ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

13
ಜೂನ್

ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೨ )

ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)

ಭಾಗ ೧

ಹಿನ್ನೆಲೆ:

ಭಾರತದ ಹಲವು ಪ್ರದೇಶಗಳ ಮೇಲೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯು ತನ್ನ ಹಿಡಿತವನ್ನು ಬಿಗಿಗೊಳಿಸಿ, ಅದರ ಆಡಳಿತಾಧಿಕಾರಿಗಳು ಆಳುವವರ ಸ್ಥಾನಕ್ಕೆ ಬಂದಾಗ, ಭಾರತೀಯ ಸಂಪ್ರದಾಯಗಳ ಕುರಿತಂತೆ ಒಂದು ವಿಶೇಷ ಹಗೆತನವು ವಸಾಹುತು ಆಡಳಿತ ನೀತಿಯ ಹೆಗ್ಗುರುತಾಯಿತು. ಈ ಹಗೆತನಕ್ಕೆ ಬಹಳ ಪುರಾತನ ಇತಿಹಾಸವಿರುವುದು ನಿಜ. ಹಿಂದೂಗಳ ‘ರಿಲಿಜನ್’ ಆದ ‘ಹಿಂದೂಯಿಸಂ’ನ ಪ್ರತಿ ಅಂಶವೂ ಅವರಿಗೆ ಆಕ್ಷೇಪಾರ್ಹ ಮತ್ತು ಅಸಂಗತವಾಗಿ ಕಂಡಿದ್ದು ಹಳೆಯ ವಿಚಾರ. ಬಾಲ್ಯವಿವಾಹ, ಸತಿ ಪದ್ಧತಿ ಮುಂತಾದ ಅಸಹನೀಯ ಮತ್ತು ಅನೈತಿಕ ಆಚರಣೆಗಳನ್ನು ಅವರು ಭಾರತದಲ್ಲಿ ‘ಕಂಡುಕೊಂಡಿದ್ದರಿಂದ’ ಮಾತ್ರವೇ ಈ ಹಗೆತನವು ಬೆಳೆದದ್ದಲ್ಲ. ಅವರ ಹಗೆತನಕ್ಕೆ ಸಾಕಷ್ಟು ಆಳವಾದ ಬೇರುಗಳಿವೆ: ತಮ್ಮ ರಿಲಿಜನ್ನಿನ ಕನ್ನಡಕದಿಂದ ನೋಡಿದಾಗ, ಇಂತಹ ವಿಕೃತ ಆಚರಣೆಗಳು ಸುಳ್ಳು ರಿಲಿಜನ್ಗಳ ಅವಿಭಾಜ್ಯ ಅಂಗಗಳು ಎಂದು ಅವರಿಗೆ ಅನಿಸಿತ್ತು. ‘ಹಿಂದೂಯಿಸಂ’ ಎನ್ನುವುದು ಸುಳ್ಳು ಮತ್ತು ಅವನತಿ ಹೊಂದಿದ ರಿಲಿಜನ್ನಾದ್ದರಿಂದ, ಇಂತಹ ಅರ್ಥಹೀನ ವಿಕೃತ ಆಚರಣೆಗಳು ಕೇವಲ ಆಕಸ್ಮಿಕಗಳಲ್ಲ, ಬದಲಿಗೆ ಅದರ ಅಗತ್ಯ ಲಕ್ಷಣಗಳು ಎಂದು ಅವರು ನಂಬಿದ್ದರು. ಮತ್ತಷ್ಟು ಓದು »

12
ಜೂನ್

ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೧ )

ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)

ನನ್ನ ಅನುಭವವೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಮೂಲಕ ಈ ಲೇಖನವನ್ನು ಪ್ರಾರಂಭಿಸುತ್ತೇನೆ. ಅಮೇರಿಕಾದಲ್ಲಿರುವ ಅನಿವಾಸಿ ಭಾರತೀಯರ ಬಾಯಲ್ಲಿ ನಾನು ಈ ಕೆಳಗಿನ ಮಾತುಗಳನ್ನು ಪದೇ ಪದೇ ಕೇಳಿದ್ದೇನೆ: “ನಾನು ಹಲವು ದಶಕಗಳ ಹಿಂದೆ ಅಮೇರಿಕಕ್ಕೆ ಬಂದಾಗ ನನಗೆ ಹಿಂದೂಯಿಸಂನ ಕುರಿತು ಅಷ್ಟಾಗಿ ತಿಳಿದಿರಲಿಲ್ಲ. ನನ್ನ ಈ ಅಜ್ಞಾನದ ಕುರಿತು ನನಗೆ ಅರಿವು ಮೂಡಿದ್ದೇ ನನ್ನ ಮಕ್ಕಳು ಹಿಂದೂಯಿಸಂ ಎಂದರೆ ಏನು ಎಂದು ಪ್ರಶ್ನಿಸಲು ಆರಂಭಿಸಿದಾಗ. ನಾನು ಅವರಿಗೆ ಹಿಂದೂಯಿಸಂ ಎಂದರೇನು ಎಂದು ಕಲಿಸಬೇಕಿತ್ತು, ಆದ್ದರಿಂದ ನಾನೂ ಹಿಂದೂಯಿಸಂ ಕುರಿತು ಭಾರತದಲ್ಲಿದ್ದಾಗ ತಿಳಿದುಕೊಂಡದ್ದಕ್ಕಿಂತ ಹೆಚ್ಚು ಅಮೆರಿಕೆಯಲ್ಲಿ ಕುಳಿತು ತಿಳಿದುಕೊಂಡೆ. (ಈ ವಿಚಾರದಲ್ಲಿ ಆ ಸ್ವಾಮಿ ಅಥವಾ ಈ ಸಂಘಟನೆ ನನಗೆ ಸಹಾಯ ಮಾಡಿತು. ಅವರಿಗೆ ನನ್ನ ಕೃತಜ್ಞತೆಗಳು).” ಮತ್ತಷ್ಟು ಓದು »

11
ಜೂನ್

ಮೋಹಕ ತಾರೆ ರಮ್ಯಾಳಿಗೊಂದು ಪ್ರೀತಿಯ ಓಲೆ..

ಶಿವಾನಂದ ಶಿವಲಿಂಗ ಸೈದಾಪೂರ.
ಎಂ.ಎ. ವಿದ್ಯಾರ್ಥಿ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ,
ಬೆಳಗಾವಿ.

