ವಿಷಯದ ವಿವರಗಳಿಗೆ ದಾಟಿರಿ

Recent Articles

16
ಏಪ್ರಿಲ್

ನಿಲೇಕಣಿಯವರ ದ್ವಂದ್ವ ಮತ್ತು ಬುದ್ದಿಜೀವಿಗಳ ಬೌದ್ಧಿಕ ಭ್ರಷ್ಟಚಾರ

– ರಾಕೇಶ್ ಶೆಟ್ಟಿ

NUK೧.”ಎನ್.ಡಿ.ಎ ಸರ್ಕಾರದಲ್ಲಿ ಪ್ರಧಾನಿ ವಾಜಪೇಯಿಯವರು ಅಭಿವೃದ್ಧಿ ರಾಜಕಾರಣದ ಶಖೆಗೆ ಕಾರಣರಾದವರು,ಅವರಿಗಿಂತ ಮೊದಲಿಗೆ ಹಾಗೆ ಯಾರೂ ಮಾಡಿರಲಿಲ್ಲ” (Page 245)

೨.”ಅಭಿವೃದ್ಧಿ ರಾಜಕಾರಣವೆನ್ನುವುದು ನಮ್ಮ ರಾಜಕಾರಣಿಗಳು ಅಂದುಕೊಂಡಂತೆ ಕೆಲಸಕ್ಕೆ ಬಾರದ್ದೇನಲ್ಲ.ಇದಕ್ಕೆ ಉದಾಹರಣೆಯಾಗಿ ಗುಜರಾತಿನಲ್ಲಿ ನರೇಂದ್ರ ಮೋದಿಯವರು ತನ್ನ ಅಭಿವೃದ್ಧಿ ಮಂತ್ರದಿಂದಲೇ ಕಾಂಗ್ರೆಸ್ಸ್ ಪ್ರಣಾಳಿಕೆಯ ಉಚಿತ ವಿದ್ಯುತ್ ಅನ್ನು ಮತದಾರರ ಮುಂದೆಯೇ ಟೀಕಿಸಿ ಚಪ್ಪಾಳೆ ಗಿಟ್ಟಿಸಿದ್ದರು.ಮೋದಿಯವರ ಹಿಂದುತ್ವ ರಾಜಕಾರಣವೆಲ್ಲದರ ಮಧ್ಯೆಯೂ ಭ್ರಷ್ಟ ಸಬ್ಸಿಡಿ ಸಿಸ್ಟಂಗಿಂತಲೂ ಅಭಿವೃದ್ಧಿ ರಾಜಕಾರಣವೂ ಹೇಗೆ ವಿದ್ಯುತ್,ನೀರಾವರಿ ಮತ್ತು ಸಂಪರ್ಕ ಸೌಲಭ್ಯವನ್ನು ಜನರಿಗೆ ಕಲ್ಪಿಸುತ್ತವೆ ಅನ್ನುವುದನ್ನು ಮತದಾರರಿಗೆ ಹೇಳುವಲ್ಲಿ ಸಫಲರಾಗಿದ್ದಾರೆ.ಇದಕ್ಕಿಂತ ಮೊದಲಿಗೆ ಸುಧಾರಣವಾದಿ ರಾಜಕಾರಣಿಗಳ್ಯಾರು ಉದ್ಯಮ ಆಧಾರಿತ ಅಭಿವೃದ್ಧಿ ಯೋಜನೆಗಳಿಂದ ಬಡವರ ಬಾಳು ಹಸನಾಗುವುದರ ಬಗ್ಗೆ ತೋರಿಸುವಲ್ಲಿ ಸಫಲರಾಗಿರಲಿಲ್ಲ” – (Page 310)

೩.”ಇನ್ಫೋಸಿಸ್ ನಲ್ಲಿ ಕಾರ್ಯ ನಿರ್ವಹಿಸಲು ಶುರುಮಾಡಿದಾಗ,ನನ್ನ ತಂದೆಯವರ ಪ್ರತಿಪಾದಿಸುತಿದ್ದ ‘ನೆಹರೂ ಸೋಷಿಯಲಿಸಂ’ ಅನ್ನುವ ಭ್ರಮೆಯನ್ನು ಕಳಚಿ ಎಸೆಯಬೇಕಾಗಿ ಬಂತು”- (Page 17)

೪.”ಕಾಂಗ್ರೆಸ್ಸ್ ಸರ್ಕಾರಗಳು ಬಲಿಷ್ಟ ಜಾತಿಗಳ ತೆಕ್ಕೆಗೆ ಅಧಿಕಾರವನ್ನು ನೀಡಿ, ಕುಟುಂಬ ರಾಜಕಾರಣವನ್ನು ಜಾರಿಗೆ ತಂದವು.ಆ ಮೂಲಕ ಆಡಳಿತವನ್ನು ಮತ್ತು ಸಾರ್ವಜನಿಕ ಸಂಪನ್ಮೂಲಗಳನ್ನು ರಕ್ತಸಂಬಂಧದಲ್ಲೇ ಇರುವಂತೆ ನೋಡಿಕೊಂಡವು”- (Page 158)

ಮೇಲೆ ಉಲ್ಲೇಖಿಸಿರುವ ಅಂಶಗಳನ್ನು ನೋಡಿದರೆ ಇದ್ಯಾರೋ ಬಿಜೆಪಿಯ ಪರ ಒಲವುಳ್ಳ ಲೇಖಕನೋ,ಅಥವಾ ಬಿಜೆಪಿಯ ರಾಜಕಾರಣಿಯೋ ಬರೆದಿರುವುದು ಅನ್ನಿಸುತ್ತದಲ್ಲವೇ? ಮತ್ತಷ್ಟು ಓದು »

15
ಏಪ್ರಿಲ್

ಬಯಲಾಗುತ್ತಿರುವ ಬುದ್ಧಿಜೀವಿಗಳ ಮನೋಲೋಕ..!

