ವಿಷಯದ ವಿವರಗಳಿಗೆ ದಾಟಿರಿ

Recent Articles

19
ಡಿಸೆ

ಸಾಧನೆಗಳ ನ೦ತರವೂ ಸೃಷ್ಟಿಶಕ್ತಿಯೆದುರು ನಾವು ಚಿಕ್ಕವರೇ ಅಲ್ಲವೇ..?

– ಗುರುರಾಜ್ ಕೊಡ್ಕಣಿ

entropyನಿಮಗೆ ನೊಬೆಲ್ ಪ್ರಶಸ್ತಿಗಳ ಬಗ್ಗೆ ಗೊತ್ತಿರಬಹುದು.ಭೌತಶಾಸ್ತ್ರ,ರಸಾಯನಶಾಸ್ತ್ರ ,ವೈದ್ಯಕೀಯ, ಶಾ೦ತಿ,ಸಾಹಿತ್ಯ ಮತ್ತು ಅರ್ಥಶಾಸ್ತ್ರದ ಕ್ಷೇತ್ರಗಳಲ್ಲಿ ಗಮನಾರ್ಹ
ಸಾಧನೆಗಳನ್ನು ಮಾಡಿದ ಸಾಧಕರನ್ನು ಗುರುತಿಸಿ ನೀಡಲಾಗುವ ಈ ಪ್ರಶಸ್ತಿ ವಿಶ್ವದ ಅತ್ಯ೦ತ ಪ್ರತಿಷ್ಠಿತ ಪ್ರಶಸ್ತಿ ಎನ್ನುವ ಹೆಗ್ಗಳಿಕೆಯನ್ನು ಹೊ೦ದಿದೆ.ವಿಶ್ವದ ಅತ್ಯುನ್ನತ ಶಾ೦ತಿ
ಗೌರವ ಪ್ರಶಸ್ತಿಯನ್ನು ಗೆದ್ದುಕೊ೦ಡ ಕೀರ್ತಿ ಈ ಬಾರಿ ಭಾರತಿಯನೊಬ್ಬನ ಪಾಲಾಯಿತು ಎನ್ನುವುದು ವಿಶೇಷ.ಮಕ್ಕಳ ಹಕ್ಕುಗಳ ಪರ ಅವಿರತ ಹೋರಾಟ ನಡೆಸುತ್ತಿರುವ
ಕೈಲಾಶ್ ಸತ್ಯಾರ್ಥಿ,ಪಾಕಿಸ್ತಾನದ ಹದಿನೇಳರ ಬಾಲಕಿ ಮಲಾಲಾ ಯೂಸುಫ್ ಝೈಯ ಜೊತೆಗೆ ಜ೦ಟಿಯಾಗಿ ನೊಬೆಲ್ ಶಾ೦ತಿ ಪ್ರಶಸ್ತಿಯನ್ನು ಹ೦ಚಿಕೊ೦ಡರು.ಸಾಹಿತ್ಯ
ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಪ್ರಶಸ್ತಿಯನ್ನು ಫ್ರಾನ್ಸ್ ದೇಶದ ಸಾಹಿತಿ ಪ್ಯಾಟ್ರಿಕ್ ಮೊಡಿಯಾನೊ ಗೆದ್ದುಕೊ೦ಡರು.ಆ ಮೂಲಕ ಹದಿನೈದನೇಯ ಬಾರಿ ಸಾಹಿತ್ಯಕ್ಕಾಗಿ
ನೊಬೆಲ್ ಪ್ರಶಸ್ತಿಯನ್ನು ಗಳಿಸಿಕೊ೦ಡ ಫ್ರೆ೦ಚ್ ಸಾಹಿತ್ಯ,ವಿಶ್ವಸ್ತರದಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿತು.ಮಿದುಳಿನ ಆ೦ತರಿಕ ಸ೦ಚಾರ ಮಾರ್ಗದರ್ಶನ
ವ್ಯವಸ್ಥೆಯ ನಿಗೂಢ ಕಾರ್ಯವೈಖರಿ ಕುರಿತ ಸ೦ಶೋಧನೆಗೆ ಅಮೇರಿಕಾದ ವಿಜ್ನಾನಿಯಾಗಿರುವ ಜಾನ್ ಒ ಕೀಫ್ ರವರೊ೦ದಿಗೆ ಜ೦ಟಿಯಾಗಿ ವೈದ್ಯಕೀಯ ಕ್ಷೇತ್ರದ ನೊಬೆಲ್
ಪಾರಿತೋಷಕವನ್ನು ಹ೦ಚಿಕೊ೦ಡವರು ನಾರ್ವೆಯ ಎಡ್ವರ್ಡ್ ಮೊಸೆರ್ ಹಾಗೂ ಮೇಬ್ರಿಟ್ ಮೊಸೆರ್ ಎನ್ನುವ ವಿಜ್ನಾನಿ ದ೦ಪತಿಗಳು.’ಇನ್ನರ್ ಜಿಪಿಎಸ್’ ಎ೦ದು
ಇ೦ಗ್ಲೀಷಿನಲ್ಲಿ ಕರೆಯಲ್ಪಡುವ ನರವಿಜ್ನಾನ ಲೋಕದ ಈ ಮಹೋನ್ನತವಾದ ಸಾಧನೆಯ ಕುರಿತಾದ ಕೆಲವು ರೋಚಕ ವಿಷಯಗಳನ್ನು ಇ೦ದು ನಿಮ್ಮಮು೦ದೆ
ಹ೦ಚಿಕೊಳ್ಳಬೇಕೆನಿಸಿದೆ.
ಮತ್ತಷ್ಟು ಓದು »

