ಅಸಂವಿಧಾನಿಕ ಡಬ್ಬಿಂಗ್ ನಿಷೇಧದಿಂದ ಕನ್ನಡಕ್ಕಿಲ್ಲದ ಹ್ಯಾರಿ ಪಾಟರ್..!

ಇತ್ತೀಚಿಗೆ ಬಂದ ಸುದ್ದಿಯಂತೆ, ಹ್ಯಾರಿ ಪಾಟರಿನ ಹೊಸ ಚಿತ್ರ ತೆರೆಗೆ ಬಂದಿದೆ. ಅಶ್ಟೆ ಅಲ್ಲ ಇದು ಬಾರತದ ಪ್ರಾದೇಶಿಕ ಬಾಶೆಗಳತ್ತ ತನ್ನ ಗಮನವನ್ನು ಹರಿಸುತ್ತ, ಚಿತ್ರವನ್ನು ಇಂಗ್ಲೀಶಿನ ಜೊತೆಗೆ ತೆಲುಗು, ತಮಿಳು, ಹಿಂದಿಯಲ್ಲೂ ಬಿಡುಗಡೆ ಮಾಡುತ್ತಿದೆ. ಇದರರ್ಥ ಆಂದ್ರಪ್ರದೇಶ, ತಮಿಳುನಾಡಿನ ಮತ್ತು ಉತ್ತರ ಬಾರತದ ಅನೇಕ ರಾಜ್ಯಗಳ ಜನರು ಹ್ಯಾರಿ ಪಾಟರನ್ನು ತಮ್ಮ ತಾಯ್ನುಡಿಯಲ್ಲೇ ನೋಡಿ ಸವಿಯಬಹುದಾಗಿದೆ. ಆದರೆ ಈ ಸೌಬಾಗ್ಯ ಕನ್ನಡ ಬಾಶೆಯನ್ನಾಡುವ, ಕನ್ನಡದಲ್ಲೇ ಮನರಂಜನೆಯನ್ನು ಬಯಸುವ ನಮಗೆ ಇಲ್ಲ.
ಕರ್ನಾಟಕದಲ್ಲಿ ಇಂಗ್ಲೀಶ ಚಿತ್ರಗಳು ಇಂಗ್ಲೀಶಿನಲ್ಲೇ ಬಿಡುಗಡೆಯಾಗಬೇಕು ಎಂಬ ನಿಯಮವೇನು ಇಲ್ಲ. ಅದರರ್ಥ ಈ ಚಿತ್ರ ಕರ್ನಾಟಕದಲ್ಲಿ ಇಂಗ್ಲೀಶ ಜೊತೆಗೆ ತೆಲುಗು, ತಮಿಳು, ಹಿಂದಿಯಲ್ಲೂ ಬಿಡುಗಡೆ ಆಗಬಹುದು. ಹೀಗೆ ಕರ್ನಾಟಕದಲ್ಲಿ ಇಂಗ್ಲೀಶ ಚಿತ್ರ ಇಂಗ್ಲೀಶೇತರ ಇತರ ಬಾಶೆಗಳಲ್ಲಿ ಬಿಡುಗಡೆಯಾದರೆ ಅಲ್ಲಿಗೆ ಡಬ್ಬಿಂಗ್ ನಿಶೇದವಿದೆ ಎಂಬ ಮಾತು ಶುದ್ದ ಸುಳ್ಳಾಗುತ್ತದೆ. ಅದರರ್ಥ ಕರ್ನಾಟಕದಲ್ಲಿ ಡಬ್ಬಿಂಗ್ ಚಿತ್ರಗಳಿಗೆ ಅನುಮತಿಯಿದೆ, ಆದರೆ ಕನ್ನಡಕ್ಕೆ ಡಬ್ ಆದ ಚಿತ್ರಗಳಿಗೆ ಅನುಮತಿಯಿಲ್ಲ. ಹ್ಯಾರಿ ಪಾಟರ್ ತೆಲುಗು, ತಮಿಳು, ಹಿಂದಿಗಳಿಗೆ ಡಬ್ ಆಗಿ ಕರ್ನಾಟಕದಲ್ಲಿ ಬಿಡುಗಡೆಯಾದರೆ ಓಕೆ,, ಆದರೆ ಅದೇ ಚಿತ್ರ ಕನ್ನಡಕ್ಕೆ ಡಬ್ ಆಗಿ ಬಿಡುಗಡೆಯಾಗಲಿ ಅಂದ್ರೆ ಯಾಕೆ.? ಅಂತ ಕೇಳ್ತಾರೆ ನಮ್ಮ ಚಲನಚಿತ್ರ ಮಂಡಳಿ. ಈ ಪ್ರಶ್ನೆಯಲ್ಲಿ ಸ್ವಲ್ಪನಾದ್ರೂ ನ್ಯಾಯ ಇದೆಯಾ.!
