ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

6
ಫೆಬ್ರ

ನಾನೇ ಭಾರತ!

ಆಂಗ್ಲ ಮೂಲ: ರಾಜೀವ್ ಮಲ್ಹೋತ್ರಾ
ಅನುವಾದ : ಉದಯನ ಹೆಗಡೆ

stock-vector-greeting-card-with-hindi-text-mera-bharat-my-india-and-ashoka-wheel-on-famous-monuments-and-293935577ಭಾರತವು ಸೂಪರ್ ಪವರ್ ಆಗುವುದೆಂಬ ಕಲರವ ಎಲ್ಲೆಡೆ ಕೇಳಿಬರುತ್ತಿದೆ. ಆದರೆ ಸೂಪರ್ ಪವರ್‌ಗಳು ರಾಷ್ಟ್ರೀಯತೆಯ ಬಗೆಗೆ ಭ್ರಮೆಯನ್ನು ಹೊಂದಿವೆಯೇ? ಅಥವಾ ತಮ್ಮ ಹಿಂದುಳಿದ ನಾಗರೀಕತೆಯನ್ನು ಬದಲಾಯಿಸಲು ಬೇರೆಯವರಿಗೆ ಆಹ್ವಾನ ನೀಡುವುದು ಎಂದರ್ಥವೇ ? ಸೂಪರ್ ಪವರ್ ಆದ ಯಾವುದಾದರೂ ದೇಶವು ಯಾವತ್ತಾದರೂ ತನ್ನ ಪ್ರಜೆಗಳನ್ನು ವಿದೇಶೀ ಒಪ್ಪಂದದ ಏಜೆಂಟರಾಗಿ ಬಳಸಿಕೊಳ್ಳಲು ಅನವು ಮಾಡಿಕೊಡುತ್ತದೆಯೇ ? ಇಲ್ಲ. ಆದರೆ, ಭಾರತವು ಉದಾರವಾಗಿ ವಿದೇಶೀ ಒಪ್ಪಂದಗಳನ್ನು ಒಪ್ಪಿಕೊಳ್ಳುತ್ತಿದೆ. ಇದರಿಂದ ಭಾರತವವನ್ನು ಅವರು ವಿಭಕ್ತವಾಗೇ ಕಾಣುತ್ತಾರೆ. ಆದರೆ ಸೂಪರ್ ಪವರ್‌ಗಳು ಅಂದರೆ ತಪ್ಪು ತಿಳುವಳಿಕೆ ಎಂದರ್ಥವೇ ? ಮತ್ತಷ್ಟು ಓದು »

31
ಜನ

ಇಂದು ಕಂಬಳ, ನಾಳೆ ಜೋಡೆತ್ತಿನ ಗಾಡಿ, ಸಂಕ್ರಾಂತಿ, ನಾಡಿದ್ದು ಇನ್ನೇನೋ…?

– ಶಿವಕುಮಾರ ಪಿ.ವಿ.
ಸಂಶೋಧನಾ ವಿದ್ಯಾರ್ಥಿ
ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ.

