ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

29
ಡಿಸೆ

ಭೈರಪ್ಪ ಎಂಬ STAR WRITER

ವಿಕಾಸ್ ಹೆಗಡೆ
ಪ್ರಕಟವಾದ ಮೊದಲನೇ ವಾರವೇ ಮೂರು ಮುದ್ರಣ, ಅಧಿಕೃತವಾಗಿ ಪುಸ್ತಕ ಬಿಡುಗಡೆ ಮಾಡಿದ್ದು ಎಂಟನೇ ಮುದ್ರಣ, ಪ್ರಕಟವಾಗುವ ಮೊದಲೇ ಬುಕ್ಕಿಂಗ್, ಎಲ್ಲಾ ಪ್ರತಿಗಳು ಖಾಲಿ, ಬೆಲೆ ದುಬಾರಿಯಾದರೂ ಎಲ್ಲಾ ಕಡೆ ಪುಸ್ತಕಗಳ ಜೋರು ಮಾರಾಟ, ಪತ್ರಿಕೆಗಳಲ್ಲಿ ಚರ್ಚೆ, ವಾದ, ವಿವಾದ, ಸಮರ್ಥನೆ, ದೂಷಣೆ – ಇಷ್ಟು ಹೇಳುತ್ತಿದ್ದಂತೆ ಎಲ್ಲರಿಗೂ ತಿಳಿದುಬಿಡುತ್ತದೆ. ಇದು ಇತ್ತೀಚೆಗೆ ಕನ್ನಡ ಸಾಹಿತ್ಯ ಲೋಕದ ವಿದ್ಯಮಾನ. ಅದು ಎಸ್.ಎಲ್. ಭೈರಪ್ಪನವರ ’ಕವಲು’ ಕಾದಂಬರಿ. ೨೩ ಮುದ್ರಣಗಳನ್ನು ಕಂಡ ಅವರ ಹಿಂದಿನ ಕಾದಂಬರಿ ‘ಆವರಣ’ದ ವಿಷಯವಂತೂ ಹೇಳುವುದೇ ಬೇಡ. ಬಹುಶಃ ಈ ಮಟ್ಟಿಗೆ ಸಂಚಲನ ಉಂಟು ಮಾಡುವ ಮತ್ತೊಬ್ಬ ಬರಹಗಾರ ಭಾರತದಲ್ಲಿಲ್ಲ. ಆ ಮಟ್ಟಿಗೆ ಜನಪ್ರಿಯ. ಎಲ್ಲಾ ವಯೋಮಾನದ ಓದುಗರನ್ನು ಹೊಂದಿರುವ ಲೇಖಕರಲ್ಲೊಬ್ಬರು. ಅಧ್ಯಯನ ಶೀಲ, ಸಮರ್ಪಣಾ ಮನೋಭಾವದ ಕಾದಂಬರಿಕಾರರಾಗಿ, ಅದ್ಭುತ ಬರಹಗಾರರಾಗಿ ಭೈರಪ್ಪನವರು ಪ್ರಸಿದ್ಧಿ. ಪಕ್ಕದ ರಾಜ್ಯದ ಸಾಹಿತ್ಯ ಲೋಕದಲ್ಲೇನಾಗುತ್ತಿದೆ ಎಂದು ಸರಿಯಾಗಿ ಗೊತ್ತಾಗದಿರುವ ಈ ಪರಿಸ್ಥಿತಿಯಲ್ಲೂ ಇವರ ಹಲವಾರು ಕಾದಂಬರಿಗಳು ಭಾರತದ ಅನೇಕ ಭಾಷೆಗಳಿಗೆ ಅನುವಾದಗೊಳ್ಳುತ್ತವೆ.ನಾನು ಓದಿದ ಇವರ ಮೊದಲ ಕಾದಂಬರಿ ‘ಧರ್ಮಶ್ರೀ’. ಅದಾದ ಮೇಲೆ ಅವರ ಅಂಚು, ದಾಟು, ಪರ್ವ, ವಂಶವೃಕ್ಷ, ನಿರಾಕರಣ, ಜಲಪಾತ, ಸಾರ್ಥ ಮುಂತಾದ ಹಲವು ಕಾದಂಬರಿಗಳನ್ನು ಓದಿದ್ದೇನೆ. ಒಂದೊಂದೂ ಕೂಡ ವಿಷಯಗಳ ಆಗರವಾಗಿ ಕಂಡಿವೆ. ಇನ್ನೂ ಕೆಲವು ಓದುವುದು ಬಾಕಿ ಇವೆ. ಘಟನೆಗಳನ್ನು ಕತೆಯಂತೆ ಹೇಳಿಬಿಡಬಹುದು, ಕಾಲ್ಪನಿಕ ಕತೆಗಳನ್ನು ಹೆಣೆದುಬಿಡಬಹುದು ಆದರೆ ಅದರಲ್ಲಿನ ಪಾತ್ರಗಳ ಮನಸ್ಸಿನ ತುಮುಲಗಳನ್ನು, ಸಮಾಜ, ಧರ್ಮ, ಸಂಪ್ರದಾಯ ಸಂಬಂಧಿತ ಸಂಗತಿಗಳನ್ನು ಚಿತ್ರಿಸುವುದು ಮಾತ್ರ ಎಲ್ಲರಿಗೂ ಸಾಧ್ಯವಿಲ್ಲ. ಅದನ್ನು ಸಮರ್ಥವಾಗಿ ಮಾಡುವುದರಿಂದಲೇ ಭೈರಪ್ಪನವರು ಅತ್ಯಂತ ಯಶಸ್ವಿ ಬರಹಗಾರರೆನ್ನಬಹುದು. ಭೈರಪ್ಪನವರ ಬರವಣಿಗೆಯ ವಿಷಯಗಳು ಎಷ್ಟರ ಮಟ್ಟಿಗೆ ಸೂಕ್ಷ್ಮವಾಗಿರುತ್ತವೆ ಎಂದರೆ ಅವು ಮೇಲ್ನೋಟಕ್ಕೆ ಸುಮ್ಮನೇ ಕಥೆಯಾಗಿದ್ದರೂ ಅದು ಸರಿಯಾಗಿ ಅರ್ಥವಾಗಲು ಅಂತಹ ಸನ್ನಿವೇಶಗಳನ್ನು, ಪರಿಸ್ಥಿತಿಗಳನ್ನು, ಮನಸ್ಥಿತಿಯನ್ನು ಸ್ವತಃ ಅನುಭವಿಸಿರಬೇಕು, ಇಲ್ಲವೇ ಕಂಡಿರಬೇಕು. ಆವಾಗಲಷ್ಟೇ ಅದು ಇನ್ನೂ ಚೆನ್ನಾಗಿ ತಾಗಬಲ್ಲುದು. ಜೊತೆಗೆ ಅವರ ಕಾದಂಬರಿಗಳ ವಿಷಯ ವ್ಯಾಪ್ತಿ ಮತ್ತು ಆಳ ಎಂತವರಿಗೂ ಹೊಸ ಹೊಸ ಲೋಕಗಳನ್ನು, ಸತ್ಯಗಳನ್ನು ತೋರಿಸಿಕೊಡುವಂತವು. ಮತ್ತಷ್ಟು ಓದು »
27
ಡಿಸೆ

ಗೋಹತ್ಯೆ ನಿಷೇಧದ ಸುತ್ತ…!

