ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

6
ಫೆಬ್ರ

ಸಂಸ್ಕೃತಿ ಸಂಕಥನ – 21 – ಬುದ್ಧ ಬ್ರಾಹ್ಮಣ ವಿರೋಧಿಯೇ?

-ರಮಾನಂದ ಐನಕೈ

ನಿಜಕ್ಕೂ  ಇದು ಕುತೂಹಲದ ಪ್ರಶ್ನೆ. ಈ ಕುರಿತು ಸಂಶೋಧನೆ ಮಾಡಿದ ಬಾಲಗಂಗಾಧರರ ಅಭಿಪ್ರಾಯಗಳು ನಮಗೆ ಹೊಸತೊಂದು ಸತ್ಯದ ಲೋಕವನ್ನು ತೆರೆದುಕೊಡುತ್ತದೆ. ಬುದ್ಧ ವರ್ಣ ವ್ಯವಸ್ಥೆಯನ್ನು ದ್ವೇಷಿಸಿದ್ದು ನಿಜವೇ? ವರ್ಣ ವ್ಯವಸ್ಥೆಯನ್ನು ಒಪ್ಪಿಕೊಂಡೆ ಆತ ಬ್ರಾಹ್ಮಣತ್ವವನ್ನು ಚರ್ಚೆಗೆ ಎಳೆಯುತ್ತಾನೆ. ಇದು ಹೇಗೆ ಸಾಧ್ಯ? ನಮ್ಮ ದೇಶದ ದಲಿತರು ಬುದ್ಧಿಸಂನ್ನು ಆರಾಧಿಸು ವುದು ಅದು ನಿಜವಾದ ಮಾನವೀಯ ಧರ್ಮ ಅಂತಲೋ ಅಥವಾ ಬುದ್ಧಿಸಂ ಬ್ರಾಹ್ಮಣರನ್ನು ದ್ವೇಷಿಸುತ್ತದೆ ಎಂಬ ಕಲ್ಪಿತ ಕಥೆಯ ಪ್ರೇರಣೆ ಯಿಂದಲೋ?

ಹಿಂದೂಯಿಸಂ ಹಾಗೆ ಬುದ್ಧಿಸಂ ಕುರಿ ತಾಗಿಯೂ ವರ್ಣರಂಜಿತ ಕಥೆ ಕಟ್ಟಿದವರೂ ಐರೋಪ್ಯರೆ. ಏಕೆಂದರೆ ಬುದ್ಧಿಸಂನ್ನು ಕೂಡಾ ಅವರು ತಮ್ಮ ಕನ್ನಡಕದಿಂದಲೇ ನೋಡಿದರು. ಜೊತೆ ಜೊತೆಗೆ ಹಿಂದೂಯಿಸಂ ಕುರಿತಾದ ಕೆಲವು ಕಗ್ಗಂಟುಗಳಿಂದ ತಪ್ಪಿಸಿಕೊಳ್ಳಲು ಬುದ್ಧಿಸಂನ್ನು ವೈಭವೀಕರಿಸುವ ಅಗತ್ಯ ಅವರಿಗಿತ್ತು. ಬುದ್ಧಿಸಂ ಅನ್ನುವುದು ಹಿಂದೂಯಿಸಂಗಿಂತ ಉತ್ತಮವಾದ ರಿಲಿಜನ್ ಎಂದು ಭಾವಿಸಲು ಅವರಲ್ಲಿ ಸಾಕಷ್ಟು ಸಮರ್ಥನೆಗಳಿದ್ದವು. ಬುದ್ಧಿಸಂ ಏಕದೇವನ ಕಲ್ಪನೆಯಲ್ಲಿದೆ. ತ್ರಿಪಿಟಕಗಳು ಅವರ ಸ್ಕ್ರಿಪ್ಚರ್ಗಳು. ಮತಾಂತರಕ್ಕ ಮಾನ್ಯತೆ ಇದೆ. ಹಾಗಾಗಿ ಬುದ್ಧಿಸಂ ಅನ್ನುವುದು ಒಂದು ಶುದ್ಧವಾದ ರಿಲಿಜನ್ ಅಂದು ಕೊಂಡರು.

ಮತ್ತಷ್ಟು ಓದು »

2
ಫೆಬ್ರ

ಏನ್ ಗುರು ರಾಜಕೀಯನಾ?

-ಅಶ್ವಿನ್ ಎಸ್ ಅಮೀನ್

ಇತ್ತೀಚೆಗೆ ಬನವಾಸಿ ಬಳಗದವರು ನಡೆಸುತ್ತಿರುವ  ‘ಏನ್ ಗುರು’ ಎಂಬ ಬ್ಲಾಗ್ ನಲ್ಲಿ ಪ್ರಕಟವಾದ ‘RSS ಕಣ್ಣಲ್ಲಿ ಭಾಷಾ ನೀತಿ, ಒಕ್ಕೂಟ ಮತ್ತು ಸಮಾಜ’ ಎಂಬ ಲೇಖನವನ್ನು ಓದಿದೆ. ಲೇಖಕರ ಮಾತುಗಳು ಏಕಮುಖಿಯಾಗಿವೆಯೇನೋ ಎನಿಸಿ ಈ ಪ್ರತಿಕ್ರಿಯೆಯನ್ನು ದಾಖಲಿಸುತ್ತಿದ್ದೇನೆ.

