ಡಿ ಬಿ ಚಂದ್ರೇಗೌಡರು ಪುಸ್ತಕದಲ್ಲಿ
– ಕಾಲಂ ೯
ಮಲೆನಾಡಿನ ರಾಜಕಾರಣಿ ಡಿ.ಬಿ. ಚಂದ್ರೇಗೌಡರು 75ರ ಹೊಸ್ತಿಲಲ್ಲಿ ಇದ್ದಾರೆ. ಅವರ ನಿರೂಪಿತ ಆತ್ಮಕಥೆ ‘ಪೂರ್ಣಚಂದ್ರ’ ಪ್ರಕಟಣೆಗೆ ಸಿದ್ಧವಾಗಿದೆ.
ಕಾಂಗ್ರೆಸ್ಸು, ಜನತಾದಳ, ಬಿಜೆಪಿ ಎಲ್ಲ ಪಕ್ಷಗಳಲ್ಲೂ ರಾಜಕೀಯ ಯಾತ್ರೆ ಮಾಡಿ ಕಾನೂನು, ಸಂಸದೀಯ ವ್ಯವಹಾರದಲ್ಲಿ ಹಿಡಿತ ಸಾಧಿಸಿರುವ ರಾಜಕಾರಣಿ ಚಂದ್ರೇಗೌಡರು.
ಆಕಾಶವಾಣಿಯ ಹಿರಿಯ ಪತ್ರಕರ್ತರೊಬ್ಬರು ಚಂದ್ರೇಗೌಡರ ಈ ಆತ್ಮಕಥೆ ‘ಪೂರ್ಣಚಂದ್ರ’(ಚಂದ್ರೇಗೌಡರ ಮನೆಯಾಕೆ ಪೂರ್ಣಿಮಾ)ವನ್ನು ನಿರೂಪೊಸಿದ್ದಾರೆ.
1977ರ ತುರ್ತುಪರಿಸ್ಥಿತಿಯ ತರುವಾಯ ತಿರಸ್ಕೃತಗೊಂಡಿದ್ದ ಇಂದಿರಾಗಾಂಧಿಗೆ ‘ರಾಜಕೀಯ ಮರುಪ್ರವೇಶ’ಕ್ಕಾಗಿ ತಾವು ಗೆದ್ದಿದ್ದ ಚಿಕ್ಕಮಗಳೂರು ಕ್ಷೇತ್ರವನ್ನು ಬಿಟ್ಟುಕೊಟ್ಟ ಕುಟುಂಬ ನಿಷ್ಠೆ ಚಂದ್ರೇಗೌಡರದ್ದು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಚಿಕ್ಕಮಗಳೂರಿನ ದತ್ತಪೀಠದ ವಿವಾದದ ಸಂಧರ್ಭದಲ್ಲಿ ಸ್ವತಃ ತಾವೇ ಪೂಜೆಗೆ ಕೂತು ಸಿಟಿ ರವಿ, ಮುತಾಲಿಕರಂತಹವರ ಚಳುವಳಿಗಾರರನ್ನು, ಗೌರಿ ಲಂಕೇಶ, ಶಿವಸುಂದರ್ ಇತ್ಯಾದಿ ವಿರೋಧಿ ಬಣದವರನ್ನು ದಂಗುಬಡಿಸಿದ್ದರು.
ಕೊನೆಗಾಲದಲ್ಲಿ ಬಿಜೆಪಿ ಸೇರಿ ಬೆಂಗಳೂರಿನಲ್ಲೊಂದು ಸಂಸದೀಯ ಕ್ಷೇತ್ರ ಹುಡುಕಿಕೊಂಡು ಸಂಸತ್ ಸದಸ್ಯರಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಯಡಿಯೂರಪ್ಪನವರಿಗೆ ಮನೆದಾರಿ ತೋರಿಸಿದಾಗ ವಕಾಲತ್ತಿಗೆ ನಿಂತ ಋಣಸಂದಾಯ ನಿಷ್ಠೆ ಅವರದು.
ಈ ತಿಂಗಳ ಕೊನೆಯಲ್ಲಿ ಪುಸ್ತಕ ಬರಬೇಕು. ಆದರೆ ಅಗಸ್ಟ್ 27ಕ್ಕೆ ಯಡಿಯೂರಪ್ಪನವರಿಗೆ ಇರುವ ಸಮನ್ಸ್ ಮತ್ಯಾವ ರೂಪ ಪಡೆದುಕೊಳ್ಳುತ್ತದೋ ಎಂಬ ಆತಂಕದಲ್ಲಿರುವ ಚಂದ್ರೇಗೌಡರು ಮುಹೂರ್ತದ ದಿನ ಹುಡುಕುತ್ತಿದ್ದಾರೆ.
ಈ ಹಿಂದೆ ಪ್ರಜಾವಾಣಿಯ ಬಿ. ಎಂ. ಹನೀಫ಼್ ನಿರೂಪಿಸಿದ್ದ ಮೈಸೂರಿನ ರಾಜಕಾರಣಿ ಹೆಚ್. ವಿಶ್ವನಾಥರವರ ಆತ್ಮಕಥೆ ಸಾಕಷ್ಟು ಗಮನ ಸೆಳೆದಿದ್ದನ್ನು ಸ್ಮರಿಸಬಹುದು.
