ವಿಷಯದ ವಿವರಗಳಿಗೆ ದಾಟಿರಿ

Recent Articles

9
ಫೆಬ್ರ

ಪ್ರಸ್ಥಾನ: ಕಲ್ಕತ್ತಾದಿಂದ ಬರ್ಲಿನ್ನಿನ ವರೆಗೆ; ದಾಸ್ಯದಿಂದ ಮುಕ್ತಿಯವರೆಗೆ

– ಎಸ್.ಎನ್.ಭಾಸ್ಕರ್‍

NSC-Bose-Airಕಲ್ಕತ್ತಾ ನಗರದ ಎಲ್ಗಿನ್ ರಸ್ತೆಯ ಮನೆಯೊಂದರಲ್ಲಿನ ಪ್ರತ್ಯೇಕ ಕೋಣೆ. ದಿನಾಂಕ ೧೬ ನೇ ಜನವರಿ, ಇಸವಿ ೧೯೪೧.

“ರಾಷ್ಟ್ರಂ ಧಾರಯತಾಂ ಧ್ರೃವಂ”

“ರಾಷ್ಟ್ರಂ ಅಶ್ವಮೇಧಃ”

ಇದು ಸಂಕಲ್ಪ. ಈ ಧೀರ ಸಂಕಲ್ಪ ಮನೆಮಾಡಿದ್ದ ಆ ವ್ಯಕ್ತಿ ಪದ್ಮಾಸನ ಹಾಕಿ ಕುಳಿತಿದ್ದಾರೆ. ಎಡಗೈನಲ್ಲಿ ಜಪಮಾಲೆ ಮನದಲ್ಲಿ ಪ್ರಣವಮಂತ್ರ. ಮುಚ್ಚಿದ ಕಣ್ಗಳ ಹಿಂದೆ ಅದೆಂತಹ ಉಜ್ವಲ ಭವಿತವ್ಯದ ನೋಟವಿತ್ತೋ..! ಅರಿಯಬಲ್ಲವರು ತಾನೇ ಯಾರಿದ್ದರು ?

ಮಂದಸ್ಮಿತ ಅಂತರ್ಮುಖಿಯಾದ ಮುಖಾರವಿಂದದ ನೆರಳಿನಲ್ಲಿ ಸ್ಪಷ್ಟ ನಿಲುವು ಅಪ್ರಯತ್ನಪೂರ್ವಕವಾಗಿ ನಳನಳಿಸುತಲಿತ್ತು. ಆಳವಾದ ಧ್ಯಾನ. ಜಪಮಾಲೆಯನ್ನು ಹಿಡಿದಿದ್ದ ಕೈ ಬೆರಳುಗಳನ್ನು ಹೊರತು ಪಡಿಸಿ ಇಡೀ ದೇಹ ನಿರ್ಲಿಪ್ತ. ಮನದಲ್ಲಿ ಜ್ವಾಲಾಮುಖಿಯೇ ಇದ್ದರೂ, ಹಿಮಾಲಯದ ಪರ್ವತದಂತೆ ಶಾಂತಸ್ಮಿತ. ಮುಂಜಾನೆಯ ಮೊಗ್ಗರಳುವಂತೆ ನಿಧಾನವಾಗಿ ಕಣ್ಣಗಳನ್ನು ತೆರೆಯುತ್ತಾರೆ. ಎದುರಿಗೆ ಗೋಡೆಯ ಮೇಲೆ ಸ್ವಾಮಿ ವಿವೇಕಾನಂದರ ಭಾವಚಿತ್ರ ಅದರ ಎಡಗಡೆಗೆ ರಾಮಕೃಷ್ಣ ಪರಮಹಂಸರು, ಬಲಗಡೆಗೆ ಮಹರ್ಷಿ ಅರವಿಂದರು. ತನ್ನೆರಡೂ ಕೈಗಳನ್ನೂ ಕಟ್ಟಿ ನಸುನಗುತ್ತಾ ನಿಂತಿದ್ದ ವಿವೇಕಾನಂದರ ಭಾವಚಿತ್ರವನ್ನೇ ನೋಡುತ್ತಾ ನಿಶ್ಚಲರಾಗಿ ಕುಳಿತೇ ಇದ್ದರು. ಅದೆಂತಹ ದಿವ್ಯ ಚೈತನ್ಯ, ದೇದೀಪ್ಯಮಾನವಾದ ಪ್ರಾಂಜ್ವಲ ಕಣ್ಗಳಲ್ಲಿ ಹೊಳೆಯುತ್ತಿದ್ದ ಅಚಲ ವಿಶ್ವಾಸ. ನೋಡುತ್ತಿದ್ದರೇ ಆ ಕಣ್ಗಳೆಂಬ ಸಾಗರದಲ್ಲಿ ಮುಳುಗೇ ಹೋಗುತ್ತೇವೆ. ಸೂಜಿಗಲ್ಲಿಗೆ ಸೆಳೆಯಲ್ಪಡುವ ಕಬ್ಬಿಣದ ಚೂರುಗಳಂತೆ ಸೆಳೆದು ಬಂಧಿಯಾಗುತ್ತೇವೆ. ಎಂತಹ ಆಕರ್ಷಣೀಯ ವ್ಯಕ್ತಿತ್ವ…!! ಕಣ್ತುಂಬಿ ಬಂತು ಮೂಡಿದ ಹನಿಗಳು ಧಳ ಧಳನೇ ಇಳಿಯತೊಡಗಿದವು ನೋಟ ಮಾತ್ರ ನಿಶ್ಚಲ..ನಿರ್ಲಿಪ್ತ. ರೋಮ ರೋಮಗಳಲ್ಲೂ ವಿದ್ಯುತ್ ಸಂಚಾರ. ಅವರ ನಿರ್ಧಾರ ಸಂಪೂರ್ಣವಾಗಿತ್ತು. ರೂಪುರೇಷೆಗಳು ಸಿದ್ದವಾಗಿದ್ದವು. ಇಟ್ಟ ಹೆಜ್ಜೆ ಹಿಂತೆಗೆದ ನಿದರ್ಶನ ಜಾಯಮಾನದಲ್ಲೇ ಇಲ್ಲವಲ್ಲ. “ರಾಷ್ಟ್ರಂ ಧಾರಯತಾಂ ದ್ರೃವಂ: ರಾಷ್ಟ್ರಂ ಅಶ್ವಮೇಧಃ:”.

ಮತ್ತಷ್ಟು ಓದು »

7
ಫೆಬ್ರ

ಸಮ್ಮೇಳನದ ವೇದಿಕೆಯಲ್ಲಿ ಬರಹಗಾರರೋಬ್ಬರನ್ನು ನಿಂದಿಸುವುದು ಕನ್ನಡ ಮತ್ತು ಸಮ್ಮೇಳನದ ಅಪಮಾನವಲ್ಲವೆ ?

