ಡಬ್ಬಿಂಗ್ ಅವಶ್ಯಕವೇ?

ಬೌದ್ಧ, ಬ್ರಾಹ್ಮಣ ಮತ್ತು ಗೋಭಕ್ಷಣೆ
– ಸಾತ್ವಿಕ್ ಎನ್ ವಿ
ಪ್ರಾಚೀನ ಭಾರತದ ಇನ್ನೊ೦ದು ಮುಖ್ಯ ದಾರ್ಶನಿಕ ಪರ೦ಪರೆಯಾದ ಬೌದ್ಧ ಧರ್ಮದ ಕುರಿತು ಬಿ.ವಿ. ವೀರಭದ್ರಪ್ಪ ಅವರು ವೇದಾ೦ತ ರೆಜಿಮೆ೦ಟ್ ಮತ್ತು ಇತರ ಲೇಖನಗಳು ಎ೦ಬ ಕೃತಿಯ ಸುಮಾರು ೧೪ ಅ೦ಕಣಬರಹಗಳಲ್ಲಿ ಸವಿಸ್ತಾರವಾಗಿ ಚರ್ಚಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಬೌದ್ಧ ಮತ್ತು ವೈದಿಕರ ನಡುವಿನ ಹೋರಾಟವು ಮಹತ್ವದ್ದಾಗಿದೆ. ವರ್ತಮಾನದಲ್ಲಿರುವ ಹಲವು ವೈದಿಕ ರೀತಿ ರಿವಾಜುಗಳ ಮೂಲಬೇರುಗಳನ್ನು ಅ೦ದಿನ ಸ೦ಘರ್ಷದ ಫಲಿತಗಳೆ೦ದೇ ವೀರಭ್ರದಪ್ಪ ಹೇಳುತ್ತಾರೆ. ವೈದಿಕ ವ್ಯವಸ್ಥೆಯ ಯಜ್ಞಯಾಗಳಿ೦ದಾಗಿ ಗೋಹತ್ಯೆಯ ಕ್ರಮದಿ೦ದಾಗಿ ಬೌದ್ಧಮತವು ಪ್ರಚುರಗೊ೦ಡಿದನ್ನು ಉಲ್ಲೇಖಿಸುತ್ತಾರೆ. ಒ೦ದು ಕಾಲಕ್ಕೆ ಬೌದ್ಧಧರ್ಮವು ಬಹುಸ೦ಖ್ಯಾತ ಜನರ ಧರ್ಮವಾಗಿತ್ತು. ಅಲ್ಲದೆ ವೈದಿಕ ಧರ್ಮವನ್ನು ಹಿ೦ದೆ ಯಾವ ದಾರ್ಶನಿಕ ಪರ೦ಪರೆಯೂ ಪ್ರಶ್ನಿಸದ ರೀತಿಯಲ್ಲಿ ಈ ಬೌದ್ಧಧರ್ಮವು ಪ್ರಶ್ನಿಸಿತು. ಇದರಿ೦ದಾಗಿ ವೈದಿಕವಾದವು ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿತ್ತು. ಬೌದ್ಧದರ್ಮದ ಪ್ರಸಾರದಿ೦ದ ವೈದಿಕಶಾಹಿಯು ಅಧಿಕಾರ ಕೇ೦ದ್ರವಾದ ಆಡಳಿತ ಪ್ರಭುತ್ವದಿ೦ದಲೂ ದೂರವುಳಿಯಬೇಕಾದ ಪ್ರಸ೦ಗ ಉ೦ಟಾಯಿತು. ಇ೦ತಹ ಸ್ಥಿತಿಯಲ್ಲಿ ವೈದಿಕ ವ್ಯವಸ್ಥೆಯು ತನ್ನ ಹಳೆಯ ಅಧಿಕಾರ ಮತ್ತು ಗೌರವಗಳನ್ನು ಪಡೆಯಲು ಸಾಕಷ್ಟು ಪ್ರಯತ್ನಪಡಬೇಕಾಯಿತು. ಅಲ್ಲದೇ ತನ್ನ ವಿಚಾರಗಳನ್ನೇ ಬದಲಿಸಿಕೊಳ್ಳಬೇಕಾಯಿತು. ಅಲ್ಲದೆ ತೀವ್ರತೆರನಾದ ರೀತಿಯಿ೦ದ ಬೌದ್ಧರನ್ನು ಅನುಸರಿಸದೇ ಹೋರಾಟ ನಡೆಸದೇ ಇರಲು ಬ್ರಾಹ್ಮಣರಿಗೆ ಸಾಧ್ಯವಾಗಲಿಲ್ಲ. ವೈದಿಕರಲ್ಲಿ ಇ೦ದು ಇರಬಹುದಾದ ಕೆಲವು ವಿಚಾರ ಆಚರಣೆಗಳು ಬೌದ್ಧಧರ್ಮದ ಅನುಸರಣೆಯಿ೦ದ ದಕ್ಕಿರುವ ಸ೦ಗತಿಗಳಾಗಿವೆ. ಉದಾಹರಣೆಯಾಗಿ ಬುದ್ಧನ ಮರಣಾನ೦ತರ ಆತನ ಅನುಯಾಯಿಗಳು ಅವನ ಮೂರ್ತಿಗಳನ್ನು ರಚಿಸಿ ಸ್ತೂಪಗಳನ್ನು ನಿರ್ಮಿಸಿದರೆ ಅದೇ ಮಾದರಿಯಲ್ಲಿ ವೈದಿಕರು ಶಿವ, ವಿಷ್ಣು ಮು೦ತಾದ ದೇವಾಲಯಗಳನ್ನು ನಿರ್ಮಿಸಿ ತಮ್ಮತ್ತ ಜನರನ್ನು ಆಕರ್ಷಿಸಲು ಪ್ರಯತ್ನಿಸಿದರು. ಮತ್ತಷ್ಟು ಓದು 