ಅಸಂವಿಧಾನಿಕ ನಿಯಮ:
ಆಂಗ್ಲ ಬಾಶೆಯ ಬಹುಕೋಟಿ ವೆಚ್ಚದ, ಉನ್ನತ ತಂತ್ರಜ್ನಾನ, ಗ್ರಾಫಿಕ್ಸ್ ಇರುವ ಚಿತ್ರಗಳನ್ನು ಬರೀ ಇಂಗ್ಲೀಶ ಬಲ್ಲವರಶ್ಟೇ ನೋಡಬೇಕು ಎಂಬಂತಿದೆ ನಮ್ಮ ಚಿತ್ರರಂಗದ ಈಗಿನ ನಿಯಮ. ಕರ್ನಾಟಕದಲ್ಲಿ ಇಂಗ್ಲೀಶ್ ಬಾರದವರು ಈ ಚಿತ್ರ ನೋಡಬೇಕೆಂದರೆ ಅವರು ತಮಿಳು, ತೆಲುಗು, ಹಿಂದಿಗೆ ಮೊರೆ ಹೋಗಬೇಕಾದ ಪರಿಸ್ಥಿತಿಯನ್ನು ಈ ಡಬ್ಬಿಂಗ್ ನಿಶೇದದ ನಿಯಮ ತಂದೊಡ್ಡಿದೆ. ಚಿತ್ರರಂಗದ ಈ ಅಸಂವಿದಾನಿಕ ಡಬ್ಬಿಂಗ್ ನಿಶೇದದ ನಿಯಮದಿಂದ ಕೆಲವು ಒಳ್ಳೆಯ ಮನರಂಜನೆಯಿಂದ ಕರ್ನಾಟಕದ ಜನರು ವಂಚಿತರಾಗುತ್ತಿದ್ದಾರೆ. ಈ ಹ್ಯಾರಿ ಪಾಟರ್ ಚಿತ್ರ ಹೆಚ್ಚು ಮಕ್ಕಳ ಮನರಂಜನೆ ಉದ್ದೇಶಿಸಿ ಮಾಡಿರೋದ್ರಿಂದ ಡಬ್ಬಿಂಗ್ ನಿಶೇದದಿಂದಾಗಿ ಕನ್ನಡದ ಮಕ್ಕಳಿಗೆ ಮೋಸವಾಗ್ತಿದೆ ಎಂಬುದನ್ನು ಕೂಡ ಇಲ್ಲಿ ಗಮನಿಸಬೇಕು. ಪ್ರೇಕ್ಷಕನಿಗೆ ನೀನು ಇದನ್ನೇ ನೋಡು ಅಥವಾ ಇದೇ ಬಾಶೆಯಲ್ಲಿ ನೋಡು ಎಂದು ಡಬ್ಬಿಂಗ್ ನಿಶೇದ ಎಂಬ ಅಸ್ತ್ರದ ಮೂಲಕ ಒತ್ತಾಯಿಸುವುದು ಸಂವಿದಾನ ವಿರೋದಿಯಾದ ನಡೆ. ಜಗತ್ತಿನ ಎಲ್ಲ ಒಳ್ಳೆಯ ಮನರಂಜನೆಯನ್ನು ತನ್ನ ನುಡಿಯಲ್ಲಿ ನೋಡುವ ಹಕ್ಕು ಅವನಿಗಿದೆ. ಡಬ್ಬಿಂಗ್ ನಿಶೇದದಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಡಬ್ಬಿಂಗ್ ಬರಲಿ. ಒಳ್ಳೆಯ ಮನರಂಜನೆ ಅನ್ನೋದು ನಗರ ಪ್ರದೇಶಗಳ ಅಥವಾ ಇಂಗ್ಲೀಶ್ ಬಲ್ಲ ಕೆಲವ್ರಿಗೆ ಮಾತ್ರ ಸೀಮಿತ ಆಗದೇ ರಾಜ್ಯದ ಎಲ್ಲರಿಗೂ ಅವರು ಆಡುವ ನುಡಿಯಲ್ಲೇ ಅದುಸಿಗುವಂತಾಗಲಿ. ಕರ್ನಾಟಕದಲ್ಲಿ ಎಲ್ಲರಿಗೂ ಕನ್ನಡದಲ್ಲಿ ಮನರಂಜನೆ ಸಿಗುತ್ತದೆ ಎಂಬ ಉದ್ದೇಶವನ್ನು ಡಬ್ಬಿಂಗ್ ಹೊಂದಿದೆ ಎಂಬ ಸಾಮಾನ್ಯ ತಿಳುವಳಿಕೆಯನ್ನು ಡಬ್ಬಿಂಗ್ ವಿರೋದಿಗಳು ಅರಿಯಬೇಕಿದೆ.!
ಸಂಸ್ಕೃತಿ ಸಂಕಥನ – ೨
-ರಮಾನಂದ ಐನಕೈ
ಸಂಸ್ಕೃತಿ ಸಂಕಥನ – ೧
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ಸ್ಮೃತಿ ವಿಸ್ಮೃತಿಯಾಗಿದೆ. ಇದಕ್ಕೆ ಕಾರಣವೇನು ಈ ಮರೆವನ್ನು ಪುನಃ ನೆನಪಿಸಿಕೊಳ್ಳುವುದು ಹೇಗೆ? ಸಂಸ್ಕೃತಿಯನ್ನು ಮರೆತದ್ದರಿಂದ ಆದ ಪರಿಣಾಮಗಳೇನು? ಹೀಗೆ ಯೋಚಿಸಲು ಹೋದರೆ ನಮ್ಮೆದುರು ನೂರಾರು ಪ್ರಶ್ನೆಗಳುಂಟು. ಭಾರತೀಯರು ತಮ್ಮ ಸಂಸ್ಕೃತಿಯ ಕುರಿತಾಗಿ ಕೇಳುತ್ತಿರುವ, ಓದುತ್ತಿರುವ, ನಂಬಿಕೊಂಡಿರುವ ಹಲವು ಸಂಗತಿಗಳು ತಪ್ಪು ತಿಳುವಳಿಕೆಂದ ಕೂಡಿದ್ದರಿಂದ ವರ್ತಮಾನದ ಭಾರತದಲ್ಲಿ ಅನೇಕಾನೇಕ ಸಮಸ್ಯೆಗಳು ಜೀವಪಡೆಯುತ್ತಲೇ ಇವೆ. ಈ ಸತ್ಯ ಅರ್ಥವಾಗಬೇಕಾದರೆ ಇತ್ತೀಚೆಗೆ ಪ್ರಕಟಗೊಂಡ ಎರಡು ಕನ್ನಡದ ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಲೇಬೇಕು.
