ನಮ್ಮ ಯುವಜನತೆಯ ಯೋಚನೆಯ ದಿಕ್ಕು…….???
-ಅರೆಹೊಳೆ ಸದಾಶಿವರಾವ್
ಪ್ರದಕ್ಷಿಣೆ ಎಂಬ ಅಂತರ್ಜಾಲ ಪತ್ರಿಕೆಯೊಂದನ್ನು ಇತ್ತೀಚೆಗೆ ಆರಂಭಿಸಿದ ನಂತರದ ಕೆಲವು ಅನುಭವಗಳು ಒಮ್ಮೊಮ್ಮೆ ಮನಸ್ಸಿಗೆ ತುಂಬಾ ಯೋಚನೆಯ ಸರಕನ್ನು ಒದಗಿಸುತ್ತವೆ. ಇದರಲ್ಲಿ ಮುಖ್ಯವಾದದ್ದು ನಮ್ಮ ಇಂದಿನ ಯುವ ಜನತೆಯ ಆಲೋಚನೆಗಳು.
ಇದಕ್ಕೆ ಪೂರ್ವಭಾವಿಯಾಗಿ ಒಂದೆರಡು ಮಾತುಗಳನ್ನು ನಿಮ್ಮೊಡನೆ ಹೇಳಿಕೊಳ್ಳಲೇ ಬೇಕು. ಅದು ನಮ್ಮ ಬಾಲ್ಯದ ದಿನಗಳು. ಕನಸುಗಳು ಮತ್ತು ಕನಸುಗಳು ಮಾತ್ರವೇ ತುಂಬಿಕೊಂಡಿದ್ದ ಕಣ್ಣುಗಳಿಗೆ ಮನೆಯ ಬಡತನ, ಬೆನ್ನ ಹಿಂದಿರುವ ಸಹೋದರತೆಯ ಬಂಧಗಳು ಅಥವಾ ಆ ಮೂಲಕ ಬಂದೊದಗಿದ ಜವಾಬ್ದಾರಿಗಳು……ಇತ್ಯಾದಿಗಳಾವುವೂ ಹೊರೆ ಅನಿಸುತ್ತಿರಲಿಲ್ಲ. ಅದಕ್ಕೆ ಕಾರಣಗಳು ನಾವು ಬಾಲ್ಯವನ್ನು ಅನುಭವಿಸುತ್ತಿದ್ದ ರೀತಿ. ಮನೆಯಂಗಣದಲ್ಲಿಯೋ, ತೋಟದಲ್ಲಿಯೋ, ಗದ್ದೆಯಲ್ಲಿಯೋ ನಮ್ಮದೇ ಯಕ್ಷಗಾನ, ಪಾಠ ಪುಸ್ತಕಗಳ ನಡುವೆ ಕದ್ದು ಓದುತ್ತಿದ್ದ ಕಾದಂಬರಿ, ಸುಧಾ, ತರಂಗ, ಪ್ರಜಾಮತದಂತಹ ಪತ್ರಕೆಗಳು, ಕಥೆ ಪುಸ್ತಕಗಳು……ಇತ್ಯಾದಿಗಳು, ಮೈಲುಗಟ್ಟಳೆ ದೂರ ನಡೆಯುತ್ತಿದ್ದ ಯಕ್ಷಗಾನಕ್ಕೂ ಕಾಲನಡಿಗೆಯಲ್ಲಿಯೇ ಹೋಗಿ ರಾತ್ರಿ ಇಡೀ ಅರ್ದಂಬರ್ಧ ನೋಡುತ್ತಿದ್ದ ಯಕ್ಷಗಾನ-ನಾಟಕಗಳು, ಶಾಲೆಯಲ್ಲಿ ಪ್ರತೀ ಶನಿವಾರದಂದು ನಡೆಯುತ್ತಿದ್ದ ನಮ್ಮದೇ ಪ್ರತಿಭಾಪ್ರದರ್ಶನಗಳು, ಪ್ರತೀ ಶುಕ್ರವಾರ ಸಂಜೆ ಶಾಲೆಯಲ್ಲಿ ನಡೆಯುತ್ತಿದ್ದ ಭಜನೆ……ಇತ್ಯಾದಿಗಳೆಲ್ಲಾ ನಮಗೆ ಬದುಕು ಎಂದರೆ ಏನು ಎಂಬುದನ್ನು ತೋರಿಸುವಲ್ಲಿ ಸಹಾಯಕವಾಗುತ್ತಿದ್ದುವು. ಇಂತಹ ಪರಿಸರ ನಮ್ಮನ್ನು ಸಾಕಷ್ಟು ಉಲ್ಲಾಸದಿಂದಿರುವಂತೆ ನೋಡಿಕೊಳ್ಳುತ್ತಿದ್ದುವು. ಹಾಗೆಂದೇ ಸಹಜವಾಗಿ ಮುಂದೆ ಸಾಹಿತ್ಯ, ಕಲೆಗಳತ್ತ ನಮ್ಮ ಆಸಕ್ತಿ ಬೆಳೆಯುವಲ್ಲಿ ಇವುಗಳು ಸಹಾಯಕವಾಗುತ್ತಿದ್ದುವು.
ಈ ಎಲ್ಲಾ ಹಿನ್ನೆಲೆಗಳೂ ಮುಂದೆ ನಮ್ಮ ಪ್ರತೀ ಕೃತಿಯಲ್ಲೂ ಸಹಜವಾಗಿ ಆಶಾವಾದವನ್ನು ಬಿಂಬಿಸುತ್ತಿದ್ದುವು. ಅದಕ್ಕೆಂದೇ ಅಂದಿನ ಆರಂಭದ ಕವಿಗಳು, ಕತೆಗಾರರು ಅಥವಾ ಚಿಂತಕರು ಆಶಾವಾದದ ಮಾತಾಡುತ್ತಿದ್ದರು, ನಮ್ಮ ಸುತ್ತ ಮುತ್ತಲಿನ ಪ್ರಕೃತಿಗಳೇ ಎಲ್ಲದಕ್ಕೂ ಸಮೃದ್ಧ ವಸ್ತುವಾಗಿ, ಪ್ರತೀ ಕೆಲಸದಲ್ಲೂ…ಅದು ಸಾಹಿತ್ಯವಿರಲಿ, ಬದುಕಿರಲಿ ಒಂದು ಉಲ್ಲಾಸದ ಮತ್ತು ಉತ್ಸಾಹದ ವಾತಾವರಣಕ್ಕೆ ಕಾರಣವಾಗುತ್ತಿದ್ದುವು.