-ರಮಾನಂದ ಐನಕೈ

ಪ್ರಭುತ್ವವನ್ನು ಓಲೈಸಿಕೊಳ್ಳದಿದ್ದರೆ ಸಾಹಿತಿಗಳಿಗೂ ಉಳಿಗಾಲವಿಲ್ಲದ ಪರಿಸ್ಥಿತಿ ನಿರ್ಮಿಸಿಕೊಂಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ, ಅಕಾಡೆಮಿಗಳ ಪ್ರಶಸ್ತಿಗಳು, ಅನುದಾನಗಳು, ಫೆಲೋಶಿಫ್ಗಳು, ವಿಶ್ವವಿದ್ಯಾಲಯಗಳ ಕುಲಪತಿತ್ವ ಮತ್ತು ವಿವಿಧ ಕಲಾಸಾಹಿತ್ಯ ಸಂಸ್ಥೆಗಳ ಹುದ್ದೆಗಳನ್ನು ಪಡೆಯಬೇಕಾದರೆ ದೊರೆಗಳ ಹಿಂದೆ ಬಹುಪರಾಕ್ ಹಾಕುತ್ತ ಓಡಾಡಬೇಕಾಗುತ್ತದೆ. ಅಂತೆಯೇ ರಾಜಕೀಯದವರಿಗೂ ಕೂಡ ಸಾಹಿತಿಗಳನ್ನು ಮತ್ತು ಕಲಾವಿದರನ್ನು ಹತ್ತಿಕ್ಕಿ ಮುನ್ನಡೆಯಲು ಸಾಧ್ಯವಿಲ್ಲ. ಏಕೆಂದರೆ ಕನ್ನಡ ನಾಡಿನ ಸಾಂಸ್ಕೃತಿಕ ಶರೀರವನ್ನು ಎತ್ತಿ ತೋರಿಸಿ ಇಲ್ಲೊಂದು ಭೌತಿಕ ಪ್ರಭುತ್ವಕ್ಕೆ ಅನುವು ಮಾಡಿಕೊಡುವಲ್ಲಿ ಸಾಹಿತಿಗಳ ಪಾತ್ರ ಹಿರಿದಾಗಿದೆ. ಜೊತೆಗೆ ಸಾಹಿತಿಗಳು ಭಾಷೆಯನ್ನು ಬೆಳೆಸುವವರು ಮತ್ತು ಉಳಿಸುವವರು ಎಂಬ ಸಾಮಾನ್ಯ ನಂಬಿಕೆ. ಹಾಗಂತ ಈ ನಂಬಿಕೆಯ ಹಿಂದಿನ ಸತ್ಯಾಸತ್ಯತೆಯನ್ನೂ ಯಾರೂ ಒರೆಗೆ ಹಚ್ಚಿಲ್ಲ ಆ ಪ್ರಶ್ನೆ ಬೇರೆ. ಹಾಗಾಗಿ ಕಳ್ಳರು ದೇವರನ್ನು ಬಳಸಿಕೊಂಡಂತೆ ರಾಜಕಾರಣಿಗಳು ಸಾಹಿತಿಗಳನ್ನು ಕಾಲಕ್ಕೆ ತಕ್ಕುನಾಗಿ ಉಪಯೋಗಿಸಿಕೊಳ್ಳುತ್ತಾರೆ. ಸಾಹಿತಿಗಳು ಚುನಾವಣೆಗಳಲ್ಲಿ ಭಾಗಿಯಾಗಬಾರದೆ? ಅವರಿಗೂ ವಾಕ್ ಸ್ವಾತಂತ್ರ್ಯವಿಲ್ಲವೆ? ಎಂಬಿತ್ಯಾದಿ ಹತ್ತಾರು ಪ್ರಶ್ನೆಗಳು ಕನ್ನಡದ ಸಾರಸ್ವತ ಲೋಕವನ್ನು ಆವರಿಸಿಕೊಂಡಿದೆ. ಆದರೆ ಈ ಪ್ರಶ್ನೆಗಳಿಗೆ ಉತ್ತರಿಸುವುದು ತಿಳಿದುಕೊಂಡಷ್ಟು ಸುಲಭವಾಗಿಲ್ಲ.

ಕರ್ನಾಟಕದಲ್ಲಿ ಪಕ್ಷಗಳ ಪರವಾಗಿ ಸಾಹಿತಿಗಳು ಅಖಾಡಕ್ಕೆ ಇಳಿದಿದ್ದಾರೆ. ಮೊದಲು ಪ್ರಾರಂಭಿಸಿದವರು ಕಾಂಗ್ರೇಸ್ ಪರವಾದ ಸಾಹಿತಿಗಳು. ಅದಕ್ಕೆ ವಿರೋಧವಾಗಿ ಪ್ರತಿಕ್ರಿಯಿಸಿದ ಒಂದಿಷ್ಟು ಸಾಹಿತಿಗಳಿಗೆ ಬಿ.ಜೆ.ಪಿ.ಪಟ್ಟ ಕಟ್ಟಲಾಯಿತು. ಇಲ್ಲಿ ಯಾರು ಯಾರನ್ನು ಸಮರ್ಥಿಸಿದರು ಎಂಬುದು ವಾದಕಾರಣವಲ್ಲ. ಕೆಲವು ಸಾಹಿತಿಗಳು ಪಕ್ಷರಾಜಕಾರಣವನ್ನು ಆತುಕೊಂಡು ತಮ್ಮ ಅಪಕ್ವ ನಿಲುವುಗಳನ್ನು ಹೊರಗೆಡಹಿದ ರೀತಿ ಮಾತ್ರ ತೀರಾ ಹಾಸ್ಯಾಸ್ಪದವಾಗಿದೆ. ಅಹಿಂದ್ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ, ಭಾರತೀಯ ಸಂಪ್ರದಾಯಗಳೆಲ್ಲ ಮೂಢನಂಬಿಕೆಗಳಾದ್ದರಿಂದ ನಿಷೇಧಿಸಬೇಕು, ಮದುವೆಯಾದ ಮುಸ್ಲಿಮ ಮಹಿಳೆಯರಿಗೆ ಮಾತ್ರ ಮಂಚ ಮುಂತಾದ ಸರ್ಕಾರಿ ಘೋಷಣೆಗಳಿಗೆಲ್ಲ ತುಟಿ ಪಿಟಕ್ಕೆನ್ನದೆ ಕುಳಿತ ಸಮನ್ವಯವಾದಿಗಳು ಈ ಚುನಾವಣಾ ಪ್ರಕರಣದ ಮೂಲಕ ತಾವು ನಿರ್ದಿಷ್ಟ ಪಕ್ಷದ ಮುಖವಾಣಿಗಳು ಎಂಬುದನ್ನು ಸಾಬೀತು ಮಾಡಿದರು. ಮತ್ತಷ್ಟು ಓದು »

15
ಏಪ್ರಿಲ್

ಪ್ರತ್ಯಕ್ಷ ಕಂಡು ಪರಾಂಬರಿಸಿ ನೋಡಿದ ಮೇಲೂ ನಮೋ ಎನ್ನದಿದ್ದರೆ…

– ರಾಜೇಶ್ ರಾವ್

ಮೋದಿಯಾವ ಘಟನೆ ಸಹನೆಯ ಕಟ್ಟೆಯೊಡೆದು ಸ್ವಾಭಿಮಾನ ಸಿಡಿದೆದ್ದು ನಡೆದಿತ್ತೋ ಆ ಘಟನೆ ಆತನನ್ನು ಜಗತ್ತಿಗೇ ಪರಿಚಯಿಸಿತು. ಜಗತ್ತಿಗೆ ಜಗತ್ತೇ ಆತನನ್ನು ಖಳನಾಯಕನನ್ನಾಗಿ, ರಾಕ್ಷಸನನ್ನಾಗಿ ಕಂಡು ದೂಷಿಸಿತು. ಜೊತೆಯಲ್ಲಿದ್ದವರೂ ದೂರವಾದರು. ಮಾಧ್ಯಮಗಳಿಂದ ನಿತ್ಯ ದೂಷಣೆಗಳ ಸಹಸ್ರನಾಮ. ರಾಷ್ಟ್ರವಿರೋಧಿ ಶಕ್ತಿಗಳಂತೂ ಹಬ್ಬದೂಟವೆಂಬಂತೆ ಈ ಸನ್ನಿವೇಶವನ್ನು ತಮಗೆ ತಕ್ಕಂತೆ ಮಾರ್ಪಡಿಸಿಕೊಂಡು ಕಣ್ಣಿಗೆ ರಾಚುವ ಸತ್ಯವನ್ನು ಕಾಲಗರ್ಭದಲ್ಲಿ ಅಡಗುವಂತೆ ಮಾಡಿದರು. ಮಾಧ್ಯಮಗಳು ಮುಚ್ಚಿಟ್ಟ ಕಾರಣ ಸಾಮಾನ್ಯ ಜನರಿಗೂ ಸತ್ಯ ತಿಳಿಯದೆ ಅವರೂ ದ್ವೇಷಿಸತೊಡಗಿದರು. ಅವನದೆಲ್ಲವನ್ನೂ ಮೌನವಾಗಿ ಸಹಿಸಿದ. ಮೌನವಾಗಿಯೇ ಕೆಲಸವನ್ನು ಮಾಡುತ್ತಾ ತನ್ನ ಜವಾಬ್ದಾರಿಯನ್ನು ಚ್ಯುತಿಯಿಲ್ಲದಂತೆ ಪೂರೈಸಿದ. ಯಾಕೆಂದರೆ ಅವನಲ್ಲೊಬ್ಬ ನಾಯಕನಿದ್ದ, ಸಂಘಟನಕಾರನಿದ್ದ, ಸಂಘದ ಶಿಸ್ತು, ಸಂಯಮ, ಸೇವಾಗುಣದ ಮೂರ್ತರೂಪವಿತ್ತು!

