ್ರೀ ಪೇಜಾವರ ಸ್ವಾಮಿಗಳಿಗೆ ಸೆಡ್ಡು ಹೊಡೆಯಲು ಮತ್ತೊಬ್ಬ ಹುಟ್ಟಿದ್ದಾನೆ. ಶ್ರೀಗಳು ಮಾಂಸಾಹಾರಿಗಳ ಪಕ್ಕ ಕುಳಿತು ಊಟ ಮಾಡಿದರೆ ಸಸ್ಯಾಹಾರಿ ಬ್ರಾಹ್ಮಣರೂ ಮಾಂಸಾಹಾರಿಗಳಾಗಿಬಿಡುತ್ತಾರೆಂದು ಗಾಬರಿಗೊಂಡಿದ್ದರು. ನಂತರ ತಮ್ಮ ಹೇಳಿಕೆಯ ಬಗ್ಗೆ ಸಮಜಾಯಿಷಿಗಳನ್ನೂ ಕೊಟ್ಟಿದ್ದರು. ಇಂದು ಕರ್ನಾಟಕ ಅನುದಾನರಹಿತ ಶಾಲೆಗಳ ಸಂಘ ಕುಸ್ಮಾದ ಅಧ್ಯಕ್ಷ ಜಿ.ಎಸ್. ಶರ್ಮರವರು ಶಿಕ್ಷಣ ಹಕ್ಕು ಕಾಯ್ದೆಯನ್ನು ವಿರೋಧಿಸುತ್ತ “ಸಮುದ್ರಕ್ಕೆ ಕೊಳಚೆ ನೀರು ಬಂದು ಸೇರಿದರೆ ಇಡೀ ಸಮುದ್ರವೇ ಕೊಳಚೆಯಾಗುತ್ತದೆ. ನೀರು ಯಾವಾಗಲೂ ಶುದ್ಧ ಆಗಿರಬೇಕು. ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಸಂಸ್ಕೃತಿ ವಿಭಿನ್ನ. ಬಡ ಮಕ್ಕಳನ್ನು ಶಾಲೆಗೆ ಸೇರಿಸಿಕೊಂಡ ಮರುದಿನವೇ ಉಳಿದ ಪೋಷಕರು ಬಂದು ಮಕ್ಕಳ ವರ್ಗಾವಣೆಗೆ ಪತ್ರ ಕೇಳುವ ಅಪಾಯವಿದೆ. ಆದ್ದರಿಂದ ಕುಸ್ಮಾ ಶಾಲೆಗಳಲ್ಲಿ ಆರ್.ಟಿ.ಐ ಕಾಯ್ದೆ ಅನುಷ್ಠಾನ ಸಾಧ್ಯವಿಲ್ಲ” ಎಂದು ‘ಅಮೋಘ ವಿವೇಕಭರಿತವಾದ’ ಹೇಳಿಕೆಯನ್ನಿತ್ತಿದ್ದಾರೆ. ಈ ಹಾಳು ವಿಚಾರವಂತರು, ಪ್ರಗತಿಪರರು ಈ ಹೇಳಿಕೆಗೂ ವಿರೋಧ ವ್ಯಕ್ತಪಡಿಸುತ್ತಾರಲ್ಲ! ಎಂಥ ಕೆಟ್ಟ ಮನಸ್ಥಿತಿಯವರಿರಬೇಕು ಇವರೆಲ್ಲ?!

