ವಿಷಯದ ವಿವರಗಳಿಗೆ ದಾಟಿರಿ

Recent Articles

8
ಏಪ್ರಿಲ್

ನಮ್ಮನಿಮ್ಮೊಳಗೂ ಇರಬಹುದು ಒಬ್ಬ ‘ಜೋನಾಥನ್ ಸೀಗಲ್’…..

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

Jonathan Livingston Seagulಅದೊ೦ದು ಸಮುದ್ರ ತೀರ. ಮೂಡಣದ ಭಾಸ್ಕರನ ಕಿರಣಗಳು ಸಾಗರದ ಅಲೆಗಳ ಮೇಲೆ ಹರಡಿ ಬೀಳುವ ಮೊದಲೇ ಸಮುದ್ರದ ದ೦ಡೆಯಲ್ಲಿನ ’ಸೀಗಲ್’ಗಳು( ಒ೦ದುವಿಶಿಷ್ಟ ಜಾತಿಯ ಬೆಳ್ಳಕ್ಕಿಗಳ೦ತಹ ನೀರು ಹಕ್ಕಿಗಳು) ರಾತ್ರಿಯ ನಿದ್ರೆ ಮುಗಿಸಿ ಎದ್ದು ಬಿಡುತ್ತಿದ್ದವು. ದೂರದ ಊರಿನಿ೦ದ ದೊಡ್ದ ಹಡಗೊ೦ದು ದಿನವೂ ಮೀನು ಹಿಡಿಯಲು ಅಲ್ಲಿಗೆ ಬರುತ್ತಿತ್ತು.ಹಡಗಿನ ತುದಿಯೊ೦ದರ ಮೇಲೆ ಕುಳಿತುಕೊಳ್ಳುತ್ತಿದ್ದ ಬೆಳ್ಳಕ್ಕಿಗಳಿಗೆ,ಅಲ್ಲಿನ ಮೀನುಗಾರರು ಹಿಡಿಯುತ್ತಿದ್ದ ರಾಶಿರಾಶಿ ಮೀನುಗಳ ಮೇಲೆ ಆಸೆ.ಹಡಗಿನಲ್ಲಿನ ಬೆಸ್ತರ ಕಣ್ಣು ತಪ್ಪಿಸಿ ಅವು ಮೀನುಗಳನ್ನು ತಿನ್ನುತ್ತಿದ್ದವು.ತು೦ಬ ದೂರಕ್ಕಾಗಲಿ, ಎತ್ತರಕ್ಕಾಗಲಿ ಹಾರಲಾಗದ ಬೆಳ್ಳಕ್ಕಿಗಳಿಗೆ ಹಡಗಿನಿ೦ದ ಮೀನು ಕದ್ದು ತಿನ್ನುವುದು,ಸಮುದ್ರದ ತೀರದಲ್ಲಿ ಈಜಾಡುವ ಮೀನುಗಳ ಬೇಟೆಯಾಡುವುದೊ೦ದೇ ದೈನ೦ದಿನ ಕಾರ್ಯವಾಗಿತ್ತು ಮತ್ತು ಆ ಕಾರ್ಯದಿ೦ದ ಅವು ಬಹಳ ಸ೦ತೋಷವಾಗಿದ್ದವು. ಆದರೆ ಜೋನಾಥನ್ ಎನ್ನುವ ಒ೦ದು ಬೆಳ್ಳಕ್ಕಿಗೆ ಮಾತ್ರ ತನ್ನ ಜನಾ೦ಗದ ದೈನ೦ದಿನ ಜೀವನ ಶೈಲಿ ಬೇಸರ ತರಿಸುತ್ತಿತ್ತು.ಬರೀ ತಿನ್ನುವುದು,ಮೊಟ್ಟೆಯಿಡುವುದೇ ಜೀವನವಾ..?

ಇದರ ಹೊರತಾಗಿಯೂ ಸಾಧಿಸಲು ಬೇಕಾದಷ್ಟಿದೆ ಜೀವನದಲ್ಲಿ ಎ೦ದುಕೊಳ್ಳುತ್ತಿದ್ದ ಜೋನಾಥನ್ ಗೆ ಹಾರುವುದೆ೦ದರೇ ಪ೦ಚಪ್ರಾಣ. ತಾನು ಹದ್ದಿನ೦ತೇ,ಗರುಡ ಪಕ್ಷಿಯ೦ತೇ ಆಗಸದೆತ್ತರಕ್ಕೆ ಹಾರುವುದು ಸಾಧ್ಯವಿಲ್ಲವಾ? ಎ೦ದು ಜೋನಾಥನ್ ಯೋಚಿಸುತ್ತಿತ್ತು.ತನ್ನ ಸ್ನೇಹಿತರು ಮೀನು ಹಿಡಿಯುವ,ಮೀನು ತಿನ್ನುವ ಕಾರ್ಯದಲ್ಲಿ ನಿರತರಾಗಿದ್ದರೆ, ಜೋನಾಥನ್ ಮಾತ್ರ ಬೆಟ್ಟದ ಮೇಲಿನಿ೦ದ ಜಿಗಿದು ಹದ್ದಿನ೦ತೇ ಎತ್ತರಕ್ಕೆ ಹಾರುವ ಪ್ರಯತ್ನ ಮಾಡುತ್ತಿತ್ತು.ಆದರೆ ತೀರ ಭಾರದ,ವಿಶಾಲ ರೆಕ್ಕೆಗಳಿ೦ದಾಗಿ ಪ್ರತಿಬಾರಿಯೂ ಜೋನಾಥನ್ ಸ್ವಲ್ಪ ದೂರ ಹಾರುತ್ತಲೇ,ನಿಯ೦ತ್ರಣ ಕಳೆದುಕೊ೦ಡು ಮುಗ್ಗರಿಸಿ ಬಿಳುತ್ತಿತ್ತು. ಏನೇ ಆದರೂ ಹಾರುವುದಲ್ಲೇ ಅದು ಆನ೦ದವನ್ನು ಅನುಭವಿಸುತ್ತಿತ್ತು.ಅನ್ನ ನೀರುಗಳ ಪರಿವೆಯಿಲ್ಲದೇ,ಎತ್ತರದಿ೦ದ ಹಾರಾಡಲು ಪ್ರಯತ್ನಿಸುತ್ತ,ಹಾರುತ್ತ,ಬೀಳುತ್ತ ದಿನವಿಡಿ ಕಾಲಕಳೆಯುತ್ತಿತ್ತು. ಜೋನಾಥನ್ ಈ ವಿಚಿತ್ರ ನಡುವಳಿಕೆ ಅದರ ತ೦ದೆತಾಯ೦ದಿರಿಗೂ ಮುಜುಗರಕ್ಕೀಡು ಮಾಡಿತ್ತು.’ಬೆಳ್ಳಕ್ಕಿಯಾಗಿ ಹುಟ್ಟಿದ ಮೇಲೆ,ಮೀನು ತಿನ್ನುತ್ತ ಬದುಕುವುದೇ ನಮ್ಮ ಜೀವನದ ಪರಮೋದ್ದೇಶ, ಅಲ್ಲದೆ ಹಾರುವಾಗ ಮುಗ್ಗರಿಸಿ ಬೀಳುವುದು ನಮ್ಮ ಕುಲಕ್ಕೇ ಅವಮಾನಕರ, ನಮ್ಮಿ೦ದಾಗುವಷ್ಟು ಮಾತ್ರ ಹಾರಲು ಪ್ರಯತ್ನಿಸುವುದನ್ನು ಬಿಟ್ಟು ಇದೇನು ಹುಚ್ಚಾಟ ನಿ೦ದು’ ಎ೦ದು ಅದರ ತ೦ದೆ ಒ೦ದೆರಡು ಬಾರಿ ಅದನ್ನು ಗದರಿಸಿದ್ದೂ ಉ೦ಟು. ಆದರೆ ಜೋನಾಥನ್ ಗೆ ಗಿಡುಗನ೦ತೇ ಮೋಡಗಳಾಚೆಗೆ ಹಾರುವ ಆಸೆ.ನೂರಾರು ಮೈಲಿಗಳ ವೇಗದಲ್ಲಿ ತೇಲುವ ತವಕ.ಹಾಗಾಗಿ ತ೦ದೆಯ ಬಯ್ಗುಳಗಳನ್ನು ಹೆಚ್ಚು ಗ೦ಭೀರವಾಗಿ ತೆಗೆದುಕೊಳ್ಳದ ಈ ಪಕ್ಷಿ ತನ್ನ ಪ್ರಯತ್ನವನ್ನು ಮು೦ದುವರೆಸುತ್ತಲೇ ಇತ್ತು.

