ಸಂಸ್ಕೃತಿ ಸಂಕಥನ – 23 – ಕಾನೂನು ಸಂಸ್ಕೃತಿಯನ್ನಾಧರಿಸಿ ಇರಬೇಕು
-ರಮಾನಂದ ಐನಕೈ
ಜಿಜ್ಞಾಸುಕೂಟ ಅಂತ ಸಮಾನ ಮನಸ್ಕರ ಸಂಘಟನೆಯೊಂದು ಶಿರಸಿಯಲ್ಲಿದೆ. ಅವರು ತಿಂಗಳಿಗೊಮ್ಮೆ ಸೇರಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸುತ್ತಾರೆ. ಅವರು ಹಲವಾರು ವರ್ಷ ಗಳಿಂದ ಈ ಪ್ರವೃತ್ತಿಯನ್ನು ಉಳಿಸಿ ಬೆಳೆಸಿಕೊಡು ಬಂದಿದ್ದಾರೆ. ಮೊನ್ನೆ ಅಕ್ಟೋಬರ್ 1ಕ್ಕೆ ಅವರು ಚರ್ಚೆಗೆ ಇಟ್ಟುಕೊಂಡ ವಿಷಯ ‘ಜನಲೋಕ ಪಾಲ್ ಮಸೂದೆ’. ಈ ಚರ್ಚೆ ಶಿರಸಿಯ ವಿದ್ಯಾನಗರ ರುದ್ರಭೂಮಿ ಆವರಣದಲ್ಲಿರುವ ‘ನೆಮ್ಮದಿ’ ಕುಟಿರದಲ್ಲಿ ನಡೆಯಿತು. ಈ ಕುರಿತು ನ್ಯಾಯವಾದಿಗಳಾದ ಅನಂತ ಹೆಗಡೆ ಹೂಡ್ಲಮನೆ ಹಾಗೂ ಅರುಣಾಚಲ ಹೆಗಡೆ ಜಾನ್ಮನೆ ಜೊತೆಗೆ ಕಾನೂನು ಉಪ ನ್ಯಾಸಕರಾದ ಅರವರೆ ಅವರು ವಿಷಯ ಮಂಡಿಸಿದರು. ಸುದೀರ್ಘ ಚರ್ಚೆ ನಡೆಯಿತು. ಕೊನೆಗೂ ಒಂದು ಗೊಂದಲ ಉಳಿಯಿತು. ಅದನ್ನು ಚೌಧರಿ ಡಾಕ್ಟರ್ ಸ್ಪಷ್ಟಪಡಿಸಿದರು. ನಾವು ಕಾನೂನು ತಜ್ಞರನ್ನು ಕರೆಸಿದ್ದು ಭ್ರಷ್ಟಾ ಚಾರ ನಿವಾರಣೆಗೆ ಏನಾದರೂ ಮಾರ್ಗ ಸೂಚಿಸ ಬಹುದೆಂದು. ಆದರೆ ನೀವು ಮಾತನಾಡುವುದು ನೋಡಿದರೆ ಸರಕಾರವನ್ನೇ ಸಮರ್ಥಿಸುವಂತಿದೆ ಎಂದರು.
ಇದು ಭಾರತದಲ್ಲಿರುವ ಪ್ರತಿಯೊಬ್ಬರ ಸಮಸ್ಯೆ. ಯಾಕೆ ಹೀಗಾಗುತ್ತದೆ? ಕಾನೂನು ಅಂದರೆ ಹಿಂಬಡಿಗನ ಹಾವಿನಂತೆ ಎರಡೂ ಕಡೆ ತಲೆ ಇದ್ದಂತೆ ಕಾಣುತ್ತದೆ. ಕಾನೂನು ವಿಳಂಬ ನೀತಿ ಅನುಸರಿಸುವಂತೆ ಕಾಣುತ್ತದೆ. ನೂರು ಜನ ಅಪರಾಧಿಗಳು ಬಿಡುಗಡೆಯಾದರೂ ಅಡ್ಡಿಯಿಲ್ಲ. ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎಂಬುದು ಕಾನೂನಿನ ಆದರ್ಶವಾದರೆ ಈ ದೇಶದಲ್ಲಿ ನೂರಾರು ಅಪರಾಧಿಗಳು ತಪ್ಪಿಸಿಕೊಂಡು ಕೊನೆ ಗೊಬ್ಬ ನಿರಪರಾಧಿ ಸಿಕ್ಕಿಬೀಳುವ ಪರಿಸ್ಥಿತಿ ಎದು ರಾಗಿದೆ ಅನಿಸುತ್ತದೆ. ಜನರಿಗೆ ಕಾನೂನಿನ ಬಗ್ಗೆ ಭಯ ಇದೆ. ಆದರೆ ಗೌರವ ಇಲ್ಲ. ಈ ದೇಶದಲ್ಲಿ ಕಾನೂನಿನ ಸದುಪಯೋಗಕ್ಕಿಂತ ದುರುಪಯೋಗ ಆಗುತ್ತಿರುವುದೇ ಹೆಚ್ಚು. ಕಾನೂನಿಗೆ ಸಂಬಂಧ ಪಟ್ಟಂತಹ ಇಂತಹ ನೂರಾರು ಪ್ರಶ್ನೆಗಳಿಗೆಲ್ಲ ಕಾರಣ ಗಳೇನು?