– ಅನಿಲ್ ಚಳಗೇರಿ 

ಭೈರಪ್ಪ ಬೈಗುಳ ಗೋಷ್ಠಿಹೌದು, ಅದು ಪ್ರಸಕ್ತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮಹಿಳೆಯರ ಸಮಾನತೆ ಮತ್ತು ಸವಾಲು ಅನ್ನುವ ವಿಷಯದ ಕುರಿತು ಚರ್ಚೆ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದು ಮಾತ್ರ ಕರ್ನಾಟಕ ಕಂಡ ಅಧ್ಭುತ ಸಾಹಿತಿಗಳಲ್ಲಿ ಒಬ್ಬರಾದ  ಎಸ್ ಎಲ್ ಭೈರಪ್ಪನವರ ಬಗ್ಗೆ ಅಪಪ್ರಚಾರ , ಹಿಂದೂ ವಿರೋಧಿ ಹೇಳಿಕೆಗಳು, ಬ್ರಾಹ್ಮಣರ ಬಗ್ಗೆ ಕೆಳಮಟ್ಟದ ಆರೋಪ , ಪುರೋಹಿತಶಾಹಿಯ ಹೆಸರಿನಲ್ಲಿ ಈಡೀ ಜನಾಂಗವನ್ನೇ ದೂಷಿಸುವ ಪ್ರಯತ್ನ . ಈ ದೂಷಿಸುವ ಭರದಲ್ಲಿ ಮಹಿಳೆಯರ ಹಕ್ಕುಗಳ ಬಗ್ಗೆ, ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಮುಖ್ಯ ವಿಷಯಗಳ ಬಗ್ಗೆ ಚರ್ಚೆಯೇ ಆಗಲಿಲ್ಲ. ನೆರದಿದ್ದ ಅನೇಕ ಕವಿಯತ್ರಿಯರು ಭೈರಪ್ಪನವರನ್ನು ನೇರವಾಗಿ ವೈಯ್ಯಕ್ತಿಕವಾಗಿ ನಿಂದಿಸಿದರು. ಅಷ್ಟೇಯಲ್ಲದೇ ಇಂತಹ ಕೆಳ ಮಟ್ಟದ ಭಾಷಣಗಳು ಮತ್ತು ವ್ಯಕ್ತಿ ನಿಂದನೆಯನ್ನು ಕೇಕೆ, ಶಿಳ್ಳೆ ಮುಖಾಂತರ ಆನಂದಿಸುವ ಜನರು ಆ ಕಾರ್ಯಕ್ರಮಗಳಲ್ಲಿ ಉಪಸ್ತಿತರಿದ್ದರು. ಕನ್ನಡ ಹಿರಿಮೆ, ಕನ್ನಡ ಕಂಪು ಹಾಗು ಮಹಿಳೆಯರ ಪರ ಧ್ವನಿಎತ್ತಬೇಕಾದ ವೇದಿಕೆಯೊಂದರಲ್ಲಿ ಕನ್ನಡದ ಕಣ್ಮಣಿಯನ್ನು ನಿಂದಿಸುವದು ಸಾಹಿತ್ಯ ಸಮ್ಮೇಳನಕ್ಕೆ ಮತ್ತು ಕನ್ನಡಕ್ಕೆ ಮಾಡುವ ಅಪಮಾನವಲ್ಲವೆ??

ಭೈರಪ್ಪನವರ ನಿಂದನೆ ಮುಗಿಸಿ ಮುಂದುವರೆದ ಕವಿಯತ್ರಿಯರು ದೇವರ ಹೆಸರಲ್ಲಿ, ಪುರೋಹಿತಶಾಹಿಯ ಹೆಸರಲ್ಲಿ ಮೇಲ್ವರ್ಗದವರು ಬೇರೆಯವರನ್ನು ಲೂಟಿ ಮಾಡುತ್ತಾರೆಂದು ದೂಷಿಸಿದರು. ಈ ರೀತಿಯ ದೂಷಣೆಯಿಂದ ಮತ್ತು ಮೇಲ್ವರ್ಗದವರನ್ನು ಬಾಯಿಗೆ ಲಗಾಮಿಲ್ಲದೆ ಬಯ್ಯುವುದರಿಂದಲೇ ಕೆಲವರ ಮನೆ ನಡೆದರೆ ಇನ್ನು ಕೆಲವರಿಗೆ ಮಾಧ್ಯಮಗಳಲ್ಲಿ ಸ್ಥಳ ದೊರಕುವುದೆಂದು ಚೆನ್ನಾಗಿ ಅರಿತುಕೊಂಡಿದ್ದಾರೆ. ಬ್ರಾಹ್ಮಣ ವಿರೋಧಿ ಮನೋಭಾವವನ್ನು ಹೆಚ್ಚಿಸಲು ಬ್ರಾಹ್ಮಣ್ಯ ದೇಶಕ್ಕೆ ಅಂಟಿಕೊಂಡ ಒಂದು ದೊಡ್ಡ ಶಾಪ ಅನ್ನುವ ಅರ್ಥರಹಿತ ಮಾತುಗಳನ್ನಾಡಿ ಜೊತೆಗೆ ಬುದ್ಧ ಕೂಡ ಬ್ರಾಹ್ಮಣರಿಂದ ದೂರವಿರಬೇಕಂದು ಎಂದು ಕರೆ ನೀಡಿದ್ದರಂತೆ !.ಅದ್ಯಾವ ಕೃತಿಯಲ್ಲಿ ಬುದ್ದ ಹೀಗೆ ಹೇಳಿದ್ದೆನೆಂದು ಆ ಕವಿಯತ್ರಿಗಳೇ ಬಲ್ಲರು..

ಮತ್ತಷ್ಟು ಓದು »

6
ಫೆಬ್ರ

ನಿಲುಮೆಯ ಮೇಲಿನ ದಾಳಿಯ ಕುರಿತು ಸುವರ್ಣವಾಹಿನಿಯಲ್ಲಿ ನಡೆದ ಚರ್ಚೆ

ಭಾಗ ೦೧

ಮತ್ತಷ್ಟು ಓದು »

5
ಫೆಬ್ರ

ಬೌದ್ದಿಕ ಚರ್ಚೆ ಮತ್ತು ಪ್ರಗತಿಪರರ ಅಸಹನೆ

– ಎಂ. ಎಸ್. ಚೈತ್ರ

ನಿರ್ದೇಶಕರು, “ಆರೋಹಿ” ಸಂಶೋಧನಾ ಸಂಸ್ಥೆ, ಬೆಂಗಳೂರು

freedomofspeechಸಾಮಾಜಿಕ ಜಾಲತಾಣ ಮತ್ತು ಮಟ್ಟು ಪ್ರಕರಣ

ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟುರವರು, ಸಾಮಾಜಿಕ ಜಾಲತಾಣವೊಂದರಲ್ಲಿ ತಮ್ಮನ್ನು ಟೀಕಿಸಿದ ಕೆಲವರ ಮೇಲೆ ಪೊಲೀಸರಿಗೆ ದೂರು ನೀಡಿದ್ದು, ವಿಶೇಷವಾಗಿ ನಿಲುಮೆ ಗುಂಪಿನ ನಿರ್ವಾಹಕರಾದ ರಾಕೇಶ್ ಶೆಟ್ಟರನ್ನು ಅದಕ್ಕೆ ಜವಾಬ್ದಾರರೆಂದು ದೂರಿನಲ್ಲಿ ಸೇರಿಸಿದ್ದಾರೆ. ಈ ಕುರಿತು ಇತ್ತೀಚೆಗೆ ನಮ್ಮ ರಾಜ್ಯದಾದ್ಯಂತ ಬಿಸಿ ಚರ್ಚೆ ನಡೆಯುತ್ತಿದೆ. ಇದರ ಪರ ಮತ್ತು ವಿರೋಧವಾಗಿ ಅನೇಕರು ತಮ್ಮ ವಾದಗಳನ್ನು ಮಂಡಿಸುತ್ತಿದ್ದಾರೆ. ಈ ಕುರಿತ ವಿಷ್ಲೇಷಣೆಯಲ್ಲಿ ತೊಡಗಿರುವವರು ತಮಗರಿವಿಲ್ಲದೆಯೆ ಅನೇಕ ದ್ವಂದಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಉದಾಹರಣೆಗೆ ಪ್ರಜಾವಾಣಿಯಲ್ಲಿ “ಅಭಿವ್ಯಕ್ತಿಯ ಪಾವಿತ್ರ್ಯಕ್ಕೆ ಹಿಂಸಾರಸಿಕತೆಯ ಮಸಿ” ಎಂಬ ಲೇಖನವನ್ನು ನಾವು ಗಮನಿಸೋಣ. (ದಿನಾಂಕ 2 ಫೆಬ್ರವರಿ 2015 ಇಸ್ಮಾಯಿಲ್ ಅವರ ಅಂಕಣ ಬರಹ; ಇದು ಪ್ರಜಾವಾಣಿಯ ವೆಬ್ ತಾಣದಲ್ಲೂ ಲಭ್ಯ). ತಮ್ಮ ಲೇಖನದ ಪ್ರಾರಂಭದಲ್ಲಿ ಲೇಖಕರು ಇಂಟರ್‍ನೆಟ್ ಜಗತ್ತು ಮತ್ತು ಇತರ ಪತ್ರಿಕಾ ಮಾಧ್ಯಮಗಳ ಕುರಿತು ಈ ರೀತಿ ಹೇಳುತ್ತಾರೆ:

