ಮಾನವೀಯತೆಯ ಹೊಸ ಮುಖವಾಡ – #notinmyname
– ಪಲ್ಲವಿ ಭಟ್, ಬೆಂಗಳೂರು
ಕಳೆದೊಂದೆರಡು ದಿನಗಳಿಂದ ಫೇಸ್ಬುಕ್ ವಾಲ್ ಗಳಲ್ಲಿ ಹರಿದಾಡುತ್ತಿರುವ ಒಂದು ಹ್ಯಾಷ್ ಟ್ಯಾಗ್ ಬೇಡ ಬೇಡವೆಂದರೂ ನನ್ನ ಗಮನ ಸೆಳೆಯತೊಡಗಿತು. ಕೇರಳದ ಖ್ಯಾತ ನಟಿಯೊಬ್ಬರು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿದ್ದು ಹೀಗೆ “ಸಾಮೂಹಿಕ ಹಿಂಸಾಚಾರ ಮತ್ತು ನಿಮ್ಮ ದೇಶದಾದ್ಯಂತ ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಬಗ್ಗೆ ನೀವು ಚಿಂತಿಸುತ್ತಿದ್ದರೆ, ಮೌನವನ್ನು ಮುರಿಯುವ ಸಮಯ ಇದು. #notinmyname”. ಯಾರ ಮೇಲೆಯೇ ಆಗಲಿ ದೌರ್ಜನ್ಯ ಒಂದು ನಡೆದರೆ ಅದನ್ನು ಖಂಡಿಸುವವರು ನಾವು ಭಾರತೀಯರು. ಅದು ನಮ್ಮ ಧರ್ಮ ಎಂಬುವುದು ನಮ್ಮ ನಂಬಿಕೆ. ಆದರೆ ಇದೇನಿದು “ದೇಶದಾದ್ಯಂತ ಅಲ್ಪಸಂಖ್ಯಾತರ ಮೇಲಿನ ದಾಳಿ” ?? . ಹಿಂಸಾಚಾರವನ್ನು ಖಂಡಿಸುವ ಒಳ್ಳೆ ಮನಸ್ಸಾಗಿದ್ದರೆ “ಅಲ್ಪಸಂಖ್ಯಾತರು” ಎಂಬ ಈ ಪದದ ಅಗತ್ಯವಿಲ್ಲ. ನಾವು ಹಿಂಸಾಚಾರದ ವಿರುದ್ಧ ಎಂದರಷ್ಟೇ ಸಾಕು. ಅಥವಾ ಹಿಂಸಾಚಾರವು ಬರೀ ಅಲ್ಪಸಂಖ್ಯಾತರ ಮೇಲಷ್ಟೇ ನಡೆಯಲು ಸಾಧ್ಯವೇ? ಹಾಗನಿಸುವಂತಿದೆ ಆ ಹೇಳಿಕೆ. ಮತ್ತಷ್ಟು ಓದು 
ಸಾಲ ಮನ್ನಾ ಮಾಡುವ ಮುನ್ನ…
– ಸುಜೀತ್ ಕುಮಾರ್
ಸಾಲ ಮನ್ನಾ ಅಂದಾಕ್ಷಣ ಹೇಗೆ, ಎಷ್ಟು, ಎಲ್ಲಿ ಎಂಬ ಪ್ರಶ್ನೆಗಳೇ ಹೆಚ್ಚಾಗಿ ನಮ್ಮಲ್ಲಿ ಮೂಡುತ್ತವೆ ಅಲ್ಲವೇ? ರೈತರಾದರೆ ಆಫ್-ಕೋರ್ಸ್ ಯಸ್. ರೈತನ ಕನಸ್ಸು ಮನಸಲ್ಲೂ ಸದ್ಯಕ್ಕೆ ಹರಿದಾಡುತ್ತಿರುವ ಏಕೈಕ ಪದವೆಂದರೆ ಅದು ‘ಸಾಲಮನ್ನಾ’. ಆದರೆ ಈ ಪ್ರಶ್ನೆಗಳು ಒಂದು ವಿಧದಲ್ಲಿ ಪ್ರಶ್ನೆಗಳೇ ಅನಿಸಿಕೊಳ್ಳುವುದಿಲ್ಲ ಅಂದರೆ!? ಇನ್ ಫ್ಯಾಕ್ಟ್ ಇವು ಒಂತರ ಪಂದ್ಯದ ಮೊದಲೇ ಸೋಲೊಪ್ಪಿಕೊಂಡ ಮನೋಭಾವದ ಸಂಕೇತಗಳು ಎಂದರೂ ತಪ್ಪಾಗುವುದಿಲ್ಲ. ನಾ ಮಾಡಿದ ನಿರ್ಧಾರ ತಪ್ಪೆಂದು ಬೇರೆಯವರ ಮೇಲೆ ಗೂಬೆ ಕೂರಿಸಿ, ಇನ್ಯಾರಿಂದಲೋ ಅದಕ್ಕೊಂದು ಪರಿಹಾರವನ್ನು ಬಯಸುತ್ತ, ಕಾಯುತ್ತ, ಕೊನೆಗೆ ಹಿಂದಿನಕ್ಕಿಂತಲೂ ಮತ್ತೊಂದು ಬಾಲಿಶ ನಿರ್ಧಾರವನ್ನು ಕೈಗೊಂಡು ಇಡೀ ಸಂಸಾರವನ್ನು ನಡು ನೀರಿನಲ್ಲಿ ಕೈ ಬಿಟ್ಟು, ಯಾರೋ ಮಾಡಿಟ್ಟ ಚಟ್ಟವನ್ನು ಹತ್ತುವುದು ಯಾವ ಸೀಮೆಯ ಪುರುಷಾರ್ಥ? ರೈತನೆಂದರೆ ಇಷ್ಟೆಯೇ?
ಇಂದು ಬರಡು ಭೂಮಿಯೊಂದನ್ನು ಯಾವುದೇ ಯಂತ್ರಗಳ ಸಹಾಯವಿಲ್ಲದೆ ಅಗೆದು, ಗುದ್ದಿ ಹಸಿರನ್ನು ಹೊತ್ತಿಸಿ ಸಾವಿರ ಜನರ ಹಸಿವನ್ನು ನೀಗಿಸಬಲ್ಲ ಒಂದಾದರೂ ಪೇಟೆಯ ಕಂಪನಿಗಳನ್ನು ತೋರಿಸಿ ನೋಡುವ.? ಇವುಗಳು ನೂರು ಕೋಟಿ ಸುರಿದು ಸಾವಿರ ಕೋಟಿ ಮಾಡುವ ಮನಿ ಮೈಂಡ್ಸ್ ಗಳೇ ಹೊರತು ಬಿಡಿಗಾಸು ಹಣವಿಲ್ಲದೆ ಬೆವರನ್ನು ಬಸಿದು ಹಸಿವನ್ನು ನೀಗಿಸಬಲ್ಲ ನಮ್ಮ ರೈತನೆಂಬ ನೈಸರ್ಗಿಕ ಕಂಪೆನಿಗಳಂತಲ್ಲ. ಅಂತಹ ಎದೆಗಾರಿಕೆಯ ರೈತನೆಂಬ ಶಕ್ತಿ ಇಂದು ‘ಆತ್ಮಹತ್ಯೆ’ ಹಾಗು ‘ಸಾಲಮನ್ನಾ’ ಎಂಬೆರೆಡೇ ಪದಗಳಿಗೆ ಮೀಸಲಾಗಿರುವುದೇಕೆ? ಆತ್ಮಹತ್ಯೆ ಎಂಬುದು ಜೀವನದ ಅತಿ ಸಹಜ ಸವಾಲಿಗೆ ಹೆದರಿ ಓಟಕೀಳುವಂತಹ ಮನೋಭಾವವಾದರೆ, ಸಾಲಮನ್ನಾ ಎಂಬುದು ಎಲ್ಲವೂ ಇದ್ದರೂ ಇತರರ ಮುಂದೆ ಕೈಯೊಡ್ಡಿದಂತೆ! ಕುಂಟುತ್ತಿದ್ದ ದೇಶದ ಆರ್ಥಿಕತೆಗೇ ಬೆನ್ನೆಲುಬಾಗಿ ನಿಲ್ಲಬಲ್ಲ ತಾಕತ್ತಿದ್ದ ರೈತನೆಂಬ ಚೇತನ ಇಂದು ಸಾಲವೆಂಬ ಪುಡಿಗಾಸಿಗೆ ನಿಜವಾಗಿಯೂ ಹೆದರಬೇಕೇ? ಒಂದುಪಕ್ಷ ವಿಷಯ ಇಷ್ಟು ಸರಳವಲ್ಲ ಎಂದೇ ಇಟ್ಟುಕೊಳ್ಳೋಣ. ಸರಿ, ಸಾಲ ಎಂಬ ವಿಷಸರ್ಪವನ್ನು ಆತ ಕೆಣಕಿದ್ದಾದರೂ ಏತಕ್ಕೆ? ಗೊಬ್ಬರ ಕೊಳ್ಳಲು? ಜಮೀನಿನಲ್ಲಿ ದುಡಿಯುವ ಕಾರ್ಮಿಕರಿಗಾಗಿ? ನೀರಿಗಾಗಿ ? ಅಥವಾ ತನ್ನ ಸ್ವಂತ ಭೋಗಕ್ಕಾಗಿ? ವಿಷಯವಿರುವುದೇ ಇಲ್ಲಿ. ಕೃಷಿಯ ಯಾವುದೊ ಸಮಸ್ಯೆಯನ್ನು ಹೊತ್ತು ತನ್ನಲ್ಲಿಗೆ ಬರುವ ರೈತನಿಗೆ ಕೃಷಿಸಾಲವೆಂಬ ವಿಷ ಮುಲಾಮನ್ನು ಸವರುವುದೇ ಈ ಸರ್ಕಾರಗಳು. ಅವರ ಸಮಸ್ಯೆಗಳಿಗೊಂದು ಸೂಕ್ತ ಪರಿಹಾರವನ್ನು ಆಲೋಚಿಸುವುದ ಬಿಟ್ಟು ತೋರ್ಪಡಿಕೆಯ ಪ್ರೀತಿಗೆ ದುಡ್ಡಿನ ಅಮಲೇರಿಸಿ ಮಕ್ಕಳು ಹಾಳಾದಾಗ ಮುಂದೇನು ಮಾಡುವುದೆಂದು ಕೈ ಕೈ ಹಿಸುಕಿಕೊಳ್ಳುವ ಪೋಷಕರಂತಾಗಿದೆ ಇಂದಿನ ಸರ್ಕಾರಗಳ ವಸ್ತುಸ್ಥಿತಿ.
ಹೌದು.ಐಟಿ ರಂಗ ಅಲ್ಲಾಡುತ್ತಿದೆ.ಆದರೆ,ಪ್ರಳಯವೇನೂ ಆಗಲಿಕ್ಕಿಲ್ಲ!
– ರಾಕೇಶ್ ಶೆಟ್ಟಿ
ಭಾರತದ ಐಟಿ ವಲಯದೊಳಗೆ ಮತ್ತೊಮ್ಮೆ ಲಾವಾ ಕುದಿಯಲಾರಂಭಿಸಿದೆ.ಅಲ್ಲಲ್ಲಿ ಈ ಲಾವಾದ ಸ್ಪೋಟವೂ ಆಗಿದೆ.ಆದರಿದು ಆರಂಭ ಮಾತ್ರ ಎನಿಸುತ್ತಿದೆ.ಅಮೆರಿಕಾ ಮೂಲದ ಮಲ್ಟಿನ್ಯಾಷನಲ್ ಕಂಪೆನಿಯೊಂದರಲ್ಲಿ ದೊಡ್ಡ ಮಟ್ಟದಲ್ಲಿ ಉದ್ಯೋಗಿಗಳನ್ನು ತೆಗೆಯಲಾಗುತ್ತಿದೆ,ಸೀನಿಯರ್ ಹುದ್ದೆಯಲ್ಲಿದ್ದವರಿಗೆ ಬಲವಂತವಾಗಿ ನಿವೃತ್ತಿಯ ಹೆಸರಲ್ಲಿ ಎದ್ದು ಹೊರಡಿ ಎನ್ನುತ್ತಿದ್ದಾರೆ ಎಂದು ಇತ್ತೀಚೆಗೆ ಚೆನ್ನೈ ಕೋರ್ಟಿನಲ್ಲಿ ಕೇಸು ದಾಖಲಾಯಿತು. ಇತ್ತೀಚೆಗೆ ಬಂದ ಕೋರ್ಟಿನ ತೀರ್ಪಿನ ಪ್ರಕಾರ, ಉದ್ಯೋಗಿಗಳಿಗೆ ಇನ್ನೊಂದು ಅವಕಾಶವನ್ನು ಕೊಡಿ ಎಂದು ಕಂಪೆನಿಗೆ ಸೂಚಿಸಲಾಗಿದೆ.ಕಂಪೆನಿಯವರೇನೋ ಕೋರ್ಟಿನ ತೀರ್ಪು ಒಪ್ಪಿಕೊಂಡಿದ್ದಾರೆ.ಮತ್ತೆ ಒಳ ಕರೆದುಕೊಂಡವರನ್ನು ಮತ್ತೊಂದು ಕಾರಣ ನೀಡಿಯೋ ಅಥವಾ ಅವರಾಗಿಯೇ ಹೊರ ಹೋಗುವಂತೆ ಮಾಡುವುದನ್ನೇನು ಕಂಪೆನಿಯವರಿಗೆ ಹೇಳಿಕೊಡಬೇಕೆ?