ರುದ್ರಾಕ್ಷಿ
-ಸುಗುಣ ಮಹೇಶ್
“ರುದ್ರಾಕ್ಷಿ” ಶಿವನ ಸಂಕೇತವೆಂದೇ ನಾವುಗಳು ನಂಬುತ್ತೇವೆ. “ರುದ್ರ್ಚ ಮತ್ತು ಅಕ್ಷ” ಎಂಬ ಎರಡು ಶಬ್ಧಗಳಿಂದಾದ ರೂಪವೇ ರುದ್ರಾಕ್ಷಿ. “ರುದ್ರ” ಎಂದರೆ ಶಿವನ ಮತ್ತೊಂದು ಹೆಸರು. “ಅಕ್ಷ” ಎಂದರೆ ಶಿವನ ಕಣ್ಣೀರು. ಇಂತಹ ರುದ್ರಾಕ್ಷಿಯನ್ನು ಶಿವನೇ ಮೊಟ್ಟ ಮೊದಲು ಧರಿಸಿದನೆಂಬ ನಂಬಿಕೆ ಇದೆ ಆನಂತರ ಶಿವನ ಭಕ್ತರು, ಮುನಿಗಳು ರುದ್ರಾಕ್ಷಿಯನ್ನು ಧರಿಸಲು ಪ್ರಾರಂಭಿಸಿದರು. ಇದು ಆ ಶಿವನಿಂದಲೇ ಪ್ರಸಾದವಾಗಿ ಬಂದಿಹುದು ಇದನ್ನು ಧರಿಸುವುದರಿಂದ ನಮ್ಮಲ್ಲಿನ ಕಷ್ಟಗಳೆಲ್ಲವನ್ನು ನಿವಾರಣೆ ಮಾಡುವಂತಹ ಶಕ್ತಿ ಹೊಂದಿದೆ ಎಂದು ನಂಬಿಕೆಯನ್ನಿಟ್ಟಿದ್ದಾರೆ.ಪ್ರೀತಿ, ಸಿನಿಮಾ ಮತ್ತು ಫೇಸ್ ಬುಕ್
-ರಶ್ಮಿ ಕಾಸರಗೋಡು
ಶೀರ್ಷಿಕೆ ನೋಡಿದ ಕೂಡಲೇ ವಿಷಯ ಏನೂಂತಾ ನಿಮಗೆ ಗೊತ್ತಾಗಿರಬೇಕು ಅಲ್ವಾ? ಹೌದು ಇವತ್ತು ವ್ಯಾಲೆಂಟೈನ್ಸ್ ಡೇ(ಪ್ರೇಮಿಗಳ ದಿನ). ಪಾಶ್ಚಾತ್ಯರಿಂದ ಬಳುವಳಿಯಾಗಿ ಸಿಕ್ಕ ಈ ಆಚರಣೆ ಭಾರತದಲ್ಲಿ ಇಂದು ಗಣರಾಜ್ಯೋತ್ಸವ, ಶಿವರಾತ್ರಿಯಷ್ಟೇ ಪ್ರಾಮುಖ್ಯತೆಯನ್ನು ಪಡೆದಿದೆ ಎಂದರೆ ತಪ್ಪಾಗಲಾರದು. ಪ್ರೇಮಿಗಳ ದಿನ ಎಂದ ಕೂಡಲೇ ಪ್ರೀತಿಸಲು ಪ್ರತ್ಯೇಕ ದಿನ ಬೇಕಾ? ಅದೊಂದಿನ ಪ್ರೀತಿ ಮಾಡಿದರೆ ಸಾಕಾ? ಕೆಂಪು ಗುಲಾಬಿ ಕೊಟ್ಟು ಐ ಲವ್ ಯೂ ಅಂತಾ ಹೇಳಿ ಇಲ್ಲವೇ ದುಬಾರಿ ಗಿಫ್ಟ್, ಕಾರ್ಡ್ ಕೊಟ್ಟು ಪಾರ್ಕ್ ಸಿನಿಮಾ ಸುತ್ತಾಡಿ ವ್ಯಾಲೆಂಟೈನ್ಸ್ ಡೇ ಆಚರಿಸುವ ಪಾಶ್ಚಾತ್ಯರ ಪ್ರೇಮದ ಹುಚ್ಚು ಭಾರತೀಯರಾದ ನಮಗ್ಯಾಕೆ ಬೇಕು? ಎಂಬ ಪ್ರಶ್ನೆ ಪ್ರತೀ ವ್ಯಾಲೆಂಟೈನ್ಸ್ ಡೇ ದಿನದಂದು ಕೇಳಿ ಬರುತ್ತದೆ. ಈ ಬಗ್ಗೆ ಮಾಧ್ಯಮಗಳು ಸಾಕಷ್ಟು ಚರ್ಚೆಗಳನ್ನು ನಡೆಸಿದರೆ, ಕೆಲವೊಂದು ಸಂಘಟನೆಗಳು ವ್ಯಾಲೆಂಟೈನ್ಸ್ ಡೇ ವಿರೋಧಿಸಿ ಎಂಬ ಘೋಷಣೆಗಳನ್ನು ಕೂಗುತ್ತವೆ. ಆದರೂ ಭಾರತದಲ್ಲಿ ವ್ಯಾಲೆಂಟೈನ್ಸ್ ಆಚರಣೆ ಮುಂದುವರಿಯುತ್ತಲೇ ಇದೆ. ಯಾಕೆಂದರೆ ಇಂತಹ ಚರ್ಚೆ, ಪ್ರತಿಭಟನೆಗಳಿಂದಲೇ ವ್ಯಾಲೆಂಟೈನ್ಸ್ ಡೇ ಇನ್ನಷ್ಟು ಪ್ರಚಾರ ಗಿಟ್ಟಿಸಿಕೊಂಡಿವೆ ಎಂದರೆ ತಪ್ಪಾಗಲಾರದು.
ಪ್ರತೀವರ್ಷ ಫೆ.14 ಬಂತೆಂದರೆ ಸಾಕು…ಪಾರ್ಕ್, ಸಿನಿಮಾ ಹಾಲ್ ಎಲ್ಲೆಡೆಯೂ ಪ್ರೇಮಿಗಳ ಕಲರವ. ಪ್ರೀತಿಯ ಮೆಸೇಜ್್ಗಳಿಂದ ತುಂಬಿ ತುಳುಕುವ ಐನ್್ಬಾಕ್ಸ್, ಈ ಮೇಲ್, ಗಿಫ್ಟ್… ಬೆಳಗ್ಗಿನಿಂದ ರಾತ್ರಿ ವರೆಗಿನ ಸಮಯ ಪ್ರೇಮಮಯ!
ಮತ್ತಷ್ಟು ಓದು 
ಪ್ರೇಮಿಗಳ ದಿನಕ್ಕೆ ಎರಡು ಪತ್ರಗಳು
-ಮೋಹನ್ ಕೊಳ್ಳೇಗಾಲ
ಯಾಕೋ ಮನಸ್ಸಿಗೆ ಕಿಂಚಿತ್ತೂ ಸಮಧಾನವಿಲ್ಲ. ನಿನ್ನೆಯಿಂದಲೂ ತುಂಬಾ ಜ್ವರ ಇದೆ. ದೇಹ ಒಂದೇ ಸಮನೆ ಕಂಪಿಸುತ್ತಿದೆ. ನಿನ್ನದೇ ನೆನಪು. ಈ ಮನೆಯ ಪ್ರತಿ ಆಟಿಕೆ ಸಾಮಾನುಗಳು ನಿನ್ನ ಮುಖ ತೋರುತ್ತಿವೆ. ಪ್ರತೀ ವಸ್ತುವಿನಲ್ಲೂ ನಿನ್ನ ಆಸೆ, ಕಾತುರ, ಜಿಪುಣತನವೆದ್ದು ಕಾಣುತ್ತಿದೆ. ‘ನಿನ್ನ ಭಾವಚಿತ್ರ ನೋಡಿದಾಗ ದುಖ ಉಮ್ಮಳಿಸಿ ಉಮ್ಮಳಿಸಿ ಬಂದು ಸಾಂತ್ವನದ ಶಕ್ತಿ ಇಲ್ಲದೇ, ಕಣ್ಣೀರ ಕಟ್ಟೆ ಒಡೆದು ಸುಮ್ಮನೇ ಅಳುತ್ತೇನೆ. ನಿನ್ನೆ ಅಪ್ಪ ನಿನ್ನ ಬಾಲ್ಯದ ತುಂಟು ಹಾವಭಾವಗಳ ಫೋಟೋಗಳನ್ನು ನೋಡಿಕೊಂಡು ಅಳುತ್ತಿದ್ದರು. ನೀನು ಕಿಸಕ್ಕೆಂದು ನಕ್ಕಿದ್ದ ಒಂದು ಫೋಟೋ ನೋಡಿಕೊಂಡು ನಕ್ಕು ನಕ್ಕು ಕಣ್ಣೀರು ಸುರಿಸುತ್ತಿದ್ದರು. ನನ್ನ ಮಗಳಷ್ಟು ಚಂದ ಯಾರೂ ಇಲ್ಲ, ಅವಳ ನಗುವಿಗೆ ಸಾಟಿಯೇ ಇಲ್ಲ, ಅವಳ ಮಧುರ ಒಡನಾಡದಲ್ಲಿಯೇ ನಾನು ಇಷ್ಟು ದಿನ ಬದುಕಿದ್ದೆ ಎಂದು ಪೇಚುತ್ತಿದ್ದರು. ಇತ್ತೀಚೆಗಂತೂ ಕುಡಿತ, ಸಿಗರೇಟ್ ಸೇವನೆ ಜಾಸ್ತಿಯಾಗಿದೆ. ಪ್ರಶ್ನೆ ಮಾಡಲು ನೀನೇನು ನನ್ನ ಮಗಳೇ ಎಂದು ನನ್ನ ಮೇಲೆಯೇ ರೇಗುತ್ತಾರೆ. ಒಮ್ಮೊಮ್ಮೆ ನನ್ನ ತೊಡೆಯ ಮೇಲೆ ಮಲಗಿಕೊಂಡು, ನಿನ್ನನ್ನು ಓದಿಸಲು ಅವರು ಪಟ್ಟ ಶ್ರಮ, ಬ್ಯಾಂಕ್ ಲೋನ್, ನಿನ್ನನ್ನು ದೂರದ ಕಾಲೇಜಿಗೆ ಸೇರಿಸುವಾಗ ಅನುಭವಿಸಿದ ಒಳನೋವು, ಜೊತೆಗೆ ಆ ಕಾಲೇಜಿನಲ್ಲಿ ನಿನಗಾಗಿದ್ದ ತೊಂದರೆಗೆ ಪ್ರಾಚಾರ್ಯರೊಡನೆ ರೇಗಿದ್ದು, ಕಾರ್ ಮಾಡಿಕೊಂಡು ಬಂಧುಬಳಗವನ್ನೆಲ್ಲ ಕೂಡಿಸಿಕೊಂಡು ನಿನ್ನನ್ನು ನೋಡಲು ಪರಿಸೆ ಕಟ್ಟಿಕೊಂಡು ಬಂದಿದ್ದು, ಎಲ್ಲವನ್ನೂ ಸಾವಧಾನವಾಗಿ ಹೇಳಿ ನಿರಾಳರಾಗಿ, ಒಮ್ಮೆ ಬದುಕಿನ ಬೇಜವಾಬ್ದಾರಿಯೆಡೆಗೆ ನಗುತ್ತಾರೆ.
ಕಾಂಗ್ರೆಸಿಗರು ತಮ್ಮ ’ಕೈ’ಯಲ್ಲಿ ತೊಳದದ್ದೇನನ್ನು ಹಾಗು ಬಳಿದದ್ದೇನನ್ನು ?
-ಅರುಣ್ ಕಶ್ಯಪ್
ಬಿಜೆಪಿ ಸಚಿವತ್ರಯರ ವಿರುದ್ದ ಮಂಗಳೂರಿನಲ್ಲಿ ಪ್ರತಿಭಟಿಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಗಳೂರಿನ ವಿಧಾನಸೌಧದ ಚಿತ್ರದ ಬದಲಾಗಿ, ಅದೇ ರೀತಿ ಕಾಣುವ ಮೈಸೂರಿನ ಲಲಿತ ಮಹಲ್ ಅರಮನೆಯ (ಹೋಟೆಲ್) ಚಿತ್ರವನ್ನು ಶುಚಿಗೊಳಿಸಿ ಪ್ರತಿಭಟನೆ ನಡೆಸಿದರು. !!! ಪ್ರತಿಭಟನೆ ನಡೆಸಿದವರನ್ನು ಕೇಳಿದರೆ ಈ ಚಿತ್ರವನ್ನು ಮಂಗಳೂರಿನ ಲ್ಯಾಬ್ ಒಂದರಿಂದ ಕಾರ್ಯಕರ್ತರೊಬ್ಬರು ತೆಗೆದುಕೊಂಡು ಬಂದಿದ್ದರು. ಗೂಗಲ್ ನಲ್ಲಿ ವಿಧಾನಸೌಧಕ್ಕೆ ಸಂಬಂಧಿಸಿದ 14 ಬೇರೆ ಬೇರೆ ಮಾದರಿಯ ಚಿತ್ರಗಳಿದ್ದು ಅದರಿಂದ ಒಂದನ್ನು ಆಯ್ದು ಮುದ್ರಿಸಲಾಗಿತ್ತು ಎಂದು ಸ್ಪಷ್ಟೀಕರಣ ನೀಡಿದ್ದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಕಳೆದ ವರ್ಷ ಸದನದಲ್ಲೇ ಇವರ ನಾಯಕರು ಮಾಂಸದೂಟ ಮಾಡಿ ಅಗೌರವ ತೋರಿದ ಮೇಲೆ ಇನ್ನು ಇವರ ಬೆಂಬಲಿಗರಿಗೆ ವಿಧಾನಸೌಧ ಪಂಚತಾರ ಹೋಟೇಲ್ ನಂತೆ ಕಾಣುತ್ತಿರುವುದು ತಪ್ಪೇನಿಲ್ಲ ಬಿಡಿ.