ಮತ್ತಷ್ಟು ಓದು »

4
ಏಪ್ರಿಲ್

ಜೋಶಿಯವರು ಕಂಡಂತೆ.. ಉಳಿದವರು ಕಂಡಂತೆ.. ಹೀಗಂತೆ…

-ಶ್ರೀವತ್ಸ ಜೋಶಿ

ಉಳಿದವರು ಕಂಡಂತೆಬೇಡಾ ನಂಬಬೇಡಾ… ಜೀವ ಹೋದರೂ ಕನ್ನಡ ಪತ್ರಿಕೆಗಳಲ್ಲಿನ ಚಿತ್ರವಿಮರ್ಶೆಗಳನ್ನು ನಂಬಬೇಡ.

‘ಉಳಿದವರು ಕಂಡಂತೆ’ ಬಗ್ಗೆ ಅವು ಬರೆದಿರೋ ವಿಮರ್ಶೆಯನ್ನಂತೂ ದೇವರಾಣೆಗೂ ನಂಬಬೇಡ.

ಅದರಲ್ಲೂ ಕಪ್ರ, ಪ್ರವಾ, ವಿಕ, ವಿವಾ ಗಳ ಪ್ರಲಾಪವನ್ನು ಕೇಳಲೇಬೇಡ. ಉದಯವಾಣಿಯಲ್ಲಿನ ವಿಮರ್ಶೆಯನ್ನು ಓದದೆ ಬಿಡಬೇಡ.

ಇದು, ಸದಭಿರುಚಿಯ ಕನ್ನಡ ಸಿನೆಮಾ ಪ್ರೇಕ್ಷಕನಿಗೆ ವಾಷಿಂಗ್ಟನ್ ಡಿಸಿಯಿಂದ ಒಬ್ಬ ಶ್ರೀ(ವತ್ಸ)ಸಾಮಾನ್ಯ ಕನ್ನಡಿಗನ ಕಿವಿಮಾತು.

ಭಾನುವಾರ (ಮಾರ್ಚ್ 30) ಬೆಳಿಗ್ಗೆ ಹತ್ತು ಗಂಟೆಗೆ ಇಲ್ಲಿನ AMC ಸಿನೆಮಾ ಕಾಂಪ್ಲೆಕ್ಸ್‌ನಲ್ಲಿ ’ಉಳಿದವರು ಕಂಡಂತೆ’ ಸಿನೆಮಾ ಪ್ರದರ್ಶನ ಇತ್ತು. ಅಮೆರಿಕದ ಇತರ ನಾಲ್ಕು ಕಡೆಗಳಲ್ಲಿ (ನ್ಯೂಜೆರ್ಸಿ, ಶಿಕಾಗೊ, ಡೆಟ್ರಾಯಿಟ್ ಮತ್ತು ಕ್ಯಾಲಿಫೋರ್ನಿಯಾ) ಸಹ ಈ ಚಿತ್ರ ಬಿಡುಗಡೆಯಾಯ್ತು. ಕನ್ನಡ ಚಲನಚಿತ್ರ ಪ್ರದರ್ಶನ ಇಲ್ಲಿ ಅಪರೂಪವೆಂದೇ ಹೇಳಬೇಕು, ಅದರಲ್ಲೂ ’ಉಳಿದವರು ಕಂಡಂತೆ’ಯಂಥ ವಿಭಿನ್ನ ವಿಶಿಷ್ಟ, “ಈರೀತಿಯದು ಕನ್ನಡದಲ್ಲಿ ಇದೇ ಮೊದಲು” ಎನ್ನಲಾದ ಚಿತ್ರ, ಅಲ್ಲಿ ಕರ್ನಾಟಕದಲ್ಲಿ ಬಿಡುಗಡೆಯಾದಾಗಲೇ ಇಲ್ಲೂ ಪ್ರದರ್ಶನ ಕಾಣುತ್ತಿರುವುದು ನಮಗೆಲ್ಲ ಸಂತೋಷದ, ಹೆಮ್ಮೆಯ ವಿಚಾರ. ವಾಷಿಂಗ್ಟನ್ ಡಿಸಿಯಲ್ಲಿನ ಚಿತ್ರಮಂದಿರ ಹೆಚ್ಚೂಕಡಿಮೆ ಭರ್ತಿಯಾಗಿತ್ತು, ಇತ್ತೀಚೆಗೆ ಇಲ್ಲಿಗೆ ಬಂದ ನವಯುವಕರು, ಐಟಿಹುಡುಗರು ತುಂಬಿಕೊಂಡಿದ್ರು. ನಾವೆಲ್ಲ ಚಿತ್ರವನ್ನು ತುಂಬ ಇಷ್ಟಪಟ್ಟೆವು.

’ಉಳಿದವರು ಕಂಡಂತೆ’ ಚಿತ್ರದ ವಿಮರ್ಶೆ ಕನ್ನಡದ ಪ್ರಮುಖ ದಿನಪತ್ರಿಕೆಗಳ ಶನಿವಾರದ ಸಂಚಿಕೆಗಳಲ್ಲಿ ಪ್ರಕಟವಾಗಿದ್ದನ್ನು ನಾನು ಗಮನಿಸಿದ್ದೆ, ಓದಿದ್ದೆ. ಅದೇನೂ ನನ್ನ ಮೇಲೆ ಪ್ರಭಾವ ಬೀರಿತ್ತು ಅಂತಲ್ಲ. ಆದರೆ ನಾನೇ ಸಿನೆಮಾ ನೋಡಿ ಬಂದಮೇಲೆ ಆ ವಿಮರ್ಶೆಗಳು (ಒಂದನ್ನು ಹೊರತುಪಡಿಸಿ) ಎಂಥ ಪ್ರಮಾಣದಲ್ಲಿ ದಾರಿತಪ್ಪಿಸುವಂಥವಾಗಿವೆ, ವಾಸ್ತವಕ್ಕೆ ಅದೆಷ್ಟು ದೂರವಾಗಿವೆ ಎಂದು ಅರಿತು ಆಘಾತವಾಯಿತು. ’ಉಳಿದವರು ಕಂಡಂತೆ’ಯಂಥ ಒಂದು ಉತ್ತಮ ಪ್ರಯತ್ನ/ಪ್ರಯೋಗದ ಉನ್ನತ ಮಟ್ಟದ ಮೌಲ್ಯವನ್ನು ಅರಿಯಲಾರದೆ “ದ್ರಾಕ್ಷಿ ಹುಳಿಯಾಗಿದೆ” ಎಂದು ಮುಖ ಸಿಂಡರಿಸಿ ಓಡಿದ ನರಿಯನ್ನು ಅವು ನನಗೆ ನೆನಪಿಸಿದವು.

ಮತ್ತಷ್ಟು ಓದು »