ಕವಿತಾ ಪಿ.ಎನ್ ಮತ್ತು ಸಂದೀಪ

ಗೋಹತ್ಯೆ ಹಾಗೂ ಗೋಹತ್ಯೆ ನಿಷೇಧಕಾಯಿದೆ/ಶಾಸನಬದ್ಧಗೊಳಿಸುವ ಕುರಿತಂತೆ ಬಿಡುವಿಲ್ಲದೇ ಚರ್ಚೆಗಳು ನಡೆಯುತ್ತಿರುವುದನ್ನು ನಾವೆಲ್ಲ ಓದುತ್ತಿದ್ದೇವೆ. ಹಳೆಯ ಒಂದು ಹಿಂದೂ ಪತ್ರಿಕೆಯಲ್ಲಿ ಬಂದ ‘Cow slaughter ban is a tool to oppress Dalits’ ಸಿಬ್ಬಂದಿ ಮಾಡಿದ್ದ ವರದಿಯಲ್ಲಿ, ಆರ್.ಎಸ್.ಎಸ್. ಮತ್ತು ಅದರ ವಿರೋಧಿ ಪಾಳೇಯದ ಟೀಕಾ ಪ್ರಹಾರಗಳು ಕಂಡುಬಂದವು.

ಆರ್.ಎಸ್.ಎಸ್.ಅನ್ನು ಟೀಕಿಸುವರು ಹೇಳುವುದೆನೆಂದರೆ, ಭಾರತೀಯ ಸ್ಥಳೀಯ ಸಂಸ್ಕೃತಿಗಳಿಗೆ ಹಿಂದೂ ರಾಷ್ಟ್ರೀಯತೆ ಎಂಬ ಪರಿಕಲ್ಪನೆಯು ವಿದೇಶದಿಂದ ಆಮದು ಮಾಡಿಕೊಂಡ ಸರಕು, ಆದರೆ ಆರ್.ಎಸ್,ಎಸ್.ನವರು ಬೇರೆ ಬೇರೆಯ ರೀತಿಯ ಆಹಾರ ಪದ್ದತಿಗಳನ್ನು ಹೊಂದಿರುವ ಸಂಸ್ಕೃತಿಗಳನ್ನು ರಾಷ್ಟ್ರೀಯತೆಯ ವಿರೋಧಿಗಳು ಎಂದು ಗುರುತಿಸುವ ಮೂಲಕ, ಆಂತರೀಕವಾಗಿ ಶತ್ರುಗಳನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಹೇಳಿಕೆಯನ್ನು ಪ್ರಕಾಶ ಅವರು ನೀಡಿದ್ದಾರೆ. ಮತ್ತಷ್ಟು ಓದು »

25
ಡಿಸೆ

“ಗ್ರಾಮದೇಗುಲಗಳಾಗಿ ಗರೋಡಿಗಳು”

ಜಗನ್ನಾಥ್ ಶಿರ್ಲಾಲ್

ತುಳುನಾಡು ಸಾಂಸ್ಕೃತಿಕ ಅನನ್ಯತೆಯ ನಾಡು. ದೈವ, ದೇವರುಗಳ ಸಮಾಗಮದ ಬೀಡು. ಇಲ್ಲಿನ ಪರಿಸರ, ಪ್ರಾಣಿ, ಪಕ್ಷಿ, ಗಿಡ, ಮರ, ಸ್ಥಳ, ವೀರ ಪುರುಷರ, ಆರಾಧನೆಯ ದೈವಿಕ ನೆಲೆಯಾಗಿದೆ. ಪ್ರತಿಯೊಂದು ನಂಬಿಕೆ ನಡವಳಿಕೆಗಳು ಜಾನಪದದ ಆಧಾರದಲ್ಲಿ ಹೆಣೆದಿರುವುದು ತುಳುನಾಡ ಸಂಸ್ಕೃತಿಯ ವೈಶಿಷ್ಟ್ಯ.
ವ್ಯಕ್ತಿಗಳು ತನ್ನ ಜೀವಿತ ಕಾಲದಲ್ಲಿ ಅಸಾಮಾನ್ಯ ರೀತಿಯಲ್ಲಿ ಬಾಳಿ ಬದುಕಿ ಬಲಿದಾನವಾದಾಗ ಅವರನ್ನು ದೈವತ್ವ ಮಟ್ಟಕ್ಕೆ ಏರಿಸಿ ಪೂಜಿಸುವ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಕಂಡುಬರುತ್ತದೆ. ಅತಿಮಾನುಷ ಶಕ್ತಿಗಳನ್ನು ಪೂಜಿಸಲು ಅತ್ತ ದೇವಸ್ಥಾನವು ಅಲ್ಲದ ಇತ್ತ ಭೂತ ಸ್ಥಾನವೂ ಅಲ್ಲದ ಒಂದು ವಿಶಿಷ್ಟ ಪೂಜಾ ಕೇಂದ್ರವಾಗಿ ‘ಗರೋಡಿ’ ಎಂಬ ದೇಗುಲವು ನಿರ್ಮಾಣವಾದುದು ಜನರ ಭಾವುಕ ಪ್ರಜ್ಞೆಗೆ ತಲೆಬಾಗಲೇ ಬೇಕಾದುದು. ಈ ಮೂಲಕ ಇಡೀ ಗ್ರಾಮ ವ್ಯವಸ್ಥೆಯಲ್ಲಿ ಆ ಗರೋಡಿಗೆ ಸಂಬಂಧಿಸಿದ ಸಮುದಾಯದ ಜನರನ್ನು ಒಂದುಗೂಡಿಸುವಲ್ಲಿ ದೈವ ಭಕ್ತಿಯು  ಕಾರಣವಾಗಿದೆ. ಅಲ್ಲದೆ ಪ್ರಸ್ತುತ ಆಧುನಿಕ ಜಗತ್ತಿನಲ್ಲಿ ಸಮುದಾಯಗಳ ಮಧ್ಯೆ ಸಾಮರಸ್ಯ ಮೂಡಿಸಲು ಮತ್ತು ಪಾಲ್ಗೊಳ್ಳುವಿಕೆಗೆ ಗರೋಡಿಗಳು ಒಂದು ಕಾರಣವಾಗಿದೆ. ಮತ್ತಷ್ಟು ಓದು »
23
ಡಿಸೆ

ಕನ್ನಡ ಮಿಡಿಯಾ – ಎಡವುತ್ತಿರುವುದೆಲ್ಲಿ ?