ಹಾಗೆ ನೋಡಿದರೆ ಇದೊಂದೆ ಕಂಪೆನಿಯಲ್ಲಿ ಮಾತ್ರ ಹೀಗೆ ಉದ್ಯೋಗ ಕಡಿತ ಮಾಡುತ್ತಿಲ್ಲ. ಭಾರತ ಮೂಲದ ಹೆಸರಾಂತ ಐಟಿ ಕಂಪೆನಿಗಳೂ ಸಹ ಇದೇ ಕೆಲಸವನ್ನು ಮಾಡುತ್ತಿದೆ.ಆ ಅಮೆರಿಕನ್ ಮೂಲದ ಕಂಪೆನಿಯೇನೋ Mass Layoff ಮಾಡಲು ಕೈ ಹಾಕಿ ತನ್ನ ಹೆಸರು ಮೀಡಿಯಾಗಳಲ್ಲಿ ಕೆಟ್ಟ ಕಾರಣಕ್ಕೆ ಸುದ್ದಿಯಾಗುವಂತೆ ಮಾಡಿಕೊಂಡಿತು ಅಷ್ಟೇ. ಉಳಿದ “ದೊಡ್ಡ ದೊಡ್ಡ” ಹೆಸರಿನ ಕಂಪೆನಿಗಳು ಅದೇ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಿವೆ.ಅದು Individually Target ಮಾಡುವ ಮೂಲಕ. ಒಂದಿಡೆ ಗುಂಪನ್ನು ಎದುರು ಹಾಕಿಕೊಳ್ಳುವ ಬದಲು ಒಬ್ಬೊಬ್ಬರನ್ನೇ ಹಿಡಿದು ಹೊರನೂಕಿದರೆ ದನಿಯೆತ್ತುವವರು ಯಾರಿರುತ್ತಾರೆ ಹೇಳಿ? ಮೊದಲೇ ಭಾರತೀಯ ಐಟಿ ಉದ್ಯೋಗಿಗಳಿಗೆ ಅಂತ ಯಾವುದೇ ಟ್ರೇಡ್ ಯೂನಿಯನ್,ಸಂಘಟನೆಗಳು ಇಲ್ಲ.ಹೀಗಿರುವಾಗ ಕಂಪೆನಿಗಳ ಪಾಲಿಗೆ ಆನೆ ನಡೆದಿದ್ದೆ ಹಾದಿಯೆಂಬಂತಾಗಿದೆ.
ರಸಪ್ರಶ್ನೆಯಲ್ಲಿ ರೈಲು ಹಳಿಗಳಿಲ್ಲದ ಜಿಲ್ಲೆ ಯಾವುದು ಎಂದು ಕೇಳುತಿದ್ದಾಗಲೇ ಧೂರ್ತರಲ್ಲಿ ತಂತ್ರಗಾರಿಕೆಯೊಂದು ಹುಟ್ಟುತ್ತಿತ್ತು..
