ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

12
ಮೇ

ಪ್ರತಿಷ್ಠೆ ಮತ್ತು ಅನುಕಂಪದ ಸುಳಿಯಲ್ಲಿ ಉಪಚುನಾವಣೆಗಳು

– ಗೋಪಾಲಕೃಷ್ಣ

nanjana-gudu-live-election-live-updates-600x450-13-1492048906‘ಸೋ-ಕಾಲ್ಡ್ ಸ್ವಾಭಿಮಾನ’ಕ್ಕೆ ನಡೆದದ್ದು ನಂಜನಗೂಡು ಉಪಚುನಾವಣೆ, ಗೆದ್ದದ್ದು ಮಾತ್ರ ಸಿದ್ದರಾಮಯ್ಯನವರ ‘ಪ್ರತಿಷ್ಠೆ’. ‘ಪ್ರಜಾತಂತ್ರದ ಮೂಲ ಉದ್ದೇಶ’ಕ್ಕೆ ಕೊಡಲಿ ಪೆಟ್ಟು ಕೊಟ್ಟು ಗುಂಡ್ಲುಪೇಟೆಯಲ್ಲಿ ‘ಅನುಕಂಪ’ ಗೆಲುವಿನ ನಗೆ ಬೀರಿತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಒಂದು ದೇಶ, ಒಂದು ಚುನಾವಣೆ’ಯ ಬಗ್ಗೆ ಚರ್ಚೆ ಹುಟ್ಟು ಹಾಕುತ್ತಿರುವಾಗ ಹಾಗೂ ಇದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರೂ ದನಿಗೂಡಿಸಿರುವ ಈ ಸಂಧರ್ಭದಲ್ಲಿ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಗಳ ಅವಲೋಕನ ನಡೆಯಬೇಕಾದ ಅಗತ್ಯವಿದೆ. ಮತ್ತಷ್ಟು ಓದು »

9
ಮೇ

ಅನಿವಾರ್ಯತೆ…!

– ಗೀತಾ ಹೆಗ್ಡೆ

ನಮ್ಮಿಷ್ಟದಂತೆ ಜೀವನ ಸಾಗಿಸುವುದು ಅಷ್ಟು ಸುಲಭದಲ್ಲಿಲ್ಲ. ಕೆಲವೊಂದು ಅನಿವಾರ್ಯತೆಗಳು ಎದುರಾದಾಗ ನಾವು ತಲೆ ಬಾಗಲೇ ಬೇಕು. ಹಾಗೆ ಬದುಕುವುದು ನಮಗೆ ಇಷ್ಟವಿಲ್ಲದಿದ್ದರೂ ನಮಗಾಗಿ ಅಲ್ಲದಿದ್ದರೂ ಹೆತ್ತವರಿಗಾಗಿಯೋ, ಹೆಂಡತಿಗಾಗಿಯೋ, ಮಕ್ಕಳಿಗಾಗಿಯೋ, ಬಂಧು ಬಾಂಧವರಿಗಾಗಿಯೋ ಅಥವಾ ಈ ಸಮಾಜಕ್ಕಾಗಿಯೋ ನಮ್ಮತನವನ್ನು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳಲೇ ಬೇಕಾಗುತ್ತದೆ. ಆಗೆಲ್ಲ ಮನಸ್ಸಿಗೆ ಅತ್ಯಂತ ನೋವಾದರೂ ಅಥವಾ ನಮ್ಮ ಕಠಿಣ ನಿರ್ಧಾರದಿಂದ ಬೇರೆಯವರಿಗೆ ನೋವಾಗುವಂತಿದ್ದರೂ  ಹಾಗಿರದೆ ಗತಿ ಇಲ್ಲ. ಕಾರಣ ನಾವು ಈ ಸಮಾಜದಲ್ಲಿ ಬದುಕುತ್ತಿರುವವರು. ನಾವು ಮನುಷ್ಯ ಜನ್ಮದಲ್ಲಿ ಜನಿಸಿದವರು. ಇಲ್ಲಿ ಇತಿಹಾಸದಿಂದಲೂ ರೂಢಿಯಲ್ಲಿರುವ ಅನೇಕ ಕಟ್ಟುಪಾಡುಗಳಿವೆ. ರೀತಿ ರಿವಾಜುಗಳಿವೆ. ಇದನ್ನು ಮೀರಿ ನಡೆಯಲು ಸಾಧ್ಯವಿಲ್ಲ.  ಹಾಗೇನಾದರೂ ನಡೆದುಕೊಂಡರೆ ಅದು ಹುಟ್ಟಿದ ವಂಶಕ್ಕೆ ಕಳಂಕ ತರುವುದರಲ್ಲಿ ಸಂಶಯವಿಲ್ಲ. ಮತ್ತಷ್ಟು ಓದು »