4
ಏಪ್ರಿಲ್

“ಉಳಿದವರು ಕಂಡಂತೆ” – ಅವರಿವರು ಕಂಡಂತೆ

– ವಸಂತ ಗಿಳಿಯಾರ್ ಕಂಡಂತೆ

ಉಳಿದವರು ಕಂಡಂತೆ ಅವರಿವರು ಕಂಡಂತೆ “ಉಳಿದವರು ಕಂಡಂತೆ” ಚಿತ್ರ ಹೇಗಿದೆಯೋ ಎಂಬುದರ ಬಗ್ಗೆ ನಾನು ಮಂಡೆಕೆಡಿಸಿಕೊಳ್ಳಲಾರೆ.. ತಾಂತ್ರಿಕವಾಗಿ ಮೊದಲ ನಿರ್ದೇಶನದಲ್ಲೆ ಗೆದ್ದಿದ್ದಾರೆ ರಕ್ಷಿತ್ ಎಂದು ನೇರವಾಗಿ ಮಾರ್ಕ್ ಕೊಡುತ್ತಿದ್ದೇನೆ. ಮಿಕ್ಕುಳಿದಂತೆ ಭಾಷೆ ಅರ್ಥವಾಗುವುದಿಲ್ಲ ಎಂದು ಮಗುಮ್ಮಾಗಿ ದೂರುವವರಿಗೆ ನಾನು ಕೇಳುವುದು ಇಷ್ಟನ್ನೆ ಒಂದು ಚೂರೂ ಅರ್ಥವಾಗದಿದ್ದರೂ ಕೆಲವರು english,ತಮಿಳು,ತೆಲುಗು ಚಿತ್ರವನ್ನ ನೋಡುವುದಿಲ್ಲವೇ? ಇದು ನಮ್ಮದೇ ರಾಜ್ಯದ ಒಂದು ಪ್ರದೇಶದ ವಿಶಿಷ್ಟವಾದಂತ ಚಂದದ ಕುಂದಗನ್ನಡವೆಂಬ ಭಾಷೆ. ಅರ್ಥವಾಗದಿದ್ದರೂ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿ.. ನಿಮ್ಮ ಪ್ರಯತ್ನ ವ್ಯರ್ಥವಾಗದು..ಯಾಕೆಂದರೇ ನಮ್ಮದೇ ರಾಜ್ಯದಲ್ಲಿ ಕನ್ನಡ ಭಾಷೆ ಯಾವ ಯಾವ ರೀತಿಯಲ್ಲಿದೆ ಎಂಬುದು ನಿಮ್ಮ ಗ್ರಹಿಕೆಗೆ ನಿಲುಕುತ್ತದೆ.. “ಉಳಿದವರು ಕಂಡಂತೆ” ಚಿತ್ರ ನನಗೆ ನನ್ನ ಬಾಲ್ಯದ ಬದುಕನ್ನ ನೆನಪಿಸಿತು.. ರಿಚ್ಚಿ ಪಾತ್ರವನ್ನ ಕಂಡು ನನಗೆ ನನ್ನ ಬಾಲ್ಯದ ಗೆಳೆಯ ಹಂದಾಡಿಯ ರಾಬರ್ಟ್ ನೆನಪಾದ. ಡೆಮಕ್ರಶಿ ನನ್ನ ಬಾಲ್ಯದ ಅವತಾರದ ಚಿತ್ರಣವೆಂದೆನಿಸಿತು..

“ಪೇಪರ್ ಪೇಪರ್ ಮೆಡಿಸಿನ್ ಪೇಪರ್” ಎಂಬ ಹಾಡು ಬಾಲ್ಯದಲ್ಲಿ ದನಕಾಯುವಾಗ ನಮ್ಮ ಗುಂಪಿನಲ್ಲಿ ನಾವು ಹಾಡಿಕೊಳ್ಳುತ್ತಿದ್ದ ಚಲನಚಿತ್ರ ಗೀತೆಯ ನೆನಪು ತಂದರೆ ವಿಟ್ಲಪಿಂಡಿಯ ಹುಲಿವೇಶ ಕಣ್ಣ ಮುಂದೆ ಹಾದು ಹೋದಂತಾಯಿತು.. ಊರಿಗೆ ಕೇವಲ ೪೦೦ ಕಿಲೋಮೀಟರ್ ದೂರದಲ್ಲಿರುವ ನನಗಿಂತ ಸಾವಿರಾರು ಕಿಲೋಮೀಟರ್ ದೂರದಲ್ಲಿರುವವರಿಗೆ ಅಥವ ಊರಿನಿಂದ ದೂರವೆ ಉಳಿದವರಿಗೆ ಇದು ಮತ್ತಷ್ಟು ಆಪ್ತವಾಗಿ ಕಾಣಿಸ ಬಹುದು. ಕಥೆಯೆ ಬಗ್ಗೆ ನಾನು ಹೆಚ್ಚು ತಲೆಕೆಡಿಸಿ ಕೊಳ್ಳಲಿಲ್ಲ ಘಟಿಸುವ ಘಟನೆಗಳು ಒಂದನ್ನೊಂದು ಬೆನ್ನತ್ತುವ ರೀತಿ ಸೊಗಸಾಗಿದ. ಚಿತ್ರ ಮುಗಿಸಿ ಹೊರಬಂದ ಮೇಲೆ ನನ್ನೊಳಗೆ ಕಥೆ ಆರಂಭವಾಗಲು ಆರಂಬಿಸಿತು.. ಒಂದೊಂದು ಪಾತ್ರದಲ್ಲು ಒಂದೊಂದು ಕಥೆ ಅರಳ ತೊಡಗಿತು. ಚಿತ್ರ ಒಳಗೊಂಡ ಸಂಗೀತ ಸಾಹಿತ್ಯ ನವಿರು ಭಾವದ ಅಲರು ಕಂಪನವನ್ನ ಹುಟ್ಟಿಸುತ್ತದೆ..” ಮಳೆ ಮರೆತು ಹಸಿರಾಗಿ ನಿಂತಾಗ ಈ ಭೂಮಿ ..ಸಲಹೇನೆ ಕೊಡಬೇಡ ದೇವರೆ ನೀನಿಲ್ಲಿ ಹಂಗಾಮಿ.. ಹಾಡು ಗುಂಗಿನಂತೆ ಕಾಡುತಿದೆ.. ಹೌದು ಉಳಿದವರು ಕಂಡಂತೆ ಒಂದು ಉತ್ತಮವಾದ ಚಿತ್ರ.. ಕನ್ನಡಕ್ಕೊಂದು ಪ್ರಯೋಗಾತ್ಮಕ ಚಿತ್ರ ಎಂದು ಹೇಳಬಲ್ಲೆ.. ರಕ್ಷಿತ್ ಮತ್ತು ತಂಡಕ್ಕೆ ನನ್ನದೂಂದು ಅಭಿನಂದನೆ…

*** *** *** ಮತ್ತಷ್ಟು ಓದು »

3
ಏಪ್ರಿಲ್

ನಾಡು- ನುಡಿ: ಮರುಚಿಂತನೆ- ಪ್ರಜಾಪ್ರಭುತ್ವ ಹಾಗೂ ಪ್ರತಿನಿಧಿಗಳು- ಭಾಗ:೧

-ಶ್ರೀ. ಆಯನೂರು ಮಂಜುನಾಥ್, ರಾಜ್ಯಸಭಾ ಸದಸ್ಯರು (-ಅಕ್ಷರಕ್ಕೆ ಇಳಿಸಿದವರು: ಸಂತೋಷ ಈ. ಕುವೆಂಪು.ವಿ.ವಿ, ಶಂಕರಘಟ್ಟ)

Social Science Column Logo

ರಾಜಕಾರಣಿಗಳಾದ ನಾವು ಒಂದು ತರಹ ವಿಚಿತ್ರವಾದ ಪರಿಸ್ಥಿತಿಯಲ್ಲಿ ಇದ್ದೇವೆ. ಹೊರಜಗತ್ತಿನಲ್ಲಿ ನಾವು ಬರುತ್ತಿರವಾಗ ನಮಸ್ಕಾರ ಎನ್ನುತ್ತಾರೆ. ನಾವು ದಾಟಿದ ಮೇಲೆ ನಮ್ಮನ್ನು ಬಯ್ಯುತ್ತಾರೆ. ನನ್ನಿಂದ ಅವನಿಗೆ ಏನೋ ಆಗಬೇಕು ಆದ್ದರಿಂದ ಅವನು ನಮಗೆ ಬಹಳ ಗೌರವ ಕೊಡುತ್ತಾನೆ. ಇಲ್ಲವಾದರೆ ನಮಗೆ ಗೌರವ ಕೊಡುವುದಿಲ್ಲ. ಇಂದು ಸಮಾಜದಲ್ಲಿ ನಮ್ಮ ಬಗ್ಗೆ ಗೌರವಗಳು, ಪ್ರೀತಿಗಳು ಪ್ರಾಮಾಣಿಕವಾಗಿ ಪ್ರಕಟವೆ ಆಗುತ್ತಿಲ್ಲ. ಜನರಿಗೆ ನಮ್ಮ ವಿರುದ್ಧವಾದ ಭಾವನೆಗಳು ಇದ್ದಲ್ಲಿ ಅ ಭಾವನೆಗಳನ್ನು ನಮ್ಮ ವಿರುದ್ಧ ವ್ಯಕ್ತಪಡಿಸಿದರೆ ನಾವು ನಮ್ಮ ತಪ್ಪನ್ನು ತಿದ್ದುಕೊಳ್ಳವುದಕ್ಕೆ, ಅದನ್ನು ಸರಿಪಡಿಸಿಕೊಳ್ಳವುದಕ್ಕೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬಹುದು. ಅಥವಾ ನಾವು ಒಳ್ಳೆಯ ಕೆಲಸ ಮಾಡಿದಾಗ ಅದನ್ನು ನೇರವಾಗಿ ಹೇಳಿದರೆ ಮತ್ತಷ್ಟು ಪುಷ್ಟಿಕರಿಸಿಕೊಂಡು ಬೆಳೆಸಬಹುದು. ಆದರೆ ಸಮಾಜವೇ ಹೈ ಡಿಗ್ರಿಯ ಹಿಪೋಕ್ರಟಿಕ್ ಪರಿಸರದಲ್ಲಿ ಬದುಕುತ್ತಿದೆ. ಜನರು ತಮಗೆ ನೇರವಾಗಿ ಅನ್ನಿಸಿದ್ದನ್ನು ಹೇಳುತ್ತಿಲ್ಲ. ಹಿಪೋಕ್ರಟಿಕ್ ಜನರ ಮಧ್ಯೆ ಬೆಳದು ಬರುವ ನನ್ನಂತ ರಾಜಕಾರಣಿ ಇನ್ನೂ ಎಷ್ಟು ಹಿಪ್ರೋಕ್ರಟಿಕ್ ಆಗಿರಬಹುದು ನೀವೆ ಯೋಚನೆ ಮಾಡಿ.