ಅದು 2013ರ ಜೂನ್ ತಿಂಗಳು. ಶಾಂತವಾಗಿದ್ದ ಗಂಗೆ ಉಕ್ಕಿ ಹರಿದಿದ್ದಳು. ಉತ್ತರ ಭಾರತ ಜಲ ಪ್ರಳಯದಿಂದ ತತ್ತರಿಸಿತ್ತು. ಚಾರ್ ಧಾಮಗಳಲ್ಲಿ ಯಾತ್ರಿಕರು ನಾಲ್ಕೂ ಕಡೆ ದಿಕ್ಕಾಪಾಲಾಗಿದ್ದರು. ಉತ್ತರಾಖಂಡದ ಜನರ ಬವಣೆಗೆ ಉತ್ತರ ಹೇಳುವವರಿರಲಿಲ್ಲ. ಕೇಂದ್ರ, ರಾಜ್ಯ ಸರಕಾರಗಳೆರಡೂ ನಿಷ್ಕ್ರಿಯವಾಗಿದ್ದ ಅಂತಹ ಕ್ಲಿಷ್ಟಕರ ಸಮಯದಲ್ಲಿ ಸಹಾಯಕ್ಕಾಗಿ ಪರಿತಪಿಸುತ್ತಿದ್ದ ಸಾವಿರಾರು ಸಂತ್ರಸ್ಥರಲ್ಲಿ ಸುಮಾರು 15,000 ಮಂದಿ ಸಂತ್ರಸ್ಥರನ್ನು ಹುಡುಕಾಡಿ ಅವರ ನೆರವಿಗೆ ಧಾವಿಸಿದ ಆತನ ಪಡೆ, ಸುಮಾರು 80 ಟೊಯೊಟಾ ಇನ್ನೋವಾ ಕಾರುಗಳಲ್ಲಿ ಅವರನ್ನು ಡೆಹ್ರಾಡೂನಿನ ಸುರಕ್ಷಿತ ಸ್ಥಳಕ್ಕೆ ಸಾಗಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರಲ್ಲದೆ, ಅಲ್ಲಿಂದ 25 ಐಷಾರಾಮಿ ಬಸ್ಸುಗಳ ಸಹಾಯದಿಂದ ನವದೆಹಲಿಗೆ ಪ್ರಯಾಣ ವ್ಯವಸ್ಥೆ ಕಲ್ಪಿಸಿದರು. ಇದು ಒಬ್ಬ ನಾಯಕನಾದವ ಮಾಡುವ ಕಾರ್ಯ.ಪಾಕಿಸ್ತಾನದ ಪ್ರಧಾನಿ ನಮ್ಮ ದೇಶದ ಪ್ರಧಾನಿಯನ್ನು ಹಳ್ಳಿ ಹೆಂಗಸು ಎಂದು ಜರೆದಾಗ ಬೇರೆ ನಾಯಕರಿರಲಿ ಪ್ರಧಾನಿಯ ಪಕ್ಷದ ನಾಯಕರೇ ತುಟಿಪಿಟಿಕ್ಕೆನ್ನದಿದ್ದಾಗ ನಮ್ಮ ದೇಶದ ಪ್ರಧಾನಿಯನ್ನು ಹೀಯಾಳಿಸುವ ಅಧಿಕಾರ ತಮಗಿಲ್ಲವೆಂದು ಹೇಳುವ ಮೂಲಕ ಯುಧಿಷ್ಟಿರನ “ಮೂರನೆಯವ ಎದುರಾದಾಗ ನಾವು ನೂರೈವರು” ಎಂಬ ಮಾತನ್ನು ಅಕ್ಷರಷಃ ಪಾಲಿಸಿದ ನಾಯಕ ಪ್ರಸಕ್ತ ಸನ್ನಿವೇಶದಲ್ಲಿ ಆತನೊಬ್ಬನೇ!

ಮುನ್ನುಗ್ಗುತ್ತಿದ್ದ ವಿಸ್ತರಣಾ ಮನೋಭಾವದ ಚೀನಾಕ್ಕೆ ಖಡಕ್ಕಾಗಿ ಉತ್ತರ ನೀಡಿದ ನಾಯಕ ಆತನಲ್ಲದೆ ಮತ್ಯಾರು? ವೀಸಾಕ್ಕಾಗಿ ಅಂಗಲಾಚದೇ ಅಮೇರಿಕಾದವರನ್ನೇ ಭಾರತದ ವೀಸಾಕ್ಕಾಗಿ ಸರತಿಯಲ್ಲಿ ನಿಲ್ಲುವಂತೆ ಮಾಡುತ್ತೇನೆಂದು ಘೋಷಿಸುವ ಧೈರ್ಯ ಮತ್ಯಾರಿಗಿದೆ? ಹೌದು, ಯಾವ ದೊಣ್ಣೆನಾಯಕನ ಅಪ್ಪಣೆಗೆ ಕಾಯದೇ ಸಂಧಿಗ್ಧ ಪರಿಸ್ಥಿತಿಯಲ್ಲಿ ಸ್ವಯಂ ಖಚಿತ ನಿರ್ಧಾರದೊಂದಿಗೆ ಮುನ್ನುಗ್ಗುವುದು ಮಾತ್ರವಲ್ಲ ಅದನ್ನು ಯಶಸ್ವಿಯಾಗಿ ಪೂರೈಸುವುದನ್ನು ಹಾಗೂ ದೇಶದ ಘನತೆ, ಸ್ವಾಭಿಮಾನ, ಗೌರವಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳುವ ಧೈರ್ಯ-ಸ್ಥೈರ್ಯ ಪ್ರದರ್ಶಿಸುವುದನ್ನು ಸರ್ದಾರ ಪಟೇಲ್ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿಯವರ ನಂತರದ ರಾಜಕೀಯ ನಾಯಕರಲ್ಲಿ ನೋಡಬಹುದಾದ ಏಕೈಕ ವ್ಯಕ್ತಿ ನರೇಂದ್ರ ಮೋದಿ!

ಮತ್ತಷ್ಟು ಓದು »

14
ಏಪ್ರಿಲ್

ತುಷ್ಟೀಕರಣ ನಿಲ್ಲದ ಹೊರತು ಕಾಶ್ಮೀರ ತಣಿಯದು

– ಯೋಗೀಶ ತೀರ್ಥಪುರ

J&Kಕಾಶ್ಮೀರ ಹಿಂದೂಗಳ ಪಾಲಿಗೆ ನರಕವಾಗಿ ಪರಿವರ್ತಿತವಾಗಿದೆ. ಹಿಂಸೆ, ಶೋಷಣೆಯ ದಳ್ಳುರಿಯಲ್ಲಿ ಇಲ್ಲನ ಹಿಂದೂಗಳ ಸ್ಥಿತಿ ತೀರಾ ದಯನೀಯವಾಗಿದೆ. ಇಷ್ಟೆಲ್ಲ ನಡೆದಿದ್ದರೂ ಕಾಶ್ಮೀರ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತುಷ್ಟೀಕರಣ ರಾಜಕಾರಣದಲ್ಲೇ ಮುಂದುವರಿದಿರುವುದು ದುರದೃಷ್ಟಕರ.

