ಮಹಾಪಂಡಿತ ರಾಹುಲ ಸಾಂಕೃತ್ಯಾಯನರ ಲೇಖನ – ಡಾ.ಅನಂತರಾಮ ಭಟ್ಟರ ದುರಂತ ಕಥನ
ಮಹಾಪಂಡಿತ ರಾಹುಲ ಸಾಂಕೃತ್ಯಾಯನ (1893-1963)ರ ಬದುಕು ಮತ್ತು ಬರಹ ಒಬ್ಬ ಲೇಖಕನ ಸಾಧ್ಯತೆಗಳ ಬಗ್ಗೆ ಇರುವ ಇದುವರೆಗಿನ ಕಲ್ಪನೆಗಳಿಗೊಂದು ದೊಡ್ಡ ಸವಾಲು. ಈ ಜಗತ್ತು ಕಂಡ ಅಪರೂಪದ ‘ಮಹಾಕಾವ್ಯಾತ್ಮಕ’ ವ್ಯಕ್ತಿತ್ವ ಅವರದು. ಧರ್ಮ-ದರ್ಶನ, ರಾಜಕೀಯ, ಇತಿಹಾಸ, ಪುರಾತತ್ವ, ಸಾಹಿತ್ಯ ಭಾಷೆ, ಸಂಶೋಧನೆ-ಇತ್ಯಾದಿ ನಾನಾ ಕ್ಷೇತ್ರಗಳಲ್ಲಿ ಅದ್ಭುತ ಕೊಡುಗೆಯನ್ನಿತ್ತ ರಾಹುಲ್ ಒಂದು ಮಹಾವಿಸ್ಮಯ. ಅವರಿಗೆ ಮುವತ್ತಾರು ಭಾಷೆಗಳು ತಿಳಿದಿದ್ದುವು. ನೂರೈವತ್ತಕ್ಕೂ ಮಿಕ್ಕಿ ಅವರ ಕೃತಿಗಳು ಪ್ರಕಟವಾಗಿದ್ದರೆ, ಅಪ್ರಕಟಿತ ಸಾಕಷ್ಟಿವೆ. ಒಬ್ಬ ವ್ಯಕ್ತಿಯಾಗಿ ಒಂದು ವಿಶ್ವವಿದ್ಯಾಲಯಕ್ಕೂ ಅಸಂಭವವೆನಿಸುವಂತೆ ನಾಲ್ಕು ಕೋಶಗ್ರಂಥಗಳನ್ನು ರಚಿಸಿದವರು ರಾಹುಲರು (ಶಾಸನ ಶಬ್ದಕೋಶ, ಟಿಬೇಟ್ ಹಿಂದಿಕೋಶ್, ಟಿಬೇಟ್ ಸಂಸ್ಕೃತಕೋಶ್, ರಾಷ್ಟ್ರ ಭಾಷಾಕೋಶ್). ತ್ರಿಪಿಟಕಗಳ ಹಾಗೂ ಬೌದ್ಧದಾರ್ಶನಿಕ ಕೃತಿಗಳ ಮಹಾನ್ ಸಂಪಾದಕರು. ‘ದರ್ಶನ ದಿಗ್ದರ್ಶನ’ ಅವರು ಬರೆದ ತತ್ವಶಾಸ್ತ್ರದ ಮೇರುಕೃತಿ. ಕಾಶಿಯ ವಿದ್ಯಾಪೀಠವೇ ಇವರ ಅಗಾಧ ಸಂಸ್ಕೃತ ಪಾಂಡಿತ್ಯಕ್ಕೆ ‘ಮಹಾಪಂಡಿತ’ ಎಂಬ ಬಿರುದನ್ನಿತ್ತಿದೆ. ಶ್ರೀಲಂಕಾ ಬೌದ್ಧ ವಿಶ್ವವಿದ್ಯಾಲಯ ‘ತ್ರಿಪಿಟಕಾಚಾರ್ಯ’ ಎಂಬ ಪ್ರಶಸ್ತಿಯನ್ನಿತ್ತು ಗೌರವಿಸಿತ್ತು. ಮಹಾನ್ ಪರ್ಯಟಕ, ಪುರಾತತ್ವವೇತ್ತ, ಸಾಹಿತ್ಯ ವಾಚಸ್ಪತಿ, ಪದ್ಮವಿಭೂಷಣ, ಮಹಾಪಂಡಿತ ರಾಹುಲ ಸಾಂಕೃತ್ಯಾಯನರ ಕೃತಿಗಳ ಸಂಖ್ಯೆ ಅಗಾಧ. 1994ರಲ್ಲಿ ಡೆಲ್ಲಿಯ ರಾಧಾಕೃಷ್ಣ ಪ್ರಕಾಶನವು ದೊಡ್ಡ ಗಾತ್ರದ ಐವತ್ತು ಖಂಡಗಳಲ್ಲಿ ರಾಹುಲರ ಕೃತಿಗಳನ್ನು ಪ್ರಕಟಿಸಿದೆ. ಆದರೆ, ಅಪ್ರಕಟಿತ ಇನ್ನೂ ಸಾಕಷ್ಟಿವೆ. ಖೇದದ ವಿಷಯವೆಂದರೆ ಪ್ರಕಟಿತ ಖಂಡಗಳಲ್ಲಿ ಹಲವು ಈಗ ಉಪಲಬ್ಧವಿಲ್ಲ.
ಪ್ರಸ್ತುತ ಲೇಖನ ಖಂಡ 2 ಭಾಗ 1 (ಜೀವನ ಚರಿತ್ರೆ ಮತ್ತು ಸಂಸ್ಮರಣ)ದ “ಜಿನ್ಕಾ ಮೈ ಕೃತಜ್ಞ್” ಮಾಲೆಯಲ್ಲಿ 34ನೇ ಲೇಖನ ಡಾ| ಅನಂತರಾಮ ಭಟ್ಟರ ದುರಂತ ಕಥನ. ಇದು ಪುಟ 685 ರಿಂದ 692ರಲ್ಲಿದೆ. ಅದರ ಪೂರ್ತಿ ಕನ್ನಡ ಅನುವಾದ ತಮ್ಮ ಮುಂದಿದೆ.
ಹಿಂದಿ ಮೂಲ: ಮಹಾಪಂಡಿತ ರಾಹುಲ ಸಾಂಕೃತ್ಯಾಯನ
ಕನ್ನಡಕ್ಕೆ : ಡಾ| ಜಿ. ಭಾಸ್ಕರ ಮಯ್ಯ
ಕೊಡವೂರು ಶ್ರೀ ಅನಂತರಾಮ ಭಟ್ಟರನ್ನು ನಾನು ಮೊದಲು ಭೇಟಿಯಾದದ್ದು 1928ನೆಯ ಇಸವಿಯಲ್ಲಿ. ಕೊಲೊಂಬೋದಲ್ಲಿ. ಒಬ್ಬ ಪಂಡಿತ ಭಿಕ್ಷು ನನ್ನೊಡನೆಂದ – ‘ನಮ್ಮಲ್ಲಿ ಜಂಬೂ ದ್ವೀಪದ ಒಬ್ಬ ಪಂಡಿತರು ಇದ್ದಾರೆ.’ ಇದನ್ನು ಕೇಳಿ ನಾನು ಅಲ್ಲಿಗೆ ಹೋದೆ. ಇಪ್ಪತ್ತು ವರ್ಷದ ಒಬ್ಬ ತರುಣನೊಂದಿಗೆ ನನ್ನ ಭೇಟಿಯಾಯ್ತು – ಅನಂತರಾಮ ಹುಟ್ಟಿದ್ದು ಫೆಬ್ರವರಿ 7, 1908. ಆತ ಸಂಸ್ಕೃತವನ್ನು ಮಾತೃಭಾಷೆಯ ಹಾಗೆ ಮಾತನಾಡುತ್ತಿದ್ದ. ಆನಂತರ ಪರಸ್ಪರ ಭೇಟಿಯಾಗುತ್ತಿದ್ದೆವು. ಅದು ಆಳವಾದ ಮೈತ್ರಿಯನ್ನೇ ಉಂಟುಮಾಡಿತು.