*********
ಸಂಸ್ಕೃತಿ ಸಂಕಥನ – ೫
– ರಮಾನಂದ ಐನಕೈ
ಆಧುನಿಕ ಇತಿಹಾಸದಲ್ಲಿ ಪದೇ ಪದೇ ಕಲ್ಯಾಣ ರಾಜ್ಯ ‘ವೆಲ್ಫೇರ್ ಸ್ಟೇಟ್’ದ ಕುರಿತು ಉಲ್ಲೇಖವಾಗುತ್ತದೆ. ಕಲ್ಯಾಣ ರಾಜ್ಯ ಅಂದರೆ ಏನು? ಪ್ರಜೆಗಳ ಸರ್ವತೋಮುಖ ಕ್ಷೇಮವನ್ನು ಹೆಗಲ ಮೇಲೆ ಹೊತ್ತ ಪರಿಕಲ್ಪನೆ ಇದು. ಸಾಮಾಜಿಕ ಭದ್ರತೆ (ಸೋಶಿಯಲ್ ಸೆಕ್ಯುರಿಟಿ) ಕಲ್ಯಾಣ ರಾಜ್ಯದ ಒಂದು ಆದರ್ಶ. ಪ್ರತಿಯೊಬ್ಬ ಪ್ರಜೆಗೆ ಸಾಮಾಜಿಕ ಭದ್ರತೆ ನೀಡುವುದೂ ಕಲ್ಯಾಣ ರಾಜ್ಯದ ಒಂದು ಗುರಿ.
ಪಾಶ್ಚಾತ್ಯರು ಈ ಸಮಾಜಿಕ ಭದ್ರತೆಯನ್ನು ಕಲ್ಪಿಸಿಕೊಂಡ ರೀತಿ ಭಿನ್ನವಾಗಿದೆ. ಈ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬ ಮನುಷ್ಯನಿಗೆ ಬದುಕುವ ಹಕ್ಕಿದೆ. ಇದನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಮನುಷ್ಯನಿಗೆ ಬದುಕಲು ಬೇಕಾದ ಅನ್ನ, ನೀರು, ಮನೆ, ಬಟ್ಟೆ ಮುಂತಾದ ಅನೇಕ ಅವಶ್ಯಕತೆಗಳನ್ನು ಪ್ರಭುತ್ವ (ಸ್ಟೇಟ್) ಪೂರೈಸಿ ಅವರಲ್ಲಿ ಭದ್ರತೆಯ ಭಾವನೆಯನ್ನು ಹುಟ್ಟಿಸಬೇಕು. ಆಗ ಪ್ರಜೆಗಳು ಸಂತೋಷವಾಗಿರುತ್ತಾರೆ ಎಂಬುದು ಅವರ ಚಿಂತನೆ. ಇದನ್ನೇ ಸಾಮಾಜಿಕ ಭದ್ರತೆ ಎಂದು ಕರೆದರು. ಇದಕ್ಕಾಗೇ ಅನೇಕ ರಾಷ್ಟ್ರಗಳು ತಮ್ಮನ್ನು ವೆಲ್ಫೇರ್ ಸ್ಟೇಟ್ಸ್ ಎಂದು ಕರೆದುಕೊಂಡವು. ಇದನ್ನು ಸರಳವಾಗಿ ಹೇಳಬಹುದಾದರೆ ಕನಿಷ್ಟ ಅವಶ್ಯಕತೆಯ ಭೌತಿಕ ಸವಲತ್ತುಗಳನ್ನು ನೀಡುವುದೇ ಅವರ ಪ್ರಕಾರ ಸಾಮಾಜಿಕ ಭದ್ರತೆ. ಪಾಶ್ಚಾತ್ಯರ ಈ ಲೋಕಜ್ಞಾನ ಭಾರತೀಯರಿಗೆ ರೋಮಾಂಚಕವಾಗಿ ಕಂಡದ್ದು ಸಹಜ. ಏಕೆಂದರೆ ಪಾಶ್ಚಾತ್ಯ ಸಂಸ್ಕೃತಿಯನ್ನು ಒಂದು ಪರಿಪೂರ್ಣ ಮಾದರಿ ಎಂದು ನಾವು ಸ್ವೀಕರಿಸಿಬಿಟ್ಟಿದ್ದೇವೆ.
`ಆವರಣ’ ಹಿಂದಿಗೆ
-ಕಾಲಂ ೯
ಕನ್ನಡದಲ್ಲಿ ವಾದ-ವಿವಾದಗಳಿಗೆ ಕಾರಣವಾಗಿದ್ದ ಎಸ್. ಎಲ್. ಭೈರಪ್ಪನವರ ‘ಆವರಣ’ ಹಿಂದಿ ಜಗತ್ತನ್ನೂ ಪ್ರವೇಶಿಸಿದೆ. ಈ ಹಿಂದೆಯೇ ತಮಿಳು, ಮರಾಠಿ, ಸಂಕ್ಸಿತಕ್ಕೆ ಆವರಣ ಹೋದ ಸುದ್ದಿ ಇತ್ತು.
