ವಿಚಿತ್ರವಾಗಿದೆ ಮನಸ್ಸು..!
– ಗೀತಾ ಹೆಗ್ಡೆ
ಒಮ್ಮೊಮ್ಮೆ ಇದ್ದಕ್ಕಿದ್ದಂತೆ ಮನಸ್ಸು ತುಂಬಾ ಬೇಸರದಲ್ಲಿ ಕಳೆದುಹೋಗುವಷ್ಟು ಮುದುಡಿಕೊಂಡು ಹೃದಯದಲ್ಲಿ ವಿಚಿತ್ರವಾದ ನೋವಿನ ತರಂಗಗಳನ್ನು ಎಬ್ಬಸಿಬಿಡುತ್ತದೆ. ಯಾಕೆ ? ಕಾರಣ ಹುಡುಕಲು ಹೋದರೆ ನಿಜವಾಗಲೂ ಅಂಥದ್ದೇನೂ ಇರುವುದಿಲ್ಲ. ಆದರೂ ಎಲ್ಲೋ ಯಾರೋ ಎಂದೋ ಹೇಳಿದ ಒಂದು ಚಿಕ್ಕ ಮಾತಿಗೂ ಯಾವತ್ತೋ ನೆನಪಿಸಿಕೊಂಡು ಸುಮ್ಮನೆ ದುಃಖ ಪಡುತ್ತದೆ. ಯಾಕೀಗೆ ? ಇದರಿಂದ ಏನು ಪ್ರಯೋಜನ ? ಯಾಕೆ ಈ ಮನಸ್ಸಿನ ಗುಣ ಹೀಗೆ ? ಮತ್ತಷ್ಟು ಓದು 
ಕಾಲೇಜು – ವಿ.ವಿಗಳಲ್ಲಿ ಐಡಿಯಾಲಜಿ ಪ್ರಣೀತ ಹೋರಾಟಗಳು ಅವಶ್ಯಕವೇ?
– ಪ್ರವೀಣ ಟಿ.ಎಲ್
ಶಿವಮೊಗ್ಗ
ಭಾರತೀಯ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಹಲವು ಪ್ರಬಂಧಗಳೇ ಮಂಡನೆಯಾಗಿವೆ. ಆದರೆ ಇತ್ತೀಚಿನ ಕೆಲವು ಘಟನೆಗಳು ನಮ್ಮನ್ನು ಹೊಸ ಸಮಸ್ಯೆಯತ್ತ ಗಮನಹರಿಸುವಂತೆ ಮಾಡಿದೆ. ಅಂತಹ ಘಟನೆಗಳೆಂದರೆ;
- ರೋಹಿತ್ ವೇಮುಲಾ ಎಂಬ ಸಂಶೋಧನಾ ವಿದ್ಯಾರ್ಥಿಯ ಆತ್ಮಹತ್ಯೆಯ ಸುತ್ತ ನಡೆದ ಪ್ರಹಸನ. ಆತ ವಿವಿಯಲ್ಲಿ ಸಕ್ರಿಯವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಕಾರಣಕ್ಕೆ ಆತನ ಆತ್ಮಹತ್ಯೆಯನ್ನು ಕೇಂದ್ರ ಸರ್ಕಾರವೇ ವ್ಯವಸ್ಥಿತವಾಗಿ ನಡೆಸಿದೆ ಎಂಬ ಆರೋಪ.