ಒಂದು ಸ್ಮೃತಿ-ವಿಸ್ಮೃತಿ ಭಾರತೀಯ ಸಂಸ್ಕೃತಿ ಎಂಬ ಪುಸ್ತಕ ಇದು ಪ್ರೊ. ಬಾಲಗಂಗಾಧರರ ಸಂಶೋಧನಾ ಗ್ರಂಥ ಇದನ್ನು ಪ್ರೊ. ರಾಜಾರಾಮ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದಾರೆ. ಇನ್ನೊಂದು ಪುಸ್ತಕ ಪೂರ್ವಾವಲೋಕನ. ಇದು ಬಾಲಗಂಗಾಧರರ ಬಿಡಿ ಲೇಖನಗಳ ಅನುವಾದಗಳ ಸಂಗ್ರಹ. ಇವೆರಡೂ ಕೂಡಾ ಭಾರತೀಯ ಸಮಾಜ ವಿಜ್ಞಾನವನ್ನು ಪುನರ್ಪರಿಶೀಲನೆಗೆ ಹಚ್ಚುವ ಮಹತ್ವದ ಕೃತಿಗಳು.
ಕಂದಮ್ಮನಿಗೆ ಎಲ್ಲವೂ ಅರ್ಥವಾಗುತ್ತೆ!
– ವಿಷ್ಣುಪ್ರಿಯ
ಮಕ್ಕಳು ಮೂರೇ ತಿಂಗಳು ಪ್ರಾಯವಾಗಿದ್ದಾಗಲೇ ಅಮ್ಮನ ಮಾತುಗಳನ್ನು ಅರ್ಥ ಮಾಡಿಕೊಳ್ಳುವ ಸಾಮಥ್ರ್ಯ ಹೊಂದಿರುತ್ತವಂತೆ. ಒಂದು ಜೀವ ತಾಯಗರ್ಭದಲ್ಲಿ ಮೊಳಕೆಯೊಡೆಯಬೇಕು
ಎಂದಾದರೆ ಅಲ್ಲಿ ತಂದೆಯ ರೇತಸ್ಸು (ವೀರ್ಯ) ಮತ್ತು ತಾಯಿ ಆತ್ಮಭೂಯದ (ಅಂಡಾಣು ಎನ್ನಬಹುದು) ಮಿಲನವಾಗಬೇಕು. ಗರ್ಭದಲ್ಲಿರುವ ಮಗುವಿನ ನಾಭಿಯಿಂದ ಹೊರಟಂಥ ಕರುಳಬಳ್ಳಿ ತಾಯಿಯ ಜೊತೆಗೆ ನಂಟು ಬೆಳೆಸುತ್ತದೆ. ತಾಯಿಯ ಆತ್ಮಭೂಯ ಮತ್ತು ತಂದೆಯ ರೇತಸ್ಸಿನಲ್ಲಿ ಹಲವು ತಲೆಮಾರುಗಳ ವಂಶವಾಹಿಗಳು ಹರಿಯುವುದರಿಂದ ಸಂಬಂಧ ಬಹಳ ದೂರದವರೆಗೆ ವಿಸ್ತರಿಸುತ್ತದೆ.
ಮಕ್ಕಳ ಗ್ರಹಣಶಕ್ತಿ ಎಷ್ಟಿರುತ್ತದೆ? ಯಾವಾಗಿನಿಂದ ಮಕ್ಕಳಿಗೆ ಈ ಶಕ್ತಿ ಲಭ್ಯವಾಗುತ್ತದೆ? ಎಂಬೆಲ್ಲ ವಿಚಾರಗಳ ಬಗ್ಗೆ ಹಲವು ವರ್ಷಗಳಿಂದ ಜಿಜ್ಞಾಸೆ ಇದೆ. ಮಕ್ಕಳಿಗೆ ಬುದ್ಧಿ ಬರುವಾಗ ಮೂರ್ನಾಲ್ಕು ವರ್ಷ ಆಗುತ್ತೆ. ಅಲ್ಲಿಯವರೆಗೆ ಆವರಿಗೆ ಏನೂ ಅರ್ಥ ಆಗಲ್ಲ ಅಂತ ಒಂದು ವಾದ ಹೇಳಿದರೆ, ನಮ್ಮ ಪುರಾಣಗಳು ಮಗು ಅಮ್ಮನ ಗರ್ಭದಲ್ಲಿರುವಾಗಲೇ ಎಲ್ಲವನ್ನೂ ಅರ್ಥ ಮಾಡಿಕೊಳ್ಳುತ್ತದೆ ಎಂದು ಹೇಳುತ್ತವೆ. ಹೀಗಿರುವಾಗ ಯಾವುದು ಸರಿ ಎಂಬ ಗೊಂದಲವೂ ಕಾಡುವುದು ಸಹಜ. ಪುರಾಣಗಳನ್ನು, ವೇದ, ಉಪನಿಷತ್ತುಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗದವರು, ಸಾಧ್ಯವಿದ್ದರೂ ಅವುಗಳತ್ತ ಕಣ್ಣೆತ್ತಿಯೂ ನೋಡದವರು, ವೇದ, ಉಪನಿಷತ್ತುಗಳು, ಪುರಾಣಗಳೆಂದರೆ ಕಟ್ಟುಕಥೆಗಳೆಂದು ಭಾವಿಸುವವರು ಮೊದಲಿನ ವಾದವನ್ನೇ ಒಪ್ಪಬಹುದು. ವೇದ, ಉಪನಿಷತ್ತುಗಳು ಮತ್ತು ಪುರಾಣಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡುವವರು ಖಂಡಿತಕ್ಕೂ ಮೊದಲ ವಾದನನ್ನು ಸಾರಾಸಗಟು ತಳ್ಳಿಹಾಕುತ್ತಾರೆ.