“`ಸಮೂಹ ಮಾಧ್ಯಮ’ ಎಂಬುದರ ವ್ಯಾಖ್ಯೆಯನ್ನೇ ಇಂಟರ್‍ನೆಟ್ ಬದಲಾಯಿಸಿಬಿಟ್ಟಿದೆ. ನಿರ್ದಿಷ್ಟ ಸಂಪಾದಕ, ಪ್ರಕಾಶಕ, ಮುದ್ರಕ ಅಥವಾ ಪ್ರಸಾರಕನಿರುವ ಹಳೆಯ ಮಾಧ್ಯಮಗಳ ಸ್ವರೂಪಕ್ಕೂ ಇಂಟರ್‍ನೆಟ್ ಸಾಧ್ಯಮಾಡಿರುವ ಸಮೂಹ ಮಾಧ್ಯಮದ ಸ್ವರೂಪಕ್ಕೂ ಪರಸ್ಪರ ಹೋಲಿಕೆ ಸಾಧ್ಯವಿಲ್ಲ.”

ಅಂದರೆ ಯಾವ ಮಾನದಂಡಗಳಿಂದ ನಾವು ಪ್ರಿಂಟ್ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಅಳೆಯುತ್ತೇವೆಯೊ ಅದೇ ಮಾನದಂಡಗಳಿಂದ ಇಂಟರ್‍ನೆಟ್‍ನಿಂದ ಹುಟ್ಟಿದ ಸಾಮಾಜಿಕ ಜಾಲತಾಣಗಳನ್ನು ನೋಡಲು ಸಾಧ್ಯವಿಲ್ಲ ಎಂಬ ಸ್ಪಷ್ಟವಾದ ತೀರ್ಮಾನಕ್ಕೆ ಲೇಖಕರು ಬರುತ್ತಾರೆ. ಇದನ್ನು ಎಲ್ಲರೂ ಒಪ್ಪುತ್ತಾರೆನ್ನಬಹುದು. ಸ್ವಲ್ಪ ಮುಂದುವರೆದ ಅವರು ಹೀಗೆ ಹೇಳುತ್ತಾರೆ:

“ಈ ಗುಂಪಿನ ಗೋಡೆಯ (Wall) ಮೇಲೆ ಪ್ರಕಟವಾಗುವ ಬರಹಗಳಿಗೆ ಈ ನಿರ್ವಾಹಕರು ಜವಾಬ್ದಾರರೇ? ತಾಂತ್ರಿಕವಾಗಿ ಹಾಗೂ ತಾತ್ವಿಕವಾಗಿ ಅವರ ಮೇಲೆ ಜವಾಬ್ದಾರಿ ಇದೆ. ಕೇವಲ ಆಸಕ್ತಿಯ ಕಾರಣಕ್ಕಾಗಿ ಸಾರ್ವಜನಿಕ ಗುಂಪೊಂದನ್ನು ರೂಪಿಸುವಾತ ಅದರಲ್ಲಿರುವ ಸಾವಿರಾರು ಸಂಖ್ಯೆಯ ಸದಸ್ಯರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಹಲವರು ಕೇಳುತ್ತಾರೆ. ಹಾಗೆ ನೋಡಿದರೆ ನೂರಾರು ಸಂಖ್ಯೆಯ ವರದಿಗಾರರು, ಅಷ್ಟೇ ಸಂಖ್ಯೆಯ ಉಪ ಸಂಪಾದಕರು ಇತ್ಯಾದಿಗಳನ್ನು ಹೊಂದಿರುವ ಪತ್ರಿಕಾ ಸಂಸ್ಥೆಯೊಂದರ ಸಮಸ್ಯೆಯೂ ಇದುವೇ ತಾನೆ. ಓದುಗರ ಪತ್ರ ವಿಭಾಗದಲ್ಲಿ ನಿಂದನಾತ್ಮಕ ಪತ್ರವೊಂದು ಪ್ರಕಟವಾದರೆ ಅದಕ್ಕೂ ಸಂಪಾದಕ, ಪ್ರಕಾಶಕ, ಮುದ್ರಕ ಎಲ್ಲರೂ ಜವಾಬ್ದಾರರಾಗುತ್ತಾರಲ್ಲವೇ? ಇದೇ ತರ್ಕವನ್ನು ಸಾಮಾಜಿಕ ಜಾಲತಾಣಕ್ಕೂ ಅನ್ವಯಿಸಬೇಕಲ್ಲವೇ ಎಂಬ ಪ್ರಶ್ನೆಯೂ ಇಲ್ಲಿದೆ.”