ಗ್ರಸ್ತ
– ಪ್ರಶಾಂತ್ ಭಟ್
ಕರಣಮ್ ಪವನ್ ಪ್ರಸಾದ್ ಕರ್ಮ, ನನ್ನಿ ಕಾದಂಬರಿಗಳಿಂದ, ಬೀದಿ ಬಿಂಬ ರಂಗದ ತುಂಬ ಹಾಗೂ ಪುರಹರ ನಾಟಕಗಳಿಂದ ಕನ್ನಡ ಸಾಹಿತ್ಯದಲ್ಲಿ ಬೇರೆಯದೇ ಹೆಜ್ಜೆಗುರುತು ಮೂಡಿಸಿಕೊಂಡಿರುವ ಕರಣಮ್ ಅವರ ಹೊಸ ಕಾದಂಬರಿ ‘ಗ್ರಸ್ತ’. ಕರ್ಮದಲ್ಲಿ ಆಧುನಿಕತೆ ಮತ್ತು ಸಾಂಪ್ರದಾಯಿಕತೆಯ ನಡುವಿನ ತಿಕ್ಕಾಟವನ್ನು ಸಮರ್ಥವಾಗಿ ತೋರಿಸಿದ್ದ ಅವರು ನನ್ನಿಯಲ್ಲಿ ನನ್ ಗಳ ಜೀವನ ಕುರಿತಾದ ಹಲವಾರು ಕಹಿ ಸತ್ಯಗಳ ಅನಾವರಣಗೊಳಿಸಿದರು. ಇವೆರಡು ವಸ್ತುಗಳಿಂದ ಬಿಡಿಸಿಕೊಂಡು ಹೊಸತಾಗಿ ವಿಜ್ಞಾನ ಮತ್ತು ಕರ್ಮ ಸಿದ್ದಾಂತ ವ ಸಮೀಕರಿಸಿ ‘ಗ್ರಸ್ತ’ ಬರೆದಿದ್ದಾರೆ. ಮತ್ತಷ್ಟು ಓದು 
‘ಗಾಂಧಿಬಜಾರ್’ನಲ್ಲಿ ನೆನಪುಗಳ ಸೋನೆ ಮಳೆ!
– ತುರುವೇಕೆರೆ ಪ್ರಸಾದ್
ಬೆಂಗಳೂರಿನ ಗಾಂಧಿಬಜಾರ್ನ ಮಧುರ ನೆನಪುಗಳನ್ನು ಯಾವತ್ತಿಗೂ ಮರೆಯಲಾಗುವುದಿಲ್ಲ. ಗಾಂಧಿಬಜಾರ್ನ ಬ್ಯೂಗಲ್ ರಾಕ್, ವಿದ್ಯಾರ್ಥಿ ಭವನ್ ಮಸಾಲೆ ದೋಸೆ, ಚುರ್ಮುರಿ, ಸುಬ್ಬಮ್ಮಜ್ಜಿ ಹಪ್ಪಳದ ಅಂಗಡಿ, ಪ್ರಜಾಮತ ಕಛೇರಿ ಇವೆಲ್ಲಾ ಗಾಂಧಿಬಜಾರ್ ಎಂದೊಡನೆ ದುತ್ತನೆ ಕಣ್ಮುಂದೆ ಬಂದು ನಿಲ್ಲುತ್ತವೆ. ಗಾಂಧಿಬಜಾರ್ ಇಡೀ ಬೆಂಗಳೂರಿಗೇ ಒಂದು ಘನತೆವೆತ್ತ ಶಾಂತಿಕುಟೀರ ಎಂಬಂತಂಹ ಭಾವನೆ ಮೂಡಿಸುವ ಅನುಭವಗಳು ಗಾಂಧಿಬಜಾರ್ನ ರಸ್ತೆಗಳಲ್ಲಿ ಸುತ್ತಾಡಿದಾಗ ನನಗಾಗಿದೆ. ಸೋನೆ ಮಳೆ ಬಂದು ನಿಂತ ಒಂದು ಮುಸ್ಸಂಜೆಯಲ್ಲಿ ಇಕ್ಕೆಲೆಗಳ ಹಸಿರು ಮರಗಳ ನಡುವೆ ಪ್ರಶಾಂತವಾಗಿ ನಡೆಯುತ್ತಾ ಗಾಂಧಿಬಜಾರ್ನ ಹೂವಿನಂಗಡಿಗಳ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ಅನಿರ್ವಚನೀಯ ಅನುಭವ. ಬಹುಶಃ ನನಗೆ ನೆನೆಪಿರುವ ಹಾಗೆ ಮೆಜೆಸ್ಟಿಕ್ನಿಂದ ಆ ಕಾಲದ ಮೊದಲ ಡಬ್ಬಲ್ ಡೆಕ್ಕರ್ ಬಸ್ ಓಡಾಟ ಆರಂಭಿಸಿದ್ದೇ ಗಾಂಧಿಬಜಾರ್ಗೆ! ಆಹ್ಲಾದಕರ ವಾತಾವರಣ ಬೆಂಗಳೂರಿನ ಕೆಲವೇ ಬಡಾವಣೆಗಳಿಗಿರುವ ಸೌಭಾಗ್ಯ.