ಕಲಾವಿದರೊಳಗಿನ ವಿವಾದಗಳ ಬ್ರಾಂಡ್ ಅಂಬಾಸಿಡರ್
–ಮಂಸೋರೆ ಬೆಂಗಳೂರು
ಈ ಲೇಖನವನ್ನು ನಾನೊಬ್ಬ ಕಲಾವಿದ ಎಂಬ ದೃಷ್ಟಿಕೋನದಿಂದಲೇ ಓದುತ್ತಾರೆ ಎಂಬ ಅರಿವಿನೊಂದಿಗೆ ಬರೆಯುತ್ತಿದ್ದೇನೆ.
ನಾನೀಗ ಬರೆಯುತ್ತಿರುವ ವಿಷಯದ ವ್ಯಕ್ತಿಯ ಕುರಿತಂತೆ ಸಾಕಷ್ಟು ಚರ್ಚೆಗಳಾಗಿವೆ. ಈ ಲೇಖನ ಆ ಚರ್ಚೆ, ಲೇಖನಗಳನ್ನು ವಿರೋದಿಸುವುದೂ ಅಲ್ಲ, ಸಮರ್ಥಿಸಿಕೊಳ್ಳುವುದು ಅಲ್ಲ. ಇದು ನನ್ನ ಸ್ವವಿಚಾರವಷ್ಟೇ.
ಹುಸೇನ್ ನನಗೆ ಈ ಕಲಾವ್ಯಾಸಂಗಕ್ಕೆ ಬರುವ ಮೊದಲಿಂದಲೂ ಗೊತ್ತು. ಈ ವ್ಯಕ್ತಿಯ ಜೊತೆ ಜೊತೆಗೆ ನನಗೆ ಗೊತ್ತಿದ್ದ ಇನ್ನಿತರ ಕಲಾವಿದರೆಂದರೆ ಕೆ.ಕೆ.ಹೆಬ್ಬಾರ್ ಮತ್ತು ರವಿವರ್ಮ ಬಿ.ಕೆ.ಎಸ್.ವರ್ಮ. ಈ ನಾಲ್ವರ ಪರಿಚಯ ನನಗೆ ನಾಲ್ಕು ವಿಭಿನ್ನ ಕಾರಣಗಳಿಂದಾಗಿ ಪರಿಚಿತರಾಗಿದ್ದರು, ಹುಸೇನ್ ಪತ್ರಿಕೆಗಳಲ್ಲಿ ಆಗಾಗ ಬರುತ್ತಿದ್ದ ಸುದ್ದಿಗಳಿಂದಾಗಿ, ಬಿ.ಕೆ.ಎಸ್ ವರ್ಮ ದೂರದರ್ಶನದಲ್ಲಿ ಚಿತ್ರ ಗೀತೆ(ಹಿನ್ನಲೆಯಲ್ಲಿ ಪರಿಸರ ಕುರಿತಾದ ಹಾಡು ಬರುತ್ತಿದ್ದರೆ ಅದಕ್ಕೆ ತಕ್ಕಂತೆ ಪ್ರಾತ್ಯಕ್ಷಿಕೆ ನೀಡುವಂತೆ ಚಿತ್ರ ರಚಿಸುತ್ತಿದ್ದರು), ಕೆ.ಕೆ ಹೆಬ್ಬಾರ್ ಕುರಿತಂತೆ ಪಠ್ಯವೊಂದಿದ್ದ ಕಾರಣದಿಂದಾಗಿ, ರವಿವರ್ಮ ಹಾಡಿನ ಮೂಲಕ(ರವಿವರ್ಮನ ಕುಂಚದ ಕಲೆ). ಇವಿಷ್ಟೇ , ಇವರಿಷ್ಟೇ ನನಗೆ ಗೊತ್ತಿದ್ದ ಕಲಾವಿದರು ಕಲಾಕೃತಿಗಳು. ಮತ್ತಷ್ಟು ಓದು 
ಸಂಸ್ಕೃತಿ ಸಂಕಥನ – ೧
– ರಮಾನಂದ ಐನಕೈ
ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಇಂದಿಗೂ ಕೂಡಾ ಗೊಂದಲವಿದೆ. ನಮ್ಮ ಆಚರಣೆಗಳು ಅರ್ಥವಿಲ್ಲದ್ದು. ಮೌಢ್ಯದಿಂದ ಕೂಡಿದ್ದು…. ಇತ್ಯಾದಿ. ನಮ್ಮ ಸುಶೀಕ್ಷಿತ ಜನರೂ ಕೂಡ ಇದನ್ನೇ ಪುನರುಚ್ಚರಿಸುತ್ತಿದ್ದಾರೆ. ಆದರೆ ಇದು ನಿಜ ಅಲ್ಲ. ಇವು ಕೇವಲ ಪಾಶ್ಚಾತ್ಯರಿಗೆ ನಮ್ಮ ಸಂಸ್ಕೃತಿಯ ಕುರಿತಾದ ಅನುಭವಗಳು. ಅವರ ಅನುಭವಗಳೇ ನಮಗೆ ಆದರ್ಶವಾಗಿದೆ.ಬೆಲ್ಜಿಯಂನ ಗೆರಿಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಾಲಗಂಗಾಧರ ಅವರು ಈ ಕುರಿತು ದೀರ್ಘ ಸಂಶೋಧನೆ ಮಾಡಿದ್ದಾರೆ. ಇವರ ಸಂಶೋಧನೆ ಭಾರತೀಯ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಲಿದೆ.