ಈ ವೆಬ್ಸೈಟ್ ನಲ್ಲಿ ಕನ್ನಡಕ್ಕಿಲ್ಲ ‘ಆಧಾರ’
ಪಾಣಿಯಿಂದ ಹಿಡಿದು ಪೋಸ್ಟಾಫೀಸಿನ ಕಡತದವರೆಗೆ ಎಲ್ಲವೂ ನಾಡಭಾಷೆ ಕನ್ನಡದಲ್ಲಿ ಸಿಗುತ್ತಿರುವಾಗ ರಾಜ್ಯ ಸರ್ಕಾರವೇ ಸ್ಥಾಪಿಸಿದ ಮಿಂಬಲೆ(website) http://www.karnataka.gov.in ಯೆಲ್ಲಾ ಇಂಗ್ಲೀಷ್ ಮಯ. .ಹೋಗುತ್ತಿದ್ದ ಹಾಗೆಯೇ ಕನ್ನಡ/ಇಂಗ್ಲೀಷ ಎಂಬ ಆಯ್ಕೆ ಸಿಗುತ್ತದೆ. ನೋಡೋಣ ಎಂದು ಕುತೂಹಲಕ್ಕೆ ಕನ್ನಡವನ್ನು ಆಯ್ಕೆ ಮಾಡಿಕೊಂಡು ಒಳನಡೆದಾಗ ನನಗೆ ಗೋಚರಿಸಿ ಬೇಸರಿಸಿದ್ದನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
“ಆಧಾರ್” ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ. ಭಾರತದ ಪ್ರತಿಯೊಬ್ಬ ನಾಗರೀಕನಿಗೂ ಪ್ರತ್ಯೇಕ ಗುರುತಿನ ಚೀಟಿ ನೀಡಬೇಕೆಂಬ ಮಹೋದ್ದೇಶದ್ದು. ಅದು ಈಗಾಗಲೇ ಅಂಚೆ ಕಛೇರಿಗಳ ಮೂಲಕ ಚಾಲನೆಗೆ ಬಂದಿರುವುದು ನಿಮಗೆಲ್ಲಾ ತಿಳಿದೇ ಇದೆ. ಅದೇ ಆಧಾರ ನ ಬಗ್ಗೆ ಕರ್ನಾಟಕದ ಮಿಂಬಲೆಯಲ್ಲಿ ಮಾಹಿತಿ ಪಡೆಯಲು ಹೋದಾಗ ನನಗಾಗಿದ್ದು ಆಘಾತ.
ಅದರ ಹೆಸರೊಂದೇ ನಮ್ಮ ಆಧಾರ್ ಅಂತ. ಬಲಗಡೆ ಬರುವಂತ ಚಿತ್ರ ಪ್ರದರ್ಶನ(Slide Show) ದಲ್ಲಿ ಮಾತ್ರ ನಿಮಗೆ ಕನ್ನಡ ಕಾಣಸಿಗುತ್ತದೆ ಅಷ್ಟೆ!!!http://www.karnataka.gov.in/nammaaadhaar/home.html..
ಅದೂ ೮ ಚಾಯಾ ಚಿತ್ರಗಳಷ್ಟೆ.. ಆಧಾರ ಕಾರ್ಡನು ಶಾಲೆಗೆ ಸೇರಿಸಲು, ವೃದ್ದಾಪ್ಯ ವೇತನ ಪಡೆಯಲು, ಉದ್ಯೋಗ ಪಡೆಯಲು, ಬ್ಯಾಂಕ್ ಖಾತೆ ತೆರೆಯಲು,ಸರ್ಕಾರದ ಸೌಲಭ್ಯಗಳನ್ನು ಪಡೆಯಲು, ಆರೋಗ್ಯ ಸೇವೆಗಳ ಲಾಭ ಪಡೆಯಲು, ಅಂತ ಅದಕ್ಕೆ ಸಂಬಂಧಿಸಿದಂತೆ ಇರುವ ಚಿತ್ರಗಳನ್ನು ಹಾಕಲಾಗಿದೆ. ಅದರಲ್ಲಿ “ಆಧಾರ್” ಪಡೆಯಲು ಏನೇನು ದಾಖಲೆ ಸಲ್ಲಿಸಬೇಕು ಅಂತ ಹೇಳಲಾಗಿಲ್ಲ. ವಿಳಾಸದ ದಾಖಲೆಗಾಗಿ ಸೂಚಿಸಿದ ೨೯ ದಾಖಲೆಗಳ ಮೂಲಪ್ರತಿಯನ್ನು , ಗುರುತಿನ ದಾಖಲೆಗಾಗಿ ಸೂಚಿಸಿದ ದಾಖಲೆಗಾಗಿ ೧೭ರಲ್ಲಿ ಒಂದು , ಹುಟ್ಟು ದಿನಾಂಕದ ದಾಖಲೆಗಾಗಿ ೪ ದಾಖಲೆಗಳಲ್ಲಿ ಒಂದರ ಮೂಲ ಪ್ರತಿ ಸಲ್ಲಿಸಬೇಕು. !! ನೋದಣಿಯ ನಂತರ ಅವುಗಳನ್ನು ಹಿಂತಿರುಗಿಸಲಾಗುವುದು ಅಂತ ಇದೆ. ಆ ೨೯,೧೭,೪ ದಾಖಲೆಗಳು ಏನು . ಎತ್ತ ಎಂಬುದರ ಬಗ್ಗೆ ಮಾಹಿತಿಯಿಲ್ಲ.. ಅದನ್ನು ಆಧಾರ್ ನೊಂದಣಿ ಕೇಂದ್ರದಲ್ಲಿ ಪಡೆಯಬೇಕು ಆಧಾರ್ ಅನ್ನು ಎಲ್ಲಿ ಪಡೆಯಬಹುದು ಎಂಬ ಸ್ಲೈಡಲ್ಲಿ ಜಿಲ್ಲಾಡಳಿತದಿಂದ ಸ್ಥಾಪಿಸಲ್ಪಟ್ಟ ಆಧಾರ್ ನೊಂದಣಿ ಕೇಂದ್ರಗಳು ಅಂತ ಹಾಕಿದ್ದಾರೆ.. ನಮ್ಮ ಜಿಲ್ಲೆಯಲ್ಲಿ ಆಧಾರ್ ನೊಂದಣಿ ಕೇಂದ್ರ ಎಲ್ಲಿದೆ ಅಂತ ಈ ಸೈಟಿಂದ ಹೇಗೆ ತಿಳಿಯೋಣ ಸ್ವಾಮಿ ?? ಆಧಾರ್ ಕೇಂದ್ರ ಹತ್ತಿರದಲ್ಲಿ ಎಲ್ಲಿದೆ ಅಂತ ತಿಳಿಯೋಕೆ ಆಧಾರ್ ಕೇಂದ್ರಕ್ಕೇ ಹೋಗಬೇಕೇ ? ಮತ್ತಷ್ಟು ಓದು 
ಉಡುಪಿಯ ಕೃಷ್ಣ ತಿರುಗಿ ನಿಂತಷ್ಟು ಸುಲಭವಲ್ಲ ’ಮಡೆ ಸ್ನಾನ’ ನಿಲ್ಲುವುದು…!