ಅವುಗಳಲ್ಲಿ ಗಾಂಧಿಬಜಾರ್ಗೆ ಅಗ್ರಸ್ಥಾನ ಎಂದರೆ ತಪ್ಪಿಲ್ಲ, ಇಲ್ಲೇ ಪೂರ್ವ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿದ್ದ ಅಜ್ಜನ ಮನೆಗೆ ವರ್ಷಕ್ಕೊಂದು ಭಾರಿ ಬಂದು ಜಾಂಡಾ ಹೊಡೆಯುತ್ತಿದ್ದ ನನಗೆ ಗಾಂಧಿಬಜಾರ್, ಡಿವಿಜಿ ರೋಡ್, ಬುಲ್ ಟೆಂಪಲ್ ರಸ್ತೆಯ ಸಂದಿಗೊಂದಿಗಳೂ ಪರಿಚಯವಾಗಿತ್ತು. ವರ್ಷಕ್ಕೊಮ್ಮೆ ನಡೆಯುತ್ತಿದ್ದ ಕಳ್ಳೆಕಾಯಿ ಪರಿಷೆಗಂತೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಬನಶಂಕರಿಯಲ್ಲಿ ನಮ್ಮೂರಿನಿಂದ ಹೋಗಿ ನೆಲೆಸಿದ್ದ ನನ್ನ ಗೆಳೆಯರು ಇದ್ದರು, ನಾವೆಲ್ಲಾ ಬ್ಯೂಗಲ್ ರಾಕ್,ಕೃಷ್ಣರಾವ್ ಪಾಕ್ಗಳಲ್ಲಿ ಅದೆಷ್ಟು ಕಾಲ ಕಳೆದಿದ್ದೇವೆಂಬುದಕ್ಕೆ ಲೆಕ್ಕವೇ ಇಲ್ಲ. ಮತ್ತಷ್ಟು ಓದು 
7ನೇ ವರ್ಷದ ಹೊಸ್ತಿಲಲ್ಲಿ ನಿಲುಮೆ…
ನಿಲುಮೆ ವೆಬ್ ತಾಣ ಶುರುವಾಗಿ 6ವರ್ಷಗಳನ್ನು ಪೂರೈಸಿ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂಕ್ರಮಣದ ದಿನವಿದು. 5ನೇ ವರ್ಷದ ಸಂಭ್ರಮದಲ್ಲಿ,ನಿಲುಮೆ ಪ್ರಕಾಶನ ಶುರುವಾಗುವ ಹಂತದಲ್ಲಿದ್ದಾಗ,ನಿಲುಮೆಯ ಮೇಲೆ ಕರ್ನಾಟಕದ ಬೌದ್ಧಿಕ ಫ್ಯಾಸಿಸಂನ ದಾಳಿಯಾಗಿತ್ತು.ಹಾಗೇ ದಾಳಿ ಮಾಡಿದವರ ಪೈಕಿ ಹೇಗಿದೆ 5ನೇ ವರ್ಷದ ಗಿಫ್ಟು ಎಂದು ಕುಹುಕವಾಡಿದ್ದರು.ಅದಾದ ನಂತರದ ವಿಷಯಗಳೆಲ್ಲ ನಿಮಗೇ ತಿಳಿದಿವೆ.ಕನ್ನಡ ಪ್ರಭ ಪತ್ರಿಕೆಯೂ ಆ ಎಪಿಸೋಡಿನ ಬಗ್ಗೆ ವಿಸ್ತೃತ ವರದಿ ಮಾಡಿತು.ಸುವರ್ಣ ನ್ಯೂಸ್ ಚಾನೆಲ್ಲಿನಲ್ಲಿ ಮುಖಾಮುಖಿ ಚರ್ಚೆಯೂ ನಡೆಯಿತು.
