ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

7
ಮೇ

ಕನಸ ಕಾಯುತ್ತಲೇ ಇರಬೇಕೆ?

ರೂಪ ಬೆಂಗಳೂರು

ಆ ಕ್ಷಣದ ಕಾಯುವಿಕೆಯಲ್ಲೂ ಎಷ್ಟೊಂದು ಸಂತಸವಿದೆ ಅನ್ನಿಸಿತು.

ಹೌದು , ಆವತ್ತು ಅಮ್ಮನ ಬಳಿಯಲ್ಲಿ ತನ್ನ ಅವನ ಪ್ರೀತಿಯ ಬಗ್ಗೆ ಹೇಳಿದ್ದೇ ಬಂತು, ಸಿಡುಕು ಮೋರೆ ಹೊತ್ತು ಅಮ್ಮ ಅಪ್ಪನ ಕಿವಿ ಕಚ್ಚಿ ಅಪ್ಪ ತನ್ನನ್ನ ದುರುದುರು ನೋಡಿ, ಸ್ವಲ್ಪ ಹೊತ್ತಿನಲ್ಲಿಯೇ ಕಿರುನಗೆ ನಕ್ಕು
“ಹೋಗಲಿ ಬಿಡು ಅವಳೇನು ಬೇರೆಯವರನ್ನ ಪ್ರೀತಿಸಲಿಲ್ಲವಲ್ಲ. ಅವನೂ ನಮ್ಮ ಜಾತೀನೆ, ಜೊತೆಗೆ ಒಳ್ಳೆ ಕೆಲಸದಲ್ಲಿ ಇದ್ದಾನೆ, ನಮ್ಮಕೆಲಸ ಹಗುರ ಮಾಡಿದಳು ಬಿಡು “ಎಂದು ನುಡಿದಾಗ ಸ್ವರ್ಗಕ್ಕೆ ಮೂರೇ ಗೇಣು
ಅತ್ತ ಅವನೂ ಫೋನ್ ಮಾಡಿದ್ದ
“ಶೀತಲ್ ನಮ್ಮ ಮನೆಯಲ್ಲೂ ಒಪ್ಪಿದರು ಕಣೇ, ಇನ್ನು ಮುಂದೇ ಬರೀ ಕನಸುಗಳ ಜಾತ್ರೇ, ಆ ಜಾತ್ರೆಯ ದೇವಿ ನೀನೆ, ನಿನ್ನ ಹೊತ್ತ ಪೂಜಾರಿ ನಾನೇ ಅಲ್ಲ್ವವೇನೇ?”
ಅಲ್ಲಿಯವರೆಗೆ ಇರದ ನಾಚಿಕೆ ದ್ವನಿಯಲ್ಲಿ ಬಂದುಬಿಟ್ಟಿತ್ತು
“ಹೂ ” ಎಂದಷ್ಟೇ ಉತ್ತರಿಸಿದ್ದೆ
“ಆಹಾಹ ಎಷ್ಟೊಂದು ನಾಚಿಕೆ ಬಂದು ಬಿಟ್ಟಿದೆ ನನ್ನರಗಿಳಿಗೆ” ಛೇಡಿಸಿದ್ದ
ಮಾತಾಡಿರಲಿಲ್ಲ.
ಕನಸಿನ ಕೋಟೆಯ ಬಾಗಿಲ ಕೀಲಿ ಕೊಟ್ಟಂತಾಗಿತ್ತು,
ಆ ಕೋಟೆಯಲ್ಲಿ ನಾನು ಅವನು , ಅವನು ಮತ್ತೆ ನಾನು , ಕೇವಲ ನಾವಿಬ್ಬರೇ ಮತ್ತಾರಿಗೂ ಪ್ರವೇಶವಿಲ್ಲ.
ಅಂದಿನಿಂದ ಇಬ್ಬರ ಫೋನುಗಳಿಗೂ ಬಿಡುವಿರಲಿಲ್ಲ
ಘಂಟಾನುಗಟ್ಟಲೆ ಮಾತನಾಡುತ್ತಾ ಹರಟುತಿದ್ದರೆ
ಹೊತ್ತು ಹೋಗಿದ್ದೆ ತಿಳಿಯುತ್ತಿರಲಿಲ್ಲ
ಕಣ್ಣುಗಳ ತುಂಬ ಅವನದೇ ಬಿಂಬ , ಹೊಂಗನಸುಗಳು, ಅಮಲಿನಲ್ಲಿದ್ದಂತೆ ಭಾಸವಾಗುತ್ತಿತ್ತು. ಸವಿ ಸವಿ ಕ್ಷಣಗಳು ಸವಿ ಸವಿ ಕನವರಿಕೆಗಳು , ಮನಸು ಅವನ ಸ್ಪರ್ಷಕ್ಕೆ ಹಾತೊರೆಯತೊಡಗಿತ್ತು.  ಮೈ ಮನಗಳಲ್ಲಿ ನವ ಚೇತನ ತುಂಬಿದಂತಾಗುತ್ತಿತ್ತು.
ಎಷ್ಟೋ ರಾತ್ರಿ ಕನಸುಗಳಲ್ಲಿ ಏನೇನೋ ಆಗತೊಡಗಿ ಒಂದು ಕ್ಷಣ ಕಂಪನ, ಜೊತೆಗೇ ಆ ಸಂತಸವನ್ನು ಮನಸಾರೆ ಸವಿಯುತ್ತಿದ್ದೆ
ಯಾವಾಗಲಾದರೂ ಅವನು “ಸೌಮ್ಯ ಏನೇ ನಾನು ನಿನ್ನಕನಸಲ್ಲಿ ಬರ್ತೀನೇನೆ,”ಎಂದಾಗ ” ಹೂ” ಎನ್ನುತ್ತಿದ್ದೆನಾದರೂ “ಬಂದು ಏನು ಮಾಡ್ತೀನಿ ” ಎಂದು ನಗುತ್ತಾ ಕೇಳುತ್ತಿದ್ದಾಗ ಒಮ್ಮೆಲೇ ಗಾಭರಿಯಾಗಿ “ಏನಿಲ್ಲ ಹೀಗೆ ಬಂದು ಹೋಗ್ತೀರಾ ” ಎಂದಂದು ಮುಖ ಮುಚ್ಚಿಕೊಳ್ಳುತ್ತಿದ್ದೆ.  ಎಲ್ಲಿ ತನ್ನ ಭಾವನೆಗಳು ಅವನಿಗೆ ಗೊತ್ತಾಗುತ್ತದೆ ಎಂದು… ಮತ್ತಷ್ಟು ಓದು »
6
ಮೇ

ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!

– ರಾಘವೇಂದ್ರ ನಾವಡ ಕೆ ಎಸ್

  ಊಹೆ ನಿಜವಾಗುವ ಎಲ್ಲಾ ಲಕ್ಷಣಗಳೂ ಕ೦ಡುಬರುತ್ತಿವೆ! ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧೀ ಆ೦ದೋಲನ ಠುಸ್ಸಾಗುವ ಎಲ್ಲಾ ಸಾಧ್ಯತೆಗಳೂ ಇವೆ! ಇಲ್ಲಿ ನಾನೀಗ ಹೇಳ ಹೊರಟಿರುವುದು ಅಣ್ಣಾ ಹಜಾರೆಯವರ ಶಕ್ತಿ ಕು೦ದಿತೆ೦ದಲ್ಲ… ಅಥವಾ ಉತ್ತರ ಕುಮಾರನ ಪೌರುಷವನ್ನು ಅಣ್ಣಾ ಹಜಾರೆ ತೋರಿಸಿದರೆ೦ದಲ್ಲ! ಬದಲಾಗಿ ಹೇಗೆ ನಾವೇ ಆರಿಸಿ ಕಳುಹಿಸಿದ ನಮ್ಮ ಕಲ್ಯಾಣದ ಬಗ್ಗೆ ಯೋಚಿಸಬೇಕಾದ ನಾಯಕರು ತಮ್ಮನ್ನು ಹಾಗೂ ತಮ್ಮ ಗಳಿಕೆಯನ್ನು ರಕ್ಷಿಸಿಕೊಳ್ಳಲು ಮು೦ದಾಗಿರುವ ಬಗ್ಗೆ.. ಅದಕ್ಕಾಗಿ ತುಳಿದಿರುವ ಹಾದಿಗಳ ಬಗ್ಗೆ..!

ಮೊದಲನೆಯದಾಗಿ ಭಾರತದ ಯಾವ ರಾಜಕೀಯ ನಾಯಕನಿಗೂ ಲೋಕಪಾಲ ಮಸೂದೆಯ ಮ೦ಡನೆಯಾಗುವುದು ಬೇಕಿಲ್ಲ! ಆ ಮೂಲಕ ತಾವು ಬಟಾ ಬಯಲಿಗೆ ಬೀಳುವುದು ಇಷ್ಟವಿಲ್ಲ.. ತನ್ನ ಮಕ್ಕಳು ಮರಿ ಮೊಕ್ಕಳು ಅವರ… ಹೀಗೆ ಹತ್ತಾರು ತಲೆಮಾರುಗಳು ಆರಾಮಾಗಿ ಕುಳಿತು ತಿನ್ನಲೆ೦ದು ಮಾಡಿಕೊ೦ಡ ಆಸ್ತಿಯನ್ನು ಯಾರು ತಾನೇ ತನ್ನ ಜಮಾನಾದಲ್ಲೇ ಅದನ್ನು ಕಳೆದುಕೊಳ್ಳಲು ಇಷ್ಟ ಪಡುತ್ತಾನೆ? ಮು೦ದೆ ನಮ್ಮ ಅಪ್ಪ ನಮಗಾಗಿ ಏನನ್ನೂ ಮಾಡಿಟ್ಟಿಲ್ಲ! ಎ೦ಬ ಮಾತನ್ನು ಕೇಳಲು ಅವರು ಸಿಧ್ಧರಿಲ್ಲ! ನಾಯಕರ ಈ ಹಪಾಹಪಿಯೇ ಆದಷ್ಟೂ ಹಜಾರೆ ಹಾಗೂ ಅವರ ಟೀಮ್ ನ ದಿಕ್ಕು ತಪ್ಪಿಸುವತ್ತ ತನ್ನೆಲ್ಲಾ ಪಟ್ಟುಗಳನ್ನೂ ಬಳಸಿಕೊ೦ಡು ಆಖಾಡಕ್ಕೆ ಇಳಿದಿದೆ! ಮು೦ದೇನು? ಕಾದು ನೋಡಬೇಕು!!