ಈ ಜನರ ಮಧ್ಯೆಯೇ ರಾಜಕಾರಣಿಗಳಾದ, ನಾವು ಇರಬೇಕು. ವಿದ್ಯಾವಂತ ಅವಿದ್ಯಾವಂತರ ಮಧ್ಯೆ, ಜಾತಿ ಪ್ರೇಮಿಗಳ ಮಧ್ಯೆ, ಜಾತಿ ಮೀರದವರ ಮಧ್ಯೆ, ನಾನು ಅನ್ನುವವರ ಮಧ್ಯೆ, ಊರು ಅನ್ನುವವರ ಮಧ್ಯೆ, ಅನ್ಯಾಯವನ್ನ ಮಾಡುವವರ ಮಧ್ಯೆ, ಅನ್ಯಾಯವನ್ನು ವಿರೋಧಿಸುವವರ ಮಧ್ಯೆ, ಈ ರೀತಿಯ ವ್ಯವಸ್ಥೆಯ ಮಧ್ಯೆ ಜನಪ್ರತಿನಿಧಿ ಬೆಳೆದುಬರಬೇಕಾದರೆ, ಭವಿಷ್ಯ ನಮ್ಮ ಕಷ್ಟ ಅ ದೇವರಿಗೆ ಪ್ರೀತಿ. ಇತ್ತೀಚೆಗೆ ಬಹಳ ಸುಲಭವಾಗಿದೆ. ಸಮಾಜ ಹೇಗೆ ಭ್ರಷ್ಟವಾಗುತ್ತದೆಯೋ ಅದರ ಮಧ್ಯೆ ಅದೇ ರೀತಿಯ ಪ್ರತಿನಿಧಿಯು ಹುಟ್ಟಿಬರುತ್ತಿದ್ದಾನೆ. ಮತ್ತಷ್ಟು ಓದು »

2
ಏಪ್ರಿಲ್

ಚಿದಂಬರಂ ಪಿಳ್ಳೆ

– ನವೀನ್ ನಾಯಕ್

ಚಿದಂಬರಂ ಪಿಳ್ಳೆಭರತಖಂಡದ ಒಂದೊಂದೆ ಭಾಗಗಳನ್ನು ತಮ್ಮ ಕುತಂತ್ರದಿಂದ ಕಬಳಿಸಿದ ಬ್ರಿಟೀಶರು ಎಲ್ಲೆಲ್ಲೂ ತಮ್ಮ ಧಾರ್ಷ್ಟ್ಯವನ್ನು ತೋರತೊಡಗಿದರು. ನಮ್ಮ ಸಂಸ್ಕೃತಿಯನ್ನು ಒಂದೆಡೆ ಹೀಯಾಳಿಸುತ್ತ ಇನ್ನೊಂದೆಡೆ ಮತಾಂತರಿಸುತ್ತ ತಮ್ಮ ಸಾಮ್ರಾಜ್ಯವನ್ನು ಶಾಶ್ವತಗೊಳಿಸಲು ಸರ್ವಪ್ರಯತ್ನವನ್ನು ಮಾಡುತ್ತಲೇ ಇದ್ದರು. ತೆರಿಗೆ ಪದ್ದತಿಯ ವಿರೂಪದಿಂದ ಲಕ್ಷಾಂತರ ನೇಕಾರರು , ಕಾರ್ಮಿಕರು ಬೀದಿಗೆ ಬಿದ್ದರು.ದೇಶಿಯ ಮಾರುಕಟ್ಟೆಯನ್ನು ತಮ್ಮ ಕೈವಶ ಮಾಡಿಕೊಂಡು ಅನಾವಶ್ಯಕ ತೆರಿಗೆಗಳನ್ನು ಹೇರಿ ಸಾಮಾನ್ಯ ಜನರು ತತ್ತರಿಸುವಂತೆ ಮಾಡತೊಡಗಿದರು. ಸಮುದ್ರ ಪಯಣಗಳಿಗೂ ಇದರ ಬಿಸಿ ತಟ್ಟಿತ್ತು. ಆ ದಿನಗಳಲ್ಲಿ ಕೊಲೊಂಬೊ ಹಾಗು ತೂತ್ತುಕುಡಿಯ ನಡುವಿನ ಹಡಗು ಪಯಣದ ಸಂಪೂರ್ಣ ಅಧಿಕಾರ ಬ್ರಿಟೀಶರ ಕೈಯಲ್ಲಿತ್ತು. ಬ್ರಿಟೀಶ್ ಇಂಡಿಯಾ ಸ್ಟೀಮ್ ನ್ಯಾವಿಗೇಶನ್ ಕಂಪನಿ ಎಂಬ ಈ ಸಂಸ್ಥೆ ತಮಗಿಷ್ಟ ಬಂದಂತೆ ಪ್ರಯಾಣ ವೆಚ್ಚವನ್ನು ಏರಿಸತೊಡಗಿದರು. ಇವರ ದುರಹಂಕಾರಕ್ಕೆ ಸೆಡ್ಡು ಹೊಡೆಯಲು ಲೆಕ್ಕಚಾರ ಹಾಕಿ ಕುಳಿತವರೇ ಚಿದಂಬರಂ ಪಿಳ್ಳೆ.

ತಮಿಳುನಾಡಿನ ಓಟ್ಟಪ್ಪಿದಪುರಂನಲ್ಲಿ ಉಳಗನಾಥಂ ಮತ್ತು ಪರಮಾಯಿ ಅಮ್ಮಾಳ್ ದಂಪತಿಗೆ ಸೆಪ್ಟಂಬರ್ 5 1827 ರಲ್ಲಿ  ಚಿದಂಬರಂ ಪಿಳ್ಳೆಯವರು ಜನಿಸಿದರು. ತನ್ನ ಹದಿಮೂರನೇ ವಯಸ್ಸಿನವರೆಗೆ ಜನ್ಮಸ್ಥಳದಲ್ಲೇ ಕಳೆದ ಚಿದಂಬರಂರವರು ಮುಂದಿನ ವಿದ್ಯಾಭ್ಯಾಸಕ್ಕಾಗಿ ತೂತ್ತುಕುಡಿ ಎಂಬಲ್ಲಿಗೆ ಬಂದರು. ತಮ್ಮ ವಿದ್ಯಾಭ್ಯಾಸ ಮಾಡುತ್ತ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಿಕೊಂಡರು. ತದನಂತರ ಕೆಲಕಾಲ ತಾಲ್ಲೂಕು ಕಛೇರಿಯಲ್ಲಿ ಗುಮಾಸ್ತನಾಗಿ ದುಡಿದರು. ಈ ಕೆಲಸ ಚಿದಂಬರಂರವರಿಗೆ ತೃಪ್ತಿಯನ್ನು ತಂದು ಕೊಡುವಲ್ಲಿ ವಿಫಲವಾಯಿತು. ಚಿದಂಬರಂರವರ ವಂಶದ ಹಿರಿತಲೆಗಳು ವಕೀಲಿ ವೃತ್ತಿಯಲ್ಲಿ ನಿಷ್ಣಾತರಾಗಿದ್ದರು.  ಇದೇ ಪ್ರಭಾವವನ್ನು ಬಳಸಿಕೊಂಡು ಅನ್ಯಾಯವಾಗಿ ಪೋಲಿಸ್ ಇಲಾಕೆಯ ಕಪಿಮುಷ್ಟಿಯಲ್ಲಿ ಸಿಲುಕಿದ ನಿರಪರಾಧಿಗಳ ಪರವಾಗಿ ವಾದಿಸಲು ವಕೀಲಿ ಅಭ್ಯಸಿಸಿ ತಿರುಚ್ಚಿಯ ಸಬ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಿದರು. ಎಷ್ಟೋ ಬಾರಿ ನಿರಪರಾಧಿಗಳ ಪರವಾಗಿ ನಿಃಶುಲ್ಕವಾಗಿ ಮೊಕದ್ದಮೆ ನಡೆಸಿಕೊಟ್ಟು ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದರು. ಚಿದಂಬರಂರವರ ಈ ಕೆಲಸದಿಂದ ಬ್ರಿಟೀಶರು,ಪೋಲಿಸ್ ಅಧಿಕಾರಿಗಳ ದ್ವೇಷಕ್ಕೆ ಒಳಗಾಗತೊಡಗಿದರು.