ಆ ಚರ್ಚೆಯ ಅಂತ್ಯದಲ್ಲಿ, ”ಇವರಂತೆ ನಮ್ಮದು ವಿಧ್ವಂಸಕ ಮಾರ್ಗವಲ್ಲ;ನಮ್ಮದು ಜ್ಞಾನ ಮಾರ್ಗ” ಎಂದು ಹೇಳಿ,ನಿಲುಮೆಯು ಸಾಗಿ ಬಂದ ಮತ್ತು ಸಾಗಲಿರುವ ಮಾರ್ಗದ ಬಗ್ಗೆ ಸ್ಪಷ್ಟ ಸಂದೇಶವನ್ನು ಕೊಟ್ಟೆವು. ನಾವು ಹೇಳಿದ ಮಾರ್ಗದಲ್ಲಿಯೇ ಸಾಗುತಿದ್ದೇವೆ.ಎನ್ನುವುದಕ್ಕೆ ಸಾಕ್ಷಿಯಾಗಿ,5ನೇ ವರ್ಷಾಚರಣೆಯ ಸಂದರ್ಭದಲ್ಲಿ,ನಾಡಿನ ಬೌದ್ಧಿಕ ಕ್ಷೇತ್ರಕ್ಕೆ ನಿಲುಮೆಯಿಂದ 3 ಪುಸ್ತಕಗಳನ್ನು ನಿಮ್ಮ ಕೈಯಲ್ಲಿಟ್ಟಿದ್ದೇವೆ.ಕನಿಷ್ಟ ಐದು ಪುಸ್ತಕಗಳನ್ನಾದರೂ ನಾವು ಪ್ರಕಟಿಸುವ ಇರಾದೆಯಿತ್ತು. ಆದರೆ,ನಮ್ಮ ಇತರೆ ಕೆಲಸ-ಕಾರ್ಯಗಳು ಮತ್ತು ಪುಸ್ತಕ ಮುದ್ರಣಕ್ಕೆ ಬೇಕಾಗುವ ಸಂಪನ್ಮೂಲಗಳ ಕೊರತೆ ಇತ್ಯಾದಿ ಕಾರಣಗಳಿಂದ ಮೂರು ಪುಸ್ತಕಗಳಷ್ಟೇ ಸಾಧ್ಯವಾಗಿದ್ದು. 2016ರಲ್ಲಿ ನಿಲುಮೆ ಪ್ರಕಾಶನ ಸ್ತಬ್ಧವಾಗಿತ್ತು ಎಂಬುದನ್ನು ನಿಮ್ಮ ಮುಂದೆ ಮಂಡಿಯೂರಿ ಒಪ್ಪಿಕೊಳ್ಳುತ್ತೇವೆ.
ಈ ವರ್ಷ ನಿಲುಮೆಯ ಹೆಜ್ಜೆ ಗುರುತುಗಳು….
1.ಹೈದರಾಬಾದಿನ ಯುನಿವರ್ಸಿಟಿಯಲ್ಲಿ ರೋಹಿತ್ ವೇಮುಲಾ ಎಂಬ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣವನ್ನಿಡಿದುಕೊಂಡು ದೇಶಾದಾದ್ಯಂತ ಗಂಜಿಗಿರಾಕಿಗಳು ಬೊಬ್ಬೆಯಿಟ್ಟಾಗ,ನಿಲುಮೆ ಬಳಗ ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶವನ್ನು ಓದೌಗರ ಮುಂದೆ ಇಡುವ ಕೆಲಸವನ್ನು ಮಾಡಿದೆ.
2.ಉಗ್ರ ಅಫ್ಜಲ್ ಗುರುವನ್ನು ಬೆಂಬಲಿಸಿ,ಕಾಶ್ಮೀರದ ಆಜಾದಿ ಘೋಷಣೆಗಳನ್ನು ಕೂಗಿದ್ದ ಜೆ.ಎನ್.ಯು ವಿವಿಯ ಕನ್ನಯ್ಯ ಕುಮಾರನ ಪಟಾಲಂನ ವಿರುದ್ಧ ನಡೆದ ಆನ್ಲೈನ್ ಹೋರಾಟದಲ್ಲು ನಿಲುಮೆ ಬಳಗ ಸಕ್ರೀಯವಾಗಿತ್ತು.