– ಶಿಲ್ಪಾ ನೂರೆರ
ಅಭಿವೃದ್ಧಿಗೆ ಮಾನದಂಡಗಳೇನು? ಅಷ್ಟಕ್ಕೂ ಅಭಿವೃದ್ಧಿ ಎಂದರೇನು? ಇರುವುದನ್ನೆಲ್ಲಾ ಗುಡಿಸಿ ಎಸೆದು ಮತ್ತೊಂದನ್ನು ಕಟ್ಟುವುದು ಅಭಿವೃದ್ಧಿಯೇ? ಸಹಜವಾದುದನ್ನು ನಾಶಮಾಡಿ ಕೃತಕವಾದದ್ದನ್ನು ಸೃಷ್ಟಿಸುವುದು ಅಭಿವೃದ್ಧಿ ಎನಿಸಿಕೊಳ್ಳುತ್ತದೆಯೇ? ಹಾಗಾದರೆ ಸಹಜವಾದುದನ್ನು, ಈ ಮೊದಲೇ ನೆಲೆಯಾದವುಗಳಿಗೆ ನಾನಾ ಕಿರೀಟಗಳನ್ನು ಕೊಟ್ಟು ಹೊಗಳಿ ಹೊನ್ನಶೂಲಕ್ಕೇಕೆ ಏರಿಸುವಿರಿ?- ಇಂಥ ಅನೇಕ ಪ್ರಶ್ನೆಗಳು ಹುಟ್ಟುವುದು ವ್ಯಾಖ್ಯಾನಕಾರರಿಗೆ, ವಿಶ್ಲೇಷಕರಿಗೆ, ಸಮಾಜಶಾಸ್ತ್ರಜ್ಞರಿಗೆ ಮತ್ತು ಅಭಿವೃದ್ಧಿ ನಿರೀಕ್ಷಿಸುವವರಿಗೆ ಹೊರತು ಅಭಿವೃದ್ಧಿಯನ್ನು ಕೈಗೊಳ್ಳುವವರಿಗಲ್ಲ! ಅಭಿವೃದ್ಧಿಗೆ ಸುಸ್ಥಿರ, ಸಮಗ್ರ ಇತ್ಯಾದಿ ವಿಶೇಷಣಗಳನ್ನು ಕೊಟ್ಟುಕೊಂಡವರೂ ಕೂಡ ಅವರೇ. ಹಾಗಾಗಿ ಅಭಿವೃದ್ಧಿ ಎಂಬುದು ತನ್ನ ಗುರಿಯನ್ನು ಇನ್ನೂ ಮುಟ್ಟದೆ ಅಡ್ಡಾದಿಡ್ಡಿ ಓಡುತ್ತಲೇ ಇದೆ. ಇಂದಿಗೂ ಅಭಿವೃದ್ಧಿ ರಾಜಕೀಯದ ಪ್ರಮುಖ ದಾಳವಾಗಿ ಬಳಕೆಯಾಗುತ್ತಲೇ ಇದೆ. ಹೊರನೋಟಕ್ಕೆ ಆಕರ್ಷಕವಾಗಿ, ಜನರ ಆಶಾಕಿರಣವಾಗಿ ನರ್ತನ ಮಾಡುತ್ತ ಬರುವ ಅಭಿವೃದ್ಧಿ ಯೋಜನೆಗಳು ಇನ್ನೂ ಏಕೆ ತನ್ನ ಉದ್ದೇಶವನ್ನು ಪೂರ್ಣಗೊಳಿಸಿಲ್ಲ ಎನ್ನುವುದರ ಹಿಂದೆ ಇಂಥಾ ವ್ಯಾಖ್ಯಾನಗಳ ಕ್ಲೀಷೆಗಳಿವೆ. ಮತ್ತಷ್ಟು ಓದು 
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು? ( ಭಾಗ – ೪ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಸಾಮಾನ್ಯವಾಗಿ ಪಶ್ಚಿಮದಲ್ಲಿ ನಮ್ಮ ಸಂಸ್ಕೃತಿಗೆ ಸಂಬಂಧಿಸಿದಂತೆ ಪದೇಪದೇ ಕೇಳಿಬರುವ ಈ ಪ್ರಶ್ನೆಗಳನ್ನು ಗಮನಿಸಿ. ನೀವು ಹಣೆಗೆ ತಿಲಕ ಇಡುವುದೇಕೆ? ಗೋಮಾಂಸವನ್ನು ನೀವೇಕೆ ತಿನ್ನುವುದಿಲ್ಲ? ನೀವು ಶಿಶ್ನವನ್ನು ಪೂಜೆ ಮಾಡುತ್ತೀರಂತೆ ಹೌದೆ? ಜಾತಿ ಪದ್ಧತಿಯ ಬಗ್ಗೆ ನಿಮ್ಮ ಅನಿಸಿಕೆಯೇನು? ಈಗಲೂ ಭಾರತದಲ್ಲಿ ವಿಧವೆಯರನ್ನು