ವಸಂತ ಶೆಟ್ಟಿ, ಬೆಂಗಳೂರು

ದಿನಾ ಓದೋ ಕನ್ನಡ ಪತ್ರಿಕೆಗಳಿರಬಹುದು (ವಿ.ಕ, ಪ್ರ.ವಾ,ಉ.ವಾ, ಕ.ಪ್ರ), ನೋಡೋ ಕನ್ನಡ ಸುದ್ದಿ ವಾಹಿನಿಗಳಿರಬಹುದು (ಟಿವಿ9, ಸುವರ್ಣ) ಇಲ್ಲವೇ ಕನ್ನಡದ ಮನರಂಜನೆ ಚಾನೆಲ್ ಗಳಿರಬಹುದು( ಜೀ ಕನ್ನಡ, ಕಸ್ತೂರಿ, ಈ ಟಿವಿ ಕನ್ನಡ, ಸುವರ್ಣ), ಇವರೆಲ್ಲರಲ್ಲಿ ಒಂದು ಸಾಮಾನ್ಯವಾದ ಅಂಶವೆಂದರೆ ಇವರಿಗಿರೋ ಹಿಂದಿ ಸಿನೆಮಾ, ಬಾಲಿವುಡ್ ಬಗೆಗಿನ ವಿಪರೀತ ಅಭಿಮಾನ. ಇವರ ಹಿಂದಿ ಸಿನೆಮಾ, ಹಾಡು, ನಟರ ಬಗೆಗಿನ disproportionate ಪ್ರಚಾರದ ವೈಖರಿ ನೋಡಿದವರಿಗೆ ಕರ್ನಾಟಕದಲ್ಲಿ ಹಿಂದಿ ಚಿತ್ರೋದ್ಯಮ ಕನ್ನಡಕ್ಕಿಂತ ದೊಡ್ಡದು ಅನ್ನುವಂತೆ ಅನ್ನಿಸುವ ಹಾಗೆ ಮಾಡಿದ್ದರೆ ಅಚ್ಚರಿಯಿಲ್ಲ. ಹಾಗಿದ್ರೆ ಇದೆಷ್ಟು ಸರಿಯಾದದ್ದು ?

ಮಾಧ್ಯಮದ ಮಂದಿಗೆ ಕೆಲವು ಪ್ರಶ್ನೆಗಳು

’ಹಿಂದಿ’ಗಿಂತ ’ಕನ್ನಡ’ದ ಮನರಂಜನೆ, ಕನ್ನಡ ಚಿತ್ರಗಳು ಗ್ರಾಹಕರಾಗಿ ಕನ್ನಡಿಗರ ಮನಸಿಗೆ ಹೆಚ್ಚು ಹತ್ತಿರ ಅನ್ನುವುದನ್ನು ಹಲವು ಹಿಟ್ ಚಿತ್ರಗಳು ( ಈ ವರ್ಷ ಜಾಕಿ, ಸೂಪರ್, ಪಂಚರಂಗಿ, ಆಪ್ತರಕ್ಷಕ, ಪೃಥ್ವಿ, ಕೃಷ್ಣನ್ ಲವ್ ಸ್ಟೋರಿ) ಸಾಬೀತು ಮಾಡಿದ್ದರೂ ಹಿಂದಿ ಚಿತ್ರಗಳ ಬಗ್ಗೆ ಕನ್ನಡದ ಪ್ರಿಂಟ್ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ನಡೆಯುತ್ತಿರುವ ಮಿತಿ ಮೀರಿದ ಪ್ರಚಾರ ಇಂದಿಗೂ ಹಾಗೆಯೇ ಸಾಗಿದೆ. ಮತ್ತಷ್ಟು ಓದು »

22
ಡಿಸೆ

ಅಲೆಲ್ಲೆಲ್ಲೆ…. ಸಿಂಗ್ರಿ!

ಇರ್ಷಾದ್ ಎಂ.ವೇಣೂರು

ಸಿಂಗ್ರಿ ರೌಂಡ್ಸ್…

 ಬೆಳಿಗ್ಗೆ 8.15 ದಾಟಿದರೆ ಸಾಕು ಯಾವುದೇ ಕೆಲಸದಲ್ಲಿ ಬ್ಯೂಸಿ ಆಗಿರುವವರು ಟಿ.ವಿ ಮುಂದೆ ಹಾಜರಾಗ್ತಾರೆ. ಬೇರೆ ಯಾವುದೇ ಚಾನಲ್ ನೋಡ್ತಿರೋರು ಸುವರ್ಣ ನ್ಯೂಸ್ ಚಾನೆಲ್ ಗೆ ಜಂಪ್ ಆಗ್ತಾರೆ. 8 ಗಂಟೆಯ ನ್ಯೂಸ್ ಓದ್ತಿರೋ ಆಂಕರ್ ‘ಈಗ ಸಿಂಗ್ರಿ ರೌಂಡ್ಸ್ ಪ್ರಸಾರವಾಗತ್ತೆ, ಕ್ಷಣ ಕ್ಷಣದ ಸುದ್ದಿಗಾಗಿ ಸುವರ್ಣ ನ್ಯೂಸ್ 24X7 ನೋಡ್ತಾ ಇರಿ’ ಎಂದಾಗ ಟಿವಿ ಮುಂದೆ ಕೂತವರ ಮುಖದಲ್ಲಿ ಮಂದಹಾಸ ಬೀರುತ್ತೆ. ಇನ್ನು ಸಿಂಗ್ರಿ ಮ್ಯೂಸಿಕ್ ಬಂತು ಅಂದ್ರೆ ಮನೆ ಮಂದಿಯ ಕಣ್ಣೆಲ್ಲಾ ಟಿ.ವಿ ಪರದೆಯ ಮೇಲೆ ಬೀಳುತ್ತೆ!
ಹಿಂದಿನ ದಿನದ ಆಗು ಹೋಗುಗಳನ್ನು ತನ್ನದೇ ಆದ ಶೈಲಿಯಲ್ಲಿ ಉಣಬಡಿಸುವ ಸಿಂಗ್ರಿ ಎಲ್ಲರ ಅಚ್ಚುಮೆಚ್ಚು. ತೆರೆಯ ಮೇಲೆ ಕುಡುಕನೋರ್ವ 90 ಹಾಕ್ಕೊಂಡು ಗಾಳಿಯಲ್ಲಿ ತೂರಾಡ್ತಾ ಇರ್ತಾನೆ. ಅವನಿಗೆ ಸಾಥಿಯಾಗಿ ಕುಡುಕನ ವಾಯ್ಸ್ ರಾಜಕೀಯ – ಪ್ರಚಲಿತ ವಿದ್ಯಮಾನಗಳ ಬಗ್ಗೆ ತನ್ನ ಅನಿಸಿಕೆ ಹೇಳುತ್ತಾ ಹೋಗುತ್ತೆ. ಕೇವಲ ರಾಜಕೀಯದ ಸುತ್ತ ಮಾತ್ರ ಸಿಂಗ್ರಿ ರೌಂಡ್ ಹಾಕಲ್ಲ. ಕೆಲವೊಮ್ಮೆ ವಿಶಿಷ್ಟ ಸುದ್ದಿಗಳೂ ಅಲ್ಲಿರುತ್ತೆ! ಪ್ರತಿಯೊಂದು ಟಾಂಗ್ – ಟಾಂಟ್ ಮೂಲಕ ಚಾಟಿಯೇಟು ನೀಡಿದ ಬಳಿಕ ಹ್ಹಿಹ್ಹಿಹ್ಹಿ ಎಂಬ ಮಗುವಿನ ನಗು ಪ್ರೇಕ್ಷಕರ ಬಾಯಲ್ಲೂ ಪ್ರತಿಫಲನವಾಗುತ್ತೆ.
17
ಡಿಸೆ

ಲಲಿತ ಪ್ರಬಂಧ: ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!