ಮುಸ್ಲಿಂ ನವಾಬರ ‘ಜನಾನ’ದ ವರೆಗೆ ಕಥೆ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಬುದ್ಧಿಜೀವಿಗಳ ಹರಕು-ಹುಳುಕನ್ನು ಕಾದಂಬರಿ ಹರಾಜು ಹಾಕಿ ವಿವಾದಕ್ಕೆ ಕಾರಣವಾಗಿತ್ತು. ಒಂದೇ ವರ್ಶದಲ್ಲಿ 20ಕ್ಕೂ ಹೆಚ್ಚು ಮುದ್ರಣಗಳಿಗೂ ಹೋಗಿತ್ತು.
ಮೂಲಕಥೆ ಉತ್ತರಭಾರತದ ಹಿಂದಿ ಜಗತ್ತಿನದೇ. ಇದೀಗ ಕಾದಂಬರಿ ಹಿಂದಿ ಜಗತ್ತನ್ನು ಪ್ರವೇಶಿಸಿದೆ. ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿರುವ ಡಾ| ಪ್ರಧಾನ ಗುರುದತ್ ಹಿಂದಿಗೆ ಅನುವಾದಿಸಿದ್ದಾರೆ.
ಇಂಡಿಯಾ ಟುಡೇ ಹಿಂದಿ ಅವತರಣಿಕೆಯ ಈ ವಾರದ ಸಂಚಿಕೆ ಅರ್ಧ ಪುಟದ ವಿಮರ್ಶೆ ಪ್ರಕಟಿಸಿದೆ. ವಿಮರ್ಶಕ ಶಶಿಭೂಷಣ ದ್ವಿವೇದಿಗೆ ಪ್ರಧಾನರ ಅನುವಾದ ಸಮಧಾನ ತಂದಿಲ್ಲ.
ಇದೇ ಅಗಸ್ಟ್ 16ರಂದು ಕೇರಳದ ಕೊಚ್ಚಿನ್ ನಲ್ಲಿ ಆವರಣದ ಸಂಸ್ಕೃತ ಆವೃತ್ತಿಗೆ ಕೇಂದ್ರ ಸಾಹಿತ್ಯ ಅಕಾಡಮಿಯ ‘ಅತ್ಯುತ್ತಮ ಅನುವಾದ’ ಪುರಸ್ಕಾರ ಸಿಗಲಿದೆ ಎಂದು ಗೊತ್ತಾಗಿದೆ.
**********
ಮದನಾರಿ ಬೇಕಾ?
– ಸಚಿನ್
ಸುವರ್ಣ ನ್ಯೂಸ್ ಚಾನೆಲ್ ನಲ್ಲಿ ಪ್ರಸಾರವಾಗುವ ಕಾರ್ಯಕ್ರಮ “ಮದನಾರಿ”, ಚಿತ್ರರಂಗದ ಭಾಷೆಯಲ್ಲಿ ಹೇಳಬೇಕಾದರೆ ಇದೊಂದು ಮಸಾಲ ಕಾರ್ಯಕ್ರಮ, ಇದರ ಮುಖ್ಯ ಆಕರ್ಷಣೆ ಎಂದರೆ ಐಟಮ್ ಗರ್ಲ್ ಗಳ ಬಗ್ಗೆ ಸಂಪೂರ್ಣ ವಾದ ವಿವರ ಅವರ ಜೀವನದ ಏಳು ಬೀಳುಗಳ ಬಗ್ಗೆ ವಿವರ, ಅವರಿಗಿರುವ ಬಾಯ್ ಫ್ರೆಂಡ್ ಗಳು ಜತೆಯಲ್ಲಿ ಇರುವವರ ಹಾಗು ಕೈ ಕೊಟ್ಟವರ ಬಗ್ಗೆ ಮಾತು. ಹಾಗು ಚಿತ್ರ ರಂಗಕ್ಕೆ ಪ್ರವೇಶ ಅದರ ಹಿನ್ನೆಲೆ, ಇನ್ನು ಮುಂತಾದ ಚಿತ್ರ ವಿಚಿತ್ರ ಸಂಗತಿ ಗಳಿಂದ ಕಾರ್ಯಕ್ರಮ ವನ್ನು ನಿರೂಪಕಿ ದಿವ್ಯಶ್ರಿ ಅವರಿಂದ ನಿರೂಪಿತ ವಾಗಿತ್ತದೆ. ಪ್ರತಿ ಭಾನುವಾರ ರಾತ್ರಿ ಹಾಗೂ ವಾರದ ದಿನಗಳಲ್ಲಿ ಮತ್ತೆ ಮರುಪ್ರಸಾರ ಮಾಡಲಾಗುತ್ತದೆ.ಆದರೆ ಇಷ್ಟೇ ಆಗಿದ್ದರೆ ಈ ಕಾರ್ಯಕ್ರಮದ ಬಗ್ಗೆ ನಾವು ಇಲ್ಲಿ ಟೀಕೆ ಮಾಡುವ ಪ್ರಮೇಯ ವೇ ಬರುತ್ತಿರಲಿಲ್ಲ. ಈ ಎಲ್ಲ ವಿವರ ಗಳ ಜತೆಗೆ ಅಶ್ಲೀಲ ದೃಶ್ಯ ಗಳನ್ನು ಪ್ರಸಾರ ಮಾಡುತ್ತಾರಲ್ಲ ಅದು ಹೇಸಿಗೆ ಹುಟ್ಟಿಸುತ್ತೆ.