ಮತ್ತಷ್ಟು ಓದು »

4
ಮೇ

ನಿಮಗೆ ದೇವರ ಅಸ್ಥಿತ್ವದಲ್ಲಿ ನಂಬಿಕೆ ಇದೆಯೇ?

– ಗೋವಿಂದ ರಾವ್

ವಿಜ್ಞಾನ ಮಾರ್ಗ, ವೈಜ್ಞಾನಿಕ ಮನೋಧರ್ಮ, ವೈಜ್ಞಾನಿಕತೆ ಮುಂತಾದ ವಿಷಯಗಳ ಕುರಿತು ನಾನು ಆಯೋಜಿಸುತ್ತಿದ್ದ ತರಬೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದವರು ಕೇಳುತ್ತಿದ್ದ ಸಾಮಾನ್ಯ ಪ್ರಶ್ನೆ ಇದು. ಅಂಥ ಸಂದರ್ಭಗಳಲ್ಲಿ ನಾನು ನೀಡುತ್ತಿದ್ದ ಸ್ಪಷ್ಟ ಉತ್ತರ ಇಂತಿರುತ್ತಿತ್ತು – ‘ಖಂಡಿತ ಇದೆ. ಆಧ್ಯಾತ್ಮಿಕತೆ ಮತ್ತು ವೈಜ್ಞಾನಿಕತೆ ಪರಸ್ಪರ ವೈರುಧ್ಯಗಳಲ್ಲ, ಪೂರಕಗಳು. ವೈಜ್ಞಾನಿಕತೆ ಕಂದಾಚರಗಳನ್ನೂ ಯಾಂತ್ರಿಕ ಮತೀಯ ಆಚರಣೆಗಳನ್ನೂ ವಿರೋಧಿಸುತ್ತದೆಯೇ ವಿನಾ ಪ್ರಾಮಾಣಿಕ ಸತ್ಯಾನ್ವೇಷಣೆಯನ್ನಲ್ಲ, ಪ್ರಾಮಾಣಿಕ ಸತ್ಯಾನ್ವೇಷಕರನ್ನಲ್ಲ. ವೈಜ್ಞಾನಿಕ ಮನೋಧರ್ಮದ ಪ್ರವರ್ತಕರು ಇಂದಿನ ‘ಸ್ವಘೋಷಿತ ಜಗದ್ಗುರುಗಳು’ ‘ಧರ್ಮ’ದ ಹೆಸರಿನಲ್ಲಿ ಪೋಷಿಸುತ್ತಿರುವ ಮೌಢ್ಯವನ್ನೂ ಕಂದಾಚರಣೆಗಳನ್ನೂ ಪ್ರದರ್ಶಿಸುತ್ತಿರುವ ‘ಪವಾಡ’ಗಳನ್ನೂ ವಿರೋಧಿಸುತ್ತಿದ್ದಾರೆಯೇ ವಿನಾ ರಾಮಕೃಷ್ಣ ಪರಮಹಂಸರ, ಸ್ವಾಮಿ ವಿವೇಕಾನಂದರ, ಗೌತಮಬುದ್ಧನ, ಬಸವಣ್ಣನವರ ಆಧ್ಯಾತ್ಮಿಕ ಚಿಂತನೆಗಳನ್ನಲ್ಲ.’

ನಾನು ನಂಬಿರುವ ‘ದೇವರು’ ಯಾವುದು? (ಗಮನಿಸಿ: ಯಾರು? ಅಲ್ಲ). ಹಾಲಿ ಅಸ್ಥಿತ್ವದಲ್ಲಿ ಇರುವ ವಿಶ್ವ ಯಾವುದರಿಂದ ಮೂಡಿ ಬಂದಿತೋ ಅದೇ ನಾನು ನಂಬುವ ‘ದೇವರು’. ನಾನು ನೋಡದೇ ಇದ್ದರೂ ಇದೆಯೆಯೆಂದು ನಂಬಿರುವ ‘ದೇವರ’ ಕಿರು ಪರಿಚಯ ಈಗ ಮಾಡಿಕೊಡುತ್ತೇನೆ. ಈ ದೇವರ ವೈಜ್ಞಾನಿಕ ಹೆಸರು ‘ವಿಚಿತ್ರತೆ’. ‘ವೈಚಿತ್ರ್ಯ’ ಎಂದು ಕರೆದರೂ ಆದೀತು. ‘Singularity’ ಎಂಬ ಇಂಗ್ಲಿಷ್ ಪದದ ಭಾಷಾಂತರ ಇದು (ನೋಡಿ: ಮೈಸೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್-ಕನ್ನಡ ನಿಘಂಟು). ಈ ದೇವರನ್ನು ಆವಿಷ್ಕರಿಸಿದವರು ವಿಶ್ವವಿಜ್ಞಾನಿಗಳು (Cosmologists).

ಮತ್ತಷ್ಟು ಓದು »

2
ಮೇ

ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !

– ರಾಕೇಶ್ ಶೆಟ್ಟಿ

ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.

ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!