ದನ ತಿಂದ್ರೆ ತಪ್ಪು ಜನಾನ್ ಬೇಕಾದ್ರೆ ತಿವ್ಕೊಳ್ಳಿ! …
-ಅಶೋಕ್ ಕೆ.ಆರ್

‘ಕೋಮುವಾದ ಮತ್ತು ಮಹಿಳೆ’ ಎಂಬ ಲೇಖನಕ್ಕೊಂದು ಪ್ರತಿಕ್ರಿಯೆ
– ಡಾ.ಜಿ. ಭಾಸ್ಕರ ಮಯ್ಯ
ಸಬಿಹಾರವರ ಮಹಿಳೆ ಮತ್ತು ಕೋಮುವಾದ ಇಂದು ವಿವಾದಕ್ಕೆ ಒಳಗಾಗಿರುವುದು ಜನರ ಕೋಮುವಾದೀಕರಣದ ಪ್ರಕ್ರಿಯೆ ಎಷ್ಟೊಂದು ಉಲ್ಬಣಿಸಿದೆ ಎನ್ನುವುದಕ್ಕೆ ಸಾಕ್ಷಿ. ಸಬಿಹಾರವರ ಲೇಖನದ
ಯಾವ ಒಂದು ವಾಕ್ಯವೂ ಅಸತ್ಯದಿಂದ ಕೂಡಿಲ್ಲ. ಪೂರ್ವಾಗ್ರಹಪೀಡಿತವಾಗಿಲ್ಲ. ಅದು ವಾಸ್ತವಕ್ಕೆ ಹಿಡಿದ ಕನ್ನಡಿಯಂತಿದೆ. ಹಾಗೆ ನೋಡಿದರೆ, ಗುಜರಾತಿನ ಬಗ್ಗೆ ಲೇಖಕಿ ಹೇಳಿರುವುದು ಕಡಿಮೆಯೆ. ಅಲ್ಲಿಯ ನರಮೇಧ ಮತ್ತು ಮಹಿಳೆಯರ ಮೇಲಿನ ಭಯಾನಕ ಅತ್ಯಾಚಾರ ಮಧ್ಯಯುಗದ ಯಾವುದೇ ಧರ್ಮಯುದ್ಧ, ಕ್ರುಸೇಡ್ ಮತ್ತು ಜಿಹಾದ್ಗೆ ಕಡಿಮೆಯಿಲ್ಲ. ಮನುಷ್ಯತ್ವದಲ್ಲಿ ನಂಬಿಕೆ ಇರುವವರಿಗೆ ಆಕ್ರೋಶ ಉಂಟಾಗುವಂತಹ ಸನ್ನಿವೇಶದ ಚಿತ್ರಣವನ್ನು ಲೇಖಕಿ ಅತ್ಯಂತ ಸಹನೆಯಿಂದ ಉಲ್ಲೇಖಿಸುತ್ತಾರೆ. ಕೋಮುವಾದದ ವಿವಿಧ ಮುಖಗಳನ್ನು ಮತ್ತು ಆಯಾಮಗಳನ್ನು ಚರ್ಚಿಸುತ್ತಾರೆ. ಆದರೆ, ಲೇಖನದ ಆರಂಭದಲ್ಲಿ ಫಣಿರಾಜರವರು ಕೋಮುವಾದದ ಕುರಿತು ಹೇಳಿದ ಮಾತಿನ ಒಂದು ಉಲ್ಲೇಖವಿದೆ. ಅದು …ಬಹುಸಂಖ್ಯಾತರ ಸಂಸ್ಕೃತಿಗೆ ಅಲ್ಪಸಂಖ್ಯಾತರು ಹೊರಗಿನವರು ಎಂದು ವಾದಿಸಿ ದ್ವೇಷ ತಿರಸ್ಕಾರಗಳನ್ನು ಬೆಳೆಸುವುದೇ ಕೋಮುವಾದ – ಕೋಮೂವಾದಕ್ಕೆ ಇಂತಹ ಸರಳ ವ್ಯಾಖ್ಯೆ ಸರಿಯಲ್ಲ. ಫಣಿರಾಜ್ ಮತ್ತು ಜಿ. ರಾಜಶೇಖರ್ ಕೋಮುವಾದವನ್ನು ವಿರೋಧಿಸುವಲ್ಲಿ ನಿಷ್ಪಕ್ಷಪಾತಿಗಳಾಗಿರದೆ, ಒಂದು ಕೋಮಿನ ಕೋಮುವಾದದ ಕುರಿತು ಮೌನವಹಿಸುವುದು ಅಥವಾ ಅಂತಹ ಸಂಸ್ಥೆಗಳೊಂದಿಗೆ ಸಂಬಂಧವನ್ನಿರಿಸಿಕೊಳ್ಳುವುದು ನಿಜಕ್ಕೂ ಆಕ್ಷೇಪಾರ್ಹ. ಆದರೆ ಸಬಿಹಾರವರ ಬರವಣಿಗೆ ಈ ನಿಟ್ಟಿನಲ್ಲಿ ದೋಷಮುಕ್ತವಾಗಿದೆ. ಅವರು ಪಾಕಿಸ್ತಾನ, ಬಾಂಗ್ಲಾ ಮತ್ತು ತಸ್ಲೀಮಾ ನಜರೀನ್ ಅವರನ್ನು ಉಲ್ಲೇಖಿಸುತ್ತಾ ನೆರೆಯ ದೇಶಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲಿನ ದೌರ್ಜನ್ಯದ ಕುರಿತೂ ಹೇಳುತ್ತಾರೆ. ಸಬಿಹಾರವರ ಲೇಖನ ಈ ನಿಟ್ಟಿನಲ್ಲಿ ವಾಸ್ತವವಾದೀ, ಮಾನವತಾವಾದೀ ಬರವಣಿಗೆಯೆಂಬುದು ನಿಸ್ಸಂಶಯ.
ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ – ಪ್ರಗತಿಪರರು
– ಡಾ.ಭಾಸ್ಕರ್ ಮಯ್ಯ
ಆಧುನಿಕ ತತ್ವಶಾಸ್ತ್ರದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ. ವೇದಾಂತ ದರ್ಶನಕ್ಕೆ ನೂರಾರು ವ್ಯಾಖ್ಯಾನಗಳಿವೆ. ಆದರೆ ಅವುಗಳಲ್ಲಿ ಪ್ರಮುಖ ಸ್ಥಾನವಿರುವುದು `ಶಾಂಕರ ವೇದಾಂತ’ಕ್ಕೆ. ಆದರೆ, ಶಂಕರರು ವೇದಾಂತ ದರ್ಶನಕ್ಕೆ ವ್ಯಾಖ್ಯಾನ ಬರೆದಿರುವುದು ಭಾವವಾದೀ ದೃಷ್ಟಿಯಿಂದ ಶಂಕರರು ಭಾವವಾದದ ಮೇರು ಶಿಖರ ಎಂಬಲ್ಲಿ ಎರಡು ಮಾತಿಲ್ಲ. ಅವರಿಗೆ ಸರಿಗಟ್ಟುವ ಭಾವವಾಣಿ ದಾರ್ಶನಿಕರುಪಾಶ್ಚಾತ್ಯ ದರ್ಶನ ಶಾಸ್ತ್ರದಲ್ಲಿ ದೊರಕುವುದಿಲ್ಲ. ಆದರೆ, ವಿವೇಕಾನಂದರು ವೇದಾಂತಕ್ಕೆ ವ್ಯವಹಾರಿಕ ರೂಪವನ್ನು ಕೊಟ್ಟರು. ಈ ಬಗೆಯ ವ್ಯಾಖ್ಯಾನ ಕೂಡಾ ತತ್ವಶಾಸ್ತ್ರಕ್ಕೆ ನವನವೀನ.
ಅಗಾಧ ಪ್ರತಿಭೆ
1863ನೆಯ ಇಸವಿ ಜನವರಿ 12 ರಂದು ಕಲ್ಕತ್ತಾದ ಒಂದು ಕ್ಷತ್ರಿಯ ಕುಟುಂಬದಲ್ಲಿ ಜನಿಸಿದ ವಿವೇಕಾನಂದರು ಅಗಾಧ ಪ್ರತಿಭೆಯ ವ್ಯಕ್ತಿ. ಆ ಕಾಲದಲ್ಲಿಯೇ ಬಿ.ಎ. ಶಿಕ್ಷಣ ಮುಗಿಸಿದ ವಿವೇಕಾನಂದರು ( ಮೂಲ ಹೆಸರು ನರೇಂದ್ರನಾಥ) ವಿದ್ಯಾರ್ಥಿ ಜೀವನದಲ್ಲಿ ನಾಸ್ತಿಕರಾಗಿದ್ದರು. ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ಅವರ ಚಿಂತನಾ ಕ್ರಮವೇ ಬದಲಾಯಿತು.ರಾಮಕೃಷ್ಣರು ಮಹಾನ್ ಸಂತರಾಗಿದ್ದರೂ ಅನಕ್ಷರಸ್ತರು. ವಿವೇಕಾನಂದರು ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯ ಪ್ರಖಾಂಡ ಪಂಡಿತರು. ರಾಮಕೃಷ್ಣ ಪರಮಹಂಸರು ಮತ್ತು ವಿವೇಕಾನಂದರು ಒಂದೇ ಜೀವನದ ಎರಡು ಮುಖಗಳು ಅಥವಾ ಒಂದೇ ಸತ್ಯದ ಎರಡು ರೂಪಗಳು. ಇನ್ನೊಂದು ಬಗೆಯಲ್ಲಿ ಹೇಳುವುದಾದರೆ ರಾಮಕೃಷ್ಣರು ಅನುಭೂತಿ ಆದರೆ ವಿವೇಕಾನಂದರು ಅವರ ವ್ಯಾಖ್ಯಾನ ಅಭಿವ್ಯಕ್ತಿ.
ವಿವೇಕಾನಂದರು ಹಾರ್ಬರ್ತ್ ಸ್ಪೆನ್ಸರ್ ಹಾಗೂ ಜಾನ್ ಸ್ಟುವರ್ಟ್ರಮಿಲ್ ಅವರ ಪ್ರೇಮಿಯಾಗಿದ್ದರು. ಶೆಲಿ, ವರ್ಡ್ಸ್ವರ್ತ್ರ ದಾರ್ಶನಿಕತೆ, ಹೆಗಲ್ನ ವಸ್ತುನಿಷ್ಠ ಆದರ್ಶವಾದ ಹಾಗೂ ಫ್ರಾನ್ಸಿನ ರಾಜ್ಯಕ್ರಾಂತಿ ವಿವೇಕಾನಂದರನ್ನು ತೀವ್ರವಾಗಿ ಪ್ರಭಾವಿಸಿತ್ತು.