ಒಂದಷ್ಟು ಹಿಂದೆ ಸಾಗಿ ನೋಡಿದಾಗ –
11
ಜೂನ್

ಚುಟುಕು ಕ್ರಿಕೆಟ್ ನೈತಿಕತೆಯ ಕೊನೆಗುಟುಕು

-ರಾಕೇಶ್ ಎನ್ ಎಸ್
 
ಭಾರತ ೨೦೦೭ರಲ್ಲಿ ವಿಶ್ವ ಟೆಂಟಿ ಟ್ವೆಂಟಿ ಚಾಂಪಿಯನ್ ಆದ ಕುರುಹಾಗಿ ಮತ್ತು ಜೀ ಸಮೂಹದ ಇಂಡಿಯನ್ ಕ್ರಿಕೆಟ್ ಲೀಗ್‌ಗೆ ಸಡ್ಡು ಹೊಡೆಯಲಿಕ್ಕಾಗಿ ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) ಅಕಾಲದಲ್ಲಿ ಜನ್ಮ ತಾಳಿ ಐದು ವರ್ಷ ಸಂದಿದೆ. ’ಶುದ್ಧ ಕ್ರಿಕೆಟ್’ ಎಂಬುದು ಐಪಿಎಲ್‌ನ ಜಾತಕದಲ್ಲೇ ಬರೆದಿಲ್ಲ ಎಂಬುದು ಈ ಪಂಚ ವರ್ಷದಲ್ಲೆ ಸಾಬೀತಾಗಿದೆ.
ಭಾರತ ಟ್ವೆಂಟಿ-ಟ್ವೆಂಟಿ ವಿಶ್ವ ಚಾಂಪಿಯನ್ ಆದದ್ದು ಒಂದೇ ಐಪಿಎಲ್‌ನ ಉಗಮಕ್ಕೆ ಕಾರಣವಾಗಿರಲಿಲ್ಲ. ಭಾರತದಲ್ಲಿ ಕ್ರಿಕೆಟ್‌ನ ಏಕಸ್ವಾಮ್ಯ ಹೊಂದಿರುವ ಬಿಸಿಸಿಐಯ ಅಧಿಪತ್ಯಕ್ಕೆ ಜೀ ಸಮೂಹದ ಸುಭಾಶ್ ಚಂದ್ರ ಐಸಿಎಲ್‌ನ ಮೂಲಕ ಕೊಡಲಿಯೇಟು ನೀಡಿದಾಗ ತನ್ನ ಕ್ರಿಕೆಟ್ ಕೊಪ್ಪರಿಗೆ ಇನ್ನೊಬ್ಬರ ಪಾಲಾಗುವುದನ್ನು ಯಾವುದೇ ಬೆಲೆ ತೆತ್ತು ತಪ್ಪಿಸಬೇಕು ಎಂಬ ಬಿಸಿಸಿಐ ಯೋಚನೆಯೇ ಐಪಿಎಲ್‌ನ ತಳಪಾಯ. ಉಳಿದಂತೆ ಕ್ರಿಕೆಟಿಗರ ಉದ್ಧಾರ, ಮನರಂಜನೆ ಮುಂತಾದ ಬಿಸಿಸಿಐ
ಹೇಳಿಕೆಗಳು ಸುಮ್ಮನೆ ತೋರಿಕೆಯದ್ದು ಅಷ್ಟೆ.
 
ಟ್ವೆಂಟಿ-ಟ್ವೆಂಟಿ ನಿಂತಿರುವುದೇ ಹೊಡಿ ಬಡಿ ಸಿದ್ಧಾಂತದ ಮೇಲೆ. ಕ್ರಿಕೆಟ್‌ನ ಮೂಲ ಧರ್ಮಕ್ಕೆ ಇದು ವಿರುದ್ಧವಾದರೂ ಕಾಲ ಧರ್ಮಕ್ಕನುಗುಣವಾಗಿ ಈ ಸಂಸ್ಕ್ರತಿಯನ್ನು ಒಪ್ಪಿಕೊಂಡರೆ ಅದರಲ್ಲಿ ತಪ್ಪೇನಿಸಲಾಗದು. ಆದರೆ ಕ್ರಿಕೆಟ್ ಎಂಬ ಆಟ ಉದ್ದಿಮೆಗಳ ತೆಕ್ಕೆಗೆ ಸೇರಿಕೊಂಡಾಗ ಉಂಟಾಗುವ ಉತ್ಪಾತಗಳು ಮಾತ್ರ ಸಹ್ಯವಾಗಿಲ್ಲ. ಮನರಂಜನೆ ಮತ್ತು ವ್ಯಾಯಾಮ ಕ್ರೀಡೆಯ ಎರಡು ಕಣ್ಣುಗಳಿದ್ದಂತೆ. ಮನರಂಜನೆ ಆಡುವವನಿಗೆ ಮತ್ತು ನೋಡುವವನಿಗೆ ಹಾಗೆ ವ್ಯಾಯಾಮ ಆಡುವವನಿಗೆ ಸಿಗುತ್ತದೆ. ಆದರೆ ವೃತ್ತಿಪರ ಆಟಗಾರರಿಗೆ ಪ್ರತ್ಯೇಕವಾದ ವ್ಯಾಯಾಮವೇ ಇರುತ್ತದೆ. ನಮ್ಮಂತವರಿಗೆ ಮಾತ್ರ ಆಡುವುದೇ ವ್ಯಾಯಾಮ! ಅದ್ದರಿಂದ ಯಾವುದೇ ವೃತ್ತಿಪರ ಆಟಗಾರನಿಗೆ ಆತ ನಮ್ಮ ಮುಂದೆ ನೀಡುವ ಪ್ರದರ್ಶನ ಆತನಿಗೆ ವ್ಯಾಯಾಮ ಮತ್ತು ಮನರಂಜನೆಯಾಗಿ ಮುಖ್ಯವಾಗುವುದಕ್ಕಿಂತ ನೋಡುಗನಿಗೆ ಅದು ನೀಡುವ ಮನರಂಜನೆಯಷ್ಟೆ ಪ್ರಮುಖವಾಗುತ್ತದೆ. ಐಪಿಎಲ್ ನಂತಹ ಕ್ರೀಡಾಕೂಟದಲ್ಲಿ ಒಬ್ಬ ಆಟಗಾರ ಎಷ್ಟು ಮನರಂಜನೆ ನೀಡಬಲ್ಲ ಎಂಬುದರ ಮೇಲೆ ಅತನ ಹಣದ ಜೋಳಿಗೆ ತುಂಬುತ್ತದೆ. ಅದ್ದರಿಂದ ಇಲ್ಲಿ ಒಬ್ಬ ಆಟಗಾರ ಪ್ರದರ್ಶಕನಾಗಿ ಮುಖ್ಯನಾಗುತ್ತಾನೆಯೇ ಹೊರತು ಆತನ ಕೌಶಲ್ಯಗಳಿಂದಾಗಿ ಅಲ್ಲ. ಮತ್ತಷ್ಟು ಓದು »
31
ಮೇ