860897a4867e00f161e4236fd7fe5aeeಪ್ರಾಣಿಗಳಿಗೆ ಹಿಂಸೆ ನೀಡಿ ಮನರಂಜನೆ ಪಡೆಯಲಾಗುತ್ತಿದೆ ಎಂಬುದು ಕಂಬಳ, ಜಲ್ಲಿಕಟ್ಟುವಿನಂತ ಕ್ರೀಡೆಗಳನ್ನು ನಿಲ್ಲಿಸಲು ಪ್ರಾಣಿದಯಾ ಸಂಘಗಳು ನೀಡುತ್ತಿರುವ ಕಾರಣ. ನ್ಯಾಯಾಲಯವೂ ಕೂಡ ‘ಪ್ರಾಣಿ ಹಿಂಸೆ’ಯ ಮಾನದಂಡವನ್ನಾದರಿಸಿ ಈ ಕ್ರೀಡೆಗಳಿಗೆ ನಿಷೇಧಾಜ್ಞೆಯನ್ನೂ ಹೇರುತ್ತಿದೆ. ಇದನ್ನಿಟ್ಟುಕೊಂಡೇ ನೋಡಿದರೆ, ಕೋಳಿ-ಕುರಿ, ದನಗಳನ್ನು ಕಡಿದು ತಿನ್ನುವುದು ಅವುಗಳ ಮಾರಣಹೋಮವಾಗಿ ಕಾಣಿಸಬೇಕಿತ್ತು. ಆದರೆ ಹಾಗಾಗುತ್ತಿಲ್ಲ. ಆಶ್ಚರ್ಯವೆಂದರೆ, ಪ್ರಾಣಿ ಹಿಂಸೆ, ಪ್ರಾಣಿ ಬಲಿಯನ್ನು ನಿಷೇಧಿಸಬೇಕೆನ್ನುವ ಸಕಲ ಪ್ರಾಣಿಗಳ ಜೀವಪರ ದಯಾಳುಗಳೆ ಬೀಫ್, ಮತ್ತಿತರ ಮಾಂಸ ಖಾದ್ಯಗಳನ್ನು, ಅವುಗಳ ರಕ್ತದ ಸೂಪನ್ನು ಚಪ್ಪರಿಸುತ್ತಿರುತ್ತಾರೆ. ಅದಕ್ಕಾಗಿ ಹೋರಾಟಗಳನ್ನೂ ಮಾಡುತ್ತಾರೆ. ಪ್ರಾಣಿಗಳನ್ನು ಬೇಕಾದರೆ ಕಡಿದು ತಿನ್ನಿ, ಆದರೆ ಅವುಗಳಿಗೆ ಹಿಂಸೆ ಕೊಡಬೇಡಿ ಎಂಬುದು ಇವರ ಆಕ್ಷೇಪಣೆ! ಹಾಗಾದರೆ, ಪ್ರಾಣಿ ಹಿಂಸೆಯ ಗುರಾಣಿಯ ಹಿಂದಿರುವ ತರ್ಕವೇನು, ಇವರ ನಿಜವಾದ ಕಾಳಜಿ ಪ್ರಾಣಿ ಹಿಂಸೆ ಮಾಡಬಾರದೆನ್ನುವುದೇ? ಮತ್ತಷ್ಟು ಓದು »

30
ಜನ

ಜಲ್ಲಿಕಟ್ಟು ಹೆಸರಿನಲ್ಲಿ ಹೊಸದೊಂದು ಸಂಸ್ಕೃತಿ ಸಾಧ್ಯವಿಲ್ಲ ಅಂತೀರಾ?

– ನರೇಂದ್ರ ಎಸ್ ಗಂಗೊಳ್ಳಿ

08ma_jallikattu_dg_1748590fನಾಡು ನುಡಿ ಸಂಸ್ಕೃತಿ ಸಂಪ್ರದಾಯದ ಅಭಿಮಾನದ ವಿಚಾರಕ್ಕೆ ಬಂದಾಗ ತಮಿಳುನಾಡಿನ ಜನರು ಯಾವತ್ತಿಗೂ ಒಂದು ಹೆಜ್ಜೆ ಮುಂದೆ ನಿಲ್ಲುತ್ತಾರೆ. ಇದು ಹೊಗಳಿಕೆ ಅಂತೇನೂ ಅಲ್ಲ. ನಮ್ಮ ಜನರ ಅಭಿಮಾನದ ನೆಲೆಯಲ್ಲಿ ನೋಡಿದಾಗ ಹಾಗನ್ನಿಸುವುದು ಸಹಜ. ಮೊನ್ನೆ ಮೊನ್ನೆ ಪ್ರಸ್ತುತ ಜಲ್ಲಿಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ನಡೆದ ಹೋರಾಟದ ಪರಿ ಇದೆಯಲ್ಲಾ ಅದು ನಿಜಕ್ಕೂ ಪ್ರತಿಯೊಬ್ಬರಿಗೂ ಪ್ರೇರಣೆಯನ್ನು ನೀಡುವಂತಾದ್ದು. ಅವರಿಗೊಂದು ಮೆಚ್ಚುಗೆಯಿರಲಿ. ಆದರೆ ಈ ಜಲ್ಲಿಕಟ್ಟು ವಿಚಾರವನ್ನು ತೀರಾ ಭ್ರಮೆಗಳಿಗೆ ಕಟ್ಟುಬೀಳದೆ ವಾಸ್ತವದ ನೆಲೆಗಟ್ಟಿನಲ್ಲಿ ವಿಶ್ಲೇಷಿಸಿ ತೀರ್ಮಾನಕ್ಕೆ ಬರುವ ಅವಶ್ಯಕತೆ ಇಲ್ಲ ಎನ್ನುತ್ತೀರಾ? ಮತ್ತಷ್ಟು ಓದು »