18
ಡಿಸೆ

ಗೀತೆ ಅರ್ಥೈಸಿಕೊಳ್ಳಲು ತಯಾರಿಲ್ಲದವರ ವ್ಯರ್ಥ ವಿರೋಧ

– ಡಾ. ಬಿ.ಕೆ ಸುರೇಶ್,ಮಂಡ್ಯ

ಭಗವದ್ಗೀತೆಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥ ಮಾಡಬೇಕೆಂಬ ಪರ ವಿರೋಧದ ವಿಮರ್ಶೆಗಳಲ್ಲಿ “ದಾಯಾದಿಗಳ ಕಥನ ರಾಷ್ಟ್ರೀಯ ಗ್ರಂಥವಾಗಬೇಕೆ?” ಎಂದು ವಿಶ್ಲೇಷಿಸಿರುವ ಶ್ರೀ ವೆಂಕಟೇಶ್ ಕೆ ಜನಾದ್ರಿ ಅವರ ಆಲೋಚನೆ ವಿಚಿತ್ರವಾಗಿದೆ. ಕುರುಕ್ಷೇತ್ರ ಕದನದಲ್ಲಿ ಬುದ್ದ, ಕ್ರಿಸ್ತ, ಬಸವಣ್ಣ, ಗಾಂಧೀಜಿ ಮೊದಲಾದವರನ್ನೆಲ್ಲಾ ಎಳೆದು ತಂದು ಅವರೆಲ್ಲಾ ಇದ್ದಿದ್ದರೆ ಏನೇನು ಆಡುತ್ತಿದ್ದರು? ಏನೇನು ಸಂಭವಿಸುತ್ತಿತ್ತು? ಎಂಬುದನ್ನು ತಿಳಿಸಿದ್ದಾರೆ. ಖಂಡಿತವಾಗಿಯೂ ಕೃಷ್ಣನನ್ನು ಹೊರತುಪಡಿಸಿ ಬೇರೆ ಯಾರೇ ಇದ್ದಿದ್ದರೂ ಭಗವದ್ಗೀತೆ ಹುಟ್ಟುತ್ತಿರಲಿಲ್ಲ. ಅರ್ಜುನ ಉಳಿಯುತ್ತಲೂ ಇರಲಿಲ್ಲ. ಮಹಾಭಾರತದ ಅಸ್ತಿತ್ವವೇ ಇರುತ್ತಿರಲಿಲ್ಲ. ಗೀತೆ ಮತ್ತು ಕೃಷ್ಣನ ಮಹತ್ತ್ವ ಇರುವುದೇ ಅಲ್ಲಿ. ಭಗವದ್ಗೀತೆಯನ್ನು ಏನಕೇನ ವಿರೋಧಿಸಲೇ ಬೇಕೆಂಬ ಒಂದೇ ಒಂದು ಕಾರಣಕ್ಕೆ ಲೇಖಕರು ಕಾಲಧರ್ಮಕ್ಕನುಗುಣವಾಗಿ ಮಹಾಪುರುಷರು ಸಮಾಜವನ್ನು ಉದ್ದರಿಸಿದ್ದ ಸಂಗತಿಯನ್ನು ಮರೆತಿದ್ದಾರೆ. ಬುದ್ದನ ಕಾಲ ಮತ್ತು ಕಾಲಧರ್ಮವೇ ಬೇರೆ ಮತ್ತು ಬಸವಣ್ಣ ಕಾಲ ಮತ್ತು ಕಾಲಧರ್ಮವೇ ಬೇರೆ ಎಂಬ ಸಂಗತಿಯನ್ನು ಅವರು ಮರೆತಿದ್ದಾರೆ ಅಥವಾ ಮರೆತಂತೆ ನಟಿಸಿದ್ದಾರೆ. ಮಹಾಭಾರತ ಕಾಲದಲ್ಲಿ ಧರ್ಮವನ್ನು(ಪೂಜಾ ವಿಧಾನ ಎಂದು ಅರ್ಥೈಸಿಕೊಳ್ಳಬಾರದು) ಪ್ರತಿಪಾದನೆ ಮಾಡಬೇಕಾದ ವಿಧಾನ ಕೃಷ್ಣನದ್ದಾದರೆ ಬುದ್ದನ ಕಾಲದಲ್ಲಿ ಅದರ ವಿಧಾನ ಭೀನ್ನವೇ ಆಗಿರುತ್ತದಲ್ಲಾ. ನಮ್ಮ ಕಾಲದಲ್ಲಿ ಸ್ಲೇಟು ಹಿಡಿದು ಶಾಲೆಹೋಗುತ್ತಿದ್ದೆವು. ಈಗ ಮಕ್ಕಳು ಟ್ಯಾಬ್ಲಟ್ ಹಿಡಿದು ಹೋಗಲಾಗುತ್ತಿದೆ. ಹಾಗಾಗಿ ಸ್ಲೇಟೇ ಸರಿ ಇಲ್ಲ ಎನ್ನಲಾಗುತ್ತದೆಯೇ? ಬುದ್ದ ಮತ್ತು ಕೃಷ್ಣ ಇಬ್ಬರನ್ನೂ ಅವತಾರಿ ಪುರುಷರು ಎನ್ನುವ ನೆಲದಲ್ಲಿ ಅವೆರಡೂ ವಿಧಾನಗಳನ್ನು ನಮ್ಮ ದೇಶ ಒಪ್ಪಿದೆ. ಒಪ್ಪದೇ ಇರುವ ಮಾನಸಿಕತೆ ನಮ್ಮಲ್ಲಿ ಆರಂಭವಾಗಿದ್ದು ಕಮ್ಯುನಿಷ್ಟ ಚಿಂತನೆ ಸಮಾಜದಲ್ಲಿ ಪ್ರಚಾರಕ್ಕೆ ಬಂದ ಮೇಲಷ್ಟೆ. ತಮ್ಮ ಮೂಗಿನ ನೇರಕ್ಕೆ ವಾದಗಳನ್ನು ಮಂಡಿಸುವ ಇಂಥ ವಿಧಾನಗಳು ಪ್ರಚಲಿತಕ್ಕೆ ಬಂದಿರುವುದೂ ಕೂಡ ಕಮ್ಯುನಿಷ್ಟ್ ಚಿಂತನೆಯ ಪ್ರಚಾರದ ತರುವಾಯ.

ಮತ್ತಷ್ಟು ಓದು »

17
ಡಿಸೆ

ಭಾರತೀಯ ಸಂಸ್ಕೃತಿ,ಪರಂಪರೆಯ ಚೇತನವಾದ ಭಗವದ್ಗೀತೆ, ಕೇವಲ ದಾಯಾದಿಗಳ ಕಲಹವೇ..?

– ಎಸ್.ಎನ್.ಭಾಸ್ಕರ್‍, ಬಂಗಾರಪೇಟೆ

ಭಗವದ್ಗೀತೆಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿ ಘೋಷಣೆ ಮಾಡುವ ಬಗ್ಗೆ ಪ್ರಸ್ತಾಪಿತವಾದ ಹಿನ್ನೆಲೆಯಲ್ಲಿ ದಿನಾಂಕ ೧೨-೧೨-೨೦೧೪ ರಂದು ಕನ್ನಡಪ್ರಭ ಪತ್ರಿಕೆಯಲ್ಲಿ “ದಾಯಾದಿಗಳ ಕಲಹ ರಾಷ್ಟ್ರೀಯ ಗ್ರಂಥವಾಗಬೇಕೆ?” ಎಂಬ ಶೀರ್ಷಿಕೆ ಅಡಿಯಲ್ಲಿ ಲೇಖನವೊಂದು ಪ್ರಕಟವಾಗಿತ್ತು.

ಭಗವದ್ಗೀತೆಯ ವ್ಯಾಪ್ತಿಯ ಬಗ್ಗೆ, ಮಹತ್ವದ ಬಗ್ಗೆ ಸೂಕ್ತವಾದ ಅರಿವು ಇಲ್ಲದೇ ಬರೆದಂತಹ ಈ ಲೇಖನಕ್ಕೆ ಪ್ರತಿಕ್ರಿಯೆ ನೀಡುವ ನಿಟ್ಟಿನಲ್ಲಿ ಈ ಕೆಳಗಿನ ಲೇಖನವನ್ನು ಬರೆಯಲಾಗಿದೆ.

—————————————————————————————————-

“ಭಗವದ್ಗೀತೆಯನ್ನು ಅಭ್ಯಸಿಸಿ, ಭಗವಂತನ ಈ ಸೃಷ್ಠಿಯ ಪರಿಕಲ್ಪನೆಯನ್ನು ತಿಳಿದ ಅರಿವಿನ ಮುಂದೆ ಜಗತ್ತಿನಲ್ಲಿ ಅಸ್ಥಿತ್ವದಲ್ಲಿರುವ ಸಮಸ್ತ ಅಂಶಗಳು ಗೌಣವೆನಿಸುತ್ತವೆ” – ಆಲ್ಬರ್ಟ್ ಐನ್‌ಸ್ಟೈನ್.

“ಜೀವನದಲ್ಲಿ ಸಂದೇಹಗಳು ನನ್ನ ಕಾಡಿದಾಗ, ದುಃಖ, ಭ್ರಮನಿರಸನಗಳು ಎದುರಾದಾಗ, ಯಾವುದೇ ಆಶಾಕಿರಣಗಳು ಗೋಚರಿಸದಿದ್ದಾಗ, ಭಗವದ್ಗೀತೆಯ ಕಡೆ ನಾನು ಮುಖಮಾಡುತ್ತೇನೆ, ಮರುಕ್ಷಣ ದುಃಖ ದುಮ್ಮಾನಗಳು ಕರಗಿ, ಮನಸ್ಸಿನನಲ್ಲಿ ವಿಶ್ವಾಸದ ಮಂದಹಾಸ ಮೂಡುತ್ತದೆ. ಭಗವದ್ಗೀತೆಯನ್ನು ಧ್ಯಾನಿಸುವ ವ್ಯಕ್ತಿಯು ನಿರಂತರ ಸುಖಿಯಾಗುತ್ತಾನೆ, ಪ್ರತಿನಿತ್ಯವೂ ಜೀವನದ ಹೊಸ ಹೊಸ ಅರ್ಥಗಳನ್ನು ತಿಳಿಯುತ್ತಾನೆ” – ಮಹಾತ್ಮಾ ಗಾಂಧಿ.

ಮತ್ತಷ್ಟು ಓದು »

15
ಡಿಸೆ

ಚೀಟಿ ಪುರಾಣ…!!!