ರಮ್ಯಾ ಮೇಡಮ್, ಬರೆಯೋದು ಸ್ವಲ್ಪ ತಡವಾಯಿತು. ಅಭಿಮಾನಿಯೊಬ್ಬ ಹೀಗೆ ಬರೆಯೋದು ಏಷ್ಟು ಸರಿಯೋ, ತಪ್ಪೋ ಗೊತ್ತಿಲ್ಲ. ನೀವು ನನ್ನಂತ ಹಲವಾರು ಯುವಕರ ನೆಚ್ಚಿನ ಹೀರೊಯಿನ್, ಕೆಲವೊಂದು ಜನರಿಗೆ ನಿಮ್ಮನ್ನು ನೋಡಿ ಇನ್ಸ್ಪೈರ್ ಆಗುವಂತಹ ಮೋಹಕ ಶಕ್ತಿ ನಿಮಗಿದೆ. ಕೆಲವರು ಆಗಿದ್ದಾರೆ; ಇನ್ನು ಕೆಲವರು ಆಗುವವರು ಇದ್ದಾರೆ. ಅತಿ ಕಡಿಮೆ ವಯಸ್ಸಲ್ಲಿ (ರಾಜಕೀಯದಲ್ಲಿ) ಮೇಲೆ ಬಂದವರು. ಕನ್ನಡ ಭಾಷೆ ಸೇರಿ ಹಲವಾರು ಭಾಷೆಯಲ್ಲಿ ನಟನೆ ಮಾಡಿದ್ದಿರಿ. ಅದಕ್ಕೆ ಏನೊ ಗೊತ್ತಿಲ್ಲ ನಿಮ್ಮನ್ನು ಕಂಡರೆ ನನಗೆ ಕೂಡ ಎಲ್ಲಿಲ್ಲದ ಪ್ರೀತಿ. ಎಲ್ಲರಗಿಂತ ನಿಮ್ಮ ಮೇಲೆ ಅತಿ ಅಭಿಮಾನ. ಜನರೆಲ್ಲ ನಿಮ್ಮನ್ನು ಪ್ರೀತಿಯಿಂದ ಮೋಹಕ ತಾರೆಯೆಂದು ಕರೆಯುತ್ತಾರೆ.. ಅದರಲ್ಲಿ ನಾನು ಕೂಡ ಒಬ್ಬ. ಆದರೆ ನೀವು ಇತ್ತೀಚೆಗೆ ಮಾಡುತ್ತಿರುವುದಾದರೂ ಏನು?. ಸಾವರ್ಕರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿ ಒಬ್ಬ ನಿಸ್ವಾರ್ಥ ನಿಷ್ಠಾವಂತ ದೇಶಭಕ್ತನಿಗೆ ನೀವು ಅಪಮಾನ ಮಾಡಿದ್ದಿರಲ್ಲ ಏನನ್ನನಬೆಕು ನಿಮಗೆ. ರಾಜಕೀಯದಲ್ಲಿದ್ದು ದಿನಕ್ಕೊಂದು ಡೊಂಬರಾಟ ಆಡುತಿದ್ದಿರಿ. ಮಾತು ಮಾತಿಗೆ ನಾವು ದೇಶಕ್ಕೆ ಸ್ವತಂತ್ರ ತಂದು ಕೊಟ್ಟವರೆಂದು ಬೊಬ್ಬೆ ಹೊಡಿಯುತ್ತಿರುವ ನಿಮ್ಮ ಕಾಂಗ್ರೇಸಿನಿಂದ ಏಷ್ಟು ಜನ ಗಲ್ಲಿಗೇರಿದ್ದಾರೆ, ಏಷ್ಟು ಜನ ಅಂಡಮಾನ ಜೈಲಿಗೆ ಹೋಗಿ ಕರಿ ನೀರಿನ ಶಿಕ್ಷೆ ಅನುಭವಿಸಿದ್ದಾರೆ ಹೇಳುವಿರಾ? ಯಾವುದು ನೀವು ಓದಿರುವ ಇತಿಹಾಸ? ಮತ್ತಷ್ಟು ಓದು »

7
ಜೂನ್

ಸಂಸ್ಕೃತಕ್ಕಾಗಿ ಯುದ್ಧ

– ಪ್ರವೀಣ ಜಿ ಹೆಗ್ಡೆ

“ಅಮೆರಿಕನ್ ಓರಿಯಂಟಲಿಸ್ಮ್” ಅಥವಾ ಅಮೇರಿಕಾ ಚಿಂತನಾ ವಿಧಾನ/ರೀತಿ , ಇದು ಅಮೇರಿಕಾದ ಇತಿಹಾಸದಿಂದ ಹುಟ್ಟಿರುವಂಥದ್ದು. ಯೂರೋಪಿನಿಂದ ಅಮೆರಿಕಾಕ್ಕೆ ವಲಸೆ ಹೋದ ಬಿಳಿಯರು , ಅಲ್ಲಿಯ ಮೂಲ ನಿವಾಸಿಗಳ ಜೊತೆ ಕಾದಾಡಿ ಹಿಂಸೆಯ ಮೂಲಕ, ಇಲ್ಲವೇ ಅವರ ಜೊತೆಗಿದ್ದಂತೆ ವರ್ತಿಸಿ ಆಂತರಿಕವಾಗಿ ನಿಶ್ಯಕ್ತಿಗೊಳಿಸುವ ಮೂಲಕ ತಮ್ಮ ಅಧಿಪತ್ಯವನ್ನು ಅಮೇರಿಕಾದಲ್ಲಿ ಸ್ಥಾಪಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯ.