ಮತ್ತಷ್ಟು ಓದು »

29
ಏಪ್ರಿಲ್

ಸಂಪಾದಕೀಯ ಅನ್ನೋ ಮೊಟ್ಟೆಯ ಮೇಲೆ ಒಂದು ಪ್ರೀತಿಯ ಕುಟುಕು…

– ಮಹೇಶ್ ಪ್ರಸಾದ್ ನೀರ್ಕಜೆ

ಸಂಪಾದಕೀಯದಲ್ಲಿ ಪ್ರಕಟವಾದ ಬ್ಲಾಗ್ ಬರಹಕ್ಕೆ ಪ್ರತಿಯಾಗಿ ನನ್ನ ಅನಿಸಿಕೆ ಇದು.

ಸಾಯಿ ಬಾಬಾರ ಸುತ್ತ ಇರುವ ಪವಾಡಗಳ ಬಗೆಗಿನ ವಿವಾದಗಳ ಬಗ್ಗೆ ಸಂಪಾದಕೀಯ ಈ ಹಿಂದೆ ಒಂದೆರಡು ಲೇಖನಗಳಲ್ಲಿ ಬರೆದಿತ್ತು (ಅದರಲ್ಲಿ ಒಂದು ಸನ್ಮಾರ್ಗ ಎನ್ನುವ ಪತ್ರಿಕೆಯಲ್ಲಿ ಪ್ರಕಟವಾದ ಸಂಪಾದಕೀಯ ಬರಹ). ಅವುಗಳಲ್ಲೊಂದು ಲೇಖನಕ್ಕೆ ಬಂದ ಪ್ರತಿಕ್ರಿಯೆಯೊಂದಕ್ಕೆ  ಪ್ರತಿಯಾಗಿ ಸಂಪಾದಕೀಯ ಬರೆದ ಸ್ಪಷ್ಟೀಕರಣ ರೂಪದ ಬರಹವೇ ನಾನು ಮೇಲೆ ನೀಡಿದ ಬ್ಲಾಗ್ ಬರಹ. ಈ ಬ್ಲಾಗ್ ಬರಹದ ಸಾರಾಂಶ ಏನೆಂದರೆ ಸಾಯಿ ಬಾಬಾ ಮಾಡಿದ ಸಮಾಜ ಮುಖೀ ಕೆಲಸಗಳ ಬಗ್ಗೆ ಮೆಚ್ಚುಗೆಯಿದ್ದರೂ ಮೂಲತಹ ಬಾಬಾ ನಡೆದ ದಾರಿ ಪವಾಡಗಳನ್ನೊಳಗೊಂಡ ದಾರಿಯಾಗಿದ್ದು ಅದು ಜನರನ್ನು ದಿಕ್ಕುತಪ್ಪಿಸುವ, ಮೌಢ್ಯತೆಗೆ ನೂಕುವ ಮೋಸದ, ಸುಳ್ಳಿನ ದಾರಿಯಾಗಿದೆ, ಆದ್ದರಿಂದ ನಮಗೆ ಅಂತಹ ಸುಳ್ಳಿನ ದಾರಿ ಬೇಕೋ ಅಥವಾ ಬುಧ್ಧ ಹಾಕಿಕೊಟ್ಟ ಸತ್ಯದ ದಾರಿ ಬೇಕೋ ಎಂಬ ಜಿಜ್ಞಾಸೆ. ಕೊನೆಯಲ್ಲಿ ಸಂಪಾದಕೀಯ ಹೀಗೆ ಹೇಳುತ್ತದೆ – “ಬುದ್ಧನ ಸತ್ಯ ಮಾರ್ಗವೇ ನಿಜವಾದ ಬದುಕಿನ ತಳಪಾಯ. ಅದರ ಮೇಲೇ ನಮ್ಮ ಬದುಕು ಕಟ್ಟಿಕೊಳ್ಳುವಂತಾಗಬೇಕು” ಮತ್ತು “ನಾವು ಸತ್ಯದ ಮಾರ್ಗದಲ್ಲಿ ಊರ್ಧ್ವಮುಖಿಗಳಾಗಬೇಕೇ ಹೊರತು ಸುಳ್ಳಿನ ಮಾರ್ಗದಲ್ಲಿ ಅಧೋಮುಖಿಗಳಾಗಬಾರದು ಅಲ್ಲವೇ?”. ಇದರ ಬಗ್ಗೆ ಒಂದು ಚಿಂತನೆ ನಡೆಸುವ ಉದ್ದೇಶ ಈ ಲೇಖನದ್ದು.

ಮತ್ತಷ್ಟು ಓದು »

