ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

25
ಮಾರ್ಚ್

ಬನ್ನಿ ತುಳುವಿನಲ್ಲಿ ಮಾತಾಡುವ…!

– ನಿಲುಮೆ

ಪಂಚ ದ್ರಾವಿಡ ಭಾಷೆಗಳಲ್ಲೊಂದಾದ ತುಳುವನ್ನ ಕರ್ನಾಟಕದ ಕರಾವಳಿಯಿಂದ ಹಿಡಿದು ನಮ್ಮ ಕಾಸರಗೋಡಿನಲ್ಲೂ ಮಾತಾಡುತ್ತಾರೆ.ಅಲ್ಲಷ್ಟೇ ಯಾಕೆ ಕರ್ನಾಟಕದ ಮೂಲೆ ಮೂಲೆಯಲ್ಲಿ ನೆಲೆ ನಿಂತ ತುಳುವರು,ಹೊರ ರಾಜ್ಯದಲ್ಲಿ,ಹೊರ ದೇಶದಲ್ಲೂ ಮಾತಾಡುತ್ತಾರೆ.

’ತುಳು ಮಹಾಭಾರತ’ದ ಕಾಲ ೧೩ನೇ ಶತಮಾನ,’ತುಳು ದೇವಿ ಮಹಾತ್ಮೆ’ಯ ಕಾಲ ೧೫ನೇ ಶತಮಾನ.ಹಾಗೆಯೇ ’ತುಳು ಭಾಗವತ’ ’ಕಾವೇರಿ’ ಬಂದಿದ್ದು ೧೭ನೇ ಶತಮಾನದಲ್ಲಿ!

‘A comparative Grammar of the Dravidian or South Indian Family of Languages’ ಅನ್ನು ಬರೆದ ರೆವ್.ಕ್ಲಾಡ್ವೆಲ್ ಅವರು ’ದ್ರಾವಿಡ ಭಾಷೆಗಳಲ್ಲಿ ಸದೃಡವಾಗಿ ಬೆಳೆದು ನಿಂತ ಭಾಷೆ ತುಳು’ ಅಂದಿದ್ರು.

ವಿದ್ವಾಂಸರಿಂದ ಹೀಗೆಲ್ಲ ಹೊಗಳಿಸಿಕೊಂಡ ತುಳುವಿಗೊಂಡು ಲಿಪಿ ಇರಲಿಲ್ವಾ? ಬಾಲ್ಯದಲ್ಲಿ ನಮಗೆ ಸಹಜವಾಗಿ ಮೂಡುತಿದ್ದ ಪ್ರಶ್ನೆಯದು.ಅಪ್ಪ-ಅಮ್ಮರನ್ನ ’ತುಳುವನ್ನ ಬರೆಯಲು ಸಾಧ್ಯವಿಲ್ವಾ?’ ಅಂತ ಕೇಳಿದರೆ.’ತುಳುವಿಗೆ ತನ್ನದೇ ಆದ ಲಿಪಿ ಇಲ್ಲ ಮಗ,ಆದರೆ ಮಲಯಾಳಂ ಲಿಪಿ ಬಳಸಿ ತುಳುವನ್ನ ಬರೆಯುತ್ತಾರೆ ಅಂತಿದ್ರು ಅಮ್ಮ.ಬೆಳೆಯುತ್ತ ಬೆಳೆಯುತ್ತ ಅರಿವಿಗೆ ಬಂದಿದ್ದೇನೆಂದರೆ ಅಸಲಿಗೆ ಮಲಯಾಳಂ ಅನ್ನು ತುಳು ಲಿಪಿ ಬಳಸಿ ಬರೆಯುತ್ತಾರೆ ಅನ್ನುವುದು!

ಮತ್ತಷ್ಟು ಓದು »

22
ಮಾರ್ಚ್

ಬೇಕೇ ಇಂಥ ಮಕ್ಕಳು?

– ಪವನ್ ಎಂ. ಟಿ
ಒಂದು ಮಾತಿದೆಯಲ್ವಾ, ಈ ಜಗತ್ತಿನಲ್ಲಿ ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಾಯಿ ಇರಲಿಕ್ಕಿಲ್ಲ ಅಂತ.ನಾನೀಗ ಹೇಳ ಹೊರಟಿರುವುದು ಹಾಗೊಬ್ಬ ತಾಯಿಯ ಮತ್ತು ಅವಳ ಕಟುಕ ಮಗನ ಬಗ್ಗೆ.ತನ್ನ ವಯಸ್ಸಾದ ತಂದೆ ತಾಯಿಯನ್ನು ಯಾವ ಮಕ್ಕಳು ತಾನೆ ದಿನಗೂಲಿ ನೌಕರನಂತೆ ದುಡಿಸಿಕೊಳ್ಳುತ್ತಾರೆ ನೀವೆ ಹೇಳಿ?  ಆದರೆ ಇಲ್ಲಿ ಅಂತವನಿದ್ದಾನೆ. ಒಬ್ಬ ಅಜ್ಜಿ ತನ್ನ ಒಂದು ತುತ್ತು ಅನ್ನಕ್ಕಾಗಿ, ನಿತ್ಯದ ಜೀವನಕ್ಕಾಗಿ ದಿನವಿಡೀ ದುಡಿಯಲೇ ಬೇಕಾದ ಅನಿವಾರ್ಯತೆಯಲ್ಲಿದ್ದಾರೆ.

ಈ ಬಡಜೀವ ತನ್ನ ೯೫ ನೇ ವಯಸ್ಸಿನಲ್ಲಿಯೂ ಕೂಡ ಬುಟ್ಟಿಯನ್ನು ತಯಾರಿಸಿ ಬದುಕಬೇಕಾಗಿದೆ. ಈ ಬುಟ್ಟಿಗಾಗಿ ದೂರದ ಕಾಡಿನಿಂದ ಸಾಮಾಗ್ರಿಗಳನ್ನು ತರಲು ಒಬ್ಬರೆ  ಹೋಗುತ್ತಾರೆ. ಸರಿಯಾಗಿ ನಡೆಯಲು ಸಾಧ್ಯವಿಲ್ಲದ ಗೂನು ಬೆನ್ನಿನ ಅಜ್ಜಿ ಕಾಡಿಗೆ ತೆರಳಿದಾಗ ಅಲ್ಲಿ ಏನಾದರೂ ತೊಂದರೆಯಾದರೆ ಏನು ತಾನೆ ಮಾಡಿಯಾರು?  ಒಂದು ವೇಳೆ ತೊಂದರೆಯಾದರೂ ಸಹ ಅಲ್ಲಿ ಅಜ್ಜಿಯ ಬಗ್ಗೆ ತಲೆಕೆಡಿಸಿ ಕೊಳ್ಳುವವರಾರು ಇಲ್ಲ.
ಮತ್ತಷ್ಟು ಓದು »

19
ಮಾರ್ಚ್

ಈ ಸಾವು ನ್ಯಾಯವೇ?