ಈ ಹೇಳಿಕೆಯನ್ನೊಮ್ಮೆ ಗಂಭೀರವಾಗಿ ಪರಿಶೀಲಿಸಲು ಪ್ರಯತ್ನಿಸೋಣ. ತಮ್ಮ ಗೋಡೆಗಳ ಮೇಲೆ ಬರೆದದ್ದಕ್ಕೆ ನಿರ್ವಾಹಕರೇ ತಾಂತ್ರಿಕ ಮತ್ತು ತಾತ್ವಿಕವಾಗಿ ಜವಾಬ್ದಾರರಾಗುತ್ತಾರೆ ಎಂಬುದು ಲೇಖಕರ ಸ್ಪಷ್ಟ ಅಭಿಪ್ರಾಯ. ಮೊದಲಿಗೆ ಈ ತಾಂತ್ರಿಕ ಜವಾಬ್ದಾರಿ ಏನೆಂದು ಗುರುತಿಸಲು ಪ್ರಯತ್ನಿಸೋಣ. ಉದಾಹರಣೆಗೆ ತಮ್ಮ ಗೋಡೆಯ ಮೇಲೆ ಬರೆಯುವವರಿಗೆ ಎಚ್ಚರಿಕೆ ಕೊಡುವುದು ಮತ್ತು ಅದನ್ನು ತೆಗೆದು ಹಾಕುವ ಅಥವಾ ಬ್ಲಾಕ್ ಮಾಡುವ ಅಧಿಕಾರ ನಿರ್ವಾಹಕರಿಗೆ ಇರುವುದನ್ನು ತಾಂತ್ರಿಕ ಜವಾಬ್ದಾರಿ ಎಂದು ಒಪ್ಪಿಕೊಳ್ಳಬಹುದು. ಈಗ ಮಟ್ಟು ಮತ್ತು ರಾಕೇಶ್ ಶೆಟ್ಟರ ವಿವಾದವನ್ನು ತೆಗೆದುಕೊಳ್ಳೋಣ. ನಿಲುಮೆಯ ಗುಂಪಿನಲ್ಲಿ ಮಟ್ಟು ಅವರ ವಿರುದ್ಧ ಬರೆದ ಹೇಳಿಕೆಯನ್ನು ರಾಕೇಶ್ ಶೆಟ್ಟರು ಬರೆದದ್ದಲ್ಲ. ಎರಡನೆಯದಾಗಿ ಆ ಗುಂಪಿನ ಮುಖಪುಟದಲ್ಲೇ ಆ ಗುಂಪಿನ ಸದಸ್ಯರುಗಳು ಹೇಗೆ ವ್ಯವಹರಿಸಬೇಕು ಎಂಬುದನ್ನು ವಿವರಿಸಲಾಗಿದೆ ಜೊತೆಗೆ ಮಟ್ಟುರವರ ಪ್ರಕರಣವಲ್ಲದೆ, ಯಾವಾಗಲಾದರೂ ನಿರ್ವಾಹಕರಿಗೆ ನಿಲುಮೆ ಗುಂಪಿನಲ್ಲಿ ಬಂದ ಹೇಳಿಕೆಗಳು ಅಷ್ಟು ಸಮಂಜಸವಾದವುಗಳಲ್ಲ ಎಂಬುದನ್ನು ಗಮನಕ್ಕೆ ತಂದ ತಕ್ಷಣ ಅವುಗಳನ್ನು ತೆಗೆದು ಹಾಕಲಾಗುತ್ತದೆ ಇಲ್ಲವೆ ಸಂಬಂಧಿಸಿದವರಿಗೆ ಅದನ್ನು ಸರಿಪಡಿಸಿಕೊಳ್ಳಲು ಎಚ್ಚರಿಕೆ ನೀಡಲಾಗುತ್ತದೆ. ಮೇಲೆ ತಿಳಿಸಿದ್ದು ತಾಂತ್ರಿಕ ಜವಾಬ್ದಾರಿ ಎಂದು ಹೇಳಿದಲ್ಲಿ ಅದನ್ನು ನಿಲುಮೆಯ ನಿರ್ವಾಹಕರು ನಿರ್ವಹಿಸಿದ್ದಾರೆ.

ಮತ್ತಷ್ಟು ಓದು »

5
ಫೆಬ್ರ

ನಿತ್ಯೋತ್ಸವ ಕವಿ ನಿಸಾರ್ @ ೮೦

– ರಾಘವೇಂದ್ರ ಅಡಿಗ ಹೆಚ್.ಎನ್

ನಿಸಾರ್ ಅಹಮದ್ನಿತ್ಯೋತ್ಸವ ಖ್ಯಾತಿಯ ಕವಿ ನಿಸಾರ್ ಅಹಮದ್ ಇದೇ ಫೆಬ್ರವರಿ 5ರಂದು ಎಂಭತ್ತಕ್ಕೆ ಕಾಲಿರಿಸುತ್ತಿದ್ದಾರೆ. ತಮ್ಮ ಸರಳತೆ, ಸಾಹಿತ್ಯ ಪ್ರೌಢಿಮೆ,ಕವಿತೆಗಳಿಂದ ಕನ್ನಡಿಗರ ಮನೆಮಾತಾಗಿರುವ ಈ ಸಜ್ಜನ ಕವಿಯ ಜನುಮದಿನದಂದು ಈ ಸಮಯದಲ್ಲಿ ಕನ್ನಡಕ್ಕೆ ಇನ್ನೊಬ್ಬ ರಾಷ್ಟ್ರಕವಿ ಆಯ್ಕೆಪ್ರಕ್ರಿಯೆಯೂ ನಡೆಯುತ್ತಿದ್ದು, ನಮ್ಮೆಲ್ಲರ ಪ್ರೀತಿಯ ನಿಸಾರ್ ಅಹಮದ್ ಮುಂದಿನ ರಾಷ್ಟ್ರಕವಿಯಾಗಲೆದು ಹಾರೈಸೋಣ…ಅವರ ದಶಕಗಳ ಸಾಹಿತ್ಯಯಾತ್ರೆಯ ಒಂದು ಕಿರು ಪರಿಚಯವನ್ನು ಮಾಡಿಕೊಳ್ಳೋಣ

ಕರ್ನಾಟಕದಾದ್ಯಂತ ಕವಿಗಳಾಗಿ, ವಿಮರ್ಶಕರಾಗಿ ಮತ್ತು ವೈಚಾರಿಕ ಬರಹಗಾರರಾಗಿ ಪ್ರಸಿದ್ಧರಾದ ಪ್ರೊ|| ಕೆ. ಎಸ್. ನಿಸಾರ್ ಅಹಮದ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನ ಹಳ್ಳಿಯಲ್ಲಿ  05-02-1936ರಂದು ಕೆ. ಎಸ್. ಹೈದರ್ ಮತ್ತು ಹಮೀದಾ ಬೇಗಂ ಅವರ ಪುತ್ರರಾಗಿ ಜನಿಸಿದರು. ತಂದೆ ಸರಕಾರಿ ನೌಕರಿಯಲ್ಲಿದ್ದು ಕನ್ನಡ, ಇಂಗ್ಲಿಷ್, ಸಂಸ್ಕೃತ ಬಲ್ಲ ಸುಸಂಸ್ಕೃತರು. ನಿಸಾರರು ಪ್ರಾಥಮಿಕ, ಮಾಧ್ಯಮಿಕ ಶಾಲೆ ಓದಿದ್ದು ದೇವನಹಳ್ಳಿಯಲ್ಲಾದರೆ. ಪ್ರೌಢಶಾಲೆಗೆ ಹೊಸಕೋಟೆ ಹೈಸ್ಕೂಲು. ಸೇರಿಕೊಂಡರು. ನಂತರ ಬೆಂಗಳೂರಿನ ಸೆಂಟ್ರಲ್ ಕಾಲೇಜು ಸೇರಿ ಭೂಗರ್ಭ ಶಾಸ್ತ್ರದಲ್ಲಿ ಆನರ್ಸ್‌ ಪದವಿ ಪಡೆದರು. ಹೀಗೆ ಬೆಂಗಳೂರಿನಲ್ಲಿ  ಭೂವಿಜ್ಞಾನದಲ್ಲಿ ಎಂ.ಎಸ್ಸಿ. ವರೆಗಿನ ಅಧ್ಯಯನವನ್ನು ಮುಗಿಸಿ 1958ರಲ್ಲಿ ಗುಲ್ಬರ್ಗದಲ್ಲಿ ಸಹಾಯಕ ಭೂವಿಜ್ಞಾನಿಯಾಗಿ ಸರಕಾರಿ ಸೇವೆಯನ್ನು ಆರಂಭಿಸಿದರು.ಆದರೆ ತಾನು ಮಾಡುತ್ತಿರುವ ಕೆಲಸ ಅವರಿಗೆ ತೃಪ್ತಿ, ಸಂತೋಷವನ್ನು ತಂದುಕೊಡಲಿಲ್ಲ. ಹೀಗಾಗಿ ಆ ಉದ್ಯೋಗವನ್ನು ತೊರೆದು, ಅಧ್ಯಾಪನ ವೃತ್ತಿಗೆ ಸೇರಿಕೊಂಡರು. ಬೆಂಗಳೂರು ಸರಕಾರಿ ಕಾಲೇಜಿನಲ್ಲಿ  ಅಧ್ಯಾಪಕ ವೃತ್ತಿ ಆರಂಭ ಮಾಡಿದ್ದ ನಿಸಾರ್ ಅಹಮದ್ ನಂತರದಲ್ಲಿ ಚಿತ್ರದುರ್ಗ,ಶಿವಮೊಗ್ಗ, ಬೆಂಗಳೂರು ಪುನಃ ಶಿವಮೊಗ್ಗ ಕಾಲೇಜಿನಲ್ಲಿ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು. ಕಾಲೇಜಿನ ಪ್ರಾಧ್ಯಾಪಕರಾಗಿರುವಾಗ ಎನ್.ಸಿ.ಸಿ.ಯಲ್ಲಿ ಲೆಪ್ಟಿನೆಂಟ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅನುಭವವೂ ಅವರಿಗಿದೆ.