3.೨೦೧೬ರ ಫೆಬ್ರವರಿ ತಿಂಗಳಿನಲ್ಲಿ ದೆಹಲಿಯ JNUವಿನಲ್ಲಿ ದೇಶವಿರೋಧಿ ಘೋಷಣೆಗಳು ಕೇಳಿ ಬಂದಾಗ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು.ಅದಾದ ಕೆಲವೇ ದಿನಗಳಲ್ಲಿ ಬಂಗಾಳದಲ್ಲೂ ಇದೇ ಬಗೆಯ ಘೋಷಣೆಗಳ ಸುದ್ದಿಯಾಗಿತ್ತು. ಜುಲೈ ೯ನೇ ತಾರೀಖು ಜಮ್ಮುಕಾಶ್ಮೀರ ರಾಜ್ಯದಲ್ಲಿ ಉಗ್ರ ಬರ್ಹನ್ ವಾನಿಯ ಹತ್ಯೆಯಾದ ನಂತರ,ಆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಗಲಭೆ ಶುರುವಾಗಿ ಒಂದು ವಾರ ಕಳೆಯುವಷ್ಟರಲ್ಲೇ, ಕೆಲವು ಅರ್ಬನ್ ನಕ್ಸಲರು ನಮ್ಮ ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ (ಜುಲೈ15,16) We Stand with Kashmir ಎನ್ನುವ ಹೆಸರಿನೊಂದಿಗೆ ಟೌನ್ ಹಾಲ್ ಮುಂದೆ ನಿಂತು “ಕಾಶ್ಮೀರದ ಆಜಾದಿ” ಕೇಳಲು ತಯಾರಾಗಿದ್ದ ಹೊರಟಿದ್ದರು. ಇವರ ಆಸೆಗೆ ನಾವೊಂದಿಷ್ಟು ಜನರು ಸೇರಿ ತಣ್ಣಿರೇರಚಿದ್ದೆವು.
ಶಿಲೆಯೊಂದು ಶಿಲ್ಪವಾಗಿ, ಪರಕಾಯ ಪ್ರವೇಶವಾಗಿ, ಸಮರಭೂಮಿಗೆ ಸಿದ್ಧವಾಗುವ ರಾಷ್ಟ್ರಶಕ್ತಿ
– ಸಂತೋಷ್ ತಮ್ಮಯ್ಯ
೧೯೪೯ರ ಜನವರಿ ೧೫ ರಂದು ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರು ಭಾರತೀಯ ಸೇನೆಯ ಪ್ರಥಮ ಮಹಾದಂಡನಾಯಕರಾಗಿ ಅಧಿಕಾರ ವಹಿಸಿಕೊಂಡ ದಿನವನ್ನು ‘ಭಾರತೀಯ ಸೈನ್ಯ ದಿನಾಚರಣೆ ಎಂದು ಆಚರಿಸಲಾಗುತ್ತವೆ. ‘ಭಾರತದ ಗೌರವವನ್ನು ರಕ್ಷಿಸಿದ, ವಿದೇಶಗಳಿಂದಲೂ ಹೊಗಳಿಸಿಕೊಂಡ, ಬೃಹತ್ ಪಡೆಗಳನ್ನ್ನು ಹೊಂದಿರುವ ‘ಭಾರತೀಯ ಸೇನೆ ವಿಶ್ವದ ಹಲವು ದೇಶಗಳ ಮಿಲಿಟರಿಗೆ ಮಾರ್ಗದರ್ಶನ ನೀಡಿದ ಹಿರಿಮೆಯಿದೆ. ವಿಶ್ವದ ಹಲವು ಸವಾಲುಗಳನ್ನು ‘ಭಾರತೀಯ ಸೇನೆ ಎದುರಿಸಿದೆ. ವಿಶ್ವ ಶಾಂತಿಗೆ ಭಾರತೀಯ ಸೇನೆಯ ಕೊಡುಗೆಯನ್ನು ವಿಶ್ವಸಂಸ್ಥೆ ಇಂದಿಗೂ ಕೊಂಡಾಡುತ್ತಿದೆ. ಅವೆಲ್ಲಕ್ಕೂ ಕಾರಣ ಸೈನ್ಯದ ಅಸಲಿ ಶಕ್ತಿಯಾದ ‘ಭಾರತೀಯ ಯೋಧ‘ರು. ಅವರಿಗೆ ನಮ್ಮ ನಮನ. ಮತ್ತಷ್ಟು ಓದು 
ವೇಮುಲ ಸಾವಿನ ಬಗ್ಗೆ ಮಾತಾಡಿದವರು ಈಗೆಲ್ಲಿಹರು..?