29
ಜನ

ಪ್ರಾಣಿಗಳ ಕ್ರೀಡೆ ಮತ್ತು ಐಡೆಂಟಿಟಿ

– ವಿನಾಯಕ ಹಂಪಿಹೊಳಿ

imagesಪೆಟಾ ಹಾಗೂ ಇನ್ನಿತರ ಪ್ರಾಣಿದಯಾ ಸಂಘದವರು ಪ್ರಾಣಿಗಳನ್ನು ಆಹಾರವಾಗಿ ಹೊರತುಪಡಿಸಿ ಉಳಿದೆಲ್ಲ ಕಾರ್ಯಸಾಧನೆಗಾಗಿ ಬಳಸಿಕೊಳ್ಳುವ ಪ್ರಕ್ರಿಯೆಯನ್ನು ವಿರೋಧಿಸುತ್ತಾರೆ. ಅವುಗಳನ್ನು ಮೋಜಿಗಾಗಿ ಪಂದ್ಯಗಳಲ್ಲಿ ಬಳಸುವುದನ್ನು, ಮೆರವಣಿಗೆಯಲ್ಲಿ ಉಪಯೋಗಿಸುವುದನ್ನು, ಅವುಗಳ ಚರ್ಮದಿಂದ ಉಪಯೋಗಿ ವಸ್ತುಗಳನ್ನು ನಿರ್ಮಿಸುವುದನ್ನು, ಸರ್ಕಸ್ಸಿನಲ್ಲಿ ಪ್ರಾಣಿಗಳನ್ನು ಹೊಡೆದು ಪಳಗಿಸುವುದನ್ನು ವಿರೋಧಿಸುತ್ತಾರೆ. ಮೋಜಿಗಾಗಿ ಪ್ರಾಣಿಗಳನ್ನು ಹೊಡೆದೋಡಿಸುವ ಆಟಗಳನ್ನು, ಕೊಲ್ಲುವ ಆಚರಣೆಗಳನ್ನು, ನಿಷೇಧಿಸಬೇಕೆಂದು ಈ ಪ್ರಾಣಿದಯಾ ಸಂಘಗಳು ಪ್ರಯತ್ನಿಸುತ್ತವೆ. ಪ್ರಾಣಿದಯಾ ಸಂಘಗಳ ಈ ಕಾಳಜಿಯು ಜನಸಾಮಾನ್ಯ ಭಾರತೀಯರಿಗೆ ಮೇಲ್ನೋಟಕ್ಕೆ ಅರ್ಥವಾಗಿರುವಂತೆಯೇ ಭಾಸವಾಗುತ್ತದೆ. ಮತ್ತಷ್ಟು ಓದು »