4
ಮೇ

ಸಿದ್ಧಾಂತಕ್ಕಾಗಿ ಬದುಕುವ ಜೀವನ ಯಾವ ಸಂತರಿಗೂ ಕಡಿಮೆಯದ್ದಲ್ಲ..

– ಅರುಣ್ ಬಿನ್ನಡಿ

೨೫ ವರ್ಷಗಳ ಪ್ರಚಾರಕ್ ಜೀವನದಲ್ಲಿ ಗಳಿಸಿದ ಆಸ್ತಿ ಮೂರೂ ಜೊತೆ ಪಂಚೆ,ಎರಡು ಜುಬ್ಬ, ಎರಡು ಮೊಬೈಲ್, ಪುಸ್ತಕಗಳು ಜೊತೆಗೆ ಪ್ರಾಣಕೊಡುವ ಅಸಂಖ್ಯಾತ ಕಾರ್ಯಕರ್ತರು….

ಕೆಲವೊಮ್ಮೆ ಇಂದಿನ ಕರ್ನಾಟಕ ಬಿಜೆಪಿ ಯ ಸೈದ್ಧಾಂತಿಕ ತಿಕ್ಕಾಟಗಳಿಗೆ ನರೇಂದ್ರ ಮೋದಿಯೆ ಕಾರಣ ಎನ್ನಿಸಿ ಬಿಡುತ್ತದೆ, ಯುವ ಸಮುದಾಯವನ್ನು ಕಾಂಗ್ರೆಸಿನ ಪಾರಂಪರಿಕ ಓಲೈಕೆ ಹಾಗು ಜಾತಿ ರಾಜಕಾರಣದಿಂದ ರಾಷ್ಟ್ರೀಯತೆಯ ಸೈದ್ಧಾಂತಿಕ ರಾಜಕಾರಣಕ್ಕೆ, ಅಭಿವೃದ್ಧಿ ರಾಜಕಾರಣಕ್ಕೆ, ನೈತಿಕ ರಾಜಕಾರಣಕ್ಕೆ ಬದಲಾಯಿಸಿದ್ದೆ ದೊಡ್ಡ ಅಪರಾಧವಾಗಿಬಿಟ್ಟಿದೆ ಎನ್ನಬಹುದು. ಮತ್ತಷ್ಟು ಓದು »

3
ಮೇ

ಪೀರಾಯರು ಬರೆದ ಕಥೆ – ‘ತ್ರಿಕೋನ’ ( ಮುಂದುವರೆದ ಭಾಗ )

– ಮು. ಅ ಶ್ರೀರಂಗ ಬೆಂಗಳೂರು

ರಾಮಾಚಾರ್ಯರು ಸಂಜೆ ಐದು ಗಂಟೆಗೆ ಆಶ್ರಮದ ಶಾಲೆಯಿಂದ ಬಂದು ತಮ್ಮ ಕೊಠಡಿಯಲ್ಲಿ ಕೂತಿದ್ದರು. ಎಂದಿನಂತೆ ಅಡುಗೆಯವನು ಫ್ಲಾಸ್ಕಿನಲ್ಲಿ ಕಾಫಿ ತಂದು ಅವರ ಟೇಬಲ್ ಮೇಲೆ ಇಟ್ಟು ‘ಆಚಾರ್ಯರೇ ರಾತ್ರಿಗೆ ಏನು ಅಡಿಗೆ ಮಾಡಲಿ’ ಎಂದ.