ಭಗವದ್ಗೀತೆಯ ಆಧುನಿಕ ನಿರೂಪಣೆಗಳು ಹಾಗೂ ಸಮಸ್ಯೆಗಳು
ಡಾ. ರಾಜಾರಾಮ ಹೆಗಡೆ
ಇತ್ತೀಚೆಗೆ ಭಗವದ್ಗೀತೆಯ ಕುರಿತು ಅನೇಕ ಚರ್ಚೆಗಳೆದ್ದಿವೆ. ಶಾಲೆಗಳಲ್ಲಿ ಅದನ್ನು ಪ್ರಚಾರ ಮಾಡುವ ಕೆಲಸವನ್ನು ಸಮರ್ಥಿಸಿ ಹಾಗೂ ವಿರೋಧಿಸಿ ಹೇಳಿಕೆಗಳು ಬರುತ್ತಿವೆ. ಈ ಎರಡೂ ಪಕ್ಷಗಳ ವಕ್ತಾರರೂ ಕೂಡ ಭಗವದ್ಗೀತೆಯು ಹಿಂದೂಗಳ ಧರ್ಮಗ್ರಂಥವೆಂಬ ಗ್ರಹಿಕೆಯನ್ನು ಆಧರಿಸಿ ವಾದ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ವಿರೋಧಿಸುವವರ ವಾದವೆಂದರೆ ಸೆಕ್ಯುಲರ್ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ಧರ್ಮದವರೂ ಇರುವ ಸಾರ್ವಜನಿಕ ಸಂಸ್ಥೆಗಳಲ್ಲಿ ಹಿಂದೂಗಳಲ್ಲದವರೂ ಭಗವದ್ಗೀತೆಯನ್ನು ಕಲಿಯಬೇಕೆನ್ನುವುದು ಸಂವಿಧಾನ ವಿರೋಧೀ ಕೃತ್ಯವಾಗುತ್ತದೆ. ಹಾಗಾಗಿ ಸೆಕ್ಯುಲರ್ ತತ್ವದ ಪ್ರಕಾರ ಅದು ತಪ್ಪೊಂದೇ ಅಲ್ಲ, ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧ ಕೂಡಾ. ಈ ವಿರೋಧವನ್ನು ಖಂಡಿಸಿರುವ ಪರ ಪಕ್ಷದವರು ಭಗವದ್ಗೀತೆಯ ಶಿಕ್ಷಣವನ್ನು ವಿರೋಧಿಸುವವರು ದೇಶ ಬಿಟ್ಟು ತೊಲಗಲಿ ಎನ್ನುತ್ತಿದ್ದಾರೆ. ಅಂದರೆ ಅಂಥ ವಿರೋಧಿಗಳ ರಾಷ್ಟ್ರೀಯತೆಯನ್ನೇ ಪ್ರಶ್ನಿಸುತ್ತಿದ್ದಾರೆ.
ಒಂದೊಮ್ಮೆ ಎರಡೂ ಪಕ್ಷದವರೂ ಒಮ್ಮತಕ್ಕೆ ಬಂದು ಭಗವದ್ಗೀತೆಯನ್ನು ಕೇವಲ ಹಿಂದೂ ಮಕ್ಕಳಿಗೆ ಕಡ್ಡಾಯ ಮಾಡಬಹುದು ಎಂದರೆ ಸಮಸ್ಯೆ ಬಗೆಹರಿಯುತ್ತದೆಯೆ? ಭಗವದ್ಗೀತೆಯು ಹಿಂದೂ ಧರ್ಮಗ್ರಂಥವೆಂದು ನಂಬಿರುವ ವಿರೋಧ ಪಕ್ಷದವರ ಪ್ರಕಾರ ದಲಿತರಿಗೆ ಹಾಗೂ ಶೂದ್ರರಿಗೆ ಅದೊಂದು ಅಪಾಯಕಾರಿ ಗ್ರಂಥವಾಗಿದೆ. ಅದನ್ನು ಶಾಲೆಗಳಲ್ಲಿ ಕಡ್ಡಾಯಮಾಡುವ ಪ್ರಯತ್ನದ ಹಿಂದೆ ಬ್ರಾಹ್ಮಣ ಪುರೋಹಿತಶಾಹಿಯ ಹುನ್ನಾರವಿದೆ. ಈ ಕಾರ್ಯದಿಂದ ಅಲ್ಪಸಂಖ್ಯಾತರಿಗೊಂದೇ ಅಲ್ಲ, ದಲಿತ-ಶೂದ್ರರ ಹಿತಾಸಕ್ತಿಗೂ ಧಕ್ಕೆಯಿದೆ. ಈ ವಾದಕ್ಕೆ ಪರಪಕ್ಷದವರು ನೀಡುವ ಉತ್ತರವೆಂದರೆ ಇಂಥ ಹೇಳಿಕೆಗಳು ಬರುತ್ತಿರುವುದೇ ಹಿಂದೂ ಧರ್ಮದ ಅವನತಿಯ ದ್ಯೋತಕ. ಹಾಗಾಗಿ ಇಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಹಾಗೂ ಹಿಂದೂ ಧರ್ಮದ ಐಕ್ಯತೆಯನ್ನು ಸಾಧಿಸಲು ಹಿಂದೂ ಧರ್ಮಗ್ರಂಥಗಳನ್ನು ಕಡ್ಡಾಯವಾಗಿಯಾದರೂ ಹಿಂದೂಗಳಿಗೆ ತಿಳಿಸುವುದು ಅತ್ಯಗತ್ಯ. ಮತ್ತಷ್ಟು ಓದು 
ಸಂಸ್ಕೃತಿ ಸಂಕಥನ – ೪
– ರಮಾನಂದ ಐನಕೈ
ಧರ್ಮದ ಮೈಮೇಲೆ – ರಿಲಿಜನ್ನಿನ ಅಂಗಿ
ವಿಪರ್ಯಾಸ ನೋಡಿ. ಒಂದು ಕಡೆ ‘ಹಿಂದೂ ಧರ್ಮ’ ಅನ್ನುತ್ತೇವೆ. ಇನ್ನೊಂದು ಕಡೆ ಅದನ್ನೇ ‘ಹಿಂದೂ ರಿಲಿಜನ್’ ಅನ್ನುತ್ತೇವೆ. ಯಾವುದೇ ಭಾರತೀಯರನ್ನು ಕೇಳಿದರೆ ಇವೆರಡರ ನಡುವೆ ವ್ಯತ್ಯಾಸವೇ ಇಲ್ಲ ಎಂದು ಆತ್ಮವಿಶ್ವಾಸದಿಂದ ಪ್ರತಿಪಾದಿಸುತ್ತಾರೆ. ಇವೆರಡರ ವ್ಯತ್ಯಾಸ ತಿಳಿಯದಿದ್ದದ್ದೇ ಭಾರತೀಯರ ಮುಖ್ಯ ಮಾನಸಿಕ ತೊಂದರೆ. ಹಾಗಾಗೇ ನಿತ್ಯ ಗೊಂದಲದಲ್ಲಿ ಒದ್ದಾಡುತ್ತೇವೆ.
‘ರಾಜಕೀಯದಲ್ಲಿ ಧರ್ಮ ಇರಬಾರದು’, ‘ಸಾಹಿತ್ಯದಲ್ಲಿ ಧರ್ಮ ಬರಬಾರದು’, ‘ಕೋಮು ಗಲಭೆಗೆ ಧರ್ಮ ಕಾರಣ’ – ಇತ್ಯಾದಿ ಹೇಳಿಕೆ ಕೇಳಿದಾಗ ನಮಗೆ ಪುನಃ ಗೊಂದಲ. ಏಕೆಂದರೆ ಈ ಹೇಳಿಕೆಯನ್ನು ತೇಲಿ ಬಿಡುವವರು ಬುದ್ಧಿಜೀವಿಗಳು. ಅವರು ರಿಲಿಜನ್ ಎಂಬ ಪರಿಕಲ್ಪನೆಯ ಮೇಲೆ ಪ್ರಜ್ಞಾಪೂರ್ವಕವಾಗಿ ವಾದಿಸುತ್ತಾರೆ. ಆದರೆ ನಾವು ಸಾಮಾನ್ಯ ನಾಗರಿಕರು ಧರ್ಮ ಎಂಬ ಅರ್ಥದ ನೆಲೆಯಲ್ಲಿ ಅದನ್ನು ಗ್ರಹಿಸುತ್ತೇವೆ. ಹಾಗಾಗಿ ಎಲ್ಲವೂ ನಮ್ಮ ಮನಸ್ಸಿಗೆ ಅರ್ಧಸತ್ಯ ಅನಿಸುತ್ತದೆ. ಧರ್ಮ ಬೇಡ ಅಂದರೆ ಪ್ರತಿಯೊಂದಕ್ಕೂ ಅದರದ್ದೇ ಆದ ಕರ್ತವ್ಯ ಬೇಡವೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂದರೆ ಧರ್ಮ ಹಾಗೂ ರಿಲಿಜನ್ ಮಧ್ಯೆ ವ್ಯತ್ಯಾಸ ಇರಲೇಬೇಕೆಂಬುದು ನಮ್ಮ ಗೃಹಿಕೆಗೆ ಸೂಚಿಸುತ್ತದೆ. ಎರಡೂ ಒಂದೇ ಆಗಿದ್ದರೆ ಈ ರೀತಿ ಗೊಂದಲ ಏಕೆ ಸೃಷ್ಟಿಯಾಗುತ್ತದೆ? ಇದೇ ಅರ್ಥವಾಗದ ಒಗಟು.