ಲೇಖನ ಆರಂಭದಲ್ಲಿ ಅರೆಸ್ಸಿಸಿನ ಧನಾತ್ಮಕ ಅಂಶಗಳ ಕುರಿತು ಲೇಖಕರು ಗಮನ ಸೆಳೆಯುತ್ತಾರೆ. ಆದರೆ ಒಂದು ಕಡೆ ನೆರೆ ಬರ ಹಾಗು ಇತರ ವಿಕೋಪಗಳ ಸಂದರ್ಭದಲ್ಲಿ ಜಾತಿ ಮತ ಲೆಕ್ಕಿಸದೆ ಜನತೆಯ ಸಹಾಯಕ್ಕೆ ಧಾವಿಸುವ ಆರೆಸ್ಸೆಸ್ ನ ಬಗ್ಗೆ ಹೊಗಳುವ ಲೇಖಕರು ಮತ್ತೊಂದು ಕಡೆ ಪ್ರಾಂತೀಯ ವಿರೋಧದ ಬಗ್ಗೆ ಮಾತನಾಡುತ್ತಾರೆ.! ಪ್ರಾಂತೀಯ ಹಾಗು ವೈವಿಧ್ಯತಾ ವಿರೋಧವಿದ್ದರೆ ಆರೆಸ್ಸೆಸ್ ದೇಶದ ಯಾವದೇ ಭಾಗದಲ್ಲಿ ಉಂಟಾಗುವ ವಿಕೋಪಗಳ ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿತ್ತೆ..?!

ಆರೆಸ್ಸೆಸಿನ ಪೂಜನೀಯ ಗುರುಗಳಾದ ಮಾಧವ ಸದಾಶಿವ ಗೋಳವಾಲ್ಕರ್ ಗುರೂಜಿಯವರ ‘ಚಿಂತನ ಗಂಗಾ’ ಪುಸ್ತಕವನ್ನಾಧರಿಸಿ ಆ ಲೇಖನವನ್ನು ಬರೆಯಲಾಗಿದೆ. ಆ ಸಮಗ್ರ ಗ್ರಂಥವನ್ನು ಲೇಖಕರು ಓದಿರುವುದು ಸಂತೋಷದಾಯಕ. ಆದರೆ ಅದನ್ನು ಸರಿಯಾಗಿ ಅರ್ಥೈಸುವಲ್ಲಿ ಎಡವಿದ್ದಾರೆ ಎಂಬುದೇ ವಿಪರ್ಯಾಸ.! ಮತ್ತಷ್ಟು ಓದು »

30
ಜನ

ಪ್ರೀತಿಯ ಮಟ್ಟು ಸರ್, ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.

– ಪೂರ್ಣಚಂದ್ರ

(ಇತ್ತೀಚಿಗೆ ದಿನೇಶ್ ಅಮಿನ್  ಮಟ್ಟು ಅವರು ಬರೆದ ಬಹುಚರ್ಚಿತ ಲೇಖನಕ್ಕೆ ಪೂರ್ಣಚಂದ್ರ ಅವರು ಪ್ರತಿಕ್ರಿಯಯನ್ನು ಕಳುಹಿಸಿದ್ದಾರೆ. ಓದಿ..)

ಪ್ರೀತಿಯ ಮಟ್ಟು ಸರ್,

ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.
ನಮಸ್ಕಾರಗಳು. ನನ್ನ ಪರಿಚಯ ನಿಮಗೆ ಇಲ್ಲ ಎಂದು ಕಾಣುತ್ತೆ. ಆದರೆ, ನಿಮ್ಮ ಪರಿಚಯ ನನಗೆ ೧೦ ವರ್ಷದ್ದು. ನಿಮ್ಮ ಅಂಕಣಗಳನ್ನು ಓದುತ್ತಾ ಬೆಳೆದವನು ನಾನು.

ವಿವೇಕಾನಂದರ ಬಗ್ಗೆ ನೀವು ಬರೆದ ಲೇಖನ ಓದಿದ ಬಳಿಕ, ನನಗನಿಸಿದ್ದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕು ಅನಿಸಿತು. ಅಷ್ಟರಲ್ಲಿಯೇ ವಿವೇಕಾನಂದರ ಪರ ಎಂದು ಭ್ರಮಿಸಿರುವ, ಭಾವಿಸಿಕೊಂಡಿರುವ ಬಲಪಂಥೀಯ ಮೂಲಭೂತವಾದಿಗಳು ನಿಮ್ಮ ವಿರುದ್ಧ ಕತ್ತಿ ಬೀಸಲಾರಂಭಿಸಿದರು.
ಇದಕ್ಕೆ ಪ್ರತಿಯಾಗಿ, ತಾವು ಮಟ್ಟು ಪರ(ವಿವೇಕನಂದ ಪರ ಅಲ್ಲ) ಎಂದು ಭ್ರಮಿಸಿರುವ ಎಡಪಂಥೀಯ ಹಾಗೂ ಪ್ರಗತಿಪರ ಮೂಲಭೂತವಾದಿಗಳು ಕೂಡ ತಮ್ಮ ಕತ್ತಿಗೆ ಸಾಣೆ ಹಿಡಿಯಲಾರಂಭಿಸಿದರು.

ಈ ಎರಡೂ ವರ್ಗದ ಮೂಲಭೂತವಾದಿಗಳು ಶಿವಮೊಗ್ಗ ಮತ್ತು ಬೆಂಗಳೂರಿನ ಬೀದಿಗಳಲ್ಲಿ, ನಿಮ್ಮ ಕಚೇರಿ ಎದುರು, ಬ್ಲಾಗ್‌ಗಳಲ್ಲಿ ಕತ್ತಿ ಬೀಸಾಡುವಾಗ ಮಧ್ಯೆ ಪ್ರವೇಶಿಸಲು ಭಯವಾಯಿತು. ಯಾರದ್ದಾದರೂ ಕತ್ತಿ ನನ್ನನ್ನೇ ತಿವಿದುಬಿಡಬಹುದು ಎಂದು ಸುಮ್ಮನಾದೆ. ಈಟಿ, ಭರ್ಜಿ, ಕತ್ತಿ ಗುರಾಣಿಗಳ ಅಬ್ಬರ ಕಡಿಮೆಯಾಗಿದೆ. ಹಾಗಾಗಿ ಇದು ಸೂಕ್ತ ಸಮಯ ಎಂದು ನನಗನಿಸಿದ್ದ ಕೆಲ ಸಂಗತಿಗಳನ್ನು ಹೇಳಲು ಪ್ರಯತ್ನಿಸುವೆ. ಮತ್ತಷ್ಟು ಓದು »