‘ಬೆಳಗ್ಗೆಯ ಸಾರು ಮಿಕ್ಕಿರಬಹುದು. ಯಾವುದಾದರೊಂದು ಪಲ್ಯ ಮಾಡು ಸಾಕು. ಇವತ್ತು ಚಪಾತಿ ಬೇಡ’.

‘ಆಗಲಿ ಸ್ವಾಮಿ’ ಎಂದು ಅವನು ಕೊಠಡಿಯ ಬಾಗಿಲನ್ನು ಮುಂದಕ್ಕೆ ಎಳದು ಕೊಂಡು ಹೋದ. ಮತ್ತಷ್ಟು ಓದು »

1
ಮೇ

ಯಾರು ಹಿತವರು ಯಡ್ಯೂರಪ್ಪನವರಿಗೆ..?

ರಾಕೇಶ್ ಶೆಟ್ಟಿ

“ಕೊಟ್ಟ ಕುದುರೆಯನೇರಲರಿಯದೆ…” ವಚನದ ಸಾಲುಗಳು ಕರ್ನಾಟಕ ಬಿಜೆಪಿಯ ನಾಯಕರಿಗೆ ಸರಿಯಾಗಿ ಅನ್ವಯಿಸುತ್ತದೆ. ಎಪಿಎಂಸಿ,ಪಾಲಿಕೆ ಚುನಾವಣೆಗಳೆನ್ನದೇ ದೇಶದ ಮೂಲೆ ಮೂಲೆಯಲ್ಲೂ ಬಿಜೆಪಿ ಗೆದ್ದು ಬರುತ್ತಿರುವ ಕಮಲ ಪಕ್ಷದ ಸುವರ್ಣ ಸಮಯದಲ್ಲೂ, ರಾಜ್ಯ ಬಿಜೆಪಿ ನಾಯಕರು ಉಪಚುನಾವಣೆಯಲ್ಲಿ ಮಕಾಡೆ ಮಲಗಿ ಕಿರಗೂರಿನ ಗಯ್ಯಾಳಿಗಳಂತೆ ಕಾದಾಟಕ್ಕಿಳಿದಿದ್ದಾರೆ. ನಿನ್ನೆಯ ಸಂಘಟನೆ ಉಳಿಸಿ ಹೆಸರಿನ ಸಭೆ, ಅದಕ್ಕೆ ಪ್ರತಿಯಾಗಿ ನಡೆದ ಬೆಂಗಳೂರಿನ ಶಾಸಕ, ಸಂಸದರ ಪತ್ರಿಕಾಗೋಷ್ಟಿ, ನಾಯಕರೆನಿಸಿಕೊಂಡವರ ಏಕವಚನ ಪ್ರಯೋಗ, ಆರೋಪ-ಪ್ರತ್ಯಾರೋಪಗಳಿಂದಾಗಿ ನಿನ್ನೆ ಎಷ್ಟು ಮೆಗಾಧಾರವಾಹಿಗಳ ಟಿಆರ್ಪಿ ಕಡಿಮೆಯಾಯಿತೋ!