– ರಾಕೇಶ್ ಶೆಟ್ಟಿ
“ಮಡೆಸ್ನಾನ ಅಥವಾ ಎಂಜೆಲೆಲೆ ಮೇಲೆ ಉರುಳು ಸೇವೆ ಮಾಡುವುದನ್ನು ನಿಷೇಧಿಸುವುದರಿಂದ ಯಾವ ರೀತಿ ಲಾಭವೂ ಇಲ್ಲ ನಷ್ಟವೂ ಇಲ್ಲ. ನಾನು ಈ ವಿಷಯದಲ್ಲಿ ತಟಸ್ಥ ನೀತಿ ಅನುಸರಿಸುತ್ತೇನೆ” ಹೀಗಂತ ಹೇಳಿರೋದು ಪೇಜಾವರಶ್ರೀಗಳು…!
ಒಂದು ಕಡೆ ದಲಿತ ಕಾಲೋನಿಗಳಲ್ಲಿ ಓಡಾಡಿ ಹಿಂದೂ ಧರ್ಮವನ್ನು ಉದ್ಧರಿಸುವ ಮತ್ತು ಮತಾಂತರವನ್ನ ವಿರೋಧಿಸುವ ಮಾತನಾಡುವ ಶ್ರೀಗಳಿಗೆ ಮಡೆಸ್ನಾನದಿಂದ ಯಾವ ಧರ್ಮಕ್ಕೆ,ಹೇಗೆ ನಷ್ಟವಾಗಬಹುದು ಮತ್ತು ಹಿಂದೂ ಅನ್ನುವ ಧರ್ಮದ ಬಗ್ಗೆ ಮಾಧ್ಯಮಗಳ ಮೂಲಕ ಜಗತ್ತಿಗೆ ಯಾವ ಸಂದೇಶ ತಲುಪಬಹುದು ಅನ್ನುವುದರ ಅರಿವಿರಲಿಕ್ಕಿಲ್ಲವಾ? ಇದ್ದರೆ ಈ ರೀತಿ ಮೈಗೆ ಎಣ್ಣೆ ಹಚ್ಚಿಕೊಂಡವರಂತೆ ಹೇಳಿಕೆ ನೀಡುತಿದ್ದರಾ?
’ಮಡೆ ಸ್ನಾನ’ ಅನ್ನುವ So Called ಧಾರ್ಮಿಕ ನಂಬಿಕೆ(!?) ನಡೆದುಕೊಂಡು ಬಂದ ಹಾದಿಗೆ ೪೦೦ ವರ್ಷಗಳ ಇತಿಹಾಸವಿದೆ.ಆದರೆ ತೀರಾ ಇದು ಮಾಧ್ಯಮಗಳಲ್ಲಿ ದೊಡ್ದ ಮಟ್ಟದ ಸುದ್ದಿ ಮಾಡಲಿಕ್ಕಾರಂಭಿಸಿದ್ದು ಬಹುಷಃ ಕಳೆದ ವರ್ಷದಿಂದಲೇ…! ಸದ್ಯ.ಈಗಲಾದರೂ ನಮ್ಮ ದನಿ ಕೇಳಿಬರುತ್ತಿದೆ ಅನ್ನುವ ಸಂತೋಷದ ಜೊತೆ ಜೊತೆಗೆ ಇಂತ ಅನಿಷ್ಟ ಪದ್ಧತಿಗಳಿಗೆ ಬ್ರೇಕ್ ಹಾಕಬೇಕಾದ ಸರ್ಕಾರ ಮತ್ತು ಸರ್ಕಾರದ ಸಚಿವರೇ ’ನೋ ಕಮೆಂಟ್ಸ್’ ಅನ್ನುವುದು ನೋಡಿ ಬೇಸರವೂ ಆಗುತ್ತದೆ.
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 13- ಯಂತ್ರಗಳು, ಯಾಂತ್ರಿಕರು…
–ರಾಮಚಂದ್ರ ಪಿ
ಆಧುನಿಕ ವಿಜ್ಞಾನವು ಇತ್ತ ಕೊಡುಗೆಗಳನ್ನು ನಾವು ಜೀವನದಲ್ಲಿ ಉಪಯೋಗಿಸಿಕೊಳ್ಳಲೇ ಬೇಕಷ್ಟೆ. ಕಲೆಗೂ ಕೆಲವು ಕೊಡುಗೆಗಳನ್ನು ವಿಜ್ಞಾನವು ಇತ್ತಿದೆ. ಇತರ ಕಲೆಗಳಂತೆ ಯಕ್ಷಗಾನದಲ್ಲೂ ಅವುಗಳ ಉಪಯೋಗವಾಗುತ್ತಿದೆ.
ಸರಿಯಾಗಿ ಉಪಯೋಗ ಮಾಡಿಕೊಳ್ಳುವ ಮೊದಲು, ವಿಜ್ಞಾನವಿತ್ತ ಹಲವು ಸಲಕರಣೆಗಳೂ, ‘ಅನುಕೂಲಗಳೂ’ ನನಗೆ ಉಪಟಳವಿತ್ತಿವೆ.