30
ಜನ

ಸಂಸ್ಕೃತಿ ಸಂಕಥನ – 20 – ಬುದ್ಧನನ್ನು ಹೈಜಾಕ್ ಮಾಡಿದ ಪ್ರೊಟೆಸ್ಟಾಂಟರು

-ರಮಾನಂದ ಐನಕೈ

ಎಲ್ಲರಿಗೂ ಅಚ್ಚರಿಯಾಗಬಹುದು. ಪ್ರೊಟೆಸ್ಟಾಂಟರು ಹೇಗೆ ಮತ್ತು ಏಕೆ ಬುದ್ಧಿಸಂನ್ನು ಹೈಜಾಕ್ ಮಾಡಿದರು ಎಂಬುದು. ಇಲ್ಲಿ ಹೈಜಾಕ್ ಅಂದರೆ ಅಪಹರಣ ಎಂಬ ಅರ್ಥವಲ್ಲ. ಪ್ರೊಟೆ ಸ್ಟಾಂಟರು ಬುದ್ಧಿಸಂನ್ನು ಹೇಗೆ ತಮ್ಮ ಸಮರ್ಥನೆ ಗಾಗಿ ಬಳಸಿಕೊಂಡರು ಎಂಬುದು. ಇದರ ಹಿಂದೆ ಸ್ವತಃ ಭಾರತೀಯರಿಗೆ ಅರ್ಥವಾಗದ ಹಲವು ರಹಸ್ಯಗಳಿವೆ. ಈ ರಹಸ್ಯಗಳನ್ನು ಬಾಲಗಂಗಾಧರರು ಸ್ವಾರಸ್ಯವಾಗಿ ಭೇದಿಸುತ್ತಾರೆ.

ಸಮಕಾಲೀನ ಭಾರತೀಯ ಚಿಂತಕರಿಗೆ ಬುದ್ಧಿಸಂ ಕುರಿತಾಗಿ ಒಂದು ಪೂರ್ವಗ್ರಹಿತ ಅಭಿ ಪ್ರಾಯಗಳಿವೆ. ಬುದ್ಧಿಸಂ ಮಾನವೀಯತೆಗಾಗಿ ಹೋರಾಡುತ್ತಿದೆ. ಇದು ಸಮಾಜದಲ್ಲಿನ ಅನಿಷ್ಟ ವನ್ನು ವಿರೋಧಿಸಿದೆ. ಯಜ್ಞಯಾಗಾದಿಗಳನ್ನು ಧಿಕ್ಕರಿಸಿದೆ. ಪ್ರಾಣಿ ಬಲಿ ವಿರೋಧಿಸಿ ಅಹಿಂಸಾ ತತ್ವ ಮೆರೆದಿದೆ. ಈ ಮೂಲಕ ಹಿಂದೂ ಯಿಸಂನ್ನು ವಿರೋಧಿಸಿದೆ. ಭಾರತದ ಜಾತಿ ವ್ಯವಸ್ಥೆಯನ್ನು ವಿಮರ್ಶಿಸಿದೆ. ಇಲ್ಲಿನ ವರ್ಣಾ ಶ್ರಮವನ್ನು ವಿರೋಧಿಸಿದೆ. ಇಲ್ಲಿನ ಪುರೋಹಿತ ಶಾಹಿಯನ್ನು ಹಾಗೂ ಬ್ರಾಹ್ಮಣರನ್ನು ವಿರೋಧಿಸಿದೆ. ಹಾಗಾಗಿ ಇದೊಂದು ವಿಶ್ವಮಾನ್ಯವಾದ ರಿಲಿಜನ್. ಬುದ್ಧಿಸಂ ಸಮಾಜದಲ್ಲಿನ ತರತಮ ವನ್ನು ಸಹಿಸುವುದಿಲ್ಲ. ಮನುಷ್ಯರ ಏಳ್ಗೆಗಾಗಿ ಹಂಬಲಿಸುತ್ತದೆ ಇತ್ಯಾದಿ. ಈ ಕಾರಣಕ್ಕಾಗೆ ನಮ್ಮ ದೇಶದ ದಲಿತ ಚಿಂತಕರೆಲ್ಲ ಬುದ್ಧಿಸಂ ಕಡೆಗೆ ಆಕರ್ಷಿತರಾದರು. ಅಂಬೇಡ್ಕರರು ಕೂಡ ಬುದ್ಧಿಸಂಗೆ ಮತಾಂತರ ಹೊಂದಿದ್ದು ಈ ಆಕರ್ಷಣೆಯಿಂದ. ನಿಜವಾಗಿಯೂ ಇದು ನಿಜವೆ? ಭಾರತೀಯ ಸಂಸ್ಕೃತಿಯೊಂದಿಗೆ ಬುದ್ಧಿಸಂ ವಿರೋಧವಾಗಿಯೇ ನಡೆದುಕೊಂಡು ಬಂದಿ ದೆಯೇ? ನಿಜವಾಗಿಯೂ ಬುದ್ಧ ವರ್ಣಾಶ್ರಮ ದಿಂದ ಹೊರಗುಳಿದು ವರ್ಣಾಶ್ರಮ ಪದ್ಧತಿಯನ್ನು ವಿರೋಧಿಸಿದನೇ? ಈಗ ನಾವು ವಿಸ್ಮೃತಿಯಿಂದ ಸ್ಮೃತಿಗೆ ಬರಬೇಕಾಗಿದೆ.