ಅನಂತರಾಮ ಮದ್ರಾಸಿನ ದಕ್ಷಿಣಕನ್ನಡ ಜಿಲ್ಲೆಯ ಉಡುಪಿಯವರಾಗಿದ್ದರು.ಅವರ ಮಾತೃಭಾಷೆ ಕನ್ನಡ. ಮಾಧ್ವ ಸಂಪ್ರದಾಯದ ವೈಷ್ಣವ ಬ್ರಾಹ್ಮಣ. ಅವರು ಬಾಲ್ಯದಿಂದಲೇ ಸಂಸ್ಕೃತ ಓದಿದವರು. ಸಾಹಿತ್ಯದಲ್ಲಿ ವಿಶೇಷ ಪಾಂಡಿತ್ಯ ಪಡೆದವರು. ಮೈಸೂರಿನಲ್ಲಿ ಓದು ಮುಗಿಸಿದ ನಂತರ ಅವರಿಗೆ ಅನ್ನಿಸಿದ್ದೇನೆಂದರೆ ಸಂಸ್ಕೃತ ವಿದ್ವಾಂಸನಿಗೆ ಮಾರುಕಟ್ಟೆಯಲ್ಲಿ ಯಾವ ಬೆಲೆಯೂ ಇಲ್ಲ. ಇಂಗ್ಲಿಷ್ ಓದಿದರೆ ಬೆಲೆ ಹೆಚ್ಚಾಗುತ್ತದೆ. ಇಂಗ್ಲಿಷ್ ಓದಿ ಮೆಟ್ರಿಕ್ ಪರೀಕ್ಷೆಗೆ ಕುಳಿತರು. ಆದರೆ ತೇರ್ಗಡೆಯಾಗಲಿಲ್ಲ. ಮುಂದಿನ ವರ್ಷವೂ ಇದೇ ಗತಿ ಎಂದು ಅನ್ನಿಸಿತು. ಯಾರೋ ಹೇಳಿದರು … ಸಿಲೋನಿನಲ್ಲಿ ನೇರವಾಗಿ ಲಂಡನ್ ಯುನಿವರ್ಸಿಟಿಯ ಪರೀಕ್ಷೆಗೆ ಕುಳಿತುಕೊಳ್ಳಲಿಕ್ಕಾಗುತ್ತದೆ. ಅದರ ಬೆಲೆ ಭಾರತೀಯ ಡಿಗ್ರಿಗಳಿಗಿಂತ ಹೆಚ್ಚು. ಹೇಗೋ ಮಾಡಿ ಅವರು ಸಿಲೋನಿಗೆ ಬಂದರು. ಸಿಲೋನಿನ ಮಹಾಸ್ಥವಿರ ಧರ್ಮಸ್ಕಂಧರನ್ನು ಭೇಟಿ ಮಾಡಿದರು. ಅವರು ಅನಂತರಾಮ ಅವರನ್ನು ತಮ್ಮ ಬಳಿ ಸೇರಿಸಿಕೊಂಡರು. ಮಹಾಸ್ಥವಿರರದ್ದು ಒಂದು ಸಣ್ಣ ವಿಹಾರ. ಅದರಲ್ಲಿ ನಾಲ್ಕಾರು ಭಿಕ್ಷುಗಳು ವಾಸಿಸುತ್ತಿದ್ದರು. ಭಟ್ಟರ ವಿದ್ಯೆಯ ಪೂರ್ಣ ಉಪಯೋಗ ಅಲ್ಲಿ ಆಗುತ್ತಿರಲಿಲ್ಲ. ಆದರೆ, ಅಲ್ಲಿ ಇರುವುದರಿಂದ ವಾಸ ಮತ್ತು ಊಟದ ಚಿಂತೆ ನೀಗಿತು. ಮಹಾಸ್ಥವಿರರು ಆಗಾಗ್ಗೆ ಒಂದು ನಾಲ್ಕು ಪುಟದ ಸಂಸ್ಕೃತದ ಪತ್ರಿಕೆ ಪ್ರಕಟಿಸುತ್ತಿದ್ದರು. ಭಟ್ಟರು ಅದರಲ್ಲಿ ಬರೆಯ ತೊಡಗಿದರು.
ಮತ್ತಷ್ಟು ಓದು 
ವಾಲ್ಮೀಕಿ ರಾಮಾಯಣದ ಕ್ಷೇಪಕಗಳು
– ಡಾ| ಜಿ. ಭಾಸ್ಕರ ಮಯ್ಯ
ಕ್ಷೇಪಕವೆಂದರೆ ನಂತರ ಸೇರಿಸಿದ್ದು.ಒಂದೊ ನಿಂದಿಸಲು ಅಥವಾ ವೈಭವೀಕರಿಸಲು ಅಥವಾ ಮೌಖಿಕ ರೂಪದಲ್ಲಿರುವ ಕಾವ್ಯವು ಸಹಜವಾಗಿಯೇ ಕಾಲಧರ್ಮಪ್ರಭಾವದಿಂದ ಜನರ ರುಚಿಸ್ವಾದ ಮತ್ತು ವಾಚಕರ ಪ್ರತಿಭೆಗನುಸರಿಸಿ ಭಾವಧರ್ಮಪರಿವರ್ತನೆಗಳಾಗುತ್ತಾ ಇರುತ್ತವೆ. ಐತಿಹಾಸಿಕ ಕಾಲಗಣನೆಯ ಪ್ರಕ್ರಿಯೆಯಲ್ಲಿ ಇಂಥವುಗಳಲ್ಲಿ ವಿದ್ವಾಂಸರು ಸಾಧಾರಣವಾಗಿ ಯಾವುದು ಪ್ರಕ್ಷಿಪ್ತ ಮತ್ತು ಯಾವುದು ಮೂಲವೆಂಬುದನ್ನು ಶೋಧಿಸುತ್ತಾರೆ.
ರಾಮಾಯಣದಲ್ಲಿರುವ ಒಟ್ಟು 7 ಕಾಂಡಗಳಲ್ಲಿ ಮೊದಲ ಮತ್ತು ಕೊನೆಯದು (1 ಮತ್ತು 7) ನಂತರ ಸೇರಿಸಲ್ಪಟ್ಟವುಗಳೆಂದು ಇಂದು ನಿರ್ವಿವಾದವಾಗಿ ವಿದ್ವತ್ವಲಯದಲ್ಲಿ ಸಿದ್ಧವಾದ ವಿಚಾರ. ಮೂಲಭಾರತವು ರಾಮಾಯಣಕ್ಕಿಂತ ಹಳೆಯದು. ವೇದದಲ್ಲಿ ರಾಮಾಯಣದ ಸುದ್ದಿಯೇ ಇಲ್ಲ; ಭಾರತದ ಸುಳಿವಿದೆ. ತ್ರಿಪಿಟಕಗಳಲ್ಲಿ ರಾಮಾಯಣದ ಪ್ರಸ್ತಾಪವಿಲ್ಲ. ಪಾಣಿನಿಯೂ ರಾಮಾಯಣವನ್ನು ಉದಾಹರಿಸುವುದಿಲ್ಲ. ಹಾಗಾಗಿ ಕ್ರಿ.ಪೂ. 3ನೆಯ ಶತಮಾನಕ್ಕಿಂತ ಹಿಂದೆ ರಾಮಾಯಣದ ರಚನೆಯಾಗಿರುವ ಸಂಭವವೇ ಇಲ್ಲ.
ರಾಮಾಯಣವು ಮೌಖಿಕ ಕಾವ್ಯ. ಅದು ಬರವಣಿಗೆಗೆ ಬಂದುದು ಕ್ರಿಸ್ತಶಕದ ನಂತರ.ಆ ಮುಂಚೆಯೂ ಆನಂತರವೂ ಎಷ್ಟೆಷ್ಟೋ ಅಂಶಗಳು ಅದರಲ್ಲಿ ಸೇರ್ಪಡೆಯಾಗಿವೆ. ವಾಲ್ಮೀಕಿಯದ್ದೆಂದು ಹೇಳಲಾಗುವ ಪ್ರಖ್ಯಾತ ಸಂಸ್ಕೃತ ರಾಮಾಯಣವು ಕ್ರಿ.ಪೂ. 2-3ರಲ್ಲಿ ರಚಿಸಲ್ಪಟ್ಟಿರಬಹುದು; ಬರೆಯಲ್ಪಟ್ಟಿರುವುದಿಲ್ಲ. ಹೊಸ ಸೇರ್ಪಡೆಗಳು ಅಂದರೆ ಪ್ರಕ್ಷಿಪ್ತಗಳು ಹೇರಳವಾಗಿ ತುಂಬಿಸಲ್ಪಟ್ಟು ಇಂದು ಉಪಲಬ್ಧ ವಾಲ್ಮೀಕಿ ರಾಮಾಯಣ ಒಂದಾದರೆ, ಬೇರೆ ಸಾವಿರಾರು ರಾಮಾಯಣಗಳೂ ಅಸ್ತಿತ್ವದಲ್ಲಿವೆ. ರಾಮನ ತಂಗಿ ಸೀತೆ ಎಂಬ ರಾಮಾಯಣವೂ ಇದೆ. ರಾವಣನನ್ನು ಕೊಂದವ ರಾಮನಲ್ಲ, ಲಕ್ಷ್ಮಣನೆಂತಲೂ ಇದೆ. ಅದಕ್ಕಾಗಿ ಆತ ನರಕಕ್ಕೆ ಹೋಗುತ್ತಾನೆ ಎಂತಲೂ ಜೈನ ‘ಪವುಮ ಚರಿತ’ ಹೇಳುತ್ತದೆ. ಎ.ಕೆ. ರಾಮಾನುಜನ್ ಸಂಗ್ರಹಿಸಿಕೊಟ್ಟ 300 ರಾಮಾಯಣಗಳಲ್ಲಿ ಒಂದು ಜಾನಪದ ರಾಮಾಯಣದಲ್ಲಿ ಸೀತೆ ರಾವಣನನ್ನು ಎಷ್ಟು ಮೋಹಿಸಿದ್ದಳೆಂದರೆ ಆಕೆ ಆತನ ಚಿತ್ರವನ್ನೂ ಬಿಡಿಸಿ ಅನಾಹುತ ಮಾಡಿಕೊಳ್ಳುತ್ತಾಳೆ. ಹೀಗಾಗಿ ರಾಮಾಯಣ ಯಾರ ಆಸ್ತಿಯೂ ಅಲ್ಲ, ಹಾಗೆಯೇ ಎಲ್ಲರ ಆಸ್ತಿಯೂ ಹೌದು.