ಆಧ್ಯಾತ್ಮ ಮತ್ತು ಶಿವನ ಕುರಿತು ಅಪಾರ ಶ್ರದ್ದೆಯನ್ನು ಚಿದಂಬರಂ ಬೆಳೆಸಿಕೊಂಡಿದ್ದರು.ತಮಿಳು ಸಾಹಿತ್ಯವನ್ನು ಓದಿ ಅದ್ಭುತ ಜ್ಞಾನವನ್ನು ಮೈಗೂಡಿಸಿಕೊಂಡಿದ್ದರಲ್ಲದೇ ಯೋಗ್ಯ ಗುರುಗಳ ಮತ್ತು ಸಾಧುಗಳ ಸಂಪರ್ಕವನ್ನು ಸಹ ಬೆಳೆಸಿಕೊಂಡಿದ್ದರು. ಜೊತೆಗೆ ರಾಷ್ಟ್ರೀಯ ವಿಚಾರಗಳಲ್ಲಿ ಅತೀವ ಆಸಕ್ತಿಯನ್ನು ಹೊಂದಿದ್ದರು. 1898 ಡಿಸೆಂಬರ್  ಸಮಯದಲ್ಲಿ ಮದ್ರಾಸಿನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಮತ್ತು ಕೋಶಾಧಿಕಾರಿಯ ಹೊಣೆಯನ್ನು ಹೊತ್ತಿಕೊಂಡಿದ್ದರು. ಆ ಮಹಾಧಿವೇಶನದಲ್ಲಿ ಭಾಗವಹಿಸಿದ ಒಟ್ಟು 614 ಪ್ರತಿನಿಧಿಗಳಲ್ಲಿ 519ಜನ ತಮಿಳುನಾಡಿನಿಂದಲೇ ಬಂದಿದ್ದರು. ಅಷ್ಟು ಜನರನ್ನು ಅಧಿವೇಶನಕ್ಕಾಗಿ ಕಲೆಹಾಕಿದ್ದ ಶ್ರೇಯಸ್ಸು ಚಿದಂಬರಂರವರದೇ !
ಮತ್ತಷ್ಟು ಓದು »

1
ಏಪ್ರಿಲ್

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬

– ಮು. ಅ. ಶ್ರೀರಂಗ ಬೆಂಗಳೂರು

SL Bhairappa Vimarshe - Nilumeಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫

 

‘ಆವರಣ ‘ ಎಂಬ ವಿ-ಕೃತಿ  –  ಸಂಗ್ರಹ : ಗೌರಿ ಲಂಕೇಶ್

ಗೌರಿ ಲಂಕೇಶ್ ಅವರು ಸಂಗ್ರಹಿಸಿರುವ ‘ಆವರಣ’ ಎಂಬ ವಿಕೃತಿ’ (ಲಂಕೇಶ್ ಪ್ರಕಾಶನ ಬೆಂಗಳೂರು–೪, ೨೦೦೭) ವಿಮರ್ಶಾ ಸಂಕಲನದಲ್ಲಿ ಯು ಅರ್ ಅನಂತಮೂರ್ತಿ, ಕೆ ಮರುಳಸಿದ್ದಪ್ಪ, ರಹಮತ್ ತರೀಕೆರೆ, ಜಿ ರಾಜಶೇಖರ್, ಜಿ ಕೆ ಗೋವಿಂದರಾವ್, ಕೆ. ಫಣಿರಾಜ್ ಮುಂತಾದ ಪ್ರಸಿದ್ಧ ಲೇಖಕರು,ವಿಮರ್ಶಕರು ಹಾಗು ಚಿಂತಕರ ಲೇಖನಗಳಿವೆ. ‘ಆವರಣ’ದಲ್ಲಿ ಚಿತ್ರಿತಗೊಂಡಿರುವ ಚರಿತ್ರೆಯ ಅಂಶಗಳು ಎಷ್ಟರಮಟ್ಟಿಗೆ ನಂಬಲರ್ಹ/ಅದಷ್ಟೇ ನಿಜವೇ ಬೇರೆ ಮುಖಗಳು ಇಲ್ಲವೇ ಎಂಬುದರ ಜತೆಗೆ ಕಾದಂಬರಿಯ ತಾತ್ವಿಕತೆ, ರೂಪ,ವಿನ್ಯಾಸಗಳ ಬಗ್ಗೆ ಇಲ್ಲಿನ ಲೇಖನಗಳಲ್ಲಿ ಒತ್ತು ಜಾಸ್ತಿ. ಹಿಂದೆ ಏನೇನೋ ನಡೆದುಹೋಗಿದೆ;ಅದನ್ನೆಲ್ಲಾ ಮತ್ತೆ ಕೆದಕುವುದ್ಯಾಕೆ ಎಂಬ ಮಾತೂ ಆಗೀಗ ಬರುತ್ತದೆ. ಹೀಗಾಗಿ ಈ ವಿಮರ್ಶಾ ಸಂಕಲನದ ಲೇಖನಗಳನ್ನು ಸ್ವಲ್ಪ ವಿವರವಾಗಿ ಚರ್ಚಿಸಬೇಕಾಗಿದೆ.

ಮತ್ತಷ್ಟು ಓದು »

30
ಮಾರ್ಚ್

ಕೃತಘ್ನ ಜಸ್ವಂತ್ ಸಿಂಗ್?

– ನರೇಂದ್ರ ಕುಮಾರ್

ಜಸ್ವಂತ್ ಸಿಂಗ್ಚುನಾವಣೆ ಘೋಷಣೆಯಾದಂತೆ ರಾಜಕಾರಣಿಗಳ ಬಣ್ಣ ಬಯಲಾಗಲು ಆರಂಭಿಸುತ್ತದೆ. ಚುನಾವಣೆಗೆ ಮುನ್ನ ಸಿದ್ಧಾಂತದ ಕುರಿತು ಮಾತನಾಡುವ ರಾಜಕಾರಣಿಗಳಿಗೆ, ಸಿದ್ಧಾಂತವೆನ್ನುವುದು ಕೇವಲ ರಾಜಕೀಯ ಪಕ್ಷದಲ್ಲುಳಿಯಲು ಇರುವ ಸಾಧನವಷ್ಟೇ ಎನ್ನುವುದು ಚುನಾವಣೆಯ ಸಮಯದಲ್ಲಿ ಸಾಬೀತಾಗುತ್ತದೆ. ಪ್ರತಿ ಚುನಾವಣೆಯ ಸಮಯದಲ್ಲೂ ಬಹಿರಂಗಗೊಳ್ಳುವ ಸಂಗತಿಯಿದು. ಇದೀಗ ಈ ರೀತಿ ಮುಖವಾಡ ಕಳಚಿ ನೈಜತೆ ಗೋಚರಿಸಿರುವುದು ಜಸ್ವಂತ್ ಸಿಂಗ್ ಅವರ ವಿಷಯದಲ್ಲಿ!