ಈ ಪಾಶ್ಚಾತ್ಯ ದೃಷ್ಟಿಯ ಚೌಕಟ್ಟನ್ನೇ ಉಪಯೋಗಿಸಿ ,ಪಾಶ್ಚಾತ್ಯವಲ್ಲದ ಸಂಸ್ಕೃತಿಗಳನ್ನೂ ಅಧ್ಯಯಿಸುವುದು ಸಾಮಾನ್ಯವಾಗಿ ಜಗತ್ತಿನಾದ್ಯಂತ ರೂಢಿಯಲ್ಲಿರುವ ವಿಷಯ. ಆದರೆ ಇಲ್ಲೊಂದು ಅತ್ಯಂತ ಗಮನಾರ್ಹವಾದ ವಿಷಯವಿದೆ, ಅದ್ಯಾವುದೆಂದರೆ ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯ ಮೇಲೆ ಹೆಚ್ಚಾಗುತ್ತಿರುವ ಅಮೇರಿಕಾ ಪ್ರಣೀತ ಅಧ್ಯಯನದ ಪ್ರಾಬಲ್ಯ. ಅದರಲ್ಲಿಯೂ ಗಮನಿಸಲೇಬೇಕಾದ ಅತೀ ಎಚ್ಚರಿಕೆಯ ಮತ್ತು ಸೂಕ್ಷ್ಮ ವಿಷಯವೇನೆಂದರೆ,ಅವರುಗಳು ಮೇಲು ಮೇಲೆ ಭಾರತದ ಸಂಸ್ಕೃತಿಯ ಹಿತೈಷಿ ಎನ್ನುವಂತೆ ವರ್ತಿಸಿದರೂ, ಭಾರತದ ಪೂಜ್ಯ ,ಪವಿತ್ರ ಸಂಪ್ರದಾಯಗಳ ಮತ್ತು ಸನಾತನ ಧರ್ಮದ ಬಗೆಗೆ ಅವರಿಗಿರುವ ಕನಿಷ್ಠ ಗೌರವ ಮತ್ತು ಕಾಳಜಿ.

ರಾಜೀವ ಮಲ್ಹೋತ್ರ ಅವರು ತಮ್ಮ ಪುಸ್ತಕದಲ್ಲಿ “ಅಮೇರಿಕಾ ಚಿಂತನಾ ರೀತಿ” ಎಂಬುದು ಏನು, ಅದು ಭಾರತೀಯ ಸಂಸ್ಕೃತಿಯ ಅಧ್ಯಯನದಲ್ಲಿ ಯಾವರೀತಿಯಲ್ಲಿ ಉಪಯೋಗಿಸಲ್ಪಡುತ್ತಿದೆ ? ಎನ್ನುವುದನ್ನು ಅತಿ ಸ್ಪಷ್ಟವಾಗಿ ವಿವರಿಸಿದ್ದಾರೆ. ಪುಸ್ತಕದ ತಲೆ ಬರಹ ಹೇಳುವಂತೆ,ಸಂಸ್ಕೃತ ರಾಜಕೀಯ ಸಾಧನವೋ ಅಥವಾ ಪವಿತ್ರವೋ ? ಶೋಷಣೆಯೋ ಅಥವಾ ವಿಮೊಚನೆಯೋ?ಸತ್ತಿಹುದೋ ಅಥವಾ ಬದುಕಿಹುದೋ?

ಮಲ್ಹೋತ್ರರವರು, ಅಮೇರಿಕಾ ಶಿಕ್ಷಣದಲ್ಲಿ ಬೇರೂರಿರುವ ಹೊಸ ರೀತಿಯ “ಓರಿಯಂಟಲಿಸ್ಮ್“ ಅಥವಾ ಚಿಂತನಾ ವಿಧಾನ/ರೀತಿಯ ಬಗೆಗೆ ಬರೆದಿರುವ ಅತೀ ಪ್ರಮುಖರು. ಅಮೆರಿಕಾ ದೇಶವು ಜಗತ್ತಿನ ದೊಡ್ಡಣ್ಣನಾಗಿ, ಎಲ್ಲ ಕ್ಷೇತ್ರಗಳಲ್ಲಿಯೂ ಹಿಡಿತ ಸಾಧಿಸುವುದರೊಂದಿಗೆ, ಹಿಂದಿನಿಂದ ನಡೆದುಕೊಂಡು ಬಂದಿದ್ದ ಯೂರೋಪ್ ಕೇಂದ್ರಿತವಾಗಿದ್ದ ಭಾರತೀಯ ಧರ್ಮ, ಸಂಸ್ಕೃತಿಗಳ ಅಧ್ಯಯನವು ಈಗ ಅಪ್ರಸ್ತುತವಾಗಿ, ಅದರ ಸ್ಥಾನವನ್ನು ಅಮೇರಿಕ ಕೇಂದ್ರಿತ ಭಾರತದ ಅಧ್ಯಯನ ಆಕ್ರಮಿಸಿಕೊಂಡಿದೆ.

ಅಮೇರಿಕಾದ ಅಧ್ಯಯನ ಮಾಡುವ “ಚಿಂತನಾ ವಿಧಾನ” ಭಾರತೀಯ ಸಂಸ್ಕೃತಿಗೆ ಹೇಗೆ ಅಪಾಯಕಾರಿ ?

ಮತ್ತಷ್ಟು ಓದು »

5
ಜೂನ್

ಕಂದ ನೀನು ಸಾಯಲೇಕೆ…

– ಮಂಜುನಾಥ ಕೊಳ್ಳೇಗಾಲ

ಕಳೆದೆರಡು ದಿನದಿಂದ ಆ ಮುಗ್ಧ ಕರುವಿನ ಚಿತ್ರ ಪದೇಪದೇ ನಿದ್ದೆಗೆಡಿಸುತ್ತಿದೆ. ಮೊನ್ನೆ ಕೇರಳದಲ್ಲಿ ಕೆಲವು ರಕ್ಕಸರು ಪ್ರತಿಭಟನೆಯ ಹೆಸರಿನಲ್ಲಿ ಕಡಿದು ತಿಂದು ತೇಗಿದರಲ್ಲ,ಕಡಿಯಲು ಟೆಂಪೋ ಹತ್ತಿಸುವ ಕೆಲವೇ ಕ್ಷಣಗಳ ಹಿಂದೆ ಕೂಡ, ಬಲಿಗೆ ಹೋಗುವ ಪ್ರಾಣಿಗಳ ಕಣ್ಣುಗಳಲ್ಲಿ ಸಾಮಾನ್ಯವಾಗಿ ಕಾಣುವ ಭಯದ ಸೂಚನೆಯೂ ಇಲ್ಲ ಅದರ ಮೊಗದಲ್ಲಿ. ಇನ್ನೈದೇ ನಿಮಿಷದಲ್ಲಿ ತನ್ನನ್ನು ಕೊಲ್ಲುತ್ತಾರೆಂಬ ಅರಿವೂ ಇರಲಾರದು ಪಾಪದ್ದಕ್ಕೆ. ಕೇವಲ ಯಾರದೋ ಮೇಲಿನ ಹುರುಡಿಗಾಗಿ ಅದನ್ನು ಕತ್ತರಿಸಿ ಚೆಲ್ಲಿದ ಕಟುಕರು ಆ ಮೊಗವನ್ನು, ಆ ಭಾವವನ್ನು ಕ್ಷಣಕಾಲವಾದರೂ ನಿರುಕಿಸಿದ್ದರೇ? ಖಂಡಿತಾ ಇರಲಿಕ್ಕಿಲ್ಲ.