ದೇಶದ ಉಳಿದ ರಾಜ್ಯಗಳ ಬಿಜೆಪಿ, ನರೇಂದ್ರ ಮೋದಿಯವರ ಅಭಿವೃದ್ಧಿ ರಾಜಕಾರಣ ಮತ್ತು ಯುವ ಮನಸ್ಸುಗಳ ಆಲೋಚನಾ ಶಕ್ತಿಯಿಂದ ಮುಂದುವರೆಯುತ್ತಿದ್ದರೆ, ರಾಜ್ಯ ಬಿಜೆಪಿ ಮಾತ್ರ ಪುರಾತನ  ಜಾತಿ ಮತ್ತು ಓಲೈಕೆ ರಾಜಕಾರಣವನ್ನೇ ನೆಚ್ಚಿಕೊಂಡಿದೆ.ಈಶ್ವರಪ್ಪನವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಮುಖಂಡರೊಬ್ಬರು, ಕುರುಬರಿಗಾಗಿ ಈಶ್ವರಪ್ಪ ಏನು ಮಾಡಿದ್ದಾರೆ? ಯಡ್ಯೂರಪ್ಪನವರೇ ಕನಕ ಜಯಂತಿ ಆರಂಭಿಸಿದ್ದು ಎಂದು ಹೇಳುತ್ತಿರುವುದನ್ನು ಕೇಳಿದೆ. ಆಗಾಗ್ಗೆ ಬರುವ ಜಯಂತಿಗಳ ನೆಪದಲ್ಲಿ ರಜೆಗಳನ್ನು ಕೊಟ್ಟು ಸರ್ಕಾರಿ ಯಂತ್ರವನ್ನು ನಿಲ್ಲಿಸುವ ಪರಿಪಾಠಗಳು ಕೊನೆಯಾಗಬೇಕೆಂಬ ಉದ್ದೇಶದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಂತವರು ‘ಜಯಂತಿ ರಜೆ’ಗಳನ್ನೇ ಕಿತ್ತೊಗೆಯುವಂತಹ ಕೆಲಸ ಮಾಡುತ್ತಿರುವಾಗ, ರಾಜ್ಯ ಬಿಜೆಪಿಯ ನಾಯಕರ ಮನಸ್ಥಿತಿ ಇನ್ನೂ ಜಯಂತಿ ರಾಜಕಾರಣದಲ್ಲೇ ಇರುವುದು ಇವರ ಯೋಚನಾ ಲಹರಿ ಯಾವ ಕಾಲದಲ್ಲಿದೆ ಎಂದು ಸೂಚಿಸುತ್ತದೆ. ಹಾಗೆ ನೋಡಿದರೇ ಕಾಂಗ್ರೆಸ್ಸಿನ ‘ಭಾಗ್ಯ’ ರಾಜಕಾರಣಕ್ಕೂ, ಬಿಜೆಪಿಯ ‘ಜಯಂತಿ’ ರಾಜಕಾರಣಕ್ಕೂ ಯಾವ ವ್ಯತ್ಯಾಸವಿದೆ ? ಇವೆಲ್ಲವನ್ನೂ ಪ್ರಶ್ನಿಸಬೇಕಾದ ಪತ್ರಿಕೆಗಳು ಮಾಡುತ್ತಿರುವುದಾದರೂ ಏನು?

ಮತ್ತಷ್ಟು ಓದು »

29
ಏಪ್ರಿಲ್

ಅಕ್ಷ ತೃತೀಯ – ವೈಶಿಷ್ಟ್ಯ

ಮಯೂರಲಕ್ಷ್ಮೀ

imagesಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಮನುಷ್ಯನ ಆವಿಷ್ಕಾರದೊಡನೆ ಬದಲಾಗುವ ಋತು ಋತುಗಳೊಡನೆ ಸರ್ವತೋಮುಖ ಅಭಿವೃದ್ಧಿಯಲ್ಲಿ ಪರಿಪೂರ್ಣತೆಯತ್ತ ಕೊಂಡೊಯ್ಯಲು  ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ. ಹೊಸ ಸಂವತ್ಸರದೊಡನೆ  ಯುಗಾದಿಯಿಂದ ಆರಂಭವಾಗಿ ಚೈತ್ರ ಮಾಸ, ಶುಕ್ಲ ಪಕ್ಷ, ವಸಂತ ಋತುವಿನಲ್ಲಿ ದೇಶದಾದ್ಯಂತ ಸಂಭ್ರಮದಿಂದ ಆಚರಿಸಲ್ಪಡುವ  “ಅಕ್ಷ ತೃತೀಯ”  ಅತ್ಯಂತ ಮುಖ್ಯವಾದದು.