ಹಾಗು….
ಮತ್ತಷ್ಟು ಓದು 
ಸಂಸ್ಕೃತಿ ಸಂಕಥನ – 22 – ಭಾರತೀಯ ಸಂಸ್ಕೃತಿಗೆ ಗ್ರಹಣ ಹಿಡಿಸಿದ ವಸಾಹತು ಪ್ರಜ್ಞೆ
-ರಮಾನಂದ ಐನಕೈ
ಸುಮಾರು 35 ವರ್ಷಗಳ ಹಿಂದಿನ ನೆನಪು. ನಾವು ಹೈಸ್ಕೂಲಿಗೆ ಹೋಗುತ್ತಿರುವ ದಿನಗಳು. ಒಂದು ರೀತಿಯ ವಿಚಿತ್ರ ಸಭ್ಯತೆಯನ್ನು ಬೆನ್ನಟ್ಟಿ ಹೊರಟಿರುವ ಕಾಲ. ಮೇಸ್ಟ್ರಗಳು ಕ್ಲಾಸಿಗೆ ಬಂದರೆ ಜೀವನದ ‘ಗುರಿ’ಯ ಕುರಿತಾಗೆ ಮೊದಲ ಪ್ರಶ್ನೆ ಕೇಳುತ್ತಿದ್ದರು. ಯಾರು ಅತ್ಯುತ್ತಮ ಗುರಿಯನ್ನು ಹೇಳಿದರೋ ಅವರಿಗೆ ‘ವ್ಹೆರಿ ಗುಡ್’ ಅನ್ನುತ್ತಿದ್ದರು. ಮುಂದೆ ಜೀವನದಲ್ಲಿ ಮನುಷ್ಯ ಮಾಡಬಹು ದಾಂತಹುದು ಇಂತಿಂಥದಿದ್ದೆ ಎಂದು ನಮಗೆ ಗೊತ್ತಾಗಿದ್ದೇ ಈ ಪ್ರಶೆಗಳಿಗೆ ಉತ್ತರ ಹುಡುಕುವ ಮೂಲಕ. ನಾವು ಮಾಡುವ ಕಾರ್ಯಗಳಿಗೆ ಉದ್ದೇಶ ಇದ್ದರೆ ಮಾತ್ರ ಅದು ಗುರಿ ತಲುಪುತ್ತದೆ. ಕ್ರಿಯೆಗೂ ಉದ್ದೇಶಕ್ಕೂ ಸಂಬಂಧ ಇರಬೇಕು. ಆದ್ದರಿಂದ ಗುರಿ ಅಂದರೆ ಉದ್ದೇಶ. ಗುರಿಯ ದಾರಿ ಯಲ್ಲಿ ಹೋದರೆ ಗುರಿ ಸಿಗುತ್ತದೆ. ಈ ರೀತಿಯ ಚಿಂತನೆ ಇದ್ದ ಕಾಲ ಅದು.