25
ಜನ

ಕಂಬಳ : ಸಂಸ್ಕೃತಿ ಉಳಿಸಲು ಬೇಕು ನಿಮ್ಮ ಬೆಂಬಲ

– ಡಾ. ಸಂತೋಷ್ ಕುಮಾರ್ ಪಿ.ಕೆ

860897a4867e00f161e4236fd7fe5aeeಕಂಬಳ : ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯುವ ಈ ಜಾನಪದ ಶೈಲಿಯ ಕ್ರೀಡೆಯು ಕೇವಲ ಮನೊರಂಜನೆ ಸರಕಾಗಿ ಮಾತ್ರ ಉಳಿದಿರದೆ, ಸಂಸ್ಕೃತಿಯ ಭಾಗವಾಗಿಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡುಬಂದಿದೆ. ಜನಮಾನಸದಲ್ಲಿ ಹಚ್ಚಹಸುರಾಗಿ ಉಳಿಯುವ ಹಲವಾರು ಸಂಗತಿಗಳಲ್ಲಿ ಸಂಸ್ಕೃತಿಯ ಭಾಗವಾಗಿರುವ ಇಂತಹ ಕೆಲವಾರು ಸಂಗತಿಗಳು ಎನ್ನಬಹುದು. ಕರ್ನಾಟಕದ ಹಲವಾರು ಭಾಗಗಳಲ್ಲಿ ಇಂತಹ ವಿಶೇಷ ಸಾಂಸ್ಕೃತಿಕ ಆರಣೆಗಳು ಇನ್ನೂ ಅಸ್ತಿತ್ವದಲ್ಲಿವೆ. ಅವುಗಳ ಮೂಲಕವೆ ಆಯಾ ಭಾಗದ ಸಂಸ್ಕೃತಿ ಮೆರುಗು ಪಡೆಯುವ ಜೊತೆಗೆ, ತನ್ನನ್ನು ತಾನು ಬಿಂಬಿಸಿಕೊಳ್ಳುತ್ತದೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಅರ್ಥೈಸಿಕೊಂಡರೆ ಭಾರತೀಯ ಸಂಪ್ರದಾಯ ಮತ್ತು ಅದರ ಸತ್ವದ ನೈಜ ಅರಿವು ನಮಗೆ ದೊರಕುತ್ತದೆ. ಆದರೆ, ಆಧುನಿಕರಾಗುವ ಭರದಲ್ಲಿ ಅವುಗಳನ್ನು ಬದಿಗೆ ತಳ್ಳುತ್ತಿರುವ ಸೋ ಕಾಲ್ಡ್ ಆಧುನೀಕರು ಒಂದೆಡೆಯಾದರೆ, ಅದನ್ನು ಶತಾಯಗತಾಯ ಹತ್ತಿಕ್ಕುವ ನಶೆ ಸರ್ಕಾರಗಳಿಗೆ ಮತ್ತು ದಯಾ ಪರಪರ ಸಂಘಗಳಿಗೆ ಏರಿರುವುದು ಮತ್ತೊಂದು ಕಡೆ. ಸಂಪ್ರದಾಯ ಸಂಸ್ಕೃತಿಗಳಿಗೆ ಬಲವಾದ ಪೆಟ್ಟು ನೀಡುವುದು ಬ್ರಿಟೀಷರ ಸರ್ಕಾರದಿಂದ ಹಿಡಿದು ಆಧುನಿಕ ಸರ್ಕಾರ, ನ್ಯಾಯಾಂಗಗಳವರೆಗೂ ಯಾವುದೇ ಅಡೆತಡೆಯಿಲ್ಲದೆ ಬೆಳೆದುಕೊಂಡುಬಂದಿದೆ. ಇದರ ಒಂದು ಝಲಕ್ ಇತ್ತೀಚೆಗೆ ಕಂಬಳದಿಂದ ಪ್ರಾರಂಭವಾಗಿದೆ. ಮತ್ತಷ್ಟು ಓದು »