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ತಪ್ಪು ತಿಳುವಳಿಕೆ ಹೇಗೆ ಜೀವನದ ಬೇರೆ ಬೇರೆ ರಂಗದ ಮೇಲೆ ಅಡ್ಡ ಪರಿಣಾಮ ಮಾಡಿದೆ ಎಂಬ ಬಾಲಗಂಗಾಧರರ ವಾದವನ್ನು ಸರಳವಾಗಿ ಅನುಭವಕ್ಕೆ ದಕ್ಕುವಂತೆ ನಿರೂಪಿಸಲಿದ್ದಾರೆ ರಮಾನಂದ ಐನಕೈ. ಹೊಸ ಅಂಕಣ ‘ಸಂಸ್ಕೃತಿ ಸಂಕಥನ’ ಆರಂಭವಾಗಲಿದೆ.
ಇದು ಹೇಳುವಷ್ಟು ಸುಲಭವಲ್ಲ. ಆದರೂ ಒಂದು ಕ್ಷಣ ವರ್ತಮಾನದ ನಮ್ಮ ಸಿದ್ಧ ನಂಬಿಕೆಗಳನ್ನು ಪೂರ್ವಾಗ್ರಹಗಳನ್ನು ಬದಿಗಿಟ್ಟು ಮುಂದುವರಿಯೋಣ.
ಕಳೆದ ೬೦ ವರ್ಷಗಳ ನಮ್ಮ ಸ್ವತಂತ್ರ ಭಾರತದಲ್ಲಿ ನೂರಾರು ರೀತಿಯ ಮನಸ್ಸುಗಳು ಬೆಳೆಯುತ್ತ ಬಂದಿವೆ. ಪ್ರತಿಯೊಂದು ಮನಸ್ಸೂ ತನ್ನದೇ ರೀತಿಯ ವೈಚಾರಿಕ ಹಾಗೂ ಮಾನಸಿಕ ಸಾಮ್ರಾಜ್ಯವನ್ನು ಕಟ್ಟಿಕೊಂಡಿದೆ ಹಾಗೂ ಅದೇ ಅಂತಿಮ ಸತ್ಯ ಎಂದು ಪ್ರತಿಪಾದಿಸುತ್ತಲಿದೆ.ಈ ಕಾರಣಕ್ಕಾಗೇ ದೇಶದಲ್ಲಿ ಅಸಂಖ್ಯಾತ ವೈವಿಧ್ಯಮಯ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಇವುಗಳನ್ನೆಲ್ಲ ಸೇರಿಸಿ ನಾವು ಮುಖ್ಯವಾಗಿ ಎರಡು ರೀತಿಯ ಮನಸ್ಸುಗಳನ್ನು ಗುರುತಿಸೋಣ.
“ತಾವು ಕುಳಿತ ಮರದ ಕೊಂಬೆಯನ್ನು ತಾವೇ ಕಡಿದು ಕೊಳ್ಳುವ ನಮ್ಮ ಸ್ಯಾಂಡಲ್ ವುಡ್ ಮಂದಿ”
-ರತೀಶ
ನಮ್ಮ ಕನ್ನಡ ಚಿತ್ರರಂಗಕ್ಕೆ ನೇರ ಅಥವಾ ದೂರ ಸಂಪರ್ಕ ಹೊಂದಿರುವ ಯಾರದರನ್ನು ಒಬ್ಬರನ್ನು ‘ನಮ್ಮ ಸ್ಯಾಂಡಲ್ ವುಡ್ ಸಮಸ್ಯೆ ಏನು?’ ಎಂದು ಕೇಳಿ, ‘ಪರಭಾಷೆ ಚಿತ್ರಗಳ ಧಾಳಿ, ಕನ್ನಡಿಗರು ಚಿತ್ರಮಂದಿರಕ್ಕೆ ಬರವುದಿಲ್ಲ, ಕನ್ನಡ ಚಿತ್ರಗಳನ್ನು ನೋಡುವುದಿಲ್ಲ….’ ಎಂದೆಲ್ಲ ಉದ್ದುದ್ದ ಭಾಷಣ ಬಿಗಿಯುತ್ತಾರೆ. ಅವರು ಹೇಳುವ ಮಾತು ಸರಿಯಾಗಿಯೇ ಇರಬಹುದು ಹಾಗೆಯೇ ಅದಕ್ಕೆ ಕಾರಣಗಳು ಹಲವಿರಬಹುದು ಆದರೆ ಒಬ್ಬ ಸಾಮಾನ್ಯ ಪ್ರೇಕ್ಷಕನಾಗಿ ನನಗೆ ತೋಚುವುದು ಏನೆಂದರೆ ಈ ಎಲ್ಲ ಸಮಸ್ಯೆಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಚಿತ್ರರಂಗದವರೇ ಹೊಣೆ! ಅದು ಪ್ರತ್ಯಕ್ಷವಾಗಿರಬಹುದು ಅಥವಾ ಪರೋಕ್ಷವಾಗಿರಬಹುದು.