ಇಂಥ ಚಿಂತನೆಗಳು ಎಲ್ಲಿಂದ ಬಂದವು? ಕೇಳಿದರೆ, ದಾರ್ಶನಿಕರಿಂದ, ಪುರಾಣಗಳಿಂದ, ಪ್ರಾಚೀನ ಜನರ ಜೀವನಾನುಭವದಿಂದ ಇತ್ಯಾದಿ ಯಾಗಿ ಮನಸ್ಸಿಗೆ ಕಂಡಂತೆ ಹೇಳುತ್ತೇವೆ. ಯಾರಿಂದಲೂ ಅಲ್ಲ. ನಾವು ಕಲ್ಪಿಸುತ್ತಿರುವ ಸೀಮಿತ ಅರ್ಥದ ಗುರಿ ನಮ್ಮಲ್ಲಿ ಹುಟ್ಟಿದ್ದೇ ಪಾಶ್ಚಾತ್ಯ ಪ್ರಭಾವದಿಂದ. ವಸಾಹತುಶಾಹಿ ಪ್ರಜ್ಞೆ ಯಿಂದ. ಏಕೆಂದರೆ ಅವರ ಅಷ್ಟೂ ಚಿಂತನೆಗಳು ಅರಳುವುದು ಕಾರಣ ಮತ್ತು ಉದ್ದೇಶಗಳ ಮೇಲೆ. ಏಕೆಂದರೆ ಪಾಶ್ಚಾತ್ಯ ಪುರಾಣ ಕಟ್ಟಲ್ಪಟ್ಟಿದ್ದೇ ಈ ಪರಿಕಲ್ಪನೆಯ ಮೇಲೆ. ಅನೇಕ ಸಂದರ್ಭಗಳಲ್ಲಿ ಅದು ನಮ್ಮಲ್ಲಿ ಅರ್ಥ ಕೊಡಲಾರದು.
ಕರ್ನಾಟಕ ಬಿ.ಜೆ.ಪಿ ನಾಯಕರೇ ಏನ್ರೀ ನಿಮ್ ಅವಸ್ಥೆ…?
ಅತೀ ಪ್ರಸಿದ್ದಿ ಪಡೆದ ಗಾದೆ ಮಾತೊಂದಿದೆ “ನಾಯಿ ಬಾಲ ಯಾವತ್ತಿದ್ರೂ ಡೊಂಕೆ ” ಈ ಮಾತು ಕರ್ನಾಟಕದ ಬಿ.ಜೆ.ಪಿ ನಾಯಕರಿಗೆ ಅತ್ಯಂತ ಹತ್ತಿರದ ಗಾದೆ ಮಾತು .. ಒಂದೇ ಒಂದು ವ್ಯತ್ಯಾಸ ಅಂದ್ರೆ ಇಲ್ಲಿ ನಾಯಿಯ ಬಾಲ ಮಾತ್ರ ಡೊಂಕು ಅಲ್ಲರೀ.. ನಾಯಿಯೇ ಡೊಂಕಾಗಿಬಿಟ್ಟಿದೆ. ಇವರ ಸ್ಟೋರಿನೇ ವಿಚಿತ್ರ ಮಾದ್ಯಮಗಳಿಗೆ ಏನ್ ನ್ಯೂಸ್ ಸಿಕ್ಕಿಲ್ಲ ಅಂದ್ರೆ, ಯಾಕ್ರಿ ಸುಮ್ನೆ ಕುತ್ಕೊತಿರಾ ನಿಮಗೆ ನ್ಯೂಸ್ ತಾನೇ …? ನಾವ್ ಕೊಡ್ತಿವ್ರಿ ಅಂತ ಬರೋ ವಿಶಾಲ ಮನಸ್ಸಿನ ನಾಚಿಕೆ ಇಲ್ಲದ ನಾಯಕರು.ಪಾಪ ನಮ್ ಜನ ಬಿ.ಜೆ.ಪಿ ಯವರನ್ನ ವಿರೋದ ಪಕ್ಷದಲ್ಲಿ ನೋಡಿ ನೋಡಿ ಬೇಸತ್ತು ಇವರು ಒಂದು 5 ವರ್ಷ ಆಡಳಿತ ಮಾಡ್ಲಿ ಬಿಡಿ… ಅಂಥ ಇವರನ್ನ ಆಡಳಿತಕ್ಕೆ ತಂದ್ರು, ಆದರೆ ಈ ನಾಯಕರು ಕೊಟ್ಟ ಆಡಳಿತ 100 ವರುಷ ಕಳೆದರೂ ಮರೆಯಲು ಸಾದ್ಯವಾಗದ ಆಡಳಿತ. (ದಯವಿಟ್ಟು ಕ್ಷಮಿಸಿ ಓದುಗರೇ “ಅವರು-ಇವರು” ಪದವನ್ನ ಇಲ್ಲಿ ಬಳಸಿದರೆ ಆ ಪದಕ್ಕೆ ಇರುವ ಗೌರವ ಸ್ವಲ್ಪ ಕಡಿಮೆ ಆಗಬಹುದು ಅದ್ದರಿಂದ ಈ ಪದವನ್ನ ಇಲ್ಲಿ ನಿಷೇದಿಸಲಾಗಿದೆ) ಇವರಲ್ಲಿ ಒಬ್ಬ ಬರೋಬ್ಬರಿ ರಾಜ್ಯದ ಸಂಪತ್ತನ್ನ ದೋಚುತ್ತಾನೆ. ಇನ್ನೊಬ್ಬ ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಮಾಡುತ್ತಾನೆ, ಇನ್ನೊಬ್ಬ ನರ್ಸ್ ಜೊತೆ ಮೊಬೈಲ್ ನಲ್ಲಿ ಹರಿದಾಡುತ್ತಾನೆ.