30
ಡಿಸೆ

ಆನಂದ ಕರುಣಿಸಿದ ತಾಂಡವ

– ರಾಜೇಶ್ ರಾವ್

1c7323037307b58c095d012383afce0eಭಾರತವು ಬ್ರಿಟಿಷರ ದಾಸ್ಯದಲ್ಲಿದ್ದ ಕಾಲ. ಬರಿಯ ರಾಜಕೀಯ ದಾಸ್ಯವಲ್ಲ. ನಮ್ಮ ಇತಿಹಾಸವನ್ನು ತಿರುಚಿ ನಮ್ಮ ಮೂಲವನ್ನೇ ಪ್ರಶ್ನಿಸಿದ್ದ ಕಾಲ. ಅಂತಹ ತಿರುಚಿದ ವಿಚಾರವನ್ನೇ ಶಿಕ್ಷಣದಲ್ಲಿ ಅಳವಡಿಸಿ ಉರು ಹೊಡೆಸಿ ಪೀಳಿಗೆಗಳನ್ನೇ ದಾಸ್ಯಕ್ಕೊಳಪಡಿಸಲು ತಯಾರಾಗಿರಿಸಿದ್ದ ಕಾಲ. ಆರ್ಯ ಆಕ್ರಮಣವಾದವನ್ನೇ ತಲೆಯಲ್ಲಿ ತುಂಬಿಕೊಂಡು ನಮ್ಮ ಅಸ್ಮಿತೆಗೆ, ಉತ್ಕರ್ಷಕ್ಕೆ, ಜಗದ್ಗುರು ಪಟ್ಟಕ್ಕೆ ಕಾರಣವಾದ ನಮ್ಮ ಪ್ರಾಚೀನ ಕಲೆ, ಸಂಸ್ಕೃತಿಗಳನ್ನು ತುಚ್ಛವಾಗಿ ಕಾಣುವ ಪೀಳಿಗೆಯೇ ಸೃಷ್ಟಿಯಾಗಿದ್ದ ಕಾಲ. ಆದರೂ ಒಂದು ಕಡೆ ರಾಜಕೀಯ ದಾಸ್ಯವನ್ನು ಹೊಡೆದೋಡಿಸಲು ಹೋರಾಟ ನಡೆದಿತ್ತು. ಅದರ ನಡುವಲ್ಲೇ ನಮ್ಮ ಇತಿಹಾಸವನ್ನು ಶುದ್ಧೀಕರಿಸುವ ಪ್ರಕ್ರಿಯೆಯೂ ನಡೆದಿತ್ತು. ಭಾರತೀಯ ಕಲೆಯನ್ನು ಪೌರ್ವಾತ್ಯ, ಪಾಶ್ಚಿಮಾತ್ಯರಿಬ್ಬರೂ ತುಚ್ಛವಾಗಿ ನೋಡುತ್ತಿದ್ದ ಸಂದರ್ಭದಲ್ಲಿ ಅವುಗಳ ಮಹತ್ವವನ್ನು ಪಾಶ್ಚಿಮಾತ್ಯರದ್ದೇ ಪರಿಭಾಷೆಯಲ್ಲಿ ಕಟ್ಟಿಕೊಟ್ಟ ಮಹಾನುಭಾವ ಪಶ್ಚಿಮ ಮೂಲದ-ಪೂರ್ವದ ಮೇಲಿನ ಆದರ ಭಾವದ ಆನಂದ ಕುಮಾರ ಸ್ವಾಮಿ. ಮತ್ತಷ್ಟು ಓದು »

24
ಡಿಸೆ

ದೇವನೂರು ಮಹಾದೇವ ಅವರಿಗೊಂದು ಪ್ರೀತಿಪೂರ್ವಕ ಪತ್ರ

– ಪ್ರವೀಣ್ ಕುಮಾರ್, ಮಾವಿನಕಾಡು

sulsuddiಕನ್ನಡ ನಾಡಿನ ಸಾಕ್ಷಿಪ್ರಜ್ಞೆ ಎಂದೇ ಕರೆಯಲ್ಪಡುವ ಪ್ರೀತಿಯ ದೇವನೂರು ಮಹಾದೇವ ಅವರಿಗೆ ನಮಸ್ಕಾರಗಳು.

ಕನ್ನಡದ ಪ್ರಖ್ಯಾತ ಸಾಹಿತಿಗಳಲ್ಲಿ ಒಬ್ಬರಾದ ತಾವು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕರಲ್ಲಿ ಒಬ್ಬರೂ ಹೌದು. ಆದರೆ ನಿಮ್ಮಲ್ಲಿ ಎಳ್ಳಷ್ಟೂ ಜಂಭವಿಲ್ಲ, ಅಹಂಕಾರವಿಲ್ಲ ಮತ್ತು ದೊಡ್ಡ ದೊಡ್ಡ ಸಾಹಿತಿಗಳು ತೋರುವ ಶೋಕಿಯಿಲ್ಲ. ಸರಳತೆಯೇ ನಿಮ್ಮ ಗುರುತು ಪತ್ರ ಎಂದರೂ ತಪ್ಪಾಗದು. ಮತ್ತಷ್ಟು ಓದು »