– ರೂಪ ರಾವ್

ಮೊನ್ನೆಯ ಬೆಂಗಳೂರು ಮಿರರ್ ಪತ್ರಿಕೆಯಲ್ಲಿ ಓದಿದ ಸುದ್ದಿಯೊಂದು ಮನಸನ್ನ್ನು ಗಾಢವಾಗಿ ಕಾಡಿತು. ಸಯೋನಿ ಚಟರ್ಜಿ ಎಂಬ ಹನ್ನೊಂದರ ಮುದ್ದು ಬಾಲೆಯ ಫೋಟೊ ನೋಡುತ್ತಿದ್ದಂತೆ ಮನಸು ಕಲಕಿತು.

ಈ ಘ್ಹಟನೆ ನಡೆದದ್ದು ಮುಂಬೈನ ಉಲ್ಹಾಸ್ ನಗರದ ಶಾಲೆಯೊಂದರಲ್ಲಿ.
ಹನ್ನೊಂದು ವರ್ಷದ ಸಯೋನಿ ತನ್ನ ಸಹಪಾಠಿಯೊಬ್ಬನ ಜೊತೆ ಹೊಂದಿದ್ದ ಸಂಬಂಧದ ಬಗ್ಗೆ ತನ್ನ ಡೈರಿಯಲ್ಲಿ ಬರೆಯುತ್ತಿದ್ದಳು.ಎಲ್ಲರಿಗೂ ಗೊತ್ತು ಇದೊಂದು ಹದಿವಯಸಿನ ಆಕರ್ಷಣೆ. ನಮಗೆಲ್ಲಾ ಹದಿನಾರರಲ್ಲಿ ಶುರುವಾಗಿದ್ದು ಈ ಬಾಲೆಗೆ ಹನ್ನೊಂದಕ್ಕೆ ಶುರುವಾಗಿತ್ತು.ಇದು ಅಂದು ಅವಳ ತಾಯಿಯಕಣ್ಣಿಗೆ ಬಿತ್ತು . ಆ ತಾಯಿ ಮಗಳನ್ನುಈ ಸಂಬಂಧ ತರಾಟೆ ತೆಗೆದುಕೊಂಡು ಬೈದಿದ್ದಾರೆ.
ಆಷ್ಟಕ್ಕೆ ಸುಮ್ಮನಾಗಬಹುದಿತ್ತು.ಆದರೆ ಈ ವಿಷಯವನ್ನು ಕ್ಲಾಸ್ ಟೀಚರ್ ಹಾಗು ಹೆಡ್ ಮಿಸ್‌ ಜೊತೆ ಮಾತಾಡುತ್ತೇನೆ ಎಂದು  ಸಯೋನಿ ಶಾಲೆಗೆ ಹೊರಟರು ಅವಳ ತಾಯಿ
ಮೊದಲೇ ಎಳೆ ಮನಸು.ಶಾಲೆಯಲ್ಲಾಗುವ ಅವಮಾನವನ್ನು ತಾಳಲಾರದಾಯ್ತೇನೊ. ತನ್ನ ಸಹಪಾಠಿಗೆ ಈ ವಿಷಯವನ್ನು ಪತ್ರದ ಮೂಲಕ ತಿಳಿಸಿದ್ದಾಳೆ.
ಆ ಪತ್ರವನ್ನು ಓದುತ್ತಿದ್ದರೆ ಎಳೆ ಮನಸಿನಲ್ಲಾಗುತ್ತಿದ್ದ ತಳಮಳವನ್ನು ಊಹಿಸಬಹುದು.ಇತ್ತ ತಾಯಿಯನ್ನೂ ಬೇಡವೆಂದು ಕೇಳಿಕೊಂಡರೂ ತಾಯಿ ಕೇಳುತ್ತಿಲ್ಲ , ಪ್ರಿನ್ಸಿಪಾಲ್ ‌ಅನ್ನು ಭೇಟಿ ಮಾಡಲೇಬೇಕೆಂದು ಆ ತಾಯಿ ಕಾಯುತ್ತಿದ್ದರು.ಇತ್ತ ಮಗು ಮನೆಗೆ ಬಂದು ನೇಣು ಹಾಕಿಕೊಂಡಿತ್ತು.
18
ಮಾರ್ಚ್

‘ಕುಂದನಗರಿ’ಯ ಸಮ್ಮೇಳನದ ನೆನಪುಗಳು…!

– ಅರೆಹೊಳೆ ಸದಾಶಿವ ರಾವ್

ಹಾಗೆ ನೋಡಿದರೆ ಬೆಳಗಾವಿಗೆ ನಾನು ಎರಡು ತಿಂಗಳಿಗೊಮ್ಮೆ ಹೋಗುತ್ತಿರುತ್ತೇನೆ. ಹಾಗಾಗಿ ಸಂಪೂರ್ಣ ಅಲ್ಲದಿದ್ದರೂ ಬೆಳಗಾವಿಯ ರಸ್ತೆ ಮತ್ತದರ ದುರವಸ್ತೆಗಳನ್ನು ಆಗಾಗ ಗಮನಿಸಿದ್ದೇನೆ. ಇವತ್ತು ಬೆಳಗಾವಿ ಏನಾದರೂ ನಮ್ಮ ಪ್ರಭುಗಳ ಗಮನ ಸೆಳೆದಿದ್ದರೆ, ಅದಕ್ಕೆ ಮರಾಠಿಗರು ಖಂಡಿತಕ್ಕೂ ಕಾರಣರು! ಏಕೆಂದರೆ ಬೆಳಗಾವಿ ತಮ್ಮದು ಎಂಬ ವಿವಾದವನ್ನು ಸದಾ ಜೀವಂತವಾಗಿಟ್ಟುಕೊಂಡಿರುವವರು ಮರಾಠಿಗರು. ಈ ಹಿನ್ನೆಲೆಯಲ್ಲಿ ನಮ್ಮ ಪ್ರಭುತ್ವ, ಬೆಳಗಾವಿಯನ್ನು ಒಂದು ಕಣ್ಣಿಟ್ಟು ನೋಡುತ್ತಲೇ ಇರುತ್ತದೆ! ಅದಿಲ್ಲವಾಗಿದ್ದರೆ ಬಹುಶ: ಈ ಕುಂದನಗರಿಯೂ  ಉತ್ತರ ಕರ್ನಾಟಕದ ಇತರ ಜಿಲ್ಲೆ-ಪಟ್ಟಣಗಳಂತೆ ನಿರ್ಲಕ್ಷ್ಯದ ಬೇಗುದಿಯಲ್ಲಿ ಕಾಲ ತಳ್ಳುತ್ತಲೇ ಇರುತ್ತಿತ್ತೇನೋ!.