ಮತ್ತಷ್ಟು ಓದು »

4
ಫೆಬ್ರ

ಅಭಿವ್ಯಕ್ತಿ ಸ್ವಾತ೦ತ್ರ್ಯವೆನ್ನುವುದು ಕೇವಲ ಅಧಿಕಾರಿಶಾಹಿಯ ಸ್ವತ್ತಲ್ಲ…

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

freedomofspeechಕೆಲವು ದಿನಗಳ ಹಿ೦ದೆ ಸಾಮಾಜಿಕ ಅ೦ತರ್ಜಾಲ ತಾಣವಾದ ಫೇಸ್ ಬುಕ್ ಇನ್ನೊಮ್ಮೆ ವಿವಾದವೊ೦ದಕ್ಕೆ ಮುನ್ನುಡಿಯಾಯಿತು.ತಾವು ಬರೆದ ಲೇಖನವೊ೦ದಕ್ಕೆ ’ನಿಲುಮೆ’ ಎನ್ನುವ ಫೇಸ್ ಬುಕ್ ಗು೦ಪಿನಲ್ಲಿ ತಮ್ಮನ್ನು ಅವಾಚ್ಯವಾಗಿ ನಿ೦ದಿಸಲಾಗಿದೆ ಎ೦ದು ಆರೋಪಿಸಿ,ರಾಜ್ಯದ ಮುಖ್ಯಮ೦ತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು,ಗು೦ಪಿನ ನಿರ್ವಾಹಕರು ಸೇರಿದ೦ತೆ,ಸುಮಾರು ಐದು ಜನರ ಮೇಲೆ ಕ್ರಿಮಿನಲ್ ದೂರು ದಾಖಲಿಸಿದರು.ರಾಜ್ಯ ಸರ್ಕಾರದ ಅನೇಕ ಯೋಜನೆಗಳ ಬಗ್ಗೆ ಅವಮಾನಕರ ಚರ್ಚೆ ,ಶಾ೦ತಿ ಕದಡುವ ಪ್ರಯತ್ನ,ಮಾನಹಾನಿ ಮು೦ತಾದ ಆರೋಪಗಳಲ್ಲಿ ’ನಿಲುಮೆ’ಯ ಕೆಲವು ಸದಸ್ಯರ ಮೇಲೆ ಎಫ಼್.ಐ.ಆರ್ ದಾಖಲಿಸಲಾಗಿದೆ

ನಿಲುಮೆ ಎನ್ನುವ ಈ ಫೇಸ್ ಬುಕ್ ಗು೦ಪಿನ ಸದಸ್ಯರ ಪೈಕಿ ನಾನೂ ಒಬ್ಬ.ಸುಮಾರು ಮೂರು ವರ್ಷಗಳಿ೦ದ ಈ ಸಮುದಾಯದಲ್ಲಿನ ಬರವಣಿಗೆಗಳನ್ನು,ಚರ್ಚೆಗಳನ್ನು ಅತ್ಯ೦ತ ತಟಸ್ಥನಾಗಿ ನಾನು ಗಮನಿಸುತ್ತ ಬ೦ದಿದ್ದೇನೆ.ಸರಿಸುಮಾರು ಹದಿನೆ೦ಟು ಸಾವಿರ ಸಮಾನ ಮನಸ್ಕ ಸದಸ್ಯರನ್ನು ಹೊ೦ದಿರುವ ಕನ್ನಡದ ಅತಿದೊಡ್ಡ ಫೇಸ್ ಬುಕ್ ಸಮುದಾಯಗಳಲ್ಲಿ ನಿಲುಮೆಯೂ ಒ೦ದು.ಸದಸ್ಯನೇ ಆಗಿದ್ದರೂ ನಾನು ಅಲ್ಲಿನ ಚರ್ಚೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಸ೦ದರ್ಭಗಳು ತೀರ ಕಡಿಮೆ.ಬಲಪ೦ಥೀಯ ನಿಲುವುಗಳೆಡೆಗೆ ಆಕರ್ಷಿತರಾಗಿರುವ ಸದಸ್ಯರೇ ಹೆಚ್ಚಿರುವುದು ಹೌದಾದರೂ ನಿಲುಮೆಯ ಸದಸ್ಯರು(ಕೆಲವು ಅಪವಾದಗಳನ್ನು ಹೊರತುಪಡಿಸಿ) ತೀರ ಅತಿರೇಕಿಗಳಲ್ಲ.ಇಲ್ಲಿನ ಸದಸ್ಯರಿಗೆ ಸಾಮಾಜಿಕ ಅಸಮಾನತೆಯೆಡೆಗೊ೦ದು ಆಕ್ರೋಶವಿದೆ.ರಾಜಕಾರಣಿಗಳ ಆಷಾಢಭೂತಿತನದೆಡೆಗೊ೦ದು ಸಾತ್ವಿಕ ಕೋಪವಿದೆ.ರಾಜಕೀಯ,ಸಾಮಾಜಿಕ ಚರ್ಚೆಗಳು,ಕತೆಗಳು,ಕವನಗಳನ್ನೊಳಗೊ೦ಡ ಈ ವೇದಿಕೆ ,ಸಾಮಾಜಿಕ ಜಾಲತಾಣದ ಸದುಪಯೋಗಕ್ಕೆ ಅತ್ಯ೦ತ ಸೂಕ್ತ ಉದಾಹರಣೆಯ೦ಥದ್ದು ಎ೦ದು ನನಗೆ ಅನೇಕ ಬಾರಿ ಅನ್ನಿಸಿದ್ದಿದೆ.ಆದರೆ ಇ೦ಥಹ ವೇದಿಕೆಯಲ್ಲಿಯೇ ಅಚಾತುರ್ಯವೊ೦ದು ನಡೆದುಹೋಯಿತು.ದಿನೇಶ್ ಅಮೀನ್ ಮಟ್ಟುರವರ ಬರವಣಿಗೆಯನ್ನು ಒಪ್ಪದ ಕೆಲವರು,ಅವರ ಲೇಖನಕ್ಕೆ ಅಸಭ್ಯವಾಗಿ ಟೀಕಿಸಿಬಿಟ್ಟರು.