ಸಂಸ್ಕೃತಿ ಸಂಕಥನ – ೩
– ರಮಾನಂದ ಐನಕೈ
ವಿದ್ಯಾವಂತರೆನಿಸಿಕೊಂಡ ನಮಗೆಲ್ಲ ಒಂದು ತೊಂದರೆ ಇದೆ. ಅದೇನೆಂದರೆ ನಮ್ಮ ಜೀವನಶೈಲಿಯೊಂದಿಗೆ ಅನಿವಾರ್ಯವಾಗಿ ಪಾಲಿಸಲೇಬೇಕಾದ ಸಂಪ್ರದಾಯಗಳು. ಇದನ್ನು ಪಾಲಿಸದಿದ್ದರೆ ನಾವು ಸಮುದಾಯದಿಂದ ಹೊರಗುಳಿಯತ್ತೇವೆ. ಕೆಲವೊಮ್ಮೆ ಮಾನಸಿಕವಾಗಿ ನಮ್ಮೊಳಗೇ ಅಭದ್ರತೆಗೊಳಗಾಗುತ್ತೇವೆ. ಹಾಗಂತ ಸಂಪ್ರದಾಯವನ್ನು ಪಾಲಿಸಲು ನಮ್ಮ ವೈಚಾರಿಕತೆ ಅನುವು ಮಾಡಿಕೊಡುವುದಿಲ್ಲ. ನಾವು ಭೌತಿಕವಾಗಿ ಬದುಕುತ್ತಿರುವುದು ಸಂಪ್ರದಾಯದ ಸಮಾಜದಲ್ಲಿ. ಮಾನಸಿಕವಾಗಿ ಬದುಕುತ್ತಿರುಉವದು ವೈಚಾರಿಕತೆಯೆಂಬ ಭ್ರಮೆಯಲ್ಲಿ. ಯಾಕೆ ಹೀಗಾಗುತ್ತಿದೆ? ನಮ್ಮ ಸಂಪ್ರದಾಯಗಳಲ್ಲಿ ನಮಗೇಕೆ ಅರ್ಥ ಕಾಣುತ್ತಿಲ್ಲ? ಅಥವಾ ಅರ್ಥ ಹುಡುಕುವ ಹಠವಾದರೂ ಏಕೆ? ಇವುಗಳಿಗೆಲ್ಲ ಅರ್ಥ ಇರಲೇಬೇಕೆಂದಿದೆಯೇ? ಸ್ವತಂತ್ರ ಭಾರತದ 60 ವರ್ಷ ಕಳೆದರೂ ಇಂಥ ಗೊಂದಲಗಳಿಂದ ಮುಕ್ತರಾಗದೇ ಇದ್ದದ್ದು ನಿಜಕ್ಕೂ ಗಂಭೀರವಾಸ್ತವ.
ಸಂಪ್ರದಾಯ ಅಂದರೆ ತಲೆತಲಾಂತರದಿಂದ ನಡೆಸಿಕೊಂಡು ಬಂದ ಆಚರಣೆಗಳು. ನಮ್ಮ ಹಿರಿಯರು ಅವರ ಹಿರಿಯರನ್ನು ಅನುಕರಿಸಿದರು. ಅವರ ಹಿರಿಯರು ಅವರ ಹಿರಿಯರನ್ನು… ಹೀಗೆ ಯಾಕೆ ಆಚರಿಸಬೇಕೆಂದು ಯಾರೂ ಯಾರನ್ನೂ ಪ್ರಸ್ನಿಸಲಿಲ್ಲ. ಪ್ರಶ್ನಿಸುವ ಜಿಜ್ಞಾಸ ಹುಟ್ಟಲೇ ಇಲ್ಲ. ಏಕೆಂದರೆ ಎಲ್ಲರೂ ಅದು ತಮ್ಮದು ಎಂದು ನಂಬಿದ್ದರು. ಪ್ರೀತಿಸುತ್ತಿದ್ದರು. ಸ್ವಾತಂತ್ರ್ಯಾನಂತರ ನಮಗೆ ಸಂಪ್ರದಾಯಗಳ ಕುರಿತು ಹೆಚ್ಚು ಪ್ರಶ್ನೆಗಳು ಏಳಲು ಶುರುವಾಗಿವೆ. ಅದಕ್ಕೆ ಕಾರಣ ನಾವು ಪ್ರಭಾವಿಸಿಕೊಂಡ ಎರವಲು ವೈಚಾರಿಕತೆ ಅಥವಾ ವಿಚಾರವಾದ. ಅದು ನಮ್ಮ ಶಿಕ್ಷಣ ಹಾಗೂ ಓದುತ್ತಿರುವ ಸಮಾಜವಿಜ್ಞಾನಗಳಿಂದ ಸೃಷ್ಟಿಯಾದದ್ದು. ಪರೋಕ್ಷವಾಗಿ ಹೇಳಬಹುದಾದರೆ ಪಾಶ್ಚಾತ್ಯರು ಹೇಳಿಕೊಟ್ಟ ಕಂಠಪಾಠ. ಅವರ ಪ್ರಕಾರ ವೈಚಾರಿಕತೆಯತ್ತ ಸಾಗುವುದೇ ಪ್ರಗತಿ ಅಥವಾ ನಾಗರಿಕತೆಯ ಲಕ್ಷಣ. ಭಾರತೀಯ ಸಂಪ್ರದಾಯಗಳು (ಹಿಂದೂ ರಿಲಿಜನ್) ಅವೈಚಾರಿಕವಾದ್ದರಿಂದ ಭಾರತ ಹಿಂದುಳಿದ ದೇಶ. ಇಲ್ಲಿಯ ಜನ ಮೂಢರು ಮತ್ತು ದಡ್ಡರು. ಅರ್ಥವಿಲ್ಲದ ಆಚರಣೆಗಳನ್ನು ಮಾಡುವವರು ಎಂಬಿತ್ಯಾದಿ. ಇದೇ ನಿಜ ಎಂದು ನಾವೆಲ್ಲ ನಂಬಿಕೊಂಡಿದ್ದರಿಂದ ನಮ್ಮ ಸಂಪ್ರದಾಯಗಳು ನಮಗೆ ಅರ್ಥಹೀನ ಅನಿಸುತ್ತದೆ.
ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?