ಸಾಮಾಜಿಕ ಕಳಕಳಿಯೆಂದರೆ…..

-ಡಾ.ಅಶೋಕ್ ಕೆ.ಆರ್

ತೀರ ಗಂಗಾಧರ್ ಮೊದಲಿಯಾರ್ ಕೂಡ ಈ ರೀತಿಯಾಗಿ ಬರೆಯಬಲ್ಲರು ಎಂದು ನಿರೀಕ್ಷಿಸಿರಲಿಲ್ಲ! ಪ್ರಜಾವಾಣಿಯ ಸಿನಿಮಾರಂಜನೆಯ ಫಿಲಂ ಡೈರಿ ಅಂಕಣದಲ್ಲಿ ಅಮೀರ್ ಖಾನನ ಸತ್ಯಮೇವ ಜಯತೆಯ ಬಗ್ಗೆ ಬರೆದಿದ್ದಾರೆ. ‘ಬುರುಡೆ ಪುರಾಣ’ ಎಂಬ ಶೀರ್ಷಿಕೆಯೇ ಅಸಂಬದ್ಧವಾಗಿದೆ. ಅಮೀರ್ ಖಾನನ ಕೆಲಸವನ್ನು ಮೆಚ್ಚುತ್ತಲೇ ಅವನನ್ನು ತೆಗಳುತ್ತಾ ಹೋಗುತ್ತಾರೆ. ಭಾವನೆಗಳನ್ನು ಉದ್ರಿಕ್ತಗೊಳಿಸಿ ಹಣ ಮಾಡುವ ‘ದಂಧೆ’ ಎಂದುಬಿಡುತ್ತಾರೆ. ಅಮೀರ್ ಖಾನ್ ಹೋರಾಟಗಾರನಲ್ಲ, ಸಾಮಾಜಿಕ ಕಾರ್ಯಕರ್ತನೂ ಅಲ್ಲ; ಆತ ಒಬ್ಬ ನಟ, ನಿರ್ಮಾಪಕ, ನಿರ್ದೇಶಕ. ಹಣವಿಲ್ಲದೆ ಏನೂ ಮಾಡಲಾಗದ ಚಿತ್ರರಂಗದವನು. ಯಾವ ಕಾರ್ಯಕ್ರಮ ಮಾಡಿದರೂ ಅದರಿಂದ ಲಾಭ ಬರುವುದನ್ನು ಅವನು ಗಮನಿಸಲೇಬೇಕು. ‘ಏರ್ ಟೆಲ್ನಿಂದ ಮೇಸೇಜ್ ಮಾಡಿ, ಕೇವಲ ಒಂದು ರುಪಾಯಿ’ ಎಂದವನು ಕಾರ್ಯಕ್ರಮದ ಕೊನೆಯಲ್ಲಿ ಹೇಳುವುದು ಕೂಡ ಲಾಭದ ಒಂದು ಮುಖ. ಇವೆಲ್ಲವೂ ಸತ್ಯವೇ, ಆದರೆ….
ಪತ್ರಿಕೆಗಳಿರಬಹುದು, ಅಂತರ್ಜಾಲ ತಾಣಗಳಲ್ಲಿರಬಹುದು ಇಂದು ಅಮೀರ್ ಖಾನನ ಕಾರ್ಯಕ್ರಮವನ್ನು ಅಮಿತಾಭ್ ನಡೆಸಿಕೊಟ್ಟ ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಹೋಲಿಸಿ ಮಾತನಾಡುತ್ತಾರೆ. ಕೋಟ್ಯಧಿಪತಿಗೆ ಹೆಚ್ಚು ಟಿ.ಆರ್.ಪಿ ಇತ್ತು ಎಂದು ಹೇಳುತ್ತಾರೆ. ಇವೆರಡೂ ಕಾರ್ಯಕ್ರಮಗಳನ್ನು ಹೋಲಿಸುವುದೇ ಹಾಸ್ಯಾಸ್ಪದ. ಎರಡರ ಉದ್ದಿಶ್ಯವೂ ಬೇರೆ. ‘ಪ್ರೈಮ್ ಟೈಮ್’ ಎಂದು ಕರೆಯಲ್ಪಡುವ ರಾತ್ರಿ ಎಂಟರ ಸಮಯವನ್ನು ಬಿಟ್ಟು ಅಮೀರ್ ಖಾನ್ ಭಾನುವಾರ ಬೆಳಿಗ್ಗೆ ಹನ್ನೊಂದರ ಸಮಯವನ್ಯಾಕೆ ಆರಿಸಿದ ಎಂಬುದನ್ನೂ ಗಮನಿಸಬೇಕಲ್ಲವೇ? ಹಣ ಮಾಡುವುದಷ್ಟೇ ಉದ್ದೇಶವಾಗಿದ್ದರೆ ಈ ‘ಮೂರ್ಖ’ ಕೆಲಸವನ್ಯಾಕೆ ಮಾಡಬೇಕಿತ್ತವನು?
18
ಮೇ