ನಾವು ಉತ್ತರ ಕನ್ನಡ ಪ್ರವಾಸ ಕೈಕೊಂಡ ಮಾರನೆಯ ವರ್ಷ ಡೇರೆಯ ಅಗತ್ಯ ನಮಗಾಯಿತು. ಅದಕ್ಕೆ ಮೊದಲೇ ಶ್ರೀ ಕೊರಗಪ್ಪ ಶೆಟ್ಟರು ತಮ್ಮ ಮೇಳಕ್ಕೆ ಒಂದು ಡೇರೆಯನ್ನು ಮಾಡಿಸಿಕೊಂಡಿದ್ದರು. ನಮ್ಮ ಮನೆಯಲ್ಲೇ ಬೇಕಾದ ವಸ್ತುಗಳನ್ನು ತರಿಸಿ ಹೊಸ ಡೇರೆಯೊಂದನ್ನು ತಂದೆಯವರು ಮಾಡಿಸಲು ತೊಡಗಿದರು. ಮೊದಲು ಹೊರಗಿನ ಆವರಣ ಮಾತ್ರ ಸಾಕು ಎಂದಿದ್ದುದು, ಅನಂತರ- ಆಟವಾಡುವ ಸ್ಥಳದ ಅರ್ಧ ಬಯಲನ್ನು ಮುಚ್ಚುವ ದೊಡ್ಡ ಡೇರೆಯಾಗಿಯೇ ಪರಿವರ್ತನೆಗೊಂಡಿತು. ಆಗ ಅದಕ್ಕೆ ತಕ್ಕಂತೆ ಕಟ್ಟಿ- ಬಿಚ್ಚಿ- ಜೋಡಿಸಿ ಸಾಗಿಸಬಲ್ಲ ಒಂದು ರಂಗಸ್ಥಳವೂ ಬೇಕು ಎನಿಸಿತು. ಅನಂತರ ಬಂದುದು ವಿದ್ಯುತ್ತಿನ ವ್ಯವಸ್ಥೆ; ಧ್ವನಿವರ್ಧಕದ ಏರ್ಪಾಡು.
ಮಡೆಸ್ನಾನದ ಮರ್ಮವೇನು ?
-ಸಂತೋಷ ಕುಮಾರ್
ಕುಕ್ಕೆ ಸುಬ್ರಮಣ್ಯದಲ್ಲಿ ಜರುಗ ಬೇಕಾಗಿದ್ದ ಮಡೆಸ್ನಾದ ಆಚರಣೆಯನ್ನು ರದ್ದುಗೊಳಿಸಬೇಕೇಂದು ಅಲ್ಲಿನ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೆ ದಿಡೀರ್ ಬೆಳವಣಿಗೆ ಎಂಬಂತೆ ನಿಷೇಧದ ಆದೇಶದ ಮರುದಿನವೇ ನಿಷೇಧವನ್ನು ರದ್ದುಪಡಿಸುವ ಆದೇಶವನ್ನೂ ಸಹ ನೀಡಲಾಯಿತು. ಇದನ್ನು ರಾಜಕೀಯ ವ್ಯವಸ್ಥೆಯ ಲೋಪದೋಷ ಅಥವಾ ದೌರ್ಬಲ್ಯ ಹಾಗೂ ಆಚರಣೆಯ ಅಥವಾ ಅದನ್ನು ಆಚರಿಸುವವರ ಸಂಸ್ಕೃತಿಯ ವಿಶಿಷ್ಟತೆ ಎಂಬ ಎರಡೂ ವಿಭಿನ್ನ ಆಯಾಮಗಳಲ್ಲಿ ವಿಶ್ಲೇಷಿಸಬಹುದು. ಇಲ್ಲಿ ಎರಡನೇ ಆಯಾಮದಿಂದ ಈ ಘಟನೆಯನ್ನು ವಿಶ್ಲೇಷಿಸಲು ಪ್ರಯತ್ನಿಸಲಾಗುವುದು. ಕುಕ್ಕೆ ಸುಬ್ರಮಣ್ಯದ ಮಡೆಸ್ನಾನದ ಆಚರಣೆಯನ್ನು ನಿಷೇಧಿಸಬೇಕೆಂಬ ಆದೇಶ ಹೊರಡಿಸುತ್ತಿದ್ದಂತೆ ವಿಶೇಷವಾಗಿ ನಮಗೆ ಆ ಆಚರಣೆಯಲ್ಲಿ ಭಾಗವಹಿಸುವ ಭಕ್ತರು ಹೇಗೆ ಪ್ರತಿಸ್ಪಂದಿಸುತ್ತಾರೆ ಎಂಬ ಕುತೂಹಲವಿತ್ತು.
ಕಲಸೆ (ನಾಡಕಲಸಿ) ದೇವಸ್ಥಾನ
-ಪ್ರಹಸ್ತಿ ಪಿ
ಸಾಗರ ತಾಲೂಕಿನ ಇತಿಹಾಸ ಪ್ರಸಿದ್ದ ದೇವಸ್ಥಾನಗಳಲ್ಲಿ ಕಲಸೆ, ನಾಡಕಲಸಿಯೂ ಒಂದು. ಸಾಗರದವನಾಗಿಯೂ ಅದನ್ನು ನೋಡಲಾಗಿರದ ಬಗ್ಗೆ ಸ್ವಲ್ಪ ಬೇಸರವಿತ್ತು. ಬೆಳಗ್ಗೆ ೮ಕ್ಕೆ, ಮಧ್ಯಾಹ್ನ ಒಂದಕ್ಕೆ ಮಾತ್ರ ಅಲ್ಲಿಗೆ ಬಸ್ಸಿನ ಸೌಕರ್ಯವಿದೆ ಎಂಬ ಗೆಳೆಯರ ಮಾತೂ ನೋಡದಿರುವುದಕ್ಕೊಂದು ಪಿಳ್ಳೆ ನೆವವಾಗಿತ್ತು. ಆದರೆ ಅಲ್ಲಿಗೆ ಹೋದ ಮೇಲೆಯೇ ತಿಳಿದಿದ್ದು. ಅದೆಷ್ಟು ಸುಂದರ ಎಂದು.