27
ಏಪ್ರಿಲ್

‘ಸತ್ಯ ಸಾಯಿ’ ಮತ್ತು ‘ಸತ್ಯ ಸಾಯಿಸುವ’ ಮಾಧ್ಯಮಗಳು

ಅರೆಹೊಳೆ ಸದಾಶಿವರಾಯರು

ಫೇಸ್ ಬುಕ್‌ನಲ್ಲಿ ಒಂದು ಸಾಲು ಓದಿದೆ. ‘ಮ್ಯಾಜಿಷಿಯನ್’ ಸತ್ಯ ಸಾಯಿಬಾಬಾ ಇನ್ನಿಲ್ಲ ಎಂದು ಒಬ್ಬರು ವ್ಯಂಗ್ಯವಾಗಿ ಬರೆದುಕೊಂಡಿದ್ದರು. ಮುಂದುವರಿಯುತ್ತಾ, ಈ ಸತ್ಯಸಾಯಿಬಾಬಾ ಎಂಬ ಜಾದೂಗಾರನನ್ನು ಕೇವಲ ಮಾಧ್ಯಮಗಳು ಈ ಮಟ್ಟಿಗೆ ದೇವಮಾನವನನ್ನಾಗಿ ಮಾಡಿವೆ ಎಂದೂ ಸೇರಿಸಿಕೊಂಡಿದ್ದರು.
ಮೊದಲಾಗಿ ಮಾನವ ಎಂದರೆ ಏನು ಎಂಬತ್ತ ಗಮನ ಹರಿಸಬೇಕು. ಅದಕ್ಕೂ ಮೊದಲಾಗಿ ಒಂದು ವಿಷಯ ಸ್ಪಷ್ಟೀಕರಣದೊಂದಿಗೇ ಲೇಖನ ಆರಂಭಿಸಬೇಕು. ಅದೆಂದರೆ ನಾನು ಸಾಯಿ ಬಾಬಾ ಅವರ ಭಕ್ತನೂ ಅಲ್ಲ ಮತ್ತು ಅವರ ಪವಾಡಗಳ ಕುರಿತು ಪರ-ವಿರೋಧ ಎಂದು ಹೇಳಿಕೊಳ್ಳುವಷ್ಟು, ಜ್ಞಾನಿಯೂ ಅಲ್ಲ. ಆ ಮಟ್ಟಿಗೆ ಈ  ವಿಷಯದಲ್ಲಿ ನಾನು ತಟಸ್ಥ. ಇನ್ನು ಮಾನವ ಎಂದರೆ…..!. ಜೀವಂತ ಇರುವ ಎಲ್ಲವೂ ಮಾನವನಾಗುವುದಿಲ್ಲ ಅಥವಾ ಮನುಷ್ಯಗರ್ಭದಲ್ಲಿ ಜನಿಸಿದ ಎಲ್ಲರೂ ಮಾನವನಂತೆ ಬದುಕುವುದಿಲ್ಲ. ಪರಸ್ಪರರನ್ನು ಪ್ರೀತಿಸುತ್ತಾ ಸಾಧ್ಯವಾದಷ್ಟೂ ಜನರ ಬಳಿ, ಜನರನ್ನು ಗೌರವಿಸುತ್ತಾ ಬದುಕುವುದು ಮಾನವೀಯ ಧರ್ಮ ಎನಿಸುತ್ತದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜನಸೇವೆಯೇ ಜನಾರ್ದನ ಸೇವೆ ಎಂದುಕೊಂಡು, ಅಕ್ಷರಶ: ಅದನ್ನೇ ಪಾಲಿಸಿದರೆ ಆತ ಜನರ ಪಾಲಿಗೆ ಜನಾರ್ದನನಾಗುತ್ತಾನೆ;ದೇವತ್ವವನ್ನು ಪಡೆಯುತ್ತಾನೆ-ಸಾಯಿಬಾಬಾ ವಿಷಯದಲ್ಲಿಯೂ ಅದೇ ಆಗಿದೆ. ಮತ್ತಷ್ಟು ಓದು »

26
ಏಪ್ರಿಲ್

ಕ್ರಾಂತಿಗೆ ಅಕ್ಷರದ ಹಂಗೇಕೆ?

– ಚಿತ್ರ ಸಂತೋಷ್

ಮಧ್ಯಪ್ರದೇಶದ ತಲನ್‌ಪುರ ಗ್ರಾಮದಲ್ಲಿ ಓದು ಬರಹ ತಿಳಿಯದ ಬುಡಕಟ್ಟು ಮಹಿಳೆಯರೇ ಸಾಮಾಜಿಕ ಕ್ರಾಂತಿಗೆ ಮುನ್ನುಡಿಯಾಗಿದ್ದಾರೆ. ನಿತ್ಯ ಕುಡಿದು, ಸಂಸಾರದ ಒಂದಿಷ್ಟು ಚಿಂತೆಯಿಲ್ಲದ ಪುರುಷರಿಗೆ ಬುದ್ಧಿ ಕಲಿಸಬೇಕೆಂಬ ಉದ್ದೇಶದಿಂದ ಇಡೀ ಹಳ್ಳಿಯ ಮಹಿಳೆಯರು ಒಂದಾಗಿ ಸಾರಾಯಿ ನಿಷೇಧ ಮಾಡಿದ್ದಾರೆ.

ಆ ಹಳ್ಳಿಯೇ ಹಾಗೆಯೇ. ಬುಡಕಟ್ಟು  ಬದುಕುಗಳ ಸಂಗಮ. ನೂರಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳನ್ನು ಹೊಂದಿರುವ ಆ  ಹಳ್ಳಿಯಲ್ಲಿ ಹೊತ್ತಿನ ಊಟಕ್ಕೂ ಕಷ್ಟ. ಪತಿ-ಪತ್ನಿಯರು ಎಲ್ಲಾರೂ ಕೂಲಿಗಾಗಿ ಅರಸುವವರು. ವಿದ್ಯೆ, ಶಿಕ್ಷಣ ಎಂಬುವುದು ಅವರ ಪಾಲಿಗೆ ಮರೀಚಿಕೆ. ಸಾಂಪ್ರದಾಯಿಕ ಬದುಕಿನ ಚೌಕಟ್ಟಿನಲ್ಲಿಯೇ ಇಂದಿಗೂ ಬದುಕು ಸವೆಸುವ ಅಲ್ಲಿನ ಕುಟುಂಬಗಳಲ್ಲಿ  ಆಧುನಿಕತೆಯ ಥಳುಕಿಲ್ಲ. ಸಿನಿಮಾ, ಫ್ಯಾಷನ್ ಯಾವುದೂ  ಗೊತ್ತಿಲ್ಲ. ದುಡಿಯುವುದು, ದಿನದ ಮೂರು ಹೊತ್ತಿನ ಅನ್ನ ತುಂಬಿಸಿಕೊಳ್ಳುವುದಷ್ಟೇ ಅವರಿಗೆ ಗೊತ್ತು.