ಬಾಲ್ಯದಲ್ಲಿ ನಾನು ಕೊಟ್ಟಿಗೆಯಲ್ಲಿ ಕೂತು ದಿನಗಟ್ಟಲೆ ಹರಟುತ್ತಿದ್ದ ತುಂಗೆ ಕರುವೂ ಬಹುತೇಕ ಹೀಗೇ ಇತ್ತು. ಅದೇ ಬಟ್ಟಲುಗಣ್ಣು, ಅದೇ ಹೊಳಪು, ಅದೇ ಮಾಟವಾದ ಮೋರೆ, ತುಸುವೇ ನಗುವಂತಿದ್ದ ಮುಖಭಾವ, ಹಣೆಯ ಮೇಲೆ ಅದೇ ಬಿಳಿಯ ಲಾಂಛನ. ಮೈಬಣ್ಣವೊಂದು ತುಸು ತಿಳಿದು, ವಯಸ್ಸೊಂದು ಇನ್ನೂ ಚಿಕ್ಕದು… ಅಂಥದ್ದೊಂದು ಮುದ್ದಾದ ಜೀವಿಗೆ ಇಂಥ ದಾರುಣವಾದ ಅಂತ್ಯವೂ ಸಾಧ್ಯವಿರಬಹುದೆಂದು ಯೋಚಿಸಲೂ ಆಗದ ವಯಸ್ಸು ಅದು. ಹಾಲು ಕರೆಯುವುದನ್ನು ನಿಲ್ಲಿಸಿದ ಹಸುವಿಗೂ ಮನೆಯಲ್ಲಿ ಹೊರೆ ಹುಲ್ಲು, ಒಂದಷ್ಟು ’ತಿಂಡಿ’ ದಕ್ಕುತ್ತಿತ್ತು; ಮೇಯಲು ಗೋಮಾಳವಿತ್ತು. ಸತ್ತವುಗಳನ್ನು ಸಾಮಾನ್ಯವಾಗಿ ಮಾದಿಗರು ಒಯ್ಯುತ್ತಿದ್ದರಾದರೂ ಕೆಲವು ಮನೆಗಳಲ್ಲಿ ಮನೆಯ ಸದಸ್ಯರಂತೆಯೇ ಇರುತ್ತಿದ್ದ ಅವುಗಳು ಆನಂತರ ಛಿದ್ರಛಿದ್ರವಾಗಿ ಹೋಗುವುದನ್ನು ಕಲ್ಪಿಸಿಕೊಳ್ಳಲಾಗದೇ ಕೆಲವು ಮನೆಯವರು ತಮ್ಮ ಜಾಗೆಯಲ್ಲೇ ಮಣ್ಣು ಮಾಡುತ್ತಿದ್ದುದೂ, ಅದಕ್ಕಾಗಿ ಕೆಲವೊಮ್ಮೆ ಮಾದಿಗರು ಬಂದು ಜಗಳವಾಡುತ್ತಿದ್ದುದೂ ಉಂಟು – ಆಗ ಅದರ ಹಿಂದಿನ ಆರ್ಥಿಕತೆ, ಸಾಮಾಜಿಕ ನಡಾವಳಿಗಳು ನನಗಿನ್ನೂ ಅರ್ಥವಾಗದ ವಯಸ್ಸು. ಹೋರಿಗರುಗಳನ್ನೂ ಅವು ಹಾಲು ಕುಡಿಯುವುದನ್ನು ಬಿಡುವವರೆಗೆ ಇಟ್ಟುಕೊಂಡು ಆಮೇಲೆ ಅದನ್ನು ರೈತರಿಗೆ ಮಾರುತ್ತಿದ್ದುದನ್ನೂ, “ಕಟುಕರಿಗೆ ಮಾರಿಗೀರೀಯ” ಎಂಬ ಕೊನೆಯ ಎಚ್ಚರಿಕೆಯೊಂದಿಗೆ ಬೀಳ್ಕೊಡುತ್ತಿದ್ದುದನ್ನೂ ನೋಡಿದ್ದೇನೆ. ಆಮೇಲೆ ಅವುಗಳ ಗತಿ ಏನಾಗುತ್ತಿತ್ತೋ ಅರಿಯೆ – ಕೆಲವೊಮ್ಮೆ ಅವು ’ಮನೆ’ಯನ್ನು ಹುಡುಕಿಕೊಂಡು ಕೊಟ್ಟಿಗೆಗೇ ಮರಳಿ ಬಂದದ್ದೂ, ಆಗೆಲ್ಲಾ ಅವಕ್ಕೊಂದಷ್ಟು ಹುಲ್ಲು ಹಾಕಿ, ಮೈದಡವಿ, ’ಬುದ್ಧಿ ಹೇಳಿ’ ಮತ್ತೆ ಹೊಸ ಯಜಮಾನರ ಬಳಿ ಕಳಿಸುತ್ತಿದ್ದುದೂ ಉಂಟು.

ಮತ್ತಷ್ಟು ಓದು »

1
ಜೂನ್

ಒಂದು ಹೊತ್ತು ಉಪವಾಸ ಮಾಡಿ, ಅದರ ಹಣದಲ್ಲಿ ಗೋವುಗಳನ್ನು ಉಳಿಸಿಕೊಳ್ಳುವ ವಿನೂತನ ಅಭಿಯಾನ #GiveUpAMeal ಹಿಂದಿನ ಕತೆ..

ಅಜಿತ್ ಶೆಟ್ಟಿ
ಹೆರಂಜೆ ದೊಡ್ಡಮನೆ.