– ಶಾರದ ಡೈಮಂಡ್
ನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದ ಮುಗ್ದ ಜೀವಿಯೊಂದು ಕಾಣದ ಕೈಗಳ ಕೈವಾಡಕ್ಕೆ ಬಲಿಯಾಗಿದೆ. ಕಾಂಗ್ರೆಸ್ ಸರಕಾರದ ದುರಾಡಳಿತಕ್ಕೆ ಮತ್ತೊಂದು ಜೀವ ಮಣ್ಣಾಗಿಹೋಯಿತು. ಓದುವುದರಲ್ಲಿ ಬುದ್ಧಿವಂತನಾಗಿದ್ದ, ಸೌಮ್ಯ ಸ್ವಭಾವದವನಾದ ಅಭಿಷೇಕ್ ಮೂರು ಕುಟುಂಬಗಳಿಗೆ ಸ್ವಂತ ಮಗನಂತೆಯೇ ಇದ್ದ. ಸರ್ಕಾರಿ ಕೆಲಸವೊಂದಕ್ಕೆ ಸೇರಿ ತನ್ನನ್ನು ಕಷ್ಟಪಟ್ಟು ಸಾಕುತ್ತಿರುವ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂಬುದೇ ಅವನ ಕನಸಾಗಿತ್ತು. ಶೃಂಗೇರಿಯ ಜೆಸಿಬಿಎಮ್ ಕಾಲೇಜಿನ ಬಿ.ಕಾಂ ಕೊನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಷೇಕ್ ಎಂ.ಕೆ ಎಂಬ ಹುಡುಗ ಪ್ರಸಕ್ತ ವರ್ಷದ ಕಾಲೇಜಿನ ವಾಣಿಜ್ಯ ಸಂಘದ ಅಧ್ಯಕ್ಷ! ಚೆನ್ನಾಗಿ ಓದುತ್ತಿರುವ ಆಲ್ ರೌಂಡರ್ ವಿದ್ಯಾರ್ಥಿಗಳನ್ನು ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸಂಘಗಳಿಗೆ ಅಧ್ಯಕ್ಷ – ಉಪಾಧ್ಯಕ್ಷರನ್ನಾಗಿ ಕಾಲೇಜಿನವರೇ ನೇಮಿಸುತ್ತಾರೆ. ನೇಮಿಸುವಾಗ ಅವನು ಯಾವ ಸಂಘಟನೆಯವನೆಂದು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಇಂತಹ ಉತ್ತಮ ವಿದ್ಯಾರ್ಥಿಯಾದ ಅಭಿಷೇಕ್ ವಾಣಿಜ್ಯ ಸಂಘವನ್ನು ಹೊರತುಪಡಿಸಿ ತನ್ನನ್ನು ತಾನು ಎಬಿವಿಪಿ ಯಲ್ಲಿ ಗುರುತಿಸಿಕೊಂಡಿದ್ದೇ ಜೀವಕ್ಕೆ ಮುಳ್ಳಾಗುವ ಹಾಗಾಯಿತು. ಜನವರಿ ಏಳರಂದು ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಜಂಟಿಯಾಗಿ ಸೈನಿಕರಿಗೆ ಗೌರವ ಸಲ್ಲಿಸುವ “ಯೋಧನಮನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮತ್ತಷ್ಟು ಓದು 
ಕಲಬುರ್ಗಿಯವರ ಸಾವಿನಲ್ಲೂ ಸಾಹಿತಿಗಳು ಲಾಭ ಹುಡುಕಿದರಾ ?
– ಪ್ರವೀಣ್ ಕುಮಾರ್, ಮಾವಿನಕಾಡು
