ವಿಷಯದ ವಿವರಗಳಿಗೆ ದಾಟಿರಿ

Posts from the ‘ಸಂಸ್ಕೃತಿ’ Category

28
ಮೇ

ಭಾರತದಲ್ಲಿ ಶೂದ್ರರ ಶೋಷಣೆ ನಡೆದಿದೆಯೇ??

– ವಲವಿ ವಿಜಯಪುರ

c609ಸಾಮಾನ್ಯವಾಗಿ ಭಾರತದಲ್ಲಿ ಮನುಸ್ಮೃತಿಯು ಶೂದ್ರರಿಗೆ ವೇದಗಳನ್ನು ಕಲಿಯುವ ಅಧಿಕಾರ ನೀಡಲಿಲ್ಲ. ಅವರಿಗೆ ಸಂಸ್ಕೃತದ ಜ್ಞಾನವನ್ನು  ಕೊಡಲಿಲ್ಲ. ವಿದ್ಯೆಯನ್ನು ಶೂದ್ರರಿಂದ ಮುಚ್ಚಿಡಲಾಯಿತು.  ಮೇಲ್ವರ್ಗದವರ ಮನೆಯ ಸಗಣಿಯನ್ನು ಬಾಚುವದೇ ಅವರ ಕೆಲಸವಾಗಿತ್ತು. ಯಾವುದೇ ಉನ್ನತ ಹುದ್ದೆಗಳನ್ನು ನೀಡದೇ ಅವರನ್ನು ವಂಚಿಸಲಾಯಿತು. ಮತ್ತು ಈ ವಂಚನೆಯಲ್ಲಿ ಅಧಿಕವಾಗಿ ಬ್ರಾಹ್ಮಣರು ಭಾಗೀದಾರರು. ಸಮಾಜವೆಂಬ ಪಿರಮಿಡ್ ಆಕೃತಿಯಲ್ಲಿ ಅತ್ಯಂತ ಮೇಲೆ ಬ್ರಾಹ್ಮಣನಿದ್ದರೆ ಅತ್ಯಂತ ಕೆಳಸ್ತರದಲ್ಲಿ ಶೂದ್ರನಿದ್ದಾನೆ ಮತ್ತು ಅವನನ್ನು ವಿಶೇಷವಾಗಿ ಬ್ರಾಹ್ಮಣರು ಶೋಷಣೆ ಮಾಡಿದ್ದಾರೆ ಅನ್ನುವದು ಆಧುನಿಕ ಶಿಕ್ಷಣ ಪಡೆದವರ ವಾದವಾಗಿದೆ. ಮತ್ತಷ್ಟು ಓದು »

27
ಮೇ

ವೈಚಾರಿಕತೆಯ ಹೆಸರಿನಲ್ಲಿ ವಸಾಹತುಪ್ರಜ್ಞೆಯನ್ನು ನೆಕ್ಕುತ್ತಿರುವ ಬುದ್ಧಿಜೀವಿಗಳು

– ವಿನಾಯಕ ಹಂಪಿಹೊಳಿ
ksbhagawan-16-1463371160ವಿಶ್ವವಾಣಿಯಲ್ಲಿ ೮-ಮೇ-೨೦೧೬ ರಂದು ಪ್ರಕಟವಾದ ಕೆ. ಎಸ್. ಭಗವಾನ್ ಅವರ “ಯಜ್ಞದ ಹೆಸರಿನಲ್ಲಿ ಮುಗ್ಧರನ್ನು ಮುಕ್ಕುತ್ತಿರುವ ದೈವಜ್ಞರು” ಎಂಬ ಲೇಖನವು ಎರಡು ಭ್ರಮೆಗಳ ಆಧಾರದ ಮೇಲೆ ನಿಂತಿದೆ. ಮೊದಲನೆಯದು ಮತ್ತೂರಿನಲ್ಲಿ ನಡೆದ ಯಾಗದಲ್ಲಿ ಪ್ರಾಣಿಬಲಿಯು ನಡೆದಿದೆ ಎಂಬ ಭ್ರಮೆ ಮತ್ತು ಎರಡನೆಯದು ಪಾಶ್ಚಿಮಾತ್ಯ ವಿದ್ವಾಂಸರು ವೈದಿಕ ಸಂಪ್ರದಾಯಗಳು ಹೊಂದಿರುವ ಸಾಹಿತ್ಯದ ಕುರಿತು ಕಟ್ಟಿಕೊಟ್ಟ ಚಿತ್ರಣವೇ ಸತ್ಯ ಎಂಬ ಭ್ರಮೆ. ಮತ್ತೂರಿನಲ್ಲಿ ಪ್ರಾಣಿಬಲಿ ನಡೆದಿಲ್ಲ ಎಂಬ ಪ್ರಾಥಮಿಕ ವರದಿಯನ್ನು ಸರ್ಕಾರೀ ಅಧಿಕಾರಿಗಳೇ ನೀಡಿರುವುದರಿಂದ ನೇರವಾಗಿ ಎರಡನೇ ಭ್ರಮೆಗೆ ಬರೋಣ. ಮತ್ತಷ್ಟು ಓದು »

25
ಮೇ

ಭಾನುಮತಿ ನೀ ಸುಮತಿ.