ಗೋಹತ್ಯೆ ತಡೆಗಾಗಿನ ಕೂಗು ಭಾರತದಲ್ಲಿ ಬಹಳ ಹಿಂದಿನದು, ಇತ್ತೀಚಿನ ಡಿಜಿಟಲ್ ಇಂಡಿಯಾ ಯುಗದಲ್ಲಿ ಅದು ಸೋಷಿಯಲ್ ಮೀಡಿಯದಲ್ಲೂ ಸದ್ದು ಮಾಡುತ್ತಿದೆ.. ನಮ್ಮ ಯುವಕರು ಗೋಹತ್ಯೆ ನಿಲ್ಲಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬಡಿದುಕೊಳ್ಳುವಾಗ ಸೋಕಾಲ್ಡ್ ಪ್ರಗತಿಪರರು ಸೋಷಿಯಲ್ ಮೀಡಿಯದಲ್ಲಿರುವ ಮಂದಿಗೆ ತಲೆ ಇಲ್ಲ, ಅವರಿಗೆ ಅಷ್ಟು ಪ್ರೀತಿ ಇದ್ದರೆ ಒಂದೆರಡು ಗೋವುಗಳನ್ನು ಸಾಕಲಿ, ಗೋಶಾಲೆ ನಡೆಸಲಿ ಹೀಗೆ ಹಲವಾರು ಪ್ರಶ್ನೆಗಳನ್ನೊಡ್ಡಿ ಬಾಯಿ ಮುಚ್ಚಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ನಮ್ಮ ಯುವಕರ ಕೂಗು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಇದೆಯಾ ಅಥವಾ ನಿಜವಾಗಲೂ ಗೋವುಗಳನ್ನು ಉಳಿಸಿಕೊಳ್ಳುವ ಕಾಳಜಿ ಇದೆಯಾ, ಪೂಜ್ಯ ಭಾವನೆ ಇಟ್ಟುಕೊಂಡಿದ್ದಾರ ಎಂದು ನೋಡಿದರೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ನಡೆದ ಒಂದು ಅಭಿಯಾನ ಯುವ ಜನತೆ ಬಗ್ಗೆ ಹೆಮ್ಮೆ ಮೂಡಿಸುತ್ತದೆ ಎಂದು ಭಾವಿಸುತ್ತೇನೆ. ಈ ಅಭಿಯಾನದ ಒಳಗೆ ಹೋಗುವ ಮೊದಲು ಅಭಿಯಾನದ ಪೂರ್ವ ಪ್ರೇರಣೆಯ ಕಡೆ ಒಮ್ಮೆ ಗಮನ ಹರಿಸೋಣ. ನಮ್ಮ ದೇಶದಲ್ಲಿ ಗೋವು ಪ್ರತಿ ರೈತನ ಬೆನ್ನೆಲುಬು, ದೇಶಿ ಗೋವುಗಳು ಅವನತಿ ಹೊಂದಿದರೆ ರಾಸಾಯನಿಕ ಮುಕ್ತ ಕೃಷಿ ಎನ್ನುವುದು ಕನಸಾಗುವುದು ನಿಶ್ಚಿತ. ಇಂತಹ ಸತ್ಯಗಳು ನಮ್ಮ ಸಮಾಜಕ್ಕೆ, ಜನನಾಯಕರಿಗೆ ಗೊತ್ತಿಲ್ಲ ಅಂತೇನು ಇಲ್ಲ.. ಆದರೂ ಓಲೈಕೆ ರಾಜಕಾರಣಕ್ಕಾಗಿ ಗೋಹತ್ಯೆಯನ್ನು ನಿಲ್ಲಿಸಲಾಗುತ್ತಿಲ್ಲ, ನಾವು ಗಾಂಧೀಜಿ ಅನುಯಾಯಿಗಳು ಎಂದವರೇ ದಶಕಗಳ ಕಾಲ ದೇಶವನ್ನು ಆಳಿದರೂ ಗಾಂಧಿ ಕನಸನ್ನು ನನಸು ಮಾಡದೆ ಹೊಣೆಗೇಡಿಗಳಂತೆ ವರ್ತಿಸಿದ್ದಾರೆ. ಇವೆಲ್ಲವುಗಳ ನಡುವೆ ಬರಗಾಲದಿಂದ ಸಾಯುತ್ತಿರುವ ಜಾನುವಾರುಗಳನ್ನು ಉಳಿಸಿ ರೈತನ ಬಾಳನ್ನು ಬಲಗೊಳಿಸುವ ಪ್ರಾಮಾಣಿಕ ಕಾರ್ಯವನ್ನಾದರೂ ಮಾಡುತ್ತಾರೆ ಎಂದುಕೊಂಡರೆ ಅದನ್ನು ಮಾಡದೇ ಅದರಲ್ಲೂ ಭ್ರಷ್ಟಾಚಾರ ಮಾಡಿಕೊಂಡು ಮಜ ಮಾಡುತ್ತಿದ್ದಾರೆ.. ಇಂತಹ ಸಂಧಿಘ್ನ ಪರಿಸ್ಥಿತಿಯಲ್ಲಿ ಮಠಗಳು, ಸಂಘ ಸಂಸ್ಥೆಗಳು ರೈತರ ಬೆನ್ನಿಗೆ ನಿಂತು ಗೋಶಾಲೆಗಳನ್ನು ತೆರೆದು ಗೋವುಗಳನ್ನು ಉಳಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾರೆ. ಇದರ ಒಂದು ಭಾಗವಾಗಿ ರಾಮಚಂದ್ರ ಪುರ ಮಠವು ಸಹ ೧೪ ಜಿಲ್ಲೆಗಳಲ್ಲಿ ಗೋಶಾಲೆಗಳನ್ನು ತೆರೆದು ಗೋವುಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಮತ್ತಷ್ಟು ಓದು »