ಮತ್ತಷ್ಟು ಓದು »

19
ಜನ

ಸ್ವಾಮಿ ವಿವೇಕಾನಂದರೊಳಗಿನ ’ಮನುಷ್ಯ’ ಮತ್ತು ಮನುಷ್ಯನೊಳಗಿನ ’ಅವಿವೇಕ’

– ರಾಕೇಶ್ ಶೆಟ್ಟಿ

ಓದು,ಅನುಭವ ಮತ್ತು ವಯಸ್ಸು,ಮನುಷ್ಯನನ್ನ ಮಾಗಿಸುತ್ತದೆ ಅನ್ನುತ್ತಾರೆ,ಆದರೆ ಕೆಲವರ ಪಾಲಿಗೆ ಓದು,ಅನುಭವದ ಜೊತೆಗೆ ವಯಸ್ಸು ಬಾಗಿಸುತ್ತದೆ ದೇಹ ಮತ್ತೆ ತಲೆ ಎರಡನ್ನೂ…! ಅಂತವರ ವಿಷಯ ಪಕ್ಕಕ್ಕಿರಲಿ….ವಿವೇಕಾನಂದರ ವಿಷಯಕ್ಕೆ ಬರೋಣ…

ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸ್ವಾಮಿ ವಿವೇಕಾನಂದರು ಜಪಾನ್ ಮೂಲಕ ಸಾಗುವಾಗ ಅಲ್ಲಿನ ನಗರ ವೀಕ್ಷಣೆಯ ನಂತರ ತಮ್ಮ ಮದರಾಸಿ ಶಿಷ್ಯರಿಗೆ ಬರೆದ ಪತ್ರದ ಸಾಲುಗಳಿವು.ಈ ಪತ್ರದ ಕೆಲವು ಸಾಲುಗಳು ಇಂದಿಗೂ ನಮ್ಮ ನಡುವಿನ ತಲೆ ಕೆಟ್ಟ ಸಮಸ್ಯೆಗಳ ಅರಿವಿದ್ದೆ ಅವರು ಅಂದೇ ಹೇಳಿದ್ದರೇನೋ ಅನ್ನುವಂತಿವೆ.

“ಜಪಾನೀಯರ ಪಾಲಿಗಂತೂ ಭಾರತವೆಂದರೆ ಇನ್ನೂ ಎಲ್ಲ ಶ್ರೇಷ್ಠ-ಉನ್ನತ ವಿಚಾರಗಳ ಸ್ವಪ್ನ ಲೋಕವೇ ಆಗಿದೆ.ಆದರೆ ನೀವು?ನೀವೆಂಥವರು?… ಜೀವನವಿಡೀ ಕಾಡು ಹರಟೆಯಲ್ಲೇ ಮುಳುಗಿರುವವರು.ಕೇವಲ ಹರಟೆ ಮಲ್ಲರು.ಇನ್ನೆಂಥವರು ನೀವು? ಬನ್ನಿ ಇಲ್ಲಿಗೆ.ಈ ಜನರನ್ನು ನೋಡಿ ಬಳಿಕ ನಾಚಿಕೆಯಿಂದ ಮುಖ ಮುಚ್ಚಿ ಕುಳಿತುಕೊಳ್ಳಿ.

ಸಮುದ್ರ ದಾಟಿದರೆ ನಿಮ್ಮ ಜಾತಿ ಕೆಟ್ಟು ಹೋಗುತ್ತದಲ್ಲವೇ…!? ಬುದ್ದಿ ಕೆಟ್ಟ ಅರಳು ಮರಳು ಜನಾಂಗ…! ಶತಶತಮಾನಗಳಿಂದಲೂ ಮೂಢನಂಬಿಕೆ-ಕಂದಾಚಾರಗಳ ಕಂತೆಗಳನ್ನೇ ತಲೆಯ ಮೇಲೆ ಹೊತ್ತು ಕುಳಿತಿರುವವರು…!

ಈ ಆಹಾರವನ್ನು ಮುಟ್ಟಬಹುದೇ? ಆ ಆಹಾರವನ್ನು ಮುಟ್ಟಬಹುದೇ? ಎಂಬ ಬಹಳ ದೊಡ್ಡ ವಿಮರ್ಶೆಯಲ್ಲಿ ನೂರಾರು ವರ್ಷಗಳಿಂದ ಮುಳುಗಿದ್ದೀರಲ್ಲಾ-ಎಂಥ ಮನುಷರು ನೀವೆಲ್ಲ!

ಮತ್ತಷ್ಟು ಓದು »

9
ಜನ

ಸಂಸ್ಕೃತಿ ಸಂಕಥನ – 17 ಜಾತಿ, ರಿಲಿಜನ್ ಹಾಗೂ ಸೆಕ್ಯುಲರಿಸಂ ಭಗವದ್ಗೀತೆ ವಿವಾದ

-ರಮಾನಂದ ಐನಕೈ

ಕೇವಲ ಭಗವದ್ಗೀತೆ ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಪ್ರ ದಾಯಗಳಿಗೆ ಸಂಬಂಧಪಟ್ಟಂತೆ ಅನೇಕ ಸಂಗತಿ ಗಳು ವಿವಾದಕ್ಕೆ ಕಾರಣವಾಗುತ್ತಿವೆ. ಹಾಗೂ ಇವೆಲ್ಲ ರಾಜಕೀಯ ಸ್ವರೂಪ ಪಡೆದು ಸೆಕ್ಯುಲರ್ ಪ್ರಭುತ್ವ ಸಂದಿಗ್ಧದಲ್ಲಿ ಸಿಲುಕುವಂತಾಗುತ್ತಿದೆ. ಹಾಗಾದರೆ ಈ ದೇಶದಲ್ಲಿ ಏನು ನಡೆಯುತ್ತಿದೆ?