ಮತ್ತಷ್ಟು ಓದು »

3
ಫೆಬ್ರ

ಟಾರ್ಗೆಟ್ ನಿಲುಮೆ : ಪರದೆಯ ಹಿಂದಿನ ಕತೆ

– ರಾಕೇಶ್ ಶೆಟ್ಟಿ

freedomofspeechಸುವರ್ಣ ಸುದ್ದಿ ವಾಹಿನಿಯಲ್ಲಿ ನಡೆದ “ನಿಲುಮೆಯ ಮೇಲಿನ ದೌರ್ಜನ್ಯ” ಕುರಿತ ಚರ್ಚೆಯಲ್ಲಿ,ನಾನು ಕೊಂಚ ಆಕ್ರಮಣಕಾರಿಯಾಗಬೇಕಿತ್ತು ಎನ್ನುವುದು ನನ್ನ ಕೆಲ ಗೆಳೆಯರ ಅನಿಸಿಕೆಯಾಗಿತ್ತು.ಚರ್ಚೆಯನ್ನು ಮತ್ತೊಮ್ಮೆ ನಾನೇ ನೋಡಿದಾಗ ಕೆಲವೊಂದು ಕಡೆ ನಾನು ಆಕ್ರಮಣಕಾರಿಯಾಗಿದ್ದರೆ ಚೆನ್ನಾಗಿತ್ತು ಅಂತಲೇ ಅನಿಸಿತು.ಆದರೇನು ಮಾಡುವುದು,ಮಧ್ಯೆ ಬಾಯಿ ಹಾಕಿ ಮಾತನಾಡುವುದು ಮತ್ತು ಜೋರು ದನಿಯಲ್ಲಿ ಮಾತನಾಡುವುದೆಲ್ಲ “ಚರ್ಚೆ”ಯಲ್ಲ ಎನ್ನುವುದು ನಾನು ಬೆಳೆದು ಬಂದ ಹಾದಿ ಮತ್ತು ರೀತಿ ನನಗೆ ಕಲಿಸಿದೆ.ಹ್ಮ್ ಅದೆಲ್ಲ ಇರಲಿ.ಆವತ್ತು ಚರ್ಚೆಯ ಗದ್ದಲದಲ್ಲಿ ನಾನು ಹೇಳದೇ ಉಳಿದ ಬಹುಮುಖ್ಯ ವಿಷಯಗಳನ್ನು ದಾಖಲಿಸಬೇಕಿದೆ.ಆ ಕಾರಣಕ್ಕಾಗಿ ಈ ಲೇಖನ…

ಚರ್ಚೆಯ ನಡುವೆ,ದಿನೇಶ್  ಅಮೀನ್ ಮಟ್ಟು ಅವರು “ನಿಲುಮೆ ಗುಂಪನ್ನು ಮುಚ್ಚಬೇಕು” ಎಂದಿದ್ದನ್ನು ನೀವೆಲ್ಲರೂ ಕೇಳಿದ್ದೀರಿ.ಮಾತು ತೆಗೆದರೆ ಮುಚ್ಚಿಸಬೇಕು ಎನ್ನುವ ಈ ಪ್ರಗತಿಪರ ಚಿಂತನೆಯ ಹಿಂದಿನ ಕತೆಯೇನು? ಇವರಿಗೇಕೆ ನಿಲುಮೆಯನ್ನು ಮುಚ್ಚಿಸಲೇಬೇಕೆಂಬ ಹಟ?ಈ ಪ್ರಶ್ನೆಗಳಿಗೆ ಉತ್ತರ ಹುಡುಕಲು ನಾವು ೨೦೧೩ರ ಮಾರ್ಚ್ ನಲ್ಲಿ  ರಾಜ್ಯದ ಪ್ರತಿಷ್ಟಿತ ಪತ್ರಿಕೆಯೊಂದರಲ್ಲಿ ಶುರುವಾದ “ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ” ಕುರಿತ ಚರ್ಚೆಯತ್ತ ನೋಡಬೇಕು.ಈ ಚರ್ಚೆ ಆರಂಭವಾಗಿದ್ದು  CSLC ಎಂಬ  ಸಮಾಜ ವಿಜ್ಞಾನ ಸಂಶೋಧನಾ ತಂಡದವರ “ವಚನ ಸಾಹಿತ್ಯವು ಜಾತಿವ್ಯವಸ್ಥೆಯ ವಿರುದ್ಧ ಮಾತನಾಡುತ್ತದೆಯೆ?” ಎಂಬ ಸಂಶೋಧನಾ ಪ್ರಬಂಧದೊಂದಿಗೆ.ಆ ಪತ್ರಿಕೆಯಲ್ಲಿ ಶುರುವಾದ ಚರ್ಚೆಯಲ್ಲಿ ಕೇವಲ ಒಂದು ಕಡೆಯವರ ವಾದಗಳಿಗೆ ಮಾತ್ರ ವೇದಿಕೆಯೊದಗಿಸಿ, CSLC ತಂಡದವರಿಗೆ ವಾದಕ್ಕೂ ಜಾಗ ಕೊಡದಿದ್ದಾಗ ಅವರಿಗೆ ಜೊತೆಯಾಗಿ ನಿಂತಿದ್ದು ನಿಲುಮೆ.ನಿಲುಮೆಯಲ್ಲಿ ಸಿ.ಎಸ್.ಎಲ್.ಸಿ  ತಂಡದವರ ಲೇಖನಗಳು ಪ್ರಕಟವಾಗಿ ಅದು ಫೇಸ್ಬುಕ್ಕಿನಲ್ಲೂ ವ್ಯಾಪಕ ಚರ್ಚೆಗೆ ಒಳಪಟ್ಟಿತು.ಕಡೆಗೆ ಒತ್ತಡಕ್ಕೆ ಬಿದ್ದವರು ಅನಿವಾರ್ಯವಾಗಿ ಸಿ.ಎಸ್.ಎಲ್.ಸಿಯವರ ಒಂದೆರಡು ಲೇಖನಗಳನ್ನು ಪ್ರಕಟಿಸಿ,ಆ ಚರ್ಚೆಗೆ ಅಂತ್ಯ ಹಾಡಿಸಿದರು.ಆದರೆ,ಅಷ್ಟಕ್ಕೆ ನಮ್ಮ ಪ್ರಗತಿಪರರ ಸಿಟ್ಟು ಕಮ್ಮಿಯಾದೀತೇ? ಅವರು ತಮ್ಮ ಅಧಿಕಾರದ ಜೊತೆಗಿನ ಸ್ನೇಹ(ಪುರೋಹಿತಶಾಹಿ!?) ವನ್ನು ಬಳಸಿಕೊಂಡು ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಇದ್ದ CSLC ಸಂಶೋಧನಾ ಕೇಂದ್ರವನ್ನೇ ಮುಚ್ಚಿಸಿಬಿಟ್ಟರು! ಆಗಲಾದರೂ ನಾವು ಇವರಿಗೆ ಬೆದರಿಕೊಂಡು ಸುಮ್ಮನಾಗಬಾರದೇ? ಊಹೂಂ! ಸುಮ್ಮನಿರಲಿಲ್ಲ.ಈ ಫ್ಯಾಸಿಸ್ಟ್ ಧೋರಣೆಯ ಬಗ್ಗೆ ನಿಲುಮೆಯ ವೇದಿಕೆಯಲ್ಲಿ ಬರೆಯಲಾಯಿತು.ನಾನು ಈ ಬಗ್ಗೆ ನಿಲುಮೆಯಲ್ಲಿ,ಅಸೀಮಾ ಮಾಸಿಕದಲ್ಲಿ ಮತ್ತು ಕನ್ನಡ ಪ್ರಭ ಪತ್ರಿಕೆಯಲ್ಲಿ ಮಾನ್ಯ ಅನಂತ ಮೂರ್ತಿಯವರಿಗೆ ಬರೆದ ಬಹಿರಂಗ ಪತ್ರದಲ್ಲೂ ಪ್ರಗತಿಪರರ ಫ್ಯಾಸಿಸ್ಟ್ ಧೋರಣೆಯನ್ನು ಪ್ರಶ್ನಿಸಿದೆ.ನಿಲುಮೆಯ ಮೇಲೆ ಫ್ಯಾಸಿಸಂನ ಕರಾಳ ಛಾಯೆ ಆವರಿಸುತ್ತಲೇ ಹೋಯಿತು.