ಹುಚ್ಚು ಬುದ್ದಿಯ ಹತ್ತು ಪ್ರತಿಜ್ಞೆಗಳು

-ಪ್ರಶಸ್ತಿ. ಪಿ ಶಿವಮೊಗ್ಗ


೧) FB ಬಿಡಬೇಕು
ನಿನ್ನೆ Times Of India ದಲ್ಲಿ ಓದ್ತಾ ಇದ್ದೆ. ಒಬ್ಬ ಭಾರತೀಯ ದಿನದಲ್ಲಿ ಅಂದಾಜು ೮ ಘಂಟೆ ಕಾಲ ಇಂಟನ್ರೆಟ್ಟಲ್ಲೇ ಕಳೀತಾನೆ ಅಂತ.ಅಂದ್ರೆ ನಾವು ಎಚ್ಚರ ಇರೋದ್ರಲ್ಲಿ ಅರ್ಧ ಭಾಗ ಇಲ್ಲೇ ಆಯ್ತು!! ಅದರಲ್ಲಿ ಕೆಲ ಭಾಗ ಕೆಲಸಕ್ಕಾದ್ರೆ ಕೆಲ ಭಾಗ ಇಲ್ಲೇ.. ಇದರಿಂದ ಏನಾದ್ರೂ ಲಾಭ ಇದ್ಯಾ ? ಸಾಮಾಜಿಕ ತಾಣಗಳು ಇರೋದೇ Time Pass ಗೆ,  ಜೀವನದಲ್ಲಿ ಎಲ್ಲದನ್ನೂ ಲಾಭ , ನಷ್ಟ ಅನ್ನೋ ವ್ಯಾಪಾರಿ ಬುದ್ದಿಯಿಂದ ತೂಗಕ್ಕಾಗಲ್ಲಾ ಅಂದ್ರಾ? ಹೂಂ ಅಂದೆ ಕಣ್ರಿ… ಆದ್ರೂ..