ಭಗವದ್ಗೀತೆ ವಿವಾದಕ್ಕೆ ಸಂಬಂಧಪಟ್ಟಂತೆ ಪತ್ರಿಕೆಗಳಲ್ಲಿ ದಿನನಿತ್ಯ ಹೇಳಿಕೆಗಳು ಬರುತ್ತಲಿವೆ. ಈ ಕುರಿತು ಒಂದು ಅಭಿಪ್ರಾಯ ರೂಪಿಸುವ ಪ್ರಯತ್ನ ನಡೆಯುತ್ತಿದೆ. ಅಂದರೆ ಭಾರತೀಯ ಸಂಸ್ಕೃತಿಯ ಕುರಿತಾದ ಪರಸ್ಪರ ತಪ್ಪು ತಿಳುವಳಿಕೆ ಗಾಗಿ ಭಗವದ್ಗೀತೆಯನ್ನು ಬಹಿರಂಗವಾಗಿ ಹರಾಜಿಗೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಗೀತೆಯಿಂದ ಶೂದ್ರರಿಗೆ ಹಾಗೂ ದಲಿತರಿಗೆ ಭಾರೀ ಅಪಾಯವಿದೆ ಎಂದು ಭಯ ಹುಟ್ಟಿಸಲು ಪ್ರಯತ್ನಿ ಸುತ್ತಿದ್ದಾರೆ. ಇಲ್ಲಿ ಒಂದನ್ನು ಗಮನಿಸಬೇಕು. ಇವೆಲ್ಲ ಸಾಮಾನ್ಯ ಜನರ ಅಥವಾ ಸಮೂಹದ ಅಭಿಪ್ರಾಯಗಳಲ್ಲ. ಆಯಾ ಸಮುದಾಯದ ವಕ್ತಾರರು ಅಥವಾ ಚಿಂತಕರೆನಿಸಿಕೊಂಡವರು ಮಾಧ್ಯಮಗಳ ಮೂಲಕ ಈ ರೀತಿ ಧರ್ಮಯುದ್ಧ ಮಾಡುತ್ತಿದ್ದಾರೆ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತಾಗಿದೆ ಪರಿಸ್ಥಿತಿ. ಈ ಪರಿ ಅರೆಬರೆ ಚಿಂತಕರನ್ನು ನೋಡಿದರೆ ಒಂದು ದಿನ ದೇವರ ವಿಗ್ರಹಗಳನ್ನು ಕಿತ್ತು ಕೈಯಲ್ಲಿ ಆಯುಧ ವಾಗಿ ಹಿಡಿದು ಹೊಡೆದುಕೊಂಡರೆ ಅಚ್ಚರಿಯೇ ನಿಲ್ಲ.

ಈ ಪರಿಸ್ಥಿತಿಗೆ ಮುಖ್ಯ ಕಾರಣವೆಂದರೆ ಭಾರತೀಯ ಸಂಸ್ಕೃತಿಯನ್ನು ರಿಲಿಜನ್ ಎಂದು ವ್ಯಾಖ್ಯಾನಿಸಿಕೊಳ್ಳುತ್ತಿರುವುದು. ಯುರೋಪಿ ಯನ್ನರು ಇಡೀ ಭಾರತೀಯ ಸಂಸ್ಕೃತಿಯನ್ನು ಸೇರಿಸಿ ಹಿಂದೂಯಿಸಂ ಎಂದು ಕರೆದು ಅದಕ್ಕೆ ರಿಲಿ ಜನ್ನಿನ ಲಕ್ಷಣ ಸೇರಿಸಲು ಪ್ರಯತ್ನಿಸಿದರು. ಆದ್ದರಿಂದಲೇ ನಾವಿಂದು ಹಿಂದೂಯಿಸಂ ಅಂದರೆ ಇಸ್ಲಾಂ ಹಾಗೂ ಕ್ರಿಶ್ಚಿಯಾನಿಟಿ ಇದ್ದಹಾಗೆ ಒಂದು ಅಖಂಡವಾದ ರಿಲಿಜನ್ ಎಂದು ತಿಳಿದುಕೊಂಡಿ ದ್ದೇವೆ. ಹಾಗಾಗಿ ಹಿಂದೂ ಸಂಪ್ರದಾಯಗಳನ್ನೆಲ್ಲ ರಿಲೀಜಿಯಸ್ ಚಟುವಟಿಕೆಯೆಂಬಂತೆ ಅತ್ಯಂತ ಗುಮಾನಿಯಿಂದ ನೋಡಲಾಗುತ್ತದೆ. ರಿಲಿಜೀ ಯಸ್ ಚಟುವಟಿಕೆಗಳ ಸಾರ್ವಜನೀಕರಣವನ್ನು ಸೆಕ್ಯುಲರ್ ನೀತಿ ಒಪ್ಪುವುದಿಲ್ಲ. ಅದಕ್ಕಾಗಿ ಎಡ ಪಂಥೀಯ ಚಿಂತಕರಿಗೆ ಇಂಥ ಸಾಂಪ್ರದಾಯಿಕ ಆಚರಣೆಗಳೆಲ್ಲ ನಿಷಿದ್ಧ ಹಾಗೂ ಮೌಢ್ಯ.

ಮತ್ತಷ್ಟು ಓದು »

28
ಡಿಸೆ

“ಯೂನಿವರ್ಸಲ್ ಬ್ರದರ್‌ಹುಡ್” ಬರೀ ಬೂಟಾಟಿಕೆಯೇ ?