ಅಕ್ಷ ತೃತೀಯ ಎಂದರೇನು? ಮತ್ತಷ್ಟು ಓದು »

29
ಏಪ್ರಿಲ್

ಯೋಧನ ಮಾತುಗಳಲ್ಲಿ…

ಸುರೇಶ್ ಮುಗ್ಬಾಳ್

ತಿಪಟೂರು

downloadಛತ್ತೀಸಘಡದಲ್ಲಿನ ನಕ್ಸಲರ ಕ್ರೌರ್ಯಕ್ಕೂ, ಹತ್ಯೆಯಾದ 25 ಯೋಧರಿಗೂ ಅದೇನು ದ್ವೇಷಗಳಿತ್ತೋ ಏನೋ ಯಾರಿಗೂ ಗೊತ್ತಿಲ್ಲ. ಆದರೆ 300 ಜನ ನಕ್ಸಲರ ಗುಂಪು ಏಕಾ-ಏಕಿ CRPF ಯೋಧರಿದ್ದಲ್ಲಿಗೆ ನುಗ್ಗಿ ಒಂದೇ ಸಮನೆ ಗುಂಡು ಹಾರಿಸಿಬಿಟ್ಟಿದ್ದರು. ಕಾರಣ; ಗುಂಡುಹಾರಿಸಿಕೊಂಡು ಸತ್ತವರೆಲ್ಲಾ ಯೋಧರಾಗಿದ್ದರು, ಸೇನಾ ಸಮವಸ್ತ್ರದಲ್ಲಿದ್ದರು ಮತ್ತು ಸರ್ಕಾರದ ಪರ ಕೆಲಸ ಮಾಡುವವರಾಗಿದ್ದರು ಅಷ್ಟೇ. ವೈಯಕ್ತಿಕ ದ್ವೇಷ ಖಂಡಿತ ಯಾರಿಗೂ ಇದ್ದಿರಲಿಕ್ಕಿಲ್ಲ. ಮತ್ತಷ್ಟು ಓದು »

27
ಏಪ್ರಿಲ್

ದೆಹಲಿ ಪಾಲಿಕೆಯ ಫಲಿತಾಂಶದಲ್ಲಿ ಕರ್ನಾಟಕ ಬಿಜೆಪಿಗೇನು ಪಾಠ?

– ವಿನಾಯಕ ಹಂಪಿಹೊಳಿ

ಕಳೆದ ಹತ್ತು ವರ್ಷಗಳಿಂದ ದೆಹಲಿಯ ಮಹಾನಗರ ಪಾಲಿಕೆಯು ಬಿಜೆಪಿಯ ಕೈಯಲ್ಲಿದೆ. ಇಂದು ಸತತ ಮೂರನೇ ಬಾರಿ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ನಿರ್ಮಿಸಿದೆ. ಆದರೆ ಹತ್ತು ವರ್ಷಗಳ ಆಡಳಿತದ ಕುರಿತು ಜನರಿಗೇನೂ ಒಳ್ಳೆಯ ಅಭಿಪ್ರಾಯವಿಲ್ಲ. ಮಹಾನಗರ ಪಾಲಿಕೆಗೆ ಆಯ್ಕೆಯಾದ ಬಿಜೆಪಿಗರಲ್ಲಿ ಹತ್ತು ವರ್ಷ ಭ್ರಷ್ಟಾಚಾರವೂ ವ್ಯಾಪಕವಾಗಿಯೇ ನಡೆದಿತ್ತು. ಎರಡು ವರ್ಷಗಳ ಹಿಂದೆ ರಾಜ್ಯ ಚುನಾವಣೆಯಲ್ಲಿ ಆಪ್ ಪಕ್ಷವು ಪ್ರಚಂಡ ಬಹುಮತದಿಂದ ಗೆದ್ದಿತ್ತು. ೨೦೧೩ ಹಾಗೂ ೨೦೧೫ರಲ್ಲಿ ಆಪ್ ಪಕ್ಷಕ್ಕೆ ದೆಹಲಿಯ ಜನತೆ ವೋಟಿನ ಜೊತೆ ಪ್ರೀತಿಯನ್ನೂ ನೀಡಿತ್ತು.