ವಿವೇಕಾನಂದರು ಕೇವಲ 39 ವರ್ಷಗಳ ಕಾಲ ಜೀವಿಸಿದ್ದರೂ ಅವರ ಸಂದೇಶ ಇವತ್ತಿನ ಕೋಮುವಾದಿ ರಾಜಕೀಯಕ್ಕೆ ಅತ್ಯಂತ ಪ್ರಬಲವಾದ ಶಸ್ತ್ರ. ರಾಮಮೋಹನ್ ರಾಯ್, ಕೇಶವ ಚಂದ್ರ ಸೇನ್, ದಯಾನಂದ ಸರಸ್ವತಿ, ರಾನಡೆ, ಅನಿಬೆಸೆಂಟ್ ಮತ್ತು ರಾಮಕೃಷ್ಣರು ಹದಮಾಡಿದ ನೆಲದಲ್ಲಿ ವಿವೇಕಾನಂದರು ಅಶ್ವತ್ಥದಂತೆ ಬೆಳೆದು ನಿಂತರು. ಇಂದು ಕೋಮುವಾದಿಗಳು ಆ ಅಶ್ವತ್ಥದ ರೆಂಬೆಕೊಂಬೆಗಳನ್ನು ಕಡಿದು ಯೂಪಸ್ಥಂಭ (ಬಲಿಸ್ಥಂಭ)ವನ್ನಾಗಿ ರೂಪಿಸುತ್ತಿದ್ದಾರೆ.
ನಿದಿಧ್ಯಾಸನ ಮಾಡಿ ಜಯಶೀಲರಾಗಿ !
ತಾಪತ್ರಯ-ವಿನಿರ್ಮುಕ್ತೋ ದೇಹತ್ರಯ-ವಿಲಕ್ಷಣಃ|
ಅವಸ್ಥಾತ್ರಯ-ಸಾಕ್ಷ್ಯಸ್ಮಿ ಅಹಮೇವಾಹಮವ್ಯಯಃ ||

ಈ ವಿದ್ಯೆಯನ್ನು ಅನೌಪಚಾರಿಕವಾಗಿ ಹೇಳಿಕೊಟ್ಟ ಗುರುವೃಂದಕ್ಕೆ ಮೊದಲು ಶಿರಬಾಗಿ ಕರಮುಗಿದು ಪ್ರಾರ್ಥಿಸಿ ನಿಮ್ಮಲ್ಲಿ ಈ ವಿಷಯ ಪ್ರಸ್ತಾವಿಸುತ್ತಿದ್ದೇನೆ. ಹೊಸದೊಂದು ವಿಷಯ ನನ್ನ ಗಮನ ಸೆಳೆದಿತ್ತು. ನಿದಿಧ್ಯಾಸನ ಕ್ರಿಯೆ ! ಹಾಗೆಂದರೇನು ? ಎಲ್ಲಿ ಹೇಗೆ ಅದನ್ನು ಆಚರಿಸುವುದು ? ಯಾರು ಮತ್ತು ಯಾವಾಗ ಮಾಡಬಹುದು ? ಅದರ ಪರಿಣಾಮಗಳೇನು ? ಈ ರೀತಿ ಒಂದರಮೇಲೊಂದು ಪ್ರಶ್ನೆಗಳು ಬರುತ್ತಲೇ ಇದ್ದವು; ಉತ್ತರ ಅಷ್ಟು ಸಲೀಸಾಗಿ ಸಿಗಲಿಲ್ಲ. ಹುಡುಕಿದೆ ಹುಡುಕಿದೆ ಹಲವು ಯೋಗಿಗಳಲ್ಲಿ ಹೋದರೂ ಅದೊಂದು ಸ್ವಾನುಭವ ಕ್ರಿಯೆಯಾಗಿರುವುದರಿಂದ ಅದನ್ನು ವಿವರಿಸುವುದು ಸ್ವಲ್ಪ ಕಷ್ಟ.
ಭಾರತೀಯ ಮೂಲದ ಯಾವುದೇ ತತ್ವಗಳನ್ನು ತೆಗೆದುಕೊಳ್ಳಿ ಅವು ಆದರ್ಶಪ್ರಾಯ. ಅವು ಮತಗಳ ಬಗ್ಗೆ ಹೇಳುವುದಿಲ್ಲ; ಆದರೆ ಧರ್ಮದ ಬಗ್ಗೆ ತಿಳಿಸುತ್ತವೆ, ಮಾನವ ಧರ್ಮದ ಬಗ್ಗೆ ವಿವರಿಸುತ್ತವೆ. ಅಲ್ಲಿಲ್ಲಿ ಆರ್ಟ್ ಆಫ್ ಲಿವಿಂಗ್ ಅಥವಾ ಇನ್ನೂ ಹಲವಾರು ಯೋಗ ಕೇಂದ್ರಗಳಿಂದ ಕೆಲವರು ಇದನ್ನು ತಿಳಿದುಕೊಂಡಿರಬಹುದು. ಅಷ್ಟಾಂಗ ಯೋಗದ ಬಗ್ಗೆಯೂ ಅಲ್ಪಸ್ವಲ್ಪ ಗೊತ್ತಾಗಿರಬಹುದು. ಆದರೆ ಅಷ್ಟಾಂಗಯೋಗದ ಉಪಯೋಗವನ್ನು ಅರಿತವರು ಭಾಗಶಃ ಯೋಗವನ್ನಾದರೂ ಕಲಿಯುತ್ತಾರೆ. ಯೋಗವೆಂಬುದು ಕೇವಲ ಯೋಗಾಸನವಲ್ಲ, ಅದು ಕೇವಲ ಭೌತಿಕ ಅಥವಾ ಶಾರೀರಿಕ ವ್ಯಾಯಾಮ ಕ್ರಿಯೆಯಲ್ಲ. ಅದು ದೇಹ ಮತ್ತು ಮನಸ್ಸುಗಳನ್ನು ಬಳಸಿ ಆತ್ಮಾನುಸಂಧಾನ ಮಾಡುವ ಕ್ರಿಯೆ! ಈ ಬ್ಲಾಗಿನ ಆರಂಭದಲ್ಲಿ ನಾನು ಬರೆದ ಹಾಡೊಂದು ನೆನಪಾಗುತ್ತಿದೆ. ಅದನ್ನು ಕೆಲವರು ಓದಿದರು; ಕೆಲವರು ತುಂಬಾ ಚೆನ್ನಾಗಿದೆಯೆಂದರು, ಇನ್ನೂ ಕೆಲವರು ತೀರಾ ವಿರಕ್ತ ಗೀತೆ ಎಂದರು. ಅದರ ಆಳವಾದ ಗಹನವಾದ ಅರ್ಥವನ್ನು ಯಾರೂ ಅರಿಯದಾದರು.