ಅದು ಮಧ್ಯಪ್ರದೇಶದ ತಲನ್‌ಪುರ್ ಎಂಬ ಹಳ್ಳಿ
. ಇಲ್ಲಿನ  ಜನಸಂಖ್ಯೆ ಸುಮಾರು ೩೦೦೦. ಇಂದೋರ್‌ನಿಂದ ಇಲ್ಲಿಗೆ ಸುಮಾರು ೧೮೦ ಕಿ.ಮೀ. ದೂರವಿದೆ.

ಮತ್ತಷ್ಟು ಓದು »

25
ಏಪ್ರಿಲ್

ಹಿಂದಿ ಬೇಕು …. ಕೂಪಮಂಡೂಕತನ ಬೇಡ……..

*ಅನಿರುದ್ಧ ಕುಮಟ

ಚಿತ್ರಕೃಪೆ: ಗೂಗಲ್

ಮಕ್ಕಳ ಜಗಳದಲ್ಲಿ ಅಮ್ಮ ಬಡಪಾಯಿಯಾದಳು ಅಂತ ಒಂದು ಗಾದೆ ಮಾತು ಇದೆಯಾ? ಇಲ್ಲದಿರಲೂಬಹುದು. ಆದರೆ ನಿಮ್ಮ ಕನ್ನಡದ ಜಗಳ, ಆ ನೀರಿನ ಜಗಳ, ಆ ಧಾರ್ಮಿಕ ಕಲಹ ಇವನ್ನೆಲ್ಲ ನೋಡಿದಾಗ ನನಗೆನಿಸಿದ್ದು ಅಮ್ಮ ಬಡವಾಗಿದ್ದಾಳೆ ಅಂತ. ಅಲ್ಲಾರಿ ನೀವು ಪಕ್ಕದ ಮರಾಠಿಗರನ್ನು ಕಂಡರೆ ಬೆಂಕಿಕಾರುತ್ತಿರಿ. ಪಾಪ ಆ ತಮಿಳರು ಇಲ್ಲಿ ಬೆಳೆದರೆ ಕರಬುತ್ತೀರಿ. ಅಥವಾ ನೀರಿನ ವಿಷಯ ಹಿಡಿದುಕೊಂಡು ಸುನಾಮಿಯಂತೆ ಜಗಳ ಮಾಡುತ್ತೀರಿ…ಥಕ್ ನಿಮ್ಮ ಇಂತಹ ಜಗಳದಲ್ಲಿ ಬಡವಾದದ್ದು ಯಾರು. ಭಾರತವಲ್ಲವೇ. ಇಡೀ ಭಾರತದ ಬಗ್ಗೆ ಯೋಚಿಸಬೇಕಾದ ನಾವೆಲ್ಲ, ದಾಯಾದಿಗಳ ತರಹ ಯಾಕೆ ಕಿತ್ತಾಡಿಕೊಳ್ಳಬೇಕು? ನಿಮಗೆ ನಿಮ್ಮ ಬಗ್ಗೆಯೇ ಅಸಹ್ಯ ಎನಿಸುವುದಿಲ್ಲವೇ?

ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ ಅನ್ನೋ ಹೆಡ್ ಲೈನ್ ನಲ್ಲಿ ಪ್ರಕಟವಾದ ಲೇಖನವನ್ನೇ ನೋಡಿ. ಪತ್ರಿಕೆಯಲ್ಲಿ ವಿದೇಶಿಯರ ಹಿಂದಿ ಮೋಹ ಅನ್ನೋ ಲೇಖನ ಪ್ರಕಟಗೊಂಡರೆ ಸಾಕು. ಜಗತ್ತಿನಲ್ಲಿರುವ ಸಮಸ್ತ ಕನ್ನಡ ಪುಸ್ತಕಗಳೆಲ್ಲ ಬೆಂಕಿಯಲ್ಲಿ ಉರಿದು ಹೋಯ್ತು ಅನ್ನೋ ತರಹ ಯಾಕೆ ಉರಿದು ಹೋಗ್ತಿರಿ. ಅರೇ ಅದೊಂದು ಪತ್ರಿಕೆ. ಅದರಲ್ಲಿ ಭಿನ್ನ, ವಿಭಿನ್ನ ವಿಚಾರಧಾರೆಯ ಲೇಖನಗಳು ಪ್ರಕಟಗೊಳ್ಳುತ್ತವೆ. ಅವರೇನೂ ಹಿಂದಿಯಲ್ಲಿ ಬರೆದಿಲ್ಲ ನನಗಂತೂ ಕನ್ನಡಿಗರಲ್ಲಿ ಹಿಂದಿ ಕಲಿಸುವ ಒಂದು ಪ್ರಯತ್ನದಂತೆ ಆ ಲೇಖನ ಕಾಣಲೇ ಇಲ್ಲ. ನನ್ನ ಪ್ರಕಾರ ಕನ್ನಡಿಗರು ಮತ್ತಷ್ಟು ಓದು »