ರಾಶಿ ಮತ್ತು ನಕ್ಷತ್ರ…
– ಗೋವಿಂದ ರಾವ್ ವಿ ಅಡಮನೆ
ಜನ್ಮರಾಶಿ ಮತ್ತು ನಕ್ಷತ್ರಗಳಿಗೆ ಜ್ಯೋತಿಷಿಗಳು ಬಲು ಪ್ರಾಧಾನ್ಯ ನೀಡುತ್ತಾರೆ. ಅವರು ನೀಡುತ್ತಿರುವ ಪ್ರಾಧಾನ್ಯ ಯುಕ್ತವಾದದ್ದೇ ಎಂಬುದನ್ನು ನೀವೇ ತೀರ್ಮಾನಿಸಲು ಅಗತ್ಯವಾದ ಕೆಲವು ಮೂಲಭೂತ ಮಾಹಿತಿ ಒದಗಿಸುವ ಉದ್ದೇಶದಿಂದ ಈ ಲೇಖನ ಬರೆಯುತ್ತಿದ್ದೇನೆ.
ರಾಶಿಗೆ ಸಂಬಂಧಿಸಿದಂತೆ ನೀವು ತಿಳಿದಿರಲೇ ಬೇಕಾದ ಅಂಶಗಳು ಇಂತಿವೆ
ರಾಶಿಯನ್ನು, ಅರ್ಥಾತ್ ತಾರಾರಾಶಿಯನ್ನು ಎರಡು ರೀತಿಯಲ್ಲಿ ವ್ಯಾಖ್ಯಾನಿಸಬಹುದು. ಅಧ್ಯಯಿಸಲು ಅನುಕೂಲ ಆಗಲಿ ಎಂದು ಖಗೋಲದ ಒಟ್ಟು ಕ್ಷೇತ್ರವನ್ನು ೮೮ ಭಾಗಗಳಾಗಿ ಇಂಟರ್ ನ್ಯಾಶನಲ್ ಅಸ್ಟ್ರನಾಮಿಕಲ್ ಯೂನಿಯನ್ ವಿಭಜಿಸಿದೆ. ಆಧುನಿಕ ಖಗೋಲವಿಜ್ಞಾನದ ಪ್ರಕಾರ ಈ ವಿಭಾಗಗಳಿಗೆ ತಾರಾರಾಶಿಗಳು (ಕಾನ್ಸ್ಟಲೇಷನ್ಸ್) ಎಂದು ಹೆಸರು. ಎಂದೇ, ಖಗೋಲದ ಒಂದು ಸೀಮಿತ ಕ್ಷೇತ್ರದಲ್ಲಿ ಇರುವ ತಾರೆಗಳ ಸಮೂಹವೇ ರಾಶಿ, ಪ್ರತೀ ಭಾಗದಲ್ಲಿಯೂ ಅನೇಕ ತಾರೆಗಳು ಇರುವುದರಿಂದ. ತಾರಾನಿಬಿಡ ಆಕಾಶವನ್ನು ತದೇಕಚಿತ್ತದಿಂದ ಅವಲೋಕಿಸುತ್ತಿದ್ದರೆ ಕೆಲವು ಒಂಟಿ ತಾರೆಗಳು ತಮ್ಮ ಉಜ್ವಲತೆಯಿಂದಾಗಿ ನಮ್ಮ ಗಮನ ಮೊದಲು ಸೆಳೆಯುತ್ತವೆ. ತದನಂತರ ಸಾಪೇಕ್ಷವಾಗಿ ಆಸುಪಾಸಿನಲ್ಲಿ ಇರುವ ಕೆಲವು ತಾರೆಗಳು ನಮ್ಮ ಮನಃಪಟಲದಲ್ಲಿ ವಿಶಷ್ಟ ಆಕೃತಿಗಳನ್ನು ಮೂಡಿಸುವುದರ ಮುಖೇನ ನಮ್ಮ ಗಮನ ಸೆಳೆಯುತ್ತವೆ.
ಆಹಾ ಎಷ್ಟು ಮಜವಾಗಿತ್ತು ಆ ಕಾಲ…….!!!!
– ಪವನ್ ಪರುಪತ್ತೇದಾರ್
ನಮ್ಮ ತಾತಂದಿರು ಹಳೆ ಕಾಲದ ಕಥೆಗಳನ್ನು ಹೇಳುವಾಗ ಮೊದಲು ಸ್ವಲ್ಪ ಸಮಾಧಾನದಿಂದ ಕೇಳ್ತೇವೆ ಬರು ಬರುತ್ತಾ ಅವರು ಅದೇ ಕಥೆಗಳನ್ನು ಮತ್ತೆ ಮತ್ತೆ ಹೇಳುತ್ತಾರೆ ನಮಗೂ ಬೋರ್ ಅನಿಸಿ
ತಾತಾ ಎಷ್ಟು ಸಲಿ ಅದೇ ಕಥೆಗಳನ್ನ ಹೇಳ್ತಿರ ಅಂತ ಗೊಣಗಿಕೊಂಡು ಎದ್ದು ಹೋಗ್ತಿವಿ. ಇಂಥ ಅನುಭವಗಳು ಸಾಮಾನ್ಯವಾಗಿ ಎಲ್ಲರಿಗು ಆಗ್ತವೆ. ನನಗು ಹಾಗೇ ನಮ್ಮ ತಾತ ಕಥೆಗಳನ್ನ ಹೇಳ್ತಾ ಇದ್ರೂ ಅವರು ತಮ್ಮ ಬ್ರಿಟಿಶ್ ಮೇಷ್ಟ್ರಿಗೆ ಚಳ್ಳೆ ಹಣ್ಣು ತಿನ್ನಿಸಿ ಚಕ್ಕರ್ ಹಾಕಿದ್ದು, ಆಗಿನ ಕಾಲಕ್ಕೆ ಲೋಯರ್ ಸೆಕೆಂಡರಿ ಮುಗಿಸಿ ಕುಟುಂಬದಲ್ಲಿ ಹೆಸರು ಮಾಡಿದ್ದೂ, ಊರಿಗೆ ಮೊದಲನೇ ಎಲೆಕ್ಟ್ರಿಕ್ contractor ಆಗಿದ್ದು, ಊರಿನ ಪ್ರೆಸಿಡೆಂಟ್ ಆಗಿದ್ದು, ಆಗಿನ ಜನ, ಹಾಗೆ ಹೀಗೆ ಹುಹ್! ಇನ್ನು ಬಹಳಾ.