ಹಲವು ಸರ್ತಿ ನಾನು ಹೇಳಿದ್ದಿದೆ, ಶರೀರದ ಸ್ವಚ್ಛತೆಗಾಗಿ ಹೇಗೆ ಸ್ನಾನ ಮಾಡುತ್ತೇವೆಯೋ ಹಾಗೆಯೇ ಮನಸ್ಸಿನ ಸ್ವಚ್ಛತೆಗಾಗಿ ಧ್ಯಾನ ಮಾಡಿ ಎಂದು. ಮನಸ್ಸು-ಆತ್ಮ ಬೇರೇ ಬೇರೇ. ಆತ್ಮ ಶುದ್ಧವಾಗಿರುತ್ತದೆ; ಕಲ್ಮಶರಹಿತವಾಗುತ್ತದೆ. ಯಾವಾಗ ಆತ್ಮ ಶರೀರದೊಳಗೆ ಸೇರಿ ಮನಸ್ಸಿನ ಹತೋಟಿಯಲ್ಲಿ ಸಿಕ್ಕಿಬೀಳುತ್ತದೋ ಆಗ ಅದು ಗೌಣವಾಗಿ ಸುಪ್ತವಾಗಿ ಶರೀರದೊಳಗೆ ಹುದುಗಿರುತ್ತದೆಯೇ ವಿನಃ ತನ್ನಶಕ್ತಿಯನ್ನು ಅದು ಮರೆತಿರುತ್ತದೆ ! ಈ ಶರೀರದೊಳಗೆ ಆತ್ಮ ಎಂಬುದು ಮೊಬೈಲ್ ಹ್ಯಾಂಡ್ ಸೆಟ್ ನಲ್ಲಿ ಸಿಮ್ಮು ಇರುವಂತೇ. ನಮ್ಮಲ್ಲಿಯೂ ಡ್ಯೂಯಲ್ ಸಿಮ್ಮು! ಒಂದು ಒಳಗಿನ ನಾನು ಒನ್ನೊಂದು ಹೊರಗಿನ ನಾನು. ಆದರೆ ಇಲ್ಲಿ at a time both are functioning! ಆಗಾಗ ನನ್ನಜೊತೆಗಿರುವ ನಾನು ಒಳಗಿನ ನನ್ನನ್ನು ಬಿಟ್ಟು ಪರಸ್ಪರ ಕೆಲಸಮಾಡುತ್ತೇನೋ ಆ ಕೆಲಸ ಯಶಸ್ವಿಯಾಗುವುದಿಲ್ಲ ಅಥವಾ ಕೇಡಿನ ಕೆಲಸವಾಗಿರುತ್ತದೆ!
ಬೆಟ್ಟದಾ ಬುಡದಲ್ಲಿ ಹುಟ್ಟಿರುವ ವೃಕ್ಷಕ್ಕೆ…
ಸೋಮಾಲಿಯಾದ ಕಳ್ಳರು ಸೆರೆಹಿಡಿದು ಆತನನ್ನೂ ಆತನ ಜೊತೆಗಾರರನ್ನೂ ಹಡಗಿನಲ್ಲೇ ಬಂಧಿಸಿದ್ದರು. ಅನ್ನ-ನೀರು ಸರಿಯಾಗಿ ಇಲ್ಲದೇ ಮೂರುಹಗಲು ಮೂರು ರಾತ್ರಿ ಕಳೆದುಹೋಗಿತ್ತು. ಶರೀರ ನಿತ್ರಾಣವಾಗಿತ್ತು. ಸಿರಿವಂತ ವ್ಯಾಪಾರಿಯ ಉದ್ಯೋಗಿಯಾಗಿ ಯಾಕಾದರೂ ಸೇರಿಕೊಂಡೆನೋ ಎನ್ನಿಸಿಬಿಟ್ಟಿತ್ತು. ಆತ ಮಲಗೇ ಇದ್ದ. ಜೊತೆಗಾರರನ್ನೂ ಅದೇ ಹಡಗಿನಲ್ಲಿ ಎಲ್ಲೆಲ್ಲೋ ಬಂಧಿಸಲಾಗಿತ್ತು. ನಾಳೆ ಬೆಳಗಾದರೆ ತಮ್ಮೆಲ್ಲರನ್ನೂ ಕೊಲ್ಲುವುದಾಗಿ ಹೇಳಿದ್ದನ್ನು ಆತ ಕೇಳಿದ್ದ. ಭಾರತ ಸರಕಾರದ ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮನ್ನು ಕಳ್ಳರು ಹೈಜಾಕ್ ಮಾಡಿ ಬಂಧಿಸಿದ ವರದಿ ತಲ್ಪಿದೆಯೋ ಇಲ್ಲವೋ ತಿಳಿದಿರಲಿಲ್ಲ. ಭಾರತೀಯ ನೌಕಾಪಡೆಯ ತುಕಡಿಗಳನ್ನಾದರೂ ಕಳಿಸಿ ತಮ್ಮನ್ನೆಲ್ಲಾ ರಕ್ಷಿಸಿ ಕರೆದೊಯ್ಯಬಹುದಿತ್ತಲ್ಲ ಎಂದು ಆತ ಯೋಚಿಸುತ್ತಿದ್ದ.