–  ನಾಗೇಶ ಮೈಸೂರು

image1 (1)ಮಹಾಭಾರತದಲ್ಲಿ ನಿರ್ಲಕ್ಷ್ಯಕ್ಕೊಳಪಟ್ಟು ನೇಪಥ್ಯಕ್ಕೆ ಸರಿಸಲ್ಪಟ್ಟ ಅನೇಕ ಸ್ತ್ರೀ ಪಾತ್ರಗಳಲ್ಲೊಂದು ಪ್ರಮುಖ ಪಾತ್ರ ಕೌರವೇಶ ದುರ್ಯೋಧನನ ಪತ್ನಿ ಭಾನುಮತಿಯದು. ಭೂಮಂಡಲವನ್ನಾಳುವ ಒಡೆಯನಾದ ಕೌರವೇಶನ ಸತಿಯಾದರೂ ಯಾಕೊ ಅವಳ ಉಲ್ಲೇಖ ಅಲ್ಲಿಲ್ಲಿ ತುಸು ಮೆಲುವಾಗಿ ಹೆಸರಿಸಿದ್ದು ಬಿಟ್ಟರೆ ಗಾಢವಾದ ವಿವರಣೆ ಕಾಣಿಸುವುದಿಲ್ಲ. ಬಹುಶಃ ಸುಯೋಧನನಿಗೆ ಆರೋಪಿಸಿದ ಋಣಾತ್ಮಕ, ಖಳನಾಯಕ ಪಟ್ಟದಿಂದಲೋ ಅಥವಾ ಚತುಷ್ಟಯದ ಚಟುವಟಿಕೆಗಳಿಗೆ ಕೊಟ್ಟಷ್ಟೇ ಗಮನ ಅವನ ಖಾಸಗಿ ಜೀವನಕ್ಕೆ ಕೊಡಲಿಲ್ಲವೆಂದೊ – ಒಟ್ಟಾರೆ ಭಾನುಮತಿ ಹೆಚ್ಚಾಗಿ ತೆರೆಮರೆಯ ಅಪ್ರತ್ಯಕ್ಷ ಪ್ರಭಾವ ಬೀರುವ ಪಾತ್ರವಾಗಷ್ಟೆ ಆಗಿ ಗೌಣವಾಗಿಬಿಡುತ್ತಾಳೆ. ಈಗಲೂ ಅಂತರ್ಜಾಲ ಹುಡುಕಿದರೆ ಅವಳ ಕುರಿತಾದ ವಿವರ ಸಿಗುವುದು ತೀರಾ ಅಲ್ಪವೇ. ಮತ್ತಷ್ಟು ಓದು »