ಇವರೆಲ್ಲಾ ನಮ್ ನಾಯಕ್ರು. ಕುಟುಂಬ ಕಲ್ಯಾಣ ಯೋಜನೆಯನ್ನ ಪಾಲಿಸುವವನು ರಾಜ್ಯದ ಸಂಪತ್ತನ್ನ ತನ್ನ ಪ್ರೀತಿಯ ಕುಟುಂಬದವರ ಹೆಸರಲ್ಲಿ ಮಾಡಿ ಕೊಟ್ಟಂತಹ ಪುಣ್ಯಾತ್ಮ, ಇದೆಲ್ಲವನ್ನು ದಾಟಿ ನಿನ್ನೆ ನಮ್ಮ ತ್ರಿಮೂರ್ತಿ ಮಂತ್ರಿಗಳು ಸದನದ ಕಲಾಪ ನಡಯುತ್ತಿದ್ದ ಸಂದರ್ಭದಲ್ಲೇ “ಬ್ಲೂ ಫಿಲಂ” ನೋಡಿ ಸಿಕ್ಕಿಬಿದ್ದ ನಾಮಧೇಯ ನಾಯಕ್ರು.. ಯಾಕ್ರಿ ಹಿಂಗ್ ಮಾಡ್ತಿದ್ದೀರ..? ಯಾವಾಗ ಸಾರ್ ನೀವೆಲ್ಲಾ ಸರಿ ಆಗ್ತೀರಾ ? ಗೌರವಾನ್ವಿತ ಶ್ರೀ ಅಟಲ್ ಬಿಹಾರಿ ವಾಜಪಾಯಿ ಕಟ್ಟಿ ಬೆಳೆಸಿದ ಬಿ.ಜೆ.ಪಿ ಪಕ್ಷವನ್ನ ಯಾವ ಮಟ್ಟಕ್ಕೆ ತಂದು ಬಿಟ್ರಿ ನೀವು.. ನಿಮ್ಮನ್ನ ಒಂದು ವಿಷಯದಲ್ಲಂತೂ ಅಭಿನಂಧಿಸಬೇಕ್ರಿ.,!! 50 ವರುಷದಲ್ಲಿ ಮಾಡಬೇಕಾದ ಸಾಧನೆಯನ್ನ ಕೇವಲ 3 ವರುಷದಲ್ಲೇ ಸಾಧಿಸಿದ್ದೀರ, ಅಭಿನಂದನೆಗಳು ಬಿ.ಜೆ.ಪಿ ನಾಯಕರೇ ಅಭಿನಂದನೆಗಳು..!! ಮತ್ತಷ್ಟು ಓದು 
ಟಿ.ಆರ್.ಪಿಗಾಗಿ ನೀಲಿ ಚಿತ್ರದ ಬೆಂಬತ್ತಿದ ಮಾಧ್ಯಮ
–ವಿಜಯ್ ಹೆರಗು
ನಾನು : ಸರ್ ನಮಸ್ಕಾರ ನಾನು ವಿಜಯ್ ಅಂತ, ವಿಜಯ್ ಹೆರಗು ನಿಮ್ಮ ಫೇಸ್ಬುಕ್ ಗೆಳೆಯಹುಟ್ಟೋ ಮಕ್ಕಳು ಪ್ರಪಂಚವನ್ನು ನೋಡಲಿ..
ಆ ವಿಧಿಯಾಟವ ಬಲ್ಲವರಾರು ?
– ಪ್ರಸಾದ್.ಡಿ.ವಿ.
ನಾನು ಇಂತಹದ್ದೊಂದು ಲೇಖನ ಬರೆಯುತ್ತೇನೆಂದು ನನ್ನ ಕನಸ್ಸು ಮನಸ್ಸಿನಲ್ಲಿಯು ಎಣಿಸಿರಲಿಲ್ಲ. ನನ್ನ ನಂಬಿಕೆಗಳ ವಾಸ್ತವದ ನೆಲೆಗಟ್ಟನ್ನೆ ಆ ಸಂದರ್ಭ ಅಲ್ಲಾಡಿಸುತ್ತದೆಂದು ನಾನು ಎಂದೂ ಭಾವಿಸಿರಲಿಲ್ಲ. ನೆನ್ನೆ ನನ್ನ ಕಣ್ಣೆದುರೆ ಗತಿಸಿದ ಘಟನೆ ನನ್ನನ್ನು ಈ ಲೇಖನ ಬರೆಯುವವರೆಗೂ ಸರಿಯಾಗಿ ನಿದ್ರಿಸಲು ಬಿಡುತ್ತಿಲ್ಲ.