1947ರ ವಿಭಜನೆಯ ನಂತರದ ಕಾಲದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ದಿಂದ ಸುಮಾರು 4.5 ಲಕ್ಷ ಹಿಂದುಗಳು ಕಾಶ್ಮೀರಕ್ಕೆ ಸ್ಥಳಾಂತರಗೊಂಡರು. ಈ ಹಿಂದುಗಳಿಗೆ ಕಾಶ್ಮೀರದಲ್ಲಿ ಮತದಾನದ ಹಕ್ಕಿಲ್ಲ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ಹಿಂದುಗಳಿಗೆ ವಿಧಾನಸಭೆಯಲ್ಲಿ 31% ರಷ್ಟೇ ಪ್ರತಿ ನಿಧಿತ್ವ ಸಿಗುವಂತೆ ಒಟ್ಟು ಸ್ಥಾನಗಳ ಹೊಂದಾಣಿಕೆಯನ್ನು ಮಾಡಲಾಗಿದೆ.

ಕಾಶ್ಮೀರಿ ಹಿಂದುಗಳಲ್ಲಿ ಸಾಕ್ಷರತಾ ಪ್ರಮಾಣವು 88%ರಷ್ಟು ಇದ್ದರೂ ರಾಜ್ಯ ಸರಕಾರದ ಸೇವೆ, ಸಾರ್ವಜನಿಕವಲಯ ಮತ್ತು ಸರಕಾರಿ ಕಂಪೆನಿಗಳಲ್ಲಿ ಹಿಂದು ಕಾರ್ಮಿಕರ ಪ್ರಮಾಣವು 4.8% ರಷ್ಟು ಮಾತ್ರ ಇದೆ. 1980 ರಿಂದ 1990ರ ಅವಧಿಯಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾದ ಮೇಲೆ ಈ ಪ್ರಮಾಣವು 1.7%ಕ್ಕೆ ಇಳಿಯಿತು. ಕಾಶ್ಮೀರದಲ್ಲಿನ ಯಾವ ಆರ್ಥಿಕ ವ್ಯವಹಾರವೂ ಹಿಂದೂಗಳ ಕೈಯಲ್ಲಿ ಇಲ್ಲ. ಕಾಶ್ಮೀರದ 97.4% ಭೂಮಿಯು ಮುಸಲ್ಮಾನರ ಒಡೆತನದಲ್ಲಿದೆ. ಕೇವಲ 2.6% ಭೂಮಿಯು ಮಾತ್ರ ಹಿಂದು ಮತ್ತು ಇತರ ಅಲ್ಪಾಸಂಖ್ಯಾತರ ಒಡೆತನದಲ್ಲಿದೆ. 1985ರಲ್ಲಿ ಕಾಶ್ಮೀರದಲ್ಲಿ ನೋದವಣೆ ಮಾಡಲ್ಪಟ್ಟ ಲಘು ಉದ್ಯೋಗಗಳ ಸಂಖ್ಯೆ 46,293 ಇತ್ತು. ಇದರಲ್ಲಿ 0.01% ರಷ್ಟು ಉದ್ಯೋಗಗಳು ಹಿಂದುಗಳ ಒಡೆತನದಲ್ಲಿದ್ದವು ಮತ್ತು ವಿದ್ಯುತ್ ಆಧಾರಿತ ಉದ್ಯೋಗಗಳ ಪೈಕಿ 98.9%ರಷ್ಟು ಮುಸಲ್ಮಾನರ ಒಡೆತನದ್ದಲಿವೆ. ಕಾಶ್ಮೀರದಲ್ಲಿನ 96%ರಷ್ಟು ಸೇಬು ತೋಟಗಳ ಜಮೀನು ಮುಸಲ್ಮಾನರ ಒಡೆತನದ್ದಲಿದೆ.

ಮತ್ತಷ್ಟು ಓದು »

13
ಏಪ್ರಿಲ್

ಹೊಸದನ್ನೇನೋ ಕಂಡಂತೆ…!!

– ಅವಿನಾಶ್ ಜಿ ರಾಮ್

ಉಳಿದವರು ಕಂಡಂತೆವಿಚಿತ್ರವಾಗಿ ಕಾಡುವ ರಿಚ್ಚಿ, ಮೌನವಾಗಿಯೇ ಕೊಲ್ಲುವ ಮುನ್ನಾ ಅಲಿಯಾಸ್ ಪ್ರಣಯರಾಜ.. ನೋಡುವವರ ಕಣ್ಣು ತೇವ ಮಾಡಲೇಂದೆ ಕಾದು ಕುಳಿತ ರತ್ನಕ್ಕ ಮತ್ತವಳ ಮಗ ರಾಘು.. ಪಾಪ ಎನಿಸುವ ಬಾಲು.. ಕಣ್ಣೆದುರು ಬಂದಾಗೆಲ್ಲಾ ಬೆರಗು ಮೂಡಿಸುವ ಡೆಮಾಕ್ರಸಿ.. ಹೀಗೆ ಪಟ್ಟಿ ಮಾಡುತ್ತ ಹೋದರೆ ಉಳಿದವರ ಗುಂಪು ದೊಡ್ಡದಾಗುತ್ತ ಹೋಗುತ್ತದೆ..

ಅತ್ಯಂತ ವಿಭಿನ್ನ ಆಯಾಮಗಳೊಂದಿರುವ ಈ ಸಿನಿಮಾ ನನ್ನ ಕುತೂಹಲಕ್ಕೆ ಮೋಸ ಮಾಡಿಲ್ಲ. ಪ್ರತಿ ಪ್ರೇಮ್‌ನಲ್ಲೂ ತನ್ನ ಸಹಿ ಉಳಿಸಿರುವ ಕರಮ್ ಚಾವ್ಲಾರ ಕ್ಯಾಮೆರಾ ಕೈಚಳಕ, ಇಡೀ ಸಿನಿಮಾದಲ್ಲೊಂದು ಯಶಸ್ವಿ ಪಾತ್ರವಾಗಿರುವ ಅಜನೀಶ್ ರ ಸಂಗೀತ..:) ಕತ್ತರಿ ಪ್ರಯೋಗದಲ್ಲಿ ಕುಶಲತೆ ತೋರಿರುವ ಸಚಿನ್. ಈ ಎಲ್ಲಾ ತಂತ್ರಜ್ಞರ ತಾಂತ್ರಿಕತೆಯಲ್ಲಿ ಮಿಂದಿದೆ ‘ಉಳಿದವರು..‘

ತಂಡದ ನಾಯಕನಾಗಿರುವ ರಕ್ಷಿತ್ ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನದ್ದು ನೀಡಬಲ್ಲೇ ಎಂದು ಸಾಬೀತು ಮಾಡಿದ್ದಾರೆ. ಚಿತ್ರಕಥೆಯ ಶೈಲಿ ಭಿನ್ನವಾಗಿದೆ. ವರ್ಲ್ಡ್ ಸಿನಿಮಾಗಳ ಪ್ರಭಾವ ಅವರಿಗಾಗಿದೆ. ರಕ್ಷಿತ್ ಬರೀ ನಟನಾಗಿ ಮಾತ್ರ ಉಳಿದು ಹೋಗಬಾರದಾಗಿ ವಿನಂತಿ..