– ಭರತೇಶ ಅಲಸಂಡೆಮಜಲು 
ನೆನಪುಗಳುಹೌದು ಶಾಲೆಯೆಂದರೆ ಅಲ್ಲಿ ಮದುವೆಗೆ ಬಣ್ಣದ ಕಾಗದದ ತೋರಣ ಕಟ್ಟಿದಂತೆ ಸಾಲು ಸಾಲು ಪರೀಕ್ಷೆಗಳು,ಕಿರು ಪರೀಕ್ಷೆ, ಮಧ್ಯ ವಾರ್ಷಿಕ, ವಾರ್ಷಿಕ, ಸೆಮಿಸ್ಟರ್, ಮರುಪರೀಕ್ಷೆ, ಸಿದ್ದತಾ ಪರೀಕ್ಷೆ , ಗಣಿತದ ಸಾಧನೆಗಳು, ರಾಸಾಯನ ಶಾಸ್ತ್ರದ ಸೂತ್ರಗಳು, ಜೀವ ಶಾಸ್ತ್ರದ ವೈಜ್ಞಾನಿಕ ಹೆಸರುಗಳು, ವಾರದಲ್ಲೊಂದು ಪರೀಕ್ಷೆ, ಒಂದು ಪಾಠ ಅದ ಮೇಲೊಂದು ಪರೀಕ್ಷೆ ಅದು, ಇದು ಒಂದೇ , ಎರಡೇ , ಒಂದು ತರಗತಿಯಲ್ಲಿ ಕನಿಷ್ಠ 6 ಪಠ್ಯಗಳು, 8 ಪರೀಕ್ಷೆಗಳೆಂದು ಗುಣಿಸಿದ್ರೂ ಡಿಗ್ರಿ ಮುಗಿಯುವ ಹಂತಕ್ಕೆ 800 ಪರೀಕ್ಷೆಗಳನ್ನು ಗಡದ್ದಾಗಿ ಬರೆದಿರುತ್ತೇವೆ. ಇನ್ನೂ ಪೊಡಿ, ಪೊಡಿ ಪರೀಕ್ಷೆಗಳನ್ನು ಸಂಕಲನ ಮಾಡಿದರೆ 1400 ಗಡಿ ದಾಟಬಹುದು. ಇಷ್ಟೊಂದು ಪರೀಕ್ಷೆಗಳಿಗೆ ತಯಾರಿ ಹೇಗಿರಬೇಡ ಹ್ಹಹ್ಹಹ್ಹ ಅಷ್ಟೊಂದು ಕಕ್ಕುಬೇಕಾದರೆ ಎಷ್ಟು ತಿನ್ನಬೇಡ !!!
ಮನೆಯಲ್ಲಿ ಅಮ್ಮನ ಕಣ್ಣು ಕಟ್ಟಲು, ಪುಸ್ತಕ ಬಿಡಿಸಿ ಓದಿದಂತೆ ನಟಿಸಿ, ಮತ್ತೆ ಪರೀಕ್ಷೆಗೆ ತಯಾರಿ ನಡೆಸುವ ಪರಿಯೋ ಬ್ರಹ್ಮನಿಗೆ ಪ್ರೀತಿ, ಹೌದು ಅದೆಷ್ಟು ಚೀಟಿಗಳು, ಪೆನ್ಸಿಲ್ ಕೆತ್ತನೆಗಳು, ಗೋಡೆ ಬರಹ, ಅಂಗಿ ಅಕ್ಷರಗಳು, ಡೆಸ್ಕು ಸಾಹಿತ್ಯ, ಮಣಿಗಂಟು ಲೇಖನ, ಹಲವು ಬಗೆ , ಯಾರು ತರಗತಿಯಲ್ಲಿ ಓದುತ್ತಾನೆಯೋ ಅವನ ತಲೆಗೆ ದಂಡ ಪಾವತಿಸಿ  ಇಪಾರ್ಟಂಟ್ ಕ್ವೇಶನ್ ಕೇಳಿ ಗೆರೆ ಹಾಕಿಯೋ, ಅಲ್ಲಿ ಇಲ್ಲಿ ಬರೆದೋ, ಯುದ್ಧಕ್ಕೆ ಶಸ್ತ್ರಾಭ್ಯಾಸಕ್ಕೆ ಸಿದ್ಧ ಅಂಗೈ ಅಗಲದ ಸಾಮಾನು ಚೀಟಿ ಎತ್ತಿ ಭೂತಕನ್ನಡಿಯಿಟ್ಟು ನೋಡುವಸಷ್ಟು ಪುಟ್ಟ ಅಕ್ಷರಗಳಾದರೂ ಸ್ಪುಟ, ಸ್ಪಷ್ಟತೆಯಿಂದ ಎದ್ದು ಕಾಣುವಂತೆ ಬರೆದು ಸೋಲ್ಡಿ (ಲಕ್ಕಿಡಿಪ್ ಡ್ರಾ) ಹಾಕುವಂತೆ ಮಡಚಿ, ಉದ್ದ ತೋಳಿನ ಅಂಗಿಯ ಕೈಯಲ್ಲೋ, ಬೆಲ್ಟ್ ನ ಸೆರೆಯಲ್ಲೋ, ಡೆಸ್ಕಿನ ಎಡೆಯಲ್ಲೋ, ಕಿಟಕಿಯ ಮೂಲೆಯಲ್ಲೋ, ಪೆನ್ನಿನೊಳಗೋ, ಕಂಪಾಸ್ ಡಬ್ಬದೊಳಗೋ, ಲಾಗ್ ಪುಸ್ತಕದ ಮಧ್ಯದಲ್ಲೋ, ಖಾಸಗಿ ಜಾಗಗಳಲ್ಲೋ ಸುಲಭವಾಗಿ ಸಿಗುವಂತಹ, ಸುರಕ್ಷಾ ಸ್ಥಳಗಳಲ್ಲಿ ಇಟ್ಟು ಸಿದ್ಧಗೊಳ್ಳುವ ಪರಿಯೇ ಅಬ್ಬಾಬ್ಬಾ ಸೈನಿಕರನ್ನು ಮಿರಿಸುವ ಕರಾಮತ್ತು , ಚೀಟಿ ಬರೆದು ಸಿದ್ಧಪಡಿಸಿದರೆ ಸಾಕೇ… ಪರಿಕ್ಷೇಯಲ್ಲಿ ಬರುವ ಅಪರಿಚಿತ ಪ್ರಶ್ನೆಗಳಿಗೆ ಉತ್ತರಿಸಬೇಕಲ್ಲಾ ಅದಕ್ಕೂ ಪಂಚವಾರ್ಷಿಕ ಯೋಜನೆಯಂತೆ, ಯಾವ ಪಾಠಕ್ಕೆ ಯಾವ ಚೀಟಿಯೆಂದು ಸಾಲು ಕ್ರಮಸಂಖ್ಯೆಗಳು, ಯಾವ ಪ್ರಶ್ನೆಗೆ ಯಾವ ಉತ್ತರ.
ಇನ್ನೂ ಚೀಟಿ ಬಿಡಿಸಿ ನೋಡುವ ಕ್ರಮವೋ ವರ್ಣಿಸ ಹೊರಟರೆ ಪುಟಗಳು ಸಾಲದು..!! ನಮ್ಮ ಮನೆಬಿರುಕು ಮಾಡುವ ಧಾರಾವಾಹಿಯ ಸೊಸೆ, ಅತ್ತೆಯನ್ನು ಬಾಗಿಲ ಸಣ್ಣ ಸಂದಿನಿಂದ ನೋಡುವಂತೆ, ಕಣ್ಣಿನ ರೆಪ್ಪೆಗಳಿಗೆ ಕೋನ ನೀಡಿ, ಪಂಚೇಂದ್ರಿಯಗಳು ಸೈನಿಕನಂತೆ ಸೆಟೆದು ನಿಂತು ಜತನದಿಂದ ಶಿಕ್ಷಕರ ಧ್ವನಿ, ಶಿಕ್ಷಕಿಯ ಕಾಜಿಯ ಸಂಗೀತ, ಹೊಸ ಮದುವೆಯಾದ ಟೀಚರಿನ ಕಾಲಿನ ಗೆಜ್ಜೆನಾದ, ತಲೆಗೆ ಮೂಡಿದ ಹೂವಿನ ಪರಿಮಳ, ನಿದ್ದೆ ಮಾಡಿದಂತೆ ನಟಿಸುವ ಮಾಸ್ತ್ರರ ದೃಷ್ಠಿ, ಅಲ್ಲಾಡುವ ನೆರಳು,   ಗಾಳಿಯ ಒತ್ತಡವೆಲ್ಲವನ್ನು ಗ್ರಹಿಸಿಕೊಂಡು  ಕಾಪಾಡಿಕೊಳ್ಳಬೇಕು. ಮೊದಲ ದಿನದ ಪರೀಕ್ಷೆಯಲ್ಲಿ ಮೊಹರು ಹಾಕಿದ ಉತ್ತರಪತ್ರಿಕೆಯನ್ನು ತೆಗೆದುಕೊಂಡು ಪುಟ ತುಂಬಾ ಬರೆದು ಮರುದಿನದ ಪರೀಕ್ಷೆಯಲ್ಲಿ ಹಗ್ಗ ಕಟ್ಟುವುದು ಇದೆ, ಮತ್ತೆ ಪ್ರಶ್ನೆ ಪತ್ರಿಕೆಯ ಕೆಳಗೆ, ಕಾಂಪಾಸು ಡಬ್ಬದ ಒಳಗೆ, ಕ್ಯಾಲ್ಕುಲೇಟರ್ ನ ಮೇಲೆ, ಆಡಿಕೋಲುಗಳ ಅಡಿ ಭಾಗ, ಲಂಗದ ನಡುವೆ, ಹಳೆಯ ಪ್ರಶ್ನೆ ಪತ್ರಿಕೆಗಳಲ್ಲೇ ಇನ್ನೂ ಹಲವಾರು….ಇಷ್ಟು ಮಾಡಿ ಪರೀಕ್ಷೆಯಲ್ಲಿ ಅದೇ ಪ್ರಶ್ನೆ ಬಂದು ಬರೆದೆ ಅಂದ್ರೆ ಅಮ್ಮನ ಮೊದಲ ಪ್ರಸವದಷ್ಟು ಖುಷಿ… ಬರೀ ನಾವೇ ಬರೆದರಾಯಿತೆ !!
ದಾನಶೂರರಲ್ಲವೇ, ನಾವು ಬರೆಯುವುದ್ದಕ್ಕೂ ಸೈ ಮತೋಬ್ಬರನ್ನು ಪ್ರೋತ್ಸಾಹಿಸಲು ಜೈ ಯೆಂಬಂತೆ ಈ ಚೀಟಿಗಳನ್ನು ವರ್ಗಾಹಿಸುವುದೋ ಅದೊಂದು ಕಷ್ಟದ ಸನ್ನಿವೇಷ “ನನಗೆ ಬರೆದಾಗಲಿಲ್ಲ ಅವನದು ಕಿರಿಕಿರಿ” ಸಿಟ್ಟೋ ಸಿಟ್ಟು ಅದರು ಗೆಳೆಯನಲ್ಲವೇ ಕೊಡಬೇಕಲ್ವಾ !! .. ಅದಕ್ಕಾಗಿ ಕಣ್ಸನ್ನೆಗಳೆನು?, ಪೆನ್ನಿನ ಕಡೆಯಲ್ಲಿ ಕುಟ್ಟುವುದೇನು?, ಕಾಲು ಗುದ್ದುವುದೇನು, ಕೈ ಮೇಲೆತ್ತುವುದೇನು?, ರಬ್ಬರ್ ಗೆ ಕಟ್ಟಿ ಬಿಸಾಡುವುದೇನು? ಮತ್ತೆ ಅಪರೂಪಕ್ಕೆ ಮಾಸ್ಟ್ರು ನೋಡಿದರೆಂದರೆ ಮೆಲ್ಲಗೆ ಕಿಟಕಿಯಿಂದ ಹಾರಿಸುವುದೇನು, ಚಡ್ಡಿಯೊಳಗೆ ಹಾಕುವುದೇನು, ಕುಪ್ಪಸದೊಳಗೆ ತುರುಕಿಸುವುದೇನು, ಕಾಲುಚೀಲದೊಳಗೆ ನುಗ್ಗಿಸುವುದೇನು. ಬಾಯಲ್ಲಿ ಹಾಕಿ ಜಗಿಯುವುದೇನು? ಅಬ್ಬಾ ನಗೋದು ಬೇಡ.. ಓದುತಿರುವ ನೀವು ಅಪ್ಪ ಅಮ್ಮನಾಗಿದ್ದರೆ ಮಗನಿಗೋ, ಮಗಳಿಗೋ ಹೇಳಿ ಕೊಡಿ ಅವರು ಕಲಿಯಲಿ, ಶಾಲೆ- ಕಾಲೇಜಿಗೆ ಹೋಗುವವರಾಗಿದ್ದರೆ ಒಮ್ಮೆ ಪ್ರಯತ್ನಿಸಿ ನೋಡಿ ಒಳ್ಳೆ ಫಲಿತಾಂಶ ಬರಬಹುದು…. ಸಮಾಜಕ್ಕೆ , ನೌಕರಿಗೆ ಬೇಕಾಗಿರೊದು ನೀವು ಗಳಿಸಿದ ಅಂಕ, ಹೇಗೆ ಗಳಿಸಿದನೆ/ಳೆಂಬುವುದು ಮುಖ್ಯ ಅಲ್ಲ ಅಲ್ಲವೇ…
ಶುಭವಾಗಲಿ
12
ಡಿಸೆ

ಶರಿಯತ್ ಕಾನೂನಿನಡಿ ಮ್ಯುಚುಯಲ್ ಫಂಡ್ ಪ್ರಾರಂಭಿಸುವ ದರ್ದೇಕೆ?