ಹೋಗುವ ಮಾರ್ಗ:
ಸಾಗರದಿಂದ ಸುಮಾರು ಎಂಟು ಕಿ.ಮೀ ದೂರವಷ್ಟೇ ನಾಡಕಲಸಿ ಅಥವಾ ಕಲಸಿಯ ದೇವಸ್ಥಾನ. ಸಾಗರದಿಂದ ಹೋಗುವುದಾದರೆ ಸೊರಬ ಮಾರ್ಗದಲ್ಲಿ ಸುಮಾರು ೫ ಕಿ.ಮೀ ಹೋದ ಕೂಡಲೇ ಕಲಸಿ ರಾಮೇಶ್ವರ ದೇವಸ್ಥಾನಕ್ಕೆ ದಾರಿ ಅಂತ ಬೋರ್ಡೊಂದು ಸಿಗುತ್ತದೆ. ಅಲ್ಲಿಂದ ಸುಮಾರು ಮೂರು ಕಿ.ಮೀ ಬಲಕ್ಕೆ ಹೋದರೆ ಸಿಗುವುದು ಕಲಸಿ ಊರು. ಅಲ್ಲಿಂದ ಸ್ವಲ್ಪ ಒಳಗಡೆ ಇದೆ ದೇವಸ್ಥಾನ. ಸೊರಬಕ್ಕೆ ತುಂಬಾ ಬಸ್ಸುಗಳಿವೆ. ಹಾಗಾಗಿ ಸೊರಬ ಬಸ್ಸಿನಲ್ಲಿ ಕಲಸಿ ಬೋರ್ಡಿನಲ್ಲಿ ಇಳಿದುಕೊಂಡರೆ ಮೂರು ಕಿ.ಮೀ ನಡೆದು ಕಲಸಿ ದೇವಸ್ಥಾನಕ್ಕೆ ಯಾವಾಗಲಾದರೂ ಹೋಗಬಹುದು. ಸ್ವಂತ ವಾಹನವಿದ್ದರೆ ಇನ್ನೂ ಉತ್ತಮ.
ಇತಿಹಾಸ:
ಇಲ್ಲಿ ಶ್ರೀ ಮಲ್ಲಿಕಾರ್ಜುನ ಮತ್ತು ರಾಮೇಶ್ವರ ದೇವಸ್ಥಾನಗಳಿವೆ. ಈ ಜೋಡಿ ದೇಗುಲಗಳನ್ನು ಹೊಯ್ಸಳ ರಾಜ ಬಳೆಯಣ್ಣ ಹೆಗ್ಗಡೆ ಕ್ರಿ.ಶ ೧೨೧೮ ರಲ್ಲಿ ಕಟ್ಟಿಸಿದನೆಂದು ಸಂಶೋಧನಕಾರರು ಹೇಳುತ್ತಾರೆ.
ಮೊದಲಿಗೆ ಹೋಗುತ್ತಿದ್ದಂತೆಯೇ ನಿಮ್ಮನ್ನು ಸ್ವಾಗತಿಸುವುದು ದೇಗುಲದ ಎದುರಿಗೆ ಅಥವಾ ಹೋಗುವವರ ಬಲಗಡೆಗೆ ಇರುವ ನಾಗರ ಬನ.ಅದಕ್ಕೆ ನಮಸ್ಕರಿಸಿ ಮೊದಲು ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋದೆವು.
ನಮ್ಮೂರ ಕನ್ನಡ ರಾಜ್ಯೋತ್ಸವ – ‘ಕೆಳದಿ’
–ಪ್ರಹಸ್ತಿ ಪಿ.
ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲಿರೋರಿಗೆ ಕೆಳದಿಯ ಬಗ್ಗೆ ಗೊತ್ತೇ ಇರುತ್ತದೆ. ಹೊಸಬರಿಗೆ ಹೇಳಬೇಕೆಂದರೆ, ನೀವು ಜಗತ್ಪ್ರಸಿದ್ಧ ಜೋಗ ಜಲಪಾತದ ಹೆಸರನ್ನು ಕೇಳಿಯೇ ಕೇಳಿರುತ್ತೀರಿ. ಅದಕ್ಕೆ ಹೋಗಬೇಕಾದರೆ ಸಾಮಾನ್ಯವಾಗಿ ಸಾಗರಕ್ಕೆ ಬಂದೇ ಹೋಗುತ್ತಾರೆ. ಸಾಗರದಿಂದ ಎಂಟು ಕಿ.ಲೋ ಮೀಟರು ದೂರವಿರುವ ಊರು ಕೆಳದಿ. ಇಲ್ಲಿಯ ಪಾಳೇಗಾರ ಶಿವಪ್ಪನಾಯಕ, ರಾಣಿ ಚೆನ್ನಮ್ಮ… ಈ ಹೆಸರುಗಳನ್ನು ಎಲ್ಲೋ ಕೇಳಿದ/ಓದಿದ ನೆನಪಾಗುತ್ತಿದೆಯೇ? ಹಾ ಅದೇ ಕೆಳದಿ. ಅದರ ಹತ್ತಿರವೇ ನಮ್ಮೂರು.
ಪ್ರತೀವರ್ಷವೂ ಕನ್ನಡ ರಾಜ್ಯೋತ್ಸವ ಬಂತೆಂದರೆ ನಮಗೆಲ್ಲಾ ಹಬ್ಬದ ವಾತಾವರಣ.ಹಂಪಿಯಿಂದ ಕೆಳದಿಗೆ ಬರುತ್ತಿದ್ದ ವಿದ್ಯಾರಣ್ಯ ಜ್ಯೋತಿಯದು ಕೆಳದಿಯಿಂದ ಸಾಗರದವರೆಗೆ ಮೆರವಣಿಗೆ..ಆ ಸಂದರ್ಭವೆಂದರೆ ನಮಗೆಲ್ಲಾ ಸಂಭ್ರಮವೋ ಸಂಭ್ರಮ.ಪ್ರತೀ ಮನೆಯೆದುರ ರಸ್ತೆಯನ್ನೂ ತೊಳೆದು ಎಳೆದ ದೊಡ್ಡದೊಡ್ಡ ರಂಗೋಲಿಗಳು,”ವಿದ್ಯಾರಣ್ಯ ಜ್ಯೋತಿಗೆ ಸ್ವಾಗತ”, “ರಾಜ್ಯೋತ್ಸವದ ಶುಭಾಶಯಗಳು” ಇತ್ಯಾದಿ ಬರಹಗಳೇನು, ಪ್ರತೀ ಹಳ್ಳಿಯ ಬಾಗಿಲುಗಳಲ್ಲಿ, ಹೆಚ್ಚೆಚ್ಚು ಮನೆಗಳಿದ್ದ ಕಡೆ ಹೀಗೆ ಸಾಲು ತೋರಣಗಳೇನು, ಪೇಟೆ ಹತ್ತಿರ ಸಾಗುತ್ತಿದ್ದಂತೆ ಸಾಲು ಸಾಲು ವಿದ್ಯುತ್ ದೀಪಗಳೇನು..ಅಬ್ಬಾ!! ಜ್ಯೋತಿಯೊಂದಿಗೆ ಎಂಟು ಕಿಲೋಮೀಟರಿಗಿಂತಲೂ ದೂರ ಸಾಗುವುದೆಂದರೆ ಒಂದು ಅವಿಸ್ಮರಣೀಯ ಅನುಭವ.. ವಿದ್ಯಾರಣ್ಯರು ಹಕ್ಕ-ಬುಕ್ಕರ ಗುರುಗಳಲ್ಲವೇ, ಆ ವಿಜಯನಗರ ಸಾಮ್ರಾಜ್ಯಕ್ಕೂ ಕೆಳದಿಗೂ, ಅವರ ಹೆಸರಿನ ಜ್ಯೋತಿಗೂ , ನಾನು ಹೇಳಹೊರಟಿರುವ ಮೆರವಣಿಗೆಗೂ ಎಲ್ಲಿಂದೆಲ್ಲಿಯ ಸಂಬಂಧವಯ್ಯಾ ಅಂತ ಸಂದೇಹ ಶುರು ಆಯ್ತಾ? ತಡೀರಿ ಒಂದೊಂದಾಗಿ ಹೇಳುತ್ತಾ ಹೋಗ್ತೇನೆ. ಮುಂದೆ ಓದಿ.