ಇಂಥ ಜನಪ್ರಿಯ ಸರ್ಕಾರದ ಜೊತೆ ಬಿಜೆಪಿಯ ಹಿಡಿತದಲ್ಲಿದ್ದ ಮಹಾನಗರ ಪಾಲಿಕೆಯು ಜಗಳಕ್ಕಿಳಿಯಿತು. ದೆಹಲಿ ಸರ್ಕಾರವು ಪಾಲಿಕೆಗೆ ಹಣ ಬಿಡುಗಡೆ ಮಾಡುವಲ್ಲಿ ನಿಧಾನಗತಿ ತೋರಿಸುತ್ತಿದೆ ಹಾಗೂ ವೇತನ ಬಿಡುಗಡೆ ಮಾಡದೇ ತಡೆಹಿಡಿದಿದೆ ಎಂದು ಪಾಲಿಕೆ ಆರೋಪಿಸಿತು. ಹಾಗೆಯೇ, ಪಾಲಿಕೆಯ ಕೆಲಸಗಾರರು ಕೆಲಸ ನಿಲ್ಲಿಸಿ ಪ್ರತಿಭಟಿಸಿದ್ದರಿಂದ ಇಡೀ ಊರು ಸ್ವಚ್ಛತೆಯನ್ನು ಕಾಣದೇ ದುರ್ನಾತ ಹಿಡಿಯಿತು. ಪಾಲಿಕೆಯು ೧೦ ವರ್ಷಗಳಲ್ಲಿ ಜನರಿಂದ ಪ್ರಶಂಸೆಗೆ ಒಳಗಾಗುವಂತಹ ಶ್ರೇಷ್ಠ ಸಾಧನೆಯನ್ನೇನೂ ಮಾಡಿರಲಿಲ್ಲ. ಪ್ರಗತಿ ಕಾರ್ಯಗಳ ವೇಗ ಅಷ್ಟಕ್ಕಷ್ಟೇ ಇತ್ತು.

ಮತ್ತಷ್ಟು ಓದು »

27
ಏಪ್ರಿಲ್

ಅಂಕಣರಂಗ ೧ – ಅನಿಯತಕಾಲಿಕ ಅಂಕಣದ ಅಂಕುರಾರ್ಪಣ!!