– ಶ್ರೀನಿವಾಸ್ ರಾವ್

ಮ್ಯುಚುಯಲ್ ಫಂಡ್ಈ ದೇಶದಲ್ಲಿ ಸಂವಿಧಾನಕ್ಕೆ ಪರ್ಯಾಯವಾದ ಮತ್ತೊಂದು ಕಾನೂನು ಚಾಲ್ತಿಯಲ್ಲಿದ್ದರೂ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ದೇಶದ ಭದ್ರತೆಗೇ ಅಪಾಯವೊಡ್ಡುವ ಸ್ಥಿತಿ ಎದುರಾದಾಗ ಮಾತ್ರ ಅದರ ಬಗ್ಗೆ ಎಚ್ಚೆತ್ತುಕೊಳ್ಳುತ್ತೇವೆ. ಇಲ್ಲದಿದ್ದರೆ ಪರ್ಯಾಯ ಕಾನೂನಿನ ಪ್ರಕಾರ ಏನು ನಡೆದರೂ ಪಿಳಿಪಿಳಿ ನೋಡುತ್ತಾ ಕುಳಿತುಬಿಡುತ್ತೇವೆ. ಈ ಮಾತನ್ನು ಈಗೇಕೆ ಹೇಳಬೇಕಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ,ಎಸ್.ಬಿ.ಐ ಶರಿಯಾ ಕಾನೂನಿನ ಪ್ರಕಾರ ಮ್ಯುಚುಯಲ್ ಫಂಡ್ ಪ್ರಾರಂಭಿಸಲು ಹೊರಟಿರುವದರಿಂದ.

ಒಂದಷ್ಟು ಜನರು ಗುಂಪಿನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಪ್ರಕ್ರಿಯೆಯೇ ಮ್ಯುಚುಯಲ್ ಫಂಡಿಂಗ್. ಇದಕ್ಕಾಗಿಯೇ ಹೆಚ್.ಡಿ.ಎಫ್.ಸಿ ಸೇರಿದಂತೆ ಹಲವು ಕಂಪನಿಗಳಿರುತ್ತವೆ.ಹೂಡಿಕೆ ಮಾಡಿರುವವರ ಹಣವನ್ನು ಸರಿಯಾದ ರೀತಿಯಲ್ಲಿ ಷೇರುಪೇಟೆಯಲ್ಲಿ ತೊಡಗಿಸಿ ಲಾಭ ಗಳಿಸಿಕೊಡಲೆಂದೇ ಆ ಕಂಪನಿಗೋರ್ವ ಫಂಡಿಂಗ್ ಮ್ಯಾನೇಜರ್ ಇರುತ್ತಾನೆ. ಯಾವ ಕಂಪನಿಯ ಷೇರುಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಲಾಭ, ಎಷ್ಟು ಹೂಡಿಕೆ ಮಾಡಬೇಕು ಇತ್ಯಾದಿಗಳ ಪಕ್ಕಾ ಲೆಕ್ಕಾಚಾರದ ಕಸುಬು. ಗಮನಿಸಬೇಕಾದ ಮುಖ್ಯ ಅಂಶವೆಂದರೆ ಯಾವುದೇ ಮ್ಯುಚುಯಲ್ ಫಂಡಿಂಗ್ ಕಂಪನಿ ಇರಲಿ ಅದು ದೇಶದ  ಸಂವಿಧಾನಕ್ಕೆ, ಕಾನೂನಿಗೆ ಬದ್ಧವಾಗಿಯೇ ಕಾರ್ಯನಿರ್ವಹಿಸಬೇಕಾಗುತ್ತದೆ. ಆರ್.ಬಿ.ಐ, ಸೆಬಿ,(ಸೆಕ್ಯುರಿಟಿ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ)ನಿಂದ ಅನುಮತಿ ಪಡೆದು ನಿಬಂಧನೆಗಳಿಗೆ ಬದ್ಧವಾಗಿರಬೇಕಾಗುತ್ತದೆ. ವಿದೇಶಗಳಲ್ಲಿ ಹೂಡಿಕೆ ಮಾಡಿದ ಎನ್.ಆರ್.ಐ ಗಳು ಒಂದು ವರ್ಷದೊಳಗೆ ಮ್ಯುಚುಯಲ್ ಫಂಡ್ ಗಳನ್ನು ಮಾರಾಟ ಮಾಡಬೇಕು, ವಿದೇಶಗಳಲ್ಲಿ ಹೂಡಿಕೆ, ಹಿಂತೆಗೆತ ಸೇರಿದಂತೆ ಪ್ರತಿಯೊಂದಕ್ಕೂ ಸರಿಯಾದ ಲೆಕ್ಕ ಕೊಡಬೇಕು(ಭಾರತದಲ್ಲಿ ಹೂಡಿಕೆ ಮಾಡಿದರೆ ಲೆಕ್ಕ ಕೊಡಬೇಕಿಲ್ಲ ಎಂದಲ್ಲ, ವಿದೇಶದಲ್ಲಿ ಹೂಡಿದರೆ ವಿಶೇಷ ಎಚ್ಚರಿಕೆ ವಹಿಸಲಾಗುತ್ತದೆ ಅಷ್ಟೆ). ಹೀಗೆ ಹತ್ತು ಹಲವು ಷರತ್ತುಗಳು ವಿಧಿಸಲಾಗಿದೆ.
ಮತ್ತಷ್ಟು ಓದು »