ಆದರೆ ನಾವು ಅವರು ಕಥೆ ಹೇಳುವಾಗ ಮುಗು ಮುರಿದು ಹೋಗುತಿದ್ದೆವಲ್ಲ, ನಮಗೆಲ್ಲಿ ಅರಿವಿತ್ತು ಆಗಿನ ಅ ಕಾಲದ ಬಗ್ಗೆ ಎಷ್ಟು ಹೇಳಿದರು ಮತ್ತೆ ಮತ್ತೆ ನಮ್ಮ ತಾತನವರಿಗೆ ಹೇಳಬೇಕು ಎನಿಸಿತ್ತು ಎಂದು. ಯಾಕಂದರೆ ಅ ಕಾಲವೇ ಹಾಗಿತ್ತು ಎಷ್ಟು ಅದರ ಬಗ್ಗೆ ಕೊಂಡಾಡಿದರು ಸಾಲದಂಥ ಕಾಲ. ನನಗೆ ಯಾಕೆ ಹೀಗನಿಸಿತ್ತು ಅಂದರೆ ನನಗೂ ಸಹ ಕಳೆದ ಹತ್ತು ವರ್ಷಕ್ಕೂ ಇಗ್ಗು ಬಹಳ ವ್ಯತ್ಯಾಸ ಕಾಣುತ್ತಿದೆ. ನನಗೆ ಇತ್ತೀಚಿಗಷ್ಟೇ ಇದರ ಅರಿವಾಯಿತು.
ರಾಗಿ ಬೆಳೆ ಬಲೆ ಚೆನ್ನಾಗೈತೆ ಸ್ವಾಮಿ, ಈ ಸಲ ಒಳ್ಳೆ ಬಂಪರ್ ಕಾಸ್ ಮಾಡ್ತ್ಯ ಅಂತ ಚಿಕ್ಕಣ್ಣ ಹೇಳಿದಾಗ ನಮ್ಮಪ್ಪನಿಗೆ ಒಂಥರಾ ಸಂತೋಷ. ಅಂತು ಟೈಮ್ ಗೆ ಸರ್ಯಾಗಿ ಉಳಿಸಿ, ಬಿತ್ತನೆ ಮಾಡಿಸಿ, ಗೊಬ್ಬರ ಚೆಲ್ಲಿ, ಕಳೆ ಒರೆದು, ಗುಂಟುವೆ ಹಾಕಿಸಿ, ಇರೋ ಮುಕ್ಕಾಲು ಎಕರೆಗೆ 10 ಸಾವಿರ ಖರ್ಚ ಮಾಡಿದ್ದಕ್ಕೆ ಇಷ್ಟ ಮಾತ್ರ ಬೆಳೆ ಆಗಿರೋದು ಚಿಕ್ಕಣ್ಣ ಅಂತ ಸ್ವಲ್ಪ ಬಿಂಕದಿಂದನೆ ಅಂದ್ರು. ಅಂಗಲ್ಲ ಸ್ವಾಮಿ ರೇಟ್ ಚೆನ್ನಾಗೈತೆ ಈಗ ಕೆಂಪು ರಾಗಿ 13 ರೂಪಾಯಿಗೆ ತೊಕೊತಾರೆ ಅಂತ ಚಿಕ್ಕಣ್ಣ ಹೇಳೋವಾಗ ಮಧ್ಯಕ್ಕೆ ಬಾಯಿ ಹಾಕಿ ನಮ್ಮಪ್ಪ ನಂದೊಂದು ೧೫ ಮೂಟೆ ಆಗ್ತದಲ್ಲ ಚಿಕ್ಕಣ್ಣ ಅಂದ್ರು ಸ್ವಲ್ಪ ಹೊತ್ತು ಯೋಚನೆ ಮಾಡಿ ಇನ್ನ ಒಂದು ಹೆಚ್ಚೇ ಆಗ್ತದೆ ಸ್ವಾಮಿ ಅಂದ ಚಿಕ್ಕಣ್ಣ. ನಮ್ಮಪ್ಪ ಸರಿ ಹಾಗಾದ್ರೆ ನಾಳೇನೇ ಕೂಲಿಯವರನ್ನ ಕರೆಸಿಬಿಡು ಕುಯ್ಯಿಸಿಬಿಡನ ಅಂದ್ರು.