ಸುಡುತ್ತಾರೆಯೇ? ನಿಮ್ಮ ದೇವರುಗಳಿಗೇಕೆ ಆರೆಂಟು ಕೈಗಳು ಇರುತ್ತವೆ? ನಿಮ್ಮ ರಿಲಿಜನ್ನಿನ ಚಿಹ್ನೆ ಯಾವುದು? ನೀವು ದೇವಸ್ಥಾನದಲ್ಲಿ ಮೂರ್ತಿಪೂಜೆ/idolatry ಮಾಡುತ್ತೀರಾ? ನೀವು ದೇವರನ್ನು ನಂಬುತ್ತೀರಾ? Are you religious? ಇತ್ಯಾದಿ. ಈ ರೀತಿಯ ಪ್ರಶ್ನೆಗಳು ಎದುರಾದಾಗ ಯಾರಾದರೂ ಹೇಗೆ ಪ್ರತಿಕ್ರಿಯಿಸಬಹುದು? ಸ್ಥೂಲವಾಗಿ ಹೇಳುವುದಾದರೆ, ಇದಕ್ಕೆ ಎರಡು ವಿಧದಲ್ಲಿ ಪ್ರತಿಕ್ರಿಯಿಸಬಹುದು. ಮೊದಲನೆಯದು, ಈ ಪ್ರಶ್ನೆಗಳು ಗ್ರಹಿಸಲು ಸಾಧ್ಯವಾಗುವಂಥ ಮತ್ತು ನಮಗೆ ಅರ್ಥವಾಗುವ ಪ್ರಶ್ನೆಗಳು ಎಂಬ ಊಹೆಯೊಂದಿಗೆ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು. ಸುಧಾರಣಾವಾದಿಗಳ ಕಾಲದಿಂದ ಇಂದಿನವರೆಗೆ ನಾವು ಅನುಸರಿಸಿದ ಮಾರ್ಗ ಇದೇ. ಆದರೆ ಅಮೆರಿಕೆಯಲ್ಲಿ ನೆಲೆಸುವ ಭಾರತೀಯರ [ಅಷ್ಟೇ ಏಕೆ, ಸಂಕುಚಿತಗೊಳ್ಳುತ್ತಿರುವ ಆ ಜಗತ್ತಿನಲ್ಲಿ, ಭಾರತದಲ್ಲಿನ ಭಾರತೀಯರ] ಪರಿಸ್ಥಿತಿ ಇಂದು ಬದಲಾಗಿದೆ: ಹಿಂದಿನ ಕಾಲದ ಸುಧಾರಕರು ಭಾರತೀಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು, ಆದರೆ ನಾವಿಂದು ಪಾಶ್ಚಾತ್ಯ ಸಂಸ್ಕೃತಿಯ ಸಂದರ್ಭದಲ್ಲಿ ನಿಂತು ಮಾತನಾಡುತ್ತಿದ್ದೇವೆ. ಬದಲಾದ ಈ ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ನಾವೂ ನಮ್ಮ ಸುಧಾರಣಾವಾದಿಗಳು ನಡೆದ ಮಾರ್ಗವನ್ನು ಅನುಸರಿಸಿದರೆ ಉಂಟಾಗುವ ಪರಿಣಾಮವನ್ನು ಗ್ರಹಿಸುವುದು ಬಹಳ ಮುಖ್ಯವಾಗಿದೆ. ಮತ್ತಷ್ಟು ಓದು 
ಯೋಗದ ಮಹತ್ವ ಹಾಗೂ ಅರಿವು
– ಗೀತಾ ಹೆಗ್ಡೆ
ಈ ದಿನ ಅಂತಃರಾಷ್ಟ್ರೀಯ ಯೋಗ ದಿನ. ಇತ್ತೀಚಿನ ದಿನಗಳಲ್ಲಿ ಈ ಯೋಗದ ಬಗ್ಗೆ ತುಂಬಾ ಪ್ರಚಾರ ಹಾಗೂ ಕಲಿಯುವವರು ಕೂಡಾ ಹೆಚ್ಚಾಗುತ್ತಿರುವುದು ಸಂತೋಷದ ಸಂಗತಿ. ಮತ್ತು ಪುರಾತನ ಕಾಲದ ಈ ವಿದ್ಯೆ ಜನ ಮೈಗೂಡಿಸಿಕೊಂಡು ಯೋಗದ ಮಹತ್ವ ತಿಳಿಯುವತ್ತ ದಾಪುಗಾಲು ಹಾಕುತ್ತಿದ್ದಾರೆ. ಹಾಗೂ ದಿನ ಹೋದಂತೆ ಆರೋಗ್ಯದತ್ತ ಕಾಳಜಿ, ಆಸ್ತೆ, ಔಷಧಿಗಳಿಂದ ಆಗುವ ದುಷ್ಪರಿಣಾಮಗಳು, ಅಯ್ಯೋ! ಹೀಗೆ ಇದ್ದರೆ ಮುಂದೇನಾಗುತ್ತದೊ ಅನ್ನುವ ಮನದೊಳಗಿನ ಗಾಬರಿ ಜನ ಆಹಾರ, ವ್ಯಾಯಾಮ, ವಾಕಿಂಗು, ಯೋಗದ ಕಡೆ ಹೆಚ್ಚು ಹೆಚ್ಚು ವಾಲುತ್ತಿರುವುದು ಹಾಗೂ ತಿಳಿದುಕೊಳ್ಳುವ ಆಸಕ್ತಿ ಅಧಿಕವಾಗುತ್ತಿರುವುದನ್ನು ಕಾಣಬಹುದು. ಮತ್ತಷ್ಟು ಓದು 
ನಕಲಿ ಜಾತಿ ಪ್ರಮಾಣ ಪತ್ರ ತೋರಿಸಿ 5 ಮೊಟ್ಟೆ ತಿಂದ ವಿದ್ಯಾರ್ಥಿ (ಸುಳ್ಸುದ್ದಿ)
– ಪ್ರವೀಣ್ ಕುಮಾರ್ ಮಾವಿನಕಾಡು
ಅಪ್ಪನೆಂಬ ಆಪ್ತ…
– ಗೀತಾ ಹೆಗ್ಡೆ
ಇತಿ ಮಿತಿಯಿಲ್ಲದ ಪ್ರೀತಿಯ ತೇರು ಎಂದರೆ ಹೆತ್ತವರು. ಅಲ್ಲಿ ನಾನು ನನ್ನದೆಂಬ ವಾಂಚೆ ತುಂಬಿ ತುಳುಕುವಷ್ಟು ಮೋಹ. ಈ ಮೋಹದ ಪಾಶಾ ಬಂಧನ ವರ್ಣಿಸಲಸಾಧ್ಯ. ಅಲ್ಲಿ ಸದಾ ನೆನಪಿಸಿಕೊಳ್ಳುವ, ನೆನೆನೆನೆದು ಆಗಾಗ ಪುಳಕಿತಗೊಳ್ಳುವ ಅಪ್ಪನೊಂದಿಗಿನ ದಿನಗಳು ಪ್ರತಿಯೊಬ್ಬರ ಜೀವನದಲ್ಲೂ ಅಮೂಲ್ಯ.
ಅದರಲ್ಲೂ ಹೆಣ್ಣು ಮಕ್ಕಳು ಅಪ್ಪನನ್ನು ಅಪ್ಪಿಕೊಳ್ಳುವುದು ಜಾಸ್ತಿ. ಆಗಾಗ ಬಯ್ಯುವ ಅಮ್ಮನಿಗಿಂತ ಅಪ್ಪನ ಕಂಡರೆ ಹೆಣ್ಣು ಮಕ್ಕಳಿಗೆ ಅಮಿತ ಪ್ರೀತಿ. ಅಪ್ಪನಿಗೂ ಅಷ್ಟೆ, ಮಗಳೂ ಅಂದರೆ ಆಯಿತು. ಅವಳೇನು ಮಾಡಿದರೂ ಚಿಕ್ಕಂದಿನಲ್ಲಿ ವಹಿಸಿಕೊಂಡು ಬರುವುದು ಅಪ್ಪ ಮಾತ್ರ. ಅದಕ್ಕೇ ಏನೋ ಮಗಳು ಏನು ಕೇಳುವುದಿದ್ದರೂ ಅಪ್ಪನ ಕೊರಳಿಗೆ ಹಾರವಾಗಿ ಅಪ್ಪಾ ಅದು ಕೊಡಸ್ತೀಯಾ? ಅಲ್ಲಿ ಕರ್ಕೊಂಡು ಹೋಗ್ತೀಯಾ ಅಂತೆಲ್ಲಾ.. ಅಪ್ಪಾ ಅಂದರೆ ನನ್ನಪ್ಪಾ! ಎಷ್ಟು ಚಂದ ನನ್ನಪ್ಪಾ. ನಂಗೆ ಅಮ್ಮನಿಗಿಂತ ಅಪ್ಪಾ ಅಂದರೇನೆ ಬಲೂ ಇಷ್ಟ. ಈ ಅಮ್ಮ ಯಾವಾಗಲೂ ಬಯ್ತಾಳೆ, ರೇಗುತ್ತಾಳೆ. ಅದು ಕಲಿ ಇದು ಕಲಿ, ಅಲ್ಲಿ ಹೋಗಬೇಡಾ ಇಲ್ಲಿ ಹೋಗಬೇಡಾ, ಸದಾ ಕಾಟ ಕೊಡ್ತಾಳೆ ಹೀಗೆ ಹಲವಾರು ಕಂಪ್ಲೇಂಟು ಕಂಡವರ ಮುಂದೆ ಮಗಳಿನದ್ದು. ಮತ್ತಷ್ಟು ಓದು 
ಇಂಗ್ಲೆಂಡಿಗೊಬ್ಬನೇ ಟಾಮಿ ರಾಬಿನ್ಸನ್; ಆದರೆ ಇಲ್ಲಿ?