11
ಡಿಸೆ

ಜೀವನವೆನ್ನುವುದು ಸ೦ತೋಷದ ನಿರ೦ತರ ಹುಡುಕಾಟವೆನ್ನುವವನ ಕತೆಯಿದು

-ಗುರುರಾಜ ಕೊಡ್ಕಣಿ,ಯಲ್ಲಾಪುರ

ಪರ್ಸ್ಯೂಟ್ ಆಫ್ ಹ್ಯಾಪಿನೆಸ್“ನನ್ನ ಹೆಸರು ಕ್ರಿಸ್ಟೋಫರ್ ಗಾರ್ಡನರ್,ವೈದ್ಯಕೀಯ ಉಪಕರಣಗಳ ವ್ಯಾಪಾರ ಪ್ರತಿನಿಧಿಯಾಗಿದ್ದ ನನ್ನನ್ನು ಗೆಳೆಯರು ಪ್ರೀತಿಯಿ೦ದ ’ಕ್ರಿಸ್’ ಎ೦ದು ಕರೆಯುತ್ತಿದ್ದರು. ಅದಾಗಲೇ ನನ್ನ ಎರಡನೆಯ ಮದುವೆಯಾಗಿ ಐದು ವರ್ಷಗಳಾಗಿದ್ದವು.ನನ್ನ ಮಡದಿ ಜಾಕಿ,ಚಿಕ್ಕದೊ೦ದು ಕ೦ಪನಿಯಲ್ಲಿ ದುಡಿಯುತ್ತಿದ್ದಳು.ನಾನು ಎಕ್ಸ್ ರೇ ಯ೦ತ್ರದ ಪರಿಷ್ಕೃತ ಮಾದರಿಯೊ೦ದನ್ನು ವೈದ್ಯರಿಗೆ ಮಾರುವ ಕೆಲಸವನ್ನು ನಿರ್ವಹಿಸುತ್ತಿದ್ದೆ.ನನ್ನ ಮಗನಿಗೆ ಆಗಿನ್ನೂ ನಾಲ್ಕು ವರ್ಷ ವಯಸ್ಸು.ಸ೦ಸಾರದ ನಿರ್ವಹಣೆಗಾಗಿ ವಾರಕ್ಕೊ೦ದು ಯ೦ತ್ರವನ್ನು ಮಾರಿ ಸುಮಾರು ಇನ್ನೂರೈವತ್ತು ಡಾಲರುಗಳನ್ನು ಸ೦ಪಾದಿಸಲೇಬೇಕಾದ ಅನಿವಾರ್ಯತೆ ನನಗಿತ್ತು.ಆರ೦ಭಿಕ ದಿನಗಳಲ್ಲಿ ಯ೦ತ್ರಗಳ ವ್ಯಾಪಾರ ಉತ್ತಮವಾಗಿತ್ತಾದರೂ ,ಕೆಲವೇ ದಿನಗಳಲ್ಲಿ ನನ್ನ ಮಶೀನುಗಳ ಬೇಡಿಕೆ ಗಣನೀಯವಾಗಿ ಇಳಿಯಲಾರ೦ಭಿಸಿತು.ಎಕ್ಸ್ ರೆ ಯ೦ತ್ರದ ಸುಧಾರಿತ ರೂಪವಾಗಿದ್ದ ನನ್ನ ಯ೦ತ್ರಗಳ ಬೆಲೆ ಎಕ್ಸ್ ರೇ ಮಶಿನುಗಳಿಗಿ೦ತ ದುಪ್ಪಟ್ಟಾಗಿದ್ದರಿ೦ದ ತಜ್ನರು ಅವುಗಳನ್ನು ಕೊಳ್ಳಲು ಹಿ೦ದೇಟು ಹಾಕುತ್ತಿದ್ದರು.ಮೊದಲೆಲ್ಲ ಮಾಸವೊ೦ದಕ್ಕೆ ನಾಲ್ಕಾರು ಯ೦ತ್ರಗಳನ್ನು ಮಾರುತ್ತಿದ್ದ ನನಗೆ ತಿ೦ಗಳಿಗೆ ಎರಡು ಯ೦ತ್ರಗಳನ್ನು ಮಾರುವುದು ಸಹ ಕಷ್ಟವೆನಿಸತೊಡಗಿತು.ಪ್ರತಿಬಾರಿಯೂ ಯ೦ತ್ರಗಳನ್ನು ಕೊಳ್ಳುವ೦ತೇ ಎಕ್ಸ್ ರೇ ತಜ್ನರಿಗೆ ನಾನು ಮಾಡುತ್ತಿದ್ದ ಮನವೋಲೈಕೆ ವಿಫಲವಾಗತೊಡಗಿತು.ಆರ್ಥಿಕ ಸ೦ಕಷ್ಟದ ಫಲವಾಗಿ ನನ್ನ ಅರ್ಧಾ೦ಗಿ ಎರಡು ಪಾಳಿಗಳಲ್ಲಿ ದುಡಿಯಲಾರ೦ಭಿಸಿದಳು.ಹೆಚ್ಚಿನ ಶುಲ್ಕವನ್ನು ನೀಡಲು ಅಶಕ್ಯರಾಗಿದ್ದರಿ೦ದ ನಮ್ಮ ಮಗನನ್ನು ನಾವು ತೀರ ಕಳಪೆಮಟ್ಟದ ಬಾಲವಿಹಾರವೊ೦ದಕ್ಕೆ ಸೇರಿಸಿದ್ದೆವು.

ನನ್ನ ಜೀವನದ ಅತ್ಯ೦ತ ದುರ್ಭರ ದಿನಗಳವು.ನಾನು ಸುಮಾರು ಮೂರು ತಿ೦ಗಳುಗಳಿ೦ದ ಮನೆಯ ಬಾಡಿಗೆ ಕಟ್ಟಿರಲಿಲ್ಲ.ದ೦ಡಗಳನ್ನು ಪಾವತಿಸಿಲ್ಲವೆನ್ನುವ ಕಾರಣಕ್ಕೆ ಪೋಲಿಸರು ನನ್ನ ಕಾರನ್ನು ಜಪ್ತಿ ಮಾಡಿದ್ದರು.ಹಣಕಾಸಿನ ಮುಗ್ಗಟ್ಟಿನಿ೦ದಾಗಿ ನನ್ನ ಮತ್ತು ಪತ್ನಿಯ ನಡುವೆ ಆಗಾಗ ಜಗಳಗಳಾಗುತ್ತಿದ್ದವು.ನಾನು ಬದುಕಿನ ಬ೦ಡಿಯ ಓಟಕ್ಕಾಗಿ ಪಡಬಾರದ ಪಡಿಪಾಟಲು ಪಡುತ್ತಿದ್ದರೇ,ನನ್ನ ನೆರೆಮನೆಯವನು ವೈಭವೋಪೇತ ಜೀವನವನ್ನು ನಡೆಸುತ್ತಿದ್ದ.ಆತನ ಬಳಿ ಅದ್ಭುತವಾದ ಕಾರೊ೦ದಿತ್ತು.ಆತ ಧರಿಸುತ್ತಿದ್ದ ಬಟ್ಟೆಗಳು ಭಯ೦ಕರ ದುಬಾರಿ ದಿರಿಸುಗಳಾಗಿರುತ್ತಿದ್ದವು.ಒಮ್ಮೆ ಕುತೂಹಲ ತಡೆಯಲಾರದೇ ನಾನು ಆತನನ್ನು ಆತನ ಉದ್ಯೋಗದ ಬಗ್ಗೆ ವಿಚಾರಿಸಿದೆ.ಆತ ತಾನೊಬ್ಬ ಶೇರು ದಲ್ಲಾಳಿಯೆ೦ದು ಹೇಳಿಕೊ೦ಡ.

ಮತ್ತಷ್ಟು ಓದು »

10
ಡಿಸೆ

ಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 3

– ಮು.ಅ ಶ್ರೀರಂಗ,ಬೆಂಗಳೂರು

ಕನ್ನಡ ಸಾಹಿತ್ಯಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 1
ಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 2

(ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ-೧೦ ರಲ್ಲಿ ತಿಳಿಸಿದಂತೆ    (“ನಿಲುಮೆ” ದಿನಾಂಕ ೧೨-೧೧-೨೦೧೪) ನನ್ನ ಮತ್ತು ಶ್ರೀ ವಸುಧೇಂದ್ರರ   ಪತ್ರಗಳ ಪೂರ್ಣ ಪಾಠ)

 ವಸುಧೇಂದ್ರರ ಮೊದಲನೇ  ಪತ್ರ – ಬೆಂಗಳೂರು ೨೧-೦೬-೨೦೧

 ಶ್ರೀರಂಗ ಅವರಿಗೆ-

ನಮಸ್ಕಾರಗಳು. ನಿಮ್ಮ ಸುಧೀರ್ಘವಾದ ಪತ್ರ ಬಂದಿದೆ. ಸುಮಾರು ಎರಡು ವರ್ಷಗಳ ಹಿಂದೆ ಪ್ರಕಟವಾದ ಈ ಲೇಖನವನ್ನು ನೆನಪಿನಲ್ಲಿಟ್ಟುಕೊಂಡು, ಈಗ ನನ್ನ ವಿಳಾಸ ದೊರೆತ ಮೇಲೆ ಅದಕ್ಕೆ ಪ್ರತಿಕ್ರಿಯಿಸಿರುವ ನಿಮ್ಮ ಸಾಹಿತ್ಯಾಭಿಮಾನ ದೊಡ್ಡದು. ನಿಮ್ಮಂತಹ ಕಟ್ಟಾ ಅಭಿಮಾನಿಗಳನ್ನು ಹೊಂದಿರುವ ಭೈರಪ್ಪನವರ ಬಗ್ಗೆ ಅಸೂಯೆಯಾಗುತ್ತದೆ.