ಕಳ್ಳರು ಸಾಮಾನ್ಯ ಕ್ರೂರಿಗಳಾಗಿರಲಿಲ್ಲ; ಹಿಡಿದ ಜನರನ್ನು ಏನೂ ಮಾಡಲು ಹೇಸದ ಜನ ಅವರಾಗಿದ್ದರು. ಮನುಷ್ಯರನ್ನೇ ಕೊಂದು ತಿಂದು ಬದುಕಬಹುದಾದ ಮಾನವರೇ ಅಲ್ಲದ ರಕ್ಕಸರು ಅವರು. ಒಬ್ಬೊಬ್ಬರೂ ಯಮದೂತರಂತೇ ಕಾಣುತ್ತಿದ್ದರು. ಅವರ ಕೆಂಗಣ್ಣುಗಳನ್ನು ನೆಟ್ಟಗೆ ನೋಡಲು ಹೆದರಿಕೆಯಾಗುತ್ತಿತ್ತು. ಉದ್ದುದ್ದ ಬೆಳೆದ ಉಗುರುಗಳು ಬಾಕುಗಳಂತೇ ಕೆಲಸಮಾಡುತ್ತಿದ್ದವು. ಮೊಂಡುತಲೆಯ ಕುರುಚಲು ಕೂದಲು, ಚಿತ್ರವಿಚಿತ್ರ ಗತಿಯ ಗಡ್ಡ-ಮೀಸೆಗಳು, ನಾರುವ ಜೀನ್ಸು ದಿರಿಸುಗಳು ಇವುಗಳನ್ನೆಲ್ಲಾ ನೋಡಿದಾಗ ಬಹಳ ಅಸಹ್ಯವಾಗುತ್ತಿತ್ತು. ಬದುಕಿನ ಕೊನೆಗಳಿಗೆ ಬಂದೇಬಿಡುತ್ತದೆಂದು ಕನಸಲ್ಲೂ ಎಣಿಸದ ಆತ ಪಶ್ಚಾತ್ತಾಪ ಪಡುತ್ತಿದ್ದ. ತಾನು ಸತ್ತರೆ ಹೆಂಡತಿ-ಮಕ್ಕಳ ಗತಿ ಮುಂದೇನು ಎಂಬ ಚಿಂತೆಯಲ್ಲಿ ಹೊಟ್ಟೆಯ ಹಸಿವೂ ಅಡಗಿಹೋಗಿತ್ತು! ನಿರ್ದಯಿಗಳ ಕೂಗು-ಘರ್ಜನೆ ಸದಾ ನಡೆದೇ ಇತ್ತು. ಆಗಾಗ ಪಿಸ್ತೂಲಿನಿಂದ ಸಿಡಿಯುವ ಗುಂಡುಗಳ ಸದ್ದು ಕೇಳಿಸುತ್ತಿತ್ತು. ಅದು ಯಾರು ಯಾರಿಗೆ ಹಾರಿಸಿದ್ದು ಎಂಬುದು ಮಾತ್ರ ಗೊತ್ತಾಗುತ್ತಿರಲಿಲ್ಲ.
ಭಕ್ತಿ ಆಂದೋಲನದ ಪರಿಪ್ರೇಕ್ಷ್ಯದಲ್ಲಿ ‘ನಳಚರಿತ್ರೆ’
-ಡಾ| ಜಿ. ಭಾಸ್ಕರ ಮಯ್ಯ
ಭಾಗ – 1
ಭಕ್ತಿ ಆಂದೋಲನವು ಶ್ರೀನಗರದಿಂದ ಕನ್ಯಾಕುಮಾರಿಯ ತನಕ ಹಾಗೂ ಗುಜರಾತಿನಿಂದ ಬಂಗಾಲದ ತನಕ ವ್ಯಾಪಿಸಿತ್ತು. ಇದು ಈ ದೇಶದ ಮಧ್ಯಯುಗದ ಅತೀ ದೊಡ್ಡ ಜನಾಂದೋಲನ.
ಸಂತರೆಂದರೆ ಯಾರು? ಕೆಲವರು ನಿರ್ಗುಣ ಪಂಥದ ಸಾಧುಗಳನ್ನು ಸಂತರೆನ್ನುತ್ತಾರೆ.ಸಂಸಾರ ತ್ಯಾಗ ಮಾಡಿದವರಿಗೆ ಮಾತ್ರ ಸಂತರೆನ್ನುವುದು ತಪ್ಪು ಕಲ್ಪನೆ. ಏಕೆಂದರೆ, ಎಷ್ಟೋ ಜನ ಸಂತರು ಗೃಹಸ್ಥರಿದ್ದರು. ಅಂತೆಯೇ ಸಂತರಲ್ಲಿ ಹಿಂದೂ-ಮುಸ್ಲಿಂ ಭೇದ ಕೂಡಾ ತಪ್ಪು. ಏಕೆಂದರೆ ಇಸ್ಲಾಂ ಮತದ ರೂಢಿವಾದದ ವಿರುದ್ಧ ಸಿಡಿದೆದ್ದ ಸಾವಿರಾರು ಮುಸ್ಲಿಂ ಸಂತರಿದ್ದರು. ಸಂತರೆಂದರೆ ಕೇವಲ ಗಂಡಸರೆಂದರೆ ಅದೂ ತಪ್ಪು. ಏಕೆಂದರೆ, ಮೀರಾ, ಅಕ್ಕಮಹಾದೇವಿ, ತಾಜ್, ಸಂಕವಿ ಯಂತವರು ಗಣನೀಯವಾಗಿ ಸಿಗುತ್ತಾರೆ.
ಅಂದರೆ ಸಂತರಲ್ಲಿ ಸನ್ಯಾಸಿ ಗೃಹಸ್ಥ, ಹಿಂದೂ, ಮುಸ್ಲಿಂ, ಗಂಡು-ಹೆಣ್ಣು, ನಿರ್ಗುಣವಾದಿ, ಸಗುಣವಾದಿ ಎಲ್ಲರೂ ಸೇರುತ್ತಾರೆ.
ಇವರು ಲೋಕಧರ್ಮ ಸಂಸ್ಥಾಪಕರು. ಪುರೋಹಿತರು ಮತ್ತು ಮೌಲ್ವಿಗಳ ಭಾಷೆ, ಸಂಸ್ಕೃತ ಮತ್ತು ಅರಬಿಯಾಗಿತ್ತು. ಆದರೆ, ಸಂತರು ಜನಭಾಷೆಯಲ್ಲಿ ಬರೆದರು.
ಇವರ ಸಾಮಾಜಿಕ ಆಧಾರ ಯಾವುದು?
ಅವರು ನೇಕಾರರು, ಬಡಗಿಗಳು, ಕೃಷಿಕರು, ಕೂಲಿಗಾರರು, ವ್ಯಾಪಾರಿಗಳು ಇತ್ಯಾದಿ ನಾನಾ ಶ್ರಮ ಆಧಾರಿತ ವೃತ್ತಿಯಲ್ಲಿರುವವರು.
ಇದು ಭಾರತೀಯ ಪರಿಪ್ರೇಕ್ಷ್ಯದ ಕೇವಲ ಒಂದು ಆಕಸ್ಮಿಕ ಘಟನೆ ಅಲ್ಲ, ಬದಲಿಗೆ ದೇಶದ ಆರ್ಥಿಕ,ಸಾಮಾಜಿಕ ಪರಿಸ್ಥಿತಿಗಳ ಅನಿವಾರ್ಯ ಉತ್ಪನ್ನ. ಆದ್ದರಿಂದಲೇ ಇದು ಒಂದು ಭಾಷೆಗಾಗಲೀ, ಒಂದು ಪ್ರದೇಶಕ್ಕಾಗಲೀ ಸೀಮಿತವಾಗಿರಲಿಲ್ಲ. ಅಂತೆಯೇ ಸಂತ ಸಾಹಿತ್ಯದ ಉಗಮವನ್ನು ಭಾರತೀಯ ಜೀವನದ ತನ್ನದೇ ಪರಿಸ್ಥಿತಿಗಳಲ್ಲಿ ಆರ್ಥಿಕ,ಸಾಮಾಜಿಕ ಪರಿಸ್ಥಿತಿಗಳಲ್ಲಿ ಹುಡುಕಬೇಕೇ ಹೊರತು ಬೌದ್ಧ ಅಥವಾ ಇಸ್ಲಾಂ ಮತಗಳ ಹಿನ್ನೆಲೆಯಲ್ಲಿ ಅಲ್ಲ.
ಸಂಸ್ಕೃತಿ ಸಂಕಥನ – 27 – ನಮಗೆ ನಾವೇ ಪರಕೀಯರು
-ರಮಾನಂದ ಐನಕೈ
1947 ಅಗಸ್ಟ್ 15ರಂದು ಭಾರತ ಪರಕೀಯರ ದಾಸ್ಯದಿಂದ ಮುಕ್ತವಾಯಿತು ಎಂದು ಭಾಷಣ ಬಿಗಿಯುತ್ತೇವೆ. ಇದು ನಿಜವೇ? ಕೇವಲ ಆಡಳಿತ ಮತ್ತು ಅಧಿಕಾರ ಹಸ್ತಾಂತರ ಮಾಡಿದಾಕ್ಷಣ ದಾಸ್ಯ ವಿಮೋಚನೆ ಆಯಿತು ಅಂತ ನಿರ್ಧರಿಸಿಬಿಡಬಹುದೇ? ವಸಾಹತು ಪ್ರಭಾವದಿಂದ ಮಲೀನವಾದ ಭಾರತೀಯ ಮನಸ್ಸುಗಳಿಗೆ ಮುಕ್ತಿ ಸಿಕ್ಕಿದೆಯೇ? ಒಂದೊಮ್ಮೆ ಸಿಗದಿದ್ದ ಪಕ್ಷದಲ್ಲಿ ಇದೂ ಒಂದು ರೀತಿಯ ಮಾನಸಿಕ ದಾಸ್ಯ ಅಲ್ಲವೇ? ಈ ಮಾಸಿಕ ಅವಲಂಬನೆಯಿಂದ ಹೊರ ಬರುವುದು ಹೇಗೆ?