ವಿಜಯನಗರದ ಕೃಷ್ಣದೇವರಾಯನ ಕಾಲದಲ್ಲಿ ಕೆಳದಿಯ ಸಾಮಾನ್ಯ ರೈತನೊಬ್ಬನಾದ ಭದ್ರಗೌಡನೆಂಬುವನಿಗೆ ನಿಕ್ಷೇಪ ದೊರೆತು ಅದರಿಂದ ಅವನು ಪಾಳೆಯವನ್ನು ಕಟ್ಟಿಕೊಂಡನಂತೆ. ಅವನ ಪರಾಕ್ರಮಕ್ಕೆ ಮೆಚ್ಚಿ ಕೃಷ್ಣದೇವರಾಯ ಅವನಿಗೆ ಎಂಟು ಮಾಗಣಿಗಳ ನಾಯಕತ್ವವನ್ನು ಕೊಟ್ಟನೆಂದು ಇತಿಹಾಸವಿದೆ .ಕಾಲ ಕಳೆದಂತೆ ಸಂಸ್ಥಾನ ಬೆಳೆಯಿತು. ಕೆಳದಿ, ಇಕ್ಕೇರಿ, ಗೌರಿ ಬಿದನೂರು ಹೀಗೆ ಕೋಟೆ ಕೊತ್ತಲಗಳನ್ನು, ದೇವಾಲಯಗಳನ್ನು ಕಟ್ಟಿದರು. ಶಿವಪ್ಪನಾಯಕ, ಚೆನ್ನಮ್ಮ ರಾಣಿಯಂತಹವರು ಬಂದು ಹೋದರು. ಕೆಳದಿಯ ವೀರಭದ್ರ ದೇವಸ್ಥಾನದ ಪ್ರಧಾನ ಬಾಗಿಲ ಬಳಿ ಶ್ರೀಕೃಷ್ಣನ ಸಣ್ಣ ವಿಗ್ರಹವಿದೆ. ಇದು ಅಂದಿನಾ ಘಟನೆಯ ಸವಿನೆನಪಿಗಾಗಿ ಎಂದು ಅನೇಕರು ಹೇಳುತ್ತಾರೆ.
೧೯೫೬ ರಲ್ಲಿ ಕರ್ನಾಟಕ ಏಕೀಕರಣವಾಯಿತು. ರಾಜ್ಯೋತ್ಸವ ಆಚರಣೆಗಳು ಪ್ರಾರಂಭವಾದವು. ೭೦ರ ದಶಕದ ಕೊನೆಭಾಗದಲ್ಲಿ ರಾಜ್ಯೋತ್ಸವ ಆಚರಣೆಯ ಭಾಗವಾಗಿ ಇತಿಹಾಸ ಪ್ರಸಿದ್ದ ಸ್ಥಳಗಳಿಂದ ಜ್ಯೋತಿಯೊಂದನ್ನು ತಂದು ಮೆರವಣಿಗೆ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತಂತೆ. ಅದಾಗಿ ಕೆಲಸಮಯದಲ್ಲಿ ಅಂದರೆ ಈಗ್ಗೆ ಸುಮಾರು ಇಪ್ಪತ್ತು ವರ್ಶಗಳ ಹಿಂದಿಂದ ಕೆಳದಿಯಿಂದ ಜ್ಯೋತಿಯ ಮೆರವಣಿಗೆ ನಡೆಸುವ ಸಂಪ್ರದಾಯ ಶುರುವಾಗಿದೆ ಅಂತ ಅಲ್ಲಿನ ಹಿರಿಯರು ಹೇಳುತ್ತಾರೆ. ಮೊದಲಿಗೆ ನವೆಂಬರ್ ಒಂದರ ಹಿಂದಿನ ರಾತ್ರಿ ಹಂಪಿಯಿಂದಲೇ ವಿದ್ಯಾರಣ್ಯ ಜ್ಯೋತಿ ಕೆಳದಿಗೆ ಬರುತ್ತಿತ್ತಂತೆ. ಜೀಪಲ್ಲಿ ಹಿಂದಿನ ದಿನ ಮಧ್ಯರಾತ್ರಿಯ ಹೊತ್ತಿಗೆ ಕೆಳದಿಗೆ ಬರುತ್ತಿತ್ತು ಆ ಜ್ಯೋತಿ. ಮಧ್ಯರಾತ್ರಿ ಎಷ್ಟೊತ್ತಾದರೂ ಕೆಳದಿಗೆ ಬಂದೇ ತಲುಪುತ್ತಿದ್ದ ಜ್ಯೋತಿ ಹೊತ್ತು ತಂದವರು ಕೆಳದಿ ದೇಗುಲದ ಪ್ರಾಂಗಣದಲ್ಲೇ ಮಲಗಿರುತ್ತಿದ್ದರಂತೆ. ನಂತರ ಬೆಳಗ್ಗೆ ಆರೂ ಮುಕ್ಕಾಲರ ಹೊತ್ತಿಗಾಗಲೇ ಅದಕ್ಕೆ ಪೂಜೆಯಾಗಿ ಕೆಳದಿ ರಾಮೇಶ್ವರ ದೇವಸ್ಥಾನದಿಂದ ಸಾಗರದ ಕಡೆಗೆ ಹೊರಡುತ್ತಿತ್ತು.