ಭೈರಪ್ಪನವರ ಬಗ್ಗೆ ನನಗೆ ಯಾವುದೇ ವೈಯಕ್ತಿಕ ದ್ವೇಷವಾಗಲಿ, ಬೇಸರವಾಗಲಿ ಇಲ್ಲ. ಇದುವರೆಗೆ ನಾನು ಅವರನ್ನು ಭೇಟಿಯಾಗಿಲ್ಲ. ನಿಮ್ಮೆಲ್ಲರಂತೆ ನಾನೂ ಅವರೆಲ್ಲಾ ಕಾದಂಬರಿಗಳನ್ನು ಪ್ರೀತಿ ವಿಶ್ವಾಸದಿಂದ ಓದಿದ್ದೇನೆ . ಗೃಹಭಂಗ  ಮತ್ತು   ಪರ್ವ  ನನ್ನ ಬಹು ಇಷ್ಟವಾದ ಕಾದಂಬರಿಗಳು. ಅವುಗಳ ಬಗ್ಗೆ ಮತ್ತೊಮ್ಮೆ ಖಂಡಿತಾ ಬರೆಯುತ್ತೇನೆ.

ಅಭಿಮಾನ ಜಾಸ್ತಿಯಾದಾಗ ಆರಾಧನೆಯಾಗುತ್ತದೆ. ಆಗ ನಮಗೆ ಸಾಹಿತಿಗಳ ತಪ್ಪುಗಳೊಂದೂ ಕಾಣುವುದಿಲ್ಲ. ಅವರ ಎಲ್ಲಾ ಹೇಳಿಕೆಗಳೂ, ಮಾತುಗಳೂ, ಕೃತಿಗಳೂ ಸರಿಯೆನ್ನಿಸಲಾರಂಭಿಸುತ್ತವೆ. ಓದುಗ ಎಂದೂ ಆ ಅಪಾಯದಲ್ಲಿ ಸಿಲುಕಬಾರದು. ಕೇವಲ ಓದುಗನಾದ ನನಗೆ ಭೈರಪ್ಪನವರ ಗುಣ–ದ್ವೇಷಗಳೆರಡೂ ಸ್ಪಷ್ಟವಾಗಿ ಕಾಣಿಸುತ್ತವೆ. ಎರಡನ್ನೂ ಸಮಾನ ಪ್ರೀತಿಯಿಂದಲೇ ದಾಖಲಿಸಿದ್ದೇನೆ. ಆದರೆ ನಮ್ಮ ಸಾಹಿತ್ಯದ ಮಾನ ದಂಡ ಬೇರೆಯಾದಾಗ ಅವು ನಿಮಗೆ ಒಪ್ಪಿಗೆಯಾಗದೇ ಹೋಗುವುದನ್ನೂ ನಾನು ಒಪ್ಪುತ್ತೇನೆ, ಗೌರವಿಸುತ್ತೇನೆ.  ಮತ್ತಷ್ಟು ಓದು »

6
ಡಿಸೆ

ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು

– ರಾಕೇಶ್ ಶೆಟ್ಟಿ

Ayodhya Issue and Unityಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾಯಾಲಯ ಅಯೋಧ್ಯೆಯ “ರಾಮ ಜನ್ಮ ಭೂಮಿ/ಬಾಬರಿ ಮಸೀದಿ” ವಿವಾದದ ಕುರಿತು ತೀರ್ಪು ನೀಡುವ ದಿನವಾಗಿತ್ತದು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳಷ್ಟು ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದವು,ಸೂಕ್ಷ್ಮ,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆಯ ಕಣ್ಗಾವಲಿತ್ತು.ಜನರ ಜೊತೆಗೆ ವಿಶೇಷವಾಗಿ ಟಿ.ಆರ್.ಪಿ ಮಾಧ್ಯಮಗಳು ಕೂಡ ಸಂಯಮದಿಂದ ವರ್ತಿಸಬೇಕು ಎನ್ನುವ ಮನವಿಗಳು ಸರ್ಕಾರದಿಂದಲೇ ಬರುತಿತ್ತು.ಮಧ್ಯಾಹ್ನ ೩.೩೦ರ ಸುಮಾರಿಗೆ ತೀರ್ಪು ಹೊರಬರಲಿದೆ ಎನ್ನುವ ಸುದ್ದಿಗಳು ಹರಿದಾಡುತಿದ್ದವು.ನನ್ನ ವಿಮಾನವಿದ್ದಿದ್ದು ಸಂಜೆಯ ವೇಳೆಗೆ.ಆದರೆ,ಬಾಬರಿ ಮಸೀದಿ ಧರಾಶಾಹಿಯಾದ ಮೇಲೆ ಭೀಕರ ದಂಗೆಗೆ ಸಾಕ್ಷಿಯಾಗಿದ್ದ ಮುಂಬೈನಲ್ಲಿ ತೀರ್ಪು ಹೊರಬಂದ ಮೇಲೆ ಏನಾದರೂ ಆಗಬಾರದ್ದು ಶುರುವಾದರೇ,ಅದಕ್ಕೂ ಮುಖ್ಯವಾಗಿ ನಾನು ಹೋಗಬೇಕಾದ ದಾರಿಯಲ್ಲೇ “ಅತಿ ಸೂಕ್ಷ್ಮ ಪ್ರದೇಶ”ಗಳು ಇದ್ದವಾದ್ದರಿಂದ,ಸೇಫರ್ ಸೈಡ್ ಎಂಬಂತೆ ತುಸು ಬೇಗವೇ ನಾನು ಮತ್ತು ನನ್ನ ಸಹುದ್ಯೋಗಿ ಕ್ಯಾಬ್ ಹತ್ತಿಕೊಂಡೆವು.