ಮತ್ತಷ್ಟು ಓದು »

3
ಫೆಬ್ರ

ದಿನೇಶ್ ಅಮಿನ್ ಮಟ್ಟು ಅವರಿಗೊಂದು ಬಹಿರಂಗ ಪತ್ರ

– ಡಾ.ಟಿ.ಎನ್ ವಾಸುದೇವ ಮೂರ್ತಿ

Amin Mattuನಿಂದಂತಿ ತುಣ್ಹೀಮಾಸೀನಙï ನಿಂದಂತಿ ಬಹುಭಾಣೀನಙï |

ಮಿತಭಾಣಿನಂ ಪಿ ನಿಂದಂತಿ ನತ್ಥಿ ಲೋಕೇ ಅನಿಂದಿತೋ ||

(ಧಮ್ಮಪದ, ಕೋಧವಗ್ಗ 227)

(ಲೋಕದ ಜನ ಸುಮ್ಮನಿರುವವರನ್ನೂ ನಿಂದಿಸುವರು, ಹೆಚ್ಚು ಮಾತನಾಡುವವರನ್ನೂ ನಿಂದಿಸುವರು, ಮಿತಭಾಷಿಗಳನ್ನೂ ನಿಂದಿಸುವರು ಲೋಕದ ಜನರಿಂದ ನಿಂದನೆಗೆ ಒಳಗಾಗದವರೇ ಇಲ್ಲ)

ಮುಖವಿಲ್ಲದವರ ನಿಂದನೆಯ ಮಾತುಗಳಿಂದ ವಿಚಲಿತರಾಗಿರುವ ದಿನೇಶ್ ಅಮಿನ್ ಮಟ್ಟು ಅವರು ‘ನಿಲುಮೆ’ ಜಾಲತಾಣದ ಮೇಲೆ ದೂರು ನೀಡಿರುವುದಲ್ಲದೆ ಅದನ್ನು ಮುಚ್ಚಿಸಲು ಮುಂದಾಗಿರುವುದು ದುರದೃಷ್ಟಕರ. ಅವರ ಈ ಅಸಹನೆ ‘ಸಂತೆಯೊಳಗೆ ಮನೆಯ ಮಾಡಿ ಶಬ್ದಕ್ಕೆ ನಾಚಿದರೆಂತಯ್ಯ’ ಎಂಬ ಅಕ್ಕನ ಮಾತುಗಳನ್ನು ನೆನಪಿಸುತ್ತದೆ.

ದಿನೇಶ್ ಅಮೀನ್ ಮಟ್ಟು “ಪತ್ರಿಕೋದ್ಯಮವು ಜಾಹಿರಾತಿನ ಹಂಗಿಗೊಳಗಾಗಿರುವುದರಿಂದ ಫೇಸ್‍ಬುಕ್‍ನಂತಹ ಸಾಮಾಜಿಕ ಜಾಲತಾಣಗಳು ಭರವಸೆಯ ಅಭಿವ್ಯಕ್ತಿ ಮಾಧ್ಯಮವಾಗಬಲ್ಲದು” ಎಂಬ ಆಶಾವಾದ ವ್ಯಕ್ತಪಡಿಸುತ್ತಾರೆ.

ಆದರೆ ಸಾಮಾಜಿಕ ಜಾಲತಾಣ ವೃತ್ತಿಪರ ಪತ್ರಿಕೋದ್ಯಮಕ್ಕೆ ಪರ್ಯಾಯವಾಗಬಲ್ಲದೇ ಎಂಬ ಪ್ರಶ್ನೆ ಇನ್ನೂ ಬಗೆಹರಿಯದೆ ಅದೊಂದು ಚರ್ಚೆಯ ವಿಷಯವಾಗಿದೆ. ಸದ್ಯಕ್ಕೆ ಮುಖವಿಲ್ಲದವರಿಂದ ತಮಗಾದ ತೇಜೋವಧೆಯನ್ನು ಮರೆಮಾಚಿ, ತಾವು ನೀಡಿರುವ ಪೊಲೀಸ್ ದೂರಿನ ಸಮರ್ಥನೆಗೆ ಒಂದು ಗುರಾಣಿಯಂತೆ ಅವರು ಸದರಿ ಅಭಿಪ್ರಾಯವನ್ನು ಪ್ರಚಾರ ಮಾಡಿಕೊಂಡಿರುವಂತೆ ಮೇಲ್ನೋಟಕ್ಕೆ ಭಾಸವಾಗುತ್ತದೆ. ಅಷ್ಟಕ್ಕೂ ಅದೇನೂ ತೇಜೋವಧೆಯಲ್ಲ, ವಿವೇಕಾನಂದರ ಕುರಿತು ಅವರು ಬರೆದದ್ದು ಅನ್ಯ ಲೇಖಕನೊಬ್ಬನ ಅನುವಾದಿತ ಸಾಲುಗಳೇ ವಿನಾ ಅದೇನೂ ಅವರ ವ್ಯಕ್ತಿಗತ ಅಭಿಪ್ರಾಯವಲ್ಲ ಎಂಬ ಅರಿವಿರದ ಓದುಗರು ಮಾಡುವ ಬುಡವಿರದ ಆರೋಪಗಳನ್ನು ತೇಜೋವಧೆ ಎಂದೇಕೆ ಭಾವಿಸಬೇಕು? “ಒಂದು ಜಾಲತಾಣವನ್ನು ವಾಮಮಾರ್ಗದಿಂದಲೇ ಹೊಸಕಬಲ್ಲೆನಾದರೂ ನೇರವಾಗಿಯೇ ಅದರ ವಿರುದ್ಧ ಧ್ವನಿಯೆತ್ತಿದ್ದೇನೆ” ಎಂಬರ್ಥದ ಅವರ ಮಾತುಗಳಲ್ಲಿ ಅವರ ಪ್ರಾಮಾಣಿಕತೆ ಮತ್ತು ಸಾಚಾತನ ವಾಚ್ಯವಾಗಿ ಪ್ರದರ್ಶಿತವಾಗುತ್ತಿದ್ದರೂ ಆ ಮಾತುಗಳ ಹಿಂದೆ ಕ್ರೌರ್ಯವೇ ಇಣುಕುತ್ತಿರುವಂತೆ ಕಾಣಿಸುತ್ತದೆ. ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ “ನಿನ್ನ ಅಭಿಪ್ರಾಯದೊಂದಿಗೆ ನನ್ನ ಸಹಮತವಿಲ್ಲದಿದ್ದರೂ ನಿನ್ನ ಅಭಿಪ್ರಾಯವನ್ನು ಹತ್ತಿಕ್ಕುವ ಶಕ್ತಿಗಳ ವಿರುದ್ಧ ಪ್ರಾಣವನ್ನೇ ಪಣವಿತ್ತು ಹೋರಾಡುತ್ತೇನೆ” ಎಂಬ ವೋಲ್ಟೈರ್‍ನ ಮಾತುಗಳನ್ನು ಕಲಿಸುವ ಹಿರಿಯರು ಇಂತಹ ಕಠಿಣಕ್ರಮಕ್ಕೆ ಮುಂದಾಗುವಂತೆ ಪ್ರೇರೇಪಿಸಿರುವ ಬೆಳವಣಿಗೆಗಳನ್ನು ಕಂಡು ದಿಗಿಲಾಗುತ್ತದೆ.

ಮತ್ತಷ್ಟು ಓದು »

3
ಫೆಬ್ರ

ದೇಹ ದಾನ…

– ಭರತೇಶ ಅಲಸಂಡೆಮಜಲು

ದೇಹದಾನಈವಂಗೆ ದೇವಂಗೆ ಅವುದಂತರವಯ್ಯಾ
ದೇವನು ಜಗಕೆ ಕೊಡಲಿಹನು | ಕೈಯಾರೆ
ಇವನೇ ದೇವ ಸರ್ವಜ್ಞ.