ಸುಪ್ರೀತ್ ಕೆ ಎಸ್

‘ಎಷ್ಟನೆ ಸಲದ ದಂಡ ಯಾತ್ರೆಯಪ್ಪಾ ಇದು?’ ಹಾಗಂತ ಕಾಫಿಗೆ ಕರೆಯುವ ಗೆಳೆಯರನ್ನು ರೇಗಿಸುತ್ತಿರುತ್ತೇನೆ. ಹಾಸ್ಟೆಲ್ಲಿನ ಹುಡುಗರು ಕಾಫಿಗೆ ಹೋಗುವ ಸಂಭ್ರಮವೇ ಬೇರೆ. ಬೆಳಿಗಿನ ಚಳಿಯಲ್ಲಿ ಧೈರ್ಯ ಮಾಡಿ ಎದ್ದವರು ಮಾಡಿಟ್ಟ ಕಾಫಿಯನ್ನು ತಮ್ಮ ಕೆಪಾಸಿಟಿಗೆ ತಕ್ಕಂತ ಹೀರಿಬಿಟ್ಟಿರುತ್ತರಾದ್ದರಿಂದ ನನ್ನಂಥ ಸೂರ್ಯದ್ವೇಷಿಗಳಿಗೆ, ಏಳು ಗಂಟೆಯ ಮೊದಲು ಎದ್ದು ಬಿಡುವುದು ನೈತಿಕ ಅಧಃಪಥನ ಎಂದು ಭಾವಿಸಿರುವವರಿಗೆ ಖಾಲಿ ಕಾಫಿ ಜಗ್ ಮಾತ್ರ ಕಾದಿರುತ್ತದೆ!

ಎಲ್ಲಾ ಹುಡುಗರು ಇದ್ದಾಗ ಹಾಸ್ಟೆಲ್ಲಿನ ವಾತಾವರಣ ಕಲಕಲ ಎನ್ನುತ್ತಿರುತ್ತದೆ. ಎಲ್ಲರಿಗೂ ಕಾಲೇಜು ರಜೆಯಿದ್ದರೆ, ಇಲ್ಲವೇ ಪರೀಕ್ಷೆಗಳಿಗೆ ಓದಲು ಕಾಲೇಜಿನವರೇ ರಜೆ ಕರುಣಿಸಿ ಓಡಿಸಿದ್ದರೆ ಕಾಫಿ ಟೀ ಕುಡಿಯಲು ಸಮೀಪದ ಕಾಫಿ ಬಾರ್‌ಗೆ ದಂಡು ದಂಡು ಸಮೇತ ಲಗ್ಗೆ ಹಾಕುವುದನ್ನು ನೋಡುವುದು ಕಣ್ಣಿಗೆ ಹಬ್ಬ. ಬೆಳಗಿನ ತಿಂಡಿ ಮುಗಿಸಿಕೊಂಡ ನಂತರ ಒಂದು ಸುತ್ತು, ಮಧ್ಯಾನದ ಊಟಕ್ಕೂ, ತಿಂಡಿಗೂ ನಡುವಿನ ಸಮಯದಲ್ಲಿ ಓದಿ ಓದಿ ಸುಸ್ತಾದವರಿಗಾಗಿ ಒಂದು ಸುತ್ತು, ಮಧ್ಯಾನದ ಊಟ ಮುಗಿಸಿ ಗಡದ್ದಾಗಿ ನಿದ್ದೆ ಹೊಡೆದು ಸಂಜೆಗೆ ಎದ್ದು ಒಂದು ಸುತ್ತು, ರಾತ್ರಿ ಊಟವಾದ ಮೇಲೆ ಓದುತ್ತಾ ಕೂರಲು ಎನರ್ಜಿ ಬೇಕಾದವರದ್ದು ಒಂದು ಸುತ್ತು ಕಾಫಿ ಬಾರ್ ಪರ್ಯಟನೆ- ಇದು ನಮ್ಮ ದೈನಂದಿನ ಅವಿಭಾಜ್ಯ ಅಂಗ. ಕೆಲವೊಮ್ಮೆ ಕಾಲೇಜು ಗೆಳೆಯರು ನಮ್ಮ ಭೇಟಿಗೆ ಹಾಸ್ಟೆಲ್ಲಿಗೇ ಬಂದಾಗ, ಒಲ್ಲದ ಅತಿಥಿ ರೂಮಿನಲ್ಲಿ ಒಕ್ಕರಿಸಿಕೊಂಡು ಕೊರೆತದಿಂದ ರೋಧನೆ ಕೊಡುವಾಗ ಅವನನ್ನು ಸಾಗಿ ಹಾಕಲು ಈ ‘ಕಾಫಿ’ ಆಪದ್ಭಾಂದವನ ಹಾಗೆ ನೆರವಿಗೆ ಬರುವುದೂ ಇದೆ. ಮತ್ತಷ್ಟು ಓದು »

14
ಡಿಸೆ

ಭೈರಪ್ಪ ಮತ್ತು ತರ್ಲೆ ರಾಜ್ಯ ರಾಜಕೀಯ…

-ಶಂಶೀರ್, ಬುಡೋಳಿ

ಇವರೆಗೆ ನೀವು  ಜೆಡಿ‌ಎಸ್, ಕಾಂಗ್ರೆಸ್ಸನ್ನು ಬಿಜೆಪಿ ತಮ್ಮ ತರಲೆ ಮನೋಸ್ಥಿತಿಯ ಮೂಲಕ ತರಾಟೆಗೆ ತೆಗೆದುಕೊಂಡಿರುವುದನ್ನು ನೋಡಿರಬಹುದು. ಆದರೆ ಈಗ ನಡೆದಿರುವುದು ವಿಶೇಷವೇನೂ ಅಲ್ಲವಾದರೂ ರಾಜಕೀಯ ವ್ಯಕ್ತಿಯಲ್ಲದ, ರಾಜಕೀಯ ಪರ ಮಾತನಾಡುವ ಸಾಹಿತಿಯೊಬ್ಬರು ತಮ್ಮ ಮನೋಸ್ಥಿತಿಯನ್ನು, ಕೋಮುವಾದಿ ಸಾಹಿತಿ ಎಂಬ ಹಣೆಪಟ್ಟಿ ಕಟ್ಟಿಕೊಂಡ ಕನ್ನಡ ಸಾಹಿತಿ ಎಸ್.ಎಲ್.ಭೈರಪ್ಪ ಹೊರಗೆಡುವ ಮೂಲಕ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾರೆ.