ಕ್ಯಾಬ್ ಹೊರಟಂತೇ,ಡ್ರೈವರ್ ಅನ್ನು ಮಾತಿಗೆಳೆದೆ.”ಇವತ್ತು ತೀರ್ಪು ಬರಲಿಕ್ಕಿದೆಯಲ್ಲ.ನಿಮಗೇನನ್ನಿಸುತ್ತದೆ,ಆ ಜಾಗ ಯಾರಿಗೆ ಸೇರಿಬೇಕು ನಿಮ್ಮ ಪ್ರಕಾರ?”.ಅವರು ನನ್ನತ್ತ ತಿರುಗಿ “ತಪ್ಪು ತಿಳಿಯಬೇಡಿ ಸರ್.ನಿಮ್ಮ ಪ್ರಶ್ನೆಯೇ ಸರಿಯಿಲ್ಲ.ಜಾಗ ಯಾರಿಗೆ ಸೇರಬೇಕು ಎನ್ನುವುದು ‘ಅಹಂ’ನ ಪ್ರಶ್ನೆಯಾಗುತ್ತದೆ.ಆ ಅಹಂ ಮುಂದೇ ಪ್ರತಿಷ್ಟೆ, ದ್ವೇಷವನ್ನಷ್ಟೇ ಹೊರಡಿಸುತ್ತದೆ.ಅಸಲಿಗೆ ಇದು “ನಂಬಿಕೆ”ಯ ಪ್ರಶ್ನೆ.ಈ ಸಮಸ್ಯೆಯ ಪರಿಹಾರವಾಗಬೇಕಿರುವುದು ಪರಸ್ಪರ ಸಂವಾದ,ಸಾಮರಸ್ಯ,ಶಾಂತಿಯ ಅನುಸಂಧಾನದಿಂದಲೇ ಹೊರತು, ಇದು ಸರ್ಕಾರ,ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವಿಷಯವಲ್ಲ.ಆ ಜಾಗ ರಾಮ ಜನ್ಮಭೂಮಿಯೆಂಬುದು ಹಿಂದೂಗಳ ನಂಬಿಕೆಯಾಗಿದೆ.ಮೊಘಲ ಬಾಬರ್ ಆದೇಶಂತೆ ಅಲ್ಲಿದ್ದ ಮಂದಿರವೊಂದನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿರುವ ವಾದವಿದೆಯಲ್ಲ ಸರ್ ಅದು ನಿಜವೇ ಆದರೆ,ಅಲ್ಲಿ ಮಂದಿರವೇ ನಿರ್ಮಾಣವಾಗಬೇಕು.ಯಾಕೆಂದರೆ ರಾಮ,ರಾಮಾಯಣ,ಕೃಷ್ಣ,ಮಹಾಭಾರತವೆಲ್ಲ ಈ ದೇಶದ ಜನರಿಗೆ ಕೇವಲ ಪುರಾಣಗಳಲ್ಲ.ಅವು ಜನರ ಜೀವನದ ಭಾಗಗಳು.ಹೀಗಿರುವಾಗ ಅಲ್ಲಿನ ಜನರ ನಂಬಿಕೆಗಳಿಗೆ ಬೆಲೆ ಕೊಟ್ಟು ಬಾಬರಿನಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದ.

ಮತ್ತಷ್ಟು ಓದು »

1
ಡಿಸೆ

ತುಳುನಾಡ ನಂಬಿಕೆಗಳು…

– ಭರತೇಶ ಆಲಸಂಡೆಮಜಲು

ತುಳುನಾಡುಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ  ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.

ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ.  ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.

ಮತ್ತಷ್ಟು ಓದು »

28
ನವೆಂ

ಅಭಿವ್ಯಕ್ತಿ ಸ್ವಾತಂತ್ರವೆಂಬ ಕಪಟ ನಾಟಕ

– ಹೃಷಿಕೇಶ್ ಚಿಕ್ಕಮಗಳೂರು

tv9ಇತ್ತೀಚೆಗೆ ಕಳೆದ ಸೋಮವಾರದಿಂದ ಟಿ.ವಿ9 ವಾಹಿನಿಯನ್ನು ಪ್ರಸಾರ ಮಾಡದಂತೆ ಘನ ಸರ್ಕಾರದ ಮುಖ್ಯಸ್ಥರು ಕೇಬಲ್ ಆಪರೇಟರ್ ಗಳಿಗೆ ಫತ್ವಾವನ್ನು ಹೊರಡಿಸಿದ್ದರು.ಅದರನ್ವಯ ಬಹುತೇಕ ಪ್ರದೇಶಗಳಲ್ಲಿ ಆ ವಾಹಿನಿಯು ಕೇಬಲ್ ವಾಹಿನಿಗಳ ಲಿಸ್ಟ್ ನಿಂದ ಮಾಯವಾಗಿತ್ತು.(ನಂತರ ಕೇಬಲ್ ಆಪರೇಟರುಗಳ ಜೊತೆ ಮತುಕತೆಯೆಂಬ ಕಾರ್ಯಕ್ರಮದ ನೆಪದಲ್ಲಿ ಈ ಫತ್ವಾವನ್ನು ಹಿಂಪಡೆದು,ವಾಹಿನಿಯ ಪ್ರಸಾರಕ್ಕೆ ಅವಕಾಶಕೊಡಲಾಯಿತು)ಆ ವಾಹಿನಿಯನ್ನು ನೋಡದೆ ಊಟ ನಿದ್ದೆ ಬಿಟ್ಟು ಯಾರೂ ಸಾಯದೇ ಇದ್ದರೂ ಸಹ ಒಂದು ಆಸಕ್ತದಾಯಕ ಬೆಳವಣಿಗೆಯೊಂದು ಕಂಡುಬರುತ್ತದೆ. ಅದೆಂದರೆ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಅಡ್ಡಿ, ಹಾಗೂ ಸರ್ಕಾರದ ನಾಲ್ಕನೇ ಅಂಗ ಎಂದೇ ಖ್ಯಾತಿ ಗಳಿಸಿದ ಮಾಧ್ಯಮದ ಮೇಲೆ ಒಂದು ಸುತ್ತಿನ ಬಿಗಿಹಿಡಿತ ಸಾಧಿಸಲು ಸರ್ಕಾರ ಶತಾಯಗತಾಯ ಪ್ರಯತ್ನ ಪಡುತ್ತಿರುವುದು ಗೋಚರವಾಗುತ್ತಿದೆ.

ಹಾಲಿ ಸಚಿವರೊಬ್ಬರ ಸ್ಟಿಂಗ್ ಆಪರೇಷನ್ ಮಾಡಲು ಹೋಗಿ ಈ ವಾಹಿನಿಗೆ ವಕ್ರದೃಷ್ಟಿ ಬಿದ್ದಂತಾಗಿದೆ. ವಿಷಯ ಏನೇ ಇದ್ದಿರಿಲಿ, ಆದರೆ ಸರ್ಕಾರದ ವಿರುದ್ಧ ಕಾರ್ಯಕ್ರಮಗಳನ್ನು ಮಾಡಲೇಬಾರದು ಎಂಬುದು ದಾಷ್ಟ್ಯದ ಪರಮಾವಧಿ ಎಂದೇ ಹೇಳಬೇಕು. ಬ್ರಿಟೀಷರ ನಂತರ ಪತ್ರಿಕಾ ಸ್ವಾತಂತ್ಯದ ಮೇಲೆ ನಿರ್ಬಂಧವನ್ನು ಹೇರಿದ್ದು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ತದ ನಂತರ ಆ ಕೀರ್ತಿ ಪ್ರಸ್ತುತ ಸರ್ಕಾರಕ್ಕೆ ಸಲ್ಲುತ್ತದೆ. ಎಲ್ಲಾ ಮಾಧ್ಯಮದ ಮೇಲೂ ನಿರ್ಬಂಧ ಹೇರದಿದ್ದರೂ ನಿರ್ದಿಷ್ಟವಾಗಿ ತನಗೆ ಆಗದವರ ಮೇಲೆ ನಿರ್ಬಂಧ ಹೇರುವುದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಯಲ್ಲದೆ ಮತ್ತೇನೂ ಅಲ್ಲ.

ಮತ್ತಷ್ಟು ಓದು »