ಪ್ರಪಂಚದಲ್ಲಿ ದಾನ ಮಾಡುವವನು ದೇವರಿಗೆ ಸಮಾನನು, ಪೂಜೆಗೆ ಯೋಗ್ಯನು ಸಮಾಜದ ಉನ್ನತಿಗೆ ಪ್ರತಿಫಲಾಪೇಕ್ಷೆ ಇಲ್ಲದೇ ಸ್ಪೂರ್ತಿಯಿಂದ ಕೊಡುಗೆ ನೀಡುವವನೇ ಮಹಾದಾನಿ ಎಂದು ಒಟ್ಟಾರೆ ತಾತ್ಪರ್ಯ.

ದಾನಕ್ಕೆ ಎಲ್ಲ ಧರ್ಮಗಳಲ್ಲೂ ಉಚ್ಚ ಸ್ಥಾನವಿದೆ, ಈ ದಾನವೆಂಬುವುದು ದೇವಸ್ಥಾನದಲ್ಲಿ ಕೊಡುವ ಎಣ್ಣೆಯಿಂದ ಹಿಡಿದು, ಬಲಿವಾಡುಗಳಿಂದ ಹಿಡಿದು, ಗೋದಾನ, ವಸ್ತ್ರದಾನ, ಅನ್ನದಾನ, ರಾಜರು ಕೊಡುತಿದ್ದ ಭೂದಾನ, ರಕ್ತದಾನ, ದೇಹದಾನ,ಕನ್ಯಾದಾನ, ವಿದ್ಯಾದಾನ ಹೀಗೆ… ಕರ್ಣನ ದಾನ, ಶಿಭಿ ಚಕ್ರವರ್ತಿಯ ದಾನ, ಬಲಿ ಚಕ್ರವರ್ತಿ ದಾನ ಎಲ್ಲವೂ ಉಲ್ಲೇಖನಿಯ.

ಮತ್ತಷ್ಟು ಓದು »

1
ಫೆಬ್ರ

ಭಾರತೀಯ ಸಂಸ್ಕೃತಿಯನ್ನು ವಿರೂಪಗೊಳಿಸುವ ಪಾಶ್ಚಾತ್ಯ ಚಿಂತನಾ ಮಾರ್ಗಗಳು

ಶಿವಕುಮಾರ ಮತ್ತು ಡಂಕಿನ್ ಝಳಕಿ

Swami Vivekanandaದಿನೇಶ್ ಅಮೀನ್ ಮಟ್ಟು ಅವರು ಪ್ರತಿಷ್ಠಿತ ಪತ್ರಿಕೆಯೊಂದಕ್ಕೆ ೨೦೧೨ರಲ್ಲಿ ಬರೆದ ವಿವೇಕಾನಂದರ ಕುರಿತ ಲೇಖನ ಬಹಳಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಈ ಲೇಖನದ ವಿರುದ್ಧ ಎದ್ದ ದನಿಗಳ ಕುರಿತು ತಮ್ಮ ಸಮರ್ಥನೆಯನ್ನು ಹೊಸೆಯುತ್ತಾ, ತಮ್ಮ ಫೇಸ್ಬುಕ್ ಪುಟದಲ್ಲಿ, ತಮ್ಮ ಲೇಖನ ಐತಿಹಾಸಿಕವಾಗಿ ಸರಿಯಾಗಿದೆ ಮತ್ತು ತಾವು ವಿವೇಕಾನಂದರ ಬಗ್ಗೆ ಪ್ರಕಟವಾಗಿರುವ ಸುಮಾರು 200 ಪುಸ್ತಕಗಳನ್ನು ಓದಿದ್ದಾಗಿ ಹೇಳಿಕೊಳ್ಳುತ್ತಾರೆ. ಅವರ ಪರವಾಗಿ ವಾದಿಸುತ್ತ ಮತ್ತೊಬ್ಬರು, ‘ರೋಗಿಷ್ಟ’ ಎನ್ನುವುದು ಬೈಗುಳವೇ ಅಲ್ಲ, ‘ಕಡಿಮೆ ಅಂಕ ಗಳಿಸುವವ’ ಎಂಬುದು ‘ಅವಮಾನದ’ ವಿಷಯವಲ್ಲ ಎಂದು ಹೇಳ ತೊಡಗಿದ್ದಾರೆ. ಈ ಹೊತ್ತಿನಲ್ಲಿ ಕೆಲವು ವಿಚಾರಗಳನ್ನು ಮತ್ತೊಮ್ಮೆ ಚರ್ಚೆಗೆತ್ತಿಕೊಳ್ಳುವುದು ಈ ಪುಟ್ಟ ಲೇಖನದ ಉದ್ದೇಶ.

ಮಟ್ಟುರವರ ವಿವೇಕಾನಂದರ ಕುರಿತ ಲೇಖನದ ಈ ಸಾಲುಗಳನ್ನು ನೋಡಿ: “ಸ್ವಾಮಿ ವಿವೇಕಾನಂದರು ದಡ್ಡ ವಿದ್ಯಾರ್ಥಿಯಾಗಿದ್ದರು. … ಹುಟ್ಟಿನಿಂದಲೇ ರೋಗಿಷ್ಠರಾಗಿದ್ದ ಅವರು ಸಾಯುವ ಹೊತ್ತಿಗೆ ಒಂದೆರಡಲ್ಲ, ಮೂವತ್ತೊಂದು ರೋಗಗಳಿಂದ ಬಳಲಿ ಹೋಗಿದ್ದರು. ಎಲ್ಲ ಬಂಗಾಳಿಗಳಂತೆ ಅವರೊಬ್ಬ ಮಹಾ ತಿಂಡಿಪೋತರಾಗಿದ್ದರು. ಜೀವನದ ಕೊನೆಯ ದಿನದವರೆಗೂ ಅವರು ಮಾಂಸಾಹಾರಿ ಆಗಿದ್ದರು. … ವ್ಯಸನಿಯಂತೆ ಸಿಗರೇಟ್-ಹುಕ್ಕಾ ಸೇದುವ ಧೂಮಪಾನಿಯಾಗಿದ್ದರು. … ತೀವ್ರ ತಲೆನೋವಿನಿಂದ ಹಿಡಿದು ಹೃದಯದ ಕಾಯಿಲೆವರೆಗೆ … ಮಲಬದ್ಧತೆ, ಭೇದಿ, ನರದೌರ್ಬಲ್ಯ, ಮಂಡಿನೋವು, ಕಾಲುಬಾವು ಎಲ್ಲವೂ ಅವರನ್ನು ಕಾಡುತ್ತಿತ್ತು. … ಈ ಎಲ್ಲ ರೋಗಗಳ ನಡುವೆಯೂ ಅವರ ನಾಲಗೆಯ ಚಪಲ ಮಾತ್ರ ಕಡಿಮೆಯಾಗಿರಲಿಲ್ಲ. … (ವಿವೇಕಾನಂದ) ಮಾತ್ರ ಮಾಂಸದ ಅಡುಗೆಯನ್ನು ಬಗೆಬಗೆಯಲ್ಲಿ ಮಾಡುತ್ತಿದ್ದ…. ಕುಟುಂಬದ ಕಷ್ಟಗಳನ್ನು ತಾಯಿಯ ಹೆಗಲ ಮೇಲೆ ಹಾಕಿ ವಿವೇಕಾನಂದರು ಸಂಸಾರ ತೊರೆದು ಸನ್ಯಾಸಿಯಾಗುತ್ತಾರೆ.” ಇವು ಲೇಖನದ ವಾದದ ಕೆಲವೊಂದು ಝಲಕ್ ಅಷ್ಟೇ.

ಮತ್ತಷ್ಟು ಓದು »