ಇತ್ತೀಚಿಗೆ ಒಂದು ದಿನ ಬೆಳಿಗ್ಗೆ ರೈಲಿನಲ್ಲಿ ಪ್ರಯಾಣ ಹೊರಟಿದ್ದೆ. ಎಂದಿನಂತೆ 2-3 ದಿನಪತ್ರಿಕೆಗಳನ್ನು ಕೊಂಡು ರೈಲು ಹತ್ತಿ ಕುಳಿತೆ. ರೈಲು ಹೊರಟ ನಂತರ ಒಂದು ದಿನಪತ್ರಿಕೆಯನ್ನು ತೆಗೆದು ಓದಲು ಶುರು ಮಾಡಿದೆ. ಪಕ್ಕದಲ್ಲಿ ಕುಳಿತಿದ್ದ ಹಿರಿಯರೊಬ್ಬರು ನಾನು ಓದುತ್ತಿದ್ದ ಪತ್ರಿಕೆಯ ಕಡೆ ಇಣುಕಿ ಇಣುಕಿ ನೋಡತೊಡಗಿದರು. ಸಣ್ಣದೊಂದು ಮುಗುಳ್ನಗೆಯೊಂದಿಗೆ ನನ್ನಲ್ಲಿದ್ದ ಇನ್ನೊಂದು ದಿನಪತ್ರಿಕೆಯನ್ನು ಅವರಿಗೆ ನೀಡಿ ಓದು ಮುಂದುವರಿಸಿದೆ. ಕೆಲವು ನಿಮಿಷಗಳ ನಂತರ ಆ ಹಿರಿಯರು “ಛೆ, ಕಲಬುರ್ಗಿಯವರ ಸಾವಿನಲ್ಲೂ ಸಾಹಿತಿಗಳು ಲಾಭ ಮಾಡ್ಕೋಳೋಕೆ ಹೋದ್ರು” ಅಂತ ಒಂದು ಉದ್ಘಾರ ತೆಗೆದರು. ಮತ್ತಷ್ಟು ಓದು 
ಸರ್ಕಾರಿ ಶಾಲೆಯಲ್ಲಿ ಓದುವ ಬಡವರ ಮಕ್ಕಳು ಯಾವ ಪಾಪ ಮಾಡಿದ್ದರು ಸಿದ್ದಣ್ಣನವರೇ ……
– ಅರುಣ್ ಬಿನ್ನದಿ
ನೀಟ್ ಎಕ್ಸಾಂ ನಲ್ಲಿ ಕನ್ನಡಕ್ಕೆ ಅವಕಾಶ ಸಿಗದಂತೆ ಆಗಿರುವುದು ರಾಜ್ಯದ ತಪ್ಪಿನಿಂದಲೇ ಎಂದು ಸಾಬೀತಾಗುತ್ತಿದ್ದಂತೆ ರಾಜ್ಯಸರ್ಕಾರ ಎಚ್ಛೆತ್ತು ತಪ್ಪು ತಿದ್ದಲು ಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳಬೇಕಿತ್ತು, ಆದರೆ ಅದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಪರಿಜ್ಞಾನವಿದ್ದಂತಿಲ್ಲ. ಪಿಯುಸಿ ಮಕ್ಕಳು ಸಿ.ಬಿ.ಎಸ್.ಸಿ ಪಠ್ಯಕ್ರಮದ ಕನ್ನಡ ಅವತರಿಣಿಕೆಯನ್ನು ಓದುತ್ತಿರುವ ಸಮಯದಲ್ಲಿ ಒಮ್ಮೆಲೇ ಹತ್ತರವರೆಗೆ ರಾಜ್ಯದ ಪಠ್ಯಕ್ರಮದಲ್ಲಿ ಓದಿದ ಮಕ್ಕಳಿಗೆ ಪಿಯುಸಿಯಲ್ಲಿ ಕಷ್ಟವಾಗಿ ಮುಂದಿನ ಶೈಕ್ಷಣಿಕ ಜೀವನದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಬಹುದಾದ ನಿರೀಕ್ಷೆ ಇದ್ದಾಗ್ಯೂ ಸಹ ಅದಕ್ಕೆ ಸಂಬಂಧಿಸಿದ ಯಾವುದೇ ಚಿಂತನೆಗಳು ನಡೆದಿಲ್ಲ. ಆದರೆ ರಾಜ್ಯದಲ್ಲಿ ರಹಸ್ಯ ಕೋಣೆಯಲ್ಲಿ, ನಿಗೂಢವಾಗಿ, ಕೆಲವೇ ಕೆಲವು ಬುದ್ದಿಜೀವಿಗಳು ಮಾಡಿದ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಪಠ್ಯ ಪರಿಷ್ಕರಣೆಯಲ್ಲಿ, ಕಮ್ಯುನಿಸಂ ಐಡಿಯಾಲಜಿಯನ್ನು ಹೇರಿ, ರಾಜ್ಯದ ಮಕ್ಕಳನ್ನು ಮಾರ್ಕ್ಸ್ ಸಿದ್ದಾಂತದ ಪೊಲಿಟಿಕಲ್ ಪಕ್ಷದ ಕಾರ್ಯಕರ್ತರನ್ನು ಸೃಷ್ಟಿಸುವ ಕಾರ್ಯಕ್ಕೆ ಸಿದ್ದರಾಮಯ್ಯನವರು, ಬರಗೂರು ರಾಮಚಂದ್ರರ ಕೈಯಲ್ಲಿ ಅಡಿಗಲ್ಲನ್ನು ಹಾಕಿಸಲು ಎಲ್ಲ ಸಿದ್ದತೆಯನ್ನು ಮಾಡಿಸಿದ್ದಾರೆ. ೨೧ ನೇ ಶತಮಾನದಲ್ಲಿ ನಮ್ಮ ಮಕ್ಕಳು ಅಂತರಾಷ್ಟ್ರೀಯ ಮಟ್ಟದಲ್ಲಿನ ಸ್ಪರ್ಧಾತ್ಮಕ ಬದುಕಿಗೆ ಎದೆ ಕೊಟ್ಟು ನಿಲ್ಲುವ ಆತ್ಮ ಸ್ಥೈರ್ಯವನ್ನು ಉಂಟು ಮಾಡುವ ಶಿಕ್ಷಣವನ್ನು ಕೊಡುವ ಬದಲು ತಮ್ಮ ರಾಜಕೀಯ ಪಕ್ಷದ ಐಡಿಯಾಲಜಿ ಪ್ರೇರಕ ಶಿಕ್ಷಣದ ಜೊತೆಗೆ ಭಾರತವನ್ನು ದ್ವೇಷಿಸುವ, ತನ್ನ ರಾಷ್ಟ್ರದ ಬಗ್ಗೆ ಕಿಂಚಿತ್ತೂ ಗೌರವ ಹುಟ್ಟಿಸದ ವಿಚಾರಗಳನ್ನು ಪಠ್ಯದಲ್ಲಿ ತುರುಕಿ, ತರಾತುರಿಯಲ್ಲಿ ಯಾರಿಗೂ ತಿಳಿಯದಂತೆ ಪಠ್ಯ ಮುದ್ರಣಕ್ಕೆ ಸಂಪೂರ್ಣ ತಯಾರಿ ನಡೆಸಿರುವುದು ಈ ರಾಜ್ಯದ ಬಡ ಮಕ್ಕಳ ಮೇಲೆ ಮಾಡುತ್ತಿರುವ ಘೋರ ಅನ್ಯಾಯ ಎನ್ನದೆ ವಿಧಿಯಿಲ್ಲ.
ಪುಷ್ಪಕ ವಿಮಾನ..
– ಶಾರದ ಡೈಮಂಡ್
ಅಪ್ಪ ಮಗಳ ನಡುವಿನ ಮುಗ್ಧ ಪ್ರಪಂಚದ ಸುತ್ತ ಹೆಣೆದಿರುವ ಕಥೆ ಈ ಪುಷ್ಪಕ ವಿಮಾನ. ಅವರದ್ದೇ ಭಾವ ಪ್ರಪಂಚದಲ್ಲಿ ಖುಷಿಯಾಗಿ ಮಧುರ ಕ್ಷಣಗಳನ್ನು ಸಂಭ್ರಮಿಸುತ್ತಿದ್ದ ಮನಸ್ಸುಗಳು ಅನ್ಯಾಯವಾಗಿ ಯಾರದೋ ಕ್ರೂರ ಮನಸ್ಸಿನ ಹಠ ಮತ್ತು ಸೇಡಿಗಾಗಿ ಒಡೆದು ದೂರವಾಗೋದೇ ಚಿತ್ರದ ಕಥೆ. ಇದು ರಮೇಶ್ ಅರವಿಂದ್ ರವರ ನೂರನೇ ಚಿತ್ರ . ಅವರ ಜೀವನದ ಮೈಲಿಗಲ್ಲು. ರಮೇಶ್ ಅವರ ಮುಗ್ದಾವತಾರದ ಆ ಅದ್ಭುತ ಅಭಿನಯವನ್ನು ಪದಗಳಲ್ಲಿ ವಿವರಿಸೋದು ಕಷ್ಟ ಸಾಧ್ಯ. ರಮೇಶ್ ಅರವಿಂದರ ಅಭಿಮಾನಿ ಅಂತ ಹೇಳಿಕೊಳ್ಳುವುದೇ ನನಗೆ ಖುಷಿ ವಿಚಾರ. ಅದರಲ್ಲೂ ಈ ಚಿತ್ರದಲ್ಲಿ ಅವರ ಅಭಿನಯವನ್ನು ನೋಡಿದ ಮೇಲೆ ನಿಜವಾಗಲೂ ಅವರ ಅಭಿಮಾನಿ ಅಂತ ಹೇಳಿಕೊಳ್ಳುವುದಕ್ಕೆ ಹೆಮ್ಮೆ ಅನಿಸ್ತಾ ಇದೆ. ಮತ್ತಷ್ಟು ಓದು 