24
ಮೇ

ತಲೆಕೆಟ್ಟ ಕಾನೂನುಗಳು ಮತ್ತು ಸ್ವಂತ ಬುದ್ಧಿಯಿಲ್ಲದ ಜೀವಿಗಳು

–  ರಾಕೇಶ್ ಶೆಟ್ಟಿ

ಬುದ್ಧಿಜೀವಿಗಳ ಮೂಢನಂಬಿಕೆಗಳುಇತ್ತೀಚೆಗೆ ಮತ್ತೂರಿನಲ್ಲಿ ನಡೆದ ಸೋಮಯಾಗದಲ್ಲಿ ಸಂಕೇತಿ ಬ್ರಾಹ್ಮಣರು ಮೇಕೆ ಬಲಿ ಕೊಟ್ಟು ತಿಂದರಂತೆ, ಸೋಮರಸ ಕುಡಿದರಂತೆ ಅಂತ ಪ್ರಗತಿಪರರ ವಾಣಿಯೊಂದು ಸುಳ್ಳು ಸುದ್ದಿ ಬರೆಯಿತು. ಈ ಸುದ್ದಿಯಿಂದಾಗಿ ಟೌನ್ ಹಾಲ್ ಮುಂದೆ ನಿಂತು ದನ ತಿನ್ನುವುದನ್ನು ಬೆಂಬಲಿಸುವ ಕಬಾಬ್ ಕ್ರಾಂತಿಕಾರಿಗಳಿಗೂ ಹೊಟ್ಟೆನೋವು ಕಾಣಿಸಲಾರಂಭಿಸಿತು. ಇವರನ್ನು ಕರೆಯದೇ ತಿಂದರೂ ಎಂದು ಹೊಟ್ಟೆ ನೋವಾಗಿತ್ತೋ ಏನೋ. PhD ಮಹಾಶಯನೊಬ್ಬ ಬ್ರಾಹ್ಮಣರು ಮಾಂಸ ತಿನ್ನಲು ಶುರು ಮಾಡಿದರೆ ರೇಟ್ ಜಾಸ್ತಿಯಾಗುತ್ತೆ ಅಂತ ಅಳ್ತಾ ಇದ್ದ. ಎಂತೆಂತವರೆಲ್ಲ ವಿವಿಗಳಲ್ಲಿ ಪಾಠ ಮಾಡುತ್ತಾರಪ್ಪಾ ಅನಿಸಿತು. ಎಲ್ಲಾ (ಜಾತಿ/ಪಂಗಡದ) ಬ್ರಾಹ್ಮಣರು ಸಸ್ಯಹಾರಿಗಳು ಅನ್ನೋದು “ಮೂಢನಂಬಿಕೆ”. ಸಿದ್ರಾಮಯ್ಯನವರಿಗೆ ಹೇಳಿ ಮೌಢ್ಯ ನಿಷೇಧ ಕಾಯ್ದೆಯ ಮೂಲಕ ಈ ಮೂಢನಂಬಿಕೆಯನ್ನು ನಿಷೇಧಿಸಬೇಕು. ಕಾಶ್ಮೀರಿ ಪಂಡಿತರಿಗೆ ಶಿವರಾತ್ರಿ ಹಬ್ಬದಂದು ಮಾಂಸದಡುಗೆಯೇ ವಿಶೇಷವಾದದ್ದು. ಬಂಗಾಳಿ, ಓಡಿಶಾದ ಬ್ರಾಹ್ಮಣರೂ, ಗೌಡ ಸಾರಸ್ವತ ಬ್ರಾಹ್ಮಣರಲ್ಲೂ ಮಾಂಸಹಾರಿಗಳಿದ್ದಾರೆ. ಮತ್ತಷ್ಟು ಓದು »

25
ಏಪ್ರಿಲ್

ಸಾಯಣರ ವೇದವ್ಯಾಖ್ಯಾನವು ಏನನ್ನು ತಿಳಿಸುತ್ತದೆ?