ಏನೇ ಇರಲಿ, ವಾಲ್ಮೀಕಿ ರಾಮಾಯಣವನ್ನು ನಾವು ಒಂದು ಶ್ರೇಷ್ಠ ಮಹಾಕಾವ್ಯವೆಂದು ಭಾವಿಸುವುದಾದರೆ ಅದರಲ್ಲಿ ರಾಮನ ಉಜ್ವಲ ವ್ಯಕ್ತಿತ್ವಕ್ಕೆ ಕಳಂಕವನ್ನುಂಟು ಮಾಡುವ ಅಂಶಗಳನ್ನು ಪ್ರಕ್ತಿಪ್ತವೆಂದು ಕಿತ್ತೊಗೆಯಲೇ ಬೇಕು.
1) ಸೀತಾಪರಿತ್ಯಾಗ 2) ಶಂಬೂಕವಧ ಮತ್ತು 3) ಲವಕುಶರೊಡನೆ ರಾಮನ ಯುದ್ಧ – ಈ ಮೂರು ಅಸಂಬದ್ಧ ಮತ್ತು ಪ್ರಕ್ಷಿಪ್ತವೆಂದು ವೈದಿಕ ಜ್ಞಾನ ವಿಜ್ಞಾನ ಕೋಶದಲ್ಲೇ ಸ್ಪಷ್ಟೀಕರಿಸಲಾಗಿದೆ (ವೈದಿಕ ಜ್ಞಾನ ವಿಜ್ಞಾನ್ ಕೊಷ್: ಡಾ|| ಮನೋದತ್ತ ಪಾಠಕ್, ಪುಟ 252-254) :-
ಮತ್ತಷ್ಟು ಓದು 
2015 ರ ಆಳ್ವಾಸ್ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಸಿಂಗ್ ಬಾಬು ಅವರೊಂದಿಗೆ ಸಂದರ್ಶನ
ಸಂದರ್ಶನ : ಪ್ರಕಾಶ್.ಡಿ.ರಾಂಪೂರು,ರಮೇಶ್ ಕೆ.ಆರ್,ವೀರೇಶ್
ಚಿತ್ರ : ಶ್ರೀಧರ್ ಬಳ್ಳಾರಿ
ಕನ್ನಡ ಚಿತ್ರ ರಂಗದಲ್ಲಿ ಸುಮಾರು 39 ವರ್ಷಗಳ ಕಾಲ ಸಿನೆಮಾ ರಂಗದಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ತನ್ನದೇ ಆದ ಛಾಪನ್ನು ಮೂಡಿಸಿ ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ತಮ್ಮ ಹೆಸರನ್ನು ಗುರುತಿಸಿಕೊಂಡಿರುವ ಪ್ರಸ್ತುತ ಕನ್ನಡ ಚಲನಚಿತ್ರೋದ್ಯಮದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ರಾಜೇಂದ್ರ ಸಿಂಗ್ ಬಾಬು 2015 ರ ಆಳ್ವಾಸ್ ನುಡಿಸಿರಿಯ “ಆಳ್ವಾಸ್ ಪ್ರಶಸ್ತಿ” ಸ್ವೀಕರಿಸುವ ಮುನ್ನ ಪತ್ರಿಕೋದ್ಯಮ ವಿದ್ಯಾರ್ಥಿಗಳು ನಡೆಸಿದ ಸಂದರ್ಶನ..
ಪ್ರ: ಕನ್ನಡ ಚಿತ್ರ ರಂಗಕ್ಕೆ ಬಂದು ಮೊದಲ ಬಾರಿಗೆ ನಾಗರಹೊಳೆ ಅನ್ನೋ ಚಿತ್ರವನ್ನು ಮಾಡಿದಿರಿ. ನಿಮ್ಮ ಈ ಮೊದಲ ಚಿತ್ರ ಹಿಟ್ ಆಯಿತು ಇದರ ಬಗ್ಗೆ ನಿಮ್ಮ ಮಾತು?
ನಮ್ಮ ತಂದೆಯವರ ಕಾಲದಿಂದಲೂ ನಾನು ಸಿನೆಮಾ ಕ್ಷೇತ್ರದಲ್ಲಿದ್ದು, ಅವರನ್ನು ನೋಡಿ ಕಲಿತ ವಿಷಯಗಳನ್ನು ಸೇರಿಸಿ ಜನರಿಗೆ ಹೊಸ ರೀತಿಯ ಸಿನೆಮಾಗಳನ್ನು ಕೊಡಬೇಕು ಅಂತಾ ಅಂದುಕೊಂಡಿದ್ದೆ. ಆ ಸಂಧರ್ಭದಲ್ಲಿ ನನ್ನ ತಲೆಗೆ ಬಂದಿದ್ದು ನಾಗರಹೊಳೆ ಅನ್ನೋ ಚಿತ್ರ. ಅಲ್ಲಿಯವರೆಗೆ ಮಕ್ಕಳ ಪ್ರಧಾನ ಚಿತ್ರಗಳೇ ಇರಲಿಲ್ಲ. ಅದನ್ನು ನಾನು ಉಪಯೋಗ ಮಾಡಿಕೊಂಡೆ. ಸಿನೆಮಾ ಕೂಡ ಅದ್ಬುತ ಯಶಸ್ಸು ಖಂಡಿತು.
ಮತ್ತಷ್ಟು ಓದು 
ಹೊಸತನದ ಹುಡುಕಾಟ ಇಂದಿನ ಅಗತ್ಯತೆ: ಡಾ.ಎಂ.ಮೋಹನ್ ಆಳ್ವ
– ಶ್ರೀಗೌರಿ ಎಸ್.ಜೋಶಿ,ಪತ್ರಿಕೋದ್ಯಮ ವಿಭಾಗ
ಆಳ್ವಾಸ್ ಕಾಲೇಜು,ಮೂಡುಬಿದಿರೆ
ನೇರಸಂದರ್ಶನದಲ್ಲಿ ಮಹತ್ವದ ವಿಚಾರಗಳನ್ನು ತೆರೆದಿಟ್ಟ `ಮೂಡುಬಿದಿರೆಯ ಕನಸುಗಾರ’
`ಕನ್ನಡಭಾಷೆಯನ್ನು ಬೆಳೆಸುವ, ಕನ್ನಡ ಕಟ್ಟುವ ಕಾರ್ಯಗಳನ್ನು ಕೇವಲ ಸರಕಾರ, ಅಕಾಡೆಮಿಗಳೇ ಏಕೆ ಮಾಡಬೇಕು?ಕನ್ನಡ ಮನಸ್ಸುಗಳನ್ನು ಕಟ್ಟುವ ಕೈಂಕರ್ಯ ಒಬ್ಬ ಶ್ರೀಸಾಮಾನ್ಯನಿಂದ ಏಕೆ ಆಗಬಾರದು?’ ಎಂಬ ಆಶಯದೊಂದಿಗೆ ಆರಂಭವಾದ ಕನ್ನಡದ ಹಬ್ಬ `ಆಳ್ವಾಸ್ ನುಡಿಸಿರಿ’. ಈ ಕನ್ನಡ ಉತ್ಸವದ ರೂವಾರಿ `ಸಂಸ್ಕೃತಿಯ ಹರಿಕಾರ’ ಎಂದೇ ಖ್ಯಾತರಾದ ಡಾ.ಎಂ. ಮೋಹನ್ ಆಳ್ವರು. ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯಕತೆಗಳಿಗೆ ತಕ್ಕಂತೆ ಹೊಸತನಗಳಿಗೆ ಸ್ಪಂದಿಸುವುದು ಅಗತ್ಯವೆಂದು ಹೇಳುವ ಡಾ.ಆಳ್ವರು `ಕರ್ನಾಟಕ:ಹೊಸತನದ ಹುಡುಕಾಟ’ ಎಂಬ ಮುಖ್ಯ ಪರಿಕಲ್ಪನೆಯಡಿಯಲ್ಲಿ ಈ ಸಲದ ನುಡಿಸಿರಿಯನ್ನು ಆಯೋಜಿಸಿದ್ದಾರೆ. ಹೊಸತನ ಎಂದರೇನು, ಹೊಸತನದಡಿಯಲ್ಲಿ ನುಡಿಸಿರಿಯ ಆಯಾಮಗಳೇನು ಎಂಬುದರ ಕುರಿತು ಅವರು ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದ್ದು ಹೀಗೆ…
ಪ್ರ: `ಆಳ್ವಾಸ್ ನುಡಿಸಿರಿ’ ಪ್ರತಿಸಲವೂ `ಕನ್ನಡ ಮನಸ್ಸು’ ಎಂಬ ಮುಖ್ಯ ಪರಿಕಲ್ಪನೆಯಡಿಯಲ್ಲಿ ನಡೆಯುತ್ತಿತ್ತು.ಆದರೆ ಈ ಸಲದ ಕೇಂದ್ರ ವಿಷಯವನ್ನು `ಕರ್ನಾಟಕ: ಹೊಸತನದ ಹುಡುಕಾಟ’ ಎಂದು ಬದಲಾಯಿಸಿದ್ದೀರಿ. ಈ ಬದಲಾವಣೆಯ ಹಿನ್ನೆಲೆಯೇನು?