31
ಮೇ

ಅಮಿತ್ ಷಾ ಲಕ್ಷದ್ವೀಪ ಪ್ರವಾಸ ವಿಸ್ತಾರದ ಮತ್ತೊಂದು ಮಜಲು…

ಸಂತೋಷ್ ಬಿ.ಎಲ್
ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ
ಭಾಜಪ

ವಿಸ್ತಾರ-ವಿಕಾಸ ಬಿಜೆಪಿಗೆ ಒಂದೇ ನಾಣ್ಯದ ಎರಡು ಮುಖಗಳು. ಬಹುಮತದಲ್ಲಿ ನಿಲ್ಲದೇ ಸರ್ವವ್ಯಾಪಿಯಾಗಬೇಕು.. ಸರ್ವಸ್ಪರ್ಶಿಯಾಗಬೇಕು ಎಂಬುದು ಬಿಜೆಪಿಯ ಗುರಿ. ವಿಚಾರ-ವಿಕಾಸ-ಸಂಘಟನೆ ನಮ್ಮ ಬೆಳವಣಿಗೆಯ ಮೂರು ಆಯಾಮಗಳು. ವಿಕಾಸ ಪುರುಷ ನರೇಂದ್ರ ಮೋದಿಯವರ ನೇತೃತ್ವ ವಿಸ್ತಾರ ಪುರುಷ ಅಮಿತ್ ಷಾರವರ ಸಾರಥ್ಯ ಇಂದು ಬಿಜೆಪಿಯನ್ನು ದೇಶದ ಮೂಲೆ ಮೂಲೆಗಳಿಗೆ ಕೊಂಡೊಯ್ಯುತ್ತಿದೆ. ಪ್ರತೀ ಮನೆ-ಮನವನ್ನು ಮುಟ್ಟುವ ಯೋಜನೆಯೊಡನೆ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ಎಂಬ ಗುರಿಯೊಡನೆ ಬಿಜೆಪಿಯ ಯಾತ್ರೆ ಭರದಿಂದ ಸಾಗಿದೆ. ಪಂ.ದೀನದಯಾಳ ಉಪಾಧ್ಯಾಯ ಜನ್ಮಶತಾಬ್ದಿ ವರ್ಷ ಈ ಯಾತ್ರೆಗೆ ಇನ್ನಷ್ಟು ಹುರುಪು ತುಂಬಿದೆ. 3 ಸಾವಿರಕ್ಕೂ ಮಿಕ್ಕಿ 1 ವರ್ಷದ ‘ವಿಸ್ತಾರಕ’ರು ಹಾಗೂ 4 ಲಕ್ಷಕ್ಕೂ ಹೆಚ್ಚು 15 ದಿನ ಸಮಯ ನೀಡುವ ‘ವಿಸ್ತಾರಕ’ರನ್ನು ಹೊರಡಿಸುವುದು ನಮ್ಮ ಗುರಿ. ಆ ಗುರಿಗೆ ಚೈತನ್ಯ ತುಂಬಲು ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾರವರು ಸ್ವತಃ ತಾವು 15 ದಿನ ವಿಸ್ತಾರಕರಾಗಿ ‘ವಿಸ್ತಾರ ಯಾತ್ರೆ’ ಘೋಷಣೆ ಮಾಡಿದರು. ಪಶ್ಚಿಮ ಬಂಗಾಲ, ಓರಿಸ್ಸಾ, ತೆಲಂಗಾಣ, ಲಕ್ಷದ್ವೀಪ ಹಾಗೂ ಗುಜರಾತ್‌ನಲ್ಲಿ 3 ದಿನ ಕೆಲಸ ಮಾಡುವ ಸಂಕಲ್ಪ ಘೋಷಿಸಿದರು. ಈ ಘೋಷಣೆಯೇ ಪಕ್ಷದ ಒಳಗೆ ವಿದ್ಯುತ್ ಸಂಚಾರ ಮೂಡಿಸಿತು. ಮತ್ತಷ್ಟು ಓದು »

31
ಮೇ

ಆಫ್ರಿಕಾದ ಕಾಡಿನಲ್ಲೊಂದು ಸರ್ಜಿಕಲ್ ಸ್ಟ್ರೈಕ್ ಭಾಗ 2

– ತಾರನಾಥ ಸೋನ

ಆಫ್ರಿಕಾದ ಕಾಡಿನಲ್ಲೊಂದು ಸರ್ಜಿಕಲ್ ಸ್ಟ್ರೈಕ್  ಭಾಗ-1

ಸಾಸ್ ಅರಣ್ಯದಲ್ಲಿ  ಇಷ್ಟೆಲ್ಲ ಆಗುತ್ತಿರುವಾಗ ಇತ್ತ ಕಡೆ ಬ್ರಿಟಿಷ್ ಸೇನೆಯಲ್ಲಿ ಸದ್ದಿಲ್ಲದಂತೆ ರೂಪುರೇಷೆಯೊಂದು ತಯಾರಾಗಿತ್ತು. ಅಪಹೃತರನ್ನು ರಕ್ಷಿಸಲು ಬ್ರಿಟಿಷ್ ಪ್ರಧಾನಿ ಟೋನಿ ಬ್ಲೇರ್ ರಹಸ್ಯ ಕಾರ್ಯಾಚರಣೆ ಒಂದಕ್ಕೆ ಅನುಮತಿ ಕೊಟ್ಟರು. ಅದುವೇ ಆಪರೇಷನ್ ಬರ್ರಾಸ್.  ಇಂತಹ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಗೆಂದು ಸಿದ್ದವಾಗಿದ್ದ ಸಾಸ್ (SAS- Special Air service) ತನ್ನ ಪರಿವೀಕ್ಷಣಾ ತಂಡವೊಂದನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ವೆಸ್ಟ್ ಸೈಡ್ ಬಾಯ್ಸ್ಗಳ ತಾಣದತ್ತ ಕಳುಹಿಸಿತು. ಅಪಹೃತರನ್ನು ಕೂಡಿ ಹಾಕಿದ್ದ ಪ್ರದೇಶದ ಸ್ವಲ್ಪ ದೂರದಲ್ಲಿ ಅಡಗಿಕೊಂಡ ಇವರು ಸೂಕ್ಷ್ಮ ಮೈಕ್ರೋಫೋನ್ ಮೂಲಕ ಅಲ್ಲಿಂದ ಕೇಳಿ ಬರುವ ಮಾತುಕತೆಗಳನ್ನು ಆಲಿಸಲಾರಂಭಿಸಿದರು. ಬೇಡಿಕೆಗಳ ಈಡೇರಿಕೆ ತಡವಾದಂತೆ ಉಗ್ರರು ಯೋಧರನ್ನು ಹಿಂಸಿಸಲಾರಂಭಿಸಿದರು. ಗುಂಡಿಯೊಳಗೆ ಜೀವಂತ ಶವವಾಗಿದ್ದ ಮುಸ ಬಂಗುರಾನ ಪರಿಸ್ಥಿತಿ ದಿನಕಳೆದಂತೆ ಬಿಗಡಾಯಿಸುತಿತ್ತು. ಗ್ಯಾಂಗ್ ಜತೆಗಿದ್ದ ಸಣ್ಣ ಸಣ್ಣ ಬಾಲಕರು ಕೂಡ ಅವನಿಗೆ ಕಲ್ಲು ಹೊಡೆಯುತ್ತಿದ್ದರು. ಮೇಜರ್ ಅಲನ್ ಮಾರ್ಷಲ್ರನ್ನು ಅಂತಾರಾಷ್ಟ್ರೀಯ ಮಾಧ್ಯಮದ ಜೊತೆಗೆ ಫೋನ್ನಲ್ಲಿ ಮಾತಾಡುವಂತೆ ಒತ್ತಾಯಿಸಲಾಗುತ್ತಿತ್ತು, ಒಪ್ಪದಿದ್ದಾಗ ಕೊಲ್ಲುವುದಾಗಿ ಹೆದರಿಸುತಿದ್ದರು. ಇದನ್ನು ಪರಿವೀಕ್ಷಣಾ ತಂಡ ಮುಖ್ಯನೆಲೆಗೆ ವರದಿ ಮಾಡುತ್ತಿತ್ತು.