ಜಸ್ವಂತ್ ಸಿಂಗ್ ಕಳೆದ ಹಲವು ದಶಕಗಳಿಂದ ಭಾಜಪದೊಂದಿಗೆ ಜೋಡಿಸಿಕೊಂಡಿದ್ದಾರೆ. ಅವರು ತಮ್ಮನ್ನು ಭಾಜಪದೊಂದಿಗೆ ಜೋಡಿಸಿಕೊಂಡಿದ್ದಾರೆ ಎನ್ನುವುದಕ್ಕಿಂತ, ಭಾಜಪ ಪಕ್ಷವೇ ಅವರನ್ನು ತನ್ನೊಡನೆ ಸೇರಿಸಿಕೊಂಡಿದೆ ಎಂದು ಹೇಳಿದರೆ ಸರಿಯಾದೀತು. ಜಸ್ವಂತ್ ಸಿಂಗ್ ಎಂದೂ ಜನನಾಯಕರಾಗಿರಲಿಲ್ಲ. ಹೀಗಿದ್ದಾಗ್ಯೂ ಭಾಜಪ ಅವರಿಗೆ ತನ್ನ ಪಕ್ಷದಲ್ಲಿ ಸ್ಥಾನ ನೀಡಿತ್ತು. ವಾಜಪೇಯಿ ಸರಕಾರದಲ್ಲಿ ಅವರು ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನೂ ಪಡೆದರು. ಮುಂದೆ ಅವರ ಮಗನಿಗೂ ಭಾಜಪದಲ್ಲಿ ಸ್ಥಾನ ಸಿಕ್ಕಿತು ಮತ್ತು ವಿಧಾನಸಭೆಯಲ್ಲಿ ಶಾಸಕರಾದರು.

ಜಸ್ವಂತ್ ಸಿಂಗ್ ಅವರಿಗೆ ಒಂಬತ್ತು ಬಾರಿ ಸಂಸದರಾಗಲು ಭಾಜಪ ಅವಕಾಶ ನೀಡಿತು. 1989ರಲ್ಲಿ ಜೋಧಪುರ್ ಮತ್ತು 1991 ಹಾಗೂ 1996ರಲ್ಲಿ ಚಿತ್ತೋರಘರ್ ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿದರು. ಆದರೆ ಮುಂದಿನ ಚುನಾವಣೆಯಲ್ಲಿ, ಅಂದರೆ 1998ರಲ್ಲಿ ಅವರು ಚುನಾವಣೆಯಲ್ಲಿ ಸೋಲಬೇಕಾಯಿತು. ಹೀಗಿದ್ದಾಗ್ಯೂ ಅವರನ್ನು ರಾಜ್ಯಸಭೆಯ ಮೂಲಕ ಪ್ರವೇಶ ಮಾಡಿಸಿ, ಅವರನ್ನು ವಾಜಪೇಯೀ ಮಂತ್ರಿಮಂಡಲದಲ್ಲಿ ವಿದೇಶಾಂಗ ಮಂತ್ರಿಯನ್ನಾಗಿ ಮಾಡಲಾಯಿತು. ಮುಂದೆ 2002ರಲ್ಲಿ ಅವರು ವಿತ್ತಸಚಿವರಾಗಿ ಎರಡು ಬಾರಿ ಬಜೆಟ್ ಮಂಡಿಸುವ ಅವಕಾಶವನ್ನೂ ಪಡೆದರು. 2004ರಲ್ಲಿ ರಾಜ್ಯಸಭೆಗೆ ಪುನರ್ನಾಮಕರಣಗೊಂಡ ಜಸ್ವಂತ್ ಸಿಂಗ್ ಅವರು, 2009ರಲ್ಲಿ ಲೋಕಸಭಾ ಚುನಾವಣೆಗೆ ಡಾರ್ಜಿಲಿಂಗ್ ಇಂದ ಸ್ಪರ್ಧಿಸಿದರು. ಆ ಚುನಾವಣೆಯಲ್ಲಿ ಭಾಜಪಾವು ಗೋರ್ಖಾ ಜನಮುಕ್ತಿ ಮೋರ್ಚಾದೊಡನೆ ಹೊಂದಾಣಿಕೆ ಮಾಡಿಕೊಂಡದ್ದರಿಂದಾಗಿ ಜಸ್ವಂತ್ ಸಿಂಗ್ ಚುನಾವಣೆಯಲ್ಲಿ ಗೆದ್ದರು. 2012ರಲ್ಲಿ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಭಾಜಪಾವು ಚುನಾವಣೆಯಲ್ಲಿ ನಿಲ್ಲಿಸಿತ್ತು. ಆದರೆ, ಭಾಜಪಕ್ಕೆ ಆವಶ್ಯಕ ಬಹುಮತ ಇಲ್ಲದ್ದರಿಂದ ಜಸ್ವಂತ್ ಸಿಂಗ್ ಆ ಚುನಾವಣೆಯಲ್ಲಿ ಗೆಲ್ಲಲಿಲ್ಲ; ಹಮೀದ್ ಅನ್ಸಾರಿಯವರು ಉಪರಾಷ್ಟ್ರಪತಿಯಾದರು.

ಮತ್ತಷ್ಟು ಓದು »

29
ಮಾರ್ಚ್

ಪೋಲಿಸ್ ಸಿಬ್ಬಂದಿ ಮತ್ತು ಚುನಾವಣೆಗಳ ನಡುವೆ

– ಬೆಳ್ಳಿ

ಪೋಲಿಸ್ ಸಮಸ್ಯೆಗಳುಈಗ ಎಲ್ಲೆಲ್ಲೂ ಚುನಾವಣೆಯ ಅಬ್ಬರ.ಹಳ್ಳಿ ಹಳ್ಳಿ ಗಲ್ಲಿ ಗಲ್ಲಿಗಳಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ.ಎಲ್ಲರೂ ತಮ್ಮ ಪಾಡಿಗೆ ತಾವು ಹಾಯಾಗಿ ಜೀವನ ಸಾಗಿಸುತ್ತಿದ್ದರೆ,ಕಾನೂನು ಮತ್ತು ಸುವ್ಯವಸ್ಧೆಯ ಅಡಿಯಲ್ಲಿ ಬರುವ ಪೋಲಿಸ್ ವ್ಯವಸ್ಧೆ ಯಾವ ರೀತಿಯಾಗಿ ಅವರಿಗೆ ಒತ್ತಡಗಳಿದ್ರೂ ಕೆಲಸ ಮಾಡುತ್ತದೆಂದು ಯಾರಿಗೂ ಗೊತ್ತಿಲ್ಲ.ಅವರು ನಾಮಪತ್ರ ಸಲ್ಲಿಸುವುದರಿಂದ ಹಿಡಿದು ಚುನಾವಣೆಯ ಫಲಿತಾಂಶ ಬರುವವರೆಗೂ ಸತತವಾಗಿ ಎರಡು ತಿಂಗಳುಗಳ ಕಾಲ ಹಗಲಿರುಳೆನ್ನದೆ ದುಡಿಯುತ್ತಾರೆ.ಚುನಾವಣೆ ಸಮೀಪ ಬಂತೆಂದರೆ ಸಾಕು ಯಾರು ಒಂದು ತಿಂಗಳು ಕಾಲ ರಜೆ ಕೇಳಬಾರದೆಂಬ ಆದೇಶ ಹೊರಡಿಸಿಬಿಟ್ಟಿರುತ್ತಾರೆ.ಮನೆಯಲ್ಲಿ ಯಾರಾದರೂ ತೀರಿಕೊಂಡರೆ ಮಾತ್ರ ರಜೆ ಕೇಳಬೇಕು.ಅದೂ ಸಹ ಎಸ್.ಪಿ.ಸರ್ ಅಪ್ಪಣೆ ನೀಡಬೇಕು.

ಇದು ಹಿಂಗಾದರೆ,ಚುನಾವಣೆಯ ಕಾಲಕ್ಕೆ ಯಾವುದೋ ಹಳ್ಳಿಗೆ ಕರ್ತವ್ಯ ಬಂದಿರುತ್ತೆ.ನಮಗೆ ಮೈಯಲ್ಲಿ ಆರಾಮ ಇಲ್ಲದಿದ್ರೂ,ಅಥವಾ ಮನೆಯಲ್ಲಿ ಗಂಡ,ಅತ್ತೆ,ಮಾವ,ಮಕ್ಕಳಗೆ,ಹೆಂಡತಿಗೆ ಮೈಯಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿ ಸೇರಿದ್ರೂ ಎಲ್ಲ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು.ಮನೆಯ ಕಡೆ ವಿಷಯ ತಿಳಿದುಕೊಳ್ಳೋಣವೆಂದರೆ ಅಲ್ಲಿ ಮೊಬೈಲ್ ನೆಟ್ ವರ್ಕ್ ಬರೋಲ್ಲ.ಅದೇ ಒತ್ತಡಗಳ ಜೊತೆಗೆ ಹಳ್ಳಿಗೆ ಹೋಗಿ ಕೊಟ್ಟಿರುವ ಬೂತ್ ಎನ್ನುವ ಭೂತ ಬಂಗಲೆಗೆ ಕಾಲಿಟ್ಟಾಗ ಮೊದಲು ಅದು ಆ ಗ್ರಾಮದ ಸಾರ್ವಜನಿಕರೆಲ್ಲರ ಶೌಚಾಲಯದ ತಾಣ.ಚುನಾವಣೆಯ ವೇಳೆಯಲ್ಲಿ ಗಿಡ ಕಂಟಿ ಕಡಿದು ಅಲ್ಲಲ್ಲಿ ಬ್ಲೀಚಿಂಗ್ ಪೌಡರ್ ಹಾಕಿ,ಒಂದೇ ಒಂದು ಕೋಣೆ ರೆಡಿ ಮಾಡಿ,ಅದರಲ್ಲಿ 60 ವೋಲ್ಟೆಜಿನ ಬಲ್ಬ್ ಹಾಕುತ್ತಾರೆ.ನಲವತ್ಮೂರರಿಂದ ನಲವತ್ತೈದು ಡಿಗ್ರಿ ಬಿಸಿಲ ಧಗೆಯಲ್ಲಿ ಹ್ಯಾಗೆ ಕರ್ತವ್ಯ ಮಾಡಬೇಕು.