12 ವರ್ಷಗಳಿಂದ ಕನ್ನಡ ಮನಸ್ಸನ್ನು ಕೇಂದ್ರವಾಗಿಟ್ಟುಕೊಂಡು ಬೇರೆ ಬೇರೆ ಪರಿಕಲ್ಪನೆ ಕೊಟ್ಟಿದ್ದೇವೆ. ಆಳ್ವಾಸ್ ವಿಶ್ವನುಡಿಸಿರಿ-ವಿರಾಸತ್ ಸಂದರ್ಭದಲ್ಲಿ ಮುಖ್ಯ ವಿಷಯ `ಕನ್ನಡ ಮನಸ್ಸು: ಅಂದು, ಇಂದು, ಮುಂದು’ ಎಂದಿತ್ತು.ಈ ಸಲದ ಕೇಂದ್ರ ವಿಷಯವನ್ನು `ಕರ್ನಾಟಕ: ಹೊಸತನದ ಹುಡುಕಾಟ’ ಎಂದು ಬದಲಾಯಿಸಲಾಗಿದೆ. ಏಕೆಂದರೆ ನಮ್ಮ ಬದುಕು, ಸಂಸ್ಕೃತಿ ನಿಂತ ನೀರಾಗಬಾರದು. ನಾವು ಯಾವತ್ತೂ ಹೊಸತನದ ಹುಡುಕಾಟದಲ್ಲಿರಬೇಕು. ಇಲ್ಲದಿದ್ದರೆ ನಾವು ಸವಕಲು ನಾಣ್ಯಗಳಾಗುತ್ತೇವೆ. ಹೊಸತನದೊಟ್ಟಿಗೆ ಹೋದಾಗ ಮಾತ್ರ ನಾವು ಚಲಾವಣೆಯಲ್ಲಿರುವ ನಾಣ್ಯಗಳಾಗುತ್ತೇವೆ. ಹೊಸತನದ ಹುಡುಕಾಟ ಇಂದಿನ ಅಗತ್ಯತೆ. ಕಾಲಕ್ಕೆ ಸರಿಯಾಗಿ ನಾವು ಸ್ಪಂದಿಸಬೇಕು ಹಾಗೂ ಅತ್ಯಂತ ಅವಶ್ಯಕವೂ ಹೌದು. ಈ ದೃಷ್ಟಿಯಲ್ಲಿ ನಾವು ನುಡಿಸಿರಿಯ ಕೇಂದ್ರ ವಿಷಯವನ್ನು `ಕರ್ನಾಟಕ:ಹೊಸತನದ ಹುಡುಕಾಟ’ ಎಂದು ಬದಲಾಯಿಸಿದ್ದೇವೆ.
ಮತ್ತಷ್ಟು ಓದು 
“ನುಡಿಸಿರಿ” ಮತ್ತು ಮೊಸರಲ್ಲಿ ಕಲ್ಲು ಹುಡುಕುವ ಮನಸ್ಥಿತಿ
– ಗುರುಪ್ರಸಾದ್ ಆಚಾರ್ಯ
” ಆಳ್ವಾಸ್ ನುಡಿಸಿರಿ ” ಮತ್ತು ” ಆಳ್ವಾಸ್ ವಿರಾಸತ್ ” ಈ ಎರಡು ಸಾಂಸ್ಕೃತಿಕ ಹಬ್ಬಗಳ ಹೆಸರು ಕೇಳದ ಜನರು ತೀರಾ ವಿರಳ ಅಂತನೇ ಹೇಳಬೇಕು, ಆ ಮಟ್ಟಿಗೆ ಅದು ಜನರ ಗಮನ ಸೆಳೆದಿದೆ. ಬರಿಯ ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟಕ್ಕೂ ತನ್ನ ಖ್ಯಾತಿಯನ್ನ ವಿಸ್ತರಿಸಿ ಅದರಾಚೆಗೂ ತನ್ನ ಛಾಪು ಮೂಡಿಸಿದೆಯೆಂದರೆ ಅದರ ಸ್ವರೂಪ, ವೈಶಿಷ್ಟ್ಯತೆ ಹೇಗಿದ್ದರಬೇಡ. ಇವೆರಡರ ಕಲ್ಪನೆಯೇ ವಿಶಿಷ್ಟವಾದದ್ದು ” ನುಡಿಸಿರಿ ” ಅನ್ನೋದು ನಮ್ಮ ನಾಡಿನ ನುಡಿಗಾಗಿ ಮೀಸಲಿಟ್ಟ ಕಾರ್ಯಕ್ರಮವಾದರೆ ” ವಿರಾಸತ್ ” ನಮ್ಮ ಸಾಂಸ್ಕೃತಿಕ ವೈಭವಕ್ಕೆ ಹಿಡಿದ ಕೈಗನ್ನಡಿ. ಪಾಶ್ಚಿಮಾತ್ಯ ಸಂಸ್ಕೃತಿ ಮತ್ತು ಭಾಷೆ ಇವೆರಡರ ಕಬಂಧ ಬಾಹುಗಳ ಬಂಧನದಲ್ಲಿರೋ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಈ ಎರಡೂ ಕಾರ್ಯಕ್ರಮಗಳೇ ಆಶಾಕಿರಣ. ಅಷ್ಟಾಗಿದ್ದೂ ಈ ನುಡಿಸಿರಿಯ ಬಗ್ಗೆ ಅಪಸ್ವರ ಏಳುತ್ತಿದೆ ಅಂದರೆ ಅದನ್ನ ದುರಂತವೆನ್ನದೆ ಇನ್ನೇನನ್ನಲಿ…??