22
ಡಿಸೆ

ದೇವರು – ಪೂಜೆ

– ಗೀತಾ ಹೆಗಡೆ

perform-lakshmi-pooja-on-diwali-step-14ಸಾಮಾನ್ಯವಾಗಿ ಹಳೆಯ ಸಂಪ್ರದಾಯಗಳೆಲ್ಲ ಸ್ವಚ್ಛತೆ ಆಧಾರದ ಮೇಲೆ ನಿಂತಿದೆ. ಹಾಗೆ ಸುಮ್ಮನೆ ಹೇಳಿದರೆ ಯಾರೂ ಅನುಸರಿಸುವುದಿಲ್ಲ. ಅದಕ್ಕೆ ದೇವರು ಹಾಗೆ ಹೀಗೆ ಎಂದು ಕಥೆ ಕಟ್ಟಿದ್ದಾರೆ ಅನಿಸುತ್ತದೆ. ಸ್ವಚ್ಛತೆ ಜನ ಅನುಸರಿಸಲಿ ಎಂದು. ಮಡಿ ಮೈಲಿಗೆ ಆಚಾರ ವಿಚಾರ ಜಾತಿ ಪದ್ಧತಿ ಇವೆಲ್ಲ ಮನುಷ್ಯನೆ ಮಾಡಿದ್ದು ತಾನೆ. ದೇವರಲ್ಲವಲ್ಲ..? ಹಾಗೆಯೇ ಇದು. ಇಲ್ಲಿ ನಂಬಿಕೆಯಿಂದ ಮಾಡಿದ ಕೆಲಸದಲ್ಲಿ ಸ್ವಚ್ಛತೆಯಿದೆ; ಇದರಿಂದ ಶಾಂತಿ ಸಿಗುತ್ತದೆ. ದೇವರು ಒಂದು ಕಲ್ಪನೆ. ಜಾತಿಗೆ ತಕ್ಕಂತೆ ಅವನ ಸ್ವರೂಪದ ವಿಮರ್ಷೆ. ಆದರೆ ದೇವರು ಒಬ್ಬನೇ. ಅದೊಂದು ಶಕ್ತಿ.. ಅದು ಎಲ್ಲೂ ಇಲ್ಲ. ನಮ್ಮ ಮನಸ್ಸಿನ ಒಳ್ಳೆಯ ನಡೆ ನುಡಿ, ನಮ್ಮ ನಿತ್ಯದ ಜೀವನ ಶೈಲಿ, ನಮ್ಮ ಜೀವನದ ಕನ್ನಡಿ. ಮನಸ್ಸು ಬುದ್ಧಿ ಸರಿಯಾಗಿದ್ದರೆ ದೇವರೆನ್ನುವ ಶಕ್ತಿ ನಮ್ಮಲ್ಲೆ ಕಾಣಬಹುದು. ಆದುದರಿಂದ ಅನಾದಿ ಕಾಲದ ಆಚರಣೆ ಅನುಸರಿಸುತ್ತ ನಮ್ಮ ಮನೆ ಸುತ್ತ ಮುತ್ತಲಿನ ವಾತಾವರಣ ಸುಂದರವಾಗಿರಿಸುವುದರಲ್ಲಿ ತಪ್ಪಿಲ್ಲ. ಮತ್ತಷ್ಟು ಓದು »