ಮತ್ತಷ್ಟು ಓದು »

28
ಮಾರ್ಚ್

ನಾಡು- ನುಡಿ: ಮರುಚಿಂತನೆ- ಭಾರತೀಯ ಪ್ರಭುತ್ವ ಮತ್ತು ಭ್ರಷ್ಟಾಚಾರ ಭಾಗ-3

– ಡಾ.ಎ.ಷಣ್ಮುಖ, ಸಹಪ್ರಾಧ್ಯಾಪಕರು, ಕುವೆಂಪು ವಿಶ್ವವಿದ್ಯಾನಿಲಯ

ಭಾಗ 1,   ಭಾಗ 2

Social Science Column Logo
ಭ್ರಷ್ಟಾಚಾರ ಮತ್ತು ನೈತಿಕತೆಯ ಚೌಕಟ್ಟು

ಪ್ರಭುತ್ವದ ಚೌಕಟ್ಟಿನಲ್ಲಿ ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸುವುದನ್ನು ಸಾಮಾನ್ಯವಾಗಿ ಭ್ರಷ್ಟಾಚಾರ ಎಂದು ಕರೆಯುತ್ತಾರೆ, ಮತ್ತು ಅದು ಈ ಚೌಕಟ್ಟಿನೊಳಗೆ ಅನೈತಿಕವೆಂದೂ ಸಹ ಗುರುತಿಸಲ್ಪಡುತ್ತದೆ. ಆದರೆ ಸಾಮಾಜಿಕ ನೆಲೆಯಲ್ಲಿ ಹೀಗೆ ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸಿಕೊಳ್ಳದಿರುವುದಕ್ಕೂ ಅನೈತಿಕತೆಗೂ ಸಂಬಂಧವನ್ನು ಇಲ್ಲಿಯ ಜನರು ಭಾವಿಸಿಕೊಳ್ಳದಿರುವುದನ್ನು ಮೇಲಿನ ಉದಾಹರಣೆಗಳಲ್ಲಿ ಉಲ್ಲೇಖಿಸಿದ್ದೆ. ಪ್ರಭುತ್ವದ ಚೌಕಟ್ಟಿನ ಸಾರ್ವಜನಿಕ ಜೀವನದ ನೆಲೆಯಲ್ಲಿ ಈ ರೀತಿಯ ನಡವಳಿಕೆಯು ಅನೈತಿಕ ಮತ್ತು ಅದರಿಂದಲೇ ಅದು ಭ್ರಷ್ಟಾಚಾರ ಎಂದು ಸಾಮಾನ್ಯವಾಗಿ ಸಮಾಜಶಾಸ್ತ್ರೀಯವಾಗಿ ಮತ್ತು ಮಾದ್ಯಮ ವಲಯದಲ್ಲಿ ಗುರುತಿಸಲ್ಪಡುತ್ತಿದ್ದರೂ ಜನರು ಹಾಗೆ ಪರಿಭಾವಿಸುವುದು ಕಂಡುಬರುವುದಿಲ್ಲ. ಏಕೆ ಹೀಗೆ? ಇದನ್ನೂ ನಾನು ಒಂದು ಸಾಂಸ್ಕೃತಿ ಭಿನ್ನತೆಯ ಪ್ರಶ್ನೆಯಾಗಿಯೇ ನೋಡುವ ಪ್ರಯತ್ನ ಮಾಡಿದ್ದೇನೆ.
ಯಾವುದೇ ವ್ಯಕ್ತಿ ಅಥವಾ ಸಮೂಹದ ಯಾವುದೇ ಒಂದು ನಡವಳಿಕೆ ಭ್ರಷ್ಟನಡವಳಿಕೆ ಎಂದು ಗುರುತಿಸುವುದು ಹೇಗೆ ಆರಂಭವಾಯಿತು? ಈ ಪ್ರಶ್ನೆ ಇಟ್ಟುಕೊಂಡು ಹುಡುಕಿದರೆ ಸಿಗುವ ಉತ್ತರ ವಿಶೇಷವಾದದ್ದು. ಭಾರತದಲ್ಲಿ ಈ ರೀತಿಯ ವಿವರಣೆಗಳು ಬ್ರಿಟೀಷರಿಂದ ಆರಂಭವಾಗುತ್ತದೆ. ಬ್ರಿಟೀಷರು ಸುಳ್ಳು ಆಚರಣೆಗಳನ್ನೇ ಭ್ರಷ್ಟ ಆಚರಣೆಗಳೆಂದು ಗುರುತಿಸುತ್ತಾರೆ. ಇದಕ್ಕೂ ನಿಜ ರಿಲಿಜನ್ ಮತ್ತು ಸುಳ್ಳು ರಿಲಿಜನ್ ಎನ್ನುವ ಪಶ್ಚಿಮದ ಕ್ರಿಶ್ಚಿಯನ್ ಥಿಯಾಲಜಿಯ ಚೌಕಟ್ಟಿಗೂ ಸಂಬಂಧವಿದೆ. ನಿಜವಾದ ರಿಲಿಜನ್ (ಗಾಡ್ನ)ನೈತಿಕ ನಿಯಮಗಳ ಆಧಾರದಲ್ಲಿದ್ದು ಅದನ್ನು ಪಾಲಿಸುವವರು ನೈತಿಕರು ಎಂದಾದರೆ ಸುಳ್ಳು ರಿಲಿಜನ್ ಅನ್ನು ಅನುಸರಿಸುವವರು ನಿಜ ರಿಲಿಜನ್ನ ನೈತಿಕ ನಿಯಮಗಳಿಗೆ ವಿರುದ್ಧವಾದ ಅನೈತಿಕ ಆಚರಣೆಗಳನ್ನು ಮಾಡುವವರು ಎಂದು ಗುರುತಿಸಲಾಗುತ್ತದೆ. ಭ್ರಷ್ಟತೆಯ ಇಂಗ್ಲೀಷ್ ರೂಪವಾದ ಕರಪ್ಟ್ (Corrupt) ಅಂದರೆ ಸತ್ಯವು ಭ್ರಷ್ಟಗೊಳ್ಳುವುದು ಅಥವಾ ವಿರೂಪಗೊಳ್ಳುವುದು ಎಂದರ್ಥ. ಭಾರತೀಯ ಸಮಾಜ ಮತ್ತು ಇಲ್ಲಿಯ ಆಚರಣೆಗಳನ್ನು ವಿವರಿಸಬೇಕಾದರೆ ಅವರು ಬಳಸಿದ ಭ್ರಷ್ಟ ರಿಲಿಜನ್(Corrupt Religion), ಭ್ರಷ್ಟ ಸಮಾಜ(Corrupt Society), ಮತ್ತು ಭ್ರಷ್ಟ ಆಚರಣೆಗಳು(Corrupt Practices) ಎಂಬ ವಿವರಣೆಗಳು ಈ ಹಿನ್ನೆಲೆಯಿಂದಲೇ ಬರುತ್ತವೆ. ಹಾಗಾಗಿ, ಪಾಶ್ಚಿಮಾತ್ಯರ ರಿಲಿಜನ್ ಸಂಸ್ಕೃತಿಯ ಹಿನ್ನೆಲೆಯಲ್ಲಿ ಭ್ರಷ್ಟ ಆಚರಣೆ ಅಥವಾ ನಡವಳಿಕೆ ಎಂದರೇನೆ ಅದು ಅನೈತಿಕ ಆಚರಣೆ ಅಥವಾ ಅನೈತಿಕ ನಡವಳಿಕೆ ಎಂದರ್ಥವಾಗುತ್ತದೆ. ಹಾಗಾಗಿ, ಈ ಸಾಂಸ್ಕೃತಿಕ ಹಿನ್ನೆಲೆಯ ಸಾರ್ವಜನಿಕ ವಲಯದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಹೇಳಿದರೇನೆ ಈ ಚೌಕಟ್ಟಿನ ಪ್ರಕಾರ ಅನೈತಿಕತೆಯಲ್ಲಿ ತೊಡಗಿದ್ದಾರೆ ಎಂದಾಗುತ್ತದೆ. ಆದರೆ ಭಾರತೀಯ ಸಂದರ್ಭದಲ್ಲಿ ಈ ರಿಲಿಜಸ್ ಸಂಸ್ಕೃತಿಯ ಹಿನ್ನೆಲೆ ಇಲ್ಲದಿರುವುದರಿಂದ ಭ್ರಷ್ಟಾಚಾರದಲ್ಲಿ ತೊಡಗಿದ್ದವರು ಅನೈತಿಕ ವ್ಯವಹಾರದಲ್ಲಿ ತೊಡಗಿದ್ದಾರೆ ಎಂಬ ಮನೋಭಾವನೆ ಜನರಲ್ಲಿ ಬರುವುದಿಲ್ಲ. ಬದಲಾಗಿ ಹೆಚ್ಚೆಂದರೆ ಅವರು ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸಿಕೊಂಡು ತಪ್ಪುಮಾಡಿದ್ದಾರೆ ಎಂದುಕೊಳ್ಳುತ್ತಾರೆ ಅಷ್ಟೇ. ಮತ್ತಷ್ಟು ಓದು »