ಬಹುಶಃ ಕಳೆದ ಬಾರಿಯೇ ಇದ್ದಿರಬೇಕು…. ತೀರಾ ಹಿಂದುಳಿದ ವರ್ಗದ ಸಾಂಸ್ಕೃತಿಕ ಕಲಾಪ್ರಕಾರವೊಂದನ್ನ ಅಳವಡಿಸಿಕೊಂಡಿದ್ದಕ್ಕೆ ಅಪಸ್ವರವೊಂದು ಕೇಳಿ ಬಂದಿತ್ತು. ಕಾರಣ ಆ ಕಲಾವಿದರು ತಮ್ಮ ಮೈ ಮತ್ತು ಮುಖಕ್ಕೆ ಪೂರ್ತಿ ಕಪ್ಪು ಬಣ್ಣ ಬಳಿದುಕೊಂಡಿದ್ದರು.ಭಾರತದಲ್ಲಿ ಕಲಾ ಪ್ರಕಾರಗಳು ಲೆಕ್ಕವಿಲ್ಲದಷ್ಟಿದೆ ಅನ್ನೋದು ನಮಗೆಲ್ಲಾ ಗೊತ್ತಿದ್ದ ವಿಷಯವೇ.ಪ್ರತಿಯೊಂದು ಜನಾಂಗಕ್ಕೂ ಅದರದೇ ಆದ ಸಾಂಸ್ಕೃತಿಕ ಆಚರಣೆಗಳಿರುತ್ತದೆ.ಆ ಜನಾಂಗಕ್ಕೆ ಆ ಕಲಾ ಪ್ರಕಾರದ ಕುರಿತು ಅಭಿಮಾನವಿದ್ದೇ ಇರುತ್ತದೆ, ಇಂಥಾದ್ದರಲ್ಲಿ ಆ ಕಲಾ ಪ್ರಕಾರ ಉಳಿಯಲಿ ಅನ್ನುವ ನಿಟ್ಟಿನಲ್ಲಿ ಅಂತಾ ಕಲಾವಿದರನ್ನ ಕರೆದು ಅವರಿಗೊಂದು ವೇದಿಕೆ ಕಲ್ಪಿಸಿಕೊಟ್ಟು ಆ ಕಲೆಯನ್ನೂ ಉಳಿಸುವ ಪ್ರಯತ್ನ ಪಟ್ಟ ಮೋಹನ್ ಆಳ್ವಾರವರು ಟೀಕೆಗೊಳಪಡುತ್ತಾರೆ.ಅದು ಆ ಜನಾಂಗದ ನಿಂದನೆ ಎಂಬಂತೆ ಲೇಖನ ಬರೆಯುತ್ತಾರೆ.ವಾಸ್ತವದಲ್ಲಿ ” ಜನಾಂಗೀಯ ನಿಂದನೆ ” ಅನ್ನೋ ಆರೋಪ ಹೊರಿಸಿದವರ್ಯಾರು ಆ ಕಲಾವಿದರನ್ನ ಮಾತಾಡಿಸಿ ಅವರ ಮನದ ಮಾತನ್ನ ತಮ್ಮ ಬರಹದ ಮೂಲಕ ಹೇಳಿದ್ದಲ್ಲ. ತಮಗೆ ತಾವೇ ಅದು ಜನಾಂಗೀಯ ಅವಹೇಳನ ಅನ್ನುವ ನಿರ್ಧಾರ ತೆಗೆದುಕೊಂಡು ಡಂಗುರ ಸಾರಿಬಿಟ್ಟಿದ್ದರು. ಆದರೆ ಅದೇ ಕಲಾ ಪ್ರಕಾರವನ್ನ ಖುದ್ದು ರಾಜ್ಯಸರ್ಕಾರವೇ ಒಮ್ಮೆ ಗಣರಾಜ್ಯೋತ್ಸವ ದಿನದ ಪೆರೇಡ್ ನಲ್ಲೋ ಅಥವಾ ದಸರಾ ಉತ್ಸವದಲ್ಲೂ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿತ್ತು. ಆವಾಗ ಏನೂ ಮಾತನಾಡದವರು ಆಳ್ವಾಸ್ ನುಡಿಸಿರಿಯಲ್ಲಿ ಇದನ್ನ ಕಂಡೊಂಡನೆ ಕೆಂಡ ತುಳಿದವರಂತೆ ಆಡತೊಡಗಿದ್ದಾದರೂ ಯಾಕೆ…? ಕಲಾವಿದರಿಗೆ ಮುನಿಸಿಲ್ಲ, ಕಲೆಯನ್ನ ಪೋಷಿಸೋರಿಗೂ ಕೀಳಾಗಿ ಕಾಣಿಸುವ ಯೋಚನೆ ಇಲ್ಲದಿರುವಾಗ ಮೂರನೆ ವ್ಯಕ್ತಿಗಳಿಂದ ಅಪಸ್ವರ ಬರುತ್ತಿರುವುದು ಯಾಕೆ…?
ಆಳ್ವಾಸ್ ನುಡಿಸಿರಿ : ನಮ್ಮ ಸಮೃದ್ಧ ಸಾಂಸ್ಕೃತಿಕ ಜೀವನದ ಅನಾವರಣ
– ಡಾ.ಎಂ.ಮೋಹನ್ ಆಳ್ವ
(ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ನಿಪ್ಪಾಣಿ ಹಾಗೂ ಸವದತ್ತಿ ತಾಲೂಕುಗಳಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು. ಈ ಘಟಕಗಳ ಕಾರ್ಯಕ್ರಮದಲ್ಲಿ ಡಾ.ಎಂ.ಮೋಹನ್ ಆಳ್ವರು ಆಳ್ವಾಸ್ ನುಡಿಸಿರಿಯ ಉದ್ದೇಶ, ಪ್ರಾಮುಖ್ಯತೆಗಳನ್ನು ಜನರೊಡನೆ ಮನಃಪೂರ್ವಕವಾಗಿ ಹಂಚಿಕೊಂಡರು. ಅವರ ಮನದಾಳದ ಮಾತುಗಳು ಹೀಗಿದ್ದವು )
ಭಾರತ ಎಲ್ಲಾ ವಿಧದಿಂದಲೂ ಸಂಪದ್ಭರಿತವಾದ ದೇಶ. ಈ ದೇಶದ ಸಾಂಸ್ಕೃತಿಕ ಹಿನ್ನೆಲೆ ಈ ಮಾತಿನಿಂದ ಹೊರತಾದುದಲ್ಲ. ಸಾಂಸ್ಕೃತಿಕವಾಗಿ ಅತ್ಯಂತ ಸಮೃದ್ಧವಾದ ದೇಶ ನಮ್ಮದು. ನಮಗಿರುವ ಸಾಂಸ್ಕೃತಿಕ ಹಿನ್ನೆಲೆ ಬೇರಾವ ದೇಶಕ್ಕೂ ಇಲ್ಲ. ಆದರೆ ಇಂದು ಈ ಎಲ್ಲಾ ಚಟುವಟಿಕೆಗಳ ಭಾರತೀಯರಾದ ನಮ್ಮಿಂದ ಎಲ್ಲೋ ದೂರ ಸರಿಯುತ್ತಿವೆ. ನಮ್ಮಿಂದ ಮರೆಯಾಗುತ್ತಿರುವ ಸಾಂಸ್ಕೃತಿಕ ಚಟುವಟಿಕೆಗಳನ್ನು ಉಳಿಸಿ, ಬೆಳೆಸಿ, ಆದರಿಸುವ ಕಾರ್ಯ ನಮ್ಮಿಂದಾಗಬೇಕಿದೆ. ಈ ಹಿನ್ನೆಲೆಯಲ್ಲಿ ನಾವು ಆರಂಭಿಸಿರುವ ಸಾಂಸ್ಕೃತಿಕ ಉತ್ಸವಗಳೇ `ಆಳ್ವಾಸ್ ನುಡಿಸಿರಿ’ ಹಾಗೂ `ಆಳ್ವಾಸ್ ವಿರಾಸತ್’ ಕಾರ್ಯಕ್ರಮಗಳು.
ಆಳ್ವಾಸ್ ನುಡಿಸಿರಿ ಕನ್ನಡ ಭಾಷೆಯ ಕುರಿತಾದ ರಾಷ್ಟ್ರೀಯ ನಾಡು-ನುಡಿಯ ಉತ್ಸವ. ಇದು ಆರಂಭವಾಗಿ 12 ವರ್ಷ ಸಂದಿವೆ. ಇನ್ನು ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ. ವಿರಾಸತ್ ಆರಂಭವಾಗಿ 22 ವರ್ಷ ಕಳೆದಿವೆ. ದೇಶ-ವಿದೇಶಗಳಲ್ಲಿರುವ ಕಲಾ ರಸಿಕರನ್ನು ಒಂದುಗೂಡಿಸುವ ಕಾರ್ಯ ಇದಾಗಿದೆ.