೨)ಸಂದೇಶ ಕಳ್ಸೋದನ್ನ(ಮೆಸೇಜ್ ಮಾಡೋದನ್ನ) ಬಿಡ್ಬೇಕು
ಈಗೊಂದು ಆರು ದಿನದ ಹಿಂದೆ ಸಂದೇಶ ಕೌಂಟರನ್ನ ಮರುಸ್ಥಾಪಿಸಿಟ್ಟಿದ್ದೆ. ಖಾಲಿ ಕೂತಾಗ ಅತ್ವಾ ಬೇಜಾರಾದ ದಿನಗಳಲ್ಲಿ ಅಂದಾಜು ಎಷ್ಟು ಸಂದೇಶ ಕಳಿಸ್ತೀನಿ ನೋಡ್ಬೇಕು ಅಂತ.. ಆರು ದಿನ ಬಿಟ್ಟು ನೋಡಿದ್ರೆ ಐನೂರು ಚಿಲ್ರೆ ಆಗಿತ್ತು. ಅದೇನು ಮಹಾ ಅಂದ್ರಾ? ಒಂದು ಮೆಸೇಜಿಗೆ ಒಂದು ೩೦ ಸೆಕೆಂಡು ಅಂತಿಟ್ಕೊಳ್ರಿ.( ದೊಡ್ಡ ಮೆಸೇಜು ಬರ್ಯೋದು ಅಂದ್ರೆ ಒಂದೋ , ಎರ್ಡೋ ನಿಮಿಷನೂ ಆಗ್ಬೋದು. ಅದ್ನ ಸದ್ಯಕ್ಕೆ ಬಿಡೋಣ). ಅದನ್ನ ಕಳಿಸಿದ ಮೇಲೆ ಮತ್ತೊಂದು ೩೦ ಸೆಕೆಂಡಾದ್ರೂ ಅದೇ ಮೂಡಲ್ಲಿರ್ತೀವಾ ?..ಅಲ್ಲಿಗೆ ೧ ನಿಮಿಷ ಆಯ್ತು. ದಿನಕ್ಕೆ ನೂರು ಮೆಸೇಜು ಅಂದ್ರೆ ನೂರು ನಿಮಿಷ ಅಂದ್ರೆ ಸುಮಾರು ಒಂದೂವರೆ ,೨ ಘಂಟೆ !!.. “ಹರ್ ಏಕ್ ಪ್ರೆಂಡ್ ಜರೂರಿ ಹೋತಾ ಹೈ..”  ಯಾರ್ನೂ ಬಿಡಕ್ಕೆ ಬರಲ್ಲ.. ಆದ್ರೂ..
ಮತ್ತಷ್ಟು ಓದು »

14
ಮೇ

ಹದಿವಯಸೆಂದು ತುಳಿದದ್ದೇ ಹಾದಿಯಾಗಬೇಕೆ?