28
ಮಾರ್ಚ್

ಹೀಗೊಂದು ಊರಿನ ಕತೆ:

– ಬಾಲಚಂದ್ರ ಭಟ್

Story of Indiaಅದೊಂದು ಊರು. ಬಡವ-ಬಲ್ಲಿದ, ಬುದ್ದಿವಂತ, ದಡ್ಡ ಎಲ್ಲರೂ ಇದ್ದ ಊರು. ಆ ಊರಿಗೆ ದರೋಡೆಕೋರರ ಕಾಟ. ಹಿಂಸೆ, ಬಲಾತ್ಕಾರ, ದೋಚುವದು ಇವೆಲ್ಲವನ್ನೂ ಮಾಡುತ್ತಿದ್ದರು.ದರೋಡೆಕೊರರನ್ನು ಎದುರಿಸುವದಕ್ಕೆ ಭಯಪಟ್ಟ ಕೆಲವು ಚಿಂತಕರು ದರೋಡೆಕೋರರ ಜೊತೆ ಸಂಧಾನಕ್ಕಿಳಿಯುವ ದಾರಿಯನ್ನು ಯೋಚಿಸಿದರು. ಕೆಲವು ಸಾಹಸಿಗಳು ದಾಳಿಕೋರರಿಗೆ ಅವರದೇ ರೀತಿಯಲ್ಲಿ ಉತ್ತರಿಸುವ ಯೋಜನೆ ಹಾಕಿಕೊಂಡರು.ಒಮ್ಮೆ ದರೋಡೆಕೋರರು ಹಳ್ಳಿಗೆ ಧಾಳಿಯಿಟ್ಟರು. ಚಿಂತಕರು ವಿದ್ಯಾವಂತರೇನೊ ಹೌದು. ಆದರೆ ದರೋಡೆಕೋರರನ್ನು ಎದುರಿಸುವ ಧೈರ್ಯ ಇರಲಿಲ್ಲ. ಹೆದರಿ ಬಾಗಿಲು ಹಾಕಿಕೊಂಡರು.ದರೋಡೆಕೋರರು ಬಗ್ಗದಿದ್ದಾಗ ಚಿಂತಕರು ಊರಿನ ಸಂಪತ್ತನಲ್ಲಿ ಕೆಲವು ಭಾಗವನ್ನು ಹಂಚಿಕೊಳ್ಳುವ ಒಪ್ಪಂದದೊಂದಿಗೆ ಪ್ರಾಣವನ್ನು ಉಳಿಸಿಕೊಂಡರು. ಆದರೆ ಊರಿನ ಕೆಲ ಸಾಹಸಿಗಳು ದರೋಡೆಕೋರರ ಜೊತೆ ಹೋರಾಡಿದರು. ಎರಡೂ ಕಡೆ ಪ್ರಾಣ ಹಾನಿ ಸಂಭವಿಸಿತು.ಇದೆಲ್ಲದಕ್ಕೂ ಚಿಂತಕರ ಮನೆಯ ಮುಚ್ಚಿದ ಬಾಗಿಲುಗಳೆ ಪ್ರೇಕ್ಷಕರಾದವು. ಹಾಗೂ ಹೀಗೂ ಊರಿನ ಹೋರಾಟಗಾರರು ದರೋಡೆಕೋರರನ್ನು ಬಗ್ಗು ಬಡಿದರು. ಕೆಲವು ದರೋಡೆಕೋರರು ಓಡಿ ಹೋದರು. ಸೆರೆಸಿಕ್ಕ ದರೋಡೆಕೋರರನ್ನು ತಳಿಸಲಾಯಿತು. ಊರು ದರೋಡೆಕೋರರಿಂದ ಮುಕ್ತಿ ಹೊಂದಿ ಉಸಿರಾಡುವಂತಾಯಿತು. ಊರಿನ ವಾತಾವರಣ ತಿಳಿಯಾಯಿತು.ಈಗ ಚಿಂತಕರು ಮನೆಯ ಬಾಗಿಲನ್ನು ತೆರೆದು ಹೊರಬಂದರು. ಊರಿನ ಜನರಿಂದ ತಳಿಸಲ್ಪಡುತ್ತಿದ್ದ ದರೋಡೆಕೋರರನ್ನು ನೋಡಿದರು. ಕೂಡಲೇ ದರೋಡೆಕೋರರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ವಿರೋಧಿಸಿದರು. ಈ ಊರಿನಲ್ಲಿ ಮಾನವೀಯ ಹಕ್ಕುಗಳ ಉಲ್ಲಂಘನೆಯಾಗುತ್ತಿದೆಯೆಂದು ಆಪಾದಿಸಿದರು. ಮಾನವೀಯತೆಯ ಪಾಠ ಹೇಳಿದರು.ಅವರನ್ನು ಬಲಿಪಶುಗಳೆಂದು ಸಂತೈಸಲಾಯಿತು. ಕ್ರಮೇಣ ದರೋಡೆಕೋರರನ್ನು ಸಾಮಜಿಕ ವಲಯದಲ್ಲಿ ಸಂತೈಸುವದು, ಅವರ ಹಕ್ಕು, ಅಭಿವೃದ್ಧಿ, ಕಲ್ಯಾಣಗಳ ಕುರಿತ ಆಂದೋಲನಗಳು ಆ ಊರಿನ ಸಮಾಜಮುಖಿ ಬೆಳವಣಿಗೆಯಾಗಿ ಮಾರ್ಪಾಟಾಯಿತು. ಆ ಊರಿನ ಕೆಲವು ಭಾಗಗಳನ್ನು ದರೋಡೆಕೋರರಿಗೆ ಸ್ವತಂತ್ರವಾಗಿ ಬಿಟ್ಟುಕೊಡುವಂತೆ ಒತ್ತಡ ಹೇರಿದರು. ದರೋಡೆಕೋರರಿಗಾಗಿಯೇ ಅವರಿಗೆ ಒಪ್ಪಿತವಾದ ನ್ಯಾಯಾಂಗಕ್ಕೆ ಅವಕಾಶ ಒದಗಿಸಬೇಕೆಂದು ಒತ್ತಾಯಿಸಲಾಯಿತು. ದರೋಡೆಕೋರರನ್ನು ವಿರೋಧಿಸುವವರನ್ನು ಮನುಷ್ಯ ವಿರೋಧಿ ಎಂದು ಕರೆಯಲಾಯಿತು. ಆ ಊರಿನ ರಾಜಕೀಯ ಹಿತಾಸಕ್ತಿ ಹಾಗೂ ಪೈಪೋಟಿಯೆ ಇವೆಲ್ಲಕ್ಕೂ ಕಾರಣ ಎನ್ನುವದು ನಿರ್ವಿವಾದವಾಗಿತ್ತು.

ಮತ್ತಷ್ಟು ಓದು »