ಸಾಂಸ್ಕೃತಿಕ ಚಟುವಟಿಕೆಗಳು ಅತೀ ಮುಖ್ಯ
ನಾವು ಈ ಕಾರ್ಯಕ್ರಮಗಳನ್ನು ಮಾಡುವಾಗ ಸಾಕಷ್ಟು ಹಣ ಖರ್ಚಾಗುತ್ತದೆ. ನೀವು ವ್ಯರ್ಥ ಹಣ ಪೋಲು ಮಾಡುತ್ತೀರಿ ಎನ್ನುವವರೂ ಇದ್ದಾರೆ. ಆದರೆ ನಮ್ಮ ಸಾಂಸ್ಕೃತಿಕ ಹಿನ್ನೆಲೆಯನ್ನು ಕಾಪಾಡುವಾಗ ಇದು ಅನಿವಾರ್ಯ ಹಾಗೂ ಅವಶ್ಯಕ. ಇಂದು ಅನೇಕ ಜಾಗತಿಕ ಸವಾಲುಗಳು ನಮ್ಮೆದುರಿಗಿವೆ. ವಿದ್ಯಾರ್ಥಿಗಳು ಅವನ್ನು ಎದುರಿಸಲು ಯಾವಾಗಲೂ ತಯಾರಾಗಿರಬೇಕು. ಹಾಗಿರುವಾಗ ಕೇವಲ ಶೈಕ್ಷಣಿಕವಾಗಿ ಬಲವಾಗಿದ್ದರೆ ಸಾಲದು; ಮಾನಸಿಕವಾಗಿ, ಬೌದ್ದಿಕವಾಗಿ ಆ ಸವಾಲುಗಳನ್ನೆದುರಿಸುವ ಪ್ರೌಢಿಮೆ ನಮ್ಮ ಮಕ್ಕಳಿಗಿರಬೇಕು. ಮಸ್ಯೆಗಳಿಗೆ ಪರಿಹಾರ ಹುಡುಕುವ, ಕಾಲಕ್ಕೆ ತಕ್ಕಂತೆ ಬದಲಾಗುವ ಮಾನಸಿಕ ಸ್ಥಿತಿ ಇರಲೇಬೇಕು. ಈ ಹಿನ್ನೆಲೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಶ ಇರಬೇಕಾದುದು ಅತಿ ಮುಖ್ಯ. ಆದ್ದರಿಂದ ಇಂತಹ ಕಾರ್ಯಕ್ರಮಗಳು ಮಹತ್ವದ್ದೆನಿಸುತ್ತವೆ. ನಮ್ಮ ಸಸ್ಥೆಯಲ್ಲಿರುವ 22,000 ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಶ ನೀಡುವ ಕಾರ್ಯ ನಡೆದೇ ಇರುತ್ತದೆ. ನಮ್ಮ ವಿದ್ಯಾರ್ಥಿಗಳು ಎಲ್ಲ ರೀತಿಯಿಂದಲೂ ಸದೃಢರಾಗಿರಬೇಕೆಂಬ ಇರಾದೆ ನಮ್ಮದು. ಮತ್ತಷ್ಟು ಓದು 
ತುಳುನಾಡಿನ ಮಾರ್ನೆಮಿ ಆಚರಣೆ
– ಭರತೇಶ ಅಲಸಂಡೆಮಜಲು
ಪಿಲಿ, ಕೊರಗೆ, ಕರಡಿ, ಸಿಮ್ಮ ನಲಿತೋಂತಲ್ಲಗೆ,
ಪುರು ಬಾಲೆ, ಜೆತ್ತಿನಲ್ಲೇ ಇತ್ತಿ ಅಜ್ಜೆರ್ ಲಕ್ಕುತ್ ನಡತ್ತೆರ್ಗೆ,
ಊರುಗೂರೇ ಲಕ್ಕಂಡ್ ದೂಳು, ಚೆಂಡೆತ ಗದ್ದಾವುಗೂ,
ಬತ್ತಂಡ್ ಮಾರ್ನೆಮಿ ನಡತ್ತೊಂದು, ನಲಿತೊಂದು…..
(ಹುಲಿ, ಕೊರಗ,ಕರಡಿ, ಸಿಂಹ ಕುಣಿಯುತ್ತಿವೆ,
ಪುಟ್ಟ ಮಗು, ಮಲಗಿದ್ದಲ್ಲೇ ಇದ್ದ ಅಜ್ಜ ಎದ್ದು ನಡೆದರು,
ಚೆಂಡೆಯ ಸದ್ದಿಗೆ ಏದ್ದಿತ್ತು ದೂಳು ಊರೇಲ್ಲಾ,
ಬಂತು ನವರಾತ್ರಿ ನಡೆಯುತ್ತಾ, ಕುಣಿಯುತ್ತಾ…)
ತುಳುನಾಡಿನಲ್ಲಿ ನವರಾತ್ರಿ, ದಸರಾ,ದುರ್ಗಾ ಪೂಜೆಯು ಚಿರಪರಿಚಿತವಾಗಿ ಮಾರ್ನೆಮಿಯೆಂಬ ಹೆಸರಿನಿಂದ ದುರ್ಗೆಯರನ್ನು ಪೂಜಿಸಲಾಗುತ್ತದೆ. ಮಾರ್ನೆಮಿ ಅಂದ ಕೂಡಲೇ ಈ ಭಾಗದ ಅಬಾಲರಿಂದ ವೃದ್ಧ ಜನರ ಮೈ ಪುಳಕಗೊಳ್ಳುತ್ತದೆ ಮನ ಆರಳುತ್ತದೆ .ಒಂಬತ್ತು ದಿನಗಳ ಕಾಲ ಭರಪೂರ ಭಯ, ಭಕ್ತಿಯ ಮನರಂಜನೆ. ದೇವರು, ಪ್ರಾಣಿ, ಜನಾಂಗಗಳಿಗೆ ವೇಷವನ್ನು ಅರ್ವಿಭಾವಗೊಳಿಸಿ ಆ ತೆರದಲ್ಲಿ ನಟನೆ, ಹಾಸ್ಯ, ಮಾತಿನ ರಂಗು ನೀಡಿ ದುರ್ಗೆಯರ ಅರಾಧನೆ ಶುರುವಿಡುತ್ತದೆ, ದಕ್ಷಿಣದ ಜಿಲ್ಲೆಗಳ ಪ್ರಸಿದ್ಧ ದೇವಾಲಯಗಳಾದ ಮಂಗಳಾದೇವಿ, ಕಟೀಲು, ಬಪ್ಪನಾಡು, ಮಂದಾರ್ತಿ, ಕೊಲ್ಲೂರು, ಬೆಳ್ಳಾರೆಯ ಜಲದುರ್ಗೆ, ಭಗವತಿ ಹೀಗೆ ಹಲವಾರು ಹಳ್ಳಿಗೊಂದರಂತೆ, ಸೀಮೆಗೊಂದರಂತೆ ದುರ್ಗೆಯರ ದೇವಾಲಯಗಳು ಕಂಡುಬರುತ್ತದೆ, ಈ ದಿನಗಳಲ್ಲಿ ಮನೆ ಮನೆಗಳಲ್ಲಿ ಪೂಜೆ ನಡೆಯದಿದ್ದರೂ ದೇವಿಯ ಅರಾಧನೆ ಮಾಡುವ ಮನೆಗಳಲ್ಲಿ ಮತ್ತು ಸಿರಿ ದರ್ಶನವಿರುವ ಮನೆಗಳಲ್ಲಿ ಮಾರ್ನೆಮಿಯ ವಿಶೇಷ ಪೂಜೆ ನಡೆಸುತ್ತಾರೆ. ತುಳುನಾಡಿನ ಯಕ್ಷಗಾನ ಪ್ರಸಂಗಗಳಲ್ಲಿ ದುರ್ಗೆಯರ ಲೀಲೆಗಳನ್ನು ಮನೋಜ್ಞವಾಗಿ ಹಲವಾರು ಕ್ಷೇತ್ರ ಮಹಾತ್ಮೆಗಳು ಕಣ್ಣಿಗೆ ಕಟ್ಟಿಕೊಡುತ್ತದೆ.
ಆಳ್ವಾಸ್ ನುಡಿಸಿರಿ – 2015
– ಡಾ| ಎಂ.ಮೋಹನ ಆಳ್ವ
ಅಧ್ಯಕ್ಷರು,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ),ಮೂಡುಬಿದಿರೆ
ಮೂಡುಬಿದಿರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವು ನಡೆಸಿಕೊಂಡು ಬರುತ್ತಿರುವ ನಾಡು-ನುಡಿ-ಸಂಸ್ಕೃತಿಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಆಳ್ವಾಸ್ ನುಡಿಸಿರಿ. ಈ ಸಮ್ಮೇಳನವನ್ನು ಕಳೆದ 12 ವರ್ಷಗಳಿಂದ ಕನ್ನಡ ಬಾಂಧವರ ಸಹಕಾರದಿಂದ ನಿರಂತರವಾಗಿ ಸಂಘಟಿಸಿಕೊಂಡು ಬರುವ ಮೂಲಕ ನಾಡಿನಾದ್ಯಂತ ನಾಡು-ನುಡಿಯ ಎಚ್ಚರವನ್ನು, ಸಂಸ್ಕೃತಿ ಪ್ರೀತಿ-ಗೌರವಗಳನ್ನು ವೃದ್ಧಿಸಲು ಸಾಧ್ಯವಾಗಿದೆ. ಕನ್ನಡಿಗರ ಹೆಮ್ಮೆಯ ಈ ಕಾರ್ಯಕ್ರಮವು ಈ ವರ್ಷ ನವೆಂಬರ್ 26, 27, 28 ಮತ್ತು 29 (ಗುರುವಾರ, ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರ) ನೇ ದಿನಾಂಕಗಳಂದು ನಾಲ್ಕು ದಿನಗಳ ಕಾಲ ಮೂಡುಬಿದಿರೆಯ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ವಿಜೃಂಭಣೆಯಿಂದ ಜರುಗಲಿದೆ.