– ವಿನಾಯಕ ಹಂಪಿಹೊಳಿ
vedaಸಾಯಣಾಚಾರ್ಯರು ಋಗ್ವೇದಕ್ಕೆ ಭಾಷ್ಯವನ್ನು ಬರೆಯುವಾಗ ಮೊದಲು ವೇದ ಎಂದರೇನು ?, ಅದರ ಲಕ್ಷಣವೇನು ಎಂಬುದರ ಕುರಿತು ಒಂದು ದೀರ್ಘ ಚರ್ಚೆಯನ್ನು ಮಾಡಿದ್ದಾರೆ. ಅದರಲ್ಲಿ ಪೂರ್ವಪಕ್ಷದ ವಾದಗಳನ್ನೆಲ್ಲ ಒಂದೊಂದಾಗಿ ಪರಿಗಣಿಸಿ, ವೇದದ ಲಕ್ಷಣದ ಕುರಿತು ತಮ್ಮ ಸಿದ್ಧಾಂತವನ್ನು ಮಂಡಿಸಿ, ಪೂರ್ವಪಕ್ಷಿಯ ಸಂದೇಹಗಳನ್ನೆಲ್ಲ ಪರಿಹರಿಸುತ್ತಾ ಸಾಗಿದ್ದಾರೆ. ಆ ಚರ್ಚೆ ಏನು ಎಂಬುದು ಮುಖ್ಯವಲ್ಲ. ಆ ಚರ್ಚೆಯಲ್ಲಿ ಪೂರ್ವಪಕ್ಷಿಗಳು ಮತ್ತು ಸಿದ್ಧಾಂತಿಗಳು ವೇದದ ಕುರಿತು ಯಾವ ದೃಷ್ಟಿಕೋಣವನ್ನು ಇಟ್ಟುಕೊಂಡಿದ್ದರು ಎಂಬುದು ಇಲ್ಲಿ ಮುಖ್ಯ. ಹೀಗಾಗಿ ಆ ಚರ್ಚೆಯ ಆದಿಭಾಗದ ಸಾರಾಂಶವನ್ನು ಮಾತ್ರ ನೋಡೋಣ. ಮೊದಲು ಪೂರ್ವಪಕ್ಷದ ವಾದಗಳನ್ನು ಪಟ್ಟಿ ಮಾಡಿ ನಂತರ ಸಾಯಣರು ಕೊಟ್ಟ ವೇದದ ವ್ಯಾಖ್ಯಾನವನ್ನು ನೀಡಲಾಗಿದೆ. ಪೂರ್ವಪಕ್ಷದ ಮತ: ವೇದ ಎನ್ನುವದು ಯಾವದನ್ನು? ವೇದಕ್ಕೆ ಲಕ್ಷಣಗಳೇನಾದರೂ ಇವೆಯೇ? ಪ್ರತ್ಯಕ್ಷ, ಅನುಮಾನ ಮತ್ತು ಆಗಮ ಎಂಬ ಮೂರು ಪ್ರಮಾಣಗಳಿವೆಯಲ್ಲ (ಊಟ ಮಾಡಿದರೆ ಹೊಟ್ಟೆ ತುಂಬುತ್ತದೆ ಎನ್ನುವದಕ್ಕೆ ಪ್ರತ್ಯಕ್ಷ ಪ್ರಮಾಣ, ಹೊಗೆಯಾಡುತ್ತಿರುವಲ್ಲಿ ಬೆಂಕಿಯಿರಬಹುದೆಂಬುದಕ್ಕೆ ಅನುಮಾನ ಪ್ರಮಾಣ, ಯಾಗದಿಂದ ಸ್ವರ್ಗಪ್ರಾಪ್ತಿ ಎಂಬುದಕ್ಕೆ ಆಗಮ ಪ್ರಮಾಣ), ಅವುಗಳಲ್ಲಿ ಕೊನೆಯ ಆಗಮ ಪ್ರಮಾಣವೆಂಬುದೇ ವೇದದ ಲಕ್ಷಣವೆನ್ನಲು ಸಾಧ್ಯವಿಲ್ಲ. ಏಕೆಂದರೆ ಮನ್ವಾದಿ ಸ್ಮೃತಿಗಳೂ ಆಗಮಗಳಾಗಿವೆ. ವೇದ ಎನ್ನುವದು ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನ ಎಂಬ ಲಕ್ಷಣವನ್ನೂ ಹೇಳಲು ಸಾಧ್ಯವಿಲ್ಲ ಕಾರಣ ಇತಿಹಾಸ ಪುರಾಣಗಳೂ ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನಗಳಾಗಿರುತ್ತವೆ. ಆಗಮವೇ ವೇದದ ಲಕ್ಷಣ ಎನ್ನುವದು ಅತಿವ್ಯಾಪ್ತಿದೋಷ ಒಳಗೊಂಡಿದೆ. ಬೆಳ್ಳಗಿರುವದು ಹಾಲಿನ ಲಕ್ಷಣ ಎಂದರೆ, ಸುಣ್ಣವೂ ಬೆಳ್ಳಗಿರುವದರಿಂದ, ಈ ಲಕ್ಷಣವಾಕ್ಯವು ಅತಿವ್ಯಾಪ್ತಿದೋಷ (Necessary But Not Sufficient) ಎಂಬ ದೋಷವನ್ನು ಹೊಂದಿರುತ್ತದೆ. ಮತ್ತಷ್ಟು ಓದು »

24
ಏಪ್ರಿಲ್

ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?