ಅದಿರಲಿ, ಈಗ ವಿಷಯ ಅದಲ್ಲ. ಇಪ್ಪತ್ತೈದು ವರ್ಷಗಳ ನಂತರ ಈ ಕುಂದ ನಗರಿಯಲ್ಲಿ ಎರಡನೆಯ ವಿಶ್ವ ಕನ್ನಡ ಸಮ್ಮೇಳನ ನಡೆಯಿತಲ್ಲ; ಒಂದು ಅಪೂರ್ವ ಅವಕಾಶವೆಂಬಂತೆ, ನಾನೂ ಅದರಲ್ಲಿ ಭಾಗವಹಿಸುವ ಉದ್ದೇಶದಿಂದ ಹೋಗಿದ್ದೆ. ಸಮ್ಮೇಳನದ ಬಗ್ಗೆ, ಅಲ್ಲಿ ಮುಳುಗಿ ಹೋದ ೩೭ಕೋಟಿ ರೂಪಾಯಿಗಳ ಬಗ್ಗೆ ಮಾಧ್ಯಮಗಳು ಮಾತಾಡುತ್ತಲೇ ಇರುವುದನ್ನು ಕೇಳಿದ್ದೀರಿ. ನಾನು ಗಮನಿಸಿದ ಒಂದು ಅಂಶವೆಂದರೆ, ಬೆಳಗಾವಿಗೆ ಕಾಲಿಟ್ಟರೆ ಪ್ರತೀ ರಸ್ತೆಗಳೂ ರಿಪೇರಿಯಾಗಿರುವುದು ಬಿಟ್ಟರೆ, ಪಟ್ಟಣ ಸಿಂಗಾರಗೊಂಡಿರುವುದು ಮಾತ್ರ ಕಣ್ಣಿಗೆ ಕಾಣುತ್ತದೆ.  ಮತ್ತೆ ಈ ಮೂವತ್ತೇಳು ಕೋಟಿ ಎಲ್ಲಿಗೆ ಹೋಗಿದೆ ಎಂಬುದಕ್ಕೆ ಹುಟುಕಾಡಿದರೂ ಏನೂ ಸಿಗುವುದಿಲ್ಲ.

ಇನ್ನು ಕನ್ನಡ ವೆಂದರೆ ಏನು? ಅದರ ಉಳಿವು-ಅಳಿವು  ಎಂದರೆ ಏನು ಎಂಬುದೂ ಪ್ರಶ್ನೆಯಾಗಿ ಕಾಡಿದ್ದು ಸುಳ್ಳಲ್ಲ! ಈ ರೀತಿಯ ದ್ವಂದ್ವಕ್ಕೂ ಕಾರಣವಿದೆ. ಇದು ವಿಶ್ವ ಕನ್ನಡ ಸಮ್ಮೇಳನ. ಬೆಳಗಾವಿಯ ನಗರದ ಪ್ರತೀ ಗೋಡೆಯ ಮೇಲೂ ಕನ್ನಡ ಉಳಿಸಿ-ಬೆಳೆಸಿ ಎಂಬ ಉದ್ಘೋಷವೇ ಕಾಣುತ್ತಿತ್ತು. ಆದರೆ ಇಡೀ ಮೂರುದಿನ ನಡೆದ ಸಮ್ಮೇಳನದಲ್ಲಿ ಈ ಹಿನ್ನೆಲೆಯಲ್ಲಿ ಏನಾದರೂ ಕ್ರಮಗಳನ್ನು ಸರಕಾರ ಆಗಲೀ, ಸಮ್ಮೇಳನ ಸಮಿತಿಯಾಗಿಯಾಗಲೀ ಕೈಗೊಂಡ ಬಗ್ಗೆ ವರದಿಯಾಗಿಲ್ಲ. ಅದೂ ಅಲ್ಲದೇ ಇದೇ ರೀತಿಯ ಸಮ್ಮೇಳನವನ್ನು ಐದು ವರ್ಷಗಳಿಗೊಮ್ಮೆ ನಡೆಸುವ ತೀರ್ಮಾನವನ್ನು ‘ಬಹುಜನರ’ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿಗಳು ಕೈಗೊಂಡರು. ಅದು ಒಂದು ರೀತಿಯಲ್ಲಿ ಸಂತಸದ ವಿಚಾರವೇ ಸರಿ…..ಆದರೆ…? ಮತ್ತಷ್ಟು ಓದು »

11
ಮಾರ್ಚ್

ವಿಶ್ವ ಕನ್ನಡ ಸಮ್ಮೇಳನ – ಏನಿದೆ, ಏನಿರಬೇಕಾಗಿತ್ತು?