ಆಳ್ವಾಸ್ ನುಡಿಸಿರಿ ಉದ್ಘಾಟನೆಗೆ ನೂತನ ವೇದಿಕೆ
ನವೆಂಬರ್ 26 ರಂದು ಸಂಜೆ ಗಂಟೆ 6.00 ಕ್ಕೆ ಆಳ್ವಾಸ್ ನುಡಿಸಿರಿಯ ಉದ್ಘಾಟನೆಯು ಅದಕ್ಕೆಂದೇ ನಿರ್ಮಾಣವಾದ ವೇದಿಕೆಯಲ್ಲಿ ನಡೆಯಲಿದೆ. ಸುಮಾರು 20,000 ಪ್ರೇಕ್ಷಕರು ನೋಡಿ ಆನಂದಿಸಬಹುದಾದ ಬೃಹತ್ ಸಭಾಂಗಣವು ಇದಾಗಿದೆ. ಉಳಿದಂತೆ, 27, 28, 29ನೇ ದಿನಾಂಕಗಳಂದು ‘ಕರ್ನಾಟಕ : ಹೊಸತನದ ಹುಡುಕಾಟ’ ಎನ್ನುವ ಪ್ರಧಾನ ಪರಿಕಲ್ಪನೆಯಲ್ಲಿ ವಿವಿಧ ಗೋಷ್ಠಿಗಳು, ಸಂಸ್ಮರಣೆ, ಕವಿಸಮಯ-ಕವಿನಮನ, ವಿಶೇಷೋಪನ್ಯಾಸಗಳು ರತ್ನಾಕರವರ್ಣಿ ವೇದಿಕೆಯ ನುಡಿಸಿರಿ ಸಭಾಂಗಣದಲ್ಲಿ ನಡೆಯಲಿವೆ. 29ನೇ ದಿನಾಂಕದಂದು 3.00 ಗಂಟೆಗೆ ಸಮಾರೋಪ ಸಮಾರಂಭವು ಜರುಗಲಿದೆ.
ಆಳ್ವಾಸ್ ನುಡಿಸಿರಿ 2015ರ ಸರ್ವಾಧ್ಯಕ್ಷತೆಗೆ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀ ಆಯ್ಕೆ.
ಮತ್ತಷ್ಟು ಓದು 
ಡಾ. ಯು.ಆರ್ ಅನಂತಮೂರ್ತಿ ನೆನಪಿನಲ್ಲಿ
– ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ
ಕನ್ನಡದ ಶ್ರೇಷ್ಟ ಬರಹಗಾರ ಮತ್ತು ಚಿಂತಕ ಡಾ.ಯು.ಆರ್.ಅನಂತಮೂರ್ತಿ ನಿಧನರಾಗಿ ಅಗಸ್ಟ್ 22 ಕ್ಕೆ ಒಂದು ವರ್ಷವಾಯಿತು. ತಮ್ಮ ಸಮಗ್ರ ಸಾಹಿತ್ಯದ ಮೂಲಕ ಕನ್ನಡಕ್ಕೆ ಆರನೆ ಜ್ಞಾನಪೀಠ ತಂದುಕೊಟ್ಟು ಕನ್ನಡ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸಿದ ಡಾ.ಯು.ಆರ್.ಅನಂತಮೂರ್ತಿ ಅವರು ಸಂಸ್ಕಾರ, ಭವ, ಘಟಶ್ರಾದ್ಧ, ಬರ ಹೀಗೆ ಸಂಖ್ಯಾತ್ಮಕ ದೃಷ್ಟಿಯಿಂದ ಬೆರಳೆಣಿಕೆಯ ಕಾದಂಬರಿಗಳನ್ನು ಮತ್ತು ಕೆಲವು ಕಥಾ ಸಂಕಲನಗಳನ್ನು ಬರೆದು ಬರೆದದ್ದು ಕಡಿಮೆ ಎಂದೆನಿಸಿದರೂ ಅವರು ಬರೆದದ್ದೆಲ್ಲ ತುಂಬ ಮೌಲಿಕವಾದದ್ದು. 1960 ರ ದಶಕದಲ್ಲಿ ‘ಸಂಸ್ಕಾರ’ದಂಥ ಸಂಪ್ರದಾಯ ವಿರೋಧಿ ಕಾದಂಬರಿಯನ್ನು ಅದು ಕುರುಡು ನಂಬಿಕೆಗಳು ಅತ್ಯಂತ ಪ್ರಸ್ತುತವಾಗಿದ್ದ ದಿನಗಳಲ್ಲಿ ಬರೆಯಲು ಸಾಧ್ಯವಾಗಿದ್ದು ಮೂರ್ತಿಗಳಲ್ಲಿದ್ದ ಸಮಾಜದ ಕುರಿತಾದ ಕಳಕಳಿಗೆ ನಿಜವಾದ ದೃಷ್ಟಾಂತ. ಸಂಪ್ರದಾಯವನ್ನು ವಿರೋಧಿಸಿ ಬರೆಯಲು ತಮಗೆ ಹೇಗೆ ಸಾಧ್ಯವಾಯಿತು ಎನ್ನುವುದನ್ನು ತಮ್ಮ ಆತ್ಮಕಥನ ‘ಸುರಗಿ’ಯಲ್ಲಿ ಹೀಗೆ ಹೇಳಿಕೊಂಡಿರುವರು ‘ಅಪ್ಪ ಅಸ್ಪೃಶ್ಯ ಸಮುದಾಯಕ್ಕೆ ಸೇರಿದ್ದ ಹೊಲದ ಕೆಲಸದ ಆಳನ್ನು ತಮ್ಮ ಸಮಕ್ಕೆ ಕೂಡಿಸಿಕೊಂಡು ಊಟ ಹಾಕುತ್ತಿದ್ದ ಅಂದಿನ ಮನೆಯ ವಾತಾವರಣವೇ ನಾನು ಬದುಕುತ್ತಿದ್ದ ವ್ಯವಸ್ಥೆಯನ್ನು ವಿರೋಧಿಸಿ ಬರೆಯಲು ಸ್ಪೂರ್ಥಿ ನೀಡಿತು’. ಸಂಪ್ರದಾಯಗಳು ಜಡ್ಡುಗಟ್ಟಿದ ಆ ದಿನಗಳಲ್ಲೇ ಅನಂತಮೂರ್ತಿ ಅವರು ಅಂತರ್ ಧರ್ಮೀಯ ವಿವಾಹವಾಗಿದ್ದು ಅವರೊಳಗಿನ ಸಾಮಾಜಿಕ ಬದ್ಧತೆಗೆ ಸಾಕ್ಷಿಯಾಗಿದೆ. ಕೇವಲ ಉಪದೇಶಿಸದೆ ಹೇಳಿದ್ದನ್ನು ಸ್ವತ: ಕಾರ್ಯಗತ ಮಾಡಿತೋರಿಸಿದ ಅವರೊಳಗಿನ ಈ ಧಾಡಸಿತನದ ಗುಣವೇ ಅವರನ್ನು ವಿರೋಧಿಸುವವರಂತೆ ಮೆಚ್ಚುವ ಮತ್ತು ಅಭಿಮಾನಿಸುವ ಅಭಿಮಾನಿಗಳ ಪಡೆಯನ್ನೇ ಸೃಷ್ಟಿಸಿತು. ಡಾ.ಯು.ಆರ್.