ಹೆಚ್ಚಿನದಾಗಿ ತಮ್ಮ ಕೃತಿಗಳಲ್ಲಿ ಜಾತಿ, ಧರ್ಮಗಳ ಬಗ್ಗೆ ಮಾತನಾಡುತ್ತಿದ್ದ ಭೈರಪ್ಪನವರು, ಏಕಾ‌ಏಕಿ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿರುವುದರ ಹೊತ್ತಿನಲ್ಲಿ ಗುಜರಾತ್ ಮಾದರಿ ರಾಜಕೀಯವನ್ನು ಮುಂದಿಟ್ಟುಕೊಂಡು ಕರ್ನಾಟಕ ಸರಕಾರವನ್ನು ಬೆಂಬಲಿಸಬೇಕೆಂದು ಪರೋಕ್ಷವಾಗಿ ಕರೆ ಕೊಟ್ಟಿದ್ದಾರೆ. ತಾನು ವಾಸಿಸುವ, ಜನ್ಮ ತಾಳಿದ ಕರ್ನಾಟಕದ  ರಾಜ್ಯದ ಜನರ ಮನಸ್ಥಿತಿಯನ್ನು ತರಲೆಗೆ ಹೊಲಿಸಿರುವ ಇಂತಹವರನ್ನು ಏನೆನ್ನಬೇಕು? ಕರ್ನಾಟಕ ರಾಜ್ಯದ ಜನರ ತರ‍್ಲೆ  ಮನೋಸ್ಥಿತಿಯೇ  ರಾಜ್ಯದ ಅಭಿವೃದ್ದಿಗೆ ಅಡ್ಡಿಯಾಗಿದೆ ಎಂದು ಇವರು ಹೇಳಿದ್ದು ತಪ್ಪಾಗಿದೆ ಎಂದೆನಿಸುತ್ತದೆ. ನಿಜವಾದ ಕಾರಣವೆಂದರೆ ರಾಜ್ಯ ಸಚಿವ ಸಂಪುಟದ ತರ‍್ಲೆ ಮನೋಸ್ಥಿತಿಯೆ ರಾಜ್ಯದ ಅಭಿವೃದ್ದಿಗೆ ಅಡ್ಡಿಯಾಗುತ್ತಿದೆ ಎಂದು ಹೇಳಬೇಕಾಗಿತ್ತು. ಆದರೆ ಭೈರಪ್ಪನವರು ಬೇಕೆಂತಲೂ ಅಥವಾ ಗೊತ್ತಿಲ್ಲದೆಯೋ ಇಂತಹ ಹೇಳಿಕೆ  ಕೊಡುವ ಮೂಲಕ ಮತ್ತೊಮ್ಮೆ ತಮ್ಮ ಮನೋಸ್ಥಿತಿಯ ಅತಂತ್ರತೆಯನ್ನು ಬಿಚ್ಚಿಟ್ಟಿದ್ದಾರೆ ಎಂದೆನಿಸುತ್ತದೆ. ಮತ್ತಷ್ಟು ಓದು »

4
ಡಿಸೆ

ಸಾಂಸ್ಕೃತಿಕ ಕಾರ್ಯಕ್ರಮಗಳ ಔಚಿತ್ಯತೆ

ಜಗನ್ನಾಥ್ ಶಿರ್ಲಾಲ್

ನಮ್ಮ ನೆಲದ ಸಾಂಸ್ಕೃತಿಕ ಸತ್ವವನ್ನು ಅನಾವರಣಗೊಳಿಸುವ ಕಲಾ ಪ್ರದರ್ಶನವನ್ನು ಸಾಂಸ್ಕೃತಿಕ ಕಾರ್ಯಕ್ರಮ ಎನ್ನಬಹುದು. ಇಂತಹ ಕಲಾ ಸಾಧ್ಯತೆಗಳನ್ನು ಆಸ್ವಾದಿಸುವ ಮೂಲಕ ಸಹೃದಯ ಪ್ರೇಕ್ಷಕರು ಮತ್ತಷ್ಟು ಸುಸಂಸ್ಕೃತರಾಗಿ ಬೆಳೆಯಬಹುದು. ಸಾಂಸ್ಕೃತಿಕ ಕಾರ್ಯಕ್ರಮ ಎಂದಾಕ್ಷಣ ಇಷ್ಟಪಡದವರು ಇಲ್ಲ. ದಾರಿಹೋಕರೂ ಕೂಡಾ ಆಸುಪಾಸಿನ ಶಾಲಾ ಕಾಲೇಜು, ಯುವಕ ಸಂಘ, ದೇವಸ್ಥಾನದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕ್ಷಣ ಮಾತ್ರದಲ್ಲಿ ದೃಷ್ಟಿ ಹಾಯಿಸುತ್ತಾರೆ. ಇನ್ನೂ ಕೆಲವರು ತನ್ನೆಲ್ಲ ಅತ್ಯಗತ್ಯ ಕೆಲಸಗಳನ್ನು ಬದಿಗೊತ್ತಿ ಕಾರ್ಯಕ್ರಮ ವೀಕ್ಷಿಸುವವರಿದ್ದಾರೆ.

       ಸಾಂಸ್ಕೃತಿಕ ಕಾರ್ಯಕ್ರಮಗಳು ಆಧುನಿಕ ಯುಗದಲ್ಲಿ ಮಕ್ಕಳು, ಯುವಕರು, ಹಿರಿಯರನ್ನು ಮನರಂಜಿಸುವ ಮಾಧ್ಯಮವಾಗಿವೆ. ಅಲ್ಲದೆ ಹಲವಾರು ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಲು ಸಾಧ್ಯವಾಗಿದೆ.
        ಇಂತಹ ಕಾರ್ಯಕ್ರಮಗಳು ಮೌಲ್ಯಯುತವಾಗಿ, ಮನೋರಂಜನೆ, ಸಮಯದ ಮಿತಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವಂತಿರಬೇಕು. ವಸ್ತು ದೃಷ್ಟಿಯಲ್ಲಿ ಸಂದೇಶದ ಸ್ಪಷ್ಟತೆಯಿದ್ದು ಸಕುಟುಂಬಿಕವಾಗಿ ನೋಡುವಂತಿದ್ದರೆ ಒಳ್ಳೆಯದು. ಮತ್ತಷ್ಟು ಓದು »
29
ನವೆಂ

ಯದಾ ಯದಾಹಿ ಧರ್ಮಸ್ಯ… : ಕಲಿಕಾ ಪ್ರಕ್ರಿಯೆಯ ಅವನತಿ ಮತ್ತು ಪುನರುಜ್ಜಿವನ.