-ಸಾಗರ್ ಮೈಸೂರು

ಸ್ವಾಮೀ,
ಯಾಕೆ ಮುಗ್ಧ ಜನರ ತಲೆಯಲ್ಲಿ ವಿಷದ ಬೀಜ ಬಿತ್ತುತ್ತಿದ್ದೀರಿ? ನೀಮಗೂ ಭಯೋತ್ಪಾದಕರನ್ನು ಹುಟ್ಟು ಹಾಕುವ ಮುಲ್ಲಾ ಗಳಿಗೂ ಅಥವಾ ಭಾಷಾ ದುರಭಿಮಾನಿಗಳಿಗೂ ಏನು ವ್ಯತ್ಯಾಸ? ಸಾಮರಸ್ಯದಿಂದ ಬದುಕುವ ಬಗೆ ಹೇಗೆಂದು ತಿಳಿದಿದ್ದರೆ ಬರೆಯಿರಿ. ಇಲ್ಲಾಂದ್ರೆ ಸುಮ್ಮನಿರಿ. ನಿಮ್ಮನ್ತವರನ್ತು ಬರೆದು , ಬೆಂಕಿ ಹಚ್ಚಿ ತಣ್ಣಗೆ ಕುಳಿತು ಚಂದ ನೋಡುತ್ತಿರಿ. ಅಮಾಯಕರು ನಿಮ್ಮಿಂದ ಪ್ರೇರಿತರಾಗಿ ಯಾರದೋ ಮೈಮೇಲೆ ಬಿದ್ದು ಸಮಾಜದ ಶಾಂತಿ ಕದದುತ್ತಾರೆ ಅಥವಾ ಜೀವ ಬಿಡುತ್ತಾರೆ. ದುರಭಿಮಾನ, ಭಯೋತ್ಪಾದನೆ ಹುಟ್ಟುವುದು ಮೊದಲು ಮನಸ್ಸಿನಲ್ಲಿ. ಪ್ರೇರಿತರದವರು ಕೆಲವರು ಚಾಕು ಬಳಸುತ್ತಾರೆ, ಕೆಲವರು ಬಾಂಬು ಹಾಕುತ್ತಾರೆ, ಅವರವರ ಯೋಗ್ಯತೆಗೆ ತಕ್ಕಂತೆ. ನಿಮ್ಮಂಥವರು ಚಂದ ನೋಡುತ್ತೀರಿ.
“ಬೆಂಗಳೂರಿನ ಜುಟ್ಟು ಈಗಾಗಲೇ ರೆಡ್ಡಿಗಳ ಕೈಯ್ಯಿಗೆ ಕೊಟ್ಟಾಗಿದೆ” ಎಂದು ಮಹಾನ್ ಮೇಧಾವಿಯೊಬ್ಬರು (ಹಾಗೆಂದು ತಿಳಿದ) ಹೇಳಿದಾಗ ಅದ್ಯಾವನೋ ‘ವಿಷ್ಣು’ ಎಂಬುವವ ನೀಡಿದ್ದ ‘ಪ್ರತಿಕ್ರಿಯೆ’ ಅದು! ಹೌದಾ?! ಅದು ನಿಜಾನಾ? ನಮ್ಮ ಬೆಂಗಳೂರನ್ನ ನಿಜವಾಗಿಯೂ ‘ಅನ್ಯರು’, ‘ಕನ್ನಡೇತರರು’ ಆಳುತ್ತಿದ್ದಾರಾ ಎಂಬ ಪ್ರಶ್ನೆಯನ್ನ ನಮಗೆ ನಾವೇ ಹಾಕಿಕೊಂಡು serious ಆಗಿ ‘ಪರೀಕ್ಷಿಸಲು’ ಹೊರಟರೆ ಆ ‘ವಿಷ್ಣು’ ಎಂಬುವವನ ‘ಅಡ್ರಸ್ಸ್ ಹುಡುಕು’ವ ಮನಸ್ಸಾಗುತ್ತದೆ! ಅವನಿಗೊಂದು ವಿಶೇಷವಾದ ‘ದೊಣ್ಣೆ’ ರೆಡಿಮಾಡಿಸುವ ಕನಸು ಮೂಡುತ್ತದೆ!! ಆ ಮೇಧಾವಿ ಎಂಬ ಪತ್ರಕರ್ತ ಯಾವಾಗ ನೋಡಿದರೂ ‘ಭಾರತ’, ‘ಭಾರತೀಯತೆ’ ಎಂದು ಕಿರುಚಾಡುವವ. ಅಂಥವನೇ “ಪರಭಾಷಿಕರನ್ನ ಮಟ್ಟ ಹಾಕದಿದ್ದರೆ ಅಪಾಯ ತಪ್ಪಿದ್ದಲ್ಲ” ಎಂಬ ಸತ್ಯವನ್ನ ಕಂಡುಕೊಂಡಿದ್ದಾನೆ ಎಂದರೆ, ಅದರ ಮಹತ್ವವನ್ನ ನೀವೇ ಅರ್ಥಮಾಡಿಕೊಳ್ಳಿ.

ಮತ್ತಷ್ಟು ಓದು »

27
ಡಿಸೆ

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಉತ್ತಮ ಭವಿಷ್ಯ ಇಲ್ಲವೇ?

-ರಾವ್ ಎವಿಜಿ 

ಇಲ್ಲ ಎಂದು ಬಹುಮಂದಿ ನಂಬಿರುವುದರಿಂದ ತಮ್ಮ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಹಿಂಜರಿಯುವ ಜನ್ಮದಾತೃಗಳ ಸಂಖ್ಯೆ ಹೆಚ್ಚುತ್ತಿದೆ. ತತ್ಪರಿಣಾಮವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಶಾಲೆಗಳು, ವಿಶೇಷತಃ ಸರ್ಕಾರೀ ಶಾಲೆಗಳು ದುಸ್ಥಿತಿಯಲ್ಲಿವೆ. ಈ ಪರಿಸ್ಥಿತಿಗೆ ಕಾರಣ?