ವಸಂತ ಶೆಟ್ಟಿ, ಬೆಂಗಳೂರು

ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಇನ್ನೇನು ಹೊತ್ತು ಎಣಿಕೆ ಶುರುವಾಗಿದೆ. ನಾಟಕ, ಕವನ ವಾಚನ, ಗಮಕ ವಾಚನ, ಕುಣಿತ, ಹಾಡುಗಾರಿಕೆ ಸೇರಿದಂತೆ ನಾಡಿನ ಕಲೆ, ಸಂಸ್ಕೃತಿ ಪ್ರದರ್ಶನಕ್ಕೆ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅನ್ನುತ್ತೆ ಸಮ್ಮೇಳನದ ವೆಬ್ ಸೈಟ್ ಅಲ್ಲಿರೋ ಕರೆಯೋಲೆ. ಇದಲ್ಲದೇ, ಕೆಲವು ಒಳ್ಳೆಯ ವಿಷಯಗಳ ಬಗ್ಗೆ ಚರ್ಚಾ ಗೋಷ್ಟಿಯನ್ನು ಏರ್ಪಡಿಸಲಾಗಿದೆ ಅಂತಲೂ ಕಂಡೆ. ಕನ್ನಡ, ಕನ್ನಡಿಗ, ಕರ್ನಾಟಕ ಇತಿಹಾಸದಲ್ಲೆಂದೂ ಕಂಡಿರದಂತಹ ಸವಾಲುಗಳನ್ನು ಎದುರಿಸುತ್ತಿರುವ ಜಾಗತೀಕರಣದ ನಂತರದ ಈ ದಿನಗಳಲ್ಲಿ ಇಂತಹ ಸಮ್ಮೇಳನಗಳು ಹೆಚ್ಚಿನ ಮಹತ್ವ ಪಡೆದಿವೆ ಕೂಡಾ. ಈ ಸಮ್ಮೇಳನ ಕರ್ನಾಟಕದ, ಕನ್ನಡಿಗರ ನಾಳೆಗಳನ್ನು ಕಟ್ಟಲು ಆಗಬೇಕಾದ ಕೆಲಸಗಳ ಬಗ್ಗೆ, ಇವತ್ತು ನಾವೆಲ್ಲಿದೀವಿ, ಈ ದಿನ ನಮ್ಮೆದುರು ಇರುವ ಸವಾಲುಗಳೇನು, ನಾವು ಸಾಗಬೇಕಾದ ದಾರಿ ಯಾವುದು, ಎಂತದ್ದು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚಿಸುವ, ಹೊಸ ದಿಕ್ಕು,ದೆಸೆ ನೀಡುವ ವೇದಿಕೆಯಾಗುತ್ತೆ ಅನ್ನುವುದು ನನ್ನ ನಿರೀಕ್ಷೆಯಾಗಿತ್ತು, ಆದರೆ ಕಾರ್ಯಕ್ರಮದ ಪಟ್ಟಿ ನೋಡಿದಾಗ ಕೆಲ ಮಟ್ಟಿಗೆ ನಿರಾಸೆಯಾಗಿದೆ ಅಂತಲೇ ಹೇಳಬೇಕು. ಜ್ಞಾನಾಧಾರಿತ ಹೊಸ ಜಗತ್ತಿನ ಸವಾಲುಗಳನ್ನು ಎದುರಿಸಿ ಗೆಲ್ಲಲು ಕನ್ನಡಿಗರ ಕಲಿಕೆ, ದುಡಿಮೆಯ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಚೆನ್ನಾಗಿ ಕಟ್ಟಿಕೊಳ್ಳಬೇಕಾದ ತುರ್ತು ಅಗತ್ಯ ನಮ್ಮ ಮುಂದಿದೆ. ಆದರೆ ಕಾರ್ಯಕ್ರಮದ ಪಟ್ಟಿ ನೋಡಿದ್ರೆ, ಈ ಸಮ್ಮೇಳನ ಹೊಟ್ಟೆಗೆ ಹಿಟ್ಟಿನ ವಿಷಯಗಳಿಗಿಂತ ಹೆಚ್ಚು ಜುಟ್ಟಿನ ಮಲ್ಲಿಗೆಯ ವಿಷಯಗಳತ್ತಲೇ ಗಮನ ಹರಿಸಿದೆಯೆನೋ ಅನ್ನುವಂತಿದೆ !

ಏನಿದೆ?

ಹಾಗಂತ, ಸಮ್ಮೇಳನದಲ್ಲಿ ಪ್ರಯೋಜನವಾಗುವಂತಹ ವಿಷಯಗಳೇ ಇಲ್ಲ ಅಂತಿಲ್ಲ. ಜಾಗತೀಕರಣ, ಮಾರುಕಟ್ಟೆ ಮತ್ತು ಯುವಕರ ಮೇಲೆ ಬೀರಿರುವ ಪ್ರಭಾವದ ಬಗ್ಗೆ ಜಾಗತೀಕರಣ ಕರ್ನಾಟಕ ಅನ್ನುವ ಗೋಷ್ಟಿ, ಗಡಿನಾಡಲ್ಲಿರುವ ಕನ್ನಡಿಗರ ಶಿಕ್ಷಣ ಸವಾಲುಗಳು, ಸಾಮಾಜಿಕ, ಸಾಂಸ್ಕೃತಿಕ ಸ್ಥಿತಿಗತಿಗಳ ಬಗ್ಗೆ ಬೆಳಕು ಚೆಲ್ಲುವ ಗಡಿನಾಡ ಕನ್ನಡಿಗರು ಅನ್ನುವ ಗೋಷ್ಟಿ, ಕನ್ನಡ ತಂತ್ರಾಂಶ, ವಿಜ್ಞಾನ ಶಿಕ್ಷಣದಂತಹ ವಿಷಯಗಳ ಬಗೆಗಿನ ಜ್ಞಾನ-ವಿಜ್ಞಾನ-ತಂತ್ರಜ್ಞಾನ-ಕರ್ನಾಟಕಅನ್ನುವ ಗೋಷ್ಟಿ, ಆಡಳಿತದಲ್ಲಿ ಕನ್ನಡ ಬಳಕೆ ಬಗೆಗಿನ ಕನ್ನಡ ಭಾಷಾ ಬಳಕೆ ಅನ್ನುವ ಗೋಷ್ಟಿ, ಕೃಷಿ ರಂಗ ಎದುರಿಸುತ್ತಿರುವ ಸವಾಲುಗಳ ಬಗೆಗಿನ ಕೃಷಿ-ಸಾಧನೆ ಸವಾಲು ಗೋಷ್ಟಿಗಳು ಈ ಕಾಲಮಾನಕ್ಕೆ ಪ್ರಸ್ತುತವೆನ್ನಿಸುವಂತಹ ಗೋಷ್ಟಿಗಳಾಗಿವೆ. ಇಲ್ಲಿ ಪಾಲ್ಗೊಳ್ಳುತ್ತಿರುವವರು ಅಷ್ಟೇ ಯೋಗ್ಯರು ಅನ್ನುವುದು ಕೂಡಾ ಗಮನಿಸಬೇಕಾದದ್ದು.  ಮತ್ತಷ್ಟು ಓದು »

10
ಮಾರ್ಚ್

ಅವಳೊಂದಿಗೆ ಆ ಭಾಷೆಯೂ ಮಣ್ಣಾಯಿತು!