14
ಡಿಸೆ

ಭಗವದ್ಗೀತೆ ಹೇಳುವ ಆಹಾರ ಆದರ್ಶ

ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

krsna_eatingಆಹಾರ ಎಂದರೆ ದೇಹಕ್ಕೆ ಪೌಷ್ಟಿಕಾಂಶಗಳನ್ನು ಒದಗಿಸುವ ಯಾವುದೇ ಪದಾರ್ಥ “ಪೋಷಕಾಂಶ (ಪ್ರೊಟೀನು), ಶರ್ಕರಪಿಷ್ಟ (ಕಾರ್ಬೊಹೈಡ್ರೇಟು) ಮತ್ತು ಕೊಬ್ಬು (ಫ್ಯಾಟ್)ಗಳನ್ನು ಅಗತ್ಯವಾಗಿ ಒಳಗೊಂಡ, ದೇಹದ ಪೋಷಣೆ, ಬೆಳವಣಿಗೆ, ಸುಭದ್ರತೆಗೆ ಕಾರಣವಾಗುವ ವಸ್ತು” ಎಂದು ವಿಶ್ವಕೋಶ ಹೇಳುತ್ತದೆ. ಆಹಾರ ವಸ್ತು ಮೂಲತಃ ಸಸ್ಯ ಅಥವಾ ಪ್ರಾಣಿ ಮೂಲದ್ದಿರಬಹುದು. ಅದರಲ್ಲಿ ಜೀವಿಗಳ ಬೆಳವಣಿಗೆಗೆ ಅಗತ್ಯವಾದ ಮೇಲ್ಕಂಡ ಧಾತುಗಳ ಜೊತೆಗೆ ವಿಟಮಿನ್ ಮತ್ತು ಖನಿಜಾಂಶಗಳು ಇದ್ದಾಗ ಮಾತ್ರ ಅಂಥ ವಸ್ತುವನ್ನು ಆಹಾರ ಎನ್ನಲಾಗುತ್ತದೆ. ಆಹಾರ ಸೇವಿಸಿದ ದೇಹದ ವ್ಯವಸ್ಥೆ ಆಹಾರದಲ್ಲಿನ ಮೂಲವಸ್ತುಗಳನ್ನು ಬೇರ್ಪಡಿಸಿ, ತನ್ನ ಕೋಶಗಳ ಮೂಲಕ ದೇಹದ ವಿವಿಧ ಭಾಗಗಳಿಗೆ ಧಾತುಗಳನ್ನು ಪ್ರವಹಿಸಿ ದೇಹದಲ್ಲಿ ಶಕ್ತಿ ಸಂಚಯನವಾಗುವಂತೆ ಮಾಡುತ್ತದೆ, ದೇಹದ ಬೆಳವಣಿಗೆಗೂ ಕಾರಣವಾಗುತ್ತದೆ. ಇದು ಆಹಾರದ ಬಗ್ಗೆ ಆಧುನಿಕ ವಿಜ್ಞಾನ ಹೇಳುವ ಮಾತು. ಮತ್ತಷ್ಟು ಓದು »

9
ಡಿಸೆ

‘ಶಿಕ್ಷಣ ಕ್ರಾಂತಿ’ಯ ಅನಿವಾರ್ಯತೆ

– ವಿನಾಯಕ ಪೈ
ಉಪನ್ಯಾಸಕರು
ಉಡುಪಿ

swami-vivekananda-quotes-educationಶಿಕ್ಷಣವೆಂದರೆ ಮೊದಲೇ ಮನುಷ್ಯನಲ್ಲಿ ಇರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು
– ಸ್ವಾಮಿ ವಿವೇಕಾನಂದ

ವಿವೇಕಾನಂದರು ಭಾರತ ಕಂಡಂತಹ ಶ್ರೇಷ್ಟ ಚಿಂತಕ, ಧೀರ ಸನ್ಯಾಸಿ, ಅಪ್ರತಿಮ ದೇಶ ಪ್ರೇಮಿ. ಸಾಮಾಜಿಕ ಒಡಕುಗಳ ವಿರುದ್ಧ ಪ್ರತಿಭಟಿಸಿ ಜಾಗೃತಿ ಸೃಷ್ಟಿಸಿದ ಸಮಾಜ ಸುಧಾರಕ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಹಿರಿಮೆಯನ್ನು, ದೇಶದ ಅಂತಃಸತ್ವವನ್ನು ಮನೆ ಮನೆಯಲ್ಲಿ ಪಸರಿಸಿ ರಾಷ್ಟ್ರ ದೀವಿಗೆಯ ಬೆಳಕನ್ನು ಎಲ್ಲೆಲ್ಲೂ ಚೆಲ್ಲಿದ ಯುಗಪುರುಷ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರತದ ಬಗೆಗಿನ ದ್ವಂದ್ವಗಳನ್ನು, ಕೀಳರಿಮೆಯನ್ನು ಹೋಗಲಾಡಿಸಿ ಭಾರತ ಸರ್ವಕಾಲಕ್ಕೂ ಶ್ರೇಷ್ಟ ಎಂದು ಭೋಗರಾಷ್ಟ್ರಗಳಲ್ಲಿ ಜ್ಞಾನೋದಯಗೊಳಿಸಿದ  ಪವಿತ್ರ ಬೋಧಿವೃಕ್ಷದ ಪ್ರತಿರೂಪ ವಿವೇಕಾನಂದರು. ಮತ್ತಷ್ಟು ಓದು »