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 12 -ಯಕ್ಷಗಾನ ತಾಯಿಯ ಮಡಿಲಲ್ಲಿ ಬೆಳೆದ ಮಕ್ಕಳು
-ರಾಮಚಂದ್ರ ಪಿ
ಶಿರ್ವದಲ್ಲಿ ಆಟ ಮುಗಿದ ತರುವಾಯ, ಮುಂದಿನ ಪ್ರದರ್ಶನಕ್ಕೆ ನನಗೆ ಅವಕಾಶ ಕೊಡಿ ಎಂದು ಬೇಡುವ ಸಂದರ್ಭ ಬರಲೇ ಇಲ್ಲ. ನಾನು ಬಣ್ಣ ತೆಗೆಯುತ್ತಿದ್ದಲ್ಲಿಗೆ ಬಂದ ಕಟ್ಪಾಡಿಯ ಶ್ರೀ ಮುದ್ದು ಸುವರ್ಣರು ನಮ್ಮೂರಿಗೆ ಬನ್ನಿ ಎಂದು ವೀಳ್ಯ ಕೊಟ್ಟರು. ಅವರ ಹಿಂದೆಯೇ ಇನ್ನಿಬ್ಬರು ಬಂದರು. ಅವರಿಗಿಂತಲೂ ಮೊದಲೇ 3 ಆಟಗಳಿಗೆ ವೀಳ್ಯ ಪಡೆದಿದ್ದ ಫಲಿಮಾರಿಗೆ, ಮಾತು ಕೊಟ್ಟಂತೆ ಹೋಗಿ ಆಟಗಳನ್ನು ಆಡಿದೆವು.
ಅಲ್ಲಿಯೂ “ಬ್ರಹ್ಮ ಕಪಾಲ”. ಅದನ್ನು ನೋಡಲು ಉಡುಪಿ, ಮಲ್ಪೆ, ಕಲ್ಯಾಣಪುರಗಳಿಂದ ಜನರು ಬಂದಿದ್ದರು. ಅವರೆಲ್ಲ ಹಿಂತಿರುಗಿದಾಗ ಮಾಡಿದ್ದ ಪ್ರಚಾರವೇ ನಾವು ಕಟ್ಪಾಡಿ-ಕಾಪುಗಳ ಆಟ ಮುಗಿಸಿ, ಮಲ್ಪೆಯ ಸಮೀಪದ ಕ್ರೋಢಪುರಕ್ಕೆ (ಅದಕ್ಕೆ ಶಂಕರ ನಾರಾಯಣವೆಂಬ ಹೆಸರೂ ವಾಡಿಕೆಯಲ್ಲಿದೆ) ಬಂದಾಗ, ನಮಗೆ ಬಡಗು ನಾಡಿನಿಂದ ಅನಿರೀಕ್ಷಿತ ಸ್ವಾಗತವನ್ನು ಕೊಡಿಸಿತು.
“ವಿಶ್ವಾಮಿತ್ರ-ಮೇನಕೆ” ಮತ್ತು “ಕಂಸವಧೆ” ಎಂಬ ಎರಡು ಕಥಾಭಾಗಗಳನ್ನು ಇರಿಸಿಕೊಂಡು ಕ್ರೋಢಪುರದಲ್ಲಿ ನಾವು ಆಟವಾಡಿದೆವು. ಮೊದಲು ವಿಶ್ವಾಮಿತ್ರನಾಗಿಯೂ,ಅನಂತರ ಕೃಷ್ಣನಾಗಿಯೂ ಪಾತ್ರ ವಹಿಸಿದ ನಾನು, ಪ್ರೇಕ್ಷಕರ ಹರ್ಷಭರಿತ ಕರತಾಡನಗಳ ಆನಂದವನ್ನು ಅನುಭವಿಸುತ್ತಿದ್ದೆ. ಜನಸಮೂಹದಲ್ಲಿದ್ದ, ಅಲ್ಲಿನ ಪಂಡಿತರೊಬ್ಬರು ನಮಗೆಲ್ಲ ಹಾರ ಸಮರ್ಪಣೆ ಮಾಡಿದರು.
ನಡುವೆ, ಅಂತಹ ಕಾರಣದಿಂದ ಕೆಲವು ನಿಮಿಷಗಳ ಕಾಲ ಬಿಡುವು ದೊರೆತರೆ, ಮುಂದಿನ ಆಟ ನಡೆಯಲಿರುವ ಸ್ಥಳವನ್ನು ರಂಗಸ್ಥಳದಿಂದ ಕರೆದು ಹೇಳುವ ಪದ್ಧತಿ. ಮುಂದಿನ ಒಂದು ದಿನದ ವಿವರವನ್ನು ಸಾರಲೆಂದು ಹಾಸ್ಯಗಾರರು ರಂಗಸ್ಥಳವನ್ನು ಸೇರುವಾಗಲೇ ಅವರ ಕೈಗೆ ಆರು ಕಡೆಗಳ ಆಟ ನಿರ್ಣಯವಾದ ಚೀಟಿ ಸೇರಿತು. ಅವುಗಳನ್ನೂ ಹೇಳತೊಡಗಿದಾಗ ಇನ್ನೂ ಕೆಲವು ಸ್ಥಳಗಳೂ ತಾರೀಕುಗಳೂ ಸೂಚಿಸಲ್ಪಟ್ಟವು. ಬೇಡಿಕೆ ಹೆಚ್ಚುವ ಸೂಚನೆ ಕಂಡು ಬಂದಾಗ, ಮುಂದಿನ ಎಲ್ಲ (ನಿಶ್ಚಯವಾದ) ಆಟಗಳ ಕುರಿತು ಸ್ಥಳ ಮತ್ತು ತಾರೀಕುಗಳ ಒಂದು ಯಾದಿಯನ್ನು ತಯಾರಿಸಿ ಅವರ ಕೈಗೆ ಕೊಟ್ಟಾಗ, ಒಟ್ಟು 33 ಆಟಗಳು ನಿಶ್ಚಯವಾದುದು ಗೊತ್ತಾಯಿತು.