– ರೂಪಾ ಎಲ್ ರಾವ್
ತಿಳಿಯದೆ ನಮಗೆ ತಿಳಿಯದೇ ಬದುಕುವ ದಾರಿ ತಿಳಿಯದೆ?
ಹೀಗಂತ ಯುವಜನ ಎಲ್ಲರನ್ನ  ಹೆಚ್ಚಾಗಿ ಪೋಷಕರನ್ನ ಧಿಕ್ಕರಿಸಿ ಹೋಗುತ್ತಿದ್ದರೆ, ಪೋಷಕರು ಅಸಹಾಯಕರಾಗಿ ತಾವು ಅತಿಯಾಗಿ ಮುದ್ದು ಮಾಡಿ ಬೆಳೆಸಿದ ಫಲದ ಅಧೋಗತಿಯನ್ನ ನೋಡುತ್ತಿದ್ದಾರೆ…… ಮಾತಿಗೆ ಮುಂಚೆ ನಿಂಗೆ ಏನೂ ಗೊತ್ತಿಲ್ಲ, ಅನ್ನುವ ಮಾತು ಕೇವಲ ಒಂದು ವರೆ ದಶಕದ ಹಿಂದೆ ಸಕಲಕಲಾವಲ್ಲಭರಂತಿದ್ದ ಈ ಮಧ್ಯವಯಸ್ಕ ಜೀವಿಗಳನ್ನ ಈ ಇಂಟರ್ನೆಟ್ , ಮೊಬೈಲ್ ಬ್ಲೂ ಟೂತ್ , ಅನ್ನುವ ನಿರ್ಜೀವ ಪದಗಳು ನಿಸ್ಸಾಹಯಕರನ್ನಾಗಿ ಮಾಡುತ್ತಿದೆ.
ನನ್ನ ಮಗ ಈಗಲೇ ಮೊಬೈಲ್ ಕೇಳ್ತಿದಾನೆ, ನನ್ ಮಗಳಿಗೆ ಕಂಪ್ಯೂಟರ್ ಗೇಮ್ ಅಂದ್ರೆ ತುಂಬಾ ಇಷ್ಟ , ನನ್ ಮಗ ಇಂಟರ್ನೆಟ್ ನಲ್ಲಿ ಪ್ರಾಜೆಕ್ಟ್ ಮಾಡ್ತಿದಾನೆ. ಹೀಗೆಲ್ಲಾ ಕೊಚ್ಚಿಕೊಳ್ಳುತ್ತಾ ಮಹತ್ತರವಾದುದೇನೋ ಸಾಧಿಸುತ್ತಿದ್ದಾರೆ ಎಂದುಕೊಳ್ಳುತಿದ್ದ ಮಕ್ಕಳು ಇಂದು ಅಪ್ಪ ಅಮ್ಮನ್ನ ನಿನಗೆ ಏನು ಗೊತ್ತಿದೆ, ಸುಮ್ಮನೆ ಬಾಯಿ ಮುಚ್ಚಿಕೊಂಡಿರು ಅನ್ನುವ ಮಟ್ಟಕ್ಕೆ ಬೆಳೆದಿದ್ದಾರೆ
ಹದಿ ಹರೆಯದ ಮಕ್ಕಳನ್ನು ಸ್ನೇಹಿತರನ್ನಾಗಿ ನೋಡಿಕೊಳ್ಳಬೇಕು ನಿಜ ಆದರೆ ಹಾಗಂತ ಅವರನ್ನ ಇಷ್ಟ ಬಂದ ಹಾಗೆ ನಡೆಯಲು ಬಿಟ್ಟರೆ ಏನೇನಾಗಬಹುದು ಎನ್ನುವುದಕ್ಕೆ  ಎಷ್ಟೊ ಉದಾಹರಣೆಗಳು ಸುತ್ತಾ ಮುತ್ತಾ ಇವೆ ಅಂತಾಹುದರಲ್ಲಿ ವೀರೂ ಸಹ ಒಬ್ಬ (ಹೆಸರು ಬದಲಾಯಿಸಲಾಗಿದೆ) ಹತ್ತು ವರ್ಷದ ಹಿಂದೆ ನನ್ನ ಬಳಿ ಟ್ಯೂಷನ್ ಗೆ ಬರುತ್ತಿದ್ದ . ಅಪ್ಪ ಅಮ್ಮ ಸೋಪ್ ಪೌಡರ್ ಅದೂ ಇದೂ ಮಾಡಿ ಮಾರಿ ಮಗನನ್ನು ಓದಿಸುತ್ತಿದ್ದರು. ಎಷ್ಟೆ ಬಡತನವಿದ್ದರೂ ಮಗನಿಗೆ ಯಾವ ಕೊರತೆಯನ್ನೂ ಮಾಡಿರಲಿಲ್ಲ. ನಾನೂ  ಕಾಲದ ಚಕ್ರದ ಜೊತೆ ಪಯಣಿಸುತ್ತಾ  ಅವನನ್ನು ಮರೆತೇ ಬಿಟ್ಟಿದ್ದೆ . ಹೋದ ತಿಂಗಳು , ಅಮ್ಮ ಮಗ ಇಬ್ಬರೂ ಬಂದಿದ್ದರು .ಅಂದಿನ ಆ ಪುಟ್ಟ ವೀರು ಇಂದು ನನ್ನನ್ನು ಮೀರಿ ಬೆಳೆದಿದ್ದಾನೆ, ದೊಡ್ಡ ಹುಡುಗ…. ಒಮ್ಮೆ ಸಂತೋಷವಾಯ್ತು ಆದರೆ ಅವನ ಅಮ್ಮ ಅವನ ಬಗ್ಗೆ ಹೇಳಿದ್ದು ತುಂಬಾ ಬೇಸರ, ಜೊತೆಗೆ ಯಾವುದೋ ಜವಾಬ್ದಾರಿಯನ್ನು ನೆನಪಿಸಿತು(ನಾನೂ ಒಬ್ಬ ತಾಯಿ)