21
ಏಪ್ರಿಲ್

ಪೂರ್ವಾವಲೋಕನ : ಒಂದು ಸಂವಾದ

– CSLC

ಕನ್ನಡದ ವಿದ್ವಾಂಸ ಜಗತ್ತಿಲ್ಲಿ ನಮ್ಮ ಸಮಾಜದ ಮತ್ತು ಸಮಾಜವಿಜ್ಞಾನದ ಕುರಿತು ವೈಜ್ಞಾನಿಕವಾಗಿ ಹೆಚ್ಚು ಚರ್ಚೆಯಾಗಬೇಕೆಂಬ ಉದ್ದೇಶದಿಂದ ಬಾಲಗಂಗಾಧರರ ಹಲವಾರು ಆಂಗ್ಲ ಭಾಷೆಯ ಲೇಖನಗಳನ್ನು ಕನ್ನಡಕ್ಕೆ ಅನುವಾದಿಸಿಲಾದ ’ಪೂರ್ವಾವಲೋಕನ’ ಕೃತಿಯನ್ನು (ಅಭಿನವ ಪ್ರಕಾಶನ) ಇತ್ತೀಚೆಗೆ ಪ್ರಕಟಿಸಲಾಗಿದೆ. ಈ ಪುಸ್ತಕದಲ್ಲಿರುವ ಕೆಲವಾರು ಲೇಖನಗಳ ಆಧಾರದ ಮೇಲೆ “ಪೂರ್ವಾವಲೋಕನ : ಒಂದು ಸಂವಾದ”  ಒಂದು ದಿನ ಕಾರ್ಯಾಗಾರವನ್ನು ಇದೇ ತಿಂಗಳ ೨೪ ರಂದು ಸರ್ಕಾರಿ ಕಲಾ  ಕಾಲೇಜು, ಕೆ.ಆರ‍್. ಸರ್ಕಲ್ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ನಾವು ಬರೆದ ಲೇಖನಗಳಿಗೆ ಹಾಗೂ ಇತರ ಗೆಳೆಯರ ಲೇಖನಗಳಿಗೆ ಪ್ರತಿಕ್ರಿಯೆ ಬರೆದಂತಹ ಸಂದರ್ಭದಲ್ಲಿ ಆಸಕ್ತಿದಾಯಕವಾಗಿ ಚರ್ಚೆಗೆ ಅನುವು ಮಾಡಿಕೊಡಲಾಗಿದೆ. ಆದಕಾರಣ ಇದು ಕೇವಲ ಅಂತರ್ಜಾಲದಲ್ಲಿ ನಡೆಯುವ ಚರ್ಚೆಗೆ ಸೀಮಿತವಾಗದೆ, ನೇರವಾಗಿ ಮುಖಾಮುಖಿಯಾಗಿ ಚರ್ಚಿಸಲು ಒಂದು ಸುಸಂದರ್ಭ ಎಂದು ತಿಳಿದು ತಮ್ಮೆಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ. ಕಾರ್ಯಾಗಾರಕ್ಕೆ ಬರಲು ಯಾವುದೇ ಪ್ರವೇಶ ಶುಲ್ಕವಿಲ್ಲ, ನಿಮ್ಮ ಆಸಕ್ತಿಯೇ ಶುಲ್ಕವಾಗಿದೆ. ಹಾಗೂ ಕೆಳಕಂಡ ಲೇಖನಗಳನ್ನು ಓದಿಕೊಂಡು ಬಂದು ಚರ್ಚಿಸಬಹುದು.
ರಾಜಾರಾಮ ಹೆಗ್ಡೆಯವರು “ Why Understand Western Culture” which is translated as ” ಪಾಶ್ಚಾತ್ಯ ಸಂಸ್ಕತಿಯನ್ನು ಯಾಕೆ ಅರ್ಥ ಮಾಡಿಕೊಳ್ಳಬೇಕು? (ಪುಟ ಸಂಖ್ಯೆ ೧೦೦ – ೧೧೫  ಪೂರ್ವಾವಲೋಕನ) ಲೇಖನದ ಕುರಿತು ಚರ್ಚಿಸಲಿದ್ದಾರೆ.
ಪ್ರೊ. ಜಿ ಸಿವರಾಮಕ್ರಷ್ಣನ್  ” To Follow Our fore Fathers…” which is translated as “ನಮ್ಮ ಪೂರ್ವಜರನ್ನು ಅನುಸರಿಸಿ…” ಸಂಪ್ರದಾಯದ ಸ್ವರೂಪ” (ಪುಟ ಸಂಖ್ಯೆ ೮೫-೧೦೦  ಪೂರ್ವಾವಲೋಕನ) ಲೇಖನದ ಕುರಿತು ಚರ್ಚಿಸಲಿದ್ದಾರೆ.
20
ಏಪ್ರಿಲ್