– ಚಿತ್ರಾ ಸಂತೋಷ್

ಕಾಡುಹಂದಿ ಬೇಟೆ ಅಂದ್ರೆ ಅವಳಿಗಿಷ್ಟ. ದಟ್ಟಾರಣ್ಯದಲ್ಲಿ ಹೆಜ್ಜೆಗೊಂದು ಸಿಗುತ್ತಿದ್ದ ಆಮೆಗಳನ್ನೂ ಅವಳು ಬಿಟ್ಟವಳಲ್ಲ. ತಾನು ಹೋದಲೆಲ್ಲಾ ಬಿಲ್ಲು ಬಾಣಗಳನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿದ್ದ ಆ ಹೆಣ್ಣುಮಗಳು ತನ್ನ ಜೀವನಶಾಲೆಯನ್ನು ತಾನೇ ನಿರ್ಮಿಸಿಕೊಂಡವಳು. ಅವಳು ಹುಟ್ಟಿದ್ದು ಉತ್ತರ ಅಂಡಮಾನ್‌ನ ದಟ್ಟ ಕಾನನದಲ್ಲಿ. ೮೫ ವರ್ಷಗಳ ಹಿಂದೆ ಅವಳು ಹುಟ್ಟಿದಾಗ ಅವಳ ಜೊತೆ ಒಡನಾಡುವ ಸಂಗತಿಗಳಿದ್ದರು. ಸಮಾಜದ ಮುಖ್ಯವಾಹಿನಿ ಅಂದ್ರೆ ಅವಳಿಗೇನೂ ಗೊತ್ತಿಲ್ಲ. ವಿದ್ಯೆಯೆಂಬುವುದರ ನಂಟು ಆ ಕಾಡಿಗಿಲ್ಲ. ಭಾರತದಲ್ಲಿ ಬ್ರಿಟಿಷ್ ಅಧಿಪತ್ಯವಿದ್ದಾಗ ಅಂಡಮಾನನ್ನು ‘ಶಿಕ್ಷಾರ್ಹ ತಾಣ’ವೆಂದು ಪರಿಗಣಿಸಿ, ಸ್ವಾತಂತ್ರಕ್ಕಾಗಿ ಹೋರಾಡಿದ ಅದೆಷ್ಟೋ ಭಾರತೀಯರನ್ನು ಅಲ್ಲಿ ಶಿಕ್ಷೆಗೆ ಗುರಿಪಡಿಸುತ್ತಿದ್ದನ್ನು ಕಣ್ಣಾರೆ ಕಂಡಿದ್ದಾಳೆ. ತನ್ನ ಪರಿವಾರದವರು ಕಳ್ಳಭಟ್ಟಿ ಕುಡಿದು ಎಂಜಾಯ್ ಮಾಡುತ್ತಿದ್ದಾಗ ತಾನೂ ಅವರೊಂದಿಗೆ ಸಂಭ್ರಮಿಸಿದ್ದಾಳೆ. ೨೦೦೪ರಲ್ಲಿ ಅಂಡಮಾನ್ ಪ್ರದೇಶಕ್ಕೆ ಭೀಕರ ಸುನಾಮಿ ಕಾಲಿಟ್ಟಾಗ ೩೫೧೩ ಮಂದಿ ಸಾವನ್ನಪ್ಪಿದ್ದರೂ, ಈಕೆ ಮಾತ್ರ ಬದುಕುಳಿದಿದ್ದಳು. ಇದು ಅವಳ ಅದೃಷ್ಟವೋ ಏನೋ?

ಅಂಥ ಉತ್ಸಾಹದ ಬದುಕು ಕಂಡ ಆ ಕಾಡಿನ ಮಹಿಳೆಯ ಹೆಸರು ಬೋ ಎಸ್‌ಆರ್…
ಅದೇನು ವಿಶೇಷ ಅಂತೀರಾ? ಇತ್ತೀಚೆಗಷ್ಟೇ ಬೋ ಎಸ್‌ಆರ್ ನಿಧನವಾಗಿದ್ದಾಳೆ. ಇದು ಇವಳ ಸಾವು ಮಾತ್ರವಲ್ಲ, ದೇಶದ ಪುರಾತನ ಭಾಷೆಯ ಸಾವು, ಸಾಂಸ್ಕೃತಿಕ ಪರಂಪರೆಯ ಸಾವು ಕೂಡಾ ಹೌದು.

ಬೋ ಎಂದರೆ….

ಬೋ ಎಂಬುವುದು ವಿಶಿಷ್ಟವಾದ ಬುಡಕಟ್ಟು ಭಾಷೆ. ಈ ಭಾಷೆಯ ತವರು ಆಫ್ರಿಕಾ. ೭೦,೦೦೦ ವರ್ಷಗಳ ಹಿಂದೆಯೇ ಬೋ ಎನ್ನುವ ಬುಡಕಟ್ಟು ಜನಾಂಗ ಆಗ್ನೇಯ ಏಷ್ಯಾ ಭಾಗಕ್ಕೆ ವಲಸೆ ಬಂದಿದ್ದರು. ಅಂತೆಯೇ ಅಂಡಮಾನಿನಲ್ಲೂ ಬೋ ಜನಾಂಗ ಅಸ್ತಿತ್ವ ಕಂಡುಕೊಂಡಿತ್ತು. ೧೮೫೮ರಲ್ಲಿ ಅಂಡಮಾನಿನಲ್ಲಿ ಬೋ ಜನಾಂಗಕ್ಕೆ ಸೇರಿದ ಸುಮಾರು ೫ ಸಾವಿರ ಜನರಿದ್ದರು. ಕ್ರಮೇಣ ಅಲ್ಲಿ ಬ್ರಿಟೀಷರು ತಮ್ಮ ಅಧಿಪತ್ಯ ಸ್ಥಾಪಿಸಿದಾಗ ಅಮಾಯಕ ಬೋ ಜನಾಂಗ ಬ್ರಿಟೀಷರ ದಬ್ಬಾಳಿಕೆಗೆ ಬಲಿಯಾದರು. ಸಮಾಜದ ಮುಖ್ಯವಾಹಿನಿಯ ಕುರಿತು ಒಂದಿಷ್ಟೂ ತಿಳಿವಿರದ ಬೋ ಜನರಿಗೆ ರೋಗಗಳು ಬಂದರೂ ಅದಕ್ಕೂ ಸಾವೇ ಪರಿಹಾರ. ಬ್ರಿಟೀಷರ ದಬ್ಬಾಳಿಕೆ ಮತ್ತು ಹೇಳಿಕೇಳದೆ ಬರುವ ಹಲವಾರು ಸಾಂಕ್ರಾಮಿಕ ರೋಗಗಳ ಪರಿಣಾಮ ಬೋ ಜನಾಂಗ ವಿನಾಶದ ಹಾದಿ ಹಿಡಿಯಿತು.
ಕಳೆದ ನಲವತ್ತು ವರ್ಷದಿಂದ ಬೋ ಎಸ್‌ಆರ್ ಅವಳದು ಏಕಾಂಗಿ ಬದುಕು. ಅವಳಿಗೆ ಬರುವುದು ಅದೊಂದೇ ಭಾಷೆ ಬೋ. ಹಾಗಾಗಿ ಸುತ್ತಮುತ್ತಲಿನ ಯಾರ ಜೊತೆಯೂ ಸಂವಹನ ಸಾಧ್ಯವಿರಲಿಲ್ಲ. ೧೯೭೦ರಲ್ಲಿ ಭಾರತ ಸರ್ಕಾರ ಅಂಡಮಾನಿನಲ್ಲಿದ್ದ ಬೋ ಎಸ್‌ಆರ್ ಸೇರಿದಂತೆ ವಿವಿಧ ಬುಡಕಟ್ಟು ಜನಾಂಗಗಳಿಗೆ ಕಾಂಕ್ರೀಟ್ ಮನೆ ಮತ್ತು ೫೦೦ ರೂ. ಪಿಂಚಣಿ ಒದಗಿಸಿತ್ತು. ಆ ಪುಟ್ಟ ಮನೆಯೊಂದೇ ಬೋ ಸಂಸಾರ. ಬಹಳಷ್ಟು ವರ್ಷಗಳ ಹಿಂದೆಯೇ ಗಂಡನನ್ನು ಕಳೆದುಕೊಂಡ ಬೋ ಎಸ್‌ಆರ್‌ಗೆ ಮಕ್ಕಳೂ ಇರಲಿಲ್ಲ. ಜೀವನದ ಕೊನೆ ಗಳಿಗೆಯಲ್ಲಿ ಆಕೆ, ”ನಮ್ಮ ಜನಾಂಗದಲ್ಲಿ ನಾನು ಒಬ್ಬಳೇ ಉಳಿದಿದ್ದೇನೆ. ನಾನು ಕೊನೆಯವಳು ಎಂಬುವುದು ಹೆಮ್ಮೆಯಾಗುತ್ತಿದೆ. ಆದರೆ, ನಾನು ಮತ್ತೆ ಹುಟ್ಟಿದ ಆ ದಟ್ಟಾರಣ್ಯಕ್ಕೆ ಮರಳಬೇಕು. ಈ ನಾಡಿಗಿಂತ ಆ ಕಾಡು ಚೆನ್ನ. ಅದೇ ಮುಳ್ಳುಹಂದಿ, ಆಮೆ ಬೇಟೆಯಾಡಬೇಕು. ಕಾಡಿನೊಂದಿಗೆ ಮತ್ತೆ ನಾನು ಬದುಕಬಲ್ಲೆ. ಕಾಡಿನಲ್ಲಿ ನನ್ನ ಭವಿಷ್ಯ ಇದೆ, ಕಾಡಾದರೂ ನನಗೆ ಸಂಗಾತಿಯಾಗುತ್ತಿತ್ತು…. ”ಎಂದು ಹಂಬಲಿಸುತ್ತಿದ್ದಳಂತೆ. ಮತ್ತಷ್ಟು ಓದು »