ಸಿಯಾರ್ ಲಿಯೋನ್ನ ಮುಖ್ಯ ನದಿಯಾದ ರೊಕೆಲ್ ಕ್ರೀಕ್ ನ ಉತ್ತರ ಭಾಗದಲ್ಲಿ ಒತ್ತೆಯಾಳುಗಳನ್ನು ಕೂಡಿ ಹಾಕಿದ ಗಬೇರಿ ಬಾನ ಇದ್ದರೆ, ನದಿಯ ದಕ್ಷಿಣ ಭಾಗದ ಮ್ಯಾಗ್ಬೇನಿಯಲ್ಲಿ  ಅವರದ್ದೆ ಇನ್ನೊಂದು ತಾಣವಿತ್ತು. ಸಾಸ್ ತಂಡ  ಕೇವಲ ಗಬೇರಿ ಬಾನಕ್ಕೆ ಧಾಳಿ ನಡೆಸಿದರೆ ಅಲ್ಲಿಂದ ಸುಮಾರು 2 km ದೂರದ ಮ್ಯಾಗ್ಬೇನಿಯಲ್ಲಿದ್ದ ಉಗ್ರರ ಪ್ರತಿರೋಧ ಎದುರಿಸಬೇಕಿತ್ತು. ಹಾಗಾಗಿ ಏಕಕಾಲದಲ್ಲಿ ನದಿಯ ಎರಡು ಬದಿ ಧಾಳಿ ಮಾಡಬೇಕಿತ್ತು. ಈ ಸಂಯುಕ್ತ ಧಾಳಿಗೆ ಬ್ರಿಟಿಷ್ ಪ್ಯಾರಾಚೂಟ್ ರೆಜಿಮೆಂಟ್ನ 130 ಯೋಧರನ್ನು ಬಳಸಿಕೊಳ್ಳಲು ನಿರ್ಧರಿಸಿದರು. ದಟ್ಟವಾದ ಅರಣ್ಯ, ಅಪಾಯಕಾರಿ ರಸ್ತೆಮಾರ್ಗ ಮತ್ತು ಹರಿಯುವ ನದಿಯಿಂದಾಗಿ ವಾಯುಮಾರ್ಗದಲ್ಲಿ ಧಾಳಿ ಮಾಡಲು ಯೋಜಿಸಲಾಯಿತು. ಶತ್ರುಗಳು ಹೊಂದಿರುವ ಆಯುಧಗಳು, ಚಲನವಲನ ಹಾಗು ಹೆಲಿಕ್ಯಾಪ್ಟರ್ ಇಳಿಯಲು ಸೂಕ್ತ ಜಾಗ ಮೊದಲಾದ ಮಾಹಿತಿಯನ್ನು ಸಾಸ್ ನ  ಪರಿವೀಕ್ಷಣಾ ತಂಡ ಒದಗಿಸಿತು. ಒಂದು ರಹಸ್ಯ ತಾಣದಲ್ಲಿ ಕಾರ್ಯಾಚರಣೆಯ ರಿಹರ್ಸಲ್ ಕೂಡ ನಡೆಸಿದ್ದರು, ಏಕೆಂದರೆ 12 ಮಂದಿ ಸೇನೆಯ ಒತ್ತೆಯಾಳುಗಳು ಹಾಗು ಹೀಗೆಯೇ ಬಂಧಿತರಾಗಿದ್ದ ಕೆಲವು ಸಿಯರ್ ಲಿಯೋನ್ ನಾಗರಿಕರ ಪ್ರಾಣಕ್ಕೆ ಕುತ್ತು ಉಂಟಾಗಬಾರದಿತ್ತು.

ಮತ್ತಷ್ಟು ಓದು »

31
ಮೇ

ಯಶಸ್ಸಿನಿಂದ ಮುನ್ನುಗ್ಗುತ್ತಿರುವ #ಗೋಪ್ರಾಣಭಿಕ್ಷೆ

-ಶಿಶಿರ್ ಅಂಗಡಿ

ಸಾಮೂಹಿಕ ಪ್ರಾರ್ಥನೆ,ಸಮಾಜದ ಸಹಾಕರ ~ ಯಶಸ್ಸಿನಿಂದ ಮುನ್ನುಗ್ಗುತ್ತಿರುವ #ಗೋಪ್ರಾಣಭಿಕ್ಷೆ

ಪ್ರಾರ್ಥನೆ ಅಂದ್ರೆ ನಿಸ್ವಾರ್ಥವಾಗಿ ಒಳ್ಳೆಯ ಕೆಲಸಗಳನ್ನು ಮಾಡೋದು.ಪ್ರಾರ್ಥನೆ ಅಂದ್ರೆ ರಸ್ತೆ ದಾಟಲು ಕಷ್ಟ ಪಡುತ್ತಿರುವ ವೃದ್ಧರಿಗೆ, ಮಕ್ಕಳಿಗೆ ಸಹಾಯ ಮಾಡುವದು.ಪ್ರಾರ್ಥನೆ ಅಂದ್ರೆ ಇ‌ನ್ನೊಬ್ಬರಿಗೆ ಹೃದಯಾಂತರಾಳದಿಂದ ಶುಭವನ್ನು ಹಾರೈಸುವುದು.ಸಾಮೂಹಿಕ ಪ್ರಾರ್ಥನೆಗೆ ದೇವರನ್ನೇ ಧರೆಗಿಳಿಸುವ ಶಕ್ತಿ ಇದೆ ಅಂತ ಹೇಳ್ತಾರೆ.ಪ್ರಾರ್ಥನೆ ಎಂದರೆ ದೇವರ ಎದುರಿನಲ್ಲಿ ಬೇಡುವುದು ಎಷ್ಟು ಸರಿಯೋ, ಇನ್ನೊಬ್ಬರಿಗೆ ಒಳಿತು ಬಯಸುವುದು, ಒಳಿತನ್ನು ಮಾಡುವುದು ಕೂಡ ಅಷ್ಟೇ ಸರಿ ಎನ್ನುತ್ತಾರೆ ಬಲ್ಲವರು.

ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಸಾವಿನಂಚಿನಲ್ಲಿರುವ ಗೋವುಗಳ ಶೋಷನೀಯ ಸ್ಥಿತಿ ಮನಗಂಡು ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತಿ ಮಹಾಸ್ವಾಮಿಗಳವರು ಕೊಟ್ಟ ಒಂದು ಕರೆಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಗೋಪ್ರೇಮಿಗಳು ದೇಶದ ಉದ್ದಗಲಗಳಿಂದ ದೊಡ್ಡ ಮಟ್ಟದಲ್ಲಿ ಸ್ಪಂದಿಸಿ ಸರಳ‌ ಭೋಜನ – ಸರಳ‌ ಜೀವನದೊಟ್ಟಿಗೆ ವಾರಕ್ಕೆ ಒಂದು ಹೊತ್ತಿನ ಊಟ ಬಿಟ್ಟು ಆ ಹಣವನ್ನು ಗೋಪ್ರಾಣಭಿಕ್ಷೆಗೆ ಸಮರ್ಪಿಸಿದ್ದಾರೆ. ಈ ಮೂಲಕ ಸಾವಿರಾರು ಟನ್ ಮೇವು ಖರೀದಿಗೆ ಸಹಕರಿಸಿದ್ದಾರೆ. ನೂರಾರು ಕಾರ್ಯಕರ್ತರು ಬೆಟ್ಟದ ತಪ್ಪಲಿನಲ್ಲಿ ಅವಿಶ್ರಾಂತವಾಗಿ ಸೇವೆ ಸಲ್ಲಿಸುತ್ತಾ ದಿನನಿತ್ಯ ಸಮಯಕ್ಕೆ ಸರಿಯಾಗಿ ಗೋವಿಗೆ ಮೇವು ತಲುಪುವಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ #GiveUpAMeal ಅಭಿಯಾನಗಳ ಮೂಲಕ ದೇಶದ ಒಳ ಹೊರಗಿನ ಒಂದು ಮಿಲಿಯನಗೂ ಅಧಿಕ ಜನರನ್ನು ತಲುಪಿದ್ದು ಬಹುಪಾಲು ಜನ ಈ ಅಭಿಯಾನಕ್ಕೆ ತನು-ಮನ-ಧನದ ಸಹಕಾರ ನೀಡಿದ್ದಾರೆ.

ಹಾಗೇಯೆ ದೃಶ್ಯ ಹಾಗೂ ಪತ್ರಿಕಾ ಮಾಧ್ಯಮಗಳೂ,‌ ನ್ಯೂಸ್ ಪೋರ್ಟಲ್,ಬ್ಲಾಗುಗಳೂ ಕೂಡ‌‌ ಅಭಿಯಾನದ ಪ್ರತಿಹಂತದಲ್ಲೂ ವಿಷಯಗಳನ್ನು ಸಮಾಜಕ್ಕೆ ತಲುಪಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿವೆ.

ಮತ್ತಷ್ಟು ಓದು »

30
ಮೇ

ಆಫ್ರಿಕಾದ ಕಾಡಿನಲ್ಲೊಂದು ಸರ್ಜಿಕಲ್ ಸ್ಟ್ರೈಕ್ (ಭಾಗ-1)

– ತಾರನಾಥ ಸೋನ

ಪಶ್ಚಿಮ ಆಫ್ರಿಕಾದ ಸಿಯಾರ್ ಲಿಯೋನ್

ಲೆಫ್ಟಿನಂಟ್ ಮುಸ ಬಂಗುರಾ ಬಂಧಿಯಾಗಿದ್ದ ಗುಂಡಿ ತುಂಬಾ ಆಳವೇನೂ ಇರಲಿಲ್ಲ, ಕೇವಲ 2 ಮೀಟರ್ ಅಷ್ಟೇ. ಆದರೆ ಸುತ್ತಲು ಹರಡಿದ್ದ ಮಾನವ ತ್ಯಾಜ್ಯ, ಕೆಸರು ನರಕದರ್ಶನ ಮಾಡಿಸುತಿತ್ತು. ಅದಲ್ಲದೆ ಹಲ್ಲೆಯಿಂದ ದೇಹದಲ್ಲಿ ಅದ ಗಾಯಗಳು ಅಪಾರ ಹಿಂಸೆ ಉಂಟುಮಾಡುತ್ತಿದ್ದವು. ಮದ್ಯ ಮತ್ತು ಮಾದಕ ಪದಾರ್ಥ ಸೇವಿಸಿ ಕ್ರೂರವಾಗಿ ದಂಡಿಸುತ್ತಿದ್ದ ನರ ರಾಕ್ಷಸರ ಕೈಯಿಂದ ಹೊರಬಂದು ಬದುಕುವ ಸಾಧ್ಯತೆಯೂ ಇರಲಿಲ್ಲ. ”ಉಳಿದ ಬ್ರಿಟಿಷರನ್ನು ಅವರು ಬಿಟ್ಟುಬಿಡಬಹುದು, ಆದರೆ ನಾನು ಅವರಷ್ಟು ಮೌಲ್ಯಯುತವಾಗಿಲ್ಲ, ಸೇನೆಗೆ ನಿಷ್ಠನಾಗಿ ಸೇವೆ ಸಲ್ಲಿಸಿದಕ್ಕೆ ಬಂಡುಕೋರರಿಂದ ಸಿಕ್ಕ ಶಿಕ್ಷೆ ಇದು” ಎಂದು ಅವರ ಮನಸ್ಸು ಹೇಳುತ್ತಿತ್ತು. ಏಕೆಂದರೆ ಅವರು ಸಿಯಾರ್ ಲಿಯೋನ್ ಸೇನೆಯ ಸೈನಿಕ. ಮತ್ತಷ್ಟು ಓದು »