ನನ್ನ ತಾತನಿಗೆ ಆರೋಗ್ಯ ಕೈಕೊಟ್ಟು ಎರಡು ವರ್ಷವೇ ಸರಿದಿರಬಹುದು. ವಯಸ್ಸಾದ ದೇಹ ರೋಗಗಳ ಕಣಜವೆಂಬಂತೆ. ನನ್ನವ್ವ(ಅಜ್ಜಿ)ನಿಗೆ ಅವಳ ಗಂಡನೇ ದೈವ. ಆ ದೇವತೆಯ ಇಚ್ಛಾಶಕ್ತಿಯೆ ತನ್ನ ಗಂಡನ ಪ್ರಾಣವನ್ನು ಹಿಡಿದಿಟ್ಟಿದೆ ಎನಿಸುತ್ತದೆ. ನನ್ನ ಅಮ್ಮ, ಚಿಕ್ಕಮ್ಮಂದಿರು ಮತ್ತು ಮಾವನಿಗೆ ನನ್ನಜ್ಜನನ್ನು ಹೇಗಾದರು ಮಾಡಿ ಉಳಿಸಿಕೊಳ್ಳಬೇಕೆಂಬ ಆಸೆ. ಆದ್ದರಿಂದ ಅಜ್ಜನನ್ನು ಮೈಸೂರಿನ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ದಿನವೂ ಅವರನ್ನು ಕಾಯುತ್ತಿದ್ದಾರೆ. ನಾನು ಭಾವನೆಗಳನ್ನು ಅಪ್ಪಿ ಜೋತಾಡುವ ಮನೋಭಾವದವನಲ್ಲವೇ ಅಲ್ಲ. ವಾಸ್ತವಿಕ ಮತ್ತು ವೈಚಾರಿಕ ನೆಲೆಗಟ್ಟುಗಳೆ ನನ್ನ ಯೋಚನಾಧಾಟಿಯ ಅಡಿಪಾಯಗಳು, ಬಂಧನಗಳು ಮತ್ತು ಸಂಬಂಧಗಳೆಂದರೆ ತುಸು ತಟಸ್ಥನೆ. ಕೆಲವೊಮ್ಮೆ ತುಂಬಾ ಭಾವುಕನಾಗುವುದುಂಟು ಆದರೆ ಅದು ತೀರಾ ವಿರಳ. ನನ್ನ ಯೋಚನಾಧಾಟಿಯೋ ಇಲ್ಲವೆ ತಟಸ್ಥ ಭಾವದ ಉದ್ದಟತನವೋ, “ಅಜ್ಜನಿಗೆ ವಯಸ್ಸಾಯ್ತು, ಮಗನ ಮದುವೆಯನ್ನೂ ನೋಡಿದ್ದಾಯ್ತು ಮೊಮ್ಮಗನನ್ನು ಮುದ್ದಿಸಿದ್ದೂ ಆಯ್ತು, ಅವರು ಹೊರಡುವ ಕಾಲ ಸನ್ನಿಹಿತವಾಯಿತೆಂದರೆ ಹೋಗಲಿ ಬಿಡಿ. ಯಾಕಷ್ಟು ಭಾವುಕರಾಗುತ್ತೀರಿ?” ಎಂದುಬಿಟ್ಟೆ. ಎಲ್ಲರೂ ನನ್ನನ್ನು ಯಾವುದೇ ಭಾವನೆಗಳಿಲ್ಲದ ಬಂಡೆಯೆಂಬಂತೆ ನೋಡಿ, “ಬಾಯಿಗೆ ಬಂದಂತೆ ಹರಟಬೇಡ, ಕಾಲು ಮುರಿಯುತ್ತೇನೆ” ಎಂದು ಅಮ್ಮ ಗದರಿದರು. ನಾನು ನನ್ನಲ್ಲೆ ಇವರಿಗೆ ಬುದ್ಧಿಯಿಲ್ಲ, ಯಾರು ಪುಂಗಿ ಊದಿದರು ಸರಿಯಾಗದವರು ಇವರು ಎಂದು ಸುಮ್ಮನೆ ಹೊರಬಂದೆ. ಅವರ ಭಾವೋತ್ಕಟತೆಯ ಆಳವನ್ನು ವಿಮರ್ಶಿಸುವ ಗೋಜಿಗೂ ಹೊಗಲಿಲ್ಲ ನಾನು.