ನಾನು ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಯಲ್ಲಿ ಓದಿದವನು. ಪಿ ಯು ಸಿ ಮತ್ತು ಆನಂತರದ ಶಿಕ್ಷಣ ಪಡೆದದ್ದು ಇಂಗ್ಲಿಷ್ ಮಾಧ್ಯಮದಲ್ಲಿ. ಆಗ ಕೊಡಗಿನಲ್ಲಿ ಎಲ್ಲರೂ ಶಿಕ್ಷಣ ಪಡೆಯುತ್ತಿದ್ದದ್ದೇ ಹೀಗೆ. ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂಬ ಹಂಬಲವೇ ಆಗಲಿ, ಖಾಸಗಿ ಶಾಲೆಗಳು ಸರ್ಕಾರೀ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತವೆ ಎಂಬ ನಂಬಿಕೆಯೇ ಆಗಲಿ ಅಂದಿನ ಜನ್ಮದಾತೃಗಳಿಗೆ ಇರಲಿಲ್ಲ. ವಾಸ್ತವವಾಗಿ, ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮ, ಪಿ ಯು ಸಿ ಮತ್ತು ಆನಂತರದ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಆಗ ಅಲ್ಲಿ ಇರಲೇ ಇಲ್ಲ. (ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಮೈಸೂರು, ಮಂಗಳೂರು, ಬೆಂಗಳೂರುಗಳಂಥ ದೊಡ್ಡ ನಗರಗಳಲ್ಲಿ ಲಭ್ಯವಿತ್ತಂತೆ) ನನಗೆ ತಿಳಿದ ಮಟ್ಟಿಗೆ ಕೊಡಗಿನಲ್ಲಿ ಆಗ ಇದ್ದದ್ದು ಎರಡೋ ಮೂರೋ ಕ್ರಿಶ್ಚಿಯನ್ ಆಡಳಿತದ ಖಾಸಗಿ ಪ್ರೌಢಶಲೆಗಳು. ಖಾಸಗಿ ಕಾಲೇಜುಗಳು ಇರಲೇ ಇಲ್ಲ.  ಈ ಪದ್ಧತಿಯಲ್ಲಿ ಶಿಕ್ಷಣ ಪಡೆದ ನಾನು ಏನಾಗ ಬಯಸಿದ್ದೆನೋ ಅದೇ ಆದೆ. ಈ ಪದ್ಧತಿಯಲ್ಲಿ ಶಿಕ್ಷಣ ಪಡೆದವರು ಎಂಜಿನಿಯರುಗಳೂ ಡಾಕ್ಟರುಗಳೂ ಆಗುತ್ತಿದ್ದರು. ಎಂದೇ, ೧ ನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಆವಶ್ಯಕತೆ ಇದೆ ಎಂದು ಯಾರೂ ತಿಳಿದಿರಲಿಲ್ಲ. ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಗಳಲ್ಲಿ ವ್ಯಾಸಂಗ ಮಾಡಿದ್ದರಿಂದ ಯಾರ ಭವಿಷ್ಯವೂ ಅಂದು ಹಾಳಾದದ್ದು ನನಗೆ ತಿಳಿದಿಲ್ಲ. ಆಗ ಏಕೆ ಹಾಗಿತ್ತು?

ಮತ್ತಷ್ಟು ಓದು »

26
ಡಿಸೆ

ನನ್ನ ಬದುಕು ಪರಿವರ್ತಿಸಿದ ಬಂಗಾರಪ್ಪ

-ಬನವಾಸಿ ಸೋಮಶೇಖರ್, ಮಂಗಳೂರು
“1992 ನೇ ಇಸ್ವಿ.ನಾನು ಆಗಷ್ಟೇ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ಮುಗಿಸಿದ್ದೆ.ಫಲಿತಾಂಶ ಇನ್ನೂ ಬಂದಿರಲಿಲ್ಲ.ಅತ್ಯಂತ ಕಡು ಬಡತನದ ಕುಟುಂಬ ನಮ್ಮದು.ಒಂದು ಹೊತ್ತಿನ ತುತ್ತಿಗೂ ತತ್ವಾರ ಪಡುವಂತ ದಯನೀಯ ಮತ್ತು ಶೋಚನೀಯ ಸ್ಥಿತಿ.ತಂದೆ ನಾ ಮಗುವಾಗಿರುವಾಗಲೇ ಗತಿಸಿದ್ದರು.ಮೂರು ಜನ ಅಣ್ಣಂದಿರು, ಒಬ್ಬಳು ಸಹೋದರಿ.ದೊಡ್ಡಣ್ಣ 10-11ರ ಪ್ರಾಯದಲ್ಲಿಯೇ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದ.ಅಮ್ಮ ಅವನಿಗಾಗಿ ಹುಡುಕಾಡಿ ಹುಡುಕಾಡಿ ಹೈರಾಣಾಗಿದ್ದರು.ಉಳಿದ ಇಬ್ಬರು ಅಣ್ಣಂದಿರಲ್ಲಿ ಒಬ್ಬ ಮಾತ್ರ ಅತ್ಯಂತ ಶ್ರಮಜೀವಿ.ಇಬ್ಬರೂ ಕೂಲಿ ಕೆಲಸ ಮಾಡಿ ತುತ್ತಿನ ಚೀಲ ತುಂಬಿಸುತ್ತಿದ್ದರು. ಅನ್ನಕ್ಕಾಗಿ ಹಾತೊರೆಯುವ ಪರಿಸ್ಥಿತಿ ಅದಾಗಿತ್ತು. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ,ಅಣ್ಣಂದಿರೊಂದಿಗೆ ಜಗಳವಾಡಿದ್ದು ಇಂದಿಗೂ ನೆನಪಿದೆ. ಕೊನೆಯ ಮಗನಾದ ನನ್ನನ್ನು ಓದಿಸಬೇಕೆಂಬುದು ಅಮ್ಮನ ಮಹದಾಸೆ ಅಣ್ಣಂದಿರ ಹಿರಿಯಾಸೆಯಾಗಿತ್ತು.
ನಾನಾದರೋ ಮನೆಯ ದೈನ್ಯೇಸಿ ಸ್ಥಿತಿಯನ್ನು ನೋಡಿ ಮನೆ ಬಿಟ್ಟು ಹೋಗಿ ಏನಾದರೂ ಕೆಲಸ ಮಾಡಿ ಮನೆಗೆ ಆಸರೆಯೊದಗಿಸಬೇಕೆಂದು ಹಾತೊರೆದು ಮನೆ ತೊರೆದು ಬೆಂಗಳೂರಿನತ್ತ ಮುಖ ಮಾಡಿಯೇ ಬಿಟ್ಟಿದ್ದೆ. ಕೈಯಲ್ಲಿ  ಸಂಗ್ರಹಿಸಿಟ್ಟಿದ್ದ ಇಪ್ಪತ್ತು ರೂಪಾಯಿ ಇತ್ತಷ್ಟೇ.ಯಾವ್ಯಾವುದೋ ಬಸ್ ಹತ್ತಿ ನಿರ್ವಾಹಕನ ಕಣ್ ತಪ್ಪಿಸಿ ಟಿಕೇಟು ತೆಗೆಸದೇ ಬೆಂಗಳೂರಿಗೆ ಬಂದಿಳಿದಿದ್ದೆ.ಆಗ ನಾಡಿನ ದೊರೆಯಾಗಿದ್ದವರೇ ನಮ್ಮ ಸಾರೆಕೊಪ್ಪ ಬಂಗಾರಪ್ಪನವರು.ಅವರು ನಮ್ಮ ಪಕ್ಕದ ತಾಲೂಕಿನವರಾಗಿದ್ದರಿಂದಲೂ ನಮ್ಮೂರಲ್ಲಿ ಅವರ ಬಗ್ಗೆ ಅಪಾರ ಜನಪ್ರೀಯತೆ ಇದ್ದುದರಿಂದಲೂ ಅವರಲ್ಲಿಗೆ ಹೋಗಿ ಏನಾದರೂ ಸಹಾಯ ಪಡೆದು ಬೆಂಗಳೂರಲ್ಲಿ ಕೆಲಸ ಮಾಡಬಹುದೆಂದು ಯೋಚಿಸಿ ಸೊರಬದವನೆಂದು ಸುಳ್ಳು ಹೇಳಿ ಮುಖ್ಯಮಂತ್ರಿಗಳ ಗೃಹ ಕಛೇರಿಯನ್ನು ಹರಸಾಹಸ ಮಾಡಿ ಪ್ರವೇಶಿಸಿದ್ದೆ.ಸಾವಿರಾರು ಸಾರ್ವಜನಿಕರು ಅಹವಾಲು ಸಲ್ಲಿಸಲು ಸರತಿಯಲ್ಲಿ ನಿಂತು ಕಾಯುತ್ತಿದ್ದರು.ನಾನೂ ಹಾಗೆಯೇ ಮಾಡಿದೆ. ಮತ್ತಷ್ಟು ಓದು »
26
ಡಿಸೆ