ಮತ್ತಷ್ಟು ಓದು 
ಸಂಸ್ಕೃತಿ ಸಂಕಥನ – ೧೨- ಭಾರತದಲ್ಲಿರುವ ಜಾತಿಗಳು ಒಂದು ‘ವ್ಯವಸ್ಥೆ’ ಅಲ್ಲ
– ರಮಾನಂದ ಐನಕೈ
ಭಾರತದಲ್ಲಿರುವ ಜಾತಿಗಳು ಒಂದು ‘ವ್ಯವಸ್ಥೆ’ ಅಲ್ಲ
ಕೆಲವು ವೈದ್ಯರಿರುತ್ತಾರೆ. ಔಷಧಿ ಕೊಟ್ಟಾಕ್ಷಣ ರೋಗ ವಾಸಿಯಾಗುತ್ತದೆ. ನಾವಂದುಕೊಳ್ಳುತ್ತೇವೆ ‘ಅವರು ತುಂಬಾ ಚೆನ್ನಾಗಿ ಔಷಧಿ ಕೊಡುತ್ತಾರೆ’ ಎಂದು. ಹಾಗಾದರೆ ಮಾರುಕಟ್ಟೆಯಲ್ಲಿ ಎಷ್ಟೊಂದು ವೈವಿಧ್ಯಮಯವಾದ ಔಷಧಿಗಳು ಸಿಗುತ್ತವೆ. ಎಲ್ಲ ವೈದ್ಯರು ಕೊಡಬಹುದಲ್ಲ? ಇಲ್ಲೇ ಇದೆ ಸೂಕ್ಷ್ಮ. ವೈದ್ಯರ ಯಶಸ್ಸು ಇರುವುದು ಔಷಧಿ ಕೊಡುವುದರಲ್ಲೊಂದೇ ಅಲ್ಲ. ಅದಕ್ಕಿಂತ ಮುಖ್ಯವಾಗಿ ವ್ಯಕ್ತಿಯಲ್ಲಿರುವ ರೋಗ ಪತ್ತೆಮಾಡುವುದರಲ್ಲಿರುತ್ತದೆ. ಒಮ್ಮೆ ರೋಗ ಗೊತ್ತಾದರೆ ಅದಕ್ಕೆ ಔಷಧ ಯಾವುದೆಂಬುದು ವೈದ್ಯಕೀಯ ಸಾಮಾನ್ಯಜ್ಞಾನ.
ಸದ್ಯದ ಸಮಾಜವಿಜ್ಞಾನ ಪ್ರಕಾರ ಭಾರತೀಯ ಸಮಾಜದ ಪರಿಸ್ಥಿತಿಯೂ ಇದೇ ಆಗಿದೆ. ಭಾರತೀಯ ಸಮಾಜ ವ್ಯವಸ್ಥೆ ಸರಿಯಾಗಿಲ್ಲ. ಮೌಢ್ಯ ಮತ್ತು ಅಸಮಾನತೆಯಿಂದ ಕೊಳೆಯುತ್ತ ರೋಗಗ್ರಸ್ತವಾಗಿವೆ ಎಂಬುದು ಚಿಂತಕರ ಅಭಿಮತ. ಜಾತಿವ್ಯವಸ್ಥೆ ಭಾರತೀಯಸಮಾಜಕ್ಕೆ ಅಂಟಿಕೊಂಡ ದೊಡ್ಡ ರೋಗ. ಹಾಗಾಗಿ ಈ ರೋಗ ಹೋಗಬೇಕಾದರೆ ಜಾತಿವ್ಯವಸ್ಥೆಯನ್ನು ಆಮೂಲಾಗ್ರವಾಗಿ ನಾಶಮಾಡಬೇಕು ಎಂಬ ಮಾತು ದಿನನಿತ್ಯ ಕೇಳಿಬರುತ್ತವೆ. ಭಾರತೀಯ ಸಮಾಜಕ್ಕೆ ಈ ರೀತಿಯ ರೋಗವಿದೆಯೆಂಬ ತಿಳುವಳಿಕೆ ಎಲ್ಲಿಂದ ಬಂತು? ಇದು ನಿಜವಾಗಿಯೂ ರೋಗ ಹೌದೋ ಎಂಬುದರ ಬಗ್ಗೆ ನಾವು ಚಿಂತಿಸಿಲ್ಲ. ನೂರಾರು ವರ್ಷಗಳಿಂದ ಹಲವಾರು ರೀತಿಯ ಔಷಧ ಮಾಡುತ್ತಲೇ ಬಂದಿದ್ದೇವೆ. ರೋಗ ಗುಣಾಗುವುದರ ಬದಲು ಉಲ್ಭಣಿಸುತ್ತ ಬಂದಿದೆ. ಅಂದರೆ ನಾವು ರೋಗವನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ. ಹಾಗಾಗಿ ನಾವು ನೀಡುವ ಔಷಧಿಗಳು ವ್ಯರ್ಥವಾಗುತ್ತಿವೆ. ರೋಗ ಇಲ್ಲದೆಯೇ ಔಷಧ ಕೊಡುವುದು ಅಥವಾ ಸರಿಯಾದ ರೋಗಕ್ಕೆ ಸರಿಯಾದ ಔಷಧ ಕೊಡದೇ ಇರುವುದು ಯಾವತ್ತೂ ಅಪಾಯ. ಅದು ದೊಡ್ಡ ರೋಗಕ್ಕೆ ನಾಂದಿಯಾಗುತ್ತದೆ.
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 11 -ಮದ್ದಿಗೆ ಒದಗಿದ ಸಿದ್ದೌಷದ…..
ವೆಂಕಟರಮಣ ಭಟ್ಟರನ್ನು ಮೂಡಬಿದರೆಗೆ ಕರೆತರಲು ಜನ ಕಳುಹಿಸಿದೆ. ಅವರು ಬಂದರು.
“ಏನಾಗಬೇಕಿತ್ತು, ಜ್ಞಾನದಾಸಕ್ತನೇ, ಆನು ಬಂದುದರಿಂದ ಆಗಲೇನಿಹುದು?” ಎಂದರು. ಪ್ರಾಸಬದ್ಧವಾಗಿ ಮಾತನಾಡುವುದು ಅವರಿಗೊಂದು ಶ್ರಮದ ಕಾರ್ಯವಲ್ಲ.
ಕಾಗದ ಲೇಖನಿಗಳನ್ನು ಸಿದ್ಧವಾಗಿರಿಸಿಕೊಂಡೇ, ಅವರಲ್ಲಿ ನನ್ನ ಅಗತ್ಯಗಳನ್ನು ವಿವರಿಸಿದೆ.
ಪ್ರಸಂಗ ರಚನೆ
“ಹೂಂ ಬರೆದುಕೊಳ್ಳಿ” ಎಂಬ ಅಪ್ಪಣೆ ಆಯಿತು.
ನಾನು ಬರೆದುಕೊಳ್ಳತೊಡಗಿದೆ.
ಮತ್ತಷ್ಟು ಓದು 