6
ಮಾರ್ಚ್

ಕನ್ನಡವೆನೆ ಕುಣಿದಾಡುವುದೆನ್ನೆದೆ…

– ಉಮೇಶ ದೇಸಾಯಿ

ಇತ್ತೀಚೆಗಿನ ಎರಡು ಸಂಗತಿಗಳು ನಮ್ಮ ಕನ್ನಡ ನುಡಿ ಈ ರಾಜ್ಯದ ಘನತೆ ಬಗ್ಗೆ ಹತ್ತು ಹಲವು ವಿಚಾರಗಳ ಚರ್ಚೆಗೆ ವೇದಿಕೆಯಾಗಿವೆ. ಅದು ಹೇಮಾಮಾಲಿನಿ ನಮ್ಮ ರಾಜ್ಯದಿಂದ ಆರಿಸಿ ಬಂದಿದ್ದಿರಬಹುದು ಅಥವಾ ಬೆಳಗಾವಿಯಲ್ಲಿ ನಾರಾಯಣ ಮೂರ್ತಿ ಅವರು ವಿಶ್ವ ಕನ್ನಡ ಸಮ್ಮೇಳನ ಉದ್ಘಾಟಿಸಲಿರುವುದು.

ಇವೇ ಆ ಎರಡು ವಿದ್ಯಮಾನಗಳು. ಪತ್ರಿಕೆಯಲ್ಲಿ ಮಾತ್ರವಲ್ಲದೇ ನೆಟ್ ಲೋಕದಲ್ಲು ಚರ್ಚೆಗೆ ಗ್ರಾಸವಾಗಿತ್ತು. ಇದು ಒಳ್ಳೆಯ ಬೆಳವಣಿಗೆ. ಚರ್ಚೆ ಯಾವಾಗಲೂ ಭಿನ್ನ ದನಿ ಗಳನ್ನು ಕೇಳಿಸುತ್ತದೆ. ಮತ್ತು ಭಿನ್ನ ಸ್ವರ ಕೇಳಿಸುತ್ತದೆ..ಆದರೆ ಪೂರ್ವಾಗ್ರಹ ಪೀಡಿತ ಕಿವಿಗಳಿಗೆ ಭಿನ್ನ ರಾಗ ಬೇಕಾಗಿಲ್ಲ.ಫೇಸ್ ಬುಕ್ ನಲ್ಲಿ ನಾ ಹಾಕಿದ ಕಾಮೆಂಟಿಗೆ ಉತ್ತರವಾಗಿ ನನ್ನ ಮಾತೃಭಾಷೆ ಯಾವುದೆಂದು ಪ್ರಶ್ನಿಸಲಾಯಿತು. ನಾ ಅದಕ್ಕೆ ಸರಿಯಾದ ಉತ್ತರ ಕೊಟ್ಟೆ. ಸ್ನೇಹಿತ ರೋರ್ವರು ಬರೆಯುತ್ತ ವಿಶ್ವಕನ್ನಡ ಸಮ್ಮೇಳನ ಮಲ್ಯ ಅವರು ಉದ್ಘಾಟಿಸಲಿ ಎಂದು ಕುಹಕವಾಡಿದರು. ಈಗ ಮೂರ್ತಿ ಅವರಿಗೂ ಇರಿಸುಮುರಿಸಾಗಿ ನಮ್ಮ ಮುಖ್ಯಮಂತ್ರಿ ಜೊತೆ ನಕಾರ ಸೂಚಿಸಿದ್ದರೂ ತಮ್ಮ ಮೂಗು ಎಲ್ಲಿ ಮಣ್ಣಾಗುತ್ತದೆ ಎಂಬ ಹೆದರಿಕೆ ಸರಕಾರಕ್ಕೂ ಬಂದು ಶತಾಯ ಗತಾಯ ಮೂರ್ತಿ ಅವರೇ ಅದನ್ನು ಉದ್ಘಾಟಿಸಲಿದ್ದಾರೆ ಅಂತ ಹೇಳಿಕೆ ಬಂದಿದೆ. ಮತ್ತಷ್ಟು ಓದು »

4
ಮಾರ್ಚ್

ನಾರಾಯಣ ಮೂರ್ತಿ ಅವರಿಂದ ಏನ್ ಕಲಿಬೇಕು, ಏನ್ ಬೇಡ ?