ಸಂಸ್ಕೃತಿ ಸಂಕಥನ 15 -ಭಾರತೀಯ ಪ್ರಭುತ್ವದ ಸೆಕ್ಯುಲರ್ ಗೊಂದಲಗಳು

ರಮಾನಂದ ಐನಕೈ

ಬಹುಸಂಸ್ಕೃತಿ ಹಾಗೂ ರಿಲಿಜನ್  ಎರಡೂ ಒಟ್ಟಿಗೇ ಬಾಳಬೇಕಾದ ಭಾರತದಂತಹ ದೇಶದಲ್ಲಿ ಪ್ರಭುತ್ವ  ತಟಸ್ಥವಾಗಿರಲು ಸಾಧ್ಯವೇ? ಏಕೆಂದರೆ ಇಲ್ಲಿ ನಂಬಿಕೆಯಲ್ಲಿ ಭಿನ್ನತೆ ಇದೆ. ಇಂಥಲ್ಲಿ ಸೆಕ್ಯುಲರ್ ಪ್ರಭುತ್ವ ಯಾರಿಗೆ ನ್ಯಾಯ ನೀಡುತ್ತದೆ? ಒಂದಕ್ಕೆ ನೀಡಿದ ನ್ಯಾಯ ಇನ್ನೊಂದಕ್ಕೆ ಅನ್ಯಾಯವಾಗಲು ಸಾಧ್ಯ. ಏಕೆಂದರೆ ರಿಲಿಜನ್ನವರು ಲೋಕಜ್ಞಾನದಲ್ಲಿ ಬದುಕುತ್ತಾರೆ. ಸಂಸ್ಕೃತಿಯಲ್ಲಿ ಕ್ರಿಯಾಜ್ಞಾನ ಇರುತ್ತದೆ. ಸೆಕ್ಯುಲರ್ ನೀತಿ ಲೋಕಜ್ಞಾನದಲ್ಲಿ ಉದಯಿಸಿದ್ದು. ಹಾಗಾಗಿ ಕ್ರಿಯಾಜ್ಞಾನದ ಸೂಕ್ಷ್ಮತೆಗೆ ಸ್ಪಂದಿಸುವಲ್ಲಿ ಸೋಲುವ ಸಾಧ್ಯತೆ ಇದೆ. ಹಾಗಾಗಿ ಸೆಕ್ಯುಲರ್ ನೀತಿಯನ್ನು ಭಾರತೀಯ ಸಂದರ್ಭದಲ್ಲಿ ಪುನರ್ಪರಿಶೀಲನೆ ಮಾಡುವ ಅಗತ್ಯ ಇದೆ.

ಭಾರತ ಸರಕಾರದ ಸೆಕ್ಯುಲರ್ ನೀತಿಯ ಸುತ್ತ ಹಲವು ಸಂದಿಗ್ಧಗಳಿವೆ. ನಮ್ಮ ಪ್ರಭುತ್ವಕ್ಕೆ ಈ ಪರಿಸ್ಥಿತಿ ಎದುರಾಗಲು ಕಾರಣವೇನು? ಸೆಕ್ಯುಲರ್ ಎಂಬ ಸಮಾನತೆಯ ಮಂತ್ರ ನಮ್ಮಲ್ಲಿ ಯಾವ ಫಲಿತಾಂಶ ನೀಡುತ್ತಿದೆ?

ಮತ್ತಷ್ಟು ಓದು »