ನಿನ್ನೆ ನಾನು ಸುವರ್ಣ ಟಿವಿಯಲ್ಲಿ, ಸುವರ್ಣ ಫಿಲಂ ಅವಾರ್ಡ್ಸ್ ಕಾರ್ಯಕ್ರಮ ವೀಕ್ಷಿಸುತ್ತಿದ್ದೆ, ಬಹಳ ಅಪರೂಪಕ್ಕೆ ಅನ್ನುವಂತೆ ಕನ್ನಡಿಗರಿಗೆ ಇಂಥಹ ಕಾರ್ಯಕ್ರಮಗಳನ್ನು ನೋಡಲು ಅವಕಾಶ ಸಿಗುವುದು. ಜೊತೆಗೆ ಕನ್ನಡ ಚಿತ್ರರಂಗದವರಿಗೆ ಇದು ಅತಿ ಮುಖ್ಯ ಹಾಗು ಅತಿ ವಿರಳವಾಗಿ ದೊರಕುವಂತಹ ಅವಕಾಶ, ಇಲ್ಲಿ ಕನ್ನಡ ಚಿತ್ರರಂಗದ ವಿಶೇಷಗಳನ್ನು, ಸಾಧನೆಗಳನ್ನು, ಮುಂದಿನ ಗುರಿಗಳನ್ನು ಹಾಗು ಚಿತ್ರರಂಗದ ಹಿರಿಮೆಯನ್ನು ಜನರಿಗೆ ಹತ್ತಿರವಾಗುವಂತೆ ತಿಳಿಸುವ ಬಹುದಾದಂಥಹ ಬಹು ದೊಡ್ಡ ವೇದಿಕೆ ನಿರ್ಮಾಣವಾಗಿತ್ತು, ಆದರೆ ನಮ್ಮವರು ಅದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದು ಬೇಸರದ ಸಂಗತಿ. ಮತ್ತಷ್ಟು ಓದು 
ದಿಲ್ಲಿಯ ’ಹುಳಿ ದ್ರಾಕ್ಷೆ’ ಹಿಡಿಯಲು ಹೋಗಿ
ದಿಲ್ಲಿ ಕನ್ನಡದ ಪತ್ರಕರ್ತರಿಗೆ ದೂರ. 3000 ಕಿ.ಮೀ. ಅಷ್ಟೇ ಅಲ್ಲ. ಅದರಾಚೆಗೂ ದೂರ. ಕನ್ನಡದ ಪತ್ರಕರ್ತರು ದಿಲ್ಲಿಯಲ್ಲಿ ಹೆಜ್ಜೆ ಗುರುತು ಮೂಡಿಸುವುದು ಸುಲಭದ ಮಾತಲ್ಲ. ಏರು ಬಿಸಿಲು ಅಥವಾ ತೀವ್ರ ಚಳಿಯಲ್ಲಿ ನಿರಂತರ ಆಲೂ ಪಲ್ಯವನ್ನೂ ಅರಗಿಸಿಕೊಳ್ಳುತ್ತಲೇ ಇರಬೇಕು.
ದಿಲ್ಲಿಯ ಆಡುಭಾಷೆ ಹಿಂದಿ – ಉರ್ದು ಮಾತ್ರ. ಇಂಗ್ಲೀಷು ಅಷ್ಟಕ್ಕಷ್ಟೆ. ಇನ್ನು ಕನ್ನಡದ ಕಥೆ? ಪತ್ರಿಕಾರಂಗವೇನು? ಸುಪ್ರೀಂ ಕೋರ್ಟು, ಪಾರ್ಲಿಮೆಂಟು, ಐಎ ಎಸ್ ಲಾಬಿಯಲ್ಲಿಯೂ ಕನ್ನಡದ ಧ್ವನಿ ಕ್ಷೀಣವೇ.
ಕನ್ನಡದ ಪತ್ರಿಕೋದ್ಯಮಕ್ಕೆ ‘ಕೊಂಬು-ಕಹಳೆ’ ಎಲ್ಲ ಆದವರೂ ದಿಲ್ಲಿಯಲ್ಲಿ ಏನೂ ಅಲ್ಲ.
ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಅಂದರೆ ಅದು ಅಡ್ವಾಣಿಯದ್ದೋ – ಪ್ರಕಾಶ್ ಕಾರಟರದ್ದೋ – ಚಿದಂಬರರದ್ದೋ – ಯಾವುದೇ ರಾಷ್ಟ್ರೀಯ ನಾಯಕರದ್ದಾಗಲಿ. ಅಂದೊಂದು ಮದುವೆ ಮನೆಯ ಬಾಬತ್ತು. ಬರೋಬ್ಬರಿ 600 ಜನ. ಇಂಗ್ಲೀಷ್ ಚಾನೆಲ್ ಗಳು, ಹಿಂದಿ ಚಾನೆಲ್ ಗಳು, ರಾಷ್ಟ್ರೀಯ ಪತ್ರಿಕೆಗಳು, ಅವರವರ ಕ್ಯಾಮರಾಮೆನ್ ಗಳು, ಮೈಕ್ಮೆನ್ ಗಳು, ಅದರಾಚೆಗೆ ಎಲ್ಲೋ ಕಳೆದು ಹೋಗುವ ಕನ್ನಡದ ಪತ್ರಕರ್ತ. ಪ್ರಶ್ನೆ ಕೇಳುವುದು, ಉತ್ತರ ಬರೆಯುವುದು ದೂರದ ಮಾತು. ಎಷ್ಟು ದೂರವೆಂದರೆ ದೆಲ್ಲಿಯ ನಮ್ಮ ಧ್ವನಿಗಳು ಆ ಬಾಬತ್ತಿನ ತನಕ ಹೋಗುವುದೇ ಇಲ್ಲ. ದಿಲ್ಲಿಯ ತಮ್ಮ ಮನೆಯಲ್ಲಿಯೇ ಕೂತು NDTVಯದೋ ಆಜ್ ತಕ್ ನದೋ Direct Rellay ನೋಡ್ತಾ ನೋಡ್ತಾನೇ ಇವರು ಸುದ್ದಿ ಕೊಟ್ಟು ಕೈತೊಳೆದುಕೊಳ್ಳುತ್ತಾರೆ. ಮತ್ತಷ್ಟು ಓದು 
ಕ್ಷಮಿಸಿ,ನಿಮ್ಮ ನೆಮ್ಮದಿಯನ್ನು ಕಲಕುವ ಉದ್ದೇಶ!