ಪ್ರೊ. ಬಾಲಗಂಗಾಧರ

Degeneration of a Learning Process and its Rejuvenation

Prof. Balagangadhar

Ghent University, Belgium

ಯದಾ ಯದಾಹಿ ಧರ್ಮಸ್ಯ … ಸಂಭವಾಮಿ ಯುಗೇಯುಗೇ : ಭಗವದ್ ಗೀತೆಯ ಈ ಶ್ಲೋಕ ಬಹಳಷ್ಟು ಜನರಿಗೆ ಚಿರಪರಿಚಿತ. ಈ ಮಂದಿನ ಚರ್ಚೆಯ ಸಲುವಾಗಿ ಈ ಶ್ಲೋಕದ  ಒಂದು ಕರಡು ಭಾಷಾಂತರವನ್ನು ಮಾಡಲು ನನಗೆ ಅನುಮತಿ ನೀಡಿ.

ಯಾವಾಗ ಮತ್ತು ಎಲ್ಲೆಲ್ಲಿ ಧರ್ಮದಲ್ಲಿ ಏರುಪೇರುಗಳು ವ್ಯಕ್ತಗೊಂಡು, ಅಧರ್ಮವು ಮೆರೆಯತೊಡಗುತ್ತದೆಯೋ (ಪ್ರತಿ ಯುಗದಲ್ಲೂ ಪುನಾರಾವರ್ತಿತವಾಗುವ ವಿದ್ಯಮಾನವಿದು), ಆಗ ಶಿಷ್ಟ ರಕ್ಷಣೆ ಮತ್ತು ದುಷ್ಟರ ನಿಗ್ರಹಕ್ಕಾಗಿ, ಹಾಗೂ ಧರ್ಮವನ್ನು ಪುನರ್ಸ್ಥಾಪಿಸಲು ನಾನು ಸ್ವಯಂ ವ್ಯಕ್ತವಾಗುತ್ತೇನೆ.

ಪ್ರತಿ ಯುಗದಲ್ಲಿಯೂ ಕೂಡ ಕೃಷ್ಣನ ಅವತಾರ ಸಂಭವಿಸುತ್ತದೆ, ಅದು ನಮ್ಮ ಯುಗದಲ್ಲಿಯೂ ಆಗಿರಬಹುದು, ಅಥವಾ ಮುಂದಿನ ದಿನಗಳಲ್ಲಿ ಘಟಿಸಬಹುದು ಇತ್ಯಾದಿ, ಇದು ನಮಗೆಲ್ಲಾ ಕಲಿಸುತ್ತಾ ಬಂದಿರುವ ಹಾಗೂ ಈ ಶ್ಲೋಕವನ್ನು ವ್ಯಾಖ್ಯಾನಿಸುವ ಒಂದು ಪ್ರಸಿದ್ಧ ಮತ್ತು ಪ್ರಮುಖ ರೀತಿ.

ಆದರೆ, ನೀವು ಇಪ್ಪತ್ತೊಂದನೆಯ ಶತಮಾನದ ದೃಷ್ಟಿಕೋನದಿಂದ ಈ ಶ್ಲೋಕವನ್ನು ಮತ್ತೊಮ್ಮೆ ಓದಿದರೆ ಇಲ್ಲೊಂದು ಎದ್ದು ಕಾಣುವ ಹಾಗೂ ಬೆಕ್ಕಸ ಬೆರಗಾಗುವಂತೆ ಮಾಡುವ ವಿಚಾರವಿದೆ. ಈ ವಿಚಾರವನ್ನು ನಾನು ನನ್ನಪದಗಳಲ್ಲಿ ನಿರೂಪಿಸುವವನಿದ್ದೇನೆ; (ಇದು ಶ್ಲೋಕಗಳ ಕೇವಲ ಒಂದು ಹೊಸ ವ್ಯಾಖ್ಯಾನವಷ್ಟೆ ಅಲ್ಲ): ನೈತಿಕವಾಗಿರಲು *ಕಲಿಯುವ* ಒಂದು ಪ್ರಕ್ರಿಯೆ ಇದೆ, ಹಾಗೂ ಈ ಪ್ರಕ್ರಿಯೆಯು ಸಮಾಜದಲ್ಲಿರುವ ಕಲಿಕಾ ಪ್ರಕ್ರಿಯೆ ಎಂಬುದು ಒಂದು ಸಿದ್ಧಾಂತ. ಇಂತಹ ಒಂದು ಕಲಿಕಾ ಪ್ರಕ್ರಿಯೆಯು ಕ್ರಮೇಣ ಅವನತಿಯ ದಾರಿ ಹಿಡಿಯಬಹುದು ಅಥವಾ ಹಿಡಿಯುತ್ತದೆ, ಮತ್ತು ಇದೊಂದು ಅನಿವಾರ್ಯ ಸಂಗತಿ ಎಂಬುದು ಎರಡನೇಯ ಸಿದ್ಧಾಂತ. ತಾರ್ಕಿಕವಾಗಿ, ಈ ಎರಡು ಸಿದ್ದಾಂತಗಳಿಂದ ಹೊರಡುವ ವಿಚಾರವಿದು: ಯಾವಾಗೆಲ್ಲ ಸಾಮಾಜಿಕ ಕಲಿಕಾ ಪ್ರಕ್ರಿಯೆಯು ಅವನತಿ ಎಡೆಗೆ ಸಾಗುತ್ತದೆಯೋ, ಆಗ ಅವನತಿ ಒಂದು ಸಂದಿಗ್ಧ ಘಟ್ಟದಲ್ಲಿ, ಸಮಾಜದ ಮಟ್ಟದಲ್ಲಿ, ಕೆಲವು ಹೊಸ ಪ್ರಕ್ರಿಯೆಗಳು ಹುಟ್ಟಿಕೊಂಡು, ಈ ಕಲಿಕಾ ಪ್ರಕ್ರಿಯೆಯನ್ನು (ನೈತಿಕವಾಗಿರಲು, *ಕಲಿಯುವ* ಪ್ರಕ್ರಿಯೆ) ಪುನರುಜ್ಜೀವನಗೊಳಿಸುತ್ತವೆ.