ಅನಂತಮೂರ್ತಿ ವೈಚಾರಿಕವಾಗಿ ಅತ್ಯಂತ ಪ್ರಬುದ್ಧರಾಗಲು ಮತ್ತು ತಾನು ಬದುಕುತ್ತಿದ್ದ ವ್ಯವಸ್ಥೆಯ ಅಪಸವ್ಯಗಳನ್ನು ವಿರೋಧಿಸುವಂತಾಗಲು ಅವರು ಪಡೆದ ಇಂಗ್ಲಿಷ್ ಶಿಕ್ಷಣವೂ ಕಾರಣವಾಯಿತು. ಬರ್ಮಿಂಗ್ಹ್ಯಾಮ್ ಯುನಿವರ್ಸಿಟಿಯಲ್ಲಿನ ಇಂಗ್ಲಿಷ್ ಶಿಕ್ಷಣ ಅವರನ್ನು ಬರಹಗಾರನ ಜೊತೆಗೆ ಒಬ್ಬ ಚಿಂತಕನನ್ನಾಗಿಯೂ ರೂಪಿಸಿತು. ಅದಕ್ಕೆಂದೇ ಅವರು ತಮ್ಮ ಬರಹ ಮತ್ತು ವೈಚಾರಿಕ ಚಿಂತನೆಗಳಿಂದ ತಾವು ಬದುಕುತ್ತಿದ್ದ ಸಮಾಜವನ್ನು ಕಾಲಕಾಲಕ್ಕೆ ಜಾಗೃತಗೊಳಿಸುತ್ತಲೇ ಬಂದರು. ಬರಹಗಾರನೊಬ್ಬ ಸಮಾಜದ ಸಮಸ್ಯೆಗಳು ಮತ್ತು ವ್ಶೆರುಧ್ಯಗಳಿಗೆ ಸದಾಕಾಲ ಮುಖಾಮುಖಿಯಾಗಿರಬೇಕು ಎನ್ನುವ ನಿಲುವು ಅವರದಾಗಿತ್ತು. ಉತ್ತಮವಾದದ್ದನ್ನು ಉತ್ತೇಜಿಸಿ ಮಾತನಾಡುತ್ತಿದುದ್ದಕಿಂತ ತಮಗೆ ಸರಿಕಾಣದ್ದನ್ನು ಅವರು ಖಂಡಿಸಿ ಮಾತನಾಡಿದ್ದೇ ಹೆಚ್ಚು. ಲೇಖಕ ಸತ್ಯನಾರಾಯಣ ಅವರು ಹೇಳುವಂತೆ ಲೇಖಕನಾದವನ ಕೆಲಸ ಸದಾಕಾಲ ಓದುಗರಿಗೆ ಪ್ರಿಯವಾದದ್ದನ್ನೇ ಹೇಳುವುದಲ್ಲ ಎನ್ನುವ ಮಾತು ಅನಂತಮೂರ್ತಿ ಅವರಿಗೆ ಹೆಚ್ಚು ಅನ್ವಯವಾಗುತ್ತದೆ. ಈ ಕಾರಣದಿಂದಲೇ ಅವರು ‘ಬರಹಗಾರ ಏನನ್ನೂ ಸುಲಭವಾಗಿ ಒಪ್ಪಿಕೊಳ್ಳದೆ ಎಲ್ಲವನ್ನೂ ಅನುಮಾನದಿಂದ ನೋಡಬೇಕು’ ಎಂದು ಯುವಬರಹಗಾರರಿಗೆ ಕಿವಿಮಾತು ಹೇಳುತ್ತಿದ್ದರು.
ಮತ್ತಷ್ಟು ಓದು 
ಮಾತೃಪ್ರೇಮಕ್ಕೂ ಒ೦ದು ವೈಜ್ಞಾನಿಕ ವಿವರಣೆಯಿದೆ ಗೊತ್ತಾ…?
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ತು೦ಬ ಪ್ರೀತಿಯಿ೦ದ ಮಗನನ್ನು ಬೆಳೆಸಿರುತ್ತಾಳೆ ತಾಯಿ.ಮಗನನ್ನು ಮುದ್ದು ಮಾಡುತ್ತ,ಆತ ಕೇಳಿದ್ದೆಲ್ಲವನ್ನೂ ಕೊಡಿಸುತ್ತ,ಕ೦ದನನ್ನು ಸಲುಹಿದ ತಾಯಿಗೆ ಮಗನ ಸ೦ತೋಷವೇ ತನ್ನ ಸ೦ತೋಷ.ಹೀಗಿರುವಾಗ ಬೆಳೆದುನಿ೦ತ ಮಗ ಚೆಲುವೆಯೊಬ್ಬಳನ್ನು ಪ್ರೀತಿಸುತ್ತಾನೆ.ಹುಡುಗಿಗೂ ಇವನನ್ನು ಕ೦ಡರೆ ಇಷ್ಟ.ಆದರೆ ಇವನಮ್ಮ ಅ೦ದರೆ ಕಷ್ಟ.ಹಾಗಾಗಿ ತನ್ನ ಪ್ರೀತಿಗಾಗಿ ಬೇಡುವ ಹುಡುಗನೆದುರು ಷರತ್ತೊ೦ದನ್ನಿಡುತ್ತಾಳೆ.’ತನ್ನ ಪ್ರೀತಿ ಬೇಕಾದರೆ ,ಹೆತ್ತಮ್ಮನ ಹೃದಯವನ್ನು ಕಿತ್ತು ತರಬೇಕು’.ಬೆಳೆದುನಿ೦ತ ಹುಡುಗನಿಗೆ ಈಗ ತಾಯಿ ಬೇಕಿಲ್ಲ.ಆತುರಾತುರವಾಗಿ ತೆರಳಿದವನೇ ತಾಯಿಯ ಎದೆಯನ್ನು ಸೀಳಿ ಹೃದಯವನ್ನೆತ್ತುಕೊ೦ಡು ಪ್ರೇಯಸಿಯ ಬಳಿಗೋಡುತ್ತಾನೆ.ಉದ್ವೇಗದಿ೦ದ ಓಡುತ್ತಿದ್ದವನು ಮಾರ್ಗದಲ್ಲಿದ್ದ ಕಲ್ಲೊ೦ದಕ್ಕೆ ಎಡವಿ ಬಿದ್ದು ಬಿಡುತ್ತಾನೆ. ‘ಅಮ್ಮಾ..’ ಎ೦ದು ನೋವಿನಿ೦ದ ನರಳಿದವನಿಗೆ ,’ಪೆಟ್ಟಾಯ್ತಾ ಮಗು,ನೋಡಿಕೊ೦ಡು ಹೋಗಬಾರದೇನೋ ಕ೦ದಾ’ ಎ೦ದು ಸಾ೦ತ್ವನ ಹೇಳುವುದು ಅವನ ಕೈಲಿದ್ದ ತಾಯಿಯ ಹೃದಯವ೦ತೆ.ಬಹುಶ; ಈ ಕತೆಯನ್ನು ನೀವೆಲ್ಲರೂ ಕೇಳಿರುತ್ತೀರಿ.ತಾಯಿಯ ಮಹತ್ವವನ್ನು ಸಾರುವ ಈ ಕತೆ ಸಾಕಷ್ಟು ಹಳೆಯದ್ದೇ.ಇ೦ಥಹ ನೂರಾರು ಕತೆಗಳು,ಕವಿವರ್ಣನೆ,ಸಿನಿಮಾ ಹಾಡುಗಳು ಏನೇ ಬ೦ದರೂ ಅಮ್ಮನ ಪ್ರೀತಿಯನ್ನು ವರ್ಣಿಸುವುದು ಕಷ್ಟವೇ ಬಿಡಿ.ಆಕೆಯ ಪ್ರೀತಿಗಿರುವ ಶಕ್ತಿಯೇ ಅ೦ಥದ್ದು.ಹುಟ್ಟಿದಾರಭ್ಯ ಮಗುವಿನ ಜೀವಕ್ಕೆ ಜೀವವಾಗುವವಳು ಅಮ್ಮ.ಎದೆಹಾಲನುಣಿಸುತ್ತ ಮಗುವಿಗೆ ತನ್ನ ಜೀವ ಮತ್ತು ಜೀವನಗಳೆರಡನ್ನೂ ಬಸಿಯುವವಳು ಜನನಿ.ಕೂಸಿಗಾಗಿ ತನ್ನ ಜೀವವನ್ನಾದರೂ ಆಕೆ ಒತ್ತೆಯಿಟ್ಟಾಳು.ಮನುಷ್ಯರು ಬಿಡಿ.ತೀರ ಜಿ೦ಕೆ ಮೊಲದ೦ತಹ ಪ್ರಾಣಿಗಳೂ ಸಹ ತಮ್ಮ ಮರಿಗಳಿಗಾಗಿ ಹುಲಿ ಸಿ೦ಹಗಳೊಡನೆ ಹೋರಾಟಕ್ಕೆ ನಿ೦ತಿರುವುದನ್ನು ನೀವು ಗಮನಿಸಿರಬಹುದು.ಕವಿವಾಣಿಗೆ ನಿಲುಕದ,ಯೋಗಿಗಳ ಶಕ್ತಿಗೆ ಬಗ್ಗದ ಮಾತೃಪ್ರೇಮದ ಬಗ್ಗೆ ನಮಗೆ ತಿಳಿದಿರದ ಕೆಲವು ವಿಷಯಗಳನ್ನು ಇ೦ದು ಬರೆಯ ಬೇಕೆನಿಸಿದೆ.