ಇನ್ನೂ ಲಾಭಾಂಶಗಳ ಲೆಕ್ಕಾಚಾರ ಮಾಡದೇ ಚಿತ್ರ ನಿರ್ಮಾಣ ಮಾಡಿದ ಸಿಂಪಲ್ ಸುನಿ ಮತ್ತು ತಂಡಕ್ಕೆ ಕೃತಜ್ಞತೆ ಹೇಳಲೇಬೇಕು..ಈ ಚಿತ್ರ ಅರ್ಥ ಆಗ್ತಿಲ್ಲ ಅನ್ನೋ ಕೊರಗು ಹಾಗೂ ವಿಮರ್ಶೆಗಳು ಎಲ್ಲೆಡೆ ಉಚಿತವಾಗಿ ಕೇಳಿ ಬರುತ್ತಿವೆ. ಇದುವರೆಗೂ ಎಂತೆಂಥ ಅನರ್ಥಗಳು, ಹೊಲಸು ತುಂಬಿರುವ ಚಿತ್ರಗಳು ಕನ್ನಡದಲ್ಲಿ ಬಂದಿವೆ. ಅಂತವುಗಳನ್ನು ಗೆಲ್ಲಿಸಿ ಯಶಸ್ವಿ ಚಿತ್ರ ಎಂಬ ಹಣೆ ಪಟ್ಟಿ ಕೊಟ್ಟವರು ನಾವು ಇನ್ನು ಈ ‘ ಉಳಿದವರನ್ನು ಅರಗಿಸಿಕೊಳ್ಳಲಾಗಲಿಲ್ಲವೆಂದರೇ ಹೇಗೆ..?

ಮತ್ತಷ್ಟು ಓದು »

12
ಏಪ್ರಿಲ್

ಸಾಹಿತ್ಯ ಕ್ಷೇತ್ರದ ಒಳಹೊರಗು – ಭಾಗ ೨

-ಡಾ.ಶ್ರೀಪಾದ ಭಟ್, ತುಮಕೂರು

ಕನ್ನಡ ಸಾಹಿತ್ಯಸಾಹಿತ್ಯ ಕ್ಷೇತ್ರದ ಒಳಹೊರಗು – ಭಾಗ ೧

ಕವಿಕಾಣದ್ದನ್ನು ವಿಮರ್ಶಕ ಕಂಡ!

ಕಾವ್ಯದಲ್ಲಿ ಕವಿ ಊಹಿಸದೇ ಇರುವ ಸಂಗತಿಯನ್ನು ಕೂಡ ವಿಮರ್ಶಕ ಖಚಿತವಾಗಿ ಹೇಳಬಲ್ಲ ಎಂಬ ಕಾರಣಕ್ಕೆ ಈ ಮಾತು. ಕುವೆಂಪು ಅವರು ಹೇಳಿದ್ದು: ರವಿ ಕಾಣದ್ದನ್ನು ಕವಿ ಕಂಡ. ಇದನ್ನು ಮುಂದುವರೆಸಿದ ಹಿರಣ್ಣಯ್ಯ ಕವಿ ಕಾಣದ್ದನ್ನು ಕುಡುಕ ಕಂಡ ಎಂದಿದ್ದರು. ಕನ್ನಡ ವಿಮರ್ಶೆಗಳನ್ನು ಅವಲೋಕಿಸಿದವರು ಆರಂಭದ ನನ್ನ ಮಾತನ್ನು ಒಪ್ಪಬಹುದು. ಇದಕ್ಕೆ ನಿದರ್ಶನವೊಂದಿದೆ. ಮೈಸೂರಿನಲ್ಲಿ ಕೆ.ಎಸ್ ನರಸಿಂಹಸ್ವಾಮಿಯವರ ಕಾವ್ಯ ಕುರಿತ ವಿಚಾರಗೋಷ್ಠಿ ನಡೆದಿತ್ತು. ಖ್ಯಾತರಾದ ಸ್ಥಾಪಿತ ವಿಮರ್ಶಕರೊಬ್ಬರು ಕೆಎಸ್‍ನ ಕಾವ್ಯದ ಜನಪ್ರಿಯ ಗೀತೆಯ ’ಪದುಮಳು ಒಳಗಿಲ್ಲ’ ಎಂಬ ಸಾಲನ್ನು ವಿಮರ್ಶಿಸುತ್ತ ಪದುಮ ಹೆಣ್ಣು ಕುಲದ ಪ್ರತೀಕ. ಗಂಡಸರು ಹೆಣ್ಣನ್ನು ಎಂದೂ ಒಳಗೆ ಬಿಟ್ಟುಕೊಂಡೇ ಇಲ್ಲ. ಆದ್ದರಿಂದ ಪದುಮಳು ಒಳಗಿಲ್ಲ ಎಂದರೆ ಹೆಣ್ಣನ್ನು ಗಂಡಸರು ತಮ್ಮ ವ್ಯಾವಹಾರಿಕ ಪ್ರಪಂಚದಿಂದ ಯಾವಾಗಲೂ ಹೊರಗೇ ಇಟ್ಟಿದ್ದಾರೆ ಎಂದರ್ಥ! ಎನ್ನುತ್ತ ವಿಶೇಷ ವ್ಯಾಖ್ಯಾನ ಮಾಡಿದರು. ಕೆಎಸ್‍ನ ಅವರನ್ನು ಒಮ್ಮೆ ಭೇಟಿಯಾದಾಗ ಪದ್ಯದ ಅರ್ಥ ಹಿಂಗಂತಲ್ಲಾ ಸಾರ್? ಅಂದೆ. ಅದೇನೋಪ್ಪ, ನಾನಂತೂ ಪದ್ಯ ಬರೆಯುವಾಗ ಅದನ್ನೆಲ್ಲ ಖಂಡಿತ ಯೋಚಿಸಿರಲಿಲ್ಲ. ಅದೇನಿದ್ದರೂ ಮುಟ್ಟು-ಮೈಲಿಗೆ ಅರ್ಥದಲ್ಲಿ ಹೊಳೆದ ಸಹಜ ಸಾಲು ಎಂದಿದ್ದರು. ಹೀಗಾಗಿಯೇ ಹೇಳಿದ್ದು: ಕವಿ ಕಾಣದ್ದನ್ನು ವಿಮರ್ಶಕ ಕಂಡ ಎಂದು. ಇರಬಹುದು. ಅನೇಕಾರ್ಥಗಳನ್ನು ಹೊಳೆಸಿದಾಗಲೇ ನಿಜವಾದ ಕಾವ್ಯವಾಗುವುದು. ಅಲ್ಲವೇ?

ಮತ್ತಷ್ಟು ಓದು »

11
ಏಪ್ರಿಲ್

‘ದೇಶ ಮೊದಲು’ ಎಂದ ಕದನ ಕಲಿಗಳ ಆತ್ಮ ಸಮ್ಮಾನವನ್ನು ದೇನಿಸುತ್ತಾ….

– ರಾಘವೇಂದ್ರ ಅಡಿಗ ಎಚ್ಚೆನ್

ಕಾರ್ಗಿಲ್ ಯುದ್ಧಯಾರೇ ಒಬ್ಬ ವ್ಯಕ್ತಿ ಸೈನ್ಯಕ್ಕೆ ಸೇರುತ್ತಾನೆಂದರೆ ಆ ವ್ಯಕ್ತಿಯ ಜಾತಿ, ಧರ್ಮಗಳೇನು ಎನ್ನುವುದನ್ನು ಯಾರೊಬ್ಬರೂ ಕೇಳುವುದಿಲ್ಲ. ಬದಲಾಗಿ ಅವನಿಗಿರುವ ದೇಶಾಭಿಮಾನಕ್ಕೆ ದೇಶವಾಸಿಗಳೆಲ್ಲಾ ತಲೆದೂಗುತ್ತಾರೆ. ಸೈನ್ಯಕ್ಕೆ ಸೇರ್ಬಹುದಾದ ವ್ಯಕ್ತಿ ಯಾರೇ ಆದರೂ ಅವನ ಬಗ್ಗೆ ಇಡಿ ದೇಶವೇ ಹೆಮ್ಮೆ ಪಡುತ್ತದೆ ಏಕೆಂದರೆ ಭಾರತೀಯ ಸೇನೆ ನಿರ್ವಹಿಸುವ ಕಾರ್ಯ ಅಂತಹುದು. ಮಳೆ, ಚಳಿ, ಶೀತ ಮಾರುತ, ಬಿರು ಬಿಸಿಲು ಎನ್ನುವುದನ್ನೂ ಲೆಕ್ಕಿಸದೆ ಹಗಲಿರುಳೂ ದೇಶದ ಗಡಿ ಕಾಯುವ ಯೋಧರ ದೇಶ ನಿಷ್ಠೆಯಿಂದಾಗಿಯೇ ಇಂದು ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ.