ಭಾರತದಲ್ಲಿರುವ ನೈತಿಕ ಕಲಿಕೆಯ ಸ್ವರೂಪದ ಬಗ್ಗೆ ಇದೊಂದು ಅದ್ಭುತ ಹೇಳಿಕೆ (ಸದ್ಯಕ್ಕೆ ಇದರ ವ್ಯಾಪ್ತಿಯ ಮಿತಿಯನ್ನು ಭಾರತದ ಮಟ್ಟಿಗಷ್ಟೆ ಇಟ್ಟುಕೊಳ್ಳೋಣ). ಸಹಜವಾಗಿಯೆ ಅವರು (ಗೀತೆಯನ್ನು ಬರೆದ ಲೇಖಕನು/ಲೇಖಕರು) ತಮಗೆ ಪರಿಚಿತವಿದ್ದಂತಹ ಕೃಷ್ಣ ಮತ್ತು ಅವನ ‘ಅವತಾರಗಳ’ ಬಗೆಗಿನ ರೂಪಕಗಳನ್ನು ಬಳಸಿಕೊಂಡು ಈ ಮೇಲಿನ ಒಳನೋಟವನ್ನು ನಿರೂಪಿಸಿದ್ದಾರೆ. ಈ ರೂಪಕಗಳು ನಮ್ಮ ಕೈಕಟ್ಟಿ ಹಾಕಬೇಕಿಲ್ಲ. ಆದರೆ ಸಮಾಜದ ಸ್ವರೂಪದ ಬಗ್ಗೆ ಅವರು ನೀಡುವ ಈ ಒಳನೋಟಗಳು ಮಾತ್ರ ನಮ್ಮನ್ನು ಒಮ್ಮೆ ಅಲ್ಲಾಡಿಸಿ ಎಚ್ಚರಗೊಳಿಸಬೇಕು. ಅವರು ಹೇಗೆ ಮತ್ತು ಎಲ್ಲಿ ಈ ಒಳನೋಟಗಳನ್ನು ಕಂಡುಕೊಂಡರು? ಈ ವಿಚಾರಗಳನ್ನು ಚರ್ಚಿಸಿದ್ದಾದರೂ ಹೇಗೆ? ಯಾವ ರೀತಿಯ ಸಂಶೋಧನೆಯಿಂದ ಅವರು ಅದ್ಭುತವಾದ ಈ ಒಳನೋಟವನ್ನು ಪಡಕೊಂಡರು? ನಾವು ಹೆಸರಿಸಬಹುದಾದ (ನೈತಿಕ ಕಲಿಕೆಯ ಬಗೆಗಿರುವ ) ಮನಶ್ಯಾಸ್ತ್ರ ಅಥವಾ ಸಮಾಜಶಾಸ್ತ್ರದ ಯಾವ್ಯದೇ ಸಿದ್ದಾಂತಗಳಿಗಿಂತ ಈ ಒಳನೋಟವು, ಒಂದು ವೇಳೆ ಅದು ತಪ್ಪಾಗಿದ್ದರೂ ಸಹ, * ಹಲವು ಜ್ಯೋತಿರ್ವಷಗಳಷ್ಟು* ಮುಂದಿದೆ.

ಈ ಎಲ್ಲಾ ಕಾರಣಗಳಿಂದಾಗಿ, ಕೇವಲ ಈ ಎರಡು ಶ್ಲೋಕಗಳು ನೈತಿಕ ಕಲಿಕೆಯ ಸ್ವರೂಪದ ಕುರಿತು ಒಂದು ಉತ್ಕೃಷ್ಟ ವೈಜ್ಞಾನಿಕ ಉಹಾಸಿದ್ದಾಂತವನ್ನು (hypothesis) ನಿರೂಪಿಸುತ್ತವೆ. ಯಾವ ವಿಚಾರವನ್ನು (ಉದಾಹರಣೆಗೆ, ನಾನು ಮೇಲೆ ಗುರುತಿಸಿದ ಎರಡು ಸಿದ್ಧಾಂತಗಳು) ಈ ಶ್ಲೋಕಗಳು ಪ್ರಮಾಣಿತ ಸಿದ್ಧಾಂತವೆಂದು ಪರಿಗಣಿಸುತ್ತವೆಯೋ, ಆ ವಿಚಾರದ ಅಸ್ತಿತ್ವದ ಬಗ್ಗೆ ಪಾಶ್ಚಿಮಾತಯ ಸಂಸ್ಕೃತಿಗೆ ಸಣ್ಣ ಕಲ್ಪನೆ ಕೂಡಾ ಇಲ್ಲವಲ್ಲ. ಹೇಗೆ ಮತ್ತು ಏತಕ್ಕಾಗಿ ಅಷ್ಟೊಂದು ಸಾವಿರ ವರ್ಷಗಳ ಕೆಳಗೆ ಭಾರತೀಯರು ಈ ವಿಚಾರಗಳ ಬಗ್ಗೆ ಯೋಚಿಸಿದರು? ನಿಜವಾಗಿಯು ರುದ್ರಾ, ನಾನು ಮೂಕವಿಸ್ಮಿತನಾಗಿದ್ದೇನೆ

ಯದಾ ಯದಾಹಿ ಧರ್ಮಸ್ಯ

ಗ್ಲಾನಿರ್ಭವತಿ ಭಾರತ

ಅಭ್ಯುತ್ಥಾನಮಧರ್ಮಸ್ಯ

ತದಾತ್ಮಾನಂ ಸೃಜಾಮ್ಯಹಮ್ (ಭಗವದ್ಗೀತಾ 4: 7)

ಪರಿತ್ರಾಣಾಯ ಸಾಧೂನಾಂ

ವಿನಾಶಯ ಚ ದುಷ್ಕೃತಾಮ್

ಧರ್ಮಸಂಸ್ಥಾಪನಾರ್ಥಾಯ

ಸಂಭವಾಮಿ ಯುಗೇ ಯುಗೇ (ಭಗವದ್ಗೀತಾ 4: 8)

ಹೆಚ್ಚಿನ ಓದಿಗಾಗಿ

20
ನವೆಂ

ಕೋಮುವಾದವೂ ಮೂಲಭೂತವಾದವೂ

ಅಜಕ್ಕಳ ಗಿರೀಶ ಭಟ್

ದಕ್ಷಿಣ ಕನ್ನಡದಲ್ಲಿ ಈಚಿನ ವರ್ಷಗಳಲ್ಲಿ ಹಿಂದೂ- ಮುಸ್ಲಿಂ ಸಂಘರ್ಷಗಳು ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಈ ಬಗ್ಗೆ ಸಾಕಷ್ಟು ಲೇಖನಗಳು ಕಾಲಕಾಲಕ್ಕೆ ವಿವಿಧ ಪತ್ರಿಕೆಗಳಲ್ಲಿ ಬಂದಿವೆ. ಪುಸ್ತಕಗಳೂ ಬಂದಿವೆ. ಆದರೆ , ಹೆಚ್ಚಿನ ಲೇಖನಗಳು ಸಮಸ್ಯೆಯ ಆಳಕ್ಕಿಳಿದು ಚರ್ಚಿಸುವುದಿಲ್ಲ. ಮೇಲು ಮೇಲಿಂದ ನೊಡಿ ಎಲ್ಲ ಕೋಮುವಾದಿಗಳನ್ನು ಖಂಡಿಸಬೇಕು ಎಂದು ಹೇಳಿದಾಕ್ಷಣ ಸಮಸ್ಯೆ ಪರಿಹಾರವಾಗದು.