– ಚಿತ್ರ ಸಂತೋಷ್
ನನ್ನ ಕಣ್ಣಿನಲ್ಲಿ ಕಣ್ಣೀರು ಎಂದೋ ಬತ್ತಿಹೋಗಿತ್ತು. ಅನ್ಯಾಯದ ವಿರುದ್ಧದ ದನಿ ಕುಗ್ಗಿಹೋಗಿತ್ತು. ನನಗೆ ಈಗ ದನಿ ಇಲ್ಲ. ಒಂದು ವೇಳೆ ದನಿ ಇದ್ದರೂ ಕೇಳುವ ಕಿವಿಗಳು ನನ್ನ ಬಳಿ ಇಲ್ಲ. ಅಪ್ಪ-ಅಮ್ಮನ
ನೆನಪಾಗುತ್ತದೆ. ಲಂಡನ್ನ ನೆನಪುಗಳು ಆಗಾಗ ಸುಳಿಯುತ್ತವೆ. ಬದುಕು ಬೇಡ ಅನಿಸುತ್ತಿದೆ. ಆದರೂ, ನನ್ನ ಕೈಯಾರೆ ನಾನು ಕೊಲೆಯಾಗ ಬಯಸಲಾರೆ. ಎಲ್ಲವನ್ನೂ ಮರೆಯೋಕೆ ಕುಡಿತವನ್ನು ಬದುಕಾಗಿಸಿಕೊಂಡಿದ್ದೇನೆ.
ಆನೆ, ಹುಲಿ, ಸಿಂಹಗಳ ಅಂಗಾಂಗಳನ್ನು ಪ್ರದರ್ಶನಕ್ಕಿಟ್ಟರೆ ದುಡ್ಡು ಕೊಟ್ಟು ನೋಡಲು ಖುಷಿಪಡ್ತೀವಿ. ಆದರೆ, ಒಬ್ಬ ಹೆಣ್ಣಿನ ಅಂಗಾಂಗಳನ್ನು ಪ್ರದರ್ಶನಕ್ಕಿಟ್ಟರೆ…ನೋಡುವುದು ಬಿಡಿ, ಕೇಳಲು ಅಸಹ್ಯವಾಗುತ್ತದೆ. ಆದರೆ, ಇಂಥದ್ದೊಂದು ನೈಜ ಘಟನೆ ಎರಡು ದಶಕಗಳ ಹಿಂದೆ ನಡೆದಿತ್ತು. ಇಂದಿಗೂ ದಕ್ಷಿಣ ಆಫ್ರಿಕಾದ ನೂರಾರು ಹೆಣ್ಣು ಮಕ್ಕಳು ಈ ಕಥೆಯನ್ನು ನೆನೆಸಿಕೊಂಡು ಕಣ್ಣೀರು ಹಾಕುತ್ತಾರೆ.
***** *****
ನನ್ನ ಹೆಸರು ಸಾರಾ. ಹುಟ್ಟಿದ್ದು ೧೭೮೯ರಲ್ಲಿ. ದಕ್ಷಿಣ ಆಫ್ರಿಕಾದ ಕೇಪ್ ಟೌನ್ನಲ್ಲಿ. ನಾನು ಎದ್ದು ನಡೆಯುವ ಹೊತ್ತಿಗೆ ಅಪ್ಪ-ಅಮ್ಮನನ್ನು ಕಳೆದುಕೊಂಡಿದ್ದೆ. ಅವರು ಬಲಿಯಾಗಿದ್ದೂ ಬಡತನಕ್ಕೇ! ಇಂದು ನನ್ನೆದುರು ಅವರ ಮುಖವೂ ಅಸ್ಪಷ್ಟ. ಹಿಂದೆ-ಮುಂದೆ ಯಾರಿಲ್ಲ. ಒಬ್ಬಳೇ ಮಗಳು. ಒಂದಷ್ಟು ದಿನ ಸಂಬಂಧಿಕರ ಆಶ್ರಯದಲ್ಲಿ ಬೆಳೆದೆ. ಆದರೂ, ಅಲ್ಲಿ ನನ್ನ ಬದುಕಿರಲಿಲ್ಲ. ನಮ್ಮೂರಿನ ಪಕ್ಕದ ಡಚ್ ರೈತರ ಮನೆಯಲ್ಲಿ ಜೀತದಾಳಾಗಿ ಸೇರಿಕೊಂಡೆ. ಆಗಿನ್ನೂ ಹರೆಯಕ್ಕೆ ಬಂದ ವಯಸ್ಸು ಜಗತ್ತಿನ ಆಗುಹೋಗುಗಳನ್ನು ತಿಳಿಯಬಲ್ಲವಳಾಗಿದ್ದೆ. ಬಿಳಿಯರು ನಮ್ಮ ಜನಾಂಗದ ವಿರುದ್ಧ ನಡೆಸುತ್ತಿದ್ದ ಅನ್ಯಾಯಗಳ ಕುರಿತು ಕೇಳಿದ್ದೆ. ಎಲ್ಲವೂ ನನ್ನೊಡಲಲ್ಲಿ ಮೌನವಾಗಿದ್ದವು.
ಬೀದಿ-ಬೀದಿಯಲ್ಲಿ ಬೆತ್ತಲಾದೆ!