ಅದು 1999 ಮೇ ತಿಂಗಳು, ಪಾಕಿಗಳು ಕಾರ್ಗಿಲ್‌ನ, ಪೂರ್ವ ಬಟಾಲಿಕ್‌ನ ಮತ್ತು ದ್ರಾಸ್‌ನ ಉತ್ತರ ದಿಕ್ಕಿನ ಬೆಟ್ಟಗಳನ್ನು ಏರತೊಡಗಿದರು. ಗಟ್ಟಿ ಮುಟ್ಟಾಗಿದ್ದ ಬಂಕರುಗಳನ್ನು ತಮ್ಮೊಂದಿಗಿಟ್ಟುಕೊಂಡಿದ್ದ ಅವರು ಭಾರತೀಯದ ಸರ್ವ ರೀತಿಯ ಧಾಳಿಗೂ ಸನ್ನದ್ದರಾಗಿದ್ದರು. ಹಳ್ಳಿಗಾಡಿನ ದನಗಾಹಿಗಳಿಂದ ಪಾಕಿಸ್ತಾನದ ಈ ಕುಟಿಲೋಪಾಯವನ್ನರಿತ ನಮ್ಮ ಸೇನೆ ವರದಿ ತರಲೆಂದು ಸೌರಭ್ ಕಾಲಿಯಾ ನೇತೃತ್ವದಲ್ಲಿ ಐವರನ್ನು ಗುಡ್ಡ ಹತ್ತಿಸಿತು. ಶತ್ರುಪಡೆಗಳ ಸಾಮರ್ಥ್ಯದ ಅಂದಾಜಿಲ್ಲದ ನಮ್ಮವರು ಬೆಟ್ಟ ಹತ್ತಿ ಪಾಕ್ ನ ಮತಾಂಧ ಸೈನಿಕರ ಕೈಯಲ್ಲಿ ಸಿಕ್ಕಿಹಾಕಿಕೊಂಡು ಕ್ರೂರವಾದ ಹಿಂಸೆಗೆ ತುತ್ತಾದರು. ಅಷ್ಟೆ ಅಲ್ಲ ಅವರುಗಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಭಾರತೀಯ ಸೇನಾ ಶಿಬಿರಕ್ಕೆ ಹಿಂತಿರುಗಿಸಲಾಯಿತು.

ಅಂದಿನ ವಾಜಪೇಯಿ ನೇತೃತ್ವದ ಎನ್.ಡಿ.ಎ. ಸರ್ಕಾರವು ತಕ್ಷಣವೇ ‘ಆಪರೇಷನ್ ವಿಜಯ್’ ಹೆಸರಿನಲ್ಲಿ ಸೈನಿಕ ಕಾರ್ಯಾಚರಣೆ ನಡೆಸಲು ಆದೇಶ ನೀಡಿತು. ಆದರೆ ಅಂತಹಾ ಸೂಕ್ಷ್ಮ ಸ್ಥಿತಿಯಲ್ಲಿ ದೇಶದ ಗಡಿ ಕಾಯುತ್ತಿದ್ದ ಸೈನಿಕರ ಬಳಿ ಸರಿಯಾದ ಆಧುನಿಕ ಶಸ್ತ್ರಾಸ್ತ್ರಗಳೂ ಇರಲಿಲ್ಲ! ದೇಹ ರಕ್ಷಣೆಗೆ ಅವಷ್ಯವಾದ ಬಟ್ಟೆಗಳೂ ಇರಲಿಲ್ಲ! ಮತ್ತಷ್ಟು ಓದು »

10
ಏಪ್ರಿಲ್

ನಾಡು- ನುಡಿ: ಮರುಚಿಂತನೆ- ಪ್ರಜಾಪ್ರಭುತ್ವ ಹಾಗೂ ಪ್ರತಿನಿಧಿಗಳು- ಭಾಗ:2

-ಶ್ರೀ. ಆಯನೂರು ಮಂಜುನಾಥ್, ರಾಜ್ಯಸಭಾ ಸದಸ್ಯರು (-ಅಕ್ಷರಕ್ಕೆ ಇಳಿಸಿದವರು: ಸಂತೋಷ ಈ. ಕುವೆಂಪು.ವಿ.ವಿ, ಶಂಕರಘಟ್ಟ)-ಭಾಗ 1 

Social Science Column Logo

ಒಂದು ಶಾಲೆಯಲ್ಲಿ ಒಬ್ಬ ಶಿಕ್ಷಕ ಪಾಠ ಮಾಡುವಾಗ ಒಂದು ಹುಡಗಿಯ ಹೆಗಲ ಮೇಲೆ ಕೈ ಹಾಕಿಕೊಂಡು ಪಾಠ ಮಾಡಿದ್ದಾನೆ. ಇದರ ಪರಿಣಾಮ ದೊಡ್ಡ ಗಲಾಟೆಯಾಗಿ ನಾನು ಹೋಗಬೇಕಾಯಿತು. ಆದ್ದರಿಂದ ನಾನು ಹೋದೆ, ಡಿಡಿಪಿಐಗೆ ಹೇಳಿ ಅಮಾನತು ಮಾಡಿಸಿದೆ. ಆದರೆ ಗ್ರಹಚಾರಕ್ಕೆ ಅವನು ನನ್ನ ಜಾತಿಯವನು ಆಗಿದ್ದ, ಹಾಗಾಗಿ ನನ್ನ ಜಾತಿಯವರು ಎಲ್ಲಾ ಬಂದರು. ಯಾರು ಈ ರೀತಿಯ ಕೆಲಸ ಮಾಡಿಲ್ಲವೇನು? ಏನೋ ಹುಡುಗ ತಪ್ಪು ಮಾಡಿದ್ದಾನೆ. ಕಪಾಳಕ್ಕೆ ಹೊಡೆದು ಬುದ್ಧಿ ಹೇಳ್ತಿವಿ ಬಿಡು. ನೀನು ನಮ್ಮವನಾಗಿ ಹೀಗೆನಾ ಮಾಡೋದು? ಅಂತ ಮಾತನಾಡಿದ್ದರು. ಅದಕ್ಕೆ ನಾನು ಹೇಳಿದೆ ಅವನು ನನ್ನ ಮಗಳ ಮೇಲೆ, ನಿನ್ನ ಮಗಳ ಮೇಲೆ ಕೈ ಹಾಕಿಲ್ಲ ಹಾಗಾಗಿ ನಿನಗೆ ಏನೂ ಅನಿಸುತ್ತಿಲ್ಲ. ಅಕಸ್ಮಾತ್ ಅವನು ನಿನ್ನ ಮಗಳ ಮೇಲೆ ಕೈ ಹಾಕಿದ್ದರೆ? ಎಂದು ಕೇಳಿದೆ. ಅದಕ್ಕೆ ಅವರು ನನ್ನ ಮೇಲೆ ಕೋಪಗೊಂಡು ಹೋದರು. ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಇಂಜಿನಿಯರನ ಅಮಾನತು ಮಾಡಿಸಿದೆ. ಅವನು ನನ್ನ ಜಾತಿಯವನೆ ಆಗಿದ್ದ. ಅದಕ್ಕೆ ನಮ್ಮ ಜಾತಿಯವರೆಲ್ಲ ಸೇರಿ ನಮ್ಮ ಜಾತಿಯ ವಿರುದ್ಧ ಇದ್ದಾನೆ ಎಂದು ಹಣೆಪಟ್ಟಿ ಕಟ್ಟುತ್ತಾರೆ. ಈ ರೀತಿಯ ಜನರ ಮಧ್ಯೆ ಹೇಗೆ ರಾಜಕಾರಣ ಮಾಡುವುದು? ಹೇಗೆ ಅಭಿವೃಧ್ಧಿ ರಾಜಕಾರಣ ಮಾಡುವುದು? ನಮ್ಮ ನಿಲವುಗಳನ್ನು ಹೇಗೆ ಪ್ರಕಟ ಮಾಡುವುದು? ನಾವು ನಂಬಿರುವ ಸಿದ್ಧಾಂತಗಳನ್ನು ಓರೆ ಹಚ್ಚಿ ಎಲ್ಲಿ ನೋಡಣ? ಒಂದು ರೀತಿಯಲ್ಲಿ ಶಾಸಕರಾದ ಮೇಲೆ ಸಂಸದರಾದ ಮೇಲೆ ನಮ್ಮ ವ್ಯಕ್ತಿತ್ವ ಎಲ್ಲಿ ಕರಿಗಿ ಹೋಗುತ್ತಿದೆಯೋ ಎಂಬ ಭಯ ನಮ್ಮಗಿದೆ.