– ಮು ಅ ಶ್ರೀರಂಗ, ಬೆಂಗಳೂರು
pexels-photo-302440ನಿಲುಮೆಯಲ್ಲಿ ವಾರಕ್ಕೊಮ್ಮೆ ಒಂದು ಅಂಕಣ ಬರೆಯುವ ಆಸೆ ಸುಮಾರು ದಿನಗಳಿಂದ  ಇತ್ತು. ಸುಮಾರು ಎರಡು ವರ್ಷಗಳ ಹಿಂದೆ ನಾನು ಇದೇ ಜಾಲತಾಣದಲ್ಲಿ ‘ನಿನ್ನೆಗೆ ನನ್ನ ಮಾತು’ ಎಂಬ ತುಂಬಾ  ಧ್ವನಾರ್ಥಕವುಳ್ಳ ಹೆಸರನ್ನಿಟ್ಟುಕೊಂಡು ಒಂದು ಅಂಕಣ ಬರೆದಿದ್ದೆ. ಅದು ಐದು ಲೇಖನಗಳ ನಂತರ ಮುಂದುವರಿಯಲಿಲ್ಲ.  ಬರೀ ಆರಂಭ ಶೂರತ್ವವಾಗಿ ಹೋಯಿತು. ಈ ಸಲದ ಲೇಖನಗಳಿಗೆ   ಅಂಕಣರಂಗ ಎಂಬ ಹೆಸರನ್ನೇನೋ ಇಟ್ಟುಕೊಂಡಿರುವೆ. ಜತೆಗೇ ಯಾವುದಕ್ಕೂ ಇರಲಿ ಎಂಬ ಹುಷಾರಿನಿಂದ ಅನಿಯತಕಾಲಿಕ ಎಂಬ ರಕ್ಷಾಕವಚವನ್ನೂ ಧರಿಸಿಕೊಂಡಿರುವೆ!!. ಏಕೆಂದರೆ  ವಾರಕ್ಕೊಂದರಂತೆಯೋ  ಅಥವಾ ಹದಿನೈದು ದಿನಗಳಿಗೊಮ್ಮೆಯೋ ತಪ್ಪದೆ ಬರೆಯುವ ಬಗ್ಗೆ ನನಗೇ ಅನುಮಾನವಿದೆ. ಅದಕ್ಕೆ ಕಾರಣ  ಬರವಣಿಗೆ ನನ್ನ ಮನದಾಳದ  ಆಸೆಯಾದರೂ  ಅದು ನನಗೆ   ಓದಿನಷ್ಟು  ಪ್ರಿಯವಾದುದಲ್ಲ. ಸುಲಭವೂ ಅಲ್ಲ.  ನಾನು ಬರೆದರೆ ಒಂದು ಹತ್ತು ಪುಸ್ತಕಗಳ ಪರಿಚಯಾತ್ಮಕ ಲೇಖನವನ್ನು ಹೊಸ ಕನ್ನಡ ಸಾಹಿತ್ಯದ ಒಬ್ಬ  ಹವ್ಯಾಸಿ ಓದುಗನ ಮಟ್ಟದಲ್ಲಿ  ಮಾತ್ರ   ಬರೆಯಬಲ್ಲೆ.   ಅಂಕಣ ಬರೆಯಲು ಸಾಹಿತ್ಯವೊಂದೇ ಆಗಬೇಕೇ? ಬರೆಯುವ ಮನಸ್ಸಿದ್ದರೆ ಎಷ್ಟೊಂದು ವಿಷಯಗಳಿಲ್ಲ.

ಮತ್ತಷ್ಟು ಓದು »

25
ಏಪ್ರಿಲ್

ಪ್ರಧಾನಿಗಳಿಗೇಕೆ ಭದ್ರತೆ..?

– ಸುರೇಶ್ ಮುಗ್ಬಾಳ್
ತಿಪಟೂರು

ನಾಯಕರ ಭದ್ರತೆಯ ವಿಚಾರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆದ ಎರಡು ಘಟನೆಗಳು

ಒಂದು “ಪ್ರಧಾನಿಗಳಿಗೇಕೆ ಭದ್ರತೆ..? ಜೀವ ಬೆದರಿಕೆ ಇದ್ದರೆ ಸತ್ತರೆ ಸಾಯಲಿ ಬಿಡಿ” ಎಂದು ಹೇಳಿದ ಬಸವರಾಜ ರಾಯರೆಡ್ಡಿಯವರ ಘಟನೆ. ಮತ್ತೊಂದು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಎದುರಾಗಿ ಕಪ್ಪು ಬಟ್ಟೆ ಪ್ರದರ್ಶಿಸಿದ ಪ್ರತಿಭಟನಾಕಾರರನ್ನು ಮಂಡ್ಯ ಎಸ್.ಪಿ. ‘ಸುಧೀರ್ ಕುಮಾರ್ ರೆಡ್ಡಿ’ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಕಾರ್ಯಕ್ರಮದ ವೇದಿಕೆಯ ಮೇಲೆ ರೆಡ್ಡಿಯವರನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡ ಘಟನೆ. ಮತ್ತಷ್ಟು ಓದು »