ವಸಂತ್ ಶೆಟ್ಟಿ , ಬೆಂಗಳೂರು

ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಲು ಇನ್ ಫೋಸಿಸ್ ನ ನಾರಾಯಣ ಮೂರ್ತಿ “ಅವರನ್ನು ಆಯ್ಕೆ ಮಾಡಿದ ಸರ್ಕಾರದ ಕ್ರಮ ತಪ್ಪೆಂದೂ, ಅವರೊಬ್ಬ ಉದ್ಯಮಿಯೇ ಹೊರತು ಕನ್ನಡಕ್ಕೆ ಅವರ ಕೊಡುಗೆ ಶೂನ್ಯ” ಅಂತಲೂ ಅವರ ಆಯ್ಕೆಯ ಬಗ್ಗೆ ಅಪಸ್ವರ ಎದ್ದ ಸುದ್ದಿ ಪತ್ರಿಕೆಗಳಲ್ಲಿ,ಟಿವಿಗಳಲ್ಲಿ ನೋಡಿದೆ. ಅದೇ ಸಮಯಕ್ಕೆ ಕೆಲವು ಪತ್ರಿಕೆಗಳಲ್ಲಿ “ಅವರೊಬ್ಬ ಉದ್ಯಮಿ, ಲಕ್ಷಾಂತರ ಜನರಿಗೆ ಉದ್ಯೋಗ ಕೊಟ್ಟಿದ್ದಾರೆ, ಅವರ ಆಯ್ಕೆಯನ್ನು ವಿರೋಧಿಸಿರುವವರು ಕನ್ನಡಕ್ಕೆ ಏನ್ ಮಾಡಿದ್ದಾರೆ?” ಎಂದು ಮೂರ್ತಿ ಅವರ ಆಯ್ಕೆಯನ್ನು ಸಮರ್ಥಿಸುವ ಸುದ್ದಿಯನ್ನು ಕಂಡೆ. ಕರ್ನಾಟಕದ ಸಮಾಜಕ್ಕೆ ಮೂರ್ತಿ ಅವರ ಕೊಡುಗೆ ಏನೇನು ಇಲ್ಲ ಅನ್ನುವುದು ಎಷ್ಟು ತಪ್ಪೋ, ಮೂರ್ತಿ ಅವರ ಪರವಾಗಿ ಬರೆಯುವ ಆತುರದಲ್ಲಿ ಕನ್ನಡ, ಕರ್ನಾಟಕದ ಬಗ್ಗೆ ಅವರು ಮಾತಾಡಿದ್ದು, ಮಾಡಿದ್ದೆಲ್ಲ ಸರಿ ಅನ್ನುವ ಧೋರಣೆಯೂ ಅಷ್ಟೇ ತಪ್ಪು.

ಮೂರ್ತಿಯವರಿಂದ ಕಲಿಯಬೇಕಾದದ್ದು ಸಾಕಷ್ಟಿದೆ !

ಅತ್ಯಂತ ಸಾಮಾನ್ಯ ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆಯಿದ್ದರೂ, ಜಾಗತೀಕರಣದ ನಂತರ ತೆರೆದ ಮಾರುಕಟ್ಟೆ ಕೊಡ ಮಾಡುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ, ಪ್ರತಿಭೆ, ಪರಿಶ್ರಮಕ್ಕೆ ಬೆಲೆ ಕೊಡುವ ವ್ಯವಸ್ಥೆಯೊಂದನ್ನು ಕಟ್ಟಬಹುದು ಮತ್ತಷ್ಟು ಓದು »
3
ಮಾರ್ಚ್

ಬದುಕ ‘ಜಾತ್ರೆ’ ಯಲ್ಲಿ ಸಾಹಿತ್ಯದ ಪಾತ್ರ!

ಅರೆಹೊಳೆ ಸದಾಶಿವ ರಾವ್

ಒಂದು ರೀತಿಯ ನವೀಕರಣಗೊಂಡ ಮೂಡ್‌ನೊಂದಿಗೆ ಬರೆಯಕುಳಿತರೆ, ಅದೇಕೋ ‘ಜಾತ್ರೆ’ಬಹಳವಾಗಿ ಕಾಡುತ್ತಿದೆ. ಇದು ಎಲ್ಲೆಡೆಯಲ್ಲಿಯೂ ಜಾತ್ರೆನಡೆಯುವ ಸಂದರ್ಭ. ಅದರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಒಂದು ರೀತಿಯ ದೇವ-ದೈವದ ಕೇಂದ್ರವಾಗಿರುವ ಕಾರಣ, ಇದು ಒಂದು ರೀತಿಯ ಜಾತ್ರೆಯ ಸೀಸನ್. ಅದು ಕೋಲ, ಮಾರಿ, ನೇಮ, ರಥೋತ್ಸವ, ಗೆಂಡ ಸೇವೆ,…..ಇತ್ಯಾದಿ ಹೆಸರಿನಿಂದ  ನಡೆಯುವ ವರ್ಷಂಪ್ರತಿ ಧಾರ್ಮಿಕ ಕಾರ್ಯಕ್ರಮಗಳಾದರೆ,  ಅಷ್ಟಬಂಧ, ಬ್ರಹ್ಮಕಲಶೋತ್ಸವ, ಪುನ:ಪ್ರತಿಷ್ಠೆ, ನಾಗಮಂಡಲ…..ಇತ್ಯಾದಿಗಳಿಂದ ಕರೆಯಿಸಿಕೊಳ್ಳುವ ವಿಶೇಷ ಉತ್ಸವಗಳು. ಈಗ ನೀವು ಒಮ್ಮೆ ರಸ್ತೆ ಬದಿ ಹಾದಿರಿ ಎಂದಾದರೆ, ಇಂತಹ ಬ್ಯಾನರ್‌ಗಳು, ಕಟೌಟ್‌ಗಳು, ತೋರಣಗಳು ಎಲ್ಲೆಂದರಲ್ಲಿ ಕಾಣಸಿಕ್ಕಿದರೆ, ಎಲ್ಲಾ ಧಾರ್ಮಿಕ ಕೇಂದ್ರಗಳು ಹೊಸ ಬಣ್ಣ ಬಳಿದುಕೊಂಡು ಸಿಂಗಾರಗೊಂಡು ನಿಂತಿರುತ್ತವೆ. ಇಂತಹ ಉತ್ಸವಗಳು ಇಡಿಯ ಊರಿಗೆ ಊರೇ ಸಂಭ್ರಮಿಸಲು ಕಾರಣವಾಗುತ್ತವೆ. ಈ ಮೂಲಕ ನಾಟಕ, ಯಕ್ಷಗಾನ ಹಾಗೂ ಇನ್ನಿತರ ಕಲಾ ಪ್ರಕಾರಗಳ ಪ್ರದರ್ಶನ, ಊರಿನ ಸಂಭ್ರಮಕ್ಕೆ ಮೆರುಗು ನೀಡಿದರೆ, ಒಂದು ರೀತಿಯ ಜಡ ಹಿಡಿದ ಮನಸ್ಸುಗಳಿಗೆ ನವೀಕರಣವಾಗುವಲ್ಲಿ ಬಹು ಮುಖ್ಯ ಪಾತ್ರವಹಿಸುತ್ತದೆ.