ಇವತ್ತು ಮತದಾರರ ನಿರೀಕ್ಷೆ ಬೇರೆ ಬೇರೆ ರೀತಿಯಲ್ಲಿ ವ್ಯಕ್ತವಾಗುತ್ತಿದೆ. ಜನರು ತಮ್ಮ ಖಾಸಗಿ ಜೀವನದ ಕೆಲವು ಕಾರ್ಯಕ್ರಮಗಳಿಗೆ ಹಣವನ್ನು ರಾಜಕಾರಣಿಗಳಿಂದ ನೀರಿಕ್ಷಿಸುತ್ತಾರೆ. ಉದಾ:- ಮದುವೆ, ಆಸ್ಪತ್ರೆ ಖರ್ಚು, ಸಾವುಗಳಿಗೆ. ಜೊತೆಗೆ ಜಾತಿಯ ನಿರೀಕ್ಷೆ, ಏರಿಯಾ ಮನೆ ಮುಂದೆ ರಸ್ತೆ ಮಾಡಿಕೊಡಿ. ಹೊಸ ಚರಂಡಿ ಮಾಡಿಸಿ ಎನ್ನುವ ಮೂಲಕ ಅವರಲ್ಲಿ ವ್ಯಕ್ತಿಗತವಾಗಿ ತಮ್ಮ ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸುತ್ತಾರೆಯೇ ಹೊರತು ಕ್ಷೇತ್ರದ ಮತದಾರನಾಗಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರ ನಿರೀಕ್ಷೆ ಇರುವುದಿಲ್ಲ. ಅವರ ನಿರೀಕ್ಷೆಗಳು ಯಾವ ಸ್ವರೂಪದಲ್ಲಿ ಇರುತ್ತವೆ ಎಂದರೆ, ನಮಗೆ ಓಟ್ ಬೇಕು ಅಂದರೆ ಅವರು ಕೇಳುವ ಕಾಲೇಜಿನಲ್ಲಿ ಸೀಟು ಕೊಡಿಸಬೇಕು. ಅವರ ಮಕ್ಕಳಿಗೆ ಕೆಲಸ ಕೊಡಿಸಬೇಕು. ಆಸ್ಪತ್ರೆಗೆ ಹೋದರೆ ಡಾಕ್ಟರಿಗೆ ಪೋನ್ ಮಾಡಿ ಹೇಳಬೇಕು. ಅವರ ಮಕ್ಕಳು ತಪ್ಪು ಮಾಡಿದರೆ ಅವರನ್ನು ಪೋಲಿಸ್ ಠಾಣೆಯಿಂದ ಬಿಡಿಸಬೇಕು. ಅರ್ಹತೆಯಿಲ್ಲದವನಿಗೆ ಸೀಟು ಮತ್ತು ಕೆಲಸ ಕೊಡಿಸಬೇಕು. ಎಲ್ಲಿಂದ ಎಲ್ಲಿಗೆ ನಿರೀಕ್ಷೆ ಅರ್ಥವಾಗುವುದಿಲ್ಲ. ಈ ರೀತಿಯ ವ್ಯವಸ್ಥೆಯ ಮಧ್ಯೆ ರಾಜಕಾರಣಿಗಳಿಗೆ ನಿತ್ಯ ಸವಾಲುಗಳಿವೆ. ಮತ್ತಷ್ಟು ಓದು »

10
ಏಪ್ರಿಲ್

ಉಸಿರೇ ಭಾರ: ಇಲ್ಲದಿರೆ ಆಧಾರ!

– ತುರುವೇಕೆರೆ ಪ್ರಸಾದ್

ಆಧಾರ್ದೇಶದ ಶತಕೋಟಿ ನಾಗರಿಕರಿಗೆ ಬಯೋಮೆಟ್ರಿಕ್  ಮಾಹಿತಿ ಆಧಾರದಲ್ಲಿ ವಿಶಿಷ್ಟ ಗುರುತಿನ ಸಂಖ್ಯೆ( ಯುಐಡಿ) ನೀಡುವ ಯೋಜನೆಯೇ ಆಧಾರ್. ಈ ಯೋಜನೆ ವಿಶ್ವದಲ್ಲೇ ಪ್ರಥಮ ಮತ್ತು ವಿಶಿಷ್ಟವಾದುದು, ಗುರುತಿನ ದಾಖಲೆಗಳಿಲ್ಲದವರೂ ಆಧಾರ್ ಚೀಟಿ ಪಡೆಯಬಹುದು ಎಂದು ಹೇಳಲಾಗಿದೆ. ಈ ಚೀಟಿ ವಿತರಣೆಗೆ ಬೆರಳಚ್ಚು, ಅಕ್ಷಿಪಟಲ ಸ್ಕ್ಯಾನ್, ಭಾವಚಿತ್ರ ಈ ಮೂರು ಬಯೋಮೆಟ್ರಿಕ್ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