ಡಬ್ಬಿಂಗ್ ಬೇಕು/ಬೇಡ ಅನ್ನೋದನ್ನ ಪ್ರೇಕ್ಷಕ ನಿರ್ಧಾರ ಮಾಡ್ಲಿ

ಮನೋರಂಜನೆ ಎನ್ನೋದು ಎಲ್ಲರ ಹಕ್ಕು, ಒಬ್ಬ ವ್ಯಕ್ತಿ ಮನೊರಂಜನೆಯನ್ನು ತನ್ನ ಭಾಷೆಯಲ್ಲೆ ಪಡೆಯುವುದು ಕೂಡ ಆ ವ್ಯಕ್ತಿಯ ಹಕ್ಕೂ ಕೂಡ. ಇದನ್ನ ತಡೆಯಲು ಯಾವುದೇ ಕಾನೂನು ಮುಂದೆಬರುವುದಿಲ್ಲ. ಇದಕ್ಕಾಗಿಯೇ ಇರಬೇಕು ಇಂದಿಗೂ ಕನ್ನಡಕ್ಕೆ ಡಬ್ ಮಾಡಬಾರದು ಅನ್ನೋ ಕಾನೂನು ಇಲ್ಲ.
ಚಲನಚಿತ್ರಗಳು, ವಾಣಿಜ್ಯ ಮಂಡಳಿ ಅಥವಾ ಇನ್ಯಾವುದೋ ಸಂಸ್ಥೆ ಪ್ರೇಕ್ಷಕನಿಗೆ ನೀಡುತ್ತಿರುವ ಬಿಕ್ಷೆಯಲ್ಲ. ಪ್ರತಿಯೊಬ್ಬ ಪ್ರೇಕ್ಷಕನೂ ತನಗೆ ಬೇಕಾದ ಚಿತ್ರವನ್ನು ದುಡ್ಡು ಕೊಟ್ಟು ನೋಡ್ತಾನೆ ಹೊರೆತು ಬಿಟ್ಟಿಯಾಗಿ ಅಲ್ಲ. ಅದರಿಂದ ಯಾವ ಸಿನೆಮಾ ನೋಡ್ಬೇಕು ಅಥವಾ ಯಾವ ಸಿನೆಮಾ ನೋಡ್ಬಾರ್ದು ಅನ್ನೊದನ್ನ ಪ್ರೇಕ್ಷಕ ನಿರ್ಧಾರ ಮಾಡ್ತಾನೆ. ಕಾನೂನು ಇಲ್ಲದಿದ್ದರೂ ಸಹ, ಕನ್ನಡಿಗನಿಗೆ ಪ್ರಪಂಚದ ಒಳ್ಳೆಒಳೆಯ ಚಿತ್ರಗಳನ್ನು ತನ್ನ ಭಾಷೆಯಲ್ಲೇ ನೋಡಲು ಆಗದಿರುವಂತೆ ಮಾಡಿರುವುದು ಗೋರ ಅಪರಾದ ಮತ್ತು ಇದು ಮಾನವ ಹಕ್ಕುಗಳ ಉಲ್ಲಂಗನೆ ಅಂತಲೂ ಹೇಳಬಹುದಾಗಿದೆ.
ಇಂದು ಡಬ್ಬಿಂಗ್ ಅನ್ನು ವಿರೋಧಿಸುತ್ತಿರುವವರು ಪರಭಾಶೆಯ ಚಿತ್ರವನ್ನೇ ನೋಡುತ್ತಿಲ್ಲ ಎಂದೇನಿಲ್ಲ. ಡಬ್ಬಿಂಗ್ ಸಿನೆಮಾ ಬಿಡುಗಡೆಯಾದರೆ ಬೀದಿಗಿಳಿದು ಹೋರಾಟ ಮಾಡುತ್ತೇನೆ ಎಂದು ಹೇಳೋ ಚಿತ್ರರಂಗದ ನಾಯಕರೊಬ್ಬರ ಮನೆಯಲ್ಲಿ ಇಂದಿಗೂ ಪರಭಾಷೆಯ ಚಿತ್ರಗಳನ್ನ ತಮ್ಮ ಮನೆಗೇ ತರಿಸಿಕೊಂಡು ನೋಡೋ ಸಂಪ್ರದಾಯ ಇದೆಯಂತೆ….. ರಜನೀಕಾಂತ್ ಸೇರಿದಂತೆ ಹಲವಾರು ನಟರ ಅದ್ದೂರಿ ಸಿನೆಮಾಗಳನ್ನು ಬಿಡುಗಡೆಗೂ ಮುಂಚೆ ಈ ಕುಟುಂಬದವರಿಗೆಂದೇ ಒಂದು ಪ್ರದರ್ಶನ ಏರ್ಪಾಡು ಮಾಡಿದ್ದರೆಂದು ಪತ್ರಿಕೆಗಳಲ್ಲಿ ಓದಿದ್ದೇನೆ. ಡಬ್ಬಿಂಗ್ ವಿರೋಧಿಸಿ ಕನ್ನಡಿಗರಿಗೆ ಓಳ್ಳೆಯ ಸಿನೆಮಾಗಳನ್ನು ನೋಡದಂತೆ ಮಾಡಿರೋ ಜನ ತಾವು ಮಾತ್ರ ಆ ಒಳ್ಳೆಯ ಸಿನೆಮಾಗಳನ್ನು ನೋಡೋದನ್ನ ಮಾತ್ರ ಮರೆತಿಲ್ಲ. ಮತ್ತಷ್ಟು ಓದು »