– ರೋಹಿತ್ ಚಕ್ರತೀರ್ಥ

shani-shingnapur_650x400_41460171606ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ್ದರೂ) ತೋರಿಸಿಕೊಳ್ಳಬೇಕು. ಹಿಂದೂಗಳನ್ನು, ಅವರ ಆಚರಣೆ, ಪದ್ಧತಿ, ಹಬ್ಬಹರಿದಿನಗಳನ್ನು ಬಯ್ಯಬೇಕು. ಹಿಂದೂ ದೇವರನ್ನು, ದೇವಾಲಯಗಳನ್ನು ಪ್ರಶ್ನಿಸಬೇಕು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಿಲಿಜನ್ನುಗಳನ್ನು ಓಲೈಸಬೇಕು. ಮೋದಿಯನ್ನು ತೆಗಳಬೇಕು. ಭಯೋತ್ಪಾದಕರನ್ನು, ನಕ್ಸಲರನ್ನು ಬೆಂಬಲಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೆ ಬೆನ್ನುಮೂಳೆ ಇರಬಾರದು. ಜೊತೆಗೆ, ಅರ್ಥವತ್ತಾದ ಮಾತು, ತರ್ಕಬದ್ಧವಾದ ಚಿಂತನೆ – ಇವೆರಡರ ಬಗ್ಗೆ ನೀವು ಎಂದೆಂದೂ ತಲೆ ಕೆಡಿಸಿಕೊಂಡಿರಬಾರದು. ಹಾಗೆಯೇ, ಮಹಿಳಾವಾದಿಯಾಗುವುದು ಕೂಡ ಸುಲಭ. ಮೊದಲಿಗೆ ಮಹಿಳಾವಾದ = ಪುರುಷದ್ವೇಷ ಎಂಬ ಸಮೀಕರಣ ಬರೆಯಿರಿ. ಮಹಿಳೆಗೆ ಸ್ವಾತಂತ್ರ್ಯ ಬೇಕು ಅನ್ನಿ. ಉದ್ಯೋಗದಲ್ಲಿ, ಸಂಸತ್ತಿನಲ್ಲಿ, ಬಸ್ಸಿನಲ್ಲಿ, ಚಿತ್ರಮಂದಿರದಲ್ಲಿ, ನಡೆದಾಡುವ ರಸ್ತೆಯಲ್ಲಿ – ಹೀಗೆ ಎಲ್ಲೆಲ್ಲೂ ಹೆಣ್ಣಿಗೆ ಸಮಾನತೆ ಬೇಕೆಂದು ಬೊಬ್ಬೆ ಹೊಡೆಯಿರಿ. ಉದ್ಧೇಶವೇ ಇಲ್ಲದೆ ಪ್ರತಿಭಟನೆ ಮಾಡಿದರೂ ಓಕೆ. ವಿರೋಧಿಸದವರಿಗೂ ಧಿಕ್ಕಾರ ಕೂಗಿದರೂ ಓಕೆ. ಒಟ್ಟಲ್ಲಿ ನಿಮ್ಮ ಮಾತು, ಕೂಗಾಟ, ಹಾರಾಟ, ಹೋರಾಟವೆಲ್ಲ ನಾಲ್ಕು ಜನಕ್ಕೆ ಗೊತ್ತಾಗಬೇಕು, ಪತ್ರಿಕೆ ಟಿವಿಗಳಲ್ಲಿ ಬರಬೇಕು. ಮತ್ತು ಇವೆಲ್ಲದರ ಜೊತೆ, ನೀವು, ಮೇಲೆ ಹೇಳಿದ ಬುದ್ಧಿಜೀವಿಯೂ ಆಗಿರಬೇಕಾದ್ದು ಅನಿವಾರ್ಯ. ಎರಡು ವರ್ಷಗಳ ಹಿಂದೆ ಒಂದು ಬುದ್ಧಿಜೀವಿ ಮಹಿಳಾಪರ ಲೇಖಕಿ, “ಮೋದಿಯ ಮುಖ ನೋಡಿದರೇನೇ ಆತ ಸ್ತ್ರೀದ್ವೇಷಿ ಅನ್ನೋದು ಗೊತ್ತಾಗುತ್ತದೆ” ಎಂದಿದ್ದರು. ಇಂಥ ಹೇಳಿಕೆ ಕೊಡುವವರಿಗೆ ಮಹಿಳಾಪರ ಸಂಘಟನೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಮತ್ತಷ್ಟು ಓದು »

11
ಏಪ್ರಿಲ್

ಋಗ್ವೇದ ೧೦.೮೫.೧೩ ಅಘಾಸು ಹನ್ಯಂತೇ ಗಾವಃ

– ವಿನಾಯಕ ಹಂಪಿಹೊಳಿ

rigvedaಸ್ವಘೋಷಿತ ಅಭಿನವ ಪ್ರವಾದಿ ಜಾಕೀರ ನಾಯ್ಕರ ಶಿಷ್ಯರೊಂದಿಗೆ ಸ್ವಲ್ಪ ದಿನಗಳ ಹಿಂದೆ ನನ್ನ ಕೆಲವು ಮಿತ್ರರು ಚರ್ಚೆಯೊಂದನ್ನು ನಡೆಸಿದ್ದರು. ಆ ಚರ್ಚೆಯಲ್ಲಿ ನಾನೂ ಭಾಗವಹಿಸಿದ್ದೆ. ಅಲ್ಲಿ ನಮ್ಮ ವಿರೋಧಿಗಳ ವಾದವೊಂದು ನನ್ನ ಗಮನ ಸೆಳೆಯಿತು. ಅಲ್ಲಿ ನಮ್ಮ ವಿರೋಧಿಗಳು “ಋಗ್ವೇದದಲ್ಲಿ ಗೋಮಾಂಸದ ಉಲ್ಲೇಖವಿದೆ. ಮದುವೆಯ ಸಂದರ್ಭದಲ್ಲಿ ಆಕಳುಗಳನ್ನು ಕಡಿಯಲಾಗುತ್ತಿತ್ತು ಎಂಬುದಕ್ಕೆ ಆಧಾರವಿದೆ. ಬೇಕಾದರೆ ಋಗ್ವೇದದ ೧೦ನೇ ಮಂಡಲದ ೮೫ನೇ ಸೂಕ್ತದ ೧೩ನೇ ಋಕ್ಕನ್ನು ನೋಡಿ” ಎಂದು ಹೇಳಿದ್ದರು. ಆ ಋಕ್ಕು ಹೀಗಿತ್ತು.

ಸೂರ್ಯಾಯಾ ವಹತುಃ ಪ್ರಾಗಾತ್ಸವಿತಾ ಯಮವಾಸೃಜತ್ | ಅಘಾಸು ಹನ್ಯಂತೇ ಗಾವೋsರ್ಜನ್ಯೋಃ ಪರ್ಯುಹ್ಯತೇ || ಮತ್ತಷ್ಟು ಓದು »

2
ಏಪ್ರಿಲ್

ಸ್ವಾಮಿ ವಿವೇಕಾನಂದರ ಒಂದು ಮರು ಓದು

Swamijiಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

3, 4, 5 ಜೂನ್ 2016

ಸ್ಥಳ ಮತ್ತು ಆತಿಥ್ಯ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ, ಕರ್ನಾಟಕ

ಸಹ ಸಂಘಟಕರು: Vergelijkende Cultuurwetenschappen (ಗೆಂಟ್ ವಿಶ್ವವಿದ್ಯಾಲಯ, ಬೆಲ್ಜಿಯಂ); SDM Centre for Interdisciplinary Research in Humanities and Social Sciences (ಉಜಿರೆ, ಭಾರತ) ಮತ್ತು India Platform

 ಪ್ರವೇಶ: ಉಚಿತ, ಆದರೆ ನೊಂದಾವಣೆ ಖಡ್ಡಾಯ.

ನೊಂದಾಯಿಸಿಕೊಳ್ಳಲು, ತಮ್ಮ ಪೂರ್ಣ ಹೆಸರು, ಸಂಸ್ಥೆ ಮುಂತಾದ ವಿವರಗಳೊಂದಿಗೆ ಇಲ್ಲಿಗೆ ಬರೆಯಿರಿ: revisitingvivekananda@gmail.com

ಕಡೆಯ ದಿನಾಂಕ: 10 ಮೇ 2016.

ಸಮ್ಮೇಳನದ ಚಟುವಟಿಕೆಗಳ ತಾತ್ಕಾಲಿಕ ವೆಳಾಪಟ್ಟಿ ಮತ್ತು ಇಂಗ್ಲಿಷ್ concept noteಗಾಗಿ ನೋಡಿ:  http://www.cslc.in/dharma-and-ethics/?page=Dharma_And_Ethics_8 ಮತ್ತಷ್ಟು ಓದು »

1
ಫೆಬ್ರ

ದೇವಾಲಯ ಪ್ರವೇಶದ ಕುರಿತು ತಪ್ಪು ತಿಳಿವಳಿಕೆಗಳು

– ಡಾ. ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ,ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ.

ಶನಿಸಿಂಗಾಣಪುರಇಂದು ಎರಡು ವಿಭಿನ್ನ ಸ್ಥಳಗಳಲ್ಲಿ ದೇವಾಲಯಗಳಿಗೆ ಸ್ತ್ರೀಯರ ಪ್ರವೇಶದ ಕುರಿತು ಹೋರಾಟಗಳು ನಡೆಯುತ್ತಿವೆ. ಈ ಹೋರಾಟವನ್ನು ನಡೆಸುತ್ತಿರುವವರು ಪ್ರಗತಿಪರರು ಹಾಗೂ ಸ್ತ್ರೀವಾದಿಗಳು. ಈ ಸಂದರ್ಭದಲ್ಲಿ ಅವರು ಎತ್ತುತ್ತಿರುವ ಚರ್ಚೆಯನ್ನು ಗಮನಿಸಿದಾಗ ಭಾರತೀಯ ಸಂಸ್ಕೃತಿಯ ಕುರಿತು ಈ ಮುಂದಿನ ತಪ್ಪು ಕಲ್ಪನೆಗಳು ಅವರಿಗೆ ಇರುವುದು ಸ್ಪಷ್ಟ. ಅದೆಂದರೆ: 1. ಹಿಂದೂ ಎನ್ನುವುದು ಇಸ್ಲಾಂ, ಕ್ರಿಶ್ಚಿಯಾನಿಟಿಗಳಂತೆ ಒಂದು ರಿಲಿಜನ್ನು. 2. ಹಿಂದೂಗಳ ದೇವಾಲಯಗಳು ಚರ್ಚು ಮಸೀದಿಗಳಂತೆ ಹಿಂದೂಗಳ ಸಾರ್ವಜನಿಕ ಪೂಜಾ ಸ್ಥಳಗಳು. ಹಾಗಾಗಿ ಹಿಂದೂ ಮಹಿಳೆಯರಿಗೆ ಇಂಥ ದೇವಾಲಯಗಳಲ್ಲಿ ಬಿಟ್ಟುಕೊಳ್ಳದಿರುವುದು ಲೈಂಗಿಕ ತಾರತಮ್ಯವನ್ನು ಮಾಡಿದಂತೇ ಎಂಬುದು ಅವರ ತರ್ಕ.