– ಸಂತೋಷ್ ತಮ್ಮಯ್ಯ
ಶತಮಾನಗಳ ಕಾಲ ಸೂರ್ಯ ಮುಳುಗದ ಸಾಮ್ರಾಜ್ಯ ಎಂಬ ಕಿರೀಟ ಧರಿಸಿದ್ದ ಬ್ರಿಟಿಷರಿಗೆ ಇಷ್ಟು ಶೀಘ್ರದಲ್ಲಿ ನಿದ್ರೆಗೆಡುವ ಕಾಲ ಬರುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಮೊದಲೆಲ್ಲಾ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುವ ಭಯೋತ್ಪಾದಕ ದಾಳಿಗಳು ಅವರೊಳಗಿನ ಸಂಗತಿ ಎಂದುಕೊಳ್ಳುತ್ತಿದ್ದ ಬ್ರಿಟಿಷರು ತಿಂಗಳೊಳಗಾಗಿ ಮೂರು ದಾಳಿಗಳನ್ನು ಅನುಭವಿಸಿದ್ದಾರೆ. ಹಾಗಾಗಿ ಇದ್ದಕ್ಕಿದ್ದಂತೆ ಭಯೋತ್ಪಾದನೆ ಒಂದು ಜಾಗತಿಕ ಸಮಸ್ಯೆ ಎಂಬ ಹುಯಿಲು ಮತ್ತೆ ಮುನ್ನಲೆಗೆ ಬಂದಿದೆ.
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೩ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಒಂದು ಹೋಲಿಕೆ
ವಸಾಹತುಶಾಹಿ ಕಾಲದ ಭಾರತೀಯ ಬುದ್ಧಿಜೀವಿಗಳು ಈ ಕಥೆಯನ್ನು ಸಾರಾಸಗಟಾಗಿ ನಂಬಿದ್ದರು. (ಏಕೆ ಎಂಬುದು ಒಂದು ಮುಖ್ಯ ಪ್ರಶ್ನೆಯಾದರೂ, ಈ ಲೇಖನದಲ್ಲಿ ನಾನದನ್ನು ಚರ್ಚೆಗೆತ್ತಿಕೊಳ್ಳುವುದಿಲ್ಲ). ಇದು ಎರಡು ಪರಸ್ಪರ ವಿರುದ್ಧವಾದ ಪ್ರತಿಕ್ರಿಯೆಗಳಿಗೆ ದಾರಿಮಾಡಿತು: ಒಂದೆಡೆ ಕೆಲವು ಜನರು ಹಿಂದುಗಳ ರಿಲಿಜನ್ನಿನ ಪುನರುತ್ಥಾನಕ್ಕಾಗಿ ಪರಿಶ್ರಮಿಸಿದರು. ವೇದ ಉಪನಿಷತ್ತುಗಳಲ್ಲಿರುವ ಶುದ್ಧವಾದ ರಿಲಿಜನ್ನಿಗೆ ಹಿಂದಿರುಗಬೇಕು ಎಂದು ಅವರು ವಾದಿಸಿದರು. ಇನ್ನೊಂದೆಡೆಯಲ್ಲಿ ಹಿಂದೂಯಿಸಂ ಈಗ ಹೇಗಿದೆಯೋ ಅದೇ ಸರಿ ಎಂದು ಗಂಟಾಘೋಷವಾಗಿ ಸಮರ್ಥಿಸುವವರೂ ಇದ್ದರು. ಈ ಎರಡು ತುದಿಗಳ ನಡುವೆ ಹಲವು ವಿವಿಧ ನಿಲುವುಗಳೂ ನಿಧಾನವಾಗಿ ಹರಳುಗಟ್ಟಿದ್ದವು. ಮತ್ತಷ್ಟು ಓದು 