ಇತ್ತೀಚೆಗೆ ನನ್ನೂರಿನ ಜಾತ್ರೆಯಲ್ಲಿ ಎರಡು ದಿನ ಕಳೆದು ಬಂದಾಗ ನನಗನಿಸಿದ್ದು, ಇದೂ ಜೀವನದ ಒಂದು ಅವಿಭಾಜ್ಯ ಅಂಗವೇ ಅಲ್ಲವೇ ಎಂಬುದು. ಅಲ್ಲಿ ಏನುಂಟು ಏನಿಲ್ಲ ಹೇಳಿ? ಬಾಲ್ಯದ ಗೆಳೆಯರ ಪುನರ್ಮಿಲನ, ಕುಡಿಮೀಸೆಯ ದಿನಗಳ ಕನಸಿನ ಮರು ನೆನಪು, ಚಾಪೆ ಹಿಡಿದೇ ಆಟಕ್ಕೆಂದು ಹೋಗಿ ೫ರೂಪಾಯಿಯ ಟಿಕೆಟ್ ಪಡೆದು ಗದ್ದೆಯಲ್ಲಿ ಮಲಗಿ ಬೆಳಗ್ಗೆದ್ದು ಮನೆಗೆ ಮರಳಿದ ದಿನದ ಮೆಲುಕು, ಆಟಿಕೆಯ ಅಂಗಡಿಯ ಮುಂದೆ ನಿಂತು ಇದು ಬೇಕೇ ಬೇಕೆಂದು ರೊಚ್ಚೆ ಹಿಡಿದು ಸಿಗದಾಗ ಮನೆಗೆ ಬಂದು ಅಳುಮೋರೆ ಹಾಕಿ ಹಬ್ಬ ಬಹಿಷ್ಕಾರ ಮಾಡಿದ ದಿನಗಳ ಗಮ್ಮತ್ತು……ಒಂದೇ ಎರಡೇ!. ಇದೆಲ್ಲಾ ಬಾಲ್ಯದ ದಿನಗಳು ಮರಳಿ ಬರಬೇಕೆಂದರೆ ಮತ್ತು ಬದುಕಿನ ಇಂದಿನ ಜಂಜಡಗಳಿಗೆ ತುಸು ನೆಮ್ಮದಿ ಸಿಗಬೇಕೆಂದಿದ್ದರೆ, ವರ್ಷಕ್ಕೊಮ್ಮೆ ನಡೆಯುವ ಹಬ್ಬಕ್ಕೆ ಹೋಗಿಯೇ ಸವಿಯಬೇಕು ಎಂಬುದನ್ನು ಈ ಸಲ ನನ್ನೂರ ಹಬ್ಬ ನನಗೆ ಖಚಿತವಾಗಿಸಿತು.
ಮತ್ತಷ್ಟು ಓದು »

1
ಮಾರ್ಚ್

ರಾಗಿಮುದ್ದೆ

ಶಿವು.ಕೆ

” ಇದು ಕಷ್ಟ ಕಣ್ರೀ, ನನ್ನ ಕೈಯಲ್ಲಿ ಆಗೋಲ್ಲ”

“ಅರೆರೆ ಅದ್ಯಾಕೆ ಭಯ ಪಡುತ್ತೀರಿ, ಇದು ನೀರು ಕುಡಿದಷ್ಟೇ ಸುಲಭ”

“ನೀರು ಬೇಕಾದ್ರೆ ಹಾಗೆ ಕುಡಿಯಬಹುದು, ಬೇಕಾದ್ರೆ ನುಂಗಿಬಿಡಬಹುದು, ಆದ್ರೆ ಇದು ಮಾತ್ರ ನನ್ನ ಕೈಯಲ್ಲಿ ನುಂಗಲು ಸಾಧ್ಯವೇ ಇಲ್ಲ” ಖಡಾಖಂಡಿತವಾಗಿ ಹೇಳಿಬಿಟ್ಟರು.

ಆದ್ರೆ ಇಷ್ಟಕ್ಕೆ ನಾನು ಬಿಡುತ್ತೇನೆಯೇ? ನನ್ನ ಪ್ರಯತ್ನವನ್ನು ಮುಂದುವರಿಸಿದೆ.

“ನೋಡ್ರಿ ಉದಯ್ ನಾವು ಇದನ್ನು ಜಾಮೂನ್ ಗಾತ್ರ ಮಾಡಿಕೊಂಡು ಸುಲಭವಾಗಿ ನುಂಗುತ್ತೇವೆ. ನೀವು ಕೊನೇ ಪಕ್ಷ ಗೋಲಿ ಗಾತ್ರ ಮಾಡಿಕೊಂಡು ಆದ್ರೂ ನುಂಗಲೇಬೇಕು”

“ನೋಡಿ ಇದೊಂದು ಬಿಟ್ಟು ಬೇರೆ ಏನು ಬೇಕಾದ್ರು ಹೇಳಿ ಮಾಡುತ್ತೇನೆ. ಬೇಕಾದ್ರೆ ನಿಮಗೆ ಎಂಥ ಸಾಪ್ಟ್  ವೇರ್ ಬೇಕು ಹೇಳಿ ಸಿದ್ಧಮಾಡಿಕೊಟ್ಟುಬಿಡುತ್ತೇನೆ. ಇದನ್ನು ನುಂಗಲು ಮಾತ್ರ ಒತ್ತಾಯಮಾಡಬೇಡಿ” ಹೀಗೆ ಹೇಳುತ್ತಾ ಬಂದ ಉದಯ ಹೆಗ್ಡೆ  ಕೊನೆಗೂ ನನ್ನ ಮಾತನ್ನು ಒಪ್ಪಲೇ ಇಲ್ಲ.

ಮತ್ತಷ್ಟು ಓದು »