ವಾಸ್ತವವಾಗಿ ಹಿಂದೂ ಮತ್ತು ಮುಸ್ಲಿಂ ಸಂಸ್ಕೃತಿಗಳು ಬದುಕನ್ನು ಗ್ರಹಿಸುವ ಬಗೆಯಲ್ಲಿಯೇ ವ್ಯತ್ಯಾಸಗಳಿವೆ.

ಹಿಂದೂ ಎಂಬೊಂದು ಏಕರೂಪಿ ಘಟಕ ಇಲ್ಲ ನಿಜ. ಆದರೆ ಸೃಷ್ಟಿ ಮತ್ತು ಸೃಷ್ಟಿಕರ್ತ ಇವೆಲ್ಲ ಪೂಜನೀಯ ಎಂದು ಗ್ರಹಿಸುವ ,ಅಂಥ ನಂಬಿಕೆಗಳನ್ನು ಹೊಂದಿರುವುದೇ ಈ “ಹಿಂದು” ಎಂದು ನಾವು ಅನುಕೂಲಕ್ಕಾಗಿ ಕರೆಯುವ ಗುಂಪುಗಳ ನಡುವೆ ಇರುವ ಸಾಮ್ಯತೆ ಎನ್ನಬಹುದು. ಇಂಥ ನಂಬಿಕೆಗಳು ಬಹುಸಂಸ್ಕೃತಿಗಳ ಅಸ್ತಿತ್ವಕ್ಕೆ ಪೂರಕ ಎಂದು ಬೇರೆ ಹೇಳಬೇಕಾಗಿಲ್ಲ. ಹಿಂದೂ ಧರ್ಮಗಳ ಒಳಗೇ ಭೇದಭಾವ ಇತ್ಯಾದಿ ಸಮಸ್ಯೆಗಳಿವೆ.ಅದು ಸಾಕಷ್ಟು ಚರ್ಚಿತವಾದ ವಿಷಯವೇ ಆಗಿದೆ.

ವಾಸ್ತವವಾಗಿ ಹಿಂದೂ-ಮುಸ್ಲಿಂ ಸಂಘರ್ಷವೆಂದರೆ ಅದು ಆಧುನಿಕತೆಗೆ ತೆರೆದುಕೊಂಡ ಮತ್ತು ಹಾಗೆ ತೆರೆದುಕೊಳ್ಳಲು ಹಿಂಜರಿಯುವ ಸಂಸ್ಕೃತಿಗಳ ನಡುವಿನ ಸಂಘರ್ಷವೂ ಹೌದು.ಅವರವರು ಅವರವರಷ್ಟಕ್ಕೇ ಇರಲಿ ಏನು ಸಮಸ್ಯೆ ಎನ್ನಲು ಸಾಧ್ಯವಿಲ್ಲ ಯಾಕೆಂದರೆ ಇವೆರಡೂ ಸಂಸ್ಕೃತಿಗಳೂ ಒಟ್ಟಿಗೇ ಬದುಕಬೇಕಾಗಿದೆ ಇಲ್ಲಿ.

ದಕ್ಷಿಣ ಕನ್ನಡದಲ್ಲಿ “ಹಿಂದೂ ಹುಡುಗಿ ” ಮತ್ತು “ಮುಸ್ಲಿಂ ಹುಡುಗ” ಜತೆಯಾಗಿ ಬಸ್ಸಲ್ಲಿ ಪ್ರಯಾಣಿಸಿದರೆ ಅಥವಾ ಪರಸ್ಪರ ಮಾತನಾಡಿದರೆ ಹಲ್ಲೆಗೆ ಒಳಗಾಗುವ ಪ್ರಸಂಗಗಳು ವರದಿಯಾಗುತ್ತವೆ.ಇಂಥ ಹಲ್ಲೆಗಳು ಖಂಡನೀಯವೇ ಹೌದು. ಇದರ ಹಿಂದೆ ಪುರುಷಾಹಂಕಾರದ ಪ್ರವೃತ್ತಿ ಇದೆ ಎನ್ನುವುದು ಎಲ್ಲರಿಗೂ ಅರ್ಥವಾಗುವ ವಿಚಾರ. ಆದರೆ ಇಂಥ ಪ್ರಸಂಗಗಳ ಬಗ್ಗೆ ಚಿಂತಿಸುವಾಗ ಇನ್ನಷ್ಟು ಸೂಕ್ಷ್ಮವಾಗಿ ನೋಡಬೇಕಾದ ಅಗತ್ಯವಿದೆ. ಉದಾಹರಣೆಗೆ ಮಂಗಳೂರಿನ ಕುಪ್ರಸಿದ್ಧ ಪಬ್ ದಾಳಿಯ ನಂತರ ಮಂಗಳೂರು ಹೇಗೆ ಕೋಮುವಾದಿಗಳ ತಾಣವಾಗುತ್ತಿದೆ ಎನ್ನುವ ಲೇಖನ ದ ವೀಕ್ ಪತ್ರಿಕೆಯಲ್ಲಿ ಪ್ರಕಟವಾಯಿತು. ( ಎನ್, ಭಾನುತೇಜ್, ವೀಕ್, ಫೆಬ್ರವರಿ -೨೦೦೯). ಎಲ್ಲ ಸರಿ; ಆದರೆ ಅದರಲ್ಲಿದ್ದ ಕೆಲವು ಸಾಲುಗಳು ಹೀಗಿದ್ದವು.”ಮುಸ್ಲಿಂ ಹುಡುಗರು ಮತ್ತು ಹಿಂದೂ ಹುಡುಗಿಯರ ನಡುವಿನ ಸ್ನೇಹಕ್ಕೆ ಗರಿಷ್ಟ ಶಿಕ್ಷೆ. ಹಿಂದು ಹುಡುಗ-ಮುಸ್ಲಿಂ ಹುಡುಗಿ ಸ್ನೇಹದ ವಿರುದ್ಧ ಯಾವುದೇ ಅಟ್ಯಾಕ್ ಆದ ಬಗ್ಗೆ ವರದಿಗಳಿಲ್ಲ.”(ಪು.೧೬). ಈ ಹೇಳಿಕೆ ನಿಜವಾಗಿ ಮಿಸ್ ಲೀಡ್ ಮಾಡುವಂಥದ್ದು. ದ.ಕ.ದಲ್ಲಿ ಹಿಂದು ಹುಡುಗ ಮತ್ತು ಮುಸ್ಲಿಂ ಹುಡುಗಿ ಝತೆಯಾಗಿ ಓಡಾಡುವ ಸನ್ನಿವೇಶಗಳು ಇಲ್ಲವೆಂಬಷ್ಟು ಕಡಮೆ ಎನ್ನುವ ಸತ್ಯವನ್ನು ಈ ಹೇಳಿಕೆ ಮರೆಮಾಚುತ್ತದೆ. ಮತ್ತಷ್ಟು ಓದು »