ಹಿಂದೂ ಎನ್ನುವುದು ಇಸ್ಲಾಂ ಕ್ರಿಶ್ಚಿಯಾನಿಟಿಗಳಂತೆ ರಿಲಿಜನ್ನಲ್ಲ. ಇದೊಂದು ಬಹು ಸಂಪ್ರದಾಯಗಳ ಸಮಾಜ. ಈ ಸಂಪ್ರದಾಯಗಳಿಗೆ ಆಧಾರವಾಗಿ ಕ್ರೈಸ್ತ ಮುಸ್ಲಿಮರಿಗೆ ಇರುವಂತೆ ಯಾವುದೇ ದೇವವಾಣಿ, ಪವಿತ್ರ ಗ್ರಂಥ ಅಥವಾ ಏಕರೂಪೀ ಡಾಕ್ಟ್ರಿನ್ನುಗಳ ಆಧಾರವಿಲ್ಲ. ಹಾಗಾಗಿ ಇಂಥ ಸಂಪ್ರದಾಯಗಳು ವೈವಿಧ್ಯಪೂರ್ಣವಾಗಿ ಬೆಳೆದುಕೊಂಡಿವೆ. ಹಿಂದೂ ದೇವಾಲಯಗಳು ಚರ್ಚುಗಳಂತೆ ಒಂದು ಕೇಂದ್ರೀಕೃತ ಆಡಳಿತ ವ್ಯವಸ್ಥೆಯ ಘಟಕಗಳಲ್ಲ. ಅವು ಹುಟ್ಟಿಕೊಳ್ಳುವುದು,ಅವುಗಳ ಅಭಿವೃದ್ಧಿ,ಜನಪ್ರಿಯತೆ,ನಿರ್ವಹಣೆ,ಅವನತಿ ಇವೆಲ್ಲ ಆಯಾ ಕ್ಷೇತ್ರಗಳ ಕ್ರಿಯಾಶೀಲತೆಗೆ ಸಂಬಂಧಪಟ್ಟ ಖಾಸಗಿ ವಿಚಾರಗಳಾಗಿವೆ. ಅವುಗಳಿಗೆ ಭಕ್ತರು ನಾನಾ ಕಡೆಗಳಿಂದ ಬರುತ್ತಾರೆ ಎಂಬ ಕಾರಣಕ್ಕೆ ಅವು ಸಾರ್ವಜನಿಕವಲ್ಲ. ಏಕೆಂದರೆ ಆ ಭಕ್ತರಿಗೆ ಅಲ್ಲಿ ಬರಲೇಬೇಕೆಂಬ ನಿರ್ಬಂಧವಿಲ್ಲ.ಭಕ್ತರು ಆಯಾ ಕ್ಷೇತ್ರದ ರೀತಿ ರಿವಾಜುಗಳಿಗೆ ಗೌರವಕೊಟ್ಟೇ ಅಲ್ಲಿಗೆ ತಮ್ಮ ಇಷ್ಟಾರ್ಥಗಳನ್ನು ಪಡೆಯಲು ಅಲ್ಲಿಗೆ ಬಂದಿರುತ್ತಾರೆ.ಯಾರಿಗಾದರೂ ಹೊಸ ದೇವಾಲಯವನ್ನು ಕಟ್ಟಿ ಬೆಳೆಸುವ ಆಯ್ಕೆ ಮುಕ್ತವಾಗಿದೆ. ಹಾಗಾಗಿ ನಮ್ಮಲ್ಲಿ ಜಾತಿಗಳಿಗೆ,ಮತಗಳಿಗೆ,ಕುಲಗಳಿಗೆ,ಪ್ರದೇಶಗಳಿಗೆ,ಊರುಗಳಿಗೆ,ಗಲ್ಲಿಗಳಿಗೆ ಪ್ರತ್ಯೇಕದೇವಾಲಯಗಳು ಇರುವುದು.