‘ಆಧಾರ್ ಕಾರ್ಡ್ ಕಡ್ಡಾಯವಲ್ಲ, ಐಚ್ಚಿಕ’ ಎಂದು ಕೇಂದ್ರ ಸರ್ಕಾರ ಈಚೆಗೆ  ಸುಪ್ರೀಂ ಕೋರ್ಟಿಗೆ ಪ್ರಮಾಣ ಪತ್ರ ಸಲ್ಲಿಸಿದೆ.  ಇದರಿಂದ ಆಧಾರ್ ಬಗೆಗಿದ್ದ ಗೊಂದಲ, ಅನಗತ್ಯ ಕಿರಿಕಿರಿಗಳಿಗೆ ಕೇಂದ್ರವೇ ಸ್ಪಷ್ಟನೆ ನೀಡಿದಂತಾಗಿದೆ. ಇದು ನಿಜಕ್ಕೂ ಸ್ವಾಗತಾರ್ಹ ಕ್ರಮ.  ಉದ್ಯೋಗ ಖಾತ್ರಿ ಯೋಜನೆ, ಸರ್ವ ಶಿಕ್ಷಾ ಅಭಿಯಾನ, ರಾಷ್ಟ್ರೀಯ ಗ್ರಾಮಿಣ ಆರೋಗ್ಯ ಕಾರ್ಯಕ್ರಮ, ಭಾರತ್ ನಿರ್ಮಾಣ್‍ನಂತಹ ಯೋಜನೆಗಳಡಿ  ಉದ್ದೇಶಿತ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಚೀಟಿ ನೆರವಾಗುತ್ತದೆ ಎಂದು ಹೇಳಲಾಗಿತ್ತು.  ಆಧಾರ್ ಚೀಟಿ ಪಡೆಯುವುದು ಸ್ವಯಂಪ್ರೇರಣೆಗೆ ಬಿಟ್ಟಿದ್ದು ಎಂದು ಆರಂಭದಲ್ಲಿ ಹೇಳಲಾಗಿತ್ತಾದರೂ ಉದ್ಯೋಗ ಪಡೆಯಲು, ಬ್ಯಾಂಕ್ ಖಾತೆ ತೆರೆಯಲು, ಮಕ್ಕಳನ್ನು ಶಾಲೆಗೆ ಸೇರಿಸಲು, ಆರೋಗ್ಯ ಸೇವೆಗಳ ಲಾಭ ಪಡೆಯಲು, ಪಡಿತರ ಚೀಟಿ ಪಡೆಯಲು, ವಿದ್ಯಾರ್ಥಿ ವೇತನ ಪಡೆಯಲು  ಆಧಾರ್ ಏಕೈಕ ಕಡ್ಡಾಯ ದಾಖಲೆ ಎಂಬಂತೆ  ಬಿಂಬಿಸಲಾಗುತ್ತಿದೆ. ಆಧಾರ್  ಇಲ್ಲದಿದ್ದರೆ ಸಾರ್ವಜನಿಕರಿಗೆ  ಈ ದೇಶದ ಪೌರತ್ವ ಮತ್ತು ನಾಗರಿಕ ಸೌಲಭ್ಯಗಳು ದಕ್ಕುವುದಿಲ್ಲ ಎಂದು ಬೆದರಿಕೆ ಹಾಕುವ ಮಟ್ಟಿಗೆ  ಅಧಿಕಾರಿಗಳು ಸಾರ್ವಜನಿಕರ ಮೇಲೆ ಒತ್ತಡ ಹೇರಿದ್ದಾರೆ. ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯೊಂದರಲ್ಲಿ ಜಿಲ್ಲಾಧಿಕಾರಿಗಳು ಆಧಾರ್ ಇಲ್ಲದೆ ಯಾವ ಯೋಜನೆಯನ್ನೂ ಅನುಷ್ಠಾನಕ್ಕೆ ತರಕೂಡದು ಎಂದು ಕಟ್ಟಾಜ್ಞೆಯನ್ನೇ ಮಾಡಿದರು. ಅಧಿಕಾರಿಗಳೇ ಈ ರೀತಿ ಅಂಕುಶ ಹಿಡಿದು ಹೊರಟರೆ ಸಾರ್ವಜನಿಕರ ಗತಿ ಏನು ಎಂದು ಯೋಚಿಸಬೇಕಿದೆ.
ಮತ್ತಷ್ಟು ಓದು »

9
ಏಪ್ರಿಲ್

ಮಹಾತ್ಮಾ ಗಾಂಧಿಯವರ ಆಸೆಯನ್ನು ನೆರವೇರಿಸಲಿರುವ ಸೋನಿಯಾ!

– ನರೇಂದ್ರ ಕುಮಾರ್

Sonia1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ, ಕಾಂಗ್ರೆಸ್ಸಿನ ನಾಯಕರ ಮುಂದೆ ಮಹಾತ್ಮಾ ಗಾಂಧಿಯವರು ತಮ್ಮ ಆಸೆಯೊಂದನ್ನು ಹೇಳಿದರು. ಅದೆಂದರೆ, “ಭಾರತಕ್ಕೆ ಸ್ವಾತಂತ್ರ್ಯ ಪಡೆಯುವುದು ಕಾಂಗ್ರೆಸ್ಸಿನ ಉದ್ದೇಶವಾಗಿತ್ತು. ಈಗ ಅದು ನೆರವೇರಿದೆ. ಹೀಗಾಗಿ, ಇನ್ಮುಂದೆ ಕಾಂಗ್ರೆಸ್ಸಿನ ಆವಶ್ಯಕತೆಯಿರುವುದಿಲ್ಲ. ಈಗ ಕಾಂಗ್ರೆಸ್ಸನ್ನು ವಿಸರ್ಜಿಸಿಬಿಡೋಣ. ನಿಮಗೆ ಅಗತ್ಯವೆನಿಸಿದರೆ ಹೊಸದೊಂದು ರಾಜಕೀಯ ಪಕ್ಷವನ್ನು ಕಟ್ಟಿಕೊಳ್ಳಿ”. ಇದಕ್ಕೆ ಸರ್ದಾರ್ ಪಟೇಲರ ಸಮ್ಮತಿಯೂ ಇತ್ತು. ಆದರೆ, ಸ್ವತಂತ್ರ ಭಾರತದ ಪ್ರಧಾನಿಯಾಗುವ ಕನಸು ಕಾಣುತ್ತಿದ್ದ ಪಂಡಿತ್ ನೆಹರೂ ಅವರು ಇದಕ್ಕೆ ಒಪ್ಪಲಿಲ್ಲ. ಇಷ್ಟು ವರ್ಷಗಳ ಕಾಲ ಕಷ್ಟಪಟ್ಟ ನಂತರ, ಅದರ ಫಲವನ್ನು ಉಣ್ಣುವುದರಲ್ಲಿ ತಪ್ಪೇನಿದೆ ಎನ್ನುವುದು ಅವರ ವಾದವಾಗಿತ್ತು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರಿಂದ ಬಂದಿದ್ದ ಪ್ರಸಿದ್ಧಿಯನ್ನು ಅಧಿಕಾರದ ಖುರ್ಚಿಗೆ ಏರುವುದಕ್ಕೆ ಉಪಯೋಗಿಸಿಕೊಳ್ಳುವುದೇ ಸರಿ ಎಂದು ಅವರು ಹೇಳಿದರು. ಇದಾದ ಸ್ವಲ್ಪ ದಿನದಲ್ಲೇ ಗಾಂಧೀಜಿಯವರ ಕೊಲೆಯೂ ಆಗಿಹೋಯಿತು. ಗಾಂಧೀಜಿಯವರ ಆಸೆ ಹಾಗೆಯೇ ಉಳಿದು ಬಿಟ್ಟಿತ್ತು!

1947ರಲ್ಲಿ “ಸಂವಿಧಾನ ಸಭೆ” (Constituent Assembly) ಅಸ್ತಿತ್ವಕ್ಕೆ ಬಂದಿತು. ನೆಹರೂ ಪ್ರಧಾನಿಯಾದರು. ವಿವಿಧ ಪಕ್ಷಗಳಿಗೆ ಸೇರಿದವರಿಗೂ ಸರಕಾರದಲ್ಲಿ ಅವಕಾಶ ನೀಡಿದರು. ಆ ನಂತರ, ಸರಕಾರದಲ್ಲಿ ಕಾನೂನು ಮಂತ್ರಿಯಾಗಿದ್ದ ಡಾ||ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತದ ಸಂವಿಧಾನ ರಚನೆಯಾಯಿತು. 1951ರಲ್ಲಿ ಮೊದಲ ಚುನಾವಣೆಯಾಯಿತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 364 ಸ್ಥಾನಗಳು ಲಭಿಸಿದವು. ಮತ್ತಾವ ಪಕ್ಷವೂ ಮೂರಂಕಿ ಮುಟ್ಟಲಿಲ್ಲ. 1957ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸ್ಥಾನಗಳು 371 ಆದವು. ಈ ಬಾರಿಯೂ ಮತ್ತಾವ ಪಕ್ಷವೂ ಮೂರಂಕಿ ಮುಟ್ಟಲಿಲ್ಲ.
ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗಳಿಸಿದ ಸ್ಥಾನಗಳು ಕೆಳಗಿನ ಕೋಷ್ಟಕದಲ್ಲಿದೆ:

ಮತ್ತಷ್ಟು ಓದು »