ಮೊದಲು ಭಾರತದಲ್ಲಿ ಮುಸ್ಲಿಂ ವಸಾಹತುಶಾಹಿ ಆಡಳಿತ ನಡೆಯಿತು. ನಂತರ ಸುದೀರ್ಘ ಕಾಲ ಕ್ರಿಶ್ಚಿಯನ್ ವಸಾಹತುಶಾಹಿ ರಾಜ್ಯಭಾರ ನಡೆಯಿತು. ಇವರೆಲ್ಲರೂ ಸೇರಿ ಭಾರತೀಯ ಸಂಸ್ಕೃತಿಯ ಕುರಿತು ಬೇರೆಯದೇ ಆದ ಚಿತ್ರಣ ಕಟ್ಟಿಕೊಟ್ಟರು. ಭಾರತೀಯ ಚಿಂತಕರೂ ಕೂಡಾ ಅದನ್ನೇ ಪಠಿಸುತ್ತ ಬಂದರು. ಸದ್ಯ ಭಾರತವನ್ನು ಆಳುತ್ತಿರುವುದು ಇದೇ ವಸಾಹತುಶಾಹಿ ಪ್ರಜ್ಞೆ. ಈ ಕಾರಣಕ್ಕಾಗಿ ಭಾರತದಲ್ಲಿ ರಾಷ್ಟ್ರತತ್ವಗಳಿಗೂ ಜನಸಾಮಾನ್ಯರ ಅನುಭವಕ್ಕೂ ತಾಳೆಯಾಗಲಾರದು. ಅದರ ಫಲಿತಾಂಶಗಳೇ ಸಂಘರ್ಷಗಳು. ಆದ್ದರಿಂದ ನಿಜವಾದ ನಮ್ಮ ಸಂಸ್ಕೃತಿಯನ್ನು ಅರಿತು ಅದರ ಆಧಾರದ ಮೇಲೆ ನಮ್ಮ ದೇಶದ ಜನಜೀವನವನ್ನು ರೂಪಿಸುವ ತುತರ್ು ಇದೆ.
ಸಾವಿರಾರು ವರ್ಷಗಳಿಂದ ಬಾಳಿ ಬೆಳಗಿದ ಭಾರತೀಯ ಸಂಸ್ಕೃತಿ ಐರೋಪ್ಯರ ಆಗಮನದಿಂದಾಗಿ ತನ್ನ ಸ್ವರೂಪವನ್ನೇ ಬದಲಿಸಿಕೊಂಡದ್ದು ಈಗ ಇತಿಹಾಸ. ಭಾರತ ಐರೋಪ್ಯರಿಗೆ ಅರ್ಥವಾಗಲಿಲ್ಲ. ಇಲ್ಲಿನ ಸಂಸ್ಕೃತಿ ಅವರಿಗೆ ಒಗಟಾಯಿತು. ಅಷ್ಟರಲ್ಲಾಗಲೇ ಪ್ರತಿ ಸಂಸ್ಕೃತಿಗೆ ಇತಿಹಾಸ ಬರೆಯುವ ಕಲೆಯನ್ನು ಐರೋಪ್ಯರು ಕರಗತ ಮಾಡಿಕೊಂಡಿದ್ದರು. ಇತಿಹಾಸ ಮಾತ್ರ ಅವರಿಗೆ ಸತ್ಯ ದಾಖಲೆಯಾಗಿತ್ತು. ಏಕೆಂದರೆ ಸತ್ಯವೇದವಾದ ಬೈಬಲ್ಲೇ ಅವರಿಗೆ ನಿಜವಾದ ಇತಿಹಾಸ. ಭಾರತೀಯ ಇತಿಹಾಸವನ್ನು ಎಲ್ಲಿಂದ ಆರಂಭಿಸಬೇಕು? ಅವರಿಗಾದ ದೊಡ್ಡ ಸಮಸ್ಯೆ ಅದು. ಯಾವುದೇ ಭಾರತೀಯ ಪಂಡಿತರನ್ನು ಭಾರ ತೀಯ ಇತಿಹಾಸದ ಕುರಿತು ಕೇಳಿದರೆ ಅವರೆಲ್ಲ ಪುರಾಣದ ರೋಚಕ ಕಥೆಗಳನ್ನೇ ಹೇಳಿದರು. ಒಂದೇ ಕಥೆಯನ್ನು ಬೇರೆ ಬೇರೆ ಪಂಡಿತರು ಬೇರೆ ಬೇರೆ ರೀತಿಯಲ್ಲಿ ಹೇಳಿದರು. ಸಂಶಯ ಶುರುವಾಯಿತು. ಆಗ ಐರೋಪ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಭಾರತವನ್ನು ಗ್ರಹಿಸತೊಡಗಿದರು.
ತುಂಬೆ ನಿನ್ನ ಮಹಿಮೆ ಏನೆಂಬೆ …
-ಅನಿತಾ ನರೇಶ್ ಮಂಚಿ
ವಾಮನನಲ್ಲಿ ಬಲಿ ಚಕ್ರವರ್ತಿ ‘ ನಾನಿನ್ನು ಭೂಮಿಗೆ ಬರುವ ದಿನ ಯಾವುದು ‘ಎಂದು ಕೇಳಿದಾಗ ವಾಮನನ ಉತ್ತರದಲ್ಲಿ’ ತುಂಬೆಯ ಮರದಡಿ ಮಕ್ಕಳು