ಮತ್ತಷ್ಟು ಓದು »

7
ಜನ

ಅನುಭವ, ಅನುಭಾವ, ಅನುಭೂತಿ ಇತ್ಯಾದಿ…

– ನಾಗೇಶ ಮೈಸೂರು

ಮುಂಜಾನೆಬದುಕಿನ ಎಷ್ಟೊ ಒಡನಾಟಗಳಲ್ಲಿ ಕೆಲವಷ್ಟೆ ಆಳಕ್ಕಿಳಿದು ಬೇರೂರಿ ನಿಲ್ಲುವಂತಹವು. ಮಿಕ್ಕವೆಲ್ಲಿ ಕೆಲವು ಹಾಗೆ ಬಂದು ಹೀಗೆ ಹೋಗುವ ಗುಂಪಿನದಾದರೆ ಬಾಕಿಯೆಲ್ಲ ತಾವರೆಯೆಲೆಯ ಮೇಲಿನ ಅಂಟಿಯೂ ಅಂಟದ ನಿರ್ಲಿಪ್ತ ಕೊಂಡಿಗಳು. ಹಿಂದೆಲ್ಲ ಈ ತರಹೆವಾರಿ ಬಂಧಗಳೆಲ್ಲವನ್ನು ಅದರದರ ಸ್ಥಾಯಿ / ಚಲನ ಶಕ್ತಿಗನುಗುಣವಾಗಿ ಒಗ್ಗೂಡಿಸಿಡಲು ಮುಂಜಿ, ನಾಮಕರಣ, ಮದುವೆಗಳಂತಹ ಖಾಸಗಿ ಸಮಾರಂಭಗಳಿಂದ ಹಿಡಿದು ಸಾರ್ವಜನಿಕ ಸಭೆ, ಕಾರ್ಯಕ್ರಮ, ಚಟುವಟಿಕೆಗಳು ನೆರವಾಗುತ್ತಿದ್ದವು. ಒಂದಲ್ಲ ಒಂದು ಕಡೆ ಭೇಟಿಯಾಗುವ, ಕೊಂಡಿಯ ಸಂಪರ್ಕವನ್ನುಳಿಸಿಕೊಳ್ಳುವ ಸಾಧ್ಯತೆಯಿರುತ್ತಿತ್ತು.

ಆದರೀಗ ಅಷ್ಟೊಂದು ಹೆಣಗುವ ಅವಶ್ಯಕತೆಯಿಲ್ಲದೆಯೆ ಫೇಸ್ಬುಕ್, ಟ್ವಿಟ್ಟರ್, ವಾಟ್ಸಪ್ ಗಳಂತಹ ತಂತ್ರಜ್ಞಾನ ಪ್ರೇರಿತ ಸಾಮಾಜಿಕ ಸಾಧನ ಸಲಕರಣೆಗಳನ್ನು ಬಳಸಿ ಸಂಪರ್ಕ ಕೊಂಡಿಯನ್ನು ನಿತ್ಯವೂ ಜೀವಂತವಿರಿಸಿಕೊಳ್ಳುವ ಸಾಧ್ಯತೆ. ಕಾಲೇಜಿನ ದಿನಗಳ ಒಡನಾಟದ ನಂತರ ಎಲ್ಲಿ, ಹೇಗಿರುವರೆಂದೆ ಗೊತ್ತಿರದೆ ಇದ್ದ ಅನೇಕ ಮಿತ್ರರು ಈ ಮೂಲಕ ಮತ್ತೆ ನಂಟಿಗೆ ಅಂಟಿಕೊಳ್ಳಲು ಸಾಧ್ಯವಾಗಿಸುತ್ತಿರುವುದೂ ಈ ತಂತಜ್ಞಾನ ಪರಿಕರಗಳೆ. ಹೀಗಾಗಿ ಖಾಸಗಿಯಾಗಲಿ, ಸಾರ್ವತ್ರಿಕವಾಗಲಿ ‘ಕಮ್ಯೂನಿಕೇಷನ್’ ಗೆ ಮೊದಲಿಗಿಂತ ಹೆಚ್ಚು ಸುಲಭ, ಸರಳ ಮಾರ್ಗೋಪಾಯಗಳು ಈಗ ಸದಾ ಬೆರಳ ತುದಿಯಲ್ಲಿ ಸಿದ್ದ. ಅದರಲ್ಲು ಮೊಬೈಲು ಜಗದಲ್ಲೆ ಎಲ್ಲಾ ನಿಭಾಯಿಸುವ ಸಾಧ್ಯತೆಯಿರುವುದರಿಂದ ನೆಟ್ವರ್ಕ್ / ಅಂತರ್ಜಾಲಕ್ಕೆ ಸಂಪರ್ಕವೊಂದಿದ್ದರೆ ಸಾಕು ಎಲ್ಲೆಂದರಲ್ಲಿ ಪರಿಸ್ಥಿತಿಗೆ ಸ್ಪಂದಿಸಬಹುದು ಕನಿಷ್ಠ ಪದಗಳಲ್ಲಾದರು.

ಮತ್ತಷ್ಟು ಓದು »