ಮತ್ತಷ್ಟು ಓದು 
ಪ್ರೀತಿ ಕುರುಡಾದರೂ ಪ್ರಿತಿಸುವವರು ಕುರುಡಾಗದಿರಲಿ
– ಪವನ್ ಪಾರುಪತ್ತೇದಾರ್
ಅಗ್ರಹಾರದ ಶಾಮಣ್ಣನವರಿಗೆ ತಮ್ಮ ಮಗಳನ್ನ ಬ್ಯಾಂಕ್ ಮ್ಯಾನೇಜರ್ ಮಾಡಬೇಕಂಬ ಅಸೆ ಇತ್ತು.ಮಗಳಿಗೆ SSLC ವರೆಗೂ ಹಳ್ಳಿಯಲ್ಲಿನ ಶಾಲೆಯಲ್ಲಿ ಓದಿಸಿದರು, ಪ್ರತಿದಿನ ಮಗಳನ್ನ ಶಾಲೆಗೆ ಕರೆದೊಯ್ಯುವುವುದು ಮತ್ತೆ ಕರೆತರುವುದು ಅವರದೇ ಕೆಲಸ. ಮನೆಗೆ ಕರೆ ತಂದೊಡನೆ ಮುದ್ದಾಗಿ ಮಾತನಾಡಿಸಿ ಶಾಲೆಯ ಬಗ್ಗೆ ವಿಚಾರಿಸುವುದು ಇವೆಲ್ಲ ನಡೆಯುತ್ತಿತ್ತು. ಆದರೆ ಹಳ್ಳಿಯಲ್ಲಿ ಕಾಲೇಜ್ ಇಲ್ಲದಿದ್ದರಿಂದ ಅನಿವಾರ್ಯವಾಗಿ ಪಕ್ಕದ ಪಟ್ಟಣಕ್ಕೆ ಸೇರಿಸಬೇಕಾಯ್ತು, ಪ್ರತಿ ದಿನ ಬಸ್ ಅಲ್ಲಿ ಪ್ರಯಾಣ ಮಗಳು ಮನೆಯಿಂದ ಹೊರ ಮತ್ತೆ ಸಂಜೆ ಬರುವ ವರೆಗೂ ಅವಳದ್ದೇ ಚಿಂತೆ ಶಾಮಣ್ಣ ಮತ್ತು ಅವರ ಹೆಂಡತಿಗೆ. ಆಗಾಗ ಕಾಲೇಜ್ ಬಳಿ ಹೋಗುತಿದ್ದರು, ಒಂದೆರಡು ಸಲಿ ಅವರು ಹೋದಾಗ ಮಗಳು ಕಾಲೇಜ್ ನಲ್ಲಿ ಇರಲಿಲ್ಲ.
ಮಗಳು ಮನೆಗೆ ಬಂದಮೇಲೆ ಕೇಳಿದಾಗ ಸ್ನೇಹಿತೆಯ ಮನೆಗೆ ಓದಲು ಹೋಗಿದ್ದೆ ಎಂದಳು. ಆದರು ಶಾಮಣ್ಣ ನವರಿಗೆ ಏನೋ ಒಂದು ರೀತಿ ಅನುಮಾನ ಮಗಳು ಎಲ್ಲಾದರೂ ತಪ್ಪು ದಾರಿ ತುಳಿಯುತಿರುವಳೋ ಅನ್ನೋ ಭಯ, ಕಾಲೇಜ್ ಹತ್ತಿರದಲ್ಲೇ ಇದ್ದಿದ್ದರೆ ಮೊದಲಿನ ಹಾಗೆ ತಾನೆ ಜೊತೆಯಲಿ ಹೋಗಿ ಬರಬಹುದಾಗಿತ್ತು ಅನ್ನೋ ಯೋಚನೆ ಇನ್ನು ಸ್ವಲ್ಪ ದಿನಗಳಾದ ಮೇಲೆ ಕಾಲೇಜ್ ಗೆ ಹೋದ ಶಾಮಣ್ಣ ನವರ ಮಗಳು ಮತ್ತೆ ಮನೆಗೆ ತಿರುಗಿ ಬಂದಿಲ್ಲ. ಆಮೇಲೆ ತಿಳಿದ ವಿಷಯ ಅಂದ್ರೆ ಅವಳು ಪಟ್ಟಣದಲ್ಲಿನ ಒಬ್ಬ ಆಟೋ ಡ್ರೈವರ್ ಜೊತೆ ಓದಿ ಹೋಗಿದ್ದಳು, ಹತ್ತಾರು ಎಕರೆ ಜಮೀನು ಅಸ್ತಿ ಪಾಸ್ತಿ ಎಲ್ಲ ಇದ್ದ ಶಾಮಣ್ಣನವರಿಗೆ ಮಗಳ ಮದುವೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಾಗಿರಲಿಲ್ಲ. ಆದರೆ ಮಗಳು ವಿದ್ಯಾವಂತೆ ಅಗಲಿ ಎಂದು ಅಸೆ ಪಟ್ಟಿದ್ದಕ್ಕೆ ಶಾಮಣ್ಣ ನವರಿಗೆ ಸಿಕ್ಕ ಪ್ರತಿಫಲ ಬಹಳ ವಿಷಾದನೀಯ. ಬಹಳ ಕಟ್ಟುನಿಟ್ಟಿನ ಬ್ರಾಹ್ಮಣ ಕುಟುಂಬ ಊರಿನ ಜನ ಮಾತ್ರವಲ್ಲದೆ ನೆಂಟರು ಇಷ್ಟರ ಮಧ್ಯೆ ಸಹ ಅವಮಾನ ಪಡುವಂತಾಯಿತು.
ಟ್ರಾಪಿಕ್ ಸಮಸ್ಯೆ ಯ ಜಾಗ್ರುತಿ ಕನ್ನಡದಲ್ಲಿರಲಿ
ಆದ್ರೆ, ಬೆಂಗಳೂರಿನ ಟ್ರಾಪಿಕ್ ಸಮಸ್ಯ್ತೆಯನ್ನು ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಪೋಲೀಸರಿಗೆ ಸರಿಯಾಗಿ ಸಹಕರಿಸಿಲ್ಲ ಎಂದು ಬೆಂಗಳೂರಿನ ಪೋಲೀಸ್ ಕಮಿಶನರ್ ಆದ ಜ್ಯೋತಿ ಪ್ರಕಾಶ್ ಮಿರ್ಜಿಯವರು ಇಂದು ನಗರದ ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.








